IPL 2023: ಕೊಹ್ಲಿ ಬಳಿ ಕ್ಷಮೆ ಕೇಳಿದರೇ ನವೀನ್​ ಉಲ್​ ಹಕ್? ಟ್ವೀಟ್​ನಲ್ಲಿ ಏನಿದೆ? - Vistara News

ಕ್ರಿಕೆಟ್

IPL 2023: ಕೊಹ್ಲಿ ಬಳಿ ಕ್ಷಮೆ ಕೇಳಿದರೇ ನವೀನ್​ ಉಲ್​ ಹಕ್? ಟ್ವೀಟ್​ನಲ್ಲಿ ಏನಿದೆ?

ನವೀನ್​ ಉಲ್​-ಹಕ್​ ಅವರು ವಿರಾಟ್​ ಕೊಹ್ಲಿಗೆ ಬರೆದಿದ್ದಾರೆ ಎನ್ನಲಾದ ಕ್ಷಮಾಪಣ ಪತ್ರದ ಟ್ವೀಟ್​ ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

VISTARANEWS.COM


on

naveen ul haq and virat kohli conversation
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ವಿರಾಟ್​ ಕೊಹ್ಲಿ ಮತ್ತು ನವೀನ್​ ಉಲ್​-ಹಕ್​ ಅವರ ನಡುವಿನ ಶೀತಲ ಸಮರವೊಂದು ಇದೀಗ ಅಂತ್ಯ ಕಂಡಂತೆ ಕಾಣುತ್ತಿದೆ. ಇದಕ್ಕೆ ಕಾರಣ ನವೀನ್​ ಉಲ್​-ಹಕ್​ ಅವರ ಕ್ಷಮಾಪಣ ಪತ್ರ. ಹೌದು ವಿರಾಟ್​ ಕೊಹ್ಲಿಗೆ ಟ್ವೀಟ್​ ಮಾಡುವ ಮೂಲಕ ನವೀನ್​ ಉಲ್​-ಹಕ್ ಅವರು ಕ್ಷಮೆ ಕೇಳಿದ ಪೋಸ್ಟ್​ ಇದೀಗ ಬಾರಿ ವೈರಲ್​ ಆಗಿದೆ.

ಮೇ 1ರಂದು ಲಕ್ನೋದ ಏಕಾನ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದಿದ್ದ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಮತ್ತು ನವೀನ್​ ಉಲ್​-ಹಕ್​ ಮಧ್ಯೆ ಮೈದಾನದಲ್ಲಿಯೇ ಕಿರಿಕ್​ ಆಗಿತ್ತು. ಬಳಿಕ ಪಂದ್ಯ ಮುಗಿದ ಬಳಿಕ ಗಂಭೀರ್​ ಅವರು ಇದೇ ವಿಚಾರವಾಗಿ ಕೊಹ್ಲಿ ಜತೆ ವಾಗ್ವಾದ ನಡೆಸಿದ್ದರು. ಈ ಘಟನೆ ನಡೆದ ಬಳಿಕ ನವೀನ್ ಅವರು ವಿರಾಟ್​ ಕೊಹ್ಲಿ ಮತ್ತು ಆರ್​ಸಿಬಿ ಸೋತ ಬಳಿಕ ಮಾವಿನ ಹಣ್ಣಿನ ಫೋಟೊ ಹಾಕಿ ಪರೋಕ್ಷವಾಗಿ ಟ್ರೋಲ್​ ಮಾಡಿದ್ದರು. ಇಲ್ಲಿಂದ ಆರಂಭಗೊಂಡ ಈ ಸಮರವನ್ನು ಮುಂದೆ ವಿರಾಟ್​ ಅಭಿಮಾನಿಗಳು ಮುಂದುವರಿಸಿದರು.

ನವೀನ್​ ಉಲ್​-ಹಕ್​ ಅವರು ಎಲ್ಲೇ ಹೋದರೂ ವಿರಾಟ್​ ಅಭಿಮಾನಿಗಳು ಕೀಟಲೆ ನೀಡುತ್ತಿದ್ದರು. ಅವರನ್ನು ಕಂಡೊಡನೆ ಕೊಹ್ಲಿ…ಕೊಹ್ಲಿ ಎಂದು ಜೋರಾಗಿ ಕೂಗುತ್ತಿದ್ದರು. ಇದರಿಂದ ಬೇಸತ್ತು ಹೋಗಿದ್ದ ನವೀನ್​ ಉಲ್​ ಹಕ್​ ಅವರು ಇದೀಗ ತಾನು ವಿರಾಟ್​ ಕೊಹ್ಲಿಯ ಅಪ್ಪಟ ಅಭಿಮಾನಿ, ಅವರು ನನಗೆ ಸ್ಫೂರ್ತಿ, ನನ್ನ ಮನೆಯ ಕೋಣೆಯ ತುಂಬಾ ಅವರದ್ದೇ ಫೋಟೊಗಳಿಗೆ. ಅವರ ಬಳಿ ನಾನು ಕ್ಷಮೆಯಾಚಿಸುತ್ತೇನೆ. ಮುಂದಿನ ಆವೃತ್ತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತೊರೆದು ಆರ್​ಸಿಬಿ ಪರ ಆಡಲು ಇಚ್ಛಿಸುತ್ತೇನೆ” ಎಂದು ಬರೆಯಲಾಗಿದೆ.


