Adani-Hindenburg Supreme Court panel of experts gives clean chit to Adani GroupAdani-Hindenburg : ಅದಾನಿ ಗ್ರೂಪ್‌ಗೆ ಕ್ಲೀನ್‌ಚಿಟ್‌ ನೀಡಿದ ಸುಪ್ರೀಂಕೋರ್ಟ್‌ ತಜ್ಞರ ಸಮಿತಿ

ದೇಶ

Adani-Hindenburg : ಅದಾನಿ ಗ್ರೂಪ್‌ಗೆ ಕ್ಲೀನ್‌ಚಿಟ್‌ ನೀಡಿದ ಸುಪ್ರೀಂಕೋರ್ಟ್‌ ತಜ್ಞರ ಸಮಿತಿ

Adani-Hindenburg ಅದಾನಿ ಗ್ರೂಪ್‌ ವಿರುದ್ಧ ಅಮೆರಿಕದ ಶಾರ್ಟ್‌ ಸೆಲ್ಲರ್‌ ಹಿಂಡೆನ್‌ ಬರ್ಗ್‌ ಮಾಡಿರುವ ಆರೋಪಗಳಿಗೆ ಸಂಬಂಧಿಸಿ ತನಿಖೆ ನಡೆಸುವಲ್ಲಿ ಸೆಬಿ ವಿಫಲವಾಗಿದೆ ಎಂದು ಈಗಾಗಲೇ ಹೇಳಲಾಗದು. ಜತೆಗೆ ಮೇಲ್ನೋಟಕ್ಕೆ ಅದಾನಿ ಗ್ರೂಪ್‌ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಿಲ್ಲ ಎಂದು ತಜ್ಞರ ಸಮಿತಿ ಹೇಳಿದೆ. ವಿವರ ಇಲ್ಲಿದೆ.

VISTARANEWS.COM


on

Adani-Hindenburg Supreme Court panel of experts gives clean chit to Adani Group
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಅದಾನಿ-ಹಿಂಡೆನ್‌ಬರ್ಗ್‌ ಕೇಸ್‌ನಲ್ಲಿ ಸುಪ್ರೀಂಕೋರ್ಟ್‌ ನಿಯೋಜಿತ ತಜ್ಞರ ಸಮಿತಿಯು ಅದಾನಿ ಗ್ರೂಪ್‌ಗೆ ಕ್ಲೀನ್‌ಚಿಟ್‌ ನೀಡಿದೆ. ಅದಾನಿ ಕಂಪನಿಗಳ ವಿರುದ್ಧ ಹಿಂಡೆನ್‌ ಬರ್ಗ್‌ ಮಾಡಿರುವ ಆರೋಪಗಳಿಗೆ ಸಂಬಂಧಿಸಿ ಮಾರುಕಟ್ಟೆ ನಿಯಂತ್ರಕ ಸೆಬಿ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಈಗಲೇ ಹೇಳಲಾಗದು ಎಂದು ತಜ್ಞರ ಸಮಿತಿ ಹೇಳಿದೆ. (Adani-Hindenburg )

ಅದಾನಿ ಗ್ರೂಪ್‌, ವಿದೇಶಗಳಲ್ಲಿ ನಕಲಿ ಕಂಪನಿಗಳ ಮೂಲಕ ತನ್ನ ಕಂಪನಿಗಳ ಷೇರು ದರವನ್ನು ಕೃತಕವಾಗಿ ಏರಿಸಿದೆ ಎಂದು ಅಮೆರಿಕ ಮೂಲದ ಶಾರ್ಟ್‌ ಸೆಲ್ಲರ್ ಹಿಂಡೆನ್‌ ಬರ್ಗ್‌ ತನ್ನ ವರದಿಯಲ್ಲಿ ಆರೋಪಿಸಿತ್ತು. ಆದರೆ ಅದಾನಿ ಗ್ರೂಪ್‌ ಮಾರುಕಟ್ಟೆ ನಿಯಮಗಳನ್ನು ಉಲ್ಲಂಘಿಸಿರುವುದು ಹಾಗೂ ಮಾರುಕಟ್ಟೆ ನಿಯಂತ್ರಜ ಸೆಬಿ ಅದನ್ನು ಪತ್ತೆಹಚ್ಚುವಲ್ಲಿ ವಿಫಲವಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿಲ್ಲ ಎಂದು ಸಮಿತಿಯ ವರದಿ ತಿಳಿಸಿದೆ.

Adani-Hindenburg Supreme Court panel of experts gives clean chit to Adani Group

ಸೆಬಿ ಇದುವರೆಗೆ ನೀಡಿರುವ ವಿವರಣೆಗಳನ್ನು ಪರಿಗಣಿಸಿದರೆ, ಈ ಪ್ರಕರಣದಲ್ಲಿ ಸೆಬಿ ವಿಫಲವಾಗಿದೆ ಎಂದು ಅಂತಿಮ ನಿರ್ಣಯ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಆರು ಸದಸ್ಯರನ್ನು ಒಳಗೊಂಡಿರುವ ತಜ್ಞರ ಸಮಿತಿ ಸಭೆ ತಿಳಿಸಿದೆ. ಸೆಬಿಯು ಅದಾನಿ ಕಂಪನಿಗಳ 13 ವರ್ಗಾವಣೆಗಳನ್ನು ಗುರುತಿಸಿ ಪರಿಶೀಲಿಸಿತ್ತು.

ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎ.ಎಂ. ಸಪ್ರೆ ನೇತೃತ್ವದ ತಜ್ಞರ ಸಮಿತಿಯು, ಅದಾನಿ ಕಂಪನಿಗಳ ನಿರ್ದಿಷ್ಟ ವರ್ಗಾವಣೆಗಳಿಗೆ ಸಂಬಂಧಿಸಿ ದಾಖಲಾತಿಗಳನ್ನು ಪರಿಶೀಲಿಸುತ್ತಿದೆ. ಕಾಲಮಿತಿಯ ಚೌಕಟ್ಟಿನಲ್ಲಿ ತನಿಖೆ ಪೂರ್ಣವಾಗಬೇಕಿದೆ ಎಂದೂ ತಿಳಿಸಿದೆ.

ನಿವೃತ್ತ ನ್ಯಾಯಮೂರ್ತಿ ಜಪಿ ದೇವಧರ್‌, ಐಸಿಐಸಿಐ ಬ್ಯಾಂಕ್‌ನ ಮಾಜಿ ಎಂಡಿ ಮತ್ತು ಸಿಇಒ ಕೆ.ವಿ ಕಾಮತ್‌, ಎಸ್‌ಬಿಐನ ಮಾಜಿ ಅಧ್ಯಕ್ಷ ಓ.ಪಿ ಭಟ್‌, ಇನ್ಫೋಸಿಸ್‌ ಚೇರ್ಮನ್‌ ನಂದನ್‌ ನಿಲೇಕಣಿ, ವಕೀಲ ಸೋಮಶೇಖರ್‌ ಸುಂದರೇಶನ್‌ ಅವರು ಸಮಿತಿಯಲ್ಲಿದ್ದರು.

