2 ವರ್ಷದಲ್ಲಿ ರಾಜ್ಯಸಭೆ ಸದಸ್ಯರ ಸಂಬಳ, ಪ್ರವಾಸಕ್ಕಾಗಿ ಖರ್ಚಾಗಿದ್ದು ಎಷ್ಟು ನೂರು ಕೋಟಿ ರೂ.? ಇಲ್ಲಿದೆ ಮಾಹಿತಿ - Vistara News

ದೇಶ

2 ವರ್ಷದಲ್ಲಿ ರಾಜ್ಯಸಭೆ ಸದಸ್ಯರ ಸಂಬಳ, ಪ್ರವಾಸಕ್ಕಾಗಿ ಖರ್ಚಾಗಿದ್ದು ಎಷ್ಟು ನೂರು ಕೋಟಿ ರೂ.? ಇಲ್ಲಿದೆ ಮಾಹಿತಿ

2021-2023ರ ಅವಧಿಯಲ್ಲಿ ರಾಜ್ಯಸಭೆ ಸದಸ್ಯರ ಸಂಬಳ, ಪ್ರವಾಸದ ವೆಚ್ಚ ಸೇರಿ ಎಷ್ಟು ವ್ಯಯಿಸಲಾಗಿದೆ ಎಂಬ ಕುರಿತು ಮಾಹಿತಿ ಹಕ್ಕು ಕಾಯ್ದೆ (RTI) ಅಡಿಯಲ್ಲಿ ಮಾಹಿತಿ ಲಭ್ಯವಾಗಿದೆ.

VISTARANEWS.COM


on

RTI Reveals Money Spent On Rajya Sabha MPs For Salaries, Travel In 2021-23
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ರಾಜ್ಯಸಭೆಯನ್ನು ಬುದ್ಧಿವಂತರು, ಪ್ರಜ್ಞಾವಂತರ ಸದನ ಎನ್ನಲಾಗುತ್ತಿದೆ. ಸಂಸತ್ತಿನ ಮೇಲ್ಮನೆ ಎಂದೇ ಹೇಳಲಾಗುವ ರಾಜ್ಯಸಭೆ ಸದಸ್ಯರಿಗೆ ಸರ್ಕಾರ ಉತ್ತಮ ಸಂಬಳ ಸೇರಿ ಹಲವು ಸೌಕರ್ಯ ನೀಡುತ್ತದೆ. ಹೀಗೆ, 2021-2023ರ ಅವಧಿಯಲ್ಲಿ ರಾಜ್ಯಸಭೆ ಸದಸ್ಯರಿಗೆ ನೀಡಿದ ಸಂಬಳ, ಪ್ರವಾಸ ವೆಚ್ಚ ಸೇರಿ ಅವರಿಗೆ ವ್ಯಯಿಸಲಾದ ಹಣದ ಕುರಿತು ಆರ್‌ಟಿಐ ಅಡಿಯಲ್ಲಿ ಮಾಹಿತಿ ದೊರೆತಿದೆ. 2021-2023ರಲ್ಲಿ ರಾಜ್ಯಸಭೆ ಸದಸ್ಯರಿಗೆ ಸುಮಾರು 200 ಕೋಟಿ ರೂ. ವ್ಯಯಿಸಲಾಗಿದೆ ಎಂದು ಆರ್‌ಟಿಐ ಮಾಹಿತಿ ತಿಳಿಸಿದೆ.

ಕೊರೊನಾ ನಂತರದ ವರ್ಷದಲ್ಲಿ ಅಂದರೆ, 2021-22ರಲ್ಲಿಯೇ ರಾಜ್ಯಸಭೆ ಸದಸ್ಯರಿಗಾಗಿ 97 ಕೋಟಿ ಕೋಟಿ ರೂ. ವ್ಯಯಿಸಲಾಗಿದೆ. ಇದರಲ್ಲಿ 28.5 ಕೋಟಿ ರೂಪಾಯಿಯನ್ನು ದೇಶೀಯ ಸಂಚಾರ, 1.28 ಕೋಟಿ ರೂಪಾಯಿಯನ್ನು ವಿದೇಶ ಪ್ರಯಾಣಕ್ಕಾಗಿ ವ್ಯಯಿಸಲಾಗಿದೆ. ಸಂಬಳಕ್ಕಾಗಿ ಒಂದು ವರ್ಷದಲ್ಲಿ 57.6 ಕೋಟಿ ರೂಪಾಯಿಯನ್ನು ಸಂಬಳಕ್ಕಾಗಿ ವ್ಯಯಿಸಲಾಗಿದೆ. ಇನ್ನು, ವೈದ್ಯಕೀಯ ವೆಚ್ಚಕ್ಕಾಗಿ 17 ಲಕ್ಷ ರೂ., ಕಚೇರಿ ನಿರ್ವಹಣೆಗೆ 7.5 ಕೋಟಿ ರೂ. ಹಾಗೂ ಮಾಹಿತಿ ತಂತ್ರಜ್ಞಾನದ ನೆರವಿಗಾಗಿ 1.2 ಕೋಟಿ ರೂ. ವ್ಯಯಿಸಲಾಗಿದೆ.

ಇದನ್ನೂ ಓದಿ: ಡಬಲ್​ ಆಯ್ತು ದೆಹಲಿ ಶಾಸಕರ ಸಂಬಳ!; 12 ವರ್ಷಗಳ ನಂತರ ಭರ್ಜರಿ ಏರಿಕೆ, ಸಿಎಂ ವೇತನವೆಷ್ಟು ಇನ್ಮುಂದೆ?

