V manohar Darbar will hit the screens on june 9 V Manohar: 23 ವರ್ಷಗಳ ನಂತರ ಡೈರೆಕ್ಟರ್ ಕ್ಯಾಪ್ ತೊಟ್ಟ ವಿ.ಮನೋಹರ್ - Vistara News

South Cinema

V Manohar: 23 ವರ್ಷಗಳ ನಂತರ ಡೈರೆಕ್ಟರ್ ಕ್ಯಾಪ್ ತೊಟ್ಟ ವಿ.ಮನೋಹರ್

V manohar: ಜೂನ್ 9ರಂದು ಚಿತ್ರಮಂದಿರಗಳಲ್ಲಿ ದರ್ಬಾರ್‌ ಸಿನಿಮಾ ಬಿಡುಗಡೆಯಾಗಲಿದೆ. 80 ರಿಂದ 100 ಥಿಯೇಟರ್‌ಗಳಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ. ಇದೀಗ ಚಿತ್ರದ ಪ್ರಚಾರ ಕಾರ್ಯ ಭರದಿಂದ ಸಾಗಿದೆ.

VISTARANEWS.COM


on

Darbar Film
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 23 ವರ್ಷಗಳ ನಂತರ ವಿ.ಮನೋಹರ್ (V Manohar) ನಿರ್ದೇಶನಕ್ಕೆ ಇಳಿದಿದ್ದಾರೆ. ಜೂನ್ 9ರಂದು ಚಿತ್ರಮಂದಿರಗಳಲ್ಲಿ `ದರ್ಬಾರ್‌’ ಸಿನಿಮಾ ಬಿಡುಗಡೆಯಾಗಲಿದೆ. 80 ರಿಂದ 100 ಥಿಯೇಟರ್‌ಗಳಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ. ಇದೀಗ ಚಿತ್ರದ ಪ್ರಚಾರ ಕಾರ್ಯ ಭರದಿಂದ ಸಾಗಿದೆ.

ಈ ಕುರಿತಂತೆ ಸಂಗೀತ ನಿರ್ದೇಶಕ ವಿ.ಮನೋಹರ್ ಮಾತನಾಡಿ, “ಸುಮಾರು 23 ವರ್ಷಗಳ ನಂತರ ನಾನು ಮತ್ತೆ ಸಿನಿಮಾ ನಿರ್ದೇಶನಕ್ಕೆ ಕೈ ಹಾಕಿದ್ದೇನೆ. ಅದಕ್ಕೆ ಕಾರಣ ಈ ಸಿನಿಮಾದ ನಟ ಸತೀಶ್‌. ಸಿನಿಮಾರಂಗಕ್ಕೆ ಬರುವುದಕ್ಕೂ ಮುನ್ನ ನಾನು ಕೆಲ ದಿನಪತ್ರಿಕೆಗಳಿಗೆ ಕಾರ್ಟೂನ್ ಬರೆಯುತ್ತಿದ್ದೆ. ಆಗಿಂದಲೇ ನಾನು ರಾಜಕೀಯದ ಬಗ್ಗೆ ತಿಳಿದುಕೊಂಡಿದ್ದೆ. ರಾಜಕೀಯ ವಿಡಂಬನೆಯ ಕಥೆಯನ್ನು “ದರ್ಬಾರ್ ಸಿನಿಮಾದ ಮೂಲಕ ಪ್ರೇಕ್ಷಕರ ಮುಂದೆ ತರುತ್ತಿದ್ದೇವೆʼʼ ಎಂದರು.

ʻʻದರ್ಬಾರ್’ ಸಿನಿಮಾ ಶುರುವಾದ ನಂತರ ಕೋವಿಡ್ ಹಚ್ಚಾಯಿತು, ಆ ಭಯದಲ್ಲಿಯೇ ಸಿನಿಮಾದ ಶೂಟಿಂಗ್‌ ಮುಗಿಸಿದ್ದೆವು. ಮದ್ದೂರು ಬಳಿಯ ಹಳ್ಳಿಯೊಂದರಲ್ಲಿ ಸಿನಿಮಾದ ಬಹುತೇಕ ಶೂಟಿಂಗ್‌ ನಡೆಸಲಾಗಿದೆ. ಈ ಚಿತ್ರದಲ್ಲಿ ಹಲವಾರು ಕಲಾ ಬಳಗ ಹಾಗೂ ರಂಗ ಕಲಾವಿದರ ತಂಡ ಇದೆʼʼಎಂದು ನಿರ್ಮಾಪಕ ಸತೀಶ್‌ ಮಾಹಿತಿ ಹಂಚಿಕೊಂಡರು.