2023ರ ಜನವರಿ 24ರಂದು ಹಿಂಡೆನ್‌ಬರ್ಗ್‌ ಅದಾನಿ ಗ್ರೂಪ್‌ ವಿರುದ್ಧ ವರದಿ ಪ್ರಕಟಿಸಿದ ಬಳಿಕ ಅದಾನಿ ಗ್ರೂಪ್‌ನ 10 ಕಂಪನಿಗಳ ಷೇರುಗಳ ಮಾರುಕಟ್ಟೆ ಮೌಲ್ಯದಲ್ಲಿ 12 ಲಕ್ಷ ಕೋಟಿ ರೂ. ನಷ್ಟವಾಗಿತ್ತು. ಅದಾನಿ ಸಮೂಹವು ಕೃತಕವಾಗಿ ಕಂಪನಿಗಳ ದರವನ್ನು ಏರಿಸಿದೆ. ನಕಲಿ ಕಂಪನಿಗಳನ್ನು ಸೃಷ್ಟಿಸಿ, ಭಾರತೀಯ ಷೇರು ಪೇಟೆಯಲ್ಲಿ ಗಳಿಸಿದ ನಿಧಿಯನ್ನು ವರ್ಗಾಯಿಸಿದೆ ಎಂದು ಆರೋಪಿಸಲಾಗಿತ್ತು. ಹಿಂಡೆನ್‌ಬರ್ಗ್‌ ಮಾಡಿರುವ ಎಲ್ಲ ಆರೋಪಗಳನ್ನು ಅದಾನಿ ಗ್ರೂಪ್‌ ನಿರಾಕರಿಸಿತ್ತು. ಹಿಂಡೆನ್‌ಬರ್ಗ್‌ ಶಾರ್ಟ್‌ ಸೆಲ್ಲಿಂಗ್‌ ಮಾಡುತ್ತಿರುವುದನ್ನು ತನ್ನ ವರದಿಯಲ್ಲಿ ಒಪ್ಪಿಕೊಂಡಿತ್ತು. ಹೀಗಾಗಿ ಪ್ರಕರಣದ ಬಗ್ಗೆ ತನಿಖೆಗೆ ಒತ್ತಾಯವೂ ಉಂಟಾಗಿತ್ತು.

ಇದನ್ನೂ ಓದಿ: Adani Group : ಅದಾನಿ-ಹಿಂಡೆನ್‌ಬರ್ಗ್‌ ತನಿಖಾ ವರದಿಯನ್ನು ಆ.14ರೊಳಗೆ ಸಲ್ಲಿಸಲು ಸೆಬಿಗೆ ಸುಪ್ರೀಂಕೋರ್ಟ್‌ ಸೂಚನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Maldives: ಭಾರತೀಯರೇ, ದಯಮಾಡಿ ಬನ್ನಿ ಎಂದ ಮಾಲ್ಡೀವ್ಸ್‌ ಸಚಿವ; ಬಾಯ್ಕಾಟ್‌ ಪೆಟ್ಟಿಗೆ ಥಂಡಾ!

Maldives: ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದಾಗಿ ಫೆಬ್ರವರಿ 1ರಂದು ಮಂಡಿಸಿದ ಬಜೆಟ್‌ನಲ್ಲೂ ಘೋಷಿಸಲಾಗಿದೆ. “ದೇಶದ ಪ್ರವಾಸೋದ್ಯಮಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಬಂದರು ಸಂಪರ್ಕ, ಪ್ರವಾಸೋದ್ಯಮ ಮೂಲ ಸೌಕರ್ಯಗಳ ಅಭಿವೃದ್ಧಿ, ಲಕ್ಷದ್ವೀಪ ಸೇರಿ ದೇಶದ ಎಲ್ಲ ದ್ವೀಪಗಳನ್ನು ಅಭಿವೃದ್ಧಿಗೊಳಿಸಲಾಗುವುದು” ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದರು. ಭಾರತದ ಆಂತರಿಕ ವಿಚಾರದಲ್ಲಿ ಸುಖಾಸುಮ್ಮನೆ ಮೂಗು ತೂರಿಸಿದ್ದ ಮಾಲ್ಡೀವ್ಸ್‌ಗೆ ಇದರಿಂದ ಭಾರಿ ಹಿನ್ನಡೆಯಾಗಿದೆ. ಹಾಗಾಗಿ, ಮಾಲ್ಡೀವ್ಸ್‌ ಈಗ ಭಾರತೀಯರ ಮನವೊಲಿಸಲು ಯತ್ನಿಸುತ್ತಿದೆ.

VISTARANEWS.COM


on

Narendra Modi
Koo

ನವದೆಹಲಿ/ಮಾಲೆ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇತ್ತೀಚೆಗೆ ಲಕ್ಷದ್ವೀಪಕ್ಕೆ ತೆರಳಿ, ಅಲ್ಲಿನ ಪ್ರವಾಸೋದ್ಯಮಕ್ಕೆ (Lakshadweep) ಉತ್ತೇಜನ ನೀಡಬೇಕು ಎಂದಿದ್ದಕ್ಕೇ ತಗಾದೆ ತೆಗೆದಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ (Maldives Tourism) ಭಾರಿ ಹೊಡೆತ ಬಿದ್ದಿದೆ. ಭಾರತ ಹಾಗೂ ಮೋದಿ ಕುರಿತು ಮಾಲ್ಡೀವ್ಸ್‌ ಅಸಮಾಧಾನದ ಹೇಳಿಕೆ ನೀಡಿದ ಬಳಿಕ ದೇಶದಲ್ಲಿ ಬಾಯ್ಕಾಟ್‌ ಮಾಲ್ಡೀವ್ಸ್‌ ಅಭಿಯಾನ ಶುರುವಾದ ಕಾರಣ ಆ ದೇಶಕ್ಕೆ ತೆರಳುವವರ ಸಂಖ್ಯೆ ಭಾರಿ ಕುಸಿದಿದೆ. ಭಾರತೀಯರ ಬಾಯ್ಕಾಟ್‌ ಏಟಿಗೆ ಈಗ ಮಾಲ್ಡೀವ್ಸ್‌ ಥಂಡಾ ಹೊಡೆದಿದ್ದು, “ಭಾರತೀಯರೇ, ದಯಮಾಡಿ ಮಾಲ್ಡೀವ್ಸ್‌ ಪ್ರವಾಸಕ್ಕೆ ಬನ್ನಿ” ಎಂದು ಅಲ್ಲಿನ ಪ್ರವಾಸೋದ್ಯಮ ಸಚಿವ ಇಬ್ರಾಹಿಂ ಫೈಸಲ್‌ (Ibrahim Faisal) ಮನವಿ ಮಾಡಿದ್ದಾರೆ.

