tatayya thathvamrutam a column by dr m r jayaram about saint kaivara narayanappaತಾತಯ್ಯ ತತ್ವಾಮೃತಂ : ಭೇದವಿಲ್ಲದಿರೆ ವಾದವಿಲ್ಲವಯ್ಯಾ...! - Vistara News

ಧಾರ್ಮಿಕ

ತಾತಯ್ಯ ತತ್ವಾಮೃತಂ : ಭೇದವಿಲ್ಲದಿರೆ ವಾದವಿಲ್ಲವಯ್ಯಾ…!

ಪರಮಾತ್ಮನು ಯಾವುದೇ ಭೇದಭಾವಕ್ಕೆ ಅವಕಾಶವಿಲ್ಲದಂತೆ ಸ್ತ್ರೀ ಮತ್ತು ಪುರುಷರಲ್ಲಿ, ಸರ್ವರಲ್ಲೂ ಸಮಭಾವದಿಂದ ಎಲ್ಲಾ ದೇಹಗಳಲ್ಲಿಯೂ ನೆಲೆಸಿದ್ದಾನೆ ಎನ್ನುತ್ತಿದ್ದಾರೆ ಶ್ರೀ ಕ್ಷೇತ್ರ ಕೈವಾರದ ಧರ್ಮಾಧಿಕಾರಿ ಡಾ. ಎಂ.ಆರ್‌. ಜಯರಾಮ್‌. ತಾತಯ್ಯರ ವಚನಗಳ ಒಳಾರ್ಥವನ್ನು ತಿಳಿಸುವ ಅವರ ಅಂಕಣ ಬರಹ ʻತಾತಯ್ಯ ತತ್ವಾಮೃತಂʼ ಇಲ್ಲಿದೆ.

VISTARANEWS.COM


on

tatayya thathvamrutam a column by dr m r jayaram about saint kaivara narayanappa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
tatayya thathvamrutam a column by dr m r jayaram about saint kaivara narayanappa

ಕೈವಾರದ ಶ್ರೀಯೋಗಿನಾರೇಯಣ ತಾತಯ್ಯನವರು ಜಗತ್ತಿನ ಮುಂಬರುವ ದಿನಗಳ ಭವಿಷ್ಯತ್ತಿನಲ್ಲಿ ಕಾಡುವ ಸಮಸ್ಯೆಗಳ ಬಗ್ಗೆ ತಮ್ಮ ತತ್ವಬೋಧನೆಗಳಲ್ಲಿ ಸೂಕ್ಷ್ಮವಾಗಿ ಅವಲೋಕಿಸಿದ್ದಾರೆ. ಒಂದು ಕೀರ್ತನೆಯಲ್ಲಿ “ಭೇದಮು ವುಡುಗಿತೇ, ವಾದಮು ವುಡುಗುನು” (ಭೇದವು ಇಲ್ಲದಿದ್ದರೆ, ವಾದವು ಇರುವುದಿಲ್ಲ) ಎಂದಿದ್ದಾರೆ.

ಇಂದು ಮಾನವ, ಮಾನವರ ನಡುವೆ ಭೇದವು ಹೆಚ್ಚಾಗಿ, ಸಮಾಜದ ಸಾಮರಸ್ಯವು ಹದಗೆಡುತ್ತಿದೆ. ಎಲ್ಲಿ ಭೇದವಿರುವುದಿಲ್ಲವೋ ಅಲ್ಲಿ ವಾದ-ವಿವಾದಗಳು ಬೆಳೆಯುವುದಿಲ್ಲ, ಭೇದವಿಲ್ಲದಿದ್ದರೆ ದ್ವಂದ್ವ ಭಾವನೆ ಬೆಳೆಯುವುದಿಲ್ಲ, ಎಲ್ಲಿ ಭೇದವಿರುವುದಿಲ್ಲವೋ ಅಲ್ಲಿ ಆತ್ಮಸಾಮರಸ್ಯ ಉಂಟಾಗುತ್ತದೆ, ಶಾಂತಿ, ನೆಮ್ಮದಿ ನೆಲೆಸುತ್ತದೆ.

ಒಂದೇ ವೇದವಿದ್ದ ಕಾಲದಲ್ಲಿ ಜನರಲ್ಲಿ ಭೇದವಿರಲಿಲ್ಲ. ದ್ವಾಪರಯುಗದಲ್ಲಿ ಶ್ರೀವೇದವ್ಯಾಸರು ಮುಂದಿನ ದಿನಗಳಿಗೆ ವೇದವನ್ನು ಮತ್ತಷ್ಟು ಸರಳೀಕರಣಗೊಳಿಸಿ ಕೊಟ್ಟರು. ಆಗ ವೇದಗಳು ನಾಲ್ಕು ಭಾಗಗಳಾಯಿತು. ಕಾಲನುಕ್ರಮವಾಗಿ ಉಪವೇದಗಳು, ಉಪನಿಷತ್ತುಗಳು, ಪುರಾಣಗಳು ರೂಪುಗೊಂಡವು. ಇವುಗಳ ಮೂಲ ಉದ್ದೇಶವೆಂದರೆ ಜನರಲ್ಲಿ ಸರಳವಾಗಿ ಭಕ್ತಿಯ ಭಾವವು ಮೂಡಲಿ, ಜ್ಞಾನವು ವೃದ್ಧಿಯಾಗಲಿ ಎಂಬುದಷ್ಟೇ ಆಗಿತ್ತು. ಮೂಲದಲ್ಲಿ ಯಾವ ರೀತಿಯಾದ ಉದ್ದೇಶದಿಂದ ತತ್ವಬೋಧನೆಗಳು ರೂಪುಗೊಂಡವೋ, ಅದೇ ಉದ್ದೇಶವನ್ನು ಹಿಡಿದಿಟ್ಟುಕೊಳ್ಳುವಲ್ಲಿ ವಿಫಲವಾಯಿತು. ಮತಗಳಲ್ಲಿ ವಿಭಜನೆಯಾಯಿತು. ಮತಗುರುಗಳು ಹುಟ್ಟಿಕೊಂಡರು. ಮತಭೇದಗಳು ಹೆಚ್ಚು, ಹೆಚ್ಚಾಯಿತು. ಇದನ್ನೇ ತಾತಯ್ಯನವರು ಹೀಗೆ ಹೇಳಿದ್ದಾರೆ.

