Hair Care: ಕೂದಲಿಗೆ ಕಂಡೀಷನರ್‌ ಹಚ್ಚುವಾಗ ನೀವು ಈ ತಪ್ಪುಗಳನ್ನು ಮಾಡ್ಬೇಡಿ! - Vistara News

ಆರೋಗ್ಯ

Hair Care: ಕೂದಲಿಗೆ ಕಂಡೀಷನರ್‌ ಹಚ್ಚುವಾಗ ನೀವು ಈ ತಪ್ಪುಗಳನ್ನು ಮಾಡ್ಬೇಡಿ!

ಕೂದಲು ನಯವಾಗಿ ರೇಶಿಮೆಯಂತೆ ಹೊಳೆಯಲು ಬಹುತೇಕರು ಕಂಡೀಷನರ್‌ ಬಳಸುವುದು ಸಾಮಾನ್ಯ. ಆದರೆ, ಈ ಕಂಡೀಷನರ್‌ ಬಳಸುವಾಗ ಬಹಳಷ್ಟು ಮಂದಿ ಸಣ್ಣ ಪುಟ್ಟ ತಪ್ಪುಗಳನ್ನು ಮಾಡುತ್ತಲೇ ಇರುತ್ತಾರೆ.

VISTARANEWS.COM


on

hair care tips
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಿಮ್ಮ ಕೂದಲು ಯಾವ ಬಗೆಯದ್ದೇ ಆಗಿರಲಿ ಕೂದಲನ್ನು ಕಂಡೀಷನ್‌ ಮಾಡಿಕೊಳ್ಳದಿದ್ದರೆ ಖಂಡಿತವಾಗಿಯೂ ಕೂದಲನ್ನು ನಯವಾಗಿ, ಸುಲಭವಾಗಿ ಬೇಕಾದ ಹಾಗೆ ಬಾಚಿಕೊಳ್ಳಲು ಕಷ್ಟವಾಗುತ್ತದೆ. ಕೂದಲನ್ನು ತಮಗೆ ಬೇಕಾದ ಹಾಗೆ ತೀಡಲು, ಬೇಕಾದ ಹೇರ್‌ಸ್ಟೈಲ್‌ಗೆ ಒಗ್ಗಿಸಿಕೊಳ್ಳಲು, ಕೂದಲು ನಯವಾಗಿ ರೇಶಿಮೆಯಂತೆ ಹೊಳೆಯಲು ಬಹುತೇಕರು ಕಂಡೀಷನರ್‌ ಬಳಸುವುದು ಸಾಮಾನ್ಯ. ಆದರೆ, ಈ ಕಂಡೀಷನರ್‌ ಬಳಸುವಾಗ ಬಹಳಷ್ಟು ಮಂದಿ ಸಣ್ಣ ಪುಟ್ಟ ತಪ್ಪುಗಳನ್ನು ಮಾಡುತ್ತಲೇ ಇರುತ್ತಾರೆ. ತಪ್ಪು ಸಣ್ಣದಿರಲಿ ದೊಡ್ಡದಿರಲಿ, ತಪ್ಪಿನ ಪರಿಣಾಮ ಮಾತ್ರ ನಿಮ್ಮದೇ ಕೂದಲು ಮೇಲೆ, ತಲೆಕೂದಲ ಬುಡದ ಚರ್ಮದ ಮೇಲೆ ಆಗುತ್ತದೆ ಎಂಬ ಸತ್ಯವನ್ನೂ ನೀವು ಜೀರ್ಣಿಸಿಕೊಳ್ಳಲು ಸಿದ್ಧರಿರಬೇಕು. ಹಾಗಾದರೆ ಬನ್ನಿ ಕಂಡೀಷನರ್‌ ಹಚ್ಚಿಕೊಳ್ಳುವಾಗ ನೀವು ಮಾಡುವ ತಪ್ಪುಗಳೇನು ಎಂಬುದನ್ನು ನೋಡೋಣ (Hair Care Tips).

1. ಎಲ್ಲ ಕೂದಲಿಗೂ ಒಂದೇ ಮಾದರಿಯ ಕಂಡೀಷನರ್‌ ಸೂಕ್ತವಾಗಿರುವುದಿಲ್ಲ. ಯಾವುದೋ ಒಂದು ಕಂಡೀಷನರ್‌ ಬಳಸಿದರಾಯಿತು ಎಂಬ ಪ್ರವೃತ್ತಿ ಬೇಡ. ನಿಮ್ಮ ಕೂದಲು ಎಂಥದ್ದು ಎಂಬ ಮಾಹಿತಿ ನಿಮಗೆ ತಿಳಿದಿರಲಿ. ನಿಮ್ಮ ಕೂದಲ ಪ್ರಕೃತಿ ಒಣವೋ, ಎಣ್ಣೆಯುಕ್ತವೋ ಅಥವಾ ತುಂಬಾ ಹಾರಾಡುವ ಅಲೆಅಲೆಯಾಗಿರುವ ಕೂದಲೋ ಹೀಗೆ ನಿಮ್ಮ ಕೂದಲ ಬಗ್ಗೆ ಅರಿಯಲು ಪ್ರಯತ್ನಿಸಿ. ಜೊತೆಗೆ ಅದಕ್ಕೆ ಸೂಕ್ತವಾದ ಕಂಡೀಷನರ್‌ ಆಯ್ಕೆ ಮಾಡಿ.

2. ಕಂಡೀಷನರ್‌ ಬಳಸುವಾಗ ಎಲ್ಲರೂ ಮಾಡುವ ತಪ್ಪು ಎಂದರೆ ಒಂದಿಷ್ಟು ಕೈಯಲ್ಲಿ ತೆಗೆದುಕೊಂಡು ಹಾಗೆಯೇ ಹಾಕಿ ಬಿಡುವುದು. ಕಂಡೀಷನರ್‌ ಹಾಕುವಾಗ ಕೂದಲ ಎಲ್ಲ ಭಾಗಗಳಿಗೂ ಸಮನಾಗಿ ಹಂಚಿಹೋಗುವಂತೆ ಹಚ್ಚಿಕೊಳ್ಳುವುದು ಒಳ್ಳೆಯದು. ಬಹಳಷ್ಟು ಮಂದಿ, ಕೈಯ ಬೆರಳಲ್ಲೇ ಹಚ್ಚಿಕೊಳ್ಳುವುದೂ ಕೂಡಾ ಸಾಮಾನ್ಯ. ಆದರೆ, ಗುಂಗುರು ಅಥವಾ ಅಲೆಅಲೆಯಾಗಿರುವ ಕೂದಲ ಮಂದಿಗೆ ಇದು ಕಷ್ಟವಾಗಬಹುದು. ಅದಕ್ಕಾಗಿ ಅಗಲ ಹಲ್ಲಿನ ಬಾಚಣಿಗೆಯ ಸಹಾಯದಿಂದ ಕೂದಲ ಎಲ್ಲ ಭಾಗಕ್ಕೂ ಕಂಡೀಷನರ್‌ ತಲುಪುವಂತೆ ಬಾಚಿಕೊಂಡು ಹದವಾಗಿ ಮಸಾಜ್‌ ಮಾಡಿಕೊಳ್ಳುವುದು ಉತ್ತಮ ವಿಧಾನ.

hair care

3. ಬಹಳಷ್ಟು ಮಂದಿ ಕಂಡೀಷನರ್‌ ಬಳಸುತ್ತಾರೇನೋ ನಿಜವೇ ಆದರೂ, ಬಳಸಿದ ಮೇಲೆ ಅಷ್ಟೇ ವೇಗವಾಗಿ ತೊಳೆದುಕೊಂಡು ಬಿಡುತ್ತಾರೆ. ಹೀಗೆ ಮಾಡುವುದರಿಂದ ಕಂಡೀಷನರ್‌ನ ನಿಜವಾದ ಉಪಯೋಗ, ಫಲ ನಿಮ್ಮ ಕೂದಲಿಗೆ ಸಿಗುವುದಿಲ್ಲ. ಹಾಗಾಗಿ ಕಂಡೀಷನರ್‌ ಹಚ್ಚಿಕೊಂಡರೆ ಸಾಲದು. ಅದು ಫಲ ಪಡೆಯಲು ಕನಿಷ್ಟ ಅದು ನಿಮ್ಮ ಕೂದಲ ಜೊತೆಗೆ ಇರಲು ಮೂರರಿಂದ ಐದು ನಿಮಿಷವಾದರೂ ಹಾಗೆಯೇ ಬಿಡಬೇಕು. ಆಮೇಲೆ ತೊಳೆದುಕೊಳ್ಳಬೇಕು.

