Sunday Read: ಹೊಸ ಪುಸ್ತಕ: ಎಚ್‌.ಎಸ್‌ ವೆಂಕಟೇಶಮೂರ್ತಿ ಹೊಸ ಕವನ ಸಂಕಲನದ ಕವಿತೆ: ಕಾಂಚನಜುಂಗ - Vistara News

ಕಲೆ/ಸಾಹಿತ್ಯ

Sunday Read: ಹೊಸ ಪುಸ್ತಕ: ಎಚ್‌.ಎಸ್‌ ವೆಂಕಟೇಶಮೂರ್ತಿ ಹೊಸ ಕವನ ಸಂಕಲನದ ಕವಿತೆ: ಕಾಂಚನಜುಂಗ

ಖ್ಯಾತ ಕವಿ ಎಚ್.‌ ಎಸ್‌ ವೆಂಕಟೇಶಮೂರ್ತಿ ಅವರ ನೂತನ ಕವನ ಸಂಕಲನ ʼಮುಸ್ಸಂಜೆಯ ಮಾತುʼ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಈ ಕೃತಿಯಿಂದ ಆಯ್ದ ಒಂದು ಪದ್ಯ ಇಲ್ಲಿದೆ.

VISTARANEWS.COM


on

hsv mussanje maathu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಳಿಗೆ ಗದಗದ ನಡುಕ. ವಸಡುಗಳ ಅಪ್ರಯತ್ನಕ ತಾಳ,
ವ್ಯಾಘ್ರಗಿರಿಯೇರುವ ಉತ್ಸಾಹಕ್ಕೆ ಮುಂಜಾವು ನಾಕಕ್ಕೇ
ಜೀಪೇರಿ ನಾನು ಮತ್ತು ನನ್ನ ಮನೆಯಾಕೆ. ಪಿಳಿಪಿಳಿ ಕಣ್ಣ
ಹೊರತು ಎರಡು ಬಟ್ಟೆ ಮೂಟೆ, ಪರ್ವತದೇರುದಾರಿ.
ಕುತ್ತುಬ್ಬುಸಪಡುತ್ತೇರುವ ಜೀಪು, ಶಿಖರ ತಲಪಿದಾಗ
ಆರಕ್ಕೆ ಕೆಲವೇ ಕ್ಷಣ ಬಾಕಿ, ಹಬೆಯಾಡುವ ಸುಡು ಚಹಾ
ಕೈಯಿಂದ ಬಾಯಿಗೆ ಬೀಳುವಷ್ಟರಲ್ಲಿ ಉಗುರು ಬೆಚ್ಚಗೆ
ಸುವರ್ಣಜೂಟ ನಾವು ನೋಡಿಯೇವೆ? ಮೋಡಕರುಣಿಸ
ಬೇಕು. ಎಲ್ಲರ ಕಣ್ಣೂ ಪಶ್ಚಿಮಶಿಖರದ ಮೇಲೆ. ಸೂರ್ಯ
ಮೂಡಿದ ಪೂರ್ವದಲ್ಲಿ. ಅವನ ಬಂಗಾರ ಕಿರಣ ಕಾಂ
ಚನ ಜುಂಗದ ತುದಿಗೆ ತಾಕಿದ್ದೇ ಆ ಶ್ವೇತಪರ್ವತ
ಹೊನ್ನಿನ ಕಿರೀಟದಿಂದ ಆಚ್ಛಾದಿತವಾಗಿ ಯಾತ್ರಿಕರು
ಅಹಾ ಎಂದು ಉದ್ಗರಿಸುತ್ತ ನಿಂತಿದ್ದಾರೆ. ಬಂಗಾರ
ಕಿರೀಟ ನಿಧಾನಕ್ಕೆ ವಿಸ್ತರಿಸುತ್ತಾ ಇಡೀ ಪರ್ವತ ಕಾಂಚನ
ಮಯ, ಶಿವನ ಜುಟ್ಟು ಎಂದಿದ್ದು ಕವಿಯೇ ಇರಬೇಕು

ಬಿಸಿಲೇರಿ ಹಿಮ ಕರಗಿ ಕಾಂಚನಜುಂಗ ಯಾವತ್ತಿನ ನೀಲ
ಕೆಲವೇ ಕ್ಷಣದ ರಂಗಾಟ ಮುಗಿದು ಮತ್ತೆ ಸೀದಾಸಾದ.

ಕೃತಿ: ಮುಸ್ಸಂಜೆ ಮಾತು (ಕವನ ಸಂಕಲನ)
ಕವಿ: ಎಚ್. ಎಸ್‌ ವೆಂಕಟೇಶಮೂರ್ತಿ
ಪ್ರಕಾಶನ: ಬಹುರೂಪಿ
ಬೆಲೆ: 100/-

ಇದನ್ನೂ ಓದಿ: Sunday Read: ಹೊಸ ಪುಸ್ತಕ: ಶ್ರೀಧರ ಬಳಗಾರರ ಕಾದಂಬರಿ ʼವಿಸರ್ಗʼ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮೈಸೂರು

Book Release: ಮೈಸೂರಿನಲ್ಲಿ ಮೇ 9ರಂದು ಐತಿಚಂಡ ರಮೇಶ ಉತ್ತಪ್ಪ ಅವರ 4 ಪುಸ್ತಕ ಬಿಡುಗಡೆ, ಸಂವಾದ

Book Release: ಮೈಸೂರು ವಿಶ್ವವಿದ್ಯಾಲಯದ ವಿಜ್ಞಾನ ಭವನದಲ್ಲಿ ಮೇ 9ರಂದು ಬೆಳಗ್ಗೆ 10.30ಕ್ಕೆ ಪತ್ರಕರ್ತ, ಸಾಹಿತಿ ಐತಿಚಂಡ ರಮೇಶ್‌ ಉತ್ತಪ್ಪ ಅವರ ವನ್ಯಜೀವಿಗಳ ಕುರಿತ 4 ಪುಸ್ತಕಗಳ ಬಿಡುಗಡೆ ಸಮಾರಂಭ ಹಾಗೂ ಸಂವಾದ ಕಾರ್ಯಕ್ರಮ ನಡೆಯಲಿದೆ.

VISTARANEWS.COM


on

Ithichanda Ramesh Uthappaʼs Four books to be released in Mysore on May 9
Koo

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗ, ಬೆಂಗಳೂರಿನ ಅಕ್ಷರ ಮಂಟಪ ಪ್ರಕಾಶನ ಹಾಗೂ ಮೈಸೂರು ಕಲ್ಚರಲ್‌ ಅಸೋಸಿಯೇಷನ್‌ ಸಹಯೋಗದಲ್ಲಿ ಮೇ 9ರಂದು ಬೆಳಗ್ಗೆ 10.30ಕ್ಕೆ ಪತ್ರಕರ್ತ, ಸಾಹಿತಿ ಐತಿಚಂಡ ರಮೇಶ್‌ ಉತ್ತಪ್ಪ (Ithichanda Ramesh Uthappa) ಅವರ ವನ್ಯಜೀವಿಗಳ ಕುರಿತ 4 ಪುಸ್ತಕಗಳ ಬಿಡುಗಡೆ ಸಮಾರಂಭ ಹಾಗೂ ಸಂವಾದ ಕಾರ್ಯಕ್ರಮವನ್ನು (Book Release) ನಗರದ ಮೈಸೂರು ವಿಶ್ವವಿದ್ಯಾನಿಲಯದ ವಿಜ್ಞಾನ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅವರು ಉದ್ಘಾಟಿಸಲಿದ್ದು, ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಹಾಗೂ ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಜಯ ಕರ್ನಾಟಕ ಸಂಪಾದಕ ಸುದರ್ಶನ ಚನ್ನಂಗಿಹಳ್ಳಿ, ವಿಜಯವಾಣಿ ಸಂಪಾದಕ ಕೆ.ಎನ್. ಚನ್ನೇಗೌಡ ಹಾಗೂ ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಭಾಗವಹಿಸಲಿದ್ದಾರೆ.

ಮೈಸೂರು ವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರೊ. ಎಂ.ಎಸ್. ಸಪ್ನ ಅವರು ಅಧ್ಯಕ್ಷತೆ ವಹಿಸಲಿದ್ದು, ವಿಶೇಷ ಅತಿಥಿಗಳಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಮಾನಸ ಹಾಜರಿರಲಿದ್ದಾರೆ.

