IPL 2023: ಬ್ಯಾಟಲ್‌ ಆಫ್ ಬ್ರದರ್ಸ್ ಚಾಲೆಂಜ್​ ಗೆದ್ದ ಹಾರ್ದಿಕ್​ ಪಾಂಡ್ಯ; ಪ್ಲೇ ಆಫ್​ ಸನಿಹಕ್ಕೆ ಗುಜರಾತ್​ - Vistara News

ಕ್ರಿಕೆಟ್

IPL 2023: ಬ್ಯಾಟಲ್‌ ಆಫ್ ಬ್ರದರ್ಸ್ ಚಾಲೆಂಜ್​ ಗೆದ್ದ ಹಾರ್ದಿಕ್​ ಪಾಂಡ್ಯ; ಪ್ಲೇ ಆಫ್​ ಸನಿಹಕ್ಕೆ ಗುಜರಾತ್​

ಲಕ್ನೋ ಸೂಪರ್​ ಜೈಂಟ್ಸ್​ ವಿರುದ್ಧದ ಭಾನುವಾರದ ಐಪಿಎಲ್​ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡ 56 ರನ್​ಗಳ ಗೆಲುವು ಸಾಧಿಸಿದೆ.

VISTARANEWS.COM


on

Narendra Modi Stadium At Ahmedabad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಹಮದಾಬಾದ್: “ಬ್ಯಾಟಲ್‌ ಆಫ್ ಬ್ರದರ್ಸ್​” ಎಂದೇ ಕರೆಯಲ್ಪಟ್ಟ ಭಾನುವಾರದ ಐಪಿಎಲ್​ನ ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್​ ವಿರುದ್ಧ ಹಾಲಿ ಚಾಂಪಿಯನ್​ ಗುಜರಾತ್​ ಟೈಟನ್ಸ್​ 56 ರನ್​ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಲಕ್ನೋ ವಿರುದ್ಧ ಗುಜರಾತ್​ ಅಜೇಯ ದಾಖಲೆಯನ್ನು ಉಳಿಸಿಕೊಂಡಿತು. ಉಭಯ ತಂಡಗಳು ಐಪಿಎಲ್​ನಲ್ಲಿ ಇದುವರೆಗೆ ನಾಲ್ಕು ಬಾರಿ ಮುಖಾಮುಖಿಯಾಗಿದ್ದು ನಾಲ್ಕೂ ಪಂದ್ಯದಲ್ಲಿಯೂ ಹಾರ್ದಿಕ್ ಪಡೆ ಮೇಲುಗೈ ಸಾಧಿಸಿದೆ.

ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಭಾನುವಾರದ ಐಪಿಎಲ್​ನ ಡಬಲ್​ ಹೆಡರ್​ನ ಮೊದಲ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಗುಜರಾತ್ ತಂಡ​ ಶುಭಮನ್​ ಗಿಲ್(ಅಜೇಯ 94) ಮತ್ತು ವೃದ್ಧಿಮಾನ್​ ಸಾಹಾ(81) ಅವರ ಸಿಡಿಲಬ್ಬರದ ಬ್ಯಾಟಿಂಗ್​ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 2 ವಿಕೆಟ್​ ನಷ್ಟಕ್ಕೆ 227 ರನ್​ ಬಾರಿಸಿತು. ಜವಾಬಿತ್ತ ಲಕ್ನೋ ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ ನಷ್ಟಕ್ಕೆ 171 ರನ್​ ಗಳಿಸಿ ಶರಣಾಯಿತು. ಗುಜರಾತ್​ ಈ ಗೆಲುವಿನೊಂದಿಗೆ 16 ಅಂಕ ಸಂಪಾದಿಸಿ ಪ್ಲೇ ಆಫ್​​ ಸನಿಹಕ್ಕೆ ಬಂದು ನಿಂತಿದೆ.

ಬೃಹತ್​ ಮೊತ್ತವನ್ನು ದಿಟ್ಟ ರೀತಿಯಲ್ಲೇ ಬೆನ್ನಟ್ಟಿದ ಲಕ್ನೋ ಉತ್ತಮ ಆರಂಭ ಪಡೆಯಿತು. 16ನೇ ಆವೃತ್ತಿಯ ಐಪಿಎಲ್​ನಲ್ಲಿ ಮೊದಲ ಬಾರಿಗೆ ಆಡಲಿಳಿದ ದಕ್ಷಿಣ ಆಫ್ರಿಕಾದ ಅನುಭವಿ ಬ್ಯಾಟರ್​ ಕ್ವಿಂಟನ್​ ಡಿ ಕಾಕ್​ ಮತ್ತು ಕೈಲ್ ಮೇಯರ್ಸ್​ ಗುಜರಾತ್​​ ಬೌಲರ್​ಗಳನ್ನು ಕಾಡಿದರು.

ಗುಜರಾತ್​ ಆರಂಭಿಕರಂತೆ ಈ ಜೋಡಿಯೂ ಉತ್ತಮ ಬ್ಯಾಟಿಂಗ್​ ನಡೆಸಿತು. 10ರ ಸರಾಸರಿಯಲ್ಲಿ ಬ್ಯಾಟ್​​ ಬೀಸಿ ಪವರ್​ ಪ್ಲೇಯಲ್ಲಿ 72 ರನ್​ ರಾಶಿ ಹಾಕಿದರು. ಜಿದ್ದಿಗೆ ಬಿದ್ದವರಂತೆ ಬ್ಯಾಟ್​ ಬೀಸುತ್ತಿದ್ದ ಈ ಜೋಡಿಯನ್ನು ಮೋಹಿತ್​ ಶರ್ಮ ಬೇರ್ಪಡಿಸಿ ತಂಡಕ್ಕೆ ಆರಂಭಿಕ ಮುನ್ನಡೆ ತಂದುಕೊಟ್ಟರು. ಕಷ್ಟದ ಕ್ಯಾಚ್​ ಒಂದನ್ನು ರಶಿದ್​ ಖಾನ್​ ಅವರು ಸೂಪರ್​ ಮ್ಯಾನ್​ ರೀತಿಯಲ್ಲಿ ಜಿಗಿದು ಹಿಡಿಯುವ ಮೂಲಕ ಈ ವಿಕೆಟ್​ ಉರುಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದರು. ಮೇಯರ್ಸ್​ 48 ರನ್​ ಬಾರಿಸಿದರು.

ಮೇಯರ್ಸ್​ ವಿಕೆಟ್​ ಪತನದ ಬಳಿಕ ಲಕ್ನೋ ತಂಡದ ರನ್​ ಗಳಿಕೆಯ ವೇಗ ಕುಂಠಿತಗೊಂಡಿತು. ದೀಪಕ್​​ ಹೂಡಾ ಈ ಪಂದ್ಯದಲ್ಲಿಯೂ ಬ್ಯಾಟಿಂಗ್​ ವೈಫಲ್ಯ ಕಂಡರು. ಇದರೊಂದಿಗೆ ಹೂಡಾ ಆಡಿದ 11 ಪಂದ್ಯಗಳಲ್ಲಿಯೂ ತೀರಾ ಕಳಪೆ ಮಟ್ಟದ ಬ್ಯಾಟಿಂಗ್​ ಪ್ರದರ್ಶನ ತೋರಿದರು. ಆ ಬಳಿಕ ಆಡಲಿಳಿದ ಮಾರ್ಕಸ್​ ಸ್ಟೋಯಿನಿಸ್​ ಕೂಡ 4 ರನ್​ಗೆ ಆಟ ಮುಗಿಸಿದರು. ಡಿ ಕಾಕ್​ ಅವರು ಏಕಾಂಗಿ ಹೋರಾಟ ನಡೆಸಿ ತಂಡದ ಮೊತ್ತವನ್ನು ಹಿಗ್ಗಿಸುವ ಪ್ರಯತ್ನ ಮಾಡಿದರು. ಆದರೆ ಅವರಿಗೆ ಯಾರಿಂದಲೂ ಉತ್ತಮ ಸಾಥ್​ ಸಿಗಲೇ ಇಲ್ಲ. 70 ರನ್​ಗಳಿಸಿದ್ದ ವೇಳೆ ಅವರು ಕೂಡ ವಿಕೆಟ್​ ಕೈ ಚೆಲ್ಲಿದರು. ಇಲ್ಲಿಗೆ ಲಕ್ನೋ ತಂಡದ ಸೋಲು ಕೂಡ ಖಚಿತಗೊಂಡಿತು. ನಿಕೋಲಸ್​ ಪೂರನ್(3) ಕೂಡ ಅಗ್ಗಕ್ಕೆ ಔಟಾಗಿ ನಿರಾಸೆ ಮೂಡಿಸಿದರು. ಅಂತಿಮ ಹಂತದಲ್ಲಿ​ ಇಂಪ್ಯಾಕ್ಟ್​​ ಪ್ಲೇಯರ್​ ಆಗಿ ಕಣಕ್ಕಿಳಿದ ಆಯುಷ್‌ ಬದೋನಿ ಶಕ್ತಿ ಮೀರಿ ಪ್ರಯತ್ನಿಸಿದರೂ ಅವರಿಂದ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಗುಜರಾತ್​ ಪರ ಮೋಹಿತ್​ ಶರ್ಮ ನಾಲ್ಕು ವಿಕೆಟ್​ ಕಿತ್ತು ಮಿಂಚಿದರು. ಬದೋನಿ 21 ರನ್​ ಗಳಿಸಿದರು. ನಾಯಕ ಕೃಣಾಲ್​ ಪಾಂಡ್ಯ ಗೋಲ್ಡನ್​ ಡಕ್​ ಸಂಕಟ್ಟಕ್ಕೆ ಸಿಲುಕಿದರು.

