Assault Case: ಕಾರು ಖರೀದಿಯಲ್ಲಿ ವಂಚನೆ, ದೂರುದಾರನ ಮೇಲೆ ಆರೋಪಿಯ ಹಲ್ಲೆ - Vistara News

Latest

Assault Case: ಕಾರು ಖರೀದಿಯಲ್ಲಿ ವಂಚನೆ, ದೂರುದಾರನ ಮೇಲೆ ಆರೋಪಿಯ ಹಲ್ಲೆ

ರೋನಿತ್ ಕಾರು ಬಿಸಿನೆಸ್ ವಿಚಾರದಲ್ಲಿ ವಂಚನೆ ಮಾಡಿದ್ದಾನೆ ಎಂದು ಆತನ ಮೇಲೆ ಅಖಿಲ್‌ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ. ಈ ಹಿನ್ನೆಲೆಯಲ್ಲಿ ಬಂಧಿತನಾಗಿದ್ದ ರೋನಿತ್, ನಂತರ ಜಾಮೀನು ಪಡೆದು ಹೊರಬಂದಿದ್ದ.

VISTARANEWS.COM


on

assault
ದೂರುದಾರ ಅಖಿಲ್‌, ಆರೋಪಿಗಳಾದ ರೋನಿತ್‌, ದುರ್ಗಾ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾರು ಖರೀದಿ ವಿಚಾರದಲ್ಲಿ ವಂಚನೆ ಮಾಡಿದ ಆರೋಪಿಯೇ ಜೈಲಿನಿಂದ ಬಿಡಿಸಿಕೊಂಡು ಬಂದು, ದೂರುದಾರನನ್ನು ಅಟ್ಟಿಸಿಕೊಂಡು ಬಂದು ಹಲ್ಲೆ ಮಾಡಿದ (Assault Case) ಘಟನೆ ನಡೆದಿದೆ. ಮಿನಿಕೂಪರ್ ಮಾಲೀಕನ ಮೇಲೆ, ಆಡಿ ಕಾರ್‌ನಲ್ಲಿ ಬಂದ ತಂಡ ಹಲ್ಲೆ ಮಾಡಿದೆ.

ಅಖಿಲ್@ ಹೇಮಾದ್ರಿ ಎಂಬವರ ಮೇಲೆ ಹಲ್ಲೆ ನಡೆಸಲಾಗಿದೆ. ರೋನಿತ್, ದುರ್ಗಾ ಸೇರಿದಂತೆ ಐದು ಜನರಿಂದ ಹಲ್ಲೆ ನಡೆದಿದೆ. ರೋನಿತ್ ಕಾರು ಬಿಸಿನೆಸ್ ವಿಚಾರದಲ್ಲಿ ವಂಚನೆ ಮಾಡಿದ್ದಾನೆ ಎಂದು ಆತನ ಮೇಲೆ ಅಖಿಲ್‌ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ. ಈ ಹಿನ್ನೆಲೆಯಲ್ಲಿ ಬಂಧಿತನಾಗಿದ್ದ ರೋನಿತ್, ನಂತರ ಜಾಮೀನು ಪಡೆದು ಹೊರಬಂದಿದ್ದ.

ದೂರು ನೀಡಿದ ಹಿನ್ನೆಲೆಯಲ್ಲಿ ಪದೇ ಪದೆ ಅಖಿಲ್‌ಗೆ ಬೆದರಿಕೆ ಹಾಕುತ್ತಿದ್ದ ರೋನಿತ್‌, ಇದೇ ದ್ವೇಷದಿಂದ ಸಮಯಕ್ಕಾಗಿ ಕಾಯುತ್ತಿದ್ದನೆನ್ನಲಾಗಿದೆ. ಅಖಿಲ್‌ ಕಚೇರಿ ಕೆಲಸ ಮುಗಿಸಿ ಮನೆಗೆ ಹೋಗುವ ವೇಳೆ ರೋನಿತ್ ಆ್ಯಂಡ್ ಟೀಂ ಆಡಿ ಕಾರಿನಲ್ಲಿ ಫಾಲೋ ಮಾಡಿಕೊಂಡು ಬಂದಿದೆ. ಎಲ್ ಆ್ಯಂಡ್ ಟಿ ಅಪಾರ್ಟ್ಮೆಂಟ್ ಬಳಿ ಬರುತ್ತಿದ್ದಂತೆ ರೋನಿತ್ ಟೀಂ ಅಡ್ಡ ಹಾಕಿದ್ದು, ಅಖಿಲ್‌ ಕಾರಿನಲ್ಲಿರುವಾಗಲೆ ಹಲ್ಲೆ ನಡೆಸಿ ಕಾರಿನ ಗ್ಲಾಸ್ ಒಡೆದು ಹಾಕಿದೆ. ನಂತರ ಕೊಲೆ ಬೆದರಿಕೆ ಹಾಕಿದೆ. ಈ ಸಂಬಂಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: Air Travel: ವಿಮಾನದಲ್ಲಿ ಸಿಗರೇಟ್‌ ಸೇದಿ ಅರೆಸ್ಟ್‌ ಆದ ಪ್ರಯಾಣಿಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತಂತ್ರಜ್ಞಾನ

WhatsApp colour: ವಾಟ್ಸ್ಆ್ಯಪ್​ನ ಬಣ್ಣ ಬದಲಾಗಿದ್ದು ಯಾಕೆ? ಏನಿದರ ಗುಟ್ಟು?

WhatsApp colour: ನಿರಂತರ ಅಪ್ಡೇಟ್ ಆಗುತ್ತಿರುವ ವಾಟ್ಸ್ ಆಪ್ ನಲ್ಲಿ ಈಗ ಬಣ್ಣ ಬದಲಾವಣೆ ಆಗಿದ್ದು, ಹೆಚ್ಚಿನವರು ಇದನ್ನು ಗಮನಿಸಿ ಇಲ್ಲದೇ ಇದ್ದರೂ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆ ಆರಂಭವಾಗಿದೆ. ಯಾಕೆ ಈ ಬಣ್ಣ ಬದಲಾಯಿಸಲಾಗಿದೆ ಗೊತ್ತೇ?

VISTARANEWS.COM


on

By

WhatsApp color
Koo

ಜಗತ್ತಿನಾದ್ಯಂತ (world) ಎರಡು ಬಿಲಿಯನ್ ಗಿಂತಲೂ ಹೆಚ್ಚು ಮಂದಿ ಬಳಸುತ್ತಿರುವ ವಾಟ್ಸ್ ಆಪ್ (whatsApp) ತನ್ನ ವೈಶಿಷ್ಟ್ಯದಿಂದಾಗಿ ನಿರಂತರ ಎಲ್ಲರ ಗಮನ ಸೆಳೆಯುತ್ತದೆ. ಎಲ್ಲರೂ ಬಹು ಸುಲಭವಾಗಿ ಬಳಸಬಹುದಾದ ಈ ಪುಟ್ಟ ಆ್ಯಪ್ ಈಗ ನವೀಕರಣಗೊಂಡಿದ್ದು ಬಣ್ಣದ ಬದಲಾವಣೆಯಿಂದ (WhatsApp colour) ಬಳಕೆದಾರರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.

