Ashwini Vaishnaw: ಚಾಟ್‌ಜಿಪಿಟಿಯಂಥ ಎಐ ವೇದಿಕೆಗಳ ನಿಯಂತ್ರಣಕ್ಕೆ ಮುಂದಾದ ಕೇಂದ್ರ ಸರ್ಕಾರ - Vistara News

ತಂತ್ರಜ್ಞಾನ

Ashwini Vaishnaw: ಚಾಟ್‌ಜಿಪಿಟಿಯಂಥ ಎಐ ವೇದಿಕೆಗಳ ನಿಯಂತ್ರಣಕ್ಕೆ ಮುಂದಾದ ಕೇಂದ್ರ ಸರ್ಕಾರ

Ashwini Vaishnaw: ಚಾಟ್‌ಜಿಪಿಟಿಯಂಥ (ChatGPT) ಕೃತಕ ಬುದ್ಧಿಮತ್ತೆ ಆಧರಿತ ತಂತ್ರಜ್ಞಾನ ವೇದಿಕೆಗಳು ಮಾನವನ ಅಸ್ತಿತ್ವಕ್ಕೆ ಬೆದರಿಕೆಯನ್ನು ಒಡ್ಡುತ್ತಿವೆ. ಹಾಗಾಗಿ, ಈ ವೇದಿಕೆಗಳನ್ನು ನಿಯಂತ್ರಣಕ್ಕೆ ಬೇಕಾದ ವ್ಯವಸ್ಥೆಯನ್ನು ರೂಪಿಸಲು ಭಾರತ ಸರ್ಕಾರ ಮುಂದಾಗಿದೆ.

VISTARANEWS.COM


on

Ashwini Vaishnaw
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಅಲ್ಗಾರಿದಮ್‌ಗಳು ಮತ್ತು ಕಾಪಿರೈಟ್ಸ್ ಪಕ್ಷಪಾತ ಒಳಗೊಂಡಂತೆ ಚಾಟ್‌ಜಿಪಿಟಿ (ChatGPT) ಸೇರಿ ಕೃತಕ ಬುದ್ಧಿಮತ್ತೆ ಆಧರಿತ ಸ್ಮಾರ್ಟ್‌ ಟೆಕ್ನಾಲಜಿ ವೇದಿಕೆಗಳ ನಿಯಂತ್ರಣಕ್ಕೆ ವ್ಯವಸ್ಥೆಯನ್ನು ರೂಪಿಸುವತ್ತ ಕೇಂದ್ರ ಸರ್ಕಾರ ಮುಂದಾಗಿದೆ. ಈ ಸಂಬಂಧ ರೂಪಿಸಲಾಗುವ ಯಾವುದೇ ಕಾನೂನು ಕುರಿತು ಇದೇ ನಿಟ್ಟಿನಲ್ಲಿ ಯೋಚಿಸುತ್ತಿರುವ ಸಮಾನಮನಸ್ಕ ರಾಷ್ಟ್ರಗಳ ಜತೆ ಚರ್ಚಿಸಲು ಭಾರತವು ಮುಂದಾಗಿದೆ ಎಂಬ ಮಾಹಿತಿಯನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರು ಹಂಚಿಕೊಂಡಿದ್ದಾರೆ.

ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು, ಕೃತಕ ಬುದ್ಧಿಮತ್ತೆ ವೇದಿಕೆಗಳು ಪ್ರಭಾವ ಕುರಿತು ಸಾಕಷ್ಟು ರಾಷ್ಟ್ರಗಳು ಚರ್ಚಿಸುತ್ತಿವೆ. ಹಾಗಾಗಿ, ಅಂತಾರಾಷ್ಟ್ರೀಯ ಮಾತುಕತೆಗಳ ಬಳಿಕ ನಿಯಂತ್ರಣಾ ಚೌಕಟ್ಟು ರೂಪಿಸಬೇಕಾದ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಇಡೀ ಜಗತ್ತು ಒಂದು ನಿಯಂತ್ರಣ ಚೌಕಟ್ಟು ಹಾಗೂ ನಿಯಂತ್ರಣಾ ವ್ಯವಸ್ಥೆ ಹೇಗಿರಬೇಕೆಂದು ಎದುರು ನೋಡುತ್ತಿದೆ. ಜಿ7 ಸಮೂಹದಲ್ಲಿ ಎಲ್ಲ ಡಿಜಿಟಲ್ ಸಚಿವರು, ನಿಯಂತ್ರಣಾ ಚೌಕಟ್ಟು ಹೇಗಿರಬೇಕೆಂಬ ಎಂಬ ಆತಂಕವನ್ನು ಹೊಂದಿದ್ದಾರೆ. ಹಾಗಾಗಿ, ಇದೊಂದು ಜಾಗತಿಕ ವಿಷಯವಾಗಿದ್ದು, ಯಾವುದೇ ಒಂದು ದೇಶಕ್ಕೆ ಸಂಬಂಧಿಸಿದ್ದಲ್ಲ. ಇದನ್ನು ನಾವು ಅಂತಾರಾಷ್ಟ್ರೀಯ ದೃಷ್ಟಿಯಿಂದಲೇ ನೋಡಬೇಕಾಗಿದೆ ಎಂದು ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ChatGPT : ಚಾಟ್‌ಜಿಪಿಟಿ ಮನುಷ್ಯರಿಗೆ ಪರ್ಯಾಯವೇ? ನಾರಾಯಣ ಮೂರ್ತಿ ಹೇಳಿದ್ದೇನು?

ಇದೇ ವೇಳೆ, ಎಐ ಆಧರಿತ ತಂತ್ರಜ್ಞಾನ ವೇದಿಕೆಗಳಿಗೆ ಸಂಬಂಧಿಸಿದಂತೆ ಐಪಿಆರ್, ಕಾಪಿ ರೈಟ್ಸ್ ಮತ್ತು ಅಲ್ಗಾರಿದಮ್‌ಗಳ ಪಕ್ಷಪಾತ ಕುರಿತು ಆತಂಕಗಳಿವೆ. ಇದೊಂದು ದೊಡ್ಡ ಕ್ಷೇತ್ರವಾಗಿದ್ದು, ಸಾಕಷ್ಟು ಆತಂಕಗಳಿಗೆ ಜಾಗವಿದೆ ಎಂದು ವೈಷ್ಣವ್ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ದೇಶದ ಇನ್ನಷ್ಟು ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ಸೈಬರ್‌ ಸೇಫ್ಟಿ ಅಂಕಣ: ಭಾರತದ ಭವಿಷ್ಯಕ್ಕೆ ಬ್ಲಾಕ್‌ಚೈನ್‌ನ ಬೆನ್ನೆಲುಬು

ತಂತ್ರಜ್ಞಾನದಲ್ಲಿ ಆಗಲಿರುವ ಭವಿಷ್ಯದ ಬದಲಾವನೆಗಳು ಬ್ಲಾಕ್‌ಚೈನ್‌ ತಂತ್ರಜ್ಞಾನವನ್ನು ಅಧರಿಸಿರುತ್ತವೆ. ಬ್ಲಾಕ್‌ಚೈನ್‌ಗಳು ಕ್ರಿಪ್ಟೋಗ್ರಫಿ ಮೂಲಕ ಒಂದಕ್ಕೊಂದು ಲಿಂಕ್ ಮಾಡಲಾದ ಬ್ಲಾಕ್‌ಗಳಲ್ಲಿ ಡೇಟಾವನ್ನು ಸಂಗ್ರಹಿಸುತ್ತವೆ. ಇದರ ಇನ್ನಷ್ಟು ವಿವರ ಇಲ್ಲಿದೆ.

VISTARANEWS.COM


on

ಸೈಬರ್‌ ಸೇಫ್ಟಿ ಅಂಕಣ cyber safety column 2
Koo
cyber safety logo

ಸೈಬರ್‌ ಸೇಫ್ಟಿ ಅಂಕಣ: ವಿಶ್ವದಾದ್ಯಂತ ತಂತ್ರಜ್ಞಾನದಲ್ಲಿ ಕ್ರಾಂತಿಕಾರಕ ಬದಲಾವಣೆಗಳು ಆಗುತ್ತಿವೆ. ಅವುಗಳನ್ನು A, B, C… ಎಂದು ಪಟ್ಟಿ ಮಾಡುವುದಾದರೆ artificial intelligence, (ಕೃತಕ ಬುದ್ಧಿವಂತಿಕೆ) blockchain (ಬ್ಲಾಕ್ ಚೈನ್‌) ಮತ್ತು cloud computing (ಕ್ಲೌಡ್‌ ಕಂಪ್ಯೂಟಿಂಗ್) ಎಂದು ಪ್ರಮುಖವಾಗಿ ವಿಂಗಡಿಸಬಹುದು. ಬ್ಲಾಕ್‌ಚೈನ್‌ ಒಂದು ಹಂಚಿಕೆಯ (distributed) ಡೇಟಾಬೇಸ್ ಆಗಿದ್ದು ನಾವು ಬಳಸುತ್ತಿರುವ ಕೇಂದ್ರೀಕೃತ (centralised) ಕ್ಲೈಂಟ್ – ಸರ್ವರ್ ಡೇಟಾಬೇಸ್‌ಗಿಂತ ಮಾಹಿತಿಯನ್ನು ಸಂಗ್ರಹಿಸುವ ರೀತಿಯಲ್ಲಿ ಭಿನ್ನವಾಗಿರುತ್ತದೆ.