ಇದನ್ನೂ ಓದಿ IPL 2023 : ಟಾಸ್ ಗೆದ್ದ ರಾಜಸ್ಥಾನ್​ ತಂಡದಿಂದ ಬ್ಯಾಟಿಂಗ್​ ಆಯ್ಕೆ

ಸಾಹಾ, ಗಿಲ್​ ಬ್ಯಾಟಿಂಗ್​ ಅಬ್ಬರ

ಇದಕ್ಕೂ ಮುನ್ನ ಟಾಸ್​ ಸೋತು ಬ್ಯಾಟಿಂಗ್​ ನಡೆಸಿದ ಗುಜರಾತ್​ ಪರ ವೃದ್ಧಿಮಾನ್​ ಸಾಹಾ ಆರಂಭದಿಂದಲೇ ವಿಸ್ಫೋಟಕ ಬ್ಯಾಟಿಂಗ್​ ನಡೆಸಿದರು. ಲಕ್ನೋ ಬೌಲರ್​ಗಳ ಮೇಲೆರಗಿ ಸಿಕ್ಸರ್​ ಬೌಂಡರಿಗಳ ಸುರಿಮಳೆಯನ್ನಲೇ ಸುರಿಸಿದರು. ಇವರ ಈ ಬ್ಯಾಟಿಂಗ್​ ಪ್ರದರ್ಶನದಿಂದ ನಾಲ್ಕು ಓವರ್​ ಮುಕ್ತಾಯದ ವೇಳೆಗೆ ತಂಡದ ಮೊತ್ತ 50ರ ಗಡಿ ದಾಟಿತು. ಇದರಲ್ಲಿ 46 ರನ್ ಸಾಹಾ ಅವರ ಬ್ಯಾಟ್​ನಿಂದಲೇ ಹರಿದು ಬಂತು. ಗಿಲ್​ ಅವರು ಕೇವಲ 5 ರನ್​ ಗಳಿಸಿದ್ದರು. ಪವರ್​ ಪ್ಲೇ ಮುಕ್ತಾಯಕ್ಕೆ ವಿಕೆಟ್​ ನಷ್ಟವಿಲ್ಲದೆ ಈ ಜೋಡಿ 78 ಒಟ್ಟುಗೋಡಿಸಿ ತಂಡಕ್ಕೆ ಉತ್ತಮ ಅಡಿಪಾಯ ನಿರ್ಮಿಸಿತು. ಇದೇ ವೇಳೆ ವೃದ್ಧಿಮಾನ್​ ಸಾಹಾ 20 ಎಸೆಗಳಲ್ಲಿ ಅರ್ಧಶತಕವನ್ನೂ ಪೂರ್ತಿಗೊಳಿಸಿದರು.

ಪವರ್​ ಪ್ಲೇ ಬಳಿಕ ಶುಭಮನ್​ ಗಿಲ್​ ಕೂಡ ಬಿರುಸಿನ ಬ್ಯಾಟಿಂಗ್​ಗೆ ಒತ್ತು ಕೊಟ್ಟರು. ಉಭಯ ಆಟಗಾರರು ಜಿದ್ದಿಗೆ ಬಿದ್ದವರಂತೆ ಬ್ಯಾಟ್​ ಬೀಸಿ ಪ್ರತಿ ಓವರ್​ಗೆ 12 ರನ್​ಗಳ ಸರಾಸರಿಯಲ್ಲಿ ರನ್​ ಒಟ್ಟುಗೂಡಿಸಿದರು. ಇವರ ಈ ಬ್ಯಾಟಿಂಗ್​ ಅಬ್ಬರದ ಮುಂದೆ ಲಕ್ನೋ ತಂಡದ ಬೌಲರ್​ಗಳು ದಿಕ್ಕಾಪಾಲಾದರು. 10 ಓವರ್​​ ಆಗುವ ಮೊದಲೇ ಗುಜರಾತ್ 120 ರನ್​ ಬಾರಿಸಿತು.

ಬಿರುಸಿನ ಬ್ಯಾಟಿಂಗ್​ ಮೂಲಕ ಮುನ್ನುಗ್ಗುತ್ತಿದ್ದ ವೃದ್ಧಿಮಾನ್​ ಸಾಹಾ ಅವರನ್ನು ಕೊನೆಗೂ ಆವೇಶ್​ ಖಾನ್​ ಔಟ್​ ಮಾಡುವಲ್ಲಿ ಯಶಸ್ವಿಯಾದರು. ಸಾಹಾ ಅವರು 43 ಎಸೆತಗಳಿಂದ 81 ರನ್​ ಬಾರಿಸಿದರು. ಈ ಮನಮೋಹಕ ಇನಿಂಗ್ಸ್​​ನಲ್ಲಿ 10 ಬೌಂಡರಿ ಮತ್ತು 4 ಸಿಕ್ಸರ್​ ಸಿಡಿಯಿತು. ಗಿಲ್​ ಮತ್ತು ಸಾಹಾ ಮೊದಲ ವಿಕೆಟ್​ಗೆ ಬರೋಬ್ಬರಿ 142 ರನ್​ಗಳ ಜತೆಯಾಟ ನಡೆಸಿದರು. ಇದು ಈ ಆವೃತ್ತಿಯಲ್ಲಿ ಮೊದಲ ವಿಕೆಟ್​ಗೆ ಒಟ್ಟುಗೂಡಿದ ದ್ವಿತೀಯ ಗರಿಷ್ಠ ಮೊತ್ತವಾಗಿದೆ. ಇದಕ್ಕೂ ಮುನ್ನ ಮುಂಬೈ ವಿರುದ್ಧ ಆರ್​ಸಿಬಿ ತಂಡದ ಆಟಗಾರರಾದ ಫಾಫ್​ ಡು ಪ್ಲೆಸಿಸ್​ ಮತ್ತು ವಿರಾಟ್​ ಕೊಹ್ಲಿ ಮೊದಲ ವಿಕೆಟ್​ಗೆ 148 ರನ್​ ಬಾರಿಸಿದ್ದರು.

