Ram Charan Joins Hands With Abhishek Agarwal Ram Charan: ರಾಮ್ ಚರಣ್‌ ಜತೆ ಕೈ ಜೋಡಿಸಿದ ʻದಿ ಕಾಶ್ಮೀರ್ ಫೈಲ್ಸ್ʼ ನಿರ್ಮಾಪಕ - Vistara News

South Cinema

Ram Charan: ರಾಮ್ ಚರಣ್‌ ಜತೆ ಕೈ ಜೋಡಿಸಿದ ʻದಿ ಕಾಶ್ಮೀರ್ ಫೈಲ್ಸ್ʼ ನಿರ್ಮಾಪಕ

Ram Charan: ವಿ ಮೆಗಾ ಪಿಕ್ಚರ್ಸ್ ಮೂಲಕ ನಿರ್ಮಾಣಕ್ಕಿಳಿದಿರುವ ರಾಮ್ ಚರಣ್‌ ಸ್ನೇಹಿತ ಯುವಿ ಕ್ರಿಯೇಷನ್‌ನ ವಿಕ್ರನ್ ರೆಡ್ಡಿ ಸಾಥ್ ಕೊಟ್ಟಿದ್ದಾರೆ.

VISTARANEWS.COM


on

Ram Charan With Abhishek Agarwal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಟಾಲಿವುಡ್‌ ನಟ ರಾಮ್‌ಚರಣ್‌ (Ram Charan) ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ‘ವಿ ಮೆಗಾ ಪಿಕ್ಚರ್ಸ್’ (V Mega Pictures) ನಿರ್ಮಾಣ ಸಂಸ್ಥೆಯ ಜತೆ ಕೈ ಜೋಡಿಸಿದ್ದಾರೆ. ವಿ ಮೆಗಾ ಪಿಕ್ಚರ್ಸ್ ಮೂಲಕ ನಿರ್ಮಾಣಕ್ಕಿಳಿದಿರುವ ರಾಮ್ ಚರಣ್‌ ಸ್ನೇಹಿತ ಯುವಿ ಕ್ರಿಯೇಷನ್‌ನ ವಿಕ್ರನ್ ರೆಡ್ಡಿ ಸಾಥ್ ಕೊಟ್ಟಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಹಾಗೂ ಕಾರ್ತಿಕೇಯ-2 ನಂತಹ ಬ್ಲಾಕ್ ಬಸ್ಟರ್ ಸಿನಿಮಾ ನೀಡಿರುವ ಅಭಿಷೇಕ್ ಅಗರ್ವಾಲ್ ಆರ್ಟ್ ಬ್ಯಾನರ್ ಹಾಗೂ ವಿ ಮೆಗಾ ಪಿಕ್ಚರ್ಸ್ ಜಂಟಿಯಾಗಿ ನಿರ್ಮಾಣಕ್ಕಿಳಿದಿದ್ದಾರೆ.

ಈ ಎರಡು ಸಂಸ್ಥೆಗಳ ಮೂಲಕ ಪ್ಯಾನ್ ಇಂಡಿಯಾ ಚಿತ್ರ ನಿರ್ಮಾಣ ತಯಾರಿ ನಡೆಯುತ್ತಿದೆ. ಅಭಿಷೇಕ್ ಅಗರ್ವಾಲ್ ಆರ್ಟ್ ಬ್ಯಾನರ್ ಹಾಗೂ ವಿ ಮೆಗಾ ಪಿಕ್ಚರ್ಸ್ ಜಂಟಿಯಾಗಿ ಮೂಡಿ ಬರುತ್ತಿರುವ ಚೊಚ್ಚಲ ಸಿನಿಮಾಗೆ ಯುವ ನಾಯಕ ಹಾಗೂ ಹೊಸ ನಿರ್ದೇಶಕರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಶೀಘ್ರದಲ್ಲಿ ಈ ಪ್ರಾಜೆಕ್ಟ್ ಅನೌನ್ಸ್ ಆಗಲಿದೆ. ವಿಭಿನ್ನ ಕಂಟೆಂಟ್ ಪ್ರೇಕ್ಷಕರಿಗೆ ಅರ್ಪಿಸಲು ಈ ಎರಡು ಸಂಸ್ಥೆಗಳು ಕೈ ಜೋಡಿಸಿವೆ. ಚಿತ್ರರಂಗದಲ್ಲಿ ಹೊಸಬರಿಗೆ ಅವಕಾಶ ನೀಡವುದರಿಂದ ರಾಮ್​ ಚರಣ್​ ಅವರ ಅಭಿಮಾನಿಗಳಿಂದ ಮೆಚ್ಚುಗೆಗೆ ಪಾತ್ರರಾಗುತ್ತಿದ್ದಾರೆ.

ಗೇಮ್ ಚೇಂಜರ್‌ ಸಿನಿಮಾದಲ್ಲಿ ಬ್ಯುಸಿಯಾದ ರಾಮ್‌ಚರಣ್‌

ರಾಮ್‌ಚರಣ್‌ ಸದ್ಯ ಗೇಮ್ ಚೇಂಜರ್‌ ಸಿನಿಮಾ ಶೂಟಿಂಗ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. 2019ರಲ್ಲಿ ಬಿಡುಗಡೆಯಾದ ವಿನಯ ವಿಧೇಯ ರಾಮ ಚಿತ್ರದ ನಂತರ ರಾಮ್ ಚರಣ್ ಮತ್ತು ಕಿಯಾರಾ ಆಡ್ವಾಣಿ ಈ ಸಿನಿಮಾದಲ್ಲಿ ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಜಯರಾಮ್, ಅಂಜಲಿ ಸುನೀಲ್, ಶ್ರೀಕಾಂತ್, ನವೀನ್ ಚಂದ್ರ ಮುಂತಾದವರು ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Ram Charan : ಹಾಲಿವುಡ್‌ ಎಂಟ್ರಿ ಬಗ್ಗೆ ನಟ ರಾಮ್‌ ಚರಣ್‌ ಹೇಳಿದ್ದೇನು? ವಿಡಿಯೊ ವೈರಲ್‌

ಎಸ್ ಥಮನ್ ಚಿತ್ರದ ಹಾಡುಗಳು ಮತ್ತು ಹಿನ್ನೆಲೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ತಿರು ಮತ್ತು ಆರ್.ರತ್ನವೇಲು ಛಾಯಾಗ್ರಹಣ, ಶಮೀರ್ ಮಹಮ್ಮದ್ ಸಂಕಲನ ಚಿತ್ರಕ್ಕಿದೆ.ಈ ಪ್ರಾಜೆಕ್ಟ್ ಅನ್ನು ಪ್ಯಾನ್-ಇಂಡಿಯಾ ಬಿಡುಗಡೆಗಾಗಿ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ದಿಲ್ ರಾಜು ಮತ್ತು ಶಿರೀಶ್ ಗಾರು ಜಂಟಿಯಾಗಿ ನಿರ್ಮಿಸಿದ್ದಾರೆ. ಗೇಮ್ ಚೇಂಜರ್ ತೆಲುಗು, ತಮಿಳು ಮತ್ತು ಹಿಂದಿ ಮೂರು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Shiva Rajkumar: ಸೆಟ್ಟೇರಿತು ಶಿವರಾಜ್‌ಕುಮಾರ್‌ – ಆರ್ ಚಂದ್ರು ಕಾಂಬಿನೇಷನ್‌ನ ಹೊಸ ಸಿನಿಮಾ!