ಬ್ಲಾಕ್‌ಚೈನ್‌ಗಳು ಕ್ರಿಪ್ಟೋಗ್ರಫಿ ಮೂಲಕ ಒಂದಕ್ಕೊಂದು ಲಿಂಕ್ ಮಾಡಲಾದ ಬ್ಲಾಕ್‌ಗಳಲ್ಲಿ ಡೇಟಾವನ್ನು ಸಂಗ್ರಹಿಸುತ್ತವೆ. ಇದು ಪಿಯರ್-ಟು-ಪಿಯರ್ ನೆಟ್ವರ್ಕಿನಲ್ಲಿ ಕಾರ್ಯ ನಿರ್ವಹಿಸುತ್ತದೆ. ವಿವಿಧ ರೀತಿಯ ಮಾಹಿತಿಯನ್ನು ಬ್ಲಾಕ್‌ಚೈನ್‌ನಲ್ಲಿ ಸಂಗ್ರಹಿಸಬಹುದು. ಆದರೆ ವಹಿವಾಟುಗಳನ್ನು ದಾಖಲಿಸುವ ಸಾಮಾನ್ಯ ಲೆಡ್ಜರ್‌ನಂತೆ ಹೆಚ್ಚು ಬಳಕೆಯಾಗುತ್ತಿದೆ. ಎಲ್ಲಾ ಬ್ಲಾಕ್‌ಚೈನ್‌ಗಳು DLTಗಳೆ. ಆದರೆ ಎಲ್ಲಾ DLT ಗಳು ಬ್ಲಾಕ್‌ಚೈನ್‌ ಅಲ್ಲ.

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿನ ಸರ್ಕಾರಿ ಸಂಸ್ಥೆಯಾದ ಭಾರತದ ರಾಷ್ಟ್ರೀಯ ಮಾಹಿತಿ ಕೇಂದ್ರ (ನ್ಯಾಷನಲ್‌ ಇನ್‌ಫರ್‌ಮೆಟಿಕ್ಸ್‌ಸೆಂಟರ್‌ – NIC) 8 ಮಿಲಿಯನ್ ಪರಿಶೀಲಿಸಬಹುದಾದ ಸರ್ಕಾರ ನೀಡಿದ ದಾಖಲೆಗಳನ್ನು ಹೋಸ್ಟ್ ಮಾಡುತ್ತಿದೆ ಎಂದು ಇತ್ತೀಚೆಗೆ ವರದಿ ಮಾಡಿದೆ.

NIC ತನ್ನ ಬ್ಲಾಕ್‌ಚೈನ್ ಉಪಕ್ರಮಗಳನ್ನು ಹೈಲೈಟ್ ಮಾಡಲು ಹೊಸ ವೆಬ್‌ಸೈಟ್ ಅನ್ನು ಪ್ರಾರಂಭಿಸಿದೆ. ಶಿಕ್ಷಣ, ಆಸ್ತಿ, ನ್ಯಾಯಾಂಗ ಮತ್ತು ಔಷಧ ಲಾಜಿಸ್ಟಿಕ್ಸ್‌ನಂತಹ ಕ್ಷೇತ್ರಗಳನ್ನು ಒಳಗೊಂಡಿರುವ ಸುಮಾರು 7.93 ಮಿಲಿಯನ್ ದಾಖಲೆಗಳು ಈಗಾಗಲೇ ಬ್ಲಾಕ್‌ಚೈನ್‌ ನೆಟ್ವರ್ಕಿಗೆ ಸ್ಥಳಾಂತರಗೊಂಡಿದೆ.

ಭಾರತದಲ್ಲಿ, ಉತ್ಪನ್ನಗಳ ಅಭಿವೃದ್ಧಿಯು ಪ್ರಾಥಮಿಕವಾಗಿ ಮೂರು ಬ್ಲಾಕ್‌ಚೈನ್ ಪ್ಲಾಟ್‌ಫಾರ್ಮ್‌ಗಳನ್ನು ಅವಲಂಬಿಸಿದೆ: ಹೈಪರ್ಲೆಡ್ಜರ್ ಫ್ಯಾಬ್ರಿಕ್, ಹೈಪರ್ಲೆಡ್ಜರ್ ಸಾವ್ಟೂತ್ ಮತ್ತು ಎಥೆರಿಯಮ್. ದೇಶವು ಪ್ರಸ್ತುತ ಐದು ಬ್ಲಾಕ್‌ಚೈನ್ ಉತ್ಪನ್ನಗಳನ್ನು ಬಳಸಿಕೊಳ್ಳುತ್ತದೆ: ಪ್ರಮಾಣಪತ್ರ ಸರಪಳಿ, ಡಾಕ್ಯುಮೆಂಟ್ ಚೈನ್, ಡ್ರಗ್ ಲಾಜಿಸ್ಟಿಕ್ಸ್ ಚೈನ್, ನ್ಯಾಯಾಂಗ ಸರಪಳಿ ಮತ್ತು ಆಸ್ತಿ ಸರಪಳಿ.

ಆರು ವಿಭಿನ್ನ ರಾಜ್ಯಗಳ ದಾಖಲೆಗಳು ಮತ್ತು ಸರ್ಕಾರಿ ಇಲಾಖೆಗಳಾದ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್, ಗ್ರಾಹಕ ವ್ಯವಹಾರಗಳ ಸಚಿವಾಲಯ ಮತ್ತು ನ್ಯಾಯ ಸಚಿವಾಲಯದ ಬಹುತೇಕ ದಾಖಲೆಗಳು ಈಗಾಗಲೇ ಬ್ಲಾಕ್‌ಚೈನ್‌ ನೆಟ್ವರ್ಕಿನಲ್ಲಿ ಅಳವಡಿಸಲ್ಪಟ್ಟಿದೆ.

ಬ್ಲಾಕ್‌ಚೈನ್ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಇಲಾಖೆಗಳು ಆಸ್ತಿ ಮಾಲೀಕತ್ವ, ಜನನ ಮತ್ತು ಮರಣ ಪ್ರಮಾಣಪತ್ರಗಳಿಗಾಗಿ ಪರಿಶೀಲನಾ ಸೇವೆಗಳನ್ನು ಜಾರಿಗೆ ತಂದಿವೆ, ಜೊತೆಗೆ ಔಷಧಿಗಳು ಮತ್ತು ಶೈಕ್ಷಣಿಕ ಪ್ರಮಾಣಪತ್ರಗಳಿಗೆ ಪೂರೈಕೆ ಸರಪಳಿ ನಿರ್ವಹಣಾ ವ್ಯವಸ್ಥೆಯನ್ನು ಅಳವಡಿಸಿಕೊಂಡಿವೆ.

ಹೆಚ್ಚುವರಿಯಾಗಿ, ಭಾರತವು ಭೂ ದಾಖಲೆಗಳು, ರಕ್ತ ಬ್ಯಾಂಕುಗಳು, ಟ್ರ್ಯಾಕಿಂಗ್ ಸರಕು ಮತ್ತು ಸೇವಾ ತೆರಿಗೆ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಮೀಸಲಾಗಿರುವ ಪ್ರೂಫ್-ಆಫ್-ಕಾನ್ಸೆಪ್ಟ್ ಬ್ಲಾಕ್‌ಚೈನ್‌ಗಳನ್ನು ಸಕ್ರಿಯವಾಗಿ ಅಭಿವೃದ್ಧಿಪಡಿಸುತ್ತಿದೆ.

ಬ್ಲಾಕ್‌ಚೈನ್‌ನಲ್ಲಿ ಭಾರತದ ಆಸಕ್ತಿ ಹೊಸದೇನಲ್ಲ. 2023 ರಲ್ಲಿ, ಭಾರತದ ಅತಿದೊಡ್ಡ ತೈಲ ಮತ್ತು ಅನಿಲ ಕಂಪನಿಗಳಲ್ಲಿ ಒಂದಾದ ಹಿಂದೂಸ್ತಾನ್ ಪೆಟ್ರೋಲಿಯಂ, ಬ್ಲಾಕ್‌ಚೈನ್ ಆಧಾರಿತ ಡಿಜಿಟಲ್ ರುಜುವಾತು ತಂತ್ರಜ್ಞಾನವನ್ನು ಅದರ ಖರೀದಿ ಆದೇಶ ವ್ಯವಸ್ಥೆಯಲ್ಲಿ ಸಂಯೋಜಿಸಲು ಬ್ಲಾಕ್‌ಚೈನ್ ಸಾಫ್ಟ್‌ವೇರ್ ಸಂಸ್ಥೆ ಜುಪಲ್ ಲ್ಯಾಬ್ಸ್‌ನೊಂದಿಗೆ ಸಹಕರಿಸಿತು.