ವಾಟ್ಸ್ ಆಪ್ ಈಗ ಒಂದು ಸೂಕ್ಷ್ಮ ಬದಲಾವಣೆಗೆ ಒಳಗಾಗಿದ್ದು ಅದು ಅದರ ಹಸಿರು ಬಣ್ಣ (green colour). ಸಂದೇಶ ಕಳುಹಿಸುವಿಕೆಯ ಅಪ್ಲಿಕೇಶನ್‌ ವಾಟ್ಸ್ ಆ್ಯಪ್​ ನ ಭಾಗಗಳು ಈಗ ಲೋಗೋದಂತೆಯೇ ಹಸಿರು ಬಣ್ಣಕ್ಕೆ ತಿರುಗಿದೆ. ಆದರೆ ಇದು ಹೆಚ್ಚಿನವರ ಗಮನಕ್ಕೆ ಬರಲಿಲ್ಲವಾದರೂ ಕೆಲವರು ಮಾತ್ರ ಇದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಪ್ರಾರಂಭಿಸಿದ್ದಾರೆ.

ಕೆಲವು ಬಳಕೆದಾರರು ಈ ಬದಲಾವಣೆ ತುಂಬಾ ಚೆನ್ನಾಗಿಲ್ಲ ಎಂದು ಹೇಳಿದ್ದು, ಮೆಟಾ (meta) ಮಾಲೀಕತ್ವದ ಈ ಅಪ್ಲಿಕೇಶನ್ ಈ ರೀತಿ ಮಾಡಲು ಏಕೆ ನಿರ್ಧರಿಸಿದೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Deep Fakes: ಶೇ. 75 ಭಾರತೀಯರು ಡೀಪ್‌ಫೇಕ್‌ಗೆ ಒಳಗಾಗಿದ್ದಾರೆ; ಗೊತ್ತಾಗಿದ್ದು ಶೇ.22 ಮಂದಿಗೆ ಮಾತ್ರ!

ಭಾರತೀಯ ಬಳಕೆದಾರರಿಗೂ ಈ ಹೊಸ ಅಪ್ಡೇಟ್ ಲಭ್ಯವಾಗಿದ್ದು, ಒಂದು ವೇಳೆ ವಾಟ್ಸ್ ಆಪ್ ಈ ಸಣ್ಣ ಬದಲಾವಣೆ ಕಂಡು ಬಂದರೆ ಈ ಬಗ್ಗೆ ಆಶ್ಚರ್ಯ ಪಡಬೇಕಿಲ್ಲ.


ವಾಟ್ಸಾಪ್ ಏಕೆ ಹಸಿರಾಗಿದೆ?

ವಾಟ್ಸ್ ಆ್ಯಪ್​​ನ ಮಾಲೀಕರಾಗಿರುವ ಮೆಟಾ ಈ ಬದಲಾವಣೆಗಳ ಮೂಲಕ ಬಳಕೆದಾರರಿಗೆ ಆಧುನಿಕ, ಹೊಸ ಅನುಭವ ನೀಡುವ ಗುರಿಯನ್ನು ಹೊಂದಿದೆ ಮತ್ತು ಅದನ್ನು ಹೆಚ್ಚು ಸುಲಭವಾಗಿ ಮತ್ತು ಬಳಸಲು ಸರಳವಾಗುವಂತೆ ಮಾಡಲಾಗುತ್ತದೆ ಎಂದು ಹೇಳಿದೆ.

ಬದಲಾವಣೆಗಳೇನು?

ವಾಟ್ಸ್ ಆ್ಯಪ್ ನವೀಕರಣದ ಬಳಿಕ iOS ಮತ್ತು Android ಬಳಕೆದಾರರಿಗೆ ಇದು ಲಭ್ಯವಾಗುತ್ತಿದೆ. Android ಬಳಕೆದಾರರು ಹಿಂದಿನ ಹಸಿರು ಬಣ್ಣದಲ್ಲಿ ಬದಲಾವಣೆಯನ್ನು ಗಮನಿಸಬಹುದು.

ವಾಟ್ಸ್​​ಆ್ಯಪ್​ನಲ್ಲಿ ಹಸಿರು ಬಣ್ಣವನ್ನು ಮಾತ್ರವಲ್ಲ ಸ್ಟೇಟಸ್ ಬಾರ್‌ನಿಂದ ಚಾಟ್-ಲಿಸ್ಟ್ ವಿಂಡೋದವರೆಗೆ ಎಲ್ಲವೂ ವಿನ್ಯಾಸ ಬದಲಾವಣೆಯಾಗಿದೆ. ಅಪ್ಲಿಕೇಶನ್‌ನಲ್ಲಿ ಹಂಚಿಕೊಳ್ಳಲಾದ ಲಿಂಕ್‌ಗಳು ಕೂಡ ಹಸಿರು ಬಣ್ಣದಲ್ಲಿ ಗೋಚರಿಸುತ್ತವೆ.

ಆಂಡ್ರಾಯ್ಡ್ ಬಳಕೆದಾರರು ಡಾರ್ಕ್ ಮೋಡ್‌ ನಲ್ಲಿ ಸೂಕ್ಷ್ಮ ಹೊಂದಾಣಿಕೆಗಳನ್ನು ಕಾಣಬಹುದು. ಡಾರ್ಕ್ ಮೋಡ್ ನಲ್ಲಿ ಅದು ಇನ್ನಷ್ಟು ಗಾಢವಾಗುತ್ತದೆ ಮತ್ತು ಲೈಟ್ ಮೋಡ್ ನಲ್ಲಿ ಹೆಚ್ಚುವರಿ ಸ್ಥಳಾವಕಾಶದೊಂದಿಗೆ ಸುಧಾರಿತ ಓದುವಿಕೆಗೆ ಪ್ರಾಶಸ್ತ್ಯ ನೀಡುತ್ತದೆ.

ಬಳಕೆದಾರರ ಅನುಭವ ಸುಧಾರಣೆಗೆ ಕ್ರಮ

ವಾಟ್ಸ್ ಆ್ಯಪ್ ನಲ್ಲಿ ಬಣ್ಣ ಬದಲಾವಣೆಯೊಂದಿಗೆ ಬಳಕೆದಾರರ ಅನುಭವವನ್ನು ಸುಧಾರಿಸುವ ಉದ್ದೇಶದಿಂದ ಹಲವು ನವೀಕರಣಗಳನ್ನು ಮಾಡಿದೆ.

ವಾಟ್ಸ್ ಆ್ಯಪ್ ತನ್ನ ಸಂದೇಶ ಸೂಚಕಗಳಲ್ಲಿ ಕೆಲವು ಪದಗಳನ್ನು ದೊಡ್ಡಕ್ಷರ ಮಾಡಲು ಇತ್ತೀಚೆಗೆ ಪರಿಶೀಲನೆಗೆ ಒಳಗಾಯಿತು. ಕೆಲವು ಬಳಕೆದಾರರು “ಆನ್‌ಲೈನ್” ಮತ್ತು “ಟೈಪಿಂಗ್” ನ ಮೊದಲ ಅಕ್ಷರಗಳನ್ನು ಕ್ರಮವಾಗಿ “ಆನ್‌ಲೈನ್” ಮತ್ತು “ಟೈಪಿಂಗ್” ಎಂದು ದೊಡ್ಡಕ್ಷರದಲ್ಲಿ ಬದಲಾವಣೆಯನ್ನು ಗಮನಿಸಿದ್ದಾರೆ. ಆಂಡ್ರಾಯ್ಡ್ ಮತ್ತು ಐಒಎಸ್ ಎರಡರಲ್ಲೂ ಗಮನಿಸಲಾದ ಬದಲಾವಣೆಯು ಆನ್‌ಲೈನ್‌ನಲ್ಲಿ ಮಹತ್ವದ ಚರ್ಚೆಗಳನ್ನು ಹುಟ್ಟುಹಾಕಿದೆ.

