karnataka-election: Laticharge on voters who asked for water in Madapura Karnataka Election : ಉರಿಬಿಸಿಲಲ್ಲಿ ಬಸವಳಿದ ಮತದಾರರು; ನೀರು ಕೇಳಿದ್ದಕ್ಕೆ ಲಾಠಿಚಾರ್ಜ್‌ - Vistara News

ಕರ್ನಾಟಕ

Karnataka Election : ಉರಿಬಿಸಿಲಲ್ಲಿ ಬಸವಳಿದ ಮತದಾರರು; ನೀರು ಕೇಳಿದ್ದಕ್ಕೆ ಲಾಠಿಚಾರ್ಜ್‌

Attack on voters :ಕೊಡಗು ಜಿಲ್ಲೆಯ ಮಾದಾಪುರದಲ್ಲಿ ಬಿಸಿಲಿನಿಂದ ಬೆಂದ ಮತದಾರರು ನೀರು ಕೇಳಿದರೆ ಮಿಲಿಟರಿ ರಕ್ಷಣಾ ಸಿಬ್ಬಂದಿ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಇದರಿಂದ ಜನರು ಮತ ಬಹಿಷ್ಕಾರ ಮಾಡಿದ್ದಾರೆ.

VISTARANEWS.COM


on

karnataka-election: Laticharge on voters who asked for water in Madapura
ಕೊಡಗಿನ ಮಾದಾಪುರದಲ್ಲಿ ನೀರು ಕೇಳಿದ ಮತದಾರರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ ಆರೋಪ ಎದುರಾಗಿದೆ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಡಗು: ಚುನಾವಣಾ ಆಯೋಗ (Election Commission) ಮತದಾನಕ್ಕೆ (Karnataka Election 2023) ಸಾಕಷ್ಟು ಸಿದ್ಧತೆಗಳನ್ನು ಮಾಡಿ, ವ್ಯವಸ್ಥೆಗಳನ್ನು ಮಾಡಿದ್ದರೂ ಬಿಸಿಲಿಗೆ ಯಾವುದೇ ರಕ್ಷಣಾತ್ಮಕ ವ್ಯವಸ್ಥೆ ಇಲ್ಲದೆ ಹಲವೆಡೆ ಸಮಸ್ಯೆ ಆಯಿತು. ಇದು ಮಾದಾಪುರದಲ್ಲಂತೂ ಲಾಠಿ ಚಾರ್ಜ್‌ಗೇ ಕಾರಣವಾಯಿತು. ಬಿಸಿಲಿಗೆ ಬಸವಳಿದ ಮತದಾರರು ನೀರು ಕೇಳಿದ್ದಕ್ಕೆ ಲಾಠಿ ಚಾರ್ಜ್‌ ಮಾಡಲಾಯಿತು.

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಮಾದಾಪುರ (Madapura booth) ಸರ್ಕಾರಿ ಶಾಲೆಯ ಮತಗಟ್ಟೆ ಸಂಖ್ಯೆ 119ರಲ್ಲಿ ಶಾಂತವಾಗಿಯೇ ಮತದಾನ ನಡೆಯುತ್ತಿತ್ತು. ಸರ್ಕಾರಿ ಶಾಲೆಯಲ್ಲಿ ತೆರೆದಿರುವ ಎರಡು ಮತಗಟ್ಟೆಗಳ ಪೈಕಿ ಒಂದರಲ್ಲಿ ದೊಡ್ಡ ಮಟ್ಟದ ಕ್ಯೂ ಇತ್ತು. ಜನರು ಸರತಿ ಸಾಲಿನಲ್ಲಿ ಬಿಸಿಲಿನಲ್ಲಿ ನಿಂತು ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಉರಿ ಬಿಸಿಲಿನಲ್ಲಿ ನಿಂತು ಬಾಯಾರಿದ ಜನ ನೀರು ಕೊಡುವಂತೆ ಕೇಳಿದ್ದಾರೆ. ನೀರು ಕೊಡದೆ ಇದ್ದಾಗ ಸ್ವಲ್ಪ ಜೋರಾದ ಧ್ವನಿಯಲ್ಲಿ ಕೂಗಾಡಿದ್ದಾರೆ. ಆಗ ಭದ್ರತಾ ಸಿಬ್ಬಂದಿ ಆಗಮಿಸಿದ್ದು, ಅವರ ಜತೆ ವಾಗ್ವಾದ ಆರಂಭಗೊಂಡಿದೆ.

