Punjab Golden Temple: ಬಾತ್​ ರೂಮ್​​ನಿಂದ ಸ್ಫೋಟಕ ಎಸೆದ ದಂಪತಿ; ಐವರನ್ನು ಬಂಧಿಸಿದ ಪೊಲೀಸ್​​ - Vistara News

ದೇಶ

Punjab Golden Temple: ಬಾತ್​ ರೂಮ್​​ನಿಂದ ಸ್ಫೋಟಕ ಎಸೆದ ದಂಪತಿ; ಐವರನ್ನು ಬಂಧಿಸಿದ ಪೊಲೀಸ್​​

ಮೇ 6 ಮತ್ತು 8ರಂದು ಒಂದರ ಬೆನ್ನಿಗೆ ಒಂದರಂತೆ ಸ್ಫೋಟ ನಡೆದಿತ್ತು. ಸ್ವರ್ಣ ಮಂದಿರದ ಸಮೀಪದಲ್ಲಿರುವ ಒಂದು ಪಾರ್ಕಿಂಗ್ ಸ್ಥಳದ ಬಳಿಯೇ ಎರಡೂ ಸ್ಫೋಟಗಳು ಆಗಿದ್ದವು. ಹೀಗೆ ಮೂರು ಸ್ಫೋಟಗಳಾದ ಬೆನ್ನಲ್ಲೇ ಶಿರೋಮಣಿ ಗುರುದ್ವಾರ ಪರಬಂಧಕ್​ ಸಮಿತಿ ಅಧ್ಯಕ್ಷ ಹರ್ಜಿಂದರ್ ಸಿಂಗ್ ಧಮಿ ಅವರು ಪಂಜಾಬ್ ಸರ್ಕಾರವನ್ನು ದೂಷಿಸಿದ್ದಾರೆ.

VISTARANEWS.COM


on

Five arrested link To Punjab Golden Temple Blast
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಂಜಾಬ್​ನ ಗೋಲ್ಡನ್​ ಟೆಂಪಲ್​ (Punjab Golden Temple)ಬಳಿ ಮೂರು ಬಾರಿ ಸ್ಫೋಟವಾಗಿದೆ. ಒಂದು ವಾರದಲ್ಲಿ ಇಂದು ಮೂರನೇ ಬಾರಿಗೆ ಸ್ಫೋಟವಾಗಿದ್ದು ಆತಂಕಕ್ಕೆ ಕಾರಣವಾಗಿದೆ ಮತ್ತು ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಗುರುವಾರ ತಡರಾತ್ರಿ 12.30ರ ಹೊತ್ತಿಗೆ ಸ್ವರ್ಣ ಮಂದಿರದ ಬಳಿ ಸ್ಫೋಟವಾದ ಬೆನ್ನಲ್ಲೇ, ಈ ಘಟನೆಯಲ್ಲಿ ಕೈವಾಡ ಇರುವ ಅನುಮಾನದಡಿ ಐವರನ್ನು ಬಂಧಿಸಲಾಗಿದೆ. ಈ ಮೂರು ಸ್ಫೋಟಗಳ ಹಿಂದಿನ ಉದ್ದೇಶ ಕೇವಲ ಶಾಂತಿಯನ್ನು ಕದಡುವುದು ಎಂದು ಪಂಜಾಬ್​ ಡಿಜಿಪಿ ಗೌರವ್ ಯಾದವ್ ತಿಳಿಸಿದ್ದಾರೆ.

ಮೇ 6 ಮತ್ತು 8ರಂದು ಒಂದರ ಬೆನ್ನಿಗೆ ಒಂದರಂತೆ ಸ್ಫೋಟ ನಡೆದಿತ್ತು. ಸ್ವರ್ಣ ಮಂದಿರದ ಸಮೀಪದಲ್ಲಿರುವ ಒಂದು ಪಾರ್ಕಿಂಗ್ ಸ್ಥಳದ ಬಳಿಯೇ ಎರಡೂ ಸ್ಫೋಟಗಳು ಆಗಿದ್ದವು. ಹೀಗೆ ಮೂರು ಸ್ಫೋಟಗಳಾದ ಬೆನ್ನಲ್ಲೇ ಶಿರೋಮಣಿ ಗುರುದ್ವಾರ ಪರಬಂಧಕ್​ ಸಮಿತಿ ಅಧ್ಯಕ್ಷ ಹರ್ಜಿಂದರ್ ಸಿಂಗ್ ಧಮಿ ಅವರು ಪಂಜಾಬ್ ಸರ್ಕಾರವನ್ನು ದೂಷಿಸಿದ್ದಾರೆ. ಎರಡು ಸ್ಫೋಟವಾಗಿದ್ದರೂ ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ. ಸರಿಯಾದ ಕ್ರಮ ವಹಿಸಲಿಲ್ಲ. ಹೀಗಾಗಿಯೇ ಮೂರನೇ ಸ್ಫೋಟವಾಯಿತು. ಗುರು ರಾಮದಾಸ್​ ಸೇರಾಯಿಯಲ್ಲಿ ವಾಸವಾಗಿರುವ ಒಂದು ನವದಂಪತಿ ಮತ್ತು ಇನ್ನೊಬ್ಬನನ್ನು ಗುರುದ್ವಾರದ ಸೆಕ್ಯೂರಿಟಿ ಸ್ಕ್ವಾಡ್​​ನವರು ವಶಕ್ಕೆ ಪಡೆದು, ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ. ಮೂರೂ ಸ್ಫೋಟದ ಹಿಂದೆಯೂ ಇವರ ಕೈವಾಡ ಇದೆ. ಆ ದಂಪತಿ ಅವರು ಉಳಿದುಕೊಂಡಿರುವ 224 ನಂಬರ್​​ನ ಕೋಣೆಯ ಬಾತ್​ರೂಮ್​​ನಿಂದ ಸ್ಫೋಟಕವನ್ನು ಹೊರಗೆ ಎಸೆದಿದ್ದಾರೆ. ಪೊಲೀಸರು ಆ ಕೋಣೆಯಿಂದ ಕೆಲವು ಕೈಬರಹದ ಪತ್ರಗಳನ್ನು, ಪಟಾಕಿಯಂಥ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧ್ಯಕ್ಷ ಹರ್ಜಿಂದರ್ ಸಿಂಗ್​ ತಿಳಿಸಿದ್ದಾರೆ. ಇನ್ನು ಇದು ಮೂರು ಘಟನೆಗೆ ಉಗ್ರ ಲಿಂಕ್ ಇಲ್ಲ ಎಂದು ಈಗಾಗಲೇ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಹಾಗಿದ್ದಾಗ್ಯೂ ಅದೊಂದು ಆಯಾಮದಲ್ಲಿ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Golden Temple: ಪಂಜಾಬ್ ಸ್ವರ್ಣಮಂದಿರದ ಬಳಿ ಮತ್ತೊಂದು ಸ್ಫೋಟ; ಸ್ಥಳದಲ್ಲಿ ಆತಂಕ

