Karnataka CM: ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೆ ರಾಜ್ಯದ ವಿವಿಧೆಡೆ ಕಾರ್ಯಕರ್ತರ ಸಂಭ್ರಮಾಚರಣೆ - Vistara News

ಕರ್ನಾಟಕ

Karnataka CM: ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೆ ರಾಜ್ಯದ ವಿವಿಧೆಡೆ ಕಾರ್ಯಕರ್ತರ ಸಂಭ್ರಮಾಚರಣೆ

Karnataka CM: ಸಿದ್ದರಾಮಯ್ಯ ಅವರು 2ನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸದ ಹಿನ್ನೆಲೆಯಲ್ಲಿ ವಿವಿಧೆಡೆ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ್ದಾರೆ.

VISTARANEWS.COM


on

Siddaramaiah's portrait procession in Kalaburagi
ಕಲಬುರಗಿಯಲ್ಲಿ ಸಿದ್ದರಾಮಯ್ಯ ಅವರ ಭಾವಚಿತ್ರದ ಮೆರವಣಿಗೆ ಮಾಡಲಾಯಿತು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನೂತನ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ (Karnataka CM) ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್‌ ಹಾಗೂ 8 ಸಚಿವರು ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹೀಗಾಗಿ ರಾಜ್ಯದ ವಿವಿಧೆಡೆ ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.

ಮಂಗಳೂರು ಕಾಂಗ್ರೆಸ್ ಕಚೇರಿ ಮುಂದೆ ಪಟಾಕಿ ಸಿಡಿಸಿ ಅಭಿಮಾನಿಗಳ ಸಂಭ್ರಮ

ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದ ಹಿನ್ನೆಲೆಯಲ್ಲಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ ನಡೆಸಿದರು. ಮಂಗಳೂರು ಕಾಂಗ್ರೆಸ್ ಕಚೇರಿ ಮುಂದೆ ಮಾಜಿ ಸಚಿವ ಅಭಯ ಚಂದ್ರ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಕೋಲಾರ ಅಭಿಮಾನಿಗಳಿಂದ ಸಿದ್ದುಗೆ ಟಗರು ಗಿಫ್ಟ್

Kolar fans gift Ram to Sidaramaiah

ಕೋಲಾರ: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅಭಿಮಾನಿಗಳು ಸಿದ್ದರಾಮಯ್ಯ ಅವರಿಗೆ ಟಗರು ಗಿಫ್ಟ್ ನೀಡಲು ಮುಂದಾಗಿದ್ದಾರೆ. ಕೋಲಾರದಿಂದ ಟಗರು ಗಿಫ್ಟ್ ಕೊಡಲು ಅಭಿಮಾನಿಗಳು ಶನಿವಾರ ಬೆಂಗಳೂರಿಗೆ ತೆರಳಿದರು. ಕೋಲಾರದ ಕೀಲುಕೋಟೆಯ ಜಯರಾಮ್ ಅವರಿಂದ ಸುಮಾರು 45 ಕೆಜಿ ತೂಕದ ಟಗರು ಉಡುಗೊರೆಯಾಗಿ ನೀಡಲಾಗುತ್ತಿದೆ. ಇದೇ ವೇಳೆ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಗಳು ಮನವಿ ಮಾಡಿದ್ದಾರೆ.

ಇದನ್ನೂ ಓದಿ | Karnataka CM: ಮುಗಿಲು ಮುಟ್ಟಿದ ಸಿದ್ದರಾಮಯ್ಯ ಕ್ರೇಜ್‌; ಎಲ್ಲೆಡೆ ಡ್ಯಾನ್ಸ್‌ ಮಾಡುತ್ತಿರುವ ಫ್ಯಾನ್ಸ್‌

ಶಿವಮೊಗ್ಗದಲ್ಲಿ ಸಿದ್ದರಾಮಯ್ಯ ಫ್ಲೆಕ್ಸ್‌ಗೆ ಕ್ಷೀರಾಭಿಷೇಕ

Ksheerabhishekam for Siddaramaiah's flex in Shivamogga

ಶಿವಮೊಗ್ಗ: ನಗರದ ಪೊಲೀಸ್ ಚೌಕಿ ವೃತ್ತದಲ್ಲಿ ಸಂಗೊಳ್ಳಿ ರಾಯಣ ಕುರುಬ ವೇದಿಕೆಯಿಂದ, ಸಿದ್ದರಾಮಯ್ಯ ಫ್ಲೆಕ್ಸ್‌ಗೆ ಕ್ಷೀರಾಭಿಷೇಕ ಮಾಡಲಾಯಿತು. ನಂತರ ಸಿದ್ದರಾಮಯ್ಯ ಪರ ಜೈಕಾರ ಘೋಷಣೆ ಕೂಗಿದ ಅಭಿಮಾನಿಗಳು, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಚನ್ನಪಟ್ಟಣದಲ್ಲಿ ಕುರುಬ ಸಮುದಾಯದಿಂದ ಸಿಹಿ ಹಂಚಿ ಸಂಭ್ರಮ

Kuruba community celebration in Channapatna

ರಾಮನಗರ: ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಚನ್ನಪಟ್ಟಣದಲ್ಲಿ ಕುರುಬ ಸಮುದಾಯದಿಂದ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು. ಕೋಟಿಗೊಬ್ಬ ನಮ್ಮ ಸಿದ್ದರಾಮಯ್ಯ ಎಂದು ಜೈಕಾರ ಹಾಕಿದ ಅಭಿಮಾನಿಗಳು, ಈ ಬಾರಿಯೂ 5 ವರ್ಷ ಸಿದ್ದರಾಮಯ್ಯ ಸಿಎಂ ಆಗಿ ಬಡವರ ಪರವಾಗಿ ಆಡಳಿತ ನಡೆಸಲಿ ಎಂದು ಶುಭ ಹಾರೈಸಿದರು.