ಈ ವಾಗ್ವಾದ ತೀವ್ರ ಸ್ವರೂಪವನ್ನು ಪಡೆದುಕೊಂಡು ಮಿಲಿಟರಿ ಸಿಬ್ಬಂದಿ ಮತದಾರರ ಮೇಲೆ ಲಾಠಿಚಾರ್ಜ್‌ ನಡೆಸಿದ್ದಾರೆ. ಇದರಿಂದ ಆಕ್ರೋಶಿತರಾದ ಜನರು ಮಿಲಿಟರಿ ಸಿಬ್ಬಂದಿಗಳ ಮೇಲೆ ಸಿಟ್ಟಾಗಿದ್ದಾರೆ, ಅವರ ವಿರುದ್ಧ ಧಿಕ್ಕಾರ ಕೂಗಿದ್ದಲ್ಲದೆ, ಮತದಾನವನ್ನೇ ಬಹಿಷ್ಕಾರ ಮಾಡಲು ಮುಂದಾಗಿದ್ದಾರೆ.

ತುಮಕೂರಿನಲ್ಲಿ ಪೊಲೀಸ್‌ ಪೇದೆ ಮೇಲೆ ಗ್ರಾಮಸ್ಥರಿಂದ ಹಲ್ಲೆ

ತುಮಕೂರು: ಮಧುಗಿರಿ ತಾಲೂಕಿನ ಎಚ್ ಬಸವನಹಳ್ಳಿ ಮತಗಟ್ಟೆ ಬಳಿ ಕೆಲವು ಮತದಾರರು ಪೊಲೀಸ್‌ ಸಿಬ್ಬಂದಿ ಮೇಲೆಯೇ ಹಲ್ಲೆ ಮಾಡಿದ್ದಾರೆ.

ಮತಗಟ್ಟೆ ಬಳಿ ಪ್ರಚಾರ ಮಾಡದಂತೆ ಸೂಚಿಸಿದ್ದಕ್ಕೆ ಪೊಲೀಸ್‌ ಸಿಬ್ಬಂದಿ ಮೇಲೆಯೇ ಹಲ್ಲೆ

ಕೆಲವು ಕಾರ್ಯಕರ್ತರು ಮತಗಟ್ಟೆ ಬಳಿ ಬಂದು ಪ್ರಚಾರ ಮಾಡುತಿದ್ದುದನ್ನು ಕಂಡ ಪೊಲೀಸ್‌ ಸಿಬ್ಬಂದಿ ಅವರನ್ನು ದೂರ ಹೋಗುವಂತೆ ತಿಳಿಸಿದ್ದಾರೆ. ಪೊಲೀಸ್ ಪೇದೆ ಮಾತಿಗೆ ಪ್ರತಿರೋಧ ಒಡ್ಡಿದ ಕಾರ್ಯಕರ್ತರು ದೂರ ಹೋಗುವುದಿಲ್ಲ ಎಂದರು. ಈ ವೇಳೆ ಮಾತಿನ ಚಕಮಕಿ ನಡೆದು ಸಿಬ್ಬಂದಿ ಮೇಲೆ ಹಲ್ಲೆ ಮಾಡಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ವೆಂಕಟೇಶ್ ನಾಯ್ಡು ಭೇಟಿ ನೀಡಿದ್ದಾರೆ. ಹಲ್ಲೆಕೋರರ ಮೇಲೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : Karnataka Election 2023: ಮತಯಂತ್ರಗಳನ್ನು ಒಡೆದು ಹಾಕಿ, ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಗ್ರಾಮಸ್ಥರು! ಕಾರಣವೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Chetan Ahimsa: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಟ ಚೇತನ್ ಆಗ್ರಹ; ಆ.28ಕ್ಕೆ ಕಾಂಗ್ರೆಸ್ ಹಠಾವೋ, ದಲಿತ ಬಚಾವೋ ಹೋರಾಟ

Actor Chetan Ahimsa: ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣವನ್ನು ದುರ್ಬಳಕೆ ಮಾಡಿಕೊಂಡು ದಲಿತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಆದಿವಾಸಿ ವಿರೋಧಿ, ದಲಿತ ವಿರೋಧಿ ಧೋರಣೆ ಗಟ್ಟಿಗೊಳಿಸುತ್ತಿರುವ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ನಟ ಚೇತನ್ ಒತ್ತಾಯಿಸಿದ್ದಾರೆ.