ಸದ್ಯ ಈ ಟ್ವೀಟ್​ ವೈರಲ್​ ಆಗುತ್ತಿದ್ದಂತೆ ಈ ಟ್ವೀಟ್​ನ ಅಸಲಿಯತ್ತು ಬಯಲಾಗಿದೆ. ವಿರಾಟ್ ಕೊಹ್ಲಿ ಅವರ ಅಭಿಮಾನಿಯೊಬ್ಬರು ನವೀನ್ ಉಲ್ ಹಕ್ ಹೆಸರಿನಲ್ಲಿ ನಕಲಿ ಖಾತೆ ತೆರೆದು ಈ ಟ್ವೀಟ್​ ಮಾಡಿದ್ದಾರೆ. ಕೆಲವರು ಈ ಟ್ವೀಟ್​ ಸುಳ್ಳು ಎಂದು ತಿಳಿದಿದ್ದರೂ ಶೇರ್​ ಮಾಡುವ ಮೂಲಕ ನವೀನ್ ಉಲ್ ಹಕ್ ಅವರನ್ನು ಪರೋಕ್ಷವಾಗಿ ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ IPL 2023 : ಮುಂಬಯಿ ಇಂಡಿಯನ್ಸ್ ಸ್ಟಾರ್​ ಬೌಲರ್​ಗೆ ಅವರ ಊರಲ್ಲಿ ಬ್ಯಾನ್​!

ಮುಂಬೈ ಆಟಗಾರರಿಂದಲೂ ಟ್ರೋಲ್​ ಆಗಿದ್ದ ನವೀನ್​

ಕಳೆದ ಲಕ್ನೋ ಸೂಪರ್​ ಜೈಂಟ್ಸ್​ ವಿರುದ್ಧದ ಎಲಿಮಿನೇಟ್​ ಪಂದ್ಯದಲ್ಲಿ ಗೆಲುವು ದಾಖಲಿಸಿದ ಬಳಿಕ ಮುಂಬೈ ತಂಡದ ಆಟಗಾರರಾದ ಸಂದೀಪ್​ ವಾರಿಯರ್​, ವಿಷ್ಣು ವಿನೋದ್​ ಮತ್ತು ಕುಮಾರ್​ ಕಾರ್ತಿಕೇಯ ಅವರು ಮೂರು ಮಾವಿನ ಹಣ್ಣುಗಳನ್ನು ಇಟ್ಟು ನವೀನ್​ ಉಲ್​​-ಹಕ್​ ಅವರನ್ನು ಟ್ರೋಲ್​ ಮಾಡಿದ್ದರು. ಮಹಾತ್ಮ ಗಾಂಧೀಜಿ ಅವರು ಹೇಳಿದ ಮೂರು ಕೋತಿಗಳ ಸಣ್ಣ ನೀತಿ ಕಥೆಯಾದ ಕೆಟ್ಟದನ್ನು ಕೇಳಬೇಡ, ಕೆಟ್ಟದ್ದನ್ನು ಮಾತನಾಡಬೇಡ, ಕೆಟ್ಟದ್ದನ್ನು ನೋಡಬೇಡ ಎಂಬಂತೆ ಮುಂಬೈ ತಂಡ ಈ ಮೂವರು ಆಟಗಾರು ಟೇಬಲ್​ನಲ್ಲಿ ಮೂರು ಮಾವಿನ ಹಣ್ಣು ಇಟ್ಟು ನವೀನ್​ ಉಲ್​ ಹಕ್​ ಅವರನ್ನು ಪರೋಕ್ಷವಾಗಿ ಟ್ರೋಲ್​ ಮಾಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

IPL 2024 : ಚೆನ್ನೈ ತಂಡದ ಮಾರಕ ಬೌಲರ್ ಮಹೀಶ್​ ಪತಿರಾನಾ​ ಐಪಿಎಲ್​ನಿಂದ ಹೊರಕ್ಕೆ

IPL 2024: ಬಲಗೈ ವೇಗಿ ಈವರೆಗೆ 6 ಇನಿಂಗ್ಸ್​​ಗಳಲ್ಲಿ 13 ವಿಕೆಟ್​​ಗಳನ್ನು ಪಡೆದಿದ್ದಾರೆ. ಅವರ ಡೆತ್ ಬೌಲಿಂಗ್ ಕೌಶಲ್ಯದಿಂದ ಸಿಎಸ್​​ಕೆಗೆ ನಿರ್ಣಾಯಕ ಆಸ್ತಿಯಾಗಿದ್ದರು. ಆದಾಗ್ಯೂ, ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಪದೇ ಪದೇ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಟಿ20 ವಿಶ್ವಕಪ್​​ನಲ್ಲಿ ಪ್ರಮುಖ ಪಂದ್ಯಾವಳಿಗೆ ಮುಂಚಿತವಾಗಿ ಶ್ರೀಲಂಕಾ ಕ್ರಿಕೆಟ್ ತಮ್ಮ ವೇಗಿಯನ್ನು ಅಪಾಯಕ್ಕೆ ತಳ್ಳಲು ಬಯಸುವುದಿಲ್ಲ.

VISTARANEWS.COM


on

IPL 2024
Koo

ಬೆಂಗಳೂರು: ಎಸ್ಆರ್​ಎಚ್​​ ವಿರುದ್ಧದ ಪಂದ್ಯದ ನಂತರ ಸ್ನಾಯುಸೆಳೆತಕ್ಕೆ ಒಳಗಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗದ ಬೌಲರ್​ ಮಹೀಶ್ ಪತಿರಾನಾ ಐಪಿಎಲ್​ನ (IPL 2024) ಉಳಿದ ಭಾಗದಿಂದ ಹೊರಗುಳಿಯುವಂತಾಗಿದೆ. ಅವರು ತಮ್ಮ ತಾಯ್ನಾಡಾದ ಶ್ರೀಲಂಕಾಕ್ಕೆ ಮರಳಿದ್ದಾರೆ. ಧರ್ಮಶಾಲಾದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ಅವರು ಫಿಟ್ ಆಗಿರುತ್ತಾರೆ ಎಂದು ವರದಿಯಾಗಿತ್ತು. ಆದರೆ ಸಿಎಸ್​​ಕೆ ಸ್ಟಾರ್​ ಇನ್ನೂ ಗುಣಮುಖರಾಗದ ಕಾರಣ ತಾಯ್ನಾಡಿಗೆ ಮರಳಿದ್ದಾರೆ ಎಂದು ಸಿಎಸ್​ಕೆ ಮೂಲಗಳೂ ಬಹಿರಂಗಪಡಿಸಿವೆ. ಇದರರ್ಥ ಅವರು ಟಿ20 ವಿಶ್ವಕಪ್​​ನಲ್ಲಿ ಲಂಕಾ ತಂಡದ ಭಾಗವಾಗಲಿದ್ದಾರೆ.

