ವಿಸ್ತಾರ ಸಂಪಾದಕೀಯ: ಪೊಲೀಸರ ಹೊಟ್ಟೆಯ ಬೊಜ್ಜು ಮಾತ್ರವಲ್ಲ, ಅಪರಾಧ ಪ್ರಮಾಣವೂ ಕರಗಲಿ - Vistara News

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಪೊಲೀಸರ ಹೊಟ್ಟೆಯ ಬೊಜ್ಜು ಮಾತ್ರವಲ್ಲ, ಅಪರಾಧ ಪ್ರಮಾಣವೂ ಕರಗಲಿ

ಪೊಲೀಸರು ಹೊಟ್ಟೆ ಕರಗಿಸಲಿ ಬಿಡಲಿ, ಅಪರಾಧದ ಪ್ರಮಾಣವನ್ನು ಕರಗಿಸಬೇಕಾದುದಂತೂ ಅತ್ಯಗತ್ಯ. ನೂತನ ಪೊಲೀಸ್ ನಿರ್ದೇಶಕರು ಪೊಲೀಸರ ಹೊಟ್ಟೆ ಕರಗಿಸುವುದರ ಜತೆಗೆ, ಅಪರಾಧ ಪ್ರಮಾಣ ಕರಗಿಸುವ ನಿಟ್ಟಿನಲ್ಲೂ ಹರಿತವಾದ ಯೋಜನೆ ರೂಪಿಸಬೇಕಿದೆ.

VISTARANEWS.COM


on

Uttar Pradesh Police
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿರುವ ಅಲೋಕ್ ಮೋಹನ್ ಅವರು, ಹಿರಿಯ ಅಧಿಕಾರಿಗಳ ಮೊದಲ ಸಭೆಯಲ್ಲಿ ಪೊಲೀಸರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಇನ್ನು ಮುಂದೆ ಪೊಲೀಸರು ಸೋಮಾರಿಗಳಾಗುವಂತಿಲ್ಲ, ಹೊಟ್ಟೆ ಬೆಳೆಸಿಕೊಳ್ಳುವಂತಿಲ್ಲ. ಪೊಲೀಸರ ಹೊಟ್ಟೆಯ ಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳು ನಿಗಾ ಇರಿಸಬೇಕು ಎಂದು ಸೂಚನೆ ಕೊಟ್ಟಿದ್ದಾರೆ. ರೌಡಿಸಂ ಮಟ್ಟ ಹಾಕುವುದು, ಜನಸ್ನೇಹಿ ಪೊಲೀಸಿಂಗ್‌, ಡ್ರಗ್ಸ್ ಜಾಲ ನಿಯಂತ್ರಣ, ಎಸಿಪಿಗಳಿಂದ ಪ್ರತಿದಿನ ಸ್ಟೇಶನ್‌ಗಳಿಗೆ ಭೇಟಿ ಇತ್ಯಾದಿ ಹಲವು ವಿಚಾರಗಳನ್ನು ಡಿಜಿ ಪ್ರಸ್ತಾಪಿಸಿದ್ದಾರೆ. ಇದರಲ್ಲಿ ಮುಖ್ಯವಾದುದು ಪೊಲೀಸರ ಫಿಟ್‌ನೆಸ್‌ ವಿಚಾರ.

ಖಾಕಿ ಬಟ್ಟೆ, ಲಾಠಿ ಮತ್ತು ಟೋಪಿಯಂತೆ ಬೊಜ್ಜು ಹೊಟ್ಟೆ ಕೂಡ ಪೊಲೀಸರ ಅವಿಭಾಜ್ಯ ಅಂಗ ಎಂಬ ಚಿತ್ರಣ ಹಿಂದಿನಿಂದಲೂ ಇದೆ. ಪೊಲೀಸರ ಹೊಟ್ಟೆ ಕರಗಿಸುವ ಪ್ರಯತ್ನ ರಾಮಕೃಷ್ಣ ಹೆಗಡೆ ಸರಕಾರದ ಕಾಲದಿಂದಲೂ ನಡೆಯುತ್ತ ಬಂದಿದೆ. ಆದರೆ ಈವರೆಗೆ ಸಂಪೂರ್ಣ ಯಶ ಸಿಕ್ಕಿಲ್ಲ ಎನ್ನುವುದು ನಮ್ಮ ಬಹುತೇಕ ಪೊಲೀಸರನ್ನು ನೋಡಿದರೆ ಗೊತ್ತಾಗುತ್ತದೆ. ಅಳತೆ ಮೀರಿ ಬೆಳೆದ ಈ ಹೊಟ್ಟೆಯನ್ನಿಟ್ಟುಕೊಂಡು ಈ ಪೊಲೀಸರು ಕಳ್ಳರನ್ನು ಹೇಗೆ ಹಿಡಿಯುತ್ತಾರೋ ಗೊತ್ತಿಲ್ಲ. ಪೊಲೀಸ್‌ ಇಲಾಖೆ ಎಂದರೆ ಸೇನಾಪಡೆಯಷ್ಟೇ ಪ್ರಮುಖವಾದುದು. ಸೇನಾಯೋಧರಿಗೆ ಫಿಟ್‌ನೆಸ್‌ ಎಷ್ಟು ಮುಖ್ಯವೋ ಪೊಲೀಸರಿಗೂ ಅಷ್ಟೇ ಮುಖ್ಯವಾಗಿರಬೇಕು. ಪೊಲೀಸರು ತಮ್ಮ ನೋಟಮಾತ್ರದಿಂದಲೇ ರೌಡಿಗಳಲ್ಲಿ ಮೈಚಳಿ ಮೂಡಿಸುವಂತಿದ್ದರೆ ಅಷ್ಟರ ಮಟ್ಟಿಗೆ ನಮ್ಮ ನಗರಗಳು ಗೂಂಡಾಮುಕ್ತವಾಗುತ್ತವೆ. ಕ್ರೈಮ್‌ಗೆ ತೊಡಗುವವರಿಗೆ ಪೊಲೀಸರ ಅಧಿಕಾರದ ಮಾತ್ರವಲ್ಲ ಫಿಟ್‌ನೆಸ್‌ನ ಭೀತಿಯೂ ಇರಬೇಕು. ಆದರೆ ಪೊಲೀಸರ ಅನಿಯಮಿತ, ಅನಿರ್ದಿಷ್ಟಾವಧಿಯ ಡ್ಯೂಟಿ ಹಾಗೂ ಜೀವನಶೈಲಿಯೇ ಅವರ ಫಿಟ್‌ನೆಸ್‌ಗೆ ಕಂಟಕವಾಗುತ್ತಿದೆ. ಸರಿಯಾದ ಪೌಷ್ಟಿಕವಾದ ಆಹಾರ, ಸಾಕಷ್ಟು ವಿಶ್ರಾಂತಿ, ಕಡ್ಡಾಯ ವ್ಯಾಯಾಮದ ಅಗತ್ಯವೂ ಇವರಿಗಿದೆ. ಡ್ಯೂಟಿಗೆ ಸೇರಿದ ಮೊದಲ ದಿನಗಳಲ್ಲಿ ಫಿಟ್‌ನೆಸ್‌ ಕಾಪಾಡಿಕೊಳ್ಳುವ ಪೊಲೀಸರು ಬರಬರುತ್ತಾ ಅದನ್ನು ಕಳೆದುಕೊಳ್ಳುವುದಕ್ಕೆ ತಡೆ ಹಾಕಲೂ ಇಲಾಖೆ ಯೋಚಿಸಬೇಕು.

ಪೊಲೀಸರು ಹೊಟ್ಟೆ ಕರಗಿಸಲಿ ಬಿಡಲಿ, ಅಪರಾಧದ ಪ್ರಮಾಣವನ್ನು ಕರಗಿಸಬೇಕಾದುದಂತೂ ಅತ್ಯಗತ್ಯ. ನೂತನ ಪೊಲೀಸ್ ನಿರ್ದೇಶಕರು ಪೊಲೀಸರ ಹೊಟ್ಟೆ ಕರಗಿಸುವುದರ ಜತೆಗೆ, ಅಪರಾಧ ಪ್ರಮಾಣ ಕರಗಿಸುವ ನಿಟ್ಟಿನಲ್ಲೂ ಹರಿತವಾದ ಯೋಜನೆ ರೂಪಿಸಬೇಕಿದೆ. ಮುಖ್ಯವಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊಲೆ, ಸುಲಿಗೆ, ಸರಗಳ್ಳತನ, ಸೈಬರ್ ವಂಚನೆ ಮುಂತಾದ ಪಾತಕ ಕೃತ್ಯಗಳು ಅವ್ಯಾಹತವಾಗಿ ನಡೆಯುತ್ತಿವೆ. ರೌಡಿಗಳು ಬೀದಿಬೀದಿಯಲ್ಲಿ ಹೊಡೆದಾಡಿಕೊಳ್ಳುತ್ತಿದ್ದಾರೆ; ಸಾರ್ವಜನಿಕ ಶಾಂತಿಭಂಗ ಮಾಡುತ್ತಿದ್ದಾರೆ. ಕೆಲವು ಪ್ರದೇಶಗಳನ್ನು ಕೆಲವು ರೌಡಿಗಳೇ ಹಂಚಿಕೊಂಡಿರುವಂತಿದೆ. ಕೆ.ಆರ್‌ ಮಾರ್ಕೆಟ್‌ ಮುಂತಾದ ಕಡೆ ರೌಡಿಗಳ ಭೂಗತ ವಸೂಲಿ ಜಗತ್ತು ಕಾರ್ಯಾಚರಿಸುತ್ತಿದೆ ಎಂಬ ಮಾಹಿತಿ ಇದೆ. ಭೂಗತ ಪಾತಕಿಗಳು, ಭೂ ಅತಿಕ್ರಮಣಕಾರರು, ಬೆಟ್ಟಿಂಗ್ ದಂಧೆ, ವೇಶ್ಯಾವಾಟಿಕೆಯಂಥ ಅಕ್ರಮ ದಂಧೆಗಳಿಗೆ ಕೆಲವು ಪೊಲೀಸ್ ಅಧಿಕಾರಿಗಳೇ ತೆರೆಮರೆಯಲ್ಲಿ ಕೈ ಜೋಡಿಸಿರುವುದು ಗುಟ್ಟೇನಲ್ಲ. ಇಂಥ ತೆರೆಮರೆಯ ಪೊಲೀಸ್ ಅಕ್ರಮಗಳಿಗೆ ನೂತನ ಪೊಲೀಸ್ ಮಹಾ ನಿರ್ದೇಶಕರು ಅಂಕುಶ ಹಾಕಬೇಕಿದೆ.