ಇದನ್ನೂ ಓದಿ: Hair Care: ಕೂದಲನ್ನು ಸೊಂಪಾಗಿಸುವ ಕೆಲವು ಮಾರ್ಗಗಳಿವು

4. ಇನ್ನೂ ಕೆಲವರು ಕಂಡೀಷನ್‌ ಮಾಡಿಕೊಳ್ಳುವ ಭರದಲ್ಲಿ ಯದ್ವಾತದ್ವಾ ಕಂಡೀಷನರ್‌ ಬಳಕೆ ಮಾಡುವುದುಂಟು. ಕಂಡೀಷನರ್‌ ಕೂದಲಿಗೆ ಹೆಚ್ಚಾದರೆ ಕೂದಲು ಹಾಳಾಗುತ್ತದೆ. ಹಾಗಾಗಿ ಕಂಡೀಷನರ್‌ ಬಳಕೆ ಕೂದಲಿಗೆ ಅತಿಯಾಗದಂತೆ ನೋಡಿಕೊಳ್ಳುವುದೂ ಕೂಡಾ ಮುಖ್ಯವೇ. ಒಂದು ನಾಣ್ಯದ ಗಾತ್ಯದಷ್ಟು ಕಂಡೀಷನರ್‌ ಒಮ್ಮೆ ಬಳಸಬಹುದು. ಅದಕ್ಕಿಂತ ಹೆಚ್ಚಾದರೆ ಕೂದಲಿಗೆ ತೊಂದರೆಯಾಗುತ್ತದೆ ಎಂಬುದನ್ನು ನೆನಪಿಡಿ.

5. ಕಂಡೀಷನ್‌ ಮಾಡಿದ ಕೂದಲನ್ನು ಹಾಗೆಯೇ ಕೆಳಗೆ ಬಿಡುವುದರಿಂದ ಕಂಡೀಷನರ್‌ನ ಅಂಶ ಚರ್ಮದ ಮೇಲೆ ಹರಡಿಕೊಂಡು ಚರ್ಮದ ಸಮಸ್ಯೆಗಳು ಉಂಟಾಗಬಹುದು. ಹಾಗಾಗಿ. ಕಂಡೀಷನರ್‌ ಹಚ್ಚಿಕೊಂಡ ಕೂದಲನ್ನು ಬಹಳ ಹೊತ್ತು ಕುತ್ತಿಗೆ, ಬೆನ್ನಿನ ಮೇಲೆ ಇಳಿಬಿಡಬೇಡಿ. ಕಂಡೀಷನರ್‌ ಹಚ್ಚಿಕೊಂಡು ಅದನ್ನು ಚರ್ಮಕ್ಕೆ ತಾಗದ ಹಾಗೆ ಎತ್ತಿ ಕ್ಲಿಪ್‌ ಹಾಕಿ. ಆಮೇಲೆ ಐದು ನಿಮಿಷದ ನಂತರ ನೀರಿನಿಂದ ಚೆನ್ನಾಗಿ ತೊಳೆದುಕೊಳ್ಳಿ.

ಇದನ್ನೂ ಓದಿ: Hair Care: ಬೊಕ್ಕತಲೆ, ಕೂದಲ ಸಮಸ್ಯೆ ಹೆಚ್ಚಾಗುತ್ತಿದ್ದರೆ ಈ ಆಹಾರಗಳಿಂದ ದೂರವಿರಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Tips For Healthy Skin: ಕಡಲೆಹಿಟ್ಟೆಂಬ ಶತಮಾನಗಳ ಹಳೆಯ ಸೌಂದರ್ಯವರ್ಧಕ!

ಯಾವುದೇ ರಾಸಾಯನಿಕಗಳಿಲ್ಲ, ಮನೆಯಲ್ಲಿ ತ್ವರಿತವಾಗಿ ಮಾಡಿಕೊಳ್ಳಬಹುದಾದ ಕಡಲೆಹಿಟ್ಟೆಂಬ ಸೌಂದರ್ಯವರ್ಧಕಕ್ಕೆ ಸಮನಾಗಿ ಬೇರೊಂದಿಲ್ಲ. ಎಷ್ಟೊ ತಲೆಮಾರುಗಳಿಂದ ಈ ಅಭ್ಯಾಸ ಚಾಲ್ತಿಯಲ್ಲಿದೆ, ಮುಂದೆಯೂ ಇರಲಿದೆ. ಏನಿದೆ ಅಂಥದ್ದು ಕಡಲೆಹಿಟ್ಟಿನಲ್ಲಿ? ಇಲ್ಲಿದೆ (Tips For Healthy Skin) ಉಪಯುಕ್ತ ಮಾಹಿತಿ.

VISTARANEWS.COM


on

Tips For Healthy Skin
Koo

ಕೆಲವು ಹಳೆಯ ಕಾಲದ ಅಭ್ಯಾಸಗಳು ಎಂದಿಗೂ ಬದಲಾಗುವುದಿಲ್ಲ. ಹೊಸತು ಎಂಥದ್ದೇ ಬಂದರೂ, ಹಳೆಯದ ತೂಕ ಕಡಿಮೆಯಾಗುವುದಿಲ್ಲ. ಉದಾಹರಣೆಗೆ ಹೇಳುವುದಾದರೆ, ಮುಖದ ಕಾಂತಿಗಾಗಿ ಕಡಲೆಹಿಟ್ಟನ್ನು ಬಳಸುವ ಅಭ್ಯಾಸ. ಎಷ್ಟೊ ತಲೆಮಾರುಗಳಿಂದ ಈ ಅಭ್ಯಾಸ ಚಾಲ್ತಿಯಲ್ಲಿದೆ, ಮುಂದೆಯೂ ಇರಲಿದೆ. ಕಾರಣ, ಕಡಲೆಹಿಟ್ಟಿನ ಸಾಮರ್ಥ್ಯವೇ ಅಂಥದ್ದು. ಯಾವುದೇ ರಾಸಾಯನಿಕಗಳಿಲ್ಲ, ಮನೆಯಲ್ಲಿ ತ್ವರಿತವಾಗಿ ಮಾಡಿಕೊಳ್ಳಬಹುದಾದ ಈ ಸೌಂದರ್ಯವರ್ಧಕಕ್ಕೆ ಸಮನಾಗಿ ಬೇರೊಂದಿಲ್ಲ. ಏನಿದೆ ಅಂಥದ್ದು (Tips For Healthy Skin) ಕಡಲೆಹಿಟ್ಟಿನಲ್ಲಿ?
ಕಡಲೆಹಿಟ್ಟು ಉತ್ಕರ್ಷಣ ನಿರೋಧಕಗಳಿಂದ ಭರಿತವಾಗಿದೆ. ಚರ್ಮದ ಮೇಲಿನ ಮೃತ ಕೋಶಗಳನ್ನು ತೆಗೆದುಹಾಕಿ, ಹೆಚ್ಚಿನ ಎಣ್ಣೆಯಂಶವನ್ನು ತೆಗೆದು, ಹೊಸ ಕೋಶಗಳ ಬೆವಳಣಿಗೆಗೆ ಅಗತ್ಯವಾದ ಕೆಲಸ ಮಾಡುತ್ತದೆ. ಹಾಗಾಗಿ ಕಡಲೆ ಹಿಟ್ಟನ್ನು ನಿಯಮಿತವಾಗಿ ಬಳಸಿದಾಗ ಚರ್ಮ ನಯವಾದಂತಾಗಿ, ಕಾಂತಿ ಹೆಚ್ಚುತ್ತದೆ. ಇದಿಷ್ಟನ್ನೂ ಯಾವುದೇ ರಾಸಾಯನಿಕಗಳಿಲ್ಲದಂತೆ, ನೈಸರ್ಗಿಕವಾದ, ಆರೋಗ್ಯಕರ ವಸ್ತುವಿನಿಂದ ನಾವು ಪಡೆಯಬಹುದಾದ್ದು. ಕ್ಲೆನ್ಸರ್‌, ಎಕ್ಸ್‌ಫಾಲಿಯೇಟರ್‌ ಮತ್ತು ಬ್ರೈಟ್ನರ್‌- ಎಲ್ಲವೂ ಕಡಲೆಹಿಟ್ಟೊಂದರಿಂದಲೇ ಸಾಧಿಸಬಹುದು ನಾವು.
ಇದು ಭಾರತದಲ್ಲಿ ಮಾತ್ರವೇ ಅಲ್ಲ, ದಕ್ಷಿಣ ಏಷ್ಯಾ ದೇಶಗಳಲ್ಲಿ ಶತಮಾನಗಳಿಂದ ಬಳಕೆಯಲ್ಲಿ ಇರುವಂಥದ್ದು. ಇದರ ಉರಿಯೂತ ಶಾಮಕ ಗುಣದಿಂದಾಗಿಯೇ ಇದು ಮೊಡವೆಯನ್ನೂ ನಿಯಂತ್ರಿಸಬಲ್ಲದು. ವಾತಾವರಣದ ಧೂಳು, ಹೊಗೆ, ಮಾಲಿನ್ಯಗಳಿಂದ ಮಂಕಾಗುವ ಚರ್ಮಕ್ಕೆ ಕಾಂತಿ ನೀಡುವುದಕ್ಕೆ ಇದು ಒಳ್ಳೆಯ ಮತ್ತು ಸರಳ ಉಪಾಯ. ಇದರಿಂದ ಮಾಡುವ ಫೇಸ್‌ಮಾಸ್ಕ್‌ಗಳು ಸಾಮಾನ್ಯವಾಗಿ ಎಲ್ಲರಿಗೂ ಒಗ್ಗುವಂಥವು. ಹಾಲು, ಮೊಸರು, ಹಣ್ಣಿನ ಪೇಸ್ಟ್‌ಗಳು, ತರಕಾರಿ ರಸಗಳು ಮುಂತಾದ ಯಾವುದನ್ನೇ ಆದರೂ ಕಡಲೆಹಿಟ್ಟಿನೊಂದಿಗೆ ಬಳಸಬಹುದು. ವಾರಕ್ಕೆ 2-3 ದಿನ ಇದನ್ನು ಬಳಸಿದರೆ ಸಾಕಾಗುತ್ತದೆ. ಇದನ್ನು ಅತಿಯಾಗಿ ಬಳಕೆ ಮಾಡಿದರೆ ಚರ್ಮದ ಶುಷ್ಕತೆ ಹೆಚ್ಚಬಹುದು; ಸೂಕ್ಷ್ಮ ಚರ್ಮದವರಿಗೆ ತೊಂದರೆ ಆಗಬಹುದು.

