Crime News: ಮುತ್ತಪ್ಪ ರೈ ಮಗನಿಂದ ಕೋಟಿ ರೂ. ಬೆಲೆಯ ಕಾರಿಗೆ ಬೆಂಕಿ ಪ್ರಕರಣ: ಚಾರ್ಜ್‌ಶೀಟ್‌ ಸಲ್ಲಿಕೆ - Vistara News

ಕ್ರೈಂ

Crime News: ಮುತ್ತಪ್ಪ ರೈ ಮಗನಿಂದ ಕೋಟಿ ರೂ. ಬೆಲೆಯ ಕಾರಿಗೆ ಬೆಂಕಿ ಪ್ರಕರಣ: ಚಾರ್ಜ್‌ಶೀಟ್‌ ಸಲ್ಲಿಕೆ

ಚಾರ್ಜ್ ಶೀಟ್‌ನಲ್ಲಿ ಎ1 ಆರೋಪಿ ನಾರಾಯಣ ಸ್ವಾಮಿ ಹಾಗೂ ಎ8 ಆರೋಪಿ ರಿಕ್ಕಿ ರೈ ಹೇಳಿಕೆ ಪಡೆಯುವುದು ಇನ್ನೂ ಬಾಕಿ ಇದೆ. ರಿಕ್ಕಿ ರೈ ರಾಜಾರೋಷವಾಗಿ ಓಡಾಡುತ್ತಿದ್ದರೂ ಪೊಲೀಸರಿಗೆ ಮಾತ್ರ ಇನ್ನೂ ಸಿಕ್ಕಿಲ್ಲ.

VISTARANEWS.COM


on

rickey rai son of mutthappa rai
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಉದ್ಯಮಿ ಶ್ರೀನಿವಾಸ್ ನಾಯ್ಡು ಎಂಬವರ ಕೋಟಿ ರೂ. ಬೆಲೆಯ ಐಷಾರಾಮಿ ಕಾರಿಗೆ ಬೆಂಕಿ ಹಚ್ಚಿ ನಾಶ ಮಾಡಿದ ಪ್ರಕರಣದಲ್ಲಿ ಮಾಜಿ ಡಾನ್‌ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮತ್ತು ಆತನ ತಂಡದ ಸದಸ್ಯರ ಮೇಲೆ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ.

2021ರ ಅಕ್ಟೋಬರ್‌ನಲ್ಲಿ ಸದಾಶಿವನಗರದ ಸಪ್ತಗಿರಿ ಅಪಾರ್ಟ್ಮೆಂಟ್‌ನಲ್ಲಿ ಈ ಘಟನೆ ನಡೆದಿತ್ತು. ರಿಕ್ಕಿ ರೈ ಮತ್ತು ಶ್ರೀನಿವಾಸ್ ನಾಯ್ಡು ಒಂದು ಕಾಲದ ಆತ್ಮೀಯ ಗೆಳೆಯರಾಗಿದ್ದರು. ಮುತ್ತಪ್ಪ ರೈ ನಿಧನದ ನಂತರ ರೈ ಗ್ರೂಪ್‌ನಿಂದ ಶ್ರೀನಿವಾಸ್ ನಾಯ್ಡು ಹೊರ ಬಂದಿದ್ದರು. ನಾಯ್ಡು ಹೊರ ಬಂದಿದ್ದಕ್ಕೆ ರಿಕ್ಕಿ ರೈ ದ್ವೇಷ ಸಾಧಿಸುತ್ತಿದ್ದ. ಶ್ರೀನಿವಾಸ್ ಬಳಸುತ್ತಿದ್ದ ಟಾಪ್ ಎಂಡ್, ಬ್ಲಾಕ್ ಕಲರ್ ರೇಂಜ್ ರೋವರ್ ಕಾರ್ ರಿಕ್ಕಿ ರೈಯ ಕಣ್ಣು ಕುಕ್ಕಿತ್ತು. ಘಟನೆಗೂ ಮೂರು ತಿಂಗಳು ಮೊದಲು ಶ್ರೀನಿವಾಸ್ ನಾಯ್ಡು ಕಾರ್ ನೋಡಿ ರಿಕ್ಕಿ ವಾರ್ನ್ ಮಾಡಿದ್ದ. ʼಈ ಕಾರಲ್ಲಿ ಓಡಾಡಿಕೊಂಡು ನನ್ನ‌ ಮುಂದೆ ಎಷ್ಟು‌ ದಿನ ಮೆರೆಯುತ್ತೀಯಾ ಮೆರಿ. ಎಷ್ಟು ದಿನ ಈ ಕಾರಲ್ಲಿ ಓಡಾಡ್ತಿಯಾ ನೋಡ್ತೀನಿ. ‌ಈ ಕಾರನ್ನು ಬೂದಿ ಮಾಡ್ತೀನಿʼ ಎಂದು ವಾರ್ನಿಂಗ್ ನೀಡಿದ್ದ.

ನಂತರ ನಾರಾಯಣ ಸ್ವಾಮಿ ಎಂಬಾತನ ಮೂಲಕ ಕಾರಿಗೆ ಬೆಂಕಿ ಹಚ್ಚುವ ಪ್ಲಾನ್ ನಡೆಸಲಾಗಿತ್ತು. ಮೊದಲಿಗೆ ಶ್ರೀನಿವಾಸ್ ನಾಯ್ಡು ಸ್ನೇಹಿತ ಸುಪ್ರೀತ್‌ ಮೇಲೆ ಹಲ್ಲೆ ನಡೆಸಲಾಗಿತ್ತು. ನಂತರ ಶ್ರೀನಿವಾಸ್ ನಾಯ್ಡು ಫ್ಲ್ಯಾಟ್‌ಗೆ ನುಗ್ಗಿ ಹಲ್ಲೆಗೆ ಯತ್ನಿಸಲಾಗಿತ್ತು. ಈ ಪ್ಲಾನ್ ಮಿಸ್ ಆದಾಗ ಕಾರಿಗೆ ಬೆಂಕಿ ಹಚ್ಚಲು ಮುಂದಾಗಿದ್ದರು. ಮಧ್ಯರಾತ್ರಿ ಅಪಾರ್ಟ್‌ಮೆಂಟ್‌ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ಬುಲೆಟ್ ಮತ್ತು ಕಾರಿನಿಂದ ಪೆಟ್ರೋಲ್ ಎಳೆದಿದ್ದ ಆರೋಪಿಗಳು ಕಾರಿಗೆ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದರು.

ಸದ್ಯ ಘಟನೆ ಸಂಬಂಧ ನಾರಾಯಣ ಸ್ವಾಮಿ, ಅಭಿನಂದನ್, ಮುನಿಯಪ್ಪ, ಗಣೇಶ್, ಶಶಾಂಕ್, ನಿರ್ಮಲ್, ರೋಹಿತ್, ರಾಕೇಶ್ ಹಾಗೂ ರಿಕ್ಕಿ ರೈ ಮೇಲೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. 188 ಪುಟಗಳ ಚಾರ್ಜ್ ಶೀಟನ್ನು ಸದಾಶಿವನಗರ ಪೊಲೀಸರು ‌ಸಲ್ಲಿಕೆ ಮಾಡಿದ್ದಾರೆ. ಚಾರ್ಜ್ ಶೀಟ್‌ನಲ್ಲಿ ಎ1 ಆರೋಪಿ ನಾರಾಯಣ ಸ್ವಾಮಿ ಹಾಗೂ ಎ8 ಆರೋಪಿ ರಿಕ್ಕಿ ರೈ ಹೇಳಿಕೆ ಪಡೆಯುವುದು ಇನ್ನೂ ಬಾಕಿ ಇದೆ. ರಿಕ್ಕಿ ರೈ ರಾಜಾರೋಷವಾಗಿ ಓಡಾಡುತ್ತಿದ್ದರೂ ಪೊಲೀಸರಿಗೆ ಮಾತ್ರ ಇನ್ನೂ ಸಿಕ್ಕಿಲ್ಲ.

