Here's a list of records created by RCB in their match against SRH IPL 2023 : ಎಸ್​ಆರ್​ಎಚ್​ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡದಲ್ಲಿ ಸೃಷ್ಟಿಯಾದ ದಾಖಲೆಗಳ ಪಟ್ಟಿ ಇಲ್ಲಿದೆ - Vistara News

ಕ್ರಿಕೆಟ್

IPL 2023 : ಎಸ್​ಆರ್​ಎಚ್​ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡದಲ್ಲಿ ಸೃಷ್ಟಿಯಾದ ದಾಖಲೆಗಳ ಪಟ್ಟಿ ಇಲ್ಲಿದೆ

ವಿರಾಟ್ ಕೊಹ್ಲಿ ಹಾಗೂ ಫಾಫ್​ ಡು ಪ್ಲೆಸಿಸ್​ ಅಬ್ಬರದ ಬ್ಯಾಟಿಂಗ್ ನಡೆಸುವ ಮೂಲಕ ಹಲವಾರು ದಾಖಲೆಗಳನ್ನು ಸೃಷ್ಟಿಸಿಕೊಂಡಿದ್ದಾರೆ.

VISTARANEWS.COM


on

Here's a list of records created by RCB in their match against SRH
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್​​: ಐಪಿಎಲ್ 16ನೇ ಆವೃತ್ತಿಯ (IPL 2023) 65ನೇ ಪಂದ್ಯದಲ್ಲಿ ಸನ್​ ರೈಸರ್ಸ್​ ಹೈದರಾಬಾದ್​ ತಂಡ ಆರ್​ಸಿಬಿ ತಂಡ ಎಂಟು ವಿಕೆಟ್​ಗಳ ಸುಲಭ ಜಯ ದಾಖಲಿಸಿತು. ಈ ಗೆಲುವಿನ ಮೂಲಕ ಹಾಲಿ ಆವೃತ್ತಿಯ ಐಪಿಎಲ್​ನ ಪ್ಲೇಆಫ್​ ಹಾದಿಯಲ್ಲಿ ಇನ್ನೊಂದು ಹೆಜ್ಜೆ ಮುಂದಕ್ಕೆ ಇಟ್ಟಿತು. ಏತನ್ಮಧ್ಯೆ,, ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ (100) ಶತಕ ಬಾರಿಸಿ ದಾಖಲೆ ಮಾಡಿದ್ದಾರೆ. ಅಂತೆಯೇ ಈ ಪಂದ್ಯದಲ್ಲಿ ಹಲವಾರು ದಾಖಲೆಗಳು ಸೃಷ್ಟಿಯಾಗಿವೆ. ಅವುಗಳು ಯಾವುವು ಎಂದು ನೋಡೋಣ.

ಈ ಪಂದ್ಯದ ಶತಕದ ಮೂಲಕ ವಿರಾಟ್​ ಕೊಹ್ಲಿ ಶ್ರೀಮಂತ ಕ್ರಿಕೆಟ್​ ಲೀಗ್​ ಐಪಿಎಲ್​ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ದಾಖಲೆಯನ್ನು ಮಾಜಿ ಆಟಗಾರ ಕ್ರಿಸ್​ ಗೇಲ್​ ಜತೆ ಹಂಚಿಕೊಂಡರು. ವಿರಾಟ್ ಕೊಹ್ಲಿ ಪಾಲಿಗೆ ಇದು ಆರನೇ ಶತಕ . ವೆಸ್ಟ್​ ಇಂಡೀಸ್​ ನ ದೈತ್ಯ ಆಟಗಾರ ಕ್ರಿಸ್​ ಗೇಲ್​ ಆರು ಶತಕಗಳನ್ನು ಬಾರಿಸಿ ಗರಿಷ್ಠ ಶತಕಗಳನ್ನು ಬಾರಿಸಿದವರ ಸಾಲಿನಲ್ಲಿ ಅಗ್ರಗಣ್ಯ ಎನಿಸಿಕೊಂಡಿದ್ದರು. ವಿರಾಟ್ ಕೊಹ್ಲಿ ಆ ದಾಖಲೆಯನ್ನು ಸರಿಗಟ್ಟಿದ್ದಾರೆ. ಕೊಹ್ಲಿ ಈಗಲೂ ಆಡುತ್ತಿರುವ ಆಟಗಾರನಾಗಿರುವ ಕಾರಣ ದಾಖಲೆ ವಿಚಾರಕ್ಕೆ ಬಂದಾಗ ಒಂದು ಹೆಜ್ಜೆ ಮುಂದಿಟ್ಟಂತಾಗಿದೆ.

ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ 63 ಎಸೆತಗಳಲ್ಲಿ ಶತಕ ಬಾರಿಸುವ ಜತೆಗೆ ಐಪಿಎಲ್​ನಲ್ಲಿ 7500 ರನ್ ಬಾರಿಸಿದ ದಾಖಲೆಯನ್ನೂ ಮಾಡಿದರು. ಈ ಮೂಲಕ ಇಂಡಿಯನ್ ಪ್ರೀಮಿಯರ್​ ಲೀಗ್​ನಲ್ಲಿ ಗರಿಷ್ಠ ರನ್ ಬಾರಿಸಿದ ಏಕೈಕ ಆಟಗಾರ ಎಂಬ ಖ್ಯಾತಿಯನ್ನು ತಮ್ಮದಾಸಿಕೊಂಡರು.