ಇದನ್ನೂ ಓದಿ | ರಾಜಮಾರ್ಗ ಅಂಕಣ: ಶೇಕ್ಸ್‌ಪಿಯರ್‌ ನೆನಪಿನಲ್ಲಿ ಓದುವ ಸುಖ ನೆನಪಿಸಿಕೊಳ್ಳುವ ಹೊತ್ತು

ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಪ್ರೊ.ಸಿ.ಕೆ.ಪುಟ್ಟಸ್ವಾಮಿ, ಸಹ ಪ್ರಾಧ್ಯಾಪಕರಾದ ಪ್ರೊ. ಎನ್. ಮಮತ, ಪುಸ್ತಕಗಳ ಲೇಖಕರಾದ ಐತಿಚಂಡ ರಮೇಶ್ ಉತ್ತಪ್ಪ, ಪ್ರಕಾಶಕ ಚೇತನ್ ಕಣಬೂರು, ಮೈಸೂರು ಕಲ್ಬರಲ್ ಅಸೋಸಿಯೇಷನ್‌ನ ಎ.ಪಿ.ನಾಗೇಶ್ ಉಪಸ್ಥಿತರಿರಲಿದ್ದಾರೆ.

ಬಿಡುಗಡೆಯಾಗಲಿರುವ ಕೃತಿಗಳು

  • ಕಾಡು ಹೇಳಿದ ಕಥೆ: ವೈಲ್ಡ್‌ ಲೈಫ್ ರಿಪೋರ್ಟಿಂಗ್
  • ಹಾವು: ನಂಬಿಕೆ ಹಾಗೂ ಮನೋವೈಜ್ಞಾನಿಕ ವಿಶ್ಲೇಷಣೆ
  • ಆನೆ: ಬದಲಾದ ವರ್ತನೆ
  • ಅರ್ಜುನ ನಿನ್ನ ಮರೆಯಲೆಂತು ನಾ..!
Continue Reading

ಅಂಕಣ

ಧವಳ ಧಾರಿಣಿ ಅಂಕಣ: ರಾಮಪಟ್ಟಾಭಿಷೇಕ ಭಂಗ

ಧವಳ ಧಾರಿಣಿ ಅಂಕಣ: ಕಾಮವೆನ್ನುವುದು ಎಂತಹವರನ್ನೂ ತಲೆಕೆಡಿಸಿಬಿಡುತ್ತದೆ. ಕಾಮದ ಹುಚ್ಚಿನಲ್ಲಿರುವ ದಶರಥ ತನ್ನ ಸುಖಕ್ಕಾಗಿ ಏನನ್ನು ಮಾಡಲೂ ಹೇಸದ ಸ್ಥಿತಿಗೆ ತಲುಪಿದ್ದಾನೆ. ವಧಾರ್ಹನಲ್ಲದವನನ್ನು ವಧಿಸಲೇ, ಮರಣದಂಡನೆಗೆ ಗುರಿಯಾದವನನ್ನು ಬಿಡಿಸಲೇ, ದರಿದ್ರನನ್ನು ಶ್ರೀಮಂತನನ್ನಾಗಿ ಮಾಡಲೇ, ಶ್ರೀಮಂತನನ್ನು ದರಿದ್ರನನ್ನಾಗಿ ಮಾಡಲೇ; ನಿನ್ನ ಪ್ರೀತಿಗಾಗಿ ಏನನ್ನೂ ಮಾಡಲೂ ತಾನು ಸಿದ್ಧ ಎನ್ನುತ್ತಾನೆ.

VISTARANEWS.COM


on

king dasharatha kaikeyi dhavala dharini column
Koo

ಪ್ರಾಣಕ್ಕಿಂತ ಪ್ರಿಯಳಾದ ಸತಿಯಿಂದ ಪ್ರಾಪ್ತವಾದ ಪುತ್ರ ವಿಯೋಗ

dhavala dharini by Narayana yaji

ಧವಳ ಧಾರಿಣಿ ಅಂಕಣ: ಸ ಕೈಕೇಯ್ಯಾ ಗೃಹಂ ಶ್ರೇಷ್ಠಂ ಪ್ರವಿವೇಶ ಮಹಾಯಶಾಃ
ಪಾಣ್ಡುರಾಭ್ರಮಿವಾಕಾಶಂ ರಾಹುಯುಕ್ತಂ ನಿಶಾಕರಃ ৷৷ಅ.ಯೋ.10.11৷৷

ಬಿಳಿಯದಾದ ಮೋಡಗಳಿಂದ ಕೂಡಿದ ಆಕಾಶದಲ್ಲಿ ರಾಹುವಿಗೆ ಗ್ರಾಸವಾಗುವ ಸಲುವಾಗಿ ಚಂದ್ರನು ಪ್ರವೇಶಿಸುವಂತೆ ಮಹಾಯಶೋವಂತನಾದ ರಾಜನು ಭವ್ಯವಾದ ಕೈಕೇಯಿಯ ಅಂತಃಪುರವನ್ನು ಪ್ರವೇಶಿಸಿದನು.

ಕವಿಸಮಯವೆನ್ನುವದು ರಾಮಾಯಣ ಕಾವ್ಯದ ವಿಶೇಷ. ವಾಲ್ಮೀಕಿ ಕಾವ್ಯವನ್ನು ಕೇವಲ ಉಅಪದೇಶಕ್ಕಾಗಿಯಲ್ಲ, ಅದನ್ನು ತಾಳವಾದ್ಯಗಳೊಂದಿಗೆ ರಾಗವಾಗಿ ಹಾಡಲು ಅನುಕೂಲವಾಗುವಂತೆ ಬರೆದಿದ್ದಾನೆ. ಹಾಡುಗಾರಿಕೆಯಲ್ಲಿ ವರ್ಣನೆಗೆ ಮಹತ್ವ ಬರುತ್ತದೆ. ಕಾವ್ಯದ ಮುಂಗಾಣ್ಕೆ ಅಲ್ಲಲ್ಲಿ ವ್ಯಕ್ತವಾಗುತ್ತಾ ಹೋಗುತ್ತದೆ. ಕೈಕೇಯಿಯ ಅರಮನೆಗೆ ಹೋಗುವ ರಾಜನ ಕುರಿತು ವರ್ಣಿಸುವಾಗ ಬಿಳಿಯದಾದ ಮೋಡ, ರಾಹು, ಆಕಾಶ, ಚಂದ್ರ ಎನ್ನುವ ಉಪಮೆಗಳ ಮೂಲಕ ಹೇಳಿದ್ದಾನೆ. ಆಕಾಶ ಎನ್ನುವುದು ಮನಸ್ಸಿನಲ್ಲಿ ಆಸೆಗಳ ವಿಸ್ತಾರದವನ್ನು ಸೂಚಿಸಿದೆ. ಬಿಳಿಯದಾದ ಮೋಡವೆನ್ನುವದು ಅರ್ಥಪೂರ್ಣವಾದ ಉಪಮೆ. ನೀರಿನಿಂದ ಯುಕ್ತವಾದ ಮೋಡ ಕಪ್ಪಾಗಿರುತ್ತದೆ. ಮನಸ್ಸಿನಲ್ಲಿ ತನ್ನ ಮಗನ ಪಟ್ಟಾಭಿಷೇಕದ ಕುರಿತು ಯಾವ ಆಸೆಯನ್ನೇ ಇರಿಸಿಕೊಳ್ಳಲಿ, ಅದೆಲ್ಲವೂ ನೀರಿಲ್ಲದ ಮೋಡದಂತೆ ವ್ಯರ್ಥವಾಗಿ ಹಾರಿಹೋಗುತ್ತದೆ ಎನ್ನುವುದನ್ನು ಹೇಳುತ್ತಾನೆ. ರಾಹು ಮತ್ತು ಕೇತುಗಳು ಭಾರತೀಯ ಖಗೋಳಶಸ್ತ್ರದ ಪ್ರಕಾರ ಎರಡು ವಿರುದ್ಧದಿಕ್ಕುಗಳಲ್ಲಿರುವ ಬಿಂದುಗಳು. ಈ ಬಿಂದುವಿಗೆ ಸೂರ್ಯಚಂದರು ಬಂದಾಗ ಗ್ರಹಣವಾಗುತ್ತದೆ. ಚಂದ್ರ ಮನಸ್ಸಿನ ಕಾರಕ. ಸಂತೊಷ ಮತ್ತು ಕಾಮವಿಕಾರಗಳು ಮನಸ್ಸಿನಲ್ಲಿ ಉತ್ಪನ್ನವಾಗುವಂತವು. ಚಂದ್ರ ತನ್ನ ಪರಿಭ್ರಮಣದಲ್ಲಿ ರಾಹುವಿನ ಬಿಂದುವಿಗೆ ಬಂದಾಗ ಗ್ರಹಣವಾಗಿ ತನ್ನ ಕಾಂತಿಯನ್ನು ಕಳೆದುಕೊಳ್ಳುತ್ತಾನೋ ಅದೇರಿತಿ ರಾಜ ತನ್ನೆಲ್ಲ ಕನಸನ್ನು ಕಳೆದುಕೊಂಡು ನಿಶ್ಚಿತವಾಗಿ ಮರಣದತ್ತ ಸಾಗಲು ಬಂದಿದ್ದಾನೆ ಎನ್ನುವುದನ್ನು ಉಪಮಾಮಲಂಕಾರದಲ್ಲಿ ಕವಿ ವರ್ಣಿಸಿದ್ದಾನೆ.

