Viral News : ಪ್ರಸವಪೂರ್ವ ಹೆರಿಗೆಯಲ್ಲಿ ಭಾರತವೇ ಮೊದಲು! ಶಿಶುಗಳ ಸಾವಿನ ಪ್ರಮಾಣವೂ ಹೆಚ್ಚು - Vistara News

ವೈರಲ್ ನ್ಯೂಸ್

Viral News : ಪ್ರಸವಪೂರ್ವ ಹೆರಿಗೆಯಲ್ಲಿ ಭಾರತವೇ ಮೊದಲು! ಶಿಶುಗಳ ಸಾವಿನ ಪ್ರಮಾಣವೂ ಹೆಚ್ಚು

ವಿಶ್ವದಲ್ಲಿ ಆಗುತ್ತಿರುವ ಪ್ರಸವಪೂರ್ವ ಹೆರಿಗೆಯಲ್ಲಿ ಭಾರತ ಮೊದಲನೇ ಸ್ಥಾನದಲ್ಲಿದೆ. ಈ ಬಗ್ಗೆ ವಿಶ್ವಸಂಸ್ಥೆಯು ವರದಿಯೊಂದನ್ನು ಬಿಟ್ಟಿದೆ. ಈ ವಿಚಾರ ಎಲ್ಲೆಡೆ ಹರಿದಾಡಿದ್ದು, ವೈರಲ್‌ ಆಗುತ್ತಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಶಿಶುಗಳು ತಾಯಿಯ ಗರ್ಭದಲ್ಲಿ 9 ತಿಂಗಳ ಕಾಲ ಸದೃಢವಾಗಿ ಬೆಳೆದು ನಂತರ ಭೂಮಿಗೆ ಬರಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಹಾಗಾಗುತ್ತಿಲ್ಲ. 9 ತಿಂಗಳಿಗೂ ಮೊದಲೇ ಸಾಕಷ್ಟು ಸಂಖ್ಯೆಯ ಶಿಶುಗಳು ತಾಯಿ ಗರ್ಭದಿಂದ ಹೊರ ಬರುತ್ತಿವೆ. ಪೂರ್ತಿ ವಿಶ್ವದಲ್ಲಿ ಪ್ರತಿ ಎರಡು ಸೆಕೆಂಡಿಗೆ ಒಂದು ಮಗು ಅವಧಿಗೂ ಮೊದಲೇ ಹೆರಿಗೆಯಾಗುತ್ತಿದೆ. ಅದರಲ್ಲೂ ಈ ರೀತಿ ಅವಧಿಗೂ ಮೊದಲೇ, ಪ್ರಸವಪೂರ್ವ ಹೆರಿಗೆಯಾಗುವುದರಲ್ಲಿ ನಮ್ಮ ಭಾರತ ದೇಶ ಟಾಪ್‌ 5ರಲ್ಲಿ (Viral News) ಸ್ಥಾನ ಗಿಟ್ಟಿಸಿಕೊಂಡಿದೆ.


ಹೌದು. ಈ ಕುರಿತಾಗಿ ವಿಶ್ವಸಂಸ್ಥೆಯ ವಿಭಾಗವೊಂದು ಸಮೀಕ್ಷೆ ನಡೆಸಿದ್ದು, ಅದರ ವರದಿಯಲ್ಲಿ ಮಂಗಳವಾರ ಪ್ರಕಟಿಸಿದೆ. 2020ರ ದಾಖಲೆಗಳನ್ನು ಆಧರಿಸಿ ಈ ವರದಿ ತಯಾರಿಸಲಾಗಿದ್ದು, ಅದರಲ್ಲಿ ಹೇಳಿರುವ ಪ್ರಕಾರ ಆ ವರ್ಷದಲ್ಲಿ ಅವಧಿಗೂ ಮೊದಲು ಜನನ(37 ವಾರಗಳಿಗೂ ಮೊದಲು) ಪ್ರಕರಣಗಳು ಅತಿ ಹೆಚ್ಚಾಗಿ ದಾಖಲಾಗಿರುವುದು ಭಾರತ, ಪಾಕಿಸ್ತಾನ, ನೈಜೀರಿಯಾ, ಚೀನಾ ಮತ್ತು ಇಥಿಯೋಪಿಯಾ ದೇಶಗಳಲ್ಲಿ. ಒಟ್ಟಾರೆ ಪ್ರಕರಣಗಳ ಶೇ.45 ಪಾಲನ್ನು ಈ ಐದು ರಾಷ್ಟ್ರಗಳೇ ಪಡೆದುಕೊಂಡಿವೆ.