Continue Reading

ತಂತ್ರಜ್ಞಾನ

English Speaking Practice: ಸರಳ, ಸುಲಭವಾಗಿ ಇಂಗ್ಲಿಷ್ ಮಾತನಾಡಬೇಕೇ?; ಗೂಗಲ್​​ನಲ್ಲಿದೆ ‘ಸ್ಪೀಕಿಂಗ್ ಪ್ರಾಕ್ಟೀಸ್’

English Speaking Practice: ಇಂಗ್ಲಿಷ್ ಮಾತನಾಡುವ ಕೌಶಲವನ್ನು ವೃದ್ಧಿಸಿಕೊಳ್ಳಬೇಕೇ. ಇದಕ್ಕಾಗಿ ಇನ್ನು ಹೆಚ್ಚಿನ ಕಡೆ ಅಲೆದಾಡಬೇಕಿಲ್ಲ. ನಾವು ನಿತ್ಯ ಏನಾದರೊಂದು ವಿಷಯದ ಬಗ್ಗೆ ಹುಡುಕಾಡುವ ಗೂಗಲ್ ನಲ್ಲೇ ಇದು ಲಭ್ಯವಾಗಲಿದೆ.

VISTARANEWS.COM


on

By

English Speaking Practice
Koo

ಸ್ಮಾರ್ಟ್ ಫೋನ್ (smart phone) ಬಳಕೆದಾರರ ಇಂಗ್ಲಿಷ್ ಮಾತನಾಡುವ ಕೌಶಲ್ಯವನ್ನು (English Speaking Practice) ಸುಧಾರಿಸಲು ಗೂಗಲ್ (google) ಹೊಸ ವೈಶಿಷ್ಠ್ಯವೊಂದನ್ನು ಪರಿಚಯಿಸಿದೆ. ‘ಸ್ಪೀಕಿಂಗ್ ಪ್ರಾಕ್ಟೀಸ್’ ಎಂದು ಕರೆಯಲ್ಪಡುವ ಈ ಹೊಸ ವೈಶಿಷ್ಟ್ಯವು ಪ್ರಸ್ತುತ ಅರ್ಜೆಂಟೀನಾ (Argentina), ಕೊಲಂಬಿಯಾ (Colombia), ಭಾರತ (India), ಇಂಡೋನೇಷ್ಯಾ (Indonesia), ಮೆಕ್ಸಿಕೋ (Mexico) ಮತ್ತು ವೆನೆಜುವೆಲಾದಲ್ಲಿ (Venezuela) ಗೂಗಲ್ ಹುಡುಕಾಟದಲ್ಲಿ ಲಭ್ಯವಾಗುತ್ತಿದೆ.

ಆರ್ಟಿಫಿಷಿಯಲ್ ಇಂಟಲಿಜೆನ್ಸ್ (AI) ಸಹಾಯದಿಂದ ಹೊಸ ವೈಶಿಷ್ಟ್ಯವು ಸಂವಹನ ಭಾಷಾ ಕಲಿಕೆಯನ್ನು ಪ್ರಾಕ್ಟೀಸ್ ಮಾಡಲು ಬಳಕೆದಾರರಿಗೆ ಅವಕಾಶ ಕಲ್ಪಿಸುತ್ತದೆ. ದಿನನಿತ್ಯ ಬಳಸಬಹುದಾದ ಹೊಸ ಪದಗಳನ್ನು ಕಲಿಯಲು ಇದು ಸಹಾಯ ಮಾಡುತ್ತದೆ ಎಂದು ಟೆಕ್ ದೈತ್ಯ ಗೂಗಲ್ ಹೇಳಿದೆ.

ಟೆಕ್ಕ್ರಂಚ್ ಪ್ರಕಾರ, ಸ್ಪೀಕಿಂಗ್ ಪ್ರಾಕ್ಟೀಸ್ ಅನ್ನು ಟ್ವಿಟರ್​​ ನಲ್ಲಿ ಹಿಂದೆ ಪರಿಚಯಿಸಲಾಗಿತ್ತು. ಈ ಹೊಸ ವೈಶಿಷ್ಟ್ಯವು ಬಳಕೆದಾರರಿಗೆ ಪ್ರಶ್ನೆ ಕೇಳುವ ಮೂಲಕ ಕಾರ್ಯನಿರ್ವಹಿಸುತ್ತದೆ. ಅದರ ಅನಂತರ ಬಳಕೆದಾರರು ಪೂರ್ವನಿರ್ಧರಿತ ಪದಗಳ ಗುಂಪಿನಿಂದ ಉತ್ತರಿಸಲು ಪ್ರೇರೇಪಿಸುತ್ತಾರೆ.

ಇದನ್ನೂ ಓದಿ: WhatsApp: ಭಾರತ ತೊರೆಯುವುದಾಗಿ ವಾಟ್ಸ್‌ಆ್ಯಪ್‌ ಎಚ್ಚರಿಕೆ; ಶೀಘ್ರದಲ್ಲೇ ಆ್ಯಪ್‌ ಅಲಭ್ಯ?

ಬಳಕೆದಾರರು ಹಂಚಿಕೊಂಡಿರುವ ಸ್ಕ್ರೀನ್‌ಶಾಟ್‌ಗಳಲ್ಲಿ ಒಂದಾದ ವೈಶಿಷ್ಟ್ಯವು ಎಐ ಚಾಟ್‌ಬಾಟ್ ಅನ್ನು ಹೊಂದಿರುತ್ತದೆ. ಅದು ಬಳಕೆದಾರರು ಏನು ಮಾಡಬೇಕು ಎಂದು ತಿಳಿಸುತ್ತದೆ. ಬಳಕೆದಾರರು ಅನಂತರ ‘ದಣಿದ’, ‘ಹೃದಯ’ ಮತ್ತು ‘ವ್ಯಾಯಾಮ’ ದಂತಹ ಪದಗಳನ್ನು ಒಳಗೊಂಡಿರುವ ಒಂದು ಪದದ ಪ್ರತಿಕ್ರಿಯೆಗಳೊಂದಿಗೆ ಉತ್ತರಿಸ ಬೇಕು.


