Viral Video : ಕಾರಿನಲ್ಲಿ ಬಂದು ಸರಗಳ್ಳತನ ಮಾಡಲಾರಂಭಿಸಿದ ಕಳ್ಳರು! ಹೇಗೆ ಕಳ್ಳತನ ಮಾಡುತ್ತಾರೆ ನೋಡಿ - Vistara News

ವೈರಲ್ ನ್ಯೂಸ್

Viral Video : ಕಾರಿನಲ್ಲಿ ಬಂದು ಸರಗಳ್ಳತನ ಮಾಡಲಾರಂಭಿಸಿದ ಕಳ್ಳರು! ಹೇಗೆ ಕಳ್ಳತನ ಮಾಡುತ್ತಾರೆ ನೋಡಿ

ತಮಿಳುನಾಡಿನ ಕೊಯಮತ್ತೂರಿನಲ್ಲಿ ಸರಗಳ್ಳರು ಕಾರಿನಲ್ಲಿ ಬಂದು ಸರ ಕಿತ್ತುಕೊಂಡು ಹೋಗುವ ವಿಡಿಯೊ ಎಲ್ಲೆಡೆ ವೈರಲ್‌(Viral Video) ಆಗಿದೆ. ಆರೋಪಿಗಳನ್ನು ಬಂಧಿಸಲಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ಸರಗಳ್ಳರು ಬೈಕ್‌ನಲ್ಲಿ ಬಂದು ಸರವನ್ನು ಎಳೆದುಕೊಂಡ ಹೋದ ಘಟನೆಗಳ ಬಗ್ಗೆ ಕೇಳಿರುತ್ತೀರಿ. ಆದರೆ ಇದೀಗ ತಮಿಳುನಾಡಿನ ಕೊಯಮತ್ತೂರಿನಲ್ಲಿ ಕಳ್ಳರು ಕಾರಿನಲ್ಲೇ ಬಂದು ಸರಗಳ್ಳತನ ಮಾಡಲಾರಂಭಿಸಿದ್ದಾರೆ. ಅದರ ವಿಡಿಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ವೈರಲ್‌ (Viral Video) ಆಗಿದೆ ಕೂಡ.

ಕೌಸಲ್ಯ ಹೆಸರಿನ ಮಹಿಳೆ ಭಾನುವಾರ ಬೆಳಗ್ಗೆ ಮನೆಯ ಹತ್ತಿರದಲ್ಲೇ ವಾಕಿಂಗ್‌ ಮಾಡುತ್ತಿರುತ್ತಾರೆ. ಅಷ್ಟರಲ್ಲಿ ಅಲ್ಲಿಗೆ ಬಿಳಿ ಬಣ್ಣದ ಕಾರೊಂದು ಬರುತ್ತದೆ. ಕೌಸಲ್ಯ ಅವರ ಹತ್ತಿರವೇ ಕಾರು ಬರುತ್ತದೆ. ಆಗ ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತ ವ್ಯಕ್ತಿ ಕಿಟಕಿಯ ಗ್ಲಾಸ್‌ ಇಳಿಸಿಕೊಂಡು ಕೌಸಲ್ಯ ಅವರ ಕೊರಳಿಗೆ ಕೈ ಹಾಕುತ್ತಾನೆ. ತನ್ನ ಸರವನ್ನು ರಕ್ಷಿಸಿಕೊಳ್ಳಲೆಂದು ಕೌಸಲ್ಯ ಸರವನ್ನು ಗಟ್ಟಿಯಾಗಿ ಹಿಡಿದುಕೊಳ್ಳುತ್ತಾರೆ.

ಇದನ್ನೂ ಓದಿ: Viral News: 100 ಗಂಟೆಗಳ ಕಾಲ ಅಡುಗೆ ಮಾಡುತ್ತಲೇ ನಿಂತ ಮಹಿಳೆ; ಭಾರತೀಯರ ದಾಖಲೆಯೂ ಉಡೀಸ್‌
ಕಾರು ಮುಂದೆ ಹೋಗುವ ರಭಸಕ್ಕೆ ಕೌಸಲ್ಯ ಅವರು ನೆಲದ ಮೇಲೆ ಬಿದ್ದಿದ್ದು, ಕಾರು ಅವರನ್ನು ಸ್ವಲ್ಪ ದೂರ ಎಳೆದುಕೊಂಡೂ ಹೋಗುತ್ತದೆ. ಈ ಎಲ್ಲ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆ ಬಳಿಕ ಕೌಸಲ್ಯ ಅವರು ಸಿಂಗನಲ್ಲೂರು ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.


ಸ್ಥಳಕ್ಕೆ ಧಾವಿಸಿ ತಪಾಸಣೆ ನಡೆಸಿರುವ ಪೊಲೀಸರು ಸಿಸಿಟಿವಿ ದೃಶ್ಯಗಳಿಂದಾಗಿ ಕಳ್ಳರನ್ನು ಪತ್ತೆ ಹಚ್ಚಿದ್ದಾರೆ. ಕಳ್ಳರನ್ನು ಅಭಿಷೇಕ್‌ ಮತ್ತು ಶಕ್ತಿವೇಲ್‌ ಎಂದು ಗುರುತಿಸಲಾಗಿದೆ. ಈಗಾಗಲೇ ಇಬ್ಬರನ್ನು ಪೊಲೀಸರು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ. ಅಭಿಷೇಕ್‌ ಧರ್ಮಪುರಿ ಮೂಲದವನಾಗಿದ್ದು ಕೊಯಮತ್ತೂರಿನಲ್ಲಿ ವಾಸವಿದ್ದಾನೆ. ಡೆಲಿವರಿ ಬಾಯ್‌ ಆಗಿ ಕೆಲಸ ಮಾಡುತ್ತಿರುವ ಈತ ಈ ಹಿಂದೆ ಕೂಡ ಹಲವಾರು ಸರಗಳ್ಳತನ ಮಾಡಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: 25 ವರ್ಷಗಳ ಹಿಂದೆ ಬಿಬಿಸಿ ನ್ಯೂಸ್ ಥೀಮ್ ಟ್ಯೂನ್ ಹುಟ್ಟಿಕೊಂಡಿದ್ದು ಹೇಗೆ ಗೊತ್ತೇ?