ಬ್ಲಾಕ್‌ಚೈನ್ ಅನ್ನು ಅಳವಡಿಸಿಕೊಳ್ಳುವ ಹಿಂದಿನ ಉದ್ದೇಶ ಡಾಕ್ಯುಮೆಂಟ್ ಫೋರ್ಜರಿ ಸಮಸ್ಯೆಯನ್ನು ಪರಿಹರಿಸುವುದಾಗಿದೆ. ಬ್ಲಾಕ್‌ಚೈನ್ ಅನ್ನು ನಿಯಂತ್ರಿಸುವ ಮೂಲಕ, ಭಾರತ ಸರ್ಕಾರವು ಡಿಜಿಟಲ್ ಆಗಿ ಪರಿಶೀಲಿಸಬಹುದಾದ ಮತ್ತು ಬದಲಾಯಿಸಲಾಗದ ಪ್ರಮಾಣಪತ್ರಗಳನ್ನು ನೀಡುತ್ತದೆ, ದುರುದ್ದೇಶಪೂರಿತ ಜನರಿಂದ ಬದಲಾವಣೆ ಅಥವಾ ದುರುಪಯೋಗವನ್ನು ತಡೆಯುತ್ತದೆ. ನಕಲಿ ದಾಖಲೆಗಳ ಹಾವಳಿಗೆ ಪೂರ್ಣ ವಿರಾಮ ಹಾಕುವ ನಿಟ್ಟಿನಲ್ಲಿ ಇದು ಒಂದು ಉತ್ತಮ ಪ್ರಯತ್ನ.

ಬ್ಲಾಕ್‌ಚೈನ್ ತಂತ್ರಜ್ಞಾನವನ್ನು ವಿವಿಧ ಕ್ಷೇತ್ರಗಳಲ್ಲಿ ಬಳಸಲು ಸ್ಥಾಪಿತವಾದ ಉತ್ಕೃಷ್ಟತೆಯ ಕೇಂದ್ರವು (CoE) ರಾಷ್ಟ್ರದಾದ್ಯಂತ ಒಂದು ಸಂಘಟಿತ, ಇಂಟರ್‌ಆಪರೇಬಲ್ ಬ್ಲಾಕ್‌ಚೈನ್ ಪರಿಸರ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಇದು ಎಲ್ಲಾ ಪಾಲುದಾರರಿಗೆ ಹಂಚಿಕೆಯ ಕಲಿಕೆ, ಅನುಭವಗಳು ಮತ್ತು ಸಂಪನ್ಮೂಲಗಳಿಂದ ಪ್ರಯೋಜನ ಪಡೆಯಲು ಅನುವು ಮಾಡಿಕೊಡುತ್ತದೆ. ಉದ್ಯಮದ ತಿಳುವಳಿಕೆ ಮತ್ತು ಬ್ಲಾಕ್‌ಚೈನ್ ತಂತ್ರಜ್ಞಾನಗಳ ಅನುಷ್ಠಾನವನ್ನು ಅಭಿವೃದ್ಧಿಪಡಿಸಲು ಬ್ಲಾಕ್‌ಚೈನ್ ತಂತ್ರಜ್ಞಾನಗಳು, ಪ್ಲಾಟ್‌ಫಾರ್ಮ್‌ಗಳು, ಸ್ವತ್ತುಗಳು ಮತ್ತು ವ್ಯವಸ್ಥೆಗಳನ್ನು ಮುನ್ನಡೆಸುವುದರ ಮೇಲೆ CoE ಕೇಂದ್ರವು ಗಮನಹರಿಸುತ್ತದೆ.

ಈ CoE-BCT ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ಎನ್‌ಐಸಿ ಕೈಗೊಂಡ ಯೋಜನೆಗಳಿಗೆ ಪರಿಹಾರಗಳನ್ನು ಪರೀಕ್ಷಿಸಲು ಮತ್ತು ಅಭಿವೃದ್ಧಿಪಡಿಸಲು ನವೀನ ಹೊಸ ಪರಿಹಾರಗಳಿಗೆ ಒಂದು ವೇದಿಕೆಯಾಗಿದೆ. ಪರಿಕಲ್ಪನೆಯ ಪುರಾವೆಯಿಂದ ಉತ್ಪಾದನೆಯವರೆಗೆ ನವೀನ ಬ್ಲಾಕ್‌ಚೈನ್ ಪರಿಹಾರಗಳ ಅಭಿವೃದ್ಧಿ ಮತ್ತು ಅನುಷ್ಠಾನವನ್ನು ಮುನ್ನಡೆಸಲು NIC CoE ತಂಡವು ಜಾಗತಿಕ ತಜ್ಞರೊಂದಿಗೆ ಸಹಕರಿಸುತ್ತದೆ. ಕೇಂದ್ರವು ಸಂಶೋಧನಾ-ನೇತೃತ್ವದ ಚಿಂತನೆಯ ನಾಯಕತ್ವವನ್ನು ಒದಗಿಸುತ್ತದೆ ಮತ್ತು ಸರ್ಕಾರಿ ಸೇವೆಗಳ ವಿತರಣೆಯನ್ನು ಸುಧಾರಿಸುವ ಕಡೆಗೆ ಆಡಳಿತದಲ್ಲಿನ ಸಂಕೀರ್ಣ ವ್ಯವಹಾರ ಸಮಸ್ಯೆಗಳನ್ನು ಪರಿಹರಿಸಲು ಕಾರ್ಯತಂತ್ರದ ಬ್ಲಾಕ್‌ಚೈನ್ ಬೆಳವಣಿಗೆಗಳನ್ನು ಚಾಲನೆ ಮಾಡುತ್ತದೆ.

ಇದನ್ನೂ ಓದಿ: ಸೈಬರ್‌ ಸೇಫ್ಟಿ ಅಂಕಣ: ಸ್ಮಾರ್ಟ್‌ ಫೋನಿನ ಸ್ಮಾರ್ಟ್ ಬಳಕೆಗೆ 12 ಸೂತ್ರಗಳು

ಬ್ಲಾಕ್‌ಚೈನ್ ತಂತ್ರಜ್ಞಾನಗಳ ಬಳಕೆಯನ್ನು ಉತ್ತೇಜನ, ಬ್ಲಾಕ್‌ಚೈನ್ ಆಧಾರಿತ ಪರಿಹಾರಗಳ ಕ್ಷಿಪ್ರ ಅಳವಡಿಕೆ ಮತ್ತು ಆನ್-ಬೋರ್ಡಿಂಗ್ ಅನ್ನು ಸುಗಮಗೊಳಿಸುವುದು, ಸರ್ಕಾರ, ಸಾರ್ವಜನಿಕ ಮತ್ತು ಖಾಸಗಿ ವಲಯಗಳ ನಡುವೆ ಬಲವಾದ ಸಹಯೋಗವನ್ನು ಬೆಳೆಸುವುದು ಮತ್ತು ಇತ್ತೀಚಿನ ತಾಂತ್ರಿಕ ಮಾನದಂಡಗಳನ್ನು ಸುರಕ್ಷಿತವಾಗಿ ಮತ್ತು ವಿಶ್ವಾಸಾರ್ಹ ರೀತಿಯಲ್ಲಿ ಲಭ್ಯವಾಗುವಂತೆ ಮಾಡಲು NIC ಸಹಕರಿಸುತ್ತದೆ.

ಬ್ಲಾಕ್‌ಚೈನ್ ತಂತ್ರಜ್ಞಾನದ ಹೊರಹೊಮ್ಮುವಿಕೆಯು ಕೆಲವು ಡೇಟಾ ಚಟುವಟಿಕೆಗಳ ಬಗ್ಗೆ ನಂಬಿಕೆ ಮತ್ತು ಹೆಚ್ಚಿನ ಪಾರದರ್ಶಕತೆಯನ್ನು ಬೆಳೆಸಲು ಮತ್ತು ನಾಗರಿಕರೊಂದಿಗೆ ಘರ್ಷಣೆಯಿಲ್ಲದ ವಹಿವಾಟುಗಳನ್ನು ಒದಗಿಸಲು ಸರ್ಕಾರಕ್ಕೆ ಭರವಸೆ ನೀಡುತ್ತದೆ.

ತಂತ್ರಜ್ಞಾನದ ಜೊತೆಗೆ ತಂತ್ರಜ್ಞಾನದ ಸರಿಯಾದ ಅನ್ವಯಗಳನ್ನು ನಿರ್ಧರಿಸುವುದು ಅದರ ಅಳವಡಿಕೆಯನ್ನು ವೇಗಗೊಳಿಸಲು ನಿರ್ಣಾಯಕ ಅಂಶವಾಗಿದೆ. ಪ್ರಬುದ್ಧ ವ್ಯವಸ್ಥೆಗಳಂತೆ, ಸರ್ಕಾರಿ ಬ್ಲಾಕ್‌ಚೈನ್ ಕಾರ್ಯಕ್ರಮಗಳ ಬೆಂಬಲಿಗರು ಅಂತಹ ಹೂಡಿಕೆಗಳು ಹಣವನ್ನು ಉಳಿಸುತ್ತದೆ ಮತ್ತು ಈಗಾಗಲೇ ಉತ್ತಮ ಸ್ಥಿತಿಯಲ್ಲಿರುವ ಸೇವೆಗಳನ್ನು ಸುಧಾರಿಸುತ್ತದೆ ಎಂದು ಬಲವಾದ ಪುರಾವೆಗಳನ್ನು ವಿವಿಧ ಕ್ಷೇತ್ರಗಳಲ್ಲಿ ಅದರ ಉಪಯೋಗದ ಬಗ್ಗೆ use-cases ತಯಾರಿಸಿದ್ದಾರೆ.