ಮೇ 6ರಂದು ಮೊದಲ ಸ್ಫೋಟ ನಡೆದಾಗ ಅದು ಗ್ಯಾಸ್ ಲೀಕ್​​ನಿಂದ ಆಗಿದ್ದಿರಬಹುದು ಎಂದು ಪೊಲೀಸರು ಅಂದಾಜಿಸಿದ್ದರು. ಅಂದು ಸುತ್ತಲೂ ಇರುವ ಕೆಲವು ಕಟ್ಟಡಗಳಿಗೆ ಹಾನಿಯಾಗಿತ್ತು. ಅದಾಗಿ ಒಂದು ದಿನದ ನಂತರ ಮೇ 8ರಂದು ಮತ್ತೆ ಸ್ಫೋಟವಾದಾಗ ಪೊಲೀಸರು ಮತ್ತಷ್ಟು ಬಿರುಸಾಗಿ ತನಿಖೆ ನಡೆಸಿದ್ದರು. ಈಗ ಮೂರನೇ ಸ್ಫೋಟವಾದಾಗ ಸ್ಥಳೀಯರು ತಿರುಗಿಬಿದ್ದಿದ್ದಾರೆ. ಗೋಲ್ಡನ್​ ಟೆಂಪಲ್​ ಪ್ರವೇಶ ದ್ವಾರದಲ್ಲಿ ಒಂದು ಸ್ಕ್ಯಾನರ್​ ಅಳವಡಿಸಬೇಕು ಎಂದು ಶಿರೋಮಣಿ ಗುರುದ್ವಾರ ಪರಬಂಧಕ್​ ಸಮಿತಿ ಅಧ್ಯಕ್ಷ ಹರ್ಜಿಂದರ್ ಸಿಂಗ್ ಧಮಿ ಒತ್ತಾಯಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Kangana Ranaut: ಕಾರಣ ಇದ್ದರೆ ಕೊಲೆ, ಅತ್ಯಾಚಾರ ಮಾಡಬಹುದೆ? ; ವಿರೋಧಿಗಳ ವಿರುದ್ಧ ಗುಡುಗಿದ ಕಂಗನಾ

Kangana Ranaut:ನನ್ನ ಮೇಲೆ ಹಲ್ಲೆ ನಡೆಸಿದ CIFC ಸಿಬ್ಬಂದಿ ಕುಲ್ವಿಂದರ್‌ ಕೌರ್‌ಗೂ ಒಂದು ಭಾವನಾತ್ಮಕ ಕಾರಣ ಇತ್ತು ಎಂಬ ಕಾರಣ ಹಲವರು ಆಕೆಯ ಬೆಂಬಲಕ್ಕೆ ನಿಂತಿದ್ದಾರೆ. ಹಾಗಾದರೆ ನಿಮ್ಮ ಪ್ರಕಾರ ಕಾರಣ ಇರುವವರು ಅಪರಾಧ ಮಾಡಬಹುದೇ? ಯಾವುದೇ ವ್ಯಕ್ತಿಯ ಅನುಮತಿ ಇಲ್ಲದೇ ಆತನ ಮೈ ಮುಟ್ಟಬಹುದೇ? ಕೊಲೆ ಅತ್ಯಾಚಾರ ಮಾಡಿದರೆ ಸರಿನಾ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

VISTARANEWS.COM


on

Kangana Ranaut
Koo

ನವದೆಹಲಿ: ಭದ್ರತಾ ಸಿಬ್ಬಂದಿಯೊಬ್ಬರು ತಮಗೆ ಕಪಾಳಮೋಕ್ಷ(Slap) ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಮಾಚಲಪ್ರದೇಶದ ಮಂಡಿಯ ನೂತನ ಸಂಸದೆ ಕಂಗನಾ ರಣಾವತ್​ (Kangana Ranaut) ಮತ್ತೆ ಗುಡುಗಿದ್ದಾರೆ. ತಮ್ಮ ಮೇಲಿನ ದಾಳಿಯನ್ನು ಅತ್ಯಾಚಾರ, ಕೊಲೆ ಪ್ರಕರಣಗಳ ಜೊತೆ ಹೋಲಿಕೆ ಮಾಡಿಕೊಂಡು ತಮ್ಮ ವಿರೋಧಿಗಳ ವಿರುದ್ಧ ಧ್ವನಿ ಎತ್ತಿದ್ದಾರೆ. ಈ ಕಂಗನಾ ಮಾಡಿರುವ ಪೋಸ್ಟ್‌ ಬಹಳ ಸದ್ದು ಮಾಡುತ್ತಿದೆ.

ಕಂಗನಾ ಟ್ವೀಟ್‌ನಲ್ಲಿ ಏನಿದೆ?

