Income tax return filing ITR 1, 4 form available on the website, are you ready to file the returnIncome tax return filing : ವೆಬ್‌ಸೈಟ್‌ನಲ್ಲಿ ಐಟಿಆರ್‌ 1, 4 ಫಾರ್ಮ್‌ ಲಭ್ಯ, ರಿಟರ್ನ್‌ ಸಲ್ಲಿಕೆಗೆ ರೆಡಿಯಾಗಿದ್ದೀರಾ?

ಪ್ರಮುಖ ಸುದ್ದಿ

Income tax return filing : ವೆಬ್‌ಸೈಟ್‌ನಲ್ಲಿ ಐಟಿಆರ್‌ 1, 4 ಫಾರ್ಮ್‌ ಲಭ್ಯ, ರಿಟರ್ನ್‌ ಸಲ್ಲಿಕೆಗೆ ರೆಡಿಯಾಗಿದ್ದೀರಾ?

Income tax return filing ಆದಾಯ ತೆರಿಗೆ ಇಲಾಖೆಯ ವೆಬ್‌ ಸೈಟ್‌ನಲ್ಲಿ ಐಟಿಆರ್‌1, 4 ಲಭ್ಯವಿದೆ. ಐಟಿಆರ್‌ ಸಲ್ಲಿಕೆಯ ಗಡುವು ಸೇರಿ ವಿವರಗಳು ಇಲ್ಲಿವೆ.

VISTARANEWS.COM


on

ITR FIle
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆದಾಯ ತೆರಿಗೆ ಇಲಾಖೆ ಇಲಾಖೆಯು ಆದಾಯ ತೆರಿಗೆ ರಿಟರ್ನ್‌ ಸಲ್ಲಿಕೆಗೆ ಅನುಕೂಲವಾಗಲು ಐಟಿಆರ್-‌1 ಮತ್ತು ಐಟಿಆರ್‌ 4 ಫಾರ್ಮ್ ಅನ್ನು ತನ್ನ ವೆಬ್‌ ಪೋರ್ಟಲ್‌ನಲ್ಲಿ‌ ದೊರೆಯುವಂತೆ ವ್ಯವಸ್ಥೆ ಕಲ್ಪಿಸಿದೆ. (Income tax return filing) pre-filled mode ನಲ್ಲಿ ಈ ಫಾರ್ಮ್‌ಗಳು ಲಭ್ಯವಿದೆ.

ಆದಾಯ ತೆರಿಗೆ ಇಲಾಖೆಯ e-filing website ನಲ್ಲಿ pre-filled data ಸಹಿತ ಐಟಿಆರ್‌ ಫಾರ್ಮ್‌ಗಳು ಲಭ್ಯವಿದೆ. ಫಾರ್ಮ್‌ 16 ನಲ್ಲಿ ನಮೂದಾಗಿರುವಂತೆ ವೇತನ ಮೂಲದ ಆದಾಯ, ಉಳಿತಾಯ ಖಾತೆ ಮೂಲದ ಬಡ್ಡಿ ಆದಾಯ, ಫಿಕ್ಸೆಡ್‌ ಡೆಪಾಸಿಟ್‌ ಆದಾಯ ವಿವರ ಇತ್ಯಾದಿಗಳು pre-filled data ಆಗಿ ಇರಲಿದೆ. ಅಂದರೆ ಆಟೊಮ್ಯಾಟಿಕ್‌ ಆಗಿ ಈ ವಿವರಗಳು ಫಾರ್ಮ್‌ಮಲ್ಲಿ ಭರ್ತಿ ಆಗಿರಲಿದೆ.

ಆನ್‌ಲೈನ್‌ ಐಟಿಆರ್‌ ಫಾರ್ಮ್‌ಗಳಿಂದ ವೈಯಕ್ತಿಕ ಆದಾಯ ತೆರಿಗೆ ವಿವರ ಸಲ್ಲಿಕೆ (Income tax return) ಸುಲಭವಾಗಿದೆ. ಡೇಟಾಗಳನ್ನು ಕ್ರಾಸ್‌ ಚೆಕ್‌ ಮಾಡಿದರೆ ಸಾಕಾಗುತ್ತದೆ. ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯು ಈ ವರ್ಷ ಫೆಬ್ರವರಿಯಲ್ಲಿ ಐಟಿಆರ್‌ ಫಾರ್ಮ್‌ಗಳನ್ನು ಅಧಿಸೂಚನೆಗೊಳಿಸಿತ್ತು.

ಕೊನೆ ದಿನ ಜುಲೈ 31:

Income tax return filing

2022-23ರ ಆರ್ಥಿಕ ವರ್ಷ (FY 2022-23) ಮತ್ತು 2023-24ರ ಮೌಲ್ಯ ಮಾಪನ ವರ್ಷದ (AY 2023-24) ಐಟಿ ರಿಟರ್ನ್‌ ಸಲ್ಲಿಸಲು 2023ರ ಜುಲೈ 31 ಕೊನೆಯ ದಿನಾಂಕವಾಗಿದೆ. ಸರ್ಕಾರ ಒಂದು ವೇಳೆ ಮುಂದೂಡಿದರೆ ಗಡುವು ಬದಲಾಗಬಹುದು. ಇಲ್ಲದಿದ್ದರೆ ಇದುವೇ ಅಂತಿಮ. 2022-23ರಲ್ಲಿ ನೀವು ಗಳಿಸಿದ ಆದಾಯಕ್ಕೆ ಇದು ಸಂಬಂಧಿಸಿದೆ.

ಐಟಿಆರ್‌-1 ಅರ್ಜಿಯು ಒಟ್ಟು ವಾರ್ಷಿಕ ಆದಾಯ 50 ಲಕ್ಷ ರೂ. ದಾಟದವರಿಗೆ ಅನ್ವಯವಾಗುತ್ತದೆ. ವೇತನ ಮೂಲದ ಆದಾಯ, ಒಂದು ಮನೆಯ ಪ್ರಾಪರ್ಟಿಯಿಂದ ಸಿಗುವ ಆದಾಯ, ಇತರ ಮೂಲಗಳ ಆದಾಯ ಇರುವವರು ಐಟಿಆರ್-‌1 ಬಳಸಬಹುದು. ಬಿಸಿನೆಸ್‌ ಮೂಲಕ ಆದಾಯ ಇರುವವರು ಐಟಿಆರ್-‌4 ಬಳಸಬೇಕಾಗುತ್ತದೆ.

