Health tips: ಮಾನಸಿಕ ಒತ್ತಡ, ಉದ್ವೇಗ ಶಮನಕ್ಕೆ ಖಂಡಿತ ಬೇಕು ಈ ಹಣ್ಣುಗಳು! - Vistara News

ಆರೋಗ್ಯ

Health tips: ಮಾನಸಿಕ ಒತ್ತಡ, ಉದ್ವೇಗ ಶಮನಕ್ಕೆ ಖಂಡಿತ ಬೇಕು ಈ ಹಣ್ಣುಗಳು!

ಕೆಲವು ಹಣ್ಣು ಹಂಪಲುಗಳ ಸೇವನೆಯೂ ಕೂಡ ಒತ್ತಡದ ಜೀವನಕ್ಕೆ ನೆಮ್ಮದಿಯ ರಂಗು ತರಬಲ್ಲುದು. ಹಾಗಾದರೆ ಬನ್ನಿ, ಯಾವ ಹಣ್ಣುಗಳು ಆತಂಕ ಹಾಗೂ ಒತ್ತಡದಂತಹ ಸಮಸ್ಯೆಗಳಿಗೆ ಸೂಕ್ತ ಪರಿಹಾರ ನೀಡಬಲ್ಲುದು ಎಂಬುದನ್ನು ನೋಡೋಣ.

VISTARANEWS.COM


on

health tips fruits for stress
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ವೇಗದ ಜೀವನಶೈಲಿಯಲ್ಲಿ ಬಹುತೇಕ ಎಲ್ಲರನ್ನೂ ಕಾಡುವ ಸಮಸ್ಯೆ ಎಂದರೆ ಒತ್ತಡ (Stress). ಏಕತಾನತೆಯ ಕೆಲಸ, ಹೆಚ್ಚಿದ ಸ್ಕ್ರೀನ್‌ಟೈಮ್‌ (Screen time), ಸಫಲತೆಯ ಹುಡುಕಾಟದ ನಾಗಾಲೋಟ, ಸ್ಪರ್ಧಾತ್ಮಕ ಜಗತ್ತು ಬಯಸುವ ಹೆಚ್ಚಿದ ಕೆಲಸ ಇತ್ಯಾದಿ ಇತ್ಯಾದಿ ನಾನಾ ಕಾರಣಗಳು, ಬದಲಾದ ಆಹಾರ ಕ್ರಮ, ನಗರ ಜೀವನ ಇತ್ಯಾದಿ ಇತ್ಯಾದಿ ಕಾರಣಗಳಿಂದಾಗಿ ಬಹುತೇಕ ಮಂದಿಯನ್ನು ಇಂದು ಮಾನಸಿಕ ಉದ್ವಿಗ್ನತೆ ಹಾಗೂ ಒತ್ತಡಗಳು ಆವರಿಸುತ್ತಿವೆ. ಕಾರಣವಿಲ್ಲದೆ ಆತಂಕ, ದುಗುಡ, ಒತ್ತಡದಿಂದಾಗಿ ಆರೋಗ್ಯದ ಏರುಪೇರು, ನೆಮ್ಮದಿ ಸಾಧ್ಯವಾಗದಿರುವುದು ಇತ್ಯಾದಿಗಳು ಸಾಮಾನ್ಯವಾಗುತ್ತಿದೆ. ಇಂತಹ ಸಮಸ್ಯೆಗೆ ಜೀವನಪದ್ಧತಿಯ ಬದಲಾವಣೆಯ ಜೊತೆಗೆ ಆಹಾರದಲ್ಲಿ ಬದಲಾವಣೆಯೂ ಕೂಡಾ ಸಮಸ್ಯೆಗೆ ಉತ್ತರವಾಗಬಲ್ಲುದು. ಸೂಕ್ತ ಮಾನಸಿಕ ತಜ್ಞರಿಂದ ಸಲಹೆ ಸೂಚನೆಗಳ ಜೊತೆಗೆ ಕೆಲವು ಹಣ್ಣು ಹಂಪಲುಗಳ ಸೇವನೆಯೂ ಕೂಡ ಒತ್ತಡದ ಜೀವನಕ್ಕೆ ನೆಮ್ಮದಿಯ ರಂಗು ತರಬಲ್ಲುದು. ಹಾಗಾದರೆ ಬನ್ನಿ, ಯಾವ ಹಣ್ಣುಗಳು ಆತಂಕ ಹಾಗೂ ಒತ್ತಡದಂತಹ ಸಮಸ್ಯೆಗಳಿಗೆ ಸೂಕ್ತ ಪರಿಹಾರ ನೀಡಬಲ್ಲುದು ಎಂಬುದನ್ನು ನೋಡೋಣ.

1. ಬ್ಲೂಬೆರ್ರಿ: ಕಡುನೀಲಿ ಬಣ್ಣದ ಬ್ಲೂಬೆರ್ರಿ ಹಣ್ಣುಗಳು ನಮ್ಮ ದೇಶದಲ್ಲಿ ಸಾಮಾನ್ಯವಲ್ಲದಿದ್ದರೂ ಲಭ್ಯವಿವೆ. ರುಚಿಯಾದ ಈ ಹಣ್ಣು ಪೋಷಕಾಂಶಗಳಿಂದ ಸಂಪದ್ಭರಿತವಾಗಿರುವುದರಿಂದ ಕೇವಲ ದೈಹಿಕ ಲಾಬವಷ್ಟೇ ಅಲ್ಲ, ಮಾನಸಿಕ ಆರೋಗ್ಯದ ಲಾಭಗಳೂ ಇವೆ. ಬ್ಲೂಬೆರ್ರಿಯಲ್ಲಿರುವ ಆಂಥೋಸಯಾನಿನ್‌ಗೆ ಒತತಡವನ್ನು ಕಡಿಮೆ ಮಾಡುವ ಗುಣವಿದೆಯಂತೆ. ಈ ಬಗ್ಗೆ ನಡೆದಿರುವ ಸಂಶೋಧನೆಯೂ ಕೂಡಾ, ಬ್ಲೂಬೆರ್ರಿ ಸಪ್ಲಿಮೆಂಟ್‌ ನೀಡುವ ಮೂಲಕ ಒತ್ತಡ, ಖಿನ್ನತೆ ಹಾಗೂ ಇತರ ಮಾನಸಿಕ ಸಮಸ್ಯೆಗಳ ಪರಿಸ್ಥಿತಿಯಲ್ಲಿ ಕೊಂಚ ಸುಧಾರಣೆ ಕಂಡಿರುವುದನ್ನೂ ವರದಿ ಮಾಡಿವೆ.

