HCL HCL co-founder Ajay Chowdhury's Just Aspire book released, in the book?HCL : ಎಚ್‌ಸಿಎಲ್‌ ಸಹ ಸಂಸ್ಥಾಪಕ ಅಜಯ್‌ ಚೌಧುರಿ ಬರೆದ ಜಸ್ಟ್‌ ಆಸ್ಪೈರ್‌ ಬಿಡುಗಡೆ, ಪುಸ್ತಕದಲ್ಲೇನಿದೆ?

ವಾಣಿಜ್ಯ

HCL : ಎಚ್‌ಸಿಎಲ್‌ ಸಹ ಸಂಸ್ಥಾಪಕ ಅಜಯ್‌ ಚೌಧುರಿ ಬರೆದ ಜಸ್ಟ್‌ ಆಸ್ಪೈರ್‌ ಬಿಡುಗಡೆ, ಪುಸ್ತಕದಲ್ಲೇನಿದೆ?

HCL ಎಚ್‌ಸಿಎಲ್‌ ಸಹ ಸಂಸ್ಥಾಪಕ ಅಜಯ್‌ ಚೌಧುರಿ ಅವರು ತಮ್ಮ ಜಸ್ಟ್‌ ಆಸ್ಪೈರ್‌ ಕೃತಿಯಲ್ಲಿ ಆತ್ಮಕಥೆಯ ಜತೆಗೆ ಭಾರತದ ಐಟಿ ಹಾರ್ಡ್‌ವೇರ್‌ ಕ್ಷೇತ್ರದ ಬೆಳವಣಿಗೆ ಬಗ್ಗೆ ವಿವರಿಸಿದ್ದಾರೆ.

VISTARANEWS.COM


on

HCL HCL co-founder Ajay Chowdhury's Just Aspire book released, in the book?
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾಹಿತಿ ತಂತ್ರಜ್ಞಾನ ದಿಗ್ಗಜ ಎಚ್‌ಸಿಎಲ್‌ನ ಸಹ ಸಂಸ್ಥಾಪಕ, ಪದ್ಮಭೂಷಣ ಡಾ. ಅಜಯ್‌ ಚೌಧುರಿ ತಮ್ಮ ಕೃತಿ ಜಸ್ಟ್‌ ಆಸ್ಪೈರ್‌ (Just Aspire) ಅನ್ನು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿದ್ದಾರೆ. ಉದ್ಯಮಶೀಲತೆ ಮತ್ತು ಭವಿಷ್ಯ (Entrepreneurship and the future) , ತಂತ್ರಜ್ಞಾನದ ಬಗ್ಗೆ ಟಿಪ್ಪಣಿ (Notes on Technology) ಕೃತಿಯಲ್ಲಿ ಅಜಯ್‌ ಚೌಧುರಿ ಅವರು ವಿವರಿಸಿದ್ದಾರೆ.

ಭಾರತದ ಸಾಫ್ಟ್‌ವೇರ್‌ ಕ್ಷೇತ್ರದ ಯಶಸ್ಸಿನ ಬಗ್ಗೆ ನಾರಾಯಣಮೂರ್ತಿ ಮತ್ತು ಅಜೀಂ ಪ್ರೇಮ್‌ಜೀ ಅವರ ಆತ್ಮಕಥನ, ನಂದನ್‌ ನಿಲೇಕಣಿ ಅವರ ಕೃತಿಗಳಲ್ಲಿ ಅಮೂಲ್ಯವಾದ ವಿವರಗಳು ದೊರೆಯುತ್ತವೆ. ಆದರೆ ಭಾರತದ ಐಟಿ ಹಾರ್ಡ್‌ವೇರ್‌ ಮತ್ತು ಮೊಬಿಲಿಟಿ ಇಂಡಸ್ಟ್ರಿ ಬಗ್ಗೆ ಇದುವರೆಗೆ ಬೆಳಕು ಚೆಲ್ಲುವ ಕೃತಿಗಳು ಬಂದಿರಲಿಲ್ಲ. ಈ ದೃಷ್ಟಿಯಿಂದ ನೋಡುವುದಿದ್ದರೆ ಅಜಯ್‌ ಚೌಧುರಿ ಅವರ ( Just Aspire) ಪುಸ್ತಕ ಗಮನ ಸೆಳೆಯುತ್ತದೆ. ಭಾರತದ ಬಿಸಿನೆಸ್‌ ಹಿಸ್ಟರಿಯಲ್ಲಿನ ಮಹತ್ವದ ಗ್ಯಾಪ್‌ ಅನ್ನು ಈ ಪುಸ್ತಕ ಭರ್ತಿಗೊಳಿಸಿದೆ ಎಂದು ಪುಸ್ತಕದ ಬಗ್ಗೆ ವಿಮರ್ಶಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕೃತಿಯು ಅಜಯ್‌ ಚೌಧುರಿ ಅವರ ವೈಯಕ್ತಿಕ ಜೀವನದ ಬಗ್ಗೆ ಬೆಳಕು ಚೆಲ್ಲುವುದರ ಜತೆಗೆ ಭಾರತದ ಐಟಿ ಮತ್ತು ಹಾರ್ಡ್‌ ವೇರ್‌ ಇಂಡಸ್ಟ್ರಿಯ ಇತಿಹಾಸವನ್ನು ಬಿಂಬಿಸುತ್ತದೆ. ಎಚ್‌ಸಿಎಲ್‌ಗೆ ನಿರ್ಣಾಯಕವಾಗಿದ್ದ, ಎಚ್‌ಪಿ ಜತೆಗೆ ಭಾರತದಲ್ಲಿ ಪರ್ಸನಲ್‌ ಕಂಪ್ಯೂಟರ್‌ ವಿತರಣೆಗೆ ಮಾಡಿಕೊಂಡ ಒಪ್ಪಂದ, ನೋಕಿಯಾ ಜತೆಗೆ ಮೊಬೈಲ್‌ ಹ್ಯಾಂಡ್‌ ಸೆಟ್‌ ವಿತರಣೆಗೆ ಮಾಡಿದ್ದ ಐತಿಹಾಸಿಕ ಒಪ್ಪಂದದ ವಿವರಗಳನ್ನು ಕೃತಿ ಒಳಗೊಂಡಿದೆ. ತಮ್ಮ ಸ್ನೇಹಿತ, ಗೆಳೆಯ ಶಿವ್‌ ನಡಾರ್‌ (ಎಚ್‌ಸಿಎಲ್‌ ಸ್ಥಾಪಕ) ಬಗ್ಗೆ ಕೃತಿಯಲ್ಲಿ ವಿವರಿಸಿದ್ದಾರೆ.

ಜಬಲ್ಪುರದದಲ್ಲಿ ಕಳೆದ ಬಾಲ್ಯದ ದಿನಗಳಿಂದ ಎಚ್‌ಸಿಎಲ್‌ನಿಂದ ನಿವೃತ್ತರಾಗುವ ತನಕದ ತಮ್ಮ ಬದುಕಿನ ಯಶೋಗಾಥೆಯನ್ನು, ಏಳು ಬೀಳುಗಳನ್ನು ಅಜಯ್‌ ಚೌಧುರಿ ಬರೆದಿದ್ದಾರೆ. ಪ್ರಸ್ತುತ EPIC Foundation ಎಂಬ ಎನ್‌ಜಿಒ ನಡೆಸುತ್ತಿದ್ದಾರೆ. ಎಲೆಕ್ಟ್ರಾನಿಕ್‌ ಸಿಸ್ಟಮ್‌ ಡಿಸೈನ್ ಕ್ಷೇತ್ರದಲ್ಲಿ ಇದು ಸೇವೆ ಸಲ್ಲಿಸುತ್ತಿರುವ ಸಂಸ್ಥೆಯಾಗಿದೆ.