ಇದನ್ನೂ ಓದಿ: Manoj Bajpayee: ಹೊಸ ದಾಖಲೆ ಬರೆದ ಮನೋಜ್​ ಬಾಜಪೇಯಿ ಸಿನಿಮಾ!

3.5 ಕೋಟಿ ರೂ. ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಮಾಡಿರುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಮದ್ದೂರು ತಾಲೂಕಿನ ಮಾರದೇವನಹಳ್ಳಿ, ಚನ್ನಸಂದ್ರ, ಆತಗೂರು ತೈಲೂರು, ನಿಡಘಟ್ಟ ಸುತ್ತಮುತ್ತ ಚಿತ್ರೀಕರಣ ನಡೆದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Dhruva Sarja:  ಬಾಕ್ಸ್‌ ಆಫೀಸ್‌ನಲ್ಲಿ ʻಕೆಡಿʼ-ʻಡೆವಿಲ್‌ʼ ಕಾದಾಟ! ಹೆಚ್ಚಾಗಲಿದ್ಯಾ ದರ್ಶನ್‌-ಧ್ರುವ ಸಂಘರ್ಷ?

Dhruva Sarja:  ಇಷ್ಟೂ ದಿನ ಸಿನಿಮಾಗಳಿಲ್ಲ ಎಂದು ಪ್ರೇಕ್ಷಕರು ಕೊರಗುತ್ತಿದ್ದರು. ಇದರ ಬೆನ್ನಲ್ಲೇ ದೊಡ್ಡ ದೊಡ್ಡ ಸ್ಟಾರ್ಸ್‌ಗಳು ಸಿನಿಮಾ ರಿಲೀಸ್‌ ದಿನಾಂಕ ಘೋಷಣೆ ಮಾಡುತ್ತಿದ್ದಾರೆ. ಮತ್ತೆ ಡಿಸೆಂಬರ್‌ ತಿಂಗಳಲ್ಲಿ ಎರಡು ದುಬಾರಿ ಕನ್ನಡ ಸಿನಿಮಾಗಳ ಕಾದಾಟ ನೋಡುವ ಅವಕಾಶ ಪ್ರೇಕ್ಷಕರಿಗೆ ಇದೆ. ಮೂರು ವರ್ಷಗಳ ಬಳಿಕ ಧ್ರುವ ಸರ್ಜಾ ಅವರ ʻಕೆಡಿʼ ಹಾಗೂ ʻಮಾರ್ಟಿನ್‌ʼ ಸಿನಿಮಾಗಳು ರಿಲೀಸ್‌ ಆಗುತ್ತಿವೆ.

VISTARANEWS.COM


on

Dhruva Sarja KD and Darshan devil will clash on box office
Koo

ಬೆಂಗಳೂರು: ಪ್ರೇಮ್‌ ಹಾಗೂ ಧ್ರುವ ಸರ್ಜಾ (Dhruva Sarja) ಈಗಾಗಲೇ ʻಕೆಡಿʼ ಸಿನಿಮಾ ( KD movie) ಬಿಡುಗಡೆ ಯಾವಾಗ ಎಂಬುದನ್ನು ರಿವೀಲ್‌ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ಕೆಡಿ ಸಿನಿಮಾ ತೆರೆ ಕಾಣುತ್ತಿದೆ. ಆದರೆ ಅದೇ ಸಮಯಕ್ಕೆ ದರ್ಶನ್‌ ಅವರ `ಡೆವಿಲ್‌’ ಸಿನಿಮಾ ಕೂಡ ಬಿಡುಗಡೆಯಾಗಲಿದೆ. ಮೊದಲೇ ದರ್ಶನ್‌ ಹಾಗೂ ಧ್ರುವ ನಡುವೆ ಸಂಬಂಧ ಚೆನ್ನಾಗಿಲ್ಲ. ಹೀಗಾಗಿ ಬಾಕ್ಸ್‌ ಆಫೀಸ್‌ ವಾರ್‌ ಜತೆ ಫ್ಯಾನ್ಸ್‌ ವಾರ ಕೂಡ ಆಗಬಹುದು ಎನ್ನಲಾಗುತ್ತಿದೆ.