2. ಬಾಳೆಹಣ್ಣು: ಬಾಳೆಹಣ್ಣಿನಲ್ಲಿ ಪೊಟಾಶಿಯಂನಂತೆ ಮೆಗ್ನೀಶಿಯಂ ಎಂಬ ಖನಿಜಾಂಶವೂ ಇರುವುದು ಗೊತ್ತೇ ಇದೆ. ಈ ಹಿಂದೆ ನಡೆದಿರುವ ಸಂಶೋಧನೆಗಳ ಪ್ರಕಾರ, ಮೆಗ್ನೀಶಿಯಂಗೆ ನಮ್ಮ ಮನಸ್ಸಿನ ಸ್ಥಿತಿಯನ್ನು ಉತ್ತಮಗೊಳಿಸುವ ತಾಕತ್ತಿದೆ ಎಂದು ಹೇಳಿದೆ. ಒಂದು ದೊಡ್ಡ ಬಾಳೆಹಣ್ಣಿನಲ್ಲಿ 37 ಎಂಜಿ ಮೆಗ್ನೀಶಿಯಂ ಇದ್ದು ಇದು ಅಧಿಕ ರಕ್ತದೊತ್ತಡವನ್ನೂ ಸಮತೋಲನಕ್ಕೆ ತರಲು ಸಹಾಯ ಮಾಡುತ್ತದೆ. ಇದರಿಂದ ಏರುಪೇರಾಗುವ ಮನಸ್ಥಿತಿ, ಒತ್ತಡ ಇತ್ಯಾದಿಗಳೂ ಕೂಡಾ ಹತೋಟಿಗೆ ಬರುತ್ತವೆ.

banana

ಇದನ್ನೂ ಓದಿ: Health Tips: ಬೇಸಿಗೆಯಲ್ಲಿ ಕೋಲ್ಡ್ ವಾಟರ್ ಕುಡಿಯುವುದು ಅಪಾಯಕಾರಿಯೆ?

3. ಸಿಟ್ರಸ್‌ ಹಣ್ಣುಗಳು: ಸಿ ವಿಟಮಿನ್‌ ಹೇರಳವಾಗಿರುವ ಸಿಟ್ರಸ್‌ ಹಣ್ಣುಗಳಾದ ಮೂಸಂಬಿ, ಕಿತ್ತಳೆ, ನಿಂಬೆ ಇತ್ಯಾದಿಗಳೂ ಕೂಡಾ ಒತ್ತಡವನ್ನು ಕಡಿಮೆ ಮಾಡುವ ಶಕ್ತಿ ಹೊಂದಿವೆಯಂತೆ. ಸಿ ವಿಟಮಿನ್‌ ಇರುವ ಹಣ್ಣುಗಳ ಸೇವನೆಯಿಂದ ಮಾನಸಿಕವಷ್ಟೇ ಅಲ್ಲ, ದೈಹಿಕ ಒತ್ತಡದಂತಹ ಸಮಸ್ಯೆಗಳಿಗೂ ಪರಿಹಾರ ಒದಗುತ್ತದೆ. ಒತ್ತಡದಲ್ಲಿರುವಾಗ ಬಿಡುಗಡೆಯಾಗುವ ಹಾರ್ಮೋನ್‌ ಕಾರ್ಟಿಸೋಲ್‌ನ ಮಟ್ಟವನ್ನು ಕಡಿಮೆಗೊಳಿಸುವ ಶಕ್ತಿ ವಿಟಮಿನ್‌ ಸಿ ಯಲ್ಲಿ ಇರುವುದರಿಂದ ಸಿ ವಿಟಮಿನ್‌ ಹೇರಳವಾಗಿರುವ ಹಣ್ಣುಗಳು ಒತ್ತಡ, ಮಾನಸಿಕ ತುಮುಲದಂತಹ ಸಮಸ್ಯೆಗಳಿಗೆ ಕೊಂಚ ಮಟ್ಟಿನ ಸಹಾಯ ಒದಗಿಸಬಹುದು.

ಇದಲ್ಲದೆ, ಬೇಳೆ ಕಾಳುಗಳು ಹಾಗೂ ಧಾನ್ಯಗಳೂ ಕೂಡಾ ಒತ್ತಡದಂತಹ ಸಮಸ್ಯೆಗೆ ಉತ್ತಮ ಆಹಾರ. ಮಾಂಸಾಹಾರದ ಪೈಕಿ ಸಾಲ್ಮನ್‌ ಫಿಶ್‌ ಕೂಡಾ ಒಳ್ಳೆಯದೇ. ಆದರೆ, ಈ ಹಣ್ಣುಗಳೆಲ್ಲವೂ ಒತ್ತಡಕ್ಕೆ ಒಳ್ಳೆಯದು ಎಂದುಕೊಂಡು ಕೇಔಲ ಇದರಿಂದ ಒತ್ತಡದ ಸಮಸ್ಯೆಯನ್ನು ಬಗೆಹರಿಸಲು ಹೊರಟರೆ ಅದು ಮೂರ್ಖತನವಾದೀತು. ಮಾನಸಿಕ ಸಮಸ್ಯೆ ಉಲ್ಬಣಿಸುವ ಮೊದಲೇ ವೈದ್ಯರ ನೆರವು ಖಂಡಿತಾ ಬೇಕು. ಆದರೆ, ವೈದ್ಯರ ಸಲಹೆ ಹಾಗೂ ಔಷಧಿಗಳ ಸೇವನೆಯ ಜೊತೆಗೆ ಉತ್ತಮ ಆಹಾರ ಹಾಗೂ ಶಿಸ್ತುಬದ್ಧ ಆರೋಗ್ಯಕರ ಜೀವನಶೈಲಿಯೂ ಕೂಡಾ ಇಲ್ಲಿ ಮುಖ್ಯ. ಮಾನಸಿಕ ಆರೋಗ್ಯಕ್ಕೆ ಪೂರಕವಾಗಿರುವ ಹಣ್ಣು ಹಂಪಲುಗಳ ಸೇವನೆ ಆರೋಗ್ಯಪೂರ್ಣ ಹಾದಿಯತ್ತ ಇರುವ ಮೆಟ್ಟಿಲನ್ನು ಸುಲಭವಾಗಿ ಏರಲು ಸಹಾಯ ಮಾಡಬಲ್ಲುದು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿ!

ಇದನ್ನೂ ಓದಿ: Health Tips: ದಿನಕ್ಕೊಂದು ಬಾಳೆಹಣ್ಣು: ಅಧಿಕ ರಕ್ತದೊತ್ತಡಕ್ಕೆ ಒಳ್ಳೆಯ ಆಹಾರ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಆರೋಗ್ಯ

Cooking Oils: ಈ 5 ಅಡುಗೆ ಎಣ್ಣೆಗಳು ನಮ್ಮ ಆರೋಗ್ಯಕ್ಕೆ ಅಪಾಯಕಾರಿ!

ನಿತ್ಯವೂ ಮನೆಗಳಲ್ಲಿ ಅಡುಗೆಗೆ ಒಳ್ಳೆಯ ಎಣ್ಣೆಯನ್ನು ನಾವು ಬಳಕೆ ಮಾಡುತ್ತೇವೆ ಎಂದುಕೊಂಡರೂ, ಹೊರಗಿನಿಂದ ತರುವ ಕುರುಕಲು ತಿಂಡಿಗಳು, ಹೊರಗೆ ತಿನ್ನುವ ಆಹಾರ ಇತ್ಯಾದಿಗಳಲ್ಲಿ ಅತ್ಯಂತ ಹೆಚ್ಚು ಬಳಕೆಯಾಗುವುದು ಸುಲಭವಾಗಿ ಸಿಗುವ ಎಣ್ಣೆಗಳೇ ಆಗಿವೆ. ಹೀಗಾಗಿ, ಒಂದಲ್ಲ ಒಂದು ಬಗೆಯಲ್ಲಿ ಅನಾರೋಗ್ಯಕರ ಎಣ್ಣೆ ನಾವು ಬೇಡವೆಂದರೂ ನಮ್ಮ ಹೊಟ್ಟೆ ಸೇರುತ್ತವೆ. ಈ ಕುರಿತ (Cooking oils) ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