ಇದನ್ನೂ ಓದಿ: HCL Tech : ಎಚ್‌ಸಿಎಲ್‌ ಟೆಕ್ನಾಲಜೀಸ್‌ಗೆ 3,983 ಕೋಟಿ ರೂ. ಲಾಭ, ಪ್ರತಿ ಷೇರಿಗೆ 18 ರೂ. ಡಿವಿಡೆಂಡ್‌ ಘೋಷಣೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Paytm : ಪೇಟಿಎಂ ಸಿಒಒ ಭವೇಶ್ ಗುಪ್ತಾ ಏಕಾಏಕಿ ರಾಜೀನಾಮೆ

Paytm: ಪೇಟಿಎಂ ಮನಿ ಮುಖ್ಯಸ್ಥರಾಗಿದ್ದ ವರುಣ್ ಶ್ರೀಧರ್ ಅವರನ್ನು ಮ್ಯೂಚುವಲ್ ಫಂಡ್ ಮತ್ತು ಇತರ ಸಂಪತ್ತು ನಿರ್ವಹಣಾ ಉತ್ಪನ್ನಗಳ ವಿತರಣೆಯಲ್ಲಿ ವ್ಯವಹರಿಸುವ ಪೇಟಿಎಂ ಸರ್ವೀಸಸ್ ನ ಸಿಇಒ ಆಗಿ ಕಂಪನಿಯು ವರ್ಗಾಯಿಸಿದೆ.

VISTARANEWS.COM


on

Paytm
Koo

ನವದೆಹಲಿ: ಪೇಟಿಎಂನ (Paytm) ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ಕಂಪನಿಗೆ ರಾಜೀನಾಮೆ ನೀಡಿದ್ದಾರೆ ಎಂದು ಕಂಪನಿಯ ಅಧಿಕೃತ ಹೇಳಿಕೆ ಶನಿವಾರ ತಿಳಿಸಿದೆ. ನಾಯಕತ್ವ ಬದಲಾವಣೆಯ ಭಾಗವಾಗಿ, ಫಿನ್ಟೆಕ್ ಸಂಸ್ಥೆ ಪೇಟಿಎಂ ರಾಕೇಶ್ ಸಿಂಗ್ ಅವರನ್ನು ಪೇಟಿಎಂ ಮನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಿಸಿದೆ.

ಪೇಟಿಎಂ ಮನಿ ಮುಖ್ಯಸ್ಥರಾಗಿದ್ದ ವರುಣ್ ಶ್ರೀಧರ್ ಅವರನ್ನು ಮ್ಯೂಚುವಲ್ ಫಂಡ್ ಮತ್ತು ಇತರ ಸಂಪತ್ತು ನಿರ್ವಹಣಾ ಉತ್ಪನ್ನಗಳ ವಿತರಣೆಯಲ್ಲಿ ವ್ಯವಹರಿಸುವ ಪೇಟಿಎಂ ಸರ್ವೀಸಸ್ ನ ಸಿಇಒ ಆಗಿ ವರ್ಗಾಯಿಸಲಾಗಿದೆ.

ಪಾವತಿ ಮತ್ತು ಸಾಲ ನೀಡುವ ವ್ಯವಹಾರಗಳ ಮೇಲ್ವಿಚಾರಣೆ ನಡೆಸುತ್ತಿದ್ದ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ವೈಯಕ್ತಿಕ ಕಾರಣಗಳಿಂದಾಗಿ ವೃತ್ತಿ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಅವರು ಸಲಹಾ ಪಾತ್ರಕ್ಕೆ ಪರಿವರ್ತನೆಗೊಳ್ಳಲಿದ್ದು ವರ್ಷದ ಅಂತ್ಯದವರೆಗೆ ಪೇಟಿಎಂನ ಬೆಳವಣಿಗೆಯ ಉಪಕ್ರಮಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Lok Sabha Election : ಚುನಾವಣೆ ಖರ್ಚಿಗೆ ಹಣ ಕೊಡದ್ದಕ್ಕೆ ಟಿಕೆಟ್​ ವಾಪಸ್​ ಕೊಟ್ಟ ಕಾಂಗ್ರೆಸ್​ ಅಭ್ಯರ್ಥಿ!

ಕಂಪನಿಯ ನಿರ್ದೇಶಕರ ಮಂಡಳಿಯು ಮೇ 04, 2024 ರಂದು ನಡೆದ ಸಭೆಯಲ್ಲಿ ಕಂಪನಿಯ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ಮೇ 04, 2024 ರ ಪತ್ರದ ಮೂಲಕ ಸಲ್ಲಿಸಿದ ರಾಜೀನಾಮೆಯನ್ನು ಪುರಸ್ಕರಿಸಿದೆ. ಮೇ 31, 2024 ರಂದು ವ್ಯವಹಾರದ ಸಮಯ ಮುಗಿಯುವುದರಿಂದ ಅವರನ್ನು ಕಂಪನಿಯ ಸೇವೆಗಳಿಂದ ಮುಕ್ತಗೊಳಿಸಲಾಗುವುದು ಎಂದು ಪೇಟಿಎಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಪೇಟಿಎಂ ಸ್ಥಾಪಕ ಮತ್ತು ಸಿಇಒ ವಿಜಯ್ ಶೇಖರ್ ಶರ್ಮಾ ಈ ಕುರತು ಪ್ರತಿಕ್ರಿಯಿಸಿ, ಭವೇಶ್ ಅವರ ಕೊಡುಗೆಗಳಿಗಾಗಿ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಪಾವತಿಗಳು ಮತ್ತು ಸಾಲ ನೀಡುವಿಕೆಯ ಮೇಲೆ ನಮ್ಮ ಗಮನವು ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಮತ್ತು ನಮ್ಮ ಯೋಜನೆಗಳನ್ನು ಕಾರ್ಯಗತಗೊಳಿಸಲು ನಮ್ಮ ಪ್ರತಿಯೊಂದು ವ್ಯವಹಾರಗಳಲ್ಲಿ ನಾವು ಹೊಂದಿರುವ ಅನುಭವಿ ನಾಯಕರೊಂದಿಗೆ ನಾನು ಕೆಲಸ ಮುಂದುವರಿಸಲಿದ್ದೇವೆ ಎಂದು ಹೇಳಿದರು.

Continue Reading

ಮನಿ-ಗೈಡ್

Money Guide: ಈ ರಜೆಯಲ್ಲಿ ಮಕ್ಕಳಿಗೆ ಆರ್ಥಿಕತೆಯ ಪ್ರಾಕ್ಟಿಕಲ್‌ ಪಾಠ ಮಾಡಿ

Money Guide: ಇಂದಿನ ಮಕ್ಕಳೇ ಮುಂದಿನ ಜನಾಂಗ. ಹೀಗಾಗಿ ಮಕ್ಕಳಲ್ಲಿ ಆರ್ಥಿಕ ಶಿಸ್ತು ಬೆಳೆಸುವುದು ಮುಖ್ಯ. ಇದರಿಂದ ಭವಿಷ್ಯದಲ್ಲಿ ಅವರು ಸಾಲಕ್ಕೆ ಕೈ ಚಾಚುವುದು ತಪ್ಪುತ್ತದೆ. ನೀವು ಬಾಯಿ ಮಾತಿನಲ್ಲಿ ಹೇಳುವುದಕ್ಕಿಂತ ಪ್ರಾಕ್ಟಿಕಲ್‌ ಆಗಿ ಅವರಿಗೆ ತಿಳಿ ಹೇಳಲು ಈ ರಜಾ ಅವಧಿ ಅತ್ಯಂತ ಪ್ರಶಸ್ತ ಸಮಯ. ಹಾಗಾದರೆ ಹೇಗೆ ಮಕ್ಕಳಿಗೆ ಪ್ರಾಯೋಗಿಕ ಪಾಠ ಮಾಡಬಹುವುದು ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ಮಕ್ಕಳಿಗೆ ಈಗ ರಜಾ ಅವಧಿ. ಪಾಠ, ಪರೀಕ್ಷೆ, ಸೆಮಿನಾರ್‌ ಹೀಗೆ ವರ್ಷಪೂರ್ತಿ ಬಿಡುವಿಲ್ಲದ ಚಟುವಟಿಕೆಗಳಲ್ಲಿ ತೊಡಗಿದ್ದ ಅವರು ರಿಲೀಫ್‌ ಆಗುವ ಸಮಯ. ಈಗ ಬೆಳಗ್ಗೆ ಬೇಗ ಎದ್ದು ಗಡಿಬಿಡಿಯಲ್ಲಿ ಶಾಲೆ, ಕಾಲೇಜಿಗೆ ಓಡಬೇಕೆಂಬ ಧಾವಂತ ಇರುವುದಿಲ್ಲ. ತಮಗೆ ಬೇಕಾದಂತೆ ಕಾಲ ಕಳೆಯಬಹುದು. ಹಾಗಂತ ಅವರನ್ನು ಅವರ ಪಾಡಿಗೆ ಪೂರ್ತಿಯಾಗಿ ಬಿಡಬೇಡಿ. ಅವರಲ್ಲಿ ಆರ್ಥಿಕ ಸಾಕ್ಷರತೆ ಮೂಡಿಸಲು ಇದು ತಕ್ಕ ಸಮಯ. ಎಳವೆಯಲ್ಲಿಯೇ ಆರ್ಥಿಕತೆಯ ವಿಚಾರದಲ್ಲಿ ಅವರಲ್ಲಿ ಶಿಸ್ತು ಮೂಡಿದರೆ ಭವಿಷ್ಯದಲ್ಲಿ ಎದುರಾಗುವ ಅದೆಷ್ಟೋ ಸಮಸ್ಯೆಗಳಿಂದ ಪಾರಾಗಬಹುದು. ನೀವು ಬಾಯಿ ಮಾತಿನಲ್ಲಿ ಹೇಳುವುದಕ್ಕಿಂತ ಪ್ರಾಕ್ಟಿಕಲ್‌ ಆಗಿ ಅವರಿಗೆ ತಿಳಿ ಹೇಳಲು ಈ ರಜಾ ಅವಧಿ ಅತ್ಯಂತ ಪ್ರಶಸ್ತ ಸಮಯ. ಹಾಗಾದರೆ ಹೇಗೆ ಮಕ್ಕಳಿಗೆ ಪ್ರಾಯೋಗಿಕ ಪಾಠ ಮಾಡಬಹುವುದು ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ (Money Guide).