ಇದನ್ನೂ ಓದಿ: DGP Karnataka: ಪೊಲೀಸರ ಬೊಜ್ಜು ಕರಗಿಸಲು ಡಿಜಿಪಿ ಖಡಕ್‌ ಕ್ಲಾಸ್‌; ಫಿಟ್ನೆಸ್‌ ಮಂತ್ರ ಜಪಿಸಿದ ಅಲೋಕ್‌ ಮೋಹನ್

ಕ್ರಿಮಿನಲ್‌ಗಳು ತಮ್ಮ ಅಕೃತ್ಯಗಳಿಗೆ ಆಧುನಿಕ ವಿಧಾನಗಳನ್ನು ಅನುಸರಿಸುತ್ತಿದ್ದಾರೆ; ಹೀಗಾಗಿ ಪೊಲೀಸ್‌ ಇಲಾಖೆಯೂ ಅತ್ಯಾಧುನಿಕವಾಗುವುದು ಅನಿವಾರ್ಯವಾಗಿದೆ. ನಮ್ಮಲ್ಲಿರುವ ಸೈಬರ್‌ ಸೆಲ್‌ನ ಸಿಬ್ಬಂದಿ ಸಂಖ್ಯೆ ಕಡಿಮೆ. ನಡೆಯುತ್ತಿರುವ ಸೈಬರ್‌ ಅಪರಾಧದ ಪ್ರಮಾಣ ನಿಯಂತ್ರಿಸಲು ಇದು ಸಾಲದು. ಮುಂದಿನ ವರ್ಷಗಳಲ್ಲಿ ಇದು ಹಲವು ಪಟ್ಟು ಹೆಚ್ಚಲಿದೆ. ಮಾದಕ ದ್ರವ್ಯದ ಮಾಫಿಯಾ ಗಾಬರಿಯಾಗುವಷ್ಟು ಬೆಳೆದು ನಿಂತಿದೆ. ಇದನ್ನು ತಳದಿಂದಲೇ ನಾಶ ಮಾಡುವುದು ಅಗತ್ಯವಾಗಿದೆ. ನಾಗರಿಕರು ಪೊಲೀಸ್‌ ಠಾಣೆಗೆ ಬರಲು ಹೆದರುವ ವಾತಾವರಣ ಇರಬಾರದು, ಪೊಲೀಸರು ಜನಸ್ನೇಹಿಯಾಗಿ ಕಾರ್ಯಾಚರಿಸಬೇಕು ಎಂಬುದಕ್ಕೆ ಡಿಜಿಯೂ ಒತ್ತು ಕೊಟ್ಟಿದ್ದಾರೆ. ಅವರ ಆಶಯ ನನಸಾಗಲಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಜರ್ಮನಿಯಿಂದ ದುಬೈಗೆ ಹಾರಿದ ಪ್ರಜ್ವಲ್‌ ರೇವಣ್ಣ! ತನಿಖೆ ದಿಕ್ಕು ತಪ್ಪಿಸಿ, ದಿನ ದೂಡಲು ತಂತ್ರ?

Prajwal Revanna Case: ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ ಹಿನ್ನೆಲೆಯಲ್ಲಿ ಲೈಂಗಿಕ ಹಗರಣದ ಪ್ರಮುಖ ಆರೋಪಿ ಪ್ರಜ್ವಲ್‌ ರೇವಣ್ಣ ದುಬೈಗೆ ಹಾರಿರುವ ಶಂಕೆಯನ್ನು ಎಸ್ಐಟಿ ಅಧಿಕಾರಿಗಳು ವ್ಯಕ್ತಪಡಿಸಿದ್ದರು. ಆದರೆ, ಪ್ರಜ್ವಲ್‌ ಬುಧವಾರ (ಮೇ 1) ರಾತ್ರಿಯೇ ಜರ್ಮನಿಯಿಂದ ದುಬೈಗೆ ಬಂದಿಳಿದಿದ್ದಾರೆ. ಎಮಿರೇಟ್ಸ್‌ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದ ಪ್ರಜ್ವಲ್‌ ಅಲ್ಲದೆ, ಪ್ರಜ್ವಲ್ ಹಾಗೂ ಆಪ್ತರ ಮೊಬೈಲ್ ಲೊಕೇಶನ್‌ ಅನ್ನು ಸಹ ಎಸ್ಐಟಿ ಅಧಿಕಾರಿಗಳು ಪತ್ತೆ ಹಚ್ಚುತ್ತಲೇ ಇದ್ದಾರೆ. ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ್ದರಿಂದ ಮತ್ತಷ್ಟು ಸಮಯಾವಕಾಶವನ್ನು ಪಡೆದುಕೊಳ್ಳುವ ಸಲುವಾಗಿ ದುಬೈಗೆ ಹೋಗಿರಬಹುದು ಎಂದು ಹೇಳಲಾಗುತ್ತಿದೆ. ಹೀಗಾಗಿ ಅಲ್ಲಿಂದ ಯಾವಾಗ ಬೇಕಿದ್ದರೂ ಬೆಂಗಳೂರಿಗೆ ಬಂದಿಳಿಯಬಹುದು ಎಂದು ನಿರೀಕ್ಷಿಸಲಾಗುತ್ತಿದೆ.

VISTARANEWS.COM


on

Prajwal Revanna Case Prajwal arrives in Dubai from Germany
Koo

ಬೆಂಗಳೂರು: ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅವರಿಗೆ ಎಸ್ಐಟಿ ಲುಕ್ ಔಟ್ ನೋಟಿಸ್‌ ನೀಡಿದ ಬೆನ್ನಲ್ಲೇ ಅವರು ಜರ್ಮನಿಯಿಂದ ದುಬೈಗೆ ಹೋಗಿದ್ದಾರೆ.

ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಅಲರ್ಟ್‌ ಆಗಿದ್ದಾರೆ. ಹೀಗಾಗಿ ಒಂದು ಕಡೆ ಇರದೇ ಸ್ಥಳ ಬದಲಾವಣೆ ಮಾಡುತ್ತಿದ್ದಾರೆ.

ಆದರೆ, ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ ಹಿನ್ನೆಲೆಯಲ್ಲಿ ಲೈಂಗಿಕ ಹಗರಣದ ಪ್ರಮುಖ ಆರೋಪಿ ಪ್ರಜ್ವಲ್‌ ರೇವಣ್ಣ ದುಬೈಗೆ ಹಾರಿರುವ ಶಂಕೆಯನ್ನು ಎಸ್ಐಟಿ ಅಧಿಕಾರಿಗಳು ವ್ಯಕ್ತಪಡಿಸಿದ್ದರು. ಆದರೆ, ಪ್ರಜ್ವಲ್‌ ಬುಧವಾರ (ಮೇ 1) ರಾತ್ರಿಯೇ ಜರ್ಮನಿಯಿಂದ ದುಬೈಗೆ ಬಂದಿಳಿದಿದ್ದಾರೆ. ಎಮಿರೇಟ್ಸ್‌ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದ ಪ್ರಜ್ವಲ್‌ ಅಲ್ಲದೆ, ಪ್ರಜ್ವಲ್ ಹಾಗೂ ಆಪ್ತರ ಮೊಬೈಲ್ ಲೊಕೇಶನ್‌ ಅನ್ನು ಸಹ ಎಸ್ಐಟಿ ಅಧಿಕಾರಿಗಳು ಪತ್ತೆ ಹಚ್ಚುತ್ತಲೇ ಇದ್ದಾರೆ.

ದುಬೈಗೆ ಹೋಗಿದ್ದು ಏಕೆ?