ಜನರು ತಮ್ಮ ಸ್ಮಾರ್ಟ್ ಫೋನ್‌ಗಳಲ್ಲಿ ಇಂಗ್ಲಿಷ್ ಸಂವಹನವನ್ನು ವೃದ್ಧಿಸಿಕೊಳ್ಳಲು ಗೂಗಲ್ ತನ್ನ ಎಐ ಆಲಿಸುವ ಕೌಶಲ್ಯಗಳನ್ನು 2023ರ ಅಕ್ಟೋಬರ್ ನಲ್ಲಿ ಹೊರತಂದಿದೆ. ಮೊದಲು ಮಾತನಾಡುವ ವಾಕ್ಯಗಳ ಕುರಿತು ಮಾತ್ರ ಪ್ರತಿಕ್ರಿಯೆಯನ್ನು ಒದಗಿಸುತಿತ್ತು. ಈಗ, ಬಳಕೆದಾರರು ತಾವು ಕಲಿಯುತ್ತಿರುವ ಭಾಷೆಯಲ್ಲಿ ನಡೆಯುತ್ತಿರುವ ಸಂಭಾಷಣೆಗಳನ್ನು ಅಭ್ಯಾಸ ಮಾಡಬಹುದು.


ಇಂಗ್ಲಿಷ್ ಟ್ಯೂಟರಿಂಗ್

ಇದಲ್ಲದೇ ಗೂಗಲ್ ಕಳೆದ ವರ್ಷ ಹೊಸ ಡ್ಯುಯೊಲಿಂಗೋ ನಂತಹ ಇಂಗ್ಲಿಷ್ ಟ್ಯೂಟರಿಂಗ್ ವೈಶಿಷ್ಟ್ಯವನ್ನು ಪರಿಚಯಿಸಿತ್ತು. ಅದು ಜನರು ತಮ್ಮ ಇಂಗ್ಲಿಷ್ ಮಾತನಾಡುವ ಕೌಶಲ್ಯಗಳನ್ನು ಅಭ್ಯಾಸ ಮಾಡಲು ಮತ್ತು ಸುಧಾರಿಸಲು ಸಹಾಯ ಮಾಡಿತು. ಮಾತನಾಡುವ ಅಭ್ಯಾಸ ಕಾರ್ಯವು ಇದನ್ನು ಒಳಗೊಂದು ನಿರ್ಮಿಸಲಾಗಿದೆ.

ಹೇಗೆ ಅಭ್ಯಾಸ ಮಾಡುವುದು?

ಹೊಸ ಮಾತನಾಡುವ ಅಭ್ಯಾಸ ವೈಶಿಷ್ಟ್ಯವನ್ನು ಬಳಸಲು ಸ್ಮಾರ್ಟ್ ಫೋನ್ ಅಥವಾ ಲ್ಯಾಪ್ ಟಾಪ್ ನಲ್ಲಿ ಗೂಗಲ್ ಅಪ್ಲಿಕೇಶನ್ ತೆರೆಯಿರಿ ಮತ್ತು ಮೇಲಿನ ಎಡ ಮೂಲೆಯಲ್ಲಿರುವ ಲ್ಯಾಬ್ಸ್ ಐಕಾನ್ ಮೇಲೆ ಟ್ಯಾಪ್ ಮಾಡಿ. ಇಲ್ಲಿ, ನಿಮ್ಮ ಖಾತೆಯಲ್ಲಿ ಲಭ್ಯವಿರುವ ಹೊಸ ವೈಶಿಷ್ಟ್ಯವನ್ನು ನೋಡಬಹುದು.

ಎರಡು ಅತ್ಯಂತ ಜನಪ್ರಿಯ ಭಾಷಾ-ಕಲಿಕೆಯ ಅಪ್ಲಿಕೇಶನ್‌ಗಳಾದ ಡ್ಯುಯೊಲಿಂಗೋ ಮತ್ತು ಬಾಬೆಲ್‌ಗಳಂತಹವುಗಳನ್ನು ಗ್ರಾಹಕರಿಗೆ ಪರಿಚಯಿಸಲು ಗೂಗಲ್ ಬಯಸುತ್ತಿರುವಂತೆ ತೋರುತ್ತಿದೆ. ಈಗಿನಂತೆ ಗೂಗಲ್ ಈ ಪ್ರಾಯೋಗಿಕ ವೈಶಿಷ್ಟ್ಯವನ್ನು ಹೆಚ್ಚಿನ ಪ್ರದೇಶಗಳಿಗೆ ತರಲು ಯೋಜಿಸುತ್ತಿದೆಯೇ ಎಂಬ ಬಗ್ಗೆ ಯಾವುದೇ ಮಾಹಿತಿ ಈವರೆಗೆ ಲಭ್ಯವಾಗಿಲ್ಲ.

Continue Reading

Lok Sabha Election 2024

Lok Sabha Election 2024: ಜೈಲಿನಲ್ಲಿರುವ ಅಮೃತಪಾಲ್ ಚುನಾವಣೆಗೆ ಸ್ಪರ್ಧಿಸಬಹುದು, ಕೇಜ್ರಿವಾಲ್ ಮತ ಚಲಾಯಿಸುವಂತಿಲ್ಲ! ಏನಿದು ನಿಯಮ?

Lok Sabha Election 2024: ಜೈಲಿನಲ್ಲಿರುವ ಇಬ್ಬರು ಖೈದಿಗಳಲ್ಲಿ ಒಬ್ಬರಿಗೆ 2024ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ, ಇನ್ನೊಬ್ಬರಿಗೆ ಮತದಾನ ಮಾಡಲು ಅವಕಾಶ ನೀಡಲಾಗುತ್ತಿಲ್ಲ. ಏನಿದು ಚುನಾವಣೆ ಆಯೋಗದ ನಿಯಮ? ಇಲ್ಲಿದೆ ವಿಸ್ತೃತ ವಿವರಣೆ.

VISTARANEWS.COM


on

By

Lok Sabha Election-2024
Koo

ನವದೆಹಲಿ: ಪ್ರಪಂಚದಾದ್ಯಂತ ಚುನಾವಣೆಗಳಲ್ಲಿ (election) ವಿರೋಧಾಭಾಸಗಳು ಎದುರಾಗುತ್ತವೆ. ಇದರಲ್ಲಿ ಭಾರತವೂ ಹೊರತಾಗಿಲ್ಲ. ಇದೀಗ ಜೈಲಿನಲ್ಲಿರುವ (jail) ಇಬ್ಬರು ಕೈದಿಗಳಲ್ಲಿ (locked up) ಒಬ್ಬರಿಗೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಸಿಕ್ಕಿದ್ದರೆ, ಇನ್ನೊಬ್ಬರಿಗೆ ಮತದಾನ (voting) ಮಾಡಲೂ ಅವಕಾಶ ನೀಡಲಾಗಿಲ್ಲ.

2024ರ ಲೋಕಸಭಾ ಚುನಾವಣೆಯ (Lok Sabha Election‌ 2024) ವೇಳೆ ಭಾರತದಲ್ಲಿ (india) ಅಂತಹ ಒಂದು ವಿರೋಧಾಭಾಸ ಕಾಣಿಸಿಕೊಂಡಿದೆ. 2,300 ಕಿ.ಮೀ. ದೂರದಲ್ಲಿರುವ ಎರಡು ವಿಭಿನ್ನ ಜೈಲುಗಳಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಇವರಲ್ಲಿ ಒಬ್ಬರಿಗೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ನೀಡಿದ್ದರೆ, ಇನ್ನೊಬ್ಬರಿಗೆ ಮತದಾನ ಮಾಡಲು ಅವಕಾಶ ಸಿಕ್ಕಿಲ್ಲ.