2022-23ರಲ್ಲಿ ಸಂಬಳಕ್ಕಾಗಿ 58.5 ಕೋಟಿ ರೂ., ದೇಶೀಯ ಪ್ರಯಾಣಕ್ಕಾಗಿ 30.9 ಕೋಟಿ ರೂ., ವಿದೇಶ ಪ್ರಯಾಣಕ್ಕೆ 2.6 ಕೋಟಿ ರೂ., ವೈದ್ಯಕೀಯ ಚಿಕಿತ್ಸೆಗಾಗಿ 65 ಲಕ್ಷ ರೂ., ಕಚೇರಿ ನಿರ್ವಹಣೆಗೆ 7 ಕೋಟಿ ರೂ. ಹಾಗೂ ಐಟಿ ಸೇವೆಗಳಿಗಾಗಿ 1.5 ಕೋಟಿ ರೂ. ಖರ್ಚು ಮಾಡಲಾಗಿದೆ. ಎರಡು ವರ್ಷದಲ್ಲಿ ಸುಮಾರು 200 ಕೋಟಿ ರೂ. ರಾಜ್ಯಸಭೆ ಸದಸ್ಯರಿಗಾಗಿಯೇ ವ್ಯಯಿಸಲಾಗಿದೆ.

ಫಲಪ್ರದ ಪ್ರಮಾಣ ಎಷ್ಟು?

ಮಧ್ಯಪ್ರದೇಶ ಮೂಲದ ಚಂದ್ರಶೇಖರ್‌ ಗೌರ್‌ ಎಂಬುವರು ಆರ್‌ಟಿಐ ಅಡಿಯಲ್ಲಿ ಕೇಳಿದ ಮಾಹಿತಿಗೆ ರಾಜ್ಯಸಭೆ ಸಚಿವಾಲಯವು ವಿವರ ಒದಗಿಸಿದೆ. ಅದರಂತೆ, 2021ರ ಚಳಿಗಾಲದ ಅಧಿವೇಶನದ ವೇಳೆ ರಾಜ್ಯಸಭೆಯ ಫಲಪ್ರದ ಪ್ರಮಾಣವು ಶೇ.43, ಮುಂಗಾರು ಅಧಿವೇಶನ ಶೇ.29 ಹಾಗೂ ಬಜೆಟ್‌ ಅಧಿವೇಶನ ಶೇ.90ರಷ್ಟು ಫಲಪ್ರದವಾಗಿತ್ತು. 2022ರ ಚಳಿಗಾಲದ ಅಧಿವೇಶನ ಶೇ.94, ಮುಂಗಾರು ಅಧಿವೇಶನ ಶೇ.42 ಹಾಗೂ ಬಜೆಟ್‌ ಅಧಿವೇಶನ ಶೇ.90ರಷ್ಟು ಫಲಪ್ರದವಾಗಿತ್ತು. ಆದರೆ, ಪ್ರಸಕ್ತ ವರ್ಷದ ಬಜೆಟ್‌ ಅಧಿವೇಶನವು ಕೇವಲ ಶೇ.24ರಷ್ಟು ಫಲಪ್ರದವಾಗಿದೆ ಎಂದು ಮಾಹಿತಿ ನೀಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Pervez Musharraf: ಭಾರತ ವಿರೋಧಿ ಪರ್ವೇಜ್‌ ಮುಷರ‍್ರಫ್‌ಗೆ ಕೇರಳ ಬ್ಯಾಂಕ್‌ ಗೌರವ; ಭುಗಿಲೆದ್ದ ವಿವಾದ

Pervez Musharraf: ಕಾರ್ಗಿಲ್‌ ಯುದ್ಧದ ವಿಜಯಕ್ಕೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಾಂಕ್‌ ಆಫ್‌ ಇಂಡಿಯಾದ ಉದ್ಯೋಗಿಗಳ ಒಕ್ಕೂಟವು ಜುಲೈ 27ರಂದು ಆಲಪ್ಪುಳದಲ್ಲಿ ಕಾರ್ಯಕ್ರಮ ಆಯೋಜಿಸಿತ್ತು. ಇದೇ ವೇಳೆ, ರಾಜ್ಯ ಸಮಾವೇಶವೂ ನಡೆದಿದೆ. ಸಮಾವೇಶದಲ್ಲಿ ಹಲವು ಮಹನೀಯರಿಗೆ ಗೌರವ ಸಲ್ಲಿಸುವ ಪಟ್ಟಿಯಲ್ಲಿ ಪರ್ವೇಜ್‌ ಮುಷರ‍್ರಫ್‌ ಹೆಸರು ಕೂಡ ಸೇರಿದೆ. ಇದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Pervez Musharraf
Koo

ತಿರುವನಂತಪುರಂ: ಭಾರತ ವಿರೋಧಿಯಾಗಿದ್ದ, 1999ರಲ್ಲಿ ಕಾರ್ಗಿಲ್‌ ಯುದ್ಧಕ್ಕೆ ಕಾರಣನಾದ, ಜಮ್ಮು-ಕಾಶ್ಮೀರಕ್ಕೆ ಉಗ್ರರನ್ನು ಛೂ ಬಿಟ್ಟು ಅಶಾಂತಿಗೆ ಕಾರಣನಾದ ಪಾಕಿಸ್ತಾನದ (Pakistan) ಮಾಜಿ ಅಧ್ಯಕ್ಷ ಪರ್ವೇಜ್‌ ಮುಷರ‍್ರಫ್‌ಗೆ (Pervez Musharraf) ಕೇರಳದ ಬ್ಯಾಂಕ್‌ ಆಫ್‌ ಇಂಡಿಯಾ (BOI) ನೌಕರರ ಒಕ್ಕೂಟದಲ್ಲಿ ಗೌರವ ನಮನ ಸಲ್ಲಿಸಲು ತೀರ್ಮಾನಿಸಿದ್ದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಜುಲೈ 27ರಂದು ಕೇರಳದ ಆಲಪ್ಪಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರ್ವೇಜ್‌ ಮುಷರ‍್ರಫ್‌ಗೆ ಗೌರವ ಸಲ್ಲಿಸಲು ಕಾರ್ಯಕ್ರಮಕ್ಕೂ ಮೊದಲೇ ತೀರ್ಮಾನಿಸಿತ್ತು ಎಂದು ತಿಳಿದುಬಂದಿದೆ.