VISTARANEWS.COM


on

Actor Chetan Ahimsa
Koo

ಚಿಕ್ಕಬಳ್ಳಾಪುರ: ದಲಿತರು, ಶೋಷಿತರಿಗೆ ನ್ಯಾಯ ಒದಗಿಸುತ್ತೇವೆ ಎಂದು ಬಣ್ಣದ ಬಣ್ಣದ ಮಾತುಗಳನ್ನಾಡುತ್ತಾರೆ. ನಾನು ಬಸವ ಅನುಯಾಯಿ, ಅಂಬೇಡ್ಕರ್ ವಾದಿ ಎನ್ನುತ್ತಾರೆ. ಸಿದ್ದರಾಮಯ್ಯ ಟೋಕನಿಸಂ ರೀತಿ ಸಾಂಕೇತಿಕವಾಗಿ ಮಾತನಾಡುತ್ತಾರೆ. ಆದರೆ ಅಂಬೇಡ್ಕರ್, ಬಸವಣ್ಣನವರ ತತ್ವದ ವಿರುದ್ಧವಾಗಿದ್ದಾರೆ. ಮಾಡಬೇಕಾದುದನ್ನೆಲ್ಲ ಮಾಡುತ್ತಿಲ್ಲ, ಮಾಡಬಾರದ್ದನ್ನು ಮಾಡುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಲಿ ಎಂದು ನಟ ಚೇತನ್ ಅಹಿಂಸಾ (Actor Chetan Ahimsa) ಆಗ್ರಹಿಸಿದ್ದಾರೆ.

ಕರ್ನಾಟಕ ಅಹಿಂದ ಸಂಘಟನೆಯ ಒಕ್ಕೂಟದಿಂದ ನಗರದ ಪತ್ರಕರ್ತರ ಭವನದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತ ಹಾಗೂ ಆದಿವಾಸಿಗಳ 25 ಸಾವಿರ ಕೋಟಿ ಹಣಕ್ಕೆ ತೇಪೆ ಹಚ್ಚುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣವನ್ನು ದುರ್ಬಳಕೆ ಮಾಡಿಕೊಂಡು ದಲಿತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇನ್ನು ಆದಿವಾಸಿ ವಿರೋಧಿ, ದಲಿತ ವಿರೋಧಿ ಧೋರಣೆ ಗಟ್ಟಿಗೊಳಿಸುತ್ತಿದ್ದಾರೆ. ಹೀಗಾಗಿ ರಾಜೀನಾಮೆ ಕೊಡಲಿ ಎಂದು ಒತ್ತಾಯಿಸಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಇದೇ ವಿಚಾರದಲ್ಲಿ ಖಂಡಿಸಿದ್ದೇನೆ, ಜೈಲಿಗೂ ಹೋಗಿಬಂದಿದ್ದೇನೆ. ಬಿಜೆಪಿಯ ಕೋಮುವಾದವನ್ನ ನಾವು ಒಪ್ಪಲ್ಲ. ಅಸಮಾನತೆ ತೋರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎಲ್ಲ ಪಕ್ಷಗಳನ್ನು ವಿರೋಧಿಸುತ್ತೇನೆ. ಯಾರು ಉತ್ತಮ ಆಡಳಿತ ಕೊಡುತ್ತಾರೋ ಅವರಿಗೆ ಬೆಂಬಲ ಕೊಡುತ್ತೇನೆ. ನಟ ಚೇತನ್ ಹೇಳಿಕೆ..

ಇದನ್ನೂ ಓದಿ | CLP Meeting: ಆ.22ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಬೇರೆಯವರಿಗೆ ಅವಕಾಶ ನೀಡಲಿ

ಸಿಎಂ ಸಿದ್ದರಾಮಯ್ಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಚೇತನ್‌ ಅಹಿಂಸಾ ಅವರು, ಕಳೆದ ಒಂದು ವರ್ಷದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ ಜನರನ್ನು ವಿಫಲಗೊಳಿಸಿದ್ದಾರೆ.
ಬಡವರು, ದಲಿತರು, ಆದಿವಾಸಿಗಳು, ರೈತರು, ಕನ್ನಡ ಹಕ್ಕುಗಳು, ಭ್ರಷ್ಟಾಚಾರ ವಿರೋಧಿ ಮತ್ತು ಇನ್ನೂ ಹೆಚ್ಚಿನವರಿಗೆ ನೋವುಂಟು ಮಾಡುವ ನೀತಿಗಳನ್ನು ಸಕ್ರಿಯವಾಗಿ ತರುವ ಮೂಲಕ ಅವರು ಈಗಾಗಲೇ ಅನ್ಯಾಯದ ವ್ಯವಸ್ಥೆಯನ್ನು ಹೆಚ್ಚು ಅನ್ಯಾಯದಂತೆ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ 6 + ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ಮಾಡಿದ್ದಾರೆ. ಅವರು ರಾಜೀನಾಮೆ ನೀಡಲಿ ಮತ್ತು ಬೇರೆಯವರಿಗೆ ಅವಕಾಶ ನೀಡಲಿ ಎಂದು ಒತ್ತಾಯಿಸಿದ್ದಾರೆ.