Facemask

ಫೇಸ್‌ಮಾಸ್ಕ್‌

ಮೊದಲಿಗೆ ಕಡಲೆಹಿಟ್ಟನ್ನು ಸರಿಯಾದ ವಸ್ತುಗಳೊಂದಿಗೆ ಮಿಶ್ರ ಮಾಡಿ ಪೇಸ್ಟ್‌ ಸಿದ್ಧ ಮಾಡಿ. ಹಾಲು, ಮೊಸರು, ಗುಲಾಬಿ ಜಲ ಮುಂತಾದ ಯಾವುದೂ ಆಗಬಹುದು. ಇದರಿಂದ ಹದವಾದ ಪೇಸ್ಟ್‌ ಸಿದ್ಧವಾದ ಮೇಲೆ, ಮುಖಕ್ಕೆ ವೃತ್ತಾಕಾರದಲ್ಲಿ ಹಚ್ಚಿ. ಆದರೆ ತೀರಾ ಉಜ್ಜಬೇಡಿ; ಇದರಿಂದ ಕೆಂಪಾಗಿ ಚರ್ಮಕ್ಕೆ ಕಿರಿಕಿರಿ ಉಂಟಾಗಬಹುದು. ೨೦ ನಿಮಿಷಗಳ ನಂತರ ಬೆಚ್ಚಗಿನ ನೀರಲ್ಲಿ ಮುಖ ತೊಳೆಯಿರಿ. ನಂತರ ಮುಖ ಒರೆಸದೆ ಗಾಳಿಗೆ ಆರುವುದಕ್ಕೆ ಬಿಡಿ. ನಂತರ ಹಗುರವಾದ ಮಾಯಿಶ್ಚರೈಸರ್‌ ಹಚ್ಚಿ. ಇದನ್ನು ವಾರದಲ್ಲಿ 2-3 ದಿನ ಮಾಡಿದರೆ ಸಾಕಾಗುತ್ತದೆ.

Tumeric Rhizome with Green Leaf and Turmeric Powder

ಅರಿಶಿನದೊಂದಿಗೆ

ಹರಿದ್ರಾ ಸಹ ಸೌಂದರ್ಯವರ್ಧನೆಗಾಗಿ ಬಳಕೆಯಲ್ಲಿದೆ. 1 ಚಮಚ ಕಡಲೆ ಹಿಟ್ಟಿಗೆ ಚಿಟಿಕೆ ಅರಿಶಿನ, ಅರ್ಧ ಚಮಚ ಜೇನುತುಪ್ಪ ಮತ್ತು ಪೇಸ್ಟ್‌ ಮಾಡುವುದಕ್ಕೆ ಸಾಕಾಗುವಷ್ಟು ಗುಲಾಬಿ ಜಲ ಹಾಕಿ. ಇದನ್ನು ಮುಖಕ್ಕೆ ಸಮನಾಗಿ ಹಚ್ಚಿ. 20 ನಿಮಿಷಗಳ ನಂತರ ಉಗುರುಬೆಚ್ಚಗಿನ ನೀರಲ್ಲಿ ಮುಖ ತೊಳೆಯಿರಿ. ಮುಖ ಆರಿದ ನಂತರ ನಿತ್ಯ ಬಳಸುವ ಮಾಯಿಶ್ಚರೈಸರ್‌ ಹಚ್ಚಿ.

Lemon Anti Infective Foods

ನಿಂಬೆಯ ಸ್ಕ್ರಬ್‌

ಒಂದು ಚಮಚ ಕಡಲೆಹಿಟ್ಟನ್ನು 1 ಚಮಚ ಮೊಸರಿನೊಂದಿಗೆ ಮಿಶ್ರ ಮಾಡಿ. ಇದಕ್ಕೆ ಅರ್ಧ ಚಮಚ ಜೇನುತುಪ್ಪ ಮತ್ತು ಆರೆಂಟು ಹನಿ ನಿಂಬೆ ರಸ ಹಾಕಿ. ಇದನ್ನು ಒದ್ದೆ ಮುಖಕ್ಕೆ ಹಾಕಿ, ಲಘುವಾಗಿ ಉಜ್ಜಿ. ಇದನ್ನು ಅತಿಯಾಗಿ ಮಾಡಿದರೆ ಚರ್ಮ ಕೆಂಪಾಗುತ್ತದೆ, ಜಾಗ್ರತೆ. ಒಂದೆರಡು ನಿಮಿಷಗಳ ನಂತರ ಬೆಚ್ಚಗಿನ ನೀರಲ್ಲಿ ಮುಖ ತೊಳೆಯಿರಿ. ಇದನ್ನು ವಾರಕ್ಕೊಮ್ಮೆ ಮಾಡಿದರೆ ಸಾಕು.

ಕ್ಲೆನ್ಸರ್‌

ಒಂದು ಚಮಚ ಕಡಲೆ ಹಿಟ್ಟಿಗೆ ಅರ್ಧ ಚಮಚ ಹಾಲು, ಅರ್ಧ ಚಮಚ ಗುಲಾಬಿಜಲ ಬೆರೆಸಿ ಪೇಸ್ಟ್‌ ಮಾಡಿ. ಇದನ್ನು ವೃತ್ತಾಕಾರದಲ್ಲಿ ಮುಖಕ್ಕೆ ಹಾಕಿ. ಆದರೆ ಜೋರಾಗಿ ಉಜ್ಜಬಾರದು. ಒಂದೆರಡು ನಿಮಿಷಗಳ ನಂತರ ತೊಳೆಯಿರಿ. ಇದನ್ನು ವಾರದಲ್ಲಿ 2-3 ಬಾರಿ ಮಾಡಬಹುದು.