ಕಾರ್ಗಿಲ್‌ ಯುದ್ಧದ ವಿಜಯಕ್ಕೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಾಂಕ್‌ ಆಫ್‌ ಇಂಡಿಯಾದ ಉದ್ಯೋಗಿಗಳ ಒಕ್ಕೂಟವು ಜುಲೈ 27ರಂದು ಆಲಪ್ಪುಳದಲ್ಲಿ ಕಾರ್ಯಕ್ರಮ ಆಯೋಜಿಸಿತ್ತು. ಇದೇ ವೇಳೆ, ರಾಜ್ಯ ಸಮಾವೇಶವೂ ನಡೆದಿದೆ. ಸಮಾವೇಶದಲ್ಲಿ ಹಲವು ಮಹನೀಯರಿಗೆ ಗೌರವ ಸಲ್ಲಿಸುವ ಪಟ್ಟಿಯಲ್ಲಿ ಪರ್ವೇಜ್‌ ಮುಷರ‍್ರಫ್‌ ಹೆಸರು ಕೂಡ ಸೇರಿಸಿತ್ತು. ಇದರಿಂದಾಗಿ ಬ್ಯಾಂಕ್‌ ಆಫ್‌ ಇಂಡಿಯಾದ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಬ್ಯಾಂಕ್‌ಗಳ ಎದುರು ಜನ ಪ್ರತಿಭಟನೆ ನಡೆಸಿದ್ದಾರೆ. ಇದಾದ ನಂತರ, ಒಕ್ಕೂಟವು ಗೌರವಕ್ಕೆ ಪಾತ್ರರಾಗುವವರ ಪಟ್ಟಿಯಿಂದ ಪರ್ವೇಜ್‌ ಮುಷರ‍್ರಫ್‌ ಹೆಸರು ತೆಗೆದಿದ್ದಾರೆ ಎಂದು ತಿಳಿದುಬಂದಿದೆ.

ಪಾಲಿ ಜಾರ್ಜ್‌ ನಗರದಲ್ಲಿ ಬ್ಯಾಂಕ್‌ ಆಫ್‌ ಇಂಡಿಯಾದ 23ನೇ ರಾಜ್ಯ ಸಮಾವೇಶ ನಡೆದಿದೆ. ಕಾಂಗ್ರೆಸ್‌ ಸಂಸದ ಕೆ.ಸಿ.ವೇಣುಗೋಪಾಲ್‌ ಅವರು ಸಮಾವೇಶವನ್ನು ಉದ್ಘಾಟಿಸಿದರು. ಇದೇ ವೇಳೆ, ಕಾರ್ಗಿಲ್‌ ಯುದ್ಧದ ವಿಜಯ, ಯೋಧರ ತ್ಯಾಗ, ಬಲಿದಾನವನ್ನು ಸ್ಮರಿಸಲಾಯಿತು. ಅಲ್ಲದೆ, ನಟರು, ಗಾಯಕರು, ನೃತ್ಯಪಟುಗಳು, ಕ್ರೀಡಾಪಟುಗಳು, ಹೋರಾಟಗಾರರು ಸೇರಿ ಹಲವು ಸಾಧಕರನ್ನು ಸನ್ಮಾನಿಸಲಾಯಿತು.

ಪರ್ವೇಜ್‌ ಮುಷರ‍್ರಫ್‌ಗೆ ಗೌರವ ಸಲ್ಲಿಸಲು ಮುಂದಾಗಿದ್ದ ಬ್ಯಾಂಕ್‌ ಆಫ್‌ ಇಂಡಿಯಾದ ವಿರುದ್ಧ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬ್ಯಾಂಕ್‌ ಎದುರು ಪ್ರತಿಭಟನೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಬ್ಯಾಂಕ್‌ ಆಫ್‌ ಇಂಡಿಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ದೇಶದ್ರೋಹದ ಕೃತ್ಯ ಎಂದೆಲ್ಲ ಜನ ಟೀಕಿಸಿದ್ದಾರೆ. ರಾಜ್ಯ ಬಿಜೆಪಿ ಘಟಕದ ನಾಯಕರು ಕೂಡ ಇದನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: Narendra Modi: ಮೋದಿ ಎಚ್ಚರಿಕೆಗೆ ಪಾಕಿಸ್ತಾನ ಥಂಡಾ; ಗಡಿಯಲ್ಲಿ ಹೆಚ್ಚುವರಿ ಸೈನಿಕರ ನಿಯೋಜನೆ!

Continue Reading

ದೇಶ

Tihar Jail: ತಿಹಾರ ಜೈಲಿನ 125 ಕೈದಿಗಳಿಗೆ ಎಚ್‌ಐವಿ ಪಾಸಿಟಿವ್‌; ಇವರು ‘ಬೇಲಿ’ ಹಾರಿದ್ದು ಎಲ್ಲಿ?