Shiva Rajkumar: ಶಾಸಕ ಪ್ರದೀಪ್ ಈಶ್ವರ್, ರಾಜಕೀಯ ಮುಖಂಡ ಎಚ್.ಎಂ. ರೇವಣ್ಣ, ನಿರ್ಮಾಪಕ ಕೆ.ಪಿ. ಶ್ರೀಕಾಂತ್, ನಿರ್ದೇಶಕ ಚೇತನ್ ಕುಮಾರ್, ಮಂಜುನಾಥ್, ಮಮತಾ ದೇವರಾಜ್ ಮುಂತಾದವರು ಮುಹೂರ್ತ ಸಮಾರಂಭದಲ್ಲಿ ಹಾಜರಿದ್ದು ‘ಫಾದರ್​’ ಚಿತ್ರತಂಡಕ್ಕೆ ಶುಭ ಹಾರೈಸಿದರು. ʻಶ್ರೀರಾಮಬಾಣʼ, ʻಫಾದರ್ʼ, ʻPOKʼ, ʻಡಾಗ್ʼ ಹಾಗೂ ಕಬ್ಜ-2 ಟೈಟಲ್ ಘೋಷಣೆಯಾಗಿತ್ತು.

VISTARANEWS.COM


on

Shiva Rajkumar Graces Muhurtha Of Father Kannada Movie
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್‌ ಹೀರೊ ಶಿವರಾಜ್‌ಕುಮಾರ್‌ (Shiva Rajkumar) ಹಾಗೂ ಆರ್ ಚಂದ್ರು ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ ಘೋಷಣೆ ಆಗಿರುವುದು ಗೊತ್ತೇ ಇದೆ. ಆರ್​ ಚಂದ್ರು (R Chandru) ಅವರು ಇತ್ತೀಚೆಗೆ ‘ಆರ್​ಸಿ ಸ್ಟುಡಿಯೊ’ ಆರಂಭಿಸಿ ಐದು ಸಿನಿಮಾಗಳನ್ನು ಘೋಷಣೆ ಮಾಡಿದ್ದರು. ಈಗ ಆ ಐದು ಸಿನಿಮಾಗಳಲ್ಲಿ ಮೊದಲ ಚಿತ್ರವಾಗಿ ‘ಡಾರ್ಲಿಂಗ್’ ಕೃಷ್ಣ ನಟನೆಯ ‘ಫಾದರ್’ ಸಿನಿಮಾ (Father Kannada Movie) ಸೆಟ್ಟೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಈ ಸಿನಿಮಾದ ಮುಹೂರ್ತ ನಡೆಯಿತು. ಭಾರತೀಯ ಚಿತ್ರರಂಗದಲ್ಲೇ ಹೊಸ ಮೈಲುಗಲ್ಲು ಸೃಷ್ಟಿಸಿದ ನಿರ್ದೇಶಕ ಆರ್ ಚಂದ್ರು ಅವರು ಆರ್ ಸಿ ಪ್ರೊಡಕ್ಷನ್ ನಡಿ ಐದು ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಘೋಷಣೆ ಮಾಡಿದ್ದರು. ʻಶ್ರೀರಾಮಬಾಣʼ, ʻಫಾದರ್ʼ, ʻPOKʼ, ʻಡಾಗ್ʼ ಹಾಗೂ ಕಬ್ಜ-2 ಟೈಟಲ್ ಘೋಷಣೆಯಾಗಿತ್ತು.

ಶಾಸಕ ಪ್ರದೀಪ್ ಈಶ್ವರ್, ರಾಜಕೀಯ ಮುಖಂಡ ಎಚ್.ಎಂ. ರೇವಣ್ಣ, ನಿರ್ಮಾಪಕ ಕೆ.ಪಿ. ಶ್ರೀಕಾಂತ್, ನಿರ್ದೇಶಕ ಚೇತನ್ ಕುಮಾರ್, ಮಂಜುನಾಥ್, ಮಮತಾ ದೇವರಾಜ್ ಮುಂತಾದವರು ಮುಹೂರ್ತ ಸಮಾರಂಭದಲ್ಲಿ ಹಾಜರಿದ್ದು ‘ಫಾದರ್​’ ಚಿತ್ರತಂಡಕ್ಕೆ ಶುಭ ಹಾರೈಸಿದರು

ಶಿವರಾಜ್​ಕುಮಾರ್​ ನಟಿಸಿದ್ದ ‘ಭೈರಾಗಿ’ ಸಿನಿಮಾಗೆ ಸಹ-ನಿರ್ದೇಶಕರಾಗಿ ಕೆಲಸ ಮಾಡಿದ್ದ ರಾಜ್ ಮೋಹನ್ ಅವರು ಈಗ ‘ಫಾದರ್​’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಡಾರ್ಲಿಂಗ್ ಕೃಷ್ಣ ನಾಯಕರಾಗಿದ್ದು, ಅವರಿಗೆ ಅಮೃತಾ ಅಯ್ಯಂಗಾರ್ ಜೋಡಿ ಆಗಿದ್ದಾರೆ. ಪ್ರಕಾಶ್ ರೈ, ಸುನೀಲ್ ಸೇರಿದಂತೆ ಅನೇಕ ಪ್ರತಿಭಾವಂತ ಕಲಾವಿದರು ಈ ಸಿನಿಮಾದಲ್ಲಿ ನಟಿಸಲಿದ್ದಾರೆ. ಬಾಲಿವುಡ್​ ನಿರ್ಮಾಪಕ ಆನಂದ್ ಪಂಡಿತ್ ಈ ಸಿನಿಮಾವನ್ನು ಅರ್ಪಿಸುತ್ತಿದ್ದಾರೆ. ‘ಹನುಮಾನ್’ ಸಿನಿಮಾದ ಖ್ಯಾತಿಯ ಹರಿ ಅವರು ಸಂಗೀತ ನೀಡುತ್ತಿದ್ದಾರೆ ಎಂದು ಆರ್. ಚಂದ್ರು ಮಾಹಿತಿ ಹಂಚಿಕೊಂಡಿದ್ದಾರೆ. ಇದೊಂದು ತಂದೆ-ಮಗನ ನಡುವಿನ ಬಾಂಧವ್ಯದ ಕಹಾನಿ ಇರಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಇದನ್ನೂ ಓದಿ: Shiva Rajkumar: `ವಿಕ್ಟೋರಿಯಾ ಮಾನ್ಸನ್‌’ ಫಸ್ಟ್‌ ಲುಕ್‌ ಔಟ್‌: ಶಿವಣ್ಣ ಸಾಥ್!