ಎಸ್‌ಐಟಿ ಈಗಾಗಲೇ ಪ್ರಜ್ವಲ್‌ ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್‌ ಜಾರಿ ಮಾಡಿದೆ. ಅಲ್ಲದೆ, ಸಮಯಾವಕಾಶ ಕೋರಿ ಪ್ರಜ್ವಲ್‌ ಸಲ್ಲಿಸಿದ್ದ ಅರ್ಜಿಯನ್ನೂ ತಿರಸ್ಕರಿಸಿದೆ. ಈಗ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ್ದರಿಂದ ಮತ್ತಷ್ಟು ಸಮಯಾವಕಾಶವನ್ನು ಪಡೆದುಕೊಳ್ಳುವ ಸಲುವಾಗಿ ದುಬೈಗೆ ಹೋಗಿರಬಹುದು ಎಂದು ಹೇಳಲಾಗುತ್ತಿದೆ. ಹೀಗಾಗಿ ಅಲ್ಲಿಂದ ಯಾವಾಗ ಬೇಕಿದ್ದರೂ ಬೆಂಗಳೂರಿಗೆ ಬಂದಿಳಿಯಬಹುದು ಎಂದು ನಿರೀಕ್ಷಿಸಲಾಗುತ್ತಿದೆ.

ತಲೆಮರೆಸಿಕೊಂಡ ಪ್ರಜ್ವಲ್‌ ರೇವಣ್ಣಗೆ ಲುಕೌಟ್‌ ನೋಟಿಸ್‌ ಜಾರಿ, ಬಂದ ಕೂಡಲೇ ಬಂಧನ!

ಹಾಸನದ ಅಶ್ಲೀಲ ವೀಡಿಯೋ (Obscene video) ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕರ್ನಾಟಕ ಸರ್ಕಾರದಿಂದ ಲುಕ್ಔಟ್‌ ನೋಟಿಸ್ (Lookout notice) ಜಾರಿ ಮಾಡಲಾಗಿದೆ.

ಲೈಂಗಿಕ ದೌರ್ಜನ್ಯ (Physical abuse) ಹಗರಣದಲ್ಲಿ ಎಸ್‌ಐಟಿ (SIT) A2 ಆಗಿರುವ ಪ್ರಜ್ವಲ್‌ ರೇವಣ್ಣ ಅವರನ್ನು ತನಿಖೆಗೊಳಪಡಿಸುವುದು ಅಗತ್ಯವಾಗಿದ್ದು, ಅವರನ್ನು ಜರ್ಮನಿಯಿಂದ ಕರೆತರಬೇಕಿದೆ. ವಿಮಾನ ನಿಲ್ದಾಣದ ಇಮಿಗ್ರೇಷನ್‌ ವಿಭಾಗಕ್ಕೆ ಲುಕೌಟ್‌ ನೋಟೀಸ್‌ ಸರ್ವ್‌ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣಗಳ ಇಮಿಗ್ರೇಷನ್‍ಗೆ ಎಸ್‍ಐಟಿ ಅಧಿಕಾರಿಗಳು ಲುಕೌಟ್‌ ನೋಟಿಸ್ ನೀಡಿದ್ದಾರೆ ಎನ್ನಲಾಗಿದ್ದು, ಆ ಮೂಲಕ ಪ್ರಜ್ವಲ್‌ ರೇವಣ್ಣ ಕಾಣಿಸಿಕೊಂಡ ಕೂಡಲೇ ವಶಕ್ಕೆ ಪಡೆಯಲು ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಈ ನಡುವೆ ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ವಿಶೇಷ ತನಿಖಾ ತಂಡಕ್ಕೆ ಮನವಿ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ. ಅವರು ಎಸ್‍ಐಟಿ ಮುಖ್ಯಸ್ಥ ರಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ. ಇದರಲ್ಲಿ ಪ್ರಜ್ವಲ್ ಅವರು ಮೇ 15ರಂದು ಭಾರತಕ್ಕೆ ವಾಪಸ್ಸು ಬರುವ ಬಗ್ಗೆ ಮಾಹಿತಿ ದೊರಕಿದೆ. ಆದರೆ ಲುಫ್ತಾನ್ಸಾ ಏರ್ಲೈನ್ಸ್‌ನಲ್ಲಿ ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ಬೆಂಗಳೂರಿಗೆ ಪ್ರಜ್ವಲ್‌ ಬುಕ್‌ ಮಾಡಿದ ಟಿಕೆಟ್‌ನ ಪ್ರತಿ ಲಭ್ಯವಾಗಿದ್ದು, ಮೇ 15ರಂದು ಬುಕ್‌ ಮಾಡಿದ್ದಾರೆ.

ಏನಿದು ಲುಕ್ಔಟ್‌ ನೋಟಿಸ್?

ತಲೆಮರೆಸಿಕೊಂಡಿರುವ ಅಥವಾ ಕಾನೂನು ಜಾರಿ ಸಂಸ್ಥೆಗಳಿಗೆ ಬೇಕಾಗಿರುವ ವ್ಯಕ್ತಿಯು ದೇಶವನ್ನು ತೊರೆಯಲು ಸಾಧ್ಯವಾಗದಂತೆ ಖಚಿತಪಡಿಸಿಕೊಳ್ಳಲು ಎಲ್ಒಸಿ ನೀಡಲಾಗುತ್ತದೆ. ಇದನ್ನು ಹೆಚ್ಚಾಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು ಮತ್ತು ಬಂದರುಗಳಲ್ಲಿನ ವಲಸೆ ತಪಾಸಣಾ ಕೇಂದ್ರಗಳಲ್ಲಿ ತಪಾಸಣೆಗೆ ಬಳಸಲಾಗುತ್ತದೆ. ಆದರೆ, ಪ್ರಜ್ವಲ್‌ ಈಗಾಗಲೇ ಜರ್ಮನಿಯಲ್ಲಿದ್ದು, ವಿಮಾನ ನಿಲ್ದಾಣದಲ್ಲಿ ಮರಳುವ ಹೊತ್ತಿಗೆ ಬಂಧಿಸಲು ಚಿಂತಿಸಲಾಗಿದೆ ಎಂಬುದು ಇದರಿಂದ ಸ್ಪಷ್ಟವಾಗಿದೆ. ಈ ಮೂಲಕ ಜೆಡಿಎಸ್‌ ಹಾಗೂ ಬಿಜೆಪಿಗೆ ಮುಜುಗರ ಸೃಷ್ಟಿಸುವ ತಂತ್ರ ಇದೆಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ವೈರಲ್‌ ಮಾಡಿದ್ದು ಸಚಿವ ಜಮೀರ್‌ ಅಹ್ಮದ್‌ ಆಪ್ತ?

ಪ್ರಜ್ವಲ್ ರೇವಣ್ಣ ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಏಪ್ರಿಲ್ 27-28ರಂದು ರಾತ್ರೋರಾತ್ರಿ ಬೆಂಗಳೂರಿನಿಂದ ಜರ್ಮನಿಗೆ ತೆರಳಿದ್ದಾರೆ. ಆಪಾದಿತ ಲೈಂಗಿಕ ಹಗರಣದ ತನಿಖೆಗೆ ಎಸ್‌ಐಟಿಯನ್ನು ಸ್ಥಾಪಿಸುವ ಕೆಲವೇ ಗಂಟೆಗಳ ಮೊದಲು ಅವರು ಪರಾರಿಯಾಗಿದ್ದಾರೆ. ಮೇ 1ರಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಲು ಮಧ್ಯ ಪ್ರವೇಶಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಕೇಂದ್ರ ಸರ್ಕಾರದ ಕಚೇರಿಗಳನ್ನು ಬಳಸಿಕೊಂಡು ಪರಾರಿಯಾದ ಸಂಸದರನ್ನು ಭಾರತಕ್ಕೆ ಕರೆತರಲು ಖಚಿತಪಡಿಸಿಕೊಳ್ಳುವಂತೆ ಕೋರಿದ್ದರು.

ತನಿಖೆಗೆ ಅಗತ್ಯವಾದಾಗ ಪ್ರಜ್ವಲ್‌ ಭಾರತಕ್ಕೆ ಮರಳಲಿದ್ದಾನೆ ಎಂದು ಎಚ್‌ ಡಿ ರೇವಣ್ಣ ಹೇಳಿದ್ದಾರೆ. A1 ಆಗಿರುವ ರೇವಣ್ಣ ಅವರೂ ಎಸ್‌ಐಟಿ ಮುಂದೆ ತನಿಖೆಗೆ ಒಳಗಾಗಬೇಕಿದೆ. ಅವರಿಗೂ ನೋಟಿಸ್‌ ಜಾರಿ ಮಾಡಲಾಗಿದೆ. ಇಂದು ಅಥವಾ ನಾಳೆ ಅವರು ತನಿಖೆಗೆ ಹಾಜರಾಗುವ ನಿರೀಕ್ಷೆ ಇದೆ.

