IPL 2023: ಧೋನಿ ಕಾಲಿಗೆ ಏನಾಗಿದೆ; ಇರ್ಫಾನ್‌ ಪಠಾಣ್‌ ಬಹಿರಂಗ ಪಡಿಸಿದ ಸತ್ಯವೇನು? - Vistara News

ಕ್ರಿಕೆಟ್

IPL 2023: ಧೋನಿ ಕಾಲಿಗೆ ಏನಾಗಿದೆ; ಇರ್ಫಾನ್‌ ಪಠಾಣ್‌ ಬಹಿರಂಗ ಪಡಿಸಿದ ಸತ್ಯವೇನು?

ಧೋನಿ ಅವರು ಗಾಯದ ಮಧ್ಯೆಯೂ ಐಪಿಎಲ್​ ಆಡುತ್ತಿರುವ ವಿಚಾರ​ವನ್ನು ಇರ್ಫಾನ್‌ ಪಠಾಣ್‌ ಬಹಿರಂಗ ಪಡಿಸಿದ್ದಾರೆ.

VISTARANEWS.COM


on

irfan pathan and dhoni
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ಮಂಡಿನೋವಿನ ಮಧ್ಯೆಯೂ ಐಪಿಎಲ್​ ಆಡುತ್ತಿರುವ ಎಂ.ಎಸ್​ ಧೋನಿ ಅವರ ಬಗ್ಗೆ ಟೀಮ್​ ಇಂಡಿಯಾದ ಮಾಜಿ ಆಟಗಾರ ಇರ್ಫಾನ್‌ ಪಠಾಣ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಡೆಲ್ಲಿ ವಿರುದ್ಧ ಬುಧವಾರ ನಡೆದ ಪಂದ್ಯದಲ್ಲಿ ಚೆನ್ನೈ ತಂಡ ಗೆಲುವು ದಾಖಸಿದೆ. ಪಂದ್ಯದಲ್ಲಿ ಧೋನಿ ಅವರು ಬಿರುಸಿನ ಬ್ಯಾಟಿಂಗ್​ ನಡೆಸಿ ಗಮನಸೆಳೆದಿದ್ದರು.

ಪಂದ್ಯ ಮುಕ್ತಾಯದ ಬಳಿಕ ಡ್ರೆಸಿಂಗ್​ ರೂಮ್​ಗೆ ತೆರಳಿ ಧೋನಿಯನ್ನು ಭೇಟಿಯಾದ ಇರ್ಫಾನ್​ ಪಠಾಣ್​ ಅವರು ಕೆಲ ಕಾಲ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಧೋನಿ ಅವರು ಗಾಯದ ಮಧ್ಯೆಯೂ ಐಪಿಎಲ್​ ಆಡುತ್ತಿರುವ ವಿಚಾರ​ವನ್ನು ಬಹಿರಂಗ ಪಡಿಸಿದ್ದಾರೆ.

ಧೋನಿ ಅವರು ಕಾಲಿಗೆ ಕಟ್ಟಿರುವ ಬ್ಯಾಂಡೆಡ್​ ಜತೆಗಿನ ಫೋಟೊವನ್ನು ಹಂಚಿಕೊಂಡಿರುವ ಇರ್ಫಾನ್​ ಪಠಾಣ್, ‘ರನ್ನಿಂಗ್‌ ಬಿಟ್​ವೀನ್ ವಿಕೆಟ್‌ನಲ್ಲಿ ಧೋನಿ ಕುಂಟುತ್ತಾ ಓಡುತ್ತಿರುವುದನ್ನು ಕಂಡು ನನಗೆ ತುಂಬಾ ಬೇಸರವಾಯಿತು. ಏಕೆಂದರೆ ಅವರು ಚಿರತೆಯಂತೆ ಓಡುವುದನ್ನು ನಾನು ಕಂಡಿದ್ದೇನೆ” ಗಾಯದ ಮಧ್ಯೆಯೂ ಅವರು ವಿಶ್ರಾಂತಿ ಪಡೆಯದೇ ತಂಡದ ಗೆಲುವಿಗಾಗಿ ಪಣತ್ತೊಟ್ಟಿರುವುದು ನಿಜಕ್ಕೂ ಹೆಮ್ಮೆಯ ವಿಚಾರ” ಎಂದು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

ಧೋನಿ ಅವರು ಮಂಡಿನೋವಿನಿಂದ ಬಳಲುತ್ತಿರುವ ವಿಚಾರವನ್ನು ತಂಡದ ಕೋಚ್​ ಸ್ಟೀಫನ್‌ ಫ್ಲೆಮಿಂಗ್‌ ಅವರು ಐಪಿಎಲ್ ಆರಂಭಕ್ಕೂ ಮುನ್ನವೇ ಬಹಿರಂಗ ಪಡಿಸಿದ್ದರು. ಧೋನಿ ಅವರು ಮಂಡಿನೋವಿನ ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಈ ಬಾರಿಯ ಐಪಿಎಲ್​ನಲ್ಲಿ ಈ ಹಿಂದಿನಂತೆ ಓಡಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ IPL 2023: ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ವಿಶೇಷ ದಾಖಲೆ ಬರೆದ ಶಿವಂ ದುಬೆ

ಗಾಯದಿಂದ ಬಳಲುತ್ತಿರುವ ಧೋನಿ ಅವರು ಈ ಬಾರಿಯ ಐಪಿಎಲ್​ ಬಳಿಕ ವಿದಾಯ ಹೇಳುವುದು ಖಚಿತ ಎಂಬಂತಿದೆ. ಐಪಿಎಲ್​ ಮುಗಿದ ತಕ್ಷಣ ಅವರು ಮಂಡಿನೋವಿನ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆ ಇದೆ. ಅವರಿಗೆ 40 ವರ್ಷ ದಾಟಿದ ಕಾರಣ ಈ ಶಸ್ತ್ರಚಿಕಿತ್ಸೆಯಿಂದ ಗುಣಮುಖರಾಗಿ ಮತ್ತೆ ಕ್ರಿಕೆಟ್​ ಆಡಲು ಕಷ್ಟವಾಗಬಹುದು. ಹೀಗಾಗಿ ಅವರು ಐಪಿಎಲ್​ಗೆ ಗುಡ್​ ಬೈ ಹೇಳುವುದು ಪಕ್ಕಾ ಎನ್ನಲಡ್ಡಿಯಿಲ್ಲ. ಸದ್ಯ ಚೆನ್ನೈ ಸೂಪರ್​ ಕಿಂಗ್ಸ್​ ಆಡಿದ 12 ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿ 15 ಅಂಕದೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಧೋನಿ ಕೇವಲ 9 ಎಸೆತಗಳಲ್ಲಿ 2 ಸಿಕ್ಸರ್​ ಮತ್ತು ಒಂದು ಬೌಂಡರಿ ನೆರವಿನಿಂದ 20 ರನ್​ ಚಚ್ಚಿ ಮಿಂಚಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs BAN: ಕೊಹ್ಲಿ ಬ್ಯಾಟಿಂಗ್​ ಬಗ್ಗೆ ಸ್ವತಃ ಬೇಸರ ವ್ಯಕ್ತಪಡಿಸಿದ ಬ್ಯಾಟಿಂಗ್​ ಕೋಚ್​