Cooking Oils
Koo

ಎಣ್ಣೆಯ ಬಳಕೆ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬ ಸತ್ಯ ಎಲ್ಲರಿಗೂ ತಿಳಿದಿರುವ ಸತ್ಯವೇ ಆದರೂ, ಸಾಕಷ್ಟು ಆಹಾರಗಳಲ್ಲಿ ಇಂದು ವ್ಯಾಪಕವಾಗಿ ಎಣ್ಣೆಯ ಬಳಕೆಯಾಗುತ್ತದೆ. ಅದರಲ್ಲೂ ಕೆಲವು ಅಗ್ಗದ ಎಣ್ಣೆಗಳು ಇಂದು ಸಂಸ್ಕರಿಸಿದ ಆಹಾರಗಳ ಮೂಲಕ ನಮ್ಮ ಹೊಟ್ಟೆ ಸೇರುವುದು ನಮಗೆ ಗೊತ್ತೇ ಆಗುವುದಿಲ್ಲ. ನಿತ್ಯವೂ ಮನೆಗಳಲ್ಲಿ ಅಡುಗೆಗೆ ಒಳ್ಳೆಯ ಎಣ್ಣೆಯನ್ನು ನಾವು ಬಳಕೆ ಮಾಡುತ್ತೇವೆ ಎಂದು ನಾವು ಅಂದುಕೊಂಡರೂ, ಹೊರಗಿನಿಂದ ತರುವ ಕುರುಕಲು ತಿಂಡಿಗಳು, ಹೊರಗೆ ತಿನ್ನುವ ಆಹಾರಗಳು ಇತ್ಯಾದಿಗಳಲ್ಲಿ ಅತ್ಯಂತ ಹೆಚ್ಚು ಬಳಕೆಯಾಗುವುದು ಸುಲಭವಾಗಿ ಸಿಗು ಎಣ್ಣೆಗಳೇ ಆಗಿವೆ. ಹೀಗಾಗಿ, ಒಂದಲ್ಲ ಒಂದು ಬಗೆಯಲ್ಲಿ ಅನಾರೋಗ್ಯಕರ ಎಣ್ಣೆ ನಾವು ಬೇಡವೆಂದರೂ ನಮ್ಮ ಹೊಟ್ಟೆ ಸೇರುತ್ತವೆ. ಬನ್ನಿ, ಯಾವೆಲ್ಲ ಎಣ್ಣೆಗಳನ್ನು ನಾವು ನಮ್ಮ ಆಹಾರದಲ್ಲಿ ನಿತ್ಯವೂ ಬಳಸಬಾರದು (Cooking oils) ಎಂಬುದನ್ನು ನೋಡೋಣ.

Palm oil

ಪಾಮ್‌ ಎಣ್ಣೆ

ಇಂದು ಮಾರುಕಟ್ಟೆಯಲ್ಲಿ ಸಿಗುವ ಬಹುತೇಕ ಸಂಸ್ಕರಿಸಿದ ಆಹಾರಗಳಲ್ಲಿ, ಪ್ಯಾಕೇಟ್‌ಗಳಲ್ಲಿ ಬಳಸುವ ಎಣ್ಣೆ ಬಹುಪಾಲು ಪಾಮ್‌ ಎಣ್ಣೆ ಎಂಬುದು ನಿಜವಾದರೂ, ಇದು ಆರೋಗ್ಯಕ್ಕೆ ಕೆಟ್ಟ ಪರಿಣಾಮ ಬೀರುವ ಎಣ್ಣೆಗಳಲ್ಲಿ ಅಗ್ರಸ್ಥಾನದಲ್ಲಿದೆ. ಕಡಿಮೆ ದರ ಹಾಗೂ ಸುಲಭವಾಗಿ ದೊರೆಯಬಲ್ಲ ಅಗ್ಗದ ಎಣ್ಣೆ ಇದಾಗಿರಿವುದರಿಂದ ಇದನ್ನು ಇಂದು ಆಹಾರ ಉದ್ಯಮದಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಆದರೆ, ಇದರಲ್ಲಿ ಅತ್ಯಂತ ಹೆಚ್ಚು ಸ್ಯಾಚುರೇಟೆಡ್‌ ಫ್ಯಾಟ್‌ ಇರುವುದರಿಂದ ಇದು ಎಲ್‌ಡಿಎಲ್‌ ಕೊಲೆಸ್ಟೆರಾಲ್‌ ಮಟ್ಟವನ್ನು ಏರಿಸುವ ಕಾರಣ ಹೃದಯದ ಆರೋಗ್ಯಕ್ಕೆ ಇದು ಅತ್ಯಂತ ಕೆಟ್ಟದ್ದು.

Soybean oil

ಸೋಯಾಬೀನ್‌ ಎಣ್ಣೆ

ಕಡಿಮೆ ವಾಸನೆಯುಳ್ಳ ಹಾಗೂ ಅತ್ಯಂತ ಕಡಿಮೆ ಬೆಲೆಗೆ ವ್ಯಾಪಕವಾಗಿ ದೊರೆಯುವ ಸೋಯಾಬೀನ್‌ ಎಣ್ಣೆಯಲ್ಲಿ ಒಮೆಗಾ 6 ಫ್ಯಾಟಿ ಆಸಿಡ್‌ಗಳು ಹೇರಳವಾಗಿವೆ. ಒಮೆಗಾ 3 ಫ್ಯಾಟಿ ಆಸಿಡ್‌ನ ಅದೇ ಗುಣಗಳನ್ನು ಇದೂ ಹೊಂದಿರುವುದರಿಂದ ಹಾಗೂ ಉರಿಯೂತವನ್ನು ಹೆಚ್ಚಿಸುವ ಸಂಭವ ಇದರಲ್ಲಿ ಹೆಚ್ಚಿರುವುದರಿಂದ ಈ ಎಣ್ಣೆಯ ಬಳಕೆ ಅತಿಯಾಗಬಾರದು. ಒಮೆಗಾ 3 ಫ್ಯಾಟಿ ಆಸಿಡ್‌ನ ಮೂಲಗಳ ಜೊತೆಗೆ ಸಮತೋಲನದಲ್ಲಿ ಇದನ್ನು ಸೇಔಇಸುವುದು ಉತ್ತಮ. ಇದರ ಅತಿಯಾದ ಬಳಕೆ ಸಲ್ಲದು.

Cottonseed oil

ಹತ್ತಿಬೀಜದ ಎಣ್ಣೆ

ಹತ್ತಿಯನ್ನು ತೆಗೆದ ಮೇಳೆ ಅದರ ಬೀಜದಿಂದ ಮಾಡುವ ಎಣ್ಣೆಯಾದ ಕಾಟನ್‌ ಸೀಡ್‌ ಆಯಿಲ್‌ ಅಥವಾ ಹತ್ತಿಬೀಜದ ಎಣ್ಣೆ ಬಹಳಷ್ಟು ಸಂಸ್ಕರಿಸಿದ ಆಹಾರಗಳಲ್ಲಿ ವ್ಯಾಪಕವಾಗಿ ಇಂದು ಬಳಕೆಯಾಗುತ್ತಿದೆ. ಇದರಲ್ಲಿಯೂ ಒಮೆಗಾ 6 ಫ್ಯಾಟಿ ಆಸಿಡ್‌ ಹೇರಳವಾಗಿದೆ. ಹಾಗಾಗಿ ಇದನ್ನು ಅತಿಯಾಗಿ ಬಳಸುವುದರಿಂದ ಉರಿಯೂತ ಹಾಗೂ ಇತರ ಆರೋಗ್ಯದ ಸಮಸ್ಯೆಗಳಿಗೆ ಕಾರಣವಾಗಬಹುದು.