Continue Reading

ದೇಶ

Chandrayaan 3: ಇತಿಹಾಸ ಸೃಷ್ಟಿಸಿ ಚಂದ್ರನ ಮಡಿಲಲ್ಲಿ ಮಲಗಿದ ವಿಕ್ರಮ್‌ ಲ್ಯಾಂಡರ್‌, ಪ್ರಜ್ಞಾನ್‌ ರೋವರ್; ಇಲ್ಲಿವೆ Photos

Chandrayaan 3: ಚಂದಿರ ಅಂಗಳದಲ್ಲಿ ಇತಿಹಾಸ ಸೃಷ್ಟಿಸಿರುವ ವಿಕ್ರಮ್‌ ಲ್ಯಾಂಡರ್‌ ಹಾಗೂ ಪ್ರಜ್ಞಾನ್‌ ರೋವರ್‌ಗಳು ಹಾಯಾಗಿ ಮಲಗಿರುವ ಫೋಟೊಗಳು ಲಭ್ಯವಾಗಿವೆ. ಈ ಫೋಟೊಗಳು ಈಗ ವೈರಲ್‌ ಕೂಡ ಆಗಿವೆ. ಸಂಶೋಧಕ ಚಂಧ್ರ ತುಂಗತುರ್ತಿ ಅವರು ಫೋಟೊಗಳನ್ನು ಸೆರೆ ಹಿಡಿದಿದ್ದು, ಲ್ಯಾಂಡರ್‌ ಹಾಗೂ ರೋವರ್‌ ಅಕ್ಕಪಕ್ಕದಲ್ಲೇ ಇವೆ.

VISTARANEWS.COM


on

Chandrayaan 3
Koo

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಐತಿಹಾಸಿಕ ಚಂದ್ರಯಾನ 3 ಮಿಷನ್‌ಅನ್ನು (Chandrayaan 3) ಯಶಸ್ವಿಯಾಗಿ ಕೈಗೊಳ್ಳುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಅದರಲ್ಲೂ, ಚಂದ್ರನ ದಕ್ಷಿಣ ಧ್ರುವದಲ್ಲಿ ಮಿಷನ್‌ಅನ್ನು ಸಾಫ್ಟ್‌ ಲ್ಯಾಂಡ್‌ ಮಾಡಿದ ಜಗತ್ತಿನ ಮೊದಲ ದೇಶ ಎನಿಸಿದೆ. ಇದಾದ ಬಳಿಕ ಜಾಗತಿಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಇಸ್ರೋ ಛಾಪು ಮೂಡಿಸಿದೆ. ಇದರ ಬೆನ್ನಲ್ಲೇ, ಚಂದ್ರಯಾನ 3 ಮಿಷನ್‌ನ ವಿಕ್ರಮ್‌ ಲ್ಯಾಂಡರ್‌ (Vikram Lander) ಹಾಗೂ ಪ್ರಜ್ಞಾನ್‌ ರೋವರ್‌ಗಳು ಚಂದಿರನ ಅಂಗಳದಲ್ಲಿ ಹಾಯಾಗಿ ಮಲಗಿರುವ ಹೊಸ ಫೋಟೊಗಳನ್ನು ಇಸ್ರೋ ಬಿಡುಗಡೆಗೊಳಿಸಿದೆ.

2024ರ ಮಾರ್ಚ್‌ 15ರಂದೇ ಸಂಶೋಧಕ ಚಂಧ್ರ ತುಂಗತುರ್ತಿ ಅವರು ಫೋಟೊಗಳನ್ನು ಸೆರೆ ಹಿಡಿದಿದ್ದು, ಅವುಗಳನ್ನು ಪರಿಶೀಲಿಸಿದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ್ದಾರೆ. ಒಂದು ಪಿಕ್ಸೆಲ್‌ಗೆ 17 ಸೆಂಟಿಮೀಟರ್‌ನಂತೆ ಸುಮಾರು 65 ಕಿಲೋಮೀಟರ್‌ ದೂರದಿಂದ ಚಂದಿರನ ಅಂಗಳದಲ್ಲಿ ಲ್ಯಾಂಡರ್‌ ಹಾಗೂ ರೋವರ್‌ ಮಲಗಿರುವ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ ಎಂದು ತಿಳಿದುಬಂದಿದೆ. ಈ ಫೋಟೊಗಳು ಈಗ ವೈರಲ್‌ ಆಗಿವೆ.

2023ರ ಜುಲೈ 14ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ LVM3 ರಾಕೆಟ್‌ನ ಮೂಲಕ ಉಡಾವಣೆಗೊಂಡ ಚಂದ್ರಯಾನ-3, ಒಂದು ತಿಂಗಳ ಕಾಲ ಬಾಹ್ಯಾಕಾಶ ಹಾರಾಟದ ನಂತರ ಆಗಸ್ಟ್ 23ರಂದು ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಇಳಿಯಿತು. ಆ ಮೂಲಕ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್‌ ಲ್ಯಾಂಡ್‌ ಆದ ಜಗತ್ತಿನ ಮೊದಲ ಮಿಷನ್‌ ಎಂಬ ಖ್ಯಾತಿಗೆ ಭಾಜನವಾಯಿತು. ಇದರೊಂದಿಗೆ ಇಸ್ರೋ ಮೈಲುಗಲ್ಲು ಸ್ಥಾಪಿಸಿತು.

ಅಷ್ಟೇ ಅಲ್ಲ, ಚಂದ್ರಯಾನ 3 ಮಿಷನ್‌ ಲ್ಯಾಂಡ್‌ ಆದ ಪ್ರದೇಶವನ್ನು ಶಿವಶಕ್ತಿ ಎಂಬುದಾಗಿ ಕರೆಯಲು ಅಂತಾರಾಷ್ಟ್ರೀಯ ಖಗೋಳ ಒಕ್ಕೂಟವು (International Astronomical Union) ಮಾರ್ಚ್‌ 19ರಂದು ಅನುಮತಿ ನೀಡಿದೆ. ಇದರೊಂದಿಗೆ ಬಾಹ್ಯಾಕಾಶ ನೌಕೆ ಇಳಿದ ಪ್ರದೇಶವೀಗ ಅಧಿಕೃತವಾಗಿ ಶಿವಶಕ್ತಿ ಪಾಯಿಂಟ್‌ ಎನಿಸಿದೆ.

2023ರ ಜುಲೈ 14ರಂದು ಚಂದ್ರಯಾನ 3 ಮಿಷನ್‌ ಉಡಾವಣೆಗೆ ಕೆಲವೇ ನಿಮಿಷಗಳು ಬಾಕಿ ಇದ್ದವು. ಇನ್ನೇನು ಉಡಾವಣೆ ಮಾಡಬೇಕು ಎನ್ನುವಷ್ಟರಲ್ಲಿಯೇ ಚಂದ್ರಯಾನ 3 ರಾಕೆಟ್‌ ಸಾಗುವ ಮಾರ್ಗದಲ್ಲಿ ಬಾಹ್ಯಾಕಾಶ ತ್ಯಾಜ್ಯವೊಂದು ಇಸ್ರೋ ವಿಜ್ಞಾನಿಗಳಿಗೆ ಕಾಣಿಸಿದೆ. ಇದರಿಂದಾಗಿ ಇಸ್ರೋ ವಿಜ್ಞಾನಿಗಳಲ್ಲಿ ಆತಂಕ ಮನೆ ಮಾಡಿತ್ತು. ಇನ್ನೇನು ಕೆಲವೇ ನಿಮಿಷಗಳಲ್ಲಿ ಉಡಾವಣೆ ಮಾಡಬೇಕಿದೆ. ಉಡಾವಣೆ ಮಾಡಿದರೆ ಬಾಹ್ಯಾಕಾಶ ತ್ಯಾಜ್ಯಕ್ಕೆ ಚಂದ್ರಯಾನ 3 ರಾಕೆಟ್‌ ಡಿಕ್ಕಿಯಾಗಿ, ಇಡೀ ಮಿಷನ್‌ ಹಾಳಾಗುತ್ತಿತ್ತು.

ಚಂದ್ರಯಾನ 3 ಉಡಾವಣೆ ಮಾಡಲೇಬೇಕಿತ್ತು. ಹಾಗಾಗಿ, ಇಸ್ರೋ ವಿಜ್ಞಾನಿಗಳು ಚಾಣಾಕ್ಷತನ ಮೆರೆದರು. ಕೊನೆಯ ಕ್ಷಣದಲ್ಲಿ ಉಡಾವಣೆಯನ್ನು 4 ಸೆಕೆಂಡ್‌ ವಿಳಂಬ ಮಾಡಿದರು. ಇದೇ ಅವಧಿಯಲ್ಲಿ ಬಾಹ್ಯಾಕಾಶ ತ್ಯಾಜ್ಯವು ಚಂದ್ರಯಾನ 3 ಮಿಷನ್‌ ಮಾರ್ಗದಿಂದ ಬೇರೆಡೆ ವಾಲಿತು. ಆಗ, ವಿಜ್ಞಾನಿಗಳು ಯಶಸ್ವಯಾಗಿ ಚಂದ್ರಯಾನ 3 ಮಿಷನ್‌ಅನ್ನು ಉಡಾವಣೆ ಮಾಡಿದರು. ನಿಗದಿತ ಸಮಯಕ್ಕೆ ಉಡಾವಣೆ ಮಾಡಿದ್ದರೆ ಇಡೀ ಮಿಷನ್‌ ವಿಫಲವಾಗುತ್ತಿತ್ತು ಎನ್ನಲಾಗಿದೆ.

