DK Shivakumar talks about Chief minister post in final campaign also Karnataka Election : ಕೊನೆ ಪ್ರಚಾರದಲ್ಲೂ ಸಿಎಂ ಕನಸು ಬಿಚ್ಚಿಟ್ಟ ಡಿ.ಕೆ ಶಿವಕುಮಾರ್‌ - Vistara News

ಕರ್ನಾಟಕ

Karnataka Election : ಕೊನೆ ಪ್ರಚಾರದಲ್ಲೂ ಸಿಎಂ ಕನಸು ಬಿಚ್ಚಿಟ್ಟ ಡಿ.ಕೆ ಶಿವಕುಮಾರ್‌

DK Shivakumar : ಚುನಾವಣೆಗೆ ಇನ್ನು ಕೆಲವೇ ದಿನವಿದೆ. ಕೊನೆಯ ಪ್ರಚಾರ ಕಾರ್ಯಕ್ರಮದಲ್ಲೂ ಡಿ.ಕೆ. ಶಿವಕುಮಾರ್‌ ಅವರು ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಮಾತನಾಡಿದ್ದಾರೆ.

VISTARANEWS.COM


on

ಕನಕಪುರದಲ್ಲಿ ನಡೆದ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನಗರ: ರಾಜ್ಯದಲ್ಲಿ ಅಧಿಕಾರದ ಕನಸು ಕಾಣುತ್ತಿರುವ ಕಾಂಗ್ರೆಸ್‌ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುವ (Chief Minister post) ಮನದಿಂಗಿತ ಬಿಚ್ಚಿಟ್ಟಿದ್ದಾರೆ. ಪ್ರಚಾರದ ಕೊನೆಯ ದಿನವಾದ ಸೋಮವಾರ ಕನಕಪುರ ಮತ್ತು ರಾಮನಗರದಲ್ಲಿ ಪ್ರಚಾರ ಮಾಡಿದ ಅವರು ರಾಮನಗರದಲ್ಲಿ ಗೆದ್ದ ಹಲವು ನಾಯಕರನ್ನು ನೆನಪಿಸಿ ತನಗೂ ಸಿಎಂ ಆಗುವ ಅವಕಾಶ ಕೊಡಿ ಎಂದು ಕೇಳಿದರು.

ರಾಮನಗರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಇಕ್ಬಾಲ್ ಹುಸೇನ್ ಪರ ಪ್ರಚಾರ ಮಾಡಿದ ಡಿ.ಕೆ. ಶಿವಕುಮಾರ್‌ ಅವರು, ರಾಮನಗರದಲ್ಲಿ ಇಕ್ಬಾಲ್ ಅಲ್ಲ ಅಭ್ಯರ್ಥಿ, ನಾನೇ ಅಭ್ಯರ್ಥಿ. ಇಕ್ಬಾಲ್‌ಗೆ ವೋಟ್ ಹಾಕ್ತಿದೀನಿ ಅಂತ ಮತ ಹಾಕಬೇಡಿ, ಡಿ.ಕೆ ಶಿವಕುಮಾರ್‌ನನ್ನು ವಿಧಾನಸೌಧಕ್ಕೆ ಕಳುಹಿಸಬೇಕು ಅಂತ ಮತ ಹಾಕಿ ಎಂದು ಕೇಳಿಕೊಂಡರು.

ರಾಮನಗರದಲ್ಲಿ ರೋಡ್‌ ಶೋ

ʻʻದೇವೇಗೌಡ್ರು ಮುಖ್ಯಮಂತ್ರಿ ಆಗೋಕೆ ರಾಮನಗರ ಅವಕಾಶ ನೀಡಿದೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗೋಕೆ ರಾಮನಗರ ಜನತೆ ಅವಕಾಶ ನೀಡಿದೆ. ಉತ್ತರ ಕನ್ನಡದ ರಾಮಕೃಷ್ಣ ಹೆಗ್ಡೆ ಅವರು ಮುಖ್ಯಮಂತ್ರಿ ಆಗೋಕೆ ರಾಮನಗರ ಜನರು ಅವಕಾಶ ನೀಡಿದ್ದರು. ಇದೀಗ ನಾನು ಈ ಮಣ್ಣಿನ ಮಗ, ಈ ಜಿಲ್ಲೆಯ ರೈತನ ಮಗ. ಈ ಜಿಲ್ಲೆಯವನಿಗೆ ಒಂದು ಅವಕಾಶ ಕೊಡಿʼʼ ಎಂದು ಡಿ.ಕೆ ಶಿವಕುಮಾರ್‌ ಕೇಳಿಕೊಂಡರು.

ರಾಮನಗರದಲ್ಲಿ ಕಾರ್ಯಕರ್ತರು ಡಿಕೆ ಶಿವಕುಮಾರ್ ಮೇಲೆ ಹೂವಿನ ಸುರಿಮಳೆಗೈದರು. ಬೃಹತ್ ಗಾತ್ರದ ಸೇಬು ಹಾರ ಹಾಕಿ ಶಿವಕುಮಾರ್‌ ಅವರನ್ನು ಸ್ವಾಗತಿಸಿದರು. ಹಾರೋಹಳ್ಳಿಯಲ್ಲಿ ಮಾತನಾಡಿದಾಗಲೂ ಡಿ.ಕೆ. ಶಿವಕುಮಾರ್‌ ಅಡಿದ್ದು ಮುಖ್ಯಮಂತ್ರಿ ಮಾತೇ. ಜನರು ಕೂಡಾ ಮುಂದಿನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಎಂದು ಜಯ ಘೋಷ ಕೂಗಿದರು!

ಕನಕಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇರಿದ ಜನಸ್ತೋಮ

ಇದೇ ವೇಳೆ ಮಾಧ್ಯಮಗಳ ಜತೆಗೂ ಮಾತನಾಡಿದ ಅವರು, ಕಾಂಗ್ರೆಸ್‌ 141 ಸ್ಥಾನ ಗೆಲ್ಲುವ ಕಾನ್ಫಿಡೆನ್ಸ್‌ ಇದೆ ಎಂದರು. ನೀವು 113 ಸ್ಥಾನದ ಬಗ್ಗೆ ಯೋಚನೆ ಮಾಡುತ್ತಿರಬಹುದು. ಆದರೆ, ನಾವು 141 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದರು ಡಿ.ಕೆ. ಶಿವಕುಮಾರ್.‌ ಮೇ 15ರಂದು ನಡೆಯುವ ಸಂಪುಟ ಸಭೆಯಲ್ಲಿ ನಾವು ಘೋಷಣೆ ಮಾಡಿರುವ ಎಲ್ಲ ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. ಯಾರ ನೇತೃತ್ವದ ಕ್ಯಾಬಿನೆಟ್‌ ಎಂಬ ಪ್ರಶ್ನೆಗೆ ಅದರನ್ನು ಮೇ 15ರಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಘೋಷಿಸುತ್ತಾರೆ ಎಂದರು.

ಚುನಾವಣಾ ಆಯೋಗಕ್ಕೆ ಉತ್ತರ ಕೊಟ್ಟಿದ್ದೇನೆ

ಸರಕಾರದ ಭ್ರಷ್ಟಾಚಾರದ ರೇಟ್‌ ಕಾರ್ಡ್‌ ಎಂದು ಬಿಡುಗಡೆ ಮಾಡಿದ ಪತ್ರಿಕಾ ಜಾಹೀರಾತುಗಳಿಗೆ ಸಂಬಂಧಿಸಿ ಬಿಜೆಪಿ ನೀಡಿರುವ ದೂರು ಹಾಗೂ ಆಯೋಗ ನೀಡಿರುವ ನೋಟಿಸ್‌ ಬಗ್ಗೆ ಮಾತನಾಡಿದ ಡಿ.ಕೆ ಶಿವಕುಮಾರ್‌ ಅವರು, ʻʻನಿಮ್ಮ ಆರೋಪಗಳಿಗೆ ಸಂಬಂಧಿಸಿ ಏನು ದಾಖಲೆ ಇದೆ ಎಂದು ನನಗೆ ನೋಟಿಸ್ ನೀಡಿದ್ದಾರೆ. ನಾನು ಚುನಾವಣಾ ಆಯೋಗಕ್ಕೆ ಉತ್ತರ ಕೊಟ್ಟಿದ್ದೇನೆ. ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್‌ ಅವರು ಹೇಳಿದ್ದು, ಬಿಜೆಪಿ ನಾಯಕರೇ ಆದ ಗೂಳಿಹಟ್ಟಿ ಶೇಖರ್‌ ಮತ್ತು ವಿಶ್ವನಾಥ್‌ ಅವರೇ ನೀಡಿದ ಹೇಳಿಕೆಗಳನ್ನು ಉಲ್ಲೇಖಿಸಿದ್ದಾಗಿ ಸ್ಪಷ್ಟಡಿಸಿದ್ದೇನೆ, ನೆಹರೂ ಓಲೇಕಾರ್‌ ಹೇಳಿದ್ದು, ಸಿ.ಪಿ. ಯೋಗೇಶ್ವರ್‌ ಅವರ ಮಾತುಗಳು, ಇವೆಲ್ಲವೂ ಪ್ರಕಟವಾಗಿರುವ ಪತ್ರಿಕೆಗಳು, ಹೇಳಿಕೆಗಳ ವಿಡಿಯೊಗಳನ್ನು ದಾಖಲೆಯಾಗಿ ತೆಗೆದುಕೊಳ್ಳಬಹುದು ಎಂದು ಹೇಳಿದ್ದೇನೆʼʼ ಎಂದರು ಡಿಕೆಶಿ.

ಚುನಾವಣಾ ಆಯೋಗ ನೋಟಿಸ್‌ ಕೊಡಬೇಕಾಗಿರುವುದು ನಮಗಲ್ಲ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕೋಮುಗಲಭೆ ಆಗುತ್ತದೆ ಎಂದು ಹೇಳಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ನೋಟಿಸ್‌ ನೀಡಬೇಕು ಎಂದರು.

ಇದನ್ನೂ ಓದಿ : Karnataka Election : 100ಕ್ಕೂ ಅಧಿಕ ಲಿಂಗಾಯತ ಸ್ವಾಮೀಜಿಗಳಿಂದ ಕಾಂಗ್ರೆಸ್‌ಗೆ ಬೆಂಬಲ ಎಂದ ಡಿಕೆಶಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿಕ್ಕಬಳ್ಳಾಪುರ

Murder case : ಪಿತ್ರಾರ್ಜಿತ ಆಸ್ತಿಗಾಗಿ ತಾರಕಕ್ಕೇರಿದ ಗಲಾಟೆ; ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

Murder Case : ಆಸ್ತಿಗಾಗಿ ಶುರುವಾದ ಗಲಾಟೆಯು ಎರಡು ಕುಟುಂಬಗಳು ಕಲ್ಲು-ದೊಣ್ಣೆಗಳಿಂದ ಹೊಡೆದಾಡಿಕೊಂಡಿದ್ದಾರೆ. ಗಲಾಟೆ ತಾರಕಕ್ಕೇರಿದ್ದು ಕೊಲೆಯಲ್ಲಿ ಅಂತ್ಯವಾಗಿದೆ.