ಅರ್ಧಶತಕ ಬಾರಿಸಿ ಮಿಂಚಿದ ಗಿಲ್​

ಆರಂಭದಲ್ಲಿ ನಿಧಾನ ಗತಿಯ ಬ್ಯಾಟಿಂಗ್​ ನಡೆಸಿದ್ದರೂ ಬಳಿಕ ಚುರುಕಿನ ಬ್ಯಾಟಿಂಗ್​ ನಡೆಸಿದ ಗಿಲ್​ 28 ಎಸೆತಗಳಲ್ಲಿ ಅರ್ಧಶತಕ ಪೂರ್ತಿಗೊಳಿಸಿದರು. ಇವರಿಗೆ ಮತ್ತೊಂದು ತುದಿಯಲ್ಲಿ ನಾಯಕ ಹಾರ್ದಿಕ್​ ಪಾಂಡ್ಯ ಉತ್ತಮ ಸಾಥ್​​ ನೀಡಿದರು. ಪಾಂಡ್ಯ 2 ಸಿಕ್ಸರ್​ ಮತ್ತು ಒಂದು ಬೌಂಡರಿ ಬಾರಿಸಿ 25 ರನ್​ ಗಳಿಸಿ ಅಣ್ಣ ಕೃಣಾಲ್​ಗೆ ಕ್ಯಾಚ್​ ನೀಡಿ ವಿಕೆಟ್​ ಕೈಚೆಲ್ಲಿದರು. 20 ಓವರ್​ಗಳ ತನಕ ಬ್ಯಾಟಿಂಗ್​ ಕಾಯ್ದುಕೊಂಡ ಗಿಲ್​ 51 ಎಸೆತಗಳಲ್ಲಿ ಅಜೇಯ 94 ರನ್​ ಬಾರಿಸಿದರು. ಈ ಇನಿಂಗ್ಸ್​ನಲ್ಲಿ 7 ಸಿಕ್ಸರ್​ ಮತ್ತು 2 ಬೌಂಡರಿ ದಾಖಲಾಯಿತು. ಡೇವಿಡ್​ ಮಿಲ್ಲರ್​ 21 ರನ್​ ಗಳಿಸಿ ಅಜೇಯರಾಗಿ ಉಳಿದರು. ಲಕ್ನೋ ಪರ 8 ಮಂದಿ ಬೌಲಿಂಗ್​ ನಡೆಸಿದರೂ ಇವರಿಂದ ಕೀಳಲಾಗಿದ್ದು ಕೇವಲ 2 ವಿಕೆಟ್​ ಮಾತ್ರ.

ಸಂಕ್ಷಿಪ್ತ ಸ್ಕೋರ್​

ಗುಜರಾತ್​ ಟೈಟನ್ಸ್​: 20 ಓವರ್​ಗಳಲ್ಲಿ 2 ವಿಕೆಟ್​ಗೆ 227(ಶುಭಮನ್​ ಗಿಲ್ ಅಜೇಯ 94, ವೃದ್ಧಿಮಾನ್​ ಸಾಹಾ 81, ಹಾರ್ದಿಕ್​ ಪಾಂಡ್ಯ 25, ಡೇವಿಡ್​ ಮಿಲ್ಲರ್​ ಅಜೇಯ 21, ಆವೇಶ್​ ಖಾನ್​ 34ಕ್ಕೆ 1). ಲಕ್ನೋ ಸೂಪರ್​ ಜೈಂಟ್ಸ್​: 20 ಓವರ್​ಗಳಲ್ಲಿ7 ವಿಕೆಟ್​ಗೆ 171 (ಕ್ವಿಂಟನ್​ ಡಿ ಕಾಕ್ 70, ಕೈಲ್​ ಮೇಯರ್ಸ್​ 48, ಮೋಹಿತ್​ ಶರ್ಮ 29ಕ್ಕೆ 4)​.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Hardik Pandya: ಪ್ರೇಯಸಿಯ ದೋಖಾದ ಸುಳಿವು ಮೊದಲೇ ಇತ್ತಾ? ಬಹುತೇಕ ಆಸ್ತಿಯನ್ನು ಪೋಷಕರ ಹೆಸರಲ್ಲಿಟ್ಟ ಚಾಲಾಕಿ ಹಾರ್ದಿಕ್!

Hardik Pandya: ಅಹಮದಾಬಾದ್ ಮಿರರ್ ವರದಿ ಪ್ರಕಾರ, ವಿಚ್ಛೇದನದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಆಸ್ತಿಯಲ್ಲಿ ಶೇ. 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗಬಹುದು. ಏಕೆಂದರೆ ಪಾಂಡ್ಯ ಅವರ ಹೆಂಡತಿ ಸರ್ಬಿಯಾ ದೇಶದವರು. ಹೀಗಾಗಿ ಅವರು ಜೀವನಾಂಶವನ್ನು ಸರ್ಬಿಯನ್ ದಿನಾರ್​ನಲ್ಲಿ ಪಡೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಆದರೆ ಇದು ಅಸಾಧ್ಯ ಎನ್ನುವಂತಿದೆ.

VISTARANEWS.COM


on

Hardik Pandya
Koo

ಮುಂಬಯಿ: ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯ(Hardik Pandya) ಅವರು ಪತ್ನಿ, ಸರ್ಬಿಯಾದ ನಟಿ ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಅವರಿಗೆ ವಿಚ್ಛೇದನ ನೀಡಿದರೆ(Hardik Pandya and Natasa Stankovic divorce) ಪತ್ನಿಗೆ ಜೀವನಾಂಶವಾಗಿ ತಮ್ಮ ಆಸ್ತಿಯಲ್ಲಿ ಶೇ. 70 ರಷ್ಟು ಭಾಗವನ್ನು ನೀಡಬೇಕಾಗಬಹುದು ಎಂದು ಹೇಳಲಾಗಿದೆ. ಆದರೆ, ಚಾಲಾಕಿ ಪಾಂಡ್ಯ ಅವರ ಬುದ್ಧಿವಂತಿಕೆಯಿಂದ ಪತ್ನಿಗೆ ನಯಾ ಪೈಸೆಯೂ ಸಿಗುವುದು ಅನುಮಾನ ಎನ್ನುವಂತಿದೆ.

ಅಹಮದಾಬಾದ್ ಮಿರರ್ ವರದಿ ಪ್ರಕಾರ, ವಿಚ್ಛೇದನದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಆಸ್ತಿಯಲ್ಲಿ ಶೇ. 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗಬಹುದು. ಏಕೆಂದರೆ ಪಾಂಡ್ಯ ಅವರ ಹೆಂಡತಿ ಸರ್ಬಿಯಾ ದೇಶದವರು. ಹೀಗಾಗಿ ಅವರು ಜೀವನಾಂಶವನ್ನು ಸರ್ಬಿಯನ್ ದಿನಾರ್​ನಲ್ಲಿ ಪಡೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಆದರೆ ಇದು ಅಸಾಧ್ಯ ಎನ್ನುವಂತಿದೆ.

ಹೌದು, ಹಾರ್ದಿಕ್​ ಪಾಂಡ್ಯ ಅವರು ಮುಂಬೈಯಲ್ಲಿ ವಿಲಾಸಿ ಜೀವನ ನಡೆಸುತ್ತಿದ್ದರೂ ಕೂಡ ತಮ್ಮ ಹೆಸರಿನಲ್ಲಿ ಹೆಚ್ಚು ಆಸ್ತಿಯನ್ನು ಮಾಡಿಲ್ಲ. ಬಹುತೇಕ ಆಸ್ತಿಯನ್ನು ತನ್ನ ಪೋಷಕರ ಹೆಸರಿನಲ್ಲಿ ಮಾಡಿಟ್ಟಿದ್ದಾರೆ. ಈ ವಿಚಾರವನ್ನು ಪಾಂಡ್ಯ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದರು. ಈ ಸಂದರ್ಶನದಲ್ಲಿ ಮನಬಿಚ್ಚಿ ಮಾತನಾಡಿದ್ದ ಪಾಂಡ್ಯ, “ನಾನು ಜಾಹಿರಾತು, ಕ್ರಿಕೆಟ್​ ಸೇರಿ ಇನ್ನಿತರ ಮೂಲಗಳಿಂದ ಎಷ್ಟೇ ಹಣ ಸಂಪಾದಿಸಿದರೂ ಕೂಡ ಇದನೆಲ್ಲ ನನ್ನ ಹೆಸರಿನಲ್ಲಿ ಇಟ್ಟಿಲ್ಲ. ನನ್ನ ಬಳಿ ದುಬಾರಿ ಕಾರು, ಬಂಗಲೆ ಇದ್ದರೂ ಕೂಡ ಇದೆಲ್ಲ ನನ್ನ ಸಹೋದರ, ತಂದೆ ಮತ್ತು ತಾಯಿಯ ಹೆಸರಿನಲ್ಲಿದೆ. ಹೀಗಾಗಿ ನಾನು ಯಾವುದೇ ಸಮಸ್ಯೆ ಬಂದರೂ ಕೂಡ ಯಾರೀಗೂ ನನ್ನ ಆಸ್ತಿಯಲ್ಲಿ ಶೇ. 50ರಷ್ಟು ಜೀವನಾಂಶ ಕೊಡುವ ಪ್ರಮೇಯವೇ ಬರುವುದಿಲ್ಲ ಎಂದು ಹೇಳಿದ್ದರು. ಈ ವಿಡಿಯೊ ಈಗ ವೈರಲ್​ ಆಗಿದ್ದು ಪಾಂಡ್ಯಗೆ ಜೀವನದಲ್ಲಿ ಮುದೊಂದು ದಿನ ಪ್ರೇಯಸಿಯಿಂದ ದೋಖಾ ಎದುರಾಗುವ ಸುಳಿವು ಮೊದಲೇ ತಿಳಿದಿತ್ತಾ? ಎನ್ನುವ ನಿಗೂಡ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಇದನ್ನೂ ಓದಿ Hardik Pandya: ಪತ್ನಿಗೆ ಶೇ.70ರಷ್ಟು ಆಸ್ತಿ ವರ್ಗಾಯಿಸಲು ಮುಂದಾದ ಹಾರ್ದಿಕ್​ ಪಾಂಡ್ಯ; ಶೀಘ್ರದಲ್ಲೇ ವಿಚ್ಛೇದನ!