ದಶರಥನ ಪಾತ್ರವನ್ನು ವಿವೇಚಿಸುವಾಗ ಮೊದಲಿನಿಂದಲೂ ಕಂಡುಬಂದ ಅಂಶವೆಂದರೆ ಮಹಾನ್ ರಾಜರ್ಶಿಯಾಗಿದ್ದ ದೊರೆ ರಾಮನ ಕುರಿತು ಕಡುಲೋಭಿಯಾಗಿ ಪರಿವರ್ತನೆಯಾಗಿರುವುದನ್ನು ಗಮನಿಸಬಹುದು. ದಶರಥನ ವ್ಯಕ್ತಿತ್ವವೆನ್ನುವುದು ಸಂಕೀರ್ಣವೇನೂ ಅಲ್ಲ. ಶೂರನಾಗಿದ್ದ; ಸೂರ್ಯವಂಶದ ಧ್ಯೇಯೋದ್ಧಶವಾದ ಧರ್ಮಸ್ಥಾಪನೆಯ ವಿಷಯದಲ್ಲಿ ಸದಾ ನಿರತನಾಗಿದ್ದ. ಅದೇ ಕಾಲಕ್ಕೆ ಅಯೋಧ್ಯೆಯ ಸಿಂಹಾಸನವೆನ್ನುವುದು ಗಣತಂತ್ರವ್ಯವಸ್ಥೆಯಲ್ಲಿ ಇತ್ತು. ರಾಜರಾಗುವವರು ಯಾರೇ ಆದರೂ ಅದಕ್ಕೆ ಪ್ರಜೆಗಳ ಒಪ್ಪಿಗೆ ಪಡೆಯಬೇಕಾಗಿತ್ತು. ಪ್ರಾಚೀನ ಗ್ರೀಸಿನಲ್ಲಿದ್ದ ರೀತಿಯ ಗಣತಂತ್ರವ್ಯವಸ್ಥೆ ಅಯೋಧ್ಯೆಯಲ್ಲಿ ಇತ್ತು ಎನ್ನುವುದಕ್ಕೆ ವಾಲ್ಮೀಕಿಯ ರಾಮಾಯಣವನ್ನು ಮತ್ತು ಮತ್ತು ಪ್ಲೇಟೋವಿನ “The Republic” ಕೃತಿಯನ್ನು ತುಲನೆ ಮಾಡಿದಾಗ ಅನಿಸುತ್ತದೆ. ಅದನ್ನು ಕೇವಲ ತೋರಿಕೆಗಾಗಿ ಆಚರಣೆಯಲ್ಲಿ ಇಟ್ಟು ತನಗೆ ಬೇಕಾದಂತೆ ಉತ್ತರಾಧಿಕಾರಿಯನ್ನು ಆರಿಸುವ ತಂತ್ರವನ್ನು ದಶರಥ ಅನುಸರಿಸಿರುವುದು ರಾಮನಿಗೆ ಪಟ್ಟಗಟ್ಟಬೇಕೆನ್ನುವ ಸಂದರ್ಭದಲ್ಲಿ ಕಾಣಬಹುದು. ಆತನ ಚಾಣಾಕ್ಷನಡೆಯ ಒಳಗಿರುವದು ತನ್ನದು ಎನ್ನುವ ಮೋಹದ ಅರಿವು ಎನ್ನುವುದು ಯಾರ ಗಮನಕ್ಕೂ, ಹೆಚ್ಚೇನು ರಾಮನ ಅರಿವಿಗೂ ಬಾರದ ಹಾಗೆ ನಡೆದುಕೊಂಡಿದ್ದಾನೆ. ಪರಿಪೂರ್ಣ ವ್ಯಕ್ತಿತ್ವದ ರಾಮನಂತಹ ದೊರೆ ತಮಗೆ ಸಿಗುತ್ತಾನೆ ಎನ್ನುವ ಕಾರಣಕ್ಕೆ ಪ್ರಜೆಗಳು ಸಂಭ್ರಮಿಸುವುದು ಸಹಜವೇ ಆಗಿದೆ. ತಾನು ಅಶ್ವಪತಿಗೆ ಕೊಟ್ಟ ಮಾತುಗಳು ಹೀಗೆ ಮರೆಯಾದ ಕಾರಣ ಅದು ದೊರೆಗೆ ಅಪರಿಮಿತ ಸಂತೋಷವನ್ನು ಕೊಟ್ಟಿದೆ. ಇಳಿವಯಸ್ಸಿನಲ್ಲಿ ಕಿರಿಯ ಚಲುವೆಯಾದ ಕೈಕೇಯಿಯ ಹಿಂದೆ ಬಿದ್ದಿದ್ದ ದೊರೆಗೆ ವೃದ್ದಾಪ್ಯದಲ್ಲಿ ಮಕ್ಕಳಾದ ಮೇಲೆ ರಾಮ ಎನ್ನುವ ಕುರುಡು ಮೋಹ ಆವರಿಸಿಕೊಂಡಿತ್ತು. ಆತನ ಕುರಿತು ಮಂಥರೆ ಹೇಳುವ ಮಾತು

ಧರ್ಮವಾದೀ ಶಠೋ ಭರ್ತಾ ಶ್ಲಕ್ಷ್ಣವಾದೀ ಚ ದಾರುಣಃ
ಶುದ್ಧಭಾವೇ ನ ಜಾನೀಷೇ ತೇನೈವ ಮತಿಸಂಧಿತಾ৷৷ಬಾ.ಕಾಂ.7.24৷৷

ನಿನ್ನ ಗಂಡನು ಮೇಲೆಮೇಲೆ ಧರ್ಮಸಮ್ಮತವಾದ ಮಾತುಗಳನ್ನು ಆಡುತ್ತಿದ್ದರೂ ಅಂತರಂಗದಲ್ಲಿ ಬಹಳ ಕಪಟಸ್ವಭಾವದವನು. ಬಾಯಲ್ಲಿ ಮೃದುವಾದ ಮಾತುಗಳನ್ನು ಆಡುತ್ತಿದ್ದರೂ ನಂಬಿಸಿ ಮೋಸಮಾಡುವುದು ಹೇಗೆಂದು ಯೋಚಿಸುತ್ತಿರುತ್ತಾನೆ. ಕರುಣೆಯೆನ್ನುವುದೇ ಇಲ್ಲ, ಬಹಳ ಋಜುಸ್ವಭಾವದವಳಾದ ನೀನು ಆತನ ಕಪಟವನ್ನು ಅರಿಯದೇ ಹೋದೆಯಲ್ಲವೇ.