ವಾರಿಸ್ ಪಂಜಾಬ್ ದೇ ಮುಖ್ಯಸ್ಥ ಅಮೃತಪಾಲ್ ಸಿಂಗ್ (Amritpal Singh) ಅಸ್ಸಾಂನ ದಿಬ್ರುಗಢ್ ಜೈಲಿನಲ್ಲಿದ್ದರೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ತಿಹಾರ್ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ: Lok Sabha Election 2024: ದೇಶ, ರಾಜ್ಯಕ್ಕೆ ಬಿಜೆಪಿಯಿಂದ ಖಾಲಿ ಚೊಂಬು ಕೊಟ್ಟಿದ್ದಾರೆ: ರಾಹುಲ್‌ ಗಾಂಧಿ

ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾನೂನು ಅನುಮತಿ ನೀಡಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಂತಹ ಲಕ್ಷಾಂತರ ವಿಚಾರಣಾಧೀನ ಕೈದಿಗಳು ಮತ ಚಲಾಯಿಸಲು ಅನುಮತಿ ನೀಡಲಾಗಿಲ್ಲ. ಯಾಕೆಂದರೆ ಭಾರತ ಕಾನೂನು ಪ್ರಕಾರ ಭಾರತದಲ್ಲಿ ಜನರು ಜೈಲಿನಲ್ಲಿ ಇದ್ದು ಚುನಾವಣೆಗೆ ಸ್ಪರ್ಧಿಸಬಹುದು. ಆದರೆ ಜೈಲಿನಿಂದ ಮತ ಚಲಾಯಿಸಲು ಸಾಧ್ಯವಿಲ್ಲ!


ಅಮೃತ್ ಪಾಲ್ ಸ್ಪರ್ಧೆ

2023ರ ಏಪ್ರಿಲ್ 23ರಿಂದ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಅವರು ಪಂಜಾಬ್‌ನ ಖಾದೂರ್ ಸಾಹಿಬ್ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ದಿಬ್ರುಗಢ ಕೇಂದ್ರ ಕಾರಾಗೃಹದಲ್ಲಿ ಭಾಯಿ ಸಾಹೇಬ್ ಅಮೃತಪಾಲ್ ಅವರನ್ನು ನಾನು ಭೇಟಿ ಮಾಡಿದ್ದೇನೆ. ಖಾಲ್ಸಾ ಪಂಥ್‌ನ ಹಿತಾಸಕ್ತಿಯಿಂದ ಅವರು ಈ ಬಾರಿ ಸಂಸದರಾಗಲು ಖದೂರ್ ಸಾಹಿಬ್‌ನಿಂದ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ನಾನು ಅವರಿಗೆ ವಿನಂತಿಸಿದೆ ಎಂದು ಅಮೃತಪಾಲ್ ಅವರ ವಕೀಲ ರಾಜದೇವ್ ಸಿಂಗ್ ಖಾಲ್ಸಾ ಈ ಹಿಂದೆ ಹೇಳಿದ್ದು, ಭಾಯಿ ಸಾಹೇಬ್ ಒಪ್ಪಿದ್ದಾರೆ ಮತ್ತು ಅವರು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದು ಅವರು ಹೇಳಿದರು.

ಬಂಧನಕ್ಕೆ ಒಳಗಾಗಿರುವುದು ಏಕೆ?

ಅಮೃತಪಾಲ್ ಸಿಂಗ್ ಅವರನ್ನು ಪಂಜಾಬ್‌ನ ಮೋಗಾ ಜಿಲ್ಲೆಯ ರೋಡ್ ಗ್ರಾಮದಲ್ಲಿ ವರ್ಷದ ಹಿಂದೆ ಬಂಧಿಸಲಾಗಿತ್ತು. ಅಮೃತ್‌ಪಾಲ್ ಸಿಂಗ್ ಅವರು ಬೆಂಬಲಿಗರೊಂದಿಗೆ ಬಂದೂಕು ಮತ್ತು ಕತ್ತಿಗಳನ್ನು ಹಿಡಿದುಕೊಂಡು ಅಮೃತಸರದ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದರಿಂದ ಅವರನ್ನು ಬಂಧಿಸಲಾಯಿತು. ಪ್ರತ್ಯೇಕತಾವಾದಿ ಈತ.

ಜೈಲಿನಿಂದ ಸ್ಪರ್ಧಿಸಿದವರು, ಗೆದ್ದವರಿವರು

1996 ರಲ್ಲಿ, ಡಾನ್- ಟರ್ನ್ಡ್ ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರು ಜೈಲಿನಲ್ಲಿದ್ದಾಗ ಬಿಎಸ್ಪಿ ಟಿಕೆಟ್‌ನಲ್ಲಿ ಉತ್ತರ ಪ್ರದೇಶದ ಮೌ ಅಸೆಂಬ್ಲಿ ಸ್ಥಾನಕ್ಕೆ ಸ್ಪರ್ಧಿಸಿದರು. ಕಳೆದ ತಿಂಗಳು ನಿಧನರಾದ ಅನ್ಸಾರಿ ಅವರು ಜೈಲಿನಿಂದಲೇ ಚುನಾವಣೆಯಲ್ಲಿ ಗೆದ್ದಿದ್ದರು.

2005ರಲ್ಲಿ ಸೆರೆವಾಸದಲ್ಲಿದ್ದ ಮುಖ್ತಾರ್ ಅನ್ಸಾರಿ ಅವರು ಜೈಲಿನಿಂದ 2007, 2012 ಮತ್ತು ಮತ್ತೆ 2017 ರಲ್ಲಿ ಒಟ್ಟು ಮೂರು ಬಾರಿ ಮೌ ಅಸೆಂಬ್ಲಿ ಸ್ಥಾನವನ್ನು ಗೆದ್ದರು.

ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ 1998ರ ಲೋಕಸಭೆ ಚುನಾವಣೆ ವೇಳೆ ಮೇವು ಹಗರಣದಲ್ಲಿ ಜೈಲು ಸೇರಿದ್ದರು. ಬಿಹಾರದ ಮಾಧೇಪುರ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿ ಜೈಲಿನಲ್ಲಿದ್ದೇ ಗೆದ್ದಿದ್ದರು.


ಕೇಜ್ರಿವಾಲ್ ಮತದಾನ ಸಾಧ್ಯವಿಲ್ಲ

ಅಪರಾಧಗಳ ಆರೋಪ ಹೊತ್ತಿರುವ ಜನರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರೂ, ಅಪರಾಧಿಗಳೆಂದು ಸಾಬೀತಾಗದ ವಿಚಾರಣಾಧೀನ ಕೈದಿಗಳು ತಮ್ಮ ಮತವನ್ನು ಚಲಾಯಿಸಲು ಸಾಧ್ಯವಿಲ್ಲ.