ಆರ್​. ಚಂದ್ರು ನಿರ್ದೇಶನದ, ಉಪೇಂದ್ರ ನಟನೆಯ ‘ಕಬ್ಜ’ ಸಿನಿಮಾ (Kabzaa Movie) ಎರಡು ದಿನಗಳಲ್ಲೇ ನೂರು ಕೋಟಿ ರೂ. ಕ್ಲಬ್‌ ಸೇರಿತ್ತು. ಆದರೆ ಭಾರಿ ಕಲೆಕ್ಷನ್‌ ಮಾಡಿರುವ ಈ ಸಿನಿಮಾವನ್ನು ಸಾಕಷ್ಟು ಜನ ಇಷ್ಟ ಪಟ್ಟಿರಲಿಲ್ಲ. ಹೀಗಾಗಿ ʻಕಬ್ಜʼ ಸೀಕ್ವೆಲ್ ಯಾವುದೇ ಕಾರಣಕ್ಕೂ ಸಿದ್ಧವಾಗುವುದಿಲ್ಲ ಎಂದು ಹಲವರು ಅಂದುಕೊಂಡಿದ್ದರು. ಇದಾದ ಬಳಿಕ ಜನವರಿ 23ರಂದು ಚಂದ್ರು ಅವರು ಐದು ಸಿನಿಮಾ ಘೋಷಣೆ ಮಾಡಿದರು.

ಭಾರತೀಯ ಚಿತ್ರರಂಗದಲ್ಲೇ ಹೊಸ ಮೈಲುಗಲ್ಲು ಸೃಷ್ಟಿಸಿದ ನಿರ್ದೇಶಕ ಆರ್ ಚಂದ್ರು ಅವರು ಆರ್ ಸಿ ಪ್ರೊಡಕ್ಷನ್ ನಡಿ ಐದು ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಘೋಷಣೆ ಮಾಡಿದ್ದರು. ʻಶ್ರೀರಾಮಬಾಣʼ, ʻಫಾದರ್ʼ, ʻPOKʼ, ʻಡಾಗ್ʼ ಹಾಗೂ ಕಬ್ಜ-2 ಟೈಟಲ್ ಘೋಷಣೆಯಾಗಿತ್ತು.

ಈ ಬಗ್ಗೆ ಆರ್‌ ಚಂದ್ರು ಮಾತನಾಡಿ ʻʻಯಾವುದೇ ಕೆಲಸ ಮಾಡಬೇಕು ಅಂದರೆ ಯೋಗಬೇಕು. ಯೋಗ್ಯತೆ ಬೇಕು. 10 ತಿಂಗಳು ನಾನು ಸುಮ್ನೆ ಕೂತಿರಲಿಲ್ಲ. ಕೈ ಹಾಕಿದರೆ ಕರಂಟ್ ಕಂಬಕ್ಕೆ ಕೈ ಹಾಕಬಾರದು. ಚಂದ್ರಲೋಕಕ್ಕೆ ಕೈ ಹಾಕಬೇಕು. ಕಬ್ಜ’ ಸಿನಿಮಾದ ಕಲೆಕ್ಷನ್ ಫೇಕ್ ಎಂದು ಅನೇಕರು ಹೇಳಿದ್ದರು.‘ಕಬ್ಜ ಸಿನಿಮಾದಿಂದ ನಾನು ಸರ್ಕಾರಕ್ಕೆ 20 ಕೋಟಿ ರೂಪಾಯಿ ಟ್ಯಾಕ್ಸ್ ಕಟ್ಟಿದ್ದೀನಿ. ಇದನ್ನು ಓಪನ್ ಆಗಿ ಹೇಳಿಕೊಳ್ಳುತ್ತಿದ್ದೇನೆ. ಕನ್ನಡ ಸಿನಿಮಾಗಳನ್ನು ನೋಡ್ಬೇಕು ಅಂದ್ರೆ ಒಳ್ಳೊಳ್ಳೆ ಸಿನಿಮಾಗಳನ್ನ ಮಾಡ್ಬೇಕು. ಬಾಯಿ ಇದೆ ಎಂದು ಮಾತನಾಡಿದರೆ ಐದು ಸಿನಿಮಾ, ಹತ್ತು ಸಿನಿಮಾ ಆಗಲ್ಲ’ ಎಂದು ಅವರು ನೇರವಾಗಿ ಹೇಳಿದ್ದರು.

Continue Reading

ಟಾಲಿವುಡ್

Samantha Ruth Prabhu: ಜನ್ಮದಿನದಂದೇ ಹೊಸ ಸಿನಿಮಾ ಅನೌನ್ಸ್‌ ಮಾಡಿದ ನಟಿ ಸಮಂತಾ!

