Bengaluru Rain: ಮೃತ ಯುವತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ; ಅಂಡರ್ ಪಾಸ್‌ ಸರಿಪಡಿಸುತ್ತೇವೆ: ಸಿಎಂ - Vistara News

ಕರ್ನಾಟಕ

Bengaluru Rain: ಮೃತ ಯುವತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ; ಅಂಡರ್ ಪಾಸ್‌ ಸರಿಪಡಿಸುತ್ತೇವೆ: ಸಿಎಂ

Weather Updates: ಬೆಂಗಳೂರಿನಲ್ಲಿ ಮಳೆ ಅವಾಂತರ ಆಗುವ ಹಿನ್ನೆಲೆಯಲ್ಲಿ ಅವೈಜ್ಞಾನಿಕ ಅಂಡರ್‌ಪಾಸ್‌ಗಳನ್ನು ಸರಿಪಡಿಸಲಾಗುವುದು. ಜತೆಗೆ ರಾಜಕಾಲುವೆ ಒತ್ತುವರಿ ತೆರವುಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೃತಳ ಕುಟುಂಬದವರಿಗೆ 5 ಲಕ್ಷ ರೂಪಾಯಿ ಪರಿಹಾರವನ್ನು ನೀಡುವುದಾಗಿ ಅವರು ತಿಳಿಸಿದ್ದಾರೆ.

VISTARANEWS.COM


on

CM Siddaramaiah visit KR circal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಾವು ಈಗಷ್ಟೇ ಅಧಿಕಾರಕ್ಕೆ ಬಂದಿದ್ದೇವೆ. ಬೆಂಗಳೂರಿನಲ್ಲಿ ಸಾಕಷ್ಟು ಅವೈಜ್ಞಾನಿಕ ಅಂಡರ್ ಪಾಸ್‌ಗಳಿವೆ. ನಾವು ಅವುಗಳನ್ನು ಸರಿಪಡಿಸುವ ಕೆಲಸವನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ. ಅವರು ಸೇಂಟ್‌ ಮಾರ್ಥಾಸ್‌ ಆಸ್ಪತ್ರೆಗೆ ಭೇಟಿ ನೀಡಿ ಬೆಂಗಳೂರಿನ ಕೆ.ಆರ್‌. ಸರ್ಕಲ್‌ ಬಳಿ ಇರುವ ಅಂಡರ್‌ ಪಾಸ್‌ನಲ್ಲಿ ಮಳೆ (Bengaluru Rain) ನೀರಿಗೆ ಸಿಲುಕಿ ಮೃತಪಟ್ಟ ಯುವತಿಯ ಕುಟುಂಬದವರೊಂದಿಗೆ ಮಾತನಾಡಿದ್ದು, ಕುಟುಂಬದವರಿಗೆ 5 ಲಕ್ಷ ಪರಿಹಾರವನ್ನು ಕೊಡುವುದಾಗಿ ಘೋಷಣೆ ಮಾಡಿದ್ದಾರೆ.

ಪ್ರತಿ ವರ್ಷ ಬೆಂಗಳೂರಿನಲ್ಲಿ ಮಳೆ ಅವಾಂತರಗಳು ಮುಂದುವರಿದಿದ್ದು, ಪ್ರಾಣಹಾನಿಗಳು ಆಗುತ್ತಲೇ ಇರುತ್ತವೆ. ಭಾನುವಾರ (ಮೇ 21) ಮಧ್ಯಾಹ್ನದ ವೇಳೆಗೆ ಭಾರಿ ಮಳೆ ಸುರಿದಿದ್ದು, ಕೆ.ಆರ್‌. ಸರ್ಕಲ್‌ ಬಳಿ ಇರುವ ಅಂಡರ್‌ ಪಾಸ್‌ ಜಲಾವೃತಗೊಂಡಿದ್ದು, ಕಾರಿನೊಳಗಿದ್ದ ಯುವತಿಯೊಬ್ಬಳು ಮೃತಪಟ್ಟಿದ್ದರೆ, ಆರು ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೆ.ಆರ್‌. ಸರ್ಕಲ್‌ ಅಂಡರ್‌ ಪಾಸ್‌ ಬಳಿ ಬಂದು ಪರಿಶೀಲನೆ ನಡೆಸಿ, ಅಲ್ಲಿಂದ ಆಸ್ಪತ್ರೆಗೆ ತೆರಳಿ ವಿಚಾರಿಸಿದ್ದಾರೆ.

ಇದನ್ನೂ ಓದಿ: Weather Report: ಬೆಂಗಳೂರಲ್ಲಿ ಬಿರುಗಾಳಿ ಮಳೆ; ಅಂಡರ್‌ಪಾಸ್‌ನಡಿ ಸಿಲುಕಿ ಮಹಿಳೆ ಸಾವು, ಐವರು ಪಾರು

CM Siddaramaiah visit marthas hospital
ಸೇಂಟ್‌ ಮಾರ್ಥಾಸ್‌ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಮೃತಳ ಕುಟುಂಬಸ್ಥರ ಆರೋಗ್ಯ ವಿಚಾರಿಸಿದರು.

ರಾಜಕಾಲುವೆ ಒತ್ತುವರಿ ತೆರವು

ಬೆಂಗಳೂರಿನಲ್ಲಿ ಮಳೆ ಅವಾಂತರ ಹೆಚ್ಚಾಗುವ ಹಿನ್ನೆಲೆಯಲ್ಲಿ ನಾನು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ರಾಜಕಾಲುವೆ ಒತ್ತುವರಿ ತೆರವಿಗೆ ಚಾಲನೆ ನೀಡಿದ್ದೆ. ಆದರೆ, ಬಳಿಕ ಬಂದ ಸರ್ಕಾರ ಆ ಕೆಲಸವನ್ನು ಮಾಡಿಲ್ಲ. ನಾನು ಈಗ ಮತ್ತೆ ಅಧಿಕಾರಕ್ಕೆ ಬಂದಿದ್ದು, ಪುನಃ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ದುರಸ್ತಿ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಬ್ಯಾರಿಕೇಡ್‌ ಎಳೆಯದ ಬಗ್ಗೆ ಸಿದ್ದರಾಮಯ್ಯ ಗರಂ

ಅಂಡರ್ ಪಾಸ್‌ನಲ್ಲಿ ನೀರು ಹೋಗಲ್ಲ ಅಂತ ಗೊತ್ತಾದ ಬಳಿಕವೂ ಯಾಕೆ ಬ್ಯಾರಿಕೇಡ್ ಅಡ್ಡ ಎಳೆದಿಲ್ಲ? ಮಳೆ ವಾತಾವರಣ ಇದ್ದಾಗ ನಿರ್ಲಕ್ಷ್ಯ ವಹಿಸಿದ್ದು ಸರಿಯಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಚಾರಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆ ಪಾಯಿಂಟ್‌ನಲ್ಲಿ ಇದ್ದ ಟ್ರಾಫಿಕ್ ಪೊಲೀಸ್ ಏನು ಮಾಡ್ತಿದ್ದ ಎಂದು ಪ್ರಶ್ನೆ ಮಾಡಿದ್ದು, ತುಂಬಾ ಸಿಟ್ಟಾಗಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಯುವಕನ ಜತೆ ಬಿಜೆಪಿ ನಾಯಕನ ಪುತ್ರಿ ವಿವಾಹ, ಜಾಲತಾಣಗಳಲ್ಲಿ ಆಕ್ರೋಶದ ಬೆನ್ನಲ್ಲೇ ಮದುವೆ ರದ್ದು

ಮೃತರಿಗೆ ಐದು ಲಕ್ಷ ಪರಿಹಾರ ಘೋಷಣೆ

ಯುವತಿ ಮಳೆ ನೀರಿನಿಂದ ಮುಳುಗಿ ಮೃತಪಟ್ಟಿದ್ದರೆ, ಉಳಿದವರು ಪಾರಾಗಿದ್ದಾರೆ. ಹೀಗಾಗಿ ಮೃತಳ ಕುಟುಂಬದವರಿಗೆ 5 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುತ್ತದೆ. ಉಳಿದವರಿಗೆ ಏನೂ ಆಗಿಲ್ಲ. ಅವರ ಚಿಕಿತ್ಸೆಗೆ ಆಸ್ಪತ್ರೆ ಖರ್ಚು ಇದ್ದರೆ, ಅದನ್ನು ಸರ್ಕಾರ ಭರಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಆಸ್ಪತ್ರೆಯಿಂದ ನಿರ್ಲಕ್ಷ್ಯ ಆಗಿದ್ದರೆ ಕ್ರಮ