101 ಈಡುಗಾಯಿ ಒಡೆದು ಹರಕೆ ತೀರಿಸಿದ ಗ್ರಾಮಸ್ಥರು

Villagers break 101 coconuts in mandya district

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಚೊಟ್ಟನಹಳ್ಳಿಯ ಚಿಕ್ಕಮ್ಮ ತಾಯಿ ದೇವಾಲಯದಲ್ಲಿ ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿದರು. ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು 101 ಈಡುಗಾಯಿ ಒಡೆದು ಹರಕೆ ತೀರಿಸಿ, ಸಿದ್ದರಾಮಯ್ಯ ಒಳ್ಳೆಯ ಆಡಳಿತ ನೀಡಲಿ, ರಾಜ್ಯಕ್ಕೆ ಒಳಿತಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಚಿಕ್ಮಮ್ಮ ತಾಯಿ, ಸಿದ್ದರಾಮಯ್ಯರ ಮನೆ ದೇವರಾಗಿದ್ದಾರೆ. ಸಿದ್ದು ಎರಡು ಕ್ಷೇತ್ರಗಳಲ್ಲಿ‌ ಚುನಾವಣೆ ನಿಲ್ಲಬೇಕು, ಒಂದೇ ಕ್ಷೇತ್ರದಲ್ಲಿ ನಿಂತರೂ ಗೆದ್ದು ಸಿಎಂ ಆಗುತ್ತಾರೆ ಎಂದು ಗ್ರಾಮದ ಚಿಕ್ಕಮ್ಮತಾಯಿ ಭವಿಷ್ಯ ನುಡಿದಿದ್ದರು. ಹೀಗಾಗಿ ಚಿಕ್ಕಮ್ಮ ತಾಯಿ ನುಡಿದಿದ್ದ ಭವಿಷ್ಯ ನಿಜವಾಗಿದೆ ಎಂದು ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿ 101 ಈಡುಗಾಯಿ ಒಡೆದಿದ್ದಾರೆ.

ಧಾರವಾಡ ಸೇರಿ ವಿವಿಧೆಡೆಯ ಇಂದಿರಾ ಕ್ಯಾಂಟೀನ್‌ಗಳಲ್ಲಿ ಹೋಳಿಗೆ ವಿತರಣೆ

Indira canteen in Dharwad
ಧಾರವಾಡದ ಮಿನಿ ವಿಧಾನಸೌಧ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಹೋಳಿಗೆ ಊಟ ವಿತರಿಸಲಾಯಿತು.

ಧಾರವಾಡ: ಸಿದ್ದರಾಮಯ್ಯ ಎರಡನೇ ಬಾರಿಗೆ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಧಾರವಾಡದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಹೋಳಿಗೆ ವಿತರಣೆ ಮಾಡಲಾಗಿದೆ. ಡಾ.ಮಯೂರ ಮೋರೆ ಹಾಗೂ ಸಿದ್ದರಾಮಯ್ಯ ಅಭಿಮಾನಿಗಳ ಬಳಗದಿಂದ ಧಾರವಾಡ ಮಿನಿ ವಿಧಾನಸೌಧ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಹೋಳಿಗೆ ವಿತರಣೆ ಮಾಡಲಾಯಿತು. ಧಾರವಾಡ-ಹುಬ್ಬಳ್ಳಿ, ದಕ್ಷಿಣ ಕನ್ನಡ, ಬಾಗಲಕೋಟೆ ಸೇರಿ ಮೂರು ಜಿಲ್ಲೆಗಳ 17 ಕ್ಯಾಂಟೀನ್‌ಗಳಲ್ಲಿ ಒಟ್ಟು 9 ಸಾವಿರ ಹೋಳಿಗೆಗಳನ್ನು ವಿತರಣೆ ಮಾಡಲಾಗಿದೆ.

ಇದನ್ನೂ ಓದಿ | Karnataka CM: ಮೊದಲ ಸುದ್ದಿಗೋಷ್ಠಿಯಿಂದಲೇ ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸಿದ ಸಿದ್ದರಾಮಯ್ಯ!: ಕೇಂದ್ರದ ವಿರುದ್ಧ ಭರ್ಜರಿ ವಾಗ್ದಾಳಿ

ಹೊಸಪೇಟೆಯಲ್ಲಿ ಡೊಳ್ಳು ಸಿದ್ದಿಗೆ ಕುಣಿದು ಕುಪ್ಪಳಿಸಿದ ಕಾರ್ಯಕರ್ತರು

Congress celebration in hosapete

ವಿಜಯನಗರ: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪದಗ್ರಹಣ ಮಾಡಿದ ಹಿನ್ನೆಲೆಯಲ್ಲಿ ವಿಜಯನಗರದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಹೊಸಪೇಟೆಯ ಡಾ. ಪುನೀತ್ ರಾಜಕುಮಾರ್ ವೃತ್ತದಲ್ಲಿ ಡೊಳ್ಳು ಸದ್ದಿಗೆ ಅಭಿಮಾನಿಗಳು ಕುಣಿದು ಕುಪ್ಪಳಿಸಿದರು. ನಂತರ ಕಾಂಗ್ರೆಸ್ ಮುಖಂಡ ರವಿ ನೇತೃತ್ವದಲ್ಲಿ ಮೆರವಣಿಗೆ ನಡೆಸಲಾಯಿತು.

ಕಾಳಗಿ ತಾಲೂಕಿನ ಬೀರಲಿಂಗೆಶ್ವರ ದೇವಸ್ಥಾನದಲ್ಲಿ ಪೂಜೆ

Puja at Biralingeswara Temple in Kalagi taluk

ಕಲಬುರಗಿ: ಸಿದ್ದರಾಮಯ್ಯ 2ನೇ ಬಾರಿಗೆ ಸಿಎಂ‌ ಆಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಕಾಳಗಿ ತಾಲೂಕಿನ ಟೆಂಗಳಿ ಗ್ರಾಮದಲ್ಲಿ ಶ್ರೀ ಬೀರಲಿಂಗೆಶ್ವರ ದೇವಸ್ಥಾನದಲ್ಲಿ ಬೆಂಬಲಿಗರು ಪೂಜೆ ಸಲ್ಲಿಸಿದರು. ಸಿದ್ದರಾಮಯ್ಯ ಅವರ ಕಟ್ಟಾ ಅಭಿಮಾನಿ ಮಲ್ಲಿಕಾರ್ಜುನ ಮಾಡಬೂಳ ಅವರಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಅಭಿಮಾನಿಗಳು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ನಗರದ ಚೆನ್ನಮ್ಮ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮ

ಬೆಳಗಾವಿ: ನಗರದ ಚೆನ್ನಮ್ಮ ವೃತ್ತದಲ್ಲಿ ಸತೀಶ್‌ ಜಾರಕಿಹೊಳಿ ಹಾಗೂ ಸಿದ್ದರಾಮಯ್ಯಗೆ ಜೈಕಾರ ಕೂಗಿ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. ಪಟಾಕಿ ಸಿಡಿಸಿ ಪರಸ್ಪರ ಬಣ್ಣ ಎರಚಿಕೊಂಡು ಕಾರ್ಯಕರ್ತರು ಖುಷಿಪಟ್ಟರು. ಸತೀಶ್‌ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರ್, ಸಿದ್ದರಾಮಯ್ಯ ಭಾವಚಿತ್ರ ಹಿಡಿದು ಸಂಭ್ರಮಾಚರಣೆ ನಡೆಸಿದರು.

ಇದನ್ನೂ ಓದಿ | Karnataka CM : ಮಹಿಳೆಯರಿಗೆ ಫ್ರೀ ಬಸ್‌ ಪಾಸ್‌, ಕರೆಂಟ್‌ ಫ್ರೀ: 5 ಗ್ಯಾರಂಟಿ ಯೋಜನೆಗೆ ತಾತ್ವಿಕ ಒಪ್ಪಿಗೆ, ಜಾರಿ ಸದ್ಯಕ್ಕಿಲ್ಲ

ರಾಣೆಬೆನ್ನೂರಿನ ದೇವರಗುಡ್ಡ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಕೆ

ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಐತಿಹಾಸಿಕ ಕ್ಷೇತ್ರ ದೇವರಗುಡ್ಡದ ಮಾಲತೇಶ ದೇವರಿಗೆ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ನಂತರ ಸಿದ್ದರಾಮಯ್ಯ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ, ಐದು ವರ್ಷಗಳ ಕಾಲ ಸಿಎಂ ಆಗಿ ಮುಂದುವರಿಯಲಿ ಎಂದು ಪ್ರಾರ್ಥಿಸಿ ಅಭಿಮಾನಿಗಳು ತೆಂಗಿನಕಾಯಿ ಒಡೆದರು.

ಮಡಿಕೇರಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮ

Congress workers celebration in madikeri

ಮಡಿಕೇರಿ: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಧಿಕಾರ ಸ್ವೀಕಾರ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಮಡಿಕೇರಿಯ ಚೌಕಿ ವೃತದಲ್ಲಿ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತು. ಪಟಾಕಿ‌ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಕಾರ್ಯಕರ್ತರಿಂದ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪರ ಮೊಳಗಿದವು.

Congress workers celebration in vijayapura
ವಿಜಯಪುರ ನಗರದ ಗಾಂಧಿಚೌಕ್‌ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಿಸಿದರು.
Congress workers celebration in koppal
ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ಕಲಬುರಗಿಯಲ್ಲಿ ಸಿದ್ದರಾಮಯ್ಯ ಭಾವಚಿತ್ರ ಮೆರವಣಿಗೆ

ಕಲಬುರಗಿ: ಕಲಬುರಗಿ ನಗರದಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲುಮುಟ್ಟಿತ್ತು. ಶಾಸಕ ಅಲ್ಲಮಪ್ರಭು ಪಾಟೀಲ್ ಬೆಂಬಲಿಗರಿಂದ ಶ್ರೀ ಶರಣಬಸವೇಶ್ವರ ದೇಗುಲದಲ್ಲಿ 101 ತೆಂಗಿನಕಾಯಿ ಒಡೆದು ಹರಕೆ ತೀರಿಸಲಾಯಿತು. ನಂತರ ಪಟಾಕಿ ಸಿಡಿಸಿ ಸಿಹಿ ಹಂಚಿಕೆ ಮಾಡಿದರು. ಬಳಿಕ ವಾದ್ಯ, ಡೊಳ್ಳು ಕುಣಿತದೊಂದಿಗೆ ಸಿದ್ದರಾಮಯ್ಯ ಭಾವಚಿತ್ರವನ್ನು ಮೆರವಣಿಗೆ ಮಾಡಲಾಯಿತು. ಶ್ರೀ ಶರಣಬಸವೇಶ್ವರ ದೇಗುಲದಿಂದ ಕೋರಿ ಸಿದ್ದೇಶ್ವರ ಮಠದವರೆಗೆ ಮೆರವಣಿಗೆ ನಡೆಯಿತು.

ಇದನ್ನೂ ಓದಿ | Karnataka CM: ಒಂದೇ ಸಭೆಯಲ್ಲಿ 10,000 ಕೋಟಿ ರೂ. ಉಳಿಸಿದ ಸಿದ್ದರಾಮಯ್ಯ!: ಗ್ಯಾರಂಟಿ ಜಾರಿ ಹೀಗಿರಲಿದೆಯೇ?

ಮಸ್ಕಿ ಪಟ್ಟಣದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ

Celebrations by distributing sweets in maski town

ರಾಯಚೂರು: ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡ ಕೃಷ್ಣ ಚಿಗರಿ ನೇತೃತ್ವದಲ್ಲಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ಅದೇ ರೀತಿ ಲಿಂಗಸುಗೂರು ತಾಲೂಕಿನ ಆನೆ ಹೊಸೂರಿನಲ್ಲೂ ಕಾಂಗ್ರೆಸ್ ಮುಖಂಡರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ನೌಕರರ ಕಾರ್ನರ್

7th Pay Commission: 7ನೇ ವೇತನ ಆಯೋಗ; ವರದಿ ಜಾರಿಯಾದ್ರೆ ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಲಿದೆ?