fruit Facemask

ತರಕಾರಿ-ಹಣ್ಣುಗಳ ಮಾಸ್ಕ್‌

ಪಪ್ಪಾಯ, ಬಾಳೆಯಣ್ಣು, ಮೆಲನ್‌ಗಳು ಮುಂತಾದ ಯಾವುದೇ ಹಣ್ಣುಗಳನ್ನು ಕಡಲೆಹಿಟ್ಟಿನೊಂದಿಗೆ ಬೆರೆಸಿ ಫೇಸ್‌ಮಾಸ್ಕ್‌ ತಯಾರಿಸಬಹುದು. ಸೌತೇಕಾಯಿ, ಕ್ಯಾರೆಟ್‌ ಮುಂತಾದ ತರಕಾರಿಗಳ ರಸವನ್ನು ಕಡಲೆಹಿಟ್ಟಿನೊಂದಿಗೆ ಸೇರಿಸಿ ಮುಖಕ್ಕೆ ಮಾಸ್ಕ್‌ ಮಾಡಿದರೆ ಉತ್ತಮ ಪರಿಣಾಮ ದೊರೆಯುತ್ತದೆ. ಇಂಥ ಯಾವುದನ್ನು ಬಳಸುವಾಗಲೂ ನಿಮ್ಮ ಚರ್ಮಕ್ಕೆ ಒಗ್ಗುತ್ತದೆಯೋ ಇಲ್ಲವೊ ಎಂಬ ಅನುಮಾನವಿದ್ದರೆ, ಕೈಮೇಲೆ ಪ್ಯಾಚ್‌ ಟೆಸ್ಟ್‌ ಮಾಡಿಕೊಳ್ಳಿ.

ಇದನ್ನೂ ಓದಿ: Health Tips Kannada: ಕೊಲೆಸ್ಟ್ರಾಲ್‌ ತಗ್ಗಿಸಲು ಈ ಬೆಳಗಿನ ಪೇಯಗಳಿಂದ ಸಾಧ್ಯ! ಪ್ರಯತ್ನಿಸಿ

Continue Reading

ಆರೋಗ್ಯ

Health Tips Kannada : ಉತ್ತಮ ಆರೋಗ್ಯಕ್ಕಾಗಿ ಎಷ್ಟು ಗಂಟೆ ಕುಳಿತುಕೊಳ್ಳಬೇಕು, ನಿಂತುಕೊಳ್ಳಬೇಕು, ಮಲಗಬೇಕು?

Health Tips Kannada: ಉತ್ತಮ ಆರೋಗ್ಯಕ್ಕಾಗಿ ಎಷ್ಟು ಗಂಟೆ ಕುಳಿತುಕೊಳ್ಳಬೇಕು, ನಿಂತುಕೊಳ್ಳಬೇಕು, ಮಲಗಬೇಕು? ಇವತ್ತು ಎಲ್ಲರೂ ಬಯಸೋದು ಆರೋಗ್ಯ ಚೆನ್ನಾಗಿರಲಿ ಎಂದು. ಆದರೆ ಇದಕ್ಕಾಗಿ ಎಷ್ಟು ಗಂಟೆಗಳ ಕಾಲ ಕುಳಿತುಕೊಳ್ಳಬೇಕು, ನಿಂತುಕೊಳ್ಳಬೇಕು ಮತ್ತು ಮಲಗಬೇಕು ಎನ್ನುವ ಗೊಂದಲ ಇದ್ದೇ ಇರುತ್ತದೆ. ಆದರೆ ಹೊಸ ಅಧ್ಯಯನವೊಂದು ಇದಕ್ಕೆ ಉತ್ತರ ಕಂಡು ಹಿಡಿದಿದೆ.

VISTARANEWS.COM


on

By

Health Tips Kannada
Koo

ಉತ್ತಮ (Health Tips Kannada) ಆರೋಗ್ಯಕ್ಕಾಗಿ (Good Health) ಎಷ್ಟು ಗಂಟೆಗಳ ಕಾಲ ಕುಳಿತುಕೊಳ್ಳಬೇಕು (Sit), ನಿಂತುಕೊಳ್ಳಬೇಕು (Stand) ಮತ್ತು ಮಲಗಬೇಕು (Sleep) ಎನ್ನುವ ಗೊಂದಲ ಎಲ್ಲರಲ್ಲೂ ಇರುತ್ತದೆ. ಇದರಲ್ಲಿ ಎಷ್ಟು ಗಂಟೆ ಮಲಗಬೇಕು ಎನ್ನುವುದಕ್ಕೆ ಬಹುತೇಕ ಮಂದಿಗೆ ಉತ್ತರ ಗೊತ್ತಿರುತ್ತದೆ. ಆದರೆ ಎಷ್ಟು ಗಂಟೆ ನಿಲ್ಲಬೇಕು, ಕುಳಿತುಕೊಳ್ಳಬೇಕು ಎನ್ನುವುದನ್ನು ಹೇಳುವುದು ಕಷ್ಟ.

ಇದೀಗ ಹೊಸ ಅಧ್ಯಯನವೊಂದು ನಾವು ಆರೋಗ್ಯವಾಗಿರಲು ಎಷ್ಟು ಹೊತ್ತು ಸಕ್ರಿಯವಾಗಿರುವುದು ಅತ್ಯಗತ್ಯ ಎಂಬುದನ್ನು ಹೇಳಿದೆ. ಅದರಲ್ಲೂ ನಾವು ಎಷ್ಟು ಗಂಟೆಗಳ ಕಾಲ ಕುಳಿತುಕೊಳ್ಳಬೇಕು ಅಥವಾ ನಿಲ್ಲಬೇಕು ಅಥವಾ ವ್ಯಾಯಾಮ ಮಾಡಬೇಕು ಎಂಬುದಕ್ಕೆ ಈ ಹೊಸ ಅಧ್ಯಯನವು ಉತ್ತರ ನೀಡಿದೆ.

ಜಡ ಜೀವನಶೈಲಿಯನ್ನು ಮುರಿಯುವ ಒಂದು ಸುಲಭ ವಿಧಾನವೆಂದರೆ ಹೆಚ್ಚು ದೈಹಿಕವಾಗಿ ಸಕ್ರಿಯವಾಗಿರುವುದು. ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಆರೋಗ್ಯ ಕಾಳಜಿ ಹೆಚ್ಚಾಗುತ್ತಿದೆ. ಇದಕ್ಕೆ ಮುಖ್ಯಕಾರಣ ಯುವಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ತೊಂದರೆಗಳು. ಹೆಚ್ಚು ಹೊತ್ತು ವ್ಯಾಯಾಮ ಮಾಡುವುದು, ಆರೋಗ್ಯಕರ, ಪೌಷ್ಟಿಕಾಂಶ ಭರಿತ ಆಹಾರವನ್ನು ಸೇವಿಸುವುದು ಅತ್ಯಗತ್ಯ. ಅಲ್ಲದೇ ದೀರ್ಘ ಗಂಟೆಗಳ ಕಾಲ ಕುಳಿತುಕೊಳ್ಳುವ ತೊಂದರೆಗಳನ್ನು ಎದುರಿಸುವುದು ಕೂಡ ಬಹುಮುಖ್ಯ.

ಇದನ್ನೂ ಓದಿ: Health Tips Kannada: ಕೊಲೆಸ್ಟ್ರಾಲ್‌ ತಗ್ಗಿಸಲು ಈ ಬೆಳಗಿನ ಪೇಯಗಳಿಂದ ಸಾಧ್ಯ! ಪ್ರಯತ್ನಿಸಿ

ದೈಹಿಕ ಚಟುವಟಿಕೆಗಾಗಿ ಎಷ್ಟು ಗಂಟೆಗಳನ್ನು ವಿನಿಯೋಗಿಸಬೇಕು, ಎಷ್ಟು ಸಮಯ ನಿಲ್ಲಬೇಕು ಅಥವಾ ಕುಳಿತುಕೊಳ್ಳಬೇಕು ಎಂಬುದರ ಕುರಿತು ಹೊಸ ಆಸ್ಟ್ರೇಲಿಯನ್ ತಂಡವೊಂದು ಅಧ್ಯಯನ ನಡೆಸಿದೆ.

ಎಷ್ಟು ಗಂಟೆಗಳ ದೈಹಿಕ ಚಟುವಟಿಕೆ ಮುಖ್ಯ?