ಪ್ರತಿ ರೇಪಿಸ್ಟ್‌, ಕೊಲೆಗಡುಕ ಅಥವಾ ಕಳ್ಳನಿಗೆ ತನ್ನದೇ ಆದ ಕಾರಣಗಳಿರುತ್ತವೆ. ಒಂದೋ ಆತನಿಗೆ ಭಾವನಾತ್ಮಕ, ದೈಹಿಕ, ಮಾನಸಿಕ ಅಥವಾ ಹಣಕಾಸಿಗೆ ಸಂಬಂಧಿಸಿದ ಕಾರಣಗಳಿರುತ್ತವೆ. ಹಾಗಾಗಿಯೇ ಆತ ಕೃತ್ಯ ಎಸಗುತ್ತಾನೆ. ಕಾರಣ ಇಲ್ಲದೇ ಯಾವ ಅಪರಾಧವೂ ನಡೆಯಲ್ಲ. ಆದರೂ ಅವರನ್ನು ಅಪರಾಧಿಗಳೆಂದು ಘೋಷಿಸಿ ಜೈಲಿಗಟ್ಟಲಾಗುತ್ತದೆ. ಹೀಗಿರುವಾಗಿ ನನ್ನ ಮೇಲೆ ಹಲ್ಲೆ ನಡೆಸಿದ CIFC ಸಿಬ್ಬಂದಿ ಕುಲ್ವಿಂದರ್‌ ಕೌರ್‌ಗೂ ಒಂದು ಭಾವನಾತ್ಮಕ ಕಾರಣ ಇತ್ತು ಎಂಬ ಕಾರಣ ಹಲವರು ಆಕೆಯ ಬೆಂಬಲಕ್ಕೆ ನಿಂತಿದ್ದಾರೆ. ಹಾಗಾದರೆ ನಿಮ್ಮ ಪ್ರಕಾರ ಕಾರಣ ಇರುವವರು ಅಪರಾಧ ಮಾಡಬಹುದೇ? ಯಾವುದೇ ವ್ಯಕ್ತಿಯ ಅನುಮತಿ ಇಲ್ಲದೇ ಆತನ ಮೈ ಮುಟ್ಟಬಹುದೇ? ಕೊಲೆ ಅತ್ಯಾಚಾರ ಮಾಡಿದರೆ ಸರಿನಾ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ನನ್ನ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಗೆ ಮಾನಸಿಕ ಸಮಸ್ಯೆ ಇದೆ. ದಯವಿಟ್ಟು ಆಕೆಯನ್ನು ಯಾವುದಾದರೂ ಯೋಗ ಅಥವಾ ಧ್ಯಾನ ಕೇಂದ್ರಗಳಿಗೆ ಕಳುಹಿಸಿ. ಇಲ್ಲದಿದ್ದರೆ ಬಹಳ ಕಷ್ಟ ಎದುರಿಸಬೇಕಾಗುತ್ತದೆ. ಮನಸ್ಸಿನಲ್ಲಿ ಹೆಚ್ಚು ಹಠ, ಕೋಪ , ಅಸೂಯೆ ಇಟ್ಟುಕೊಳ್ಳಬೇಡಿ. ಆರಾಮಾಗಿರಿ ಎಂದು ಕಂಗನಾ ಮನವಿ ಮಾಡಿದ್ದಾರೆ.

ಚಂಡೀಗಢ ವಿಮಾನ ನಿಲ್ದಾಣದಲ್ಲಿ ಗುರುವಾರ ಕಂಗನಾ ಮೇಲೆ CISF ಸಿಬ್ಬಂದಿ ಕೌರ್‌ ಹಲ್ಲೆ ನಡೆಸಿದ್ದರು. ಇದಾದ ಬಳಿಕ ಆಕೆಯನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು. ಚಂಢೀಗಡದಿಂದ ದಿಲ್ಲಿಗೆ ವಿಮಾನ ಹತ್ತುವ ವೇಳೆ ಈ ಘಟನೆ ನಡೆದಿದ್ದು, ಇನ್ನು ಕೌರ್‌ ವಿರುದ್ಧ ಕೇಸ್‌ ದಾಖಲಿಸಲಾಗಿದೆ. ಈ ನಿಟ್ಟಿನಲ್ಲಿ ಆಕೆಯನ್ನು ಅರೆಸ್ಟ್‌ ಮಾಡಲಾಗಿದೆ. ನರೇಂದ್ರ ಮೋದಿ ಸರ್ಕಾರವು ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಮೂರು ಕಾನೂನುಗಳನ್ನ ಜಾರಿಗೆ ತರಲು ಮುಂದಾದಾಗ ಅದರ ವಿರುದ್ಧ ಆಂದೋಲನ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ‘ಖಲಿಸ್ತಾನಿ ಬೆಂಬಲಿಗರು’ ಎಂದು ಒಂದು ಗುಂಪು ಕರೆದಿತ್ತು. ಈ ವಿವಾದಕ್ಕೆ ಈಡಾದಾಗ ಕಂಗಾನಾ ಆ ಗಾಯಕ್ಕೆ ಉಪ್ಪು ಸವರುವಂಥ ಹೇಳಿಕೆ ನೀಡಿದ್ದರು.

2020 ರಲ್ಲಿ, ಕಂಗನಾ ರನೌತ್ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದ ಪಂಜಾಬ್​ನ ಮಹಿಳೆಯೊಬ್ಬರನ್ನು ತಪ್ಪಾಗಿ ಅಂದಾಜಿಸಿದ್ದರು. ಅದಕ್ಕಿಂತ ಹಿಂದೆ ಶಾಹೀನ್ ಬಾಗ್​ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾನೂನು (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಲ್ಕಿಸ್ ಬಾನೊ ಅವರು ಎಂದುಕೊಂಡಿದ್ದರು. ಪ್ರತಿಭಟನೆಗೆ ಬರುವ ಮಹಿಳೆಯರೆಲ್ಲರೂ 100 ರೂಪಾಯಿಗೆ ಸಿಗುತ್ತಾರೆ ಎಂದು ಹೇಳಿದ್ದರು. ಇದು ದೊಡ್ಡ ವಿವಾದ ಸೃಷ್ಟಿಸಿತ್ತು. ಅಂದ ಹಾಗೆ ಕಂಗನಾಗೆ ಹೊಡೆದ ಕಾನ್​ಸ್ಟೇಬಲ್​ ಕುಲ್ವಿಂದರ್ ಕೌರ್​ ತಾಯಿಯೂ ಆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಂಗನಾ ಹೇಳಿಕೆಯಿಂದ ಕೋಪಗೊಂಡಿದ್ದ ಅವರು ಪ್ರತಿಕಾರ ತೀರಿಸಲು ಕಾದಿದ್ದರು. ಅಂತೆಯೇ ಚಂಡಿಗಢದಲ್ಲಿ ತಪಾಸಣಾ ಕೇಂದ್ರಕ್ಕೆ ಬರುತ್ತಿದ್ದಂತೆ ಕಪಾಳ ಮೋಕ್ಷ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:Narendra Modi: ಮೋದಿ ಪ್ರಮಾಣವಚನಕ್ಕೆ 7 ವಿದೇಶಿ ನಾಯಕರು; 8000 ಅತಿಥಿಗಳು