ಈ ರೀತಿ ಬ್ಲಾಕ್‌ಚೈನ್‌ ತಂತ್ರಜ್ಞಾನ ಆಧರಿತ ಅಂತರ್ಜಾಲ ವ್ಯವಸ್ಥೆ ಹೆಚ್ಚಿನ ಸುರಕ್ಷತೆಯನ್ನು ಕೊಡುವುದರ ಮೂಲಕ ಸೈಬರ್‌ ದಾಳಿಗಳನ್ನು ಕಡಿಮೆ ಮಾಡಬಹುದು.

ಇದನ್ನೂ ಓದಿ: ಸೈಬರ್‌ ಸೇಫ್ಟಿ ಅಂಕಣ: 2024ರ ಸೈಬರ್‌ ಸೆಕ್ಯುರಿಟಿ ಟ್ರೆಂಡ್‌ಗಳು

Continue Reading

ದೇಶ

Toyota Kirloskar Motor: ದೆಹಲಿಯಲ್ಲಿ ಟಿಕೆಎಂನ ʼಟೊಯೊಟಾ ಯೂಸ್ಡ್ ಕಾರ್ʼ ಮಳಿಗೆಗೆ ಚಾಲನೆ

Toyota Kirloskar Motor: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಇಂದು ನವದೆಹಲಿಯಲ್ಲಿ ತನ್ನ ಮೊದಲ ಕಂಪನಿಯ ಒಡೆತನದ ಟೊಯೊಟಾ ಯೂಸ್ಡ್ ಕಾರ್ ಮಳಿಗೆಯನ್ನು (ಟಿಯುಸಿಒ) ಉದ್ಘಾಟಿಸಿದೆ. “ಟೊಯೊಟಾ ಯು-ಟ್ರಸ್ಟ್” ಬ್ರಾಂಡ್ ಹೆಸರಿನಲ್ಲಿ, ಗ್ರಾಹಕರಿಗೆ ಉತ್ತಮ ಗುಣಮಟ್ಟದ ಮತ್ತು ಸುರಕ್ಷಿತವಾಗಿ ಬಳಸಿದ ಕಾರುಗಳನ್ನು ನೀಡುವ ಗುರಿಯನ್ನು ಹೊಂದಿರುವ ಟೊಯೊಟಾ ಯು-ಟ್ರಸ್ಟ್ ಕಾರುಗಳ ಖರೀದಿ ಮತ್ತು ಮಾರಾಟದ ಪ್ರಕ್ರಿಯೆಯಲ್ಲಿ ಅನುಕೂಲತೆ, ಪಾರದರ್ಶಕತೆ ಮತ್ತು ಪೀಸ್ ಆಫ್ ಮೈಂಡ್ ಅನ್ನು ನೀಡುತ್ತದೆ.

VISTARANEWS.COM


on

Toyota Kirloskar Motor Inauguration of Toyota Used Car Store by TKM in New Delhi
Koo

ಬೆಂಗಳೂರು: ಗ್ರಾಹಕ ಮೊದಲು ಎಂಬ ತತ್ವಕ್ಕೆ ತನ್ನ ಬದ್ಧತೆಯನ್ನು ಪ್ರದರ್ಶಿಸುವ ‘ಟೊಯೊಟಾ ಕಿರ್ಲೋಸ್ಕರ್ ಮೋಟಾರ್’ (Toyota Kirloskar Motor) ಇಂದು ನವದೆಹಲಿಯಲ್ಲಿ ತನ್ನ ಮೊದಲ ಕಂಪನಿಯ ಒಡೆತನದ ಟೊಯೊಟಾ ಯೂಸ್ಡ್ ಕಾರ್ ಮಳಿಗೆಯನ್ನು (ಟಿಯುಸಿಒ) ಉದ್ಘಾಟಿಸಿದೆ. “ಟೊಯೊಟಾ ಯು-ಟ್ರಸ್ಟ್” ಬ್ರಾಂಡ್ ಹೆಸರಿನಲ್ಲಿ, ಗ್ರಾಹಕರಿಗೆ ಉತ್ತಮ ಗುಣಮಟ್ಟದ ಮತ್ತು ಸುರಕ್ಷಿತವಾಗಿ ಬಳಸಿದ ಕಾರುಗಳನ್ನು ನೀಡುವ ಗುರಿಯನ್ನು ಹೊಂದಿರುವ ಟೊಯೊಟಾ ಯು-ಟ್ರಸ್ಟ್ ಕಾರುಗಳ ಖರೀದಿ ಮತ್ತು ಮಾರಾಟದ ಪ್ರಕ್ರಿಯೆಯಲ್ಲಿ ಅನುಕೂಲತೆ, ಪಾರದರ್ಶಕತೆ ಮತ್ತು ಪೀಸ್ ಆಫ್ ಮೈಂಡ್ ಅನ್ನು ನೀಡುತ್ತದೆ.

ಈ ಹೊಸ ಸೌಲಭ್ಯವು 15,000 ಚದರ ಅಡಿಗಳಷ್ಟು ವಿಸ್ತಾರವಾಗಿದ್ದು, 20ಕ್ಕೂ ಹೆಚ್ಚು ಟೊಯೊಟಾ ಪ್ರಮಾಣೀಕೃತ ವಾಹನಗಳ ಡಿಸ್‌ಪ್ಲೆ ಸಾಮರ್ಥ್ಯವನ್ನು ಹೊಂದಿದೆ. ಟೊಯೊಟಾ ವಾಹನಗಳ ಖರೀದಿ ಮತ್ತು ಮಾರಾಟ ಎರಡಕ್ಕೂ ಉದ್ದೇಶಿಸಲಾದ ರಿಟೇಲ್ ಟಚ್ ಪಾಯಿಂಟ್ ಆಗಿ ಟಿಯುಸಿಒದಲ್ಲಿನ ಎಲ್ಲಾ ಕಾರುಗಳು ಜಾಗತಿಕ ಟೊಯೊಟಾ ಮಾನದಂಡಗಳ ಆಧಾರದ ಮೇಲೆ ಸಮಗ್ರ 203-ಪಾಯಿಂಟ್‌ಗಳ ತಪಾಸಣೆಗೆ ಒಳಗಾಗುತ್ತವೆ. ತಪಾಸಣೆಗಳು ಕಠಿಣ ಸುರಕ್ಷತೆ, ರಚನಾತ್ಮಕ ಕಠಿಣತೆ ಮತ್ತು ಕಾರ್ಯಕ್ಷಮತೆಯ ಪರಿಶೀಲನೆಯನ್ನು ಸಹ ಒಳಗೊಂಡಿವೆ.

ಇದನ್ನೂ ಓದಿ: Gold Rate Today: ಆಭರಣ ಖರೀದಿಗೆ ಇದು ಸಕಾಲ; ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಟೊಯೊಟಾಗೆ ಪ್ರತ್ಯೇಕವಾದ “ಹೈ ಕ್ವಾಲಿಟಿ ಪ್ರಿಶಿಯಸ್ ಕ್ಲೀನಿಂಗ್” ‘ಮಾರು ಮಾರು’ ಸಿಗ್ನೇಚರ್‌ನೊಂದಿಗೆ ಟಿಯುಸಿಒ ವಹಿವಾಟು ಭಾರತದಾದ್ಯಂತ ಟೊಯೊಟಾ ಗ್ರಾಹಕರಿಗೆ ಪಾರದರ್ಶಕ ಮತ್ತು ವಿಶ್ವಾಸಾರ್ಹ ಬಳಸಿದ ಕಾರು ಮಾರುಕಟ್ಟೆಯನ್ನು ಬೆಳೆಸುವ ಟಿಕೆಎಂನ ಬದ್ಧತೆಯನ್ನು ಬಲಪಡಿಸುತ್ತದೆ. ಇದಲ್ಲದೆ ಟೊಯೊಟಾ ಯು-ಟ್ರಸ್ಟ್ ಮಳಿಗೆಗಳು ಹೊಚ್ಚ ಹೊಸ ವಾಹನವನ್ನು ಖರೀದಿಸುವ ಸಮಾನಾರ್ಥಕ ವಾತಾವರಣ ಮತ್ತು ಗ್ರಾಹಕರ ಅನುಭವವನ್ನು ಪುನರಾವರ್ತಿಸಲು ಪ್ರಯತ್ನಿಸುತ್ತದೆ.