7th Pay Commission: 7ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರಿ ನೌಕರರಿಗೆ ಆಗಬಹುದಾದ ವೇತನ ರಚನೆ ಮತ್ತು ವೇತನ ವ್ಯತ್ಯಾಸದ ಮಾಹಿತಿ ಲಭ್ಯವಾಗಿದ್ದು, ಯಾರಿಗೆ ಎಷ್ಟು ವೇತನ ಹೆಚ್ಚಳವಾಗಲಿದೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

VISTARANEWS.COM


on

7th Pay Commission
Koo

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು (7th Pay Commission) ಮಾರ್ಚ್‌ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿತ್ತು. ವರದಿ ಸ್ವೀಕರಿಸಿದ ನಂತರ ಅದರಲ್ಲಿರುವ ಅಂಶಗಳನ್ನು ಪರಿಶೀಲಿಸಿ, ಬಳಿಕ ವೇತನ ಹೆಚ್ಚಳದ ಸಂಬಂಧಿತ ಶಿಫಾರಸು ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದರು. ಇದೀಗ 7ನೇ ವೇತನ ಆಯೋಗ ಶಿಫಾರಸಿನಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಆಗಬಹುದಾದ ವೇತನ ರಚನೆ ಮತ್ತು ವೇತನ ವ್ಯತ್ಯಾಸದ ಮಾಹಿತಿ ಲಭ್ಯವಾಗಿದ್ದು, ಯಾರಿಗೆ ಎಷ್ಟು ವೇತನ ಹೆಚ್ಚಳವಾಗಲಿದೆ (Salary Hike) ಎಂಬ ಮಾಹಿತಿ ಇಲ್ಲಿದೆ.

ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗವು ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿತ್ತು. ಈ ಮೊದಲು ನೌಕರರಿಗೆ ಶೇ.40ರಷ್ಟು ವೇತನ ಹೆಚ್ಚಳ ಮಾಡಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ನೇತೃತ್ವದಲ್ಲಿ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದರು. ಆದರೆ, ವರದಿಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನವನ್ನು ಶೇ. 27ರಷ್ಟು ಹೆಚ್ಚಿಸಲು ಶಿಫಾರಸು ಮಾಡಲಾಗಿತ್ತು. ಇದರ ಜತೆಗೆ ಮೂಲ ವೇತನವನ್ನು (Basic salary) 27,000 ರೂ.ಗಳಿಗೆ ಹೆಚ್ಚಿಸುವಂತೆಯೂ ಶಿಫಾರಸು ಮಾಡಲಾಗಿತ್ತು.

ಎ ವಲಯದಲ್ಲಿ ಕರ್ತವ್ಯ ನಿರ್ವಹಿಸುವ ಸಿ ಮತ್ತು ಡಿ ದರ್ಜೆ ನೌಕರರಿಗೆ 2022ರ ಜುಲೈ 1ರಂದು ಮೂಲ ವೇತನ 17,000 ರೂ. ಇದ್ದರೆ, ತುಟ್ಟಿಭತ್ಯೆ ಶೇ. 31 (5,270 ರೂ.) ಹಾಗೂ ಶೇ.27.50 (4,675 ರೂ. ) ಫಿಟ್ಮೆಂಟ್‌ ಸೇರಿ ಒಟ್ಟು 26,945 ಸಿಗುತ್ತಿತ್ತು. ಇನ್ನು 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಮೂಲ ವೇತನ 27,000 ಇದ್ದರೆ, ಅಂದಾಜು ತುಟ್ಟಿ ಭತ್ಯೆ ಶೇ.8.5 (2295 ರೂ), ಮನೆ ಬಾಡಿಗೆ ಭತ್ಯೆ ಶೇ.20 (5,400 ರೂ.), ವೈದ್ಯಕೀಯ 500, ನಗರ ಪರಿಹಾರ ಭತ್ಯೆ (ಸಿಸಿಎ) 750 ರೂ. ಸೇರಿ ಒಟ್ಟು 35,945 (01-01-2024ಕ್ಕೆ) ರೂ. ಸಿಗಲಿದೆ. 6ನೇ ವೇತನ ಆಯೋಗದಲ್ಲಾದರೆ ಒಟ್ಟು 29,005 ರೂ. ಸಿಗುತ್ತಿತ್ತು. ಪರಿಷ್ಕೃತ ವೇತನದಲ್ಲಿ 6940 ರೂ. ಹೆಚ್ಚಳವಾಗಲಿದೆ.

ಅದೇ ರೀತಿ ಎ ವಲಯದಲ್ಲಿ ಕಾರ್ಯ ನಿರ್ವಹಿಸುವ ಎ ಮತ್ತು ಬಿ ದರ್ಜೆ ನೌಕರರಿಗೆ 2022ರ ಜುಲೈ 1ರಂದು 17,000 ರೂ. ವೇತನ ಇದ್ದರೆ, ಶೇ. 31 ತುಟ್ಟಿ ಭತ್ಯೆ (5270 ರೂ.), ಫಿಟ್ಮೆಂಟ್‌ ಶೇ.27.50 (4675 ರೂ.) ಸೇರಿ ಒಟ್ಟು 26945 ರೂ ವೇತನ ಸಿಗುತ್ತಿತ್ತು. ಆದರೆ, 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಮೂಲ ವೇತನ 27000 ಇದ್ದರೆ, ತುಟ್ಟಿ ಭತ್ಯೆ ಶೇ.8.5 (2298 ರೂ.), ಮನೆ ಬಾಡಿಗೆ ಭತ್ಯೆ ಶೇ.20 (5400 ರೂ.), ನಗರ ಪರಿಹಾರ ಭತ್ಯೆ(ಸಿಸಿಎ) 900 ಸೇರಿ ಒಟ್ಟು 35,595 ವೇತನ ಸಿಗಲಿದೆ. ಇದು 6ನೇ ವೇತನ ಆಯೋಗದ ಅವಧಿಯಲ್ಲಿ 27,545 ರೂ. ಆಗಿದೆ. ಪರಿಷ್ಕೃತ ವೇತನದಲ್ಲಿ 8,050 ರೂ. ಹೆಚ್ಚಳವಾಗಲಿದೆ.