ಉಳಿತಾಯದ ಮಹತ್ವ ತಿಳಿ ಹೇಳಿ

ಹಣದ ಉಳಿತಾಯ ಎಲ್ಲರಿಗೂ, ಎಲ್ಲ ಕಾಲಕ್ಕೂ ಅನಿವಾರ್ಯ. ಒಂದಷ್ಟು ಉಳಿತಾಯ ನಿಮ್ಮ ಬಳಿ ಇದ್ದರೆ ಸಾಲ ಮಾಡುವುದರಿಂದ ಪಾರಾಗಬಹುದು. ಆರಂಭದಲ್ಲಿ ಈ ಪಾಠವನ್ನು ಮಕ್ಕಳಿಗೆ ತಿಳಿ ಹೇಳಿ. ಚಿಕ್ಕ ಮಕ್ಕಳಿಂದ ಹಿಡಿದು ಎಲ್ಲರಿಗೂ ಇದನ್ನು ಅವರಿಗೆ ಮನದಟ್ಟಾಗುವಂತೆ ವಿವರಿಸಿ. ಮಕ್ಕಳ ಹೆಸರಿನಲ್ಲಿ ಸೇವಿಂಗ್ಸ್‌ ಅಕೌಂಟ್‌ ಓಪನ್‌ ಮಾಡಿ. ಪೋಸ್ಟ್‌ ಆಫೀಸ್‌ನಲ್ಲಿಯೂ ಖಾತೆ ತೆರೆಯಬಹುದು. ಅದರಲ್ಲಿ ನಿಯಮಿತವಾಗಿ ಠೇವಣಿ ಇಡಲು ಹೇಳಿ. ನೀವು ಅವರ ಅಕೌಂಟ್‌ಗೆ ಹಣ ಹಾಕುವುದಕ್ಕಿಂತ ಈ ಕೆಲಸವನ್ನು ಸ್ವತಃ ಅವರೇ ನಿರ್ವಹಿಸಲಿ. ಇದರಿಂದ ಅವರಿಗೆ ಉಳಿತಾಯದ ಪ್ರಾಧಾನ್ಯತೆ ಅರಿವಾಗುತ್ತದೆ. ಇದರ ಜತೆಗೆ ಚಿಕ್ಕ ಮಕ್ಕಳಾಗಿದ್ದರೆ ಮನೆಯಲ್ಲಿಯೇ ಉಳಿತಾಯ ಮಾಡಲು ಪಿಗ್ಗಿ ಬ್ಯಾಂಕ್‌ನ ವ್ಯವಸ್ಥೆ ಮಾಡಿ. ಭವಿಷ್ಯದ ಗುರಿಗಳಿಗಾಗಿ ಉಳಿತಾಯದ ಪ್ರಾಮುಖ್ಯತೆ ಮತ್ತು ಕಾಲಾನಂತರದಲ್ಲಿ ಸಣ್ಣ ಮೊತ್ತಗಳು ಹೇಗೆ ಉತ್ತಮ ಸಂಗ್ರಹವಾಗಿ ಬದಲಾಗಬಹುದು ಎಂಬುದನ್ನು ಅರ್ಥ ಮಾಡಿಸಿ. ಅದಕ್ಕಾಗಿ ಹೀಗೆ ಮಾಡಿ: ಅವರು ಯಾವುದಾದರೂ ವಸ್ತುವಿಗೆ ಬೇಡಿಕೆ ಇಟ್ಟರೆ (ಸೈಕಲ್‌, ಬ್ಯಾಗ್‌ ಇತ್ಯಾದಿ) ಕೂಡಲೇ ತಂದು ಕೊಡಬೇಡಿ. ಅವರ ಉಳಿತಾಯದ ಹಣದಿಂದ ಅವರ ಅಗತ್ಯವನ್ನು ಕಂಡುಕೊಳ್ಳುವ ಬಗ್ಗೆ ಪ್ರಸ್ತಾವಿಸಿ. ನಿರ್ದಿಷ್ಟ ಸಮಯದವರೆಗೆ ಹಣ ಉಳಿಸಿದರೆ ಹೇಗೆ ನಮ್ಮ ಅಗತ್ಯಗಳನ್ನು ಪೂರೈಸಬಹುದು ಎನ್ನುವದನ್ನು ಅವರಿಗೆ ಮನದಟ್ಟು ಮಾಡಿ.

ಪಾರ್ಟ್‌ ಟೈಮ್‌ ಜಾಬ್‌

ಸ್ವಲ್ಪ ದೊಡ್ಡ ಮಕ್ಕಳಾದರೆ (ಎಸ್ಸೆಸ್ಸೆಲ್ಸಿ / ಪಿಯು / ಪದವಿ) ಅವರಿಗೆ ರಜೆಯಲ್ಲಿ ಸಣ್ಣ ಪುಟ್ಟ ಪಾರ್ಟ್‌ ಟೈಮ್‌ ಜಾಬ್‌ ಕೊಡಿಸಿ. ಈ ಮೂಲಕ ಅವರಿಗೆ ಹಣದ ಮಹತ್ವ ತಿಳಿಸಿಕೊಡಿ. ಕಾರ್ಖಾನೆಗಳಲ್ಲಿ ಲೆಕ್ಕ ಪತ್ರ ನೋಡಿಕೊಳ್ಳುವುದು, ಪ್ಯಾಕ್‌ ಮಾಡುವುದು, ಕಂಪ್ಯೂಟರ್‌ ಕೆಲಸ, ಸೇಲ್‌ ಮ್ಯಾನ್‌ / ಸೇಲ್ಸ್‌ ಗರ್ಲ್‌, ಬೆಳಗ್ಗೆ ದಿನ ಪತ್ರಿಕೆ ಹಂಚುವುದು ಇತ್ಯಾದಿ ಕೆಲಸ ಮಾಡುವಂತೆ ಮಕ್ಕಳನ್ನು ಪ್ರೋತ್ಸಾಹಿಸಿ. ಹಳ್ಳಿಯವರಾದರೆ ಹೊಲ, ತೋಟದ ಕೆಲಸಕ್ಕೆ ತಮ್ಮೊಂದಿಗೆ ಬರುವಂತೆ ಹೇಳಿ. ಅವರ ಕೆಲಸಕ್ಕೆ ಅನುಗುಣವಾಗಿ ಇಂತಿಷ್ಟು ಸಂಬಳ ನಿಗದಿ ಪಡಿಸಿ. ಬೇಕಿದ್ದರೆ ಅವರ ಟ್ಯೂಷನ್‌ ಕೂಡ ಮಾಡಬಹುದು. ಒಟ್ಟಿನಲ್ಲಿ ಅವರು ಸಂಪಾದಿಸುವಂತೆ ಮಾಡಿ ಅವರಿಗೆ ದುಡಿಮೆಯ ಮಹತ್ವ ತಿಳಿಸಿ.