ಆರು ಮತಮುಲಂದು ಅಖಿಲಾಂಡನಾಯಕುಡು
ಸಂಪ್ರೀತಿತೋ ವುಂಡು ಸಹಜಮುಗನು
ಮರ್ಮಂಬು ತೆಲಿಯಕನು ಮತಭೇದಮುಲು ಜೇಸಿ
ಕಟ್ಟಡೀ ಕರ್ಮಮುಲ ಕರಿಗಿನಾರು||

ಆರು ಮತಗಳ ದರ್ಶನ ಸಂಪ್ರದಾಯಗಳಲ್ಲಿ ಅಖಿಲಾಂಡನಾಯಕನಾದ ಒಬ್ಬನೇ ಪರಮಾತ್ಮನು ಪರಿಪೂರ್ಣ ಭಾವದಿಂದ ಸಮಾನವಾಗಿ ತುಂಬಿಕೊಂಡಿದ್ದಾನೆ. ಈ ಮರ್ಮವನ್ನು ಅರಿತುಕೊಳ್ಳದೆ ಮತಸಂಪ್ರದಾಯವಾದಿಗಳು ಮತಭೇದ ಮಾಡಿಕೊಂಡು, ವಿಭಿನ್ನವಾದ ಆಚಾರ ಸಂಪ್ರದಾಯಗಳ ಕಟ್ಟಳೆ ಮತ್ತು ಕರ್ಮಗಳನ್ನು ರಚಿಸಿಕೊಂಡು ಭೇದಭಾವಗಳಲ್ಲಿ ಮುಳುಗಿದ್ದಾರೆ ಎನ್ನುತ್ತಿದ್ದಾರೆ ತಾತಯ್ಯನವರು.

“ಮತಮುಲನ್ನಿಯು ವೇರೆ ಮಾರ್ಗಂಬು ವೊಕ್ಕಟೇ” (ಮತಗಳು ಬೇರೆ,ಬೇರೆಯಾಗಿರಬಹುದು, ಆದರೆ ಸೇರುವ ಮಾರ್ಗವು ಒಂದೇ) ಎಂದಿದ್ದಾರೆ ತಾತಯ್ಯನವರು. ಮತ ಸಂಪ್ರದಾಯಗಳು ಬೇರೆ ಬೇರೆಯಾಗಿರಬಹುದು. ಆದರೆ ಪರಮಾತ್ಮನ ಬಳಿಗೆ ಸೇರಲು ಮಾರ್ಗವನ್ನು ತೋರಿಸುವುದೇ ಆ ಮತಗಳ ಗುರಿಯಾಗಿದೆ. ಉಪಾಸನೆ ಮಾಡುವ ಭಕ್ತರ ಮಾರ್ಗದರ್ಶನಕ್ಕಾಗಿ ಮತೀಯ ದರ್ಶನಗಳಿವೆ.

tatayya thathvamrutam a column by dr m r jayaram about saint kaivara narayanappa

ಭೇದವಾದವನ್ನು ಸಮಾಜದಲ್ಲಿ ಹರಡಿ ಮೇಲು, ಕೀಳುಗಳ ತಾರತಮ್ಯವನ್ನು ಉಂಟುಮಾಡಿ, ಜನರ ದಿಕ್ಕು ತಪ್ಪಿಸುವುದು ಮತಗಳ ಉದ್ದೇಶವಾಗಿರಬಾರದು. ಮತಗಳೆಲ್ಲ ಮಾರ್ಗಗಳು, ಅವೆಲ್ಲ ಕೊನೆಗೆ ಒಂದೇ ಮಾರ್ಗದಲ್ಲಿ ಸೇರುತ್ತದೆ. ಹೇಗಾದರೆ ಒಂದು ಊರಿಗೆ ನಾಲ್ಕು ದಾರಿಗಳಿರುತ್ತದೆಯೋ, ಹಾಗೆಯೇ ಪರಮಾತ್ಮನಲ್ಲಿ ಸೇರಲು ನಾನಾ ಮಾರ್ಗಗಳಿವೆ. ಮಾರ್ಗ ತೋರಿಸುವುದಷ್ಟೇ ಮತಗಳ ಲಕ್ಷ್ಯವಾಗಬೇಕು.