25 ವರ್ಷಗಳ ಹಿಂದೆ ಬಿಬಿಸಿ ನ್ಯೂಸ್ ಥೀಮ್ ನ ಟ್ಯೂನ್ ಸಂಯೋಜನೆ ಗೊಂಡಿದ್ದು ಹೇಗೆ ಎನ್ನುವ ಕಥೆಯನ್ನು ಬ್ರಿಟಿಷ್ ಮ್ಯೂಸಿಕ್ ಸಂಯೋಜಕ ಮತ್ತು ಸಂಗೀತ ನಿರ್ಮಾಪಕ ಡೇವಿಡ್ ಲೋವ್ ಅವರು ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಹೇಳಿರುವುದು ಈಗ ಭಾರೀ ವೈರಲ್ (Viral Video) ಆಗಿದೆ.

VISTARANEWS.COM


on

By

Viral Video
Koo

ಬ್ರಿಟಿಷ್ ಮ್ಯೂಸಿಕ್ ಸಂಯೋಜಕ (British music composer) ಮತ್ತು ಸಂಗೀತ ನಿರ್ಮಾಪಕ (music producer) ಡೇವಿಡ್ ಲೋವ್ (David Lowe ) ಅವರು 25 ವರ್ಷಗಳ ಹಿಂದೆ ಬಿಬಿಸಿ (BBC) ನ್ಯೂಸ್ ಥೀಮ್ (News theme) ಟ್ಯೂನ್ (tune) ಅನ್ನು ಹೇಗೆ ಸಂಯೋಜಿಸಿದರು ಎಂಬುದರ ಕುರಿತು ಇತ್ತೀಚೆಗೆ ಸಾಮಾಜಿಕ ಜಾಲತಾಣವಾದ (social media) ಎಕ್ಸ್ ನಲ್ಲಿ (x) ಹೇಳಿಕೊಂಡಿದ್ದು, ಇದು ಭಾರಿ ವೈರಲ್ (Viral Video) ಆಗಿದೆ.

ರಾಗವನ್ನು ನಿರ್ಮಿಸುವ ಹಂತ-ಹಂತದ ಪ್ರಕ್ರಿಯೆಯನ್ನು ಈ ವಿಡಿಯೋದಲ್ಲಿ ಅವರು ಹೇಳಿಕೊಂಡಿದ್ದು, 25 ವರ್ಷಗಳ ಹಿಂದೆ ನಾನು ಬಿಬಿಸಿ ನ್ಯೂಸ್ ಥೀಮ್ ಟ್ಯೂನ್ ಅನ್ನು ಸಂಯೋಜಿಸಿದ್ದೇನೆ. ಇದು ಪ್ರತಿದಿನ ಪ್ರಪಂಚದಾದ್ಯಂತ ಪ್ರಸಾರವಾಗುತ್ತಿದೆ. ಸಮಯದ ನಿಖರವಾದ ಬೀಪ್‌ಗಳಿಂದ ಪ್ರಬಲ ಬಾಸ್ ಮತ್ತು ಮುಖ್ಯಾಂಶಗಳಿಗಾಗಿ ನಾಟಕೀಯ ಡ್ರಮ್‌ಗಳವರೆಗೆ… ನಾನು ಇದನ್ನು ಹೀಗೆ ಮಾಡಿದ್ದೇನೆ ಎಂದು ವಿವರಿಸಿದ್ದಾರೆ.

ಬೀಪ್ ಧ್ವನಿಯೊಂದಿಗೆ ಪ್ರಾರಂಭವಾಯಿತು. ಗಡಿಯಾರವು ಸೆಕೆಂಡಿಗೆ ಒಂದು ಬೀಟ್ ಅನ್ನು ಟಿಕ್ ಮಾಡುತ್ತದೆ. ಅನಂತರ ಶಕ್ತಿ ಮತ್ತು ಘನತೆ ಮತ್ತು ಆಳದ ಅರ್ಥವನ್ನು ನೀಡಲು ಅದಕ್ಕೆ ಬಾಸ್ ಲೈನ್ ಅನ್ನು ಸೇರಿಸಿದೆ. ಧ್ವನಿಯನ್ನು ಹೆಚ್ಚಿಸಲು ಬಾಸ್ ಡ್ರಮ್ಸ್ ಮತ್ತು ಕಿಕ್ ಅನ್ನು ಜೊತೆಗೂಡಿಸಿದೆ ಎಂದವರು ವಿವರಿಸಿದ್ದಾರೆ.

ನಾವು ಮುಖ್ಯಾಂಶಗಳಿಗೆ ದೊಡ್ಡ ಧ್ವನಿಯನ್ನು ಬಯಸಿದ್ದೇವೆ. ಅದಕ್ಕಾಗಿ ಈ ದೊಡ್ಡ ಡ್ರಮ್‌ನೊಂದಿಗೆ ಬಂದಿದ್ದೇವೆ ಎಂದ ಅವರು, ಆ ಸಾಂಪ್ರದಾಯಿಕ ಬಿಬಿಸಿ ನ್ಯೂಸ್ ಥೀಮ್ ಅನ್ನು ರಚಿಸಲು ಸ್ವರಮೇಳಗಳು, ಹೆಚ್ಚಿನ ಸ್ಟ್ರಿಂಗ್ ಮತ್ತು ಫೇಡ್ ಅನ್ನು ಸೇರಿಸಲಾಗಿದೆ ಎಂದು ಲೋವ್‌ ತಿಳಿಸಿದರು.

ವೈರಲ್ ಆಗಿದ್ದು ಯಾವಾಗ?

ಕೋವಿಡ್ -19 ಸಾಂಕ್ರಾಮಿಕದ ಸಮಯದಲ್ಲಿ ಟಿಕ್‌ಟಾಕ್ ಸೃಷ್ಟಿಕರ್ತ ರಾಚೆಲ್ ಲಿಯರಿ ಅವರು ಸಾಮಾಜಿಕ ಮಾಧ್ಯಮದಾದ್ಯಂತ ಲಕ್ಷಾಂತರ ಬಾರಿ ವೀಕ್ಷಿಸಲ್ಪಟ್ಟ ವಿಡಿಯೋದಲ್ಲಿ ಸಂಗೀತದೊಂದಿಗೆ ಬಿಬಿಸಿ ನ್ಯೂಸ್ ಥೀಮ್ ಟ್ಯೂನ್ ವೈರಲ್ ಆಯಿತು.