ಇದನ್ನೂ ಓದಿ: Chandrayaan 3: ಚಂದ್ರಯಾನ 3 ಆಗುತ್ತಿತ್ತು ಛಿದ್ರ; ಆ 4 ಸೆಕೆಂಡ್‌ಗಳಲ್ಲೇ ಮಿಷನ್‌ ಬಚಾವ್‌ ಆಗಿದ್ದು ಹೇಗೆ?

Continue Reading

ರಾಜಕೀಯ

Prajwal Revanna Case: ಪ್ರಜ್ವಲ್‌ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ವೈರಲ್‌ ಮಾಡಿದ್ದು ಸಚಿವ ಜಮೀರ್‌ ಅಹ್ಮದ್‌ ಆಪ್ತ?

Prajwal Revanna Case: ಹಾಸನ ಜಿಲ್ಲೆ ಬೇಲೂರು ತಾಲೂಕಿನ ನವೀನ್ ಗೌಡ ವಿರುದ್ಧ ಎಫ್‌ಐಆರ್ ದಾಖಲಾಗುತ್ತಲೇ ಈಗ ಜಮೀರ್‌ ಜತೆಗಿರುವ ಫೋಟೊಗಳು ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್‌ ಆಗಿವೆ. ಜಮೀರ್ ಅಹಮದ್ ಜತೆ ಹಲವು ಫೋಟೊ ತೆಗೆಸಿಕೊಂಡಿರುವ ನವೀನ್ ಗೌಡ ಮೇಲೆ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎಂಬ ವಿಡಿಯೊವುಳ್ಳ ಪೆನ್‌ ಡ್ರೈವ್‌ ಹರಿಬಿಟ್ಟ ಆರೋಪದಲ್ಲಿ ಹಾಸನದ ಸೈಬರ್ ಕ್ರೈಮ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

VISTARANEWS.COM


on

Prajwal Revanna Case Minister Zameer Ahmed close aide makes Prajwal obscene video pen drive viral
Koo

ಹಾಸನ: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಮತ್ತೊಂದು ಸ್ಫೋಟಕ ಸಂಗತಿ ಹೊರಬಿದ್ದಿದೆ. ಪೆನ್ ಡ್ರೈವ್‌ನಲ್ಲಿದ್ದ ಅಶ್ಲೀಲ ವಿಡಿಯೊಗಳನ್ನು ವೈರಲ್ ಮಾಡಿದ್ದು ಪ್ರಭಾವಿ ಕಾಂಗ್ರೆಸ್ ಸಚಿವರ ಆಪ್ತನೇ ಎಂಬ ಶಂಕೆ ಹುಟ್ಟಿಕೊಂಡಿದೆ. ವಿಡಿಯೊ ವೈರಲ್ ಮಾಡಿದ್ದ ನವೀನ್ ಗೌಡ ಪ್ರಭಾವಿ ಸಚಿವ ಜಮೀರ್ ಅಹ್ಮದ್‌ ಖಾನ್ ಆಪ್ತ ಎಂದು ಹೇಳಲಾಗುತ್ತಿದೆ.

ಈ ನಡುವೆ ಈ ಜಮೀರ್‌ ಜತೆಗೆ ನವೀನ್‌ ಗೌಡ ಇರುವ ಫೋಟೊಗಳು ವೈರಲ್‌ ಆಗಿವೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ನವೀನ್ ಗೌಡ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಬೆನ್ನಲ್ಲೇ ಜಮೀರ್‌ ಜತೆಗಿರುವ ಫೋಟೊಗಳು ಸೋಷಿಯಲ್‌ ಮೀಡಿಯಾಗಳಲ್ಲಿ ಕಾಣಿಸಿಕೊಳ್ಳಲಾರಂಭಿಸಿವೆ.

Prajwal Revanna Case Minister Zameer Ahmed close aide makes Prajwal obscene video pen drive viral

ಜಮೀರ್ ಅಹಮದ್ ಜತೆ ಹಲವು ಫೋಟೊ ತೆಗೆಸಿಕೊಂಡಿರುವ ನವೀನ್ ಗೌಡ ಮೇಲೆ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎಂಬ ವಿಡಿಯೊವುಳ್ಳ ಪೆನ್‌ ಡ್ರೈವ್‌ ಹರಿಬಿಟ್ಟ ಆರೋಪದಲ್ಲಿ ಹಾಸನದ ಸೈಬರ್ ಕ್ರೈಮ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸಂಸದ ಪ್ರಜ್ವಲ್ ಅವರ ಚುನಾವಣಾ ಏಜೆಂಟ್ ಈ ಬಗ್ಗೆ ದೂರು ನೀಡಿದ್ದರು. ಹೀಗಾಗಿ ಏಪ್ರಿಲ್ 23ರಂದು ಪ್ರಕರಣವನ್ನು ದಾಖಲು ಮಾಡಿಕೊಳ್ಳಲಾಗಿತ್ತು.

ಆದರೆ, ಈಗ ಸಚಿವ ಜಮೀರ್‌ ಜತೆಗೆ ನವೀನ್‌ ಆತ್ಮೀಯವಾಗಿರುವ ಫೋಟೊಗಳು ವೈರಲ್‌ ಆಗಿದ್ದು, ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಹಾಗಾದರೆ, ಇದನ್ನು ಚುನಾವಣೆ ಸಮಯದಲ್ಲಿ ಬೇಕೆಂದೇ ಮಾಡಲಾಗಿದೆಯೇ? ಅಥವಾ ಇನ್ಯಾವುದೋ ದುರುದ್ದೇಶದಿಂದ ಮಾಡಲಾಗಿದೆಯೇ? ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ

Prajwal Revanna Case Minister Zameer Ahmed close aide makes Prajwal obscene video pen drive viral

ಪ್ರಜ್ವಲ್‌ ಅರೆಸ್ಟ್‌ ಆದಲ್ಲಿ ಎಸ್‌ಐಟಿ ಕೇಳುವ ಪ್ರಶ್ನೆಗಳಿವು! ರೇವಣ್ಣಗೂ ತಟ್ಟುವ ಬಿಸಿ

ಪ್ರಜ್ವಲ್‌ ಎಸ್ಐಟಿ ಅಧಿಕಾರಿಗಳ ಮುಂದೆ ಹಾಜರಾದಲ್ಲಿ ಇಲ್ಲವೇ ಅವರನ್ನು ಬಂಧಿಸಿ ಕರೆತಂದಲ್ಲಿ ಅವರಿಗೆ ಸರಣಿ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಈಗಾಗಲೇ ಹಲವು ಪ್ರಶ್ನೆಗಳನ್ನು ಎಸ್‌ಐಟಿ ಸಿದ್ಧಪಡಿಸಿಟ್ಟುಕೊಂಡಿದೆ ಎನ್ನಲಾಗಿದೆ. ಪ್ರಕರಣ ಸಂಬಂಧ ಸಣ್ಣ ಸಣ್ಣ ಪ್ರಶ್ನೆಗಳನ್ನೂ ಕೇಳಿ ಪ್ರಜ್ವಲ್‌ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲಾಗುತ್ತದೆ. ಪ್ರಜ್ವಲ್‌ ಅವರ ವಯಸ್ಸಿನಿಂದ ಹಿಡಿದು ಹಲವು ಪ್ರಶ್ನೆಗಳನ್ನು ಕೇಳಲಿದ್ದಾರೆ. ಆರೋಪಗಳ ಬಗ್ಗೆ ಏನು ಹೇಳುತ್ತೀರಿ? ನೀವೇ ರೆಕಾರ್ಡ್‌ ಮಾಡಿಕೊಂಡಿದ್ದೀರಿ ಎಂಬ ಆರೋಪ ಇದೆ. ರೆಕಾರ್ಡ್‌ಗೆ ಯಾವ ಸಾಧನವನ್ನು ಬಳಸಿಕೊಂಡಿದ್ದೀರಿ. ಡಿಯೋ ಇಟ್ಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಿರಾ? ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಅದೇ ರೀತಿ ಪ್ರಜ್ವಲ್‌ ರೇವಣ್ಣ ಅವರ ತಂದೆ ಎಚ್.ಡಿ. ರೇವಣ್ಣ ಅವರಿಗೂ ಹಲವು ಪ್ರಶ್ನೆಗಳನ್ನು ಕೇಳಲು ಎಸ್‌ಐಟಿ ರೆಡಿಯಾಗಿದೆ. ನಿಮ್ಮ ಪುತ್ರನ ಮೇಲೆ ಆರೋಪಿವಿರುವುದು ಗಮನಕ್ಕೆ ಬಂದಿತ್ತಾ? ನಿಮ್ಮ ಗಮನಕ್ಕೆ ಬಂದಿದ್ರೆ ಅದರ ಬಗ್ಗೆ ಪ್ರಜ್ವಲ್‌‌ ಜತೆ ಚರ್ಚಿಸಿದ್ದಿರಾ? ಒಂದು ವೇಳೆ ಚರ್ಚೆ ಮಾಡಿದರೆ ನಿಮ್ಮ ಪುತ್ರ ಏನು ಹೇಳಿದ್ದರು? ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಲಾಗುತ್ತದೆ ಎಂದು ಹೇಳಲಾಗಿದೆ.