ಇದನ್ನೂ ಓದಿ: Viral Story: ಕೆಟ್ಟ ವಾಸನೆಯ ಸ್ಪ್ರೇಯಿಂದ ಬೇಸ್ತು ಬೀಳಿಸಲು ಹೊರಟ ವಿದ್ಯಾರ್ಥಿಗಳು: ಮಕ್ಕಳು ಆಸ್ಪತ್ರೆ ಪಾಲು!
2020 ಒಂದೇ ವರ್ಷದಲ್ಲಿ ಒಟ್ಟು 13.4 ಮಿಲಿಯನ್‌ (1.34 ಕೋಟಿ) ಶಿಶುಗಳು ಅವಧಿಗೆ ಮೊದಲೇ ಜನಿಸಿವೆ. ಅದರಲ್ಲಿ 10 ಲಕ್ಷಕ್ಕೂ ಅಧಿಕ ಶಿಶುಗಳು ಹುಟ್ಟಿದ ಕೆಲ ಸಮಯ ಅಥವಾ ದಿನಗಳಲ್ಲಿ ಸಾವನ್ನಪ್ಪಿವೆ. ಅಂದರೆ ಅವಧಿಗೂ ಮೊದಲೇ ಹುಟ್ಟಿದ 10 ಶಿಶುಗಳಲ್ಲಿ ಒಂದು ಶಿಶು ಸಾವನ್ನಪ್ಪಿದ ಅರ್ಥ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಆ ವರ್ಷದಲ್ಲಿ ಅವಧಿಗೂ ಮೊದಲೇ ಜನನದ ಪ್ರಕರಣಗಳಲ್ಲಿ ಶೇ. 16.2 ಪಾಲು ಬಾಂಗ್ಲಾದೇಶದ್ದಿದೆ. ಇನ್ನು ಪಾಕಿಸ್ತಾನವು ಶೇ.14.4 ಪಾಲು, ಮಲಾವಿಯು ಶೇ.14.5 ಪಾಲು ಮತ್ತು ಭಾರತ ಹಾಗೂ ದಕ್ಷಿಣ ಆಫ್ರಿಕಾ ತಲಾ ಶೇ. 13 ಪಾಲನ್ನು ಹಂಚಿಕೊಂಡಿವೆ. ಭಾರತದಲ್ಲಿ ಒಟ್ಟು 30.16 ಲಕ್ಷ ಶಿಶುಗಳು, ಪಾಕಿಸ್ತಾನದಲ್ಲಿ 9.14 ಲಕ್ಷ ಶಿಶುಗಳು, ನೈಜೀರಿಯಾದಲ್ಲಿ 7.74 ಲಕ್ಷ ಶಿಶುಗಳು, ಚೀನಾದಲ್ಲಿ 7.52 ಲಕ್ಷ ಶಿಶುಗಳು ಅವಧಿಗೂ ಮೊದಲೇ ಜನಿಸಿವೆ ಎಂದು ವರದಿಯಾಗಿದೆ.

ಈ ಬಗ್ಗೆ ರಾಷ್ಟ್ರೀಯ ನಿಯೋನಾಟಾಲಜಿ ಫೋರಮ್‌ನ ಪ್ರಧಾನ ಕಾರ್ಯದರ್ಶಿಗಳಾಗಿರುವ ಡಾ.ಸುರೇಂದರ್‌ ಸಿಂಗ್‌ ಬಿಶ್ತ್‌ ಪ್ರತಿಕ್ರಿಯಿಸಿದ್ದು, “ಗ್ರಾಮೀಣ ಪ್ರದೇಶಗಳಲ್ಲಿ, ಆರೋಗ್ಯ ರಕ್ಷಣೆಯ ಕೊರತೆಯ ಬಗ್ಗೆ ಸಾಮಾನ್ಯ ದೂರು ಇದೆ. ಈಗಾಗಲೇ ನವಜಾತ ಶಿಶು ಆರೈಕೆ ಘಟಕಗಳು, ಸುಧಾರಿತ ಕಾರ್ಮಿಕ ಕೊಠಡಿಗಳು ಮತ್ತು ಉನ್ನತ ಮಟ್ಟದ ಹೆರಿಗೆ ಕೇಂದ್ರಗಳು ಇವೆ. ಹಾಗೆಯೇ ಅನೇಕ ಉಪಕ್ರಮಗಳು ಪ್ರಸವಪೂರ್ವ ಶಿಶುಗಳನ್ನು ಉಳಿಸಲು ಸಹಾಯ ಮಾಡಿದೆ. ಆದರೆ ಅವು ಇನ್ನೂ ವಿಸ್ತಾರವಾಗಿಲ್ಲ” ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Rahul Gandhi: ನೀಟ್‌ನಲ್ಲಿ ‘ಎಷ್ಟು ವೋಟ್‌’ ಪಡೆದಿರಿ ಎಂದು ವಿದ್ಯಾರ್ಥಿಗಳಿಗೆ ಕೇಳಿದ ರಾಹುಲ್‌ ಗಾಂಧಿ; Video ವೈರಲ್

Rahul Gandhi: ರಾಹುಲ್‌ ಗಾಂಧಿ ಅವರು ಕಾರಿನಲ್ಲಿ ತೆರಳುವಾಗ ಮಾರ್ಗ ಮಧ್ಯೆ ನೀಟ್‌ ಅಭ್ಯರ್ಥಿಗಳ ಜತೆ ಮಾತುಕತೆ ನಡೆಸಿ, ಅವರ ಸಮಸ್ಯೆ, ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಕೇಳಿದ್ದಾರೆ. ಇದೇ ವೇಳೆ, ಪರೀಕ್ಷೆಯಲ್ಲಿ ಎಷ್ಟು ವೋಟ್‌ ಪಡೆದಿದ್ದೀರಿ ಎಂಬುದಾಗಿ ಬಾಯಿತಪ್ಪಿ ಕೇಳಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Rahul Gandhi
Koo

ನವದೆಹಲಿ: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗೆ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET UG 2024) ‌ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (NTA) ಛೀಮಾರಿ ಹಾಕಿದೆ. ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ. ಇದರ ಬೆನ್ನಲ್ಲೇ, ನೀಟ್‌ ಅಭ್ಯರ್ಥಿಗಳಿಗೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಕೇಳಿದ ಪ್ರಶ್ನೆ ಈಗ ಭಾರಿ ವೈರಲ್‌ ಆಗಿದೆ.