ತೀವ್ರ ಅಸ್ವಸ್ಥಗೊಂಡಿದ್ದ ಯುವತಿ ಭಾನುರೇಖಾರನ್ನು ಆಸ್ಪತ್ರೆಗೆ ಕರೆತಂದರೆ ವೈದ್ಯರು ಸಕಾಲಕ್ಕೆ ಚಿಕಿತ್ಸೆ ನೀಡಿಲ್ಲ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಸ್ಪತ್ರೆಯಿಂದ ನಿರ್ಲಕ್ಷ್ಯ ಆಗಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ ರೋಗಿ ಆಸ್ಪತ್ರೆಗೆ ಬರುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ದಾಖಲಾದ ಕೂಡಲೇ ಇಸಿಜಿ ಮಾಡಲಾಗಿದೆ. ಅಷ್ಟರಲ್ಲಿ ಆಕೆ ಮೃತಪಟ್ಟಿದ್ದಳು ಎಂದು ವೈದ್ಯರು ಹೇಳಿದ್ದಾರೆ. ಏನೇ ಆಗಿದ್ದರೂ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?; ಇಲ್ಲಿದೆ ವಿಡಿಯೊ

ಅಂಡರ್‌ ಪಾಸ್‌ ಕೆಳಗೆ ನಿಲ್ಲಿಸಬಾರದಿತ್ತು: ಸಿಎಂ ಸಿದ್ದರಾಮಯ್ಯ

ಕಾರಿನ ಚಾಲಕ ಮಳೆ ಎಂಬ ಕಾರಣಕ್ಕೆ ಅಂಡರ್‌ ಪಾಸ್‌ ಕೆಳಗೆ ನಿಲ್ಲಿಸಿದ್ದಾನೆ. ಸಾಮಾನ್ಯವಾಗಿ ಮಳೆ ಬಂದಾಗ ಯಾರೂ ಅಂಡರ್‌ಪಾಸ್‌ನಲ್ಲಿ ಹೋಗುವುದಿಲ್ಲ. ಆದರೂ ಈ ಚಾಲಕ ಅಲ್ಲಿ ಕಾರನ್ನು ಚಲಾಯಿಸಿಕೊಂಡು ಹೋಗಿದ್ದಾನೆ. ಹೀಗೆ ಹೋಗಬಾರದಿತ್ತು. ಈ ವೇಳೆ ನೀರು ತುಂಬಿ ಸಮಸ್ಯೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಿವರಣೆ ನೀಡಿದ್ದಾರೆ.

ಅಂಡರ್‌ಪಾಸ್‌ನಲ್ಲಿ ಈಜಿದ ಪೊಲೀಸ್‌; ವಿಡಿಯೊ ಇಲ್ಲಿದೆ

ಅಂಡರ್‌ಪಾಸ್‌ನಲ್ಲಿ ಕಾರನ್ನು ನಿಲ್ಲಿಸದೆ ಮುಂದಕ್ಕೆ ಚಲಾಯಿಸಿಕೊಂಡು ಹೋಗದ ಕಾರಣ ಕಾರಿನೊಳಗೆ ನೀರು ತುಂಬಿಕೊಂಡಿದೆ. ಒಳಗಿದ್ದವರಿಗೆ ಬಾಗಿಲು ತೆಗೆಯಲೂ ಆಗದೇ ಒಳಗೆ ಸಿಲುಕಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿದ್ದ ಭಾನುರೇಖಾ ಗಂಭೀರವಾಗಿದ್ದಾರೆ. ಉಳಿದವರನ್ನು ರಕ್ಷಣೆ ಮಾಡಿ, ಭಾನುರೇಖಾ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆತರಲಾಯಿತಾದರೂ ಪರೀಕ್ಷೆ ಮಾಡುವುದರೊಳಗೇ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆಂದು ಸಿಎಂ ಸಿದ್ದರಾಮಯ್ಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮಳೆ ಅವಘಡ ಪ್ರದೇಶಕ್ಕೆ ಸಿಎಂ ಭೇಟಿ

ಇದನ್ನೂ ಓದಿ: Accident compensation : ಅಪಘಾತದಿಂದ ಕಾಲು ಕಳೆದುಕೊಂಡು, ನಿರುದ್ಯೋಗಿಯಾದ ವ್ಯಕ್ತಿಗೆ 1.5 ಕೋಟಿ ರೂ. ಪರಿಹಾರ

ಪೊಲೀಸರಿಂದ ದಾಖಲೆ ಪರಿಶೀಲನೆ

ಅಸ್ವಸ್ಥ ಯುವತಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಲಾಗಿಲ್ಲ ಎಂಬ ಆರೋಪ ಬಂದಿರುವುದರಿಂದ ಆಸ್ಪತ್ರೆಗೆ ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿ ವಿಚಾರಣೆ ಕೈಗೊಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಮತ್ತೆ ಮೋದಿ ಪ್ರಧಾನಿಯಾಗಲು ಸಾಧ್ಯವೇ ಇಲ್ಲ: ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ದು ಏಕೆ?

Lok Sabha Election 2024: ಬಿಜೆಪಿ ಜಾತಿ – ಧರ್ಮಗಳನ್ನು ಪರಸ್ಪರ ಎತ್ತಿಕಟ್ಟುವ ಕೆಲಸಗಳನ್ನು ಮಾಡುತ್ತಾ ಬಂದಿದೆ. ದ್ವೇಷದ ರಾಜಕಾರಣವನ್ನು ಮಾಡುತ್ತಾ ಜನರ ಒಳಿತನ್ನು ಕಡೆಗಣಿಸಿದ್ದಾರೆ. ಮೋದಿಯವರು, ದಲಿತರ, ಹಿಂದುಳಿದವರ ಮೀಸಲಾತಿಯನ್ನು ಮುಸಲ್ಮಾನರಿಗೆ ಕಾಂಗ್ರೆಸ್ ನೀಡುತ್ತದೆ ಎಂದು ದೊಡ್ಡ ಸುಳ್ಳನ್ನು ಹೇಳಿದ್ದಾರೆ. ಈ ಪ್ರಮಾಣದಲ್ಲಿ ಸುಳ್ಳು ಹೇಳುವ ಪ್ರಧಾನಿಯನ್ನು ನಾನು ಹಿಂದೆಂದೂ ನೋಡಿಲ್ಲ. ಮುಸಲ್ಮಾನರ ವಿರುದ್ಧ ದಲಿತರನ್ನು, ಹಿಂದುಳಿದವರ ವಿರುದ್ಧ ದಲಿತರು, ಅಲ್ಪಸಂಖ್ಯಾತರನ್ನು ಎತ್ತಿಕಟ್ಟುವ ಕೆಲಸವನ್ನು ಮೋದಿಯವರು ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

VISTARANEWS.COM


on

Lok Sabha Election 2024 Narendra Modi cant become PM again says CM Siddaramaiah
Koo

ಹರಿಹರ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರೋಧಿ ಅಲೆ ಜೋರಾಗಿದೆ ಎನ್ನುವುದನ್ನು ಸ್ವತಃ ಬಿಜೆಪಿಯವರೇ ಗುರುತಿಸಿದ್ದಾರೆ. ಆದ್ದರಿಂದ ಈ ಬಾರಿ ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲ ಹಾಗೂ ಆ ಪಕ್ಷದ ಸೋಲು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

ದಾವಣಗೆರೆ ಲೋಕಸಭಾ ಚುನಾವಣೆಯ ಪ್ರಜಾಧ್ವನಿ-02 ಕಾರ್ಯಕ್ರಮದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ಪರವಾಗಿ ಮತದಾರರಲ್ಲಿ ಮತಯಾಚಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯ 25 ಸಂಸದರು ರಾಜ್ಯಕ್ಕಾಗಿರುವ ಅನ್ಯಾಯವನ್ನು ಎಂದೂ ಪ್ರಶ್ನಿಸಲಿಲ್ಲ. ಅವರಲ್ಲಿ ಹಲವರನ್ನು ಈ ಬಾರಿ ಬಿಜೆಪಿಯವರೇ ಕೈಬಿಟ್ಟಿದ್ದಾರೆ. ಈ ಹಿಂದೆ ಇದ್ದ ಬಿಜೆಪಿ ಸಂಸದರು ಗೆಲ್ಲಲು ಸಾಧ್ಯವಿಲ್ಲ ಎಂದು ತಿಳಿದೇ, ಬಿಜೆಪಿಯವರೇ ಈ ಬಾರಿ ಹಲವರನ್ನು ಕೈಬಿಟ್ಟಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ

ಹರಿಹರ ಪ್ರದೇಶದಲ್ಲಿ ಕುಡಿಯುವ ನೀರಿನ ಯೋಜನೆ ಹಾಗೂ ಸುಮಾರು 5 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ನೀರನ್ನು ಒದಗಿಸುವ ಏತ ನೀರಾವರಿ ಯೋಜನೆಗೆ ಚುನಾವಣೆ ನಂತರ ಚಾಲನೆ ನೀಡಲಾಗುವುದು. ನಾನು ನುಡಿದ ಮಾತಿನಂತೆ ನಡೆಯುವವನು. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆಂದು ತಿಳಿಸಿದಂತೆ 8 ತಿಂಗಳ ಒಳಗೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಅನ್ನಭಾಗ್ಯ, ಗೃಹ ಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಹಾಗೂ ಶಕ್ತಿ ಯೋಜನೆಗಳು ಜನರ ಪ್ರಶಂಸೆಯನ್ನು ಗಳಿಸಿದೆ. ಅನ್ನಭಾಗ್ಯ, ಕ್ಷೀರಭಾಗ್ಯ, ರೈತ ಸಾಲ ಮನ್ನಾ, ಇಂದಿರಾ ಕ್ಯಾಂಟೀನ್, ಶೂ ಭಾಗ್ಯ, ಶಾದಿ ಭಾಗ್ಯಗಳಂತಹ ಜನಪರ ಯೋಜನೆಗಳನ್ನು ಕಾಂಗ್ರೆಸ್ ನೀಡಿದೆ ಎಂದು ಹೇಳಿದರು.