ಡೇವಿಡ್ ಲೋವ್ ಅವರು 25 ವರ್ಷಗಳ ಹಿಂದೆ ಬಿಬಿಸಿ ಥೀಮ್ ಟ್ಯೂನ್ ಅನ್ನು ಹೇಗೆ ಸಂಯೋಜಿಸಿದ್ದಾರೆ ಎಂಬುದರ ವಿವರಣೆಯನ್ನು ಒಳಗೊಂಡಿರುವ ವಿಡಿಯೋವನ್ನು ಮೇ 10 ರಂದು ಹಂಚಿಕೊಂಡಿದ್ದಾರೆ. ಅಂದಿನಿಂದ ಇದು 7.5 ಲಕ್ಷ ವೀಕ್ಷಣೆಗಳನ್ನು ಗಳಿಸಿದೆ ಮತ್ತು ಇನ್ನೂ ಎಣಿಕೆಯಲ್ಲಿದೆ. ಪೋಸ್ಟ್ 5,600 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಮತ್ತು ಹಲವಾರು ಕಾಮೆಂಟ್‌ಗಳನ್ನು ಸ್ವೀಕರಿಸಿದೆ.


ಪ್ರತಿಕ್ರಿಯೆಗಳು ಹೇಗಿವೆ?

ಇದು ತುಂಬಾ ಅದ್ಭುತವಾಗಿದೆ. ನನಗೆ, ಕನಿಷ್ಠ ಮೇಲಿನ ಪದರವು ಕೊನೆಯಲ್ಲಿ ಸ್ವರಮೇಳವನ್ನು ಬದಲಾಯಿಸುವುದರಿಂದ ಪಿಪ್‌ಗಳು ಟಿಪ್ಪಣಿಯನ್ನು ಬದಲಾಯಿಸುವಂತೆ ತೋರುತ್ತಿದೆ ಎಂದೊಬ್ಬರು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಲೋವ್, ಅದನ್ನು ಗುರುತಿಸಿದ್ದಕ್ಕಾಗಿ ತಾನು ಸಂತೋಷಪಡುತ್ತೇನೆ. ಪಿಪ್ ಒಂದೇ ಟಿಪ್ಪಣಿಯಲ್ಲಿ ಸ್ಥಿರವಾಗಿರುತ್ತದೆ ಮತ್ತು ಸ್ವರಮೇಳಗಳು ಅದರ ಸುತ್ತಲೂ ಬದಲಾಗುತ್ತವೆ. ಒಂದೇ ಸ್ಥಿರ ದಿಕ್ಕಿನ ಭಾವನೆಯನ್ನು ನೀಡುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Viral News: ಕುರ್ಕುರೆ ಪ್ಯಾಕ್‌ ತರದೇ ಹೋದ ಗಂಡನಿಗೆ ಡೈವೋರ್ಸ್!‌

ಇದಕ್ಕೆ ಸ್ವಲ್ಪವೂ ವಯಸ್ಸಾಗಿಲ್ಲ ಎಂಬ ಅಂಶದಿಂದ ಅದರ ಶಕ್ತಿಯನ್ನು ತೋರಿಸುತ್ತದೆ. ಇನ್ನೂ ತಾಜಾವಾಗಿ ಧ್ವನಿಸುತ್ತದೆ ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದು, ಅದ್ಭುತ! ಯಾವುದೇ ಸುದ್ದಿ ಕಾರ್ಯಕ್ರಮಕ್ಕೆ ಇದುವರೆಗಿನ ಅತ್ಯುತ್ತಮ ಥೀಮ್ ಟ್ಯೂನ್ ಎಂದು ಹೇಳಿದ್ದಾರೆ.

ನಾನು ಯಾವಾಗಲೂ ನಿಮ್ಮ ಕೆಲಸವನ್ನು ಆನಂದಿಸಿದೆ. ಡೇವಿಡ್, ಇದು ತುಂಬಾ ಚೆನ್ನಾಗಿದೆ. ಆಲ್ ದಿ ಬೆಸ್ಟ್ ಎಂದು ಇನ್ನೊಬ್ಬರು ಕಾಮೆಂಟ್‌ನಲ್ಲಿ ಸೇರಿಸಿದ್ದಾರೆ.

Continue Reading

ಬೆಂಗಳೂರು

Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

Silicon City Hospital: ಲಕ್ಷದಲ್ಲಿ ಇಬ್ಬರಲ್ಲಿ ಕಾಣಿಸಿಕೊಳ್ಳುವ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕಿಗೆ ಸಿಲಿಕಾನ್‌ ಸಿಟಿ ಆಸ್ಪತ್ರೆ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ, ಸಾವಿನ ದವಡೆಯಿಂದ ಪಾರು ಮಾಡಿದ್ದಾರೆ. ಬಾಲಕಿ ಉಳಿಸಲು ಆಗಲ್ಲ ಎಂದು ಕೈಚೆಲ್ಲಿದ್ದ ದೊಡ್ಡ ಆಸ್ಪತ್ರೆಗಳಿಗೂ ಅಚ್ಚರಿ ಮೂಡಿಸುವುದರೊಂದಿಗೆ ಮೆಚ್ಚುಗೆಯನ್ನು ಪಡೆದಿದ್ದಾರೆ.