IND vs BAN: ಕೊಹ್ಲಿ ಬ್ಯಾಟಿಂಗ್​ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ವಿಕ್ರಮ್ ರಾಥೋರ್, “ಕೊಹ್ಲಿ ಬ್ಯಾಟಿಂಗ್​ ಬಗ್ಗೆ ನನಗೆ ತೃಪ್ತಿಯಿಲ್ಲ. ಮುಂದಿನ ಪಂದ್ಯದಲ್ಲಿ ಕೊಹ್ಲಿ ಉತ್ತಮ ರನ್​ ಗಳಿಸಿದರೆ ನಾನು ಹೆಚ್ಚು ಸಂತಸಪಡುತ್ತೇನೆ. ಟೀಮ್​ ಇಂಡಿಯಾ ಪರ ಹೆಚ್ಚು ಪಂದ್ಯಗಳನ್ನು ಆಡದ ಆಟಗಾರರು ಉತ್ತಮವಾಗಿ ರನ್​ ಗಳಿಸುತ್ತಿದ್ದಾರೆ. ಇದು ಒಳ್ಳೆಯ ವಿಚಾರ” ಎಂದು ಹೇಳಿದರು.

VISTARANEWS.COM


on

IND vs BAN
Koo

ಆ್ಯಂಟಿಗುವಾ: ಹಾಲಿ ಆವೃತ್ತಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿರಾಟ್​ ಕೊಹ್ಲಿ(Virat Kohli) ಅವರು ಸತತ ಬ್ಯಾಟಿಂಗ್​ ವೈಫಲ್ಯ ಎದುರಿಸುತ್ತಿರುವ ಬಗ್ಗೆ ಟೀಮ್​ ಇಂಡಿಯಾದ ಬ್ಯಾಟಿಂಗ್​ ಕೋಚ್(India batting coach)​ ವಿಕ್ರಮ್ ರಾಥೋರ್(Vikram Rathour) ಬೇಸರ ವ್ಯಕ್ತಪಡಿಸಿದ್ದಾರೆ. ಕೊಹ್ಲಿಯ ಬ್ಯಾಟಿಂಗ್​ ಕಂಡು ಅತೀವ ಬೇಸರ ತಂದೊಡ್ಡಿದೆ ಎಂದು ಹೇಳಿದ್ದಾರೆ.

ಕೊಹ್ಲಿ ಬ್ಯಾಟಿಂಗ್​ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ವಿಕ್ರಮ್ ರಾಥೋರ್, “ಕೊಹ್ಲಿ ಬ್ಯಾಟಿಂಗ್​ ಬಗ್ಗೆ ನನಗೆ ತೃಪ್ತಿಯಿಲ್ಲ. ಮುಂದಿನ ಪಂದ್ಯದಲ್ಲಿ ಕೊಹ್ಲಿ ಉತ್ತಮ ರನ್​ ಗಳಿಸಿದರೆ ನಾನು ಹೆಚ್ಚು ಸಂತಸಪಡುತ್ತೇನೆ. ಟೀಮ್​ ಇಂಡಿಯಾ ಪರ ಹೆಚ್ಚು ಪಂದ್ಯಗಳನ್ನು ಆಡದ ಆಟಗಾರರು ಉತ್ತಮವಾಗಿ ರನ್​ ಗಳಿಸುತ್ತಿದ್ದಾರೆ. ಇದು ಒಳ್ಳೆಯ ವಿಚಾರ” ಎಂದು ಹೇಳಿದರು.

ಕೊಹ್ಲಿಯನ್ನು ಆರಂಭಿಕನಾಗಿ ಆಡಿಸಿದ್ದು ಕೂಡ ಅವರ ಬ್ಯಾಟಿಂಗ್​ ವೈಫಲ್ಯಕ್ಕೆ ಕಾರಣವಿರಬಹುದು. ಕೆಲ ವರ್ಷಗಳಿಂದ ಐಪಿಎಲ್​ನಲ್ಲಿ ಕೊಹ್ಲಿ ಆರಂಭಿಕನಾಗಿ ಆಡಿದ್ದರೂ ಕೂಡ ಐಸಿಸಿ ಟೂರ್ನಿಯಲ್ಲಿ ಇದುವರೆಗೂ ಆಡಿರಲಿಲ್ಲ. ಶೈನಿಂಗ್​ ಬಾಲ್​ನಲ್ಲಿ ಅವರಿಗೆ ಆಡಿದ ಅನುಭವ ಕೂಡ ಅಷ್ಟಾಗಿ ಇಲ್ಲ. ಏನಿದ್ದರೂ ಅವರು ಹೆಚ್ಚು ಸಕ್ಸನ್​ ಕಂಡಿರುವುದು ಮಧ್ಯಮ ಕ್ರಮಾಂಕದಲ್ಲಿ.

ಇದನ್ನೂ ಓದಿ Virat Kohli: ಶ್ರೀಲಂಕಾದ ಮಾಜಿ ಆಟಗಾರನ ವಿಶ್ವ ದಾಖಲೆ ಮೇಲೆ ಕಣ್ಣಿಟ್ಟ ಕಿಂಗ್​ ಕೊಹ್ಲಿ

ಸ್ಲೋ ಪಿಚ್​ ಕೂಡ ಕಾರಣ?

ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸುವ ಮುನ್ನವೇ ಅಮೆರಿಕ ಮತ್ತು ವಿಂಡೀಸ್​ ಪಿಚ್​ಗಳು ನಿಧಾನಗತಿಯದ್ದಾಗಿದ್ದು, ಕೊಹ್ಲಿಗೆ ಇದು ಸೂಕ್ತವಲ್ಲ ಎನ್ನುವ ಚರ್ಚೆಗಳು ಕೂಡ ನಡೆದಿತ್ತು. ಅಲ್ಲದೆ ಅವರನ್ನು ಆಯ್ಕೆ ಮಾಡುವುದು ಅನುಮಾನ ಎನ್ನಲಾಗಿತ್ತು. ಆದರೆ, ಸ್ಟಾರ್​ ಆಟಗಾರನನ್ನು ಕೈ ಬಿಟ್ಟರೆ ಬಿಸಿಸಿಐ ವಿರುದ್ಧ ಭಾರೀ ಟೀಕೆ ಮತ್ತು ವಿರೋಧ ವ್ಯಕ್ತವಾಗುವ ನಿಟ್ಟಿನಲ್ಲಿ ಅವರಿಗೆ ಅವಕಾಶ ನೀಡಲಾಗಿತ್ತು. ಇದೀಗ ಕೊಹ್ಲಿಯ ಬ್ಯಾಟಿಂಗ್​ ವೈಫಲ್ಯಕ್ಕೆ ನಿಧಾನಗತಿಯ ಪಿಚ್ ಕೂಡ ಕಾರಣವಾಗಿರಬಹುದು.

ವಿಶ್ವ ದಾಖಲೆ ಸನಿಹ ಕೊಹ್ಲಿ


ಇಂದು ನಡೆಯುವ ಟಿ20 ವಿಶ್ವಕಪ್​ನ(T20 World Cup 2024) ಸೂಪರ್​-8 ಪಂದ್ಯದಲ್ಲಿ(IND vs BAN Super 8 Match) ಬಾಂಗ್ಲಾದೇಶ(IND vs BAN) ವಿರುದ್ಧ ಕೊಹ್ಲಿ 8 ಬೌಂಡರಿ ಬಾರಿಸಿದರೆ, ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ಬೌಂಡರಿ(most fours in T20 World Cup) ಬಾರಿಸಿರುವ ಶ್ರೀಲಂಕಾದ ಮಾಜಿ ಆಟಗಾರ ಮಹೇಲಾ ಜಯವರ್ಧನೆ(Mahela Jayawardene) ದಾಖಲೆಯನ್ನು ಮುರಿಯಲಿದ್ದಾರೆ. ಜಯವರ್ಧನೆ 31 ಟಿ20 ವಿಶ್ವಕಪ್​ ಪಂದ್ಯಗಳನ್ನಾಡಿ 111 ಬೌಂಡರಿ ಬಾರಿಸಿ ಸದ್ಯ ಅಗ್ರಸ್ಥಾನದಲ್ಲಿದ್ದಾರೆ. ಕೊಹ್ಲಿ ಸದ್ಯ 104* ಬೌಂಡರಿ ಬಾರಿಸಿ ದ್ವಿತೀಯ ಸ್ಥಾನಿಯಾಗಿದ್ದಾರೆ.

Continue Reading

ಕ್ರಿಕೆಟ್

Virat Kohli: ಶ್ರೀಲಂಕಾದ ಮಾಜಿ ಆಟಗಾರನ ವಿಶ್ವ ದಾಖಲೆ ಮೇಲೆ ಕಣ್ಣಿಟ್ಟ ಕಿಂಗ್​ ಕೊಹ್ಲಿ

Virat Kohli: ವಿರಾಟ್​ ಕೊಹ್ಲಿ ಬಾಂಗ್ಲಾ ಎದುರಿನ ಪಂದ್ಯದಲ್ಲಿ 8 ಬೌಂಡರಿ ಬಾರಿಸಿದರೆ, ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ಬೌಂಡರಿ(most fours in T20 World Cup) ಬಾರಿಸಿರುವ ಶ್ರೀಲಂಕಾದ ಮಾಜಿ ಆಟಗಾರ ಮಹೇಲಾ ಜಯವರ್ಧನೆ(Mahela Jayawardene) ದಾಖಲೆಯನ್ನು ಮುರಿಯಲಿದ್ದಾರೆ.

VISTARANEWS.COM


on

Virat Kohli
Koo

ಆ್ಯಂಡಿಗುವಾ: ಭಾರತ ತಂಡ ಇಂದು ನಡೆಯುವ ಟಿ20 ವಿಶ್ವಕಪ್​ನ(T20 World Cup 2024) ಸೂಪರ್​-8 ಪಂದ್ಯದಲ್ಲಿ(IND vs BAN Super 8 Match) ಬಾಂಗ್ಲಾದೇಶದ ಸವಾಲು ಎದುರಿಸಲಿದೆ. ಈ ಪಂದ್ಯದಲ್ಲಿ ವಿರಾಟ್​ ಕೊಹ್ಲಿ(Virat Kohli) ಅವರು ವಿಶ್ವ ದಾಖಲೆಯೊಂದನ್ನು ನಿರ್ಮಿಸುವ ಸನಿಹದಲ್ಲಿದ್ದಾರೆ. ಕಳೆದ 4 ಪಂದ್ಯಗಳಲ್ಲಿ ಘೋರ ಬ್ಯಾಟಿಂಗ್​ ವೈಫಲ್ಯ ಎದುರಿಸಿದ್ದ ಕೊಹ್ಲಿ ಈ ಪಂದ್ಯದಲ್ಲಿ ನಿರೀಕ್ಷಿತ ಬ್ಯಾಟಿಂಗ್​ ಪ್ರದರ್ಶಿಸುವ ಆತ್ಮವಿಶ್ವಾಸದಲ್ಲಿದ್ದಾರೆ.