ಖರೀದಿದಾರರು ಸಂಪೂರ್ಣ ಪಾರದರ್ಶಕತೆ, ಕಿರಿಕಿರಿ ಇಲ್ಲದ ಡಾಕ್ಯುಮೆಂಟೇಶನ್ ಮತ್ತು ನ್ಯಾಯೋಚಿತ ಸ್ಪರ್ಧಾತ್ಮಕ ಬೆಲೆಯ ಭರವಸೆಯೊಂದಿಗೆ ವಿವಿಧ ರೀತಿಯ ಉತ್ತಮ-ಗುಣಮಟ್ಟದ ಟೊಯೊಟಾ ಮಾದರಿಗಳಿಂದ ಆಯ್ಕೆ ಮಾಡಬಹುದು. ಡಿಜಿಟಲ್ ಸಂಯೋಜಿತ ಶೋರೂಂ ಸಮಗ್ರ ವಾಹನ ಇತಿಹಾಸ ಮತ್ತು ಮೌಲ್ಯಮಾಪನವನ್ನು ಒದಗಿಸುವ ಮೂಲಕ ಗ್ರಾಹಕರ ಅನುಭವವನ್ನು ಹೆಚ್ಚಿಸುತ್ತದೆ. ಹೆಚ್ಚುವರಿಯಾಗಿ, ಗ್ರಾಹಕರು “ ವ್ಯಾಲ್ಯುಯೇಟ್ ಯುವರ್ ಕಾರ್” ಆಯ್ಕೆಯ ಮೂಲಕ ಟೊಯೊಟಾ ಯು-ಟ್ರಸ್ಟ್ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ತಮ್ಮ ವಾಹನಗಳನ್ನು ಮೌಲ್ಯಮಾಪನ ಮಾಡಬಹುದು.

ಹೆಚ್ಚುವರಿಯಾಗಿ ಮಾರಾಟದ ನಂತರದ ಸೇವೆಯ ಕಡೆಗೆ ನಿಜವಾದ ಟೊಯೊಟಾ ಗ್ರಾಹಕ ಕೇಂದ್ರಿತ ವಿಧಾನವನ್ನು ಪ್ರದರ್ಶಿಸುತ್ತದೆ. ಟಿಯುಸಿಒ ಪ್ರಮಾಣೀಕರಿಸಿದ ಬಳಸಿದ ಕಾರುಗಳಿಗೆ ದೇಶಾದ್ಯಂತ ಯಾವುದೇ ಟೊಯೊಟಾ ಸೇವಾ ಕೇಂದ್ರಗಳಲ್ಲಿ 30,000 ಕಿ.ಮೀ, ಅಥವಾ 2 ವರ್ಷಗಳು ಮತ್ತು 3 ಉಚಿತ ಸೇವೆಗಳ ವಾರಂಟಿಯನ್ನು ನೀಡಲಾಗುತ್ತದೆ. ಮಾರಾಟಗಾರರಿಗೆ, ಶಾಂತಿಯುತ ಮತ್ತು ಕಿರಿಕಿರಿ ಇಲ್ಲದ ಮಾರಾಟ ಪ್ರಕ್ರಿಯೆ ಜತೆಗೆ ಟುಕೊ ಮಾರುಕಟ್ಟೆಯಲ್ಲಿ ಉತ್ತಮ ಬೆಲೆಯನ್ನು ನೀಡುತ್ತದೆ.

ಇದನ್ನೂ ಓದಿ: Kannada New Movie: ʻರಮೇಶ್ ಸುರೇಶ್‌ʼ ಸಿನಿಮಾದಲ್ಲಿ ಇಬ್ಬರು ನಿರ್ದೇಶಕರು, ಇಬ್ಬರು ನಾಯಕರು ; ಜೂನ್ 21ರಂದು ತೆರೆಗೆ!

ಈ ಕುರಿತು ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಉಪಾಧ್ಯಕ್ಷ ತಕಾಶಿ ತಕಾಮಿಯಾ ಮಾತನಾಡಿ, ಯೂಸ್ಡ್ ಕಾರ್ ಬ್ಯುಸಿನೆಸ್ ಭಾರತದಲ್ಲಿ ಟೊಯೊಟಾದ ಒಟ್ಟಾರೆ ವ್ಯವಹಾರ ಮತ್ತು ಬೆಳವಣಿಗೆಯ ಕಾರ್ಯತಂತ್ರದ ಪ್ರಮುಖ ಆಧಾರಸ್ತಂಭವಾಗಿದೆ. ಇದು ‘ಮೊಬಿಲಿಟಿ ಫಾರ್ ಆಲ್ ‘ ಎಂಬ ನಮ್ಮ ದೃಷ್ಟಿಕೋನದೊಂದಿಗೆ ನಿಕಟವಾಗಿ ಹೊಂದಿಕೆಯಾಗಿದೆ. ಆದ್ದರಿಂದ ನವದೆಹಲಿಯಲ್ಲಿ ನಮ್ಮ ಮೊದಲ ಯೂಸ್ಡ್ ಕಾರ್ ಔಟ್ಲೆಟ್ ಉದ್ಘಾಟನೆಯೊಂದಿಗೆ ಟಿಯುಸಿಒದ ವಿಸ್ತರಣೆಯು ಗುಣಮಟ್ಟ, ವಿಶ್ವಾಸಾರ್ಹತೆ ಮತ್ತು ಗ್ರಾಹಕರ ತೃಪ್ತಿಗೆ ನಮ್ಮ ಸಮರ್ಪಣೆಗೆ ಉದಾಹರಣೆಯಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ ಈ ಹೊಸ ಮಳಿಗೆಯು ಟೊಯೊಟಾ ಉತ್ಪನ್ನಗಳಿಗೆ ಸಮಾನಾರ್ಥಕವಾದ ಮಾನದಂಡಗಳನ್ನು ಮತ್ತು ನಮ್ಮ ಬೆಂಚ್ ಮಾರ್ಕ್ ಸೇವಾ ಅನುಭವವನ್ನು ಎತ್ತಿಹಿಡಿಯುತ್ತದೆ.

ಭಾರತೀಯ ಬಳಸಿದ ಕಾರು ಮಾರುಕಟ್ಟೆಯು ಶೇ.8% ಸಿಎಜಿಆರ್‌ ನಷ್ಟು ಬೆಳೆಯುತ್ತಿದೆ ಎಂದು ಅಂದಾಜಿಸಲಾಗಿದೆ. ಪ್ರಸ್ತುತ ಹೊಸ ಕಾರು ಮಾರುಕಟ್ಟೆಯ ಗಾತ್ರಕ್ಕಿಂತ 1.3 ಪಟ್ಟು ದೊಡ್ಡದಾಗಿದೆ. ಈ ವಲಯವು ಗಮನಾರ್ಹ ಬೆಳವಣಿಗೆಯ ಸಾಮರ್ಥ್ಯವನ್ನು ಹೊಂದಿದೆ. ದೆಹಲಿಯಲ್ಲಿ ಟೊಯೊಟಾ ಕಂಪನಿಯ ಒಡೆತನದ ಮಳಿಗೆಯ ನಮ್ಮ ಇತ್ತೀಚಿನ ವಿಸ್ತರಣೆ ಮತ್ತು ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಮಳಿಗೆಗಳನ್ನು ನಿರ್ಮಿಸಲು ಚಿಂತಿಸಿದೆ.

ನಮ್ಮ ಗ್ರಾಹಕರಿಗೆ ತಡೆರಹಿತ, ಪಾರದರ್ಶಕ ಮತ್ತು ವಿಶ್ವಾಸಾರ್ಹ ಬಳಸಿದ ಕಾರು ಮಾರುಕಟ್ಟೆಯನ್ನು ರಚಿಸುವ ಟಿಕೆಎಂನ ಕಾರ್ಯತಂತ್ರವನ್ನು ನಗರಗಳು ಒತ್ತಿಹೇಳುತ್ತವೆ. ಗುಣಮಟ್ಟ ಮತ್ತು ಸುರಕ್ಷತೆ-ಕೇಂದ್ರಿತ ನವೀಕರಣಕ್ಕೆ ಒತ್ತು ನೀಡುತ್ತವೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಯೋಜನಾ ಉಪಾಧ್ಯಕ್ಷ ಅತುಲ್ ಸೂದ್ ಮಾತನಾಡಿ, ನವದೆಹಲಿ ಟಿಯುಸಿಒ ಸೌಲಭ್ಯವನ್ನು ತೆರೆಯುವುದು ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ಗೆ ಮಹತ್ವದ ಮೈಲಿಗಲ್ಲಾಗಿದೆ. ಯೂಸ್ಡ್ ಕಾರ್ ಮಾರುಕಟ್ಟೆಯಲ್ಲಿ ನಮ್ಮ ಹೆಜ್ಜೆ ಗುರುತನ್ನು ವಿಸ್ತರಿಸಲು ನಾವು ರೋಮಾಂಚನ ಗೊಂಡಿದ್ದೇವೆ, ಗ್ರಾಹಕರಿಗೆ ತಮ್ಮ ಟೊಯೊಟಾ ಕಾರುಗಳನ್ನು ಖರೀದಿಸಲು ಮತ್ತು ಮಾರಾಟ ಮಾಡಲು ವಿಶ್ವಾಸಾರ್ಹ ಮತ್ತು ಪಾರದರ್ಶಕ ಅನುಭವವನ್ನು ಒದಗಿಸುತ್ತದೆ, ಎಲ್ಲಾ ಮೌಲ್ಯವರ್ಧಿತ ಸೇವೆಗಳಿಗೆ ಒಂದೇ ಸೂರಿನಡಿ ಪರಿಹಾರವನ್ನು ನೀಡುತ್ತದೆ.