Continue Reading

ಪ್ರಮುಖ ಸುದ್ದಿ

Rahul Gandhi: ರಾಹುಲ್‌ ಗಾಂಧಿಯೇ ಪ್ರತಿಪಕ್ಷ ನಾಯಕ; ಕಾಂಗ್ರೆಸ್‌ ಮಹತ್ವದ ತೀರ್ಮಾನ

Rahul Gandhi: ರಾಹುಲ್‌ ಗಾಂಧಿ ಅವರು ಸಿಡಬ್ಲ್ಯೂಸಿ ನಿರ್ಣಯವನ್ನು ಅಂಗೀಕರಿಸಿದರೆ, ಅವರೇ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಲಿದ್ದಾರೆ. ನರೇಂದ್ರ ಮೋದಿ ಅವರ ಮೂರನೇ ಅವಧಿಯ ಸರ್ಕಾರಕ್ಕೆ ಆ ಮೂಲಕ ರಾಹುಲ್‌ ಗಾಂಧಿ ಅವರು ಸೆಡ್ಡು ಹೊಡೆಯಲಿದ್ದಾರೆ.ನೀವೇ ಪ್ರತಿಪಕ್ಷ ನಾಯಕರಾಗಿ ಅಧಿಕಾರ ವಹಿಸಿಕೊಳ್ಳಿ ಎಂಬುದಾಗಿ ಕಾಂಗ್ರೆಸ್‌ ನಾಯಕರು ರಾಹುಲ್‌ ಗಾಂಧಿ ಅವರಿಗೆ ಮನವಿ ಮಾಡಲಿದ್ದಾರೆ ಎಂದು ಸಿಡಬ್ಲ್ಯೂಸಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

VISTARANEWS.COM


on

Rahul Gandhi
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ (NDA) ಮೈತ್ರಿಕೂಟವು ಬಹುಮತ ಸಾಧಿಸಿದೆ. ನರೇಂದ್ರ ಮೋದಿ (Narendra Modi) ಅವರು ಭಾನುವಾರ (ಜೂನ್‌ 9) ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ದೆಹಲಿಯಲ್ಲಿ ಇದಕ್ಕಾಗಿ ಸಕಲ ಸಿದ್ಧತೆ ನಡೆಯುತ್ತಿವೆ. ಇದರ ಬೆನ್ನಲ್ಲೇ, ಲೋಕಸಭೆಯಲ್ಲಿ ನರೇಂದ್ರ ಮೋದಿ ಅವರಿಗೆ ಸೆಡ್ಡು ಹೊಡೆಯಲು ಕಾಂಗ್ರೆಸ್‌ ಸಜ್ಜಾಗಿದ್ದು, ಪ್ರತಿಪಕ್ಷ ನಾಯಕನನ್ನಾಗಿ ರಾಹುಲ್‌ ಗಾಂಧಿ (Rahul Gandhi) ಅವರನ್ನು ನೇಮಿಸಲು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (CWC) ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ.

“ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕನನ್ನಾಗಿ ರಾಹುಲ್‌ ಗಾಂಧಿ ಅವರನ್ನು ನೇಮಕ ಮಾಡುವ ದಿಸೆಯಲ್ಲಿ ಸಿಡಬ್ಲ್ಯೂಸಿಯು ಅವಿರೋಧವಾಗಿ ನಿರ್ಣಯ ತೆಗೆದುಕೊಂಡಿದೆ. ಸಂಸತ್‌ನಲ್ಲಿ ಪ್ರತಿಪಕ್ಷದ ನಾಯಕತ್ವ ವಹಿಸಲು ರಾಹುಲ್‌ ಗಾಂಧಿ ಅವರೇ ಸಮರ್ಥ ನಾಯಕರಾಗಿದ್ದಾರೆ. ನೀವೇ ಪ್ರತಿಪಕ್ಷ ನಾಯಕರಾಗಿ ಅಧಿಕಾರ ವಹಿಸಿಕೊಳ್ಳಿ ಎಂಬುದಾಗಿ ಕಾಂಗ್ರೆಸ್‌ ನಾಯಕರು ರಾಹುಲ್‌ ಗಾಂಧಿ ಅವರಿಗೆ ಮನವಿ ಮಾಡಲಿದ್ದಾರೆ” ಎಂಬುದಾಗಿ ಕಾಂಗ್ರೆಸ್‌ ನಾಯಕ ಕೆ.ಸಿ.ವೇಣುಗೋಪಾಲ್‌ ಅವರು ಮಾಹಿತಿ ನೀಡಿದ್ದಾರೆ.

ನಿರ್ಣಯದಲ್ಲಿ ಏನಿದೆ?