ಈ ಹಿಂದೆ ನಾನಾ ಕಾರಣಗಳಿಗೆ ಐಟಿಆರ್‌ ಫೈಲಿಂಗ್‌ ಗಡುವನ್ನು ಸರ್ಕಾರ ವಿಸ್ತರಿಸಿತ್ತು. ಈ ಸಲ ಹಾಗೆ ವಿಸ್ತರಿಸುವ ಸಾಧ್ಯತೆ ಕಾಣಿಸುತ್ತಿಲ್ಲ.

ಐಟಿಆರ್‌ ಫೈಲಿಂಗ್‌ ಸೌಲಭ್ಯವು ಆದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ನಲ್ಲಿ ಉಚಿತವಾಗಿ ಲಭ್ಯವಿದೆ. incometax.gov.in

ಇದನ್ನೂ ಓದಿ: ವಿಸ್ತಾರ Money Guide | ಶೀಘ್ರದಲ್ಲಿ‌ ಎಲ್ಲರಿಗೂ ಏಕರೂಪದ ಐಟಿಆರ್‌ ಫಾರ್ಮ್ ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Teachers Transfer: ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ; ಕಡ್ಡಾಯ, ಹೆಚ್ಚುವರಿ‌ ಟ್ರಾನ್ಸ್‌ಫರ್ ಇಲ್ಲ, ಕೋರಿಕೆ ವರ್ಗ ಮಾತ್ರ

Teachers Transfer: ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಪಕರನ್ನೂ ಒಳಗೊಂಡಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆಯ ಪರಿಷ್ಕೃತ ವೇಳಾಪಟ್ಟಿ ಇಂದು (ಜೂನ್‌ 15) ಪ್ರಕಟಗೊಂಡಿದೆ. ಇದಾದ ನಂತರ ಕೌನ್ಸೆಲಿಂಗ್‌ ನಡೆಯಲಿದೆ. ವರ್ಗಾವಣೆ ಕೋರಿ ರಾಜ್ಯಾದ್ಯಂತ ಸಾವಿರಾರು ಶಿಕ್ಷಕರು ಅರ್ಜಿ ಸಲ್ಲಿಸಿದ್ದಾರೆ. ಸರ್ಕಾರ ವೇಳಾಪಟ್ಟಿಯನ್ನು ಪ್ರಕಟಿಸುವ ಕಾರಣ ಶಿಕ್ಷಕರ ಕನಸು ಈಡೇರುವ ಸಮಯ ಬಂದಂತಾಗಿದೆ.

VISTARANEWS.COM


on

Teachers Transfer
Koo

ಬೆಂಗಳೂರು: ರಾಜ್ಯಾದ್ಯಂತ (Teachers Transfer 2024) ಸಾವಿರಾರು ಸರ್ಕಾರಿ ಶಿಕ್ಷಕರು ಭಾರಿ ನಿರೀಕ್ಷೆಯಿಂದ ಕಾಯುತ್ತಿರುವ ವರ್ಗಾವಣೆ ವೇಳಾಪಟ್ಟಿ ಶನಿವಾರ (ಜೂನ್‌ 15) ಪ್ರಕಟಗೊಂಡಿದೆ. ಕಡ್ಡಾಯ ಹಾಗೂ ಹೆಚ್ಚುವರಿ ಶಿಕ್ಷಕರ ವರ್ಗಾವಣೆಯನ್ನು ಕೈಬಿಟ್ಟಿರುವ ರಾಜ್ಯ ಸರ್ಕಾರವು (Karnataka Government), ಕೋರಿಕೆಯ ವರ್ಗಾವಣೆ ಪಟ್ಟಿಯನ್ನು ಮಾತ್ರ ಪ್ರಕಟಿಸಿದೆ. ಇದರಿಂದ ಸಾವಿರಾರು ಶಿಕ್ಷಕರು ನಿಟ್ಟುಸಿರು ಬಿಡುವಂತಾಗಿದೆ. ಶೈಕ್ಷಣಿಕ ವರ್ಷ ಆರಂಭವಾಗಿರುವ ಹಿನ್ನೆಲೆಯಲ್ಲಿ ವಲಯವಾರು ವರ್ಗಾವಣೆ ಈ ವರ್ಷ ಕೈಬಿಡುವಂತೆಯೂ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮನವಿ ಮಾಡಿತ್ತು.

ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರನ್ನೂ ಒಳಗೊಂಡಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯ ಭಾಗವಾಗಿ ಈ ವೇಳಾಪಟ್ಟಿ ಪ್ರಕಟವಾಗಿದೆ. ಇನ್ನುಮುಂದೆ ವರ್ಗಾವಣೆಗೆ ಸಂಬಂಧಿಸಿ ಕೌನ್ಸೆಲಿಂಗ್‌ ನಡೆಯಲಿದೆ. ವರ್ಗಾವಣೆಗೆ ಅರ್ಜಿ ಇತ್ಯಾದಿ ಪ್ರಕ್ರಿಯೆ ಮಾರ್ಚ್‌ 18ರಿಂದ ಪ್ರಾರಂಭವಾಗಿತ್ತು. ಲೋಕಸಭೆ ಚುನಾವಣೆ ಘೋಷಣೆ ಮತ್ತು ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯು ಈ ಪ್ರಕ್ರಿಯೆಗೆ ತೊಡಕಾಗಿತ್ತು. ಈಗ ಕೊನೆಗೂ ವರ್ಗಾವಣೆ ವೇಳಾಪಟ್ಟಿ ಪ್ರಕಟಗೊಂಡಿದೆ.

ವರ್ಗಾವಣೆಗಳಲ್ಲಿ ಮೂರು ವಿಧ

ಸಾಮಾನ್ಯವಾಗಿ ಶಿಕ್ಷಕರ ವರ್ಗಾವಣೆಯಲ್ಲಿ ಮೂರು ವಿಧಗಳಿವೆ. ಇವುಗಳನ್ನೇ ರಾಜ್ಯ ಸರ್ಕಾರ ಅನುಸರಿಸುತ್ತದೆ. ಸಾಮಾನ್ಯ ವರ್ಗಾವಣೆಯಲ್ಲಿ ಕೋರಿಕೆ ಸಲ್ಲಿಸಿದವರು, ಪರಸ್ಪರ ವರ್ಗಾವಣೆ ಬಯಸಿದವರಿಗೆ ಮಾತ್ರ ವರ್ಗಾವಣೆ ಮಾಡಲಾಗುತ್ತದೆ. ಇನ್ನು, ಒಂದೇ ಶಾಲೆಯಲ್ಲಿ ಸತತ 10 ವರ್ಷ ಕಾರ್ಯನಿರ್ವಹಿಸಿದವರಿಗೆ ಕಡ್ಡಾಯ ವರ್ಗಾವಣೆ ಮಾಡಲಾಗುತ್ತದೆ. ಹಾಗೆಯೇ, ಯಾವುದಾದರೂ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದ್ದು, ಹೆಚ್ಚಿನ ಶಿಕ್ಷಕರು ಇದ್ದರೆ, ಅವರನ್ನು ಹೆಚ್ಚುವರಿ ವರ್ಗಾವಣೆ ವಿಧದಲ್ಲಿ ಟ್ರಾನ್ಸ್‌ಫರ್‌ ಮಾಡಲಾಗುತ್ತದೆ.