ಪ್ರತಿ ಪೂರ್ವ ಮಾಲಿಕತ್ವದ (ಯೂಸ್ಡ್ ಕಾರ್) ವಾಹನವು ನಮ್ಮ ವಿಶೇಷ ಕೇಂದ್ರಗಳಲ್ಲಿ ಟೊಯೊಟಾ ಜೆನ್ಯೂನ್ ಪಾರ್ಟ್ಸ್‌ಗಳನ್ನು ಬಳಸಿಕೊಂಡು ನಮ್ಮ ತಂತ್ರಜ್ಞರಿಂದ ನವೀಕರಣಕ್ಕೆ ಒಳಗಾಗುತ್ತದೆ. ಜಾಗತಿಕ ಟೊಯೊಟಾ ಮಾನದಂಡಗಳಿಗೆ ಅನುಗುಣವಾಗಿ ಸಮಗ್ರ 203-ಅಂಶಗಳ ತಪಾಸಣೆಯನ್ನು ನಡೆಸಲಾಗುತ್ತದೆ, ಇದು ಉತ್ತಮ ಗುಣಮಟ್ಟ ಮತ್ತು ವಿಶ್ವಾಸಾರ್ಹತೆಯನ್ನು ಖಚಿತಪಡಿಸುತ್ತದೆ. ಈ ಬದ್ಧತೆಯನ್ನು ಟೊಯೊಟಾದ ತೊಂದರೆ ಮುಕ್ತ ಮಾರಾಟದ ನಂತರದ ಸೇವಾ ಬೆಂಬಲದ ಖಾತರಿಯಿಂದ ಮತ್ತಷ್ಟು ಬಲಪಡಿಸಲಾಗಿದೆ, ಇದು ತಡೆರಹಿತ ಮತ್ತು ಸಂತೋಷದಾಯಕ ಮಾಲೀಕತ್ವದ ಅನುಭವವನ್ನು ಖಚಿತಪಡಿಸುತ್ತದೆ.

ಇದನ್ನೂ ಓದಿ: Raja Rani Show: ಇಂದಿನಿಂದ ʻರಾಜ ರಾಣಿ ರೀಲೋಡೆಡ್ʼ ರಿಯಾಲಿಟಿ ಶೋ ಶುರು!

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ 2022 ರಲ್ಲಿ ಬೆಂಗಳೂರಿನಲ್ಲಿ ತನ್ನ ಮೊದಲ ಮಳಿಗೆಯನ್ನು ಉದ್ಘಾಟಿಸುವ ಮೂಲಕ 2022 ರಲ್ಲಿ ಬಳಸಿದ ಯೂಸ್ಡ್ ಕಾರ್ ಮಾರುಕಟ್ಟೆಗೆ ಕಾಲಿಟ್ಟಿತು. ಇದು ಟಿಕೆಎಂ ಅನ್ನು ಗ್ರಾಹಕರಿಗೆ ಸಂಪೂರ್ಣ ಒಇಎಂ (ಮೂಲ ಉಪಕರಣ ತಯಾರಕ) ನವೀಕರಿಸಿದ ಬಳಸಿದ ಕಾರುಗಳನ್ನು ನೀಡುವ ಭಾರತದ ಮೊದಲ ವಾಹನ ತಯಾರಕ ಕಂಪನಿಯನ್ನಾಗಿ ಮಾಡಿದೆ.

Continue Reading

ದೇಶ

Akasa Air: ಗೋರಖ್​ಪುರದಿಂದ ದೆಹಲಿ ಮತ್ತು ಬೆಂಗಳೂರಿಗೆ ಆಕಾಶ ಏರ್ ನೇರ ವಿಮಾನ

Akasa Air: ಗೋರಖಪುರದಿಂದ ದೆಹಲಿ ಮತ್ತು ಬೆಂಗಳೂರಿಗೆ ಪ್ರತಿನಿತ್ಯ ಹಾರಾಟ ಮಾಡುವಂತಹ ವಿಮಾನ ಸಂಪರ್ಕವನ್ನು ಕಲ್ಪಿಸಿದ ಆಕಾಶ ಏರ್ ಪ್ರಯಾಣಿಕರಿಗೆ ಅನೇಕ ಗುಣಮಟ್ಟದ ಉತ್ಪನ್ನಗಳು ಹಾಗೂ ವಿಭಿನ್ನ ಸೇವೆಗಳನ್ನು ಪರಿಚಯಿಸಿದೆ. ಪ್ರಯಾಣಿಕರಿಗೆ ಕೈಗೆಟಕುವ ದರಗಳಲ್ಲಿ ಎಲ್ಲವನ್ನು ಒಳಗೊಂಡ ಮತ್ತು ಅಗತ್ಯಕ್ಕೆ ತಕ್ಕಂತೆ ಬದಲಾಯಿಸಬಹುದಾದಂತಹ ರಜಾ ಪ್ಯಾಕೇಜ್ ಅನ್ನು ಕೂಡ ಆಯ್ಕೆ ಮಾಡಿಕೊಳ್ಳಬಹುದಾಗಿದೆ.

VISTARANEWS.COM


on

Akasa Air
Koo

ದೆಹಲಿ: ಭಾರತದ ಪ್ರಸಿದ್ಧ ವಿಮಾನಸಂಸ್ಥೆಯಾದ ಆಕಾಶ ಏರ್ (Akasa Air) ಗೋರಖ್​ಪುರದಿಂದ ದೆಹಲಿ ಮತ್ತು ಬೆಂಗಳೂರಿಗೆ ಪ್ರತಿನಿತ್ಯ ವಿಮಾನ ಸಂಪರ್ಕವನ್ನು ಕಲ್ಪಿಸಿದೆ. 2024 ಮೇ 29 ರಂದು ಸೇವೆ ಆರಂಭಗೊಂಡಿದ್ದು  ಮೊದಲ ವಿಮಾನ ಹಾರಾಟವು ಮಹಾಯೋಗಿ ಗೋರಖ್​ನಾಥ್ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 2:45 ಗಂಟೆಗೆ ಹೊರಟು, ಸಂಜೆ 4 ಗಂಟೆಗೆ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ತಲುಪಲಿದೆ.

ಇದು  ಉತ್ತರ ಪ್ರದೇಶದಲ್ಲಿ ಹೆಚ್ಚುತ್ತಿರುವ ಜನರ ಬೇಡಿಕೆಯನ್ನು ಪೂರೈಸುವ ಮೂಲಕ ಆಕಾಶ ಏರ್ ತನ್ನ  ಖ್ಯಾತಿಯನ್ನು ಹೆಚ್ಚಿಸಿಕೊಂಡಿದೆ. ಅಲ್ಲದೇ ಗೋರಖಪುರ ಹಾಗೂ ಬೆಂಗಳೂರ ನಡುವೆ ನೇರ ವಿಮಾನ ಸಂಪರ್ಕವನ್ನು ಕಲ್ಪಸಿದ ಏಕೈಕ ಸಂಸ್ಥೆ ಆಕಾಶ ಏರ್ ಎನಿಸಿಕೊಂಡಿದೆ. ದೇಶದಾದ್ಯಂತ ಮೆಟ್ರೋ ಹಾಗೂ ಮೆಟ್ರೋ ಇಲ್ಲದ ನಗರಗಳಿಗೆ ತಡೆರಹಿತ ಸಂಪರ್ಕ ಒದಗಿಸಬೇಕೆನ್ನುವ ವಿಮಾನ ಸಂಸ್ಥೆಯ ಧೋರಣೆಯನ್ನು ಎತ್ತಿ ಹಿಡಿದಿದೆ.

ಇತಿಹಾಸ ಮತ್ತು ಸಂಸ್ಕೃತಿಯ ಭಂಡಾರವಾದ ಗೋರಖಪುರ ನಗರ ಅತಿ ಶೀಘ್ರದಲ್ಲಿಯೇ ಆರ್ಥಿಕ ಕೇಂದ್ರವಾಗಿ ಪರಿವರ್ತನೆಗೊಳ್ಳುವುದರಲ್ಲಿ ಅನುಮಾನವಿಲ್ಲ. ಹಾಗೇ ಈ ನಗರ ತಮ್ಮ ಮೂಲ ಸೌಕರ್ಯಗಳ ಮೂಲಕ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಮೆಟ್ರೋ ನಗರಗಳಾದ ಬೆಂಗಳೂರು ಮತ್ತು ದೆಹಲಿಯಲ್ಲಿ ಪ್ರತಿನಿತ್ಯದ ವಿಮಾನ ಹಾರಾಟ ಮತ್ತು ವಿಮಾನ ಪ್ರಯಾಣದಲ್ಲಿ ಕೈಗೆಟಕ್ಕುವ ಆಯ್ಕೆಗಳನ್ನು ಒದಗಿಸಿ ಈ ಪ್ರದೇಶದ ಆರ್ಥಿಕ ಅಭಿವೃದ್ಧಿಗೆ ಇದು ಕಾರಣವಾಗಿದೆ.