“ಎಐಸಿಸಿ ಮಾಜಿ ಅಧ್ಯಕ್ಷರಾದ ರಾಹುಲ್‌ ಗಾಂಧಿ ಅವರು ಭಾರತ್‌ ಜೋಡೋ ಯಾತ್ರೆ ಹಾಗೂ ಭಾರತ್ ಜೋಡೋ ನ್ಯಾಯ ಯಾತ್ರೆ ಮೂಲಕ ಹೊಸ ಅಲೆ ಸೃಷ್ಟಿಸಿದ್ದಾರೆ. ಎರಡೂ ಯಾತ್ರೆಗಳ ಮೂಲಕ ಜನರಲ್ಲಿ ಅವರು ಭರವಸೆ ಮೂಡಿಸಿದ್ದಾರೆ. ದೇಶದ ರಾಜಕೀಯ ನೋಟವನ್ನೇ ಬದಲಿಸಲು ರಾಹುಲ್‌ ಗಾಂಧಿ ಯಾತ್ರೆಗಳ ಪಾತ್ರ ನಿರ್ಣಾಯಕವಾಗಿದೆ. ಇದರಿಂದ ಕಾಂಗ್ರೆಸ್‌ನ ಲಕ್ಷಾಂತರ ಕಾರ್ಯಕರ್ತರು ಹಾಗೂ ಕೋಟ್ಯಂತರ ಮತದಾರರ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದೆ” ಎಂಬುದಾಗಿ ಕಾಂಗ್ರೆಸ್‌ ನಿರ್ಣಯದಲ್ಲಿ ಉಲ್ಲೇಖಿಸಿದೆ.

ರಾಹುಲ್‌ ಗಾಂಧಿ ಅವರು ಸಿಡಬ್ಲ್ಯೂಸಿ ನಿರ್ಣಯವನ್ನು ಅಂಗೀಕರಿಸಿದರೆ, ಅವರೇ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಲಿದ್ದಾರೆ. ನರೇಂದ್ರ ಮೋದಿ ಅವರ ಮೂರನೇ ಅವಧಿಯ ಸರ್ಕಾರಕ್ಕೆ ಆ ಮೂಲಕ ರಾಹುಲ್‌ ಗಾಂಧಿ ಅವರು ಸೆಡ್ಡು ಹೊಡೆಯಲಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 99 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಇಂಡಿಯಾ ಒಕ್ಕೂಟವು ಒಟ್ಟು 234 ಕ್ಷೇತ್ರಗಳಲ್ಲಿ ಜಯಿಸಿದೆ. ಇದರಿಂದಾಗಿ ಬಲಿಷ್ಠ ಪ್ರತಿಪಕ್ಷವಾಗಿ ಇರಲು ಕಾಂಗ್ರೆಸ್‌ ತೀರ್ಮಾನಿಸಿದೆ.

ಇದನ್ನೂ ಓದಿ: Rahul Gandhi: ರಾಯ್‌ ಬರೇಲಿ V/S ವಯನಾಡ್‌-ರಾಹುಲ್‌ ಆಯ್ಕೆ ಯಾವುದು?

Continue Reading

ದೇಶ

Elon Musk: ಹ್ಯಾಟ್ರಿಕ್‌ ಸರದಾರ ನರೇಂದ್ರ ಮೋದಿಗೆ ಎಲಾನ್‌ ಮಸ್ಕ್ ಅಭಿನಂದನೆ

Elon Musk: ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಮಸ್ಕ್‌, ತಮ್ಮ ಕಂಪನಿಗಳು ಭಾರತದಲ್ಲಿ ಅತ್ಯಾಕರ್ಷಕ ಕೆಲಸವನ್ನು ಮಾಡಲು ಎದುರು ನೋಡುತ್ತಿದ್ದೇವೆ ಎಂದಿದ್ದಾರೆ. ವಿಶ್ವದ ಅತಿದೊಡ್ಡ ಪ್ರಜಾಸತ್ತಾತ್ಮಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು! ಮುಂದಿನ ದಿನಗಳಲ್ಲಿ ಭಾರತದಲ್ಲಿ ನನ್ನ ಕಂಪನಿಗಳು ಅತ್ಯಾಕರ್ಷಕ ಕೆಲಸ ಮಾಡಲಿರುವ ಆಶಾಭಾವನೆ ನನ್ನಲ್ಲಿದೆ ಎಂದು ಎಲಾನ್‌ ಮಸ್ಕ್ ಶುಕ್ರವಾರ X ನಲ್ಲಿ ಪೋಸ್ಟ್ ಮಾಡಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ(Lok Sabha Election 2024)ಯಲ್ಲಿ ಬಹುಮತ ಪಡೆದು ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರಿಗೆ ದೇಶ-ವಿದೇಶಗಳ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೇ ನಾಳೆ ನಡೆಯಲಿರುವ ಪ್ರಮಾಣ ವಚನ ಕಾರ್ಯಕ್ರಮದಲ್ಲೂ ಭಾಗಿಯಾಗಲಿದ್ದಾರೆ. ಈ ಮಧ್ಯೆ ಟೆಸ್ಲಾ ಮತ್ತು ಎಕ್ಸ್ ಮಾಲೀಕ ಎಲಾನ್‌ ಮಸ್ಕ್(Elon Musk) ಕೂಡ ನರೇಂದ್ರ ಮೋದಿಯ ಹ್ಯಾಟ್ರಿಕ್‌ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಮಸ್ಕ್‌, ತಮ್ಮ ಕಂಪನಿಗಳು ಭಾರತದಲ್ಲಿ ಅತ್ಯಾಕರ್ಷಕ ಕೆಲಸವನ್ನು ಮಾಡಲು ಎದುರು ನೋಡುತ್ತಿದ್ದೇವೆ ಎಂದಿದ್ದಾರೆ. ವಿಶ್ವದ ಅತಿದೊಡ್ಡ ಪ್ರಜಾಸತ್ತಾತ್ಮಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು! ಮುಂದಿನ ದಿನಗಳಲ್ಲಿ ಭಾರತದಲ್ಲಿ ನನ್ನ ಕಂಪನಿಗಳು ಅತ್ಯಾಕರ್ಷಕ ಕೆಲಸ ಮಾಡಲಿರುವ ಆಶಾಭಾವನೆ ನನ್ನಲ್ಲಿದೆ ಎಂದು ಎಲಾನ್‌ ಮಸ್ಕ್ ಶುಕ್ರವಾರ X ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ವರ್ಷದ ಏಪ್ರಿಲ್‌ 21 ಹಾಗೂ 22ರಂದು ಮಸ್ಕ್ ಭಾರತಕ್ಕೆ ಭೇಟಿ ನೀಡಲು ಸಿದ್ಧರಾಗಿದ್ದರು. ಆದರೆ ಅವರು ಕೊನೆಯ ಕ್ಷಣದಲ್ಲಿ ಭಾರತ ಪ್ರವಾಸವನ್ನು ರದ್ದುಗೊಳಿಸಿದರು. ಈ ಬಗ್ಗೆ ಅವರು ಪ್ರತಿಕ್ರಿಯಿಸಿದ್ದು, ದುರದೃಷ್ಟವಶಾತ್, ಟೆಸ್ಲಾ ಕಟ್ಟುಪಾಡುಗಳಿಂದಾಗಿ ಭಾರತ ಭೇಟಿ ವಿಳಂಬವಾಗುತ್ತದೆ. ಆದರೆ ಈ ವರ್ಷಾಂತ್ಯದಲ್ಲಿ ಭೇಟಿ ನೀಡಲು ನಾನು ಎದುರು ನೋಡುತ್ತಿದ್ದೇನೆ” ಎಂದು ಮಸ್ಕ್ ಎಂದಿದ್ದರು.