Tihar Jail: ಜೈಲಿನಲ್ಲಿ 125 ಕೈದಿಗಳಿಗೆ ಎಚ್‌ಐವಿ ಇದೆ ಎಂಬ ಮಾಹಿತಿ ಲಭ್ಯವಾಗುತ್ತಲೇ ಇತರ ಕೈದಿಗಳಲ್ಲಿ ಆತಂಕ ಮನೆಮಾಡಿದೆ ಎಂದು ತಿಳಿದುಬಂದಿದೆ. ಇನ್ನೂ 3,500 ಕೈದಿಗಳ ಆರೋಗ್ಯ ತಪಾಸಣೆ ಬಾಕಿ ಇದೆ ಎಂದು ತಿಳಿದುಬಂದಿದೆ. ಹಾಗಾಗಿ, ಇನ್ನೂ ಇಂತಹ ಕಾಯಿಲೆ ಪೀಡಿತರ ಸಂಖ್ಯೆ ಜಾಸ್ತಿ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Tihar Jail
Koo

ನವದೆಹಲಿ: ಜೈಲು ಅಂದರೆ, ಅಲ್ಲೆಲ್ಲ ಕನಿಷ್ಠ ಮೂಲ ಸೌಕರ್ಯಗಳಿರುತ್ತವೆ. ಒಂದೇ ಸೆಲ್‌ನಲ್ಲಿ ನಾಲ್ಕೈದು ಕೈದಿಗಳೊಂದಿಗೆ ಮಲಗಬೇಕು, ಸಾಮೂಹಿಕ ಶೌಚಾಲಯ, ಸೊಳ್ಳೆಗಳ ಕಾಟ, ಸಹ ಕೈದಿಗಳ ಉಪಟಳ, ತಣ್ಣೀರಿನ ಸ್ನಾನ ಮಾಡಬೇಕು, ಜೈಲಧಿಕಾರಿಗಳು ಹೇಳಿದ ಕೆಲಸ ಮಾಡಬೇಕು. ಆದರೆ, ಭಾರತದ ಜೈಲುಗಳಲ್ಲಿ ದುಡ್ಡು ಕೊಟ್ಟರೆ ಏನು ಬೇಕಾದರೂ ಸೌಕರ್ಯ ಸಿಗುತ್ತದೆ ಎಂಬ ಆರೋಪ ಮೊದಲಿನಿಂದಲೂ ಇದೆ. ಇಂತಹ ಆರೋಪಕ್ಕೆ ನಿದರ್ಶನ ಎಂಬಂತೆ, ತಿಹಾರ ಜೈಲಿನಲ್ಲಿರುವ (Tihar Jail) 125 ಕೈದಿಗಳಿಗೆ ಎಚ್‌ಐವಿ ಪಾಸಿಟಿವ್‌ (HIV Positive) ಬಂದಿದೆ. ಅಷ್ಟೇ ಅಲ್ಲ, 200 ಕೈದಿಗಳು ಸೆಕ್ಸ್‌ ಸಂಬಂಧಿ ಕಾಯಿಲೆಯಿಂದ (Syphilis) ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.

ತಿಹಾರ ಜೈಲಿನಲ್ಲಿ ಒಟ್ಟು 14 ಸಾವಿರ ಕೈದಿಗಳಿದ್ದಾರೆ. ಇವರಲ್ಲಿ 10,500 ಕೈದಿಗಳ ಆರೋಗ್ಯ ತಪಾಸಣೆ ಮಾಡಿಸಿದಾಗ, ಅವರಲ್ಲಿ 125 ಮಂದಿಗೆ ಎಚ್‌ಐವಿ ಪಾಸಿಟಿವ್‌, ಇನ್ನೂ 200 ಮಂದಿ ಸಿಫಿಲ್ಸ್‌ ಎಂಬ ಸೆಕ್ಸ್‌ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ತಿಹಾರ ಜೈಲಿನಲ್ಲಿ ನಿಯಮಿತವಾಗಿ ಕೈದಿಗಳ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಅವರು ಮಾರಕ ಕಾಯಿಲೆಗಳಿಂದ ಬಳಲುತ್ತಿದ್ದಾರೆಯೇ? ಅವರ ಆರೋಗ್ಯ ಹೇಗಿದೆ ಎಂಬುದನ್ನು ತಿಳಿದುಕೊಳ್ಳಲು ತಪಾಸಣೆ ಮಾಡಲಾಗುತ್ತದೆ.

ಇತ್ತೀಚೆಗೆ ತಿಹಾರ ಜೈಲಿನ ಡಿಜಿ ಆಗಿ ಸತೀಶ್‌ ಗೋಲ್ಚಾ ಅವರು ಅಧಿಕಾರ ವಹಿಸಿಕೊಂಡಿದ್ದು, ಅವರು ಕೈದಿಗಳ ಆರೋಗ್ಯ ತಪಾಸಣೆಗೆ ಸೂಚಿಸಿದ್ದರು. ಅದರಂತೆ, ಕಳೆದ ಮೇ ಹಾಗೂ ಜೂನ್‌ ತಿಂಗಳಲ್ಲಿ 10,500 ಕೈದಿಗಳ ಆರೋಗ್ಯ ತಪಾಸಣೆ ಮಾಡಿಸಲಾಗಿದೆ. ಇನ್ನೂ, 3,500 ಕೈದಿಗಳ ಆರೋಗ್ಯ ತಪಾಸಣೆ ಬಾಕಿ ಇದೆ ಎಂದು ತಿಳಿದುಬಂದಿದೆ. ಹಾಗಾಗಿ, ಇನ್ನೂ ಇಂತಹ ಕಾಯಿಲೆ ಪೀಡಿತರ ಸಂಖ್ಯೆ ಜಾಸ್ತಿ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಅಸುರಕ್ಷಿತ ಲೈಂಗಿಕ ಸಂಪರ್ಕ ಸೇರಿ ಹಲವು ಕಾರಣಗಳಿಂದಾಗಿ ಎಚ್‌ಐವಿ ತಗುಲುತ್ತದೆ. ಆದರೆ, ಜೈಲಿನಲ್ಲಿರುವ ನೂರಾರು ಕೈದಿಗಳಿಗೆ ಹೇಗೆ ಏಕಾಏಕಿ ಎಚ್‌ಐವಿ ತಗುಲಿತು ಎಂಬ ಪ್ರಶ್ನೆ ಕಾಡುತ್ತಿದೆ. ಇನ್ನು, ಜೈಲಿನಲ್ಲಿ 125 ಕೈದಿಗಳಿಗೆ ಎಚ್‌ಐವಿ ಇದೆ ಎಂಬ ಮಾಹಿತಿ ಲಭ್ಯವಾಗುತ್ತಲೇ ಇತರ ಕೈದಿಗಳಲ್ಲಿ ಆತಂಕ ಮನೆಮಾಡಿದೆ ಎಂದು ತಿಳಿದುಬಂದಿದೆ. ಇವರ ಆರೋಗ್ಯ ಸುಧಾರಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂಬುದಾಗಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ: K Kavitha : ತಿಹಾರ್​ ಜೈಲಿನಿಂದಲೇ ಕವಿತಾ ಅರೆಸ್ಟ್​​; ಇದೀಗ ಸಿಬಿಐ ಸರದಿ