ಸ್ತ್ರೀಲು ಪುರುಷಲಂದು ಶಿವಯೋಗಿವರುಲಂದು
ಜ್ಞಾನಹೀನಲಂದು ಸುಜ್ಞಾನುಲಂದು
ಸರ್ವಸಮುಡು ವುಂಡು ಸಕಲದೇಹಮುಲಂದು
ತೆಲಿಯನಿಯ್ಯದು ಮಾಯ ತೇಟಪಡದು ||

ಪರಮಾತ್ಮನು ಯಾವುದೇ ಭೇದಭಾವಕ್ಕೆ ಅವಕಾಶವಿಲ್ಲದಂತೆ ಸ್ತ್ರೀ ಮತ್ತು ಪುರುಷರಲ್ಲಿ, ಶಿವಯೋಗಿವರ್ಯರಲ್ಲಿ, ಜ್ಞಾನಹೀನರಲ್ಲಿ, ಸುಜ್ಞಾನಿಗಳಲ್ಲಿ ಸರ್ವರಲ್ಲೂ ಸಮಭಾವದಿಂದ ಎಲ್ಲಾ ದೇಹಗಳಲ್ಲಿಯೂ ನೆಲೆಸಿದ್ದಾನೆ. ಆದರೆ ಈ ಸತ್ಯದ ಅರಿವನ್ನು ಮಾಡಿಕೊಡಲು ಮಾಯೆಯ ಭ್ರಾಂತಿ ಬಿಡುತ್ತಿಲ್ಲ ಎನ್ನುತ್ತಿದ್ದಾರೆ ತಾತಯ್ಯನವರು.

ಧಾರ್ಮಿಕ ಮತ್ತು ಆಧ್ಯಾತ್ಮಿಕ ಲೇಖನ, ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ಈ ಸತ್ಯವನ್ನು ಸರಿಯಾಗಿ ಅರ್ಥಮಾಡಿಕೊಳ್ಳದೆ ಜನರು ಭೇದವಾದ ಮಾಡಿ ದೇವರು-ಧರ್ಮಗಳ ಹೆಸರಿನಲ್ಲಿ ಕಚ್ಚಾಡುತ್ತಿದ್ದಾರೆ. ದೇವರು ಸಕಲದೇಹವಿಹಾರಿ ಎಂದಿದ್ದಾರೆ. ಇಂತಹ ಸತ್ಯವನ್ನು ಅರಿವು ಮಾಡಿಕೊಟ್ಟು, ಪರತತ್ವದ ಬೋಧನೆಯನ್ನು ಮಾಡುವಂತಹ ಗುರು ಹೇಗಿರುತ್ತಾನೆ? ಇದಕ್ಕೆ ತಾತಯ್ಯನವರು ಹೀಗೆ ಉತ್ತರಿಸಿದ್ದಾರೆ.

ತೆಲಿಯವಚ್ಚುನು ಗುರುನಿ ತತ್ವೋಪದೇಶಮುನ
ತಲ್ಲಿವಂಟಿ ಗುರುಡು ದೊರಕುಟರುದು||

ಪರಮಾತ್ಮತತ್ವದ ಸತ್ಯವನ್ನು ಗುರುವಿನ ತತ್ವೋಪದೇಶದ ಸಹಾಯದಿಂದ ತಿಳಿಯಲು ಸಾಧ್ಯವಿದೆ. ಆದರೆ ಲೋಕದಲ್ಲಿ ತಾಯಿಯಂತಹ ಗುರು ಸಿಗುವುದು ವಿರಳ ಎಂದಿದ್ದಾರೆ. ಗುರು ತಾಯಿಯಂತೆ ಇರಬೇಕು. ಅಂತಹ ಗುರು ಸಿಕ್ಕುವುದು ಶಿಷ್ಯನ ಭಾಗ್ಯ. ಗುರುವೇ ತಾಯಿ, ಶಿಷ್ಯನೇ ಮಗು. ದೈವತತ್ವೋಪದೇಶ ತಿಳಿಯಬೇಕಾದರೆ ತಾಯಿಯಂಥ ಗುರುವಿನ ಉಪದೇಶ ಬೇಕು. ಆಗ ಜ್ಞಾನದ ಬೆಳಕು ಹೊಮ್ಮುತ್ತದೆ. ಆದರೆ ಅಂತಹ ಗುರು ಸಿಕ್ಕುವುದು ದುರ್ಲಭ.

ಒಟ್ಟಿನಲ್ಲಿ, ಸರ್ವರಲ್ಲೂ ದೈವವು ವ್ಯಾಪಿಸಿರುವ ಸತ್ಯವನ್ನು ಕಂಡುಕೊಂಡು, ಮಾಯೆಗೆ ಒಳಗಾಗದೆ, ಭೇದಭಾವ ಮಾಡದೆ, ಭಕ್ತಿಯ ಉಪಾಸನೆಯಲ್ಲಿ ಅರಿವನ್ನು ಪಡೆಯಬೇಕೆಂಬುದೇ ತಾತಯ್ಯನವರ ಬೋಧನೆಗಳ ಸಾರವಾಗಿದೆ.

ಲೇಖಕರು ಧರ್ಮಾಧಿಕಾರಿಗಳು, ಶ್ರೀ ಕ್ಷೇತ್ರ ಕೈವಾರ

ಇದನ್ನೂ ಓದಿ: ತಾತಯ್ಯ ತತ್ವಾಮೃತಂ : ಬುದ್ಧನಂತೆ ಆಸೆಯೇ ದುಃಖಗಳ ಆಲಯ ಎಂದಿದ್ದಾರೆ ತಾತಯ್ಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿವಮೊಗ್ಗ

Shivamogga News: ವಿಜೃಂಭಣೆಯ ರಿಪ್ಪನ್‌ಪೇಟೆ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ರಥೋತ್ಸವ

Shivamogga News: ರಿಪ್ಪನ್‌ಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು.