ಇದನ್ನೂ ಓದಿ: ದಿವಂಗತ ಡಾನ್ ಮುತ್ತಪ್ಪ ರೈ ಆಪ್ತ ಬಳಗದಲ್ಲಿ ಮತ್ತೆ ವೈರ ಸ್ಫೋಟ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Prajwal Revanna Case: ಸಂತ್ರಸ್ತ ಮಹಿಳೆ ಸಿಕ್ಕಿದ್ದು ಸಂಬಂಧಿಕರ ಮನೆಯಲ್ಲಿ! ತೋಟದ ಮನೆಯಲ್ಲಲ್ಲ; ಸಾ.ರಾ. ಮಹೇಶ್‌ ಸ್ಫೋಟಕ ಮಾಹಿತಿ

Prajwal Revanna Case: ಹುಣಸೂರಿನ ಕರಿಗೌಡ ರಸ್ತೆಯಲ್ಲಿ ಪವಿತ್ರಾ ಹರೀಶ್ ಎಂಬುವವರ ಮನೆಯಿಂದ ಕಿಡ್ನ್ಯಾಪ್ ಆಗಿದ್ದಾಳೆ ಎನ್ನಲಾದ ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ. ಪವಿತ್ರಾ ಹರೀಶ್ ಸಂತ್ರಸ್ತ ಮಹಿಳೆಯ ಸಂಬಂಧಿಯಾಗಿದ್ದಾರೆ. ಯಾರು ಕರೆದುಕೊಂಡು ಹೋದರು? ಯಾವ ಅಧಿಕಾರಿಯ ಲೊಕೇಷನ್ ಇತ್ತು? ಎಲ್ಲದಕ್ಕೂ ದಾಖಲೆಗಳನ್ನು ತೆಗೆಯಿರಿ. ಎಸ್‌ಐಟಿಗೆ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ. ಎಸ್‌ಐಟಿಯಲ್ಲಿರುವ ಕೆಲ ಅಧಿಕಾರಿಗಳು ಕಾಂಗ್ರೆಸ್ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಾ.ರಾ. ಮಹೇಶ್ ಆರೋಪಿಸಿದ್ದಾರೆ.

VISTARANEWS.COM


on

Prajwal Revanna Case Victim found at relative house Not in a farmhouse Sa Ra Mahesh Explosive Information
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಿಸಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಮೇಲೆ ಕೇಳಿ ಬಂದಿರುವ ಅಪಹರಣ ಕೇಸ್‌ಗೆ ಟ್ವಿಸ್ಟ್‌ ಸಿಕ್ಕಿದೆ. ಸಂತ್ರಸ್ತ ಮಹಿಳೆ ಸಿಕ್ಕಿದ್ದು ತೋಟದ ಮನೆಯಲ್ಲಿ ಅಲ್ಲ. ಹುಣಸೂರಿನ ಸಂಬಂಧಿಕರ ಮನೆಯಲ್ಲಿ ಎಂದು ಮಾಜಿ ಸಚಿವ ಸಾ.ರಾ. ಮಹೇಶ್ ಹೇಳಿದ್ದಾರೆ. ಈ ಮೂಲಕ ತನಿಖೆಯ ಸತ್ಯಾಂಶದ ಬಗ್ಗೆ ಸಂಶಯವನ್ನು ವ್ಯಕ್ತಪಡಿಸಿದ್ದಾರೆ.

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಹಾಗೂ ಎಚ್‌.ಡಿ. ರೇವಣ್ಣ ಕಿಡ್ನ್ಯಾಪ್‌ ಕೇಸ್‌ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಾ.ರಾ. ಮಹೇಶ್‌, ಕೇಸ್ ರಿಜಿಸ್ಟರ್ ಆಗುವುದಕ್ಕೂ ಮುಂಚೆಯೇ ನ್ಯಾಷನಲ್ ಮೀಡಿಯಾದಲ್ಲಿ ಸುದ್ದಿ ಬರುತ್ತದೆ. ಹಾಗಾದರೆ ಇದರ ರೂವಾರಿ ಯಾರು? ರಾಜಗೋಪಾಲ್ ಅವರು ತೋಟದಲ್ಲಿ ಇದ್ದ ಬಗ್ಗೆ ವಿಡಿಯೊ ಯಾಕೆ ಆಚೆ ಬಂದಿಲ್ಲ? ಎಂದು ಪ್ರಶ್ನೆ ಮಾಡಿದ್ದಾರೆ.

ಹುಣಸೂರಿನ ಕರಿಗೌಡ ರಸ್ತೆಯಲ್ಲಿ ಪವಿತ್ರಾ ಹರೀಶ್ ಎಂಬುವವರ ಮನೆಯಿಂದ ಕಿಡ್ನ್ಯಾಪ್ ಆಗಿದ್ದಾಳೆ ಎನ್ನಲಾದ ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ. ಪವಿತ್ರಾ ಹರೀಶ್ ಸಂತ್ರಸ್ತ ಮಹಿಳೆಯ ಸಂಬಂಧಿಯಾಗಿದ್ದಾರೆ. ಯಾರು ಕರೆದುಕೊಂಡು ಹೋದರು? ಯಾವ ಅಧಿಕಾರಿಯ ಲೊಕೇಷನ್ ಇತ್ತು? ಎಲ್ಲದಕ್ಕೂ ದಾಖಲೆಗಳನ್ನು ತೆಗೆಯಿರಿ. ಎಸ್‌ಐಟಿಗೆ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ. ಎಸ್‌ಐಟಿಯಲ್ಲಿರುವ ಕೆಲ ಅಧಿಕಾರಿಗಳು ಕಾಂಗ್ರೆಸ್ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಾ.ರಾ. ಮಹೇಶ್ ಆರೋಪಿಸಿದ್ದಾರೆ.

ಪೆನ್‌ಡ್ರೈವ್‌ ಸೂತ್ರಧಾರಿ ಕಾರ್ತಿಕ್‌ ಹಿಂದೆ ಯಾರಿದ್ದಾರೆ? ಎಚ್‌ಡಿಕೆ ಪ್ರಶ್ನೆ

ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದ (Hassan Pen Drive Case) ಸೂತ್ರಧಾರಿ ಕಾರ್ತಿಕ್‌ ಗೌಡ ಕಥೆ ಏನು? ಆತ ಎಲ್ಲಿದ್ದಾನೆ? ಆತನ ಹಿಂದೆ ಯಾರಿದ್ದಾರೆ? ನಿಮ್ಮ ಈ ತನಿಖೆಯ ವಿಸ್ತಾರ ಎಷ್ಟು? ಕೇವಲ ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧ ಅಷ್ಟೇ ನಿಮ್ಮ ತನಿಖೆಯೇ? ಇಲ್ಲವೇ ಆಯೋಗ ಹೇಳಿದಂತೆ ಎಲ್ಲ ರಾಜಕಾರಣಿಗಳ ವಿರುದ್ಧ ತನಿಖೆ ಮಾಡುತ್ತಿದ್ದೀರಾ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ರೇವಣ್ಣ ಅರೆಸ್ಟ್ ಆದಾಗ ನನಗೆ ಗೊತ್ತೇ ಇಲ್ಲ ಅಂತ ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಏನು ಹೇಳಿದ್ದಾರೆ? ಈ ಪ್ರಕರಣದ ಹಿಂದೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಇದ್ದಾರೆ ಎಂಬುದಾಗಿ ಹೇಳಿದ್ದಾರೆ. ಈಗ ನನ್ನ ಪ್ರಶ್ನೆ ಎಂದರೆ ಈ ಪೆನ್‌ಡ್ರೈವ್‌ ರೂವಾರಿ ಕಾರ್ತಿಕ್‌ನನ್ನು ಏಕೆ ಬಿಟ್ಟಿದ್ದೀರಿ? ಎಸ್ಐಟಿ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಎಂದು ಪ್ರಶ್ನೆ ಮಾಡಿದರು.

ಈ ವೇಳೆ ಪ್ರಜ್ವಲ್‌ ಪೆನ್‌ಡ್ರೈವ್‌ ವಿಷಯವಾಗಿ ಹಾಸನದ ನವೀನ್ ಗೌಡ ಮಾತನಾಡಿದ್ದಾರೆನ್ನಲಾದ ಆಡಿಯೊವನ್ನು ಎಚ್‌.ಡಿ. ಕುಮಾರಸ್ವಾಮಿ ಪ್ಲೇ ಮಾಡಿದರು. ಅಲ್ಲದೆ, ನವೀನ್ ಗೌಡ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಜತೆ ಇರುವ ಹಾಗೂ ಸಚಿವ ಜಮೀರ್ ಅಹಮದ್ ಜತೆ ಇರುವ ಫೋಟೊವನ್ನು ಬಿಡುಗಡೆ ಮಾಡಿದರು. ನವೀನ್‌ ಗೌಡನ ಮೇಲೆ ಯಾವ ಕ್ರಮವನ್ನು ತೆಗೆದುಕೊಂಡಿದ್ದೀರಿ? ಎಂದು ಪ್ರಶ್ನೆ ಮಾಡಿದರು.

ಪೆನ್‌ಡ್ರೈವ್‌ ಸಂಚಿನ ಹಿಂದಿರುವ ಡಿ.ಕೆ. ಶಿವಕುಮಾರ್‌ ವಜಾಗೆ ಕುಮಾರಸ್ವಾಮಿ ಆಗ್ರಹ

ಈ ಪೆನ್‌ಡ್ರೈವ್‌ ಹಂಚಿಕೆ ಸಂಚಿನ ಹಿಂದೆ ಇರುವ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಸಂಪುಟದಿಂದ ಕೂಡಲೇ ವಜಾ ಮಾಡಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಬಗ್ಗೆ ದಿಢೀರ್‌ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಈ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಒಳಸಂಚಿದೆ. ಕ್ಯಾಬಿನೆಟ್‌ನಿಂದ ಮೊದಲು ಅವರನ್ನು ಕಿತ್ತುಹಾಕಿ. ಈ ಪ್ರಕರಣವನ್ನು ಅಷ್ಟು ಸುಲಭವಾಗಿ ನಾನು ಬಿಡಲ್ಲ. ಈ ಸಿಎಂ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ಮೊದಲು ಡಿಕೆಶಿಯನ್ನು ಕೈಬಿಡಲಿ ಎಂದು ಆಗ್ರಹಿಸಿದರು.