Continue Reading

ದೇಶ

ಬಾರೆ ಸಖಿ ಎಂದು 20 ವರ್ಷದ ಯುವತಿಯನ್ನು ಕರೆದುಕೊಂಡು ಹೋದ, ಕೊಂದು ಪೊದೆಯಲ್ಲಿ ಬಿಸಾಡಿದ; ಕೃತ್ಯಕ್ಕೆ ಕಾರಣವೇನು?

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯಶಶ್ರೀ ಶಿಂಧೆ ಎಂಬ 20 ವರ್ಷದ ಯುವತಿಯ ಶವವು ನವಿ ಮುಂಬೈ ರೈಲು ನಿಲ್ದಾಣದ ಬಳಿಯ ಪೊದೆಯಲ್ಲಿ ಪತ್ತೆಯಾಗಿದೆ. ಆಕೆಯ ಬಾಯ್‌ಫ್ರೆಂಡ್‌ನೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಬಳಿಕ ಯುವಕನು ನಾಪತ್ತೆಯಾಗಿದ್ದು, ಆತನನ್ನು ಬಂಧಿಸಲು ಐದು ತಂಡಗಳನ್ನು ರಚಿಸಲಾಗಿದೆ.

VISTARANEWS.COM


on

Mumbai Girl
Koo

ಮುಂಬೈ: ಬದಲಾದ ಕಾಲಘಟ್ಟದಲ್ಲಿ ನಿಜವಾದ ಪ್ರೀತಿ-ಪ್ರೇಮ ಎಂಬುದರ ಅರ್ಥವೇ ಕ್ಷೀಣಿಸುತ್ತಿದೆ. ಕಾಲೇಜು ಓದುವಾಗಲೇ ಪ್ರೀತಿಸುವುದು, ಜಗಳ ಆಡಿ ಒಂದೆರಡು ವರ್ಷದಲ್ಲಿ ದೂರ ಆಗುವುದು, ಬ್ರೇಕಪ್‌ (Love Breakup) ಬಳಿಕ ಮತ್ತೊಂದು ಲವ್‌ ಹಿಂದೆ ಓಡುವುದು ಸಾಮಾನ್ಯ ಎಂಬಂತಾಗಿದೆ. ಇನ್ನೂ, ಒಂದು ಹೆಜ್ಜೆ ಮುಂದೆ ಹೋಗಿರುವ ಪ್ರೇಮಿಗಳು, ತಾವು ಇಷ್ಟಪಟ್ಟವರು ಬ್ರೇಕಪ್‌ ಎಂದರೆ ಅಥವಾ ಇನ್ನೊಂದು ಅಫೇರ್‌ನ ಅನುಮಾನ ಮೂಡಿ ಕೊಲೆಯಂತಹ ಪ್ರಕರಣಗಳು ನಡೆಯುತ್ತಿವೆ. ಇದಕ್ಕೆ ನಿದರ್ಶನ ಎಂಬಂತೆ, ಮುಂಬೈನಲ್ಲಿ (Mumbai) ಯುವಕನೊಬ್ಬ ತಾನು ಪ್ರೀತಿಸುತ್ತಿದ್ದ 20 ವರ್ಷದ ಯುವತಿಯನ್ನು ಭೀಕರವಾಗಿ ಕೊಲೆ ಮಾಡಿ, ಶವವನ್ನು ಪೊದೆಯಲ್ಲಿ ಎಸೆದಿರುವ ಪ್ರಕರಣ ಬಯಲಾಗಿದೆ.