VISTARANEWS.COM


on

By

murder case
Koo

ಚಿಕ್ಕಬಳ್ಳಾಪುರ: ಪಿತ್ರಾರ್ಜಿತ ಆಸ್ತಿಗಾಗಿ ದಾಯಾದಿಗಳ ನಡುವಿನ ಗಲಾಟೆಯೂ ತಾರಕಕ್ಕೇರಿದ್ದು ವ್ಯಕ್ತಿಯ ಕೊಲೆಯಲ್ಲಿ (Murder Case) ಅಂತ್ಯವಾಗಿದೆ. ಆಸ್ತಿಗಾಗಿ ತಮ್ಮನ ಮಕ್ಕಳಿಂದಲೇ ಅಣ್ಣನ ಕೊಲೆಯಾಗಿದೆ. ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ನಡುವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ನಂಜುಂಡಯ್ಯ (55) ಗಲಾಟೆಯಲ್ಲಿ ಕೊಲೆಯಾದವರು. ಕಲ್ಲು ದೊಣ್ಣೆಗಳಿಂದ ಬಡಿದಾಟದಲ್ಲಿ ತೀವ್ರ ಗಾಯಗೊಂಡಿದ್ದ ನಂಜುಂಡಯ್ಯರನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ನಂಜುಂಡಯ್ಯ ಮೃತಪಟ್ಟಿದ್ದಾರೆ.

ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಡುವನಹಳ್ಳಿ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Road Accident : ಸರ್ಜಾಪುರದಲ್ಲಿ ಎದೆ ಝುಲ್‌ ಎನ್ನುವ ಡೆಡ್ಲಿ ಆ್ಯಕ್ಸಿಡೆಂಟ್‌; ಬೈಕ್‌ ಸವಾರ ಬದುಕಿದ್ದೆ ಪವಾಡ

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮಂಡ್ಯದ ಮೊಗರಹಳ್ಳಿ ಬಳಿ ಘಟನೆ ನಡೆದಿದೆ. ಮಂಟಿ ಗ್ರಾಮದ ಅನಿಲ್ (28) ಮೃತ ದುರ್ದೈವಿ. ಮೊಗರಹಳ್ಳಿ ಗ್ರಾಮದ ಸ್ಮಶಾನದ ಬಳಿ ಶವ ಪತ್ತೆಯಾಗಿದೆ. ಸೋಮವಾರ ಬೆಳಗ್ಗೆ ನೇತಾಡುತ್ತಿದ್ದ ಶವ ಕಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರೆಂಟ್‌ ಶಾಕ್‌ಗೆ ಯುವಕ ಬಲಿ

ಕೃಷಿ ಚಟುವಟಿಕೆಯ ವೇಳೆ ಆಕಸ್ಮಿಕ ವಿದ್ಯುತ್‌ ಸ್ಪರ್ಶಿಸಿ ಯುವಕನೊರ್ವ ಮೃತಪಟ್ಟಿದ್ದಾನೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ‌ ತಾಂವಶಿ ಗ್ರಾಮದಲ್ಲಿ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ ದ್ರಾಕ್ಷಿ ತೋಟದಲ್ಲಿ ಪಂಪ್ ಸೆಟ್ ಶುರು ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ. ಸಂಗಪ್ಪ ನಾನಪ್ಪ ತಳವಾರ (28) ಮೃತ ದುರ್ದೈವಿ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

BJP-JDS Protest: ಭಂಡತನ ಬಿಟ್ಟು ರಾಜೀನಾಮೆ ಕೊಡಿ; ಸಿಎಂ ಸಿದ್ದರಾಮಯ್ಯಗೆ ಬಿಜೆಪಿ-ಜೆಡಿಎಸ್‌ ನಾಯಕರ ಆಗ್ರಹ

BJP-JDS Protest: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರನ್ನು ಬೆಂಬಲಿಸಿ ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ, ಜೆಡಿಎಸ್‌ನಿಂದ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.

VISTARANEWS.COM


on

BJP-JDS Protest
Koo

ಬೆಂಗಳೂರು: ಮುಡಾ ಹಗರಣದಲ್ಲಿ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ-ಜೆಡಿಎಸ್ ಶಾಸಕರು, ಸಂಸದರು ನಗರದ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸೋಮವಾರ ಪ್ರತಿಭಟನೆ (BJP-JDS Protest) ನಡೆಸಿದರು.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್‌.ಅಶೊಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.