“ಭಾರತ ಹಾಗೂ ಮಾಲ್ಡೀವ್ಸ್‌ ಸಂಬಂಧಕ್ಕೆ ಉತ್ತಮ ಇತಿಹಾಸವಿದೆ. ನಮ್ಮ ನೂತನ ಸರ್ಕಾರವೂ ಭಾರತದ ಜತೆ ಕೆಲಸ ಮಾಡಲು ಬಯಸುತ್ತದೆ. ನಾವು ಎಂದಿಗೂ ಸ್ನೇಹಯುತ ವಾತಾವರಣ, ಸಂಬಂಧ ಇಟ್ಟುಕೊಳ್ಳಲು ಬಯಸುತ್ತೇವೆ. ಹಾಗಾಗಿ, ಭಾರತೀಯರನ್ನು ನಮ್ಮ ಸರ್ಕಾರ ಹಾಗೂ ಇಲ್ಲಿನ ಜನರು ಆತ್ಮೀಯವಾಗಿ ಸ್ವಾಗತಿಸುತ್ತಾರೆ. ನಾನೊಬ್ಬ ಪ್ರವಾಸೋದ್ಯಮ ಸಚಿವನಾಗಿ ಮನವಿ ಮಾಡಿಕೊಳ್ಳುತ್ತಿದ್ದೇನೆ, ದಯಮಾಡಿ ಮಾಲ್ಡೀವ್ಸ್‌ಗೆ ಬನ್ನಿ. ಮಾಲ್ಡೀವ್ಸ್‌ ಪ್ರವಾಸೋದ್ಯಮದ ಭಾಗವಾಗಿ” ಎಂಬುದಾಗಿ ಅಂಗಲಾಚಿಕೊಂಡಿದ್ದಾರೆ.

narendra modi maldives president mohammed Muizzu

ಭಾರತೀಯರ ಭೇಟಿ ಕುಸಿತ

ಮಾಲ್ಡೀವ್ಸ್‌ಗೆ ತೆರಳುವ ಪ್ರವಾಸಿಗರಲ್ಲಿ ಭಾರತೀಯರ ಸಂಖ್ಯೆಯೇ ಹೆಚ್ಚಿತ್ತು. ಆದರೆ, ಬಾಯ್ಕಾಟ್‌ ಅಭಿಯಾನದ ಬಳಿಕ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಕುಸಿದಿದೆ. 2024ರ ಏಪ್ರಿಲ್‌ 10ರವರೆಗೆ ಮಾಲ್ಡೀವ್ಸ್‌ಗೆ 6.63 ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದಾರೆ. ಚೀನಾದ 71 ಸಾವಿರ ಪ್ರವಾಸಿಗರು ಭೇಟಿ ನೀಡಿದ್ದು, ಮೊದಲ ಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಬ್ರಿಟನ್‌, ರಷ್ಯಾ, ಇಟಲಿ, ಜರ್ಮನಿ ಹಾಗೂ ಭಾರತದ ಪ್ರವಾಸಿಗರಿದ್ದಾರೆ.

ಮಾಲ್ಡೀವ್ಸ್‌ ಪ್ರವಾಸೋದ್ಯಮ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ, 2023ರಲ್ಲಿ ಭಾರತೀಯರೇ ಹೆಚ್ಚಿನ ಸಂಖ್ಯೆಯಲ್ಲಿ ಮಾಲ್ಡೀವ್ಸ್‌ಗೆ ತೆರಳಿದ್ದಾರೆ. 2023ರಲ್ಲಿ ಭಾರತದಿಂದ ಮಾಲ್ಡೀವ್ಸ್‌ಗೆ 2,09,198 ಜನ ಭೇಟಿ ನೀಡಿದರೆ, ರಷ್ಯಾದಿಂದ 2,09,146 ಪ್ರವಾಸಿಗರು ಭೇಟಿ ನೀಡಿದ್ದಾರೆ. ಇನ್ನು, ಚೀನಾದಿಂದ ಕಳೆದ ವರ್ಷ 1,87,118 ಮಂದಿ ಮಾಲ್ಡೀವ್ಸ್‌ಗೆ ಭೇಟಿ ನೀಡಿದ್ದಾರೆ. ಇದೇ ಕಾರಣಕ್ಕಾಗಿಯೇ ಮಾಲ್ಡೀವ್ಸ್‌ನ ಪ್ರವಾಸೋದ್ಯಮ ಸಂಘವು, ಭಾರತದ ವಿರುದ್ಧ ಸಚಿವರು ನೀಡಿದ ಉದ್ಧಟತನದ ಹೇಳಿಕೆಯನ್ನು ಖಂಡಿಸಿದೆ. ಅಲ್ಲದೆ, ಭಾರತದ ಮನವೊಲಿಸಲು ಯತ್ನಿಸುತ್ತಿದೆ.

ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಬಳಿಕ ಭಾರತ ಹಾಗೂ ಮೋದಿ ವಿರುದ್ಧ ಮಾಲ್ಡೀವ್ಸ್‌ ಸಚಿವರು ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಮಾಲ್ಡೀವ್ಸ್‌ನಲ್ಲಿಯೇ ಟೀಕೆಗಳು ವ್ಯಕ್ತವಾಗಿದ್ದವು ಮಾಲ್ಡೀವ್ಸ್‌ ಸಂಸದರು ಭಾರತದ ಕ್ಷಮೆಯಾಚಿಸಿದ್ದರು. ಭಾರತದಲ್ಲಂತೂ ಮಾಲ್ಡೀವ್ಸ್‌ ವಿರುದ್ಧ ಅಭಿಯಾನವೇ ಶುರುವಾಗಿತ್ತು. ನೂರಾರು ಸೆಲೆಬ್ರಿಟಿಗಳು, ನಟರು ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದರು. ಇದಾದ ಬಲಿಕ ಮಾಲ್ಡೀವ್ಸ್‌ ಟ್ರಿಪ್‌ ಕ್ಯಾನ್ಸಲ್‌ ಮಾಡಿಕೊಂಡಿದ್ದರು. ಈಗ ಅದರ ಪರಿಣಾಮವನ್ನು ಮಾಲ್ಡೀವ್ಸ್‌ ಎದುರಿಸುತ್ತಿದೆ.

ಇದನ್ನೂ ಓದಿ: Maldives Minister: ಭಾರತದ ತಿರಂಗಾಕ್ಕೆ ಅವಮಾನ; ಕ್ಷಮೆ ಕೇಳಿದ ಮಾಲ್ಡೀವ್ಸ್‌ ಸಚಿವೆ!

Continue Reading

ದೇಶ

ಶಾಲೆಗಳಿಗೆ ಇ-ಮೇಲ್‌ ಮೂಲಕ ಹುಸಿ ಬಾಂಬ್‌ ಬೆದರಿಕೆ; ಕಠಿಣ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ!

Bomb Threat: ಕೆಲ ದಿನಗಳ ಹಿಂದಷ್ಟೇ, ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯ 100ಕ್ಕೂ ಅಧಿಕ ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇಮೇಲ್‌ ಬಂದಿತ್ತು. ಕೂಡಲೇ ಮಕ್ಕಳನ್ನು ಮನೆಗೆ ಕಳಿಸಲಾಗಿತ್ತು. ಆತಂಕಿತರಾದ ಇತರ ಶಾಲೆಗಳವರೂ ಮಕ್ಕಳನ್ನು ತರಗತಿಗಳಿಂದ ಮರಳಿ ಕಳಿಸಿದ್ದರು. ಇದಕ್ಕೂ ಮೊದಲು ಕರ್ನಾಟಕದ ಬೆಂಗಳೂರಿನಲ್ಲೂ ಶಾಲೆಗಳಿಗೆ ಬಾಂಬ್‌ ಬೆದರಿಕೆ ಒಡ್ಡಲಾಗಿತ್ತು.