ಇಷ್ಟೂ ದಿನ ಸಿನಿಮಾಗಳಿಲ್ಲ ಎಂದು ಪ್ರೇಕ್ಷಕರು ಕೊರಗುತ್ತಿದ್ದರು. ಇದರ ಬೆನ್ನಲ್ಲೇ ದೊಡ್ಡ ದೊಡ್ಡ ಸ್ಟಾರ್ಸ್‌ಗಳು ಸಿನಿಮಾ ರಿಲೀಸ್‌ ದಿನಾಂಕ ಘೋಷಣೆ ಮಾಡುತ್ತಿದ್ದಾರೆ. ಮತ್ತೆ ಡಿಸೆಂಬರ್‌ ತಿಂಗಳಲ್ಲಿ ಎರಡು ದುಬಾರಿ ಕನ್ನಡ ಸಿನಿಮಾಗಳ ಕಾದಾಟ ನೋಡುವ ಅವಕಾಶ ಪ್ರೇಕ್ಷಕರಿಗೆ ಇದೆ. ಮೂರು ವರ್ಷಗಳ ಬಳಿಕ ಧ್ರುವ ಸರ್ಜಾ ಅವರ ʻಕೆಡಿʼ ಹಾಗೂ ʻಮಾರ್ಟಿನ್‌ʼ ಸಿನಿಮಾಗಳು ರಿಲೀಸ್‌ ಆಗುತ್ತಿವೆ. ಜತೆಗೆ ನಿರ್ದೇಶಕ ಪ್ರೇಮ್ ‘ಕೆಡಿ’ ಸಿನಿಮಾವನ್ನು ಡಿಸೆಂಬರ್‌ ರಿಲೀಸ್ ಮಾಡುವುದಾಗಿ ಹೇಳಿದ್ದಾರೆ. ಇದೇ ಡಿಸೆಂಬರ್‌ನಲ್ಲಿ ದರ್ಶನ್ ಸಿನಿಮಾ ‘ಡಿವಿಲ್’ ಕೂಡ ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ: Dhruva Sarja: ಮತ್ತೆ ಗುಡ್‌ ನ್ಯೂಸ್‌ ಕೊಟ್ಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ!

ಇನ್ನು ದರ್ಶನ್‌ ಅವರ ಡೆವಿಲ್‌ ಸಿನಿಮಾ ಕ್ರಿಸ್‌ಮಸ್‌ಗೆ ರಿಲೀಸ್ ಮಾಡುವುದಾಗಿ ಘೋಷಣೆ ಮಾಡಲಾಗಿದೆ. ಡಿಸೆಂಬರ್ 25 ಬುಧವಾರ ಬರುವುದರಿಂದ ಒಂದು ವಾರ ಮುಂಚೆ ಅಥವಾ ಎರಡು ದಿನ ತಡವಾಗಿ ಸಿನಿಮಾ ರಿಲೀಸ್ ಆಗಬಹುದು. ಇನ್ನು ಕೆಡಿ ಸಿನಿಮಾ ಪ್ಯಾನ್‌ ಇಂಡಿಯಾ ಸಿನಿಮಾವಾಗಿದ್ದು, ಒಂದು ವಾರ ಮುಂಚಿತವಾಗಿಯೇ ಸಿನಿಮಾ ರಿಲೀಸ್‌ ಮಾಡಬಹುದು. ಒಂದು ವೇಳೆ ಎರಡೂ ಸಿನಿಮಾಗಳು ಒಟ್ಟಿಗೆ ರಿಲೀಸ್‌ ಆದರೆ ಥಿಯೇಟರ್‌ ಸಮಸ್ಯೆಯಾಗೋದಂತೂ ಖಚಿತ. ಕರ್ನಾಟಕದಲ್ಲಿ 500 ಥಿಯೇಟರ್‌ಗಳು ಇವೆ. ‘ಕೆಡಿ’ ಸಿನಿಮಾಗೆ ನಿರ್ಮಾಣ ಸಂಸ್ಥೆ ಕೆವಿಎನ್ ಸಿಕ್ಕಾಪಟ್ಟೆ ಹಣ ಸುರಿದಿದೆ. ಈ ಕಾರಣಕ್ಕೆ ಕಮ್ಮಿ ಅಂದರೂ 400 ಸ್ಕ್ರೀನ್‌ನಲ್ಲಾದರೂ ರಿಲೀಸ್ ಆಲೇಬೇಕು. ಮಾತ್ರವಲ್ಲ ಪ್ರೇಮ್‌ ಕೂಡ ಹೆಚ್ಚು ಥಿಯೇಟರ್‌ಗಳಲ್ಲಿ ಸಿನಿಮಾ ರಿಲೀಸ್‌ ಮಾಡುವುದಾಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Cannes 2024: ಕಾನ್ ಚಿತ್ರೋತ್ಸವದಲ್ಲಿ ಭಾರತೀಯ ಸಿನಿಮಾಗೆ ಪ್ರಶಸ್ತಿ; ಹೊಸ ಇತಿಹಾಸ ಸೃಷ್ಟಿ!