ಈ ವೇಳೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಬಿಜೆಪಿ-ಜೆಡಿಎಸ್ ಎರಡೂ ಪಕ್ಷ ಒಂದಾಗಿ ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ವಿರುದ್ಧ ಹೋರಾಟ ನಡೆಸಿಕೊಂಡು ಬರುತ್ತಿವೆ. ನಮ್ಮ ಹೋರಾಟ ತಾರ್ಕಿಕ ಅಂತ್ಯಕ್ಕೆ ಬಂದಿದೆ. ಸಿಎಂ ಮೇಲೆ ವಿರುದ್ಧ ಅನೇಕ ಭ್ರಷ್ಟಾಚಾರ ಹಗರಣ ಆರೋಪಗಳು ಕೇಳಿ ಬಂದಿವೆ. ಸಿಎಂ‌ ವಿರುದ್ಧ ಸಾಕಷ್ಟು ದಾಖಲೆಗಳನ್ನು ಸಲ್ಲಿಸಿದ ಮೇಲೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಆದರೆ, ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡೋದು ಬಿಟ್ಟು, ಬೆಂಬಲಿಗರು ಹಾಗೂ ಹೈಕಮಾಂಡ್ ಜೊತೆ ಸೇರಿ ಗೂಂಡಾಗಿರಿ ಮಾಡಲು ಹೊರಟಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ರಾಜ್ಯಪಾಲರ ಮೇಲೆ ದಬ್ಬಾಳಿಕೆ ಮಾಡೋದು ಬಿಟ್ಟು, ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು. ಬೆಂಗಳೂರು-ಮೈಸೂರು ಪಾದಯಾತ್ರೆ ವೇಳೆ ಈಗಾಗಲೇ ಮಾತನಾಡಿದ್ದೇವೆ. ತಮ್ಮ ಬೆಂಬಲಕ್ಕೆ ಸಚಿವರು, ಶಾಸಕರು ನಿಲ್ಲುತ್ತಾರೆ ಎನ್ನೋ ಭಂಡತನ ಬಿಡಿ. ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೊರ ಬನ್ನಿ ಎಂದು ಒತ್ತಾಯಿಸಿದರು.

ನೀವು ನ್ಯಾಯಾಲಯದಲ್ಲಿ ಹೋರಾಟ ಮಾಡಿ, ನಾವು ಬೇಡ ಅನ್ನಲ್ಲ. ಕಾನೂನಾತ್ಮಕವಾಗಿ ಏನೇ ಹೋರಾಟ ಮಾಡಿ, ಆದರೆ, ಮೊದಲು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ. ನಿಮ್ಮ ಮುಖವಾಡ ಕಳಚಿದೆ, ರಾಜ್ಯದ ಜನ ನೋಡುತ್ತಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತೊಲಗಿ ಎಂದು ಆಗ್ರಹಿಸಿದರು.

ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿ, ಸಿದ್ದರಾಮಯ್ಯ ಅವರೇ ನಿಮ್ಮ ನೇತೃತ್ವದಲ್ಲಿ ಇಷ್ಟೊಂದು ಲೂಟಿ ಆಗುತ್ತಿದೆ ಎಂದು ಜನ ಕೇಳುತ್ತಿದ್ದಾರೆ. ನಾವು ನಿಲುವಳಿ ಸೂಚನೆ ಮಂಡನೆ ಮಾಡಿದ್ದೆವು, ನಾವೇನು ನಿಮಗೆ ಬಹುಮತ ಇಲ್ಲ ಅಂತ ಕೇಳಿರಲಿಲ್ಲ. ಬಹುಮತ ತೆಗೆದುಕೊಂಡು ಏನು ಮಾಡುತ್ತೀರಿ. ಕಾನೂನಾತ್ಮಕವಾಗಿ ನಾವು ಮೊದಲ ಪ್ರಶ್ನೆ ಕೇಳಿದ್ದೆವು, ತಪ್ಪು ಮಾಡಿಲ್ಲ ಅಂತ ಎಳೆಎಳೆಯಾಗಿ ಹೇಳಲು ಇದ್ದ ಅವಕಾಶ ಇತ್ತು. ಅದು ಬಿಟ್ಟು ಹೇಳಿಕೆ ಕೊಡದೆ ಓಡಿಹೋದಿರಿ. ಸರ್ಕಾರದ ಅಧಿಕಾರ ಬಳಸಿಕೊಂಡು, ನಮಗಿಂತ ಮೊದಲು ಹೋಗಿ ಭಾಷಣ ಮಾಡಿದ್ದೀರಲ್ಲ ಎಂದು ಪ್ರಶ್ನಿಸಿದರು.

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಾಳಾದರೆ ನೀವೇ ನೇರ ಹೊಣೆ. ರಾಷ್ಟ್ರಪತಿ ಆಡಳಿತ ಈಗಲೇ ಬರಲಿ, ಪೊಲೀಸರ ಕೈ ಕಟ್ಟಿದ್ದೀರಿ, ಬಿಜೆಪಿ-ಜೆಡಿಎಸ್ ಮಾತ್ರವಲ್ಲ, ರಾಜ್ಯದ ಎಲ್ಲಾ ಜನ ಕೂಗುತ್ತಿದ್ದಾರೆ. ಮಾಧ್ಯಮದಲ್ಲಿ ಎಲ್ಲಾ ದಾಖಲೆಗಳನ್ನು ತೋರಿಸುತ್ತಿದ್ದಾರೆ. ಪ್ರಾಸಿಕ್ಯೂಷನ್ ಅನುಮತಿ ಕೇಳಿರೋದು ಯಾರು? ಟಿ.ಜೆ ಅಬ್ರಹಾಂ, ಒಬ್ಬ ಅಲ್ಪಸಂಖ್ಯಾತ. ಸ್ನೇಹಮಯಿ ಕೃಷ್ಣಾ, ಪ್ರದೀಪ್ ಅವರು ಇದ್ದಾರೆ. ಕಾಗೆ ಬೆಳ್ಳಗಿದೆಯಾ, ಕಪ್ಪಗಿದೆಯಾ ಎಂದು ತೀರ್ಮಾನ ಮಾಡುವುದು ಬಿಜೆಪಿ ಅಲ್ಲ, ನ್ಯಾಯಾಲಯ ಎಂದು ಹೇಳಿದರು.