ಹಾರ್ದಿಕ್​ ಪಾಂಡ್ಯ ಅವರ ಅಂದಿನ ಸಂದರ್ಶನ ಕಂಡ ನೆಟ್ಟಿಗರು ಇದೀಗ ವಿಭಿನ್ನ ಕಮೆಂಟ್​ ಮಾಡಿದ್ದಾರೆ. ನೀವು ನಿಜವಾಗಿಯೂ ಕೂಡ ಗುಜರಾತಿ ಎನ್ನುವುದು ಸಾಬೀತುಪಡಿಸಿದ್ದೀರಿ ಎಂದಿದ್ದಾರೆ. ನೆಟ್ಟಿಗರು ಈ ಮಾತು ಹೇಳಲು ಕೂಡ ಒಂದು ಕಾರಣವಿದೆ. ಗುಜರಾತಿಗಳು ಪಕ್ಕಾ ಲೆಕ್ಕಾಚಾರದ ಜೀವನ ನಡೆಸುವುದುರಲ್ಲಿ ಎತ್ತಿದ ಕೈ ಇದೇ ಕಾರಣದಿಂದ ಈ ಕಮೆಂಟ್​ ಮಾಡಿದ್ದಾರೆ.

ಹಾರ್ದಿಕ್‌ ಮತ್ತು ನತಾಶಾ ಕಳೆದ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು. ಮದುವೆಗೂ ಮುನ್ನವೇ ನತಾಶಾ ಅವರನ್ನು ಪಾಂಡ್ಯ ಗರ್ಭಿಣಿ ಮಾಡಿದ್ದರು. ಈ ಜೋಡಿಗೆ ಒಬ್ಬ ಪುತ್ರನಿದ್ದಾನೆ. ಈತನ ಹೆಸರು ಅಗಸ್ತ್ಯ. ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇವರ ವಿವಾಹ ಸಮಾರಂಭದಲ್ಲಿ ಕೊಹ್ಲಿ-ಅನುಷ್ಕಾ, ರಾಹುಲ್‌-ಅಥಿಯಾ, ರಾಕಿಣಗ್​ ಸ್ಟಾರ್ ಯಶ್​ ಸೇರಿ ಹಲವು ಗಣ್ಯರೂ ಭಾಗಿಯಾಗಿದ್ದರು.

ಮಾರ್ಚ್ 4 ರಂದು ಪತ್ನಿ ನತಾಶಾ ಅವರ ಹುಟ್ಟುಹಬ್ಬವಿತ್ತು. ಆದರೆ, ಪತ್ನಿಯ ಹುಟ್ಟುಹಬ್ಬಕ್ಕೆ ಹಾರ್ದಿಕ್ ಯಾವುದೇ ಶುಭ ಹಾರೈಕೆಯ ಪೋಸ್ಟ್ ಮಾಡಿಲ್ಲ. ಕೆಲ ದಿನಗಳ ಹಿಂದೆ ನತಾಶಾ ಅವರು ಸಿಂಗಲ್​ ಫೋಟೋವನ್ನು ಮತ್ತು ಮಗನ ಜತೆಗಿನ ಫೋಟೊವನ್ನು ಮಾತ್ರ ಪೋಸ್ಟ್​ ಮಾಡಿದ್ದರು. ಇದೆನೆಲ್ಲ ನೋಡುವಾಗ ಈ ಜೋಡಿ ಸದ್ಯದಲ್ಲೇ ದೂರವಾಗು ಸೂಚನೆಯೊಂದು ಲಭಿಸಿದೆ. ಹಾರ್ದಿಕ್ ಜತೆಗಿರುವ ಇತ್ತೀಚಿನ ಎಲ್ಲ ಪೋಸ್ಟ್‌ಗಳನ್ನು ತೆಗೆದುಹಾಕಿದ್ದಾರೆ ಎಂದು ಹೇಳಲಾಗಿದೆ. 

ಐಪಿಎಲ್​ ಪಂದ್ಯದಲ್ಲಿಯೂ ನತಾಶಾ ಸ್ಟೇಡಿಯಂಗೆ ಬಂದು ಗಂಡನಿಗೆ ಬೆಂಬಲ ಸೂಚಿಸಿದ್ದರು. ಆದರೆ ಈ ಬಾರಿ ಮುಂಬೈ ತಂಡವನ್ನು ಮುನ್ನಡೆಸಿ ವೇಳೆ ಒಮ್ಮೆಯೂ ಕೂಡ ನತಾಶಾ ಪಂದ್ಯ ನೋಡಲು ಸ್ಟೇಡಿಯಂಗೆ ಬಂದಿರಲಿಲ್ಲ. ಅಲ್ಲದೆ ನತಾಶಾ ಅವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ತಮ್ಮ ಹೆಸರನ್ನು ಕೂಡ ಬದಲಿಸಿದ್ದಾರೆ ಹೀಗಾಗಿ ಈ ಜೋಡಿ ಬೇರ್ಪಡಲಿದ್ದಾರೆ ಎನ್ನಲಾಗಿದೆ. ಆದರೆ ಈ ಕುರಿತು ಪಾಂಡ್ಯ ಆಗಲಿ ನತಾಶ ಇದುವರೆಗೆ ಯಾವುದೆ ಪ್ರತಿಕ್ರಿಯೆ ನೀಡಿಲ್ಲ.

Continue Reading

ಕ್ರೀಡೆ

KKR vs SRH Final 2024: ನಾಳೆ ಕೆಕೆಆರ್​-ಹೈದರಾಬಾದ್​ ಫೈನಲ್​ ಕಾದಾಟ; ಯಾರಿಗೆ ಒಲಿಯಲಿದೆ ಐಪಿಎಲ್​ ಕಿರೀಟ?

KKR vs SRH Final 2024: ಮೇ 21 ಮಂಗಳವಾರ ನಡೆದಿದ್ದ ಮೊದಲ ಕ್ವಾಲಿಫೈಯರ್‌(KKR vs SRH Qualifier 1) ಪಂದ್ಯದಲ್ಲಿ ಕೆಕೆಆರ್​ ತಂಡ ಹೈದರಾಬಾದ್​ ವಿರುದ್ಧ 8 ವಿಕೆಟ್​ ಅಂತರದ ಗೆಲುವು ಸಾಧಿಸಿತ್ತು. ಲೀಗ್​ ಹಂತದ ಪಂದ್ಯದಲ್ಲಿಯೂ ಕೆಕೆಆರ್​ ಮೇಲುಗೈ ಸಾಧಿಸಿತ್ತು. ಇದೀಗ ಈ ಎಲ್ಲ ಸೋಲಿಗೆ ಕಮಿನ್ಸ್​ ಪಡೆ​ ಫೈನಲ್​ನಲ್ಲಿ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

VISTARANEWS.COM


on

KKR vs SRH Final 2024
Koo

ಚೆನ್ನೈ: ಈ ಬಾರಿಯ ಐಪಿಎಲ್​ನ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಮುಖಾಮುಖಿಯಾಗಿದ್ದ ಸನ್​ರೈಸರ್ಸ್​ ಹೈದರಾಬಾದ್(KKR vs SRH Final 2024)​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders) ತಂಡಗಳು ಮತ್ತೊಮ್ಮೆ ಸೆಣಸಾಟ ನಡೆಸಲು ಸಜ್ಜಾಗಿದೆ. ನಾಳೆ (ಭಾನುವಾರ) ನಡೆಯುವ ಫೈನಲ್​ ಪಂದ್ಯದಲ್ಲಿ ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ.