Samantha Ruth Prabhu: ಸಮಂತಾ ಜನುಮದಿನಕ್ಕೆ ಅವರ ಅಭಿಮಾನಿಗಳು ಮತ್ತು ಸ್ನೇಹಿತರು ಶುಭಾಶಯ ತಿಳಿಸುತ್ತಿದ್ದಾರೆ. ‘ಬಂಗಾರಂ’ ಚಿತ್ರದ ಫಸ್ಟ್ ಲುಕ್‌ನಲ್ಲಿ ಉಗ್ರ ಅವತಾರದಲ್ಲಿ ನಟಿ ಕಾಣಿಸಿಕೊಂಡಿದ್ದು, ಗನ್ ಹಿಡಿದುಕೊಂಡು ರಕ್ತಸಿಕ್ತ ಮುಖವನ್ನು ಕ್ಯಾಮೆರಾಗೆ ಪೋಸ್‌ ಕೊಟ್ಟಿದ್ದಾರೆ. 37ನೇ ವಸಂತಕ್ಕೆ ನಟಿ ಕಾಲಿಟ್ಟಿದ್ದಾರೆ. ಈ ವಿಶೇಷ ದಿನದಂದು ನಟಿ ಸಮಂತಾ ಅವರು ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ʻ

VISTARANEWS.COM


on

Samantha Ruth Prabhu announces new film Bangaram
Koo

ಬೆಂಗಳೂರು: ಇಂದು ಟಾಲಿವುಡ್‌ ನಟಿ ಸಮಂತಾ(Samantha Ruth Prabhu) ಅವರ ಜನುಮದಿನದ (Samantha Birthday) ಸಂಭ್ರಮ. 37ನೇ ವಸಂತಕ್ಕೆ ನಟಿ ಕಾಲಿಟ್ಟಿದ್ದಾರೆ. ಈ ವಿಶೇಷ ದಿನದಂದು ನಟಿ ಸಮಂತಾ ಅವರು ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ʻಬಂಗಾರಂ’ (Bangaram) ಎಂಬ ಹೊಸ ಚಿತ್ರದ ಶೀರ್ಷಿಕೆ ಜತೆ ಫಸ್ಟ್‌ ಲುಕ್‌ ಪೋಸ್ಟರ್‌ ಹಂಚಿಕೊಂಡಿದ್ದಾರೆ. ಸದ್ಯದಲ್ಲೇ ಚಿತ್ರದ ಶೂಟಿಂಗ್ ಆರಂಭವಾಗಲಿದೆ ಎಂದು ಸಮಂತಾ ತಿಳಿಸಿದ್ದಾರೆ.

ಸಮಂತಾ ಜನುಮದಿನಕ್ಕೆ ಅವರ ಅಭಿಮಾನಿಗಳು ಮತ್ತು ಸ್ನೇಹಿತರು ಶುಭಾಶಯ ತಿಳಿಸುತ್ತಿದ್ದಾರೆ. ‘ಬಂಗಾರM’ ಚಿತ್ರದ ಫಸ್ಟ್ ಲುಕ್‌ನಲ್ಲಿ ಉಗ್ರ ಅವತಾರದಲ್ಲಿ ನಟಿ ಕಾಣಿಸಿಕೊಂಡಿದ್ದು, ಗನ್ ಹಿಡಿದುಕೊಂಡು ರಕ್ತಸಿಕ್ತ ಮುಖವನ್ನು ಕ್ಯಾಮೆರಾಗೆ ಪೋಸ್‌ ಕೊಟ್ಟಿದ್ದಾರೆ. ಈ ಚಿತ್ರದ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಸಿನಿಮಾ 2025ರಲ್ಲಿ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಇನ್‌ಸ್ಟಾದಲ್ಲಿ ನಟಿ ಪೋಸ್ಟ್ ಶೇರ್‌ ಮಾಡಿ “ಚಿನ್ನವಾಗಲು ಎಲ್ಲವೂ ಹೊಳೆಯಬೇಕಾಗಿಲ್ಲ. ʻಬಂಗಾರಂʼ ಶೀಘ್ರದಲ್ಲೇ ಸೆಟ್ಟೇರಲಿದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Samantha Ruth Prabhu: ಸಮಂತಾಗೆ ಜನುಮ ದಿನದ ಸಂಭ್ರಮ! ಈ ನಟಿಯ ಸೀಕ್ರೆಟ್‌ ಸಂಗತಿಗಳಿವು!

ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ ನಟಿ ಸಮಂತಾ ಯೋಗ, ಧ್ಯಾನ, ಕುದುರೆ ಸವಾರಿ ಮತ್ತು ಕಿಕ್ ಬಾಕ್ಸಿಂಗ್ ಕಡೆಗೆ ಗಮನಹರಿಸುತ್ತಿದ್ದಾರೆ. ತಾವು ಕಲಿತ ಸಮರ ಕಲೆಗಳ ಪ್ರದರ್ಶನದ ವಿಡಿಯೊಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ನಟಿ ಸಮಂತಾ (Samantha Kickboxing) ಇದಕ್ಕೆ ‘ಒನ್ ಡೇ ಎಟ್ ಅ ಟೈಮ್ ‘ ಎಂಬ ಶೀರ್ಷಿಕೆ ನೀಡಿದ್ದಾರೆ.

ನಟಿ ಸಮಂತಾ ನಟನಾ ವೃತ್ತಿಗೆ ವಿದಾಯ ಹೇಳಿಲ್ಲ, ಬದಲಾಗಿ ಸ್ವಲ್ಪ ವಿರಾಮ ತೆಗೆದುಕೊಂಡಿದ್ದಾರೆ ಅಷ್ಟೇ. ನಟಿ ಈಗಾಗಲೇ ʻಸಿಟಾಡೆಲ್ ಇಂಡಿಯಾ: ಹನಿ ಬನ್ನಿʼ ವೆಬ್ ಸರಣಿಯಲ್ಲಿ ನಟಿಸಿದ್ದು ಅದರ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇದರಲ್ಲಿ ಸಮಂತಾ ಜತೆ ವರುಣ್ ಧವನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಜತೆಗೆ ಸಿಕಂದರ್ ಖೇರ್, ಸಾಕಿಬ್ ಸಲೀಮ್ ಮತ್ತು ಕೇ ಕೇ ಮೆನನ್ ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ರಾಜ್ ಮತ್ತು ಡಿಕೆ ಮತ್ತು ಸೀತಾ ಆರ್ ಮೆನನ್ ನಿರ್ದೇಶನದ ಸಿಟಾಡೆಲ್ ಇಂಡಿಯಾ:ಹನಿ ಬನ್ನಿ ಯುಎಸ್ ಶೋನ ಭಾರತೀಯ ಸ್ಪಿನ್ ಆಫ್ ಆಗಿದೆ. ಇದರಲ್ಲಿ ಪ್ರಿಯಾಂಕ ಚೋಪ್ರಾ ಮತ್ತು ರಿಚರ್ಡ್ ಮ್ಯಾಡೆನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಟಾಲಿವುಡ್

Samantha Ruth Prabhu: ಸಮಂತಾಗೆ ಜನುಮ ದಿನದ ಸಂಭ್ರಮ! ಈ ನಟಿಯ ಸೀಕ್ರೆಟ್‌ ಸಂಗತಿಗಳಿವು!