ಯಡಿಯೂರಪ್ಪ ಅವರ ವಿರುದ್ಧ ಪ್ರಾಸಿಕ್ಯೂಷನ್ ಕೊಟ್ಟಾಗ ಹಬ್ಬ ಮಾಡಿದ್ದಿರಿ, ಈಗ ಗಲಾಟೆ ಮಾಡುತ್ತೀರಾ? ಒಂದೇ ಸರ್ಕಾರ, ಒಂದೇ ಮಂತ್ರಿ ಮಂಡಲ, ಒಂದೇ ಕ್ಯಾಬಿನೆಟ್. ಎರಡು ನೀತಿ, ದ್ವಂದ್ವ ಯಾಕೆ? ನಾಗೇಂದ್ರಗೆ ಒಂದು ಕಾನೂನು, ಸಿದ್ದರಾಮಯ್ಯಗೆ ಒಂದು ಕಾನೂನಾ ಎಂದು ಪ್ರಶ್ನಿಸಿದರು.

ಇದನ್ನೂ ಓದಿ | CM Siddaramaiah: ಆ.23ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ; ಕಾನೂನು ಹೋರಾಟಕ್ಕೆ ಹೈ ‌ಕಮಾಂಡ್ ಬೆಂಬಲ ಕೋರಲು ಭೇಟಿ

ಪ್ರತಿಭಟನೆಯಲ್ಲಿ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಿಎಂ ಸದಾನಂದಗೌಡ, ಜೆಡಿಎಸ್ ವಿಧಾನಪರಿಷತ್ ಸದಸ್ಯ ಶರವಣ, ತಿಪ್ಪೇಸ್ವಾಮಿ, ಎಂಎಲ್‌ಎ ನಾಡಗೌಡ, ಸಂಸದರಾದ ಪಿ.ಸಿ ಮೋಹನ್, ಲೆಹರ್ ಸಿಂಗ್, ಎಂಟಿಬಿ ನಾಗರಾಜ್, ಅಶ್ವತ್ಥ್‌ ನಾರಾಯಣ್‌ ಮತ್ತಿತರರು ಭಾಗವಹಿಸಿದ್ದರು.

Continue Reading

ಬೆಂಗಳೂರು

Road Accident : ಸರ್ಜಾಪುರದಲ್ಲಿ ಎದೆ ಝುಲ್‌ ಎನ್ನುವ ಡೆಡ್ಲಿ ಆ್ಯಕ್ಸಿಡೆಂಟ್‌; ಬೈಕ್‌ ಸವಾರ ಬದುಕಿದ್ದೆ ಪವಾಡ

Road Accident : ಬೆಂಗಳೂರಿನಲ್ಲಿ ಶರವೇಗದಲ್ಲಿ ಬಂದ ಕಾರೊಂದು ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತವು ಸೆರೆಯಾಗಿದ್ದು, ಎದೆ ಝಲ್ ಎನ್ನುತ್ತೆ.

VISTARANEWS.COM


on

By

Road Accident
Koo

ಬೆಂಗಳೂರು: ಅಬ್ಬಾ.. ಬೆಂಗಳೂರಿನ ಸರ್ಜಾಪುರದಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್‌ವೊಂದು (Road Accident) ಸಂಭವಿಸಿದ್ದು, ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶರವೇಗದಲ್ಲಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರ ಗಾಳಿಗೆ ತೂರಿ ಹಾರಿ ಬಿದ್ದಿದ್ದಾನೆ.

ಕಾರು ಬೈಕ್‌ಗೆ ಡಿಕ್ಕಿಯಾದರೂ ಪವಾಡ ಸದೃಶ್ಯ ರೀತಿ ಬೈಕ್‌ ಸವಾರ ಬಚಾವಾಗಿದ್ದಾನೆ. ಅದೃಷ್ಟವಶಾತ್ ಸವಾರ ಸಣ್ಣ-ಪುಟ್ಟ ಗಾಯವಾಗಿದ್ದು, ಯಾವುದೇ ಪ್ರಾಣಾಪಾಯವಿಲ್ಲ.

ಕಾರು ಡಿಕ್ಕಿಯಾದ ರಭಸಕ್ಕೆ ಸವಾರ ಬೈಕ್ ಸಮೇತ ರಸ್ತೆಗೆ ಹಾರಿ ಬಿದ್ದರೆ, ಧರಿಸಿದ್ದ ಹೆಲ್ಮೆಟ್ ಒಂದು ಕಡೆ ಎಗರಿ ಬಿದ್ದಿದೆ. ಅಪಘಾತದ ದೃಶ್ಯ ಮುಂದಿದ್ದ ಕಾರೊಂದರ ಡ್ಯಾಶ್ ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಆಗಸ್ಟ್‌ 15ರ ಬೆಳಗ್ಗೆ 7:50 ರ ಸುಮಾರಿಗೆ ಸರ್ಜಾಪುರ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸರ್ಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬೈಕ್‌ ಸಂಪೂರ್ಣ ಜಖಂಗೊಂಡಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Assault Case : ಕುಂದಾಪುರದಲ್ಲಿ ಗಾಂಜಾ ನಶೆಯಲ್ಲಿ ಝಳಪಿಸಿದ ತಲ್ವಾರ್‌; ಇಬ್ಬರು ಗಂಭೀರ

ಗೂಡ್ಸ್‌ ವಾಹನ ಡಿಕ್ಕಿಗೆ ಮಹಿಳೆ ಸಾವು

ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಹಲಸೂರು ಗೇಟ್ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿನ್ನೆ ಭಾನುವಾರ ಮಧ್ಯಾಹ್ನ 2ಗಂಟೆ ಸುಮಾರಿಗೆ ಅಪಘಾತ ನಡೆದಿದೆ.