ಈ ಸಂಸ್ಥೆಯ ವತಿಯಿಂದ ವಿಮಾನ ಹಾರಾಟ ಪ್ರಾರಂಭವಾದಾಗಿನಿಂದಲೂ ಉತ್ತರ ಪ್ರದೇಶದಲ್ಲಿ ಪ್ರಗತಿ ಹೆಚ್ಚುತ್ತಿದೆ. ಮತ್ತು  ಈ ಪ್ರದೇಶದಲ್ಲಿ ಇದು ತನ್ನ ಅಸ್ತಿತ್ವವನ್ನು ಬಲವಾಗಿ ನೆಲೆಯೂರಲಿದೆ ಎನ್ನಲಾಗಿದೆ. ಈಗ ಈ ರಾಜ್ಯದಲ್ಲಿ ಲಕ್ನೌ, ವಾರಣಾಸಿ, ಅಯೋಧ್ಯ, ಪ್ರಯಾಗ ಹಾಗೂ ಗೋರಖಪುರ ಸೇರಿದಂತೆ 5 ಮೆಟ್ರೋ ನಗರಗಳನ್ನು ದೇಶದಾದ್ಯಂತ ಇರುವ ಇತರ ಮೆಟ್ರೋಗಳೊಂದಿಗೆ ತಡೆರಹಿತವಾಗಿ ಸಂಪರ್ಕಿಸುತ್ತಿದೆ.

ಪ್ರಯಾಣಿಕರು ಆರಾಮದಾಯಕವಾದ ಪ್ರಯಾಣದ ಅನುಭವವನ್ನು ಪಡೆಯುತ್ತಿದ್ದಾರೆಯೇ ಎಂಬುದನ್ನು ತಿಳಿಯಲು ಆಕಾಶ ಏರ್ ಅನೇಕ ಗುಣಮಟ್ಟದ ಉತ್ಪನ್ನಗಳು ಹಾಗೂ ವಿಭಿನ್ನ ಸೇವೆಗಳನ್ನು ಪರಿಚಯಿಸಿದೆ. ಇದರಲ್ಲಿ ಕಾಲನ್ನು ಆರಾಮದಾಯಕವಾಗಿ ಇರಿಸಿಕೊಳ್ಳುವಂತೆ ಹೆಚ್ಚು ಸ್ಥಳಾವಕಾಶವಿರುವ ಸೀಟ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಹಾಗೇ ಇದರಲ್ಲಿ ಯುಎಸ್ ಬಿ ಪೋರ್ಟ್ಸ್ ಅಳವಡಿಸಿದ್ದು, ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸುವಾಗಲೇ ತಮ್ಮ ಮೊಬೈಲ್ , ಇತರ ಸಾಧನಗಳನ್ನು ಚಾರ್ಜ್ ಮಾಡಬಹುದಾಗಿದೆ. ಇಲ್ಲಿ ‘café akasa’ ದ ಮೂಲಕ ಆಹಾರ ಸೇವೆಯನ್ನು ಒದಗಿಸಲಾಗುತ್ತದೆ. ಇದರಲ್ಲಿ ಹಬ್ಬದ ಮೆನುಗಳು, ಹಾಗೂ ಕೊಂಬುಚಾದಂತಹ ಆಯ್ಕೆಗಳಿವೆ. ಒಟ್ಟಾರೆ ಇಲ್ಲಿ ಆರೋಗ್ಯಕರವಾದ ಸ್ವಾದಿಷ್ಟ ಭೋಜನವನ್ನು ಪ್ರಯಾಣಿಕರಿಗೆ ಒದಗಿಸುತ್ತದೆ. ಹಾಗೇ ಪ್ರಯಾಣಿಕರು ತಮ್ಮ ಜೊತೆ ತಮ್ಮ ಸಾಕು ಪ್ರಾಣಿಗಳನ್ನು ಅವುಗಳ ತೂಕದ ಆಧಾರದ ಮೇಲೆ ಕ್ಯಾಬಿನ್ ಒಳಗೆ ಅಥವಾ ಕಾರ್ಗೋದಲ್ಲಿ ಕರೆದೊಯ್ಯಲು ಅವಕಾಶವಿದೆ. ಹಾಗೇಆಕಾಶಏರ್ ದೃಷ್ಟಿಮಾಂದ್ಯತೆಯಿರುವವರಿಗಾಗಿ ಬ್ರೇಲ್ ನಲ್ಲಿ ತನ್ನ ಸುರಕ್ಷತಾ ಸೂಚನಾಕಾರ್ಡ್ ಮತ್ತು ಆನ್ ಬೋರ್ಡ್ ಮೆನು ಕಾರ್ಡ್ ಪರಿಚಯಿಸಿದೆ. ಪ್ರಯಾಣಿಕರಿಗೆ ಕೈಗೆಟಕುವ ದರಗಳಲ್ಲಿ ಎಲ್ಲವನ್ನು ಒಳಗೊಂಡ ಮತ್ತು ಅಗತ್ಯಕ್ಕೆ ತಕ್ಕಂತೆ ಬದಲಾಯಿಸಬಹುದಾದಂತಹ ರಜಾ ಪ್ಯಾಕೇಜ್ಅನ್ನು ಕೂಡ ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ: Air India Flight: ಏರ್ ಇಂಡಿಯಾ ವಿಮಾನ 20 ಗಂಟೆ ವಿಳಂಬ; ಎಸಿ ಇಲ್ಲದೆ ಪ್ರಜ್ಞೆ ತಪ್ಪಿ ಬಿದ್ದ ಪ್ರಯಾಣಿಕರು

ಆಕಾಶ ಏರ್ ನ ನಿರಂತರವಾದ ಕಾರ್ಯ ಚರಣೆ ಸಾಮರ್ಥ್ಯಗಳು ಹಾಗೂ ಪ್ರಯಾಣಿಕರ ಮೆಚ್ಚುಗೆಯ ಮೂಲಕ ಅದು ಭಾರತದ ನಂಬರ್ ಒನ್ ಆಗಿದೆ ಮತ್ತು  ಕಳೆದ 12 ತಿಂಗಳುಗಳಿಂದ 85%ಗಿಂತ ಹೆಚ್ಚಿನ ಸರಾಸರಿ ಪ್ರಯಾಣಿಕರು ಇದರಲ್ಲಿ ಪ್ರಯಾಣಿಸುತ್ತಿದ್ದಾರೆ ಎನ್ನಲಾಗಿದೆ.

Continue Reading

ವೈರಲ್ ನ್ಯೂಸ್

Viral Video: ಹೃದಯ ಸ್ತಬ್ಧಗೊಳಿಸುವ ಈ 3ಡಿ ದೃಶ್ಯ ನೋಡಿ! ಇನ್ನಾದರು ಸುರಕ್ಷಿತವಾಗಿ ವಾಹನ ಚಲಾಯಿಸಿ

3ಡಿ ಕಲಾವಿದ ಮಜಿದ್ ಮೌಸವಿ ಅವರ ಕೈ ಚಳಕದಿಂದ ನಿರ್ಮಾಣವಾಗಿರುವ ಸುರಕ್ಷಿತ ವಾಹನ ಚಾಲನೆ ಬಗ್ಗೆ ಎಚ್ಚರಿಕೆ ನೀಡುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, (Viral Video) ವೀಕ್ಷಕರ ಹೃದಯ ಸ್ತಬ್ದಗೊಳಿಸುವಂತಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಎಲ್ಲರನ್ನೂ ಜಾಗೃತಗೊಳಿಸುವಂತೆ ಮಾಡಿದೆ ಮಾತ್ರವಲ್ಲದೇ ಸಾಕಷ್ಟು ಚರ್ಚೆಯನ್ನೂ ಹುಟ್ಟು ಹಾಕಿದೆ.

VISTARANEWS.COM


on

By

Viral Video
Koo

ಕಲ್ಪನೆ ಮತ್ತು ವಾಸ್ತವವನ್ನು ಸೇರಿಸಿ ಮಾಡುವ ಆಕರ್ಷಕ ವಿಡಿಯೋಗಳಿಗೆ (video) ಹೆಸರುವಾಸಿಯಾಗಿರುವ ಪ್ರತಿಭಾವಂತ 3ಡಿ ಕಲಾವಿದ (3D artist) ಮಜಿದ್ ಮೌಸವಿ (Majid Mousavi) ಇದೀಗ ಮತ್ತೊಂದು ವಿಡಿಯೋವೊಂದನ್ನು (Viral Video) ಸಾಮಾಜಿಕ ಜಾಲತಾಣದಲ್ಲಿ (social media) ಹಾಕಿದ್ದು, ಇದು ಸಾಕಷ್ಟು ಮಂದಿಯ ಗಮನ ಸೆಳೆದಿದೆ.

ಅವರ ಇತ್ತೀಚಿನ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಎಲ್ಲರನ್ನೂ ಜಾಗೃತಗೊಳಿಸುವಂತೆ ಮಾಡಿದೆ ಮಾತ್ರವಲ್ಲದೇ ಸಾಕಷ್ಟು ಚರ್ಚೆಯನ್ನೂ ಹುಟ್ಟು ಹಾಕಿದೆ.

ವಿಡಿಯೋದಲ್ಲಿ ಏನಿದೆ?