ಇದನ್ನೂ ಓದಿ: Benefits of Tender Coconut: ಎಳನೀರು ಹೀರುವುದರಿಂದ ದೇಹಕ್ಕೆ ಏನೇನು ಲಾಭ ಗೊತ್ತೇ?

ವೆಜಿಟೆಬಲ್‌ ಆಯಿಲ್

ಈ ಸಾಮಾನ್ಯೀಕರಿಸಿದ ಹೆಸರಿಂದ ಬಹುತೇಕರು ಮೋಸಕ್ಕೆ ಒಳಗಾಗುವುದೇ ಹೆಚ್ಚು. ವೆಜಿಟೆಬಲ್‌ ಆಯಿಲ್‌ ಅಂದಾಕ್ಷಣ, ಆರೋಗ್ಯಕ್ಕೆ ಸಮಸ್ಯೆಯೇನಿಲ್ಲ ಎಂದು ಅಂದುಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದರೂ, ಈ ಎಣ್ಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜೋಳ, ಸೋಯಾಬೀನ್‌ ಹಾಗೂ ಸೂರ್ಯಕಾಂತಿ ಎಣ್ಣೆ ಬಳಕೆಯಾಗುತ್ತದೆ. ತೀರಾ ಕೆಟ್ಟದ್ದೇನೂ ಅಲ್ಲದಿದ್ದರೂ, ರಿಫೈನ್ಡ್‌ ಎಣ್ಣೆ ಇದಾಗಿರುವುದರಿಂದ ಹಾಗೂ ಸಾಕಷ್ಟು ರಾಸಾಯನಿಕಗಳು ಈ ಸಂದರ್ಭ ಬಳಕೆಯಾಗಿರುವುದರಿಂದ, ಒಮೆಗಾ 6 ಫ್ಯಾಟಿ ಆಸಿಡ್‌ ಹೆಚ್ಚಿರುವುದರಿಂದ ಈ ಎಣ್ಣೆಯೂ ಹೆಚ್ಚು ಬಳಕೆ ಮಾಡುವುದು ಒಳ್ಳೆಯದಲ್ಲ. ನಿತ್ಯದ ಉಪಯೋಗಕ್ಕೆ ಈ ಎಣ್ಣೆ ಅಷ್ಟು ಯೋಗ್ಯವಲ್ಲ.

Hydrogenated oils

ಹೈಡ್ರೋಜಿನೇಟೆಡ್‌ ಆಯಿಲ್‌ಗಳು

ಹೈಡ್ರೋಜಿನೇಷನ್‌ ಎಂಬ ಪ್ರಕ್ರಿಯೆಗೆ ಒಳಪಡಿಸುವ ಎಣ್ಣೆಗಳು ಇದಾಗಿದ್ದು, ಇದರಲ್ಲಿ ದ್ರವರೂಪದ ಎಣ್ಣೆಯನ್ನು ಘನರೂಪಕ್ಕೆ ಪರಿವರ್ತಿಸಲಾಗುತ್ತದೆ. ಇಂತಹ ಎಣ್ಣೆಗಳಲ್ಲಿ ಟ್ರಾನ್ಸ್‌ ಫ್ಯಾಟ್‌ ಅಧಿಕವಾಗಿರುವುದಲ್ಲದೆ, ಎಲ್‌ಡಿಎಲ್‌ ಕೊಲೆಸ್ಟೆರಾಲ್‌ ಮಟ್ಟವನ್ನು ಇದು ಏರಿಸುವ ಕಾರಣ ಹೃದಯದ ಆರೋಗ್ಯಕ್ಕೆ ಒಳ್ಳೆಯದಲ್ಲ.

Continue Reading

ಆರೋಗ್ಯ

Pain Relievers: ಸೈಡ್‌ ಎಫೆಕ್ಟ್‌ ಇಲ್ಲದ ಪ್ರಕೃತಿದತ್ತ ನೋವು ನಿವಾರಕಗಳಿವು

ಸಣ್ಣ ಪುಟ್ಟ ಸಮಸ್ಯೆಗಳಿಗೆ ಪ್ರಕೃತಿ ಆಸರೆಯಾಗುವ ಪರಿಯೇ ಅದ್ಭುತ. ನೋವು, ಊದಿಕೊಂಡ ಗಾಯಗಳಿಂದಾದ ನೋವು ಇತ್ಯಾದಿ ಸಮಸ್ಯೆಗಳಿಗೆ ಕೆಲವು ಸರಳ ಮನೆಮದ್ದುಗಳ ಸಹಾಯವೂ ಕೂಡ ನಮ್ಮ ದೇಹದ ನೋವುಗಳನ್ನು ಸಾಕಷ್ಟು ಶಮನಗೊಳಿಸುವ ತಾಕತ್ತನ್ನು ಹೊಂದಿವೆ. ಮಾನವನು ಕಂಡು ಹಿಡಿದ ನೋವು ನಿವಾರಕ ಮಾತ್ರೆಗಳಿಂದ ತಕ್ಷಣದ ಪರಿಹಾರ ದಕ್ಕಿದರೂ, ಅದರಿಂದ ಸಾಕಷ್ಟು ಅಡ್ಡಪರಿಣಾಮಗಳೂ ಇವೆ. ಈ ಕುರಿತ (Pain relievers) ಮಾಹಿತಿ ಇಲ್ಲಿದೆ.