ಸತ್ಯಪ್ರೇಮ ಎಂಬುವವರು ಮೃತ ದುರ್ದೈವಿ. ಸತ್ಯಪ್ರೇಮ ಅವರು ತಮ್ಮ ಪತಿ ಜತೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಕಾರ್ಪೊರೇಷನ್ ಬಸ್ ನಿಲ್ದಾಣದ ಬಳಿ ಹಿಂದಿನಿಂದ ಬಂದ ಐಷರ್ ವಾಹನ ಬೈಕ್‌ಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ಸತ್ಯಪ್ರೇಮಾರ ತಲೆಗೆ ಗಂಭೀರ ಗಾಯವಾಗಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಸತ್ಯಪ್ರೇಮಾರ ಪತಿಗೆ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ನಿಯಂತ್ರಣ ತಪ್ಪಿದ ಕಾರು, 17 ಬೈಕ್‌ಗಳು ಜಖಂ

ಹಾಸನದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನಿಂತಿದ್ದ ಬೈಕ್‌ಗಳ ಮೇಲೆ ನುಗ್ಗಿದೆ. ಪರಿಣಾಮ ಹದಿನೇಳು ಬೈಕ್‌ಗಳು ಜಖಂಗೊಂಡಿವೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಹೋಬಳಿ, ಕೆಂಕೆರೆಹಳ್ಳಿ ಗೇಟ್ ಬಳಿ ಅಪಘಾತ ನಡೆದಿದೆ.

ಧಾರಾಕಾರ ಮಳೆ ಸುರಿಯುತ್ತಿದ್ದ ಹಿನ್ನೆಲೆಯಲ್ಲಿ ಸವಾರರು ಬೈಕ್‌ಗಳನ್ನು ನಿಲ್ಲಿಸಿ ಬಸ್ ನಿಲ್ದಾಣದಲ್ಲಿ ನಿಂತಿದ್ದರು. ಈ ವೇಳೆ ಅತಿ ವೇಗವಾಗಿ ಚಲಿಸುತ್ತಿದ್ದ ಫಾರ್ಚೂನರ್ ಕಾರು, ಮಳೆಯಿಂದ ರಸ್ತೆ ಕಾಣದೆ ನಿಯಂತ್ರಣ ತಪ್ಪಿ ಬೈಕ್‌ಗಳ ಮೇಲೆ ನುಗ್ಗಿದೆ. ಬೈಕ್‌ಗಳ ಮೇಲೆ‌ ನುಗ್ಗಿ ಬಳಿಕ ಬಸ್‌ ನಿಲ್ದಾಣದ ಗೋಡೆಗೆ ಡಿಕ್ಕಿ ಹೊಡೆದು ಕಾರು ನಿಂತಿದೆ.

ಕಾರು ಗುದ್ದಿದ ರಭಸಕ್ಕೆ ಗೋಡೆ ಕುಸಿದು ಬಿದ್ದಿದೆ. ಘಟನೆಯಲ್ಲಿ ಓರ್ವನಿಗೆ ಗಾಯವಾಗಿದ್ದು, ಅದೃಷ್ಟವಶಾತ್ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ನಿಲ್ದಾಣದಲ್ಲಿ ಬೈಕ್ ಸವಾರರು ನಿಂತಿದ್ದರಿಂದ ಎಲ್ಲರ ಜೀವ ಉಳಿದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

MUDA Case: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ; ರಾಜಭವನ ಮುತ್ತಿಗೆಗೆ ಯತ್ನಿಸಿದ ಕಾರ್ಯಕರ್ತರು

MUDA Case: ರಾಜ್ಯಪಾಲರ ವಿರುದ್ಧ ಬೀದಿಗಿಳಿದಿದ್ದು, ರಾಜಧಾನಿಯಲ್ಲಿ ರಾಜಭವನ ಮುತ್ತಿಗೆಗೆ ಕೈ ಕಾರ್ಯಕರ್ತರು ಯತ್ನಿಸಿದರು. ರಾಜ್ಯಪಾಲರ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜಭವನಕ್ಕೆ ಮುತ್ತಿಗೆಗೆ ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ʼಗವರ್ನರ್ ಗೋ ಬ್ಯಾಕ್‌ʼ ಎಂದು ಕೈ ಕಾರ್ಯಕರ್ತರು ಘೋಷಣೆ ಕೂಗಿದರು.

VISTARANEWS.COM


on

muda case congress protest
Koo

ಬೆಂಗಳೂರು: ‌ಮುಡಾ ಹಗರಣ (MUDA Scam, MUDA case) ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ಧ ಪ್ರಾಸಿಕ್ಯೂಶನ್‌ಗೆ (Prosecution) ಅನುಮತಿ ನೀಡಿರುವ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Governor Thawar Chand gehlot) ಅವರ ನಡೆಯನ್ನು ವಿರೋಧಿಸಿ ಕಾಂಗ್ರೆಸ್ (Congress protest) ಇಂದು ಹಮ್ಮಿಕೊಂಡಿರುವ ರಾಜ್ಯವ್ಯಾಪಿ ಬೃಹತ್‌ ಪ್ರತಿಭಟನೆಗೆ ವೇಗ ದೊರೆತಿದೆ. ಮುಂಜಾನೆಯಿಂದ ಕಾಂಗ್ರೆಸ್‌ ಕಾರ್ಯಕರ್ತರು ಎಲ್ಲೆಡೆ ಜಮಾಯಿಸಿ ರಾಜ್ಯಪಾಲರಿಗೆ ಧಿಕ್ಕಾರ ಕೂಗಿದರು. ರಾಜಧಾನಿಯಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್‌ ನಾಯಕರು ಭಾಗವಹಿಸಿ ಧರಣಿ ಪ್ರತಿಭಟನೆ ನಡೆಸಿದರು.

ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಡಿಕೆ ಶಿವಕುಮಾರ್, ಸಚಿವ ಜಮೀರ್ ಅಹ್ಮದ್, ದಿನೇಶ್ ಗುಂಡೂರಾವ್, ಬಿಕೆ ಹರಿಪ್ರಸಾದ್, ಯುಬಿ ವೆಂಕಟೇಶ್, ಸಲೀಂ ಅಹ್ಮದ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು, ಕೆಪಿಸಿಸಿ ಪದಾಧಿಕಾರಿಗಳು ಭಾಗಿಯಾಗಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಮೂರು ಕೆಎಸ್‌ಆರ್‌ಪಿ ತುಕಡಿ, 100 ಮಹಿಳಾ ಪೊಲೀಸ್, 10 ಪಿಎಸ್‌ಐ, 5 ಪಿಐಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಬೆಳ್ಳಂಬೆಳಗ್ಗೆಯೇ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ರಸ್ತೆಗಿಳಿದಿದ್ದಾರೆ. ರಾಜ್ಯಪಾಲರ ವಿರುದ್ಧ ಬೀದಿಗಿಳಿದಿದ್ದು, ರಾಜಧಾನಿಯಲ್ಲಿ ರಾಜಭವನ ಮುತ್ತಿಗೆಗೆ ಕೈ ಕಾರ್ಯಕರ್ತರು ಯತ್ನಿಸಿದರು. ರಾಜ್ಯಪಾಲರ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜಭವನಕ್ಕೆ ಮುತ್ತಿಗೆಗೆ ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ʼಗವರ್ನರ್ ಗೋ ಬ್ಯಾಕ್‌ʼ ಎಂದು ಕೈ ಕಾರ್ಯಕರ್ತರು ಘೋಷಣೆ ಕೂಗಿದರು.

ʼಷಡ್ಯಂತ್ರಕ್ಕೆ ಸವಾಲ್ʼ ಎಂಬ ಹೆಸರಿನಲ್ಲಿ ಇಂದು ರಾಜ್ಯಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ ಆಯೋಜಿಸಿದ್ದು, ರಾಜ್ಯಪಾಲರ, ಬಿಜೆಪಿ- ಜೆಡಿಎಸ್ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಜಿಲ್ಲಾ ಕೇಂದ್ರಗಳಲ್ಲಿ ಆಯೋಜನೆ ಮಾಡಿದೆ. ಕನಿಷ್ಠ ಅರ್ಧ ಕಿಲೋಮೀಟರ್ ಪಾದಯಾತ್ರೆ ಮೂಲಕ ಪ್ರೊಟೆಸ್ಟ್ ಮಾಡಲಿದೆ. ಪ್ರತಿಭಟನೆ ಬಳಿಕ ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗಳಿಗೆ ಆಯಾ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಿದೆ. ರಾಜ್ಯಪಾಲರು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್‌ ಆಕ್ಷೇಪಿಸಿದೆ.

ತನಿಖೆಗೆ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ಕೋರಿದ ಸಿಎಂ, ಇಂದು ಮಧ್ಯಾಹ್ನ ವಿಚಾರಣೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿ ತಮ್ಮ ವಿರುದ್ಧ ಪ್ರಾಸಿಕ್ಯೂಶನ್‌ ಆರಂಭಿಸಲು ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪ್ರಾಸಿಕ್ಯೂಶನ್‌ಗೆ ಅವರು ತಡೆಯಾಜ್ಞೆ ಕೋರಿದ್ದು, ಅರ್ಜಿಯ ವಿಚಾರಣೆ ಮಧ್ಯಾಹ್ನ 2.30ಕ್ಕೆ ನಡೆಯಲಿದೆ.

ಪ್ರಾಸಿಕ್ಯೂಶನ್‌ಗೆ ತಡೆ ಕೋರಿ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಪೀಠದ ಮುಂದೆ ಸಿಎಂ ಪರ ವಕೀಲ ಶತಭೀಷ್ ಶಿವಣ್ಣ ಅವರಿಂದ ಅರ್ಜಿ ಸಲ್ಲಿಕೆಯಾಯಿತು. ತ್ವರಿತವಾಗಿ ಅರ್ಜಿ ವಿಚಾರಣೆ ನಡೆಸುವಂತೆ ವಕೀಲರು ಮನವಿ ಮಾಡಿಕೊಂಡರು. ನ್ಯಾಯಮೂರ್ತಿಗಳು ವಿಚಾರಣೆಯನ್ನು ಮಧ್ಯಾಹ್ನ 2.30ಕ್ಕೆ ಮುಂದೂಡಿದರು.

ರಾಜ್ಯಪಾಲರ ಅನುಮತಿ ರದ್ದುಪಡಿಸಲು ಕೋರಿ ಸಿದ್ದರಾಮಯ್ಯ ಅವರ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ ಹಾಗೂ ಮೂವರು ದೂರುದಾರರನ್ನು ಪ್ರತಿವಾದಿಗಳನ್ನಾಗಿಸಿ ಅರ್ಜಿ ಸಲ್ಲಿಸಲಾಗಿದೆ. ರಾಜ್ಯಪಾಲರು ಅನುಮತಿ ನೀಡುವ ಮುನ್ನ ಕಾನೂನಿನ ಪ್ರಕ್ರಿಯೆ ಪಾಲಿಸಿಲ್ಲ. ಸಚಿವ ಸಂಪುಟದ ಶಿಫಾರಸಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಸಂವಿಧಾನದ 163ನೇ ವಿಧಿಯಂತೆ ಸಚಿವ ಸಂಪುಟದ ಶಿಫಾರಸು ಪಾಲಿಸಬೇಕು. ಅನುಮತಿಗೆ ಮುನ್ನ ದಾಖಲೆಗಳನ್ನು ಪರಿಶೀಲಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ವಾದಿಸಿದರು.