ಬಲಗೈ ವೇಗಿ ಈವರೆಗೆ 6 ಇನಿಂಗ್ಸ್​​ಗಳಲ್ಲಿ 13 ವಿಕೆಟ್​​ಗಳನ್ನು ಪಡೆದಿದ್ದಾರೆ. ಅವರ ಡೆತ್ ಬೌಲಿಂಗ್ ಕೌಶಲ್ಯದಿಂದ ಸಿಎಸ್​​ಕೆಗೆ ನಿರ್ಣಾಯಕ ಆಸ್ತಿಯಾಗಿದ್ದರು. ಆದಾಗ್ಯೂ, ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಪದೇ ಪದೇ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಟಿ20 ವಿಶ್ವಕಪ್​​ನಲ್ಲಿ ಪ್ರಮುಖ ಪಂದ್ಯಾವಳಿಗೆ ಮುಂಚಿತವಾಗಿ ಶ್ರೀಲಂಕಾ ಕ್ರಿಕೆಟ್ ತಮ್ಮ ವೇಗಿಯನ್ನು ಅಪಾಯಕ್ಕೆ ತಳ್ಳಲು ಬಯಸುವುದಿಲ್ಲ.

ಇದನ್ನೂ ಓದಿ : IPL 2024 : ಮ್ಯಾಕ್ಸಿ ಐಪಿಎಲ್​ನಲ್ಲಿ ಬರೀ ಬೂಸಿ; ಮ್ಯಾಕ್ಸ್​ವೆಲ್​ ಆಟಕ್ಕೆ ಅಭಿಮಾನಿಗಳ ಆಕ್ರೋಶ

ಸ್ನಾಯುಸೆಳೆತದ ಗಾಯಗಳು ಚೇತರಿಸಿಕೊಳ್ಳಲು ಸಾಮಾನ್ಯವಾಗಿ ಐದರಿಂದ ಆರು ವಾರಗಳನ್ನು ತೆಗೆದುಕೊಳ್ಳುತ್ತವೆ. ಆದ್ದರಿಂದ ಪಥಿರಾನಾ ಈ ಹೊಡೆತದಿಂದ ಹೇಗೆ ಚೇತರಿಸಿಕೊಳ್ಳುತ್ತಾರೆ ಎಂಬುದನ್ನು ನೋಡುವುದು ಕುತೂಹಲಕರವಾಗಿದೆ. ಅವರು ಶ್ರೀಲಂಕಾದ ವಿಶ್ವಕಪ್ 2023 ತಂಡದ ಭಾಗವಾಗಿದ್ದರು. ಆದರೆ ಮಧ್ಯದಲ್ಲಿ ಗಾಯಗೊಂಡಿದ್ದರು. ವಿಶ್ವ ದರ್ಜೆಯ ಕೌಶಲ್ಯಗಳನ್ನು ಹೊಂದಿರುವ ಪಥಿರಾನಾ ಆ ಪಂದ್ಯಾವಳಿಗೆ ಸಂಪೂರ್ಣ ಫಿಟ್ ಆಗುವುದು ಕಡ್ಡಾಯ ಎಂದು ಹೇಳಿದರು.

ಇದು ಖಂಡಿತವಾಗಿಯೂ ಸಿಎಸ್​ಕೆಗೆ ದೊಡ್ಡ ಹೊಡೆತವಾಗಿದೆ. ಪಥಿರಾನಾ ನಿಜವಾಗಿಯೂ ಇಡೀ ಐಪಿಎಲ್ 2024 ರಿಂದ ಹೊರಗುಳಿದರೆ ಋತುರಾಜ್ ಗಾಯಕ್ವಾಡ್ ಮತ್ತು ತಂಡವು ತಮ್ಮ ವ್ಯವಹಾರವನ್ನು ಹೇಗೆ ನಡೆಸುತ್ತದೆ ಎಂಬುದನ್ನು ನೋಡಬೇಕಾಗಿದೆ ಎಂದು ಕ್ರಿಕೆಟ್ ಪಂಡಿತರು ಹೇಳಿದ್ದಾರೆ.

Continue Reading

ಕ್ರೀಡೆ

MI vs SRH: ಸನ್ ಸ್ಟ್ರೋಕ್​ನಿಂದ ತಪ್ಪಿಸಿಕೊಂಡೀತೇ ಮುಂಬೈ ಇಂಡಿಯನ್ಸ್​​?

MI vs SRH: ಹೆಡ್​ ಮತ್ತು ಅಭಿಷೇಕ್​ ಶರ್ಮಾ ಪವರ್​ ಪ್ಲೇ ತನಕ ಆಡಿದರೆ ದೊಡ್ಡ ಮೊತ್ತ ಹರಿದು ಬರಲಿದೆ. ಮಧ್ಯಮ ಕ್ರಮಾಂಕದಲ್ಲಿಯೂ ಬ್ಯಾಟಿಂಗ್​ ಲೈನ್​ ಅಪ್​ ಬಲಿಷ್ಠವಾಗಿದೆ. ಮಾರ್ಕ್ರಮ್​, ಕ್ಲಾಸೆನ್​ ನಿತೇಶ್​ ರೆಡ್ಡಿ, ಅಬ್ದುಲ್​ ಸಮದ್​ ಸಿಡಿದು ನಿಂತು ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ.