VISTARANEWS.COM


on

Pain relievers
Koo

ಪ್ರಕೃತಿಯಲ್ಲಿ ನಮ್ಮ ನೋವುಗಳಿಗೆಲ್ಲವೂ ಮದ್ದಿವೆ. ಪ್ರಕೃತಿಯ ಸಾನಿಧ್ಯ ನಮಗೆ ಮಾನಸಿಕ ನೆಮ್ಮದಿಯನ್ನು ನೀಡುವ ಜೊತೆಗೆ ದೇಹಕ್ಕೆ ಆದ ನೋವನ್ನೂ ಕಡಿಮೆ ಮಾಡಲು ಮೂಲಿಕೆಗಳನ್ನು ತನ್ನಲ್ಲಿ ಬಚ್ಚಿಟ್ಟುಕೊಂಡಿದೆ. ಮನುಷ್ಯ ತನ್ನ ಆರೋಗ್ಯದ ಸಮಸ್ಯೆಗಳಿಗೆ ವೈದ್ಯ ಜಗತ್ತಿನಲ್ಲಿ ಸಾಕಷ್ಟು ಮುಂದುವರಿದಿದ್ದರೂ, ಕೆಲವು ಸರಳವಾದ ಪ್ರಾಕೃತಿಕ ಆಹಾರಗಳು ಅವನ ಕೈಯನ್ನು ಬಿಡುವುದಿಲ್ಲ. ಸಣ್ಣ ಪುಟ್ಟ ಸಮಸ್ಯೆಗಳಿಗೆ ಪ್ರಕೃತಿ ಆಸರೆಯಾಗುವ ಪರಿಯೇ ಅದ್ಭುತ. ನೋವು, ಊದಿಕೊಂಡ ಗಾಯಗಳಿಂದಾದ ನೋವು ಇತ್ಯಾದಿ ಸಮಸ್ಯೆಗಳಿಗೆ ಕೆಲವು ಸರಳ ಮನೆಮದ್ದುಗಳ ಸಹಾಯವೂ ಕೂಡ ನಮ್ಮ ದೇಹದ ನೋವುಗಳನ್ನು ಸಾಕಷ್ಟು ಶಮನಗೊಳಿಸುವ ತಾಕತ್ತನ್ನು ಹೊಂದಿವೆ. ಮಾನವನು ಕಂಡು ಹಿಡಿದ ನೋವು ನಿವಾರಕ ಮಾತ್ರೆಗಳಿಂದ ತಕ್ಷಣದ ಪರಿಹಾರ ದಕ್ಕಿದರೂ, ಅದರಿಂದ ಸಾಕಷ್ಟು ಅಡ್ಡಪರಿಣಾಮಗಳೂ ಇವೆ. ಹಾಗಾಗಿ, ಪ್ರಕೃತಿಯೇ ನಮಗೆ ನೀಡಿದ ಕೆಲವು ನೋವು ನಿವಾರಕಗಳೂ ಕೂಡ ಸಾಕಷ್ಟು ನೋವುಗಳನ್ನು ಕಡಿಮೆ ಮಾಡುವಲ್ಲಿ ಸಫಲವಾಗುತ್ತದೆ. ಬನ್ನಿ, ಪ್ರಕೃತಿದತ್ತ ನೋವು ನಿವಾರಕವಾಗಿ ಯಾವೆಲ್ಲ ಆಹಾರಗಳು ಕೆಲಸ ಮಾಡುತ್ತವೆ (Pain relievers) ಎಂಬುದನ್ನು ನೋಡೋಣ.

ginger

ಶುಂಠಿ

ಪ್ರಕೃತಿದತ್ತ ಆಂಟಿ ಇನ್‌ಫ್ಲಮೇಟರಿ ಗುಣಗಳುಳ್ಳ ಆಹಾರಗಳ ಪೈಕಿ ಶುಂಠಿ ಪ್ರಮುಖವಾದದ್ದು. ಇದರಲ್ಲಿ ಅತ್ಯಂತ ಶಕ್ತಿಯುತವಾದ ನೋವು ನಿವಾರಕ ಗುಣಗಳಿದ್ದು ಮಾಂಸಖಂಡಗಳ ಸೆಳೆತ, ಉರಿಯೂತ, ನೋವುಗಳನ್ನು ಇದು ಶಮನಗೊಳಿಸುವಲ್ಲಿ ನೆರವಾಗುತ್ತದೆ. ನೋವುಗಳಿದ್ದಾಗ ರಾತ್ರಿ ಮಲಗುವ ಮೊದಲು ಶುಂಠಿಯ ಚಹಾ ಕುಡಿಯುವ ಮೂಲಕ ಒಳ್ಲೆಯ ನಿದ್ರೆ ಹಾಗೂ ನೋವಿನಿಂದ ಕೊಂಚ ಆರಾಮ ಪಡೆಯಬಹುದು.

Anti-Inflammatory Properties Health Benefits Of Raw Turmeric

ಹಸಿ ಅರಿಶಿನ

ಮಸಾಲೆಯಾಗಿ ನಾವು ನಿತ್ಯ ಅರಿಶಿನವನ್ನು ಉಪಯೋಗಿಸಿದರೂ ಇದರಲ್ಲಿರುವ ಆಂಟಿ ಇನ್‌ಫ್ಲಮೇಟರಿ ಗುಣಗಳು ನೋವುಗಳಿಗೆ ಒಳ್ಳೆಯ ಔಷಧಿ. ಇದರಲ್ಲಿ ಆಂಟಿಬಯಾಟಿಕ್‌ ಹಾಗೂ ಆಂಟಿಸೆಪ್ಟಿಕ್‌ ಗುಣಗಳು ಹೇರಳವಾಗಿವೆ. ಈ ಗುಣಗಳು ನೋವುನಿವಾರಕಗಳಂತೆ ಕೆಲಸ ಮಾಡುವ ಮೂಲಕ ನೋವನ್ನು ಕಡಿಮೆ ಮಾಡುವಲ್ಲಿ ಹಾಗೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಾಯ ಮಾಡುತ್ತವೆ. ಅರಿಶಿನ ಹಾಕಿದ ಹಾಲನ್ನು ಕುಡಿಯುವ ಮೂಲಕ ಅರಿಶಿನದ ಲಾಭವನ್ನು ಪಡೆಯಬಹುದು.

Anise

ಸೋಂಪು

ಹೊಟ್ಟೆಯುಬ್ಬರಕ್ಕೆ ಹೇಳಿ ಮಾಡಿಸಿದಂಥ ಸೋಂಪು ಅಸಿಡಿಟಿ ಹಾಗೂ ಗ್ಯಾಸ್‌ನ ಸಮಸ್ಯೆಗಳಿಗೆ ಅತ್ಯುತ್ತಮ ಮನೆಮದ್ದು. ಹೊಟ್ಟೆಯ ಸಮಸ್ಯೆಗಳು, ಗ್ಯಾಸ್‌ನಿಂದಾಗುವ ನೋವು, ಮಾಂಸಖಂಡಗಳ ಸೆಳೆತ ಇತ್ಯಾದಿ ನೋವುಗಳಿಗೆ ಸೋಂಪು ಅತ್ಯುತ್ತಮ ನೋವು ನಿವಾರಕವಾಗಿ, ಗ್ಯಾಸ್‌ನಿಂದ ಮುಕ್ತಿ ನೀಡುವ ಮನೆಮದ್ದಾಗಿ ಕೆಲಸ ಮಾಡುತ್ತದೆ. ಸೋಂಪನ್ನು ನೀರಿನಲ್ಲಿ ಕುದಿಸಿ ಸೋಸಿ ಕುಡಿಯುವ ಮೂಲಕ ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಅತಿಯಾಗಿ ಊಟ ಮಾಡಿದಾಗ, ಹೊರಗೆ ತಿಂದು ಬಂದಾಗ, ಸಮಾರಂಭಗಳಲ್ಲಿ ಊಟ ಮಾಡಿದಾಗ ಆಗುವ ಹೊಟ್ಟೆಯುಬ್ಬರಕ್ಕೆ ತಕ್ಷಣವೇ ಹೀಗೆ ಮಾಡುವ ಮೂಲಕ ಸಮಾಧಾನ ಸಿಗಬಹುದು.

ಇದನ್ನೂ ಓದಿ: Weight Loss Tips: ಸುಸ್ಥಿರವಾಗಿ ತೂಕ ಇಳಿಸಬೇಕೆ?; ಇಲ್ಲಿದೆ ದಾರಿ!