ಸಂಬಳವನ್ನು ಸರಿಯಾಗಿ ಹಂಚಿಕೆ ಮಾಡಿ

ಮಕ್ಕಳ ಸಂಪಾದನೆಯನ್ನು ಮುಂದಿಟ್ಟುಕೊಂಡು ಅದನ್ನು ಯಾವೆಲ್ಲ ರೀತಿ ಹಂಚಿಕೆ ಮಾಡಬಹುದು ಎನ್ನುವುದನ್ನು ಅವರೊಂದಿಗೆ ಚರ್ಚಿಸಿ. ಅವರ ಖರ್ಚಿಗೆ, ಮನೆ ಖರ್ಚಿಗೆ, ಇತರ ಅಗತ್ಯಗಳಿಗೆ ಹಂಚಿಕೆ ಮಾಡಿ ಕಡ್ಡಾಯವಾಗಿ ಒಂದಷ್ಟು ಮೊತ್ತ ಉಳಿತಾಯ ಮಾಡುವುದು ಹೇಗೆ ಎನ್ನುವುದರ ಯೋಜನೆ ತಯಾರಿಸಿ. ಇನ್ನು ಅನಗತ್ಯ ವಸ್ತುಗಳನ್ನು ಅವರು ಖರೀದಿಸುವುದನ್ನು ತಪ್ಪಿಸಿ. ಅವರ ಆನ್‌ಲೈನ್‌ ಶಾಪಿಂಗ್‌ ಬಗ್ಗೆ ನಿಗಾ ಇಡಿ.

ಬಜೆಟ್‌ ತಯಾರಿಸಲಿ

ಬಜೆಟ್‌ ಯಾಕೆ ಮುಖ್ಯ ಎನ್ನುವುದರ ಕುರಿತು ಮಾಹಿತಿ ನೀಡಿ. ಇದಕ್ಕಾಗಿ ಕೇಂದ್ರ, ರಾಜ್ಯ ಸರ್ಕಾರಗಳು ಮಂಡಿಸುವ ಬಜೆಟ್‌ನ ಉದಾಹರಣೆ ಕೊಡಬಹುದು. ಬಳಿಕ ಅವರೇ ಬಜೆಟ್‌ ತಯಾರಿಸಲಿ. ಅವರ ಬಳಿ ಇರುವ ಪಾಕೆಟ್‌ ಮನಿ, ಉಡುಗೊರೆ ಸಿಕ್ಕ ಹಣ, ಸಂಬಳವನ್ನು ಆಟದ ವಸ್ತು ಖರೀದಿ, ತಿಂಡಿ ಖರೀದಿ ಮತ್ತು ಉಳಿತಾಯಕ್ಕೆ ಹೇಗೆ ಹಂಚಿಕೆ ಮಾಡಬಹುದು ಎನ್ನುವುದನ್ನು ಅವರೇ ಪ್ಲ್ಯಾನ್‌ ಮಾಡಲಿ.

ಹಾಸಿಗೆ ಇದ್ದಷ್ಟೇ ಕಾಲು ಚಾಚು ಎನ್ನುವ ಪಾಠ

ಮನೆ ಸಾಮಗ್ರಿ ಖರೀದಿಗೆ ಹೋಗುವಾಗ ಅವರನ್ನು ಕರೆದುಕೊಂಡು ಹೋಗಿ. ಕೈಯಲ್ಲಿ ಇರುವ ಹಣದಿಂದ ಹೇಗೆ ನಮ್ಮ ಅಗತ್ಯಗಳನ್ನು ಪೂರೈಸಬಹುದು ಎನ್ನುವುದು ಅವರ ಗಮನಕ್ಕೆ ಬರಲಿ. ನೆನಪಿಡಿ, ಮಕ್ಕಳು ನಿಮ್ಮನ್ನು ನೋಡಿ ಕಲಿಯುವುದರಿಂದ, ನಿಮ್ಮ ಪ್ರಭಾವ ಹೆಚ್ಚೇ ಬೀರುವುದರಿಂದ ನೀವು ಕೂಡ ಆರ್ಥಿಕ ಶಿಸ್ತನ್ನು ರೂಢಿಸಿಕೊಳ್ಳಿ. ಬಿಲ್‌ಗಳನ್ನು ಸಮಯಕ್ಕೆ ಸರಿಯಾಗಿ ಪಾವತಿಸಿ, ಭವಿಷ್ಯಕ್ಕಾಗಿ ಉಳಿತಾಯ ಮಾಡಿ. ಎಲ್ಲದಕ್ಕಿಂತ ಮುಖ್ಯವಾಗಿ ಹಾಸಿಗೆ ಇದ್ದಷ್ಟೇ ಕಾಲು ಚಾಚುವುದನ್ನು ರೂಢಿಸಿಕೊಳ್ಳಿ. ಅದನ್ನೇ ಮಕ್ಕಳಿಗೂ ತಿಳಿಸಿ. ಮಾತ್ರವಲ್ಲ ಹೂಡಿಕೆಯ ಪ್ರಾಧಾನ್ಯತೆಯ ಬಗ್ಗೆ ಮಕ್ಕಳಿಗೆ ವಿವರಿಸಿ. ಸಂಪತ್ತು ವೃದ್ಧಿಗೆ ಹೂಡಿಕೆ ಎನ್ನುವುದು ಅತ್ಯುತ್ತಮ ಮಾರ್ಗ ಎನ್ನವುದನ್ನು ತಿಳಿಸಿ. ಹೂಡಿಕೆಗೆ ವಿವಿಧ ವಿಧಾನಗಳಿದ್ದರೂ ಸುರಕ್ಷಿತ ಮಾರ್ಗವನ್ನು ಆಯ್ದುಕೊಳ್ಳುವ ಬಗ್ಗೆ ತಿಳಿಸಿ.

ಇದನ್ನೂ ಓದಿ: Money Guide: ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವ ಯೋಜನೆಗಳಿವು

Continue Reading

ಕೃಷಿ

Cocoa Price: ಅಡಿಕೆ ಮರದೆತ್ತರಕ್ಕೆ ಕೋಕೋ ಬೆಳೆಯ ಧಾರಣೆ! 800% ಏರಿಕೆ!

Cocoa Price: ಹತ್ತಾರು ವರ್ಷಗಳಿಂದ ಒಂದೇ ಬೆಲೆಯಲ್ಲಿ ಸ್ಥಿರವಾಗಿದ್ದ ಕೋಕೋ ಬೆಲೆ ದಾಖಲೆಯ ಮಟ್ಟಕ್ಕೆ ಏರುತ್ತಿದೆ. 2022ರ ವರೆಗೆ ಹಸಿ ಕೋಕೋ (ಕೊಕ್ಕೋ) ಧಾರಣೆ 40 ರೂ. ಆಸುಪಾಸಿನಲ್ಲಿತ್ತು. ಅಲ್ಲಿಂದ ಹಿಂದಕ್ಕೆ 10-12 ವರ್ಷಗಳಲ್ಲಿ ಈ ಕೋಕೋ ಬೆಲೆ 30-40 ರೂ.ಯಲ್ಲೇ ಸ್ಥಿರವಾಗಿ ನಿಂತಿತ್ತು. ಎಲ್ಲ ಉಪ ಬೆಳೆಗಳ ದರ ಏರು ಮುಖ ಕಂಡಿದ್ದರೂ, ಕೋಕೋ ಧಾರಣೆ ಮಾತ್ರ 40 ರೂ. ಆಚೆ ಈಚೆ ಸುತ್ತುತ್ತಿತ್ತು. ಇದೀಗ ಬೆಲೆ ಬರೋಬರಿ 320 ರೂ. ಅಂದರೆ 800% ಹೆಚ್ಚಳವಾಗಿದೆ. ಇನ್ನೂ ಏರಿಕೆ ಸಾಧ್ಯತೆ ಇದೆ ಎಂದು ಅಂದಾಜಿಸಲಾಗುತ್ತಿದೆ.