ಪ್ರಜ್ವಲ್ ರೇವಣ್ಣಗೆ SIT ಕೇಳುವ ಸಂಭಾವ್ಯ ಪ್ರಶ್ನೆಗಳು

1- ಪ್ರಜ್ವಲ್ ಅವರೇ ನಿಮಗೆ ವಯಸ್ಸು ಎಷ್ಟು?
2- ನೀವು ಏನು ಓದಿದ್ದೀರಿ? ಎಲ್ಲಿ ಓದಿದ್ದು?
3- ಎಲೆಕ್ಷನ್ ಮುಗಿದ ತಕ್ಷಣ ತಾವು ಎಲ್ಲಿಗೆ ಹೋದಿರಿ?
4- ನೀವು ಹೆಚ್ಚಾಗಿ ವಾಸವಿರೋದು ಹಾಸನವಾ? ದೆಹಲಿಯಾ? ಅಥವಾ ಬೆಂಗಳೂರಲ್ಲೋ?
5- ನಿಮ್ಮ ಮೇಲೆ ಕೇಳಿ ಬಂದಿರುವ ಆರೋಪಗಳ ಬಗ್ಗೆ ಏನಂತೀರಿ?
6- ಅಸಲಿಗೆ ಅವು ನಿಮ್ಮ ವಿಡಿಯೊಗಳಾ?
7- ವಿಡಿಯೋದಲ್ಲಿರುವ ಧ್ವನಿ ನಿಮ್ಮದಲ್ಲವೇ?
8- ನಿಮ್ಮಿಂದಲೇ ರೆಕಾರ್ಡ್‌ ಎನ್ನಲಾಗುತ್ತಿದೆ, ಹೌದೇ?
9- ರೆಕಾರ್ಡ್ ಮಾಡಲು ಬಳಸಿದ ಸಾಧನ ಯಾವುದು?
10- ನೀವೇ ರೆಕಾರ್ಡ್ ಮಾಡಿದ್ದಂತೆ. ಯಾಕೆ ಮಾಡಿದಿರಿ?
11 – ವಿಡಿಯೋ ಇಟ್ಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಿರಾ?
12- ನಿಮ್ಮ ಮೋಜಿಗೆ ವಿಡಿಯೊಗಳನ್ನು ಮಾಡಿಕೊಳ್ಳುತ್ತಿದ್ದಿರಾ?
13- ರೆಕಾರ್ಡ್ ಮಾಡುವುದು ತಪ್ಪು ಎಂದು ನಿಮಗೆ ಗೊತ್ತಿಲ್ವೆ?
14- ದೃಶ್ಯಗಳಲ್ಲಿ ಇರುವ ಮಹಿಳೆಯರು ನಿಮಗೆ ಪರಿಚಯವೇ?
15- ಆ ಮಹಿಳೆಯರನ್ನು ನೀವು ಎಲ್ಲಿ ಭೇಟಿ ಮಾಡಿದಿರಿ?
16- ದೈಹಿಕ ಸಂಪರ್ಕ ಬೆಳೆಸಲು ಏನಾದರೂ ಆಮಿಷ ಒಡ್ಡಿದ್ರಾ?
17 – ಅದು ಅತ್ಯಾಚಾರಕ್ಕೆ ಸಮ ಎಂದು ಗೊತ್ತಿದೆಯೇ?
18- ಪ್ರಮೋಷನ್, ಕೆಲಸದ ನೆಪದಲ್ಲಿ ದೈಹಿಕ ಸಂಪರ್ಕ ಮಾಡಿದಿರಾ?
19- ನಿಮಗೇನಾದರೂ ಮಾನಸಿಕ ಸಮಸ್ಯೆ ಇದೆಯಾ?
20- ನೀವು ದೌರ್ಜನ್ಯ ನಡೆಸುತ್ತಿರುವಂತಿದೆ, ಏನಂತೀರಿ?
21- ನೋಟಿಸ್ ಕೊಟ್ಟರೂ 7 ದಿನ ಟೈಮ್ ಯಾಕೆ ಕೇಳಿದಿರಿ?
22- ನೀವು ದೃಶ್ಯ ಶೂಟ್ ಮಾಡಲು ಬಳಸಿದ ಸಾಧನ ಎಲ್ಲಿದೆ?
23- ಬೇರೆ ಯಾರ ಬಳಿಯಾದರೂ ವಿಡಿಯೊ ಶೇರ್ ಮಾಡಿದಿರಾ?
24- ಖಾಸಗಿ ದೃಶ್ಯಗಳು ಹೇಗೆ ಹೊರಗೆ ಬಂದವು ಹೇಳಬಹುದಾ?
25- ನಿಮಗೆ ಕಾರ್ತಿಕ್ ಎಂಬ ವ್ಯಕ್ತಿ ಗೊತ್ತಾ?
26 – ನಿಮಗೂ ಕಾರ್ತಿಕ್‌ಗೂ ಸ್ನೇಹವಿತ್ತಾ?
27 – ನಿಮ್ಮ ವಿರುದ್ಧ ಸುದ್ದಿ ಪ್ರಸಾರವಾಗದಂತೆ ತಡೆ ತಂದಿದ್ದಿರಿ ಯಾಕೆ?
28 – ನಿಮ್ಮ ಮೇಲಿನ ಪಿತೂರಿ ಅಂತಾದರೆ ನೀವ್ಯಾಕೆ ದೂರು ನೀಡಲಿಲ್ಲ?
29 – ನಿಮ್ಮ ವಿರುದ್ಧ ಆರೋಪ ಬಂದ ಕೂಡಲೇ ಯಾಕೆ ದೇಶ ಬಿಟ್ಟು ಹೋದಿರಿ?
30 – ಮನೆಯಲ್ಲಿ ಯಾರ ಬಳಿಯಾದರೂ ಈ ವಿಷಯಗಳನ್ನು ಹೇಳಿಕೊಳ್ಳುತ್ತಿದ್ದಿರಾ?
31 – ಕೆಲಸದಾಕೆಯ ಆರೋಪದ ಬಗ್ಗೆ ಏನಂತೀರಿ?
32 – ಪ್ರಜ್ವಲ್ ನೀವು ತನಿಖೆಗೆ ಸಹಕರಿಸಬೇಕು
33 – ತನಿಖೆ ಪೂರ್ಣವಾಗುವವರೆಗೂ ದೇಶ ಬಿಟ್ಟು ಹೋಗಬೇಡಿ

ಎಂಬಿತ್ಯಾದಿ ಪ್ರಶ್ನೆಗಳನ್ನು ಎಸ್‌ಐಟಿ ಕೇಳಲಿದೆ. ಒಂದು ವೇಳೆ ಇವುಗಳಿಗೆ ಆರೋಪಿ ಪ್ರಜ್ವಲ್‌ ಸ್ಪಂದಿಸದೆ ಸಮರ್ಪಕ ಉತ್ತರ ನೀಡಿದ್ದರೆ ಮುಂದಿನ ಕ್ರಮದ ಬಗ್ಗೆ ಎಸ್‌ಐಟಿ ಚಿಂತನೆ ನಡೆಸಲಿದೆ ಎನ್ನಲಾಗಿದೆ.

ಇದನ್ನೂ ಓದಿ: Prajwal Revanna Case: SIT ಮುಂದೆ ಹಾಜರಾಗಲು ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ? ತನಿಖೆಗೆ ಆತುರ ಏಕೆ?

ಎಚ್‌‌‌‌.ಡಿ.ರೇವಣ್ಣಗೆ SIT ಕೇಳುವ ಸಂಭಾವ್ಯ ಪ್ರಶ್ನೆಗಳು!