ಮಂಥರೆ ಇಲ್ಲಿ ಕೈಕೇಯಿಯ ಮನಸ್ಸನ್ನು ತಿರುಗಿಸಲು ಹೇಳಿರುವಳಾದರೂ ಪಾಯಸವನ್ನು ತನ್ನ ರಾಣಿಯರಿಗೆ ಹಂಚುವಲ್ಲಿಂದ ಹಿಡಿದು ರಾಮಪಟ್ಟಾಭಿಷೇಕದ ವರೆಗೆ ದಶರಥ ಏಕಪಕ್ಷೀಯವಾಗಿ ತೆಗೆದುಕೊಂಡ ತೀರ್ಮಾನವನ್ನು ಗಮನಿಸಿದಾಗ ನಮ್ಮ ದೌರ್ಬಲ್ಯ ಶತ್ರುಗಳಿಗೆ ಆಯುಧ ಎನ್ನುವ ನೀತಿಶಾಸ್ತ್ರದ ಮಾತನ್ನು ನೆನಪಿಸುತ್ತದೆ. ಅಂತೂ ತನ್ನ ಕಾರ್ಯವಾದ ರಾಮನ ಪಟ್ಟಾಭಿಷೇಕದ ವಿಷಯದಲ್ಲಿ ಯಾವ ತೊಂದರೆಯಿಲ್ಲದೇ ಸಾಂಗವಾಗಿ ನಡೆಯುವುದು ಎನ್ನುವ ನಂಬಿಕೆಯೊಂದಿಗೆ ಸಂತೊಷವೆನ್ನುವುದು ಅತಿರೇಕಕ್ಕೆ ಹೋಗಿತ್ತು. ಸಂತೋಷ ಅತಿರೇಕಕ್ಕೆ ಹೋದಾಗ ಅದು ಮದಕ್ಕೆ ತಿರುಗುತ್ತದೆ. ಮದವೆನ್ನುವುದು ಕಾಮಕ್ಕೆ ಮೂಲ. ಅದನ್ನು ಇಳಿಸಿಕೊಳ್ಳಲು ಸಂಗಾತಿಯನ್ನು ಹುಡಿಕಿಕೊಳ್ಳುವುದು ಜೀವಿಗಳ ಸಹಜ ಕ್ರಿಯೆ. ಅರಸನಿಗೆ ತನ್ನ ಆಲೋಚನೆಯನ್ನು ಹಂಚಿಕೊಳ್ಳುವ ಸಂಗಾತಿಯ ಅಗತ್ಯ ತುರ್ತಾಗಿ ಎದುರಾಯಿತು. ವಶಿಷ್ಠರಲ್ಲಿಯಾಗಲಿ, ವಾಮದೇವರಲ್ಲಿಯಾಗಲಿ ಇದನ್ನೆಲ್ಲವನ್ನು ಹಂಚಿಕೊಳ್ಳಲು ಅವರೇನು ಸಾಮಾನ್ಯದವರಾಗಿರಲಿಲ್ಲ.

ರಾಮ ಯುವರಾಜ ಪಟ್ಟಕ್ಕೆ ಅರ್ಹನಾಗಿದ್ದರೂ, ಅಯೋಧ್ಯೆಯಲ್ಲಿ ಆ ಸಾಯಂಕಾಲ ನಡೆದ ಸಿದ್ಧತೆ ದಶರಥನ ವೈಯಕ್ತಿಕ ಕಾಮನೆಯ ಫಲವಾಗಿತ್ತು. ಪ್ರಜೆಗಳು ರಾಮನನ್ನು ರಾಜನ್ನಾಗಿ ನೋಡಲು ಬಯಸಿದ್ದರೆನ್ನುವುದು ನಿಜವಾದರೂ ಇಲ್ಲಿಮೊದಲ ಸಾರಿ ರಾಮನ ಪಟ್ಟಾಭಿಷೇಕಕ್ಕಾಗಿ ದಶರಥ ಹೇಗೆಲ್ಲಾ ಮಂಡಿಗೆಯನ್ನು ಹಾಕಿದ್ದ ಎನುವುದನ್ನು ಹಿಂದಿನ ಭಾಗಗಳಲ್ಲಿ ನೋಡಿದ್ದೇವೆ. ರಾಮನನ್ನು ಕೇವಲ ಮಗನಾಗಿ ಮಾತ್ರ ನೋಡಿದ್ದಾನೆಯೇ ಹೊರತು ವಿಶ್ವಾಮಿತ್ರ, ವಶಿಷ್ಠರು, ಪರಶುರಾಮ ಮೊದಲಾದವರಿಗೆ ರಾಮನ ಅವತಾರದ ಹಿಂದಿರುವ ದೈವತ್ವದ ದರ್ಶನ ಅರಸನಿಗೆ ಸಾಯುವವರೆಗೂ ಆಗಲೇ ಇಲ್ಲ. ರಾಮನಿಗೆ ಪಟ್ಟಗಟ್ಟುವ ತನ್ನ ಮನಸ್ಸಿನ ಮಂಡಿಗೆ ಯಶಸ್ವಿಯಾದ ವಿಷಯವನ್ನು ವಿವರವಾಗಿ ವರ್ಣಿಸಿ ಹೇಳಲು ಕಿರಿಯ ರಾಣಿಯಷ್ಟು ಆಪ್ತರು ಬೇರೆ ಯಾರೂ ಇಲ್ಲ. ಕೌಸಲ್ಯೆಗೆ ಹೇಳಿದರೆ ಆಕೆಗೆ ಸಂತೋಷವೇನೋ ಆಗಬಹುದಾದರೂ ಆಕೆಯಲ್ಲಿ ಕಾಮದ ಆಕರ್ಷಣೆ ದೊರೆಗೆ ಬತ್ತಿಹೋಗಿತ್ತು. ಸುಮಿತ್ರೆಯೂ ಅಷ್ಟೇ. ಚಿಕ್ಕವಯಸ್ಸಿನ ಕೈಕೆಯಿಯನ್ನು ಚೆನ್ನಾಗಿ ಮರಳುಮಾಡಿ ಇಟ್ಟುಕೊಂಡಿದ್ದ. ತನಗೆ ಬೇಕಾದ ಹಾಗೆ ಸುಖವನ್ನು ಅವಳಿಂದ ಪಡೆಯುತ್ತಿದ್ದ. ಆಕೆ ರಾಜನಿಗೋಸ್ಕರ ಅಲಂಕರಿಸಿಕೊಂಡು ನಗುಮುಖದಿಂದ ಯಾವತ್ತಿಗೂ ಸ್ವಾಗತಿಸಲು ಸಿದ್ಧಳಾಗಿರುತ್ತಿದ್ದಳು. ಕೈಕೇಯಿ ಮಂಥರೆಯ ಮಾತಿನಿಂದ ಪ್ರಭಾವಿತಳಾಗಿ ರಾಜನನ್ನು ಮಣಿಸಲೇ ಬೇಕೆಂದು ಕೋಪಾಗಾರವನ್ನು ಸೇರಿದರೆ ಇಳಿವಯಸ್ಸಿನ ರಾಜ “ರಾಮಾಭಿಷೇಕದ ಸಂತೋಷದ ವಾರ್ತೆಯನ್ನು ಕೈಕೇಯಿಗೆ ತಿಳಿಸಿ ರತಿಸುಖವನ್ನು ಪಡೆಯಬೇಕೆಂದು ಬಯಸಿ ಅತ್ಯಾಸೆಯಿಂದ ಕೈಕೇಯಿಯ ಅಂತಃಪುರಕ್ಕೆ ಧಾವಿಸಿ ಬರುತ್ತಾನೆ”.

ಕೈಕೇಯಿ ಅಂತಃಪುರದಲ್ಲಿ ಇಲ್ಲವಾಗಿರುವುದನ್ನು ಕಂಡವನಿಗೆ ವ್ಯಾಕುಲವಾಯಿತು. ಪ್ರತಿಹಾರಿ ಹೇಳಿದ “ದೇವ ದೇವಿ ಬೃಶಂ ಕ್ರುದ್ಧಾ ಕ್ರೋಧಾಗಾರಮಭಿದ್ರುತಾ-ಪರಮ ಕ್ರುದ್ಧೆಯಾಗಿ ದೇವಿ ಕೋಪಾಗಾರವನ್ನು ಸೇರಿದ್ದಾಳೆ” ಎನ್ನುವ ಮಾತನ್ನು ಕೇಳಿ ಕಂಗಾಲಾದ. ಕೋಪಾಗಾರಕ್ಕೆ ಧಾವಿಸಿ ನೋಡಿದರೆ ತನ್ನ ಪ್ರೇಯಸಿ ಅಸ್ತವ್ಯಸ್ತವಾಗಿ ನೆಲದ ಮೇಲೆ ಮಲಗಿದ್ದಾಳೆ. ಪ್ರಿಯತಮೆಯನ್ನು ಆಕಾಶದಿಂದ ಚ್ಯುತಳಾದ ಅಪ್ಸರೆಯಂತೆ ಕಂಡವನಿಗೆ ಎದೆಯೊಡೆದು ಹೋಯಿತು. “ನಿಷ್ಕಳಂಕನಾದ ದಶರಥ ಪಾಪಸಂಕಲ್ಪವನ್ನು ಹೊತ್ತ ಕೈಕೇಯಿಯನ್ನು ಕಂಡ” ಎನ್ನುವ ಮಾತು ಇಲ್ಲಿ ಬರುತ್ತದೆ. ಸಂಕಲ್ಪವೆನ್ನುವುದು ಹೊಸ ಕಾರ್ಯಕ್ಕೆ ಹೇತು. ಮುಂದಿನ ಘಟನೆಗೆ ಇಲ್ಲಿ ನಾಂದಿಯಾಗುತ್ತಿದೆ. ಧರ್ಮಮಾರ್ಗದಲ್ಲಿ ಸದಾ ನಡೆಯುತ್ತಿದ್ದ ಅರಸ ಕಾಮಮೋಹಿತನಾಗಿ ಕೈಕೇಯಿಯನ್ನು ಸಮಾಧಾನ ಮಾಡಲು ಹೇಳುವ ಮಾತುಗಳು ಸೂರ್ಯವಂಶಕ್ಕೆ ಹೇಳಿಸಿದ್ದಲ್ಲ.