VISTARANEWS.COM


on

Sri Siddhivinayaka Swami SrimanMaharathotsava in Ripponpet
Koo

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು. ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಶ್ರೀ ಆಭಿನವ ಚನ್ನಬಸವ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿ, ಈ ವರ್ಷ ನಾಡಿಗೆ ಸಮೃದ್ಧ ಮಳೆ-ಬೆಳೆಯಾಗಿ ರೈತರ ಬದುಕು ಹಸನಾಗಲೆಂದು ಮತ್ತು ಜಗತ್ತಿನಲ್ಲೆಡೆ ಶಾಂತಿ, ನೆಮ್ಮದಿಯನ್ನು ಕರುಣಿಸುವಂತಾಗಲಿ ಎಂದು ಸಿದ್ಧಿವಿನಾಯಕ ದೇವರಲ್ಲಿ ಶ್ರೀಗಳು ಪ್ರಾರ್ಥಿಸಿದರು.

ಇದನ್ನೂ ಓದಿ: IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

ಮನ್ಮಹಾರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಶಿವಮೊಗ್ಗದ ವಸಂತ ಭಟ್ ಮತ್ತು ಚಂದ್ರಶೇಖರ ಭಟ್ ಹಾಗೂ ಗುರುರಾಜ ಭಟ್ ಅವರ ನೇತೃತ್ವದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತಾಧಿಗಳು ಶ್ರದ್ಧಾ ಭಕ್ತಿಯಿಂದ ರಥವನ್ನು ಎಳೆದು ಇಷ್ಠಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಭಕ್ತರಿಗೆ ಉಚಿತವಾಗಿ ಕಬ್ಬಿನ ಹಾಲು ಮತ್ತು ಐಸ್‌ಕ್ರೀಮ್, ಕುಡಿಯುವ ನೀರಿನ ವ್ಯವಸ್ಥೆಯನ್ನು ವಿವಿಧ ಸಂಘಟನೆಗಳಿಂದ ಆಯೋಜಿಸಲಾಗಿತ್ತು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ; ಕೋಲಾರದಲ್ಲಿ ಮೊದಲ ಮಳೆಯ ಸಿಂಚನ

ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಈಶ್ವರಶಟ್ಟಿ, ಎನ್. ಸತೀಶ್, ಗಣೇಶ್ ಎನ್. ಕಾಮತ್, ಎಂ.ಡಿ. ಇಂದ್ರಮ್ಮ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ತುಳೋಜಿರಾವ್, ಸ್ವಾಮಿ ದೊಡ್ಡಿನಕೊಪ್ಪ, ವೈ.ಜೆ. ಕೃಷ್ಣ, ಉಮೇಶ್ ಆರ್., ಮಂಜನಾಯ್ಕ್, ಎಂ.ಬಿ. ಮಂಜುನಾಥ, ಎಂ. ಸುರೇಶ್‌ ಸಿಂಗ್, ಸುಧೀರ್ ಪಿ., ರವೀಂದ್ರ ಕೆರೆಹಳ್ಳಿ, ನಾಗರತ್ನ ದೇವರಾಜ್, ಎಸ್.ಎನ್. ಬಾಲಚಂದ್ರ, ಕುಸುಮಾ ಬಾಲಚಂದ್ರ, ಪದ್ಮಾ ಸುರೇಶ್, ನಿವೃತ್ತ ಶಿಕ್ಷಕ ರಾಧಾಕೃಷ್ಣ, ಜಯಲಕ್ಷ್ಮಿ ಮೋಹನ್ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.

Continue Reading

ಧಾರ್ಮಿಕ

Ballari News: ಬಾಯಿಯೊಳಗೆ ತ್ರಿಶೂಲ; ಬೆನ್ನಿಗೆ ಕೊಕ್ಕೆ ಕಟ್ಟಿಕೊಂಡು ಕಾರು, ರಿಕ್ಷಾ ಎಳೆದ ಭಕ್ತರು!

Ballari News: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ ಜರುಗಿತು. ಹರಕೆ ತೀರಿಸುವ ಭಕ್ತರ ಆಚರಣೆಗಳು ಗಮನ ಸೆಳೆದವು.

VISTARANEWS.COM


on

Kalamma Devi Pooja Mahotsava in Kampli
Koo

ಕಂಪ್ಲಿ: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ (Ballari News) ಜರುಗಿತು.