ಆ.28ರಂದು ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ಹಠಾವೋ, ದಲಿತ ಬಚಾವೋ ಹೋರಾಟ

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆ.28ರಂದು ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ಹಠಾವ್ ದಲಿತ್ ಬಚಾವೋ ಬೃಹತ್ ಪ್ರತಿಭಟನೆಯನ್ನು ಕಾರ್ಯಕ್ರಮ ನಡೆಯಲಿದೆ. ಕಾಂಗ್ರೆಸ್ ಅಳಿಸಿ, ದಲಿತರನ್ನು ಉಳಿಸಿ ಎಂಬ ಘೋಷವಾಕ್ಯದಡಿ ಬೃಹತ್ ಪ್ರತಿಭಟನೆ ಮಾಡುತ್ತಿದ್ದು, ದಲಿತ ವಿರೋಧಿಗಳಾದರೆ, ಕಾಂಗ್ರೆಸ್ ಆಗಲಿ ಬಿಜೆಪಿ ಆಗಲಿ, ಜೆಡಿಎಸ್ ಆಗಲಿ ಅವರನ್ನೂ ವಿರೋಧಿಸುತ್ತೇವೆ. ಎಲ್ಲಾ ಸಮಾನತಾವಾದಿಗಳು ನಮ್ಮೊಂದಿಗೆ ಸೇರಬೇಕು ಎಂದು ನಟ ಚೇತನ್‌ ಹೇಳಿದರು.

Continue Reading

ಕರ್ನಾಟಕ

Uttara Kannada News: ಪಿಎಂ ಸ್ವ-ನಿಧಿ ಯೋಜನೆ; ಕಾರವಾರ ನಗರಸಭೆಗೆ ರಾಜ್ಯ ಮಟ್ಟದ ಪ್ರಶಸ್ತಿಯ ಗರಿ

ಪಿಎಂ ಸ್ವ-ನಿಧಿ ಯೋಜನೆಯಡಿ (Uttara Kannada News) ಉತ್ತಮ ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರಸಭೆಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಕಾರವಾರ ನಗರಸಭೆಯು “Best Performing ULB-in Loan performance at State Level” ಪ್ರಶಸ್ತಿಗೆ ಆಯ್ಕೆಯಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Uttara Kannada News
Koo

ಕಾರವಾರ: ಪಿಎಂ ಸ್ವ-ನಿಧಿ ಯೋಜನೆಯಡಿ ಉತ್ತಮ ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಉತ್ತರ ಕನ್ನಡ ಜಿಲ್ಲೆಯ (Uttara Kannada News) ಕಾರವಾರ ನಗರಸಭೆಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಕಾರವಾರ ನಗರಸಭೆಯು “Best Performing ULB-in Loan performance at State Level” ಪ್ರಶಸ್ತಿಗೆ ಆಯ್ಕೆಯಾಗಿದೆ.

ಕೇಂದ್ರ ಸರ್ಕಾರದ ವತಿಯಿಂದ ಪಿಎಂ ಸ್ವ-ನಿಧಿ ಯೋಜನೆಯಡಿ ಉತ್ತಮ ಪ್ರಗತಿ ಸಾಧಿಸಿದ ರಾಜ್ಯಗಳಿಗೆ ನವದೆಹಲಿಯಲ್ಲಿ ಸಮಾರಂಭ ಆಯೋಜಿಸಿ ರಾಷ್ಟ್ರಮಟ್ಟದ Utkrishtata Ki ore Badhte Kadam & Celebreating Achivements, Inspiring Excellence ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಇದನ್ನೂ ಓದಿ: PM Narendra Modi : ಆಗಸ್ಟ್​ 23ರಂದು ಉಕ್ರೇನ್​ ಪ್ರವಾಸಕ್ಕೆ ತೆರಳಲಿದ್ದಾರೆ ಪ್ರಧಾನಿ ಮೋದಿ

ಕರ್ನಾಟಕ ರಾಜ್ಯದಲ್ಲಿ ಪಿಎಂ ಸ್ವ-ನಿಧಿ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಇದೇ ಆಗಸ್ಟ್ 22 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಇದನ್ನೂ ಓದಿ: Kannada New Movie: ಅಡ್ವೆಂಚರಸ್ ಕಾಮಿಡಿ ಕಾನ್ಸೆಪ್ಟ್‌ನ ʼಫಾರೆಸ್ಟ್ʼ ಚಿತ್ರದ ಟ್ರೈಲರ್ ಸದ್ಯದಲ್ಲೇ ರಿಲೀಸ್‌