1) ನಿಮ್ಮ ಹೆಸರೇನು..? ಏನು ಕೆಲಸ ಮಾಡಿಕೊಂಡಿದ್ದೀರಿ..?
2) ಯಾವ ವಿಳಾಸದಲ್ಲಿ ವಾಸವಾಗಿದ್ದೀರಾ? ಎಷ್ಟು ವರ್ಷ..?
3) ನಿಮ್ಮ ಮೇಲೆ ಸಂತ್ರಸ್ತೆ ನೀಡಿದ ದೂರಿನ ಬಗ್ಗೆ ಮಾಹಿತಿ ಇದೆಯಾ?
4) ದೂರು ನೀಡಿರುವ ಮಹಿಳೆ ಪರಿಚಯಸ್ಥರಾ? ಸಂಬಂಧಿನಾ?
5) ಎಷ್ಟು ವರ್ಷಗಳಿಂದ ನಿಮ್ಮ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದಾರೆ..?
6) ದೂರಿನಲ್ಲಿ ಉಲ್ಲೇಖಿಸಿದಂತೆ ಲೈಂಗಿಕ ದೌರ್ಜನ್ಯ ಎಸಗಿದ್ದೀರಾ?
7) ನಿಮ್ಮ ಪುತ್ರನ ಮೇಲೂ ಆರೋಪಿವಿದೆ ಗಮನಕ್ಕೆ ಬಂದಿತ್ತಾ..?
8) ನಿಮ್ಮ ಗಮನಕ್ಕೆ ಬಂದಿದ್ದರೆ ಅದರ ಬಗ್ಗೆ ಪ್ರಜ್ವಲ್‌‌ ಜತೆ ಚರ್ಚಿಸಿದ್ದಿರಾ?
9) ಒಂದು ವೇಳೆ ಚರ್ಚೆ ಮಾಡಿದ್ದರೆ ನಿಮ್ಮ ಪುತ್ರ ಏನು ಹೇಳಿದ್ದರು?
10) ನಿಮ್ಮ ಪುತ್ರನ ಕಾರು ಚಾಲಕ ಕಾರ್ತಿಕ್ ಎಷ್ಟು ವರ್ಷಗಳಿಂದ ಕೆಲಸ ಮಾಡುತ್ತಿದ್ದ ?
11) ನಿಮ್ಮ ಡ್ರೈವರ್ ಕಾರ್ತಿಕ್ ಜತೆ ಏನಾದರೂ ಗಲಾಟೆ ಆಗಿತ್ತಾ?
12) ವಿಡಿಯೊ ನಾನೇ ಕೊಟ್ಟಿದ್ದು ಎಂದು ಕಾರ್ತಿಕ್ ಹೇಳಿಕೆ ನೀಡಿದ್ದಾರಲ್ವಾ, ಇದು ಸತ್ಯನಾ?
13) ಪೆನ್‌ಡ್ರೈವ್‌ನಲ್ಲಿರೋ ವಿಡಿಯೊ ಪ್ರಜ್ವಲ್ ರೇವಣ್ಣನವರೆದ್ದೇನಾ..?
14) ಇಲ್ಲ ಅಂದಾದರೆ ಕೋರ್ಟ್‌ನಲ್ಲಿ ಸ್ಟೇ ತಂದಿದ್ದು ಯಾಕೆ?
15) ಮನೆ ಕೆಲಸದವಳು ಮಾಡುವ ಆರೋಪಕ್ಕೆ ನಿಮ್ಮ ಪ್ರತಿಕ್ರಿಯೆ ಏನು?

Continue Reading

ಪ್ರಮುಖ ಸುದ್ದಿ

Deepak Chahar : ಸಹೋದರನನ್ನು ಗೇಲಿ ಮಾಡಿದವರಿಗೆ ತಿರುಗೇಟು ಕೊಟ್ಟ ದೀಪಕ್ ಚಾಹರ್​ ಸಹೋದರಿ!

Deepak Chahar :ಎರಡನೇ ಎಸೆತದ ನಂತರ, ಅವರು ತಮ್ಮ ತೊಡೆ ಸ್ನಾಯುವಿನ ಸೆಳತಕ್ಕೆ ಒಳಗಾದರು. ನಾಯಕ ಋತುರಾಜ್ ಗಾಯಕ್ವಾಡ್ ಅವರೊಂದಿಗೆ ದೀರ್ಘ ಮಾತುಕತೆಯ ನಂತರ ಚಹರ್ ಮೈದಾನದಿಂದ ಹೊರನಡೆಯಲು ನಿರ್ಧರಿಸಿದರು. ಸ್ಟ್ರೈಕ್ ಬೌಲರ್ ಅನುಪಸ್ಥಿತಿಯು ಸಿಎಸ್​ಕೆಯು ಪಂದ್ಯವನ್ನು ಕಳೆದುಕೊಂಡಿತು. ದೀಪಕ್ ಚಹರ್ ನಿರಂತರವಾಗಿ ಗಾಯಗಳಿಗೆ ಒಳಗಾಗುತ್ತಿರುವುದರಿಂದ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಅನೇಕರು ಅವರನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಟ್ರೋಲ್ ಮಾಡಿದರು.

VISTARANEWS.COM


on

Deepak Chahar
Koo

ಚೆನ್ನೈ: ಸಿಎಸ್​ಕೆ ತಂಡದ ಪ್ರತಿಭಾನ್ವಿತ ವೇಗದ ಬೌಲರ್ ದೀಪಕ್ ಚಹರ್ (Deepak Chahar) ಇತ್ತೀಚೆಗೆ ಪಂಜಾಬ್​ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿ ಆಡಿರಲಿಲ್ಲ. ಅವರು ಗಾಯಗೊಂಡ ಕಾರಣ ಆಡುವ 11ರ ಬಳಗದಲ್ಲಿ ಅವಕಾಶ ಗಿಟ್ಟಿಸಿಲ್ಲ. ಹೀಗಾಗಿ ಅವರು ಟ್ರೋಲ್​ಗೆ ಒಳಗಾಗಿದ್ದಾರೆ. ಪದೇ ಪದೇ ಗಾಯಕ್ಕೆ ಒಳಗಾಗುತ್ತಿದ್ದಾರೆ ಎಂಬ ಚುಚ್ಚು ಮಾತುಗಳನ್ನು ಕ್ರಿಕೆಟ್ ಅಭಿಮಾನಿಗಳು ಆಡುತ್ತಿದ್ದಾರೆ. ಇದರಿಂದ ಬೇಸತ್ತ ಅವರ ಸಹೋದರಿ ಮಾಲತಿ ಚಾಹರ್​ ಟ್ರೋಲ್​ ಮಾಡಿದವರಿಗೆ ಸಿಕ್ಕಾಪಟ್ಟೆ ಬೈದಿದ್ದಾರೆ. ನಿಮಗೆ ಸ್ವಲ್ಪವೂ ಸಂವೇದನೆ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಐಪಿಎಲ್ 2024 ರ ಮುಖಾಮುಖಿಯಲ್ಲಿ ಸಿಎಸ್​ಕೆ ವಿರುದ್ಧ ಪಂಜಾಬ್ ತಂಡ ಗೆದ್ದಿದೆ. ಅದಕ್ಕೆ ಕಾರಣ ಆಟಗಾರರ ಅಲಭ್ಯತೆ. ಹೀಗಾಗಿ ಚಾಹರ್ ಟ್ರೋಲ್​ಗೆ ಒಳಗಾಗಿದ್ದಾರೆ ಸ್ಟ್ರೈಕ್ ವೇಗಿ ದೀಪಕ್ ಚಾಹರ್ ಕೇವಲ 2 ಎಸೆತಗಳನ್ನು ಎಸೆದ ನಂತರ ಮೈದಾನದಿಂದ ನಿರ್ಗಮಿಸಿದರು.

ಎರಡನೇ ಎಸೆತದ ನಂತರ, ಅವರು ತಮ್ಮ ತೊಡೆ ಸ್ನಾಯುವಿನ ಸೆಳತಕ್ಕೆ ಒಳಗಾದರು. ನಾಯಕ ಋತುರಾಜ್ ಗಾಯಕ್ವಾಡ್ ಅವರೊಂದಿಗೆ ದೀರ್ಘ ಮಾತುಕತೆಯ ನಂತರ ಚಹರ್ ಮೈದಾನದಿಂದ ಹೊರನಡೆಯಲು ನಿರ್ಧರಿಸಿದರು. ಸ್ಟ್ರೈಕ್ ಬೌಲರ್ ಅನುಪಸ್ಥಿತಿಯು ಸಿಎಸ್​ಕೆಯು ಪಂದ್ಯವನ್ನು ಕಳೆದುಕೊಂಡಿತು. ದೀಪಕ್ ಚಹರ್ ನಿರಂತರವಾಗಿ ಗಾಯಗಳಿಗೆ ಒಳಗಾಗುತ್ತಿರುವುದರಿಂದ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಅನೇಕರು ಅವರನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಟ್ರೋಲ್ ಮಾಡಿದರು. ಇದು ಅವರ ಸಹೋದರಿ ಮಾಲತಿ ಚಹರ್ ಅವರ ಕೋಪಕ್ಕೆ ಕಾರಣವಾಗಿದೆ.

ವೃತ್ತಿಯಲ್ಲಿ ನಟಿಯಾಗಿರುವ ಮಾಲತಿ ಚಹರ್ ತಮ್ಮ ಎಕ್ಸ್ ಖಾತೆಯಲ್ಲಿ (ಟ್ವಿಟರ್) ತಮ್ಮ ಸಹೋದರನ ಬಗ್ಗೆ ಸಂವೇದನಾರಹಿತವಾಗಿ ವರ್ತಿಸಿದ್ದಕ್ಕಾಗಿ ಅಭಿಮಾನಿಗಳನ್ನು ದೂಷಿಸಿದ್ದಾರೆ. ಯಾವುದೇ ಕ್ರೀಡಾಪಟು ಗಾಯಗೊಳ್ಳುವುದನ್ನು ಎಂದಿಗೂ ಸಂಭ್ರಮಿಸುವುದಿಲ್ಲ. ದೀಪಕ್ ಚಹರ್ ಕೂಡ ಇದಕ್ಕೆ ಹೊರತಾಗಿಲ್ಲ ಎಂದು ಅವರು ಹೇಳಿದರು. ಅವರು ಚೇತರಿಸಿಕೊಳ್ಳಲು ತನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತಿದ್ದಾನೆ ಎಂದು ಹೇಳಿದ ಮಾಲತಿ, ತನ್ನ ಸಹೋದರನ ಪುಟಿದೇಳುವ ಸಾಮರ್ಥ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: T20 World Cup : ಈ ದಿನದಂದು ವಿಶ್ವ ಕಪ್​ಗಾಗಿ ಯುಎಸ್​ಎಗೆ ಹೊರಡಲಿದೆ ಟೀಮ್ ಇಂಡಿಯಾ