ಕೆಡಿ ಸಿನಿಮಾದಲ್ಲಿ ಬಹು ತಾರಾಗಣ ಇದೆ. ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಎಂಟ್ರಿ ಕೊಟ್ಟಿದ್ದರು. ರೆಟ್ರೊ ಲುಕ್‌ನಲ್ಲಿ ಶಿಲ್ಪಾ ಶೆಟ್ಟಿ ಮಿಂಚಿದ್ದು, ಚೆಂದದ ಸೀರೆಯುಟ್ಟು ಉದ್ದದ ಜಡೆ ಮುಂದಕ್ಕೆ ಬಿಟ್ಟು, ಕೂಲಿಂಗ್ ಗ್ಲ್ಯಾಸ್ ಧರಿಸಿ ರಾಯಲ್ ಆಗಿ ಕಾಣಿಸಿಕೊಂಡಿದ್ದರು. ಈ ಹಿಂದೆ ಚಿತ್ರತಂಡ ರವಿಚಂದ್ರನ್ ಅವರ ಲುಕ್‌ ಹಂಚಿಕೊಂಡಿತ್ತು. ರವಿಚಂದ್ರನ್ ಅವರ ಸಿನಿಮಾ ಫಸ್ಟ್ ಲುಕ್‌ನಲ್ಲಿ ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್‌ನಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದರು. ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರವಿಚಂದ್ರನ್ ಮಿಂಚಿದ್ದರು. ಅಷ್ಟೇ ಅಲ್ಲದೇ ಧ್ರುವ ಸರ್ಜಾ ಅವರು 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿಕೊಂಡಿದ್ದರು.

ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಟೀಸರ್‌ ಪಂಚ ಭಾಷೆಯಲ್ಲಿ ಬಿಡುಗಡೆಗೊಂಡಿರುವುದು ವಿಶೇಷ.

Continue Reading

ಸ್ಯಾಂಡಲ್ ವುಡ್

Dhruva Sarja: ಕನ್ನಡ ಫಿಲ್ಮ್ ಇಂಡಸ್ಟ್ರಿಯಲ್ಲಿ ಸ್ಟಾರ್ ಅಂತ ಯಾರೂ ಇಲ್ಲ ಎಂದಿದ್ದೇಕೆ ಧ್ರುವ ಸರ್ಜಾ?

Dhruva Sarja: ಇಂದು ಸುದ್ದಿಗೋಷ್ಠಿ ನಡೆಸಿದ ಚಿತ್ರತಂಡ ಸಿನಿಮಾದ ಬಿಡುಗಡೆ ದಿನಾಂಕ, ಸಿನಿಮಾದ ಸಂಗೀತ ಇನ್ನಿತರೆ ವಿಷಯಗಳ ಬಗ್ಗೆ ಮಾಹಿತಿ ಹಂಚಿಕೊಂಡಿದೆ.  ಬಿಗ್‌ ಸ್ಟಾರ್ಸ್‌ಗಳು ಯಾಕೆ ವರ್ಷಕ್ಕೆ 2 ಸಿನಿಮಾ ಮಾಡಲ್ಲ? ಎಂಬುದರ ಬಗ್ಗೆ ಪ್ರೇಮ್‌ ಮಾಹಿತಿ ಹಂಚಿಕೊಂಡರು.