ತಪ್ಪಿತಸ್ಥರೆಂದು ಸಾಬೀತಾಗದವರಿಗೂ ಭಾರತದಲ್ಲಿ ಜೈಲುಗಳಿಂದ ಮತದಾನ ಮಾಡಲು ಯಾವುದೇ ಅವಕಾಶವಿಲ್ಲ. 2019 ರ ಪ್ರವೀಣ್ ಕುಮಾರ್ ಚೌಧರಿ ವಿರುದ್ಧ ಭಾರತ ಚುನಾವಣಾ ಆಯೋಗದ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಕೈದಿಗಳಿಗೆ ಮತದಾನದ ಹಕ್ಕನ್ನು ಹೊಂದಿಲ್ಲ ಎಂದು ಪುನರುಚ್ಚರಿಸಿದೆ.

ಮೇ 25ರಂದು ದೆಹಲಿ ಮತದಾನ ನಡೆಯಲಿದೆ. ಏಪ್ರಿಲ್ 29 ರಂದು ಸುಪ್ರೀಂ ಕೋರ್ಟ್‌ ನೀಡುವ ತೀರ್ಪಿನ ಮೇಲೆ ಕೇಜ್ರಿವಾಲ್ ಮತ ಚಲಾಯಿಸಬಹುದೇ ಅಥವಾ ಇಲ್ಲವೇ ಎಂಬುದು ನಿರ್ಧಾರವಾಗಲಿದೆ.

ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ಕೇಜ್ರಿವಾಲ್, ಬಹು ಕಸ್ಟಡಿ ವಿಸ್ತರಣೆಗಳು ಮತ್ತು ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ ಅನಂತರ ಅವರನ್ನು ನವದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ಬಿಡುಗಡೆಯಾಗದೆ ಇದ್ದರೆ ಹೇಮಂತ್ ಸೊರೆನ್ ಗೂ ಅವಕಾಶ ಇಲ್ಲ

ಭಾರತದಲ್ಲಿ ಐದು ಲಕ್ಷಕ್ಕೂ ಹೆಚ್ಚು ವಿಚಾರಣಾಧೀನ ಕೈದಿಗಳಿದ್ದು, ಅವರಿಗೂ ಮತ ಚಲಾಯಿಸಲು ಸಾಧ್ಯವಿಲ್ಲ. ಅಂತೆಯೇ, ಭೂ ಹಗರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಆದೇಶಿಸದಿದ್ದರೆ ಮತದಾನ ಮಾಡಲಾಗುವುದಿಲ್ಲ.

ತನ್ನ ಬಂಧನವನ್ನು ಪ್ರಶ್ನಿಸಿ ಹೇಮಂತ್ ಸೊರೆನ್ ಬುಧವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಯಾಕೆ ಈ ತಾರತಮ್ಯ?

2021 ರ ರಾಷ್ಟ್ರೀಯ ಅಪರಾಧ ವರದಿಗಳ ಬ್ಯೂರೋ (NCRB) ವರದಿಯ ಪ್ರಕಾರ, ಭಾರತದಾದ್ಯಂತ ವಿವಿಧ ಜೈಲುಗಳಲ್ಲಿ ಒಟ್ಟು 5,54,034 ಕೈದಿಗಳನ್ನು ಬಂಧಿಸಲಾಗಿದೆ. ಅಮೃತಪಾಲ್ ಸಿಂಗ್ ಅವರಿಗೆ ಇನ್ನೂ ಶಿಕ್ಷೆಯಾಗದ ಕಾರಣ ಅವರು ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಶಿಕ್ಷೆಗೊಳಗಾದವರು ಕೂಡ ಜೈಲು ಶಿಕ್ಷೆ ಮುಗಿದ ಆರು ವರ್ಷಗಳ ಬಳಿಕ ಚುನಾವಣೆಗೆ ಸ್ಪರ್ಧಿಸಬಹುದು.

ಅಮೃತಪಾಲ್ ಸಿಂಗ್ ಅವರಂತಹ ಜೈಲಿನಲ್ಲಿರುವ ವ್ಯಕ್ತಿಗಳು ತಮ್ಮ ಪ್ರತಿನಿಧಿಯ ಸಹಾಯದಿಂದ ಜೈಲಿನಿಂದಲೇ ನಾಮಪತ್ರ ಸಲ್ಲಿಸಬಹುದು. ಒಂದು ವೇಳೆ ಜೈಲಿನಲ್ಲಿರುವ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದರೆ, ತಜ್ಞರ ಪ್ರಕಾರ ಜೈಲಿನೊಳಗೆ ಪ್ರಮಾಣ ವಚನ ಬೋಧಿಸಲು ಅವಕಾಶವಿಲ್ಲದ ಕಾರಣ, ಪ್ರಮಾಣ ವಚನ ಸ್ವೀಕರಿಸಲು ಜೈಲಿನಿಂದ ಬಿಡುಗಡೆ ಮಾಡಬಹುದು.

ಆದರೆ ಜೈಲಿನಲ್ಲಿರುವ ವ್ಯಕ್ತಿಯ ಪರವಾಗಿ ಬೇರೆಯವರು ಮತವನ್ನು ಚಲಾಯಿಸಲು ಸಾಧ್ಯವಿಲ್ಲ. ಪತಿ ಅರವಿಂದ್ ಕೇಜ್ರಿವಾಲ್ ಬಂಧನದ ಅ ನಂತರ ಗಮನ ಸೆಳೆದಿರುವ ಸುನೀತಾ ಕೇಜ್ರಿವಾಲ್, ಎಎಪಿ ಪರ ಪ್ರಚಾರ ಮಾಡಲಿದ್ದಾರೆ.

ಪ್ರಜಾಪ್ರತಿನಿಧಿ ಕಾಯಿದೆ 1951ರ ಸೆಕ್ಷನ್ 62 (5) ಪ್ರಕಾರ ಯಾವುದೇ ವ್ಯಕ್ತಿ ಪೊಲೀಸರ ಕಾನೂನುಬದ್ಧ ವಶದಲ್ಲಿದ್ದರೆ ಅಥವಾ ಜೈಲಿನಲ್ಲಿ ಬಂಧಿಯಾಗಿದ್ದಲ್ಲಿ ಯಾವುದೇ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ.

Continue Reading

ಪ್ರವಾಸ

IRCTC Jyotirlinga Yatra: ರೈಲ್ವೆ ಇಲಾಖೆಯಿಂದ ಏಳು ಜ್ಯೋತಿರ್ಲಿಂಗ ವೀಕ್ಷಣೆ ಪ್ರವಾಸ; ದರ ವಿವರ ಇಲ್ಲಿದೆ

IRCTC Jyotirlinga Yatra: ಏಳು ಜ್ಯೋತಿರ್ಲಿಂಗಗಳ ದರ್ಶನ ದರ್ಶನ ಮಾಡಲು ಇಚ್ಛಿಸುವವರಿಗೆ ಶುಭ ಸುದ್ದಿ. ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮವು ಭಾರತ್ ಗೌರವ್ ಎಸಿ ಪ್ರವಾಸಿ ರೈಲಿನ ಮೂಲಕ ಮೇ 22ರಿಂದ ಏಳು ಜ್ಯೋತಿರ್ಲಿಂಗ ಯಾತ್ರೆಯ ಪ್ರವಾಸೋದ್ಯಮ ಪ್ಯಾಕೇಜ್ ಅನ್ನು ಘೋಷಿಸಿದೆ. ಈ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