ವಿರಾಟ್​ ಕೊಹ್ಲಿ ಬಾಂಗ್ಲಾ ಎದುರಿನ ಪಂದ್ಯದಲ್ಲಿ 8 ಬೌಂಡರಿ ಬಾರಿಸಿದರೆ, ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ಬೌಂಡರಿ(most fours in T20 World Cup) ಬಾರಿಸಿರುವ ಶ್ರೀಲಂಕಾದ ಮಾಜಿ ಆಟಗಾರ ಮಹೇಲಾ ಜಯವರ್ಧನೆ(Mahela Jayawardene) ದಾಖಲೆಯನ್ನು ಮುರಿಯಲಿದ್ದಾರೆ. ಜಯವರ್ಧನೆ 31 ಟಿ20 ವಿಶ್ವಕಪ್​ ಪಂದ್ಯಗಳನ್ನಾಡಿ 111 ಬೌಂಡರಿ ಬಾರಿಸಿ ಸದ್ಯ ಅಗ್ರಸ್ಥಾನದಲ್ಲಿದ್ದಾರೆ. ಕೊಹ್ಲಿ ಸದ್ಯ 104* ಬೌಂಡರಿ ಬಾರಿಸಿ ದ್ವಿತೀಯ ಸ್ಥಾನಿಯಾಗಿದ್ದಾರೆ.

ಇದನ್ನೂ ಓದಿ IND vs BAN: ಇಂದಿನ ಪಂದ್ಯಕ್ಕೆ ಟೀಮ್​ ಇಂಡಿಯಾದಲ್ಲಿ ಒಂದು ಮಹತ್ವದ ಬದಲಾವಣೆ

ಅತ್ಯಧಿಕ ಬೌಂಡರಿ ಬಾರಿದ ಬ್ಯಾಟರ್​ಗಳು

ಆಟಗಾರದೇಶಇನಿಂಗ್ಸ್​ಬೌಂಡರಿ
ಮಹೇಲಾ ಜಯವರ್ಧನೆಶ್ರೀಲಂಕಾ31111
ವಿರಾಟ್ ಕೊಹ್ಲಿಭಾರತ31104*
ತಿಲಕರತ್ನೆ ದಿಲ್ಶನ್ಶ್ರೀಲಂಕಾ35101
ಡೇವಿಡ್​ ವಾರ್ನರ್ಆಸ್ಟ್ರೇಲಿಯಾ3897*
ರೋಹಿತ್​ ಶರ್ಮ​ಭಾರತ4397*
ಜಾಸ್​ ಬಟ್ಲರ್​ಇಂಗ್ಲೆಂಡ್3381*
ಕ್ರಿಸ್​ ಗೇಲ್​​ವೆಸ್ಟ್​ ಇಂಡೀಸ್​3178
ಕೇನ್​ ವಿಲಿಯಮ್ಸನ್​ನ್ಯೂಜಿಲ್ಯಾಂಡ್​2971*
ಬ್ರೆಂಡನ್ ಮೆಕಲಮ್ನ್ಯೂಜಿಲ್ಯಾಂಡ್2567
ಕುಮಾರ್ ಸಂಗಕ್ಕಾರಶ್ರೀಲಂಕಾ3163

ಐಪಿಎಲ್​ ಟೂರ್ನಿಯಲ್ಲಿ ಕೊಹ್ಲಿ 700ಕ್ಕೂ ಅಧಿಕ ರನ್​ ಗಳಿಸಿ ಟೂರ್ನಿಯಲ್ಲೇ ಗರಿಷ್ಠ ರನ್​ ಗಳಿಸಿದ ಆಟಗಾರ ಎನಿಸಿಕೊಂಡಿದ್ದರು. ಆದರೆ, ಈ ಯಶಸ್ಸು ಕೊಹ್ಲಿಗೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಕೈ ಹಿಡಿಯಲಿಲ್ಲ. ಇಂದು ನಡೆಯುವ ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ತಮ್ಮ ಎಂದಿನ ಬ್ಯಾಟಿಂಗ್​ ಕ್ರಮಾಂಕ 3ನೇ ಸ್ಥಾನದಲ್ಲೇ ಆಡುವ ಸಾಧ್ಯತೆ ಇದೆ. ಯಶಸ್ವಿ ಜೈಸ್ವಾಲ್​ ಈ ಪಂದ್ಯದಲ್ಲಿ ಶಿವಂ ದುಬೆ ಸ್ಥಾನಕ್ಕೆ ತಂಡಕ್ಕೆ ಆಯ್ಕೆಯಾಗುವ ನಿರೀಕ್ಷೆ ಇದೆ. ಬಾಂಗ್ಲಾ ವಿರುದ್ಧ ಕೊಹ್ಲಿ ಉತ್ತಮ ಬ್ಯಾಟಿಂಗ್​ ಎಕಾನಮಿ ಕೂಡ ಹೊಂದಿದ್ದಾರೆ.

ಇಂದಿನ ಪಂದ್ಯಕ್ಕೆ ಯಾವುದೇ ಮಳೆ ಭೀತಿ ಎದುರಾಗಿಲ್ಲ. ಹೀಗಾಗಿ ಅಭಿಮಾನಿಗಳು ಪಂದ್ಯವನ್ನು ಸಂಪೂರ್ಣವಾಗಿ ಕಣ್ತುಂಬಿಕೊಳ್ಳಬಹುದು. ಹವಾಮಾನ ಇಲಾಖೆ ವರದಿ ಪ್ರಕಾರ, ಪಂದ್ಯ ನಡೆಯುವ ವೇಳೆ ತಾಪಮಾನವು 37 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ತಿಳಿಸಿದೆ. ಮಳೆಯಾಗುವ ಸಾಧ್ಯತೆ ಶೇ.1ರಷ್ಟಿದೆ. ತೇವಾಂಶವು 68% ಆಗಿರುತ್ತದೆ. ಭಾರತದಲ್ಲಿ ಈ ಪಂದ್ಯ ರಾತ್ರಿ ಪ್ರಸಾರಗೊಳ್ಳಲಿದೆ. ಈ ಕ್ರೀಡಾಂಗಣದಲ್ಲಿ ಒಟ್ಟು 34 ಟಿ 20 ಪಂದ್ಯಗಳಿಗೆ ಆತಿಥ್ಯ ವಹಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ತಂಡಗಳು 16 ಪಂದ್ಯಗಳನ್ನು ಗೆದ್ದಿದೆ.