ತುರ್ತು ವಿಚಾರಣೆಯ ಅಗತ್ಯವಿದೆ. ಕೇವಿಯಟ್ ಸಲ್ಲಿಸಿದವರಿಗೆ ಮಾಹಿತಿ ನೀಡಲಾಗಿದೆ. ರಾಜ್ಯಪಾಲರ ಕಚೇರಿಗೂ ಅರ್ಜಿಯ ಪ್ರತಿ ಸಲ್ಲಿಸಲಾಗಿದೆ ಎಂದು ವಕೀಲರು ತಿಳಿಸಿದರು. ಮಧ್ಯಾಹ್ನ 2.30ಕ್ಕೆ ವಿಚಾರಣೆ ನಿಗದಿಪಡಿಸಲು ಹೈಕೋರ್ಟ್ ಒಪ್ಪಿಗೆ ನೀಡಿತು.

ಇದನ್ನೂ ಓದಿ: CM Siddaramaiah: ಆ.23ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ; ಕಾನೂನು ಹೋರಾಟಕ್ಕೆ ಹೈ ‌ಕಮಾಂಡ್ ಬೆಂಬಲ ಕೋರಲು ಭೇಟಿ

Continue Reading
Advertisement
murder case
ಚಿಕ್ಕಬಳ್ಳಾಪುರ6 mins ago

Murder case : ಪಿತ್ರಾರ್ಜಿತ ಆಸ್ತಿಗಾಗಿ ತಾರಕಕ್ಕೇರಿದ ಗಲಾಟೆ; ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

BJP-JDS Protest
ಪ್ರಮುಖ ಸುದ್ದಿ11 mins ago

BJP-JDS Protest: ಭಂಡತನ ಬಿಟ್ಟು ರಾಜೀನಾಮೆ ಕೊಡಿ; ಸಿಎಂ ಸಿದ್ದರಾಮಯ್ಯಗೆ ಬಿಜೆಪಿ-ಜೆಡಿಎಸ್‌ ನಾಯಕರ ಆಗ್ರಹ

Chhaava teaser Vicky Kaushal Rashmika M
ಸ್ಯಾಂಡಲ್ ವುಡ್1 hour ago

Chhaava teaser: ‘ಛಾವಾ’ ಟೀಸರ್ ಔಟ್‌; ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರದಲ್ಲಿ ಗರ್ಜಿಸಿದ ವಿಕ್ಕಿ ಕೌಶಲ್!

Road Accident
ಬೆಂಗಳೂರು1 hour ago

Road Accident : ಸರ್ಜಾಪುರದಲ್ಲಿ ಎದೆ ಝುಲ್‌ ಎನ್ನುವ ಡೆಡ್ಲಿ ಆ್ಯಕ್ಸಿಡೆಂಟ್‌; ಬೈಕ್‌ ಸವಾರ ಬದುಕಿದ್ದೆ ಪವಾಡ

Uttarakhand Horror
ದೇಶ1 hour ago

Uttarakhand Horror: ದೇಶವನ್ನೇ ಬೆಚ್ಚಿಬೀಳಿಸೋ ಮತ್ತೊಂದು ಘಟನೆ! ಬಸ್‌ನಲ್ಲೇ ಯುವತಿ ಮೇಲೆ ಡ್ರೈವರ್‌ ಸೇರಿ ಐವರಿಂದ ಗ್ಯಾಂಗ್‌ರೇಪ್‌

muda case congress protest
ಪ್ರಮುಖ ಸುದ್ದಿ2 hours ago

MUDA Case: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ; ರಾಜಭವನ ಮುತ್ತಿಗೆಗೆ ಯತ್ನಿಸಿದ ಕಾರ್ಯಕರ್ತರು

Vettaiyan VS Kanguva Vettaiyan to clash with Suriya's Kanguva
ಕಾಲಿವುಡ್2 hours ago

Vettaiyan VS Kanguva: ರಜನಿಕಾಂತ್ ಹೊಸ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌; ʻಕಂಗುವʼ ಜತೆ ಕ್ಲ್ಯಾಶ್‌!

Viral Video
Latest2 hours ago

Viral Video: ಹೂ ಮಾರಿ ಜೀವನ ಮಾಡುವ ತಾಯಿ ಬಳಿ ಐಫೋನ್‌ಗಾಗಿ ಮಗ ಮಾಡಿದ ಬ್ಲ್ಯಾಕ್‌ಮೇಲ್‌ ಏನು ನೋಡಿ!

Duniya Vijay 20 crore collection till today
ಸ್ಯಾಂಡಲ್ ವುಡ್2 hours ago

Duniya Vijay: 20 ಕೋಟಿ ರೂ. ಕಲೆಕ್ಷನ್‌ ಮಾಡಿ ʻಭೀಮʼ ದಾಖಲೆ ? ಇಲ್ಲಿಯವರೆಗಿನ ಕಲೆಕ್ಷನ್‌ ಎಷ್ಟು?

assault case
ಉಡುಪಿ2 hours ago

Assault Case : ಕುಂದಾಪುರದಲ್ಲಿ ಗಾಂಜಾ ನಶೆಯಲ್ಲಿ ಝಳಪಿಸಿದ ತಲ್ವಾರ್‌; ಇಬ್ಬರು ಗಂಭೀರ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