ನಾಲ್ಕು ವರ್ಷಗಳ ಬಳಿಕ ಶತಕ

ವಿರಾಟ್​ ಕೊಹ್ಲಿ ಪಾಲಿಗೆ ಇದು ನಾಲ್ಕು ವರ್ಷಗಳ ಬಳಿಕ ಬಾರಿಸಿದ ಶಕವಾಗಿದೆ. 2019ನೇ ಅವೃತ್ತಿಯಲ್ಲಿ ವಿರಾಟ್​ ಕೊಹ್ಲಿ ಕೋಲ್ಕೊತಾ ನೈಟ್​ ರೈಡರ್ಸ್​ ತಂಡ ವಿರುದ್ಧ ಶತಕ ಬಾರಿಸಿದ್ದರು. ಆ ಬಳಿಕದ ಮೂರು ಆವೃತ್ತಿಯಲ್ಲಿ ಅವರ ಬ್ಯಾಟಿಂಗ್ ವೈಖರಿ ಕಳೆಗುಂದಿತ್ತು. ಇದೀಗ ಎಸ್ಆರ್​ಎಚ್​ ವಿರುದ್ಧ ಮತ್ತೆ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದಾರೆ. ಹಾಲಿ ಆವೃತ್ತಿಯಲ್ಲಿ ವಿರಾಟ್​ ಕೊಹ್ಲಿ ಆರು ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಒಟ್ಟಾರೆ ಆಡಿರುವ 13 ಪಂದ್ಯಗಳಲ್ಲಿ 538 ರನ್​ ಬಾರಿಸಿದ್ದು ಆರೆಂಜ್ ಕ್ಯಾಪ್​ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಇಷ್ಟೊಂದು ಇನಿಂಗ್ಸ್​ಗಳಲ್ಲಿ 52 ಫೊರ್​ ಹಾಗೂ 15 ಸಿಕ್ಸರ್​ಗಳನ್ನು ಬಾರಿಸಿದ್ದಾರೆ.

ಕೊಹ್ಲಿ- ಪ್ಲೆಸಿಸ್​ ಜತೆಯಾಟ ದಾಖಲೆಗಳು

ವಿರಾಟ್​ ಕೊಹ್ಲಿ_ ಫಾಪ್ ಡು ಪ್ಲೆಸಿಸ್​ ಆರ್​ಸಿಬಿ ಪರವಾಗಿ ನಾಲ್ಕನೇ ಬಾರಿ ಶತಕದ ಜತೆಯಾಟವನ್ನಾಡಿದ ದಾಖಲೆ ಮಾಡಿದರು. ಈ ಹಿಂದೆ ಅವರು ವೆಸ್ಟ್​ ಇಂಡೀಸ್​ ದೈತ್ಯ ಬ್ಯಾಟ್ಸ್​ಮನ್​ ಕ್ರಿಸ್​ ಗೇಲ್​ ಅವರೊಂದಿಗೆ ನಾಲ್ಕು ಬಾರಿ ಶತಕದ ಜತೆಯಾಟ ನೀಡಿದ್ದರು. ಈ ಮೂಲಕ ಫಾಫ್​ ಡು ಪ್ಲೆಸಿಸ್​ ಹಾಗೂ ವಿರಾಟ್​ ಕೊಹ್ಲಿ ಹೊಸ ದಾಖಲೆಯೊಂದನ್ನು ಸೃಷ್ಟಿಸಿದ್ದಾರೆ.

ಇದೇ ವೇಳೆ ವಿರಾಟ್ ಕೊಹ್ಲಿ ಹಾಗೂ ಪ್ಲೆಸಿಸ್ ಐಪಿಎಲ್​ ತಂಡವೊಂದರ ಪರ ಆವೃತ್ತಿಯೊಂದರಲ್ಲಿ ಅತ್ಯಧಿಕ ಬಾರಿ ಆರಂಭಿಕರಾಗಿ ಅರ್ಧ ಶತಕದ ಜತೆಯಾಟವಾಡಿದ ದಾಖಲೆಯನ್ನೂ ಸೃಷ್ಟಿಸಿದರು. ವಿರಾಟ್​ ಹಾಗೂ ಪ್ಲೆಸಿಸ್ ಅವರದ್ದು ಇದು ಆರನೇ ಅರ್ಧ ಶತಕದ ಜತೆಯಾಟವಾಗಿದೆ. ಈ ಹಿಂದೆ 2019ರಲ್ಲಿ ಎಸ್​ಆರ್​ಎಚ್ ತಂಡದ ಜಾನಿ ಬೇರ್​ಸ್ಟೋವ್​ ಹಾಗೂ ಡೇವಿಡ್​ ವಾರ್ನರ್​ ಏಳು ಬಾರಿ 50 + ರನ್​ ಬಾರಿಸಿದ್ದರು. ಈ ಮೂಲಕ ಮತ್ತೊಂದು ದಾಖಲೆಯನ್ನು ಸರಿಗಟ್ಟಿದಂತಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Rishabh Pant : ವಿಶ್ವಕಪ್​​ಗೆ ಮುನ್ನ ಟೀಮ್ ಇಂಡಿಯಾ ಜೆರ್ಸಿ ಧರಿಸಿದ ರಿಷಭ್ ಪಂತ್ ವಿಡಿಯೋ ಹಂಚಿಕೊಂಡ ಬಿಸಿಸಿಐ

Rishabh Pant:

VISTARANEWS.COM


on

Rishab Pant
Koo

ಬೆಂಗಳೂರು: ಭೀಕರ ಕಾರು ಅಫಘಾತದ ಬಳಿಕ ಚೇತರಿಸಿಕೊಂಡು ಒಂದು ವರ್ಷಕ್ಕೂ ಹೆಚ್ಚು ಸಮಯದ ನಂತರ ರಾಷ್ಟ್ರೀಯ ಕರ್ತವ್ಯಕ್ಕೆ ಹಾಜರಾಗಿರುವ ರಿಷಭ್ ಪಂತ್​ಗೆ ಬಿಸಿಸಿಐ ವಿಶೇಷ ಗೌರವ ಸಲ್ಲಿದೆ ಭಾರತದ ವಿಕೆಟ್ ಕೀಪರ್ ರಿಷಭ್ ಪಂತ್ ಹೊಸ ನೀಲಿ ಜೆರ್ಸಿಯಲ್ಲಿ ಕಾಣಿಸಿಕೊಂಡಿರುವ ಅವರ ವಿಡಿಯೊವನ್ನು ಶೇರ್ ಮಾಡಿದೆ. ಸುಂದರ ಕ್ರಿಕೆಟ್ ಆಟಗಾರ ಮುಂದಿನ ತಿಂಗಳು ನಡೆಯಲಿರುವ ಟಿ 20 ವಿಶ್ವಕಪ್ 2024 ರಲ್ಲಿ ಮತ್ತೆ ತಮ್ಮ ದೇಶಕ್ಕಾಗಿ ಆಡುವ ವಿಷಯವನ್ನು ಸಂಭ್ರಮಿಸುವಂತೆ ಮಾಡಿದೆ. ಜೂನ್ 5ರಂದು ನ್ಯೂಯಾರ್ಕ್​ನಲ್ಲಿ ಐರ್ಲೆಂಡ್ ವಿರುದ್ಧ ಭಾರತ ತನ್ನ ಮೊದಲ ಪಂದ್ಯವನ್ನಾಡಲಿದೆ. ತಂಡದ ಮತ್ತೊಬ್ಬ ವಿಕೆಟ್ ಕೀಪರ್-ಬ್ಯಾಟರ್​ ಸಂಜು ಸ್ಯಾಮ್ಸನ್​ಗಿಂತ ಮುಂಚಿತವಾಗಿ ಪಂತ್ ಅವರನ್ನು ಆರಂಭಿಕ ಇಲೆವೆನ್​​ನಲ್ಲಿ ಆಯ್ಕೆ ಮಾಡಿದರೆ, ಅದು ಮೆನ್ ಇನ್ ಬ್ಲೂ ತಂಡದ ಐತಿಹಾಸಿಕ ಕ್ಷಣವಾಗಬಹುದು.