ಯಪ್ಪಾ ಯಪ್ಪಾ ಇಷ್ಟೊಂದು ಸುಳ್ಳು ಹೇಳುವ ಪ್ರಧಾನಿಯನ್ನು ನಾನು ಹಿಂದೆಂದೂ ನೋಡಿಲ್ಲ

ಬಿಜೆಪಿ ಜಾತಿ – ಧರ್ಮಗಳನ್ನು ಪರಸ್ಪರ ಎತ್ತಿಕಟ್ಟುವ ಕೆಲಸಗಳನ್ನು ಮಾಡುತ್ತಾ ಬಂದಿದೆ. ದ್ವೇಷದ ರಾಜಕಾರಣವನ್ನು ಮಾಡುತ್ತಾ ಜನರ ಒಳಿತನ್ನು ಕಡೆಗಣಿಸಿದ್ದಾರೆ. ಮೋದಿಯವರು, ದಲಿತರ, ಹಿಂದುಳಿದವರ ಮೀಸಲಾತಿಯನ್ನು ಮುಸಲ್ಮಾನರಿಗೆ ಕಾಂಗ್ರೆಸ್ ನೀಡುತ್ತದೆ ಎಂದು ದೊಡ್ಡ ಸುಳ್ಳನ್ನು ಹೇಳಿದ್ದಾರೆ. ಈ ಪ್ರಮಾಣದಲ್ಲಿ ಸುಳ್ಳು ಹೇಳುವ ಪ್ರಧಾನಿಯನ್ನು ನಾನು ಹಿಂದೆಂದೂ ನೋಡಿಲ್ಲ. ಮುಸಲ್ಮಾನರ ವಿರುದ್ಧ ದಲಿತರನ್ನು, ಹಿಂದುಳಿದವರ ವಿರುದ್ಧ ದಲಿತರು, ಅಲ್ಪಸಂಖ್ಯಾತರನ್ನು ಎತ್ತಿಕಟ್ಟುವ ಕೆಲಸವನ್ನು ಮೋದಿಯವರು ಮಾಡುತ್ತಿದ್ದಾರೆ. ಸಂವಿಧಾನದ ಮೀಸಲಾತಿ ಪ್ರಮಾಣದಲ್ಲಿ ಶೇ. 10ರಷ್ಟನ್ನು ಆರ್ಥಿಕವಾಗಿ ಹಿಂದುಳಿದವರಿಗೆ ಸೃಷ್ಟಿಸಿದರು. ಆದರೆ, ಸಂವಿಧಾನದಲ್ಲಿ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಮಾತ್ರ ಮೀಸಲಾತಿಯನ್ನು ಕೊಡಬಹುದಾಗಿದೆ. ಮೋದಿಯವರು ಸಂವಿಧಾನವನ್ನು ಪೂರ್ಣ ತಿಳಿದಿದ್ದಾರೋ ಇಲ್ಲವೋ ಗೊತ್ತಿಲ್ಲ. ನಾವು ಅಧಿಕಾರಕ್ಕೆ ಬಂದರೆ ಒಟ್ಟಾರೆ ಮೀಸಲಾತಿ ಪ್ರಮಾಣವನ್ನು ಹೆಚ್ಚು ಮಾಡುತ್ತೇವೆ ಎಂದು ಹೇಳಿದ್ದೇವೆಯೇ ಹೊರತು. ಒಬ್ಬರ ಮೀಸಲಾತಿಯನ್ನು ಕಿತ್ತು ಮತ್ತೊಬ್ಬರಿಗೆ ಕೊಡುತ್ತೇವೆ ಎಂದು ಎಲ್ಲಿಯೂ ಹೇಳಿಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೀಸಲಾತಿ ಬಗ್ಗೆ ಮಾತನಾಡಲು ಬಿಜೆಪಿಗೆ ನೈತಿಕತೆ ಇಲ್ಲ

ಬಿಜೆಪಿ ಹಾಗೂ ಆರ್‌ಎಸ್ಎಸ್ ಮೀಸಲಾತಿಯನ್ನು ಬೆಂಬಲಿಸಲಿಲ್ಲ. ಆದ್ದರಿಂದ ಮೀಸಲಾತಿ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ. ಮಂಡಲ್ ವರದಿಯಂತೆ ಉನ್ನತ ಶಿಕ್ಷಣಸಂಸ್ಥೆಗಳಲ್ಲಿ ಮೀಸಲಾತಿ ತರಲು ಬಿಜೆಪಿ ವಿರೋಧಿಸಿದರು. ಮಂಡಲ್ ಪಂಚಾಯಿತಿ, ನಗರ ಸಭೆಗಳಲ್ಲಿ ಮಹಿಳೆಯರು, ದಲಿತರು, ಹಿಂದುಳಿದವರಿಗೆ ಮೀಸಲಾತಿ ನೀಡುವುದನ್ನು ಬಿಜೆಪಿ ವಿರೋಧಿಸಿದ್ದರು. ಆದರೆ ಸುಪ್ರೀಂ ಕೋರ್ಟ್ ಮೀಸಲಾತಿ ನೀಡಿಕೆಯನ್ನು ಎತ್ತಿಹಿಡಿಯಿತು. ಚುನಾವಣೆ ಬಂದಾಗ ಮಾತ್ರ ಮೋದಿಯವರು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎನ್ನುತ್ತಾರೆ ಎಂದು ಟೀಕಿಸಿದರು.

ಮೋದಿಯವರು ನೀಡಿದ ಭರವಸೆ ಈಡೇರಿಸಲಿಲ್ಲ

ಮೋದಿಯವರು ಹತ್ತು ವರ್ಷಗಳ ಕಾಲ ಜನರಿಗೆ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಲಿಲ್ಲ. ರೈತರ ಸಾಲ ಮನ್ನಾ ಮಾಡದೇ ಅದಾನಿ ಹಾಗೂ ಅಂಬಾನಿ ಕೈಗಾರಿಕೋದ್ಯಮಿಗಳಿಗೆ 16 ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದಾರೆ. ಮೋದಿಯವರು ಶ್ರೀಮಂತರ ಪರವಾಗಿರುವವರು. ಆದರೆ, ಇವರು ಬಡವರ ಪರವಾಗಿ ಇರುವವರು ಎಂದು ಮೋಸ ಹೋಗಿದ್ದಾಯ್ತು. ನಂಬಿಕೆ ದ್ರೋಹ ಎಸಗಿದ ಮೋದಿಯವರಿಗೆ ಮತ ಹಾಕಬೇಕೆ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲುವುದು ಪೂರ್ವದಲ್ಲಿ ಸೂರ್ಯ ಹುಟ್ಟುವಷ್ಟೇ ಸತ್ಯ

ನಮ್ಮ ಸರ್ಕಾರ ಇರುವವರೆಗೆ ಜನತೆಯ ಆಶೋತ್ತರಗಳನ್ನು ಈಡೇರಿಸಲಾಗುವುದು. ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲುವುದು ಪೂರ್ವದಲ್ಲಿ ಸೂರ್ಯ ಹುಟ್ಟುವಷ್ಟೇ ಸತ್ಯ. ನಮಗೆ ತೊಂದರೆ ಕೊಡಲು ವಿನಯ್ ಕುಮಾರ್ ಸ್ವತಂತ್ರ ಅಭ್ಯರ್ಥಿಯಾಗಿ ನಿಂತಿದ್ದಾರೆ. ಅವರು ಗೆಲ್ಲುವುದಿಲ್ಲ. ಏಕೆಂದರೆ ಬಿಜೆಪಿ ಜತೆಗೆ ಶಾಮೀಲಾಗಿದ್ದಾರೆ. ಕನಕ ಗುರುಪೀಠದ ನಿರಂಜನಾನಂದಾಪುರಿ ಸ್ವಾಮಿಗಳು ಮತ್ತು ನಾನು ವಿನಯ್ ಕುಮಾರ್ ಅವರೊಂದಿಗೆ ಮಾತನಾಡಿ, ನಿಲ್ಲುವುದು ಬೇಡ ಸಲಹೆ ನೀಡಿದಾಗ ಒಪ್ಪಿಕೊಂಡು ಈಗ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಕರ್ನಾಟಕದಲ್ಲಿ ನಾನು ಬೇಕೋ, ವಿನಯ್ ಕುಮಾರ್ ಬೇಕೋ ನಿರ್ಧರಿಸಿ ಎಂದು ಸಿಎಂ ಸಿದ್ದರಾಮಯ್ಯ ಕೇಳಿದರು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ವಿಡಿಯೊ ಕೇಸ್‌; ವಿಡಿಯೊದಲ್ಲಿರುವ ಮಹಿಳಾ ಅಧಿಕಾರಿಗಳಿಗೆ SIT ನೋಟಿಸ್‌: ‘ನಾನವಳಲ್ಲ’ ಎಂದು ಹೇಳಿಕೆ!