ಹೌದು, ರಾಹುಲ್‌ ಗಾಂಧಿ ಅವರು ಕಾರಿನಲ್ಲಿ ತೆರಳುವಾಗ ಮಾರ್ಗ ಮಧ್ಯೆ ನೀಟ್‌ ಅಭ್ಯರ್ಥಿಗಳ ಜತೆ ಮಾತುಕತೆ ನಡೆಸಿ, ಅವರ ಸಮಸ್ಯೆ, ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಕೇಳಿದ್ದಾರೆ. “ನೀಟ್‌ನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗಿದೆಯೇ” ಎಂಬುದಾಗಿ ರಾಹುಲ್‌ ಗಾಂಧಿ ಅವರು ವಿದ್ಯಾರ್ಥಿಗಳಿಗೆ ಕೇಳಿದ್ದಾರೆ. ಇದೇ ವೇಳೆ ವಿದ್ಯಾರ್ಥಿಗಳು ಹೌದು ಎಂದಿದ್ದಾರೆ. ಆಗ, ರಾಹುಲ್‌ ಗಾಂಧಿ ಅವರು, “ಪರೀಕ್ಷೆಯಲ್ಲಿ ಎಷ್ಟು ವೋಟು ಗಳಿಸಿದ್ದೀರಿ” ಎಂಬುದಾಗಿ ಪ್ರಶ್ನಿಸಿದ್ದಾರೆ. ಎಷ್ಟು ಅಂಕ ಪಡೆದಿದ್ದೀರಿ ಎಂಬುದಾಗಿ ಹೇಳುವ ಬದಲು ಅವರು ಎಷ್ಟು ವೋಟು ಗಳಿಸಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್‌ ಆಗುತ್ತಲೇ ಜನ ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗಳಿಸಿದ 240 ಎಂಬುದಾಗಿ ವಿದ್ಯಾರ್ಥಿ ಹೇಳಬೇಕಿತ್ತು” ಎಂದು ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ. “ಚುನಾವಣೆ ಮುಗಿದರೂ ರಾಹುಲ್‌ ಗಾಂಧಿ ಅವರು ಇನ್ನೂ ಅದರಿಂದ ಹೊರಬಂದಿಲ್ಲ” ಎಂಬುದಾಗಿ ಮತ್ತೊಬ್ಬರು ಕಾಲೆಳೆದಿದ್ದಾರೆ. ಹೀಗೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ವಿಡಿಯೊಗೆ ಕಮೆಂಟ್‌ ಮಾಡಿದ್ದಾರೆ.

ಏನಿದು ನೀಟ್‌ ಪ್ರಕರಣ?

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Rahul Gandhi: ಚಮ್ಮಾರನ ಅಂಗಡಿಗೆ ದಿಢೀರ್‌ ಭೇಟಿ ನೀಡಿ, ಚಪ್ಪಲಿ ಹೊಲಿದ ರಾಹುಲ್‌ ಗಾಂಧಿ; Video ಇಲ್ಲಿದೆ

Continue Reading

ವೈರಲ್ ನ್ಯೂಸ್

Viral Video: ಅಪಘಾತವಾದ ಲಾರಿಯಿಂದ ಜ್ಯೂಸ್‌ ಪ್ಯಾಕ್‌ ಎತ್ತಿಕೊಂಡ ಐಫೋನ್‌ಧಾರಿ! ದೊಡ್ಡವರ ಸಣ್ಣತನ ಎಂದ ನೆಟ್ಟಿಗರು

Viral Video: ಸಾಮಾನ್ಯವಾಗಿ ರಸ್ತೆ ಅಪಘಾತವಾದಾಗ ಅಕ್ಕಪಕ್ಕ ಇದ್ದವರು ನೆರವಿಗೆ ಧಾವಿಸುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತ್ ಅಪಘಾತವಾದ ಲಾರಿಯಿಂದ ಜ್ಯೂಸ್‌ ಪ್ಯಾಕ್‌ ಎತ್ತಿಕೊಂಡು ಹೋಗುತ್ತಿದ್ದಾನೆ! ಅಲ್ಲದೆ ಆತ ಕೈಯಲ್ಲಿ ದುಬಾರಿ ಐಫೋನ್‌ ಹಿಡಿದುಕೊಂಡಿದ್ದಾನೆ. ಸದ್ಯ ಆತನ ವರ್ತನೆಗೆ ನೆಟ್ಟಿಗರು ಛೀಮಾರಿ ಹಾಕುತ್ತಿದ್ದಾರೆ. ವೈರಲ್‌ ವಿಡಿಯೊ ನೀವೂ ನೋಡಿ.