ಕಡ್ಡಾಯ ವರ್ಗಾವಣೆ ಮಾಡುವ ವೇಳೆ ಮೂರು ವಲಯಗಳನ್ನು ಗಮನಿಸಲಾಗುತ್ತದೆ. ಎ ವಲಯದಲ್ಲಿ ನಗರಗಳು ಅಥವಾ ಪಟ್ಟಣಗಳು ಇದ್ದರೆ, ಬಿ ವಲಯದಲ್ಲಿ ನಗರದಿಂದ ಮೂರು ಕಿಲೋಮೀಟರ್‌ ದೂರದಲ್ಲಿರುವ ಗ್ರಾಮಗಳು, ಸಿ ವಲಯದಲ್ಲಿ ನಗರದಿಂದ 10 ಕಿಲೋಮೀಟರ್‌ ದೂರದಲ್ಲಿರುವ ಗ್ರಾಮಗಳಿಗೆ ವರ್ಗಾವಣೆ ಮಾಡಲಾಗುತ್ತದೆ. ಎ ವಲಯದಲ್ಲಿ ಅಂದರೆ ಯಾವುದೇ ಒಂದು ನಗರದಲ್ಲಿ 10 ವರ್ಷ ಸತತವಾಗಿ ಕಾರ್ಯನಿರ್ವಹಿಸಿದ ಶಿಕ್ಷಕರನ್ನು ಬಿ ಅಥವಾ ಸಿ ವಲಯಗಳಿಗೆ, ಅಂದರೆ ಹಳ್ಳಿಗಳಿಗೆ ವರ್ಗಾವಣೆ ಮಾಡಲಾಗುತ್ತದೆ. ಹಾಗೆಯೇ, ಸಿ ವಲಯದಲ್ಲಿ ಕೆಲಸ ಮಾಡಿದ ಶಿಕ್ಷಕರನ್ನು ಎ ವಲಯಕ್ಕೂ ವರ್ಗಾವಣೆ ಮಾಡಲಾಗುತ್ತದೆ.

ಶಿಕ್ಷಕರ ಸಂಘದಿಂದ ಅಭಿನಂದನೆ

ವಲಯವಾರು ವರ್ಗಾವಣೆಯನ್ನು ಕೈಬಿಟ್ಟು, ಕೋರಿಕೆಯ ವರ್ಗಾವಣೆಯ ವೇಳಾಪಟ್ಟಿ ಪ್ರಕಟಿಸಿದ ಕಾರಣ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಕೆ.ನಾಗೇಶ್‌ ಅವರು ಸಂಘದ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸಂಘದ ಪರವಾಗಿ ರಾಜ್ಯಾಧ್ಯಕ್ಷ ಕೆ.ನಾಗೇಶ್‌ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ವರ್ಗಾವಣೆಗೆ ಕಾಯುತ್ತಿರುವ ಶಿಕ್ಷಕರು

ಕೌಟುಂಬಿಕ, ಶೈಕ್ಷಣಿಕ ಇತ್ಯಾದಿ ಕಾರಣಗಳಿಂದ ರಾಜ್ಯಾದ್ಯಂತ ಸಾವಿರಾರು ಶಿಕ್ಷಕರು ವರ್ಗಾವಣೆಯನ್ನು ಎದುರು ನೋಡುತ್ತಿದ್ದಾರೆ. ಪ್ರತಿ ಬಾರಿಯೂ ರಾಜ್ಯ ಸರ್ಕಾರ, ಶೈಕ್ಷಣಿಕ ವರ್ಷ ಆರಂಭಕ್ಕೆ ಮೊದಲೇ ವರ್ಗಾವಣೆ ಪ್ರಕ್ರಿಯೆ ಮುಗಿಸಲಾಗುವುದು ಎಂದು ಹೇಳುತ್ತದೆ. ಆದರೆ ನಾನಾ ಕಾರಣಗಳಿಂದ ಇದು ವಿಳಂಬವಾಗುತ್ತಲೇ ಇತ್ತು. ಈಗಾಗಲೇ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗಿವೆ. ಆದರೆ ಇನ್ನೂ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮುಗಿದಿಲ್ಲ. ಈ ತಿಂಗಳಲ್ಲಿ ಕೌನ್ಸೆಲಿಂಗ್‌ ಆರಂಭವಾದರೂ ಈ ಪ್ರಕ್ರಿಯೆ ಅಂತಿಮವಾಗಿ ಮುಗಿಯಲು ಕನಿಷ್ಠ ಇನ್ನೆರಡು ತಿಂಗಳು ಬೇಕಾಗಬಹುದು.

ದ್ವಿಭಾಷಾ ನೀತಿಗೂ ಅನುಮತಿ

ಶಿಕ್ಷಕರ ವರ್ಗಾವಣೆ ಜತೆಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ನೀತಿಯ ಜಾರಿಗೂ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಒಂದು ಸಾವಿರ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಮಾಧ್ಯಮ ತರಗತಿಗಳ ಜತೆಗೆ ಆಂಗ್ಲ ಮಾಧ್ಯಮ ತರಗತಿಗಳನ್ನೂ ಪ್ರಾರಂಭಿಸಬೇಕು ಎಂಬುದಾಗಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಇದರಿಂದಾಗಿ ರಾಜ್ಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ದ್ವಿಭಾಷಾ ನೀತಿ ಜಾರಿಗೆ ಬರಲಿದೆ.

ರಾಜ್ಯದ ಒಂದು ಸಾವಿರ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ ಜಾರಿಗೆ ತರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು. ಹಾಗೆಯೇ, ದ್ವಿಭಾಷಾ ನೀತಿ ಅನ್ವಯ ತರಗತಿಗಳನ್ನು ಆರಂಭಿಸುವ ಕುರಿತು ಆಯಾ ಜಿಲ್ಲೆಗಳಲ್ಲಿರುವ ಶಾಲೆಗಳ ಪಟ್ಟಿಯನ್ನೂ ರಾಜ್ಯ ಸರ್ಕಾರವು ಬಿಡುಗಡೆ ಮಾಡಿದೆ.