ವೇತನ ರಚನೆ ಮತ್ತು ವ್ಯತ್ಯಾಸದ ಪಟ್ಟಿ ಇಲ್ಲಿದೆ

ಇದನ್ನೂ ಓದಿ | 7th Pay Commission: 7ನೇ ವೇತನ ಆಯೋಗದ ವರದಿ ಸ್ವೀಕಾರ; ಸಿಎಂಗೆ ರಾಜ್ಯ ಸರ್ಕಾರಿ ನೌಕರರ ಸಂಘ ಅಭಿನಂದನೆ

Continue Reading

ಮಳೆ

Karnataka Rain: ಶನಿವಾರ ಸಂಜೆ ಅಬ್ಬರಿಸಿದ ಗಾಳಿ ಮಳೆಗೆ ತೊಯ್ದು ತೊಪ್ಪೆಯಾದ ಮಂದಿ; ರಸ್ತೆಗೆ ಬಿದ್ದ ಮರಗಳು

Karnataka Rain: ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಶನಿವಾರ ಸಂಜೆ ಗಾಳಿಯೊಂದಿಗೆ ಸುರಿದ ಭಾರಿ ಮಳೆಗೆ ಜನರು ತೊಯ್ದು ತೊಪ್ಪೆಯಾದರು. ವಿಜಯಪುರ, ಹುಬ್ಬಳ್ಳಿ, ರಾಯಚೂರು ಸೇರಿ ಚಿಕ್ಕಮಗಳೂರಲ್ಲೂ ಮಳೆಯು (Heavy Rain alert) ಅಬ್ಬರಿಸಿತ್ತು. ರಸ್ತೆ ಮೇಲೆ ನೀರು ಹರಿದುಮ ಕೆಲವೆಡೆ ಕೆರೆಯಂತಾಗಿತ್ತು. ಇನ್ನೂ ನಾಲ್ಕೈದು ದಿನಗಳು ಗುಡುಗು ಸಹಿತ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka rain
Koo

ವಿಜಯಪುರ/ಹುಬ್ಬಳ್ಳಿ: ಶನಿವಾರ ಹಲವೆಡೆ ದಿಢೀರ್‌ ಸುರಿದ ಮಳೆಗೆ (Rain News) ಜನರು ತತ್ತರಿಸಿ ಹೋಗಿದ್ದರು. ಉತ್ತರ ಒಳನಾಡಿನ ವಿಜಯಪುರ, ರಾಯಚೂರು, ಹುಬ್ಬಳ್ಳಿ, ಧಾರವಾಡ ಹಾಗೂ ಮಲೆನಾಡಿನ ಚಿಕ್ಕಮಗಳೂರಿನಲ್ಲೂ ವರುಣಾರ್ಭಟ (Karnataka Rain) ಜೋರಾಗಿತ್ತು. ಮೇ 15ರವರೆಗೆ ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

ವಿಜಯಪುರ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸುರಿದ ಮಳೆಯು ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ತಂಪು ತಂದಿತ್ತು. ಬಿರು ಬಿಸಿಲಿಗೆ ಕಂಗೆಟ್ಟು ಹೋಗಿದ್ದ ಜನರು, ಶನಿವಾರ ಸುರಿದ ಅರ್ಧ ಗಂಟೆಗೂ ಆಧಿಕ ಕಾಲ ಮಳೆಗೆ ಸಂತಸಗೊಂಡರು. ಇನ್ನೂ ರೈತರು ಮುಂಗಾರು ಹಂಗಾಮಿಗೆ ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಈವರೆಗೂ ಮಳೆಯಿಂದ ಯಾವುದೇ ಹಾನಿಯಾದ ವರದಿಯಾಗಿಲ್ಲ.

Karnataka Rain

ಹುಬ್ಬಳ್ಳಿ, ಬೆಳಗಾವಿಯಲ್ಲಿ ಗುಡುಗು -ಸಿಡಿಲಿನ ಮಳೆ ಅಬ್ಬರ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಯಾಗಿದೆ. ಕೆಲವೆಡೆ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆಯಾಗಿದೆ. ಎಡೆಬಿಡದೆ ಆರ್ಭಟಿಸುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿತ್ತು. ರಸ್ತೆಗಳಲ್ಲಿ ನೀರು ತುಂಬಿ ಹರಿದು ಸಂಚಾರಕ್ಕೆ ಅಡ್ಡಿಯಾಗಿತ್ತು. ಇತ್ತ ಬೆಳಗಾವಿಯಲ್ಲಿ ಗುಡುಗು ಸಿಡಿಲು ಮಿಶ್ರಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿನ ಬೇಗೆಗೆ ಬೇಸೆತ್ತು ಹೋಗಿದ್ದ ಕುಂದಾನಗರಿ ಜನರಿಗೆ ವರುಣ ತಂಪೆರೆದಿದ್ದಾನೆ. ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ.

ಇದನ್ನೂ ಓದಿ: Heavy Rain: ಬೆಂಗಳೂರಿನಲ್ಲಿ ಮಳೆಯ ಅಬ್ಬರ; ಹಲವೆಡೆ ರಸ್ತೆಯಲ್ಲೇ ಹರಿದ ನೀರು, ಸಂಚಾರ ಅಸ್ತವ್ಯಸ್ತ

ಜೋರು‌ ಮಳೆಯಲ್ಲೇ ಶನಿವಾರದ ಸಂತೆ ಸಂಭ್ರಮ

ರಾಯಚೂರು ಜಿಲ್ಲೆ ದೇವದುರ್ಗ ಪಟ್ಟಣದಲ್ಲಿ ವರುಣಾರ್ಭಟದ ನಡುವೆಯೇ ಶನಿವಾರದ ಸಂತೆ ಜೋರಾಗಿತ್ತು. ಧಾರಾಕಾರ ಮಳೆ‌‌ಯಲ್ಲೇ ವ್ಯಾಪಾರಸ್ಥರು ಸಂತೆ ಮಾಡಿದರು. ಮಳೆಗೆ ಡೋಂಟ್ ಕೇರ್ ಎಂದ ಸಾವಿರಾರು ಜನರು ಖರೀದಿಯಲ್ಲಿ ಬ್ಯುಸಿಯಾಗಿದ್ದರು.