ಪಂತ್ ಪಿಚ್​ಗೆ ಮರಳುವ ಮೊದಲು ಹೃದಯಪೂರ್ವಕ ಸಂದೇಶದೊಂದಿಗೆ ಭಾರತೀಯ ಶರ್ಟ್​ನಲ್ಲಿ ತಮ್ಮ ಹೊಸ ನೋಟದ ಬಗ್ಗೆ ತಮ್ಮ ಅಭಿಮಾನಿಗಳಿಗೆ ಒಂದು ಇಣುಕು ನೋಟವನ್ನು ನೀಡಿದ್ದಾರೆ.

“ಸಿದ್ಧ. ಸಮರ್ಥ. ನಿರ್ಧರಿಸಲಾಗಿದೆ! ಪ್ರತಿಕೂಲ ಪರಿಸ್ಥಿತಿಯಿಂದ ಗೆಲುವಿನವರೆಗೆ, ಐಸಿಸಿ ಪುರುಷರ ಟಿ 20 ವಿಶ್ವಕಪ್​ಗೆ ರಿಷಭ್ ಪಂತ್​ ಅವರ ಪ್ರಯಾಣವು ದೃಢನಿಶ್ಚಯಕ್ಕೆ ಸಾಕ್ಷಿ. ಜೂನ್ 5 ರಿಂದ ನಡೆಯಲಿರುವ ಟಿ20 ವಿಶ್ವ ಕಪ್​ನಲ್ಲಿ ವಿಕೆಟ್ ಕೀಪರ್​, “ಎಂದು ಪೋಸ್ಟ್​​ನಲ್ಲಿ ಬರೆಯಲಾಗಿದೆ.

ಇದನ್ನೂ ಓದಿ: Rishabh Pant : ವಿಶ್ವಕಪ್​​ಗೆ ಮುನ್ನ ಟೀಮ್ ಇಂಡಿಯಾ ಜೆರ್ಸಿ ಧರಿಸಿದ ರಿಷಭ್ ಪಂತ್ ವಿಡಿಯೋ ಹಂಚಿಕೊಂಡ ಬಿಸಿಸಿಐ

ಭಯಾನಕ ಘಟನೆಯ ನಂತರ ಪಂತ್ ಮರಳಿದ್ದಾರೆ

ಡಿಸೆಂಬರ್ 30, 2022 ರ ಸಂಜೆ, ಪಂತ್ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ನಡೆದ ಭಯಾನಕ ಕಾರು ಅವಘಡದಲ್ಲಿ ಸಿಲುಕಿದ್ದರು. ಅವರ ವಾಹನವು ರಸ್ತೆ ಬಿಟ್ಟು ಹೆಚ್ಚಿನ ವೇಗದಲ್ಲಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಹೊಸ ವರ್ಷದ ಮುನ್ನಾದಿನವನ್ನು ಕುಟುಂಬದೊಂದಿಗೆ ಕಳೆಯಲು ಮುಂಜಾನೆ ಮನೆಗೆ ಪ್ರಯಾಣಿಸುತ್ತಿದ್ದಾಗ ಪಂತ್ ಅವರ ಕಾರಿಗೆ ಬೆಂಕಿ ಹೊತ್ತಿಕೊಂಡಿತ್ತು.

ಆ ಪ್ರದೇಶದ ಸ್ಥಳೀಯರು ಅವರನ್ನು ಉರಿಯುತ್ತಿರುವ ವಾಹನದಿಂದ ಹೊರಗೆಳೆದು ಆಸ್ಪತ್ರೆಗೆ ಸಾಗಿಸಿ ಜೀವ ಉಳಿಸಿದ್ದರು. ಪುನಶ್ಚೇತನ ಮತ್ತು ಚೇತರಿಕೆ ಪ್ರಕ್ರಿಯೆಯನ್ನು ಪ್ರಾರಂಭಿಸುವ ಮೊದಲು, ಪಂತ್ ಅವರ ಮೊಣಕಾಲುಗಳು ಮತ್ತು ದೇಹದ ಇತರ ಭಾಗಗಳಲ್ಲಿ ಹಲವಾರು ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗಿತ್ತು. ಸಂಪೂರ್ಣ ಆರೋಗ್ಯಕ್ಕೆ ಮರಳಲು ಅವರಿಗೆ ಒಂದು ವರ್ಷಕ್ಕಿಂತ ಹೆಚ್ಚು ಸಮಯ ಹಿಡಿಯಿತು. ಆದಾಗ್ಯೂ ಅಷ್ಟೊಂದು ಭೀಕರ ಅಪಘಾತದ ಬಳಿಕ ಅವರು ಚೇತರಿಸಿಕೊಂಡ ವೇಗ ಅಸಾಮಾನ್ಯವಾಗಿದೆ.