ಇದನ್ನೂ ಓದಿ: Raichur News: ಸರ್ಕಾರಿ ಶಾಲೆಗೆ ದಾಖಲಾದ ಮಕ್ಕಳ ಹೆಸರಿನಲ್ಲಿ 500 ರೂ. ಠೇವಣಿ!

Continue Reading

T20 ವಿಶ್ವಕಪ್

T20 World Cup 2024: ಭಾರತ-ಕೆನಡಾ ಪಂದ್ಯ ಮಳೆಯಿಂದ ರದ್ದು; ಅಗ್ರಸ್ಥಾನಿಯಾಗಿ ರೋಹಿತ್‌ ಪಡೆ ಸೂಪರ್‌ 8ಕ್ಕೆ ಎಂಟ್ರಿ

T20 World Cup 2024: ಕಳೆದ ಹಲವು ದಿನಗಳಿಂದ ಲಾಡರ್‌ಹಿಲ್‌ನಲ್ಲಿ ಭಾರಿ ಮಳೆಯಾಗುತ್ತಿದ್ದು, ಶುಕ್ರವಾರ ನಡೆಯಬೇಕಿದ್ದ ಎರಡೂ ಪಂದ್ಯಗಳು ರದ್ದಾಗಿದ್ದವು. ಭಾರತ ಹಾಗೂ ಕೆನಡಾ ಪಂದ್ಯಕ್ಕೂ ಮಳೆಯ ಭೀತಿ ಇತ್ತು. ಹವಾಮಾನ ಇಲಾಖೆಯೂ ಎಚ್ಚರಿಕೆ ನೀಡಿತ್ತು. ಅದರಂತೆ, ಕೊನೆಗೆ ಟಾಸ್‌ ಕೂಡ ನಡೆಯದೆ ಪಂದ್ಯವನ್ನು ರದ್ದುಗೊಳಿಸಿ, ಅಂಕಗಳನ್ನು ಸಮನಾಗಿ ಹಂಚಿಕೆ ಮಾಡಲಾಗಿದೆ.

VISTARANEWS.COM


on

T20 World Cup 2024
Koo

ಲಾಡರ್‌ಹಿಲ್‌ (ಯುಎಸ್‌ಎ): ಅಮೆರಿಕದಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್‌ (T20 World Cup 2024) ಟೂರ್ನಿಯ ಗ್ರೂಪ್‌ ಹಂತದ ಭಾರತ ಹಾಗೂ ಕೆನಡಾ ನಡುವಿನ (India vs Canada Match) ಪಂದ್ಯವು ಒಂದೂ ಎಸೆತ ಕಾಣದೆ ರದ್ದಾಗಿದೆ. ಭಾರಿ ಮಳೆಯಿಂದಾಗಿ ಶನಿವಾರ (ಜೂನ್‌ 15) ಲಾಡರ್‌ಹಿಲ್‌ನಲ್ಲಿರುವ ಮೈದಾನದಲ್ಲಿ ನಡೆಯಬೇಕಿದ್ದ ಪಂದ್ಯವು ರದ್ದಾಯಿತು. ಇದರಿಂದಾಗಿ ಎರಡೂ ತಂಡಗಳಿಗೆ ತಲಾ ಒಂದು ಅಂಕ ಹಂಚಿಕೆ ಮಾಡಲಾಯಿತು. ಗ್ರೂಪ್‌ ಹಂತದಲ್ಲಿ ಒಂದೂ ಪಂದ್ಯ ಸೋಲದ ಭಾರತ ತಂಡವು 7 ಅಂಕಗಳೊಂದಿಗೆ ಪಾಯಿಂಟ್‌ ಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿ ಸೂಪರ್‌ 8 ಹಂತಕ್ಕೆ ಪ್ರವೇಶ ಪಡೆದಿದೆ.

ಕಳೆದ ಹಲವು ದಿನಗಳಿಂದ ಲಾಡರ್‌ಹಿಲ್‌ನಲ್ಲಿ ಭಾರಿ ಮಳೆಯಾಗುತ್ತಿದ್ದು, ಶುಕ್ರವಾರ ನಡೆಯಬೇಕಿದ್ದ ಎರಡೂ ಪಂದ್ಯಗಳು ರದ್ದಾಗಿದ್ದವು. ಭಾರತ ಹಾಗೂ ಕೆನಡಾ ಪಂದ್ಯಕ್ಕೂ ಮಳೆಯ ಭೀತಿ ಇತ್ತು. ಹವಾಮಾನ ಇಲಾಖೆಯೂ ಎಚ್ಚರಿಕೆ ನೀಡಿತ್ತು. ಅದರಂತೆ, ಕೊನೆಗೆ ಟಾಸ್‌ ಕೂಡ ನಡೆಯದೆ ಪಂದ್ಯವನ್ನು ರದ್ದುಗೊಳಿಸಿ, ಅಂಕಗಳನ್ನು ಸಮನಾಗಿ ಹಂಚಿಕೆ ಮಾಡಲಾಗಿದೆ. ಇದರೊಂದಿಗೆ ಭಾರತ ಹಾಗೂ ಅಮೆರಿಕ ತಂಡವು ಸೂಪರ್‌ 8 ಪ್ರವೇಶಿಸಿವೆ. ಭಾನುವಾರ ಐರ್ಲೆಂಡ್‌ ಹಾಗೂ ಪಾಕಿಸ್ತಾನ ತಂಡಗಳು ಗ್ರೂಪ್‌ ಹಂತದ ಹಾಗೂ ಟೂರ್ನಿಯ ಕೊನೆಯ ಪಂದ್ಯವನ್ನು ಆಡಲಿವೆ.

ಭಾರತ ಹಾಗೂ ಕೆನಡಾ ಪಂದ್ಯವನ್ನು ಆಡಲಿಸಲು ಪ್ರಯತ್ನ ಮಾಡಲಾಯಿತು. ಹಲವು ಬಾರಿ ಪಿಚ್‌ ಹಾಗೂ ಮೈದಾನವನ್ನು ಪರಿಶೀಲನೆ ನಡೆಸಲಾಯಿತು. ಕೊನೆಗೆ ಐದು ಓವರ್‌ಗಳ ಪಂದ್ಯವನ್ನಾದರೂ ಆಡಿಸಲು ಪ್ರಯತ್ನಿಸಲಾಯಿತು. ಆದರೆ, ಮಳೆ ಕಡಿಮೆಯಾದರೂ ಮೈದಾನದಲ್ಲಿ ತೇವಾಂಶ ರದ್ದಿರುವ ಕಾರಣ ಪಂದ್ಯವನ್ನು ರದ್ದುಗೊಳಿಸಲಾಯಿತು. ಸೂಪರ್‌ 8ರಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಒಂದೇ ಗ್ರೂಪ್‌ನಲ್ಲಿವೆ. ಜೂನ್‌ 19ರಿಂದ ಸೂಪರ್‌ 8 ಪಂದ್ಯಗಳು ಆರಂಭವಾಗಲಿವೆ. ಸೂಪರ್‌ 8 ಪಂದ್ಯಗಳು ವೆಸ್ಟ್‌ ಇಂಡೀಸ್‌ನಲ್ಲಿ ನಡೆಯಲಿವೆ.