VISTARANEWS.COM


on

Bomb Threat
Koo

ನವದೆಹಲಿ: ಕರ್ನಾಟಕ, ದೆಹಲಿ, ಗುಜರಾತ್‌ ಸೇರಿ ದೇಶದ ಹಲವೆಡೆ ಶಾಲೆಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ದಾಳಿ ಬೆದರಿಕೆ ಒಡ್ಡಲಾಗಿದೆ. ಇದರಿಂದ ಶಾಲೆಗಳ (Schools) ಆಡಳಿತ ಮಂಡಳಿಗಳು ಮಕ್ಕಳನ್ನು ಮನೆಗೆ ವಾಪಸ್ ಕಳುಹಿಸಿದ, ಪೋಷಕರು ಆತಂಕ್ಕಕೀಡಾದ ಪ್ರಕರಣಗಳು ಹೆಚ್ಚಾಗಿವೆ. ಇನ್ನು, ಬಳಿಕ ಇವು ಹುಸಿ ಬಾಂಬ್ ಕರೆಗಳು (Hoax Bomb Threats) ಎಂದು ಪೊಲೀಸರು ತನಿಖೆ ಕೈಬಿಟ್ಟಿದ್ದಾರೆ. ಇದರ ಬೆನ್ನಲ್ಲೇ, ಶಾಲೆಗಳಿಗೆ ಬಾಂಬ್‌ ಬೆದರಿಕೆ ಒಡ್ಡುವುದನ್ನು ತಡೆಯುವ ದಿಸೆಯಲ್ಲಿ ಕೇಂದ್ರ ಸರ್ಕಾರವು (Central Government) ಕಠಿಣ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ.

ದೆಹಲಿ, ಅಹಮದಾಬಾದ್‌ ಸೇರಿ ಹಲವೆಡೆ ಶಾಲೆಗಳಿಗೆ ಬಾಂಬ್‌ ಬೆದರಿಕೆ ಒಡ್ಡಿದ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಂಡಿರುವ ಕೇಂದ್ರ ಗೃಹ ಸಚಿವಾಲಯವು, ಈ ಕುರಿತು ಪ್ರಮಾಣಿತ ಕಾರ್ಯಾಚರಣೆಯ ಕಾರ್ಯವಿಧಾನಗಳನ್ನು (SOP) ರಚಿಸಬೇಕು ಹಾಗೂ ವಿಸ್ತೃತ ಶಿಷ್ಟಾಚಾರಗಳನ್ನು ಸಿದ್ಧಪಡಿಸಬೇಕು ಎಂಬುದಾಗಿ ಆದೇಶ ಹೊರಡಿಸಿದೆ. ಅದರಲ್ಲೂ, ಈ ಕುರಿತು ದೆಹಲಿ ಪೊಲೀಸರು ತಪ್ಪು ಮಾಹಿತಿ ತಡೆದು, ಅನಗತ್ಯ ಆತಂಕವನ್ನು ನಿವಾರಿಸಲು ದೆಹಲಿ ಪೊಲೀಸರು ಹಾಗೂ ಶಾಲೆಗಳ ಆಡಳಿತ ಮಂಡಳಿಗಳು ಸಹಕಾರ ನೀಡಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

ಶಾಲೆಗಳಲ್ಲಿ ಸಿಸಿಟಿವಿಗಳ ಅಳವಡಿಕೆ, ಅವುಗಳ ಮೇಲೆ ನಿಗಾ ಇರಿಸುವುದು, ಶಾಲೆಗಳ ಇ-ಮೇಲ್‌ ವಿಳಾಸಗಳನ್ನು ಪದೇಪದೆ ಪರಿಶೀಲಿಸುವುದು ಸೇರಿ ಹಲವು ಸೂಚನೆಗಳನ್ನು ನೀಡಿದೆ. ಕೇಂದ್ರ ಗೃಹ ಕಾರ್ಯದರ್ಶಿ ಹಾಗೂ ದೆಹಲಿ ಪೊಲೀಸ್‌ ಆಯುಕ್ತರು ಸಭೆ ನಡೆಸಿ, ಹುಸಿ ಬಾಂಬ್‌ ಬೆದರಿಕೆ ಕರೆ, ಇ-ಮೇಲ್‌ಗಳನ್ನು ನಿಯಂತ್ರಿಸುವ ಕ್ರಮಗಳ ಕುರಿತು ಚರ್ಚಿಸಿದ ಬಳಿಕ ಸೂಚನೆ ನೀಡಲಾಗಿದೆ. ದೆಹಲಿ ಶಾಲೆಗಳಿಗೆ ಬೆದರಿಕೆ

ಮೇ 1ರಂದು ದೆಹಲಿ- ಎನ್‌ಸಿಆರ್ ಪ್ರದೇಶದ ಕನಿಷ್ಠ 12 ಪ್ರತಿಷ್ಠಿತ ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿತ್ತು. ಕೂಡಲೇ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿತ್ತು. ಬಾಂಬ್ ಬೆದರಿಕೆ ಇ ಮೇಲ್ ಸ್ವೀಕರಿಸಿದ ಶಾಲೆಗಳೆಂದರೆ – ಚಾಣಕ್ಯಪುರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂಸ್ಕೃತಿ ಶಾಲೆ, ಪೂರ್ವ ದೆಹಲಿಯ ಮಯೂರ್ ವಿಹಾರ್, ದ್ವಾರಕಾ ಜಿಲ್ಲೆಯ ಡಿಪಿಎಸ್ ಶಾಲೆ, ದಕ್ಷಿಣದ ಬಸಂತ್ ಕುಂಜ್ ಪ್ರದೇಶದಲ್ಲಿರುವ ಡಿಎವಿ ಶಾಲೆ, ಅಮಿಟಿ ಸ್ಕೂಲ್, ಸಾಕೇತ್, ನವದೆಹಲಿಯ ಸಂಸ್ಕೃತಿ ಶಾಲೆ ಮುಂತಾದವು. ಸಂಸ್ಕೃತಿಯು ದೆಹಲಿಯ ಅತ್ಯಂತ ಉನ್ನತ ಮಟ್ಟದ ಶಾಲೆಗಳಲ್ಲಿ ಒಂದು.

ಬಾಂಬ್‌ ದಾಳಿ ಕುರಿತ ಬೆದರಿಕೆ ಇ ಮೇಲ್‌ಗಳು ರವಾನೆಯಾಗುತ್ತಲೇ ಪೊಲೀಸರು ಎಚ್ಚೆತ್ತುಕೊಂಡರು. ಕೂಲಂಕಷ ತನಿಖೆ, ಪರಿಶೀಲನೆ ನಡೆಸಿದ ಪೊಲೀಸರು, ಇದೊಂದು ಹುಸಿ ಬಾಂಬ್‌ ಬೆದರಿಕೆ ಎಂಬುದಾಗಿ ಎಕ್ಸ್‌ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿ ಪೋಷಕರು, ಶಾಲೆಗಳ ಆಡಳಿತ ಮಂಡಳಿಯು ನಿಟ್ಟುಸಿರು ಬಿಡುವಂತೆ ಮಾಡಿದ್ದರು.

ಇದನ್ನೂ ಓದಿ: Bomb Threat: ಮಂಗಳೂರು ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ, ಪ್ರಕರಣ ತಡವಾಗಿ ಬೆಳಕಿಗೆ

Continue Reading

ದೇಶ

Innova Crysta: ಇನ್ನೋವಾ ಕ್ರಿಸ್ಟಾ ನೂತನ ಸರಣಿಯ GX+ ಪರಿಚಯಿಸಿದ ಟಿಕೆಎಂ; ವೈಶಿಷ್ಟ್ಯಗಳೇನು? ದರ ಎಷ್ಟು?