ಎಸ್ಐಟಿ ಅಧಿಕಾರಿಗಳು ಸಿಎಂ, ಡಿಸಿಎಂಗೆ ಏಜೆಂಟ್‌

ಎಸ್ಐಟಿ ಅಧಿಕಾರಿಗಳು ಸಿಎಂ, ಡಿಸಿಎಂಗೆ ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ. ದೇವರಾಜೇಗೌಡನನ್ನು ಯಾಕೆ ಕರೆಸಿಕೊಂಡರು? ಯಾಕೆ ಅವರ ಹೇಳಿಕೆಯಲ್ಲಿನ ಒಂದು ಪ್ಯಾರಾವನ್ನು ಡಿಲಿಟ್ ಮಾಡಿ ಎಂದು ಹೇಳಿದರು? ಡಿಕೆಶಿ ಇತಿಹಾಸ ಎಲ್ಲರಿಗೂ ಗೊತ್ತು. ಮೊದಲು ಈ ಒಳಸಂಚು ಮಾಡಿದ್ದರಿಂದ ಅವರ ಮೇಲೆ ಕ್ರಮವಾಗಲಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದರು.

ಸಿಎಂ, ಡಿಕೆಶಿ ಇನ್ವೆಸ್ಟಿಗೇಷನ್‌ ಟೀಮ್

ಪ್ರಜ್ವಲ್‌ ಮೇಲಿನ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ದೂರು ಸಿದ್ಧಪಡಿಸಿ ಹೊಳೆನರಸೀಪುರಕ್ಕೆ ಕಳಿಸಿದ್ದರು. ಬಳಿಕ ಎಸ್ಐಟಿ ತನಿಖೆಗೆ ಆದೇಶಿಸಿ ದೂರು ದಾಖಲು ಮಾಡಿಕೊಂಡಿದ್ದಾರೆ. ಇದನ್ನು ಒಪ್ಪೋಣ. ಆದರೆ ನಿಷ್ಪಕ್ಷಪಾತ ತನಿಖೆ ಆಗುತ್ತದೆ ಎಂದು ನಾನು ಭಾವಿಸಿದೆ. ಇಲ್ಲಾಗಿದ್ದೇನು? ಸಿಎಂ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್‌ ಟೀಂ, ಡಿ.ಕೆ. ಶಿವಕುಮಾರ್ ಇನ್ವೆಸ್ಟಿಗೇಷನ್‌ ಟೀಮ್ ಎಂದು ಮಾಡಿಕೊಂಡಿದ್ದಾರೆ. ಈ ಕೇಸ್‌ಗೆ ಸಂಬಂಧಪಟ್ಟಂತೆ ನಡೆದ ಕಾಲ್ ರೆಕಾರ್ಡಿಂಗ್ ಹೊರಗೆ ಬರಬೇಕು. ಯಾರು ಯಾರು? ಯಾರ ಜತೆ ಮಾತನಾಡಿದ್ದಾರೆ ಎಂಬುದೆಲ್ಲವೂ ಹೊರಬರಬೇಕು ಎಂದು ಆಗ್ರಹಿಸಿದರು.

ಕೆಲವರ ತೇಜೋವಧೆಗೆ ಈ ಪ್ರಕರಣವನ್ನು ಬಳಸಿಕೊಂಡಿರಿ

ನಾನು ಪ್ರಜ್ವಲ್ ರೇವಣ್ಣ ಅವರನ್ನು ವಹಿಸಿಕೊಂಡು ಮಾತನಾಡುವುದಿಲ್ಲ. ಎಫ್ಐಆರ್ ದಾಖಲು ಮಾಡಿದಾಗ ಜಾಮೀನು ಸಹಿತ ಪ್ರಕರಣವನ್ನು ದಾಖಲು ಮಾಡಿದೆವು. ಎರಡನೇ ದಿನ ಮತ್ತೆ ಇನ್ನೊಂದು ಪ್ರಕರಣವನ್ನು ದಾಖಲು ಮಾಡಿದೆವು. ಗನ್ ಪಾಯಿಂಟ್‌ ಅಡಿ ಬೆದರಿಕೆಯೊಡ್ಡಿ ಅತ್ಯಾಚಾರ ಆಗಿದೆ ಅಂತ ದೂರು ಕೊಟ್ಟರು. ಮಾಧ್ಯಮಗಳ ಮುಂದೆ ಕಥೆ ಕಟ್ಟಿದವರು ಯಾರು? ಸುಪ್ರೀಂ ಕೋರ್ಟ್ ಏನು ಹೇಳಿದೆ? ಇಂಥ ಪ್ರಕರಣದಲ್ಲಿ ಗೌಪ್ಯತೆಯನ್ನು ಉಳಿಸಿಕೊಂಡಿರಾ? ಕೆಲವರ ತೇಜೋವಧೆಗೆ ಈ ಪ್ರಕರಣವನ್ನು ಬಳಸಿಕೊಂಡಿರಿ. ಇದು ಆಘಾತಕಾರಿ ಪ್ರಕರಣವಾಗಿದೆ. 2022ರಲ್ಲಿ ಈ ಘಟನೆ ಆಗಿದೆ ಎಂದು ಹೇಳಿದ್ದೀರಿ. ಮತ್ಯಾಕೆ ಸುಮ್ಮನಿದ್ದಿರಿ? ಎಂದು ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದರು.

ಆಕೆಯ ಹಿಂದೆ ಯಾರಿದ್ದಾರೆ?

22ನೇ ತಾರೀಖು ಪ್ರಜ್ವಲ್ ಪಕ್ಕಾ ಕೂತಿದ್ದ ಹೆಣ್ಣು ಮಗಳು ಯಾರು? ಮೊದಲ ವಿಡಿಯೊದಲ್ಲಿ ಬಂದ ಹೆಣ್ಣು ಮಗಳು 22ನೇ ತಾರೀಖು ಪ್ರಜ್ವಲ್ ಜತೆ ವೇದಿಕೆ ಹಂಚಿಕೆ ಮಾಡಿಕೊಂಡಿದ್ದಾರೆ. ಆಕೆಯ ಹಿಂದೆ ಯಾರಿದ್ದಾರೆ? ಸಿಎಂ ಸಿದ್ದರಾಮಯ್ಯ ಅವರೇ, ಡಿ.ಕೆ. ಶಿವಕುಮಾರ್ ಅವರೇ ಏನಿದು? ಎಂದು ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಮಹಿಳೆಯ ಕಿಡ್ನ್ಯಾಪ್‌ ಕೇಸ್‌ ಕತೆ ಏನು?

ರೇವಣ್ಣ ವಿರುದ್ಧ ಇಂದಿಗೂ ಸಹ ಯಾರೂ ದೂರು ಕೊಟ್ಟಿಲ್ಲ. ಬಳಿಕ ಕಿಡ್ನ್ಯಾಪ್ ಕೇಸ್ ದಾಖಲು ಮಾಡಿಕೊಂಡಿರಿ. ಆ ಹೆಣ್ಣು ಮಗಳು ಬದುಕಿದ್ದಾಳೋ, ಮೃತಪಟ್ಟಿದ್ದಾಳೋ ಗೊತ್ತಿಲ್ಲ ಎಂದು ನಿಮ್ಮ ವಕೀಲರು ನ್ಯಾಯಾಧೀಶರ ಮುಂದೆ ಹೇಳುತ್ತಾರೆ. ಆ ಮೇಲೆ ಆಕೆಯನ್ನು ಕರೆದುಕೊಂಡು ಬಂದಿರಿ. ಎಲ್ಲಿಂದ ಕರೆದುಕೊಂಡು ಬಂದಿರಿ? ಏನು ಮಹಜರು ಮಾಡಿದಿರಿ? ಈ ದಿನದವರೆಗೂ ಜಡ್ಜ್ ಮುಂದೆ ಆ ಹೆಣ್ಣು ಮಗಳನ್ನು ಏಕೆ ಹಾಜರುಪಡಿಸಲಿಲ್ಲ? ಎಂದು ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಇದನ್ನೂ ಓದಿ: Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

ಎಚ್.ಡಿ. ರೇವಣ್ಣ ಅವರು ತನಿಖೆಗೆ ಸಹಕಾರ ಕೊಡುತ್ತಿಲ್ಲ ಎಂದು ಹೇಳಿದ್ದೀರಿ. ನೀವು ಹೇಳಿದಂತೆ ಮಾಜಿ‌ ಮಂತ್ರಿ ಹೇಳಿಕೆ ಕೊಡಬೇಕಾ? ಇದು ಯಾವ ಇನ್ವೆಸ್ಟಿಗೇಷನ್ ಎಂದು ಎಚ್‌.ಡಿ. ಕುಮಾರಸ್ವಾಮಿ ಖಾರವಾಗಿ ಪ್ರಶ್ನೆ ಮಾಡಿದ್ದಾರೆ.