ಉತ್ತಮ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ವಿಭಾಗವನ್ನು ಹೊಂದಿದ್ದರೂ ಸಂಘಟಿತ ಪ್ರದರ್ಶನ ನೀಡುವಲ್ಲಿ ವಿಫಲವಾಗುವ ಜತೆಗೆ ಅದೃಷ್ಟದಾಟದಲ್ಲೂ ಹಿನ್ನಡೆ ಅನುಭವಿಸಿದ ಪಾಕಿಸ್ತಾನ ಕ್ರಿಕೆಟ್‌ ತಂಡವು ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್‌ನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್‌ ಟೂರ್ನಿಯಿಂದಲೇ ಹೊರಬಿದ್ದಿದೆ. ಸೂಪರ್‌ 8ರ ರೇಸ್‌ನಲ್ಲಿ ಹಿನ್ನಡೆ ಅನುಭವಿಸಿದ ಬಾಬರ್‌ ಅಜಂನೇತೃತ್ವದ ತಂಡವು ಟೂರ್ನಿಯಿಂದ ಹೊರಬಿದ್ದಿದ್ದು, ಪಾಕ್‌ ಕ್ರಿಕೆಟ್‌ ಅಭಿಮಾನಿಗಳು ತಂಡದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: T20 World Cup 2024: ಟಿ-20 ವಿಶ್ವಕಪ್‌ನಿಂದ ಪಾಕಿಸ್ತಾನ ಔಟ್;‌ ಸೂಪರ್‌ 8ಕ್ಕೆ ಲಗ್ಗೆ ಇಟ್ಟ ಅಮೆರಿಕ

Continue Reading

ಪ್ರಮುಖ ಸುದ್ದಿ

R Ashok: ಟ್ಯಾಂಕರ್ ಸ್ವಚ್ಛಗೊಳಿಸಲೂ ಸಿದ್ದು ಸರ್ಕಾರದ ಬಳಿ ಹಣವಿಲ್ಲ; ಆರ್. ಅಶೋಕ್‌ ಆಕ್ರೋಶ

R Ashok: ಎಟಿಎಂ ಕಾಂಗ್ರೆಸ್ ಸರ್ಕಾರ ಹೈಕಮಾಂಡ್‌ಗೆ ಹಣ ಕಳುಹಿಸಲು ಟ್ಯಾಂಕರ್ ಮಾಫಿಯಾವನ್ನು ಬಳಸಿಕೊಂಡಿದೆ ಎಂದು ಆರೋಪಿಸಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌, ಕಾಂಗ್ರೆಸ್ ಸರ್ಕಾರ ಗ್ರಾಮೀಣಾಭಿವೃದ್ಧಿ ಇಲಾಖೆಯ ಅನುದಾನದಲ್ಲಿ ಶೇ.25 ರಷ್ಟು ಕಡಿತ ಮಾಡಿ ಮೂಲಸೌಕರ್ಯ ಸಿಗದಂತೆ ಮಾಡಿದೆ. ಇದರ ಪ್ರತಿಫಲವಾಗಿ ಜನರಿಗೆ ಸರಿಯಾಗಿ ನೀರು ದೊರೆಯುತ್ತಿಲ್ಲ. ಸಿಎಂ ಸೂಚನೆಗೆ ಅಧಿಕಾರಿಗಳು ಬೆಲೆ ನೀಡದೆ ಕೈ ಚೆಲ್ಲಿದ್ದಾರೆ. ಗುತ್ತಿಗೆದಾರರು ಕೆಲಸ ಮಾಡುತ್ತಿಲ್ಲ ಎಂದು ದೂರಿದ್ದಾರೆ.

VISTARANEWS.COM


on

Government has no money to clean tankers no ability to provide clean drinking water says R Ashok
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ವರುಣ ಕ್ಷೇತ್ರದಲ್ಲೇ ಜನರು ಕಲುಷಿತ ನೀರು ಕುಡಿದು ಸತ್ತಿದ್ದಾರೆ. ಟ್ಯಾಂಕರ್‌ಗಳನ್ನು ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ. ಜನರಿಗೆ ಶುದ್ಧ ಕುಡಿಯುವ ನೀರು ನೀಡುವ ಯೋಗ್ಯತೆ ಕೂಡ ಈ ಸರ್ಕಾರಕ್ಕಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ (R Ashok) ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೂಗಿನಡಿ ಅವರ ಕ್ಷೇತ್ರ ವರುಣದಲ್ಲಿ ಕಲುಷಿತ ನೀರನ್ನು ಜನರು ಸೇವಿಸಿ ಸಾವಿಗೀಡಾಗಿದ್ದಾರೆ. ಅಂದರೆ ಮುಖ್ಯಮಂತ್ರಿಗಳಿಗೆ ಕುಡಿಯುವ ನೀರು ನೀಡುವ ಯೋಗ್ಯತೆ ಇಲ್ಲ. ಈಗ ತುಮಕೂರಿನಲ್ಲೂ ಕಲುಷಿತ ನೀರು ಸೇವಿಸಿ ಆರು ಜನರ ಸಾವಾಗಿದೆ. ಇದಕ್ಕೆ ಜಿಲ್ಲಾಧಿಕಾರಿಯನ್ನು ಕೇಳಿದರೆ ಮೂತ್ರಪಿಂಡ ಸಮಸ್ಯೆ ಎಂದು ಕಾರಣ ಹೇಳಿದ್ದಾರೆ. ಆರೋಗ್ಯ ಸಮಸ್ಯೆ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಅದನ್ನೇ ಸಬೂಬು ಮಾಡಬಾರದು. ಈ ಕುರಿತು ವರದಿ ಕೇಳಿದ್ದೇನೆ ಎಂದು ತಿಳಿಸಿದರು‌.