VISTARANEWS.COM


on

MI vs SRH
Koo

ಮುಂಬಯಿ: ಪ್ಲೇ ಆಫ್​​ನಿಂದ ಬಹುತೇಕ ಹೊರಬಿದ್ದಿರುವ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್​(MI vs SRH) ಸೋಮವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್​(sunrisers hyderabad) ವಿರುದ್ಧ ಆಡಲಿದೆ. ಮುಂಬೈಗೆ ತವರಿನ ಪಂದ್ಯವಾಗಿದ್ದರೂ ಕೂಡ ತಂಡದ ಪ್ರದರ್ಶನ ನೋಡುವಾಗ ಗೆಲುವು ಕಷ್ಟ ಎನ್ನಲಡ್ಡಿಯಿಲ್ಲ.

ರಾಜೀವ್​ ಗಾಂಧಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದಿದ್ದ ಇತ್ತಂಡಗಳ ನಡುವಣ ಮೊದಲ ಮುಖಾಮುಖಿಯಲ್ಲಿ ಉಭಯ ತಂಡಗಳು ಸೇರಿ 523 ರನ್ ಬಾರಿಸಿತ್ತು. ಹೈದರಾಬಾದ್​ 3 ವಿಕೆಟ್​ಗೆ 277 ರನ್ ಬಾರಿಸಿದ್ದರೆ, ಮುಂಬೈ  5 ವಿಕೆಟ್​ಗೆ 246 ರನ್ ಗಳಿಸಿ 31 ರನ್​ ಅಂತರದಿಂದ ಸೋಲು ಕಂಡಿತ್ತು. ಹೆಡ್​ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರೆ, ಇವರ ಜತೆಗಾರ ಅಭಿಷೇಕ್​ ಶರ್ಮ 16 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು. ಇದೀಗ ಈ ಸೋಲಿಗೆ ಮುಂಬೈ ತವರಿನಲ್ಲಿ ಸೇಡು ತೀರಿಸಿಕೊಂಡೀತೇ ಎಂದು ಕಾದು ನೋಡಬೇಕಿದೆ.

ಉತ್ಸಾಹ ಕಳೆದುಕೊಂಡ ಮುಂಬೈ


ಐದು ಬಾರಿಯ ಚಾಂಪಿಯನ್​ ಮುಂಬೈ ತಂಡ ಈ ಬಾರಿ ಅತ್ಯಂತ ಕಳಪೆ ಪ್ರದರ್ಶನ ತೋರಿದೆ. ಯಾರೂ ಕೂಡ ತಂಡಕ್ಕಾಗಿ ಹಾಗೂ ಉತ್ಸಾಹ ಭರಿತವಾಗಿ ಆಡುತ್ತಿಲ್ಲ. 11 ಪಂದ್ಯಗಳಿಂದ ಕೇವಲ 3 ಗೆಲುವು ಸಾಧಿಸಿ 6 ಅಂಕದೊಂದಿಗೆ ಕೊನೆಯ ಸ್ಥಾನಿಯಾಗಿದೆ. ಕಳೆದ 16 ಆವೃತ್ತಿಯ ಐಪಿಎಲ್​ ಟೂರ್ನಿಯನ್ನು ನೋಡುವುದಾದರೆ ಮುಂಬೈ ಈ ಸ್ಥಿತಿ ತಲುಪಿದ್ದು ಇದೇ ಮೊದಲು.

ಇದನ್ನೂ ಓದಿ IPL 2024 : ಮ್ಯಾಕ್ಸಿ ಐಪಿಎಲ್​ನಲ್ಲಿ ಬರೀ ಬೂಸಿ; ಮ್ಯಾಕ್ಸ್​ವೆಲ್​ ಆಟಕ್ಕೆ ಅಭಿಮಾನಿಗಳ ಆಕ್ರೋಶ

ನೂತನ ನಾಯಕ ಹಾರ್ದಿಕ್​ ಪಾಂಡ್ಯ, ಸೂರ್ಯಕುಮಾರ್​ ಯಾದವ್​, ಇಶಾನ್​ ಕಿಶನ್​, ಟಿಮ್​ ಡೇವಿಡ್​ ಹೀಗೆ ಸಾಗಿ ಎಲ್ಲ ಬ್ಯಾಟರ್​ಗಳು ಘೋರ ವೈಫಲ್ಯ. ಬೌಲಿಂಗ್​ನಲ್ಲಿ ಜಸ್​ಪ್ರೀತ್​ ಬುಮ್ರಾ ಹೊರತುಪಡಿಸಿದ ಉಳಿದೆಲ್ಲರು ಲೆಕ್ಕಭರ್ತಿಗೆ ಆಡಿದಂತೆ ಆಡುತ್ತಿದ್ದಾರೆ. ಸಂಘಟಿತ ಪ್ರದರ್ಶನ ತೋರದೇ ಹೋದಲ್ಲಿ ಈ ಪಂದ್ಯದಲ್ಲಿಯೂ ಸೋಲು ಕಟ್ಟಿಟ್ಟ ಬುತ್ತಿ ಎನ್ನಲಡ್ಡಿಯಿಲ್ಲ. ಬೆನ್ನು ನೋವಿನಿಂದ ಬಳಲುತ್ತಿರುವ ರೋಹಿತ್​ ಈ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಅಧಿಕ. ಕಳೆದ ಪಂದ್ಯದಲ್ಲಿ ರೋಹಿತ್​ ಇಂಪ್ಯಾಕ್ಟ್​ ಆಟಗಾರನಾಗಿ ಕಣಕ್ಕಿಳಿದಿದ್ದರು. ಮುಂದಿನ ತಿಂಗಳು ಟಿ20 ವಿಶ್ವಕಪ್​ ಕೂಡ ಆರಂಭಗೊಳ್ಳುವ ಕಾರಣ ಬಿಸಿಸಿಐ ಕೂಡ ವಿಶ್ರಾಂತಿ ಪಡೆಯಲು ಸೂಚನೆ ನೀಡಿರಬಹುದು.