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯಶಶ್ರೀ ಶಿಂಧೆ ಎಂಬ 20 ವರ್ಷದ ಯುವತಿಯ ಶವವು ನವಿ ಮುಂಬೈ ರೈಲು ನಿಲ್ದಾಣದ ಬಳಿಯ ಪೊದೆಯಲ್ಲಿ ಪತ್ತೆಯಾಗಿದೆ. ಆಕೆಯ ಬಾಯ್‌ಫ್ರೆಂಡ್‌ನೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. “ತಡರಾತ್ರಿ 2 ಗಂಟೆ ಸುಮಾರಿಗೆ ಉರಾನ್‌ ರೈಲು ನಿಲ್ದಾಣದ ಬಳಿಯ ಪೊದೆಯಲ್ಲಿ ಯುವತಿಯ ಶವ ಬಿದ್ದಿದೆ ಎಂಬುದಾಗಿ ಕರೆ ಬಂದಿತು. ಕೂಡಲೇ ಪೊಲೀಸರು ಸ್ಥಳಕ್ಕೆ ತೆರಳಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಯುವತಿ ಮೈಮೇಲೆ ಭೀಕರ ಗಾಯಗಳಾಗಿವೆ. ಆಕೆಯನ್ನು ಇರಿದು ಕೊಲೆ ಮಾಡಲಾಗಿದೆ” ಎಂದು ನವಿ ಮುಂಬೈ ಡಿಸಿಪಿ ವಿವೇಕ್‌ ಪನ್ಸಾರೆ ತಿಳಿಸಿದ್ದಾರೆ.

“ಪ್ರಾಥಮಿಕ ತನಿಖೆಯ ಪ್ರಕಾರ, ಯುವಕ ಹಾಗೂ ಯುವತಿಯು ಪ್ರೀತಿಸುತ್ತಿದ್ದರು. ಇತ್ತೀಚೆಗೆ ಇಬ್ಬರ ಮಧ್ಯೆ ಮನಸ್ತಾಪ ಮೂಡಿತ್ತು. ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿಯ ಶವ ಪತ್ತೆಯಾದ ಬಳಿಕ ಯುವಕನ ಮೇಲೆ ಶಂಕೆ ವ್ಯಕ್ತವಾಗಿದೆ. ಯುವಕನು ಈಗ ಪ್ರಾಥಮಿಕ ಆರೋಪಿಯಾಗಿದ್ದಾನೆ. ಕೊಲೆ ಬಳಿಕ ಯುವಕನು ಕೂಡ ನಾಪತ್ತೆಯಾಗಿದ್ದಾನೆ. ಆತನನ್ನು ಪತ್ತೆಹಚ್ಚಲು ಐದು ಪೊಲೀಸ್‌ ತಂಡಗಳನ್ನು ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುತ್ತದೆ” ಎಂಬುದಾಗಿ ಡಿಸಿಪಿ ತಿಳಿಸಿದ್ದಾರೆ.

ಯುವತಿಯು ಉರಾನ್‌ ಪ್ರದೇಶದ ನಿವಾಸಿಯಾಗಿದ್ದು, ಅಲ್ಲಿಂದ ಸುಮಾರು 25 ಕಿಲೋಮೀಟರ್‌ ದೂರದಲ್ಲಿರುವ ಬೇಲಾಪುರದಲ್ಲಿ ಕೆಲಸಕ್ಕೆ ಹೋಗುತ್ತಿದ್ದಳು. ಇದೇ ವೇಳೆ ಇಬ್ಬರ ಮಧ್ಯೆ ಪ್ರೇಮಾಂಕುರವಾಗಿತ್ತು. ಆದರೆ, ಇತ್ತೀಚೆಗೆ ಇಬ್ಬರ ಮಧ್ಯೆ ಮನಸ್ತಾಪಗಳು, ಜಗಳಗಳು ಜಾಸ್ತಿಯಾಗಿದ್ದವು ಎಂದು ತಿಳಿದುಬಂದಿದೆ. ಆದಾಗ್ಯೂ, ಯುವತಿಯನ್ನು ಕೊಲೆ ಮಾಡಲು ನಿಖರ ಕಾರಣ ಏನು ಎಂಬುದು ಇದುವರೆಗೆ ಗೊತ್ತಾಗಿಲ್ಲ.

ಇದನ್ನೂ ಓದಿ: Murder in PG: ಪಿಜಿಯಲ್ಲಿ ಯುವತಿ ಕೊಲೆ ಮಾಡಿದ ಪಾತಕಿ ಮಧ್ಯಪ್ರದೇಶದಲ್ಲಿ ಸೆರೆ

Continue Reading

ದೇಶ

Infiltration: ಭಾರತಕ್ಕೆ ನುಗ್ಗುವುದು ಹೇಗೆ ಎಂದು ವಿಡಿಯೊ ಮಾಡಿದ ಬಾಂಗ್ಲಾ ವ್ಯಕ್ತಿ; ದೀದಿ ಆಹ್ವಾನದ ಬೆನ್ನಲ್ಲೇ ವಿಡಿಯೊ ವೈರಲ್‌

Infiltration: “ಬಾಂಗ್ಲಾದೇಶದ ನಿರಾಶ್ರಿತರು ಪಶ್ಚಿಮ ಬಂಗಾಳಕ್ಕೆ ಬಂದರೆ ಆಶ್ರಯ ನೀಡುತ್ತೇವೆ” ಎಂಬುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೇಳಿಕೆ ನೀಡಿದ ಬೆನ್ನಲ್ಲೇ, ಬಾಂಗ್ಲಾದ ವ್ಲಾಗರ್‌ ಒಬ್ಬ, ಹೇಗೆ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಬಹುದು ಎಂಬುದರ ವಿಡಿಯೊ ಪೋಸ್ಟ್‌ ಮಾಡಿದೆ. ಇದರಿಂದಾಗಿ, ಗಡಿಯಲ್ಲಿ ಈಗ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