Innova Crysta: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಇನ್ನೋವಾ ಕ್ರಿಸ್ಟಾ ಸರಣಿಯಲ್ಲಿ ನೂತನ ಗ್ರೇಡ್ GX+ ಅನ್ನು ಪರಿಚಯಿಸಿದ್ದು, ರಿಯರ್ ಕ್ಯಾಮೆರಾ, ಆಟೋ-ಫೋಲ್ಡ್ ಮಿರರ್ಸ್, ಡಿವಿಆರ್, ಡೈಮಂಡ್-ಕಟ್ ಅಲಾಯ್ಸ್, ವುಡನ್ ಪ್ಯಾನೆಲ್ ಮತ್ತು ಪ್ರೀಮಿಯಂ ಫ್ಯಾಬ್ರಿಕ್ ಸೀಟ್ಸ್ ಸೇರಿದಂತೆ ಹಲವಾರು ಅತ್ಯಾಕರ್ಷಕ ಮತ್ತು ಸುಧಾರಿತ ವೈಶಿಷ್ಟ್ಯಗಳನ್ನು ಇದು ಒಳಗೊಂಡಿದೆ. ಇನ್ನೋವಾ ಕ್ರಿಸ್ಟಾ GX+ ಗ್ರೇಡ್ ಐದು ಅತ್ಯಾಕರ್ಷಕ ಬಣ್ಣಗಳಲ್ಲಿ ಲಭ್ಯವಿದ್ದು, ಸೂಪರ್ ವೈಟ್, ಆಟಿಟ್ಯೂಡ್ ಬ್ಲ್ಯಾಕ್ ಮೈಕಾ, ಅವಂತ್-ಗಾರ್ಡೆ ಬ್ರೋನ್ಜ್ ಮೆಟಾಲಿಕ್, ಪ್ಲಾಟಿನಂ ವೈಟ್ ಪರ್ಲ್ ಮತ್ತು ಸಿಲ್ವರ್ ಮೆಟಾಲಿಕ್ ಬಣ್ಣಗಳಲ್ಲಿ ನೂತನ ವಾಹನ ಹೊರಬರಲಿದೆ.

VISTARANEWS.COM


on

Innova Crysta new grade GX+ introduced by Toyota Kirloskar Motor
Koo

ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಇಂದು ಇನ್ನೋವಾ ಕ್ರಿಸ್ಟಾ (Innova Crysta) ಸರಣಿಯಲ್ಲಿ ನೂತನ ಗ್ರೇಡ್ GX+ ಅನ್ನು ಪರಿಚಯಿಸಿದ್ದು, ರಿಯರ್ ಕ್ಯಾಮೆರಾ, ಆಟೋ-ಫೋಲ್ಡ್ ಮಿರರ್ಸ್, ಡಿವಿಆರ್, ಡೈಮಂಡ್-ಕಟ್ ಅಲಾಯ್ಸ್, ವುಡನ್ ಪ್ಯಾನೆಲ್ ಮತ್ತು ಪ್ರೀಮಿಯಂ ಫ್ಯಾಬ್ರಿಕ್ ಸೀಟ್ಸ್ ಸೇರಿದಂತೆ ಹಲವಾರು ಅತ್ಯಾಕರ್ಷಕ ಮತ್ತು ಸುಧಾರಿತ ವೈಶಿಷ್ಟ್ಯಗಳನ್ನು ಇದು ಒಳಗೊಂಡಿದೆ.

ಇನ್ನೋವಾ ಕ್ರಿಸ್ಟಾ GX+ ಗ್ರೇಡ್ ಐದು ಅತ್ಯಾಕರ್ಷಕ ಬಣ್ಣಗಳಲ್ಲಿ ಲಭ್ಯವಿದ್ದು, ಸೂಪರ್ ವೈಟ್, ಆಟಿಟ್ಯೂಡ್ ಬ್ಲ್ಯಾಕ್ ಮೈಕಾ, ಅವಂತ್-ಗಾರ್ಡೆ ಬ್ರೋನ್ಜ್ ಮೆಟಾಲಿಕ್, ಪ್ಲಾಟಿನಂ ವೈಟ್ ಪರ್ಲ್ ಮತ್ತು ಸಿಲ್ವರ್ ಮೆಟಾಲಿಕ್ ಬಣ್ಣಗಳಲ್ಲಿ ನೂತನ ವಾಹನ ಹೊರಬರಲಿದೆ. ಇನ್ನೋವಾ ಕ್ರಿಸ್ಟಾ GX+ ಗ್ರೇಡ್ 14 ಹೆಚ್ಚುವರಿ ವೈಶಿಷ್ಟ್ಯಗಳನ್ನು ಹೊಂದಿದೆ.

ಇದನ್ನೂ ಓದಿ: Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಸೇಲ್ಸ್-ಸರ್ವೀಸ್-ಯೂಸ್ಡ್ ಕಾರ್ ಬಿಸಿನೆಸ್‌ನ ಉಪಾಧ್ಯಕ್ಷ ಶಬರಿ ಮನೋಹರ್ ಈ ಕುರಿತು ಮಾತನಾಡಿ, ನೂತನವಾಗಿ ಪರಿಚಯಿಸಲಾದ ಇನ್ನೋವಾ ಕ್ರಿಸ್ಟಾ GX+ ಗ್ರೇಡ್ ನಮ್ಮ ಅಸ್ತಿತ್ವದಲ್ಲಿರುವ ಇನ್ನೋವಾ ಕ್ರಿಸ್ಟಾ ಶ್ರೇಣಿಗೆ ಪೂರಕವಾಗಿದೆ. ಹೊಸದಾಗಿ ಪರಿಚಯಿಸಲಾದ ವರ್ಧಿತ ವೈಶಿಷ್ಟ್ಯಗಳು ಮತ್ತು ಮಲ್ಟಿ ಫಂಕ್ಷನಾಲಿಟಿಯ ಮೂಲಕ ಹೆಚ್ಚಿನ ಮೌಲ್ಯವನ್ನು ನೀಡುವ ವಿಷಯದಲ್ಲಿ ಒಂದು ಹೆಜ್ಜೆಯಾಗಿದೆ. ಹೊಸ ಪರಿಚಯವು ಗ್ರಾಹಕರ ವ್ಯಾಪಕ ಪ್ರೇಕ್ಷಕರನ್ನು ಆಕರ್ಷಿಸುವುದನ್ನು ಮುಂದುವರಿಸುತ್ತದೆ ಎಂದು ನಮಗೆ ವಿಶ್ವಾಸವಿದೆ, ಇದರಿಂದಾಗಿ ಭಾರತದ ಅತ್ಯಂತ ಪ್ರೀತಿಯ ಎಂಪಿವಿ ಎಂಬ ಇನ್ನೋವಾ ಪರಂಪರೆಯನ್ನು ಬಲಪಡಿಸುತ್ತದೆ ಎಂದು ತಿಳಿಸಿದ್ದಾರೆ.