ನಾನೇ ಚುನಾವಣೆಗೆ ನಿಂತಿದ್ದೇನೆ ಎಂದು ತಿಳಿಯಬೇಕು. ಕಾಂಗ್ರೆಸ್ ಅಭ್ಯರ್ಥಿಗೆ ಕೊಡುವ ಮತ ಸಿದ್ದರಾಮಯ್ಯಗೆ ಕೊಡುವ ಮತ. ನನಗೆ ಶಕ್ತಿ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ನಮ್ಮ ಅಭ್ಯರ್ಥಿ ವಿದ್ಯಾವಂತೆ. ಸಂಸತ್ತಿನಲ್ಲಿ ನಿಮ್ಮ ಪರವಾಗಿ ಮಾತನಾಡುವ ಶಕ್ತಿ ಇದೆ. ಅದಕ್ಕಾಗಿ ನಮ್ಮ ಅಭ್ಯರ್ಥಿಗೆ ಆಶೀರ್ವಾದ ಮಾಡಿ. ಅವರು ಗೆದ್ದರೆ, ನಾನೇ ಗೆದ್ದಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

Continue Reading

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್‌ ಕೇಸ್‌ನಲ್ಲಿ ಸಂತ್ರಸ್ತೆಯರಿಗಾಗಿ ಹೆಲ್ಪ್‌ಲೈನ್‌ ಆರಂಭಿಸಿದ ಎಸ್‌ಐಟಿ

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಇನ್ನೂ ಹಲವು ಸಂತ್ರಸ್ತೆಯರು ಇರುವ ಹಿನ್ನೆಲೆಯಲ್ಲಿ ಅಂತಹವರ ನೆರವಿಗಾಗಿ ಎಸ್‌ಐಟಿ ಸಹಾಯವಾಣಿ ತೆರೆದಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣಕ್ಕೆ (Prajwal Revanna Case) ಸಂಬಂಧಿಸಿ ಸಂತ್ರಸ್ತ ಮಹಿಳೆಯನ್ನು ಕಿಡ್ಡ್ಯಾಪ್‌ ಮಾಡಿದ ಆರೋಪದಲ್ಲಿ ಈಗಾಗಲೇ ಶಾಸಕ ಎಚ್‌.ಡಿ.ರೇವಣ್ಣ ಬಂಧನವಾಗಿದೆ. ಪ್ರಕರಣದಲ್ಲಿ ಇನ್ನೂ ಹಲವು ಸಂತ್ರಸ್ತೆಯರು ಇರುವುದರಿಂದ ಅವರಿಗೆ ಕಾನೂನು ನೆರವು ಮತ್ತು ರಕ್ಷಣೆ ಪಡೆಯಲು ಎಸ್‌ಐಟಿಯಿಂದ ಹೆಲ್ಪ್‌ಲೈನ್‌ ತೆರೆಯಲಾಗಿದೆ.

ಈ ಬಗ್ಗೆ ಎಸ್‌ಐಟಿ ಪತ್ರಿಕಾ ಪ್ರಕಟನೆ ಹೊರಡಿಸಿದ್ದು, ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಕುರಿತು ಈಗಾಗಲೇ ವಿಶೇಷ ತನಿಖಾ ತಂಡ (SIT) ವನ್ನು ರಚಿಸಲಾಗಿದೆ. ತನಿಖೆ ವೇಳೆ ಘಟನೆಗೆ ಸಂಬಂಧಪಟ್ಟಂತೆ ಇನ್ನೂ ಸಂತ್ರಸ್ತರಿರುವುದು ಗೊತ್ತಾಗಿದ್ದು, ಯಾರೇ ಸಂತ್ರಸ್ತರು ಅಥವಾ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನಿನ ನೆರವು ಮತ್ತು ರಕ್ಷಣೆ ಹಾಗೂ ಇನ್ನಿತರ ಯಾವುದೇ ಸಹಾಯ ಬೇಕಾದಲ್ಲಿ ಹೆಲ್ಪ್‌ಲೈನ್‌ ನಂ. 6360938947 ಗೆ ಕರೆ ಮಾಡಬಹುದು. ಸಂತ್ರಸ್ತರು ಅಥವಾ ಬಾತ್ಮೀದಾರ ವಿವರಗಳನ್ನು ಗುಪ್ತವಾಗಿಡಲಾಗುವುದು ಎಂದು ಎಸ್‌ಐಟಿ ತಿಳಿಸಿದೆ.

ಇದನ್ನೂ ಓದಿ | Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನವಾಗಿರುವ ಮಾಜಿ ಸಚಿವ ಎಚ್.‌ಡಿ. ರೇವಣ್ಣ (HD Revanna) ಅವರನ್ನು ಎಸ್‌ಐಟಿ ಕಸ್ಟಡಿಗೆ ನೀಡಿ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಇಂದು ಭಾನುವಾರ (ಮೇ 5) ಕೋರ್ಟ್‌ ರಜೆ ಇರುವ ಹಿನ್ನೆಲೆಯಲ್ಲಿ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಎಚ್.ಡಿ. ರೇವಣ್ಣ ಅವರನ್ನು ಕೋರಮಂಗಲದಲ್ಲಿರುವ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ನಿವಾಸಕ್ಕೆ ಕರೆತರಲಾಗಿತ್ತು. ಜಡ್ಜ್‌ ಮುಂದೆ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದರು. ಈ ವೇಳೆ ಎಸ್‌ಐಟಿ ಪರ ವಕೀಲರು, ಪ್ರಕರಣದ ತೀವ್ರತೆಯನ್ನು ವಿವರಿಸಿ ರೇವಣ್ಣ ಅವರನ್ನು ಕಸ್ಟಡಿಗೆ ಕೊಡುವಂತೆ ಮನವಿ ಮಾಡಿದರು. ಆದರೆ, ಇದಕ್ಕೆ ರೇವಣ್ಣ ಪರ ವಕೀಲರಾದ ಮೂರ್ತಿ ಡಿ. ನಾಯಕ್‌ ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ, ಎಸ್‌ಐಟಿಯವರು ತಮ್ಮ ಕಕ್ಷಿದಾರರಿಗೆ ಕಿರುಕುಳವನ್ನು ನೀಡುತ್ತಿದ್ದಾರೆ. ಅವರಿಗೆ ಆರೋಗ್ಯ ಸಮಸ್ಯೆ ಇದೆ ಎಂದು ವಾದವನ್ನು ಮಂಡಿಸಿದರು.

ಈ ವೇಳೆ ರಿಮೈಂಡ್‌ ಕಾಪಿ‌ಯನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರಿಗೆ ಸಲ್ಲಿಕೆ ಮಾಡಿದ್ದಾರೆ. ಸುಮಾರು 15 ಅಂಶಗಳನ್ನು ಉಲ್ಲೇಖ ಮಾಡಿ 5 ದಿನಗಳ ಕಾಲ ಕಸ್ಟಡಿಗೆ ವಹಿಸುವಂತೆ ಕೋರಿದ್ದಾರೆ. ವಾದ – ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರಾದ ರವೀಂದ್ರ ಕುಮಾರ್ ಬಿ. ಕಟ್ಟಿಮನಿ ಅವರು, ಎಚ್‌.ಡಿ. ರೇವಣ್ಣ ಅವರನ್ನು ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ಬಿಗಿ ಭದ್ರತೆ ಒದಗಿಸಿದ್ದ ಪೊಲೀಸ್‌!

ಎಚ್.ಡಿ. ರೇವಣ್ಣ‌ ಪ್ರಭಾವಿ ನಾಯಕ ಹಾಗೂ ಶಾಸಕರಾಗಿರುವ ಕಾರಣ ಈಗಾಗಲೇ ಕೋರಮಂಗಲದ ನ್ಯಾಯಾಧೀಶರ ಮನೆ ಬಳಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು. ಮನೆಯ ಮುಂಭಾಗದಲ್ಲಿ ‌ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು. ಭದ್ರತೆಯೊಂದಿಗೆ ಅವರನ್ನು ಜಡ್ಜ್‌ಗೆ ಹಾಜರುಪಡಿಸಲಾಯಿತು.

ಇದನ್ನೂ ಓದಿ | Prajwal Revanna Case: ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಕೇಸ್‌; ರೇವಣ್ಣ ಬಂಧನ ಕ್ರಮ ಸರಿ ಇದೆ ಎಂದ ಆರ್.‌ ಅಶೋಕ್‌!