Continue Reading

ಕ್ರೀಡೆ

IND vs BAN: ಇಂದಿನ ಪಂದ್ಯಕ್ಕೆ ಟೀಮ್​ ಇಂಡಿಯಾದಲ್ಲಿ ಒಂದು ಮಹತ್ವದ ಬದಲಾವಣೆ

IND vs BNG: ನಾಯಕ ರೋಹಿತ್​ ಮತ್ತು ಕೊಹ್ಲಿ(Virat Kohli) ಜೋಡಿ ಆಡಿದ ಎಲ್ಲ ಪಂದ್ಯಗಳಲ್ಲಿಯೂ ವಿಫಲರಾಗಿದ್ದಾರೆ. ಹೀಗಾಗಿ ಕೊಹ್ಲಿ ಬದಲು ರೋಹಿತ್​ ಮತ್ತು ಜೈಸ್ವಾಲ್​ ಆರಂಭಿಕರಾಗಿ ಆಡುವ ಸಾಧ್ಯತೆ ಇದೆ. ಜೈಸ್ವಾಲ್​ ವಿಂಡೀಸ್​ ನೆಲದಲ್ಲಿ ಉತ್ತಮ ಬ್ಯಾಟಿಂಗ್​ ದಾಖಲೆ ಕೂಡ ಹೊಂದಿದ್ದಾರೆ.

VISTARANEWS.COM


on

IND vs BAN
Koo

ಆ್ಯಂಟಿಗುವಾ: ಬಾಂಗ್ಲಾದೇಶ(IND vs BAN) ವಿರುದ್ಧ ಇಂದು ನಡೆಯುವ ಸೂಪರ್​-8 ಪಂದ್ಯಕ್ಕೆ ಟೀಮ್​ ಇಂಡಿಯಾ ತನ್ನ ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ ಮಾಡುವ ಸಾಧ್ಯತೆ ಇದೆ. ಕಳೆದ ಪಂದ್ಯದಲ್ಲಿ ಮೊಹಮ್ಮದ್​ ಸಿರಾಜ್​ ಅವರನ್ನು ಕೈ ಬಿಟ್ಟು ಅವರ ಸ್ಥಾನದಲ್ಲಿ ಕುಲ್​ದೀಪ್​ಗೆ ಅವಕಾಶ ನೀಡಲಾಗಿತ್ತು. ಇದೀಗ ಬಾಂಗ್ಲಾ ಎದುರಿನ ಪಂದ್ಯದಲ್ಲಿ ಶಿವಂ ದುಬೆ(Shivam Dube) ಅವರನ್ನು ಬೆಂಚ್​ ಕಾಯಿಸುವುದು ಬಹುತೇಖ ಖಚಿತ ಎನ್ನುತ್ತಿವೆ ಮೂಲಗಳು.

ಐಪಿಎಲ್​​ನ ಆರಂಭಿಕ ಕೆಲ ಪಂದ್ಯಗಳಲ್ಲಿ ಸತತವಾಗಿ ಬಿರುಸಿನ ಬ್ಯಾಟಿಂಗ್​ ಮೂಲಕ ಅರ್ಧಶತಕ ಬಾರಿಸಿ ಗಮನಸೆಳೆದಿದ್ದ ದುಬೆ, ಟಿ20 ವಿಶ್ವಕಪ್​ನಲ್ಲಿ ರನ್​ ಗಳಿಸಲು ಪರದಾಟ ನಡೆಸುತ್ತಿದ್ದಾರೆ. ಆಡಿದ ಎಲ್ಲ ಪಂದ್ಯಗಳಲ್ಲಿಯೂ ವೈಫಲ್ಯ ಕಂಡಿದ್ದಾರೆ. ಹೀಗಾಗಿ ಇವರನ್ನು ಕೈ ಬಿಟ್ಟು ಹೊಡಿ-ಬಡಿ ಆಟಕ್ಕೆ ಹೆಸರುವಾಸಿಯಾಗಿರುವ ಸಂಜು ಸ್ಯಾಮ್ಸನ್​ ಅಥವಾ ಯಶಸ್ವಿ ಜೈಸ್ವಾಲ್(Yashasvi Jaiswal)​ ಅವರನ್ನು ಆಡಿಸುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ ಯಶಸ್ವಿ ಜೈಸ್ವಾಲ್​ಗೆ ಇಂದಿನ ಪಂದ್ಯದಲ್ಲಿ ಅವಕಾಶ ಸಿಗುವುದು ಖಚಿತ ಎನ್ನಲಾಗಿತ್ತಿದೆ. ಏಕೆಂದರೆ ತಂಡ ಪವರ್‌ ಪ್ಲೇಯಲ್ಲಿ ನಿರೀಕ್ಷಿತ ಆರಂಭ ಪಡೆಯಲು ವಿಫ‌ಲವಾಗುತ್ತಿದೆ. ನಾಯಕ ರೋಹಿತ್​ ಮತ್ತು ಕೊಹ್ಲಿ(Virat Kohli) ಜೋಡಿ ಆಡಿದ ಎಲ್ಲ ಪಂದ್ಯಗಳಲ್ಲಿಯೂ ವಿಫಲರಾಗಿದ್ದಾರೆ. ಹೀಗಾಗಿ ಕೊಹ್ಲಿ ಬದಲು ರೋಹಿತ್​ ಮತ್ತು ಜೈಸ್ವಾಲ್​ ಆರಂಭಿಕರಾಗಿ ಆಡುವ ಸಾಧ್ಯತೆ ಇದೆ. ಜೈಸ್ವಾಲ್​ ವಿಂಡೀಸ್​ ನೆಲದಲ್ಲಿ ಉತ್ತಮ ಬ್ಯಾಟಿಂಗ್​ ದಾಖಲೆ ಕೂಡ ಹೊಂದಿದ್ದಾರೆ. ತಮ್ಮ ಚೊಚ್ಚಲ ಟೆಸ್ಟ್​ನಲ್ಲಿಯೇ ಶತಕ ಬಾರಿಸಿ ಮಿಂಚಿದ್ದರು. ಹಕವು ಮಾಜಿ ಆಟಗಾರರು ಕೂಡ ಕೊಹ್ಲಿಯನ್ನು ಆರಂಭಿಕನಾಗಿ ಆಡಿಸುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಜೈಸ್ವಾಲ್​ ಅವಕಾಶ ಪಡೆಯಬಹುದು.