ಅವಧ್ಯೋ ವಧ್ಯತಾಂ ಕೋ ವಾ ವಧ್ಯಃ ಕೋವಾ ವಿಮುಚ್ಯತಾಮ್.
ದರಿದ್ರಃ ಕೋ ಭವದಾಢ್ಯೋ ದ್ರವ್ಯವಾನ್ಕೋSಪ್ಯಕಿಂಚನಃ৷৷ಅ. ಕಾಂ.10.33৷৷

ಕಾಮವೆನ್ನುವುದು ಎಂತವರನ್ನೂ ತಲೆಕೆಡಿಸಿಬಿಡುತ್ತದೆ. ಕಾಮದ ಹುಚ್ಚಿನಲ್ಲಿರುವ ದಶರಥ ತನ್ನ ಸುಖಕ್ಕಾಗಿ ಏನನ್ನು ಮಾಡಲೂ ಹೇಸದ ಸ್ಥಿತಿಗೆ ತಲುಪಿದ್ದಾನೆ. ವಧಾರ್ಹನಲ್ಲದವನನ್ನು ವಧಿಸಲೇ, ಮರಣದಂಡನೆಗೆ ಗುರಿಯಾದವನನ್ನು ಬಿಡಿಸಲೇ, ದರಿದ್ರನನ್ನು ಶ್ರೀಮಂತನನ್ನಾಗಿ ಮಾಡಲೇ, ಶ್ರೀಮಂತನನ್ನು ದರಿದ್ರನನ್ನಾಗಿ ಮಾಡಲೇ; ನಿನ್ನ ಪ್ರೀತಿಗಾಗಿ ಏನನ್ನೂ ಮಾಡಲೂ ತಾನು ಸಿದ್ಧ ಎನ್ನುವ ಮಾತುಗಳು ದೊರೆತನಕ್ಕೆ ತಕ್ಕುದಲ್ಲ. ಆತ ಅವಳನ್ನು ಸಮಾಧಾನಿಸುತ್ತಾ “ಪ್ರಿಯತಮೆಯಲ್ಲಿ ನನಗೆ ನಿನಗಿಂತ- ಮನುಜರಲ್ಲಿ ರಾಮನಿಗಿಂತ ಹೆಚ್ಚಿನವರು ಯಾರೂ ಇಲ್ಲ” ಎನ್ನುವಲ್ಲಿ ರಾಮನ ಹೆಸರನ್ನು ಕೇಳಿದ ಆಕೆಗೆ ಮತ್ತುಷ್ಟು ಉರಿ ಹತ್ತಿತು. ದೊರೆ ಮನ್ಮಥನ ಬಾಣಕ್ಕೆ ಈಡಾಗಿರುವುದನ್ನು ಪಕ್ಕಾ ಮಾಡಿಕೊಂಡಳು. ಸ್ವಲ್ಪ ಹೊತ್ತು ಕಾಡಿಸಬೇಕು ಎಂದು ಸುಮ್ಮನಾದವಳು. ದಶರಥನಿಗೆ ಸಹಿಸಲಾಗಿಲ್ಲ. ಆಕೆಯ ರೂಪಲಾವಣ್ಯಕ್ಕೆ ಸೋತಿದ್ದ. ಅವಳ ನೋವನ್ನು ಬಗೆಹರಿಸುವುದು ತನ್ನ ಆದ್ಯ ಕರ್ತವ್ಯವೆಂದು ಬಗೆದ.. ಅದು ತನಕ ತಾನು ಗಳಿಸಿದ ಸುಕೃತದ ಮೇಲೆ ಆಣೆಯಿಟ್ಟು ಅವಳ ಬಯಕೆಯನ್ನು ಈಡೇರಿಸುವೆ ಎಂದು ಅಂಗಲಾಚಿದ.

dhavala dharini king dasharatha

ಆದರೂ ಸುಮ್ಮನಿದ್ದ ಕೈಕೇಯಿಗೆ ಕೊನೆಯದಾಗಿ “ನನ್ನ ರಾಮನಾಣೆಗೂ ನೀನು ಹೇಳುವ ಕಾರ್ಯವನ್ನು ಮಾಡುತ್ತೇನೆ” ಎಂದು ಪ್ರತಿಜ್ಞೆ ಮಾಡಿಬಿಟ್ಟ. ಗಾಳದಲ್ಲಿ ಚಿಕ್ಕಮೀನನ್ನು ಚುಚ್ಚಿ ದೊಡ್ಡಮೀನನ್ನು ಸೆಳೆಯುವಂತೆ ಚಕ್ರವರ್ತಿಯನ್ನು ಮಟ್ಟುಹಾಕಿ ತನ್ನ ಕಾರ್ಯಸಾಧಿಸಲು ಇದೇ ಸಮಯವೆಂದು ತಿಳಿದ ಕೈಕೇಯಿ ಬಯಕೆಯನ್ನು ಹೇಳುವ ಮುನ್ನ ರಾಜನಲ್ಲಿನ ಧರ್ಮಪ್ರಜ್ಞೆಯನ್ನು ಜಾಗ್ರತಗೊಳಿಸಲು “ನೀನು ಮಾಡಿದ ಈ ಪ್ರತಿಜ್ಞೆಯನ್ನು ಮೂವತ್ತುಮೂರು ಕೋಟಿ ದೇವತೆಗಳು ಕೇಳಲಿ, ಚಂದ್ರಸೂರ್ಯರೂ ಕೇಳಲಿ, ಆಕಾಶವೂ ಇದಕ್ಕೆ ಸಾಕ್ಷಿಯಾಗಲಿ, ನವಗ್ರಹಗಳು, ಹಗಲು-ರಾತ್ರಿಗಳು, ಎಂಟುದಿಕ್ಕುಗಳು,ಗಂಧರ್ವರಾಕ್ಷಸರನ್ನೊಳಗೊಂಡಿರುವ ಸ್ವರ್ಗ-ಮರ್ತ್ಯ-ಪಾತಾಳ, ನಿಶಾಚರರೂ, ಪಿಶಾಚಗಳೂ, ಭೂತಗಣಗಳೂ, ಗೃಹದೇವತೆಗಳೂ ಸಹಿತ ಎಲ್ಲರೂ ನೀನು ಹೇಳಿದ ಈ ಪ್ರತಿಜ್ಞಾವಾಕ್ಯಕ್ಕೆ ಸಾಕ್ಷಿಗಳಾಗಲಿ” ಎಂದವಳೇ ಆತನನ್ನು ಸಂಪೂರ್ಣವಾಗಿ ಖೆಡ್ಡಾಕ್ಕೆ ತೋಡುವ ಈ ಮಾತನ್ನು ಆಡುತ್ತಾಳೆ.