IRCTC Jyotirlinga Yatra
Koo

ನವದೆಹಲಿ: ಏಕಕಾಲಕ್ಕೆ ಏಳು ಜ್ಯೋತಿರ್ಲಿಂಗಗಳ (seven Jyotirlinga ) ದರ್ಶನ ಮಾಡಬೇಕು ಎಂದು ಬಯಸುವವರಿಗೆ ಶುಭ ಸುದ್ದಿ. ಭಾರತೀಯ ರೈಲ್ವೆ ಊಟೋಪಚಾರ ಮತ್ತು ಪ್ರವಾಸೋದ್ಯಮ ನಿಗಮ (IRCTC) ಭಾರತ್ ಗೌರವ್ ಎಸಿ ಟೂರಿಸ್ಟ್ ಟ್ರೈನ್ (Bharat Gaurav AC Tourist Train) ಮೂಲಕ 7 ಜ್ಯೋತಿರ್ಲಿಂಗ ಯಾತ್ರೆಯ (IRCTC Jyotirlinga Yatra) ಹೊಸ ಪ್ರವಾಸೋದ್ಯಮ ಪ್ಯಾಕೇಜ್ ಅನ್ನು ಪ್ರಕಟಿಸಿದೆ.

ಜ್ಯೋತಿರ್ಲಿಂಗ ಯಾತ್ರೆಯು 2024ರ ಮೇ 22ರಿಂದ ಪ್ರಾರಂಭವಾಗಲಿದ್ದು, 11 ರಾತ್ರಿ, 12 ಹಗಲಿನಲ್ಲಿ ಪೂರ್ಣಗೊಳ್ಳಲಿದೆ ಎಂದು ಐಆರ್‌ಸಿಟಿಸಿ ನಿಗಮ ಹೇಳಿದೆ. ಈ ನಿಗಮ ಪ್ರವಾಸೋದ್ಯಮ ಪ್ಯಾಕೇಜ್ ಕೋಡ್- NZBG35. ಬೆಳಗ್ಗೆ ಚಹಾ, ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟವನ್ನು ಒಳಗೊಂಡಿರುತ್ತದೆ. ಸಸ್ಯಾಹಾರಿ ಆಹಾರವನ್ನು ಮಾತ್ರ ನೀಡಲಾಗುವುದು.

ಇದನ್ನೂ ಓದಿ: Summer Tour: ಬೇಸಿಗೆ ಪ್ರವಾಸಕ್ಕೆ ಸೂಕ್ತ ಈ 5 ಅದ್ಭುತ ಗಿರಿಧಾಮಗಳು!


ಎಲ್ಲಿಗೆ ಭೇಟಿ?

ಈ ಸಂದರ್ಭದಲ್ಲಿ ಏಳು ಜ್ಯೋತಿರ್ಲಿಂಗ ಕ್ಷೇತ್ರಗಳಾದ ಓಂಕಾರೇಶ್ವರ ಜ್ಯೋತಿರ್ಲಿಂಗ, ಮಹಾಕಾಳೇಶ್ವರ ಜ್ಯೋತಿರ್ಲಿಂಗ, ಸೋಮನಾಥ ಜ್ಯೋತಿರ್ಲಿಂಗ, ದ್ವಾರಕಾಧೀಶ ದೇವಸ್ಥಾನ ಮತ್ತು ನಾಗೇಶ್ವರ ಜ್ಯೋತಿರ್ಲಿಂಗ, ಭೇಟ್ ದ್ವಾರಕಾ ತ್ರಯಂಬಕೇಶ್ವರ ಜ್ಯೋತಿರ್ಲಿಂಗ, ಗೃಷ್ಣೇಶ್ವರ ಜ್ಯೋತಿರ್ಲಿಂಗ ಔರಂಗಾಬಾದ್, ಭೀಮಾಶಂಕರ ಜ್ಯೋತಿರ್ಲಿಂಗ, ಪುಣೆ ಸೇರಿದೆ.

ಯಾತ್ರಾರ್ಥಿಗಳೇ ಗಮನಿಸಿ

ಆಸಕ್ತ ಯಾತ್ರಾರ್ಥಿಗಳು ಐಆರ್‌ಸಿಟಿಸಿಯಿಂದ ಜ್ಯೋತಿರ್ಲಿಂಗ ಯಾತ್ರೆಗಾಗಿ ಉದ್ದೇಶಿಸಿರುವ ಭಾರತ್ ಗೌರವ್ ಎಸಿ ಟೂರಿಸ್ಟ್ ರೈಲಿನಲ್ಲಿ ಸ್ಲೀಪರ್ ಕ್ಲಾಸ್, ಥರ್ಡ್ ಎಸಿ ಮತ್ತು ಸೆಕೆಂಡ್ ಎಸಿ ಆಯ್ಕೆ ಮಾಡಬಹುದು.

ದರ ಇಂತಿದೆ

ಟ್ರೈನ್ ಜರ್ನಿ ಸಿಂಗಲ್, ಡಬಲ್, 5-11 ವರ್ಷದ ಮೂವರು ಮಕ್ಕಳಿಗೆ ಇಂತಿದೆ. 2A 48600- 46700 ರೂ. , 3A ರೂ 36700- 35150ರೂ., ಎಸ್ಎಲ್ ರೂ 22150 ನಿಂದ 20800ರೂ.

ನಿಲುಗಡೆ ತಾಣಗಳು

ಐಆರ್‌ಸಿಟಿಸಿ ನಿಗಮದ ಬೋರ್ಡಿಂಗ್/ ಡಿ-ಬೋರ್ಡಿಂಗ್ ಪಾಯಿಂಟ್‌ಗಳನ್ನು ಗುರುತಿಸಿದೆ. ಯೋಗ ನಗರಿ ರಿಷಿಕೇಶ್, ಹರಿದ್ವಾರ, ಮೊರಾದಾಬಾದ್, ಬರೇಲಿ, ಶಹಜಹಾನ್‌ಪುರ, ಹರ್ದೋಯ್, ಲಕ್ನೋ, ಕಾನ್ಪುರ್, ಒಆರ್‌ಐ, ವಿರಂಗನ ಲಕ್ಷ್ಮೀಬಾಯಿ ಮತ್ತು ಲಲಿತ್‌ಪುರ ಜಂಕ್ಷನ್.