VISTARANEWS.COM


on

By

Silicon City Hospital doctors successful surgery on girl suffering from Arterio Venus malpermation
Koo

ಬೆಂಗಳೂರು: ಮೆದುಳಿನ ರಕ್ತನಾಳ ಒಡೆದು ರಕ್ತ ಸೋರುವ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕಿಯ ಪ್ರಾಣವನ್ನು ಸಿಲಿಕಾನ್‌ ಸಿಟಿ ಆಸ್ಪತ್ರೆ ವೈದ್ಯರು (Silicon City Hospital) ಉಳಿಸಿದ್ದಾರೆ. ಒಂದು ಲಕ್ಷದಲ್ಲಿ ಇಬ್ಬರಿಗೆ ಮಾತ್ರ ಬರುವ ಈ ಅಪರೂಪದ ಕಾಯಿಲೆಯು ಬಾಲಕಿಗೆ ಕೊನೆ ಹಂತದಲ್ಲಿತ್ತು. ಇದನ್ನೇ ಸವಾಲಾಗಿ ಸ್ವೀಕರಿಸಿದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಬಾಲಕಿ ಜೀವ ಉಳಿಸಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನೆರನಹಳ್ಳಿ ಗ್ರಾಮದ ನೆರನಹಳ್ಳಿಯ ಬಾಬು ಮತ್ತು ಲಾವಣ್ಯ ದಂಪತಿ ಮಗಳು ಸ್ನೇಹಾ ಅಪಾಯದಿಂದ ಪಾರಾದವಳು . ಕಳೆದ ಮೇ 3ರಂದು ಚೆನ್ನಾಗಿದ್ದ ಸ್ನೇಹಾ ಇದ್ದಕ್ಕಿದ್ದಂತೆ ವಾಂತಿ ಮಾಡಿಕೊಂಡು ಒದ್ದಾಡಿದ್ದಳು. ಮಗಳ ಪರಿಸ್ಥಿತಿ ಕಂಡು ಭಯಗೊಂಡ ಪೋಷಕರು ಮುಳಬಾಗಿಲಿನ ಖಾಸಗಿ‌ ಆಸ್ಪತ್ರೆಗೆ ತೋರಿಸಿದ್ದರು. ಆದರೆ ಅಲ್ಲಿನ ವೈದ್ಯರು ನಿಮ್ಮ ಮಗಳಿಗೆ ನರರೋಗಕ್ಕೆ ಸಂಬಂಧಿಸಿದ ಕಾಯಿಲೆ ಇದೆ ಎಂದಿದ್ದರು.

ತಡ ಮಾಡದೆ ಅಲ್ಲಿಂದ ಬೆಂಗಳೂರಿಗೆ ಮಗಳು ಸ್ನೇಹಾಳನ್ನು ಕರೆತಂದು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆ ವೇಳೆ ತಲೆ ಮೆದುಳಿನ ರಕ್ತನಾಳ ಒಡೆದು ರಕ್ತ ಸೋರುವ ಈ ಕಾಯಿಲೆ ಇದೆ ಎಂದು ಗೊತ್ತಾಗಿತ್ತು. ಸ್ನೇಹಾಳಿಗೆ ಬಂದ ಈ ಕಾಯಿಲೆ ಅದಾಗಲೇ ಯಾರಿಗೂ ತಿಳಿಯದಂತೆ ಕೊನೆ ಹಂತ ತಲುಪಿತ್ತು. ಹೀಗಾಗಿ ನಿಮ್ಹಾನ್ಸ್‌ ವೈದ್ಯರು ನಿಮ್ಮ ಮಗಳನ್ನು ಬದುಕಿಸುವುದು ಕಷ್ಟ ವಾಪಸ್‌ ಕರೆದುಕೊಂಡು ಹೋಗಿ ಎಂದು ಕೈ ಚೆಲ್ಲಿದ್ದರು.

ಇದರಿಂದ ಮತ್ತಷ್ಟು ಗಾಬರಿಗೊಂಡ ಬಾಬು, ಲಾವಣ್ಯ ದಂಪತಿಗೆ ಆ್ಯಂಬುಲೆನ್ಸ್ ಚಾಲಕ ಸಮಾಧಾನಪಡಿಸಿದ್ದಾರೆ. ಬಳಿಕ ಹೊಸಕೋಟೆಯಲ್ಲಿರುವ ಸಿಲಿಕಾನ್ ಸಿಟಿ ಆಸ್ಪತ್ರೆಗೆ ಹೋಗುವಂತೆ ಹೇಳಿದ್ದಾರೆ. ನುರಿತ ವೈದ್ಯರು ಇರುವ ನಿಮ್ಹಾನ್ಸ್‌ ಆಸ್ಪತ್ರೆಯಲ್ಲೆ ಮಗುವನ್ನು ಬದುಕಿಸುವುದು ಕಷ್ಟ ಎಂದಿರುವಾಗ ಬೇರೊಂದು ಆಸ್ಪತ್ರೆಗೆ ಹೋಗಿ ಏನು ಪ್ರಯೋಜನ ಎಂದು ಸ್ನೇಹಿತರು, ಸಂಬಂಧಿಕರು ಹೇಳಿದ್ದಾರೆ. ಆದರೆ ಮಗಳು ಉಳಿಯುತ್ತಾಳೆ ಎಂದಾಗ ಬಾಬು, ಲಾವಣ್ಯ ದಂಪತಿ ಕ್ಷಣವೂ ಯೋಚಿಸದೇ ಸಿಲಿಕಾನ್‌ ಸಿಟಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

Silicon City Hospital doctors

ಇದನ್ನೂ ಓದಿ: Money Guide: ಎಫ್‌ಡಿಯಲ್ಲಿ ಹೂಡಿಕೆ ಮಾಡುವ ಮುನ್ನ ವಿವಿಧ ಬ್ಯಾಂಕ್‌ಗಳ ಬಡ್ಡಿದರ ಪರಿಶೀಲಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ಸಿಲಿಕಾನ್ ಸಿಟಿ ಆಸ್ಪತ್ರೆ ವೈದ್ಯರಾದ ಡಾ.ಸುಪ್ರಿತ್ ಮತ್ತು ಡಾ.ಮನೋಹರ್‌ರವರ ನರರೋಗ ತಜ್ಞರ ತಂಡ, ಅಚ್ಚರಿ ಪಡುವ ರೀತಿ ಶಸ್ತ್ರಚಿಕಿತ್ಸೆ ಮಾಡಿ ಯಶಸ್ವಿಯಾಗಿ ಮಗುವಿನ ಜೀವ ಉಳಿಸಿದ್ದಾರೆ.