ಸತ್ಯಸಂಧೋ ಮಹಾತೇಜಾಃ ಧರ್ಮಜ್ಞಃ ಸುಸಮಾಹಿತಾಃ.
ವರಂ ಮಮ ದದಾತ್ಯೇಷಃ ತನ್ಮೇ ಶ್ರೃಣ್ವನ್ತು ದೈವತಾಃ৷৷ಅಯೋ.11.16৷৷

ಎಲೈ ದೇವತೆಗಳಿರಾ! ನೀವೆಲ್ಲರೂ ಕೇಳಿರಿ. ಸತ್ಯಸಂಧನಾದ ಮಹಾತೇಜಸ್ವಿಯಾದ, ಧರ್ಮಜ್ಞನಾದ ಧಶರಥನು ಸಮಾಧಾನಚಿತ್ತನಾಗಿ ತಾನು ಪ್ರತಿಜ್ಞೆ ಮಾಡಿರುವಂತೆ ನನಗೆ ವರವನ್ನು ದಯಪಾಲಿಸಲಿದ್ದಾನೆ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ರಾಮಾಯಣದ ಕವಿಗೆ ಕಾಡಿದ ಮೂರು ಚಿಂತೆಗಳು

ವ್ಯಾಧನ ಧ್ವನಿಯಿಂದ ಆಕರ್ಷಿತಳಾಗಿ ಬಲೆಗೆ ಬೀಳುವ ಜಿಂಕೆಯಂತೆ ರಾಜನು ತನ್ನ ವಿನಾಶಕ್ಕಾಗಿ ಧರ್ಮಪಾಶವನ್ನು ಕುತ್ತಿಗೆಗೆ ಬಿಗಿದುಕೊಂಡಿದ್ದು ಹೀಗೆ. ಅವನಿಗೆ ಮುಂದೆ ಮಾತಾಡಲು ಅವಕಾಶಕೊಡದಂತೆ ಆತನನ್ನು ಬಿಗಿದಪ್ಪಿ ತನಗೆ ಹಿಂದೆ ಕೊಟ್ಟಿದ್ದ ವರಗಳನ್ನು ಅಪೇಕ್ಷಿಸಿ ಅದಕ್ಕೆ ರಾಜ ಬೇರೆ ಏನನ್ನಾದರೂ ಹೇಳಬಾರದೆಂದು, “ರಾಮನಿಗೆ ಪಟ್ಟಾಭಿಷೇಕಕ್ಕೆ ಯಾವೆಲ್ಲಾ ಸಿದ್ಧತೆಗಳಾಗಿವೆಯೋ ಅದೇ ಸಾಂಬಾರಪದಾರ್ಥಗಳಿಂದ ಭರತನಿಗೆ ಪಟ್ಟಾಭಿಷೇಕವಾಗಬೇಕು. ಎರಡನೇಯ ವರವನ್ನೂ ಹೇಳಿಯೇಬಿಡುವೆ.

ನವ ಪಞ್ಚ ಚ ವರ್ಷಾಣಿ ದಣ್ಡಕಾರಣ್ಯಮಾಶ್ರಿತಃ
ಚೀರಾಜಿನಜಟಾಧಾರೀ ರಾಮೋ ಭವತು ತಾಪಸಃ.

ಹದಿನಾಲ್ಕು ವರುಷಗಳ ಕಾಲ ರಾಮನು ದಂಡಕಾರಣ್ಯಕ್ಕೆ ಹೋಗಿ ಅಲ್ಲಿ ಅವನು ಜಟಾಧಾರಿಯಾಗಿ ನಾರಮುಡಿಯನ್ನುಟ್ಟು ಕೃಷ್ಣಾಜಿನವನ್ನು ಧರಿಸಿ ತಾಪಸನಂತೆ ಇರಬೇಕು.

ಕೈಕೇಯಿ ಇಷ್ಟಕ್ಕೇ ನಿಲ್ಲಿಸುವುದಿಲ್ಲ. “ಆದ್ಯ ಚೈವ ಹಿ ಪಶ್ಯೇಯಂ ಪ್ರಯಾನ್ತಂ ರಾಘವಂ ವನಮ್- ರಾಘವನು ಚೀರಾಜಿನ-ಜಟಾಧಾರಿಯಾಗಿ ಕಾಡಿಗೆ ಹೋಗುವುದನ್ನು ಈಗಲೇ ನಾನು ನೋಡಬೇಕು, ಸತ್ಯವಚನನಾದ ನೀನು ಈಗಲೇ ನಡೆಸಿಕೊಡು” ತನ್ನ ಇಬ್ಬರು ಪ್ರಿಯರಲ್ಲಿ ಒಬ್ಬನಾದ ರಾಮನಿಗೆ ಆಘಾತಕಾರಿಯಾದ ವಿಷಯಗಳನ್ನು ಹೇಳುವ ಮಾತುಗಳು ದಶರಥನ ಕಾಮದ ಪಿತ್ಥವನ್ನು ಜರ್ರನೆ ಇಳಿಸಿಯೇಬಿಟ್ಟಿತು; ಜೊತೆಗೆ ಆತನ ಮನೋಧೈರ್ಯವನ್ನೂ ಸಹ! ಲೋಕದ ಎಲ್ಲಾ ರಾಜರನ್ನು, ಪ್ರಜೆಗಳನ್ನು ಮತ್ತು ವಶಿಷ್ಠರಾದಿಯಾಗಿರುವ ಎಲ್ಲಾ ಋಷಿಗಳನ್ನು ತನ್ನ ಇಷ್ಟಕ್ಕೆ ಒಗ್ಗಿಕೊಳ್ಳುವಂತೆ ತಂತ್ರವನ್ನು ಹೂಡಿದ ಅರಸನ ಇಚ್ಛೆ ಇಲ್ಲಿ ತರಗೆಲೆಗಳಂತೆ ಗಾಳಿಗೆ ಹಾರಿಹೋಯಿತು. ಯಾವ ಉದ್ಧೇಶಕ್ಕಾಗಿ ಕೈಕೇಯಿಯ ಅರಮನೆಗೆ ಬಂದಿದ್ದನೋ ಅವೆಲ್ಲವೂ ನೀರಿನಲ್ಲಿ ಹೋಮ ಮಾಡಿದಂತೆ ಕದಡಿಹೋಯಿತು. ಅವನ ಜೀವನದಲ್ಲಿ ರಾಮನಿಗೆ ಪಟ್ಟಾಭಿಷೇಕವನ್ನು ಮಾಡಿವದೊಂದೇ ಗುರಿ ಇದ್ದಿದ್ದು. ತನ್ನ ಪ್ರೀತಿಯ ರಾಣಿಯಿಂದಲೇ ಹೀಗೆ ವಿಘ್ನಬರಬಹುದೆಂದು ರಾಜ ಎಣಿಸಿರಲಿಲ್ಲ. ಅಂಥ ಸ್ವಲ್ಪ ಅನುಮಾನ ಬಂದಿದ್ದರೂ ಆತ ಕೈಕೇಯಿಯ ಅರಮನೆಗೆ ಬರುತ್ತಲೇ ಇರಲಿಲ್ಲ. ಒಮ್ಮೆಲೇ ಎಚ್ಚರತಪ್ಪಿ ಬಿದ್ದ. ತನ್ನ ರಾಜತ್ವಕ್ಕೆ ಧಿಕ್ಕಾರ ಹಾಕಿಕೊಂಡ. ಕೊನೆಗೆ ಅನಿವಾರ್ಯವಾಗಿ ಕೈಕೇಯಿಗೆ ನಮಸ್ಕರಿಸಿಕೊಂಡು “ನಿನ್ನ ಕಾಲನ್ನು ಬೇಕಾದರೂ ಹಿಡಿಯುತ್ತೇನೆ, ರಾಮನನ್ನು ರಕ್ಷಿಸು. ವರದಾನವೆನ್ನುವ ಒಂದು ಪ್ರತಿಜ್ಞೆಯಲ್ಲಿ ನನ್ನನ್ನು ಸಿಕ್ಕಿಹಾಕಿಸಿ ನಿರಪರಾಧಿಯನ್ನು ಕಾಡಿಗಟ್ಟಿದ ದೋಷ ನನಗೆ ಬಾರದಿರಲಿ” ಎಂದು ನೆಲದಲ್ಲಿ ಹೊರಳಾಡತೊಡಗಿದ.