VISTARANEWS.COM


on

Viral Video
Koo

ಲಕ್ನೋ: ಐಫೋನ್‌ ಹೊಂದಿದವರು ತಕ್ಕಮಟ್ಟಿನ ಶ್ರೀಮಂತರು ಎನ್ನುವ ಮಾತಿದೆ. ಈ ಫೋನ್‌ಗಳಿಗೆ ದುಬಾರಿ ಬೆಲೆ ಆಗಿರುವ ಕಾರಣ ಹೀಗೆ ಹೇಳಲಾಗುತ್ತದೆ. ಜತೆಗೆ ಐಫೋನ್‌ ಪ್ರತಿಷ್ಠೆಯ ವಿಷಯ ಎಂದೂ ಕೆಲವರು ಭಾವಿಸುತ್ತಾರೆ. ಇದೇ ಕಾರಣಕ್ಕೆ ಐಫೋನ್‌ ಕುರುತಾದ ತಹೇವಾರಿ ಮೀಮ್ಸ್‌, ರೀಲ್ಸ್‌ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತವೆ. ಇದೆಲ್ಲೆ ಫನ್ನಿ ವಿಡಿಯೊ ಬಿಡಿ. ಆದರೆ ಇದೀಗ ವೈರಲ್‌ ಆಗುತ್ತಿರುವ ವಿಡಿಯೊ ನೋಡಿದರೆ ನಿಮ್ಮ ರಕ್ತ ಕುದಿಯುವುದು ಖಚಿತ. ಅಂತಹದ್ದೇನಿದೆ ಈ ವಿಡಿಯೊದಲ್ಲಿ ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ (Viral Video).

ಹೆದ್ದಾರಿಯೊಂದರಲ್ಲಿ ಲಾರಿ ಅಪಘಾತವಾಗಿದ್ದು, ಅದರಿಂದ ಹೊರಬಿದ್ದ ಜ್ಯೂಸ್‌ನ ಬಾಕ್ಸ್‌ ಅನ್ನು ಯುಕನೊಬ್ಬ ಎತ್ತಿಕೊಂಡು ಹೋಗುವ ದೃಶ್ಯ ಇದಾಗಿದೆ. ಅಪಘಾತಗೊಂಡ ಲಾರಿಯಲ್ಲಿದ್ದವರಿಗೆ ನೆರವಾಗುವುದು ಬಿಟ್ಟು ಈತ ಜ್ಯೂಸ್‌ ಎಗರಿಸಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ವಿಡಿಯೊದಲ್ಲಿ ಏನಿದೆ?

ಉತ್ತರಪ್ರದೇಶದ ಗಾಜಿಯಾಬಾದ್‌ನ ಲಾಲ್ ಕುವಾನ್ ಪ್ರದೇಶದಲ್ಲಿ ಸರಕು ಸಾಗಿಸುತ್ತಿದ್ದ ಟ್ರಕ್ ಅಪಘಾತಕ್ಕೀಡಾಗಿತ್ತು. ಇದರಿಂದ ಹೊರ ಚೆಲ್ಲಿದ ತಂಪು ಪಾನೀಯಗಳ ಪ್ಯಾಕ್, ಬಾಕ್ಸ್‌ ರಸ್ತೆಯಲ್ಲಿ ಹರಡಿತ್ತು. ʼಕರ್ಮ್ ಕರೋ ಕಾಂಡ್ ನಹೀಂʼ (ಒಳ್ಳೆಯ ಕಾರ್ಯಗಳನ್ನು ಮಾಡಿ, ಕಿಡಿಗೇಡಿತನವನ್ನು ಮಾಡಬೇಡಿ) ಎಂದು ಬರೆದಿರುವ ಕಪ್ಪು ಟೀ ಶರ್ಟ್ ಧರಿಸಿದ ವ್ಯಕ್ತಿ ಅಪಘಾತ ಸಂಭವಿಸಿದ ಸ್ಥಳದ ಬಳಿ ನಡೆದುಕೊಂಡು ಬರುತ್ತಾನೆ. ಅವನು ಟ್ರಕ್‌ನಲ್ಲಿದ್ದವರಿಗೆ ನೆರವಾಗಲು ಬರುತ್ತಿದ್ದಾನೆ ಎಂದುಕೊಂಡರೆ ಅದು ತಪ್ಪು. ಅವನು ಫೋನಿನಲ್ಲಿ ಮಾತನಾಡುತ್ತ ರಸ್ತೆಯಲ್ಲಿ ಬಿದ್ದಿರುವ ತಂಪು ಪಾನೀಯದ ಪ್ಯಾಕ್‌ ಎತ್ತಿ ಏನೂ ನಡೆದೇ ಇಲ್ಲವೆನ್ನುವಂತೆ ತನ್ನ ಪಾಡಿಗೆ ತಾನು ಹೊರಟು ಹೋಗುತ್ತಾನೆ. ವಿಶೇಷ ಎಂದರೆ ಆತನ ಕೈಯಲ್ಲಿರುವುದು ದುಬಾರಿ ಐಫೋನ್‌ ಎನ್ನುವುದು ವಿಡಿಯೊದಲ್ಲಿ ಸ್ಪಷ್ಟವಾಗಿ ಕಾಣಿಸುತ್ತದೆ. ಒಟ್ಟಿನಲ್ಲಿ ಆತನ ಟೀಷರ್ಟ್‌ನ ಸಂದೇಶಕ್ಕೂ, ಕೈಯಲ್ಲಿರುವ ಐಫೋನ್‌ಗೂ ಆತನ ವರ್ತನೆಗೂ ಅಜಗಜಾಂತರ ವ್ಯತ್ಯಾಸ ಕಂಡು ಬಂದಿದೆ.