Samantha Ruth Prabhu: ಸಮಂತಾ ತಮ್ಮ ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಬಗ್ಗೆ ಆಗಾಗ ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ನಾಗ ಚೈತನ್ಯ ಅವರೊಂದಿಗಿನ ಅವರ ಪ್ರೇಮಕಥೆಯಿಂದ ಹಿಡಿದು ವಿಚ್ಛೇದನದದ ವರೆಗೆ ಹಲವು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ಸಮಂತಾ ಕ್ರಿಶ್ಚಿಯನ್ ಆಗಿದ್ದರೂ ಆಗಾಗ ದೇವಾಲಯಗಳಿಗೆ ಭೇಟಿ ಕೊಡುತ್ತಲೇ ಇರುತ್ತಾರೆ. ಇದಲ್ಲದೇ ಮುಖಕ್ಕೆ ಸರ್ಜರಿ ಕೂಡ ಮಾಡಿಸಿದ್ದರು ನಟಿ.

VISTARANEWS.COM


on

Samantha Ruth Prabhu shocking secrets
Koo

ಬೆಂಗಳೂರು: ಟಾಲಿವುಡ್‌ ನಟ ಸಮಂತಾ ರುತ್ ಪ್ರಭು (Samantha Ruth Prabhu) ಅವರಿಗೆ ಇಂದು (ಏ.28) ಜನುಮದಿನ ಸಂಭ್ರಮ. ಸಮಂತಾ ಅವರಿಗೆ ಅಪಾರವಾದ ಫ್ಯಾನ್ಸ್‌ ಬಳಗವಿದೆ. ಈ ಹಿಂದೆ ಸಮಂತಾ ಅವರ ಜನುಮದಿನವೇ ಆಂಧ್ರಪ್ರದೇಶದ ಬಾಪಟ್ಲಾದಲ್ಲಿರುವ (Bapatla, Andhra Pradesh) ಅಭಿಮಾನಿ ಯುವಕ ಸಂದೀಪ್‌ ನಟಿಗಾಗಿ ದೇವಸ್ಥಾನ ನಿರ್ಮಿಸಿದ್ದ. ಸಮಂತಾ ಮೇಲಿನ ಅಭಿಮಾನದಿಂದ ಸಂದೀಪ್ ಅವರು ತಿರುಪತಿ, ಚೆನ್ನೈ, ನಾಗಪಟ್ಟಣಂ ದೇವಸ್ಥಾನಗಳಿಗೆ ನಟಿಯ (Samantha Birthday) ಹೆಸರಲ್ಲಿ ತೀರ್ಥಯಾತ್ರೆ ಮಾಡಿದ್ದ. ಸಮಂತಾ ಮಯೋಸಿಟಿಸ್ ಕಾಯಿಲೆಯಿಂದ ಚೇತರಿಸಿಕೊಂಡ ನಂತರ ಸಂದೀಪ್ ಈ ಯಾತ್ರೆ ಮಾಡಿದ್ದ. ಇದೆಲ್ಲದರ ಜತೆಗೆ ನಟಿಯ ಬಗ್ಗೆ ಹಲವು ವಿಚಾರಗಳು ಕುತೂಹಲಕರವಾಗಿವೆ.

ಸಮಂತಾರನ್ನು ಹುಚ್ಚನಂತೆ ಪ್ರೀತಿಸುತ್ತಿದ್ದರು ನಟ ಸಿದ್ಧಾರ್ಥ್

ಸಮಂತಾ ತಮ್ಮ ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಬಗ್ಗೆ ಆಗಾಗ ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ನಾಗ ಚೈತನ್ಯ ಅವರೊಂದಿಗಿನ ಅವರ ಪ್ರೇಮಕಥೆಯಿಂದ ಹಿಡಿದು ವಿಚ್ಛೇದನದವರೆಗೆ ಹಲವು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ಸದ್ಯ ಅದಿತಿ ರಾವ್ ಹೈದರಿ ಅವರೊಂದಿಗೆ ಡೇಟಿಂಗ್ ಮಾಡುತ್ತಿರುವ ತಮಿಳು ನಟ ಸಿದ್ಧಾರ್ಥ್ ಅವರು ಸಮಂತಾರನ್ನು ಹುಚ್ಚನಂತೆ ಪ್ರೀತಿಸುತ್ತಿದ್ದರು. ಇಬ್ಬರೂ ಮದುವೆಯಾಗಬೇಕು ಎಂದು ಅಂದುಕೊಂಡಿದ್ದರು. ಆದರೆ ಜೋಡಿ ಮಧ್ಯೆ ಏನು ಆಯ್ತೋ ಏನೋ! ಸಿದ್ಧಾರ್ಥ್ ಜತೆ ನಟಿ ಬ್ರೇಕಪ್‌ ಮಾಡಿಕೊಂಡು ನಾಗ ಚೈತನ್ಯ ಅವರನ್ನು ಪ್ರೀತಿಸಲು ಶುರು ಮಾಡಿದರು.

ಇದನ್ನೂ ಓದಿ: Samantha Ruth Prabhu: ಮದುವೆ ಗೌನ್‌ ಕತ್ತರಿಸಿ ಹೊಸ ಉಡುಪು ತಯಾರಿಸಿದ ಸಮಂತಾ!

ವರದಿಗಳ ಪ್ರಕಾರ ಸಮಂತಾಗೂ ಮೊದಲು ಸಿದ್ಧಾರ್ಥ್ ನಟಿ ಶ್ರುತಿ ಹಾಸನ್ ಮತ್ತು ಆಂಡ್ರಿಯಾ ಅವರೊಂದಿಗೆ ಸಂಬಂಧ ಹೊಂದಿದ್ದರು. ಈ ಕಾರಣಗಳಿಂದಾಗಿ ಸಮಂತಾ ಬ್ರೇಕಪ್‌ ಮಾಡಿಕೊಂಡರು ಎಂಬ ವರದಿಯಾಗಿದೆ.