ಹೈದರಾಬಾದ್​ಗೆ ಮಹತ್ವದ ಪಂದ್ಯ


ಪ್ಲೇ ಆಫ್​ ಪ್ರವೇಶಿಸಬೇಕಿದ್ದರೆ ಸನ್​ರೈಸರ್ಸ್​ ಹೈದರಾಬಾದ್​ಗೆ ಇದು ಮಹತ್ವದ ಪಂದ್ಯ. ಸದ್ಯ 12 ಅಂಕ ಗಳಿಸಿ ನಾಲ್ಕನೇ(ಚೆನ್ನೈ-ಪಂಜಾಬ್​ ಪಂದ್ಯಕ್ಕೂ ಮುನ್ನ) ಸ್ಥಾನದಲ್ಲಿದೆ. ಕಮಿನ್ಸ್​ ಪಡೆ ಕಳೆದ ರಾಜಸ್ಥಾನ್​ ವಿರುದ್ಧದ ಪಂದ್ಯದಲ್ಲಿ ಕೇವಲ 1 ರನ್​ ಅಂತರದಿಂದ ಗೆದ್ದು ಬೀಗಿತ್ತು. ಹೀಗಾಗಿ ತಂಡಕ್ಕೆ ಲಕ್​ ಕೂಡ ಇದೆ. ಹೆಡ್​ ಮತ್ತು ಅಭಿಷೇಕ್​ ಶರ್ಮಾ ಪವರ್​ ಪ್ಲೇ ತನಕ ಆಡಿದರೆ ದೊಡ್ಡ ಮೊತ್ತ ಹರಿದು ಬರಲಿದೆ. ಮಧ್ಯಮ ಕ್ರಮಾಂಕದಲ್ಲಿಯೂ ಬ್ಯಾಟಿಂಗ್​ ಲೈನ್​ ಅಪ್​ ಬಲಿಷ್ಠವಾಗಿದೆ. ಮಾರ್ಕ್ರಮ್​, ಕ್ಲಾಸೆನ್​ ನಿತೇಶ್​ ರೆಡ್ಡಿ, ಅಬ್ದುಲ್​ ಸಮದ್​ ಸಿಡಿದು ನಿಂತು ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ.

Continue Reading

ಕ್ರೀಡೆ

IPL 2024 : ಮ್ಯಾಕ್ಸಿ ಐಪಿಎಲ್​ನಲ್ಲಿ ಬರೀ ಬೂಸಿ; ಮ್ಯಾಕ್ಸ್​ವೆಲ್​ ಆಟಕ್ಕೆ ಅಭಿಮಾನಿಗಳ ಆಕ್ರೋಶ

IPL 2024: ಮ್ಯಾಕ್ಸ್ವೆಲ್ ಚೆಂಡಿನೊಂದಿಗೆ ಪರಿಣಾಮಕಾರಿಯಾಗಿದ್ದರೂ, ಅವರ ಬ್ಯಾಟಿಂಗ್ ಫಾರ್ಮ್ ಅಸಮಂಜಸವಾಗಿದೆ. ಜಿಟಿ ವಿರುದ್ಧದ ಆರ್ಸಿಬಿ 148 ರನ್​ಗಳ ಗುರಿ ಬೆನ್ನಟ್ಟಿದಾಗ ಮ್ಯಾಕ್ಸ್ವೆಲ್ ಮೂರು ಎಸೆತಗಳಲ್ಲಿ ಕೇವಲ 4 ರನ್ ಗಳಿಸಲಷ್ಟೇ ಶಕ್ತರಾದರು. ಆರಂಭಿಕ ಜೋಡಿ ವಿರಾಟ್ ಕೊಹ್ಲಿ (42) ಮತ್ತು ಫಾಫ್ ಡು ಪ್ಲೆಸಿಸ್ (64) ಕೇವಲ 5.5 ಓವರ್ಗಳಲ್ಲಿ 92 ರನ್​​ಗಳನ್ನು ಸೇರಿಸಿದ್ದರು. ಇದು ಆರ್​ಸಿಬಿಯ ಸಾರ್ವಕಾಲಿಕ ಗರಿಷ್ಠ ಪವರ್ಪ್ಲೇ ಸ್ಕೋರ್ ಕೂಡ ಹೌದು.

VISTARANEWS.COM


on

IPL2024
Koo

ಬೆಂಗಳೂರು: ಐಪಿಎಲ್ 2024 ರಲ್ಲಿ (IPL 2024) ಆರಂಭಿಕ ಕಳಪೆ ಪ್ರದರ್ಶನದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡ ಮತ್ತೆ ಪುಟಿದೆದ್ದಿದೆ. ಸತತ 3 ಗೆಲುವುಗಳನ್ನು ಗಳಿಸುವ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿದೆ ಮತ್ತು ಪ್ಲೇಆಫ್ ಅವಕಾಶಗಳನ್ನು ಜೀವಂತವಾಗಿರಿಸಿದೆ. ಗುಜರಾತ್ ಟೈಟಾನ್ಸ್ (Gujarat Titans) ವಿರುದ್ಧ ನಡೆದ ಪಂದ್ಯದಲ್ಲಿ ಆರ್ಸಿಬಿ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ 7ನೇ ಸ್ಥಾನಕ್ಕೇರಿತು.