“ಬ್ರೋ, ತಂಪು ಪಾನೀಯವನ್ನು ಏಕೆ ಕದಿಯುತ್ತಿದ್ದೀಯಾ? ಅಪಘಾತ ಸಂಭವಿಸಿದೆ. ಕನಿಷ್ಠ ಅಪಘಾತ ಸ್ಥಳದಿಂದಾದರೂ ಕದಿಯಬೇಡ” ಎಂದು ವ್ಯಕ್ತಿಯೊಬ್ಬರು ಹೇಳುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಅದಾಗ್ಯೂ ಐಫೋನ್‌ಧಾರಿ ತನಗೂ ಇದಕ್ಕೂ ಸಂಬಂಧವೇ ಇಲ್ಲ ಎನ್ನುವಂತೆ ತಂಪು ಪಾನೀಯ ಪ್ಯಾಕ್‌ನೊಂದಿಗೆ ಹೊರಟು ಹೋಗುತ್ತಾನೆ.

ಇದನ್ನೂ ಓದಿ: Rahul Gandhi: ಚಮ್ಮಾರನ ಅಂಗಡಿಗೆ ದಿಢೀರ್‌ ಭೇಟಿ ನೀಡಿ, ಚಪ್ಪಲಿ ಹೊಲಿದ ರಾಹುಲ್‌ ಗಾಂಧಿ; Video ಇಲ್ಲಿದೆ

ನೆಟ್ಟಿಗರಿಂದ ಟೀಕೆ

ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಆ ವ್ಯಕ್ತಿಯ ವರ್ತನೆಗೆ ನೆಟ್ಟಿಗರು ಛೀಮಾರಿ ಹಾಕುತ್ತಿದ್ದಾರೆ. ʼʼಆತನ ನಿಜವಾದ ಸ್ವಭಾವ ಹೊರ ಬಂದಿದೆʼʼ ಎಂದು ಒಬ್ಬರು ಅಸಮಾಧಾನ ತೋಡಿಕೊಂಡಿದ್ದಾರೆ. ʼʼಇಂತಹ ವ್ಯಕ್ತಿಗಳಿಂದ ಇನ್ನೇನನ್ನು ನಿರೀಕ್ಷಿಸಲು ಸಾಧ್ಯ?ʼʼ ಎಂದು ಇನ್ನೊಬ್ಬರು ಹತಾಶೆ ವ್ಯಕ್ತಪಡಿಸಿದ್ದಾರೆ. ʼʼತೀರ ಬಡವʼʼ ಎಂದು ಮತ್ತೊಬ್ಬರು ವ್ಯಂಗ್ಯವಾಡಿದ್ದಾರೆ. ʼʼಇಎಂಐ ಪಾವತಿಸಿ ಐಫೋನ್‌ ಖರೀದಿಸಿರಬೇಕುʼʼ ಎಂದು ಮಗದೊಬ್ಬರು ತಿಳಿಸಿದ್ದಾರೆ. ಮಾನವೀಯತೆ ಮರೆಯಾಗುತ್ತಿದೆ ಎನ್ನುವುದಕ್ಕೆ ಇದು ಸ್ಪಷ್ಟ ಉದಾಹರಣೆ ಎಂದು ಹಲವರು ಕಮೆಂಟ್‌ ಮಾಡಿದ್ದಾರೆ. ಕೆಲವರಂತೂ ಈತನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಗಾಜಿಯಾಬಾದ್‌ ಪೊಲೀಸರನ್ನು ಒತ್ತಾಯಿಸಿದ್ದಾರೆ. ಒಟ್ಟಿನಲ್ಲಿ ಆತನ ವರ್ತನೆ ಸಾಕಷ್ಟು ಟೀಕೆಗೆ ಗುರಿಯಾಗಿದೆ.

Continue Reading

ಪ್ರಮುಖ ಸುದ್ದಿ

Viral News: ಜೈಲಿಂದ ಹೊರಬಂದ ಖುಷಿಗೆ ರೌಡಿಯ ಬೃಹತ್ ಮೆರವಣಿಗೆ; ಮತ್ತೆ ಜೈಲಿಗೇ ಕಳುಹಿಸಿದ ಪೊಲೀಸರು!

Viral News ಮಹಾರಾಷ್ಟ್ರ ಅಪಾಯಕಾರಿ ಚಟುವಟಿಕೆಗಳ ತಡೆ (ಎಂಪಿಡಿಎ) ಕಾಯ್ದೆಯಡಿ ಶಿಕ್ಷೆ ಅನುಭವಿಸುತ್ತಿದ್ದ ನಾಸಿಕ್‌ನ ಕುಖ್ಯಾತ ರೌಡಿ ಹರ್ಷದ್ ಪಟಾಂಕರ್ ಜುಲೈ 23 ರಂದು ಜೈಲಿನಿಂದ ಬಿಡುಗಡೆಯಾಗಿದ್ದ. ಜೈಲಿನಿಂದ ಬಿಡುಗಡೆಯಾದ ಹರ್ಷದ್ ಪಟಾಂಕರ್ ಅನ್ನು ಸ್ವಾಗತಿಸಲು ಆತನ ಬೆಂಬಲಿಗರು ಬೃಹತ್ ರ‍್ಯಾಲಿಯನ್ನು ಆಯೋಜಿಸಿದ್ದರು. ಇದರ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಈ ರ‍್ಯಾಲಿ ನಡೆಸಿ ಮತ್ತೆ ಆತ ಜೈಲು ಪಾಲಾಗಿದ್ದಾನೆ ಎನ್ನಲಾಗಿದೆ.