ಅತ್ಯುತ್ತಮ ಆರೋಗ್ಯಕ್ಕಾಗಿ, ವ್ಯಕ್ತಿಯ ದಿನವು ಬೆಳಗಿನ ವ್ಯಾಯಾಮ ದಿಂದ ಪ್ರಾರಂಭವಾಗಬೇಕು. ಕನಿಷ್ಠ ಎಂಟು ಗಂಟೆಗಳ ನಿದ್ರೆಯನ್ನು ಒಳಗೊಂಡ ನಾಲ್ಕು ಗಂಟೆಗಳ ದೈಹಿಕ ಚಟುವಟಿಕೆಯನ್ನು ಒಳಗೊಂಡಿರಬೇಕು. ಲಘು- ತೀವ್ರತೆಯ ಚಟುವಟಿಕೆಯು ಮನೆಗೆಲಸವನ್ನು ಮಾಡುವುದರಿಂದ ಭೋಜನವನ್ನು ಮಾಡುವವರೆಗೆ ಇರುತ್ತದೆ. ಆದರೆ ಮಧ್ಯಮ ಮತ್ತು ಹುರುಪಿನ ವ್ಯಾಯಾಮವು ಚುರುಕಾದ ನಡಿಗೆ ಅಥವಾ ಜಿಮ್ ವ್ಯಾಯಾಮದಂತಹ ಹೆಚ್ಚು ಉದ್ದೇಶಪೂರ್ವಕ ಚಲನೆಯನ್ನು ಒಳಗೊಂಡಿರುತ್ತದೆ ಎನ್ನುತ್ತಾರೆ ಸಂಶೋಧಕರು.

ದಿನದಲ್ಲಿ 4 ಗಂಟೆಗಳ ದೈಹಿಕ ಚಟುವಟಿಕೆ, 8 ಗಂಟೆಗಳ ನಿದ್ದೆ, 6 ಗಂಟೆ ಕುಳಿತುಕೊಳ್ಳುವುದು, 5 ಗಂಟೆ ನಿಂತಿರುವುದು ಆರೋಗ್ಯವಾಗಿರಲು ವ್ಯಕ್ತಿಗೆ ಅತ್ಯಗತ್ಯವಾಗಿದೆ.


ಅಧ್ಯಯನ ಏನು ಹೇಳುತ್ತದೆ?

ಆಸ್ಟ್ರೇಲಿಯದ ಸ್ವಿನ್‌ಬರ್ನ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿಯ ನೇತೃತ್ವದ ಅಂತಾರಾಷ್ಟ್ರೀಯ ತಂಡವು 24 ಗಂಟೆಗಳ ದಿನದಲ್ಲಿ 2,000ಕ್ಕೂ ಹೆಚ್ಚು ಜನರ ನಡವಳಿಕೆಯನ್ನು ಅಧ್ಯಯನ ನಡೆಸಿದೆ. ಆರೋಗ್ಯವಾಗಿರಲು ಕುಳಿತುಕೊಳ್ಳುವುದು, ಮಲಗುವುದು, ನಿಂತಿರುವುದು ಮತ್ತು ದೈಹಿಕವಾಗಿ ಸಕ್ರಿಯವಾಗಿರುವ ಸಮಯವನ್ನು ಸರಿಯಾಗಿ ನಿರ್ಧರಿಸಿದೆ.

ಅತ್ಯುತ್ತಮ ಆರೋಗ್ಯಕ್ಕೆ ಸಂಬಂಧಿಸಿ 24 ಗಂಟೆಗಳಲ್ಲಿ ದೈಹಿಕ, ಮಾನಸಿಕ ಚಟುವಟಿಕೆಯಲ್ಲಿ ವ್ಯಕ್ತಿಯಿಂದ ವ್ಯಕ್ತಿಗೆ ವ್ಯತ್ಯಾಸಗಳಿರುತ್ತವೆ. ವಿಭಿನ್ನ ಆರೋಗ್ಯ ಗುರುತುಗಳಿಗೆ ಸೊಂಟದ ಸುತ್ತಳತೆಯಿಂದ ಹಿಡಿದು ಉಪವಾಸದ ಗ್ಲೂಕೋಸ್‌ನವರೆಗೆ ಪ್ರತಿ ನಡವಳಿಕೆಗೆ ವಿಭಿನ್ನ ಹಂತಗಳಿವೆ ಎಂದು ಸ್ವಿನ್‌ಬರ್ನ್ ಟೆಕ್ನಾಲಜಿ ವಿಶ್ವವಿದ್ಯಾಲಯದ ನಗರ ಪರಿವರ್ತನೆಗಳ ಕೇಂದ್ರದಿಂದ ಕ್ರಿಶ್ಚಿಯನ್ ಬ್ರೇಕೆನ್‌ರಿಡ್ಜ್ ಹೇಳಿದ್ದಾರೆ.

ಹೆಚ್ಚು ಸಮಯ ದೈಹಿಕವಾಗಿ ಸಕ್ರಿಯವಾಗಿರುವ ಅಥವಾ ಲಘು-ತೀವ್ರತೆಯ ಚಲನೆಗಳೊಂದಿಗೆ ಕುಳಿತುಕೊಳ್ಳುವ ಸಮಯವನ್ನು ಬದಲಾಯಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ, ಇದು ರಕ್ತದ ಗ್ಲೂಕೋಸ್ ಮಟ್ಟಗಳೊಂದಿಗೆ ಸಂಬಂಧಿಸಿದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ.

ಹೆಚ್ಚು ಕುಳಿತುಕೊಳ್ಳುವುದು ಅನಾರೋಗ್ಯಕರ

ಒಂದು ನಿರ್ದಿಷ್ಟ ಚಟುವಟಿಕೆಯು ಇನ್ನೊಂದನ್ನು ಬದಲಿಸುವ ವ್ಯಕ್ತಿಯ ಇಡೀ ದಿನದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಕೂಡ ಸಂಶೋಧಕರು ಕಂಡು ಹಿಡಿದಿದ್ದಾರೆ. ಒಂದೇ ಕಡೆ ಅತಿ ಹೆಚ್ಚು ಹೊತ್ತು ಕುಳಿತುಕೊಳ್ಳುವುದೂ ಅನಾರೋಗ್ಯಕ್ಕೆ ದಾರಿ ಎಂದು ಅಧ್ಯಯನ ತಿಳಿಸಿದೆ.

ಹೆಚ್ಚು ಚಟುವಟಿಕೆಯೂ ಒಳ್ಳೆಯದಲ್ಲ

ವ್ಯಾಯಾಮವು ಹೆಚ್ಚು ಪ್ರಯೋಜನಕಾರಿಯಾಗಿದ್ದರೂ ಸಮಯದ ಬಳಕೆ ವಾಸ್ತವಿಕ ಮತ್ತು ಸಮತೋಲಿತವಾಗಿರಬೇಕು. ಹೆಚ್ಚು ಸಮಯ ವ್ಯಾಯಾಮ ಮಾಡಲು ಸಲಹೆ ನೀಡಬಹುದು. ಆದರೂ ಅತಿಯಾಗಿ ವ್ಯಾಯಾಮ ಮಾಡುವುದು ಒಳ್ಳೆಯದಲ್ಲ ಎಂದು ಸಂಶೋಧಕರು ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Covishield Vaccine: ಕೋವಿಶೀಲ್ಡ್ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ, ಕೂಲ್‌ ಡ್ರಿಂಕ್ಸ್‌ ಸೇವಿಸಬಾರದು: ತಪ್ಪು ಮಾಹಿತಿ ಕೊಟ್ಟ ಕಾಲೇಜುಗಳಿಗೆ ನೋಟಿಸ್

Covishield Vaccine: ಕೋವಿಶೀಲ್ಡ್ ಲಸಿಕೆ ಅಡ್ಡಪಾರಿಣಾಮಗಳ ಸಂಬಂಧ ಸೂಚನಾ ಪತ್ರ ಹೊರಡಿಸಿ ಎಡವಟ್ಟು ಮಾಡಿಕೊಂಡಿದ್ದ ಚಿಕ್ಕಬಳ್ಳಾಪುರದ ಹಲವು ಕಾಲೇಜು ಆಡಳಿತ ಮಂಡಳಿಗಳ ವಿರುದ್ಧ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಿದೆ.