ಇದನ್ನೂ ಓದಿ: Karnataka Weather : ದಕ್ಷಿಣ ಒಳನಾಡು, ಮಲೆನಾಡಲ್ಲಿ ತಗ್ಗಿದ ಮಳೆ; ಕರಾವಳಿಯಲ್ಲಿ ಮುಂದುವರಿಯಲಿದೆ ಅಬ್ಬರ

ಕೊಪ್ಪಳದಲ್ಲಿ ಕೂಡ ಜನರು ಕಲುಷಿತ ನೀರು ಸೇವಿಸಿ ಆಸ್ಪತ್ರೆ ಸೇರಿದ್ದಾರೆ. ಕುಡಿಯುವ ನೀರಿನ ಟ್ಯಾಂಕರ್‌ಗಳನ್ನು ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ‌‌. ಇದರಿಂದಲೇ ಜನರು ಕಲುಷಿತ ನೀರು ಕುಡಿಯಬೇಕಾಗಿದೆ. ಶಾಸಕರು ಅನುದಾನ ಕೇಳಿದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಬಾಯ್ಮುಚ್ಚಿಕೊಂಡು ಸುಮ್ಮನಿರಿ ಎಂದಿದ್ದಾರೆ. ಜನರ ಸಾವಿಗೆ ಸರ್ಕಾರದ ನಿರ್ಲಕ್ಷ್ಯವೇ ನೇರ ಕಾರಣ ಎಂದು ಆರೋಪಿಸಿದರು.

ಅಧಿಕಾರಿಗಳ ಬಳಿ ಈ ಬಗ್ಗೆ ಕಾರಣ ಕೇಳಿದರೆ ಜಾತ್ರೆಯಲ್ಲಿ ಅವಾಂತರವಾಗಿದೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿಯವರು 15 ಬಾರಿ ಬಜೆಟ್ ಮಂಡಿಸಿದರೂ ಕುಡಿಯುವ ನೀರು ಕೊಡಲು ಸಾಧ್ಯವಾಗಿಲ್ಲ. ನಾನು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದರು.

ಟ್ಯಾಂಕರ್ ಮಾಫಿಯಾ

ಎಟಿಎಂ ಕಾಂಗ್ರೆಸ್ ಸರ್ಕಾರ ಹೈಕಮಾಂಡ್‌ಗೆ ಹಣ ಕಳುಹಿಸಲು ಟ್ಯಾಂಕರ್ ಮಾಫಿಯಾವನ್ನು ಬಳಸಿಕೊಂಡಿದೆ. ಕಾಂಗ್ರೆಸ್ ಸರ್ಕಾರ ಗ್ರಾಮೀಣಾಭಿವೃದ್ಧಿ ಇಲಾಖೆಯ ಅನುದಾನದಲ್ಲಿ ಶೇ.25 ರಷ್ಟು ಕಡಿತ ಮಾಡಿ ಮೂಲಸೌಕರ್ಯ ಸಿಗದಂತೆ ಮಾಡಿದೆ. ಇದರ ಪ್ರತಿಫಲವಾಗಿ ಜನರಿಗೆ ಸರಿಯಾಗಿ ನೀರು ದೊರೆಯುತ್ತಿಲ್ಲ. ಸಿಎಂ ಸೂಚನೆಗೆ ಅಧಿಕಾರಿಗಳು ಬೆಲೆ ನೀಡದೆ ಕೈ ಚೆಲ್ಲಿದ್ದಾರೆ. ಗುತ್ತಿಗೆದಾರರು ಕೆಲಸ ಮಾಡುತ್ತಿಲ್ಲ ಎಂದು ದೂರಿದರು.

ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರೂ ಅದನ್ನು ಸಾಬೀತುಪಡಿಸಲು ಕಾಂಗ್ರೆಸ್‌ಗೆ ಸಾಧ್ಯವಾಗಿಲ್ಲ ಎಂದರು.

ಇದನ್ನೂ ಓದಿ: ಕರ್ನಾಟಕದ ಶ್ರುತಿ ಬಿ.ಆರ್, ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗರಿ

ದ್ವೇಷದ ರಾಜಕಾರಣ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿಚಾರದಲ್ಲಿ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ. ಡಿ.ಕೆ.ಶಿವಕುಮಾರ್ ಅವರಂತೂ ಇದನ್ನು ನೇರವಾಗಿ ಒಪ್ಪಿಕೊಂಡಿದ್ದಾರೆ. ಕರ್ನಾಟಕದಲ್ಲಿ ದ್ವೇಷ ರಾಜಕಾರಣ ಈವರೆಗೆ ಇರಲಿಲ್ಲ. ದೂರುದಾರರು ಮಾನಸಿಕ ಅಸ್ವಸ್ಥೆ ಎಂದು ಗೃಹ ಸಚಿವರು ಹೇಳಿದ್ದರೂ, ಚುನಾವಣೆಯ ಬಳಿಕ ರಾಜಕೀಯ ದ್ವೇಷ ಸಾಧಿಸಲಾಗಿದೆ ಎಂದು ದೂರಿದರು.

Continue Reading

ಪ್ರಮುಖ ಸುದ್ದಿ

Sapthami Gowda: ಯುವ ಪತ್ನಿ ವಿರುದ್ಧ ಸಪ್ತಮಿಗೌಡ ಮಾನಹಾನಿ ಕೇಸ್; ನಟಿ ಹೆಸರು ಎಲ್ಲಿಯೂ ಬಳಸದಂತೆ ಕೋರ್ಟ್ ಆದೇಶ

Sapthami Gowda: ವಕೀಲ ಶಂಕರಪ್ಪ ಅವರ ಮೂಲಕ ನಟಿ ಸಪ್ತಮಿಗೌಡ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಈಗ ಮಾಡಿರುವ ಆರೋಪಗಳಿಂದ ಉಂಟಾದ ಮಾನಹಾನಿ ಸಂಬಂಧ ಶ್ರೀದೇವಿಗೆ ನೋಟಿಸ್ ನೀಡಿದ್ದು, 10 ಕೋಟಿ ಪರಿಹಾರ ನೀಡುವಂತೆ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

VISTARANEWS.COM


on

Sapthami Gowda
Koo

ಬೆಂಗಳೂರು: ನಟ ಯುವ ರಾಜ್‌ಕುಮಾರ್‌ ಪತ್ನಿ ಶ್ರೀದೇವಿ ಬೈರಪ್ಪ ವಿರುದ್ಧ ನಟಿ ಸಪ್ತಮಿ ಗೌಡ ಮಾನಹಾನಿ ಕೇಸ್ ದಾಖಲಿಸಿದ್ದಾರೆ. ವಕೀಲ ಶಂಕರಪ್ಪ ಅವರ ಮೂಲಕ ನಟಿ (Sapthami Gowda) ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ನಟಿ ಹೆಸರು ಎಲ್ಲಿಯೂ ಬಳಸದಂತೆ ಕೋರ್ಟ್ ಆದೇಶ ನೀಡಿದೆ.