Continue Reading

ಕ್ರೀಡೆ

T20 World Cup : ಭಾರತ- ಪಾಕ್ ಪಂದ್ಯ ಐಸಿಸ್​ ಉಗ್ರರಿಂದ ಬಾಂಬ್ ಬೆದರಿಕೆ

T20 World Cup: ವರದಿಯ ಪ್ರಕಾರ, ಐಸಿಸ್ ಅನುಯಾಯಿಗಳು Matrix.org ನೆಟ್ವರ್ಕ್​ನಲ್ಲಿ ಆನ್ಲೈನ್ ಚಾಟ್ ರೂಮ್​​ಗಳನ್ನು ಬಳಸುತ್ತಿರುವುದು ಕಂಡುಬಂದಿದೆ, ಅಲ್ಲಿ ಅವರು “ನಿಮ್ಮ ಶಸ್ತ್ರಾಸ್ತ್ರವನ್ನು ಸಿದ್ಧಪಡಿಸಿ, ನಿಮ್ಮ ಯೋಜನೆಯನ್ನು ರೂಪಿಸಿ ಮತ್ತು ನಂತರ ನಮ್ಮವರನ್ನು ಆಕರ್ಷಿಸಿ” ಎಂಬ ಸಂದೇಶ ಹಾಕಿದ್ದಾರೆ. ವಿಶೇಷವಾಗಿ ಟಿ 20 ವಿಶ್ವಕಪ್​ನಂತ ಪ್ರಮುಖ ಕ್ರೀಡಾಕೂಟಗಳನ್ನು ಗುರಿಯಾಗಿಸುವ ಬಗ್ಗೆ ಈ ಸಂದೇಶದಲ್ಲಿ ತಿಳಿಸಲಾಗಿದೆ.

VISTARANEWS.COM


on

T20 World Cup
Koo

ಬೆಂಗಳೂರು: ವೆಸ್ಟ್ ಇಂಡೀಸ್ ಮತ್ತು ಯುಎಸ್ಎ ಜಂಟಿಯಾಗಿ ಆತಿಥ್ಯ ವಹಿಸಲಿರುವ ಮುಂಬರುವ ಟಿ 20 ವಿಶ್ವಕಪ್ 2024 ಗಾಗಿ ಅಭ್ಯಾಸ ಪಂದ್ಯಗಳು ಆರಂಭಗೊಂಡಿವೆ. ಈ ಮೆಗಾ-ಈವೆಂಟ್ ಜೂನ್ 1 ರಂದು ಪ್ರಾರಂಭವಾಗಲಿದೆ. ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಜಾಗತಿಕ ಕ್ರಿಕೆಟ್ ಟೂರ್ನಿಯನ್ನು ಆಯೋಜಿಸಲಾಗುತ್ತಿದೆ. ಏತನ್ಮಧ್ಯೆ ಟೂರ್ನಿಗೆ ಐಸಿಸ್​ (ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್​ ಸಿರಿಯಾ ಗ್ರೂಪ್) ಬೆದರಿಕೆ ಒಡ್ಡಿದೆ. ಉಗ್ರರು ಪ್ರಸಾರ ಮಾಡಿದ ಆಘಾತಕಾರಿ ಸಂದೇಶದಿಂದ ಕ್ರಿಕೆಟ್ ಜಗತ್ತು ತಲ್ಲಣಗೊಂಡಿದೆ. ಭಯೋತ್ಪಾದಕ ಬೆದರಿಕೆಯು ಈವೆಂಟ್​ಗೆ ಸಂಬಂಧಿಸಿದ ಸಂಘಟಕರು ಮತ್ತು ಸದಸ್ಯರ ಮೇಲೆ ಮಾತ್ರವಲ್ಲದೆ, ಪಂದ್ಯಾವಳಿಗೆ ಸಜ್ಜಾಗುತ್ತಿರುವ ಕ್ರಿಕೆಟ್ ಉತ್ಸಾಹಿಗಳು ಮತ್ತು ಬೆಂಬಲಿಗರಲ್ಲಿ ಆತಂಕ ಉಂಟು ಮಾಡಿದೆ. ವಆಯಾ ರಾಷ್ಟ್ರಗಳನ್ನು ಹಲವಾರು ಸ್ಥಳಗಳಲ್ಲಿ ಹುರಿದುಂಬಿಸಲು ಈಗಾಗಲೇ ಮನಸ್ಸು ಮಾಡಿದವರ ಅಭಿಮಾನಿಗಳ ಮೇಲೆ ಆತಂಕದ ಛಾಯೆಯನ್ನು ಮೂಡಿಸಿದೆ.

ವರದಿಯ ಪ್ರಕಾರ, ಐಸಿಸ್ ಅನುಯಾಯಿಗಳು Matrix.org ನೆಟ್ವರ್ಕ್​ನಲ್ಲಿ ಆನ್ಲೈನ್ ಚಾಟ್ ರೂಮ್​​ಗಳನ್ನು ಬಳಸುತ್ತಿರುವುದು ಕಂಡುಬಂದಿದೆ, ಅಲ್ಲಿ ಅವರು “ನಿಮ್ಮ ಶಸ್ತ್ರಾಸ್ತ್ರವನ್ನು ಸಿದ್ಧಪಡಿಸಿ, ನಿಮ್ಮ ಯೋಜನೆಯನ್ನು ರೂಪಿಸಿ ಮತ್ತು ನಂತರ ನಮ್ಮವರನ್ನು ಆಕರ್ಷಿಸಿ” ಎಂಬ ಸಂದೇಶ ಹಾಕಿದ್ದಾರೆ. ವಿಶೇಷವಾಗಿ ಟಿ 20 ವಿಶ್ವಕಪ್​ನಂತ ಪ್ರಮುಖ ಕ್ರೀಡಾಕೂಟಗಳನ್ನು ಗುರಿಯಾಗಿಸುವ ಬಗ್ಗೆ ಈ ಸಂದೇಶದಲ್ಲಿ ತಿಳಿಸಲಾಗಿದೆ.