ಧಾರವಾಡದಲ್ಲಿ ಮಳೆ ಗಾಳಿಗೆ ಜಖಂ ಆದ ಬಸ್‌ಗಳು

ಧಾರವಾಡದಲ್ಲಿ ಗಾಳಿ ಸಹಿತ ಧಾರಾಕಾರವಾಗಿ ಮಳೆಗೆ ನಗರದ ಬಹುತೇಕ ಕಡೆ ಮರಗಳು ನೆಲಕ್ಕುರುಳಿದ್ದವು. ಮಳೆ ಗಾಳಿಗೆ ಬಸ್‌ಗಳು ಜಖಂ ಆಗಿದ್ದವು. ನಿರ್ಮಾಣ ಹಂತದಲ್ಲಿದ್ದ ಈಜುಕೊಳದ ಕಟ್ಟಿಗೆ ಸೆಂಟ್ರಿಂಗ್ ಬಿದ್ದು ಖಾಸಗಿ ಬಸ್ ಜಖಂಗೊಂಡಿತ್ತು. ನಗರದ ಡಿಸಿ ಕಂಪೌಂಡ್‌ಗೆ ಹೊಂದಿಕೊಂಡಿರುವ ನಿರ್ಮಾಣ ಹಂತದ ಕಟ್ಟಡದಲ್ಲಿ ಘಟನೆ ನಡೆದಿತ್ತು.

Karnataka Rain

ಚಿಕ್ಕಮಗಳೂರಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ

ಕಾಫಿನಾಡು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಗುಡುಗು-ಸಿಡಿಲಿನೊಂದಿಗೆ ಎಡಬಿಡದೆ ಮಳೆ ಸುರಿಯುತ್ತಿದೆ. ರಸ್ತೆಯಲ್ಲಿ ನೀರು ನದಿಯಂತೆ ಹರಿಯುತ್ತಿದೆ. ಚಿಕ್ಕಮಗಳೂರು ನಗರ, ಜಯಪುರ, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ ಭಾಗದಲ್ಲಿ ಮಳೆ ಜತೆ ಭಾರಿ ಗಾಳಿ ಬೀಸುತ್ತಿದೆ. ಇನ್ನೂ ಕಳೆದೊಂದು ಗಂಟೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ವಿದ್ಯುತ್ ತಂತಿ ಮೇಲೆ ಮರ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಭಾರೀ ಗಾಳಿ-ಮಳೆಯಿಂದ ವಿದ್ಯುತ್ ಸಂಪರ್ಕವಿಲ್ಲದೆ ಕುಗ್ರಾಮಗಳು ಕತ್ತಲಲ್ಲಿವೆ. ಮಳೆ ಕಂಡು ರೈತರು, ಅಡಿಕೆ-ಕಾಫಿ-ಮೆಣಸು ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ.

ಮಂಗಳೂರಿನ ಕುಕ್ಕೆ ಸುಬ್ರಹ್ಮಣ್ಯದಲ್ಲೂ ಗಾಳಿ,ಗುಡುಗು ಸಹಿತ ಮಳೆಯಾಗುತ್ತಿದೆ. ಸುಮಾರು ಅರ್ಧಗಂಟೆಗಳ ಕಾಲ ಮಳೆಯು ಸುರಿದಿದೆ. ಬಿಸಿಲ ಬೇಗೆಯಿಂದ ತತ್ತರಿಸಿದ ಸುಬ್ರಹ್ಮಣ್ಯದಲ್ಲಿ ಹಠಾತ್‌ ಮಳೆಯು ಕ್ಷೇತ್ರಕ್ಕೆ ಆಗಮಿಸಿದ ಭಕ್ತರಲ್ಲಿ ಸಂತಸ ಮೂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Akshaya Tritiya: ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಲ್ಲಿ ಬಾಲ ರಾಮನ ಬೆಳ್ಳಿ ವಿಗ್ರಹದ ಪೂಜೆ ಸಂಪನ್ನ

Akshaya Tritiya: ಬೆಂಗಳೂರಿನ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಅಯೋಧ್ಯೆಯಲ್ಲಿ ಪೂಜಿಸಲ್ಪಟ್ಟ ಬಾಲ ರಾಮನ ವಿಗ್ರಹದ ಪೂಜಾ ಕಾರ್ಯಕ್ರಮ ನೆರವೇರಿತು.

VISTARANEWS.COM


on

Akshaya Tritiya
Koo

ಬೆಂಗಳೂರು: ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನಲ್ಲಿ ಅಕ್ಷಯ ತೃತೀಯ (Akshaya Tritiya) ಶುಭದಿನದಂದು ಅಯೋಧ್ಯೆಯ ಶ್ರೀ ರಾಮನ ಸನ್ನಿಧಾನದಲ್ಲಿ ಪೂಜಿಸಲ್ಪಟ್ಟ ಶ್ರೀ ಬಾಲ ರಾಮನ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಈ ವೇಳೆ ಎಂಎಲ್‌ಸಿ ಹಾಗೂ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನ ಮಾಲೀಕರಾದ ಟಿ.ಎ. ಶರವಣ ಅವರೊಂದಿಗೆ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನ ರಾಯಭಾರಿಯಾದ ಬಿಗ್ ಬಾಸ್ ಖ್ಯಾತಿಯ ನಮ್ರತಾ ಗೌಡಮತ್ತು ಕನ್ನಡ ಕಿರುತೆರೆ ನಟಿ ಪೂರ್ಣಿಮಾ ಅವರು ಭಾಗಿಯಾಗಿದ್ದರು.

ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ 50,000 ಮೇಲ್ಪಟ್ಟು ಖರೀದಿಸಿದ ಗ್ರಾಹಕರಿಗೆ ಅಯೋಧ್ಯೆಯ ಶ್ರೀ ಬಾಲ ರಾಮರ ಸನ್ನಿಧಾನದಲ್ಲಿ ಪೂಜಿಸಲ್ಪಟ್ಟ ಬೆಳ್ಳಿ ವಿಗ್ರಹವನ್ನು ಉಡುಗೊರೆಯಾಗಿ ನೀಡಲಾಯಿತು.