ಮೇ 21 ಮಂಗಳವಾರ ನಡೆದಿದ್ದ ಮೊದಲ ಕ್ವಾಲಿಫೈಯರ್‌(KKR vs SRH Qualifier 1) ಪಂದ್ಯದಲ್ಲಿ ಕೆಕೆಆರ್​ ತಂಡ ಹೈದರಾಬಾದ್(Sunrisers Hyderabad)​ ವಿರುದ್ಧ 8 ವಿಕೆಟ್​ ಅಂತರದ ಗೆಲುವು ಸಾಧಿಸಿತ್ತು. ಲೀಗ್​ ಹಂತದ ಪಂದ್ಯದಲ್ಲಿಯೂ ಕೆಕೆಆರ್​ ಮೇಲುಗೈ ಸಾಧಿಸಿತ್ತು. ಇದೀಗ ಈ ಎಲ್ಲ ಸೋಲಿಗೆ ಕಮಿನ್ಸ್​ ಪಡೆ​ ಫೈನಲ್​ನಲ್ಲಿ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

ಲಕ್ಕಿ ಕ್ಯಾಪ್ಟನ್​ ಕಮಿನ್ಸ್​


ಆಸ್ಟ್ರೇಲಿಯಾದ ನಾಯಕನಾಗಿರುವ ಪ್ಯಾಟ್​ ಕಮಿನ್ಸ್​ 2 ವಿಶ್ವಕಪ್​ ಗೆದ್ದ ನಾಯಕ. ಅದು ಕೂಡ ಚೊಚ್ಚಲ ಪ್ರಯತ್ನದಲ್ಲೇ ಈ ಸಾಧನೆ ಮಾಡಿದ್ದಾರೆ. ಟೆಸ್ಟ್​ ಮತ್ತು ಏಕದಿನ ವಿಶ್ವಕಪ್​ನಲ್ಲಿ ಅವರು ಟ್ರೋಫಿ ಗೆದ್ದಿದ್ದಾರೆ. ಹೀಗಾಗಿ ಇವರು ಹೈದರಾಬಾದ್​ಗೂ ತಮ್ಮ ನಾಯಕತ್ವದಲ್ಲಿ ಕಪ್​ ಗೆಲ್ಲಬಹುದು ಎನ್ನುವುದು ಕ್ರಿಕೆಟ್​ ಅಭಿಮಾನಿಗಳ ನಂಬಿಕೆ. ಮೊತ್ತೊಂದೆಡೆ ಆಸ್ಟ್ರೇಲಿಯಾ ಟೆಸ್ಟ್​ ಮತ್ತು ಏಕದಿನ ವಿಶ್ವಕಪ್​ ಫೈನಲ್​ನಲ್ಲಿ ಗೆಲುವಿನ ಹೀರೊ ಎನಿಸಿಕೊಂಡಿದ್ದ ಟ್ರಾವಿಸ್​ ಹೆಡ್​ ಕೂಡ ಹೈದರಾಬಾದ್​ ತಂಡದಲ್ಲಿದ್ದಾರೆ. ಹೀಗಾಗಿ ಫೈನಲ್​ನಲ್ಲಿಯೂ ಇವರ ಸ್ಫೋಟಕ ಬ್ಯಾಟಿಂಗ್​ ನಿರೀಕ್ಷೆ ಮಾಡಲಾಗಿದೆ.

ಕೆಕೆಆರ್​ ಪಾಲಿನ ದೊಡ್ಡ ಬಲವೆಂದರೆ ಆಟಗಾರರ ಸಂಘಟಿತ ಪ್ರದರ್ಶನ. ಬ್ಯಾಟಿಂಗ್​, ಬೌಲಿಂಗ್​ ಎರಡೂ ವಿಭಾಗದಲ್ಲಿ ಸಮರ್ಥವಾಗಿದೆ. ಸೀಮಿತ ಆಗಾರರ ಪ್ರದರ್ಶನದ ಮೇಲೆ ತಂಡ ನೆಚ್ಚಿಕೊಂಡಿಲ್ಲ. ಇಂಗ್ಲೆಂಡ್​ನ ಫಿಲ್​ ಸಾಲ್ಟ್ ಪಾಕ್​ ವಿರುದ್ಧದ ಟಿ20 ಸರಣಿಯ ಭಾಗವಾಗಿ ತವರಿಗೆ ಮರಳಿದ್ದರೂ ಕೂಡ ಇವರ ಸ್ಥಾನದಲ್ಲಿ ಕಳೆದ ಪಂದ್ಯದಲ್ಲಿ ಆಡಲಿಳಿದಿದ್ದ ಅಫಘಾನಿಸ್ತಾನದ ರಹಮಾನುಲ್ಲಾ ಗುರ್ಬಾಜ್ ಕೂಡ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಯಶಸ್ಸು ಕಂಡಿದ್ದರು. ಆ್ಯಂಡ್ರೆ ರೆಸಲ್​ ಈ ಬಾರಿ ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡೂ ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ.

ಇದನ್ನೂ ಓದಿ IPL Final 2024: ಫೈನಲ್​ನಲ್ಲಿ ಕೆಕೆಆರ್​ ಗೆಲ್ಲಬಹುದು ಎಂದು ಭವಿಷ್ಯ ನುಡಿದ ಕರುನಾಡ ಕ್ರಿಕೆಟಿಗ

ಗಾಯದಿಂದ ಚೇತರಿಕೆ ಕಂಡು ಕಮ್​ಬ್ಯಾಕ್​ ಮಾಡಿರುವ ನಿತೇಶ್​ ರಾಣಾ, ವೆಂಕಟೇಶ್​ ಅಯ್ಯರ್​ ಮತ್ತು ನಾಯಕ ಶ್ರೇಯಸ್​ ಅಯ್ಯರ್​ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್​ ನೆರವು ನೀಡಲಿದ್ದಾರೆ. 24 ಕೋಟಿ ವೀರ ಮಿಚೆಲ್​ ಸ್ಟಾರ್ಕ್​ ಲೀಗ್​ ಹಂತದ ಪಂದ್ಯದಲ್ಲಿ ವಿಫಲರಾಗಿದ್ದರೂ ಕೂಡ ಮಹತ್ವದ ಕ್ವಾಲಿಫೈಯರ್​ ಪಂದ್ಯದಲ್ಲಿ ಘಾತಕ ದಾಳಿ ನಡೆಸಿ ಮಿಂಚಿದ್ದರು. ಹೀಗಾಗಿ ಫೈನಲ್​ನಲ್ಲಿಯೂ ಇದೇ ಪ್ರದರ್ಶನ ತೋರುವ ವಿಶ್ವಾಸದಲ್ಲಿದ್ದಾರೆ.

ಸಂಭಾವ್ಯ ತಂಡಗಳು


ಹೈದರಾಬಾದ್​:
 ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿತೀಶ್ ರೆಡ್ಡಿ, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್​ ಕೀಪರ್​), ಅಬ್ದುಲ್ ಸಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಟಿ ನಟರಾಜನ್.