ಅಂತರ್ಜಾಲದಲ್ಲಿ ಪ್ರಸಾರವಾದ ಗ್ರಾಫಿಕ್ ಪೋಸ್ಟರ್ ಅನ್ನು ಬಳಸಿಕೊಂಡು, ಭಯೋತ್ಪಾದಕ ಸಂಘಟನೆಯು ರೈಫಲ್ ಹಿಡಿದಿರುವ ವ್ಯಕ್ತಿಯನ್ನು ಚಿತ್ರಿಸುವ ಮೂಲಕ ತೀವ್ರ ಬೆದರಿಕೆಯನ್ನು ರವಾನಿಸಿದೆ. ನೀವು ಪಂದ್ಯಗಳಿಗಾಗಿ ಕಾಯಿರಿ…. ಮತ್ತು ನಾವು ನಿಮಗಾಗಿ ಕಾಯುತ್ತೇವೆ……” ಹೆಚ್ಚುವರಿಯಾಗಿ, ಪೋಸ್ಟ್​​ನಲ್ಲಿ ನ್ಯೂಯಾರ್ಕ್ನ ನಸ್ಸೌ ಕೌಂಟಿ ಇಂಟರ್​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂ ಮತ್ತು ಜೂನ್ 9 ರ ನಡೆಯಲಿರುವ ಭಾರತ- ಪಾಕ್ ಪಂದ್ಯವನ್ನು ನಿರ್ದಿಷ್ಟವಾಗಿ ಉಲ್ಲೇಖಿಸಲಾಗಿದೆ. ಟಿಕೆಟ್ ಮಾರಾಟ ಮತ್ತು ಪ್ರಸಾರ ಅಂಕಿಅಂಶಗಳ ದೃಷ್ಟಿಯಿಂದ ಹೆಚ್ಚು ಪ್ರಚಾರವನ್ನು ಪಡೆದ ಪಂದ್ಯ ಇದಾಗಿದೆ.

ಚಿತ್ರದಲ್ಲಿ ಕ್ರೀಡಾಂಗಣದ ಚಿತ್ರಣದ ಮೇಲೆ ವೈಮಾನಿಕ ಡ್ರೊನ್​ಗಳನ್ನು ಸುತ್ತಿಸಲಾಗಿದೆ. ಇದರೊಂದಿಗೆ ಡೈನಮೈಟ್ ಕಡ್ಡಿ ಮತ್ತು ಟಿಕ್ಕಿಂಗ್ ಗಡಿಯಾರವಿದೆ. ಮ್ಯಾನ್​ಹಟ್​ನ ಹೊರಗೆ ಇತ್ತೀಚೆಗೆ ನಿರ್ಮಿಸಲಾದ ಸ್ಥಳದಲ್ಲಿ ಇಂಡೋ-ಪಾಕ್ ಪಂದ್ಯಕ್ಕೆ ಗರಿಷ್ಠ 34,000 ಅಭಿಮಾನಿಗಳು ಹಾಜರಾಗುವ ನಿರೀಕ್ಷೆಯಿದೆ. ಐಸೆನ್ಹೋವರ್ ಪಾರ್ಕ್​ನ ತಾತ್ಕಾಲಿಕ ಕ್ರೀಡಾಂಗಣದಲ್ಲಿ ನಡೆಯಲಿರುವ ಎಂಟು ಪಂದ್ಯಗಳಲ್ಲಿ ಭಾರತ-ಪಾಕಿಸ್ತಾನ ಪಂದ್ಯ ಒಂದಾಗಿದೆ.

Continue Reading

ಪ್ರಮುಖ ಸುದ್ದಿ

Gautam Gambhir : ಗೌತಮ್ ಗಂಭೀರ್ ಭಾರತ ತಂಡದ ಮುಂದಿನ ಕೋಚ್​; ಐಪಿಎಲ್​ ಫ್ರಾಂಚೈಸಿ ಮಾಲೀಕರಿಂದ ಬಹಿರಂಗ?

Gautam Gambhir: ಭಾರತ ಕ್ರಿಕೆಟ್ ತಂಡದ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೋಮವಾರ ಮುಗಿದಿದೆ. ಭಾರತದ ಮುಂದಿನ ಕೋಚ್ ಆಗಲು ಗೂಗಲ್ ಶೀಟ್ ಸಲ್ಲಿಸಲು ಸೋಮವಾರ ಕೊನೆಯ ದಿನವಾಗಿತ್ತು. ಆದರೆ ಆ ಅರ್ಜಿಯಲ್ಲಿ ದೊಡ್ಡ ಹೆಸರುಗಳು ಇರಲಿಲ್ಲ.

VISTARANEWS.COM


on

Gautam Gambhir
Koo

ಬೆಂಗಳೂರು: ಗೌತಮ್ ಗಂಭೀರ್ (Gautam Gambhir) ಭಾರತ ಕ್ರಿಕೆಟ್ ತಂಡದ ಮುಂದಿನ ಮುಖ್ಯ ಕೋಚ್ ಆಗುತ್ತಾರೆ ಎಂಬುದು ಐಪಿಎಲ್ 2024 ಮುಗಿದ ನಂತರ ಹರಿದಾಡುತ್ತಿರುವ ಬಲವಾದ ವದಂತಿ . ಗಂಭೀರ್ ಮಾರ್ಗದರ್ಶನದಲ್ಲಿ ಕೋಲ್ಕತಾ ನೈಟ್ ರೈಡರ್ಸ್ (KKR) ತಂಡ ಪ್ರಶಸ್ತಿ ಗೆದ್ದುಕೊಂಡ ಕಾರಣ ಆ ಚರ್ಚೆಗೆ ಹೆಚ್ಚಿನ ಪುಷ್ಟಿ ಸಿಕ್ಕಿದೆ. 2024ರ ಐಪಿಎಲ್​ಗೆ ಮೊದಲು ಗಂಭೀರ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾರ್ಗದರ್ಶಕರಾಗಿದ್ದರು. ಅಂತೆಯೇ ಕೆಎಲ್ ರಾಹುಲ್ ನೇತೃತ್ವದ ತಂಡವು ಗಂಭೀರ್ ನಾಯಕತ್ವದಲ್ಲಿ ಸತತ ಎರಡು ಋತುಗಳಲ್ಲಿ ಐಪಿಎಲ್ ಪ್ಲೇ ಆಫ್ ಪ್ರವೇಶಿಸಿದೆ. ಮೂರನೇ ಅವಧಿಯಲ್ಲಿ ಅವರು ಕೆಕೆಆರ್​ಗೆ ಕಪ್​ ಗೆದ್ದುಕೊಟ್ಟಿದ್ದಾರೆ. ಹೀಗಾಗಿ ಟೀಂ ಇಂಡಿಯಾದ ಮುಂದಿನ ಕೋಚ್ ಹುದ್ದೆಗೆ ಗಂಭೀರ್ ಹೆಸರು ಕೇಳಿಬರುತ್ತಿದೆ.