ಇದನ್ನೂ ಓದಿ | Gold Rate Today: ಚಿನ್ನದ ಮಾರುಕಟ್ಟೆ ಇಳಿಮುಖ; 22 ಮತ್ತು 24 ಕ್ಯಾರಟ್‌ ಬಂಗಾರದ ದರಗಳಲ್ಲಿ ಇಳಿಕೆ

Continue Reading

ಸಿನಿಮಾ

Pooja Hegde: ಕಾರ್ಕಳದ ಕಣಜಾರು ದೇಗುಲಕ್ಕೆ ಭೇಟಿ ನೀಡಿದ ನಟಿ ಪೂಜಾ ಹೆಗ್ಡೆ

Pooja Hegde: ಬಹುಭಾಷಾ ನಟಿ, ಕರಾವಳಿ ಮೂಲದ ಪೂಜಾ ಹೆಗ್ಡೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಣಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬ್ರಹ್ಮಕಲಶೋತ್ಸವ ಸಭಾ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದ ಪೂಜಾ ಹೆಗ್ಡೆ ಅವರನ್ನು ದೇವಸ್ಥಾನದ ಸಮಿತಿಯ ಸದಸ್ಯರು ಗೌರವಿಸಿದರು. ಸನ್ಮಾನದ ವೇಳೆ ಅಭಿಮಾನಿಯೊರ್ವ ರಚಿಸಿದ ತಮ್ಮ ಭಾವಚಿತ್ರವನ್ನು ನಟಿ ಸ್ವೀಕರಿಸಿದರು.

VISTARANEWS.COM


on

Pooja Hegde
Koo

ಉಡುಪಿ: ಬಹುಭಾಷಾ ನಟಿ, ಕರಾವಳಿ ಮೂಲದ ಪೂಜಾ ಹೆಗ್ಡೆ (Pooja Hegde) ಇತ್ತೀಚೆಗೆ ಕಾರ್ಕಳಕ್ಕೆ ಭೇಟಿ ನೀಡಿದರು. ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಅವರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಣಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬ್ರಹ್ಮಕಲಶೋತ್ಸವ ಸಭಾ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದ ಪೂಜಾ ಹೆಗ್ಡೆ ಅವರನ್ನು ದೇವಸ್ಥಾನದ ಸಮಿತಿಯ ಸದಸ್ಯರು ಗೌರವಿಸಿದರು. ಸನ್ಮಾನದ ವೇಳೆ ಅಭಿಮಾನಿಯೊರ್ವ ರಚಿಸಿದ ತಮ್ಮ ಭಾವಚಿತ್ರವನ್ನು ನಟಿ ಸ್ವೀಕರಿಸಿದರು. ಪ್ರತಿವರ್ಷ ದೈವಕೋಲ, ದೇವಸ್ಥಾನದ ಜಾತ್ರೆ, ಉತ್ಸವದಲ್ಲಿ ಪೂಜಾ ಹೆಗ್ಡೆ ಭಾಗಿಯಾಗುತ್ತಾರೆ.

ಈ ವೇಳೆ ಅವರು ಕಣಜೂರಿನ ತನ್ನ ಬಾಲ್ಯದ ನೆನಪುಗಳನ್ನು ಬಿಚ್ಚಿಟ್ಟಿದ್ದಾರೆ. ಭೂತಾರಾಧನೆ, ದೈವರಾಧನೆ ಕುರಿತೂ ಮಾತನಾಡಿದ್ದಾರೆ. ಮುಂಬೈಯಲ್ಲಿ ಹುಟ್ಟಿ ಬೆಳೆದ ಪೂಜಾ ಹೆಗ್ಡೆ ಪ್ರತಿವರ್ಷದ ರಜೆಯಲ್ಲಿ ತಮ್ಮ ಅಜ್ಜನ ಮನೆಯಾದ ಕಣಜೂರಿಗೆ ಭೇಟಿ ನೀಡುತ್ತಿದ್ದರಂತೆ. ʼʼಬೇಸಿಗೆ ರಜೆಯನ್ನು ಇಲ್ಲಿ ಬಹಳ ಖುಷಿಯಿಂದ ಕಳೆಯುತ್ತಿದ್ದೆವು. ನಮಗೆ ಊರು ಬಿಟ್ಟು ಹೋಗಲು ಮನಸ್ಸಾಗುತ್ತಲೇ ಇರಲಿಲ್ಲ” ಎಂದು ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ದೇವರ ಅನುಗ್ರಹ ಇಲ್ಲದೆ ಏನೂ ಸಾಧನೆ ಮಾಡಲಾಗದು. ಸಿನಿಮಾ ಕುಟುಂಬವಲ್ಲದ ಕಡೆಯಿಂದ ನಾನು ಈ ಕ್ಷೇತ್ರಕ್ಕೆ ಬಂದಿದ್ದೇನೆ. ನಾನು ಸಾಧನೆ ಮಾಡಲು ದೇವರ ಅನುಗ್ರಹವೇ ಕಾರಣʼʼ ಎಂದು ಹೇಳಿದ್ದಾರೆ.

2012ರಲ್ಲಿ ತಮಿಳಿನ ʼಮುಗಮೂಡಿʼ ಸಿನಿಮಾದ ಮೂಲ ಪೂಜಾ ಹೆಗ್ಡೆ ಸಿನಿ ರಂಗಕ್ಕೆ ಕಾಲಿಟ್ಟರು. ಜೀವ ನಾಯಕನಾಗಿ ನಟಿಸಿದ್ದ ಈ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಹಿಟ್‌ ಆಗದಿದ್ದರೂ ಪೂಜಾ ಗಮನ ಸೆಳೆದಿದ್ದರು. 2014ರಲ್ಲಿ ʼಒಕ ಲೈಲ ಕೋಸಮ್‌ʼ ಮತ್ತು ʼಮುಕುಂದʼ ಚಿತ್ರಗಳ ಮೂಲಕ ಟಾಲಿವುಡ್‌ ಪ್ರವೇಶಿಸಿದರು. ಬಳಿಕ ನೇರ ಬಾಲಿವುಡ್‌ ತೆರಳಿದರು. 2016ರಲ್ಲಿ ರಿಲೀಸ್‌ ಆದ ʼಮೊಹೆಂಜದಾರೊ’ ಸಿನಿಮಾದಲ್ಲಿ ಹೃತಿಕ್‌ ರೋಷನ್‌ಗೆ ನಾಯಕಿಯಾಗಿ ಗಮನ ಸೆಳೆದರು.