Continue Reading

ರಾಜಕೀಯ

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case: 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಅಂತಾ ನಿಮ್ಮ ನಾಯಕ ರಾಹುಲ್‌ ಗಾಂಧಿ ಹೇಳಿಕೆ ನೀಡುತ್ತಾರೆ. ಇಷ್ಟೆಲ್ಲ ಹೇಳಿಕೆ ನೀಡಿರುವ ರಾಹುಲ್‌ ಗಾಂಧಿಗೆ ಎಸ್‌ಐಟಿಯಿಂದ ನೋಟಿಸ್‌ ಕೊಡಲಾಯಿತೇ? 400 ಮಹಿಳೆಯರ ಮೇಲೆ ಪ್ರಜ್ವಲ್ ಅತ್ಯಾಚಾರ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಸ್ಪೆಸಿಫಿಕ್ ಆಗಿ ಚಾರ್ಜ್‌ ಮಾಡುತ್ತಿರುವ ರಾಹುಲ್‌ ಗಾಂಧಿಯನ್ನು ಎಸ್‌ಐಟಿಯವರು ಕರೆಯಬೇಕಲ್ವಾ? ಈಗ ಪೋಕ್ಸೋ ಕೇಸ್ ಹಾಕಲು 16 ವರ್ಷದ ಸಂತ್ರಸ್ತೆಯನ್ನು ಎಸ್‌ಐಟಿಯವರು ಹುಡುಕುತ್ತಿದ್ದಾರೆ ಎಂದು ಎಚ್‌ಡಿಕೆ ಕಿಡಿಕಾರಿದ್ದಾರೆ.

VISTARANEWS.COM


on

Prajwal Revanna Case Government work against Revanna HD Kumaraswamy gives details of the case
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ (Hassan Pen Drive Case) ಅನ್ನು ನಾನು ವೀಕ್ಷಣೆ ಮಾಡಿಲ್ಲ. ಆ ಪೆನ್‌ಡ್ರೈವ್‌ಗಳಲ್ಲಿರುವ ಅಶ್ಲೀಲ ವಿಡಿಯೊಗಳನ್ನು ನಾನು ನೋಡಿಲ್ಲ. ಈ ವಿಷಯ ಗೊತ್ತಿದ್ದರೆ ನಾನು ಪ್ರಜ್ವಲ್‌ಗೆ ಎಂಪಿ ಟಿಕೆಟ್‌ ಕೊಡುತ್ತಿರಲಿಲ್ಲ. ಇದು ದೇವೇಗೌಡರ ಕುಟುಂಬ ಸರ್ವನಾಶ ಮಾಡಬೇಕೆಂದು ವ್ಯವಸ್ಥಿತ ಸಂಚಾಗಿದೆ. ಈ ಇಡೀ ಪ್ರಕರಣದಲ್ಲಿ ಸರ್ಕಾರ ವ್ಯವಸ್ಥಿತವಾಗಿ ಸಂಚು ರೂಪಿಸಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ, ಪೆನ್‌ಡ್ರೈವ್‌ ವಿಷಯ ನನ್ನ ಮುಂದೆ ಬಂದಿದ್ದರೆ ನಾನು ಟಿಕೆಟ್‌ ಕೊಡುತ್ತಿರಲಿಲ್ಲ. ಪ್ರಜ್ವಲ್‌ ರೇವಣ್ಣನಿಗೆ ಟಿಕೆಟ್‌ ಕೊಡುವ ಪ್ರಶ್ನೆಯೇ ಉದ್ಭವ ಆಗುತ್ತಿರಲಿಲ್ಲ. ಆಗ ನಾನು ಟಿಕೆಟ್‌ ನಿರಾಕರಣೆ ಮಾಡಿದ್ದು, ಸ್ಥಳೀಯ ಕಾರ್ಯಕರ್ತರಿಗೆ ಪ್ರಜ್ವಲ್‌ ಸ್ಪಂದಿಸುತ್ತಿರಲಿಲ್ಲ ಎಂಬ ದೂರು ಬಂದಿತ್ತು. ಹಾಗಾಗಿ ಅಭ್ಯರ್ಥಿಯನ್ನು ಬದಲಾವಣೆ ಮಾಡಿ ಎಂದು ಹೇಳಿದ್ದೆ ಎಂಬುದಾಗಿ ಸ್ಪಷ್ಟನೆ ನೀಡಿದರು.

ಪೆನ್‌ಡ್ರೈವ್‌ಗಳು ಮಾರ್ಫಿಂಗ್ ಮಾಡಿರೋದಾ? ನಕಲಿಯೋ ನನಗೆ ಗೊತ್ತಿಲ್ಲ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬವನ್ನು ಸರ್ವನಾಶ ಮಾಡಬೇಕೆಂಬ ವ್ಯವಸ್ಥಿತ ಸಂಚು ಇಲ್ಲಿ ನಡೆದಿದೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಎಚ್.ಡಿ.ಕುಮಾರಸ್ವಾಮಿ ಗುಡುಗಿದರು.

ನರೇಂದ್ರ ಮೋದಿ ಆಡಳಿತ ತೆಗೆದು ದೆಹಲಿ ಗದ್ದುಗೆ ಹಿಡಿಯಲು ಷಡ್ಯಂತ್ರ ಮಾಡಲಾಗುತ್ತಿದೆ. ಇದು ಕಾಂಗ್ರೆಸ್ ಪಕ್ಷದ ಸಂಚಾಗಿದೆ. ಎಸ್‌ಐಟಿಯು ಕಾಂಗ್ರೆಸ್‌ ಪರವಾಗಿ ಕೆಲಸ ಮಾಡುತ್ತಿದೆ. ಈಗಲೂ ಹೇಳುತ್ತೇನೆ, ಇಲ್ಲಿ ಯಾರೇ ತಪ್ಪು ಮಾಡಿದರೂ ಶಿಕ್ಷೆ ಆಗಲೇಬೇಕು. ಇದೇ ನಮ್ಮ ಪಕ್ಷದ ನಿರ್ಧಾರವಾಗಿದೆ. ವಕೀಲ ದೇವರಾಜೇಗೌಡ ಏನೆಲ್ಲ ಹೇಳಿದರು. ಏನು ನಡೆಯುತ್ತಾ ಇದೆ ಇಲ್ಲಿ. ಆ ಬಗ್ಗೆ ತನಿಖೆ ಆಗಬೇಕು ಎಂದು ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.

ಎಸ್‌ಐಟಿಗೆ ಎಚ್‌ಡಿಕೆ ವಾರ್ನಿಂಗ್‌

ಎಸ್‌ಐಟಿ ತನಿಖೆ ಹಾಗೂ ಕಾರ್ಯವೈಖರಿ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ವಾರ್ನಿಂಗ್ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಕಾಂಗ್ರೆಸ್ ನಡೆಗೆ ಎಚ್‌ಡಿಕೆ ಗರಂ ಆಗಿದ್ದಾರೆ. ಕಾಲ ಚಕ್ರ ಉರುಳುತ್ತದೆ, ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ವಾರ್ನ್‌ ಮಾಡಿದ್ದಾರೆ.

ಡಿಕೆಶಿಯನ್ನು ವಜಾ ಮಾಡಿ

ಮಹಾನುಭಾವ ಡಿ.ಕೆ.ಶಿವಕುಮಾರ್ ಹಿಸ್ಟರಿ ತೆಗೆದರೆ ಈ ರೀತಿ ಕೇಸಲ್ಲಿ ಎಕ್ಸ್‌ಪರ್ಟ್ ಎಂಬುದು ಗೊತ್ತಾಗುತ್ತದೆ. ಇಂತಹವರನ್ನು ಇಟ್ಕೊಂಡು ಎಸ್‌ಐಟಿ ಮೂಲಕ ಯಾವ ಪಾರದರ್ಶಕ ತನಿಖೆ ಆಗುತ್ತದೆ? ಈ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಿ, ಸಂತ್ರಸ್ತೆಯರಿಗೂ ನ್ಯಾಯ ಕೊಡಬೇಕು, ಸತ್ಯ ಗೊತ್ತಾಗಬೇಕು. ಈ ಕೇಸ್‌ನಲ್ಲಿ ಡಿ.ಕೆ. ಶಿವಕುಮಾರ್‌ ಸಂಚು ಕಾಣುತ್ತಿದೆ. ಮೊದಲು ಅವರನ್ನು ಕ್ಯಾಬಿನೆಟ್‌ನಿಂದ ಸಸ್ಪೆಂಡ್ ಮಾಡಬೇಕು. ಈ ಪ್ರಕರಣದಲ್ಲಿ ಡಿಕೆಶಿ ಸಂಚು ಏನಿದೆ? ಆ ಬಗ್ಗೆ ತನಿಖೆ ಆಗಲೇಬೇಕು. ಸಿಎಂ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ಡಿಕೆಶಿಯನ್ನು ಸಂಪುಟದಿಂದ ವಜಾ ಮಾಡಲಿ ಎಂದು ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರು. ಅಲ್ಲದೆ, ಡಿಸಿಎಂ ಡಿಕೆಶಿ ಮುಖ ನೋಡಿದರೆ ಬಾಲ ಸುಟ್ಟ ಬೆಕ್ಕಿನಂತೆಯೇ ಆಗಿದೆ. ದೇವರಾಜೇಗೌಡ ಸ್ಫೋಟಕ ಸುದ್ದಿಗೋಷ್ಠಿ ನಂತರ ಅವರ ಮುಖ ನೋಡಿ ಎಂದು ವ್ಯಂಗ್ಯವಾಡಿದರು.