ಕ್ರಿಶ್ಚಿಯನ್ ಆಗಿದ್ದರೂ ದೇವಾಲಯಗಳಿಗೆ ಭೇಟಿ

ಸಮಂತಾ ಕ್ರಿಶ್ಚಿಯನ್ ಆಗಿದ್ದರೂ ಆಗಾಗ ದೇವಾಲಯಗಳಿಗೆ ಭೇಟಿ ಕೊಡುತ್ತಲೇ ಇರುತ್ತಾರೆ. ಇದಲ್ಲದೇ ಮುಖಕ್ಕೆ ಸರ್ಜರಿ ಕೂಡ ಮಾಡಿಸಿಕೊಂಡಿದ್ದರು ನಟಿ. ಇನ್ನು ನಾಗಚೈತ್ಯ ಜತೆ ನಟಿ ಪ್ರೀತಿಸಿ ಮದುವೆ ಕೂಡ ಆದರು. ಟಾಲಿವುಡ್‌ನಲ್ಲಿ ʻಪವರ್ ಜೋಡಿʼ ಎಂದು ಅನ್ನಿಸಿಕೊಂಡಿದ್ದರು. ಮದುವೆಯಾದ ನಾಲ್ಕು ವರ್ಷಗಳ ಬಳಿಕ ಜೋಡಿ ಡಿವೋರ್ಸ್‌ ಪಡೆದುಕೊಂಡಿತ್ತು. ಜೋಡಿ ಇದುವೆರೆಗೆ ತಾವು ಏಕೆ ಬೇರೆಯಾದೆವು ಎಂಬ ಕಾರಣ ಕೂಡ ನೀಡಿಲ್ಲ. ಸದ್ಯ ನಾಗಚೈತನ್ಯ ಕೂಡ ನಟಿ ಶೋಭಿತಾ ಜತೆಗೆ ಡೇಟಿಂಗ್‌ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

ಮೈಯೋಸಿಟಿಸ್‌ ಕಾಯಿಲೆ ವಿರುದ್ಧ ಹೋರಾಟ

ಸಮಂತಾ ರುತ್ ಪ್ರಭು (Samantha Ruth Prabhu) ಅವರು ಮೈಯೋಸಿಟಿಸ್‌ ಕಾಯಿಲೆ ವಿರುದ್ಧ ಹೋರಾಟ ಮಾಡುತ್ತಲೇ ಇದ್ದಾರೆ. ಆಸ್ಪತ್ರೆಯಲ್ಲಿ ಇಂದಿಗೂ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಆರೋಗ್ಯ ಮತ್ತು ಫಿಟ್‌ನೆಸ್ ಪ್ರಯಾಣದ ಬಗ್ಗೆ ವಿವರವಾಗಿ ಮಾತನಾಡುತ್ತಿದ್ದಾರೆ. ಆರೋಗ್ಯದ ಬಗ್ಗೆ ತಮ್ಮ ಅಭಿಮಾನಿಗಳಿಗೆ ಸಾಮಾಜಿಕ ಮಾಧ್ಯಮದಲ್ಲಿ ಆಗಾಗ ತಿಳಿಸುತ್ತಿದ್ದಾರೆ. ಸದ್ಯ ನಟಿ ಒಂದು ವರ್ಷ ನಟನೆಯಿಂದ ಹಿಂದೆ ಸರಿದಿದ್ದಾರೆ. ಆರೋಗ್ಯದತ್ತ ಗಮನ ಹರಿಸಿದ್ದಾರೆ.

ಇದನ್ನೂ ಓದಿ: Samantha Ruth Prabhu: ಮದುವೆ ಗೌನ್‌ ಕತ್ತರಿಸಿ ಹೊಸ ಉಡುಪು ತಯಾರಿಸಿದ ಸಮಂತಾ!

ನಟನೆಯಿಂದ ಹಿಂದೆ ಸರಿದ ನಟಿ

ನಟಿ ಈಗಾಗಲೇ ʻಸಿಟಾಡೆಲ್ ಇಂಡಿಯಾ: ಹನಿ ಬನ್ನಿʼ ವೆಬ್ ಸರಣಿಯಲ್ಲಿ ನಟಿಸಿದ್ದು, ಅದರ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇದರಲ್ಲಿ ಸಮಂತಾ ಜತೆ ವರುಣ್ ಧವನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಜತೆಗೆ ಸಿಕಂದರ್ ಖೇರ್, ಸಾಕಿಬ್ ಸಲೀಮ್ ಮತ್ತು ಕೇ ಕೇ ಮೆನನ್ ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ರಾಜ್ ಮತ್ತು ಡಿಕೆ ಮತ್ತು ಸೀತಾ ಆರ್ ಮೆನನ್ ನಿರ್ದೇಶನದ ʼಸಿಟಾಡೆಲ್ ಇಂಡಿಯಾ: ಹನಿ ಬನ್ನಿʼ ಯುಎಸ್ ಶೋನ ಭಾರತೀಯ ಸ್ಪಿನ್ ಆಫ್ ಆಗಿದೆ. ಇದರಲ್ಲಿ ಪ್ರಿಯಾಂಕ ಚೋಪ್ರಾ ಮತ್ತು ರಿಚರ್ಡ್ ಮ್ಯಾಡೆನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಕಾಲಿವುಡ್

Varalaxmi Sarathkumar: ನನ್ನ ತಂದೆ ಎರಡು ಮದುವೆಯಾದರು, ಹಾಗೇ ನಾನೂ ಕೂಡ ಎಂದ ನಟ ಶರತ್‌ಕುಮಾರ್ ಪುತ್ರಿ!

Varalaxmi Sarathkumar: ಮಾರ್ಚ್ 1ರಂದು ಮುಂಬೈನಲ್ಲಿ ತಮ್ಮ ಪ್ರೀತಿಪಾತ್ರರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ತಾವು ಮದುವೆಯಾಗುತ್ತಿರುವ ಹುಡಗನ ಬಗ್ಗೆ ನೆಗೆಟಿವ್‌ ಕಮೆಂಟ್‌ ಮಾಡುವರ ಬಗ್ಗೆ ನಟಿ ಸಂದರ್ಶನವೊಂದರಲ್ಲಿ ಪ್ರತಿಕ್ರಿಯಿಸಿದ್ದಾರೆ. 2020 ರಲ್ಲಿ ವರಲಕ್ಷ್ಮಿ ಅವರು ಸಿನಿಮಾಗಳನ್ನು ತೊರೆದು ಉದ್ಯಮಿಯೊಬ್ಬರನ್ನು ಮದುವೆಯಾಗುತ್ತಿದ್ದಾರೆ ಎಂಬ ವದಂತಿಗಳು ಹಬ್ಬಿತ್ತು. ಇದಾದ ಬಳಿಕ ನಟಿ ವದಂತಿಗಳನ್ನು ತಳ್ಳಿ ಹಾಕಿದ್ದರು.