ರೇವಣ್ಣಗೆ ಮತ್ತೊಮ್ಮೆ ಮೆಡಿಕಲ್ ಟೆಸ್ಟ್

ನ್ಯಾಯಾಧೀಶರ ಮುಂದೆ ಎಚ್.ಡಿ. ರೇವಣ್ಣ ಅವರನ್ನು ಹಾಜರುಪಡಿಸುವ ಮುನ್ನ ಬೋರಿಂಗ್‌ ಆಸ್ಪತ್ರೆಯಲ್ಲಿ ಮತ್ತೊಮ್ಮೆ ವೈದ್ಯಕೀಯ ತಪಾಸಣೆ ಮಾಡಲಾಯಿತು. ಹೃದಯ ತಜ್ಞರು ಮತ್ತು ಗ್ಯಾಸ್ಟ್ರೋಎಂಟರಾಲಜಿಸ್ಟ್ ತಜ್ಞರ ಬಳಿ ತಪಾಸಣೆ ನಡೆಸಲಾಗಿದೆ.

Continue Reading

ಕ್ರೈಂ

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case: ಎಚ್‌.ಡಿ. ರೇವಣ್ಣ ಅವರನ್ನು ರಿಮೈಂಡ್‌ ಕಾಪಿ‌ಯನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರಿಗೆ ಸಲ್ಲಿಕೆ ಮಾಡಿದ್ದಾರೆ. ಸುಮಾರು 15 ಅಂಶಗಳನ್ನು ಉಲ್ಲೇಖ ಮಾಡಿ 5 ದಿನಗಳ ಕಾಲ ಕಸ್ಟಡಿಗೆ ವಹಿಸುವಂತೆ ಕೋರಿದ್ದಾರೆ. ವಾದ – ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರಾದ ರವೀಂದ್ರ ಕುಮಾರ್ ಬಿ. ಕಟ್ಟಿಮನಿ ಅವರು, ಎಚ್‌.ಡಿ. ರೇವಣ್ಣ ಅವರನ್ನು ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಅಪಹರಣ ಹಾಗೂ ಪ್ರಜ್ವಲ್‌ ಮೇಲಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಲವು ಪ್ರಶ್ನೆಗಳು ಕೇಳಲಿದ್ದಾರೆ ಎನ್ನಲಾಗಿದೆ.

VISTARANEWS.COM


on

Prajwal Revanna Case HD Revanna sent to judicial custody Shift to Parappana Agrahara
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನವಾಗಿರುವ ಮಾಜಿ ಸಚಿವ ಎಚ್.‌ಡಿ. ರೇವಣ್ಣ (HD Revanna) ಅವರನ್ನು 4 ದಿನಗಳವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಇಂದು ಭಾನುವಾರ (ಮೇ 5) ಕೋರ್ಟ್‌ ರಜೆ ಇರುವ ಹಿನ್ನೆಲೆಯಲ್ಲಿ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಎಚ್.ಡಿ. ರೇವಣ್ಣ ಅವರನ್ನು ಕೋರಮಂಗಲದಲ್ಲಿರುವ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ನಿವಾಸಕ್ಕೆ ಕರೆತರಲಾಗಿತ್ತು. ಜಡ್ಜ್‌ ಮುಂದೆ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದರು. ಈ ವೇಳೆ ಎಸ್‌ಐಟಿ ಪರ ವಕೀಲರು, ಪ್ರಕರಣದ ತೀವ್ರತೆಯನ್ನು ವಿವರಿಸಿ ರೇವಣ್ಣ ಅವರನ್ನು ಕಸ್ಟಡಿಗೆ ಕೊಡುವಂತೆ ಮನವಿ ಮಾಡಿದರು. ಆದರೆ, ಇದಕ್ಕೆ ರೇವಣ್ಣ ಪರ ವಕೀಲರಾದ ಮೂರ್ತಿ ಡಿ. ನಾಯಕ್‌ ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ, ಎಸ್‌ಐಟಿಯವರು ತಮ್ಮ ಕಕ್ಷಿದಾರರಿಗೆ ಕಿರುಕುಳವನ್ನು ನೀಡುತ್ತಿದ್ದಾರೆ. ಅವರಿಗೆ ಆರೋಗ್ಯ ಸಮಸ್ಯೆ ಇದೆ ಎಂದು ವಾದವನ್ನು ಮಂಡಿಸಿದರು.

ಈ ವೇಳೆ ರಿಮೈಂಡ್‌ ಕಾಪಿ‌ಯನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರಿಗೆ ಸಲ್ಲಿಕೆ ಮಾಡಿದ್ದಾರೆ. ಸುಮಾರು 15 ಅಂಶಗಳನ್ನು ಉಲ್ಲೇಖ ಮಾಡಿ 5 ದಿನಗಳ ಕಾಲ ಕಸ್ಟಡಿಗೆ ವಹಿಸುವಂತೆ ಕೋರಿದ್ದಾರೆ. ವಾದ – ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರಾದ ರವೀಂದ್ರ ಕುಮಾರ್ ಬಿ. ಕಟ್ಟಿಮನಿ ಅವರು, ಎಚ್‌.ಡಿ. ರೇವಣ್ಣ ಅವರನ್ನು 4 ದಿನಗಳ ವರೆಗೆ ಅಂದರೆ ಮೇ 8ರವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ಬಿಗಿ ಭದ್ರತೆ ಒದಗಿಸಿದ್ದ ಪೊಲೀಸ್‌!

ಎಚ್.ಡಿ. ರೇವಣ್ಣ‌ ಪ್ರಭಾವಿ ನಾಯಕ ಹಾಗೂ ಶಾಸಕರಾಗಿರುವ ಕಾರಣ ಈಗಾಗಲೇ ಕೋರಮಂಗಲದ ನ್ಯಾಯಾಧೀಶರ ಮನೆ ಬಳಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು. ಮನೆಯ ಮುಂಭಾಗದಲ್ಲಿ ‌ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು. ಭದ್ರತೆಯೊಂದಿಗೆ ಅವರನ್ನು ಜಡ್ಜ್‌ಗೆ ಹಾಜರುಪಡಿಸಲಾಯಿತು.

ರೇವಣ್ಣಗೆ ಮತ್ತೊಮ್ಮೆ ಮೆಡಿಕಲ್ ಟೆಸ್ಟ್

ನ್ಯಾಯಾಧೀಶರ ಮುಂದೆ ಎಚ್.ಡಿ. ರೇವಣ್ಣ ಅವರನ್ನು ಹಾಜರುಪಡಿಸುವ ಮುನ್ನ ಬೋರಿಂಗ್‌ ಆಸ್ಪತ್ರೆಯಲ್ಲಿ ಮತ್ತೊಮ್ಮೆ ವೈದ್ಯಕೀಯ ತಪಾಸಣೆ ಮಾಡಲಾಯಿತು. ಹೃದಯ ತಜ್ಞರು ಮತ್ತು ಗ್ಯಾಸ್ಟ್ರೋಎಂಟರಾಲಜಿಸ್ಟ್ ತಜ್ಞರ ಬಳಿ ತಪಾಸಣೆ ನಡೆಸಲಾಗಿದೆ.

ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನನ್ನ ಮೇಲೆ ಕಿಡ್ನ್ಯಾಪ್ ಕೇಸ್ ಹಾಕಿದ್ದಾರೆ. 40 ವರ್ಷ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಯಾವುದೇ ರೀತಿಯ ಪುರಾವೆಗಳು ಇಲ್ಲದಿದ್ದರೂ ಅನಾವಶ್ಯಕವಾಗಿ ನನ್ನನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ನನ್ನ ವಿರುದ್ಧದ ಆರೋಪಗಳೆಲ್ಲವೂ ಸುಳ್ಳು. ಇದೊಂದು ದುರದ್ದೇಶಪೂರ್ವಕ ಬಂಧನವಾಗಿದೆ. ಯಾವುದೇ ಸಾಕ್ಷಿಗಳು ಸಹ ಇವರ ಬಳಿ ಇಲ್ಲ ಎಂದು ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಎಸ್‌ಐಟಿ ಅಧಿಕಾರಿಗಳು ಮೆಡಿಕಲ್‌ ಟೆಸ್ಟ್‌ಗೆಂದು ಬೋರಿಂಗ್‌ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್‌.ಡಿ. ರೇವಣ್ಣ ಏಪ್ರಿಲ್‌ 28ರಂದು ನಮ್ಮ ವಿರುದ್ಧ ಕೇಸ್‌ ದಾಖಲಿಸಿದರು. ಆಗ ನಮ್ಮ ಮೇಲೆ ಯಾವುದೇ ಸಾಕ್ಷಿಗಳು ಸಿಕ್ಕಿಲ್ಲವೆಂದು ಪುನಃ ಮೇ 2ರಂದು ನನ್ನ ಮೇಲೆ ಸಾಕ್ಷಿಗಳನ್ನು ಸೃಷ್ಟಿ ಮಾಡಿ ಸಿಕ್ಕಿ ಹಾಕಿಸಿದ್ದಾರೆ. ಇದರಲ್ಲಿ ಯಾವುದೇ ರೀತಿಯ ಪುರಾವೆಗಳು ಇಲ್ಲ. ಆದರೂ ನನ್ನನ್ನು ಸಿಕ್ಕಿ ಹಾಕಿಸಲಾಗಿದೆ ಎಂದು ಗುಡುಗಿದರು.