ಮೋದಿ ಪ್ರತಿಕ್ರಿಯೆ

ಇನ್ನು ಎಲನ್‌ ಮಸ್ಕ್‌ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ನರೇಂದ್ರ ಮೋದಿ, ನಿಮ್ಮ ಪ್ರೀತಿಗೆ ಧನ್ಯವಾದಗಳು ಮಸ್ಕ್‌, ನಿಪ್ರತಿಭಾವಂತ ಭಾರತೀಯ ಯುವಕರು, ರಾಜಕೀಯ ನೀತಿಗಳು ಮತ್ತು ಸ್ಥಿರವಾದ ಪ್ರಜಾಪ್ರಭುತ್ವದ ರಾಜಕೀಯವು ನಮ್ಮ ಎಲ್ಲಾ ಪಾಲುದಾರರಿಗೆ ವ್ಯಾಪಾರ ವಾತಾವರಣವನ್ನು ಒದಗಿಸುವುದನ್ನು ಮುಂದುವರಿಸುತ್ತದೆ ಎಂದು ಟ್ವೀಟ್‌ ಮಾಡಿದ್ದಾರೆ.

ನಾಳೆ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾರತದ ಏಳು ನೆರೆಯ ರಾಷ್ಟ್ರಗಳ ನಾಯಕರು ಭಾಗಿಯಾಗಲಿದ್ದಾರೆ. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝು, ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್; ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ; ಮಾರಿಷಸ್‌ನ ಪ್ರಧಾನ ಮಂತ್ರಿ, ಪ್ರವಿಂದ್ ಕುಮಾರ್ ಜುಗ್ನೌತ್; ನೇಪಾಳದ ಪ್ರಧಾನಿ, ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಮತ್ತು ಭೂತಾನ್ ಪ್ರಧಾನಿ, ತ್ಶೆರಿಂಗ್ ಟೊಬ್ಗೇ ಉಪಸ್ಥಿತರಿರಲಿದ್ದಾರೆ.

ಇದನ್ನೂ ಓದಿ: Narendra Modi: ಮೋದಿ ಪ್ರಮಾಣವಚನಕ್ಕೆ 7 ವಿದೇಶಿ ನಾಯಕರು; 8000 ಅತಿಥಿಗಳು

Continue Reading

Lok Sabha Election 2024

Nitish Kumar: ಇಂಡಿ ಒಕ್ಕೂಟದ ಸಂಚಾಲಕ ಹುದ್ದೆ ನೀಡಲು ನಿರಾಕರಿಸಿದ್ದ ನಿತೀಶ್ ಕುಮಾರ್‌ಗೆ ಈಗ ಪ್ರಧಾನಿಯ ಆಫರ್!

Nitish Kumar: ಲೋಕಸಭಾ ಚುನಾವಣೆಯಲ್ಲಿ 292 ಸೀಟುಗಳನ್ನು ಪಡೆಯುವ ಮೂಲಕ ಎನ್‌ಡಿಎ ಸತತ ಮೂರನೇ ಬಾರಿಗೆ ಅಧಿಕಾರ ನಡೆಸಲಿದೆ. ಈ ಮಧ್ಯೆ ಎನ್‌ಡಿಎ ಒಕ್ಕೂಟಕ್ಕೆ ಬೆಂಬಲ ಸೂಚಿಸಿರುವ ನಿತೀಶ್‌ ಕುಮಾರ್‌ ಅವರಿಗೆ ಪ್ರತಿಪಕ್ಷಗಳ ಇಂಡಿ ಮೈತ್ರಿಕೂಟ ಪ್ರಧಾನಿ ಹುದ್ದೆಯ ಆಫರ್‌ ನೀಡಿತ್ತು ಎಂದು ಜೆಡಿಯು ನಾಯಕ ಕೆ.ಸಿ.ತ್ಯಾಗಿ ಬಾಂಬ್‌ ಸಿಡಿಸಿದ್ದಾರೆ. ʼʼತಮಗೆ ಬೆಂಬಲ ನೀಡಿದರೆ ಪ್ರಧಾನ ಮಂತ್ರಿ ಹುದ್ದೆ ನೀಡುವುದಾಗಿ ನಿತೀಶ್‌ ಕುಮಾರ್‌ ಅವರಿಗೆ ಇಂಡಿ ಒಕ್ಕೂಟದ ನಾಯಕರು ಆಮಿಷ ಒಡ್ಡಿದ್ದರು. ಆದರೆ ನಿತೀಶ್‌ ಕುಮಾರ್‌ ಈ ಆಫರ್‌ ನಿರಾಕರಿಸಿದ್ದಾರೆʼʼ ಎಂದು ತ್ಯಾಗಿ ಹೇಳಿದ್ದಾರೆ.