VISTARANEWS.COM


on

Cocoa Price
Koo

-ಅರವಿಂದ ಸಿಗದಾಳ್, ಮೇಲುಕೊಪ್ಪ
ಹತ್ತಾರು ವರ್ಷಗಳಿಂದ ಒಂದೇ ಬೆಲೆಯಲ್ಲಿ ಸ್ಥಿರವಾಗಿದ್ದ ಕೋಕೋ ಬೆಲೆ (Cocoa Prices) ಸಾರ್ವಕಾಲಿಕ ದಾಖಲೆಯ ಮಟ್ಟಕ್ಕೆ ಏರುತ್ತಿದೆ. ಪರಣಾಮ, ಅಡಿಕೆ ಬೆಳೆಯ ಜತೆ ಉಪ ಬೆಳೆಯಾಗಿ ಬೆಳೆಯುತ್ತಿದ್ದ ಕೋಕೋದಿಂದ ಒಂದಿಷ್ಟು ರೈತರಿಗೆ ಅನಿರೀಕ್ಷಿತವಾಗಿ ದೊಡ್ಡ ಬೋನಸ್ ದೊರೆತಂತಾಗಿದೆ.

2022ರ ವರೆಗೆ ಹಸಿ ಕೋಕೋ (ಕೊಕ್ಕೋ) ಧಾರಣೆ 40 ರೂ. ಆಸುಪಾಸಿನಲ್ಲಿತ್ತು. ಅಲ್ಲಿಂದ ಹಿಂದಕ್ಕೆ 10-12 ವರ್ಷಗಳಲ್ಲಿ ಈ ಕೋಕೋ ಬೆಲೆ 30-40 ರೂ.ಯಲ್ಲೇ ಸ್ಥಿರವಾಗಿ ನಿಂತಿತ್ತು. ಎಲ್ಲ ಉಪ ಬೆಳೆಗಳ ದರ ಏರು ಮುಖ ಕಂಡಿದ್ದರೂ, ಕೋಕೋ ಧಾರಣೆ ಮಾತ್ರ 40 ರೂ. ಆಚೆ ಈಚೆ ಸುತ್ತುತ್ತಿತ್ತು.

ಕೊಕೋ ಧಾರಣೆ ತೀರಾ ಕುಸಿತ ಕಂಡಾಗ, ಕೊಕೋ ಕೃಷಿಯ ಬಗ್ಗೆ ಮಲೆನಾಡು ಕರಾವಳಿ ಭಾಗದ ಕೃಷಿಕರು ಕೋಕೋವನ್ನು ನಿರ್ಲಕ್ಷಿಸಿದ್ದರು. ಮೂರ್ನಾಲ್ಕು ವರ್ಷಗಳ ಹಿಂದೆ ʼಎಂದೂ ಧಾರಣೆ ಏರದ ಇದು ಲಾಭದಾಯಕವಲ್ಲದ ಬೆಳೆ’ ಎಂಬ ಹಣೆ ಪಟ್ಟಿಯೂ ಕೋಕೋ ಬೆಳೆಗೆ ಅಂಟಿಕೊಂಡಿತ್ತು. ಬೆಲೆ ಇಲ್ಲದ ಕೋಕೋ ಗಿಡಗಳು ಅಡಿಕೆ ತೋಟದಲ್ಲಿ ಇರುವುದೇ ಒಂದು ಸಮಸ್ಯೆ ಅನ್ನುವಂತಾಗಿತ್ತು!

ಜತೆಗೆ ಕೋಕೋ ಹಣ್ಣುಗಳನ್ನು ತಿನ್ನಲು ದಾಂಗುಡಿ ಇಡುತ್ತಿದ್ದ ಮಂಗ, ಅಳಿಲು, ಕೆಲವು ಪಕ್ಷಿಗಳು ಬರಿ ಕೋಕೋ ಹಣ್ಣುಗಳನ್ನು ಹಾಳು ಮಾಡುವುದಲ್ಲದೆ, ಅಡಿಕೆ ಬೆಳೆಯನ್ನೂ ನಾಶ ಮಾಡುತ್ತಿದ್ದವು. ಬೆಲೆಯೂ ಇಲ್ಲದ, ತೊಂದರೆಯೂ ಜಾಸ್ತಿ ಇದ್ದ ಕೋಕೋ ಮರಗಳನ್ನು ಮಲೆನಾಡು ಕರಾವಳಿಯ ನೂರಾರು ಅಡಿಕೆ ಬೆಳೆಗಾರರು ಕಡಿದು, ಅಡಿಕೆ ಮರಗಳಿಗೆ ಮಲ್ಚಿಂಗ್ ಮಾಡಿ ಕೈ ತೊಳೆದುಕೊಂಡಿದ್ದು ಇತಿಹಾಸ. ಈಗ ಅದೇ ರೈತರು ಕೈ ಕೈ ಹಿಸುಕಿಕೊಳ್ಳುವಂತಾಗಿದೆ. ಕೋಕೋ ಬೆಳೆಯ ಧಾರಣೆ ಅಡಿಕೆ ಮರದ ಎತ್ತರಕ್ಕೆ ಏರುತ್ತಿರುವುದು ಕಂಡು ಅನೇಕ ರೈತರು ಸಂಕಟ ಅನುಭವಿಸುವಂತಾಗಿರುವುದೂ ಸತ್ಯ.

ಕಳೆದ ದಶಕದಲ್ಲಿ ಹಸಿ ಕೋಕೋ 40 ರೂ. ಇದ್ದಿದ್ದು, ಇವತ್ತು ಬರೋಬರಿ 320 ರೂ.ಗೆ ತಲುಪಿದೆ. ಅಂದರೆ 800% ಹೆಚ್ಚಳ! ಇನ್ನೂ ಏರಿಕೆ ಸಾಧ್ಯತೆ ಇದೆ ಎಂದು ಅಂದಾಜಿಸಲಾಗುತ್ತಿದೆ.

ಧಾರಣೆ ಏರಿಕೆಗೆ ಕಾರಣ ಏನು?

ಕೋಕೋವನ್ನು ಐಸ್‌ಕ್ರೀಮ್, ಚಾಕೊಲೇಟ್, ಮಿಠಾಯಿ, ಬೇಕಿಂಗ್ ಮತ್ತು ಸೌಂದರ್ಯವರ್ಧಕ ಉದ್ಯಮಗಳಲ್ಲಿ ಬಳಸಲಾಗುತ್ತದೆ. ಈ ಉದ್ಯಮಗಳಲ್ಲಿ ಹೆಚ್ಚಿನ ಬೇಡಿಕೆ ಇದ್ದರೂ, ಬರ ಮತ್ತು ನೀರಿನ ಕೊರತೆಯಿಂದ ವಿಶ್ವದಾದ್ಯಂತ ಕೋಕೋ ಬೆಳೆ ಗಣನೀಯವಾಗಿ ಇಳಿಮುಖವಾಗಿರುವುದು ಇವತ್ತಿನ ಕೋಕೋ ಧಾರಣೆ ಏರಿಕೆ ಆಗುತ್ತಿರುವುದಕ್ಕೆ ಮುಖ್ಯ ಕಾರಣ ಎನ್ನಲಾಗುತ್ತಿದೆ.

ಜಾಗತಿಕ ಪೂರೈಕೆಯ 70%ರಷ್ಟಿರುವ ಆಫ್ರಿಕಾದ ಕೋಕೋ ಉತ್ಪಾದನೆಯು ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದಾಗಿ ಜಾಗತಿಕ ಬೇಡಿಕೆಗೆ ಅನುಗುಣವಾಗಿ ಪೂರೈಸಲಾಗದೆ ಬೆಳೆ ನೆಲ ಕಚ್ಚಿರುವುದು ಭಾರತವೂ ಸೇರಿದಂತೆ ವಿಶ್ವ ಮಾರುಕಟ್ಟೆಯಲ್ಲಿ ಕೋಕೋ ಧಾರಣೆ ಏರಿಕೆ ಆಗುತ್ತಿದೆ ಎಂದು ವರದಿಗಳು ಹೇಳುತ್ತಿವೆ. ಭಾರತದಲ್ಲೂ ಹವಾಮಾನ ವ್ಯತ್ಯಾಸದಿಂದ ಕೋಕೋ ಬೆಳೆ ಇಳಿಮುಖವಾಗಿದೆ.