ಸಿರಾಜ್‌ ಬದಲು ಕುಲದೀಪ್‌ ಅವರನ್ನು ಆಡಿಸಿದ ಪ್ರಯೋಗ ಯಶಸ್ವಿಯಾಗಿದೆ. ಹೀಗಾಗಿ ಸಿರಾಜ್​ ಈ ಪಂದ್ಯದಲ್ಲಿಯೂ ಬೆಂಚ್​ ಕಾಯಬೇಕಾಗಬಹುದು. ರಿಷಭ್​ ಪಂತ್​ಗೆ ಬ್ಯಾಕ್​ ಅಪ್​ ಕೀಪರ್ ಆಗಿ ತಂಡದಲ್ಲಿ ಸ್ಥಾನ ಪಡೆದಿರುವ​ ಸಂಜುಗೆ ಅವಕಾಶ ಸಿಗುವುದು ಅನುಮಾನ. ಏಕೆಂದರೆ, ಸಂಜು ಆಡಿ ಒಂದೊಮ್ಮೆ​ ಗಾಯಗೊಂಡರೆ ತಂಡದಲ್ಲಿ ಬೇರೆ ಮೀಸಲು ಕೀಪರ್​ ಇಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸಂಜು ಆಡಿಸುವುದು ಕಷ್ಟ ಸಾಧ್ಯ.

ಇದನ್ನೂ ಓದಿ IND vs BAN: ಇಂದು ಭಾರತ-ಬಾಂಗ್ಲಾ ಸೂಪರ್​-8 ಸೆಣಸಾಟ; ಪಂದ್ಯಕ್ಕೆ ಮಳೆ ಭೀತಿ ಇದೆಯೇ?

ಸಂಭಾವ್ಯ ತಂಡ


ರೋಹಿತ್​ ಶರ್ಮ, ಯಶಸ್ವಿ ಜೈಸ್ವಾಲ್​, ವಿರಾಟ್‌ ಕೊಹ್ಲಿ, ರಿಷಭ್‌ ಪಂತ್‌, ಸೂರ್ಯಕುಮಾರ್‌ ಯಾದವ್, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್‌ ಪಟೇಲ್, ಜಸ್​ಪ್ರೀತ್​ ಬುಮ್ರಾ, ಕುಲದೀಪ್​ ಯಾದವ್, ಅರ್ಶ್‌ದೀಪ್‌ ಸಿಂಗ್.

ಮಳೆ ಭೀತಿ ಇಲ್ಲ


ಹವಾಮಾನ ವರದಿಗಳ ಪ್ರಕಾರ, ಶನಿವಾರ ಈ ಸ್ಥಳದ ತಾಪಮಾನವು ಹಗಲಿನಲ್ಲಿ 37 ಡಿಗ್ರಿ ಸೆಲ್ಸಿಯಸ್ ಮತ್ತು ರಾತ್ರಿ 27 ಡಿಗ್ರಿ ಸೆಲ್ಸಿಯಸ್ ಗೆ ಇಳಿಯುತ್ತದೆ. ಮಧ್ಯಾಹ್ನ ಸ್ವಲ್ಪ ಮೋಡ ಕವಿದ ವಾತಾವರಣ ಕಂಡು ಬಂದರೂ ಕೂಡ ಮಳೆಯಾಗುವ ಸಾಧ್ಯತೆ ಶೇ.1ರಷ್ಟಿದೆ. ತೇವಾಂಶವು 68% ಆಗಿರುತ್ತದೆ. ಭಾರತದಲ್ಲಿ ಈ ಪಂದ್ಯ ರಾತ್ರಿ ಪ್ರಸಾರಗೊಳ್ಳಲಿದೆ. ಈ ಕ್ರೀಡಾಂಗಣದಲ್ಲಿ ಒಟ್ಟು 34 ಟಿ 20 ಪಂದ್ಯಗಳಿಗೆ ಆತಿಥ್ಯ ವಹಿಸಿದೆ. ಮೊದಲು ಬ್ಯಾಟಿಂಗ್ ಮಾಡುವ ತಂಡಗಳು 16 ಪಂದ್ಯಗಳನ್ನು ಗೆದ್ದಿದ್ದರೆ, ಎರಡನೇ ಬ್ಯಾಟಿಂಗ್ ಮಾಡುವ ತಂಡಗಳು 16 ಪಂದ್ಯಗಳನ್ನು ಗೆದ್ದಿವೆ.

Continue Reading

ಕ್ರಿಕೆಟ್

MS Dhoni Friends Birthday: ಗೆಳೆಯನ ಹುಟ್ಟುಹಬ್ಬ ಆಚರಿಸಿದ ಧೋನಿ; ವಿಡಿಯೊ ವೈರಲ್‌

MS Dhoni Friends Birthday: ಎಂ.ಎಸ್ ಧೋನಿ ಜೀವನಾಧಾರಿತ ‘ಎಂ.ಎಸ್ ಧೋನಿ, ದಿ ಅನ್‌ಟೋಲ್ಡ್ ಸ್ಟೋರಿ’ ಬಾಲಿವುಡ್ ಚಿತ್ರ 2016ರಲ್ಲಿ ಭಾರಿ ಸದ್ದು ಮಾಡಿತ್ತು. ಧೋನಿ ಯಶೋಗಾಥೆಯ ಈ ಚಿತ್ರ ಬಾಲಿವುಡ್ ಬಾಕ್ಸ್ ಆಫೀಸ್‌ನಲ್ಲಿ ಮಾತ್ರವಲ್ಲ, ಚಿತ್ರ ಪ್ರೀಯರ ಮೆಚ್ಚುಗೆಗೂ ಪಾತ್ರವಾಗಿತ್ತು. ಈ ಸಿನೆಮಾದಲ್ಲಿ ಧೋನಿ ಅವರು ಕ್ರಿಕೆಟ್​ ಆಟಗಾರನಾಗಿ ಬೆಳೆದು ಬಂದ, ಅವರಿಗೆ ನೆರವು ನೀಡಿದ ಸ್ನೇಹಿತರ ಕುರಿತಾಗಿಯೂ ತೋರಿಸಲಾಗಿತ್ತು.