ಹೈಕೋರ್ಟ್ ಸಿಟ್ಟಿಂಗ್ ಜಡ್ಜ್ ತನಿಖೆಯಾಗಲಿ ಎಂದು ಬಿಜೆಪಿ ಮುಖಂಡ ವಿವೇಕ್ ರೆಡ್ಡಿ ಆಗ್ರಹಿಸಿದ್ದಾರೆ. ನ್ಯಾಯಯುತ ತನಿಖೆ ನಡೆಯಬೇಕಾದರೆ ನ್ಯಾಯಾಂಗ ತನಿಖೆಗೆ ಈ ಪ್ರಕರಣವನ್ನು ವಹಿಸಿ ಎಂದು ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.

ಬೆಳಗಾವಿ ಸಾಹುಕಾರ್ ರಮೇಶ್‌ ಜಾರಕಿಹೊಳಿ ಪ್ರಕರಣ ಏನಾಯಿತು ಈಗ ಎಂಬುದು ಗೊತ್ತಾ? ಮೂವತ್ತು, ನಲವತ್ತು ಕೋಟಿ ರೂಪಾಯಿ ಖರ್ಚು ಮಾಡಿ ಜಾರಕಿಹೊಳಿ ಅವರ ಹೆಸರನ್ನು ಹಾಳು ಮಾಡಿದರು. ಆ ಆಡಿಯೊ ಈಗಲೂ ಓಡಾಡುತ್ತಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಅಂತಾ ನಿಮ್ಮ ನಾಯಕ ರಾಹುಲ್‌ ಗಾಂಧಿ ಹೇಳಿಕೆ ನೀಡುತ್ತಾರೆ. ಇಷ್ಟೆಲ್ಲ ಹೇಳಿಕೆ ನೀಡಿರುವ ರಾಹುಲ್‌ ಗಾಂಧಿಗೆ ಎಸ್‌ಐಟಿಯಿಂದ ನೋಟಿಸ್‌ ಕೊಡಲಾಯಿತೇ? 400 ಮಹಿಳೆಯರ ಮೇಲೆ ಪ್ರಜ್ವಲ್ ಅತ್ಯಾಚಾರ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಸ್ಪೆಸಿಫಿಕ್ ಆಗಿ ಚಾರ್ಜ್‌ ಮಾಡುತ್ತಿರುವ ರಾಹುಲ್‌ ಗಾಂಧಿಯನ್ನು ಎಸ್‌ಐಟಿಯವರು ಕರೆಯಬೇಕಲ್ವಾ? ಈಗ ಪೋಕ್ಸೋ ಕೇಸ್ ಹಾಕಲು 16 ವರ್ಷದ ಸಂತ್ರಸ್ತೆಯನ್ನು ಎಸ್‌ಐಟಿಯವರು ಹುಡುಕುತ್ತಿದ್ದಾರೆ. 2900 ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆಗಿದೆ ಎಂಬುದಾಗಿ ಸಿಂಗಾಪುರದಲ್ಲೂ ಸುದ್ದಿ ಅಂತೆ ಎಂದು ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಹಾಸನ ಡಿಸಿ ವಿರುದ್ಧ ಎಚ್‌ಡಿಕೆ ಗರಂ

ಇದೇ ವೇಳೆ ಶಿಶುಪಾಲ ಹಾಗೂ ಪಾಪದ ಕಥೆ ಹೇಳಿದ್ದ ಹಾಸನ ಡಿಸಿ ಎಚ್.ಡಿ. ಕುಮಾರಸ್ವಾಮಿ ಗರಂ ಆಗಿದ್ದಾರೆ. ಕೋಲಾರದಲ್ಲಿದ್ದಾಗ ಗಂಡ, ಹೆಂಡತಿ ಏನ್ ಮಾಡಿದ್ದೀರಾ ಅಂತಾ ಗೊತ್ತಿದೆ. ಯಾವುದೋ ಸಮಿತಿಯವರ ಮನವಿ ಪಡೆದು ವ್ಯಂಗ್ಯ ಮಾಡ್ತೀರಾ ಡಿಸಿ ಅವರೇ? ನಿಮ್ಮ ಯೋಗ್ಯತೆ ನನಗೆ ಚೆನ್ನಾಗಿ ಗೊತ್ತು ಕಿಡಿಕಾರಿದರು.

15 ದಿನಗಳಿಂದ ತಲೆಮರೆಸಿಕೊಂಡಿದ್ದಾನಲ್ಲ ಆ ಕಾರ್ತಿಕ್‌ಗೆ ಯಾವ ನೋಟಿಸ್ ಕೊಟ್ಟಿರಿ? ಬ್ಲೂ ಕಾರ್ನರ್ ನೋಟಿಸ್ ಕೊಟ್ಟಿದ್ದೀರಾ? ಲುಕ್‌ ಔಟ್‌ ನೋಟಿಸ್‌ ಕೊಟ್ಟಿರಾ? ಏನು ನಡೆಯುತ್ತಿದೆ ಇಲ್ಲಿ ಎಂದು ಕಿಡಿಕಾರಿದರು.

ಎಚ್.ಡಿ.ರೇವಣ್ಣ ಎಲ್ಲಿಗೂ ಓಡಿ ಹೋಗಿರಲಿಲ್ಲ. ದೇವರಿಗೆ ಕೈಮುಗಿದುಕೊಂಡು ಓಡಾಡಿಕೊಂಡಿದ್ದ. ಅಯ್ಯೋ ದೇವರೇ ಕಾಪಾಡಪ್ಪ ಅಂತಿದ್ದ. ಆದರೆ, ಬೇಕೆಂದೇ ಅವರನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಕಂಪ್ಲೇಂಟ್ ತೆಗೆದುಕೊಳ್ಳಲು ಸಂತ್ರಸ್ತೆಯರನ್ನು ಹುಡುಕುತ್ತಿದ್ದೇವೆ ಎಂದು ಎಸ್‌ಐಟಿ ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಯಾರಿಗೆಲ್ಲ ಹೇಗೆ ಹೆದರಿಸಿ ಕಂಪ್ಲೇಂಟ್ ತೆಗೆದುಕೊಳ್ಳುವುದಕ್ಕೆ ಪ್ರಯತ್ನ ಮಾಡಲಾಗುತ್ತಿದೆ ಎಂಬ ವಿಷಯ ನಮಗೆ ಗೊತ್ತಾಗಿದೆ ಎಂದು ಎಚ್‌.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರೇವಣ್ಣ ಪಾತ್ರ ಎಷ್ಟಿದೆ?