ಕ್ವಿಂಟಾಲ್ ಡ್ರೈ ಕೋಕೋಗೆ ಈಗ ಲಕ್ಷ ಬೆಲೆ

ಹಸಿ ಕೋಕೋ ದರ 320 ರೂ. ಗಡಿ ದಾಟುತ್ತಿರುವಾಗಲೇ, ಒಣಗಿದ ಡ್ರೈ ಕೋಕೋ ಧಾರಣೆಯೂ ಅದೇ ಪ್ರಮಾಣದಲ್ಲಿ ಏರುತ್ತಿದ್ದು ಗರಿಷ್ಠ ಒಣ ಕೋಕೋ ದರ ಈಗ ಕೆ.ಜಿ.ಗೆ 960 ರೂ. ಅನ್ನು ತಲುಪಿದೆ. ದರ ಏರಿಕೆ ಹೀಗೆ ಮುಂದುವರಿದರೆ ಮೂರ್ನಾಲ್ಕು ದಿನಗಳಲ್ಲಿ ಅದು ನಾಲ್ಕಂಕೆಯನ್ನು ಮುಟ್ಟಿ, ಕ್ವಿಂಟಾಲ್ ಡ್ರೈ ಕೋಕೋ ಬೆಲೆ ದಾಖಲೆಯ 1,00,000 ರೂ. ತಲುಪುವ ಸಾಧ್ಯತೆ ಇದೆ.

ಕೋಕೋ ಬೆಳೆಯನ್ನು ರಕ್ಷಣೆ ಮಾಡಿಕೊಳ್ಳುವುದೂ ಈಗ ದುಸ್ತರ

ಕೋಕೋ ಧಾರಣೆ ಮಿಂಚಿ‌ ವೇಗದಲ್ಲಿ ಏರುತ್ತಿರುವಾಗ ಫಸಲಿಗೆ ಬರುತ್ತಿರುವ ಬೆಳೆಯನ್ನು ರಕ್ಷಣೆ ಮಾಡಿಕೊಳ್ಳುವುದೂ ಸಣ್ಣ ರೈತರಿಗೆ ತಲೆನೋವಾಗಿ ಪರಿಣಮಿಸುತ್ತಿದೆ. ಮಂಗ, ಅಳಿಲು, ಕೆಂಜಳಿಲು, ಕಬ್ಬೆಕ್ಕು, ಪಕ್ಷಿಗಳಿಂದ ಬೆಳೆಯನ್ನು ರಕ್ಷಣೆ ಮಾಡಿಕೊಂಡು ಹಣ್ಣಾದಾಗ ಕಟಾವು ಮಾಡಬೇಕು. ಆದರೆ ಕಟಾವು ಮಾಡುವ ಮೊದಲೇ ಪ್ರಾಣಿಗಳಿಂದ ರಕ್ಷಣೆ ಮಾಡಿಕೊಳ್ಳುವುದು ರೈತರಿಗೆ ದೊಡ್ಡ ಸವಾಲಾಗಿದೆ. ಇದಲ್ಲದೆ ಕೋಕೋ ಹಣ್ಣುಗಳನ್ನು ತೋಟದಿಂದಲೇ ಕದಿಯುತ್ತಿರುವ ವರದಿಗಳೂ ಹರಿದಾಡುತ್ತಿವೆ.

ಇದನ್ನೂ ಓದಿ: Areca Price: ಅಡಿಕೆ ದರ ಗಗನಮುಖಿ; ಚುನಾವಣೆ ಬಳಿಕ ಮತ್ತಷ್ಟು ಏರಿಕೆ?

ಒಟ್ಟಿನಲ್ಲಿ ಒಂದು ಕಾಲದಲ್ಲಿ ಐಸ್‌ಕ್ರೀಮ್, ಚಾಕಲೇಟ್‌ಗಳಲ್ಲಿ ಬಳಸುತ್ತಿದ್ದ ವೆನಿಲಾ ಬೆಳೆಯ ದರ ಏರಿಕೆಯಿಂದ ಆಗುತ್ತಿದ್ದ ಪರಿಣಾಮಗಳು ಈಗ ಕೋಕೋಗೆ ರಾಜ ಮರ್ಯಾದೆಯ ದರ ಬರುತ್ತಿದೆ. ಜಾಗತಿಕ ಮಟ್ಟದಲ್ಲಿ ಕೋಕೋ ಬೇಡಿಕೆ ಹೆಚ್ಚಿದ್ದು, ಪೂರೈಕೆ ಕಡಿಮೆ ಇರುವ ಕಾರಣ ಸಧ್ಯಕ್ಕಂತು ಅದರ ದರ ಇಳಿಯುವ ಸಾಧ್ಯತೆ ಕಡಿಮೆ ಎಂದು ಚರ್ಚೆ ನೆಡೆಯುತ್ತಿದೆ.

Continue Reading

ವಾಣಿಜ್ಯ

Costly wedding gift: ಮಗನಿಗೆ ಬಂಗಲೆ, ಸೊಸೆಗೆ ನೆಕ್ಲೇಸ್ ಗಿಫ್ಟ್‌ ಕೊಟ್ಟ ಅಂಬಾನಿ; ಬೆಲೆ ಕೇಳಿದರೆ ಅಚ್ಚರಿ!

Costly wedding gift: ಮಕ್ಕಳ ಮದುವೆಯನ್ನು ಅದ್ದೂರಿಯಾಗಿ ಮಾಡಿ ವಿಶ್ವದ ಗಮನ ಸೆಳೆದಿರುವ ಉದ್ಯಮಿ ಮುಕೇಶ್, ನೀತಾ ಅಂಬಾನಿ ಇದೀಗ ದುಬಾರಿ ಉಡುಗೊರೆಗಳನ್ನು ನೀಡಿ ಮತ್ತೊಮ್ಮೆ ವಿಶ್ವದ ಗಮನ ಸೆಳೆದಿದ್ದಾರೆ.

VISTARANEWS.COM


on

By

Costly wedding gift
Koo

ಭಾರತದ (India) ಅತ್ಯಂತ ಶ್ರೀಮಂತ ಹಾಗೂ ವಿಶ್ವದ (world) 11ನೇ ಶ್ರೀಮಂತ ವ್ಯಕ್ತಿಯಾಗಿರುವ ಉದ್ಯಮಿ ಮುಕೇಶ್ ಅಂಬಾನಿ (Mukesh Ambani) ಮತ್ತು ನೀತಾ ಅಂಬಾನಿ ( Nita Ambani ) ಅವರ ಕೊನೆಯ ಪುತ್ರ ಅನಂತ್ ಅಂಬಾನಿ (Anant Ambani) ಅವರ ವಿವಾಹ ಪೂರ್ವ ಕಾರ್ಯಕ್ರಮಗಳು ವಿಶ್ವದ ಗಮನ ಸೆಳೆದಿತ್ತು. ಸುಮಾರು 1,259 ಕೋಟಿ ರೂ .ಖರ್ಚು ಮಾಡಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿರುವ ಮುಕೇಶ್, ನೀತಾ ದಂಪತಿ ತಮ್ಮ ಮಕ್ಕಳಿಗೆ ಮದುವೆಯ ಉಡುಗೊರೆಯಾಗಿ (Costly wedding gift) ಏನು ಕೊಟ್ಟಿರಬಹುದು ಎನ್ನುವ ಕುತೂಹಲ ಎಲ್ಲರಲ್ಲೂ ಇದೆ.

ಮುಕೇಶ್ ಮತ್ತು ನೀತಾ ತಮ್ಮ ಮಕ್ಕಳಿಗಾಗಿ ಖರ್ಚು ಮಾಡುವಾಗ ಯಾವುದೇ ರೀತಿಯಲ್ಲಿ ಉಳಿತಾಯದ ಕಡೆ ಗಮನ ಹರಿಸುವುದಿಲ್ಲ. ಅವರು ಧಾರಾಳವಾಗಿ ಖರ್ಚುಗಳನ್ನು ಮಾಡುತ್ತಾರೆ ಎಂಬುದನ್ನು ಅನಂತ್ ಅಂಬಾನಿಯ ಮದುವೆ ಪೂರ್ವ ಕಾರ್ಯಕ್ರಮಗಳಲ್ಲಿ ಮತ್ತೊಮ್ಮೆ ಸಾಬೀತು ಮಾಡಿದ್ದಾರೆ.