VISTARANEWS.COM


on

Varalaxmi Sarathkumar negative comments on fiance
Koo

ಬೆಂಗಳೂರು: ಬಹುಭಾಷಾ ನಟ ಶರತ್‌ಕುಮಾರ್ (Varalaxmi Sarathkumar) ಅವರ ಪುತ್ರಿ ಮತ್ತು ಕನ್ನಡದ ʻಮಾಣಿಕ್ಯʼ ಸಿನಿಮಾದಲ್ಲಿ ಸುದೀಪ್‌ಗೆ ಜೋಡಿಯಾಗಿದ್ದ ನಟಿ ವರಲಕ್ಷ್ಮಿ ಶರತ್‌ಕುಮಾರ್ ಮುಂಬೈ ಮೂಲದ ಉದ್ಯಮಿ ಜತೆಗೆ 38ನೇ ವಯಸ್ಸಿನಲ್ಲಿ ಎಂಗೇಜ್‌ ಆಗಿದ್ದರು. ಮಾರ್ಚ್ 1ರಂದು ಮುಂಬೈನಲ್ಲಿ ತಮ್ಮ ಪ್ರೀತಿಪಾತ್ರರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ತಾವು ಮದುವೆಯಾಗುತ್ತಿರುವ ಹುಡಗನ ಬಗ್ಗೆ ನೆಗೆಟಿವ್‌ ಕಮೆಂಟ್‌ ಮಾಡುವರ ಬಗ್ಗೆ ನಟಿ ಸಂದರ್ಶನವೊಂದರಲ್ಲಿ ಪ್ರತಿಕ್ರಿಯಿಸಿದ್ದಾರೆ.

ನಿಖೋಲಯ್ ಸಚ್‌ದೇವ್ (Nicholai Sachdev) ಜತೆ ನಿಶ್ಚಿತಾರ್ಥವಾದ ಬಳಿಕ ನಟಿ ವರಲಕ್ಷ್ಮಿ ಶರತ್‌ಕುಮಾರ್ ಅವರು ಟೀಕೆಗೆ ಗುರಿಯಾದರು. ಈ ಬಗ್ಗೆ ನಟಿ ಮಾತನಾಡಿ ʻʻನನ್ನ ತಂದೆ ಕೂಡ ಎರಡು ಬಾರಿ ಮದುವೆಯಾದರು. ಆದರೆ ಆಮೇಲೆ ಅವರು ಸಂತೋಷವಾಗಿಯೇ ಇದ್ದಾರೆ. ಎರಡು ಮದುವೆಯಾಗುವುದರಲ್ಲಿ ಏನೂ ತಪ್ಪಿಲ್ಲ. ಜನರು ನಿಖೋಲಯ್ ಬಗ್ಗೆ ಹೇಗೆ ಮಾತನಾಡುತ್ತಾರೆ ಎಂಬುದನ್ನು ನಾನು ನೋಡಿದ್ದೇನೆ. ನಿನಿಖೋಲಯ್ ನನ್ನ ದೃಷ್ಟಿಯಲ್ಲಿ ಸುಂದರವಾಗಿದ್ದಾರೆ. ನಮ್ಮ ಸಂಬಂಧದ ಬಗ್ಗೆ ನೆಗೆಟಿವ್‌ ಕಮೆಂಟ್ ಮಾಡುವ ಜನರ ಬಗ್ಗೆ ನಾನು ಹೆದರುವುದಿಲ್ಲ. ನಾನು ಅವರಿಗೆಲ್ಲ ಏಕೆ ಉತ್ತರಿಸಬೇಕು?. ನಿಖೋಲಯ್ ಅವರ ಪೋಷಕರು ಆರ್ಟ್ ಗ್ಯಾಲರಿಯನ್ನು ನಡೆಸುತ್ತಾರೆ. ನಿಖೋಲಯ್ ಮಾಜಿ ಪತ್ನಿಯೊಂದಿಗೆ ನಾನು ಚೆನ್ನಾಗಿಯೇ ಇದ್ದೇನೆ. ಅವರದ್ದು ಅದ್ಭುತ ವ್ಯಕ್ತಿತ್ವ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Varalaxmi Sarathkumar:‌ ನಟ ಶರತ್‌ಕುಮಾರ್ ಪುತ್ರಿಯನ್ನು ಭೇಟಿಯಾದ ಕಿಚ್ಚ ಸುದೀಪ್!

ನಟಿ ಮಾತು ಮುಂದುವರಿಸಿ ʻʻನಿಖೋಲಯ್ ನನ್ನನ್ನು ಯಾವಾಗಲೂ ಖುಷಿಯಲ್ಲಿ ಇರಿಸುತ್ತಾರೆ. ನನ್ನ ವೃತ್ತಿಜೀವನವನ್ನು ಬೆಂಬಲಿಸುತ್ತಾರೆ. ನನ್ನನ್ನು ತುಂಬಾ ಪ್ರೀತಿಸುತ್ತಾರೆ, ಮುದ್ದು ಮಾಡುತ್ತಾರೆ ಮತ್ತು ನನ್ನನ್ನು ರಕ್ಷಿಸುತ್ತಾರೆ. 14 ವರ್ಷಗಳ ಹಿಂದೆ ಒಬ್ಬರೂ ಭೇಟಿಯಾದೆವು. ಆದರೆ ನಾವು ಆಗ ಡೇಟಿಂಗ್ ಮಾಡಿರಲಿಲ್ಲ. ನಾವು ಸ್ನೇಹಿತರಂತೆ ಇದ್ದೇವುʼʼಎಂದು ಹೇಳಿಕೊಂಡಿದ್ದಾರೆ.

ವರಲಕ್ಷ್ಮಿ ಮತ್ತು ನಿಕೋಲಾಯ್ ಅವರ ಪ್ರೇಮಕಥೆ!

ನಟ ರಮೇಶ್ ಅವರು ಜೋಡಿಯ ಪ್ರೇಮಕಥೆಯನ್ನು ಬಹಿರಂಗಪಡಿಸಿದ್ದರು. “ನಟಿ ವರಲಕ್ಷ್ಮಿ ಶರತ್‌ಕುಮಾರ್ ಮತ್ತು ಗ್ಯಾಲರಿಸ್ಟ್ ನಿಕೋಲಾಯ್ ಸಚ್‌ದೇವ್ ಅವರು ಮಾರ್ಚ್ 1ರಂದು ಮುಂಬೈನಲ್ಲಿ ಕುಟುಂಬ ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಕಳೆದ 14 ವರ್ಷಗಳಿಂದ ಪರಸ್ಪರ ಪರಿಚಿತರಾದ ವರಲಕ್ಷ್ಮಿ ಮತ್ತು ನಿಕೋಲಾಯ್ ತಮ್ಮ ಪೋಷಕರ ಆಶೀರ್ವಾದದೊಂದಿಗೆ ಉಂಗುರಗಳನ್ನು ಬದಲಾಯಿಸಿಕೊಂಡರು. ಈ ವರ್ಷದ ಕೊನೆಯಲ್ಲಿ ಜೋಡಿ ವಿವಾಹವಾಗಲಿದೆʼʼಎಂದು ಬರೆದುಕೊಂಡಿದ್ದರು.