Silicon City Hospital doctors

ವೈದ್ಯ ಲೋಕದಲ್ಲಿ ಅಚ್ಚರಿ ಎನಿಸುವ ಅನೇಕ‌ ಕಾಯಿಲೆಗಳಿವೆ. ಒಂದು ಕಡೆ ವೈದ್ಯರಿಗೆ ಕೆಲವು‌‌ ಕಾಯಿಲೆ ಸವಾಲಾದರೆ, ಕೆಲವು ಕಾಯಿಲೆಯ ಸಕ್ಸಸ್ ರೇಟ್ ವೈದ್ಯರನ್ನು ಮತ್ತಷ್ಟು ಒಳ್ಳೆಯ ಕೆಲಸ ಮಾಡಲು ಪ್ರೇರೇಪಿಸುತ್ತದೆ. ಹೊಸಕೋಟೆ ಸಿಲಿಕಾನ್ ಸಿಟಿ ವೈದ್ಯರ ಸೇವೆಯೇ ಸಾಕ್ಷಿಯಾಗಿದೆ.

ಲಕ್ಷದಲ್ಲಿ ಇಬ್ಬರಿಗೆ ಕಾಣಿಸಿಕೊಳ್ಳುವ “ಅರ್ಟೆರಿಯೊ ವೀನಸ್ ಮಾಲ್ಪರ್ಮೇಷನ್- Alterio Venous Malformation (ಮೆದುಳು ನರಗಳಲ್ಲಿ ಗುಳ್ಳೆಗಳಾಗಿ‌ ಒಡೆದು ಹೋಗಿ ರಕ್ತ ಸೋರುವ ಕಾಯಿಲೆ) ಎಂಬ ಕಾಯಿಲೆಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಡು ಬಡವರಾದ ಅಂಗವಿಕಲರಾದ ಬಾಬು ಲಾವಣ್ಯ ದಂಪತಿ‌ ಇನ್ನೇನು ನಮ್ಮ ಒಬ್ಬಳೆ ಮಗಳು ನಮ್ಮಿಂದ ದೂರ ಆಗುತ್ತೆ ಎಂಬ ಆತಂಕವನ್ನು ಸಿಲಿಕಾನ್ ಸಿಟಿ ಆಸ್ಪತ್ರೆ ವೈದ್ಯರು ದೂರ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೀಡೆ

KL Rahul: ರಾಹುಲ್ ಆರ್​ಸಿಬಿಗೆ ಬರಲ್ಲ; ಔತಣ ಕೂಟಕ್ಕೆ ಕರೆದು ತಬ್ಬಿಕೊಂಡ ಸಂಜೀವ್ ಗೋಯೆಂಕಾ

KL Rahul: ಸಂಜೀವ್ ಗೋಯೆಂಕಾ ಅವರು ರಾಹುಲ್​ ಅವರನ್ನು ಮನೆಗೆ ಡಿನ್ನರ್​ಗೆ ಕರೆದು ತಬ್ಬಿಕೊಂಡಿರುವ ಫೋಟೊ ಒಂದು ವೈರಲ್​ ಆಗಿದೆ. ಇದರ ಬೆನ್ನಲ್ಲೇ ರಾಹುಲ್​ ಪತ್ನಿ ಅಥಿಯಾ ಶೆಟ್ಟಿ ಕೂಡ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಸ್ಟೋರಿ ಹಾಕಿದ್ದು “ಚಂಡಮಾರುತದ ನಂತರ ಶಾಂತ” ಎಂದು ಬರೆದುಕೊಂಡಿದ್ದಾರೆ.

VISTARANEWS.COM


on

KL Rahul
Koo

ಲಕ್ನೋ: ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​​ ವಿರುದ್ಧ ಲಕ್ನೋ ಸೂಪರ್​ ಜೈಂಟ್ಸ್(Lucknow Super Giants)​ 10 ವಿಕೆಟ್​ಗಳ ಹೀನಾಯ ಸೋಲು ಕಂಡ ಬೇಸರದಲ್ಲಿ ಸಿಟ್ಟಿಗೆದ್ದ ಫ್ರಾಂಚೈಸಿ ಮಾಲಿಕ ಸಂಜೀವ್ ಗೋಯೆಂಕಾ(Sanjiv Goenka) ಮೈದಾನದಲ್ಲೇ ನಾಯಕ ಕೆ.ಎಲ್​ ರಾಹುಲ್(KL Rahul)​ ಜತೆ ಜಗಳವಾಡಿದ್ದರು. ಈ ಘಟನೆ ಬಳಿಕ ಅನೇಕ ಮಾಜಿ ಆಟಗಾರರು ಗೋಯೆಂಕಾ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆಗೆ ಸಂಬಂಧಿಸಿ ರಾಹುಲ್​ ಲಕ್ನೋ ತಂಡ ತೊರೆಯಲಿದ್ದಾರೆ, ಆರ್​ಸಿಬಿ ಸೇರಲಿದ್ದಾರೆ, ತಂಡದ ಆಟಗಾರರೊಂದಿಗೆ ಪ್ರಯಾಣಿಸದೆ ಪ್ರತ್ಯೇಕವಾಗಿ ಪ್ರಯಾಣಿಸಿದ್ದಾರೆ ಹೀಗೆ ಹಲವು ವಿಚಾರಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು. ಇದೀಗ ಈ ಎಲ್ಲ ಊಹಾಪೋಹಕ್ಕೆ ತೆರೆ ಬಿದ್ದಂತೆ ಕಾಣುತ್ತಿದೆ.