ಕಾರವಾರ ನಗರಸಭೆಯಲ್ಲಿ ಈ ಯೋಜನೆಯನ್ನು ಯಶಸ್ವಿಗೊಳಿಸಲು ನಗರಸಭೆಯ ಪೌರಾಯುಕ್ತ ಜಗದೀಶ, ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ರಜತ್ ಕುಮಾರ ಹಬ್ಬು, ಕೌಶಲ್ಯಾಭಿವೃದ್ಧಿ ಇಲಾಖೆಯ ಮಲ್ಟಿಟಾಸ್ಕಿಂಗ್ ಆಫೀಸರ್ ಸುನೀಲ ವಸಂತ ನಾಯ್ಕ, ಸಮುದಾಯ ಸಂಘಟಕರಾದ ಪ್ರಭಾಕರ ನಾಯ್ಕ ಮತ್ತು ಮೇರಿ ಡಿಸೋಜಾ , ಸಿಆರ್‌ಪಿಗಳಾದ ಗೀತಾ, ನಂದಿನಿ ಶ್ರಮಿಸಿದ್ದರು.

Continue Reading

ಬೆಂಗಳೂರು

Pralhad Joshi: ಕಾಂಗ್ರೆಸ್‌ನಿಂದ ದೇಶದಲ್ಲಿ ಬಾಂಗ್ಲಾದಂತೆ ಅರಾಜಕತೆ ಸೃಷ್ಟಿಸುವ ಹುನ್ನಾರ; ಪ್ರಲ್ಹಾದ್‌ ಜೋಶಿ ಆರೋಪ

ಕಾಂಗ್ರೆಸ್ ಪಕ್ಷಕ್ಕೆ (Pralhad Joshi) ರಾಜ್ಯಪಾಲರ ಹುದ್ದೆ ಘನತೆಯ ಅರಿವೆ ಇಲ್ಲ. ಸಂವಿಧಾನದ ಹತ್ಯೆ ಮಾಡಿ, ದೇಶದಲ್ಲಿ ಎಮರ್ಜೆನ್ಸಿ ಹೇರಿ ಜನಜೀವನ ಅಸ್ತವ್ಯಸ್ಥಗೊಳಿಸಿದ್ದ ಕಾಂಗ್ರೆಸ್ ಪಕ್ಷ ಇನ್ನೂ ಅದೇ ವರ್ತನೆ, ಮನಸ್ಥಿತಿಯಲ್ಲಿದೆ. ಅದನ್ನಿನ್ನೂ ತಿದ್ದಿಕೊಂಡಿಲ್ಲ ಎಂದು ಆರೋಪಿಸಿರುವ ಸಚಿವ ಪ್ರಲ್ಹಾದ್‌ ಜೋಶಿ, ಇದಕ್ಕೆ ಜನರೇ ತಕ್ಕ ಪಾಠವ ಕಲಿಸುತ್ತಾರೆ ಎಂದು ಎಚ್ಚರಿಸಿದ್ದಾರೆ.

VISTARANEWS.COM


on

Pralhad Joshi
Koo

ನವದೆಹಲಿ: ಭಾರತದಲ್ಲೂ ಬಾಂಗ್ಲಾದಂತೆ ಅರಾಜಕತೆ ಸೃಷ್ಟಿಸುವ ಮನಸ್ಥಿತಿ, ದುಷ್ಟ ಉದ್ದೇಶ ಕಾಂಗ್ರೆಸ್ ಪಕ್ಷದ್ದಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಮುಖಂಡ ಐವಾನ್ ಡಿಸೋಜ ಅವರ ಹೇಳಿಕೆ ಅರಾಜಕತೆ ಸೃಷ್ಟಿಯನ್ನು ಪುಷ್ಟೀಕರಿಸುತ್ತಿದೆ ಎಂದು ವ್ಯಾಖ್ಯಾನಿಸಿ ಸಚಿವ ಜೋಶಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: PM Narendra Modi : ಆಗಸ್ಟ್​ 23ರಂದು ಉಕ್ರೇನ್​ ಪ್ರವಾಸಕ್ಕೆ ತೆರಳಲಿದ್ದಾರೆ ಪ್ರಧಾನಿ ಮೋದಿ