ಸೋಮವಾರ ಸಂಜೆ ಗಂಗೆಸ್ಥಳ ಮತ್ತು ಅಗ್ನಿ ಕುಂಭೋತ್ಸವ ಸೇರಿದಂತೆ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಜರುಗಿದವು. ಮೆರವಣಿಗೆಯಲ್ಲಿ ಮೂವರು ಭಕ್ತಾದಿಗಳು ಬಾಯಿಗೆ 12 ಅಡಿ ಉದ್ದದ ತ್ರಿಶೂಲ ಅಸ್ತ್ರವನ್ನು ಹಾಕಿಸಿಕೊಂಡು ಕಲ್ಲುಗುಂಡು, ಇಬ್ಬರು ಭಕ್ತಾದಿಗಳು ಆಟೋರಿಕ್ಷಾ, ಇಬ್ಬರು ಭಕ್ತರು ಕಾರುಗಳನ್ನು ತಮ್ಮ ಬೆನ್ನುಗಳಿಗೆ ಹಾಕಿದ್ದ ಕಬ್ಬಿಣದ ಕೊಕ್ಕೆಗಳಿಂದ ಎಳೆದು ತಮ್ಮ ಹರಕೆ ತೀರಿಸಿದರು. ಟ್ರ್ಯಾಕ್ಟರ್‌ಗೆ ಹಾಕಲಾಗಿದ್ದ ಬೊಂಬುಗಳಿಗೆ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ಜೋತು ಬೀಳುವ ಮೂಲಕ ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

ಮೆರವಣಿಗೆಯು ಶ್ರೀ ಕಾಳಮ್ಮ ದೇವಸ್ಥಾನದಿಂದ ಶ್ರೀ ಸುಂಕಲಮ್ಮ ದೇವಸ್ಥಾನದ ವರೆಗೂ ಜರುಗಿತು. ಭಕ್ತಾದಿಗಳು ರಸ್ತೆಯುದ್ದಕ್ಕೂ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ತಮ್ಮ ಹರಕೆಯಂತೆ ಸುಡು ಬಿಸಿಲ ಮಧ್ಯೆಯು ಗುಂಡು, ಆಟೋ, ಕಾರುಗಳನ್ನು ಎಳೆದೊಯ್ದು ಭಕ್ತಿ ಸಮರ್ಪಿಸಿದರು.

ಪಟ್ಟಣದ ಸೇರಿದಂತೆ ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದಂತಹ ಭಕ್ತರು ವಿಶೇಷ ಆಚರಣೆಯನ್ನು ನೋಡಿ ಕಣ್ ತುಂಬಿಕೊಳ್ಳುವ ಮೂಲಕ ಆಶ್ಚರ್ಯ ಚಕಿತರಾದರು. ಕಾರ್ಯಕ್ರಮದ ಪೌರೋಹಿತ್ಯವನ್ನು ಮಾರೆಪ್ಪ ಪೂಜಾರಿ ವಹಿಸಿದ್ದರು.

ಇದನ್ನೂ ಓದಿ: Koppala News: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಿಗುವಂತೆ ಕ್ರಮ ಕೈಗೊಳ್ಳಲು ಜಿ.ಪಂ ಸಿಇಒ ಸೂಚನೆ

ಈ ಸಂದರ್ಭದಲ್ಲಿ ಮೀನುಗಾರ ಸಹಕಾರ ಸಂಘದ ಅಧ್ಯಕ್ಷ ಚೆನ್ನರಾಜು, ಉಪಾಧ್ಯಕ್ಷ ಷಣ್ಮುಖಪ್ಪ, ಮುಖಂಡರಾದ ಮಾರೆಪ್ಪ ಪೂಜಾರಿ, ಸ್ವಾಮಿ ದೊರೆ, ಎ. ಗಣೇಶ್, ಎಸ್.ಜಿ.ಪೂಜಾರಿ, ಗುರುಮೂರ್ತಿ, ಪಣಿಯಪ್ಪ, ಆರ್. ಕೃಷ್ಣ ಪೂಜಾರಿ, ಎಸ್.ಆರ್. ಸುರೇಶ್ ಸೇರಿದಂತೆ ಸರ್ವ ಸಮುದಾಯಗಳ ಸದ್ಭಕ್ತರು ಪಾಲ್ಗೊಂಡಿದ್ದರು.

Continue Reading

ಬೆಂಗಳೂರು

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Sadhguru Jaggi Vasudev: ಕಾಂಬೋಡಿಯಾದ ಸಾಂಸ್ಕೃತಿಕ ಮತ್ತು ಅಧ್ಯಾತ್ಮಿಕತೆಯ ಅನ್ವೇಷಣೆಗಾಗಿ ಸದ್ಗುರು ಜಗ್ಗಿ ವಾಸುದೇವ್‌ ಅವರು ತೆರಳಿದ್ದಾರೆ. ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸದ್ಗುರುಗಳ ಮೊದಲ ಪ್ರಯಾಣವಾಗಿದೆ.

VISTARANEWS.COM


on

Sadhguru Jaggi Vasudev
Koo

ಸೀಮ್‌ ರೀಪ್‌(ಕಾಂಬೋಡಿಯಾ): ಮೆದುಳಿನ ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕತೆಯ ಆಳದ ಅನ್ವೇಷಣೆಗಾಗಿ ಆಧ್ಯಾತ್ಮಿಕ ಗುರು ಹಾಗೂ ಈಶ ಫೌಂಡೇಶನ್‌ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ (Sadhguru Jaggi Vasudev) ಅವರು ಕಾಂಬೋಡಿಯಾಗೆ ತೆರಳಿದ್ದಾರೆ. ಕಾಂಬೋಡಿಯಾ ಪ್ರವಾಸೋದ್ಯಮ ಸಚಿವ ಎಚ್.ಇ. ಎಸ್ಒಕೆ ಸೋಕೆನ್ ಅವರು ಸೀಮ್ ರೀಪ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸದ್ಗುರುಗಳನ್ನು ಆತ್ಮೀಯತೆಯಿಂದ ಸ್ವಾಗತಿಸಿದರು.