ಸಣ್ಣ ಪುಟ್ಟ ನೋವುಗಳಿಗೆ, ಯಾವಾಗಲೂ ಪ್ರಕೃತಿದತ್ತ ಇಂತಹ ನೋವು ನಿವಾರಕಗಳು, ಆಂಟಿಸೆಪ್ಟಿಕ್‌ ಗುಣಗಳ ಆಹಾರಗಳನ್ನು ನಮ್ಮ ನಿತ್ಯಾಹಾರದಲ್ಲಿ ಅಳವಡಿಸುವ ಮೂಲಕ ಪರಿಹಾರ ಕಂಡುಕೊಳ್ಳುವುದು ಯಾವಾಗಲೂ ಒಳ್ಳೆಯದು. ಅತಿಯಾದ ಮಾತ್ರೆಗಳ ದಾಸರಾಗುವುದು, ಅಥವಾ ಸಣ್ಣ ಪುಟ್ಟ ನೋವುಗಳಿಗೂ ಮಾತ್ರೆಗಳ ಸಹಾಯ ಪಡೆಯುವುದರಿಂದ ಅಡ್ಡ ಪರಿಣಾಮಗಳನ್ನು ನಾವು ಅನುಭವಿಸಲೇ ಬೇಕಾಗುತ್ತದೆ. ಆದಷ್ಟೂ ಪ್ರಕೃತಿಯ ಕೊಡುಗೆಗಳನ್ನು ಸಮರ್ಪಕವಾಗಿ ನಮ್ಮ ನಿತ್ಯ ಜೀವನದಲ್ಲಿ ಅಳವಡಿಸುವುದನ್ನು ನಾವು ಅಭ್ಯಾಸ ಮಾಡಿಕೊಳ್ಳುವುದು ಒಳ್ಳೆಯದು ಎಂಬುದನ್ನು ಹಿರಿಯರಾದಿಯಾಗಿ ವೈದ್ಯಜಗತ್ತೂ ಕೂಡ ಒಪ್ಪಿಕೊಂಡ ಸತ್ಯ.

Continue Reading

ದೇಶ

Covishield Vaccine: ಮಗಳ ಸಾವಿಗೆ ಕೋವಿಶೀಲ್ಡ್ ಲಸಿಕೆ ಕಾರಣ: ಆಸ್ಟ್ರಾಜೆನಿಕಾ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ತಂದೆ

Covishield Vaccine: ಕೊರೊನಾ ಎದುರಿಸಲು ನೀಡಲಾದ ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮವನ್ನು ಹೊಂದಿದೆ ಎಂದು ಸ್ವತಃ ಅದನ್ನು ತಯಾರಿಸಿದ ಕಂಪನಿ ಬ್ರಿಟಿಷ್ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ ಒಪ್ಪಿಕೊಂಡಿದೆ. ಇದರ ಬೆನ್ನಲ್ಲೇ ಇದೀಗ ವ್ಯಕ್ತಿಯೊಬ್ಬರು ಕೋವಿಶೀಲ್ಡ್ ಲಸಿಕೆ ಪಡೆದ ಬಳಿಕ ತಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಆರೋಪಿಸಿ, ಆಸ್ಟ್ರಾಜೆನಿಕಾ ಕಂಪನಿ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಮುಂದಾಗಿದ್ದಾರೆ. ವೇಣುಗೋಪಾಲನ್‌ ಗೋವಿಂದನ್‌ ಅವರಿಗೆ ತಮ್ಮ ಮಗಳ ಹಠಾತ್‌ ಸಾವಿಗೆ ಲಸಿಕೆಯೇ ಕಾರಣ ಎಂದು ಹೇಳಿ ನ್ಯಾಯಾಲಯದ ಮೊರೆ ಹೋಗಲು ನಿರ್ಧಿಸಿದ್ದಾರೆ.

VISTARANEWS.COM


on

Covishield Vaccine
Koo

ನವದೆಹಲಿ: ಕೊರೊನಾ (Covid 19) ಎದುರಿಸಲು ನೀಡಲಾದ ಕೋವಿಶೀಲ್ಡ್‌ ಲಸಿಕೆ (Covishield Vaccine) ಅಡ್ಡ ಪರಿಣಾಮವನ್ನು (Side effects) ಹೊಂದಿದೆ ಎಂದು ಸ್ವತಃ ಅದನ್ನು ತಯಾರಿಸಿದ ಕಂಪನಿ ಬ್ರಿಟಿಷ್ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ (AstraZeneca) ಒಪ್ಪಿಕೊಂಡಿದೆ. ಇದರ ಬೆನ್ನಲ್ಲೇ ಇದೀಗ ವ್ಯಕ್ತಿಯೊಬ್ಬರು ಕೋವಿಶೀಲ್ಡ್ ಲಸಿಕೆ ಪಡೆದ ಬಳಿಕ ತಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಆರೋಪಿಸಿ, ಆಸ್ಟ್ರಾಜೆನಿಕಾ ಕಂಪನಿ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಮುಂದಾಗಿದ್ದಾರೆ.

ಕೋವಿಶೀಲ್ಡ್ ಅಪರೂಪದ ಸಂದರ್ಭಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ಪ್ಲೇಟ್‌ಲೆಟ್ ಎಣಿಕೆಗೆ ಕಾರಣವಾಗುವ ಸ್ಥಿತಿಯನ್ನು ಉಂಟು ಮಾಡಬಹುದು ಎಂದು ಲಸಿಕೆ ತಯಾರಕರು ಇಂಗ್ಲೆಂಡ್‌ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ ನಂತರ ವೇಣುಗೋಪಾಲನ್‌ ಗೋವಿಂದನ್‌ ಅವರಿಗೆ ತಮ್ಮ ಮಗಳ ಹಠಾತ್‌ ಸಾವಿಗೆ ಲಸಿಕೆಯೇ ಕಾರಣ ಇರಬಹುದು ಎಂಬ ಅನುಮಾನ ಕಾಡಿದ್ದು, ಅದಕ್ಕಾಗಿ ನ್ಯಾಯಾಲಯದ ಮೊರೆ ಹೋಗಲು ನಿರ್ಧಿಸಿದ್ದಾರೆ.

ವೇಣುಗೋಪಾಲನ್ ಅವರು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. 2021ರಲ್ಲಿ ಇವರ ಪುತ್ರಿ 20 ವರ್ಷದ ಕಾರುಣ್ಯ ಕೋವಿಶೀಲ್ಡ್ ಪಡೆದ ಬಳಿಕ ಸಾವನ್ನಪ್ಪಿದ್ದರು. ಆಸ್ಟ್ರಾಜೆನಿಕಾ ಸಂಸ್ಥೆ ಬಹಳ ತಡವಾಗಿ ಅಂದರೆ ಹಲವರು ಜೀವ ಕಳೆದುಕೊಂಡ ನಂತರ ತನ್ನ ಲಸಿಕೆಯ ಲೋಪದೋಷಗಳನ್ನು ಒಪ್ಪಿಕೊಂಡಿದೆ ಎಂದು ಅವರು ಹೇಳಿದ್ದಾರೆ. ಸಾಂಕ್ರಾಮಿಕ ರೋಗದ ಸಮಯದಲ್ಲಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಿಂದ ಅಭಿವೃದ್ಧಿಪಡಿಸಲಾದ ಕೋವಿಶೀಲ್ಡ್ ಅನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿ ದೇಶದಲ್ಲಿ ವ್ಯಾಪಕವಾಗಿ ಹಂಚಿತ್ತು.