ಈ ವಿಡಿಯೋ ನೆಟ್ಟಿಗರನ್ನು ಚಿಂತೆಗೀಡು ಮಾಡುವಂತೆ ಮಾಡಿರುವುದು ಮಾತ್ರವಲ್ಲ ಜಾಗೃತಿಯನ್ನೂ ಮೂಡಿಸಿದೆ. ವಾಹನ ಚಾಲನೆ ಮಾಡುವಾಗ ವೇಗದ ಮಿತಿಗಳನ್ನು ಅನುಸರಿಸುವ ಪ್ರಾಮುಖ್ಯತೆಯನ್ನು ಅವರು ಈ ವಿಡಿಯೋ ಮೂಲಕ ಹೇಳಿದ್ದಾರೆ.

ಅಜಾಗರೂಕ ಚಾಲನೆಯ ಪರಿಣಾಮಗಳ ಕುರಿತು ಹೇಳುವ ಈ ವಿಡಿಯೋದಲ್ಲಿ ಖಾಲಿ ರಸ್ತೆಯಲ್ಲಿ ಬೈಕರ್ ವೇಗವಾಗಿ ವಾಹನ ಚಲಾಯಿಸುವುದನ್ನು ತೋರಿಸುತ್ತದೆ.

ಒಬ್ಬ ಬೈಕ್ ಸವಾರ ಟ್ರಕ್ ಅನ್ನು ಹಿಂದಿಕ್ಕಲು ಪ್ರಯತ್ನಿಸುತ್ತಾನೆ. ಆಗ ಅವನು ರಸ್ತೆಯ ಇನ್ನೊಂದು ಬದಿಗೆ ಚಲಿಸುತ್ತಾನೆ ಮತ್ತು ವೇಗವಾಗಿ ಬರುವ ಟ್ರಕ್‌ ಗೆ ಡಿಕ್ಕಿಯಾಗುತ್ತಾನೆ. ಅಲ್ಲಿಗೆ ಒಂದು ವಿಡಿಯೋ ಕ್ಲಿಪ್ ನಿಲ್ಲುತ್ತದೆ.

ಮುಂದಿನ ಶಾಟ್‌ನಲ್ಲಿ ರಸ್ತೆ ಬದಿಯಲ್ಲಿ ನಿಂತಿರುವ ಭೂತದ ಆಕೃತಿಯನ್ನು ಕಾಣಬಹುದು. ವಿಡಿಯೋದಲ್ಲಿ ಬೈಕರ್ ಮತ್ತು ಟ್ರಕ್ ಡ್ರೈವರ್ ನಡುವಿನ ಅಪಘಾತವನ್ನು ತೋರಿಸಲಾಗಿದೆ.


ಈ ಪೋಸ್ಟ್ ಅನ್ನು ಒಂದು ವಾರದ ಹಿಂದೆ ಇನ್ ಸ್ಟಾ ಗ್ರಾಮ್ ನಲ್ಲಿ ಹಂಚಿಕೊಳ್ಳಲಾಗಿದೆ. ಬಳಿಕ ಇದು 156 ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆಯನ್ನು ಪಡೆದುಕೊಂಡಿದೆ. ಪೋಸ್ಟ್ 11 ಮಿಲಿಯನ್ ಲೈಕ್‌ಗಳನ್ನು ಪಡೆದಿದ್ದು, ಇದರ ಸಂಖ್ಯೆಗಳು ಹೆಚ್ಚುತ್ತಿವೆ. ಕೆಲವರು ತಮ್ಮ ಪ್ರತಿಕ್ರಿಯೆಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Rahul Dravid: ಸುದ್ದಿಗೋಷ್ಠಿಯಲ್ಲಿ ಉರ್ದು ಮಾತನಾಡಿದ ರಾಹುಲ್​ ದ್ರಾವಿಡ್​; ವಿಡಿಯೊ ವೈರಲ್​

ನೆಟ್ಟಿಗರ ಪ್ರತಿಕ್ರಿಯೆ ಹೇಗಿದೆ?

ಒಬ್ಬ ವ್ಯಕ್ತಿ ಕಾಮೆಂಟ್ ಮಾಡಿ, ಓ ದೇವರೇ. ನಾನು ತುಂಬಾ ಹೆದರುತ್ತಿದ್ದೆ. ನಾನು ಬೈಕ್ ಓಡಿಸುತ್ತಿದ್ದೇನೆ ಎಂದು ಭಾವಿಸಿದೆ ಮತ್ತು ಸಣ್ಣ ಹೃದಯಾಘಾತವಾದಂತಾಯಿತು ಎಂದು ಹೇಳಿದ್ದಾನೆ.

ಇನ್ನೊಬ್ಬ, ನನ್ನ ಆತ್ಮವು ನನ್ನ ದೇಹವನ್ನು ತೊರೆದಿದೆ! ಅದ್ಭುತ ಎಡಿಟಿಂಗ್ ಎಂದು ಹೇಳಿದ್ದಾರೆ.

ಮತ್ತೊಬ್ಬ, ಹಾಗಾಗಿಯೇ ರಸ್ತೆಗಳಲ್ಲಿ ಜಾಗರೂಕರಾಗಿರಬೇಕು. ಅದು ಖಾಲಿಯಾಗಿರುವುದರಿಂದ ಅಜಾಗರೂಕರಾಗಿರಬೇಕೆಂದು ಅರ್ಥವಲ್ಲ ಎಂದು ತಿಳಿಸಿದ್ದಾರೆ. ಇನ್ನೊಬ್ಬರು ಇದು ಆಟ ಎಂದು ಹೇಳುವವರಿಗೆ ಇದು ನಿಜ ಜೀವನದಲ್ಲಿಯೂ ನಡೆಯುತ್ತದೆ. ಜಾಗರೂಕರಾಗಿರಿ ಎಂದು ತಿಳಿಸಿದ್ದಾರೆ. ಮತ್ತೊಬ್ಬರು ಇದು ನನಗೆ ಹೃದಯಾಘಾತವನ್ನು ನೀಡಿತು ಎಂದು ಹೇಳಿದ್ದಾರೆ.

Continue Reading
Advertisement
Yuva Rajkumar Allegation of cruelty against wife
ಸ್ಯಾಂಡಲ್ ವುಡ್5 mins ago

Yuva Rajkumar: ರಾಘಣ್ಣ ದಂಪತಿ ವಿರೋಧದ ನಡುವೆಯೂ ಯುವನಿ​ಗೆ ಮದ್ವೆ ಮಾಡಿಸಿದ್ದು ‘ಅಪ್ಪು’!

UGCET 2024
ಬೆಂಗಳೂರು7 mins ago

UGCET 2024: ಸಿಇಟಿ ಅಪ್‌ಡೇಟ್‌; ಮೊದಲ ದಿನ 250 ವಿಕಲಚೇತನರ ವೈದ್ಯಕೀಯ ತಪಾಸಣೆ

Reasi Terror Attack
ಪ್ರಮುಖ ಸುದ್ದಿ13 mins ago

Reasi Terror Attack : ಉಗ್ರರ ಮುಂದೆ ಸತ್ತಂತೆ ನಟಿಸಿ ಬದುಕುಳಿದ ಹಿಂದೂ ಯಾತ್ರಿಗಳು…

murder case
ಮೈಸೂರು29 mins ago

Murder Case : ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯ ಬರ್ಬರ ಕೊಲೆ

pm narendra modi leopord
ಪ್ರಮುಖ ಸುದ್ದಿ30 mins ago

PM Narendra Modi: ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಿಗೂಢ ಪ್ರಾಣಿ! ವಿಡಿಯೋ ಇದೆ ನೋಡಿ

Yuva Rajkumar son of raghavendra Rajkumar yuva divorce
ಸ್ಯಾಂಡಲ್ ವುಡ್35 mins ago

Yuva Rajkumar: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಯುವ ರಾಜ್​ಕುಮಾರ್​ ; ಅಣ್ಣಾವ್ರ ಕುಟುಂಬದಲ್ಲಿ ಇದೇ ಮೊದಲ ಪ್ರಕರಣ!

Congress Guaratee
ಕರ್ನಾಟಕ44 mins ago

Congress Guarantee: ಗ್ಯಾರಂಟಿ ನಿಲ್ಲಿಸುವ ಮಾತು ಬೇಡ: ಕೈ ನಾಯಕರಿಗೆ ಎಚ್.ಎಂ ರೇವಣ್ಣ ಎಚ್ಚರಿಕೆ

Suresh Gopi
ದೇಶ45 mins ago

Suresh Gopi : ಪ್ರಮಾಣವಚನ ಸ್ವೀಕರಿಸಿದ ಒಂದೇ ಗಂಟೆಯೊಳಗೆ ಸಚಿವ ಸ್ಥಾನ ಬೇಡ ಎಂದ ಸುರೇಶ್​ ಗೋಪಿ!

Physical Abuse
ಮೈಸೂರು1 hour ago

Physical Abuse : ಪಿಕ್‌ ಅಪ್, ಡ್ರಾಪ್ ನೆಪದಲ್ಲಿ ಸಲುಗೆ; ಅಂಕಲ್ ಗಾಳಕ್ಕೆ ಸಿಲುಕಿದ ಬಾಲಕಿಯ ನರಳಾಟ

Election Commission
ಪ್ರಮುಖ ಸುದ್ದಿ1 hour ago

Election Commission : ಜುಲೈ 10ರಂದು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