ವಿಡಿಯೊದಲ್ಲಿರುವ ಮಹಿಳಾ ಅಧಿಕಾರಿಗಳಿಗೆ SIT ನೋಟಿಸ್‌: ‘ನಾನವಳಲ್ಲ’ ಎಂದು ಹೇಳಿಕೆ!

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ಈ ಕೇಸ್‌ಗೆ ಸಂಬಂಧಿಸಿ ಆ ವಿಡಿಯೊದಲ್ಲಿ ಇದ್ದಾರೆ ಎನ್ನಲಾದ ಮೂವರು ಮಹಿಳಾ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗಲು ಎಸ್‌ಐಟಿ ಅಧಿಕಾರಿಗಳು ನೋಟಿಸ್‌ ಕೊಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಒಬ್ಬೊಬ್ಬರೂ, “ನಾನವಳಲ್ಲ” ಎಂಬ ಉತ್ತರವನ್ನು ನೀಡಿದ್ದಾರೆ ಎನ್ನಲಾಗಿದೆ.

ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್‌ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ನಡುವೆ ವಿಡಿಯೊದಲ್ಲಿ ಸಾಕಷ್ಟು ಮಹಿಳಾ ಅಧಿಕಾರಿಗಳೂ ಇದ್ದಾರೆ ಎಂಬ ಬಗ್ಗೆ ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಡಿಯೊಗಳಲ್ಲಿ ಕಂಡ ಮುಖವನ್ನಾಧರಿಸಿ ಅವರ ಗುರುತನ್ನು ಪತ್ತೆ ಹಚ್ಚಿರುವ ಎಸ್‌ಐಟಿ ಅಧಿಕಾರಿಗಳು ಆ ಸಂತ್ರಸ್ತ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಕೊಟ್ಟಿದ್ದಾರೆ ಎನ್ನಲಾಗಿದೆ.

ಆದರೆ, ಈಗಾಗಲೇ ಈ ಪ್ರಕರಣದಲ್ಲಿ ಸಂಪೂರ್ಣ ಮುಜುಗರವನ್ನು ಅನುಭವಿಸಿರುವ ಮಹಿಳಾ ಅಧಿಕಾರಿಗಳು ವಿಚಾರಣೆಗೆ ಹಾಜರಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಪೊಲೀಸ್ ಅಧಿಕಾರಿಗಳ ವಿಡಿಯೊ ಹಾಗೂ ಫೋಟೊಗಳು ಸಹ ವೈರಲ್ ಆಗಿದ್ದವು. ಇದರಿಂದ ಅವರು ತೀವ್ರ ಆಘಾತವನ್ನು ಎದುರಿಸಿದ್ದಾರೆ.

ಈಗ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ನೋಟಿಸ್‌ ನೀಡಿದ್ದರಿಂದ ಮತ್ತಷ್ಟು ಕಂಗೆಟ್ಟಿರುವ ಮಹಿಳಾ ಅಧಿಕಾರಿಗಳು, ಆ ವಿಡಿಯೊ ಹಾಗೂ ಫೋಟೊಗಳು ನಮ್ಮದಲ್ಲ. ಅದನ್ನು ಮಾರ್ಫ್‌ ಮಾಡಲಾಗಿದೆ ಎಂದು ನೋಟಿಸ್‌ಗೆ ಉತ್ತರ ಕೊಟ್ಟಿದ್ದಾರೆ ಎನ್ನಲಾಗಿದೆ.

ವಿಚಾರಣೆಗೆ ಹಾಜರಾಗುವ ಸಾಧ್ಯತೆ ಕಡಿಮೆ

ಒಂದು ವೇಳೆ ಈ ಮಹಿಳಾ ಅಧಿಕಾರಿಗಳು ಎಸ್‌ಐಟಿ ಮುಂದೆ ಬಂದು ತಮ್ಮ ಮೇಲೆ ಪ್ರಜ್ವಲ್‌ ದೌರ್ಜನ್ಯ ಮಾಡಿದ್ದಾರೆ. ಆಮಿಷವೊಡ್ಡುವ ಮೂಲಕ ಇಲ್ಲವೇ ಕಿರುಕುಳ ನೀಡುವ ಮೂಲಕ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದರೆ, ಈ ಕೇಸ್‌ ಮತ್ತಷ್ಟು ಬಲಿಷ್ಠವಾಗುತ್ತಿತ್ತು. ಆದರೆ, ಈಗ ಈ ಮಹಿಳಾ ಅಧಿಕಾರಿಗಳು ಆ ವಿಡಿಯೊ ಹಾಗೂ ಫೋಟೊದಲ್ಲಿರುವುದು ನಾವೇ ಅಲ್ಲ ಎಂದು ಹೇಳಿಬಿಟ್ಟಿದ್ದಾರೆ. ಹಾಗಾಗಿ ಅವರು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಕಡಿಮೆ ಇದೆ. ಒಂದು ವೇಳೆ ಎಸ್‌ಐಟಿ ಅಧಿಕಾರಿಗಳು ಅವರ ಮನವೊಲಿಕೆ ಮಾಡಿದಲ್ಲಿ ಗೌಪ್ಯ ಸ್ಥಳದಲ್ಲಿ ಹೇಳಿಕೆ ಪಡೆಯಲಿದ್ದಾರೆ ಎನ್ನಲಾಗಿದೆ.

ಹಾಸನ ಸಂಸದರ ನಿವಾಸವನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು

ಸಂಸದ ಪ್ರಜ್ವಲ್‌ ರೇವಣ್ಣ ಅವರು ಹಾಸನದ ತಮ್ಮ ನಿವಾಸದಲ್ಲೇ ಅತ್ಯಾಚಾರ (Physical abuse) ನಡೆಸಿರುವ ಬಗ್ಗೆ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಸಂಸದರ ನಿವಾಸವನ್ನು ಲಾಕ್‌ ಮಾಡಲಾಗಿದೆ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರಿಗೆ ಸರ್ಕಾರ ನೀಡಿದ್ದ ಈ ನಿವಾಸವನ್ನು ಪ್ರಜ್ವಲ್‌ ಬಳಸಿಕೊಳ್ಳುತ್ತಿದ್ದರು.

ಎಸ್‌ಐಟಿ ಅಧಿಕಾರಿಗಳು ಇದೀಗ ಈ ನಿವಾಸವನ್ನು ವಶಕ್ಕೆ ಪಡೆದಿದ್ದಾರೆ. ಸಂಸದರ ನಿವಾಸದ ರೂಮ್‌ನಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂದು ಪ್ರಜ್ವಲ್ ರೇವಣ್ಣ‌ ವಿರುದ್ಧ ಆರೋಪ ಹೊರಿಸಿದ್ದ ಮಹಿಳೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಮಾಜಿ ಪ್ರಧಾನಿ ಎಂಬ ಕಾರಣಕ್ಕೆ ದೇವೇಗೌಡ ಅವರಿಗೆ ಸರ್ಕಾರ ಈ ಬಂಗಲೆಯನ್ನು ನೀಡಿತ್ತು. ಇಂದಿಗೂ ದೇವೇಗೌಡರಿಗೆ ಮೀಸಲಾಗಿರುವ ಸಂಸದರ ನಿವಾಸವನ್ನು ಸದ್ಯ ಪ್ರಜ್ವಲ್ ರೇವಣ್ಣ ಬಳಸಿಕೊಳ್ಳುತ್ತಿದ್ದಾರೆ.

2019ರಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರಿಗಾಗಿಯೇ ಈ ನಿವಾಸ‌ವನ್ನು ನಿರ್ಮಾಣ ಮಾಡಲಾಗಿತ್ತು. ಹಾಸನಕ್ಕೆ ಬಂದಾಗ ತಂಗಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ನಿವಾಸವನ್ನು ನಿರ್ಮಿಸಲಾಗಿತ್ತು. ಲೋಕಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ದೇವೇಗೌಡರಿಗೆ ನೀಡಿದ್ದ ನಿವಾಸವನ್ನು ಪ್ರಜ್ವಲ್ ರೇವಣ್ಣ ಬಳಸಿಕೊಳ್ಳುತ್ತಿದ್ದರು.