ಮುಕೇಶ್, ನೀತಾ ಮಕ್ಕಳಾದ ಆಕಾಶ್ ಅಂಬಾನಿ, ಇಶಾ ಅಂಬಾನಿ ಅವರ ಮದುವೆಯನ್ನು ಅದ್ಧೂರಿಯಾಗಿ ಮಾಡಿ ಗಮನ ಸೆಳೆದಿದ್ದರು. ಇದೀಗ ಅವರ ಕಿರಿಯ ಸಹೋದರ ಅನಂತ್ ಅಂಬಾನಿ ಇತ್ತೀಚೆಗೆ ರಾಧಿಕಾ ಮರ್ಚೆಂಟ್ ಅವರೊಂದಿಗೆ ದಾಂಪತ್ಯ ಜೀವನ ಪ್ರವೇಶ ಮಾಡುವುದನ್ನು ಘೋಷಿಸಿದ್ದರು. ಕಳೆದ ಜುಲೈ ನಲ್ಲಿ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದ ಅನಂತ್, ರಾಧಿಕಾ ಅವರ ವಿವಾಹ ಪೂರ್ವ ಕಾರ್ಯಕ್ರಮಗಳು ಮಾರ್ಚ್ ನಲ್ಲಿ ನಡೆಯಿತು. ಇದಕ್ಕಾಗಿ ಸುಮಾರು 1259 ಕೋಟಿ ರೂ. ಖರ್ಚು ಮಾಡಲಾಗಿತ್ತು.

ಇದನ್ನೂ ಓದಿ: Mukesh Ambani: ಪತ್ನಿ ನೀತಾ ಹಣೆಗೆ ಮುತ್ತಿಟ್ಟ ಮುಕೇಶ್ ಅಂಬಾನಿ: ರೊಮ್ಯಾಂಟಿಕ್‌ ಫೋಟೊಗಳು ವೈರಲ್‌!

ಕಾರ್ಯಕ್ರಮದಲ್ಲಿ ಪ್ರದರ್ಶನಕ್ಕಾಗಿ ಜಾಗತಿಕ ಐಕಾನ್ ರಿಹಾನ್ನಾ ಅವರನ್ನು ಕರೆದುಕೊಂಡು ಬರಲಾಗಿತ್ತು. ಈ ಒಂದು ಕಾರ್ಯಕ್ರಮಕ್ಕಾಗಿ ಅವರು 66- 74 ಕೋಟಿ ರೂ. ಪಡೆದಿದ್ದರು. ಇನ್ನು ಮುಂದಿನ ಜುಲೈನಲ್ಲಿ ನಡೆಯುವ ವಿವಾಹ ಸಮಾರಂಭಕ್ಕಾಗಿ ಅಂಬಾನಿ ಕುಟುಂಬ ಮದುವೆ ವೆಚ್ಚವನ್ನು ದ್ವಿಗುಣಗೊಳಿಸಲು ಸಿದ್ಧರಾಗಿದ್ದಾರೆ.

ಅಂಬಾನಿ ಕುಟುಂಬದ ಇಶಾ ಅಂಬಾನಿಯ ಪತಿ ಆನಂದ್ ಪಿರಮಾಲ್ ಅವರು ಪಿರಮಲ್ ಗ್ರೂಪ್‌ನ ಕಾರ್ಯನಿರ್ವಾಹಕ ನಿರ್ದೇಶಕರು, ಹಾಗೆಯೇ ಆಕಾಶ್ ಅಂಬಾನಿಯ ಪತ್ನಿ ಶ್ಲೋಕಾ ಮೆಹ್ತಾ ಅವರು ವಜ್ರದ ಸಂಪತ್ತಿನ ವಾರಸುದಾರರು. ಅನಂತ್ ಅಂಬಾನಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ರಾಧಿಕಾ ಮರ್ಚೆಂಟ್ ಎನ್ಕೋರ್ ಹೆಲ್ತ್‌ಕೇರ್‌ನ ನಿರ್ದೇಶಕರಾಗಿದ್ದಾರೆ.

ಭವ್ಯವಾದ ಸಂಪ್ರದಾಯದಲ್ಲಿ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ತಮ್ಮ ಮಕ್ಕಳಿಗೆ ಹಲವು ವಿಶೇಷ ಮತ್ತು ದುಬಾರಿ ಉಡುಗೊರೆಗಳನ್ನು ಮದುವೆಯ ಉಡುಗೊರೆಯಾಗಿ ನೀಡಿದ್ದಾರೆ.


ಅನಂತ್ ಅಂಬಾನಿಗಾಗಿ ಬೀಚ್-ವಿಲ್ಲಾ

ಅನಂತ್ ಅಂಬಾನಿಗಾಗಿ ದುಬೈನಲ್ಲಿ 640 ಕೋಟಿ ರೂ. ಮೌಲ್ಯದ ಬೀಚ್-ವಿಲ್ಲಾವನ್ನು ಖರೀದಿ ಮಾಡಿದ್ದಾರೆ ಮುಕೇಶ್. 2022ರ ಏಪ್ರಿಲ್ ನಲ್ಲಿ ಮುಕೇಶ್ ಅಂಬಾನಿ ತನ್ನ ಕಿರಿಯ ಮಗ ಅನಂತ್‌ಗಾಗಿ ದುಬೈನ ದುಬಾರಿ ಜಿಲ್ಲೆಯಾದ ಪಾಮ್ ಜುಮೇರಾದಲ್ಲಿ ವಿಸ್ತಾರವಾದ ಬೀಚ್‌ಫ್ರಂಟ್ ವಿಲ್ಲಾವನ್ನು ಖರೀದಿ ಮಾಡಿದ್ದರು. ಇದು 10 ಬೆಡ್‌ರೂಮ್‌ಗಳನ್ನು ಹೊಂದಿದೆ. 70 ಮೀಟರ್‌ಗಳಷ್ಟು ವ್ಯಾಪಿಸಿರುವ ಖಾಸಗಿ ಬೀಚ್‌ ಅನ್ನು ಒಳಗೊಂಡಿರುವ ಇದರ ಮೌಲ್ಯ 640 ಕೋಟಿ ರೂ.


ಶ್ಲೋಕಾ ಮೆಹ್ತಾಗೆ 451 ಕೋಟಿ ರೂ. ಮೌಲ್ಯದ ವಜ್ರದ ನೆಕ್ಲೇಸ್

2019 ರಲ್ಲಿ ಶ್ಲೋಕಾ ಮೆಹ್ತಾ ಅವರೊಂದಿಗೆ ಆಕಾಶ್ ಅಂಬಾನಿ ಅವರ ವಿವಾಹದ ಸಂದರ್ಭದಲ್ಲಿ ನೀತಾ ಅಂಬಾನಿ ಅವರು ತಮ್ಮ ಸೊಸೆಗೆ ಮೌವಾದ್ ಎಲ್ ಅಪರೂಪದ ನೆಕ್ಲೇಸ್ ಅನ್ನು ಉಡುಗೊರೆಯಾಗಿ ನೀಡಿದ್ದರು. ಇದರ ಮೌಲ್ಯ 451 ಕೋಟಿ ರೂ. 407.48 ಕ್ಯಾರೆಟ್ ಹಳದಿ ವಜ್ರವನ್ನು 18 ಕಾರಟ್ ಗುಲಾಬಿ ಚಿನ್ನದ ಕವಲುಗಳೊಂದಿಗೆ ಹೆಣೆದುಕೊಂಡಿರುವ 229.52 ಕ್ಯಾರೆಟ್ ಬಿಳಿ ವಜ್ರದ ನೆಕ್ಲೇಸ್‌ನಿಂದ ಅಲಂಕರಿಸಲಾಗಿತ್ತು.