ಕೆಕೆಆರ್​: ರಹಮಾನುಲ್ಲಾ ಗುರ್ಬಾಜ್ (ವಿಕೆಟ್​ ಕೀಪರ್​), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

Continue Reading

ಕ್ರೀಡೆ

IPL Final 2024: ಫೈನಲ್​ನಲ್ಲಿ ಕೆಕೆಆರ್​ ಗೆಲ್ಲಬಹುದು ಎಂದು ಭವಿಷ್ಯ ನುಡಿದ ಕರುನಾಡ ಕ್ರಿಕೆಟಿಗ

IPL Final 2024: ವಿಸ್ತಾರ ನ್ಯೂಸ್​ ಜತೆಗಿನ ಸಂದರ್ಶನದಲ್ಲಿ ಮಾತನಾಡಿದ ಗೌತಮ್, ಬ್ಯಾಟಿಂಗ್​, ಬೌಲಿಂಗ್​ ಮತ್ತು ಫೀಲ್ಡಿಂಗ್​ ಎಲ್ಲ ವಿಭಾಗದಲ್ಲಿಯೂ ಬಲಿಷ್ಠವಾಗಿರುವ ಕೆಕೆಆರ್​ ತಂಡ ಕಪ್​ ಗೆಲ್ಲುವುದು ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ.

VISTARANEWS.COM


on

IPL Final 2024
Koo

ಬೆಂಗಳೂರು: 17ನೇ ಆವೃತ್ತಿಯ ಐಪಿಎಲ್​(IPL Final 2024) ಟೂರ್ನಿ ಮುಕ್ತಾಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಭಾನುವಾರ ಫೈನಲ್​ ಪಂದ್ಯ ನಡೆಯಲಿದ್ದು, ಟೇಬಲ್‌ ಟಾಪರ್‌ ಕೋಲ್ಕತಾ ನೈಟ್‌ರೈಡರ್ ಮತ್ತು ದ್ವಿತೀಯ ಸ್ಥಾನಿ ಸನ್‌ರೈಸರ್ ಪ್ರಶಸ್ತಿಗಾಗಿ ಸೆಣಸಲಿವೆ. ಈ ಬಾರಿ ಚಾಂಪಿಯನ್​ ಯಾರಾಗಲಿದ್ದಾರೆ ಎಂಬ ಅಭಿಮಾನಿಗಳ ಕುತೂಹಲದ ಮಧ್ಯೆ ಕರ್ನಾಟಕದ ಕ್ರಿಕೆಟಿಗ ಕೆ. ಗೌತಮ್(Krishnappa Gowtham)​ ಅವರು ಕೆಕೆಆರ್​ ತಂಡ ಕಪ್​ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ವಿಸ್ತಾರ ನ್ಯೂಸ್​ ಜತೆಗಿನ ಸಂದರ್ಶನದಲ್ಲಿ ಮಾತನಾಡಿದ ಗೌತಮ್, ಸಿನೆಮಾ, ಕ್ರಿಕೆಟ್​ ಬಗ್ಗೆ ಕೇಳಿದ ಹಲವು ಪ್ರಶ್ನೆಗಳಿಗೆ ಉತ್ತರಿಸಿದರು. ಹಲವು ಕ್ರಿಕೆಟಿಗರ ಜೀವನಾಧಾರಿತ ಸಿನಿಮಾ ಬಂದಿದೆ. ನಿಮ್ಮ ಜೀವನಾಧಾರಿತ ಸಿನಿಮಾ ಕೂಡ ತೆರೆ ಮೇಲೆ ಬರುವ ಆಸೆ ಇದೆಯಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೌತಮ್​, ಇಲ್ಲ ಈ ರೀತಿಯ ಯಾವುದೇ ಆಸೆ ಇಲ್ಲ. ಸದ್ಯಕ್ಕೆ ಉತ್ತಮ ಕ್ರಿಕೆಟ್​ ಆಡುವುದೊಂದೇ ನನ್ನ ಗುರಿ ಎಂದರು. ಇದೇ ವೇಳೆ ಸಿನಿಮಾವನ್ನು ತಾನು ಹೆಚ್ಚಾಗಿ ನೋಡುವುದಿಲ್ಲ. ಕೊನೆಯ ಬಾರಿಗೆ ನೋಡಿದ ಸಿನೆಮಾವೆಂದರೆ ಕಾತಾಂರ ಎಂದರು. ಸಮಯ ಸಿಕ್ಕಾಗ ಮಗಳ ಜತೆ ಆಡುತ್ತಾ ಕಾಲ ಕಳೆಯುತ್ತೇನೆ ಎಂದರು.


ಆರ್​ಸಿಬಿಯ ಹೊಸ ಅಧ್ಯಾಯದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಗೌತಮ್, ಈ ಬಾರಿಯ ಲೀಗ್​ನಲ್ಲಿ ಆರಂಭಿಕ ಹಂತದಲ್ಲಿ ಸತತವಾಗಿ ಸೋಲು ಕಂಡು ಆ ಬಳಿಕ ಗೆಲ್ಲಲೇ ಬೇಕಾದ ಎಲ್ಲ 6 ಪಂದ್ಯಗಳನ್ನು ಗೆದ್ದಿರುವುದು ನಿಜಕ್ಕೂ ಹೊಸ ಅಧ್ಯಾಯ ಎಂದರು. ಇದೇ ವೇಳೆ ಆರ್​ಸಿಬಿ ಪರ ಆಡುವ ಬಯಕೆಯನ್ನು ಕೂಡ ವ್ಯಕ್ತಪಡಿಸಿದರು. ಲಕ್ನೋ ತಂಡದ ಪರ ಆಡಿದ ಅನುಭವ ಕೂಡ ಹಂಚಿಕೊಂಡು, ಮೂರು ವರ್ಷದಿಂದ ಲಕ್ನೋ ತಂಡದ ಪರ ಆಡಿದರೂ ಕೂಡ ಬೇರೆ ಫ್ರಾಂಚೈಸಿ ಪರ ಆಡಿದಂತಾಗಿಲ್ಲ. ಏಕೆಂದರೆ ತಂಡದ ನಾಯಕ ಕೆ.ಎಲ್​ ರಾಹುಲ್​ ಸೇರಿ ಹಲವು ಕರ್ನಾಟಕದ ಆಟಗಾರರಿದ್ದರು. ಹೀಹಾಗಿ ಕರ್ನಾಟಕ ತಂಡದ ಪರವೇ ಆಡುತ್ತಿರುವಂತೆ ಭಾಸವಾಗುತ್ತಿತ್ತು ಎಂದರು.

ಇದನ್ನೂ ಓದಿ IPL Final 2024: ಫೈನಲ್​ ಪಂದ್ಯಕ್ಕೆ ಮಳೆ ಬಂದರೆ ಯಾರಾಗಲಿದ್ದಾರೆ ವಿಜೇತರು? ಮಳೆ ನಿಯಮ ಹೇಗಿದೆ?

ಈ ಬಾರಿ ಯಾವ ತಂಡ ಕಪ್​ ಗೆಲ್ಲಲಿದೆ ಎಂದು ಕೇಳಿದಾಗ ಕೆಕೆಆರ್​ ತಂಡ ಗೆಲ್ಲುವ ಸಾಧ್ಯತೆ ಹೆಚ್ಚು ಎಂದರು. ಬ್ಯಾಟಿಂಗ್​, ಬೌಲಿಂಗ್​ ಮತ್ತು ಫೀಲ್ಡಿಂಗ್​ ಎಲ್ಲ ವಿಭಾಗದಲ್ಲಿಯೂ ಬಲಿಷ್ಠವಾಗಿ ವೈವಿಧ್ಯಮಯವಾಗಿದೆ. ಹೀಗಾಗಿ ಕೆಕೆಆರ್​ ಟ್ರೋಫಿ ಗೆಲ್ಲಲಿದೆ ಎಂದರು.