VISTARANEWS.COM


on

Viral News
Koo

ಮಹಾರಾಷ್ಟ್ರ : ಮದುವೆ, ದೇವಸ್ಥಾನದ ಪ್ರತಿಷ್ಠಾಪನೆ ಸಮಾರಂಭದ ವೇಳೆ ಬೃಹತ್ ಮೆರವಣಿಗೆಯನ್ನು ಮಾಡಲಾಗುತ್ತದೆ. ಆದರೆ ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾದ ಮಹಾರಾಷ್ಟ್ರದ ಕುಖ್ಯಾತ ರೌಡಿನೊಬ್ಬನನ್ನು ಸ್ವಾಗತಿಸಲು ಆತನ ಬೆಂಬಲಿಗರು ಬೃಹತ್‌ ರ‍್ಯಾಲಿಯನ್ನು  ಆಯೋಜಿಸಿದ್ದರು. ಇದರ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral News) ಆಗಿದೆ. ಆದರೆ ಈ ರ‍್ಯಾಲಿ ನಡೆಸಿ ಮತ್ತೆ ಆತ ಜೈಲು ಪಾಲಾಗಿದ್ದಾನೆ ಎನ್ನಲಾಗಿದೆ.

ಮಹಾರಾಷ್ಟ್ರ ಅಪಾಯಕಾರಿ ಚಟುವಟಿಕೆಗಳ ತಡೆ (ಎಂಪಿಡಿಎ) ಕಾಯ್ದೆಯಡಿ ಶಿಕ್ಷೆ ಅನುಭವಿಸುತ್ತಿದ್ದ ನಾಸಿಕ್‌ನ ಕುಖ್ಯಾತ ರೌಡಿ ಹರ್ಷದ್ ಪಟಾಂಕರ್ ಜುಲೈ 23 ರಂದು ಜೈಲಿನಿಂದ ಬಿಡುಗಡೆಯಾಗಿದ್ದ. ಹಾಗಾಗಿ ಆ ದಿನ ಮಧ್ಯಾಹ್ನ 3:30 ಕ್ಕೆ ಸುಮಾರು 15 ದ್ವಿಚಕ್ರ ವಾಹನಗಳೊಂದಿಗೆ ಬೃಹತ್ ಮೆರವಣಿಗೆ ನಡೆಸಲಾಗಿದೆ. ಈ ಮೆರವಣಿಗೆ ಬೆತೆಲ್ ನಗರದಿಂದ ಪ್ರಾರಂಭವಾಗಿ ಅಂಬೇಡ್ಕರ್ ಚೌಕ್, ಸಾಧು ವಾಸ್ವಾನಿ ರಸ್ತೆ ಮತ್ತು ಶರಣಪುರ ರಸ್ತೆ ಮೂಲಕ ಸಾಗಿದೆ. ಕಾರಿನ ಸನ್ ರೂಫ್‌ನಿಂದ ಕೈ ಬೀಸುತ್ತಿದ್ದ ಪಟಾಂಕರ್ ಅವರೊಂದಿಗೆ ಅವರ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಘೋಷಣೆಗಳನ್ನು ಕೂಗುತ್ತಿದ್ದರು.

ವರದಿ ಪ್ರಕಾರ, ಪಟಾಂಕರ್ ಮಾತ್ರವಲ್ಲದೆ ಅವರ ಏಳು ಸಹಚರರ ವಿರುದ್ಧವೂ ಸರ್ಕಾರ್ವಾಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪಟಾಂಕರ್ ಅವರನ್ನು ಈ ಹಿಂದೆ ಕೊಲೆ ಯತ್ನ, ಕಳ್ಳತನ ಮತ್ತು ಹಿಂಸಾಚಾರ ಸೇರಿದಂತೆ ಹಲವಾರು ಅಪರಾಧಗಳಿಗಾಗಿ ಬಂಧಿಸಲಾಗಿತ್ತು ಮತ್ತು ಜೈಲಿಗೆ ಹಾಕಲಾಗಿತ್ತು.

ಇದನ್ನೂ ಓದಿ: 34 ಲಕ್ಷ ರೂ.ಗೆ ಮಾರಾಟವಾಯಿತು ʼರಾಮ ಜನ್ಮಭೂಮಿʼ ಸ್ಪೆಷಲ್‌ ವಾಚ್!

ಒಂದು ವರ್ಷದ ಹಿಂದೆ ಎಂಪಿಡಿಎ ಕಾಯ್ದೆಯಡಿ ಅವರನ್ನು ಬಂಧಿಸಲಾಗಿತ್ತು. ಆದಾಗ್ಯೂ, ಸಂಭ್ರಮಾಚರಣೆಯ ರ‍್ಯಾಲಿಯಿಂದಾಗಿ ಪೊಲೀಸ್ ಕ್ರಮಕೈಗೊಂಡು ಈಗ ಅವರನ್ನು ಮತ್ತೆ ಜೈಲಿಗೆ ತಳ್ಳಿದೆ ಎನ್ನಲಾಗಿದೆ. ಅವರ ಆರು ಸಹಚರರನ್ನು ಗೋಪಾಲ್ ನಾಗೋರ್ಕರ್, ವೇದಾಂತ್ ಚಾಲ್ಡೆ, ಶಾನ್ ಮೈಕೆಲ್, ಜಾಯ್ ಮೈಕೆಲ್, ರಾಬಿನ್ಸನ್ ಬ್ಯಾಟಿಸ್, ವೈಭವ್ ಖಂಡ್ರೆ ಮತ್ತು ವಿಕಾಸ್ ನೇಪಾಳಿ ಎಂದು ಗುರುತಿಸಲಾಗಿದೆ.