VISTARANEWS.COM


on

MS Dhoni Friends Birthday
Koo

ರಾಂಚಿ: ಸಾರ್ವಕಾಲಿಕ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರಾದ ಭಾರತ ತಂಡದ ಮಾಜಿ ಆಟಗಾರ ಎಂ.ಎಸ್ ಧೋನಿ(MS Dhoni) ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿ ಕೆಲವು ವರ್ಷಗಳಾಗಿವೆ. ಕೇವಲ ಐಪಿಎಲ್​ ಟೂರ್ನಿಯಲ್ಲಿ(IPL) ಮಾತ್ರ ಆಡುತ್ತಿದ್ದಾರೆ. ಧೋನಿ ಎಷ್ಟೇ ದೊಡ್ಡ ಖ್ಯಾತಿ ಗಳಿಸಿದ್ದರೂ ಕೂಡ ತಮ್ಮ ಬಾಲ್ಯದ ಸ್ನೇಹಿತರನ್ನು ಇಂದಿಗೂ ಮರೆತಿಲ್ಲ. ಧೋನಿ ಅವರು ತಮ್ಮ ಗೆಳೆಯರೊಬ್ಬರ(MS Dhoni Friends Birthday) ಹುಟ್ಟುಹಬ್ಬ ಆಚರಿಸಿದ ವಿಡಿಯೊವೊಂದು ವೈರಲ್‌(viral video) ಆಗಿದೆ.

ರಾಂಚಿಯಲ್ಲಿರುವ ಧೋನಿ ತಮ್ಮ ಬಾಲ್ಯದ ಗೆಳೆಯನ ಮನೆಯಲ್ಲಿ ಬರ್ತ್‌ಡೇ ಪಾರ್ಟಿ ಮಾಡಿದ್ದಾರೆ. ಗೆಳೆಯನಿಗೆ ಕೇಕ್‌ ತಿನ್ನಿಸಿ ಶುಭ ಹಾರೈಸಿದ್ದಾರೆ. ಧೋನಿಯ ಈ ಸರಳತೆಯನ್ನು ಕಂಡು ಅನೇಕ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ. ಎಷ್ಟೇ ದೊಡ್ಡ ಶ್ರೀಮಂತನಾದರೂ ಧೋನಿ ಗೆಳೆಯರನ್ನು ಮರೆತಿಲ್ಲ ಗೆಳೆತನ ಎಂದರೆ ಇದು ಎಂದು ಕಮೆಂಟ್‌ ಮಾಡಿದ್ದಾರೆ. 2 ವರ್ಷಗಳ ಹಿಂದೆ ಧೋನಿ ದುಬೈಗೆ ತೆರಳಿ ಗೆಳೆಯರೊಬ್ಬರ ಬರ್ತ್‌ಡೇ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಈ ವಿಡೊಯೊ ಕೂಡ ವೈರಲ್‌ ಆಗಿತ್ತು.

ಎಂ.ಎಸ್ ಧೋನಿ ಜೀವನಾಧಾರಿತ ‘ಎಂ.ಎಸ್ ಧೋನಿ, ದಿ ಅನ್‌ಟೋಲ್ಡ್ ಸ್ಟೋರಿ’ ಬಾಲಿವುಡ್ ಚಿತ್ರ 2016ರಲ್ಲಿ ಭಾರಿ ಸದ್ದು ಮಾಡಿತ್ತು. ಧೋನಿ ಯಶೋಗಾಥೆಯ ಈ ಚಿತ್ರ ಬಾಲಿವುಡ್ ಬಾಕ್ಸ್ ಆಫೀಸ್‌ನಲ್ಲಿ ಮಾತ್ರವಲ್ಲ, ಚಿತ್ರ ಪ್ರೀಯರ ಮೆಚ್ಚುಗೆಗೂ ಪಾತ್ರವಾಗಿತ್ತು. ಈ ಸಿನೆಮಾದಲ್ಲಿ ಧೋನಿ ಅವರು ಕ್ರಿಕೆಟ್​ ಆಟಗಾರನಾಗಿ ಬೆಳೆದು ಬಂದ, ಅವರಿಗೆ ನೆರವು ನೀಡಿದ ಸ್ನೇಹಿತರ ಕುರಿತಾಗಿಯೂ ತೋರಿಸಲಾಗಿತ್ತು.

ಇದನ್ನೂ ಓದಿ MS Dhoni: ಕಾರಿನಲ್ಲಿ ಬರುತ್ತಿದ್ದ ಧೋನಿಯನ್ನು ತಡೆದು ನಿಲ್ಲಿಸಿ ಫೋಟೊ ತೆಗೆಸಿಕೊಂಡ ಅಭಿಮಾನಿ; ವಿಡಿಯೊ ವೈರಲ್​

ಇದೇ ಆವೃತ್ತಿಯ ಐಪಿಎಲ್‌ ವೇಳೆ ಧೋನಿ ಅಭ್ಯಾಸ ಮಾಡುವಾಗ ತಮ್ಮ ಬ್ಯಾಟ್‌ನಲ್ಲಿ ಬಾಲ್ಯದ ಗೆಳೆಯನ ಕ್ರೀಡಾ ಪರಿಕರಗಳ ಶಾಪ್​ನ ಹೆಸರನ್ನು ಹಾಕಿಕೊಂಡಿದ್ದರು. ‘ಪ್ರೈಮ್ ಸ್ಪೋರ್ಟ್ಸ್’ ಎಂದು ಬರೆದುಕೊಂಡಿರುವ ಸ್ಟಿಕ್ಕರ್ ​ ಹಾಕಿದ್ದರು.  ಧೋನಿ ವೃತ್ತಿಜೀವನದ ಆರಂಭಿಕ ಹಂತದಲ್ಲಿ ಅವರಿಗೆ ಬ್ಯಾಟ್​ ಮತ್ತು ಕ್ರಿಕೆಟ್​ ಕಿಟ್​ಗಳನ್ನು ಈ ಶಾಪ್​ನ ಗೆಳೆಯನೇ ನೀಡಿದ್ದರಂತೆ. ತನ್ನ ಗೆಳೆಯನ ಶಾಪ್​ನ ಪ್ರಚಾರಕ್ಕಾಗಿ ಧೋನಿ ಈ ಶಾಪ್​ನ ಹೆಸರನ್ನು ತನ್ನ ಬ್ಯಾಟ್​ನಲ್ಲಿ ಬರೆದುಕೊಂಡಿದ್ದರು.