ಎಕ್ಸ್ ಶೋರೂಂ ಬೆಲೆ (ಗ್ರೇಡ್ ವಾರು)

Variant Ex Showroom Price (W.E.F 06th May 2024), Innova Crysta GX+ 7s Rs 21,39,000, Innova Crysta GX+ 8s ರೂ. 21,44,000 ಗಳಾಗಿದೆ.

ದೃಢವಾದ ಕಾರ್ಯಕ್ಷಮತೆ

ಇನ್ನೋವಾ ಕ್ರಿಸ್ಟಾ GX+ 2.4 ಲೀಟರ್ ಡೀಸೆಲ್ ಎಂಜಿನ್, ಇಕೋ ಮತ್ತು ಪವರ್ ಡ್ರೈವ್ ಮೋಡ್ , 5 ಸ್ಪೀಡ್ ಮ್ಯಾನುವಲ್ ಟ್ರಾನ್ಸ್‌ಮಿಷನ್‌ನೊಂದಿಗೆ ಲಭ್ಯವಿದೆ. ಶಕ್ತಿಶಾಲಿ ಜಿಡಿ ಡೀಸೆಲ್ ಎಂಜಿನ್ ಕಡಿಮೆ ಮತ್ತು ಮಧ್ಯಮ ವೇಗದ ಶ್ರೇಣಿಗಳಲ್ಲಿ ಗಣನೀಯ ವರ್ಧಿತ ಟಾರ್ಕ್‌ ಅನ್ನು ಹೊಂದಿದೆ. ಹೆಚ್ಚುವರಿಯಾಗಿ ವಾಹನವು ಪಿಚ್ ಮತ್ತು ಬೌನ್ಸ್ ನಿಯಂತ್ರಣದೊಂದಿಗೆ ಸುಧಾರಿತ ಸಸ್ಪೆಂಷನ್ ಅನ್ನು ಖಚಿತಪಡಿಸುತ್ತಿದ್ದು, ಕ್ಯಾಬಿನ್ ಚಲನೆಯನ್ನು ಕನಿಷ್ಠವಾಗಿರಿಸುತ್ತದೆ ಮತ್ತು ಒರಟಾದ ರಸ್ತೆಗಳಲ್ಲಿ ಸುಗಮ ಸವಾರಿಯನ್ನು ನಿರ್ವಹಿಸುತ್ತದೆ.

ಇದನ್ನೂ ಓದಿ: Akshaya Tritiya 2024: ಅಕ್ಷಯ ತೃತೀಯದಂದು ಏನು ಮಾಡಬೇಕು, ಏನು ಮಾಡಬಾರದು?

ಟಫ್ ಎಕ್ಸ್‌ಟೀರಿಯರ್

ಎಕ್ಸ್‌ಟೀರಿಯರ್ ಟಫ್ ಮತ್ತು ಅತ್ಯಾಧುನಿಕತೆಯ ಹೊಂದಾಣಿಕೆಯನ್ನು ಇದು ಹೊಂದಿದ್ದು, ನಯವಾದ ಮತ್ತು ಸಮಕಾಲೀನ ವಿನ್ಯಾಸದೊಂದಿಗೆ ಇನ್ನೋವಾ ಕ್ರಿಸ್ಟಾ ಪ್ರತಿ ಪ್ರಯಾಣದಲ್ಲಿ ಸೊಬಗು ಮತ್ತು ಪರಿಷ್ಕರಣೆಯನ್ನು ನೀಡುತ್ತದೆ. ಇದರ ನಿಖರವಾದ ಪರಿಷ್ಕರಿಸಿದ ಎಕ್ಸ್‌ಟೀರಿಯರ್ ವೈಶಿಷ್ಟ್ಯಗಳಾದ ಬೋಲ್ಡ್ ಫ್ರಂಟ್ ಗ್ರಿಲ್ ಮತ್ತು ಗಟ್ಟಿಮುಟ್ಟಾದ ಬಂಪರ್ ಲುಕ್ ಅನ್ನು ಹೆಚ್ಚಿಸುತ್ತದೆ. ಕಾರ್ಯಕ್ಷಮತೆಯನ್ನು ಹೆಚ್ಚಿಸುವುದಲ್ಲದೆ ರಸ್ತೆಯಲ್ಲಿ ಕಮಾಂಡಿಂಗ್ ಉಪಸ್ಥಿತಿಯನ್ನು ಖಚಿತಪಡಿಸುತ್ತದೆ. ಇನ್ನೋವಾ ಕ್ರಿಸ್ಟಾ GX+ ಅನ್ನು ಮತ್ತಷ್ಟು ಪ್ರತ್ಯೇಕಿಸುವ ಅಂಶವೆಂದರೆ ಅದರ ಭವ್ಯವಾದ ಸಿಲ್ವರ್ ಸರೌಂಡ್ ಪಿಯಾನೋ ಬ್ಲ್ಯಾಕ್ ಗ್ರಿಲ್ ಮತ್ತು ಆಕರ್ಷಕ ಡೈಮಂಡ್-ಕಟ್ ಅಲಾಯ್ಸ್ ವಾಹನದ ಆಕರ್ಷಣೆಯನ್ನು ಹೆಚ್ಚಿಸುತ್ತದೆ.

ಆರಾಮದಾಯಕ ಇಂಟೀರಿಯರ್

ಇನ್ನೋವಾ ಕ್ರಿಸ್ಟಾ GX+ ನ ಇಂಟೀರಿಯರ್ ನವೀನ ವೈಶಿಷ್ಟ್ಯಗಳೊಂದಿಗೆ ಆರಾಮ ಮತ್ತು ಅನುಕೂಲತೆಯಲ್ಲಿ ಉದಾಹರಣೆಯಾಗಿದೆ. ಇತರ ಇನ್ನೋವಾಗಳಂತೆ, ಐಷಾರಾಮಿ ಮತ್ತು ಆರಾಮವು ಹೊಸ ಇನ್ನೋವಾ ಕ್ರಿಸ್ಟಾ GX+ನ ಪ್ರಮುಖ ಅಂಶವಾಗಿದ್ದು ವುಡ್ ಫಿನಿಶ್ ಇಂಟೀರಿಯರ್ ಪ್ಯಾನೆಲ್ಸ್ , ಆಟೋ-ಫೋಲ್ಡ್ ಮಿರರ್ಸ್, ಡಿವಿಆರ್, ಸಾಟಿಯಿಲ್ಲದ ಪರಿಷ್ಕರಣೆ ಮತ್ತು ಕ್ಲಾಸ್ ಅನ್ನು ಹೊಂದಿದೆ.

ಇದನ್ನೂ ಓದಿ: Lok Sabha Election 2024: ಮತದಾನ ಮಾಡಲು ದುಬೈನಿಂದ ಗಂಗಾವತಿಗೆ ಆಗಮಿಸಿದ ದಂಪತಿ

ಸುಧಾರಿತ ಸುರಕ್ಷತಾ ಕೊಡುಗೆಗಳು

ಸುರಕ್ಷತೆಯು ಟೊಯೊಟಾಗೆ ಉನ್ನತ ಆದ್ಯತೆಯಾಗಿದೆ. ಇನ್ನೋವಾ ಕ್ರಿಸ್ಟಾ GX+ ಇದಕ್ಕೆ ಹೊರತಾಗಿಲ್ಲ. ರಿಯರ್ ಕ್ಯಾಮೆರಾ, ಎಸ್‌ಆರ್‌ಎಸ್ ಏರ್ ಬ್ಯಾಗ್ಸ್, ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್ ಮತ್ತು ಹಿಲ್-ಸ್ಟಾರ್ಟ್ ಅಸಿಸ್ಟ್ ಕಂಟ್ರೋಲ್ ಸೇರಿದಂತೆ ಸಮಗ್ರ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್ (ಎಬಿಎಸ್) ಮತ್ತು ಹೆಚ್ಚಿನ ಸಾಮರ್ಥ್ಯದ GOA ಬಾಡಿ ಸ್ಟ್ರಕ್ಚರ್ ಪ್ರತಿ ಪ್ರಯಾಣದಲ್ಲಿ ಸುರಕ್ಷತೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ.