ಭ್ರಷ್ಟಾಚಾರದ ಜನಕ ಕಾಂಗ್ರೆಸ್ ಪಕ್ಷ ಈ ರೀತಿ ಅರಾಜಕತೆಯ ಮಾತುಗಳನ್ನಾಡುವುದು ಅಕ್ಷಮ್ಯ ಮತ್ತು ಅತ್ಯಂತ ಖಂಡನೀಯ ಎಂದು ತಿಳಿಸಿರುವ ಸಚಿವರು, ಕಾಂಗ್ರೆಸ್‌ನ ನಡೆ ನೋಡಿದರೆ ಬಾಂಗ್ಲಾ ದೇಶದಂತಹ ಅರಾಜಕತೆ ಸೃಷ್ಟಿಸುವ ರೀತಿ ವರ್ತಿಸುತ್ತಿರುವಂತಿದೆ ಎಂದು ಆರೋಪಿಸಿದ್ದಾರೆ.

ಸಂವಿಧಾನ ದತ್ತವಾಗಿರುವ ರಾಜ್ಯಪಾಲರ ಸ್ಥಾನಕ್ಕೆ ಘನತೆ-ಗೌರವ ತೋರುವ ಬದಲು ಅದಕ್ಕೆ ಧಕ್ಕೆ ತರುವ ರೀತಿ ಕಾಂಗ್ರೆಸ್ ವರ್ತಿಸುತ್ತಿದೆ. ರಾಜಭವನ ಮತ್ತು ರಾಜ್ಯಪಾಲರ ಗೃಹಕ್ಕೆ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕುತ್ತಿರುವುದು ನಿಜಕ್ಕೂ ಆಡಳಿತಾರೂಢ ಸರ್ಕಾರದ ಸರ್ವಾಧಿಕಾರಿ ಧೋರಣೆ ಎನ್ನುವಂತಿದೆ ಎಂದು ಜೋಶಿ ಹರಿಹಾಯ್ದಿದ್ದಾರೆ.

ಇದನ್ನೂ ಓದಿ: Kannada New Movie: ಅಡ್ವೆಂಚರಸ್ ಕಾಮಿಡಿ ಕಾನ್ಸೆಪ್ಟ್‌ನ ʼಫಾರೆಸ್ಟ್ʼ ಚಿತ್ರದ ಟ್ರೈಲರ್ ಸದ್ಯದಲ್ಲೇ ರಿಲೀಸ್‌

ಕಾಂಗ್ರೆಸ್ ಪಕ್ಷಕ್ಕೆ ರಾಜ್ಯಪಾಲರ ಹುದ್ದೆ ಘನತೆಯ ಅರಿವೆ ಇಲ್ಲ. ಸಂವಿಧಾನದ ಹತ್ಯೆ ಮಾಡಿ ದೇಶದಲ್ಲಿ ಎಮರ್ಜೆನ್ಸಿ ಹೇರಿ ಜನಜೀವನ ಅಸ್ತವ್ಯಸ್ಥಗೊಳಿಸಿದ್ದ ಕಾಂಗ್ರೆಸ್ ಪಕ್ಷ ಇನ್ನೂ ಅದೇ ವರ್ತನೆ, ಮನಸ್ಥಿತಿಯಲ್ಲಿದೆ. ಅದನ್ನಿನ್ನೂ ತಿದ್ದಿಕೊಂಡಿಲ್ಲ ಎಂದು ಆರೋಪಿಸಿರುವ ಸಚಿವ ಪ್ರಲ್ಹಾದ್‌ ಜೋಶಿ, ಇದಕ್ಕೆ ಜನರೇ ತಕ್ಕ ಪಾಠವ ಕಲಿಸುತ್ತಾರೆ ಎಂದು ಎಚ್ಚರಿಸಿದ್ದಾರೆ.

Continue Reading

ಕರ್ನಾಟಕ

Pavithra gowda: ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ; ಆ.22ಕ್ಕೆ ವಿಚಾರಣೆ

Actor Darshan: ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ಗೆ ಆ.28ರವರೆಗೆ ಕೋರ್ಟ್‌ ನ್ಯಾಯಾಂಗ ಬಂಧನ ವಿಸ್ತರಿಸಿತ್ತು. ಜೈಲು ಸೇರಿದ ಬರೋಬ್ಬರಿ 72 ದಿನಗಳ ನಂತರ ಇದೀಗ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಪವಿತ್ರಾ ಗೌಡ, ಬರೋಬ್ಬರಿ 72 ದಿನಗಳ ನಂತರ ಇದೀಗ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಜಾಮೀನು ಕೋರಿ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್​ಗೆ ಪವಿತ್ರಾ ಗೌಡ (Pavithra gowda) ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ಆ.22ಕ್ಕೆ ನಡೆಯಲಿದೆ.

ಸೋಮವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿರುವ ಕೋರ್ಟ್, ಆಗಸ್ಟ್ 22ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಪವಿತ್ರಾ ಗೌಡ ಜತೆ ಮತ್ತೊಬ್ಬ ಆರೋಪಿ ಅನುಕುಮಾರ್ ಕೂಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಇನ್ನು ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ಗೆ (Actor Darshan) ಆ.28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ‌ ಮುಂದುವರಿಸುವಂತೆ ಪೊಲೀಸರು ರಿಮ್ಯಾಂಡ್ ಅರ್ಜಿ‌ ಸಲ್ಲಿಸಿದ್ದರು. ಹೀಗಾಗಿ ಆರೋಪಿಗಳಿಗೆ 24ನೇ ಎಸಿಎಂಎಂ ನ್ಯಾಯಾಲಯದ ಇನ್‌ಚಾರ್ಜ್ ಕೋರ್ಟ್‌, ನ್ಯಾಯಾಂಗ ಬಂಧನವನ್ನು ಆ.14ರಂದು ವಿಸ್ತರಿಸಿತ್ತು

ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ 13 ಹಾಗೂ ತುಮಕೂರು ಜೈಲಿನಿಂದ 4 ಆರೋಪಿಗಳನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಮುಂದೆ ಹಾಜರು ಪಡಿಸಲಾಗಿತ್ತು. ಆದರೆ, ಆಗಸ್ಟ್ 28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದ್ದರಿಂದ ದರ್ಶನ್ ಗ್ಯಾಂಗ್‌ಗೆ ಸೆರೆವಾಸ ಮುಂದುವರಿದಿದೆ.

ಇದನ್ನೂ ಓದಿ | Actor Darshan: ನಟ ದರ್ಶನ್‌ಗೆ ಮನೆಯೂಟ ನಿರಾಕರಿಸಿದ ಜೈಲಾಧಿಕಾರಿಗಳು; ಕೋರ್ಟ್‌ಗೆ ವರದಿ

ಪಿತ್ರಾರ್ಜಿತ ಆಸ್ತಿಗಾಗಿ ತಾರಕಕ್ಕೇರಿದ ಗಲಾಟೆ; ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

murder case
murder case

ಚಿಕ್ಕಬಳ್ಳಾಪುರ: ಪಿತ್ರಾರ್ಜಿತ ಆಸ್ತಿಗಾಗಿ ದಾಯಾದಿಗಳ ನಡುವಿನ ಗಲಾಟೆಯೂ ತಾರಕಕ್ಕೇರಿದ್ದು ವ್ಯಕ್ತಿಯ ಕೊಲೆಯಲ್ಲಿ (Murder Case) ಅಂತ್ಯವಾಗಿದೆ. ಆಸ್ತಿಗಾಗಿ ತಮ್ಮನ ಮಕ್ಕಳಿಂದಲೇ ಅಣ್ಣನ ಕೊಲೆಯಾಗಿದೆ. ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ನಡುವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ನಂಜುಂಡಯ್ಯ (55) ಗಲಾಟೆಯಲ್ಲಿ ಕೊಲೆಯಾದವರು. ಕಲ್ಲು ದೊಣ್ಣೆಗಳಿಂದ ಬಡಿದಾಟದಲ್ಲಿ ತೀವ್ರ ಗಾಯಗೊಂಡಿದ್ದ ನಂಜುಂಡಯ್ಯರನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ನಂಜುಂಡಯ್ಯ ಮೃತಪಟ್ಟಿದ್ದಾರೆ.

ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಡುವನಹಳ್ಳಿ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Road Accident : ಸರ್ಜಾಪುರದಲ್ಲಿ ಎದೆ ಝುಲ್‌ ಎನ್ನುವ ಡೆಡ್ಲಿ ಆ್ಯಕ್ಸಿಡೆಂಟ್‌; ಬೈಕ್‌ ಸವಾರ ಬದುಕಿದ್ದೆ ಪವಾಡ

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮಂಡ್ಯದ ಮೊಗರಹಳ್ಳಿ ಬಳಿ ಘಟನೆ ನಡೆದಿದೆ. ಮಂಟಿ ಗ್ರಾಮದ ಅನಿಲ್ (28) ಮೃತ ದುರ್ದೈವಿ. ಮೊಗರಹಳ್ಳಿ ಗ್ರಾಮದ ಸ್ಮಶಾನದ ಬಳಿ ಶವ ಪತ್ತೆಯಾಗಿದೆ. ಸೋಮವಾರ ಬೆಳಗ್ಗೆ ನೇತಾಡುತ್ತಿದ್ದ ಶವ ಕಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರೆಂಟ್‌ ಶಾಕ್‌ಗೆ ಯುವಕ ಬಲಿ