ಸಂಜೀವ್ ಗೋಯೆಂಕಾ ಅವರು ರಾಹುಲ್​ ಅವರನ್ನು ಮನೆಗೆ ಡಿನ್ನರ್​ಗೆ ಕರೆದು ತಬ್ಬಿಕೊಂಡಿರುವ ಫೋಟೊ ಒಂದು ವೈರಲ್​ ಆಗಿದೆ. ಈ ಮೂಲಕ ನಮ್ಮ ಮಧ್ಯೆ ಯಾವುದೇ ಮುನಿಸು ಇಲ್ಲ ಎನ್ನುವ ಸಂದೇಶ ನೀಡಿದಂತಿದೆ. ಸದ್ಯ ವೈರಲ್​ ಆಗುತ್ತಿರುವ ಫೋಟೊದಲ್ಲಿ ರಾಹುಲ್​ ಅವರನ್ನು ಗೋಯೆಂಕಾ ತಬ್ಬಿಕೊಂಡಿರಿವಂತೆ ಕಾಣುತ್ತಿದೆ. ರಾಹುಲ್​ ಕೂಡ ನಗುಮುಗದಿಂದಲೇ ಕಾಣಿಸಿಕೊಂಡಿದ್ದಾರೆ. ಆದರೆ, ಗೋಯೆಂಕಾ ಅವರ ಮುಖ ಮಾತ್ರ ಸ್ಪಷ್ಟವಾಗಿ ಗೋಚರಿಸಿಲ್ಲ. ರಾಹುಲ್​ ಪತ್ನಿ ಅಥಿಯಾ ಶೆಟ್ಟಿ ಕೂಡ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಸ್ಟೋರಿ ಹಾಕಿದ್ದು “ಚಂಡಮಾರುತದ ನಂತರ ಶಾಂತ” ಎಂದು ಬರೆದುಕೊಂಡಿದ್ದಾರೆ. ಹೀಗಾಗಿ ರಾಹುಲ್​ ಮತ್ತು ಗೋಯೆಂಕಾ ನಡುವಿನ ಮುನಿಸು ಶಮನವಾದಂತೆ ಕಾಣುತ್ತಿದೆ.

ಕಳೆದ ಹೈದರಾಬಾದ್​ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್​ ಮಾತ್ರವಲ್ಲದೆ, ಬೌಲಿಂಗ್​ನಲ್ಲಿಯೂ ಲಕ್ನೋ ಅತ್ಯಂತ ಕಳಪೆ ಪ್ರದರ್ಶನ ತೋರಿತ್ತು. ಕನಿಷ್ಠ 1 ವಿಕೆಟ್​ ಕೂಡ ಕೀಳಲಾಗದ ಘೋರ ವೈಫಲ್ಯ ಕಂಡಿತ್ತು. ಈ ಹೀನಾಯ ಸೋಲಿನಿಂದ ಸಿಟ್ಟಿಗೆದ್ದ ಸಂಜೀವ್ ಗೋಯೆಂಕಾ ನಾಯಕ ರಾಹುಲ್ ಅವರೊಂದಿಗೆ ಕೋಪದಲ್ಲಿ ಮಾತನಾಡುತ್ತಿರುವಂತೆ ಕಂಡುಬಂದಿತ್ತು. ಇವರಿಬ್ಬರ ನಡುವಣ ಮಾತುಕತೆ ಏನು ಎಂಬುದು ಸ್ಪಷ್ಟವಾಗಿ ಕೇಳಿಸಿಲ್ಲವಾಗಿದ್ದರೂ, ಈ ದೃಶ್ಯ ನೋಡುವಾಗ ಇದು ಅಸಮಾಧಾನದ ನುಡಿ ಎಂದು ತಿಳಿದು ಬಂದಿತ್ತು.

ಗೋಯೆಂಕಾ ಮಾತಿಗೆ ರಾಹುಲ್ ಪ್ರತಿಕ್ರಿಯೆ ನೀಡಲು ಮುಂದಾದರೂ ಕೂಡ ಇದನ್ನು ಗೋಯೆಂಕಾ ಒಪ್ಪಿಕೊಳ್ಳದೆ ಏನೋ ಬೈಯುತ್ತಿರುವಂತೆ ದೃಶ್ಯದಲ್ಲಿ ಕಂಡುಬಂದಿತ್ತು. ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುಗಿತ್ತು. ಈ ಘಟನೆಯಿಂದ ರಾಹುಲ್​ ನೊಂದಿದ್ದಾರೆ ಎನ್ನಲಾಗಿತ್ತು. ಪಂದ್ಯದಲ್ಲಿ ಟಾಸ್​ ಗೆದ್ದು ಆಮೆ ಗತಿಯ ಬ್ಯಾಟಿಂಗ್​ ನಡೆಸಿದ ಲಕ್ನೋ ಸೂಪರ್​ ಜೈಂಟ್ಸ್​ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 165 ರನ್​ ಬಾರಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಹೈದರಾಬಾದ್​ ಯಾವುದೇ ವಿಕೆಟ್​ ನಷ್ಟವಿಲ್ಲದೆ ಕೇವಲ 9.4 ಓವರ್​ಗಳಲ್ಲಿ 167 ರನ್​ ಬಾರಿಸಿ ಭರ್ಜರಿ 10 ವಿಕೆಟ್​ ಅಂತರದ ಗೆಲುವು ಸಾಧಿಸಿತು. ಲಕ್ನೋ ಬೌಲರ್​ಗಳನ್ನು ನಿರ್ದಾಕ್ಷಿಣ್ಯವಾಗಿ ಮನಬಂದಂತೆ ದಂಡಿಸಿದ ಹೆಡ್ ಮತ್ತು ಅಭಿಷೇಕ್​​ ಸ್ಟೇಡಿಯಂನ ಮೂಲೆ ಮೂಲೆಗೂ ಚೆಂಡನ್ನು ಬಾರಿಸಿದ್ದರು.

ಇದನ್ನೂ ಓದಿ IPL 2024: ಮಾಲೀಕನ ಜತೆ ಜಗಳ, ತಂಡದ ಬಸ್​ ಬಿಟ್ಟು ಸ್ವಂತ ಖರ್ಚಲ್ಲಿ ಪ್ರಯಾಣಿಸಿದ ಕೆ. ಎಲ್​ ರಾಹುಲ್​

ಇಂದು ನಡೆಯುವ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್​ ತಂಡ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಆಡಲಿದೆ. ಪ್ಲೇ ಆಫ್​ ರೇಸ್​ನಲ್ಲಿ ಉಳಿಯಬೇಕಿದ್ದರೆ ಲಕ್ನೋಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಡೆಲ್ಲಿ ವಿರುದ್ಧ ಗೆದ್ದರೆ ಮಾತ್ರ ಸಾಲದು ಅಂತಿಮ ಪಂದ್ಯದಲ್ಲಿ ಮುಂಬೈ ವಿರುದ್ಧವೂ ಗೆಲುವು ಅತ್ಯಗತ್ಯ.