ಭಾರತ ಕ್ರಿಕೆಟ್ ತಂಡದ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೋಮವಾರ ಮುಗಿದಿದೆ. ಭಾರತದ ಮುಂದಿನ ಕೋಚ್ ಆಗಲು ಗೂಗಲ್ ಶೀಟ್ ಸಲ್ಲಿಸಲು ಸೋಮವಾರ ಕೊನೆಯ ದಿನವಾಗಿತ್ತು. ಆದರೆ ಆ ಅರ್ಜಿಯಲ್ಲಿ ದೊಡ್ಡ ಹೆಸರುಗಳು ಇರಲಿಲ್ಲ.

ಕ್ರಿಕ್​ಬಜ್​ ವರದಿ ಪ್ರಕಾರ ಬಿಸಿಸಿಐ ಗಂಭೀರ್​ ಅವರನ್ನೇ ಕೋಚ್ ಹುದ್ದೆಗೆ ಆಯ್ಕೆ ಮಾಡಿದೆ. ಐಪಿಎಲ್ ಫ್ರಾಂಚೈಸಿಯ ಮಾಲೀಕರೊಬ್ಬರ ಹೇಳಿಕೆಯಿಂದ ಇದು ಗೊತ್ತಾಗಿದೆ. ಬಿಸಿಸಿಐ ಉನ್ನತ ಅಧಿಕಾರಿಗಳು ಗಂಭೀರ್​ ಜತೆ ಚರ್ಚಿಸಿದ್ದಾರೆ. ತರಬೇತುದಾರರಾಗಿ ಭಾರತದ ಮಾಜಿ ಆರಂಭಿಕ ಬ್ಯಾಟರ್​ನ ನೇಮಕವು ಅಂತಿಮಗೊಂಡಿದೆ. ಪ್ರಕಟಣೆ ಶೀಘ್ರದಲ್ಲೇ ಬರಲಿದೆ” ಎಂದು ಅವರು ಹೇಳಿದ್ದಾರೆ ಎಂಬುದಾಗಿ ವರದಿ ಮಾಡಲಾಗಿದೆ. ಶಾರುಖ್​ ಅವರು ಗಂಭೀರ್​ಗೆ ತಮ್ಮೊಂದಿಗೆ ಇರಲು ಸಾಕಷ್ಟು ಮನವಿ ಮಾಡುತ್ತಿದ್ದಾರೆ. ಹೀಗಾಗಿ ಅವರು ಹೋಗವು ವಿಚಾರದಲ್ಲಿ ಗೊಂದಲಗಳಿವೆ. ಈ ಬಗ್ಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಟಿಲ್ಲ. , ಮಾತುಕತೆಗಳು ಇನ್ನೂ ಮುಂದುವರಿದಿದೆ ಎಂಬ ಅಂಶವನ್ನು ಇದು ಸೂಚಿಸುತ್ತದೆ.

ವಿದೇಶಿ ಕೋಚ್​ ಬೇಡ

ಭಾರತದ ಮುಂದಿನ ಮುಖ್ಯ ಕೋಚ್ ಆಗಲು ಬಿಸಿಸಿಐ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗರನ್ನು ಸಂಪರ್ಕಿಸಿದೆ ಎಂಬ ಹೇಳಿಕೆಗಳನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕಳೆದ ವಾರ ತಿರಸ್ಕರಿಸಿದ್ದರು. ರಾಹುಲ್ ದ್ರಾವಿಡ್ ಅವರ ಉತ್ತರಾಧಿಕಾರಿ ಭಾರತೀಯರೇ ಆಗುತ್ತಾರೆ ಎಂದು ಸುಳಿವು ನೀಡಿದ್ದರು.

ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಟಾಪ್​ 5 ಬೌಲರ್​ಗಳು ಯಾರು?

ನಾನು ಅಥವಾ ಬಿಸಿಸಿಐ ಆಸ್ಟ್ರೇಲಿಯಾದ ಯಾವುದೇ ಮಾಜಿ ಕ್ರಿಕೆಟಿಗರನ್ನು ಕೋಚಿಂಗ್ ಪ್ರಸ್ತಾಪದೊಂದಿಗೆ ಸಂಪರ್ಕಿಸಿಲ್ಲ. ಕೆಲವು ಮಾಧ್ಯಮ ವಿಭಾಗಗಳಲ್ಲಿ ಪ್ರಸಾರವಾಗುತ್ತಿರುವ ವರದಿಗಳು ಸಂಪೂರ್ಣವಾಗಿ ತಪ್ಪು ಎಂದು ಶಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಮ್ಮ ರಾಷ್ಟ್ರೀಯ ತಂಡಕ್ಕೆ ಸರಿಯಾದ ತರಬೇತುದಾರನನ್ನು ಹುಡುಕುವುದು ನಿಖರವಾದ ಮತ್ತು ಸಂಪೂರ್ಣ ಪ್ರಕ್ರಿಯೆಯಾಗಿದೆ. ಭಾರತೀಯ ಕ್ರಿಕೆಟ್ ರಚನೆಯ ಬಗ್ಗೆ ಆಳವಾದ ತಿಳುವಳಿಕೆಯನ್ನು ಹೊಂದಿರುವ ಮತ್ತು ಶ್ರೇಣಿಗಳ ಮೂಲಕ ಬೆಳೆದ ವ್ಯಕ್ತಿಗಳನ್ನು ಗುರುತಿಸುವತ್ತ ನಾವು ಗಮನ ಹರಿಸಿದ್ದೇವೆ” ಎಂದು ಶಾ ಹೇಳಿದ್ದಾರೆ.

Continue Reading

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಟಾಪ್​ 5 ಬೌಲರ್​ಗಳು ಯಾರು?