ನಿಶ್ಚಿತಾರ್ಥ ಸಮಾರಂಭದಲ್ಲಿ, ವರಲಕ್ಷ್ಮಿ ರೇಷ್ಮೆ ಸೀರೆಯಲ್ಲಿ ಮಿಂಚುತ್ತಿದ್ದರು. 2020 ರಲ್ಲಿ ವರಲಕ್ಷ್ಮಿ ಅವರು ಸಿನಿಮಾಗಳನ್ನು ತೊರೆದು ಉದ್ಯಮಿಯೊಬ್ಬರನ್ನು ಮದುವೆಯಾಗುತ್ತಿದ್ದಾರೆ ಎಂಬ ವದಂತಿಗಳು ಹಬ್ಬಿತ್ತು. ಇದಾದ ಬಳಿಕ ನಟಿ ವದಂತಿಗಳನ್ನು ತಳ್ಳಿ ಹಾಕಿದ್ದರು.

ಇನ್ನೇನು ಶೀಘ್ರದಲ್ಲಿಯೇ ಈ ಜೋಡಿಯ ಮದುವೆಯ ದಿನಾಂಕವೂ ಘೋಷಣೆ ಆಗಲಿದೆ. ಈ ಮೊದಲು ವರಲಕ್ಷ್ಮಿ ಶರತ್‌ಕುಮಾರ್, ತಮಿಳು ನಟ ವಿಶಾಲ್ ಅವರನ್ನು ಪ್ರೀತಿಸುತ್ತಿದ್ದಾರೆ ಮತ್ತು ಇಬ್ಬರೂ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಕಾಲಿವುಡ್‌ನಲ್ಲಿ ಹರಿದಾಡಿದ್ದವು.

ವರಲಕ್ಷ್ಮಿ ಅವರು ಇತ್ತೀಚೆಗೆ ಪ್ರಶಾಂತ್ ವರ್ಮಾ ಅವರ ತೇಜ ಸಜ್ಜಾ ಅಭಿನಯದ ತೆಲುಗು ಚಿತ್ರ ʻಹನುಮಾನ್ ಚಿತ್ರದಲ್ಲಿʼ ಕಾಣಿಸಿಕೊಂಡಿದ್ದರು. ಧನುಷ್ ಅವರ ಮುಂಬರುವ ತಮಿಳು ಚಿತ್ರ ʻರಾಯನ್‌ʼನಲ್ಲಿ ನಟಿಸಲು ರೆಡಿಯಾಗಿದ್ದಾರೆ. ʻಶಬರಿʼ ಎಂಬ ತೆಲುಗು ಚಿತ್ರದ ಹೊರತಾಗಿ ಮಲಯಾಳಂ ಚಿತ್ರ ʻಕಲರ್ಸ್ʼನಲ್ಲಿಯೂ ಅವರು ಕಾಣಿಸಿಕೊಳ್ಳಲಿದ್ದಾರೆ.

Continue Reading
Advertisement
tomato price rise
ಕರ್ನಾಟಕ9 seconds ago

Tomato Price: ಗ್ರಾಹಕನ ಜೇಬು ಸುಡಲು ಟೊಮ್ಯಾಟೊ ಸಜ್ಜು, ಬಾಕ್ಸ್‌ಗೆ 400 ರೂಪಾಯಿಗೆ ಬೆಲೆ ಏರಿಕೆ

srinivasa prasad
ಪ್ರಮುಖ ಸುದ್ದಿ31 mins ago

Srinivasa Prasad passes away‌: 7 ಬಾರಿ ಸಂಸದರಾಗಿದ್ದ ಸ್ವಾಭಿಮಾನಿ, ದಕ್ಷಿಣ ಕರ್ನಾಟಕದ ʼದಲಿತ ಸೂರ್ಯʼ

ಕರ್ನಾಟಕ39 mins ago

Srinivas Prasad: ತೀವ್ರ ಹೃದಯಾಘಾತದಿಂದ ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ

Sleeping Tips
ಆರೋಗ್ಯ1 hour ago

Sleeping Tips: ದಿನಕ್ಕೆಷ್ಟು ತಾಸು ನಿದ್ದೆ ಮಾಡುತ್ತೀರಿ ನೀವು? ಇದು ಗಂಭೀರ ವಿಷಯ!

Rishabh Pant
ಅಂಕಣ1 hour ago

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

Karnataka Weather
ಕರ್ನಾಟಕ2 hours ago

Karnataka Weather: ಇಂದು ಬೀದರ್, ಕಲಬುರಗಿ ಸೇರಿ ಹಲವೆಡೆ ಶಾಖದ ಅಲೆ ಎಚ್ಚರಿಕೆ; ಇನ್ನೂ ಎಲ್ಲಿಯವರೆಗೆ ಈ ರಣ ಬಿಸಿಲು?

Tooth Decay
ಆರೋಗ್ಯ2 hours ago

Tooth Decay: ನಮ್ಮ ಈ ದುರಭ್ಯಾಸಗಳು ಹಲ್ಲಿನ ಹುಳುಕಿಗೆ ಕಾರಣವಾಗುತ್ತವೆ

dina bhavishya read your daily horoscope predictions for April 29 2024
ಭವಿಷ್ಯ3 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

love jihad
ಕರ್ನಾಟಕ8 hours ago

Love Jihad Case: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್; ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ!

BUS
ಕರ್ನಾಟಕ8 hours ago

ಚಿಕ್ಕಮಗಳೂರಿನ ದತ್ತಪೀಠದಲ್ಲಿ 100 ಅಡಿ ಆಳಕ್ಕೆ ಬಿದ್ದ ಪ್ರವಾಸಿ ಬಸ್;‌ ಬಾಲಕ ಸಾವು, 29 ಮಂದಿಗೆ ಗಾಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 29 2024
ಭವಿಷ್ಯ3 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202415 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202418 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202419 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202420 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ23 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

ಟ್ರೆಂಡಿಂಗ್‌