Continue Reading

ವೈರಲ್ ನ್ಯೂಸ್

Viral News: ಕುರ್ಕುರೆ ಪ್ಯಾಕ್‌ ತರದೇ ಹೋದ ಗಂಡನಿಗೆ ಡೈವೋರ್ಸ್!‌

Viral News: ಪತ್ನಿಯ ಈ ವ್ಯಸನ ಪ್ರತಿದಿನ ದಂಪತಿಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿತ್ತು. ಪತಿ ಮನೆಗೆ ಪ್ಯಾಕೆಟ್‌ ತರಲು ಮರೆತಾಗ ಈ ವಿವಾದ ಉಲ್ಬಣಗೊಂಡಿದೆ. ಇದು ತಾರಕಕ್ಕೆ ಹೋಗಿದೆ. ತನ್ನ ದೈನಂದಿನ ಆಸ್ವಾದವನ್ನು ನಿರಾಕರಿಸಿದ್ದರಿಂದ ಕೋಪಗೊಂಡ ಪತ್ನಿ, ಗಂಡನ ಮನೆಯನ್ನು ತೊರೆದು ಹೆತ್ತವರ ಮನೆಗೆ ಹೋಗಿದ್ದಾಳೆ.

VISTARANEWS.COM


on

kurkure divorce viral news
Koo

ಲಖನೌ: ಉತ್ತರ ಪ್ರದೇಶದ ಆಗ್ರಾದ ಮಹಿಳೆಯೊಬ್ಬಳು, ಕುರ್ಕುರೆ (Kurkure) ಪ್ಯಾಕೆಟ್‌ ತರಲಿಲ್ಲ ಎಂಬ ಕಾರಣಕ್ಕೆ ರೊಚ್ಚಿಗೆದ್ದು ಪತಿಯಿಂದ ವಿಚ್ಛೇದನ (Divorce) ಬಯಸಿದ್ದಾಳೆ! ಇದು ನಿಜ. ಪ್ರತಿನಿತ್ಯ ಪತಿಯಿಂದ ಕುರ್ಕುರೆ ತರಿಸಿಕೊಂಡು ತಿನ್ನುತ್ತಿದ್ದ ಈಕೆ, ಒಂದು ದಿನ ಅದನ್ನು ತರಲು ಪತಿ ನಿರಾಕರಿಸಿದ್ದಕ್ಕಾಗಿ ಕೋಪಗೊಂಡು ದಾಂಪತ್ಯವನ್ನೇ ಬರ್ಬಾದ್‌ ಮಾಡಿದ್ದಾಳೆ. ಈ ಸುದ್ದಿ ಈಗ ವೈರಲ್‌ (Viral news) ಆಗಿದೆ.

5 ರೂಪಾಯಿ ಚಿಲ್ಲರೆ ಬೆಲೆಯ ಕುರ್ಕುರೆ ಪ್ಯಾಕೆಟ್ ಇವರ ದಾಂಪತ್ಯ ವಿಚ್ಛೇದನಕ್ಕೆ ಕಾರಣವಾಗಿದ್ದು, ಈ ಮಹಿಳೆಯ ಹೆಸರು ಬಹಿರಂಗಪಡಿಸಲಾಗಿಲ್ಲ. ಪತ್ನಿಯ ಈ ವ್ಯಸನ ಪ್ರತಿದಿನ ದಂಪತಿಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿತ್ತು. ಪತಿ ಮನೆಗೆ ಪ್ಯಾಕೆಟ್‌ ತರಲು ಮರೆತಾಗ ಈ ವಿವಾದ ಉಲ್ಬಣಗೊಂಡಿದೆ. ಇದು ತಾರಕಕ್ಕೆ ಹೋಗಿದೆ. ತನ್ನ ದೈನಂದಿನ ಆಸ್ವಾದವನ್ನು ನಿರಾಕರಿಸಿದ್ದರಿಂದ ಕೋಪಗೊಂಡ ಪತ್ನಿ, ಗಂಡನ ಮನೆಯನ್ನು ತೊರೆದು ಹೆತ್ತವರ ಮನೆಗೆ ಹೋಗಿದ್ದಾಳೆ. ಬಳಿಕ ಪತಿಯಿಂದ ವಿಚ್ಛೇದನ ಕೋರಿ ಪೊಲೀಸರ ಮೊರೆ ಹೋಗಿದ್ದಾಳೆ.

ಕಳೆದ ವರ್ಷ ವಿವಾಹವಾದ ದಂಪತಿಯನ್ನು ಆಗ್ರಾದ ಶಹಾಗಂಜ್ ಪೊಲೀಸರು ಕುಟುಂಬ ಸಮಾಲೋಚನೆಗಾಗಿ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಪತಿ, ತನ್ನ ಹೇಳಿಕೆಯಲ್ಲಿ, ತನ್ನ ಹೆಂಡತಿಯ ಕುರ್ಕುರೆ ಗೀಳಿನ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾನೆ. ಇದು ಅವರ ನಡುವಿನ ವಿವಾದದ ಬಿಂದುವಾಗಿದೆ. ಮತ್ತೊಂದೆಡೆ, ಪತಿ ತನ್ನ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದರಿಂದ ಆತನ ಮನೆಯನ್ನು ತೊರೆಯಬೇಕಾಯಿತು ಎಂದು ಪತ್ನಿ ಆರೋಪಿಸಿದ್ದಾಳೆ. ಈ ಆರೋಪದ ಹಿಂದಿನ ಸತ್ಯಾಸತ್ಯತೆ ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆಗ್ರಾ ಇನ್ನೊಂದು ದಂಪತಿ ಕೂಡ ಈ ವರ್ಷದ ಫೆಬ್ರವರಿಯಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. “ತುಂಬಾ ಜನಪ್ರಿಯತೆ” ಗಳಿಸಿದ ಹೆಂಡತಿಯ ರಾಜಕೀಯ ಚಟುವಟಿಕೆಗಳು ಪತಿಗೆ ಕಿರಿಕಿರಿ ಉಂಟುಮಾಡಿದ್ದು, ಜೊತೆಗೆ ಇರಲಾರೆ ಎಂದು ಗಂಡ ಹೇಳಿದ್ದ. ಪರಿಸ್ಥಿತಿ ಪೊಲೀಸರಿಗೆ ತಲುಪಿತ್ತು. ಅಪರಿಚಿತರೊಂದಿಗೆ ತನ್ನ ಹೆಂಡತಿ ಮುಖಾಮುಖಿ ಭೇಟಿಯಾಗುವುದನ್ನು ನಾನು ಇಷ್ಟಪಡುವುದಿಲ್ಲ ಎಂದು ಗಂಡ ಹೇಳಿದ್ದ. ನಂತರ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು.