T20 World Cup 2024: ಪಾಕಿಸ್ತಾನ ತಂಡದ ಮಾಜಿ ನಾಯಕ ಹಾಗೂ ಆಟಗಾರ ಶಾಹೀದ್ ಅಫ್ರಿದಿಗೆ(Shahid Afridi) ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಬೌಲರ್​ಗಳ ಯಾದಿಯಲ್ಲಿ ದ್ವಿತೀಯ ಸ್ಥಾನ. 2007 ರಿಂದ 2016ರ ತನಕ ಒಟ್ಟು 34 ಪಂದ್ಯಗಳನ್ನಾಡಿರುವ ಅಫ್ರಿದಿ 39 ವಿಕೆಟ್​ ಉರುಳಿಸಿದ್ದಾರೆ.

VISTARANEWS.COM


on

T20 World Cup 2024
Koo

ಬೆಂಗಳೂರು: 9ನೇ ಆವೃತ್ತಿಯ ಐಸಿಸಿ ಪುರುಷರ ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಆರಂಭಕ್ಕೆ ಇನ್ನು ಬೆರಳೆಣಿಕೆ ದಿನಗಳ ಮಾತ್ರ ಬಾಕಿ ಉಳಿದಿವೆ. ಜೂನ್​ 1ರಿಂದ ಆರಂಭವಾಗಿ 29ರ ತನಕ ಪಂದ್ಯಾವಳಿಗಳು ಸಾಗಲಿದೆ. ಉದ್ಘಾಟನ ಪಂದ್ಯದಲ್ಲಿ ಆತಿಥೇಯ ಅಮೆರಿಕ ಮತ್ತು ಕೆನಾಡ ಮುಖಾಮುಖಿಯಾಗಲಿವೆ. ಇದುವರೆಗಿನ 8 ಆವೃತ್ತಿಯ ಮಿನಿ ವಿಶ್ವಕಪ್​ ಸಮರದಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಬೌಲರ್​ಗಳು ಯಾರೆಂಬ ಕುತೂಹಲಕಾರಿ ಮಾಹಿತಿ ಇಂತಿದೆ.

ಶಕೀಬ್ ಅಲ್ ಹಸನ್


ಬಾಂಗ್ಲಾದೇಶ ಕ್ರಿಕೆಟ್ ತಂಡದ ಹಿರಿಯ ಆಲ್​ರೌಂಡರ್​ ಶಕೀಬ್ ಅಲ್ ಹಸನ್(Shakib Al Hasan) ಅವರು ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಬೌಲರ್​ ಎನಿಸಿಕೊಂಡಿದ್ದಾರೆ. ಜತೆಗೆ ಉದ್ಘಾಟನ ಆವೃತ್ತಿಯಿಂದ ಇದುವರೆಗಿನ ಎಲ್ಲ ಆವೃತ್ತಿಯಲ್ಲಿಯೂ ಆಡಿದ ಆಟಗಾರನೂ ಆಗಿದ್ದಾರೆ. ಒಟ್ಟು 36 ಪಂದ್ಯಗಳನ್ನಾಡಿ 47 ವಿಕೆಟ್​ ಕೆಡವಿದ್ದಾರೆ. ಈ ಬಾರಿ ಮೂರು ವಿಕೆಟ್​ ಕಿತ್ತರೆ 50 ವಿಕೆಟ್​ ಕಿತ್ತ ಸಾಧನೆ ಮಾಡಲಿದ್ದಾರೆ. 9 ರನ್​ಗೆ 4 ವಿಕೆಟ್​ ಕಿತ್ತದ್ದು ಅವರ ವೈಯಕ್ತಿಕ ಸಾಧನೆಯಾಗಿದೆ.


ಶಾಹೀದ್ ಅಫ್ರಿದಿ


ಪಾಕಿಸ್ತಾನ ತಂಡದ ಮಾಜಿ ನಾಯಕ ಹಾಗೂ ಆಟಗಾರ ಶಾಹೀದ್ ಅಫ್ರಿದಿಗೆ(Shahid Afridi) ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಬೌಲರ್​ಗಳ ಯಾದಿಯಲ್ಲಿ ದ್ವಿತೀಯ ಸ್ಥಾನ. 2007 ರಿಂದ 2016ರ ತನಕ ಒಟ್ಟು 34 ಪಂದ್ಯಗಳನ್ನಾಡಿರುವ ಅಫ್ರಿದಿ 39 ವಿಕೆಟ್​ ಉರುಳಿಸಿದ್ದಾರೆ. 11 ರನ್​ಗೆ 4 ವಿಕೆಟ್​ ಪಡೆದದ್ದು ಅವರ ವೈಯಕ್ತಿಕ ಶ್ರೇಷ್ಠ ಸಾಧನೆಯಾಗಿದೆ.


ಲಸಿತ್ ಮಾಲಿಂಗ


ಶ್ರೀಲಂಕಾ ತಂಡದ ಮಾಜಿ ವೇಗಿ ಲಸಿತ್ ಮಾಲಿಂಗ(Lasith Malinga) 2007 ರಿಂದ 2014ರ ತನಕ ಒಟ್ಟು 31 ಟಿ20 ವಿಶ್ವಕಪ್​ ಪಂದ್ಯಗಳನ್ನಾಡಿ 38 ವಿಕೆಟ್​ ಪಡೆದಿದ್ದಾರೆ. 31 ರನ್​ಗೆ 5 ವಿಕೆಟ್​ ಉರುಳಿಸಿದ್ದು ಅವರ ವೈಯಕ್ತಿಕ ಶ್ರೇಷ್ಠ ಸಾಧನೆಯಾಗಿದೆ. ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಮೂರನೇ ಅಟಗಾರ ಎನಿಸಿಕೊಂಡಿದ್ದಾರೆ.

ಇದನ್ನೂ ಓದಿ T20 World Cup 2024: 2ನೇ ಬ್ಯಾಚ್​ನಲ್ಲಿ ನ್ಯೂಯಾರ್ಕ್​ಗೆ ತೆರಳಿದ ಭಾರತದ ಮೂವರು ಆಟಗಾರರು


ಸಯೀದ್ ಅಜ್ಮಲ್


ಪಾಕಿಸ್ತಾನ ತಂಡದ ಮಾಜಿ ಸ್ಪಿನ್​​ ಬೌಲರ್​ ಸಯೀದ್ ಅಜ್ಮಲ್(Saeed Ajmal) ಅವರು ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಬೌಲರ್​ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. 2009 ರಿಂದ 2014ರ ತನಕ 23 ಪಂದ್ಯಗಳನ್ನು ಆಡಿದ ಅವರು 36 ವಿಕೆಟ್​ ಕಡೆವಿದ್ದಾರೆ.