ರಕ್ತ ಹೆಪ್ಪುಗಟ್ಟುವಿಕೆಯ ಕಾರಣ ನೀಡಿ 15 ಯುರೋಪಿಯನ್ ದೇಶಗಳು ಕೋವಿಶೀಲ್ಡ್‌ ಬಳಕೆಗೆ ನಿಷೇಧ ಹೇರಿದ ಬಳಿಕವಾದರೂ ಸೆರಂ ಇನ್‌ಸ್ಟಿಟ್ಯೂಟ್‌ ಈ ಲಸಿಕೆಯ ಪೂರೈಕೆಯನ್ನು ಸ್ಥಗಿತಗೊಳಿಸಬೇಕಿತ್ತು. ಆದರೆ ಇದರಿಂದ ತೊಂದರೆಗೊಳಗಾಗಿ ತಮ್ಮವರನ್ನು ಕಳೆದುಕೊಂಡ ಅನೇಕ ಪೋಷಕರು ನ್ಯಾಯಾಲಯಗಳಲ್ಲಿ ಹೋರಾಟ ಮಾಡಿದ್ದರೂ ನ್ಯಾಯ ಸಿಕ್ಕಿಲ್ಲ ಎಂದು ವೇಣುಗೋಪಾಲನ್ ಹೇಳಿದ್ದಾರೆ. ಈಗಾಗಲೇ ಈ ಲಸಿಕೆಯಿಂದ ಜೀವ ಕಳೆದುಕೊಂಡ ಸಂತ್ರಸ್ತರ 8 ಕುಟುಂಬಗಳು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಅವರು ಬರೆದುಕೊಂಡಿದ್ದಾರೆ.

ಸೆರಮ್ ಇಸ್ಟಿಟ್ಯೂಟ್‌ನ ಪೂನಾವಾಲಾ ಅವರು ತಾವು ಮಾಡಿದ ಪಾಪಗಳಿಗೆ ಉತ್ತರ ನೀಡಬೇಕು. ಅವರ ತಪ್ಪಿನಿಂದ ಬಲಿಯಾದ ಜೀವಗಳಿಗೆ ಉತ್ತರ ನೀಡಬೇಕು ಎಂದು ಗೋವಿಂದನ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಜತೆಗೆ ಈ ಲಸಿಕೆಗೆ ಅನುಮೋದನೆ ನೀಡಿದ ಸರ್ಕಾರಿ ಅಧಿಕಾರಿಗಳ ಬಗ್ಗೆಯೂ ಅವರು ಕಿಡಿ ಕಾರಿದ್ದಾರೆ. ಹಾಗೆಯೇ 2021ರಲ್ಲಿ ರಚನಾ ಗಂಗು ಎಂಬವರು ಕೂಡ ತಮ್ಮ 18 ವರ್ಷದ ಮಗಳು ರಿತೈಕಾಳನ್ನು ಕಳೆದು ಕೊಂಡಿದ್ದು, ಇದಕ್ಕೂ ಕೋವಿಶೀಲ್ಡ್‌ ಕಾರಣ ಎಂದು ಹೇಳಿದ್ದಾರೆ.

ಇದನ್ನೂ ಓದಿ: Covishield Vaccine: ಕೋವಿಶೀಲ್ಡ್‌ನಿಂದ ಅಡ್ಡ ಪರಿಣಾಮವಿದೆ ಎಂದು ಕೊನೆಗೂ ಒಪ್ಪಿಕೊಂಡ ತಯಾರಿಕೆ ಕಂಪನಿ ಅಸ್ಟ್ರಾಜೆನೆಕಾ

ಕೋವಿಡ್‌ ನಂತರದ ದಿನಗಳಲ್ಲಿ ಯುವಜನರಲ್ಲಿಯೂ ವಿವರಿಸಲಾಗದ ತೀವ್ರ ಅಸ್ವಸ್ಥತೆ, ಹೃದಯಸ್ತಂಭನ ಮುಂತಾದವುಗಳು ಕಂಡುಬಂದಿವೆ. ಕೋವಿಡ್‌ ಹಾಗೂ ಅದರ ಲಸಿಕೆಯ ಬಗ್ಗೆ ಈ ಹಿಂದೆಯೂ ಅನುಮಾನ ಮೂಡಿಸಿದ್ದವು. ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಸಂಸ್ಥೆಯು ಈ ವಿವಾದದ ಕುರಿತು ಇನ್ನೂ ಹೇಳಿಕೆ ನೀಡಿಲ್ಲ.

Continue Reading

ಬೆಂಗಳೂರು

108 Ambulance : 3 ತಿಂಗಳ ವೇತನ ಬಾಕಿ; ನಾಳೆ ರಾತ್ರಿಯಿಂದಲೇ 108 ಆಂಬ್ಯುಲೆನ್ಸ್‌ ಸೇವೆ ಬಂದ್‌!

Ambulance Service: ಜನರಿಗೆ ತುರ್ತು ಚಿಕಿತ್ಸೆ ಸಿಗಲೆಂದು ಆರಂಭವಾದ 108 ಆ್ಯಂಬುಲೆನ್ಸ್ (108 ambulance) ಸೇವೆಗೆ ಮಂಕು ಕವಿದಿದೆ. ಪದೇಪದೆ ಆಂಬ್ಯುಲೆನ್ಸ್‌ ಸಿಬ್ಬಂದಿಗೆ ವೇತನ ಸಮಸ್ಯೆಯು ಉದ್ಭವಿಸುತ್ತಿದೆ. ಇದೀಗ 3 ತಿಂಗಳ ಬಾಕಿ ಸಂಬಳ ನೀಡಲು ವಿಳಂಬ ಮಾಡುತ್ತಿರುವುದಕ್ಕೆ ಸಿಟ್ಟಾಗಿರುವ 108 ಆಂಬ್ಯುಲೆನ್ಸ್‌ ಸಿಬ್ಬಂದಿ ಪ್ರತಿಭಟನೆಗೆ ಕರೆಕೊಟ್ಟಿದ್ದಾರೆ.

VISTARANEWS.COM


on

By

108 ambulance
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆರೋಗ್ಯ ಕವಚ 108 ಆಂಬ್ಯುಲೆನ್ಸ್‌ (108 Ambulance) ಸಿಬ್ಬಂದಿಗೆ ಮೂರು ತಿಂಗಳ ವೇತನ ಪಾವತಿಯಾಗದ (Salary Problem) ಕಾರಣಕ್ಕೆ ಮತ್ತೆ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ನಾಳೆ ಅಂದರೆ ಮೇ.6ರ ರಾತ್ರಿ 8 ಗಂಟೆಯಿಂದ ರಾಜ್ಯ ವ್ಯಾಪ್ತಿ ಆಂಬ್ಯುಲೆನ್ಸ್ ಸೇವೆ ಬಂದ್ (Ambulance Service) ಆಗಲಿದೆ.

ಜಿವಿಕೆ ಸಂಸ್ಥೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸಿಬ್ಬಂದಿ ತಿರುಗಿ ಬಿದ್ದಿದ್ದಾರೆ. ಮೂರು ತಿಂಗಳಿಂದ ವೇತನ ಸಿಗದೆ 108 ಸಿಬ್ಬಂದಿ ಜೀವನ ಹೈರಾಣಾಗಿದೆ. ಒಂದು ಕಡೆ ಮೂರು ತಿಂಗಳಿಂದ ಸಂಬಳವಿಲ್ಲ. ಮತ್ತೊಂದು ಕಡೆ ಜಿವಿಕೆ ಸಂಸ್ಥೆ ವೇತನ ಕಡಿತಗೊಳಿಸಿದೆ ಎಂದು ಕಿಡಿಕಾರಿದ್ದಾರೆ.