VISTARANEWS.COM


on

Nitish Kumar
Koo

ನವದಹಲಿ: ಲೋಕಸಭಾ ಚುನಾವಣೆಯಲ್ಲಿ 292 ಸೀಟುಗಳನ್ನು ಪಡೆಯುವ ಮೂಲಕ ಎನ್‌ಡಿಎ (NDA) ಸತತ ಮೂರನೇ ಬಾರಿಗೆ ಅಧಿಕಾರ ನಡೆಸಲಿದೆ. ಈಗಾಗಲೇ ಒಕ್ಕೂಟದ ನಾಯಕರು ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ. ಅದರಂತೆ ನರೇಂದ್ರ ಮೋದಿ (Narendra Modi) ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಿ ನಾಳೆ (ಜೂನ್‌ 9) ಪ್ರಮಾಣ ವಚನ ಸ್ವೀಕರಿಸಲಿದ್ದು, ಇದಕ್ಕಾಗಿ ವೇದಿಕೆ ಸಿದ್ಧವಾಗಿದೆ. ಈ ಮಧ್ಯೆ ಎನ್‌ಡಿಎ ಒಕ್ಕೂಟಕ್ಕೆ ಬೆಂಬಲ ಸೂಚಿಸಿರುವ ನಿತೀಶ್‌ ಕುಮಾರ್‌ (Nitish Kumar) ಅವರಿಗೆ ಪ್ರತಿಪಕ್ಷಗಳ ಇಂಡಿ ಮೈತ್ರಿಕೂಟ ಪ್ರಧಾನಿ ಹುದ್ದೆಯ ಆಫರ್‌ ನೀಡಿತ್ತು ಎಂದು ಜೆಡಿಯು ನಾಯಕ ಕೆ.ಸಿ.ತ್ಯಾಗಿ (KC Tyagi) ಬಾಂಬ್‌ ಸಿಡಿಸಿದ್ದಾರೆ.

ʼʼತಮಗೆ ಬೆಂಬಲ ನೀಡಿದರೆ ಪ್ರಧಾನ ಮಂತ್ರಿ ಹುದ್ದೆ ನೀಡುವುದಾಗಿ ನಿತೀಶ್‌ ಕುಮಾರ್‌ ಅವರಿಗೆ ಇಂಡಿ ಒಕ್ಕೂಟದ ನಾಯಕರು ಆಮಿಷ ಒಡ್ಡಿದ್ದರು. ಆದರೆ ನಿತೀಶ್‌ ಕುಮಾರ್‌ ಈ ಆಫರ್‌ ನಿರಾಕರಿಸಿದ್ದಾರೆʼʼ ಎಂದು ತ್ಯಾಗಿ ಹೇಳಿದ್ದಾರೆ. ಬಿಹಾರದಲ್ಲಿ ಜೆಡಿಯು 12 ಲೋಕಸಭಾ ಕ್ಷೇತ್ರಗಳನ್ನು ಗೆದ್ದುಕೊಂಡಿದ್ದು, ಆ ಮೂಲಕ ನಿತೀಶ್‌ ಕುಮಾರ್‌ ಕಿಂಗ್‌ ಮೇಕರ್‌ ಆಗಿ ಬದಲಾಗಿದ್ದಾರೆ.

16 ಲೋಕಸಭಾ ಸ್ಥಾನಗಳನ್ನು ಗೆದ್ದ ಆಂಧ್ರ ಪ್ರದೇಶದ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಕೂಡ ಸದ್ಯ ದೇಶದಲ್ಲಿ ಮತ್ತೊಬ್ಬ ಕಿಂಗ್‌ ಮೇಕರ್‌ ಆಗಿ ಹೊರ ಹೊಮ್ಮಿದ್ದಾರೆ. ಹೀಗಾಗಿ ಬೆಂಬಲ ನೀಡುವಂತೆ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಅವರೊಂದಿಗೆ ಇಂಡಿ ಒಕ್ಕೂಟವು ಮಾತುಕತೆ ನಡೆಸಿದೆ ಎಂಬ ವರದಿಗಳ ಮಧ್ಯೆ ಕೆ.ಸಿ.ತ್ಯಾಗಿ ಈ ಸ್ಪಷ್ಟನೆ ನೀಡಿದ್ದಾರೆ.

ಇಬ್ಬರೂ ನಾಯಕರು ಇಂಡಿ ಒಕ್ಕೂಟದ ಆಫರ್‌ ನಿರಾಕರಿಸಿದ್ದು, ಈಗಾಗಲೇ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲಿಖಿತ ಬೆಂಬಲ ನೀಡಿದ್ದಾರೆ. ಆದಾಗ್ಯೂ ಅವರು ಕ್ಯಾಬಿನೆಟ್ ಸ್ಥಾನಗಳು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜೆಡಿಯುನ ಹಿರಿಯ ನಾಯಕರಾಗಿರುವ ತ್ಯಾಗಿ ಅವರು ಈ ಬಗ್ಗೆ ಮಾತನಾಡಿ, ʼʼಈ ಹಿಂದೆ ನಿತೀಶ್ ಕುಮಾರ್ ಅವರನ್ನು ಇಂಡಿ ಒಕ್ಕೂಟದ ರಾಷ್ಟ್ರೀಯ ಸಂಚಾಲಕರನ್ನಾಗಿ ಮಾಡಲು ನಿರಾಕರಿಸಲಾಗಿತ್ತು. ಈಗ ಅವರೇ ಪ್ರಧಾನಿಯನ್ನಾಗಿ ಮಾಡಲು ಪ್ರಸ್ತಾಪಗಳನ್ನು ಮುಂದಿಡುತ್ತಿದ್ದಾರೆ” ಎಂದು ಹೇಳಿದ್ದಾರೆ. ಸರಿಯದ ಪ್ರಾತಿನಿಧ್ಯ ಲಭಿಸದೇ ಇರುವುದು ನಿತೀಶ್‌ ಕುಮಾರ್‌ ಅವರು ಇಂಡಿ ಒಕ್ಕೂಟ ತೊರೆಯಲು ಕಾರಣ ಎಂದೂ ತ್ಯಾಗಿ ವಿವರಿಸಿದ್ದಾರೆ. ಯಾವುದೇ ಕಾರಣಕ್ಕೂ ಇನ್ನು ಇಂಡಿ ಒಕ್ಕೂಟಕ್ಕೆ ಮರಳುವ ಪ್ರಶ್ನೆಯೇ ಇಲ್ಲ. ಬಿಜೆಪಿ ಸರಿಯಾದ ಗೌರವ ನೀಡುತ್ತಿದೆ ಎಂದು ಅವರು ಹೇಳಿದ್ದಾರೆ. ಪ್ರಧಾನಿ ಹುದ್ದೆಯ ಆಮಿಷ ಒಡ್ಡಿರುವ ಹೇಳಿಕೆಯನ್ನು ಕಾಂಗ್ರೆಸ್‌ ನಿರಾಕರಿಸಿದೆ.