ಅಜಂತಾ ಮೆಂಡೀಸ್​


ಶ್ರೀಲಂಕಾ ತಂಡದ ಮಾಜಿ ಸ್ಪಿನ್ನರ್‌ ಅಜಂತಾ ಮೆಂಡೀಸ್‌(Ajantha Mendis) 2009 ರಿಂದ 2014 ತನಕ ಒಟ್ಟು 21 ಪಂದ್ಯಗಳನ್ನಾಡಿ 35 ವಿಕೆಟ್​ ಕಿತ್ತಿದ್ದಾರೆ. ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಬೌಲರ್​ಗಳ ಪಟ್ಟಿಯಲ್ಲಿ 5ನೇ ಸ್ಥಾನ ಪಡೆದಿದ್ದಾರೆ. ಪ್ರಸಕ್ತ ಟಿ20 ಆಡುತ್ತಿರುವ ನ್ಯೂಜಿಲ್ಯಾಂಡ್​ ತಂಡದ ಹಿರಿಯ ವೇಗಿ ಟಿಮ್​ ಸೌಥಿ 7 ವಿಕೆಟ್​ ಕಿತ್ತರೆ ಮೆಂಡೀಸ್​ ದಾಖಲೆ ಪತನಗೊಳ್ಳಲಿದೆ. ಸದ್ಯ ಸೌಥಿ 29* ವಿಕೆಟ್​ ಕಿತ್ತಿದ್ದಾರೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಭಾರತದ ಬ್ಯಾಟರ್​ಗಳಿವರು

Continue Reading
Advertisement
Viral News
ವೈರಲ್ ನ್ಯೂಸ್27 mins ago

Viral News: ರೈಲಿಯಲ್ಲಿ ಅಶ್ಲೀಲವಾಗಿ ಮೈ ಕುಣಿಸಿದ ಮಹಿಳೆ; ರೀಲ್ಸ್ ಮಾಡುವವರ ಕಾಟವಿಲ್ಲದ ಪ್ರಯಾಣ ಅಸಾಧ್ಯ ಎಂದ ನೆಟ್ಟಿಗರು

Rahul Gandhi
ದೇಶ29 mins ago

Rahul Gandhi: ನೋಡ ನೋಡ್ತಿದ್ದಂತೆ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್‌ ಗಾಂಧಿ! ವಿಡಿಯೋ ಇದೆ

dk shivakumar jagdeep dhankar
ಪ್ರಮುಖ ಸುದ್ದಿ32 mins ago

DK Shivakumar: ಕುತೂಹಲ ಕೆರಳಿಸಿದ ಡಿಕೆಶಿ- ಉಪರಾಷ್ಟ್ರಪತಿ ಭೇಟಿ; ʼಬಿಜೆಪಿಗೆ ಸೇರ್ತೀರಾʼ ಎಂದ ನೆಟ್ಟಿಗರು!

Pushpa 2 SOOSEKI Couple Song Lyrical Video out
ಟಾಲಿವುಡ್34 mins ago

Pushpa 2: ʼಪುಷ್ಪ 2ʼ ಸಿನಿಮಾದ ಎರಡನೇ ಹಾಡು ರಿಲೀಸ್‌: ಅಲ್ಲು ಜತೆ ಹೆಜ್ಜೆ ಹಾಕಿದ ರಶ್ಮಿಕಾ!

UPI Safety Tips
ವಾಣಿಜ್ಯ34 mins ago

UPI Safety Tips: ಈ ಟಿಪ್ಸ್ ಪಾಲಿಸಿ, ಮೊಬೈಲ್ ನಿಂದ ಹಣ ಪಾವತಿಸುವಾಗ ಆಗುವ ವಂಚನೆಯಿಂದ ಪಾರಾಗಿ

Shakhahaari Movie 1 cr minutes of streaming amazon prime
ಸ್ಯಾಂಡಲ್ ವುಡ್57 mins ago

Shakhahaari Movie: ಪ್ರೇಕ್ಷಕರನ್ನು ಆವರಿಸಿದ ‘ಶಾಖಾಹಾರಿ’: ಪರಭಾಷಿಕರಿಂದಲೂ ಚಿತ್ರಕ್ಕೆ ಮೆಚ್ಚುಗೆ!

Arvind Kejriwal
ದೇಶ57 mins ago

Arvind Kejriwal: ಜಾಮೀನು ಅವಧಿ ವಿಸ್ತರಣೆಗೆ ಕೋರಿ ಅರ್ಜಿ; ಸುಪ್ರೀಂನಲ್ಲಿ ಕೇಜ್ರಿವಾಲ್‌ಗೆ ಭಾರೀ ಹಿನ್ನಡೆ-ಮತ್ತೆ ಜೈಲು ಫಿಕ್ಸ್‌!

Crime News
ಕ್ರೈಂ1 hour ago

Crime News: ಶಾಕಿಂಗ್‌: ಕುಟುಂಬದ 7 ಮಂದಿಯನ್ನು ಕೊಚ್ಚಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ; ಕಾರಣ ನಿಗೂಢ

belluru assault case
ಕ್ರೈಂ1 hour ago

Assault Case: ಬೆಳ್ಳೂರು ಹಿಂದೂ ಯುವಕನ ಮೇಲೆ ಹಲ್ಲೆ; ದೂರು ಸ್ವೀಕರಿಸದ ಪಿಎಸ್‌ಐ ಸಸ್ಪೆಂಡ್‌

Shilpa Shetty Visiting Nanjundeshwara Temple
ಸಿನಿಮಾ1 hour ago

Shilpa Shetty: ಮೈಸೂರಿನ ನಂಜುಂಡೇಶ್ವರನ ಸನ್ನಿಧಿಯಲ್ಲಿ ನಟಿ ಶಿಲ್ಪಾ ಶೆಟ್ಟಿ ಧ್ಯಾನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ17 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