VISTARANEWS.COM


on

Infiltration
Koo

ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ಅರಾಜಕತೆ, ನಾಗರಿಕ ದಂಗೆ ಭುಗಿಲೆದ್ದಿದೆ. ವಿವಾದಿತ ಮೀಸಲಾತಿ ವಿರುದ್ಧ ಜನ ಹಿಂಸಾಚಾರದಲ್ಲಿ ತೊಡಗಿದ್ದು, 200ಕ್ಕೂ ಅಧಿಕ ಮಂದಿ ಮೃತಪಟ್ಟು, ಸಾವಿರಾರು ಜನ ಗಾಯಗೊಂಡಿದ್ದಾರೆ. ಇದರ ಬೆನ್ನಲ್ಲೇ, ಬಾಂಗ್ಲಾದೇಶದ ವ್ಲಾಗರ್‌ (Vlogger) ಒಬ್ಬ, ಭಾರತಕ್ಕೆ ಹೇಗೆ ಅಕ್ರಮವಾಗಿ ನುಗ್ಗಬಹುದು (Infiltration) ಎಂಬುದನ್ನು ತೋರಿಸುವ ವಿಡಯೊವನ್ನು ಹರಿಬಿಟ್ಟಿದ್ದಾನೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ. ಅದರಲ್ಲೂ, “ಬಾಂಗ್ಲಾದೇಶದ ನಿರಾಶ್ರಿತರು ಪಶ್ಚಿಮ ಬಂಗಾಳಕ್ಕೆ ಬಂದರೆ ಆಶ್ರಯ ನೀಡುತ್ತೇವೆ” ಎಂಬುದಾಗಿ ಮಮತಾ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ಅವರು ಹೇಳಿಕೆ ನೀಡಿದ ಬೆನ್ನಲ್ಲೇ ವಿಡಿಯೊ ಹರಿದಾಡುತ್ತಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ.

ಬಾಂಗ್ಲಾದೇಶದ ಗಡಿಗೆ ತೆರಳಿದ ವ್ಲಾಗರ್‌ ಒಬ್ಬನು, ಅಕ್ರಮವಾಗಿ ಹೇಗೆ ಭಾರತವನ್ನು ಪ್ರವೇಶಿಸಬಹುದು, ನುಸುಳಬಹುದು ಎಂಬುದನ್ನು ವಿಡಿಯೊ ಸಮೇತ ಪೋಸ್ಟ್‌ ಮಾಡಿದ್ದಾನೆ. ಕಾಲುವೆಯ ಪುಟ್ಟದಾದ ಪೈಪ್‌ಗಳ ಮೂಲಕ ಬಾಂಗ್ಲಾದೇಶದ ಗಡಿಯಿಂದ ಭಾರತದ ಗಡಿಯೊಳಗೆ ನುಗ್ಗಬಹುದು, ಆ ಮೂಲಕ ಸುಲಭವಾಗಿ ಭಾರತದಲ್ಲಿ ಅಕ್ರಮವಾಗಿ ನೆಲೆಸಬಹುದು ಎಂಬುದನ್ನು ಕೆಲ ಸ್ನೇಹಿತರೊಂದಿಗೆ ಆತ ಪ್ರಾತ್ಯಕ್ಷಿಕೆ ತೋರಿಸಿದ್ದಾನೆ. ಇದು ಈಗ ಗಡಿಯಲ್ಲಿ ಭಾರಿ ಆತಂಕ ಸೃಷ್ಟಿಸಿದೆ. ಆದಾಗ್ಯೂ, ಭಾರತ-ಬಾಂಗ್ಲಾ ಗಡಿಯಲ್ಲಿ ಸೈನಿಕರು ಕಟ್ಟೆಚ್ಚರ ವಹಿಸಿದ್ದಾರೆ ಎಂದು ತಿಳಿದುಬಂದಿದೆ.

ಬಾಂಗ್ಲಾದಲ್ಲಿ ನಿಲ್ಲದ ಗಲಭೆ

ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಬಾಂಗ್ಲಾದೇಶ ದಲ್ಲಿ ಹಲವು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಹಿಂಸಾಸ್ವರೂಪ ಪಡೆದಿರುವ ಮಧ್ಯೆಯೇ ಅಲ್ಲಿನ ಸರ್ವೋಚ್ಚ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಕೋಲಾಹಲಕ್ಕೆ ಕಾರಣವಾದ ಬಾಂಗ್ಲಾ ವಿಮೋಚನೆ ಹೋರಾಟದಲ್ಲಿ ಭಾಗಿಯಾಗಿದ್ದವರ ಕುಟುಂಬದವರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 30ರಷ್ಟು ಮೀಸಲಾತಿ ನೀಡುವ ನಿಯಮವನ್ನು ಕೋರ್ಟ್‌ ಹಿಂತೆಗೆದುಕೊಂಡಿದೆ. ಆದರೆ ಸಂಪೂರ್ಣ ರದ್ದುಗೊಳಿಸಲಿಲ್ಲ. ಶೇ. 30ರಷ್ಟಿದ್ದ ಮೀಸಲಾತಿಯನ್ನು ಶೇ. 5ಕ್ಕೆ ಇಳಿಸಲಾಗಿದೆ. ಹಾಗಾಗಿ, ಬಾಂಗ್ಲಾದೇಶದಲ್ಲಿ ಗಲಭೆ ನಿಂತಿಲ್ಲ. ಇದರಿಂದಾಗಿ ಭಾರತದ ಗಡಿಯಲ್ಲೂ ಆತಂಕದ ವಾತಾವರಣ ನಿರ್ಮಾಣವಾದಂತಾಗಿದೆ.

ಮಮತಾ ಬ್ಯಾನರ್ಜಿ ಹೇಳಿದ್ದೇನು?