ಇಲ್ಲಿ ಪತಿ ಸಿಕಂದರಾ ಮೂಲದವರಾಗಿದ್ದರೆ, ಮಹಿಳೆ ನ್ಯೂ ಆಗ್ರಾದ ಠಾಣಾದವರು. ಅವರಿಗೆ ಮದುವೆಯಾಗಿ ಎರಡು ವರ್ಷವಾಗಿತ್ತು. ಪತ್ನಿ ರಾಜಕೀಯದಲ್ಲಿ ವೃತ್ತಿಜೀವನವನ್ನು ಮುಂದುವರಿಸಲು ಬಯಸಿದ್ದು, ಅದನ್ನು ತ್ಯಜಿಸಲು ಸಿದ್ಧರಿರಲಿಲ್ಲ. ಅವಳು ರಾಜಕೀಯ ಕ್ಷೇತ್ರವನ್ನು ಬಿಡದಿದ್ದರೆ ತಾನು ಅವಳ ಜೊತೆಗೆ ಇರುವುದಿಲ್ಲ ಎಂದು ಪತಿ ಹಠ ಹಿಡಿದಿದ್ದ.

ಇದನ್ನೂ ಓದಿ: Viral News: 100 ದಿನ..200ಕ್ಕೂ ಹೆಚ್ಚು ವಿಮಾನಗಳು.. ಮಹಿಳಾ ಪ್ರಯಾಣಿಕರೇ ಈತನ ಟಾರ್ಗೆಟ್‌, ಇದು ಹೈಟೆಕ್‌ ಕಳ್ಳನ ಕಥೆ

Continue Reading
Advertisement
Viral Video
ವೈರಲ್ ನ್ಯೂಸ್8 mins ago

Viral Video: 25 ವರ್ಷಗಳ ಹಿಂದೆ ಬಿಬಿಸಿ ನ್ಯೂಸ್ ಥೀಮ್ ಟ್ಯೂನ್ ಹುಟ್ಟಿಕೊಂಡಿದ್ದು ಹೇಗೆ ಗೊತ್ತೇ?

Chaya Singh
ಕರ್ನಾಟಕ15 mins ago

Chaya Singh: ನಟಿ ಛಾಯಾ ಸಿಂಗ್ ಮನೆಯಲ್ಲಿ ಕಳ್ಳತನ; ಚಿನ್ನಾಭರಣ ಕದ್ದಿದ್ದ ಮನೆಕೆಲಸದಾಕೆ ಬಂಧನ

former MLC Arun Shahapur latest Statement
ಬೆಂಗಳೂರು15 mins ago

Bengaluru News: ಕಾಂಗ್ರೆಸ್ ಆಡಳಿತದಲ್ಲಿ ಶೈಕ್ಷಣಿಕ ದುರಾಡಳಿತ; ಅರುಣ್ ಶಹಾಪುರ ಆರೋಪ

HD Revanna Released first reaction after release will be acquitted of all charges
ರಾಜಕೀಯ30 mins ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

Income Tax office
ಪ್ರಮುಖ ಸುದ್ದಿ31 mins ago

Income Tax Office : ಆದಾಯ ತೆರಿಗೆ ಕಚೇರಿಯಲ್ಲಿ ಬೆಂಕಿ ಅವಘಡ; ಒಂದು ಸಾವು; ಇಲ್ಲಿದೆ ವಿಡಿಯೊ

Billboard Collapse
ಪ್ರಮುಖ ಸುದ್ದಿ52 mins ago

Billboard Collapse : 14 ಸಾವಿಗೆ ಕಾರಣವಾದ ಹೋರ್ಡಿಂಗ್ ಕಂಪನಿ ಮಾಲೀಕನ ಮೇಲಿದೆ ಅತ್ಯಾಚಾರ ಸೇರಿದಂತೆ 20ಕ್ಕೂ ಹೆಚ್ಚು ಕೇಸ್​ಗಳು

Stabbing Case
ಕರ್ನಾಟಕ54 mins ago

Stabbing Case: ಕುಡಿದ ಅಮಲಿನಲ್ಲಿ ಭುಜ ತಗುಲಿದ್ದಕ್ಕೆ ಕಿರಿಕ್; ವ್ಯಕ್ತಿಗೆ ಚೂರಿಯಿಂದ ಮನಸೋ ಇಚ್ಛೆ ಇರಿದ ಯುವಕರು

Ooty Tour
ಪ್ರವಾಸ57 mins ago

Ooty Tour: ಪ್ರತಿ ಸೀಸನ್‌ನಲ್ಲೂ ಭಿನ್ನ ಅನುಭವ! ನಿಮ್ಮ ಊಟಿ ಪ್ರವಾಸ ಯಾವಾಗ?

WhatsApp Update
ತಂತ್ರಜ್ಞಾನ1 hour ago

WhatsApp Update: ಅಪ್‌ಡೇಟ್ ಆಗಲಿದೆ ವಾಟ್ಸ್‌ಆಪ್ ಚಾನೆಲ್; ಹೊಸ ಆಪ್ಶನ್‌ ಏನೇನು?

Spoken Language
Latest1 hour ago

Spoken Language: ವಿಶ್ವದಲ್ಲಿ ಅತೀ ಹೆಚ್ಚು ಮಾತನಾಡುವ ಭಾಷೆಗಳಲ್ಲಿ ಹಿಂದಿ ಯಾವ ಸ್ಥಾನದಲ್ಲಿದೆ ಗೊತ್ತೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Released first reaction after release will be acquitted of all charges
ರಾಜಕೀಯ30 mins ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20246 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ7 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು8 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ15 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ1 day ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ1 day ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ1 day ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

ಟ್ರೆಂಡಿಂಗ್‌