ಕೃಷಿ ಚಟುವಟಿಕೆಯ ವೇಳೆ ಆಕಸ್ಮಿಕ ವಿದ್ಯುತ್‌ ಸ್ಪರ್ಶಿಸಿ ಯುವಕನೊರ್ವ ಮೃತಪಟ್ಟಿದ್ದಾನೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ‌ ತಾಂವಶಿ ಗ್ರಾಮದಲ್ಲಿ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ ದ್ರಾಕ್ಷಿ ತೋಟದಲ್ಲಿ ಪಂಪ್ ಸೆಟ್ ಶುರು ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ. ಸಂಗಪ್ಪ ನಾನಪ್ಪ ತಳವಾರ (28) ಮೃತ ದುರ್ದೈವಿ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Raksha Bandhan
ಪ್ರಮುಖ ಸುದ್ದಿ7 mins ago

Raksha Bandhan : ಪುಟಾಣಿ ಗೆಳೆಯರೊಂದಿಗೆ ರಕ್ಷಾ ಬಂಧನ ಆಚರಿಸಿಕೊಂಡ ನರೇಂದ್ರ ಮೋದಿ; ಇಲ್ಲಿವೆ ಚಿತ್ರಗಳು

Rayara Aradhane 2024
ಧಾರ್ಮಿಕ13 mins ago

Rayara Aradhane 2024: ನಾಳೆಯಿಂದ ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ; ಗುರುಗಳ ಜೀವನ ಹೇಗಿತ್ತು, ಸಂದೇಶ ಏನಾಗಿತ್ತು?

Actor Chetan Ahimsa
ಕರ್ನಾಟಕ21 mins ago

Chetan Ahimsa: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಟ ಚೇತನ್ ಆಗ್ರಹ; ಆ.28ಕ್ಕೆ ಕಾಂಗ್ರೆಸ್ ಹಠಾವೋ, ದಲಿತ ಬಚಾವೋ ಹೋರಾಟ

Uttara Kannada News
ಕರ್ನಾಟಕ32 mins ago

Uttara Kannada News: ಪಿಎಂ ಸ್ವ-ನಿಧಿ ಯೋಜನೆ; ಕಾರವಾರ ನಗರಸಭೆಗೆ ರಾಜ್ಯ ಮಟ್ಟದ ಪ್ರಶಸ್ತಿಯ ಗರಿ

ಆರೋಗ್ಯ33 mins ago

Sodium reduction: ಉಪ್ಪು ಸೇವನೆ ಕಡಿಮೆಯಾದರೆ ಈ ಎಲ್ಲ ಸಮಸ್ಯೆಗಳು ಕಾಡುತ್ತವೆ

Pralhad Joshi
ಬೆಂಗಳೂರು34 mins ago

Pralhad Joshi: ಕಾಂಗ್ರೆಸ್‌ನಿಂದ ದೇಶದಲ್ಲಿ ಬಾಂಗ್ಲಾದಂತೆ ಅರಾಜಕತೆ ಸೃಷ್ಟಿಸುವ ಹುನ್ನಾರ; ಪ್ರಲ್ಹಾದ್‌ ಜೋಶಿ ಆರೋಪ

Virat kohli
ಕ್ರೀಡೆ39 mins ago

Virat Kohli : ಕೊಹ್ಲಿ ಕಿಂಗ್ ಅಲ್ಲ; ಭಾರತದ ಸೂಪರ್​​ ಸ್ಟಾರ್​ ಬ್ಯಾಟರ್​​ ಬಗ್ಗೆ ಕಳಪೆ ಕಾಮೆಂಟ್ ಮಾಡಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

Contrast dupatta fashion
ಫ್ಯಾಷನ್47 mins ago

Contrast Dupatta Fashion: ಶ್ರಾವಣ ಮಾಸದಲ್ಲಿ ಟ್ರೆಂಡಿಯಾದ ಕಾಂಟ್ರಾಸ್ಟ್ ದುಪಟ್ಟಾ ಫ್ಯಾಷನ್‌

Actor Darshan
ಕರ್ನಾಟಕ1 hour ago

Pavithra gowda: ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ; ಆ.22ಕ್ಕೆ ವಿಚಾರಣೆ

Death Penalty
ವಿದೇಶ1 hour ago

Death Penalty: ಈ 7 ದೇಶಗಳಲ್ಲಿ ಅತ್ಯಾಚಾರ ನಡೆಸಿದರೆ ಮರಣ ದಂಡನೆಯೇ ಶಿಕ್ಷೆ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