ಮೂಂದಿನ ಭಾಗದಲ್ಲಿ ತನ್ನ ಕರ್ಮಫಲವನ್ನು ತಾನು ಉಂಡ ಮಹಾರಾಜ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ರಾಮಾಯಣದ ಮಹಾ ಮಥನದ ಕಡೆಗೋಲು ಮಂಥರೆ

Continue Reading

ದಕ್ಷಿಣ ಕನ್ನಡ

Yakshagana Artist: ವೇಷ ಕಳಚುತ್ತಿರುವಾಗಲೇ ಹೃದಯ ಸ್ತಬ್ಧ ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Gangadhar Puttur : ವೇಷ ಕಳಚುತ್ತಿರುವಾಗಲೇ ಯಕ್ಷಗಾನ ಕಲಾವಿದ (Yakshagana Artist) ಗಂಗಾಧರ ಪುತ್ತೂರು ಇಹಲೋಕ ತ್ಯಜಿಸಿದ್ದಾರೆ. ಮುಖದ ಬಣ್ಣವನ್ನು ಅಳಿಸುತ್ತಿರುವಾಗ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

VISTARANEWS.COM


on

By

Yakshagana Artist No more
Koo

ಮಂಗಳೂರು: ವೇಷ ಕಳಚುತ್ತಿರುವಾಗಲೇ ಹೃದಯಾಘಾತದಿಂದ (Heart attack) ಧರ್ಮಸ್ಥಳ ಯಕ್ಷಗಾನ ಮೇಳದ ಸವ್ಯಸಾಚಿ ಕಲಾವಿದ (Yakshagana Artist) ಗಂಗಾಧರ ಪುತ್ತೂರು(60) ಅವರು ಇಹಲೋಕ ತ್ಯಜಿಸಿದ್ದಾರೆ.

ನಿನ್ನೆ ಬುಧವಾರ (ಮೇ 1) ರಾತ್ರಿ ಕೋಟ ಗಾಂಧಿಮೈದಾನದ ಬಳಿ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಅವರು ಕುಕ್ಕಿಂತ್ತಾಯ ದೈವದ ವೇಷವನ್ನು ನಿರ್ವಹಿಸಿದ್ದರು. ಬಳಿಕ ಚೌಕಿಗೆ ಆಗಮಿಸಿ ಕಿರೀಟ, ಯಕ್ಷಗಾನದ ಆಭರಣ ತೆಗೆದಿಟ್ಟು, ಮುಖದ ಬಣ್ಣವನ್ನು ಅಳಿಸುತ್ತಿರುವಾಗ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಪುತ್ತೂರಿನ ಸೇಡಿಯಾಪು ನಿವಾಸಿಯಾಗಿರುವ ಇವರು ಏಳನೇ ತರಗತಿಯವರೆಗೆ ವಿದ್ಯಾಭ್ಯಾಸ ಹೊಂದಿದ್ದರು. ತಮ್ಮ 18ನೇ ವಯಸ್ಸಿಗೆ ಯಕ್ಷಗಾನ ತಿರುಗಾಟ ಆರಂಭಿಸಿದ ಗಂಗಾಧರ ಪುತ್ತೂರು ಸುದೀರ್ಘ 40 ವರ್ಷಗಳಷ್ಟು ಕಾಲ ಯಕ್ಷಗಾನ ರಂಗದಲ್ಲಿ ವ್ಯವಸಾಯ ಮಾಡಿದ್ದರು. ಕರ್ಗಲ್ಲು ವಿಶ್ವೇಶ್ವರ ಭಟ್ ಹಾಗೂ ಕೆ.ಗೋವಿಂದ ಭಟ್ ಅವರಿಂದ ನಾಟ್ಯಾಭ್ಯಾಸ ಮಾಡಿದರು.

ಯಕ್ಷಗಾನ ರಂಗದ ಸವ್ಯಸಾಚಿ ಕಲಾವಿದರಾದ ಇವರು ಸ್ತ್ರೀವೇಷದಿಂದ ಹಿಡಿದು ಪುಂಡುವೇಷ, ರಾಜವೇಷ, ಹೆಣ್ಣುಬಣ್ಣ ಸಮರ್ಥವಾಗಿ ನಿರ್ವಹಿಸುತ್ತಿದ್ದರು. 30 ವರ್ಷಗಳಿಗಿಂತಲೂ ಅಧಿಕ ಕಾಲದಿಂದ ಗಂಗಾಧರ ಪುತ್ತೂರು ಧರ್ಮಸ್ಥಳ ಮೇಳದಲ್ಲಿಯೇ ಕಲಾವಿದರಾಗಿ ತಿರುಗಾಟ ಮಾಡಿದ್ದರು.

ಇದನ್ನೂ ಓದಿ: Prajwal Revanna case: ತಲೆಮರೆಸಿಕೊಂಡ ಪ್ರಜ್ವಲ್‌ ರೇವಣ್ಣಗೆ ಲುಕೌಟ್‌ ನೋಟಿಸ್‌ ಜಾರಿ, ಬಂದ ಕೂಡಲೇ ಬಂಧನ!

ತೀವ್ರ ಹೃದಯಾಘಾತದಿಂದ ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) (Srinivas Prasad) ಅವರು ತೀವ್ರ ಹೃದಯಾಘಾತದಿಂದ (Heart Aattack) ವಿಧಿವಶರಾದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೆಲದಿನಗಳ ಹಿಂದೆ ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ 1:20ಕ್ಕೆ (Manipal Hospital ) ಅವರು ನಿಧನರಾಗಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀನಿವಾಸ್ ಪ್ರಸಾದ್ ಅವರು ಏಪ್ರಿಲ್ 22ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಮೂತ್ರಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಎನ್ನಲಾಗಿದೆ.

ಇನ್ನು ಈ ಬಗ್ಗೆ ಶ್ರೀನಿವಾಸ್ ಪ್ರಸಾದ್ ಅಳಿಯ ಹರ್ಷವರ್ಧನ್ ಮಾಹಿತಿ ನೀಡಿದ್ದು, ಶ್ರೀನಿವಾಸ್ ಪ್ರಸಾದ್ ಅವರು ರಾತ್ರಿ 1:20ರ ಸುಮಾರಿಗೆ ತೀವ್ರವಾದ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರನ್ನು ಉಳಿಸಿಕೊಳ್ಳಲು ವೈದ್ಯರು ಸಾಕಷ್ಟು ರೀತಿಯಲ್ಲಿ ಪ್ರಯತ್ನ ಮಾಡಿದ್ದರು. ಅವರ ಈ ಅಗಲಿಕೆ ಇಡೀ ದಲಿತ ಸಮುದಾಯಕ್ಕೆ ತುಂಬಲಾರದ ನಷ್ಟ. ನನಗೆ ರಾಜಕೀಯಕ್ಕೆ ಜನ್ಮ ಕೊಟ್ಟಂತವರು. ರಾಜಕೀಯದಲ್ಲಿ ಏಕಾಂಗಿಯಾಗಿ ಹೋರಾಟ ಮಾಡೋದಕ್ಕೆ ಬಿಟ್ಟು ಹೋಗಿದ್ದಾರೆ. ಕೊನೆಯ ಉಸಿರು ಇರುವವರೆಗೂ ಹೋರಾಟ ಮಾಡಿದ್ದಾರೆ, ಹೋರಾಟದ ಜೀವಿ ಅವರು. ಐದು ವರ್ಷದ ಹಿಂದೆ ನಾನು ನಂಜನಗೂಡಿನಲ್ಲಿ ಗೆದ್ದಾಗ ಅವರು ಲೋಕಸಭೆಯಲ್ಲಿ ಸ್ಪರ್ಧೆ ಮಾಡ್ತಿನಿ ಅಂದರು. ನನ್ನನ್ನು ಅವರು ತಂದೆ ಸ್ಥಾನದಲ್ಲಿ ನಿಂತು ರಾಜಕೀಯವಾಗಿ ಬೆಳೆಸಿದ್ದಾರೆ ಯಾವುದೆ ವಿಚಾರ ಆಗಿದ್ದರೂ ಅವರ ಜೊತೆ ಚರ್ಚೆ ಮಾಡಿಯೇ ನಿರ್ಧಾರಕ್ಕೆ ಬರುತ್ತಿದೆ. ಈಗ ಯಾರ ಬಳಿ ಹೋಗಿ ಕೇಳಲಿ ಎಂದು ಅನಿಸಿ ಬಿಟ್ಟಿದೆ ಎಂದು ಭಾವುಕರಾಗಿ ಮಾತನಾಡಿದರು.

ಇದನ್ನೂ ಓದಿ:Raja Marga Column :‌ ಕಣ್ಣೇ ಕಾಣದ ಆಕೆ ಎರಡು ಬಾರಿ ಐಎಎಸ್‌ ಪಾಸ್‌ ಮಾಡಿದ್ದರು!