ಯಾತ್ರಾ ಪ್ಯಾಕೇಜ್ ಸೇರ್ಪಡೆ

ಒಬ್ಬ ಪ್ರಯಾಣಿಕ ಪ್ಯಾಕೇಜ್ ಅನ್ನು ಬುಕ್ ಮಾಡಬಹುದು. ಆದರೆ ಆ ವ್ಯಕ್ತಿಯು ಡಬಲ್/ ಟ್ರಿಪಲ್ ಆಕ್ಯುಪೆನ್ಸಿಯಲ್ಲಿ ಬುಕ್‌ ಮಾಡಬೇಕಾಗುತ್ತದೆ ಎಂದು ಐಆರ್‌ಸಿಟಿಸಿ ತಿಳಿಸಿದೆ. ಎಲ್ಲಾ ಸಂಚಾರ ಮತ್ತು ದೃಶ್ಯ ವೀಕ್ಷಣೆಯ ಪ್ಯಾಕೇಜ್ ವರ್ಗದ ಪ್ರಕಾರ ಇರುತ್ತದೆ. ನಿಗಮವು ಪ್ರಯಾಣಿಕರಿಗೆ ಪ್ರಯಾಣ ವಿಮೆಯನ್ನು ನೀಡುತ್ತದೆ. ವೃತ್ತಿಪರ ಮತ್ತು ಸ್ನೇಹಪರ ಪ್ರವಾಸದ ಅನುಭವಕ್ಕಾಗಿ ವಿವಿಧ ಸೇವೆಗಳನ್ನು ನೀಡುತ್ತದೆ. ನಿಗಮದ ಟೂರ್ ಮ್ಯಾನೇಜರ್‌ಗಳು ಪ್ರವಾಸದ ಉದ್ದಕ್ಕೂ ಪ್ರವಾಸಿಗರ ಜೊತೆ ಪ್ರಯಾಣಿಸುತ್ತಾರೆ.


ಉತ್ತಮ ಸೌಲಭ್ಯ

ಟ್ರೈನ್ ಜರ್ನಿ ಸ್ಲೀಪರ್ ಕ್ಲಾಸ್ 3AC 2AC ಪ್ರಯಾಣದ ಪ್ರಕಾರ ಬಜೆಟ್ ಗೆ ಹೊಂದಿಕೆಯಾಗುವ ಹೊಟೇಲ್ ಗಳಲ್ಲಿ ರಾತ್ರಿ ತಂಗುವ ವ್ಯವಸ್ಥೆ ಮಾಡಲಾಗುತ್ತದೆ. ಮೂರು ಹೊತ್ತು ಊಟ ಮತ್ತು ಉಪಾಹಾರದ ವ್ಯವಸ್ಥೆ ಕಲ್ಪಿಸಲಾಗುತ್ತದೆ.

ಭಾರತ್ ಗೌರವ್ ರೈಲುಗಳು

ಭಾರತೀಯ ರೈಲ್ವೆಯು ಭಾರತ್ ಗೌರವ್ ಪ್ರವಾಸಿ ರೈಲುಗಳ ಬ್ಯಾನರ್ ಅಡಿಯಲ್ಲಿ ಥೀಮ್ ಆಧಾರಿತ ಸ್ಥಳಗಳಿಗೆ ಪ್ರವಾಸಿ ರೈಲುಗಳನ್ನು ನಿರ್ವಹಿಸುತ್ತದೆ. ರೈಲು ಪ್ರಯಾಣಗಳನ್ನು ವೈವಿಧ್ಯಮಯ ಸ್ಥಳಗಳಿಗೆ ಪರಿಚಯಿಸಲಾಗಿದೆ. ರೈಲ್ವೆ ಸಚಿವಾಲಯವು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ಭವ್ಯವಾದ ಐತಿಹಾಸಿಕ ಸ್ಥಳಗಳನ್ನು ಪ್ರದರ್ಶಿಸುವ ಉದ್ದೇಶದಿಂದ ‘ಭಾರತ್ ಗೌರವ್ ರೈಲುಗಳು’ ಪರಿಕಲ್ಪನೆಯನ್ನು ಪರಿಚಯಿಸಿದೆ. ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ರೈಲು ನಿಲ್ದಾಣ ಅಥವಾ ರೈಲ್ವೆ ಇಲಾಖೆಯ ವೆಬ್‌ ಸೈಟ್‌ ಸಂಪರ್ಕಿಸಬಹುದು.

Continue Reading
Advertisement
Namma Metro
ಬೆಂಗಳೂರು1 second ago

Namma Metro: ಟಿಸಿಎಸ್‌ ಮ್ಯಾರಥಾನ್‌ ಹಿನ್ನೆಲೆ ಭಾನುವಾರ ಮುಂಜಾನೆ 3.35ರಿಂದಲೇ ಮೆಟ್ರೋ ರೈಲು ಸೇವೆ

ipl 2024
ಕ್ರೀಡೆ2 mins ago

IPL 2024 : ಪಂದ್ಯದ ನಡುವೆ ಮೈದಾನದಲ್ಲೇ ಗಾಳಿಪಟ ಹಾರಿಸಿದ ಪಂತ್​, ರೋಹಿತ್! ಇಲ್ಲಿದೆ ವಿಡಿಯೊ

Viral News
ವೈರಲ್ ನ್ಯೂಸ್18 mins ago

Viral News: ಸೈಕಲ್‌ ಸವಾರನಿಗೆ ಡಿಕ್ಕಿ ಹೊಡೆದು 2 ಕಿ.ಮೀ. ಎಳೆದೊಯ್ದ ಪಿಕ್‌ಅಪ್‌; ಶಾಕಿಂಗ್‌ ವಿಡಿಯೊ ಇಲ್ಲಿದೆ

WhatsApp color
ತಂತ್ರಜ್ಞಾನ27 mins ago

WhatsApp colour: ವಾಟ್ಸ್ಆ್ಯಪ್​ನ ಬಣ್ಣ ಬದಲಾಗಿದ್ದು ಯಾಕೆ? ಏನಿದರ ಗುಟ್ಟು?

Traffic Restrictions
ಬೆಂಗಳೂರು43 mins ago

Traffic Restrictions: ಟಿಸಿಎಸ್‌ ವರ್ಲ್ಡ್ 10ಕೆ ಮ್ಯಾರಥಾನ್; ನಾಳೆ ಬೆಳಗ್ಗೆ ರಾಜಧಾನಿಯ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ

karnataka weather Forecast
ಮಳೆ57 mins ago

karnataka Weather : ದೂರ ಸರಿದ ಮಳೆ; ಬೆಂಗಳೂರಲ್ಲಿ 39ರ ಗಡಿದಾಟಲಿದೆ ಗರಿಷ್ಠ ಉಷ್ಣಾಂಶ! 15 ಜಿಲ್ಲೆಗಳಿಗೆ ಅಲರ್ಟ್‌

Home Remedy For Cracked Heels
ಆರೋಗ್ಯ1 hour ago

Home Remedy For Cracked Heels: ಒಡೆದ ಹಿಮ್ಮಡಿಗಳಿಗೆ ಕರ್ಪೂರದ ಎಣ್ಣೆ ಪರಿಣಾಮಕಾರಿ

IPL 2024
ಕ್ರೀಡೆ1 hour ago

IPL 2024 : ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವುದೇ ಸಿಎಸ್​ಕೆ?

Ujjwal Nikam
ದೇಶ1 hour ago

Ujjwal Nikam: ಪ್ರಮೋದ್‌ ಮಹಾಜನ್‌ ಪುತ್ರಿಗೆ ಕೊಕ್‌, ಮುಂಬೈ ದಾಳಿ ವಕೀಲನಿಗೆ ಬಿಜೆಪಿ ಟಿಕೆಟ್!

Money Guide
ಮನಿ-ಗೈಡ್1 hour ago

Money Guide: ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ಬಿಡುಗಡೆಗೆ ದಿನಗಣನೆ; ನಗದು ಜಮೆ ಯಾವಾಗ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 20243 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ7 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ14 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