Continue Reading

ಪ್ರಮುಖ ಸುದ್ದಿ

Anand Mahindra: ತಂದೆ ಸಾವಿನ ಬಳಿಕ ಕಷ್ಟದಲ್ಲಿದ್ದ ಬಾಲಕನ ಶಿಕ್ಷಣಕ್ಕೆ ಆನಂದ್‌ ಮಹೀಂದ್ರಾ ನೆರವು!

Anand Mahindra: ದೆಹಲಿಯಲ್ಲಿ ಜಸ್‌ಪ್ರೀತ್‌ ಎಂಬ ಬಾಲಕನು ತನ್ನ ತಂದೆ ತೀರಿಕೊಂಡ ಬಳಿಕ ಕುಟುಂಬಕ್ಕೆ ನೆರವಾಗಲಿ ಎಂದು ಶಾಲೆ ಬಿಟ್ಟು, ಬೀದಿ ಬದಿ ಊಟ, ತಿಂಡಿಯ ಅಂಗಡಿ ಇಟ್ಟುಕೊಂಡಿದ್ದ. ಈ ವಿಡಿಯೊ ವೈರಲ್‌ ಆಗುತ್ತಲೇ ಆತನ ನೆರವಿಗೆ ಧಾವಿಸುವ ಮೂಲಕ ಆನಂದ್‌ ಮಹೀಂದ್ರಾ ಮಾನವೀಯತೆ ಮೆರೆದಿದ್ದಾರೆ. ಬಾಲಕನ ಶಿಕ್ಷಣಕ್ಕೆ ನೆರವು ನೀಡಲಾಗುವುದು ಎಂದು ಆನಂದ್‌ ಮಹೀಂದ್ರಾ ಘೋಷಿಸಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

VISTARANEWS.COM


on

Anand Mahindra
Koo

ನವದೆಹಲಿ: ಮಹೀಂದ್ರಾ ಗ್ರೂಪ್‌ ಅಧ್ಯಕ್ಷ ಆನಂದ್‌ ಮಹೀಂದ್ರಾ (Anand Mahindra) ಅವರು ಉದ್ಯಮಿಯಾಗಿ, ಸ್ಫೂರ್ತಿದಾಯಕ ಮಾತುಗಳಿಂದ ಜನರಿಗೆ ಪ್ರೇರೇಪಣೆ ನೀಡುವ ಜತೆಗೆ ಸಮಾಜಮುಖಿ ಕಾರ್ಯಗಳಿಂದಲೂ ಖ್ಯಾತಿ ಗಳಿಸಿದ್ದಾರೆ. ದೇಶಕ್ಕಾಗಿ ಸೇವೆ ಸಲ್ಲಿಸಿದವರು, ಕಷ್ಟದಲ್ಲಿರುವವರು ಸೇರಿ ಹಲವರಿಗೆ ಅವರು ಆಗಾಗ ಸಹಾಯ ಮಾಡುತ್ತಲೇ ಇರುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ, ದೆಹಲಿಯಲ್ಲಿ (Delhi) ತಂದೆ ತೀರಿಕೊಂಡ ಬಳಿಕ ಶಿಕ್ಷಣ ತೊರೆದು, ಬೀದಿ ಬದಿ ಗೂಡಂಗಡಿ ಇಟ್ಟಿದ್ದ ಬಾಲಕನಿಗೆ ಆನಂದ್‌ ಮಹೀಂದ್ರಾ ನೆರವಿನ ಹಸ್ತ ಚಾಚಿದ್ದಾರೆ.

ಹೌದು, ಜಸ್‌ಪ್ರೀತ್‌ ಎಂಬ ಬಾಲಕನು ತನ್ನ ತಂದೆ ತೀರಿಕೊಂಡ ಬಳಿಕ ಕುಟುಂಬಕ್ಕೆ ನೆರವಾಗಲಿ ಎಂದು ಶಾಲೆ ಬಿಟ್ಟು, ಬೀದಿ ಬದಿ ಊಟ, ತಿಂಡಿಯ ಅಂಗಡಿ ಇಟ್ಟುಕೊಂಡಿದ್ದ. ಈ ವಿಡಿಯೊ ವೈರಲ್‌ ಆಗುತ್ತಲೇ ಆತನ ನೆರವಿಗೆ ಧಾವಿಸುವ ಮೂಲಕ ಆನಂದ್‌ ಮಹೀಂದ್ರಾ ಮಾನವೀಯತೆ ಮೆರೆದಿದ್ದಾರೆ. “ಧೈರ್ಯಕ್ಕೆ ಇನ್ನೊಂದು ಹೆಸರೇ ಜಸ್‌ಪ್ರೀತ್.‌ ಆದರೆ, ಈತನ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗಬಾರದು. ಈತ ದೆಹಲಿಯ ತಿಲಕ್‌ ನಗರದಲ್ಲಿ ಇದ್ದಾನೆ ಎಂದು ಅನಿಸುತ್ತಿದೆ. ಯಾರಿಗಾದರೂ ಈತನ ಕಾಂಟ್ಯಾಕ್ಟ್‌ ನಂಬರ್‌ ಸಿಕ್ಕರೆ ನನಗೆ ಕೊಡಿ. ಈತನ ಶಿಕ್ಷಣಕ್ಕೆ ಮಹೀಂದ್ರಾ ಫೌಂಡೇಷನ್‌ ಸಹಾಯ ಮಾಡಲಿದೆ” ಎಂದು ಬಾಲಕನ ವಿಡಿಯೊ ಸಮೇತ ಆನಂದ್‌ ಮಹೀಂದ್ರಾ ಅವರು ಪೋಸ್ಟ್‌ ಮಾಡಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಉತ್ತರ ಪ್ರದೇಶದಲ್ಲಿ ಕೆಲ ದಿನಗಳ ಹಿಂದಷ್ಟೇ ಅಮೆಜಾನ್‌ನ ಅಲೆಕ್ಸಾ (Alexa) ವಾಯ್ಸ್‌ ಅಸಿಸ್ಟಂಟ್‌ ಬಳಸಿ ಮಂಗಗಳ ದಾಳಿಯಿಂದ ತನ್ನನ್ನು ಹಾಗೂ ತನ್ನ ಅಕ್ಕನ ಮಗಳನ್ನು ರಕ್ಷಿಸಿದ 13 ವರ್ಷದ ಚಾಣಾಕ್ಷ ಬಾಲಕಿಗೆ ಈಗ ಆನಂದ್‌ ಮಹೀಂದ್ರಾ ಅವರು ಉದ್ಯೋಗ ನೀಡುವ ಆಫರ್‌ ಕೊಟ್ಟಿದ್ದರು. ತಂತ್ರಜ್ಞಾನವನ್ನು ಬಳಸಿ ಮಂಗಗಳಿಂದ ಬಚಾವಾದ 13 ವರ್ಷದ ಬಾಲಕಿ ನಿಕಿತಾಗೆ ಉದ್ಯೋಗ ಕೊಡುವ ಕುರಿತು ಆನಂದ್‌ ಮಹೀಂದ್ರಾ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು. “ಆಧುನಿಕ ಕಾಲದಲ್ಲಿ ನಾವು ತಂತ್ರಜ್ಞಾನದ ಗುಲಾಮರಾಗುತ್ತೇವೋ ಎಂಬ ಆತಂಕ ಕಾಡುತ್ತಿದೆ. ಆದರೆ, ಈ ಬಾಲಕಿಯು ಜಗತ್ತಿನಲ್ಲಿ ಮನುಷ್ಯನ ದಕ್ಷತೆಯನ್ನು ತಂತ್ರಜ್ಞಾನವು ಹೆಚ್ಚಿಸುತ್ತದೆ ಎಂಬುದನ್ನು ಸಾಬೀತುಪಡಿಸಿದ್ದಾಳೆ” ಎಂಬುದಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.