ಚಾಮರಾಜನಗರ ಕ್ಷೇತ್ರದಿಂದ 7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಶ್ರೀನಿವಾಸ್‌ ಪ್ರಸಾದ್‌ 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇನ್ನು 2013ರಿಂದ 2016ರವರೆಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಸಚಿವರಾಗಿದ್ದರು . 24 ಡಿಸೆಂಬರ್ 2016 ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದ ಅವರು 2019ರಲ್ಲಿ ಚಾಮರಾಜನಗರ ಸಂಸದರಾಗಿ ಆಯ್ಕೆ.ಯಾಗಿದ್ದರು. ಅನಾರೋಗ್ಯ ಸಮಸ್ಯೆಯಿಂದಾಗಿ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ ಅವರು 2024 ಮಾರ್ಚ್ 17ರಂದು ರಾಜಕೀಯ ನಿವೃತ್ತಿ ಪಡೆದುಕೊಂಡಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Kaladarpana-Art Reflects: ಬೆಂಗಳೂರಿನಲ್ಲಿ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ, ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ

Kaladarpana-Art Reflects: ಬೆಂಗಳೂರು ವಿಶ್ವವಿದ್ಯಾಲಯದ ಕಲಾಗ್ರಾಮ ಸಭಾಂಗಣದಲ್ಲಿ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ನಡೆಯಲಿದೆ.

VISTARANEWS.COM


on

Kaladarpana-Art Reflects
Koo

ಬೆಂಗಳೂರು: ಕಲಾ ದರ್ಪಣ- ಆರ್ಟ್‌ ರಿಫ್ಲೆಕ್ಟ್ಸ್‌ (Kaladarpana-Art Reflects) ವತಿಯಿಂದ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ನಗರದ ನಾಗರಬಾವಿ 2ನೇ ಹಂತದ ಎನ್‌ಜಿಇಎಫ್‌ ಲೇಔಟ್‌ನ ಬೆಂಗಳೂರು ವಿಶ್ವವಿದ್ಯಾಲಯದ ಕಲಾಗ್ರಾಮ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಭಾನುವಾರ (ಮೇ 5ರಂದು) ಬೆಳಗ್ಗೆ 8.30ಕ್ಕೆ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ನಡೆಯಲಿದ್ದು, 9ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ 11 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ.

ಅಂತರಾಷ್ಟ್ರೀಯ ಖ್ಯಾತಿಯ ತಬಲ ವಾದಕ ಪಂಡಿತ್ ಡಾ. ಸತೀಶ್ ಹಂಪಿಹೊಳಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಪ್ರಜಾವಾಣಿ ಪತ್ರಿಕೆ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ಮತ್ತು ಮಾರುತಿ ಮೆಡಿಕಲ್ಸ್ ಮಾಲೀಕರು ಮಹೇಂದ್ರ ಮುಣೋತ್ ಜೈನ್ ಅವರು ಭಾಗವಹಿಸಲಿದ್ದಾರೆ. ಈ ಮೂವರು ಗಣ್ಯರು, ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕಲಾದರ್ಪಣ ಪ್ರಶಸ್ತಿ ಪುರಸ್ಕೃತರು

  • ಗೋ.ನಾ. ಸ್ವಾಮಿ, ಅಂತಾರಾಷ್ಟ್ರೀಯ ಖ್ಯಾತಿಯ ಜನಪದ ಗಾಯಕರು
  • ವಿದುಷಿ ಅನಸೂಯ ದ್ವಾರಕನಾಥ, ಖ್ಯಾತ ಕರ್ನಾಟಕ ಶಾಸ್ತ್ರೀಯ ಸಂಗೀತಗಾರರು

ಇದನ್ನೂ ಓದಿ | Film festival: ಬೆಂಗಳೂರಿನಲ್ಲಿ ಮೇ 4, 5ರಂದು ಗುರುದತ್‌ ಚಲನ ಚಿತ್ರೋತ್ಸವ ಮತ್ತು ಸಂಗೀತ ರಸ ಸಂಜೆ

ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಕರ್ನಾಟಕ ಚಿತ್ರಕಲಾ ಪರಿಷತ್‌ನ ಪ್ರಾಧ್ಯಾಪಕ ಪ್ರೊ. ವಿ.ಎಸ್. ನಾಯಕ ಬಳಕೂರು, ಎಸ್.ಎಸ್.ವಿ.ಎಸ್.ಪಿ.ಎಸ್. ಶಾಲೆ ಪ್ರಾಂಶುಪಾಲೆ ಲತಾ ಎಸ್. ಅವರು ಆಗಮಿಸಲಿದ್ದಾರೆ. ಕಲಾ ದರ್ಪಣ- ಆರ್ಟ್‌ ರಿಫ್ಲೆಕ್ಟ್ಸ್‌ ಸಂಸ್ಥೆಯ ಹೇಮಾ ವಿನಾಯಕ್‌ ಪಾಟೀಲ್‌ ಹಾಗೂ ವಿನಾಯಕ್‌ ಪಾಟೀಲ್‌ ಅವರು ಉಪಸ್ಥಿತರಿರಲಿದ್ದಾರೆ. ಖ್ಯಾತ ನಿರೂಪಕಿ ಭವಾನಿ ಲೋಕೇಶ್‌ ಅವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

Continue Reading
Advertisement
The Goat Life OTT Release Date Fix
ಒಟಿಟಿ3 mins ago

The Goat Life: ಪೃಥ್ವಿರಾಜ್ ಸುಕುಮಾರನ್ ಅಭಿನಯದ ʻಆಡುಜೀವಿತಂʼ ಒಟಿಟಿ ರಿಲೀಸ್‌ ಎಲ್ಲಿ?

No Diet Day
ಆರೋಗ್ಯ4 mins ago

No Diet Day: ಬೇಕಾಬಿಟ್ಟಿ ಡಯಟ್‌ ಮಾಡಿದರೆ ಏನಾಗುತ್ತದೆ? ಈ ಸಂಗತಿ ತಿಳಿದಿರಲಿ

Dead Body Found
ಕ್ರೈಂ10 mins ago

Dead Body Found: ಕಾಫಿ ತೋಟದ ಮಧ್ಯೆ ನೇತಾಡುತ್ತಿತ್ತು ವ್ಯಕ್ತಿ ಶವ; ಕೆರೆಯಲ್ಲಿ ತೇಲಿ ಬಂದ ಅಪರಿಚಿತ

Medical Students
ದೇಶ15 mins ago

Medical Students: ಮದುವೆಗೆ ಹೋದವರು ಸಮುದ್ರದಲ್ಲಿ ಮುಳುಗಿ 5 ಮೆಡಿಕಲ್‌ ವಿದ್ಯಾರ್ಥಿಗಳ ಸಾವು!

India's T20 World Cup Jersey
ಕ್ರೀಡೆ22 mins ago

India’s T20 World Cup Jersey: ಟಿ20 ವಿಶ್ವಕಪ್​ಗೆ ಹೊಸ ಜೆರ್ಸಿಯಲ್ಲಿ ಆಡಲಿದೆ ಭಾರತ; ಜೆರ್ಸಿ ಫೋಟೊ ವೈರಲ್​

Job Alert
ಉದ್ಯೋಗ27 mins ago

Job Alert: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ನ 3,712 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ನಾಳೆಯೇ ಕೊನೆಯ ದಿನ

assault case in bengaluru
ಬೆಂಗಳೂರು2 hours ago

Assault Case : ವಿಕೋಪಕ್ಕೆ ತಿರುಗಿದ ಜಗಳ; ಕಪಾಳಮೋಕ್ಷಕ್ಕೆ ವ್ಯಕ್ತಿ ಬಲಿ

Prajwal Revanna Case site inspection by SIT team in HD Revanna Basavanagudi residence
ಕ್ರೈಂ2 hours ago

Prajwal Revanna Case: ಪ್ರಜ್ವಲ್‌ ಅತ್ಯಾಚಾರ ಕೇಸ್‌; ಎಚ್‌.ಡಿ. ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು: ವಕೀಲರ ಅಸಮಾಧಾನ

No Diet Day 2024
ಆರೋಗ್ಯ2 hours ago

No Diet Day 2024: ಇಂದು ಡಯೆಟ್‌ ರಹಿತ ದಿನ ಆಚರಿಸುವುದೇಕೆ?

Pakistan Cricket
ಕ್ರೀಡೆ2 hours ago

Pakistan Cricket: ಟಿ20 ವಿಶ್ವಕಪ್​ ಗೆದ್ದರೆ ಪಾಕ್​ ಆಟಗಾರರಿಗೆ ಸಿಗಲಿದೆ ಭಾರೀ ಬಹುಮಾನ ಮೊತ್ತ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ12 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ21 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ23 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ23 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ4 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ5 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