ಸಿಎಸ್​ಕೆ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್ ಅವರು ಚಹರ್ ಅವರ ಗಾಯದ ಬಗ್ಗೆ ಉತ್ತಮ ಭಾವನೆ ಹೊಂದಿಲ್ಲ ಎಂದು ಬಹಿರಂಗಪಡಿಸಿದ್ದಾರೆ. ಅದು ಮೇಲ್ನೋಟಕ್ಕೆ ಪ್ರೋತ್ಸಾಹದಾಯಕವಾಗಿಲ್ಲ. ಆದ್ದರಿಂದ, ಫಿಸಿಯೋಗಳು ಮತ್ತು ವೈದ್ಯರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ರನ್​ ಗಾಗಿ ​ ಓಡದೆ ಸ್ವಾರ್ಥ ತೋರಿದ ಧೋನಿ; ನೆಟ್ಟಿಗರಿಂದ ಭಾರೀ ಟೀಕೆ

ಚೆನ್ನೈ: ಚೆನ್ನೈ ಸೂಪರ್​ ಕಿಂಗ್ಸ್ ತಂಡದ ಮಾಜಿ ನಾಯಕ​ ಮಹೇಂದ್ರ ಸಿಂಗ್ ಧೋನಿ(MS Dhoni) ಬುಧವಾರ ನಡೆದ ಪಂಜಾಬ್​ ಲಿಂಗ್ಸ್​ ವಿರುದ್ಧದ ಪಂದ್ಯದಲ್ಲಿ ತೋರಿದ ವರ್ತನೆಯೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದು ಮಾಡುತ್ತಿದೆ. ಹಲವು ನೆಟ್ಟಿಗರು ಧೋನಿ ಇಷ್ಟೊಂದು ಸ್ವಾರ್ಥಿಯಾಗಬಾರದೆಂದು ಟೀಕಿಸಿದ್ದಾರೆ.

ಯಾವುದೇ ವಿವಾದಗಳಿಗೆ ಒಳಗಾಗದೆ ಶಾಂತ ಸ್ವಭಾವದಿಂದ ಆಡುವ ಧೋನಿ ಹಲವು ಬಾರಿ ಸಹ ಆಟಗಾರರ ಶತಕ ಮತ್ತು ಅರ್ಧಶತಕಕ್ಕೋಸ್ಕರ ರನ್​ ಗಳಿಸದೆ ಅವಕಾಶ ಒದಗಿಸಿಕೊಟ್ಟಿದ್ದಾರೆ. ಧೋನಿಯ ಈ ನಡೆಯ ಬಗ್ಗೆ ಅನೇಕರು ಮೆಚ್ಚುಗೆ ಕೂಡ ವ್ಯಕ್ತಪಡಿಸಿದ್ದರು. ಆದರೆ, ಪಂಬಾಬ್​ ವಿರುದ್ಧದ ಪಂದ್ಯದಲ್ಲಿ ಧೋನಿ ಬ್ಯಾಟಿಂಗ್​ ನಡೆಸುವ ಸಲುವಾಗಿ ಸ್ವಾರ್ಥಿಯಾಗಿ ಕಂಡು ಬಂದರು.

ಚೆನ್ನೈ ಬ್ಯಾಟಿಂಗ್​ ಇನಿಂಗ್ಸ್​ನ ಅಂತಿಮ ಓವರ್​ನಲ್ಲಿ ಅರ್ಷದೀಪ್​ ಎಸೆದ ಈ ಓವರ್​ನ ಮೂರನೇ ಎಸೆತವನ್ನು ಧೋನಿ ಬಲವಾಗಿ ಹೊಡೆದರು. ಚೆಂಡು ಬೌಂಡರಿ ಲೈನ್​ ಬಳಿ ಹೋದರೂ ಕೂಡ ಧೋನಿ ರನ್​ ಓಡದೆ ಸ್ವಾರ್ಥ ತೋರಿದರು. ನಾನ್​ಸ್ಟ್ರೈಕ್​ನಲ್ಲಿದ್ದ ಡೇರಿಯಲ್​ ಮಿಚೆಲ್​ ಅವರು ರನ್​ಗಾಗಿ ಓಡಿ ಕ್ರೀಸ್​ ಬಳಿ ಬಂದರು. ಈ ವೇಳೆ ಧೋನಿ ಅವೇಶದಲ್ಲಿಯೇ ಮಿಚೆಲ್​ಗೆ ಹಿಂದೆ ಹೋಗುವಂತೆ ತಿಳಿಸಿದರು. ಸ್ಟ್ರೈಕ್​ ತನಕ ಓಡಿದ್ದ ಮಿಚೆಲ್​ ಮತ್ತೆ ನಾನ್​ಸ್ಟ್ರೈಕರ್​ ಬಳಿಗೆ ಓಡಿ ಬಂದರು. ಮುಂದಿನ ಎಸೆತವನ್ನು ಧೋನಿ ಬೀಟ್​ ಮಾಡಿದರು. 5ನೇ ಎಸೆತದಲ್ಲಿ ಸಿಕ್ಸರ್​ ಬಾರಿಸಿ ಅಂತಿಮ ಎಸೆತದಲ್ಲಿ ರನೌಟ್​ ಆದರು.

Continue Reading
Advertisement
Prajwal Revanna Case Prajwal arrives in Dubai from Germany
ಕ್ರೈಂ44 seconds ago

Prajwal Revanna Case: ಜರ್ಮನಿಯಿಂದ ದುಬೈಗೆ ಹಾರಿದ ಪ್ರಜ್ವಲ್‌ ರೇವಣ್ಣ! ತನಿಖೆ ದಿಕ್ಕು ತಪ್ಪಿಸಿ, ದಿನ ದೂಡಲು ತಂತ್ರ?

Karnataka Weather Forecast
ಮಳೆ10 mins ago

Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ

Chandrayaan 3
ದೇಶ21 mins ago

Chandrayaan 3: ಇತಿಹಾಸ ಸೃಷ್ಟಿಸಿ ಚಂದ್ರನ ಮಡಿಲಲ್ಲಿ ಮಲಗಿದ ವಿಕ್ರಮ್‌ ಲ್ಯಾಂಡರ್‌, ಪ್ರಜ್ಞಾನ್‌ ರೋವರ್; ಇಲ್ಲಿವೆ Photos

Amitabh Bachchan vanity van ambition was to pee by Vidhu Vinod Chopra
ಬಾಲಿವುಡ್22 mins ago

Amitabh Bachchan: ಅಮಿತಾಭ್‌ ಬಚ್ಚನ್‌ ವ್ಯಾನ್‌ನಲ್ಲಿ ಸುಸ್ಸು ಮಾಡೋದೇ ನನ್ನ ಗುರಿ ಎಂದ ಖ್ಯಾತ ನಿರ್ದೇಶಕ!

Prajwal Revanna Case Minister Zameer Ahmed close aide makes Prajwal obscene video pen drive viral
ರಾಜಕೀಯ27 mins ago

Prajwal Revanna Case: ಪ್ರಜ್ವಲ್‌ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ವೈರಲ್‌ ಮಾಡಿದ್ದು ಸಚಿವ ಜಮೀರ್‌ ಅಹ್ಮದ್‌ ಆಪ್ತ?

T20 World Cup
ಕ್ರೀಡೆ32 mins ago

T20 World Cup: ರೋಹಿತ್​, ಅಗರ್ಕರ್​ ಜಂಟಿ ಸುದ್ದಿಗೋಷ್ಠಿಗೆ ಕ್ಷಣಗಣನೆ

Deepak Chahar
ಪ್ರಮುಖ ಸುದ್ದಿ32 mins ago

Deepak Chahar : ಸಹೋದರನನ್ನು ಗೇಲಿ ಮಾಡಿದವರಿಗೆ ತಿರುಗೇಟು ಕೊಟ್ಟ ದೀಪಕ್ ಚಾಹರ್​ ಸಹೋದರಿ!

Viral video
ವೈರಲ್ ನ್ಯೂಸ್36 mins ago

Viral Video:ಶಾಕಿಂಗ್‌ ವಿಡಿಯೋ! ಮಗನನ್ನು ಟ್ರೆಡ್‌ಮಿಲ್‌ನಲ್ಲಿ ಓಡಿಸಿ ಪ್ರಾಣವನ್ನೇ ತೆಗೆದ ಪಾಪಿ ತಂದೆ

assault case in Bengaluru
ಬೆಂಗಳೂರು44 mins ago

Assault Case : ವಿವಾಹಿತೆ ಹಿಂದೆ ಬಿದ್ದ ಪಾಗಲ್‌ ಪ್ರೇಮಿ; ಮದುವೆ ನಿರಾಕರಿಸಿದ್ದಕ್ಕೆ ಮನೆಗೆ ಇಟ್ಟ ಬೆಂಕಿ

Vote Jihad
ದೇಶ56 mins ago

Vote Jihad: ವೋಟ್‌ ಜಿಹಾದ್‌ಗೆ ಕರೆ ನೀಡಿದ್ದು ಇಂಡಿಯಾ ಒಕ್ಕೂಟದ ಮನಸ್ಥಿತಿಗೆ ಕನ್ನಡಿ ಎಂದ ಮೋದಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