“ಬಾಲಕಿಯ ಕ್ಷಿಪ್ರ ಯೋಚನಾಶಕ್ತಿಯು ಅತ್ಯದ್ಭುತವಾಗಿದೆ. ಅನಿರೀಕ್ಷಿತ ಜಗತ್ತಿನಲ್ಲಿ ಹೇಗೆ ಯೋಚಿಸಬೇಕು, ಯಾವ ರೀತಿ ನಿರ್ಧಾರ ತೆಗೆದುಕೊಳ್ಳಬೇಕು ಎಂಬುದನ್ನು ಈಕೆಯು ಸಾಬೀತುಪಡಿಸಿದ್ದಾಳೆ. ಈ ಬಾಲಕಿಯು ಶಿಕ್ಷಣ ಮುಗಿಸಿ, ಕಾರ್ಪೊರೇಟ್‌ ಜಗತ್ತಿಗೆ ಕಾಲಿಡಲು ತೀರ್ಮಾನಿಸಿದರೆ, ಮಹೀಂದ್ರಾ ಕಂಪನಿಯಲ್ಲಿ ಅವಳಿಗೊಂದು ಕುರ್ಚಿ ಕಾಯುತ್ತಿರುತ್ತದೆ” ಎಂಬುದಾಗಿ ಆನಂದ್‌ ಮಹೀಂದ್ರಾ ಅವರು ನಿಕಿತಾಗೆ ಉದ್ಯೋಗದ ಆಫರ್‌ ನೀಡಿದ್ದಾರೆ. ಆನಂದ್‌ ಮಹೀಂದ್ರಾ ಅವರ ಕುರಿತೂ ಜನ ಮೆಚ್ಚುಗೆಯ ಮಾತುಗಳನ್ನಾಡಿದ್ದರು.

ಇದನ್ನೂ ಓದಿ: Anand Mahindra: ಸರ್ಫರಾಜ್ ಖಾನ್ ತಂದೆಗೆ ಥಾರ್ ಎಸ್‌ಯುವಿ ಗಿಫ್ಟ್​ ಕೊಟ್ಟ ಮಹೀಂದ್ರಾ

Continue Reading
Advertisement
Narendra Modi
ದೇಶ10 mins ago

Maldives: ಭಾರತೀಯರೇ, ದಯಮಾಡಿ ಬನ್ನಿ ಎಂದ ಮಾಲ್ಡೀವ್ಸ್‌ ಸಚಿವ; ಬಾಯ್ಕಾಟ್‌ ಪೆಟ್ಟಿಗೆ ಥಂಡಾ!

DK Shivakumar
ಕರ್ನಾಟಕ15 mins ago

Prajwal Revanna Case: ದೇವರಾಜೇಗೌಡ ನನ್ನ ವಿರುದ್ಧ ಸುಳ್ಳು ಅಪಾದನೆ ಮಾಡಿದ್ದಾರೆ ಎಂದ ಡಿಕೆಶಿ

T20 World Cup 2024
ಕ್ರೀಡೆ23 mins ago

T20 World Cup 2024 : ಕೇಸರಿಯ ರಂಗು; ಟೀಮ್​ ಇಂಡಿಯಾದ ಟಿ20 ವಿಶ್ವ ಕಪ್​​ ಜೆರ್ಸಿ ಬಿಡುಗಡೆ

108 Ambulance
ಕರ್ನಾಟಕ41 mins ago

108 Ambulance: 108 ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ದಿನೇಶ್ ಗುಂಡೂರಾವ್

IPL 2024
ಪ್ರಮುಖ ಸುದ್ದಿ45 mins ago

IPL 2024 : ಮುಂಬೈ ಚಾ ರಾಜಾ ರೋಹಿತ್​ ಶರ್ಮಾ ಎಂದು ಕೂಗಿದ ಹೇಡನ್​ ಪುತ್ರಿ ಗ್ರೇಸ್​​; ಇಲ್ಲಿದೆ ವಿಡಿಯೊ

Champions Trophy
ಪ್ರಮುಖ ಸುದ್ದಿ1 hour ago

Champions Trophy : ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲಿ ನಡೆಯಲು ಬಿಡುವುದಿಲ್ಲ ? ಬಿಸಿಸಿಐ ಸ್ಫೋಟಕ ಹೇಳಿಕೆ

Lok Sabha Election 2024
ಪ್ರಮುಖ ಸುದ್ದಿ1 hour ago

Lok Sabha Election 2024: ನಾಳೆ ರಾಜ್ಯದಲ್ಲಿ 2ನೇ ಹಂತದ ಮತದಾನಕ್ಕೆ ಸಕಲ ಸಿದ್ಧತೆ; 14 ಕ್ಷೇತ್ರಗಳಲ್ಲಿ 227 ಅಭ್ಯರ್ಥಿಗಳ ಸ್ಪರ್ಧೆ

IPL 2024
ಪ್ರಮುಖ ಸುದ್ದಿ2 hours ago

IPL 2024 : ಕೆಕೆಆರ್​ನಲ್ಲಿ ನಾಯಕ ಶ್ರೇಯಸ್​ ಮಾತು ಯಾರೂ ಕೇಳುತ್ತಿಲ್ಲ!

Bomb Threat
ದೇಶ2 hours ago

ಶಾಲೆಗಳಿಗೆ ಇ-ಮೇಲ್‌ ಮೂಲಕ ಹುಸಿ ಬಾಂಬ್‌ ಬೆದರಿಕೆ; ಕಠಿಣ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ!

Prajwal Revanna Case Delete vulgar video and avoid legal action says SIT chief
ಹಾಸನ2 hours ago

Prajwal Revanna Case: ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ಇದ್ದರೆ ಡಿಲೀಟ್‌ ಮಾಡಿ, ಇಲ್ಲದಿದ್ದರೆ ಕ್ರಮ: SIT ಮುಖ್ಯಸ್ಥರ ಖಡಕ್‌ ವಾರ್ನಿಂಗ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ5 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ5 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ5 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ19 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 day ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