VISTARANEWS.COM


on

Covishield Vaccine
Koo

ಚಿಕ್ಕಬಳ್ಳಾಪುರ: ಕೋವಿಶೀಲ್ಡ್ ಲಸಿಕೆ ಪಡೆದವರಲ್ಲಿ ದಿಢೀರ್‌ ಹೃದಯಾಘಾತ, ರಕ್ತ ಹೆಪ್ಪುಗಟ್ಟುವುದು ಸೇರಿ ಹಲವು ರೀತಿಯ ಅಡ್ಡಪರಿಣಾಮಗಳು ಉಂಟಾಗಲಿವೆ ಎಂಬ ಸುದ್ದಿಗಳು ವರದಿಯಾದ ಹಿನ್ನೆಲೆಯಲ್ಲಿ ಲಸಿಕೆ ಪಡೆದವರಲ್ಲಿ ಆತಂಕ ಮೂಡಿದೆ. ಈ ನಡುವೆ ಕೋವಿಶೀಲ್ಡ್ ಲಸಿಕೆ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ ಹಾಗೂ ತಂಪು ಪಾನೀಯ ಸೇವನೆ ಮಾಡದಂತೆ ಹಲವು ಕಾಲೇಜು ಆಡಳಿತ ಮಂಡಳಿಗಳು ಸೂಚನಾ ಪತ್ರದ ಮೂಲಕ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ್ದವು. ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಬೆನ್ನಲ್ಲೇ, ತಪ್ಪು ಮಾಹಿತಿ ನೀಡಿದ ನಗರದ ವಿವಿಧ ಕಾಲೇಜುಗಳ ವಿರುದ್ಧ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಿದೆ.

ನಗರದ ಸಿದ್ದರಾಮಯ್ಯ ಲಾ ಕಾಲೇಜು ಹಾಗೂ ಜಚನಿ ಪ್ರಥಮ ದರ್ಜೆ ಕಾಲೇಜುಗಳಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳಿಂದ ನೋಟಿಸ್ ನೀಡಲಾಗಿದೆ. ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ದಿಢೀರ್ ಹೃದಯಾಘಾತ, ರಕ್ತ ಹೆಪ್ಪುಗಟ್ಟುವ ಸಾಧ್ಯತೆ ಇದೆ. ಹೀಗಾಗಿ ಆರೋಗ್ಯ ಇಲಾಖೆ ಸೂಚನೆ ಪ್ರಕಾರ ಈ ಲಸಿಕೆ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ ಹಾಗೂ ತಂಪು ಪಾನೀಯಗಳು ಸೇವನೆ ಮಾಡಬಾರದು ಎಂದು ಕಾಲೇಜು ಆಡಳಿತ ಮಂಡಳಿಗಳು ಸೂಚನಾ ಪತ್ರ ಹೊರಡಿಸಿದ್ದವು.

ವಾಟ್ಸ್‌ಆ್ಯಪ್‌ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಕಾಲೇಜುಗಳ ಸೂಚನಾ ಪತ್ರಗಳು ವೈರಲ್‌ ಆಗಿದ್ದರಿಂದ ತಕ್ಷಣ ಎಚ್ಚೆತ್ತ ಜಿಲ್ಲಾಡಳಿತ, ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿ ನೀಡಿದ ಹಿನ್ನೆಲೆ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಸೂಚನಾ ಪತ್ರಗಳ ಬಗ್ಗೆ ಸೂಕ್ತ ಸ್ಪಷ್ಟನೆ ನೀಡುವಂತೆ ಜಿಲ್ಲಾಧಿಕಾರಿ ನೇತೃತ್ವದ ಡಿಜಾಸ್ಟರ್ ಮ್ಯಾನೇಜ್ಮೆಂಟ್ ಕಮಿಟಿಯಿಂದ ಕಾಲೇಜುಗಳಿಗೆ ನೋಟಿಸ್‌ ನೀಡಲಾಗಿದೆ.

ಇದನ್ನೂ ಓದಿ | Covishield vaccine: ಕೋವಿಶೀಲ್ಡ್‌ ‌ ತಗೋಬೇಡಿ, ಒಳ್ಳೆಯದಲ್ಲ ಎಂದು ಅಪ್ಪುಗೆ ಮನವಿ ಮಾಡಿದ್ದ ಅಭಿಮಾನಿ: ಪೋಸ್ಟ್‌ ವೈರಲ್‌!

ಆರೋಗ್ಯ ಇಲಾಖೆ ಯಾವುದೇ ಸುತ್ತೋಲೆ ಹೊರಡಿಸಿಲ್ಲ

ಕೋವಿಶೀಲ್ಡ್‌ ಲಸಿಕೆ ಪಡೆದವರು ಫ್ರಿಡ್ಜ್‌ನಲ್ಲಿಟ್ಟ ನೀರು, ತಂಪು ಪಾನೀಯಗಳು ಹಾಗೂ ಐಸ್‌ಕ್ರೀಂ ಸೇವಿಸಬಾರದು ಎಂಬ ಕಾಲೇಜು ಆಡಳಿತ ಮಂಡಳಿಗಳ ಸೂಚನಾ ಪತ್ರ ವೈರಲ್‌ ಆಗಿದ್ದರಿಂದ ಸಾರ್ವಜನಿಕರಲ್ಲಿ ಗೊಂದಲ ಮೂಡಿತ್ತು. ಹೀಗಾಗಿ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದ್ದು, ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮಗಳ ಬಗ್ಗೆ ಇಲಾಖೆಯಿಂದ ಯಾವುದೇ ಸುತ್ತೋಲೆ ಹೊರಡಿಸಿಲ್ಲ ಎಂದು ತಿಳಿಸಿದೆ.

ರಕ್ಷಿತ್‌ ಗಣಪತಿ ಎಂಬುವವರು, ಎಕ್ಸ್‌ ಖಾತೆಯಲ್ಲಿ ಚಿಕ್ಕಬಳ್ಳಾಪುರದ ಸಿದ್ದರಾಮಯ್ಯ ಲಾ ಕಾಲೇಜಿನ ಸೂಚನಾ ಪತ್ರ ಹಾಕಿ, “ಇದು ನಿಜವೇ? ಈ ಪತ್ರ ನೆನ್ನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ, ದಯವಿಟ್ಟು ಸ್ಪಷ್ಟನೆ ನೀಡಿ ಎಂದು ಕೋರಿ, ಸಿಎಂ ಸಿದ್ದರಾಮಯ್ಯ, ಆರೋಗ್ಯ ಇಲಾಖೆಗೆ ಟ್ಯಾಗ್‌ ಮಾಡಿದ್ದರು. ಇದಕ್ಕೆ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

Continue Reading

ಆರೋಗ್ಯ

Health Tips Kannada: ಕೊಲೆಸ್ಟ್ರಾಲ್‌ ತಗ್ಗಿಸಲು ಈ ಬೆಳಗಿನ ಪೇಯಗಳಿಂದ ಸಾಧ್ಯ! ಪ್ರಯತ್ನಿಸಿ

ಆಹಾರದ ಬದಲಾವಣೆಗಳಿಂದ ಕೊಲೆಸ್ಟ್ರಾಲ್‌ ಸಮಸ್ಯೆಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಬಹುದು. ನಾರು ಹೆಚ್ಚಿರುವ ಆಹಾರಗಳು, ನೈಸರ್ಗಿಕವಾಗಿ ಕೊಲೆಸ್ಟ್ರಾಲ್‌ ಕಡಿಮೆ ಮಾಡುವ ಗುಣವುಳ್ಳವು ಮತ್ತು ಉತ್ಕರ್ಷಣ ನಿರೋಧಕಗಳು ಹೆಚ್ಚಿರುವ ಆಹಾರಗಳಿಂದ ಈ ದೋಷವನ್ನು ಸರಿಪಡಿಸಿಕೊಳ್ಳಲು ಸಾಧ್ಯವಿದೆ ಎನ್ನುತ್ತಾರೆ ಸ್ವಾಸ್ಥ್ಯ ಪರಿಣಿತರು. ಎಂಥಾ ಆಹಾರಗಳವು? ಈ (Health Tips Kannada) ಲೇಖನ ಓದಿ.