ಗೆಲುವಿನ ಸರಣಿಯ ಹೊರತಾಗಿಯೂ, ಆರ್​​ಸಿಬಿ ಮ್ಯಾನೇಜ್ಮೆಂಟ್ ಮತ್ತು ಅಭಿಮಾನಿಗಳು ಗ್ಲೆನ್ ಮ್ಯಾಕ್ಸ್ವೆಲ್ ಅವರ ಫಾರ್ಮ್ ಬಗ್ಗೆ ಚಿಂತಿತರಾಗಿದ್ದಾರೆ. ಅವರ ಆಟಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಮ್ಯಾಕ್ಸ್ವೆಲ್ ಚೆಂಡಿನೊಂದಿಗೆ ಪರಿಣಾಮಕಾರಿಯಾಗಿದ್ದರೂ, ಅವರ ಬ್ಯಾಟಿಂಗ್ ಫಾರ್ಮ್ ಅಸಮಂಜಸವಾಗಿದೆ. ಜಿಟಿ ವಿರುದ್ಧದ ಆರ್ಸಿಬಿ 148 ರನ್​ಗಳ ಗುರಿ ಬೆನ್ನಟ್ಟಿದಾಗ ಮ್ಯಾಕ್ಸ್ವೆಲ್ ಮೂರು ಎಸೆತಗಳಲ್ಲಿ ಕೇವಲ 4 ರನ್ ಗಳಿಸಲಷ್ಟೇ ಶಕ್ತರಾದರು. ಆರಂಭಿಕ ಜೋಡಿ ವಿರಾಟ್ ಕೊಹ್ಲಿ (42) ಮತ್ತು ಫಾಫ್ ಡು ಪ್ಲೆಸಿಸ್ (64) ಕೇವಲ 5.5 ಓವರ್ಗಳಲ್ಲಿ 92 ರನ್​​ಗಳನ್ನು ಸೇರಿಸಿದ್ದರು. ಇದು ಆರ್​ಸಿಬಿಯ ಸಾರ್ವಕಾಲಿಕ ಗರಿಷ್ಠ ಪವರ್ಪ್ಲೇ ಸ್ಕೋರ್ ಕೂಡ ಹೌದು.

ದಿನೇಶ್ ಕಾರ್ತಿಕ್ ಮತ್ತು ಸ್ವಪ್ನಿಲ್ ಸಿಂಗ್ ಕೊನೆಯಲ್ಲಿ ನಿರ್ಣಾಯಕ ಅಂತ್ಯವನ್ನು ಒದಗಿಸಿ ಆರ್​ಸಿಬಿಗೆ ಗೆಲುವು ತಂದುಕೊಟ್ಟರು. ಇದಕ್ಕೆ ಮೊದಲು ಮ್ಯಾಕ್ಸ್​ವೆಲ್ ಸೇರಿದಂತೆ ಆರ್​ಸಿಬಿಯ ಆಟಗಾರರು ಕೆಟ್ಟ ಪ್ರದರ್ಶನ ನೀಡಿದ್ದರು. ಇದನ್ನು ಆರ್​ಸಿಬಿಯ ಮಾಜಿ ಆಟಗಾರ ಪಾರ್ಥಿವ್ ಪಟೇಲ್ ಪ್ರಶ್ನಿಸಿದ್ದಾರೆ. ಮ್ಯಾಕ್ಸ್​​ವೆಲ್​ ಅವರ ಕಳಪೆ ಪ್ರದರ್ಶನವನ್ನು ಟೀಕಿಸಿದ್ದಾರೆ. ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ, ಪಾರ್ಥಿವ್ ಮ್ಯಾಕ್ಸ್ವೆಲ್ ಅವರನ್ನು ಲೀಗ್​ನಲ್ಲಿ “ಅತಿ ಹೆಚ್ಚು ರೇಟಿಂಗ್ ಪಡೆದ ಕ್ರಿಕೆಟಿಗ” ಎಂದು ಕರೆದಿದ್ದಾರೆ. “ಗ್ಲೆನ್ ಮ್ಯಾಕ್ಸ್ವೆಲ್… ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ ಪಡೆದ ಆಟಗಾರ…” ಎಂದು ಅವರು ತಮ್ಮ ಖಾತೆಯಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: IPL 2024 : ಟೀಕೆಗಳಿಗೆ ಪ್ರತಿಕ್ರಿಯಿಸುವುದು ಯಾಕೆ? ಕೊಹ್ಲಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗವಾಸ್ಕರ್​

ಈ ಟ್ವೀಟ್ ಬಿಸಿ ಚರ್ಚೆ ಹುಟ್ಟುಹಾಕಿದೆ. ಮ್ಯಾಕ್ಸ್ವೆಲ್ ಅಭಿಮಾನಿಗಳು ಪಾರ್ಥಿವ್ ಪಟೇಲ್ ಅವರ ಕಾಮೆಂಟ್​ ವಿಭಾಗದಲ್ಲಿ ಪರ ವಿರೋಧ ಚರ್ಚೆ ನಡೆಸಿದ್ದಾರೆ.