ಯಾರೂ ನೇರವಾಗಿ ಎಚ್.ಡಿ.ರೇವಣ್ಣ ಮೇಲೆ ಕಂಪ್ಲೇಂಟ್‌ ಕೊಟ್ಟಿಲ್ಲ. ಕಿಡ್ನ್ಯಾಪ್ ಪ್ರಕರಣದಲ್ಲಿ ಎಚ್.ಡಿ.ರೇವಣ್ಣ ಪಾತ್ರ ಎಷ್ಟಿದೆ ಗೊತ್ತಿದೆಯಾ? ಬೇಲ್ ವಿಚಾರಣೆ ವೇಳೆ ಆ ಹೆಣ್ಣು ಮಗಳ ಕುರಿತು ಎಸ್‌ಪಿಪಿಯ ಮಾತು ಏನು? ಕಿಡ್ನ್ಯಾಪ್ ಆಗಿದ್ದ ಹೆಣ್ಣು ಮಗಳು ಬದುಕಿದ್ದಾಳೆ, ಸತ್ತಿದ್ದಾಳಾ ಅಂದಿದ್ದರು. ಕೊನೆಗೆ ಮೈಸೂರಿನ ಕಾಳೇನಹಳ್ಳಿ ತೋಟದ ಮನೆಯಿಂದ ಕರೆತಂದಿದ್ದರು. ಆ ತೋಟದ ಮನೆಗೆ ಹೋಗಿ ಕರೆತಂದದ್ರಲ್ಲ, ಮಹಜರು ಮಾಡಿದ್ರಾ? ಒಂದೂವರೆ ದಿವಸ ಆದರೂ ಆ ಹೆಣ್ಣು ಮಗಳು ಹೇಳಿಕೆ ಕೊಟ್ಟಿಲ್ಲವಾ? 2 ದಿನವಾದರೂ ಆ ಹೆಣ್ಣು ಮಗಳನ್ನು ಜಡ್ಜ್ ಮುಂದೆ ಹಾಜರು ಪಡಿಸಿಲ್ಲ ಏಕೆ? ಒಬ್ಬ ಜವಾಬ್ದಾರಿಯುತ ಮಂತ್ರಿಯಾಗಿ ಕೆಲಸ ಮಾಡಿದವರು ರೇವಣ್ಣ. ನೀವು ಬರೆಸಿಕೊಂಡ ಹೇಳಿಕೆಗೆ ಎಚ್.ಡಿ.ರೇವಣ್ಣ ಸೈನ್‌ ಮಾಡಬೇಕಾ? ಇದೇನು ಡಿಸಿಎಂ ಡಿ.ಕೆ. ಶಿವಕುಮಾರ್ ಇನ್ವೆಸ್ಟಿಗೇಷನ್‌ ಟೀಂ? ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಮಹಿಳಾ ಆಯೋಗ ಬರೆದಿದ್ದ ಪತ್ರದಲ್ಲಿ ಎಲ್ಲಿಯೂ ಪ್ರಜ್ವಲ್ ರೇವಣ್ಣ ಅವರ ಹೆಸರು ಇಲ್ಲ. ಪ್ರಜ್ವಲ್ ಆಗಲಿ, ರೇವಣ್ಣ ಹೆಸರಾಗಲಿ ಆಯೋಗದ ಪತ್ರದಲ್ಲಿ ಇರಲಿಲ್ಲ. ಆದರೆ, ಸಿಎಂ ತಮ್ಮ ಪತ್ರದಲ್ಲಿ ಪ್ರಜ್ವಲ್ ಹೆಸರನ್ನು ಉಲ್ಲೇಖಿಸುತ್ತಾರೆ. ಏಪ್ರಿಲ್ 28ಕ್ಕೆ ಪೆನ್‌ಡ್ರೈವ್ ಪ್ರಕರಣ ತನಿಖೆಗೆ SIT ರಚನೆ ಮಾಡಿದ್ದರು. ಏಪ್ರಿಲ್ 28ರಂದು ಬೆಂಗಳೂರಿನಲ್ಲಿ ಸಂತ್ರಸ್ತೆಯಿಂದ ಕಂಪ್ಲೇಂಟ್ ಬರೆಸಿದ್ದರು. ಗಣಕಯಂತ್ರದಲ್ಲಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ದೂರು ಬರೆಸಿದರು. ಹೊಳೆನರಸೀಪುರದ ಪೊಲೀಸ್‌ ಠಾಣೆಗೆ ಬೆಂಗಳೂರಿನಿಂದ ಕಂಪ್ಲೇಂಟ್ ಬರೆಸಿ ನೀಡಿದರು. ರಾಜ್ಯದ ಗೌರವವನ್ನು ಉಳಿಸಲು SIT ಮಾಡಿದ್ರು ಅಂತ ಖುಷಿ ಇತ್ತು. ಆದರೆ, ಕೊನೆಗೆ ಮಾಡಿದ್ದೇನು? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್‌ ಸೂತ್ರಧಾರಿ ಕಾರ್ತಿಕ್‌ ಹಿಂದೆ ಯಾರಿದ್ದಾರೆ? ಎಲ್ಲಿದ್ದಾನೆ? ಅವನನ್ನೇಕೆ ಹಿಡಿಯಲಿಲ್ಲ? ಎಚ್‌ಡಿಕೆ ಪ್ರಶ್ನೆ

ಪತ್ರದಲ್ಲಿ ಪ್ರಜ್ವಲ್‌, ರೇವಣ್ಣ ಹೆಸರೇ ಇಲ್ಲ

ಏಪ್ರಿಲ್ 25ರಂದು ಮಹಿಳಾ ಆಯೋಗದ ಅಧ್ಯಕ್ಷರಿಂದಲೇ ಸಿಎಂಗೆ ಪತ್ರ ಬರೆಯಲಾಗಿದೆ. ಪೆನ್‌ಡ್ರೈವ್ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ಮನವಿ ಮಾಡಲಾಗಿತ್ತು. ಪ್ರಭಾವಿ ರಾಜಕಾರಣಿಗಳಿಂದ ಲೈಂಗಿಕ ದೌರ್ಜನ್ಯ ಅಂತಾ ಬರೆದಿದ್ದರು. ಮಹಿಳಾ ಆಯೋಗದ ಪತ್ರದಲ್ಲಿ ರಾಜಕಾರಣಿ ಯಾರೆಂದು ಹೇಳಿರಲಿಲ್ಲ. ಒಬ್ಬ ಅಲ್ಲ ಎಷ್ಟೋ ರಾಜಕಾರಣಿಗಳು ಎನ್ನುವ ಅರ್ಥದಲ್ಲಿತ್ತು ಆ ಪತ್ರ. ಆ ಬಳಿಕ ಏಪ್ರಿಲ್ 27ರಂದು ಮುಖ್ಯಮಂತ್ರಿಗಳಿಂದ ತನಿಖಾ ತಂಡ ರಚನೆ ಆಗುತ್ತದೆ. ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿ ತನಿಖಾ ತಂಡ ರಚಿಸುತ್ತೇನೆ ಎಂಬುದಾಗಿ ಹೇಳಿದ್ದನ್ನು ಎಚ್.ಡಿ. ಕುಮಾರಸ್ವಾಮಿ ಪ್ರಸ್ತಾಪಿಸಿದರು.

Continue Reading

ಕರ್ನಾಟಕ

Road Accident: ಮಂಜೇಶ್ವರದಲ್ಲಿ ಆಂಬ್ಯುಲೆನ್ಸ್-ಕಾರಿನ ನಡುವೆ ಭೀಕರ ಅಪಘಾತ; ಮೂವರ ದುರ್ಮರಣ

Road Accident: ಕೇರಳದ ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಭೀಕರ ಅಪಘಾತ ನಡೆದಿದೆ. ತ್ರಿಶ್ಯೂರು ಗುರುವಾಯೂರು ಮೂಲದ ಮೂವರು ಯುವಕರು ಮೃತಪಟ್ಟಿದ್ದಾರೆ.

VISTARANEWS.COM


on

Car Accident
Koo

ಮಂಗಳೂರು: ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ (Road Accident) ಸಂಭವಿಸಿ ಮೂವರು ದುರ್ಮರಣ ಹೊಂದಿರುವ ಘಟನೆ ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಮಂಗಳವಾರ ನಡೆದಿದೆ.

ಕೇರಳದ ತ್ರಿಶ್ಯೂರು ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನೊನ್ ಸೇರಿ ಮೂವರು ಮೃತರು. ಕಾಸರಗೋಡಿನಿಂದ ಮಂಗಳೂರು ಕಡೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಹಾಗೂ ಮಂಗಳೂರು ಕಡೆಯಿಂದ ಮಂಜೇಶ್ವರದತ್ತ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಒಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ಆಂಬ್ಯುಲೆನ್ಸ್‌ನಲ್ಲಿದ್ದ ರೋಗಿಗೂ ಗಾಯಗಳಾಗಿರುವುದು ಕಂಡುಬಂದಿದೆ.

ಅಪಘಾತದಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಡಿಕ್ಕಿ ಹೊಡೆದ ನಂತರ ಆಂಬ್ಯುಲೆನ್ಸ್ ರಸ್ತೆಯಲ್ಲಿ ಮಗುಚಿ ಬಿದ್ದಿದೆ.

ಇದನ್ನೂ ಓದಿ | Theft Case : ತಂದೆ ಬೈದಿದ್ದಕ್ಕೆ ಮನೆ ಬಿಟ್ಟು ಆಟೋ ಹತ್ತಿದ ಯುವಕ; 100 ಗ್ರಾಂ ಚಿನ್ನ ಕಸಿದು ಚಾಲಕ ಎಸ್ಕೇಪ್

ಕಲ್ಲು ಸಾಗಿಸುತ್ತಿದ್ದ ಕ್ಯಾಂಟರ್‌ ಪಲ್ಟಿಯಾಗಿ ಮೂವರ ಸಾವು

chikkaballapur road accident

ಚಿಕ್ಕಬಳ್ಳಾಪುರ: ಕಲ್ಲು ಕೂಚ (ಕಂಬ) ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾಗಿ (Road Accident), ಕಂಬಗಳಡಿ ಸಿಲುಕಿಕೊಂಡು ಮೂವರು ಕಾರ್ಮಿಕರು (laborers death) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಚಿಕ್ಕಬಳ್ಳಾಪುರ- ಗೌರಿಬಿದನೂರು (Chikkaballapur news) ಮಾರ್ಗದ ಕಣಿವೆ ಬಳಿ ದುರ್ಘಟನೆ ನಡೆದಿದೆ.