ಅನಂತ್- ರಾಧಿಕಾಗೆ ಬೆಂಟ್ಲಿ ಕಾಂಟಿನೆಂಟಲ್ ಜಿಟಿಸಿ ಸ್ಪೀಡ್

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್‌ಗೆ 4.5 ಕೋಟಿ ರೂ. ನ ಬೆಂಟ್ಲಿ ಕಾಂಟಿನೆಂಟಲ್ ಜಿಟಿಸಿ ಸ್ಪೀಡ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. 2023ರಲ್ಲಿ ಅವರ ನಿಶ್ಚಿತಾರ್ಥದ ಮೊದಲು ರಾಧಿಕಾ ಮರ್ಚೆಂಟ್ ಅವರಿಗೆ ಸುಮಾರು 4.5 ಕೋಟಿ ಮೌಲ್ಯದ ಬೆಂಟ್ಲಿ ಕಾಂಟಿನೆಂಟಲ್ ಜಿಟಿಸಿ ಸ್ಪೀಡ್ ಅನ್ನು ಉಡುಗೊರೆಯಾಗಿ ನೀಡಲಾಯಿತು. ಟ್ವಿನ್- ಟರ್ಬೋಚಾರ್ಜ್ಡ್ 6.0 ಲೀಟರ್ W12 ಎಂಜಿನ್ ಹೊಂದಿದ ಈ ಐಷಾರಾಮಿ ಕಾರು ಅತ್ಯಂತ ಸುಂದರವಾಗಿದ್ದು, ಹೆಚ್ಚಿನ ಕಾರ್ಯಕ್ಷಮತೆಯನ್ನು ಹೊಂದಿದೆ.


ರಾಧಿಕಾ ಮರ್ಚೆಂಟ್‌ಗೆ ಮುತ್ತು ಮತ್ತು ವಜ್ರದ ಚೋಕರ್

ಜುಲೈ 2022 ರಲ್ಲಿ ನಡೆದ ಸಾಮಾಜಿಕ ಕಾರ್ಯಕ್ರಮದ ಸಂದರ್ಭದಲ್ಲಿ ರಾಧಿಕಾ ಮರ್ಚೆಂಟ್ ಅದ್ಭುತವಾದ ಮುತ್ತು ಮತ್ತು ವಜ್ರದ ಚೋಕರ್ ಅನ್ನು ಧರಿಸಿದ್ದರು, ಇದು ನೀತಾ ಅಂಬಾನಿ ಅವರು ಧರಿಸಿದ್ದ ಸೊಗಸಾದ ಚೋಕರ್ ಅನ್ನು ನೆನಪಿಸುತ್ತದೆ. ಇದರ ನಿಖರವಾದ ಮೌಲ್ಯವನ್ನು ಬಹಿರಂಗಪಡಿಸಲಾಗಿಲ್ಲವಾದರೂ ಇದು ನಿಸ್ಸಂದೇಹವಾಗಿ ತನ್ನ ಭಾವಿ ಸೊಸೆಗೆ ನೀತಾ ಅಂಬಾನಿಯಿಂದ ಅಮೂಲ್ಯವಾದ ಉಡುಗೊರೆಯಾಗಿದೆ ಎನ್ನಲಾಗುತ್ತದೆ.


ಇಶಾ ಅಂಬಾನಿಗಾಗಿ ಮದುವೆಗೆ 100 ಮಿಲಿಯನ್ ಡಾಲರ್ ಖರ್ಚು

ಇಶಾ ಅಂಬಾನಿ ಮತ್ತು ಆನಂದ್ ಪಿರಾಮಲ್ ಅವರ ವಿವಾಹ 2018 ರಲ್ಲಿ ನಡೆದಿದೆ. ಇದವಿಶ್ವದ ಅತ್ಯಂತ ಅದ್ದೂರಿ ವಿವಾಹಗಳಲ್ಲಿ ಒಂದಾಗಿದೆ. ಇದಕ್ಕಾಗಿ ಅಂಬಾನಿ ಕುಟುಂಬ ಸುಮಾರು 100 ಮಿಲಿಯನ್ ಡಾಲರ್ ಅಂದಾಜು 830 ಕೋಟಿ ರೂ. ಖರ್ಚು ಮಾಡಿದ್ದಾರೆ ಎಂದು ವರದಿಯಾಗಿದೆ. ಪ್ರತಿಯೊಂದೂ ಆಮಂತ್ರಣ ಕಾರ್ಡ್ ನ ಬೆಲೆ 3 ಲಕ್ಷ ರೂ. ಎನ್ನಲಾಗಿದೆ. ಬಿಯಾನ್ಸ್ ಅವರ ಪ್ರದರ್ಶನ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗಾಗಿ 4 – 6 ಮಿಲಿಯನ್ ಸುಮಾರು ಅಂದಾಜು 33 – 50 ಕೋಟಿ ರೂ. ಖರ್ಚು ಮಾಡಲಾಗಿತ್ತು. ಈ ಕಾರ್ಯಕ್ರಮಗಳು ಪ್ರಪಂಚದಾದ್ಯಂತದ ಪ್ರಸಿದ್ಧ ವ್ಯಕ್ತಿಗಳು ಮತ್ತು ಗಣ್ಯರನ್ನು ಆಕರ್ಷಿಸಿತು.

Continue Reading
Advertisement
Annamalai Biopic Will Be Made In Kollywood Annamalai Biopic Will Be Made In Kollywood Annamalai Biopic Will Be Made In Kollywood
ಕಾಲಿವುಡ್15 mins ago

Annamalai Biopic: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಯೋಪಿಕ್‌ಗೆ ತಮಿಳು ಖ್ಯಾತ ನಟ ನಟನೆ!

IPL 2024
ಕ್ರೀಡೆ24 mins ago

IPL 2024: ಹ್ಯಾಟ್ರಿಕ್​ ಗೆಲುವು ಸಾಧಿಸಿದ ಆರ್​ಸಿಬಿಯ ಪ್ಲೇ ಆಫ್ ಲೆಕ್ಕಾಚಾರ ಹೇಗಿದೆ?

HD Revanna
ಕರ್ನಾಟಕ40 mins ago

HD Revanna: ಎಚ್‌.ಡಿ.ರೇವಣ್ಣ ಮುಂದಿನ ಕಾನೂನು ಹೋರಾಟ ಯಾವ ರೀತಿ ಇರಲಿದೆ? ಇಲ್ಲಿದೆ ಮಾಹಿತಿ

Shreyas Talpade hints his heart attack side effect of Covid vaccine
ಬಾಲಿವುಡ್45 mins ago

Shreyas Talpade: ಶ್ರೇಯಸ್‌ ತಲ್ಪಾಡೆ ಹೃದಯಾಘಾತಕ್ಕೆ ಕೋವಿಡ್ ವ್ಯಾಕ್ಸಿನ್‌ ಕಾರಣವಂತೆ! ನಟ ಹೇಳಿದ್ದೇನು?

IPL 2024 Points Table
ಕ್ರಿಕೆಟ್53 mins ago

IPL 2024 Points Table: 7ನೇ ಸ್ಥಾನಕ್ಕೇರಿದ ಆರ್​ಸಿಬಿ; ಮುಂಬೈಗೆ ಕೊನೆಯ ಸ್ಥಾನ

Blood Pressure
ಆರೋಗ್ಯ55 mins ago

Blood Pressure: ರಕ್ತದೊತ್ತಡ ನಿಯಂತ್ರಿಸಲು ಈ ಆಹಾರಗಳು ಸೂಕ್ತ

Prajwal Revanna Case
ಕರ್ನಾಟಕ57 mins ago

Prajwal Revanna Case: ದುಬೈ ವಿಮಾನದಲ್ಲೂ ರಾಜ್ಯಕ್ಕೆ ಬಾರದ ಸಂಸದ ಪ್ರಜ್ವಲ್ ರೇವಣ್ಣ

Tips To Prevent Curd
ಆಹಾರ/ಅಡುಗೆ1 hour ago

Tips To Prevent Curd: ಮೊಸರು ಹುಳಿಯಾಗದೇ ಇರಲು ಈ ಟಿಪ್ಸ್ ಪಾಲಿಸಿ

Terrorist attack
ದೇಶ1 hour ago

Terrorist Attack: ಪೂಂಚ್​​ನಲ್ಲಿ ಭಯೋತ್ಪಾದಕರ ದಾಳಿ; ಓರ್ವ ಯೋಧ ಹುತಾತ್ಮ, ಐವರ ಸ್ಥಿತಿ ಗಂಭೀರ

HD Revanna
ಕರ್ನಾಟಕ2 hours ago

HD Revanna: ತಡರಾತ್ರಿವರೆಗೂ ರೇವಣ್ಣರನ್ನು ವಿಚಾರಣೆ ನಡೆಸಿದ ಎಸ್‌ಐಟಿ ಅಧಿಕಾರಿಗಳು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