ದಾಳಿಯನ್ನು ನೋಡಿದ ನಂತರ ಐಪಿಎಲ್​ನಲ್ಲಿ ಮ್ಯಾಕ್ಸ್ವೆಲ್ ಅವರ ಪ್ರದರ್ಶನವನ್ನು ಆಸ್ಟ್ರೇಲಿಯಾದ ಪ್ರದರ್ಶನಕ್ಕೆ ಹೋಲಿಸುವಂತೆ ಅವರು ಅಭಿಮಾನಿಗಳಿಗೆ ಮನವಿ ಮಾಡಿದರು. ಆಸ್ಟ್ರೇಲಿಯಾ ಪರ ಮ್ಯಾಕ್ಸ್​ವೆಲ್​ ಅವರ ಪ್ರದರ್ಶನಕ್ಕೆ ಭಾರಿ ಬಹುಮತ ಒಲವು ತೋರಿದೆ. ಮ್ಯಾಕ್ಸ್ವೆಲ್ ಆರ್​ಸಿಬಿಯ ಪ್ರಮುಖ ಆಟಗಾರ. ಬೆಂಗಳೂರು ಮೂಲದ ಫ್ರಾಂಚೈಸಿಗೆ ಸೇರಿದಾಗಿನಿಂದ ಮ್ಯಾಕ್ಸ್​ವೆಲ್​ ತಂಡಕ್ಕೆ ನಿರ್ಣಾಯಕರಾಗಿದ್ದಾರೆ. ಹಿಂದಿನ ಋತುವಿನಲ್ಲಿ 400 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. 2021 ರ ಋತುವಿನಲ್ಲಿ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಎರಡನೇ ಬಾರಿಗೆ 500 ರನ್​​ಗಳ ಗಡಿಯನ್ನು ದಾಟಿದ್ದಾರೆ (15 ಪಂದ್ಯಗಳಲ್ಲಿ 513 ರನ್). ಪಂದ್ಯಾವಳಿಯಲ್ಲಿ ಮುಂದುವರಿಯುತ್ತಿದ್ದು, ಮ್ಯಾಕ್ಸ್​ವೆಲ್​ ತನ್ನ ಅತ್ಯುತ್ತಮ ಫಾರ್ಮ್​​ಗೆ ಮರಳುವುದು ಆರ್​ಸಿಬಿಗೆ ಅಗತ್ಯವಾಗಿತ್ತು.

Continue Reading

ಕ್ರೀಡೆ

ICC Women’s T20 World Cup: ಮಹಿಳಾ ಟಿ20 ವಿಶ್ವಕಪ್​ ವೇಳಾಪಟ್ಟಿ ಪ್ರಕಟ; ಒಂದೇ ಗುಂಪಿನಲ್ಲಿ ಭಾರತ-ಪಾಕ್​

ICC Women’s T20 World Cup: ಐಸಿಸಿ ಮಹಿಳಾ ಟಿ20 ವಿಶ್ವಕಪ್​ ಟೂರ್ನಿಯ(ICC Women’s T20 World Cup) ವೇಳಾಪಟ್ಟಿ ಪ್ರಕಟಗೊಂಡಿದ್ದು, ಭಾರತ ತಂಡ ಅಕ್ಟೋಬರ್ 4 ರಂದು ನ್ಯೂಜಿಲ್ಯಾಂಡ್​ ವಿರುದ್ಧ ಆಡುವ ಮೂಲಕ ತಮ್ಮ ಅಭಿಯಾನ ಆರಂಭಿಸಲಿದೆ.

VISTARANEWS.COM


on

ICC Women's T20 World Cup
Koo

ದುಬೈ: ಒಂಬತ್ತನೇ ಆವೃತ್ತಿಯ ಐಸಿಸಿ ಮಹಿಳಾ ಟಿ20 ವಿಶ್ವಕಪ್​ ಟೂರ್ನಿಯ(ICC Women’s T20 World Cup) ವೇಳಾಪಟ್ಟಿ ಪ್ರಕಟಗೊಂಡಿದ್ದು, ಭಾರತ ತಂಡ ಹಾಲಿ ಚಾಂಪಿಯನ್​ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್​ ಮತ್ತು ಪಾಕಿಸ್ತಾನ ಜತೆ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ. ಈ ವರ್ಷದ ಅಕ್ಟೋಬರ್ 3 ರಿಂದ 20 ರವರೆಗೆ ಬಾಂಗ್ಲಾದೇಶದಲ್ಲಿ ಟೂರ್ನಿ ನಡೆಯಲಿದೆ. ಸಿಲ್ಹೆಟ್‌ನಲ್ಲಿ ತಮ್ಮ ಎಲ್ಲಾ ಗುಂಪು ಪಂದ್ಯಗಳು ನಡೆಯಲಿದ್ದು, ಭಾರತವು ಅಕ್ಟೋಬರ್ 4 ರಂದು ನ್ಯೂಜಿಲ್ಯಾಂಡ್​ ವಿರುದ್ಧ ಆಡುವ ಮೂಲಕ ತಮ್ಮ ಅಭಿಯಾನ ಆರಂಭಿಸಲಿದೆ.

ಸಾಂಪ್ರದಾಯಿ ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತದ ವನಿತೆಯರು ಅಕ್ಟೋಬರ್ 6 ರಂದು ಪಂದ್ಯವನ್ನಾಡಲಿದ್ದಾರೆ. ಅಕ್ಟೋಬರ್ 13 ರಂದು ಆರು ಬಾರಿ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾದ ವಿರುದ್ಧ ಆಡಲಿದೆ. ಒಂದು ಪಂದ್ಯ ಕ್ವಾಲಿಫೈಯರ್​ನಲ್ಲಿ ಗೆದ್ದು ಬಂದ ತಂಡದ ವಿರುದ್ಧ ಆಡಲಿದೆ. ಆತಿಥೇಯ ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ‘ಬಿ’ ಗುಂಪಿನಲ್ಲಿ ಸ್ಥಾನ ಪಡೆದಿದೆ.