Continue Reading

Latest

Viral Video: ಕೈದಿಗೆ ಕೈಕೋಳ ಹಾಕಿ ತಾಜ್ ಮಹಲ್‌ ತೋರಿಸಲು ಹೋಗಿದ್ದ ಪೊಲೀಸರು! ವಿಡಿಯೊ ನೋಡಿ

Viral Video: ಇತ್ತೀಚೆಗೆ ಕೈಕೋಳ ಧರಿಸಿದ ಕೈದಿಯೊಬ್ಬನನ್ನು ಪೊಲೀಸ್ ಅಧಿಕಾರಿಯೊಬ್ಬರು ತಾಜ್ ಮಹಲ್‌ಗೆ ಕರೆದೊಯ್ಯುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕೈಕೋಳ ತೊಡಿಸಿದ್ದರಿಂದ ಕೈದಿಗೆ ತಾಜ್ ಮಹಲ್ ಒಳಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಭಾರತೀಯ ಪುರಾತತ್ವ ಸಮೀಕ್ಷೆ (ಎಎಸ್ಐ) ತಿಳಿಸಿದೆ. ಈ ಘಟನೆ ಈಗ ರಾಜಸ್ಥಾನದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

VISTARANEWS.COM


on

Viral Video
Koo


ಆಗ್ರಾ: ಕೈಗೆ ಬೇಡಿ ಹಾಕಿದ ಎಂದ ಮೇಲೆ ಅವರು ಕೈದಿಯಾಗಿರುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುತ್ತದೆ. ಕೈದಿ ಜೈಲಿನಲ್ಲಿರಬೇಕು. ಅವರನ್ನು ಮನಬಂದಂತೆ ಹೊರಗಡೆ ಬಿಡುವ ಹಾಗಿಲ್ಲ. ಅದರಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ಕೈದಿಗಳನ್ನು ಕರೆದುಕೊಂಡು ಬರುವಂತಿಲ್ಲ. ಆದರೆ ಇತ್ತೀಚೆಗೆ ಕೈಕೋಳ ಧರಿಸಿದ ಕೈದಿಯೊಬ್ಬನನ್ನು ಪೊಲೀಸ್ ಅಧಿಕಾರಿಯೊಬ್ಬರು ತಾಜ್ ಮಹಲ್‍ಗೆ ಕರೆದೊಯ್ಯುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಕೈಕೋಳ ತೊಡಿಸಿದ್ದರಿಂದ ಕೈದಿಗೆ ತಾಜ್ ಮಹಲ್ ಒಳಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಭಾರತೀಯ ಪುರಾತತ್ವ ಸಮೀಕ್ಷೆ (ಎಎಸ್ಐ) ತಿಳಿಸಿದೆ. ತಾಜ್ ಮಹಲ್‌ ಬಳಿ ರಕ್ಷಣೆಗೆ ನಿಯೋಜಿಸಲಾಗಿರುವ ಸಹಾಯಕ ಪೊಲೀಸ್ ಆಯುಕ್ತ ಸೈಯದ್ ಆರೀಬ್ ಅಹ್ಮದ್ ಅವರು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಈ ವಿಡಿಯೊ ಹಳೆಯದು ಎಂದು ತಿಳಿಸಿದ್ದಾರೆ. ಅಲ್ಲದೇ ಕೈದಿಯ ಜೊತೆಗಿದ್ದ ಪೊಲೀಸ್ ಅಧಿಕಾರಿಯನ್ನು ಹಿಮಾಚಲ ಪ್ರದೇಶದ ಪೊಲೀಸ್ ಇಲಾಖೆಯಲ್ಲಿ ನಿಯೋಜಿಸಲಾಗಿತ್ತು ಎಂದು ಹೇಳಿದ್ದಾರೆ. ಈ ವಿಷಯದ ಬಗ್ಗೆ ಹಿಮಾಚಲ ಪ್ರದೇಶ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಮತ್ತು ಈ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ತಾಜ್ ಮಹಲ್‍ನಿಂದ 500 ಮೀಟರ್ ದೂರದಲ್ಲಿ ಬಿಳಿ ಪೊಲೀಸ್ ಜೀಪ್ ನಿಲ್ಲಿಸಲಾಗಿತ್ತು ಮತ್ತು ಅಲ್ಲಿ ರಕ್ಷಣೆಗೆ ನಿಯೋಜಿಸಲಾದ ಸ್ಥಳೀಯ ಪೊಲೀಸರು ಹಿಮಾಚಲ ಪ್ರದೇಶದ ಅಧಿಕಾರಿಗಳಿಗೆ ತಮ್ಮ ಶಸ್ತ್ರಾಸ್ತ್ರಗಳನ್ನು ಅಲ್ಲಿಯೇ ಬಿಡುವಂತೆ ಕೇಳಿಕೊಂಡರು. ಇದರ ನಂತರ, ಒಬ್ಬ ಅಧಿಕಾರಿ ಕೈದಿಯೊಂದಿಗೆ ಪ್ರವೇಶಿಸಲು ಪ್ರಯತ್ನಿಸಿದರು. ಆದರೆ ಎಎಸ್ಐ ಸಿಬ್ಬಂದಿ ಅವರನ್ನು ತಡೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: 34 ಲಕ್ಷ ರೂ.ಗೆ ಮಾರಾಟವಾಯಿತು ʼರಾಮ ಜನ್ಮಭೂಮಿʼ ಸ್ಪೆಷಲ್‌ ವಾಚ್!