ಯುವ ಮತ್ತು ಶ್ರೀದೇವಿ ಬೈರಪ್ಪ ನಡುವಿನ ಆರೋಪ-ಪ್ರತ್ಯಾರೋಪಗಳಲ್ಲಿ ಸಪ್ತಮಿಗೌಡ ಹೆಸರು ಮುನ್ನೆಲೆಗೆ ಬಂದ ಹಿನ್ನೆಲೆಯಲ್ಲಿ ತನ್ನ ವೃತ್ತಿ ಜೀವನದ ಪರಿಣಾಮ ಬೀರಲಿದೆ ಎಂದು ಸಪ್ತಮಿ ಗೌಡ ಮಾನಹಾನಿ ಕೇಸ್ ದಾಖಲಿಸಿದ್ದಾರೆ. ಹೀಗಾಗಿ ಇನ್ಮುಂದೆ ನಟಿಯ ಬಗ್ಗೆ ಎಲ್ಲಿಯೂ ಮಾತನಾಡದಂತೆ ಲೀಗಲ್ ನೋಟಿಸ್ ನೀಡಲಾಗಿದೆ ಹಾಗೂ ಈಗ ಮಾಡಿರುವ ಆರೋಪಗಳಿಂದ ಉಂಟಾದ ಮಾನಹಾನಿ ಸಂಬಂಧ ಶ್ರೀದೇವಿಗೆ ನೋಟಿಸ್ ನೀಡಿದ್ದು, 10 ಕೋಟಿ ರೂ. ಪರಿಹಾರ ನೀಡುವಂತೆ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದೇ ವೇಳೆ ನಟಿ ಸಪ್ತಮಿಗೌಡ ಬಗ್ಗೆ ಎಲ್ಲಿಯೂ ಪ್ರಸ್ತಾಪಿಸದಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ಸಿಟಿ ಸಿವಿಲ್ ಕೋರ್ಟ್, ನಟಿ ಹೆಸರು ಎಲ್ಲಿಯೂ ಬಳಸದಂತೆ ಕೋರ್ಟ್ ಆದೇಶ ನೀಡಿದೆ.

ಇದನ್ನೂ ಓದಿ | Yuva Rajkumar: ‘ಅನೈತಿಕ ಸಂಬಂಧ’ ಎಂದು ಯುವ ಪರ ವಕೀಲ ಆರೋಪ; ತಿರುಗೇಟು ಕೊಟ್ಟ ಶ್ರೀದೇವಿ!

ಡಾ.ರಾಜ್‌ಕುಮಾರ್‌ ವಂಶದ ಕುಡಿ, ನಟ ಯುವ ರಾಜ್‌ಕುಮಾರ್‌ (Yuva Rajkumar) ಅವರು ಪತ್ನಿ ಶ್ರೀದೇವಿ ಭೈರಪ್ಪ (Sridevi Byrappa) ಅವರಿಗೆ ಡಿವೋರ್ಸ್ ನೋಟಿಸ್‌ ನೀಡಿದ ಬಳಿಕ ಇಬ್ಬರ ನಡುವಿನ ಆರೋಪ- ಪ್ರತ್ಯಾರೋಪಗಳು ಜಾಸ್ತಿಯಾಗಿವೆ. ಅದರಲ್ಲೂ, ಅನೈತಿಕ ಸಂಬಂಧಗಳ ಆರೋಪಗಳು ಇನ್ನೂ ಹೆಚ್ಚಾಗಿವೆ. “ಶ್ರೀದೇವಿ ಭೈರಪ್ಪ ಅವರು ರಾಧಯ್ಯ ಎಂಬ ವ್ಯಕ್ತಿ ಜತೆ ಅನೈತಿಕ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಸುದ್ದಿಗೋಷ್ಠಿ ನಡೆಸಿ ಆರೋಪಿಸಿದ್ದರು. ಇನ್ನು, ನಟನ ಲೀಗಲ್‌ ನೋಟಿಸ್‌ಗೆ ಉತ್ತರಿಸಿದ್ದ ಶ್ರೀದೇವಿ ಭೈರಪ್ಪ, “ಯುವ ರಾಜ್‌ಕುಮಾರ್‌ ನಟಿ ಸಪ್ತಮಿ ಗೌಡ (Sapthami Gowda) ಜತೆ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಆರೋಪಿಸಿದ್ದರು. ಆ ಮೂಲಕ ಡಿವೋರ್ಸ್‌ ಪ್ರಕರಣವು ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿತ್ತು

ನಟ ಯುವ ರಾಜ್‌ಕುಮಾರ್‌ ಕಳುಹಿಸಿದ ಲೀಗಲ್‌ ನೋಟಿಸ್‌ಗೆ ಮರುತ್ತರ ನೀಡಿದ್ದ ಶ್ರೀದೇವಿ ಭೈರಪ್ಪ, ಹಲವು ಆರೋಪಗಳನ್ನು ಮಾಡಿದ್ದರು. “ಸಪ್ತಮಿ ಗೌಡ ಜತೆಗೆ ಯುವ ರಾಜ್‌ಕುಮಾರ್‌ ಒಂದು ವರ್ಷದಿಂದ ಸಂಬಂಧ ಹೊಂದಿದ್ದಾರೆ. ಇದೇ ಕಾರಣಕ್ಕಾಗಿ ನನ್ನನ್ನು ಮನೆಯಿಂದ ಹೊರಹಾಕಲು ಪ್ರಯತ್ನಿಸಿದರು. ಪ್ರೀತಿಸಿ ಮದುವೆಯಾದ ಯುವ ರಾಜ್‌ಕುಮಾರ್‌, ಬಳಿಕ ಸಪ್ತಮಿ ಗೌಡ ಹಿಂದೆ ಬಿದ್ದಿದ್ದಾರೆ” ಎಂಬುದಾಗಿ ಶ್ರೀದೇವಿ ಭೈರಪ್ಪ ಆರೋಪಿಸಿದ್ದರು.

ಇದನ್ನೂ ಓದಿ | Sapthami Gowda: ಲವ್‌ ಬ್ರೇಕಪ್‌ ಆಗಿದೆ, ಬಾಯ್‌ಫ್ರೆಂಡ್‌ ನನ್ನ ಜತೆ ಇಲ್ಲ ಎಂದ ಸಪ್ತಮಿ ಗೌಡ!