ಜುಲೈ 21ರಂದು ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ನಡೆಸಿದ ಮೆಗಾ ರ‍್ಯಾಲಿಯಲ್ಲಿ ಮಾತನಾಡಿದ್ದ ಮಮತಾ ಬ್ಯಾನರ್ಜಿ, “ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ಜನರು ನಮ್ಮ ಬಾಗಿಲನ್ನು ತಟ್ಟಿದರೆ ಸರ್ಕಾರ ಅವರಿಗೆ ಆಶ್ರಯ ನೀಡುತ್ತದೆ” ಎಂದಿದ್ದರು. ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ಬಾಂಗ್ಲಾದೇಶದ ಅಕ್ರಮ ವಲಸೆಗಾರರಿಗೆ ಮಮತಾ ಬ್ಯಾನರ್ಜಿ ಆಶ್ರಯ ನೀಡಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿರುವ ಹೊತ್ತಿನಲ್ಲೇ ಅವರು ಬಾಂಗ್ಲಾ ವಲಸಿಗರಿಗೆ ಆಶ್ರಯ ನೀಡುತ್ತೇನೆ ಎಂಬುದಾಗಿ ನೀಡಿದ ಹೇಳಿಕೆ ವಿರುದ್ಧ ಭಾರಿ ಟೀಕೆಗಳು ವ್ಯಕ್ತವಾಗಿದ್ದವು.

ಇದನ್ನೂ ಓದಿ: Mamata Banerjee: ಮಾತನಾಡಲು 5 ನಿಮಿಷ ಮಾತ್ರ ಅವಕಾಶ ನೀಡಿದರು: ನೀತಿ ಆಯೋಗದ ಸಭೆಯಿಂದ ಹೊರ ಬಂದ ಮಮತಾ ಬ್ಯಾನರ್ಜಿ ಕಿಡಿ

Continue Reading
Advertisement
Pervez Musharraf
ದೇಶ5 mins ago

Pervez Musharraf: ಭಾರತ ವಿರೋಧಿ ಪರ್ವೇಜ್‌ ಮುಷರ‍್ರಫ್‌ಗೆ ಕೇರಳ ಬ್ಯಾಂಕ್‌ ಗೌರವ; ಭುಗಿಲೆದ್ದ ವಿವಾದ

Paris Olympics 2024
ಪ್ರಮುಖ ಸುದ್ದಿ10 mins ago

Paris Olympics 2024 : ಷಟ್ಲರ್​ಗಳ ಪರಾಕ್ರಮ ಆರಂಭ; ಸಿಂಗಲ್ಸ್​ನಲ್ಲಿ ಲಕ್ಷ್ಯ ಸೇನ್​, ಡಬಲ್ಸ್​ನಲ್ಲಿ ಸಾತ್ವಿಕ್​- ಚಿರಾಗ್ ಜೋಡಿಗೆ ಗೆಲುವು

Paris Olympics 2024
ಪ್ರಮುಖ ಸುದ್ದಿ38 mins ago

Paris Olympics 2024 : ಭಾರತ ಹಾಕಿ ತಂಡದ ಶುಭಾರಂಭ; ನ್ಯೂಜಿಲ್ಯಾಂಡ್ ವಿರುದ್ಧ 3-2 ಗೋಲ್​ಗಳ ಗೆಲುವು

Tihar Jail
ದೇಶ48 mins ago

Tihar Jail: ತಿಹಾರ ಜೈಲಿನ 125 ಕೈದಿಗಳಿಗೆ ಎಚ್‌ಐವಿ ಪಾಸಿಟಿವ್‌; ಇವರು ‘ಬೇಲಿ’ ಹಾರಿದ್ದು ಎಲ್ಲಿ?

IND vs SL
ಪ್ರಮುಖ ಸುದ್ದಿ58 mins ago

IND vs SL : ಶ್ರೀಲಂಕಾ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತಕ್ಕೆ 43 ರನ್​ ಭರ್ಜರಿ ಜಯ

Rishabh Pant
ಪ್ರಮುಖ ಸುದ್ದಿ1 hour ago

Rishabh Pant : ಧೋನಿಯಂತೆ ಭರ್ಜರಿ ಹೆಲಿಕಾಪ್ಟರ್​ ಶಾಟ್​​ ಮೂಲಕ ಸಿಕ್ಸರ್ ಬಾರಿಸಿದ ರಿಷಭ್ ಪಂತ್​

Puneeth Kerehalli
ಕರ್ನಾಟಕ2 hours ago

Puneeth Kerehalli: ಪುನೀತ್‌ ಕೆರೆಹಳ್ಳಿಗೆ ನ್ಯಾಯಾಂಗ ಬಂಧನ; 14 ದಿನ ಪರಪ್ಪನ ಅಗ್ರಹಾರವೇ ಗತಿ!

Mumbai Girl
ದೇಶ2 hours ago

ಬಾರೆ ಸಖಿ ಎಂದು 20 ವರ್ಷದ ಯುವತಿಯನ್ನು ಕರೆದುಕೊಂಡು ಹೋದ, ಕೊಂದು ಪೊದೆಯಲ್ಲಿ ಬಿಸಾಡಿದ; ಕೃತ್ಯಕ್ಕೆ ಕಾರಣವೇನು?

ಪರಿಸರ2 hours ago

Arecanut Research Centre: ಹೊಸ ಅಡಿಕೆ ಸಂಶೋಧನಾ ಕೇಂದ್ರ ಮತ್ತೊಂದು ಮದುವೆ ಛತ್ರ ಆಗದಿರಲಿ!

ind vs sl
ಪ್ರಮುಖ ಸುದ್ದಿ3 hours ago

IND vs SL : ಅಪರೂಪದ ದೃಶ್ಯ; ಎರಡೂ ಕೈಯಲ್ಲಿ ಬೌಲಿಂಗ್ ಮಾಡಿದ ಲಂಕಾದ ಬೌಲರ್​ ಕಮಿಂಡು ಮೆಂಡಿಸ್​!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ5 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ10 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ11 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