ದೇವೇಗೌಡರು ಹಾಸನ ನಗರಕ್ಕೆ ಬಂದಾಗ ತಂಗುತ್ತಿದ್ದ ಇದೇ ನಿವಾಸದಲ್ಲಿ ವಾರದಲ್ಲಿ ನಾಲ್ಕು ದಿನ ಪ್ರಜ್ವಲ್‌ ವಾಸ್ತವ್ಯ ಹೂಡುತ್ತಿದ್ದರು. ಸದ್ಯ ಈ ನಿವಾಸದಲ್ಲೇ ಅತ್ಯಾಚಾರ ಎಸಗಲಾಗಿದೆ ಎಂದು ಮಹಿಳೆ ದೂರು ನೀಡಿದ್ದಾರೆ. ಅಶ್ಲೀಲ ವಿಡಿಯೊ ರೆಕಾರ್ಡ್ ಕೂಡ ಇದೇ ನಿವಾಸದ ರೂಮ್‌ನಲ್ಲಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ನಿವಾಸ ಹಾಸನದ ಆರ್‌.ಸಿ. ರಸ್ತೆಯಲ್ಲಿದೆ.

ಹೊಳೆನರಸೀಪುರದಲ್ಲಿ ನೀರವ ಮೌನ

ಮಾಜಿ ಸಚಿವ ರೇವಣ್ಣ ಬಂಧನದ ಬಳಿಕ ಹೊಳೆನರಸೀಪುರದಲ್ಲಿ ನೀರವ ಮೌನ ಆವರಿಸಿದೆ. ಸದಾ ಜನರಿಂದ ತುಂಬಿರುತ್ತಿದ್ದ ರೇವಣ್ಣರ ಹೊಳೆನರಸೀಪುರದ ಮನೆ ಖಾಲಿ ಖಾಲಿ ಎನಿಸಿದೆ. ಸದ್ಯ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಮನೆಯಲ್ಲಿಯೇ ಇದ್ದಾರೆ. ಶನಿವಾರ ರೇವಣ್ಣ ಅವರ ಮನೆಯಲ್ಲಿ ಮಹಜರು ನಡೆಸಿದ್ದ ಎಸ್‌ಐಟಿ ತಂಡ ವಶಕ್ಕೆ ಪಡೆದಿತ್ತು. ಹಾಸನ ರಸ್ತೆಯಲ್ಲಿ ರೇವಣ್ಣ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಒಂದು ಕೆಎಸ್ಆರ್‌ಪಿ ತುಕಡಿಯನ್ನ ಮನೆ ಬಳಿ ನಿಯೋಜನೆ ಮಾಡಿ ಭದ್ರತೆ ಖಚಿತಪಡಿಸಲಾಗಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ವಿಡಿಯೊ ಪೆನ್‌ಡ್ರೈವ್ ಕಿಂಗ್‌ಪಿನ್ ಯಾರು? ಬೆನ್ನತ್ತಿ ಹೊರಟಿದೆ ಎಚ್‌ಡಿಕೆ ಟೀಂ!

ಈ ಮಧ್ಯೆ ರೇವಣ್ಣ ಅವರನ್ನು ವಶಕ್ಕೆ ಪಡೆದಿರುವ ಎಸ್‌ಐಟಿ ತಂಡ ಮತ್ತೆ ಇಂದು ವಿಚಾರಣೆಗೆ ಒಳಪಡಿಸಲಿದೆ. ಶನಿವಾರ ರಾತ್ರಿ ತಡರಾತ್ರಿವರೆಗೆ ವಿಚಾರಣೆ ನಡೆಸಿದ್ದ ಅಧಿಕಾರಿಗಳು ಮತ್ತೆ ತನಿಖೆ ಕೈಗೆತ್ತಿಕೊಳ್ಳಲಿದ್ದಾರೆ. ಮಹಿಳೆಯ ಅಪಹರಣ ಪ್ರಕರಣದ ಬಗ್ಗೆ ಕೂಲಂಕಷ ವಿಚಾರಣೆ ನಡೆಸಲಿದ್ದಾರೆ. ಇಂದು ಸಂಜೆ ಕೋರಮಂಗಲದ ಎನ್‌ಜಿವಿಯಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ರೇವಣ್ಣ ಅವರನ್ನು ಹಾಜರುಪಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ನಿವಾಸದ ಎದುರು ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

Continue Reading

ಕರ್ನಾಟಕ

Gadag News: ಮುಂಡರಗಿ ಬಳಿ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಸಾವು

Gadag News: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದ ಕೃಷಿ ಹೊಂಡದಲ್ಲಿ ಮುಳುಗಿ ಮಹಿಳೆ ಹಾಗೂ ಬಾಲಕ ಮೃತಪಟ್ಟಿದ್ದಾರೆ.

VISTARANEWS.COM


on

Gadag News
Koo

ಗದಗ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ನಡೆದಿದೆ. ತಂಗಿಯ ಮಗನೊಂದಿಗೆ ಮಹಿಳೆಯೊಬ್ಬರು ನೀರು ತರಲು‌ ಕೃಷಿ ಹೊಂಡಕ್ಕೆ ಹೋದಾಗ ಘಟನೆ ನಡೆದಿದೆ.

ಗೀತಾ ಹೆಸರೂರು (34), ಮನೋಜ ಕವಲೂರು (5) ಮೃತರು. ಮೊದಲಿಗೆ ಮನೋಜ್ ಹೊಂಡದಲ್ಲಿ ಕಾಲು‌ ಜಾರಿ ಬಿದ್ದಿದ್ದಾನೆ. ಬಾಲಕನ ರಕ್ಷಣೆಗೆ ಹೋಗಿದ್ದ ಗೀತಾ ಕೂಡ ನೀರಿನಲ್ಲಿ ಮುಳುಗಿದ್ದಾರೆ. ಶಾಲೆ ರಜೆ ಹಿನ್ನೆಲೆ ದೊಡ್ಡಮ್ಮನ ಮನೆಗೆ ಮನೋಜ್ ಬಂದಿದ್ದ. ಬಾಲಕನ ಜತೆಗೆ ಕೃಷಿ ಹೊಂಡಕ್ಕೆ ಗೀತಾ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Police Officer: ಮರಳು ಮಾಫಿಯಾ ತಡೆಯಲು ಹೋದ ಎಎಸ್‌ಐ ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ!

ಕಾಂಗ್ರೆಸ್‌ಗೆ ಅಲ್ಲ.. ಬಿಜೆಪಿಗೆ ಮತ ಹಾಕುವೆ ಎಂದಿದ್ದಕ್ಕೆ ರಸ್ತೆಗೆ ಎಳೆದು ತಂದು ಕೈ-ಕಾಲು ಮುರಿದರು ದುರುಳರು

assault case

ಕೊಪ್ಪಳ: ಕಾಂಗ್ರೆಸ್ ಮುಖಂಡರಿಂದ ಬಿಜೆಪಿ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ (Assault Case) ನಡೆಸಿರುವ ಆರೋಪವೊಂದು ಕೇಳಿ ಬಂದಿದೆ. ದ್ಯಾಮಣ್ಣ ಬಾಲನಗೌಡರ್ ಹಲ್ಲೆಗೊಳಗಾದ ಬಿಜೆಪಿ ಮುಖಂಡರಾಗಿದ್ದಾರೆ. ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದಲ್ಲಿ ನಿನ್ನೆ ಶನಿವಾರ ರಾತ್ರಿ ಘಟನೆ ನಡೆದಿದೆ.

ಕಾಂಗ್ರೆಸ್‌ ಕಾರ್ಯಕರ್ತರಾದ ಗವಿಸಿದ್ದ, ಬಾಳಪ್ಪ, ನೀಲಪ್ಪ, ಗಂಗಣ್ಣ ಎಂಬುವವರು ದ್ಯಾಮಣ್ಣನಿಗೆ ಹಲ್ಲೆ ನಡೆಸಿದ್ದಾರೆ. ನಿನ್ನೆ ಶನಿವಾರ ರಾತ್ರಿ ದ್ಯಾಮಣ್ಣ ಮನೆಗೆ ಕಾಂಗ್ರೆಸ್ ಮುಖಂಡರು ಬಂದಿದ್ದಾರೆ. ಈ ವೇಳೆ ದ್ಯಾಮಣ್ಣ ಕಾಂಗ್ರೆಸ್‌ಗೆ ಮತ ಹಾಕುವುದಿಲ್ಲ, ಬಿಜೆಪಿ ಪಕ್ಷಕ್ಕೆ ಮತ ಹಾಕುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: 108 Ambulance : 3 ತಿಂಗಳ ವೇತನ ಬಾಕಿ; ನಾಳೆ ರಾತ್ರಿಯಿಂದಲೇ 108 ಆಂಬ್ಯುಲೆನ್ಸ್‌ ಸೇವೆ ಬಂದ್‌!