ಕೋಲಾರದ ಮಾಲೂರಿನ ಚಿಕ್ಕತಿರುಪತಿಯಿಂದ ಮಂಚೇನಹಳ್ಳಿಗೆ ಬರುತ್ತಿದ್ದ ಕ್ಯಾಂಟರ್ ಲಾರಿ ಚಾಲಕನ‌ ನಿಯಂತ್ರಣ ತಪ್ಪಿ‌ ಪಲ್ಟಿಯಾಗಿದೆ. ಕ್ಯಾಂಟರ್‌ನ ಹಿಂಬದಿಯಲ್ಲಿ ಸಾಗಿಸಲಾಗುತ್ತಿದ್ದ ಕಲ್ಲಿನ ಕಂಬಗಳ ಮೇಲೆ ಕುಳಿತಿದ್ದ ಕೂಲಿ ಕಾರ್ಮಿಕರು, ಈ ಕಲ್ಲುಗಳಡಿ ಸಿಲುಕಿಕೊಂಡು ದಾರುಣವಾಗಿ ಸಾವಿಗೀಡಾದರು.

108 ಸಿಬ್ಬಂದಿ ಮುಷ್ಕರದ ಹಿನ್ನೆಲೆಯಲ್ಲಿ ಕರೆ ಕಳುಹಿಸಿದರೂ ಆಂಬ್ಯುಲೆನ್ಸ್ ಸಮಯಕ್ಕೆ ಸರಿಯಾಗಿ ಬರಲಿಲ್ಲ. ಆಂಬ್ಯುಲೆನ್ಸ್ ಬಂದಿದ್ದರೆ ಜೀವಗಳನ್ನು ಉಳಿಸಬಹುದಾಗಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಸ್ಥಳಕ್ಕೆ‌ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸಾಲಬಾಧೆ ತಾಳಲಾಗದೆ ರೈತ ಆತ್ಮಹತ್ಯೆ

ಕೊರಟಗೆರೆ: ಸಾಲದ ಬಾಧೆ ತಾಳಲಾರದೇ ರೈತ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಕಬ್ಬಿಗೆರೆ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.

ರಾಜಣ್ಣ (38) ಮೃತಪಟ್ಟ ರೈತ. ಜಮೀನಿನಲ್ಲಿ ಬೋರ್‌ವೆಲ್ ಕೊರೆಸಲು ರೈತ ರಾಜಣ್ಣ ಹಲವು ಖಾಸಗಿ ಫೈನಾನ್ಸ್‌ಗಳಲ್ಲಿ 12 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದು, ಜಮೀನಿನಲ್ಲಿ 5ಕ್ಕೂ ಹೆಚ್ಚು ಕೊಳವೆ ಬಾವಿಗಳನ್ನು ಕೊರೆಸಿದ್ದು ನೀರು ಸಿಗದ ಕಾರಣ ಮನನೊಂದಿದ್ದರು ಎಂದು ಹೇಳಲಾಗಿದೆ.

ಇದನ್ನೂ ಓದಿ: Female Foeticide: ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಗರ್ಭಪಾತ ಮಾಡುವಾಗಲೇ ದಾಳಿ, ಮೂವರ ಅರೆಸ್ಟ್‌!

ತನ್ನ ಸ್ನೇಹಿತರ ಬಳಿಯೂ ಸಾಲ ಪಡೆದಿದ್ದು, ಕಳೆದ ಭಾನುವಾರ ತಡರಾತ್ರಿ ತನ್ನ ಜಮೀನಿನಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಪೊಲೀಸ್ ಆಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಕೈಗಳನ್ನು ಕಟ್ಟಿಹಾಕಿ ಸಿಗರೇಟ್‌ನಿಂದ ಗಂಡನ ಗುಪ್ತಾಂಗ ಸುಟ್ಟ ಹೆಂಡತಿ! ಭೀಕರ ವಿಡಿಯೊ ಇಲ್ಲಿದೆ!

ಎರಡು ವರ್ಷದಿಂದ ಮಳೆ ಇಲ್ಲದೆ ಬೆಳೆಗಳೆಲ್ಲವೂ ನಾಶವಾಗಿ ರೈತ ಮಾಡಿರುವ ಸಾಲ ತೀರಿಸಲಾಗದೆ ನೇಣು ಹಾಕಿಕೊಳ್ಳುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ನಡೆಯುತ್ತಿವೆ. ಹಣದ ವಸೂಲಿಗೆ ಬರುತ್ತಿರುವ ಮೈಕ್ರೋ ಫೈನಾನ್ಸ್ ಹಾಗೂ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕಬೇಕು. ಮಳೆ ಇಲ್ಲದೆ ಬೆಳೆ ಇಲ್ಲದೆ ರೈತ ಎಲ್ಲಿಂದ ಸಾಲವನ್ನು ಕಟ್ಟುತ್ತಾನೆ? ಈ ಘಟನೆಗಳ ಬಗ್ಗೆ ಕೊಡಲೇ ಸರ್ಕಾರ ಗಮನ ಹರಿಸಬೇಕು. ರೈತರ ಪ್ರಾಣವನ್ನು ಉಳಿಸಬೇಕು ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಸಿದ್ದರಾಜು ಆಗ್ರಹಿಸಿದ್ದಾರೆ.

Continue Reading

ವೈರಲ್ ನ್ಯೂಸ್

Viral Video: ವಿದ್ಯಾರ್ಥಿಯ ಗುಪ್ತಾಂಗಕ್ಕೆ ಇಟ್ಟಿಗೆ ಕಟ್ಟಿ ಕಿಡಿಗೇಡಿಗಳ ವಿಕೃತಿ; ವಿಡಿಯೋ ವೈರಲ್‌

Viral Video:ವಿದ್ಯಾರ್ಥಿಯೊಬ್ಬ ಆನ್‌ಲೈನ್‌ ಗೇಮಿಂಗ್‌ ಚಟಕ್ಕೆ ಬಿದ್ದು, 20,000ರೂ ಸಾಲದ ಸುಳಿಗೆ ಬಿದ್ದಿದ್ದ. ಆರೋಪಿಗಳು ಬಡ್ಡಿ ಎಲ್ಲಾ ಸೇರಿಸಿ 50,000 ಕೊಡಲೇಬೇಕೆಂದು ಹೇಳಿದ್ದರು. ಅಷ್ಟೊಂದು ಹಣವನ್ನು ಕೊಡಲು ಸಾಧ್ಯವಾಗದೇ ಇದ್ದಾಗ ವಿದ್ಯಾರ್ಥಿಯನ್ನು ಆರು ಜನ ಅಪ್ರಾಪ್ತರು ಸೇರಿ ಚೆನ್ನಾಗಿ ಥಳಿಸಿದ್ದು, ಬಳಿಕ ಆತನನ್ನು 10 ದಿನಗಳ ಕಾಲ ರೂಮಿನಲ್ಲಿ ಕೂಡಿ ಹಾಕಿ ಹಿಂಸೆ ಮಾಡಿದ್ದಾರೆ. ಆತನ ಗುಪ್ತಾಂಗಕ್ಕೆ ಇಟ್ಟಿಗೆ ಕಟ್ಟಿ ವಿಕೃತಿ ಮೆರೆದಿದ್ದಾರೆ.

VISTARANEWS.COM


on

Viral Video
Koo

ಉತ್ತರಪ್ರದೇಶ: ಆನ್‌ಲೈನ್‌ ಗೇಮಿಂಗ್‌ (Online Gaming)ನಲ್ಲಿ ಸೋತು ಹಣ ವಾಪಾಸ್‌ ನೀಡಲು ವಿಳಂಬ ಮಾಡಿದನೆಂದು ನೀಟ್‌ ಪರೀಕ್ಷೆಗೆ(NEET Exam) ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಯನ್ನ ಚೆನ್ನಾಗಿ ಥಳಿಸಿ ಚಿತ್ರಹಿಂಸೆ ನೀಡಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಕಿಡಿಗೇಡಿಗಳು ವಿದ್ಯಾರ್ಥಿಯ ಗುಪ್ತಾಂಗಕ್ಕೆ ಇಟ್ಟಿಗೆ ಕಟ್ಟಿ ವಿಕೃತಿ ಮೆರೆದಿದ್ದು, ಆರು ಜನ ಅಪ್ರಾಪ್ತರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಇನ್ನು ಈ ಶಾಕಿಂಗ್‌ ವಿಡಿಯೋ(Viral Video) ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಹಲವರಿಂದ ಖಂಡನೆ ವ್ಯಕ್ತವಾಗಿದೆ.