ಇದನ್ನೂ ಓದಿ: Modi 3.0 Cabinet: ನರೇಂದ್ರ ಮೋದಿ ಕ್ಯಾಬಿನೆಟ್‌ನಲ್ಲಿ ಯಾರಿಗೆಲ್ಲ ಸಚಿವ ಸ್ಥಾನ? ಇವರೇ ನೋಡಿ ಸಂಭಾವ್ಯ ಮಿನಿಸ್ಟರ್‌ಗಳು

ಜನವರಿಯಲ್ಲಿ ಇಂಡಿ ಮೈತ್ರಿಕೂಟದ ಸಂಭಾವ್ಯ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ತೃಣಮೂಲ ಕಾಂಗ್ರೆಸ್‌ನ ಮಮತಾ ಬ್ಯಾನರ್ಜಿ ಪ್ರಸ್ತಾಪಿಸಿದ ಕೆಲವೇ ದಿನಗಳ ನಂತರ ನಿತೀಶ್ ಕುಮಾರ್ ಬಿಜೆಪಿ ನೇತೃತ್ವದ ಎನ್‌ಡಿಎಗೆ ಮರಳಿದ್ದರು. ಈ ಚುನಾವಣೆಯಲ್ಲಿ ಕಾಂಗ್ರೆಸ್‌ ನೇತೃತ್ವದ ಇಂಡಿ ಒಕ್ಕೂಟ 234 ಗೆದ್ದುಕೊಂಡಿದೆ. ಸಂಸತ್ತಿನ ಮ್ಯಾಜಿಕ್‌ ನಂಬರ್‌ 272.

Continue Reading
Advertisement
Niveditha Gowda Demand For Divorce Alimony
ಸ್ಯಾಂಡಲ್ ವುಡ್7 mins ago

Niveditha Gowda: ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ರಾ ನಿವೇದಿತಾ ಗೌಡ?

Kangana Ranaut
ದೇಶ14 mins ago

Kangana Ranaut: ಕಾರಣ ಇದ್ದರೆ ಕೊಲೆ, ಅತ್ಯಾಚಾರ ಮಾಡಬಹುದೆ? ; ವಿರೋಧಿಗಳ ವಿರುದ್ಧ ಗುಡುಗಿದ ಕಂಗನಾ

Bengaluru murder
ಬೆಂಗಳೂರು24 mins ago

Bengaluru Murder : ನಾಪತ್ತೆಯಾದವನು ಅಕ್ರಮ ಸಂಬಂಧಕ್ಕೆ ಬಲಿ; ಶವವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಬಿಸಾಡಿದ ಹಂತಕ!

Prajwal Revanna Case
ಕರ್ನಾಟಕ34 mins ago

Prajwal Revanna Case: ಪೆನ್ ಡ್ರೈವ್ ಹಂಚಿಕೆ ಪ್ರಕರಣದ ಆರೋಪಿ ಕಾರ್ತಿಕ್ ಗೌಡ ಬಂಧನ

IND vs PAK
ಕ್ರೀಡೆ37 mins ago

IND vs PAK: ಪಾಕ್​ ವಿರುದ್ಧ ಈ ಬಾರಿಯೂ ಮರುಕಳಿಸಲಿ ಕೊಹ್ಲಿಯ ಬ್ಯಾಟಿಂಗ್​ ಗತವೈಭವ

Rahul Gandhi
ಪ್ರಮುಖ ಸುದ್ದಿ43 mins ago

Rahul Gandhi: ರಾಹುಲ್‌ ಗಾಂಧಿಯೇ ಪ್ರತಿಪಕ್ಷ ನಾಯಕ; ಕಾಂಗ್ರೆಸ್‌ ಮಹತ್ವದ ತೀರ್ಮಾನ

Narendra Modi
ದೇಶ1 hour ago

Elon Musk: ಹ್ಯಾಟ್ರಿಕ್‌ ಸರದಾರ ನರೇಂದ್ರ ಮೋದಿಗೆ ಎಲಾನ್‌ ಮಸ್ಕ್ ಅಭಿನಂದನೆ

Nikhil Kumaraswamy will stay on Kannada Film industry
ಸ್ಯಾಂಡಲ್ ವುಡ್1 hour ago

Nikhil Kumaraswamy: ಚಿತ್ರರಂಗದಿಂದ ಸ್ವಲ್ಪ ವಿರಾಮ ತೆಗೆದುಕೊಂಡಿದ್ದೇನೆ ಅಷ್ಟೇ ಎಂದ ನಿಖಿಲ್ ಕುಮಾರಸ್ವಾಮಿ

Nitish Kumar
Lok Sabha Election 20241 hour ago

Nitish Kumar: ಇಂಡಿ ಒಕ್ಕೂಟದ ಸಂಚಾಲಕ ಹುದ್ದೆ ನೀಡಲು ನಿರಾಕರಿಸಿದ್ದ ನಿತೀಶ್ ಕುಮಾರ್‌ಗೆ ಈಗ ಪ್ರಧಾನಿಯ ಆಫರ್!

NEET 2024
ಪ್ರಮುಖ ಸುದ್ದಿ1 hour ago

NEET 2024: ನೀಟ್‌ ಅಕ್ರಮ; 1,500 ವಿದ್ಯಾರ್ಥಿಗಳ ಪತ್ರಿಕೆ ಮರು ಮೌಲ್ಯಮಾಪನಕ್ಕೆ ಸಮಿತಿ ರಚಿಸಿದ ಕೇಂದ್ರ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ22 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ23 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು7 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