ಈ ಆವೃತ್ತಿಯಲ್ಲಿ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲಿದ್ದಾರೆ ಎನ್ನಲಾಗಿತ್ತು. ಆದರೆ ಧೋನಿ ಇದುವರೆಗೆ ತಮ್ಮ ನಿವೃತ್ತಿ ಪ್ರಕಟಿಸಿಲ್ಲ. ಮುಂದಿನ ಬಾರಿಯೂ ಅವರು ಆಡಲಿದ್ದಾರೆ ಎಂದು ಫ್ರಾಂಚೈಸಿ ಮೂಲಗಳು ಮಾಹಿತಿ ನೀಡಿದೆ.

ಆರ್​ಸಿಬಿ ವಿರುದ್ಧ ಸೋಲುವ ಮೂಲಕ ಚೆನ್ನೈ ಸೂಪರ್​ ಕಿಂಗ್ಸ್​(CSK) ತಂಡ 17ನೇ ಆವೃತ್ತಿಯ ಐಪಿಎಲ್​ನಿಂದ ಹೊರಬಿದ್ದಿತ್ತು. ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ನಡೆದಿದ್ದ ಪಂದ್ಯದಲ್ಲಿ ಚೆನ್ನೈ 27 ರನ್​ಗಳ ಅಂತರದಿಂದ ಸೋಲು ಕಂಡಿತ್ತು. ಈ ಸೋಲಿನ ಮರು ದಿನವೇ ಧೋನಿ(MS Dhoni) ತಮ್ಮ ತವರಾದ ರಾಂಚಿಗೆ ಮರಳಿದ್ದರು. ತವರಿನಲ್ಲಿ ಬೈಕ್​ ರೈಡಿಂಗ್​ ಮಾಡಿದ್ದರು. ಅವರು ಬೈಕ್​ನಲ್ಲಿ ಸುತ್ತಾಡಿಕೊಂಡು ವಾಪಸ್​ ಮನೆಗೆ ಬರುತ್ತಿರುವ ವಿಡಿಯೊ ವೈರಲ್​ ಆಗಿತ್ತು.

Continue Reading
Advertisement
Swamji Murder
ಪ್ರಮುಖ ಸುದ್ದಿ14 mins ago

Swamji Murder : ಆಸ್ತಿ, ಅಧಿಕಾರಕ್ಕಾಗಿ ಗಲಾಟೆ; ಸ್ವಾಮೀಜಿಯೊಬ್ಬರನ್ನು ಕೊಲೆ ಮಾಡಿದ ಸ್ವಾಮೀಜಿಗಳ ಗುಂಪು

Child Death
ಬೆಳಗಾವಿ20 mins ago

Child Death : ಮಕ್ಕಳ ಮಾರಾಟ ಜಾಲದಲ್ಲಿ ರಕ್ಷಣೆಯಾಗಿದ್ದ ಮಗು ಮೃತ್ಯು; ಅಂತ್ಯ ಸಂಸ್ಕಾರ ನೆರವೇರಿಸಿದ ಪೊಲೀಸರು

Shobha Shetty car gift to yashwanth birthday
ಟಾಲಿವುಡ್37 mins ago

Shobha Shetty: ಭಾವಿ ಪತಿಗೆ ಕಾರ್ ಗಿಫ್ಟ್ ನೀಡಿದ ‘ಅಗ್ನಿಸಾಕ್ಷಿ’ ಖ್ಯಾತಿಯ ನಟಿ!

IND vs BAN
ಕ್ರೀಡೆ44 mins ago

IND vs BAN: ಕೊಹ್ಲಿ ಬ್ಯಾಟಿಂಗ್​ ಬಗ್ಗೆ ಸ್ವತಃ ಬೇಸರ ವ್ಯಕ್ತಪಡಿಸಿದ ಬ್ಯಾಟಿಂಗ್​ ಕೋಚ್​

Job Alert
ಉದ್ಯೋಗ51 mins ago

Job Alert: ಗುಡ್‌ನ್ಯೂಸ್‌; ರೈಲ್ವೆ ಇಲಾಖೆಯಲ್ಲಿ ಖಾಲಿ ಇದೆ ಬರೋಬ್ಬರಿ 18,799 ಹುದ್ದೆ: ಅಪ್ಲೈ ಮಾಡುವ ವಿಧಾನ ಇಲ್ಲಿದೆ

ITMS Corridor
Latest58 mins ago

Mysore News in Kannada: ಬೆಂಗಳೂರು-ಮೈಸೂರು ಸಂಚಾರ ನಿಯಂತ್ರಣ ಜು.1ರಿಂದ ಸಂಪೂರ್ಣ ಹೈಟೆಕ್‌

DCM D K Shivakumar statement about new advertising policy
ಕರ್ನಾಟಕ1 hour ago

DK Shivakumar: ವಾರದೊಳಗೆ ಹೊಸ ಜಾಹೀರಾತು ನೀತಿಯ ಕರಡು ಪ್ರತಿ ಬಿಡುಗಡೆ

2nd Puc Exam 3
ಶಿಕ್ಷಣ1 hour ago

2nd PUC Exam 3: ಸೋಮವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ-3 ಶುರು; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಉಚಿತ

Actor darshan Satish Reddy On Darshan Case
ರಾಜಕೀಯ1 hour ago

Actor Darshan: ನಾನು ದರ್ಶನ್ ಸೇಫ್ ಮಾಡ್ತಿರೋದು ಸುಳ್ಳು; ಬಿಜೆಪಿ ಶಾಸಕ ಸತೀಶ್ ರೆಡ್ಡಿ !

govt employees
ಕರ್ನಾಟಕ1 hour ago

Govt Employees: ಸರ್ಕಾರಿ ನೌಕರರಿಗೆ ಅಲರ್ಟ್‌; ಬೆಳಗ್ಗೆ 9.15ಕ್ಕೆ ಆಫೀಸ್‌ ತಲುಪದಿದ್ರೆ ಅರ್ಧ ದಿನ ರಜೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ21 hours ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 day ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ2 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು5 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು5 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ6 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ6 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ6 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