VISTARANEWS.COM


on

Health Tips Kannada
Koo

ಜೀವನಶೈಲಿಯ ದೋಷಗಳಿಂದಾಗಿ ಹಲವಾರು ರೋಗಗಳು ನಮಗೆ ಗಂಟಿಕ್ಕಿಕೊಳ್ಳುತ್ತಿವೆ. ಆಹಾರ ಕ್ರಮದಲ್ಲಿನ ದೋಷ ಮತ್ತು ವ್ಯಾಯಾಮ ಇಲ್ಲದಿರುವಂಥ ಕಾರಣದಿಂದ ದೇಹದಲ್ಲಿ ಜಮೆಯಾಗುವ ಕೊಬ್ಬು ಹೆಚ್ಚುತ್ತಿದೆ. ನಮ್ಮ ಶರೀರ ಚೆನ್ನಾಗಿ ಕೆಲಸ ಮಾಡಲು ಸಣ್ಣ ಪ್ರಮಾಣದಲ್ಲಿ ಕೊಲೆಸ್ಟ್ರಾಲ್‌ ಅಗತ್ಯವಿದೆ. ಅದು ನಮಗೆ ನಿತ್ಯದ ಆಹಾರದಿಂದಲೇ ದೊರೆಯುತ್ತದೆ. ಆದರೆ ಅತಿಯಾದ ಕೊಬ್ಬಿನ ಆಹಾರದ ಸೇವನೆ, ಸಂಸ್ಕರಿತ ಸಕ್ಕರೆಯ ಮೇಲಿನ ನಮ್ಮ ಪ್ರೀತಿಯಿಂದಾಗಿ ಶರೀರದಲ್ಲಿ ಕೊಲೆಸ್ಟ್ರಾಲ್‌ ಪ್ರಮಾಣ ಹೆಚ್ಚುತ್ತಿದೆ. ಇದರಿಂದ ಹೃದಯದ ತೊಂದರೆ ಮತ್ತು ಪಾರ್ಶ್ವವಾಯುವಿನಂಥ ಮಾರಣಾಂತಿಕ ಸಮಸ್ಯೆಗಳು ಗಂಟಿಕ್ಕಿಕೊಳ್ಳಬಹುದು. ಇದಕ್ಕಾಗಿ ವೈದ್ಯರು ಸೂಚಿಸುವ ಔಷಧಿ ಮತ್ತು ವ್ಯಾಯಾಮ ಕಡ್ಡಾಯವಾಗಿ ಬೇಕಾಗುತ್ತದೆ. ಇದಲ್ಲದೆ, ಇನ್ನೂ ಕೆಲವು ಆಹಾರದ ಬದಲಾವಣೆಗಳಿಂದ ಈ ಸಮಸ್ಯೆಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಬಹುದು. ನಾರು ಹೆಚ್ಚಿರುವ ಆಹಾರಗಳು, ನೈಸರ್ಗಿಕವಾಗಿ ಕೊಲೆಸ್ಟ್ರಾಲ್‌ ಕಡಿಮೆ ಮಾಡುವ ಗುಣವುಳ್ಳವು ಮತ್ತು ಉತ್ಕರ್ಷಣ ನಿರೋಧಕಗಳು ಹೆಚ್ಚಿರುವ ಆಹಾರಗಳಿಂದ ಈ ದೋಷವನ್ನು ಸರಿಪಡಿಸಿಕೊಳ್ಳಲು ಸಾಧ್ಯವಿದೆ ಎನ್ನುತ್ತಾರೆ ಸ್ವಾಸ್ಥ್ಯ ಪರಿಣಿತರು. ಬೆಳಗಿನ ಖಾಲಿ ಹೊಟ್ಟೆಯಲ್ಲಿ ನಾವು ದೇಹಕ್ಕೆ ನೀಡುವಂಥ ಆಹಾರಗಳು ಹಲವು ರೀತಿಯಲ್ಲಿ ಮಹತ್ವವನ್ನು ಪಡೆದಿವೆ. ಅದರಲ್ಲೂ ಬೆಳಗಿನ ಪೇಯಗಳು ಕೊಲೆಸ್ಟ್ರಾಲ್‌ ಕಡಿತ ಮಾಡುವುದಕ್ಕೆ ಸೂಕ್ತವಾದಂಥವು. ಎಂಥ ಪೇಯಗಳನ್ನು ಬೆಳಗಿನ ಹೊತ್ತು ದೇಹಕ್ಕೆ ನೀಡಿದರೆ (Health Tips Kannada) ಸೂಕ್ತ?

Green tea

ಗ್ರೀನ್‌ ಟೀ

ಹಲವು ರೀತಿಯ ಉತ್ತಮ ಪಾಲಿಫೆನಾಲ್‌ಗಳನ್ನು ಹೊಂದಿರುವ ಗ್ರೀನ್‌ ಟೀ, ಉತ್ಕರ್ಷಣ ನಿರೋಧಕಗಳ ಖಜಾನೆಯಂತಿದೆ. ಅದರಲ್ಲೂ ಗ್ರೀನ್‌ ಟೀದಲ್ಲಿರುವ ಕೆಟಿಚಿನ್‌ ಅಂಶಗಳು ಕೊಲೆಸ್ಟ್ರಾಲ್‌ಗಳ ಜೊತೆ ಕೆಲಸ ಮಾಡುತ್ತವೆ. ಇದರಿಂದ ಆಹಾರದಲ್ಲಿನ ಕೊಲೆಸ್ಟ್ರಾಲ್‌ ಅಂಶವನ್ನು ದೇಹ ಹೀರಿಕೊಳ್ಳುವುದನ್ನು ಕಡಿಮೆ ಮಾಡಲು ಸಾಧ್ಯವಿದೆ. ಹಾಗಾಗಿ ನಿಯಮಿತವಾಗಿ ಗ್ರೀನ್‌ ಟೀ ಕುಡಿಯುವುದರಿಂದ ದೇಹದಲ್ಲಿ ಎಲ್‌ಡಿಎಲ್‌ ಮತ್ತು ಒಟ್ಟಾರೆ ಕೊಲೆಸ್ಟ್ರಾಲ್‌ಗಳನ್ನು ಕಡಿಮೆ ಮಾಡಲು ಸಾಧ್ಯವಿದೆ.

Chia seeds and soy milk

ಚಿಯಾ ಬೀಜ ಮತ್ತು ಸೋಯ್‌ ಹಾಲು

ಈ ಮಿಶ್ರಣ ಕೊಲೆಸ್ಟ್ರಾಲ್‌ ನಿರ್ವಹಣೆಯಲ್ಲಿ ಸಾಕಷ್ಟು ದಕ್ಷತೆಯನ್ನು ಪ್ರದರ್ಶಿಸಿದೆ. ನಾರು, ಪ್ರೊಟೀನ್‌ ಮತ್ತು ಒಮೇಗಾ ೩ ಕೊಬ್ಬಿನಾಮ್ಲಗಳ ಜೊತೆಗೆ ಹಲವು ಸೂಕ್ಷ್ಮ ಸತ್ವಗಳು ಇದರಿಂದ ದೇಹ ಸೇರುತ್ತವೆ. ದೇಹದಲ್ಲಿ ಎಚ್‌ಡಿಎಲ್‌ ಅಥವಾ ಉತ್ತಮ ಕೊಬ್ಬನ್ನು ಹೆಚ್ಚಿಸುವ ಸಾಧ್ಯತೆ ಚಿಯಾ ಬೀಜಗಳಿಗಿದೆ. ಎಲ್‌ಡಿಎಲ್‌ ಅಥವಾ ಕೆಟ್ಟ ಕೊಬ್ಬನ್ನು ಕಡಿಮೆ ಮಾಡುವ ಕ್ಷಮತೆ ಸೋಯಾ ಹಾಲಿಗಿದೆ. ಹಾಗಾಗಿ ಈ ಮಿಶ್ರಣವನ್ನೂ ಬೆಳಗಿನ ಪೇಯವಾಗಿ ಉಪಯೋಗಿಸಬಹುದು.

Beetroot and carrot juice

ಬೀಟ್‌ರೂಟ್‌ ಮತ್ತು ಕ್ಯಾರೆಟ್‌ ರಸ

ಹೆಚ್ಚಿನ ನೈಟ್ರೇಟ್‌ ಅಂಶವಿರುವ ಬೀಟ್‌ರೂಟ್‌ ರಸ ಕೊಲೆಸ್ಟ್ರಾಲ್‌ ತಗ್ಗಿಸುವ ಸಾಧ್ಯತೆಯನ್ನು ಹೊಂದಿದೆ. ಇನ್ನು, ಬೀಟಾ ಕ್ಯಾರೋಟಿನ್‌ನಂಥ ಕೆರೋಟಿನಾಯ್ಡ್‌ಗಳನ್ನು ಹೊಂದಿರುವ ಕ್ಯಾರೆಟ್‌ ಸಹ ಕೊಲೆಸ್ಟ್ರಾಲ್‌ ಹೀರಿಕೊಳ್ಳುವುದನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಈ ಬಗ್ಗೆ ಹಲವು ಅಧ್ಯಯನಗಳು ನಡೆಯುತ್ತಿದ್ದು, ಪೂರಕ ಪರಿಣಾಮವನ್ನು ದಾಖಲಿಸಿವೆ.