ಘಟನೆ ವಿವರ:

ಇಟವಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಯೊಬ್ಬ ಆನ್‌ಲೈನ್‌ ಗೇಮಿಂಗ್‌ ಚಟಕ್ಕೆ ಬಿದ್ದು, 20,000ರೂ ಸಾಲದ ಸುಳಿಗೆ ಬಿದ್ದಿದ್ದ. ಆರೋಪಿಗಳು ಬಡ್ಡಿ ಎಲ್ಲಾ ಸೇರಿಸಿ 50,000 ಕೊಡಲೇಬೇಕೆಂದು ಹೇಳಿದ್ದರು. ಅಷ್ಟೊಂದು ಹಣವನ್ನು ಕೊಡಲು ಸಾಧ್ಯವಾಗದೇ ಇದ್ದಾಗ ವಿದ್ಯಾರ್ಥಿಯನ್ನು ಆರು ಜನ ಅಪ್ರಾಪ್ತರು ಸೇರಿ ಚೆನ್ನಾಗಿ ಥಳಿಸಿದ್ದು, ಬಳಿಕ ಆತನನ್ನು 10 ದಿನಗಳ ಕಾಲ ರೂಮಿನಲ್ಲಿ ಕೂಡಿ ಹಾಕಿ ಹಿಂಸೆ ಮಾಡಿದ್ದಾರೆ. ಆತನ ಗುಪ್ತಾಂಗಕ್ಕೆ ಇಟ್ಟಿಗೆ ಕಟ್ಟಿ ವಿಕೃತಿ ಮೆರೆದಿದ್ದಾರೆ. ಬಳಿಕ ಆತನನ್ನು ಬೆಂಕಿ ಹಾಕಿ ಸುಡಲು ಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ 11 ಜನ ಆರೋಪಿಗಳು ಭಾಗಿಯಾಗಿದ್ದು, ಆರು ಅಪ್ರಾಪ್ತರನ್ನು ಅರೆಸ್ಟ್‌ ಮಾಡಲಾಗಿದೆ. ಪ್ರಮುಖ ಆರೋಪಿ ಸೇರಿದಂತೆ ಐವರು ಎಸ್ಕೇಪ್‌ ಆಗಿದ್ದು, ಅವರಿಗಾಗಿ ಶೋಧ ಕಾರ್ಯ ನಡೆಸಲಾಗಿದೆ. ಸೋಮವಾರ ಸಂತ್ರಸ್ತ ವಿದ್ಯಾರ್ಥಿಯ ಬಾವ ಕಾಕಡಿಯೋ ಪೊಲೀಸ್‌ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ:Narendra Modi: ಮತದಾನ ಮಾಡಿ ಬಂದ ಮೋದಿಗೆ ರಾಖಿ ಕಟ್ಟಿ, ಆಶೀರ್ವಾದ ಮಾಡಿದ ಅಜ್ಜಿ; Video ಇದೆ

ಇಂತಹದ್ದೇ ರೀತಿಯ ಘಟನೆಯೊಂದು ಉತ್ತರಪ್ರದೇಶದ ಫತೇಹ್‌ಪುರದಲ್ಲಿ ನಡೆದಿತ್ತು. ಆನ್‌ಲೈನ್‌ ಗೇಮ್‌ನ ಚಟ ಹೊಂದಿದ್ದ ಯುವಕನೊಬ್ಬ ಸಾಲ ತೀರಿಸಲು ಇನ್ಶೂರೆನ್ಸ್‌ ಹಣಕ್ಕಾಗಿ ಹೆತ್ತ ತಾಯಿಯನ್ನೇ ಕೊಂದಿದ್ದ. ಹಿಮಾಂಶು ಎಂಬ ಆರೋಪಿ 50 ಲಕ್ಷ ರೂ.ಗಳ ವಿಮೆ ಹಣವನ್ನು ಪಡೆಯಲು ತನ್ನ ತಾಯಿಯನ್ನು ಕೊಂದು ನಂತರ ಶವವನ್ನು ಸೆಣಬಿನ ಚೀಲದಲ್ಲಿ ತುಂಬಿ ಯಮುನಾ ನದಿಯ ದಂಡೆಯಲ್ಲಿ ಎಸೆದಿದ್ದ. ಹಿಮಾಂಶು ಜನಪ್ರಿಯ ಆನ್‌ಲೈನ್‌ ಫ್ಲಾಟ್‌ಫಾರ್ಮ್‌ ಒಂದರಲ್ಲಿ ಗೇಮಿಂಗ್‌ ಆಡುವ ಚಟ ಹೊಂದಿದ್ದ. ಇದಕ್ಕಾಗಿ ಆತನ ಸುಮಾರು 4 ಲಕ್ಷ ರೂ. ಸಾಲ ಮಾಡಿದ್ದ. ಇದನ್ನು ತೀರಿಸಲು ಆತ ತನ್ನ ತಾಯಿಯನ್ನೇ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Continue Reading
Advertisement
t20 world cup
ಕ್ರೀಡೆ10 mins ago

T20 World Cup : ಕೊಹ್ಲಿಯನ್ನು ಎದುರಿಸಲು ಪ್ಲ್ಯಾನ್​ ರೆಡಿ ಇದೆ ಎಂದ ಬಾಬರ್ ಅಜಮ್​

Lok Sabha Election 2024
ಪ್ರಮುಖ ಸುದ್ದಿ18 mins ago

Lok Sabha Election 2024: ಸಂಜೆ 5ಗಂಟೆವರೆಗೆ ಶೇ.66.05 ವೋಟಿಂಗ್‌; ಚಿಕ್ಕೋಡಿಯಲ್ಲಿ ಅತಿ ಹೆಚ್ಚು

School Jobs
ಪ್ರಮುಖ ಸುದ್ದಿ23 mins ago

School Jobs: 25 ಸಾವಿರ ಶಿಕ್ಷಕರ ವಜಾ ಆದೇಶಕ್ಕೆ ಸುಪ್ರೀಂ ತಡೆ; ಮಮತಾ ಸರ್ಕಾರಕ್ಕೆ ಚಾಟಿ

Karnataka Weather Forecast
ಮಳೆ27 mins ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Akshaya Tritiya 2024
ಫ್ಯಾಷನ್29 mins ago

Akshaya Tritiya 2024: ಅಕ್ಷಯ ತೃತೀಯದಂದು ಬಂಗಾರ ಖರೀದಿಸುವವರಿಗೆ ಇಲ್ಲಿದೆ ಉಪಯುಕ್ತ ಟಿಪ್ಸ್‌

T20 world Cup
ಪ್ರಮುಖ ಸುದ್ದಿ36 mins ago

T20 World Cup : ಬುಮ್ರಾಗೆ ವಿಶ್ರಾಂತಿ ನೀಡಲು ನಿರಾಕರಿಸಿದ ಮುಂಬೈ ಇಂಡಿಯನ್ಸ್​; ವಿಶ್ವ ಕಪ್​ ಆಡಲು ಸಮಸ್ಯೆ

Lok Sabha Election 2024
ಬೀದರ್‌48 mins ago

Lok Sabha Election 2024: ಭಾಲ್ಕಿಯಲ್ಲಿ ಖಂಡ್ರೆ ಕುಟುಂಬದಿಂದ ತಾತ, ಮಗ, ಮೊಮ್ಮಗ ಮತದಾನ

lok sabha Election 2024 Actor Rishb Shetty
Lok Sabha Election 202450 mins ago

Lok Sabha Election 2024: ಓದಿದ ಶಾಲೆಯಲ್ಲಿ ಮತ ಹಾಕಿದ ನಟ ರಿಷಬ್‌ ಶೆಟ್ಟಿ; ಕಾಂತಾರ 2 ಸೀಕ್ರೆಟ್‌ ರಿವೀಲ್‌!

Prajwal Revanna Case Victim found at relative house Not in a farmhouse Sa Ra Mahesh Explosive Information
ರಾಜಕೀಯ58 mins ago

Prajwal Revanna Case: ಸಂತ್ರಸ್ತ ಮಹಿಳೆ ಸಿಕ್ಕಿದ್ದು ಸಂಬಂಧಿಕರ ಮನೆಯಲ್ಲಿ! ತೋಟದ ಮನೆಯಲ್ಲಲ್ಲ; ಸಾ.ರಾ. ಮಹೇಶ್‌ ಸ್ಫೋಟಕ ಮಾಹಿತಿ

MS Dhoni
ಪ್ರಮುಖ ಸುದ್ದಿ1 hour ago

MS Dhoni : ಮಹೇಂದ್ರ ಸಿಂಗ್​ ಧೋನಿಗೆ ಗಾಯ, ಆಂತರಿಕ ಮಾಹಿತಿ ಬಹಿರಂಗ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ27 mins ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ23 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ1 day ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

ಟ್ರೆಂಡಿಂಗ್‌