ಇದನ್ನೂ ಓದಿ T20 World Cup : ಉನ್ಮುಕ್ತ್​ ಚಾಂದ್​ಗೆ ತೆರೆಯದ ಭಾಗ್ಯದ ಬಾಗಿಲು; ಯುಎಸ್​ ತಂಡದಲ್ಲಿ ಇಲ್ಲ ಚಾನ್ಸ್​!

ಟೂರ್ನಮೆಂಟ್‌ನಲ್ಲಿ ಪ್ರತಿ ತಂಡವು ನಾಲ್ಕು ಗುಂಪು ಪಂದ್ಯಗಳನ್ನು ಆಡುತ್ತದೆ, ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿದೆ. ಸೆಮಿಫೈನಲ್​ ಪಂದ್ಯಗಳು ಅಕ್ಟೋಬರ್ 17 ಮತ್ತು 18 ರಂದು ನಡೆಯಲಿದೆ. ಫೈನಲ್​ ಪಂದ್ಯ ಅಕ್ಟೋಬರ್​ 20 ರಂದು ಢಾಕಾದಲ್ಲಿ ನಡೆಯಲಿದೆ ಎಂದು ಐಸಿಸಿ ತನ್ನ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ. ಅರ್ಹತಾ ಸುತ್ತಿನಲ್ಲಿ ಫೈನಲ್​ ಪ್ರವೇಶಿಸಿದ 2 ತಂಡಗಳು ಪ್ರಧಾನ ಸುತ್ತಿನಲ್ಲಿ ಆಡಲಿದೆ.

ಟೂರ್ನಿಯಲ್ಲಿ ಒಟ್ಟು 23 ಪಂದ್ಯಗಳನ್ನು ಆಡಲಾಗುತ್ತದೆ. 19 ದಿನ ಪಂದ್ಯಾವಳಿ ಸಾಗಲಿದೆ. ಢಾಕಾ ಮತ್ತು ಸಿಲ್ಹೆಟ್‌ನಲ್ಲಿ ಪಂದ್ಯಗಳು ನಡೆಯಲಿವೆ. ಲೀಗ್​ ಹಂತದ ಯಾವುದೇ ಪಂದ್ಯಗಳಿಗೆ ಮೀಸಲು ದಿನವಿಲ್ಲ. ಕೇಲವ ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮಾತ್ರ ಮೀಸಲು ದಿನ ನಿಗದಿಯಾಗಿದೆ.

Continue Reading
Advertisement
Drought Relief
ಕರ್ನಾಟಕ34 mins ago

Drought Relief: ಚುನಾವಣೆ ಖರ್ಚಿಗಾಗಿ ಬರ ಪರಿಹಾರ ತಡೆಹಿಡಿದ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ್‌

Prajwal Revanna Case No evidence against me its a conspiracy says HD Revanna
ಕರ್ನಾಟಕ41 mins ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Beef smuggling suspected Hindu activists pelt stones at vehicle
ಯಾದಗಿರಿ60 mins ago

Beef Smuggling: ಗೋಮಾಂಸ ಸಾಗಾಟ ಶಂಕೆ; ಹಿಂದುಪರ ಕಾರ್ಯಕರ್ತರಿಂದ ವಾಹನಕ್ಕೆ ಕಲ್ಲು ತೂರಾಟ

Narendra Modi
ದೇಶ60 mins ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Vijay Namdevrao Wadettiwar
ದೇಶ1 hour ago

ಮುಂಬೈ ದಾಳಿ ಉಗ್ರ ಅಜ್ಮಲ್‌ ಕಸಬ್‌ ನಿರಪರಾಧಿ ಎಂದ ಕಾಂಗ್ರೆಸ್‌ ನಾಯಕ; ಭುಗಿಲೆದ್ದ ವಿವಾದ!

Beer Shortage
ಕರ್ನಾಟಕ2 hours ago

Beer Shortage: ಬೇಸಿಗೆಯಲ್ಲಿ ಮದ್ಯ ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

Torn Jeans Styling Tips
ಫ್ಯಾಷನ್2 hours ago

Torn Jeans Styling Tips: ಟೊರ್ನ್‌ ಜೀನ್ಸ್‌ ಪ್ಯಾಂಟ್‌ ಪ್ರಿಯರು ನೆನಪಿನಲ್ಲಿಟ್ಟುಕೊಳ್ಳಬೇಕಾದ 5 ಪ್ರಮುಖ ಸಂಗತಿಗಳು

lok sabha Election 2024 Bus Fare Hike
Lok Sabha Election 20242 hours ago

Lok Sabha Election 2024 : ಮತದಾನದ ಹಬ್ಬದಲ್ಲೂ ಲೂಟಿಗೆ ಇಳಿದ ಖಾಸಗಿ ಬಸ್‌! ವೋಟ್‌ ಹಾಕಲು ಬಸ್‌ ಏರುವವರಿಗೆ ಟಿಕೆಟ್ ದುಬಾರಿ!‌

IPL 2024
Latest2 hours ago

IPL 2024 : ಚೆನ್ನೈ ತಂಡದ ಮಾರಕ ಬೌಲರ್ ಮಹೀಶ್​ ಪತಿರಾನಾ​ ಐಪಿಎಲ್​ನಿಂದ ಹೊರಕ್ಕೆ

MI vs SRH
ಕ್ರೀಡೆ3 hours ago

MI vs SRH: ಸನ್ ಸ್ಟ್ರೋಕ್​ನಿಂದ ತಪ್ಪಿಸಿಕೊಂಡೀತೇ ಮುಂಬೈ ಇಂಡಿಯನ್ಸ್​​?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case No evidence against me its a conspiracy says HD Revanna
ಕರ್ನಾಟಕ41 mins ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ60 mins ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ14 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