Ginger, lemon juice

ಶುಂಠಿ, ನಿಂಬೆ ರಸ

ಬೆಳಗಿನ ಹೊತ್ತು ಬೆಚ್ಚಗಿನ ನೀರಿಗೆ ಕೆಲವು ಹನಿ ನಿಂಬೆ ರಸ ಮತ್ತು ಅರ್ಧ ಚಮಚ ಶುಂಠಿ ರಸ ಸೇರಿಸಿ ಕುಡಿಯುವುದು ಸಹ ಉತ್ತಮ ಪರಿಣಾಮಗಳನ್ನ ತೋರಿಸಬಲ್ಲದು. ಉತ್ಕರ್ಷಣ ನಿರೋಧಕಗಳನ್ನು ನಿಂಬೆ ರಸ ದೇಹಕ್ಕೆ ನೀಡಿದರೆ, ಟ್ರೈಗ್ಲಸರೈಡ್‌ ಮತ್ತು ಎಲ್‌ಡಿಎಲ್‌ ತಗ್ಗಿಸುವ ಗುಣವನ್ನು ಶುಂಠಿ ಹೊಂದಿದೆ. ಜೊತೆಗೆ, ಬೆಳಗಿನ ಹೊತ್ತು ಚೈತನ್ಯವನ್ನು ನೀಡಿ, ವ್ಯಾಯಾಮ ಮಾಡುವ ಉತ್ಸಾಹವನ್ನೂ ಹೆಚ್ಚಿಸುತ್ತದೆ ಈ ಪೇಯ.

Tomato juice

ಟೊಮೇಟೊ ರಸ

ಟೊಮೆಟೊದ ಕೆಂಪು ಬಣ್ಣಕ್ಕೆ ಕಾರಣವಾಗುವುದು ಅದರಲ್ಲಿರುವ ಲೈಕೊಪೇನ್‌ ಅಂಶ. ಇದು ಎಲ್‌ಡಿಎಲ್‌ ಕಡಿಮೆ ಮಾಡುವ ಗುಣವನ್ನು ಢಾಳಾಗಿ ತೋರಿಸಿದೆ. ಅಧ್ಯಯನಗಳ ಪ್ರಕಾರ, ಅತಿ ಹೆಚ್ಚು ಪ್ರಮಾಣದ ಲೈಕೊಪೇನ್‌ ಅಂಶವು (ದಿನಕ್ಕೆ 25 ಎಂಜಿಗಿಂತ ಹೆಚ್ಚು), ಕಡಿಮೆ ತೀವ್ರತೆಯ ಸ್ಟ್ಯಾಟಿನ್‌ಗಳು (ಕೊಲೆಸ್ಟ್ರಾಲ್‌ ಕಡಿಮೆ ಮಾಡುವ ಔಷಧಿಗಳು) ಬೀರುವ ಪರಿಣಾಮವನ್ನೇ ತೋರುತ್ತವೆ.

Turmeric and soy milk

ಅರಿಶಿನ ಮತ್ತು ಸೋಯ್‌ ಹಾಲು

ಸೋಯ್‌ ಹಾಲಿನಲ್ಲಿ ಎಲ್‌ಡಿಎಲ್‌ ಅಥವಾ ಕೆಟ್ಟ ಕೊಬ್ಬನ್ನು ಕಡಿಮೆ ಮಾಡುವ ಸಾಧ್ಯತೆಯಿದೆ. ಇನ್ನು ಅರಿಶಿನದಲ್ಲಿರುವ ಕರ್ಕುಮಿನ್‌ ಎಂಬ ಪ್ರಬಲ ಉತ್ಕರ್ಷಣ ನಿರೋಧಕವು ಎಲ್‌ಡಿಎಲ್‌ ಮತ್ತು ಟ್ರೈಗ್ಲಿಸರೈಡ್‌ಗಳನ್ನು ತಗ್ಗಿಸುವ ಗುಣವನ್ನು ತೋರಿಸಿದೆ. ಹಾಗಾಗಿ ಪ್ರಾಣಿಜನ್ಯ ಹಾಲಿಗೆ ಅರಿಶಿನ ಸೇರಿಸುವ ಬದಲು, ಸೋಯಾ ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು ಕೊಲೆಸ್ಟ್ರಾಲ್‌ ತಗ್ಗಿಸುವುದಕ್ಕೆ ಒಳ್ಳೆಯ ಉಪಾಯ.

ಇದನ್ನೂ ಓದಿ: Summer Tips: ಬಿಸಿಲಿನ ಆಘಾತದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ…

Continue Reading
Advertisement
Pakistan PM
ಸಂಪಾದಕೀಯ12 mins ago

ವಿಸ್ತಾರ ಸಂಪಾದಕೀಯ: ಪಾಕಿಸ್ತಾನ ಮೊದಲು ತನ್ನ ತಟ್ಟೆಯಲ್ಲಿ ಬಿದ್ದಿರುವ ನೊಣ ತೆಗೆಯಲಿ, ಪಾಠ ಕಲಿಯಲಿ

Tips For Healthy Skin
ಆರೋಗ್ಯ13 mins ago

Tips For Healthy Skin: ಕಡಲೆಹಿಟ್ಟೆಂಬ ಶತಮಾನಗಳ ಹಳೆಯ ಸೌಂದರ್ಯವರ್ಧಕ!

Dina Bhavishya
ಭವಿಷ್ಯ1 hour ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Rain News
ಕರ್ನಾಟಕ6 hours ago

Rain News: ಪ್ರತ್ಯೇಕ ಮಳೆ ಅವಘಡ; ಸಿಡಿಲು ಬಡಿದು ನವ ವಿವಾಹಿತ ಸಾವು, ಕಾರ್ಮಿಕನ ಸ್ಥಿತಿ ಗಂಭೀರ

ಪ್ರಮುಖ ಸುದ್ದಿ7 hours ago

IPL 2024 : ಮುಂಬೈ ವಿರುದ್ಧ ಕೆಕೆಆರ್​ಗೆ 24 ರನ್​ ಗೆಲುವು; ಪಾಂಡ್ಯಾ ಬಳಗಕ್ಕೆ ಮತ್ತೊಂದು ಆಘಾತ

Nijjar Killing
ವಿದೇಶ7 hours ago

Nijjar Killing: ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆಯ ಆರೋಪಿಗಳನ್ನು ಬಂಧಿಸಿದ ಕೆನಡಾ ಪೊಲೀಸರು; ಯಾರಿವರು?

Rohith Vemula
ದೇಶ7 hours ago

Rohith Vemula: ರೋಹಿತ್‌ ವೇಮುಲ ದಲಿತನಲ್ಲ ಎಂದ ಪೊಲೀಸರು; ಮರು ತನಿಖೆಗೆ ‘ಕೈ’ ಸರ್ಕಾರ ಆದೇಶ!

Rinku Singh
ಪ್ರಮುಖ ಸುದ್ದಿ7 hours ago

Rinku Singh : ಕೊಹ್ಲಿಯ ಬ್ಯಾಟ್​ನಲ್ಲಿ ರಿಂಕು ಚೆನ್ನಾಗಿ ಆಡುತ್ತಿಲ್ಲ; ನೆಟ್ಟಿಗರಿಂದ ಟ್ರೋಲ್​!

honour killing
ವಿಜಯಪುರ7 hours ago

Honor Killing: ಮರ್ಯಾದೆಗಾಗಿ ಗರ್ಭಿಣಿಯನ್ನು ಸುಟ್ಟು ಕೊಂದ ಇಬ್ಬರಿಗೆ ಗಲ್ಲು ಶಿಕ್ಷೆ, 6 ಮಂದಿಗೆ ಜೀವಾವಧಿ‌ ಶಿಕ್ಷೆ

Pakistan
ವಿದೇಶ7 hours ago

ಚೀನಾ ದಯೆಯಿಂದ ಮೊದಲ ಚಂದ್ರಯಾನ ಕೈಗೊಂಡ ಪಾಕಿಸ್ತಾನ; ಆದರೂ ಭಾರತಕ್ಕಿಂತ 16 ವರ್ಷ ಹಿಂದೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 hour ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ14 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 day ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