ಫೈನಲ್​ನಲ್ಲಿ ವಿಜೇತ ತಂಡ 20 ಕೋಟಿ ರೂಪಾಯಿ ಬಹುಮಾನವನ್ನು ಪಡೆಯಲಿದೆ. ರನ್ನರ್ ಅಪ್‌ ತಂಡಕ್ಕೆ 15 ಕೋಟಿ ರೂ. ಸಿಗಲಿದೆ. ಮೂರನೇ ಸ್ಥಾನಿಯಾದ ತಂಡಕ್ಕೆ 7 ಕೋಟಿ ಮತ್ತು 4ನೇ ಸ್ಥಾನಿಗೆ 6.5 ಕೋಟಿ ರೂ ಸಿಗಲಿದೆ. ಈಗಾಗಲೇ ರಾಜಸ್ಥಾನ್​ ಮತ್ತು ಆರ್​ಸಿಬಿ ಪ್ಲೇ ಆಫ್​ನಲ್ಲಿ ಸೋಲಿ ಕಂಡು ಕ್ರಮವಾಗಿ 3 ಮತ್ತು ನಾಲ್ಕನೇ ಸ್ಥಾನ ಪಡೆದಿವೆ. ಹೀಗಾಗಿ ರಾಜಸ್ಥಾನ್​ಗೆ(7 ಕೋಟಿ) ಮತ್ತು ಆರ್​ಸಿಬಿಗೆ(6.5 ಕೋಟಿ) ಮೊತ್ತ ಸಿಗಲಿದೆ. ಒಟ್ಟು ಬಹುಮಾನ ಮೊತ್ತ 46.5 ಕೋಟಿ ರೂ. ಆಗಿದೆ.

ಟೂರ್ನಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಆಟಗಾರನಿಗೆ ಆರೆಂಜ್ ಕ್ಯಾಪ್ ನೀಡಲಾಗುತ್ತದೆ. ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗೆ ಪರ್ಪಲ್ ಕ್ಯಾಪ್ ನೀಡಲಾಗುತ್ತದೆ. ಆರೆಂಜ್ ಮತ್ತು ಪರ್ಪಲ್ ಕ್ಯಾಪ್ ಗೆದ್ದ ಆಟಗಾರರಿಗೆ 15 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ. ಸದ್ಯ ಆರ್​ಸಿಬಿ ತಂಡದ ವಿರಾಟ್​ ಕೊಹ್ಲಿ ಈ ಬಾರಿಯ ಟೂರ್ನಿಯಲ್ಲಿ 741 ರನ್​ ಬಾರಿಸಿ ಆರೆಂಜ್ ಕ್ಯಾಪ್ ಹೋಲ್ಡರ್​ ಆಗಿದ್ದಾರೆ. ಇವರ ರನ್​ ಹಿಂದಿಕ್ಕಲು ಇನ್ನು ಯಾರಿಗೂ ಅವಕಾಶ ಇಲ್ಲದ ಕಾರಣ ಈ ಪ್ರಶಸ್ತಿ ಇವರಿಗೇ ಸಿಗಲಿದೆ.

Continue Reading

ಕ್ರೀಡೆ

SRH vs RR: ಕ್ವಾಲಿಫೈಯರ್​ ಪಂದ್ಯದ ಸೋಲಿಗೆ ಕಾರಣ ತಿಳಿಸಿದ ಸಂಜು ಸ್ಯಾಮ್ಸನ್​

SRH vs RR: ಪಂದ್ಯದ ಸೋಲಿನ ಬಳಿಕ ಮಾತನಾಡಿದ ಸಂಜು ಸ್ಯಾಮ್ಸನ್​, ನಮ್ಮ ತಂಡದ ಬಲಗೈ ಬ್ಯಾಟ್ಸ್‌ಮನ್‌ಗಳ ವಿರುದ್ಧ ಮಧ್ಯಮ ಓವರ್‌ಗಳಲ್ಲಿ ಹೈದರಾಬಾದ್​ ತಂಡದ ಎಡಗೈ ಸ್ಪಿನ್ನರ್​ಗಳು ಉತ್ತಮ ದಾಳಿ ಸಂಘಟಿಸಿದರು. ನಮ್ಮ ಬ್ಯಾಟಿಂಗ್​ ಲೈನಪ್​ನಲ್ಲಿ ಹೆಚ್ಚಿನ ಎಡಗೈ ಬ್ಯಾಟರ್​ಗಳು ಇಲ್ಲದಿರುವುದು ಕೂಡ ನಮ್ಮ ಸೋಲಿಗೆ ಕಾರಣವಾಯಿತು ಎಂದರು.

VISTARANEWS.COM


on

SRH vs RR
Koo

ಚೆನ್ನೈ: ಶುಕ್ರವಾರ ರಾತ್ರಿ ನಡೆದ ಐಪಿಎಲ್​(IPL 2024) ಕ್ವಾಲಿಫೈಯರ್​ ಪಂದ್ಯದಲ್ಲಿ ರಾಜಸ್ಥಾನ್​ ರಾಯಲ್ಸ್​(SRH vs RR) ತಂಡ ಸನ್​ರೈಸರ್ಸ್​ ಹೈದರಾಬಾದ್​ ವಿರುದ್ದ 36 ರನ್​ಗಳಿಂದ ಸೋಲು ಕಾನುಣು ಮೂಲಕ ತನ್ನ ಅಭಿಯಾನವನ್ನು ಮುಗಿಸಿತು. ಈ ಸೋಲಿಗೆ ಕಾರಣ ಏನೆಂಬುದನ್ನು ತಂಡದ ನಾಯಕ ಸಂಜು ಸ್ಯಾಮನ್ಸ್(Sanju Samson)​ ವಿವರಿಸಿದ್ದಾರೆ.

ಪಂದ್ಯದ ಸೋಲಿನ ಬಳಿಕ ಮಾತನಾಡಿದ ಸಂಜು ಸ್ಯಾಮ್ಸನ್​, ನಮ್ಮ ತಂಡದ ಬಲಗೈ ಬ್ಯಾಟ್ಸ್‌ಮನ್‌ಗಳ ವಿರುದ್ಧ ಮಧ್ಯಮ ಓವರ್‌ಗಳಲ್ಲಿ ಹೈದರಾಬಾದ್​ ತಂಡದ ಎಡಗೈ ಸ್ಪಿನ್ನರ್​ಗಳು ಉತ್ತಮ ದಾಳಿ ಸಂಘಟಿಸಿದರು. ನಮ್ಮ ಬ್ಯಾಟಿಂಗ್​ ಲೈನಪ್​ನಲ್ಲಿ ಹೆಚ್ಚಿನ ಎಡಗೈ ಬ್ಯಾಟರ್​ಗಳು ಇಲ್ಲದಿರುವುದು ಕೂಡ ನಮ್ಮ ಸೋಲಿಗೆ ಕಾರಣವಾಯಿತು ಎಂದರು.

ಮಧ್ಯಮ ಕ್ರಮಾಂಕದಲ್ಲಿ ಶಿಮ್ರೋನ್​ ಹೆಟ್ಮೆಯರ್​ ಹೊರತುಪಡಿಸಿ ಯಾರು ಎಡಗೈ ಬ್ಯಾಟ್ಸ್​ಮನ್​ಗಳಿರಲಿಲ್ಲ. ಇದುವೇ ನಮ್ಮ ಸೋಲಿಗೆ ಪ್ರಮುಖ ಕಾರಣವಾಯಿತು ಎಂದು ಸ್ಯಾಮ್ಸನ್​ ಪೋಸ್ಟ್​ ಮ್ಯಾಚ್​ ಪ್ರೆಸೆಂಟೇಷನ್​ನಲ್ಲಿ ಹೇಳಿದರು. ಕ್ರೀಡೆ ಎಂದ ಮೇಲೆ ಸೋಲು-ಗೆಲುವು ಸಾಮಾನ್ಯ. ಯಾವುದೇ ಒಂದು ತಂಡ ಸೋಲಲೇ ಬೇಕು. ಈ ಸೋಲಿನಿಂದ ಹಲವು ಪಾಠ ಕಲಿತಿದ್ದೇವೆ. ಮುಂದಿನ ಬಾರಿ ಮತ್ತಷ್ಟು ಬಲಿಷ್ಠವಾಗಿ ಕಮ್​ಬ್ಯಾಕ್​ ಮಾಡುವ ವಿಶ್ವಾಸವಿದೆ ಎಂದರು.