ಗಮನಾರ್ಹ ಆತಿಥ್ಯದ ಜತೆಗೆ ಸಚಿವರು, ಕಾಂಬೋಡಿಯಾದ ಪ್ರಧಾನ ಮಂತ್ರಿಯವರ ವೈಯಕ್ತಿಕ ಪತ್ರವನ್ನು ಸದ್ಗುರುಗಳಿಗೆ ಪ್ರಸ್ತುತಪಡಿಸಿದರು. ಸಚಿವರೊಂದಿಗೆ ಅವರ ಪತ್ನಿ, ಕಾಂಬೋಡಿಯಾದ ಪ್ರವಾಸೋದ್ಯಮ ಸಚಿವಾಲಯದ ಅಧಿಕಾರಿಗಳು ಮತ್ತು ಭಾರತದ ಕಾನ್ಸುಲೇಟ್ ಜನರಲ್ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ತಮ್ಮ ಚಟುವಟಿಕೆಗಳಿಗೆ ಮರಳಿರುವ ಸದ್ಗುರುಗಳ ಮೊದಲ ಪ್ರಯಾಣ. ಅಲ್ಲಿ ಅವರು ಸ್ಥಳೀಯ ಸಂಸ್ಕೃತಿ ಮತ್ತು ದೇವಾಲಯಗಳ ಹಿಂದಿನ ವಿಜ್ಞಾನವನ್ನು ಅನ್ವೇಷಿಸಲಿದ್ದಾರೆ. ಅವರ ಕಾರ್ಯಕ್ರಮವು ಏಪ್ರಿಲ್ 30 ರವರೆಗೆ ಜರುಗಲಿದ್ದು, ಈ ಸಮಯದಲ್ಲಿ ಅಲ್ಲಿನ ಸ್ಥಳೀಯ ಸಂಸ್ಕೃತಿಯಲ್ಲಿ ಮಿಂದೇಳುವುದರ ಜತೆಗೆ, ಕಾಂಬೋಡಿಯಾದ ಸೀಮ್ ರೀಪ್‌ನಲ್ಲಿರುವ ಬೇಯಾನ್ ಮತ್ತು ಅಂಕೋರ್ ವಾಟ್ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.

ಯಾವುದೇ ಬೋಧನೆ, ತತ್ವಶಾಸ್ತ್ರ, ಮತಧರ್ಮ ಅಥವಾ ನಂಬಿಕೆಯ ವ್ಯವಸ್ಥೆಗಳಿಗೆ ಒಳಗಾಗದ ಸದ್ಗುರುಗಳು, ತಮ್ಮ ಆಧ್ಯಾತ್ಮಿಕ ಮತ್ತು ಸಾಮಾಜಿಕ ಪ್ರಯತ್ನಗಳು, ಪರಿಸರ ಕಾರ್ಯಗಳು, ಗ್ರಾಮೀಣ ಶಿಕ್ಷಣ ಮತ್ತು ಇನ್ನೂ ಹೆಚ್ಚಿನವುಗಳ ಮೂಲಕ ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ತಲುಪಿದ್ದಾರೆ. ಪ್ರಪಂಚದಾದ್ಯಂತ ಮೂವತ್ತು ಲಕ್ಷ ಜನರು ಅವರ ಪ್ರಮುಖ ಕಾರ್ಯಕ್ರಮವಾದ ಇನ್ನರ್ ಎಂಜಿನಿಯರಿಂಗ್ ಕಾರ್ಯಕ್ರಮದ ಪ್ರಯೋಜನ ಪಡೆದಿದ್ದಾರೆ. ಆ ಮೂಲಕ ಜನರು ತಮ್ಮ ಜೀವನದ ಗ್ರಹಿಕೆಯಲ್ಲಿ ಹೆಚ್ಚಿನ ಸಮತೋಲನ ಮತ್ತು ಗಮನಾರ್ಹ ಸ್ಪಷ್ಟತೆಯನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | Prerane : ಗೆಲುವಿಗೆ ಸೂತ್ರಗಳಿವೆಯೇ? ಸದ್ಗುರು ಹೀಗೆನ್ನುತ್ತಾರೆ!

2023 ರಲ್ಲಿ ಸದ್ಗುರುಗಳ ಸಾಮಾಜಿಕ ಮಾಧ್ಯಮವು 4.37 ಶತಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಪಡೆದಿತ್ತು. ಈ ಹಿನ್ನೆಲೆಯಲ್ಲಿ ಕಾಂಬೋಡಿಯಾದ ಅವರ ಅನ್ವೇಷಣೆಯು, ಆ ದೇಶದ ಬಗೆಗಿನ ಅವರ ಒಳನೋಟಗಳಿಂದ ಪ್ರಯೋಜನ ಪಡೆಯಲು ಜಗತ್ತಿಗೆ ಒಂದು ವಿಶಿಷ್ಟ ಅವಕಾಶವನ್ನು ಒದಗಿಸಲಿದೆ.

Continue Reading

ಬೆಂಗಳೂರು

Bengaluru Karaga: ವೈಭವದ ಕರಗ ಮಹೋತ್ಸವ ಸಂಪನ್ನ; ಲಕ್ಷಾಂತರ ಭಕ್ತರ ನಡುವೆ ಮಸ್ತಾನ್ ಸಾಬ್ ದರ್ಗಾಗೆ ಭೇಟಿ

Bengaluru Karaga: ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು.