ಹೀಗೆ ಬಹುಭಾಷಾ ನಟಿಯಾಗಿ ಗುರುತಿಸಿಕೊಂಡ ಪೂಜಾ ಹೆಗ್ಡೆ ಟಾಪ್‌ ನಾಯಕಿಯರಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಟಾಲಿವುಡ್‌, ಬಾಲಿವುಡ್‌ನ ಟಾಪ್‌ ನಾಯಕರ ಜತೆಗೆ ತೆರೆ ಹಂಚಿಕೊಂಡಿದ್ದಾರೆ. ಸದ್ಯ ಶಾಹಿದ್ ಕಪೂರ್ ಜತೆಗೆ ‘ದೇವ’ ಹಿಂದಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ರೋಶನ್‌ ಆಂಡ್ರ್ಯೂಸ್ ನಿರ್ದೇಶನದ ಈ ಸಿನಿಮಾ ಆ್ಯಕ್ಷನ್ ಥ್ರಿಲ್ಲರ್ ಕಥಾ ಹಂದರ ಹೊಂದಿದೆ ಎನ್ನಲಾಗಿದೆ. ಜತೆಗೆ ಅಹನ್‌ ಶೆಟ್ಟಿ ಅಭಿನಯದ ಮುಂದಿನ ಸಿನಿಮಾದಲ್ಲಿಯೂ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: Pooja Hegde: 45 ಕೋಟಿ ರೂ. ಬೆಲೆಯ ಹೊಸ ಮನೆ ಖರೀದಿಸಿದ ಪೂಜಾ ಹೆಗ್ಡೆ

ಕೆಲವು ದಿನಗಳ ಹಿಂದೆಯಷ್ಟೇ ಪೂಜಾ ಹೆಗ್ಡೆ ಖ್ಯಾತ ಕ್ರಿಕೆಟಿಗನ ಜತೆ ಹೊಸ ಬಾಳಿಗೆ ಕಾಲಿಡುತ್ತಿದ್ದಾರೆ ಎಂದು ವರದಿಯಾಗಿತ್ತು. ಮದುವೆಗೆ ಎಲ್ಲ ಸಿದ್ಧತೆ ನಡೆಯುತ್ತಿದೆ ಎಂತಲೂ ಸುದ್ದಿಯಾಗಿತ್ತು. ಆ ಖ್ಯಾತ ಕ್ರಿಕೆಟಿಗ ಯಾರು ಎಂಬುದರ ಬಗ್ಗೆ ಎಲ್ಲೂ ರಿವೀಲ್ ಆಗಿರಲಿಲ್ಲ. ಈ ಬಗ್ಗೆ ನಟಿ ಯಾವುದೇ ಸ್ಪಷ್ಟನೆ ನೀಡಿಲ್ಲ. ಆದರೆ ತೆಲುಗು ಮಾಧ್ಯಮಗಳು ಈ ಬಗ್ಗೆ ಸುದ್ದಿ ಮಾಡಿದ್ದವು. ಸದ್ಯ ಈ ವಿಚಾರ ತಣ್ಣಗಾಗಿದೆ.

Continue Reading
Advertisement
ICMR Dietary Guidelines
ಆರೋಗ್ಯ6 mins ago

ICMR Dietary Guidelines: ನಿಮ್ಮ ಆರೋಗ್ಯ ಚೆನ್ನಾಗಿರಬೇಕೆ? ತಜ್ಞ ಸಮಿತಿಯ ಈ ಆಹಾರ ಸಲಹೆ ಪಾಲಿಸಿ

Dwarka Tour
ಪ್ರವಾಸ13 mins ago

Dwarka Tour: ದ್ವಾರಕೆಗೆ ಹೋದಾಗ ಏನೇನು ನೋಡಬಹುದು?

Narendra Modi
ದೇಶ14 mins ago

Narendra Modi: 75 ವರ್ಷ ದಾಟಿದರೂ ಮೋದಿ ಪ್ರಧಾನಿ ಸ್ಥಾನದಲ್ಲಿರುತ್ತಾರಾ? ಅಮಿತ್‌ ಶಾ ಹೇಳಿದ್ದಿಷ್ಟು

IPL 2024
ಪ್ರಮುಖ ಸುದ್ದಿ28 mins ago

IPL 2024 : ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ಡೆಲ್ಲಿ ತಂಡದ ನಾಯಕ ಬದಲು; ಮಾಹಿತಿ ಬಹಿರಂಗ

7th Pay Commission
ನೌಕರರ ಕಾರ್ನರ್1 hour ago

7th Pay Commission: 7ನೇ ವೇತನ ಆಯೋಗ; ವರದಿ ಜಾರಿಯಾದ್ರೆ ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಲಿದೆ?

James Anderson
ಪ್ರಮುಖ ಸುದ್ದಿ1 hour ago

James Anderson : ಕೋಚ್ ಒತ್ತಡಕ್ಕೆ ಮಣಿದು ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​

Sleeping tips
ಆರೋಗ್ಯ2 hours ago

Sleeping Tips: ನಿಮಗೆ ರಾತ್ರಿ ನಿದ್ದೆ ಬರುತ್ತಿಲ್ಲವೆ? ಮಲಗುವ ಮುನ್ನ ಈ ಪೇಯಗಳನ್ನು ಕುಡಿಯಿರಿ!

Lok Sabha Election
ದೇಶ2 hours ago

Lok Sabha Election: 3ನೇ ಹಂತದಲ್ಲಿ 65% ಮತದಾನ; ಕರ್ನಾಟಕದಲ್ಲಿ ಶೇ.71.84ರಷ್ಟು ಹಕ್ಕು ಚಲಾವಣೆ

Babar Azam
ಪ್ರಮುಖ ಸುದ್ದಿ2 hours ago

Babar Azam : ವಿರಾಟ್ ಕೊಹ್ಲಿಯ ದಾಖಲೆ ಸರಿಗಟ್ಟಿದ ಪಾಕ್​ ನಾಯಕ ಅಜಮ್​

Money Guide
ಮನಿ-ಗೈಡ್2 hours ago

Money Guide: ಮಹಿಳಾ ಸಮ್ಮಾನ್‌ ಸರ್ಟಿಫಿಕೆಟ್‌: ಈ ಅಮ್ಮಂದಿರ ದಿನ ನೀವು ನೀಡಬಹುದಾದ ಅತ್ಯುತ್ತಮ ಉಡುಗೊರೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru News
ಬೆಂಗಳೂರು4 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ15 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ1 day ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ1 day ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ1 day ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

ಟ್ರೆಂಡಿಂಗ್‌