ಇದರಿಂದ ಸಿಟ್ಟಾದ ಕೈ ಕಾರ್ಯಕರ್ತರು, ಕಾಂಗ್ರೆಸ್‌ಗೆ ಯಾಕೆ ಮತ ಹಾಕುವುದಿಲ್ಲ ಎಂದು ದ್ಯಾಮಣ್ಣನ ಮೇಲೆ ಎರಗಿದ್ದಾರೆ. ಬಳಿಕ ದ್ಯಾಮಣ್ಣನನ್ನು ರಸ್ತೆಗೆಳೆದು ತಂದು ಕಟ್ಟಿಗೆಯಿಂದ ಹಲ್ಲೆ ಮಾಡಿದ್ದಾರೆ. ದ್ಯಾಮಣ್ಣನ ಕೈ-ಕಾಲು ಮುರಿದಿದ್ದಾರೆ. ಗಾಯಾಳನ್ನು ದ್ಯಾಮಣ್ಣನನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಿಲ್ಲಾಸ್ಪತ್ರೆಗೆ ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣವರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಪತಿ ಮೇಲಿನ ಸಿಟ್ಟಿಗೆ ಮೂಕ ಮಗುವನ್ನೇ ಕಾಲುವೆಗೆ ಎಸೆದಳು; ಮೊಸಳೆ ಬಾಯಲ್ಲಿತ್ತು ಮೃತದೇಹ!

murder case In karwar

ಕಾರವಾರ : ತಾಯಿಯೊಬ್ಬಳು ಕೋಪದಲ್ಲಿ ತನ್ನ ಮಗುವನ್ನೇ ಕಾಲುವೆಗೆ (Murder case ) ಎಸೆದಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾಲಮಡ್ಡಿಯಲ್ಲಿ ಘಟನೆ ನಡೆದಿದೆ. ಸಾವಿತ್ರಿ ಎಂಬಾಕೆ ತನ್ನ ಆರು ವರ್ಷದ ಮಗನನ್ನು ನಾಲೆಗೆ ಎಸೆದಿದ್ದಾಳೆ. ವಿನೋದ್ (6) ಮೃತ ದುರ್ದೈವಿ.

ಮಗುವು ಮೂಕನಾಗಿದ್ದರಿಂದ ಸಾವಿತ್ರಿ ಹಾಗೂ ರವಿಕುಮಾರ್ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು. ರವಿಕುಮಾರ್‌ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪ್ರತೀ ಬಾರಿ ಗಲಾಟೆಯಾದಾಗಲೂ ಮಗು ಸಾಯಲಿ ಎಂದು ಸಾವಿತ್ರಿಗೆ ಬೈಯ್ಯುತ್ತಿದ್ದ.

ನಿನ್ನೆ ಶನಿವಾರ ರಾತ್ರಿಯೂ ಸಹ ಸಾವಿತ್ರಿ ಹಾಗೂ ಪತಿ ರವಿಕುಮಾರ್‌ ಜತೆಗೆ ಜಗಳ ನಡೆದಿದೆ. ಪತಿ ಜತೆಗೆ ಗಲಾಟೆ ಆದಾಗ ಸಾವಿತ್ರಿ ಕೋಪದಲ್ಲಿ ಮಗುವನ್ನು ಎತ್ತಿಕೊಂಡು ಹೋಗಿ ನಾಲೆಗೆ ಎಸೆದಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮಗುವನ್ನು ಹುಡುಕಾಡಲು ಮುಂದಾಗಿದ್ದಾರೆ.

ಆದರೆ ಮಗು ಸಿಗದಿದ್ದಾಗ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಹಾಲಮಡ್ಡಿಯಲ್ಲಿ ನಡೆದ ಶೋಧ ಕಾರ್ಯಾಚರಣೆ ವೇಳೆ ಮೃತದೇಹವು ಪತ್ತೆಯಾಗಿದೆ. ನಾಲೆಗೆ ಎಸೆಯಲ್ಪಟ್ಟಾಗ ಮೊಸಳೆಯೊಂದು ಮಗುವಿನ ಬಲಗೈ ಕಚ್ಚಿ ಎಳೆದು ಹೋಗಿತ್ತು. ಆರು ವರ್ಷದ ಗಂಡು ಮಗುವಿಗಾಗಿ ನಿನ್ನೆ ಶನಿವಾರ ರಾತ್ರಿಯಿಂದ ಶೋಧ ಕಾರ್ಯಾಚರಣೆ ಮುಂದುವರಿದಿತ್ತು.

ಇದನ್ನೂ ಓದಿ: Nijjar Killing: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣದ ಮೂವರ ಬಂಧನ; ಭಾರತದ ಪ್ರತಿಕ್ರಿಯೆ ಏನು?

ಭಾನುವಾರ ಬೆಳಗ್ಗೆ ಕಾರ್ಯಾಚರಣೆ ವೇಳೆ ಮಗುವಿನ ಜತೆ ಆಗಾಗ ಮೊಸಳೆಯು ಕಾಣಿಸಿಕೊಂಡಿತ್ತು. ದಾಂಡೇಲಿಯ ಗ್ರಾಮೀಣ ಠಾಣಾ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ಸಹಕಾರದಲ್ಲಿ ಮಗುವಿನ ಮೃತದೇಹ ಪತ್ತೆ ಮಾಡಲಾಗಿದೆ. ಮುಳುಗು ತಜ್ಞರು ಮೊಸಳೆಯ ಬಾಯಿಯಿಂದ ಮಗುವಿನ ಮೃತದೇಹ ಬಿಡಿಸಿಕೊಂಡು ಬಂದಿದ್ದಾರೆ.

ಇನ್ನೂ ಆರೋಪಿಗಳಾದ ರವಿ ಕುಮಾರ್ ಹಾಗೂ ಸಾವಿತ್ರಿ ದಂಪತಿಯನ್ನು ದಾಂಡೇಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಅಪ್ಪ-ಅಮ್ಮನ ಜಗಳದಲ್ಲಿ ಏನು ತಿಳಿಯದ ಮಗುವೊಂದು ಪ್ರಾಣವನ್ನೇ ಕಳೆದುಕೊಂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
IPL 2024
Latest21 mins ago

IPL 2024 : ಸಿಎಸ್​ಕೆ ತಂಡದ ಸಮಸ್ಯೆಗಳನ್ನು ಬಹಿರಂಗಪಡಿಸಿದ ನಾಯಕ ಋತುರಾಜ್​

Air India
ದೇಶ23 mins ago

Air India: ವಿಮಾನ ಪ್ರಯಾಣಿಕರೇ ಗಮನಿಸಿ, ಚೆಕ್-ಇನ್ ಬ್ಯಾಗೇಜ್ ಭಾರದ ಮಿತಿ ಇಳಿಕೆ!

Lok Sabha Election 2024 Narendra Modi cant become PM again says CM Siddaramaiah
Lok Sabha Election 202428 mins ago

Lok Sabha Election 2024: ಮತ್ತೆ ಮೋದಿ ಪ್ರಧಾನಿಯಾಗಲು ಸಾಧ್ಯವೇ ಇಲ್ಲ: ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ದು ಏಕೆ?

Radhika Khera
ದೇಶ30 mins ago

Radhika Khera: ಅಯೋಧ್ಯೆಗೆ ಭೇಟಿ ನೀಡಿದ್ದಕ್ಕೆ ಪಕ್ಷದಲ್ಲಿ ವಿರೋಧ; ಕಾಂಗ್ರೆಸ್‌ ತೊರೆದ ನಾಯಕಿ!

Viral News
ಕ್ರೈಂ30 mins ago

Viral News: ವಿಮಾನ ಪ್ರಯಾಣಿಕನ ಜೇಬಿನಲ್ಲಿತ್ತು ಎರಡು ಹಾವು!

Self-Healing Roads
ತಂತ್ರಜ್ಞಾನ32 mins ago

Self-Healing Roads: ರಸ್ತೆಗಳಲ್ಲಿ ಹೊಂಡಗಳೇ ಇರಲ್ಲ! ಬರಲಿವೆ ಸೆಲ್ಫ್‌ ಹೀಲಿಂಗ್‌ ರೋಡ್‌ಗಳು!

IPL 2024
ಪ್ರಮುಖ ಸುದ್ದಿ40 mins ago

IPL 2024 : 28 ರನ್​ಗಳಿಂದ ಗೆದ್ದು ಪಂಜಾಬ್ ವಿರುದ್ಧ ಪ್ರತಿಕಾರ ತೀರಿಸಿದ ಚೆನ್ನೈ

Narendra Modi
ದೇಶ42 mins ago

Narendra Modi: ಪ್ರಚಾರದ ಮಧ್ಯೆಯೇ ರಾಮಮಂದಿರಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಮೋದಿ

Viral News
ವೈರಲ್ ನ್ಯೂಸ್44 mins ago

Viral News: ಕಾಳಿಂಗ ಸರ್ಪವನ್ನು ಈ ಕುಟುಂಬ ಹೇಗೆ ಪೂಜಿಸುತ್ತಿದೆ ನೋಡಿ!

Narendra Modi
ದೇಶ53 mins ago

Narendra Modi: ಅಯೋಧ್ಯೆಯಲ್ಲಿ ಮೋದಿ ಬೃಹತ್‌ ರೋಡ್ ಶೋ;‌ ಎಲ್ಲೆಡೆ ಜೈ ಶ್ರೀರಾಮ್‌ ಘೋಷಣೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 hour ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ3 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ16 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

ಟ್ರೆಂಡಿಂಗ್‌