VISTARANEWS.COM


on

bengaluru karaga in darga
Koo

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ (Bengaluru karaga Festival) ಮಂಗಳವಾರ ರಾತ್ರಿ ಅದ್ಧೂರಿಯಾಗಿ ನೆರವೇರಿತು. ನಗರ್ತಪೇಟೆಯಲ್ಲಿ ಧರ್ಮರಾಯಸ್ವಾಮಿ (Dharmaraya swamy) ರಥೋತ್ಸವ ಬಳಿಕ ರಾತ್ರಿ 2 ಗಂಟೆಗೆ ಕರಗ ಶಕ್ತ್ಸೋತ್ಸವಕ್ಕೆ (Bangalore Karaga) ಚಾಲನೆ ನೀಡಲಾಯಿತು. ಮುಂಜಾನೆ ಹಾಜಿ ಮಸ್ತಾನ್‌ ಸಾಬ್‌ ದರ್ಗಾಗೂ (Haji Mastan Saab Darga) ಭೇಟಿ ಕೊಟ್ಟು 5.45ರ ವೇಳೆಗೆ ಧರ್ಮರಾಯ ಸ್ವಾಮಿ ದೇವಸ್ಥಾನದೊಳಗೆ ಕರಗ ಸೇರಿಕೊಂಡಿತು. ವೈಭವದ ಕರಗ ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರು.

ನಿನ್ನೆ ರಾತ್ರಿ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ತೇಜಸ್ವಿ ಸೂರ್ಯ, ಶಾಸಕ ಹ್ಯಾರಿಸ್‌, ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯ ರೆಡ್ಡಿ ಮುಂತಾದವರು ಭೇಟಿ ನೀಡಿದರು. ಬೆಳಗ್ಗೆಯಿಂದಲೇ ತಾಯಿಗೆ ಬಳೆ ಶಾಸ್ತ್ರ, ತಾಳಿ ಶಾಸ್ತ್ರ, ಹೂ ಶಾಸ್ತ್ರ ವಿಶೇಷ ಪೂಜೆ ಸಲ್ಲಿಸಲಾಯಿತು. ಮಂಗಳವಾರ ರಾತ್ರಿ 10.30ಕ್ಕೆ ಕಲ್ಯಾಣಿಗೆ ಹೋಗಿ ಪೂಜೆ ಸಲ್ಲಿಸಲಾಯಿತು. ಅಲ್ಲಿಂದ ವಾಪಸ್ ಬಂದು ಧರ್ಮರಾಯ ದೇವಸ್ಥಾನದಲ್ಲಿ ಪೂಜೆ ಮಾಡಲಾಯಿತು. ರಥೋತ್ಸವದ ಬಳಿಕ ಭಕ್ತರ ಗೋವಿಂದ… ಗೋವಿಂದ… ಎಂಬ ಘೋಷಣೆಗಳ ನಡುವೆ ಅರ್ಚಕ ಜ್ಞಾನೇಂದ್ರ ಅವರು ಕರಗ ಹೊತ್ತು ಸಾಗಿದರು.

ಮುಖ್ಯ ರಥ ಧರ್ಮರಾಯಸ್ವಾಮಿ ರಥದಲ್ಲಿ ಅರ್ಜುನ‌ ಮತ್ತು ದ್ರೌಪದಿ ದೇವಿ ವಿರಾಜಮಾನರಾಗಿದ್ದರು. ಚಿಕ್ಕ ರಥದಲ್ಲಿ ಗ್ರಾಮದೇವಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಪಾಂಡವರ ಮೂರ್ತಿಗಳು ಸೇರಿ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಲ್ಲಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥಗಳು ಮುಂದೆ ಸಾಗುತ್ತಿದ್ದಂತೆ ದೇಗುಲದಿಂದ ದ್ರೌಪದಿ ದೇವಿ ಕರಗ ಹೊರಬಂದಿತು.

ಕರಗ ಸಾಗುವ ರಾಜಬೀದಿಗಳೆಲ್ಲಾ ಬಣ್ಣ ಬಣ್ಣದ ಲೈಟಿಂಗ್‌ ಹಾಗೂ ಜನರಿಂದ ಕಂಗೊಳಿಸಿದವು. ಸಾಂಪ್ರದಾಯಿಕವಾಗಿ ಎ. ಜ್ಞಾನೇಂದ್ರ 14ನೇ ಬಾರಿ ಕರಗ ಹೊತ್ತರು. ಒಂದು ರಥದಲ್ಲಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆಯಾಗಿದ್ದು, ಪಾಂಡವರ ಮೂರ್ತಿಗಳು ಸೇರಿದಂತೆ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಂದಿತು. ಪೂಜೆ ನಂತರ ಮತ್ತೊಂದು ರಥದಲ್ಲಿ ದ್ರೌಪದಿ ಮತ್ತು ಅರ್ಜುನ ಮೂರ್ತಿ ಪ್ರತಿಷ್ಠಾಪನೆಯಾಯಿತು. ನಂತರ ರಥಗಳ ಮೆರವಣಿಗೆ ಆರಂಭವಾಯಿತು. ಖಡ್ಗಗಳನ್ನು ಹಿಡಿದು ನೂರಾರು ವೀರಕುಮಾರರು ಮೆರವಣಿಗೆಯಲ್ಲಿ ತೆರಳಿದರು. ರಥಗಳು ಮುಂದೆ ಸಾಗುತ್ತಿದ್ದಂತೆ ದ್ರೌಪದಿ ದೇವಿ ಕರಗ ದೇಗುಲದಿಂದ ಹೊರ ಬಂದಿದ್ದು, ಅದನ್ನು ಕಂಡು ಭಕ್ತರು ಹರ್ಷೋದ್ಗಾರ ಮಾಡಿದರು.

ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು. ಒಟ್ಟು 11-12 ಕಿಲೋಮೀಟರ್ ಕರಗದ ಮೆರವಣಿಗೆ ಸಾಗಿದೆ.

ಕರಗ ಮೆರವಣಿಗೆ ಮಾರ್ಗ

ರಥೋತ್ಸವದ ನಂತರ ಮಧ್ಯರಾತ್ರಿ 1 ಗಂಟೆಯಿಂದ ಕರಗ ಮಹೋತ್ಸವದ ಮೆರವಣಿಗೆ ಸಾಗಿತು. ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಿ ಕಬ್ಬನ್​ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ ಮೂಲಕ ಸಾಗಿ ನಂತರ ಕೆ.ಆರ್. ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇಗುಲಕ್ಕೆ ತೆರಳಿತು. ಬಳಿಕ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ರಾಣಾಸಿಂಗ್​ಪೇಟೆ, ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ, ಮಸ್ತಾನ್ ಸಾಹೇಬ್ ದರ್ಗಾ, ಬಳೆಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್​ಪಿ ರಸ್ತೆ ಮೂಲಕ ಸಾಗಿ ಅಣ್ಣಮ್ಮ ದೇಗುಲಕ್ಕೆ ಬಂದು ಅದೇ ಮಾರ್ಗದಲ್ಲಿ ವಾಪಸಾಯಿತು. ಬೆಳಗ್ಗೆ 5.45 ಗಂಟೆಗೆ ಧರ್ಮರಾಯಸ್ವಾಮಿ ದೇವಾಲಯ ಸೇರಿತು. ಬೆಳಗ್ಗೆ 8 ಗಂಟೆಗೆ ತಾಯಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಕರಗಕ್ಕೆ ತೆರೆ ಬೀಳಲಿದೆ.

ಇದನ್ನೂ ಓದಿ | Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

Continue Reading
Advertisement
Gadag News
ಕರ್ನಾಟಕ8 mins ago

Gadag News: ಮುಂಡರಗಿ ಬಳಿ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಸಾವು

Drought Relief
ಕರ್ನಾಟಕ50 mins ago

Drought Relief: ಚುನಾವಣೆ ಖರ್ಚಿಗಾಗಿ ಬರ ಪರಿಹಾರ ತಡೆಹಿಡಿದ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ್‌

Prajwal Revanna Case No evidence against me its a conspiracy says HD Revanna
ಕರ್ನಾಟಕ57 mins ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Beef smuggling suspected Hindu activists pelt stones at vehicle
ಯಾದಗಿರಿ1 hour ago

Beef Smuggling: ಗೋಮಾಂಸ ಸಾಗಾಟ ಶಂಕೆ; ಹಿಂದುಪರ ಕಾರ್ಯಕರ್ತರಿಂದ ವಾಹನಕ್ಕೆ ಕಲ್ಲು ತೂರಾಟ

Narendra Modi
ದೇಶ1 hour ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Vijay Namdevrao Wadettiwar
ದೇಶ2 hours ago

ಮುಂಬೈ ದಾಳಿ ಉಗ್ರ ಅಜ್ಮಲ್‌ ಕಸಬ್‌ ನಿರಪರಾಧಿ ಎಂದ ಕಾಂಗ್ರೆಸ್‌ ನಾಯಕ; ಭುಗಿಲೆದ್ದ ವಿವಾದ!

Beer Shortage
ಕರ್ನಾಟಕ2 hours ago

Beer Shortage: ಬೇಸಿಗೆಯಲ್ಲಿ ಮದ್ಯ ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

Torn Jeans Styling Tips
ಫ್ಯಾಷನ್2 hours ago

Torn Jeans Styling Tips: ಟೊರ್ನ್‌ ಜೀನ್ಸ್‌ ಪ್ಯಾಂಟ್‌ ಪ್ರಿಯರು ನೆನಪಿನಲ್ಲಿಟ್ಟುಕೊಳ್ಳಬೇಕಾದ 5 ಪ್ರಮುಖ ಸಂಗತಿಗಳು

lok sabha Election 2024 Bus Fare Hike
Lok Sabha Election 20242 hours ago

Lok Sabha Election 2024 : ಮತದಾನದ ಹಬ್ಬದಲ್ಲೂ ಲೂಟಿಗೆ ಇಳಿದ ಖಾಸಗಿ ಬಸ್‌! ವೋಟ್‌ ಹಾಕಲು ಬಸ್‌ ಏರುವವರಿಗೆ ಟಿಕೆಟ್ ದುಬಾರಿ!‌

IPL 2024
Latest2 hours ago

IPL 2024 : ಚೆನ್ನೈ ತಂಡದ ಮಾರಕ ಬೌಲರ್ ಮಹೀಶ್​ ಪತಿರಾನಾ​ ಐಪಿಎಲ್​ನಿಂದ ಹೊರಕ್ಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case No evidence against me its a conspiracy says HD Revanna
ಕರ್ನಾಟಕ57 mins ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 hour ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ14 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