ಈ ಎಲ್ಲ ಕಾರಣಗಳಿಗೆ ಸೋಮವಾರ ರಾತ್ರಿಯಿಂದ ಆಂಬ್ಯುಲೆನ್ಸ್‌ ಓಡಾಟವನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಕಳೆದ ಫೆಬ್ರವರಿ, ಮಾರ್ಚ್, ಏಪ್ರಿಲ್ ತಿಂಗಳ ವೇತನ ಬಾಕಿ ಇದೆ. ಜಿವಿಕೆ ಸಂಸ್ಥೆ ಈಗಾಗಲೇ ಡಿಸೆಂಬರ್, ಜನವರಿ ತಿಂಗಳ ವೇತನವನ್ನು 30 ಸಾವಿರ ರೂ. ಕಡಿತ ಮಾಡಿ, ಕೇವಲ 13 ಸಾವಿರ ರೂ. ವೇತನ ನೀಡುತ್ತಿದೆ.

ಇದನ್ನೂ ಓದಿ: Accident News: ಸೆಕೆ ಎಂದು ಕೆರೆಗೆ ಜಿಗಿದ ವ್ಯಕ್ತಿ ಸಾವು; ವಿದ್ಯುತ್‌ ತಂತಿ ತುಳಿದು ಪ್ರಾಣಬಿಟ್ಟ ರೈತ

ಹೀಗಾಗಿ ನಾಳೆ ಸಂಜೆಯೊಳಗೆ ವೇತನ ಪಾವತಿ ಮಾಡುವಂತೆ ಆರೋಗ್ಯ ಇಲಾಖೆಗೆ ಮನವಿ ಮಾಡಲಾಗಿದೆ. ಕಡಿತ ಮಾಡಿದ ವೇತನವನ್ನು ಬಿಡುಗಡೆ ಮಾಡಬೇಕು. ಒಂದು ವೇಳೆ ವೇತನ ಪಾವತಿ ಮಾಡದಿದ್ದರೆ ಮುಷ್ಕರದ ಎಚ್ಚರಿಕೆಯನ್ನು ಕರ್ನಾಟಕ ರಾಜ್ಯ ಆರೋಗ್ಯ ಕವಚ 108 ನೌಕರರ ಸಂಘ ನೀಡಿದೆ.

ರಸ್ತೆಗಿಳಿಯಲ್ಲ ಆಂಬ್ಯುಲೆನ್ಸ್‌

ಸೋಮವಾರ ರಾತ್ರಿ (ಮೇ 6) 8 ಗಂಟೆಯಿಂದ ರಾಜ್ಯದ 3,500 ಆರೋಗ್ಯ ಕವಚ ಸಿಬ್ಬಂದಿ ಮುಷ್ಕರ ನಡೆಸಲಿದ್ದಾರೆ. ರಾಜ್ಯದಲ್ಲಿ ಒಟ್ಟು 711 ಆಂಬ್ಯುಲೆನ್ಸ್‌ಗಳು ಕಾರ್ಯ ನಿರ್ವಹಿಸುತ್ತಿದೆ. ರಾತ್ರಿಯಿಂದ ಸಂಪೂರ್ಣ ಬಂದ್‌ ಆಗಲಿದ್ದು, ರೋಗಿಗಳಿಗೆ ತೊಂದರೆ ಆದರೆ ಸರ್ಕಾರವೇ ನೇರ ಹೊಣೆ ಎಂದು ಆಂಬ್ಯುಲೆನ್ಸ್‌ ನೌಕರರ ಸಂಘದ ಉಪಾಧ್ಯಕ್ಷ ದಯಾನಂದ ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Viral News
ವೈರಲ್ ನ್ಯೂಸ್11 mins ago

Viral News: ಅವಳಿ-ತ್ರಿವಳಿ ಅಲ್ಲ.. ಏಕಕಾಲದಲ್ಲಿ ಐದು ಮಕ್ಕಳಿಗೆ ಜನ್ಮಕೊಟ್ಟ ಮಹಾತಾಯಿ

Kanyakumari Tour
ಪ್ರವಾಸ11 mins ago

Kanyakumari Tour: ತುಂಬಾ ದುಬಾರಿ ಏನಿಲ್ಲ, ನೀವೂ ಮಾಡಬಹುದು ಕನ್ಯಾಕುಮಾರಿ ಪ್ರವಾಸ

Cauvery Theatre bengaluru another single screen close
ಸಿನಿಮಾ22 mins ago

Cauvery Theatre: ಬೆಂಗಳೂರಿನಲ್ಲಿ ಪ್ರದರ್ಶನ ನಿಲ್ಲಿಸಿದ ʻಕಾವೇರಿʼ ಥಿಯೇಟರ್! ಮುಂದೇನು?

Bomb Threat
ದೇಶ26 mins ago

Bomb Threat: ದೆಹಲಿ ಬಳಿಕ ಇದೀಗ ಅಹಮದಾಬಾದ್​ನ ಶಾಲೆಗಳಿಗೂ ಬಾಂಬ್​ ಬೆದರಿಕೆ

Lok Sabha Elections-2024
Lok Sabha Election 202433 mins ago

Lok Sabha Election 2024: ಘಟಾನುಘಟಿಗಳ ಸ್ಪರ್ಧೆ; ಮೇ 7ರ ಮೂರನೇ ಹಂತದ ಪೈಪೋಟಿಯ ಚಿತ್ರಣ ಇಲ್ಲಿದೆ

ICC Women’s T20 World Cup 2024
ಕ್ರೀಡೆ34 mins ago

ICC Women’s T20 World Cup 2024: ಮಹಿಳಾ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದ ಶ್ರೀಲಂಕಾ

Road Accident
ಕ್ರೈಂ35 mins ago

Road Accident : ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಮೃತ್ಯು; 30ಕ್ಕೂ ಹೆಚ್ಚು ಮಂದಿಗೆ ಗಾಯ

Prajwal Revanna Case HD Revanna asks NO to sign voluntary statement in kidnapping case
ಕ್ರೈಂ37 mins ago

Prajwal Revanna Case: ಅಪಹರಣ ಕೇಸ್‌ನಲ್ಲಿ ಸ್ವ-ಇಚ್ಚಾ ಹೇಳಿಕೆಗೆ ಸಹಿ ಹಾಕಲು NO ಎಂದ ಎಚ್‌.ಡಿ. ರೇವಣ್ಣ!

Crude Bomb
ದೇಶ47 mins ago

Crude Bomb: ಚೆಂಡೆಂದು ಭಾವಿಸಿ ಬಾಂಬ್‌ ಜೊತೆ ಮಕ್ಕಳ ಆಟ; ಪಶ್ಚಿಮ ಬಂಗಾಳದಲ್ಲಿ ಭಾರೀ ಸ್ಫೋಟ

Shine Shetty follows diet and fitness
ಕಿರುತೆರೆ56 mins ago

Shine Shetty: ಸಖತ್‌ ಫಿಟ್‌ ಆದ ‘ಬಿಗ್ ಬಾಸ್‌’ ವಿನ್ನರ್ ಶೈನ್ ಶೆಟ್ಟಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ8 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ17 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ19 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ19 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