ಸ್ಥಳೀಯರು ಈ ಘಟನೆಯನ್ನು ವಿಡಿಯೊದಲ್ಲಿ ಸೆರೆಹಿಡಿದಿದ್ದು, ಇದರಲ್ಲಿ ಕೈಕೋಳ ಧರಿಸಿದ ಕೈದಿ ಮತ್ತು ಅವರ ಬೆಂಗಾವಲಿಗೆ ಇದ್ದ ಅಧಿಕಾರಿಯನ್ನು ತೋರಿಸಿದ್ದಾರೆ. ಅಲ್ಲದೇ ವಿಡಿಯೊ ತೆಗೆಯದಂತೆ ಅಧಿಕಾರಿಗಳು ಆಕ್ಷೇಪ ಮಾಡುತ್ತಿರುವುದನ್ನು ವಿಡಿಯೊದಲ್ಲಿ ತೋರಿಸಲಾಗಿದೆ.

Continue Reading
Advertisement
Delhi Floods
ಪ್ರಮುಖ ಸುದ್ದಿ4 hours ago

Delhi Floods: ದೆಹಲಿಯಲ್ಲಿ ಭಾರಿ ಮಳೆ; ಕೋಚಿಂಗ್‌ ಸೆಂಟರ್‌ಗೆ ನೀರು ನುಗ್ಗಿ ಇಬ್ಬರು ವಿದ್ಯಾರ್ಥಿನಿಯರ ಸಾವು!

Paris Olympics 2024
ಕ್ರೀಡೆ4 hours ago

Paris Olympics 2024 : ಭಾರತಕ್ಕೆ ಒಲಿಂಪಿಕ್ ಕ್ರೀಡಾಕೂಟ ತರುವ ದಿನ ದೂರವಿಲ್ಲ; ಇಂಡಿಯಾ ಹೌಸ್ ಉದ್ಘಾಟನೆಯಲ್ಲಿ ನೀತಾ ಅಂಬಾನಿ

Pervez Musharraf
ದೇಶ4 hours ago

Pervez Musharraf: ಭಾರತ ವಿರೋಧಿ ಪರ್ವೇಜ್‌ ಮುಷರ‍್ರಫ್‌ಗೆ ಕೇರಳ ಬ್ಯಾಂಕ್‌ ಗೌರವ; ಭುಗಿಲೆದ್ದ ವಿವಾದ

Paris Olympics 2024
ಪ್ರಮುಖ ಸುದ್ದಿ4 hours ago

Paris Olympics 2024 : ಷಟ್ಲರ್​ಗಳ ಪರಾಕ್ರಮ ಆರಂಭ; ಸಿಂಗಲ್ಸ್​ನಲ್ಲಿ ಲಕ್ಷ್ಯ ಸೇನ್​, ಡಬಲ್ಸ್​ನಲ್ಲಿ ಸಾತ್ವಿಕ್​- ಚಿರಾಗ್ ಜೋಡಿಗೆ ಗೆಲುವು

Paris Olympics 2024
ಪ್ರಮುಖ ಸುದ್ದಿ5 hours ago

Paris Olympics 2024 : ಭಾರತ ಹಾಕಿ ತಂಡದ ಶುಭಾರಂಭ; ನ್ಯೂಜಿಲ್ಯಾಂಡ್ ವಿರುದ್ಧ 3-2 ಗೋಲ್​ಗಳ ಗೆಲುವು

Tihar Jail
ದೇಶ5 hours ago

Tihar Jail: ತಿಹಾರ ಜೈಲಿನ 125 ಕೈದಿಗಳಿಗೆ ಎಚ್‌ಐವಿ ಪಾಸಿಟಿವ್‌; ಇವರು ‘ಬೇಲಿ’ ಹಾರಿದ್ದು ಎಲ್ಲಿ?

IND vs SL
ಪ್ರಮುಖ ಸುದ್ದಿ5 hours ago

IND vs SL : ಶ್ರೀಲಂಕಾ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತಕ್ಕೆ 43 ರನ್​ ಭರ್ಜರಿ ಜಯ

Rishabh Pant
ಪ್ರಮುಖ ಸುದ್ದಿ6 hours ago

Rishabh Pant : ಧೋನಿಯಂತೆ ಭರ್ಜರಿ ಹೆಲಿಕಾಪ್ಟರ್​ ಶಾಟ್​​ ಮೂಲಕ ಸಿಕ್ಸರ್ ಬಾರಿಸಿದ ರಿಷಭ್ ಪಂತ್​

Puneeth Kerehalli
ಕರ್ನಾಟಕ6 hours ago

Puneeth Kerehalli: ಪುನೀತ್‌ ಕೆರೆಹಳ್ಳಿಗೆ ನ್ಯಾಯಾಂಗ ಬಂಧನ; 14 ದಿನ ಪರಪ್ಪನ ಅಗ್ರಹಾರವೇ ಗತಿ!

Mumbai Girl
ದೇಶ6 hours ago

ಬಾರೆ ಸಖಿ ಎಂದು 20 ವರ್ಷದ ಯುವತಿಯನ್ನು ಕರೆದುಕೊಂಡು ಹೋದ, ಕೊಂದು ಪೊದೆಯಲ್ಲಿ ಬಿಸಾಡಿದ; ಕೃತ್ಯಕ್ಕೆ ಕಾರಣವೇನು?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ9 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ14 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ15 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 days ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್3 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ3 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