“ನಾನು ಹಾಗೂ ಯುವ ರಾಜ್‌ಕುಮಾರ್‌ 5 ವರ್ಷ ಪ್ರೀತಿಸಿದ್ದೆವು. 2019ರಲ್ಲಿ ಹಿಂದು ಸಂಪ್ರದಾಯದಂತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆ ಮಾಡಿಕೊಂಡೆವು. ಮದುವೆಗೂ ಮುಂಚೆ ಯುವ ರಾಜ್‌ಕುಮಾರ್‌ ನಿರುದ್ಯೋಗಿ ಆಗಿದ್ದರು. ಅವರಿಗೆ ಕರಿಯರ್‌ ಬಗ್ಗೆ ಫೋಕಸ್‌ ಇರಲಿಲ್ಲ. ಅವರ ಕುಟುಂಬವು ಕೂಡ ಆರ್ಥಿಕವಾಗಿ ಸ್ಟೇಬಲ್‌ ಇರಲಿಲ್ಲ. ಇದಾದ ಬಳಿಕ ಯುವ ರಾಜ್‌ಕುಮಾರ್‌ ಸಪ್ತಮಿ ಗೌಡ ಹಿಂದೆ ಬಿದ್ದರು. ನಟಿಯನ್ನು ಮನೆಗೆ ಕರೆದುಕೊಂಡು ಬರುತ್ತಿದ್ದರು. ಸಪ್ತಮಿ ಗೌಡ ಜತೆ ಹೋಟೆಲ್‌ನಲ್ಲಿ ಇರುವಾಗಲೇ ಯುವ ಸಿಕ್ಕಿಬಿದ್ದಿದ್ದರು. ಸಂಬಂಧ ಗೊತ್ತಾದ ಮೇಲೆ ನನ್ನ ಮೇಲೆ ಆರೋಪ ಮಾಡಲು ಶುರುವಿಟ್ಟುಕೊಂಡರು” ಎಂಬುದಾಗಿ ಶ್ರೀದೇವಿ ಆರೋಪಿಸಿದ್ದರು. ಹೀಗಾಗಿ ಇದೀಗ ದಂಪತಿ ನಡುವಿನ ವಿವಾದದಲ್ಲಿ ತಮ್ಮ ಹೆಸರನ್ನು ತರದಂತೆ ಸಪ್ತಮಿ ಗೌಡ ನೋಟಿಸ್‌ ನೀಡಿದ್ದಾರೆ.

Continue Reading
Advertisement
Teachers Transfer
ಪ್ರಮುಖ ಸುದ್ದಿ3 hours ago

Teachers Transfer: ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ; ಕಡ್ಡಾಯ, ಹೆಚ್ಚುವರಿ‌ ಟ್ರಾನ್ಸ್‌ಫರ್ ಇಲ್ಲ, ಕೋರಿಕೆ ವರ್ಗ ಮಾತ್ರ

T20 World Cup 2024
T20 ವಿಶ್ವಕಪ್4 hours ago

T20 World Cup 2024: ಭಾರತ-ಕೆನಡಾ ಪಂದ್ಯ ಮಳೆಯಿಂದ ರದ್ದು; ಅಗ್ರಸ್ಥಾನಿಯಾಗಿ ರೋಹಿತ್‌ ಪಡೆ ಸೂಪರ್‌ 8ಕ್ಕೆ ಎಂಟ್ರಿ

Hiriya vidwamsa Sagri Raghavendra Upadhyaya passed away
ಶ್ರದ್ಧಾಂಜಲಿ5 hours ago

Sagri Raghavendra Upadhyaya: ಹಿರಿಯ ವಿದ್ವಾಂಸ ಸಗ್ರಿ ರಾಘವೇಂದ್ರ ಉಪಾಧ್ಯಾಯ ನಿಧನ

Government has no money to clean tankers no ability to provide clean drinking water says R Ashok
ಪ್ರಮುಖ ಸುದ್ದಿ6 hours ago

R Ashok: ಟ್ಯಾಂಕರ್ ಸ್ವಚ್ಛಗೊಳಿಸಲೂ ಸಿದ್ದು ಸರ್ಕಾರದ ಬಳಿ ಹಣವಿಲ್ಲ; ಆರ್. ಅಶೋಕ್‌ ಆಕ್ರೋಶ

Union Minister Pralhad Joshi statement about increase in petrol and diesel prices in the state
ಕರ್ನಾಟಕ6 hours ago

Pralhad Joshi: ತೈಲ ಬೆಲೆ ಏರಿಸಿ ಕರ್ನಾಟಕದವರ ಕೈಗೆ ಗ್ಯಾರಂಟಿ ಚೊಂಬು ಕೊಟ್ಟ ಕಾಂಗ್ರೆಸ್: ಪ್ರಲ್ಹಾದ್‌ ಜೋಶಿ

Bribe Case
ಕ್ರೈಂ6 hours ago

Bribe Case: ಕಸ ಗುಡಿಸುತ್ತಲೇ ಉನ್ನತ ಹುದ್ದೆಗೇರಿದ್ದ ಮಹಿಳೆ ಕಸ ಗುಡಿಸುವವರಿಂದಲೇ ಲಂಚ ಸ್ವೀಕರಿಸುವಾಗ ಬಂಧನ!

Minister dr G Parameshwar inaugurated the hasiru grama programme in Koratagere
ತುಮಕೂರು6 hours ago

Koratagere News: ಹಸಿರೇ ಉಸಿರು, ಹಸಿರಿದ್ದೆಡೆ ಮಾನವನ ಸರ್ವಾಂಗಿಣ ಪ್ರಗತಿ: ಸಚಿವ ಜಿ. ಪರಮೇಶ್ವರ್‌

Giorgia Meloni
ವಿದೇಶ6 hours ago

Giorgia Meloni: ಇಟಲಿ ಪ್ರಧಾನಿ ಮೆಲೋನಿ ಕಾರ್ಮಿಕ ಮಹಿಳೆಯ ಮಗಳು! ಅವರ ಕುರಿತ ಕುತೂಹಲಕರ ಸಂಗತಿಗಳಿವು

Sapthami Gowda
ಪ್ರಮುಖ ಸುದ್ದಿ6 hours ago

Sapthami Gowda: ಯುವ ಪತ್ನಿ ವಿರುದ್ಧ ಸಪ್ತಮಿಗೌಡ ಮಾನಹಾನಿ ಕೇಸ್; ನಟಿ ಹೆಸರು ಎಲ್ಲಿಯೂ ಬಳಸದಂತೆ ಕೋರ್ಟ್ ಆದೇಶ

Gold Heist
ವಿದೇಶ6 hours ago

Gold Heist: ಜ್ಯುವೆಲರಿ ಶಾಪ್‌ಗೆ ನುಗ್ಗಿ ಚಿನ್ನ ಕದ್ದ 20 ಕಳ್ಳರು; ಸಿನಿಮಾ ಸ್ಟೈಲಲ್ಲೇ ದರೋಡೆ ಮಾಡಿದ ವಿಡಿಯೊ ಇಲ್ಲಿದೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ12 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 day ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು1 day ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು1 day ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ1 day ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ5 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