ಇಲ್ಲಿನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಸನ್​ರೈಸರ್ಸ್​ ಹೈದರಾಬಾದ್​ ತಂಡ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ಗೆ 175 ರನ್​ ಬಾರಿಸಿತು. ಜವಾಬಿತ್ತ ರಾಜಸ್ಥಾನ್​ ಉತ್ತಮ ಆರಂಭ ಪಡೆದರೂ ಕೂಡ ಆ ಬಳಿಕ ನಾಟಕೀಯ ಕುಸಿತ ಕಂಡು 7 ವಿಕೆಟ್​ ನಷ್ಟಕ್ಕೆ 139 ರನ್​ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು. ಮೇ 26ರಂದು ನಡೆಯುವ ಫೈನಲ್​ ಪಂದ್ಯದಲ್ಲಿ ಹೈದರಾಬಾದ್​ ತಂಡ ಕೆಕೆಆರ್​ ವಿರುದ್ಧ ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ಈ ಪಂದ್ಯ ಕೂಡ ಚಿದಂಬರಂ ಸ್ಟೇಡಿಯಂನಲ್ಲೇ ನಡೆಯಲಿದೆ.​

ಇದನ್ನೂ ಓದಿ IPL Final 2024: ಫೈನಲ್​ ಪಂದ್ಯಕ್ಕೆ ಮಳೆ ಬಂದರೆ ಯಾರಾಗಲಿದ್ದಾರೆ ವಿಜೇತರು? ಮಳೆ ನಿಯಮ ಹೇಗಿದೆ?

ಚೇಸಿಂಗ್​ ವೇಳೆ ನಾಯಕ ಸಂಜು ಸ್ಯಾಮ್ಸನ್​(10), ಟಾಮ್ ಕೊಹ್ಲರ್-ಕ್ಯಾಡ್ಮೋರ್(10), ರಿಯಾನ್​ ಪರಾಗ್​(6), ಆರ್​ ಅಶ್ವಿನ್​(0), ಶಿಮ್ರಾನ್ ಹೆಟ್​ಮೇರ್​(4) ಒಬ್ಬರ ಹಿಂದೆ ಒಬ್ಬರಂತೆ ವಿಕೆಟ್​ ಒಪ್ಪಿಸಿ ಪೆವಿಲಿಯನ್​ ಪರೇಡ್​ ನಡೆಸಿದರು. ಯಾರೂ ಕೂಡ ತಂಡಕ್ಕೆ ಆಸರೆಯಾಗುವಲ್ಲಿ ಯಶಸ್ಸು ಕಾಣಲಿಲ್ಲ. ಜೈಸ್ವಾಲ್​ 3 ಸಿಕ್ಸರ್​ ಮತ್ತು 4 ಬೌಂಡರಿ ಬಾರಿಸಿ 42 ರನ್​ ಗಳಿಸಿದರು.

ಅಂತಿಮ ಹಂತದಲ್ಲಿ ಧೃವ್​ ಜುರೇಲ್​ ಅರ್ಧಶತಕ ಬಾರಿಸುವ ಮೂಲಕ ಶಕ್ತಿ ಮೀರಿದ ಬ್ಯಾಟಿಂಗ್​ ಹೋರಾಟ ನಡೆಸಿದರೂ ಕೂಡ ಇವರಿಗೆ ಮತ್ತೊಂದು ತುದಿಯಲ್ಲಿ ಉತ್ತಮ ಸಾಥ್​ ಸಿಗದ ಕಾರಣ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಅಜೇಯರಾಗಿ ಉಳಿದ ಜುರೇಲ್ 35 ಎಸೆತಗಳಿಂದ 56 ರನ್​ ಬಾರಿಸಿದರು. ಇದರದ್ದೇ ತಂಡದ ಪರ ಅತ್ಯಧಿಕ ಗಳಿಕೆ. ಹೈದರಾಬಾದ್​ ಪರ ಶಾಬಾಜ್​ ಅಹ್ಮದ್​ 4 ಓವರ್​ಗೆ ಕೇವಲ 23 ರನ್​ ಬಿಟ್ಟುಕೊಟ್ಟು ಪ್ರಮುಖ 3 ವಿಕೆಟ್​ ಕಡೆವಿದರು. ಪಾರ್ಟ್​ ಟೈಮ್​ ಬೌಲರ್​ ಅಭಿಷೇಕ್​ ಶರ್ಮ 24 ರನ್​ಗೆ 2 ವಿಕೆಟ್​ ಕಿತ್ತರು

Continue Reading
Advertisement
Saree Fashion
ಫ್ಯಾಷನ್1 hour ago

Saree Fashion: ಮಹಿಳೆಯರ ಮನಗೆದ್ದ ಕಟ್‌ ವರ್ಕ್ ಬಾರ್ಡರ್‌ ಪಾರ್ಟಿ ಸೀರೆ

Hardik Pandya
ಕ್ರೀಡೆ2 hours ago

Hardik Pandya: ಪ್ರೇಯಸಿಯ ದೋಖಾದ ಸುಳಿವು ಮೊದಲೇ ಇತ್ತಾ? ಬಹುತೇಕ ಆಸ್ತಿಯನ್ನು ಪೋಷಕರ ಹೆಸರಲ್ಲಿಟ್ಟ ಚಾಲಾಕಿ ಹಾರ್ದಿಕ್!

ಕರ್ನಾಟಕ2 hours ago

Lockup Death: ಲಾಕಪ್‌ ಡೆತ್‌ ಅಲ್ಲ ಎಂದಿದ್ದ ಮೃತ ಯುವಕನ ತಂದೆ ಮತ್ತೆ ಉಲ್ಟಾ!

Actor Kiran Raj Ronny Movie Reels with Fans Song
ಸ್ಯಾಂಡಲ್ ವುಡ್2 hours ago

Actor Kiran Raj: ʻರಾನಿʼ ಸಿನಿಮಾ ಸಾಂಗ್‌ ಔಟ್‌; ಇದೇ ಭಾನುವಾರ ಕಿರಣ್ ರಾಜ್‌ ʻರೀಲ್ಸ್ with ಫ್ಯಾನ್ಸ್ʼ!

Speech Fasting
ಆರೋಗ್ಯ2 hours ago

Speech Fasting: ಸದಾ ವಟವಟ ಮಾತಾಡ್ತಾ ಇರ್ತೀರಾ? ʼಮೌನವ್ರತʼ ಮಾಡಿ, ಆರೋಗ್ಯ ಸುಧಾರಣೆ ನೋಡಿ!

Jawa Yezdi
ಆಟೋಮೊಬೈಲ್2 hours ago

Jawa Yezdi : ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್ ನ ಜಾವಾ 42 ಬಾಬರ್ ರೆಡ್ ಶೀನ್‌ ಬಿಡುಗಡೆ

road Accident
ಕಲಬುರಗಿ2 hours ago

Road Accident : ಅಯೋಧ್ಯೆಯಲ್ಲಿ ಭೀಕರ ಅಪಘಾತ; ಕಲಬುರಗಿ ಮೂಲದ ಮೂವರು ದುರ್ಮರಣ, 19 ಮಂದಿಗೆ ಗಾಯ

KKR vs SRH Final 2024
ಕ್ರೀಡೆ2 hours ago

KKR vs SRH Final 2024: ನಾಳೆ ಕೆಕೆಆರ್​-ಹೈದರಾಬಾದ್​ ಫೈನಲ್​ ಕಾದಾಟ; ಯಾರಿಗೆ ಒಲಿಯಲಿದೆ ಐಪಿಎಲ್​ ಕಿರೀಟ?

Life Expectancy
ಆರೋಗ್ಯ3 hours ago

Life Expectancy: ಕೊರೊನಾದಿಂದ ನಮ್ಮ ಆಯುಷ್ಯದಲ್ಲಿ 2 ವರ್ಷ ಕಡಿತ; WHO ಭೀಕರ ವರದಿ

Tiger Project PM Modi hotel bill in Karnataka dues Rs 6 crore and Centre vs state departments clash
ರಾಜಕೀಯ3 hours ago

PM Modi: ಮೋದಿ ಬಂಡೀಪುರ ಭೇಟಿ ಆತಿಥ್ಯಕ್ಕೆ 6 ಕೋಟಿ ರೂ. ಖರ್ಚು; ಬಿಲ್‌ ಬಾಕಿಗೆ ಕೇಂದ್ರ – ರಾಜ್ಯ ಇಲಾಖೆಗಳ ಜಟಾಪಟಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