VISTARANEWS.COM


on

Dhruva Sarja Prem say about the theater problem
Koo

ಬೆಂಗಳೂರು: ಧ್ರುವ ಸರ್ಜಾ (Dhruva Sarja) ಮತ್ತು ಪ್ರೇಮ್ (Director Prem) ಕಾಂಬಿನೇಷನ್ ಸಿನಿಮಾ ‘ಕೆಡಿ’ ಇದೇ (KD Movie) ಡಿಸೆಂಬರ್‌ಗೆ ತೆರೆ ಕಾಣಲಿದೆ. ಮೇಕಿಂಗ್ ವಿಡಿಯೊ ರಿಲೀಸ್ ಮಾಡಿ ಸಿಹಿ ಸುದ್ದಿ ಕೊಟ್ಟಿದೆ ʻಕೆಡಿʼ ಸಿನಿಮಾ ಚಿತ್ರತಂಡ. ಇಂದು ಸುದ್ದಿಗೋಷ್ಠಿ ನಡೆಸಿದ ಚಿತ್ರತಂಡ ಸಿನಿಮಾದ ಬಿಡುಗಡೆ ದಿನಾಂಕ, ಸಿನಿಮಾದ ಸಂಗೀತ ಇನ್ನಿತರೆ ವಿಷಯಗಳ ಬಗ್ಗೆ ಮಾಹಿತಿ ಹಂಚಿಕೊಂಡಿದೆ.  ಬಿಗ್‌ ಸ್ಟಾರ್ಸ್‌ಗಳು ಯಾಕೆ ವರ್ಷಕ್ಕೆ 2 ಸಿನಿಮಾ ಮಾಡಲ್ಲ ಎಂಬುದರ ಬಗ್ಗೆ ಪ್ರೇಮ್‌ ಮಾಹಿತಿ ಹಂಚಿಕೊಂಡರು.

ಬಿಗ್‌ ಸ್ಟಾರ್ಸ್‌ಗಳು ಯಾಕೆ ವರ್ಷಕ್ಕೆ 2 ಸಿನಿಮಾ ಮಾಡಲ್ಲ?

ಇತ್ತೀಚೆಗೆ ಇತ್ತೀಚೆಗೆ ಕನ್ನಡ ಸಿನಿಮಾಗಳನ್ನು ನೋಡಲು ಜನ ಚಿತ್ರಮಂದಿರಗಳಲ್ಲಿ ಬರುತ್ತಿಲ್ಲ ಎಂಬ ದೂರು ಜೋರಾಗಿ ಕೇಳಿ ಬರುತ್ತಿದೆ. ಇತ್ತೀಚೆಗೆ ಫಿಲ್ಮ್‌ ಚೇಂಬರ್​ನವರು ಸಭೆ ನಡೆಸಿ, ಸ್ಟಾರ್ ನಟರು ಹೆಚ್ಚು ಹೆಚ್ಚು ಸಿನಿಮಾಗಳನ್ನು ಮಾಡುವಂತೆ ಒತ್ತಾಯಿಸಲು ನಿರ್ಣಯಿಸಿರುವ ಸುದ್ದಿ ಹರಿದಾಡಿತು. ಈ ಬಗ್ಗೆ ಪ್ರೇಮ್‌ಗೆ ಪ್ರಶ್ನೆ ಎದುರಾದಾಗ ಉತ್ತರಿಸಿದ್ದು ಹೀಗೆ.

ಪ್ರೇಮ್‌ ಮಾತನಾಡಿ ʻʻಇಂದಿನ ದಿನಮಾನದಲ್ಲಿ ಸಿನಿಮಾ ಮಾಡುವ ರೀತಿ ಬೇರೆ ಆಗಿದೆ. ಮುಂಚೆಲ್ಲ ವರ್ಷಕ್ಕೊಂದು ಸಿನಿಮಾಗಳನ್ನು ಮಾಡುತ್ತಿದ್ದರು. ಆಗ ಗ್ರಾಫಿಕ್‌ ಆಗಿರಲಿ, ತಂತ್ರಜ್ಞಾನ ಇರಲಿಲ್ಲ. ಆದರೆ ಈಗ ಕಾಂಪಿಟೇಶನ್‌ ಹೆಚ್ಚಾಗಿದೆ. ಬೇರೆ ಭಾಷೆಗಳಲ್ಲಿ ಕಾಂಪೀಟ್‌ ಮಾಡಲೇಬೇಕಾಗಿದೆ. ಕಾಂಪೀಟ್‌ ಮಾಡಬೇಕು ಎಂದರೆ ಕ್ವಾಲಿಟಿ ತುಂಬ ಮುಖ್ಯ. ಆಗ ಸಮಯ ಬೇಕೆ ಬೇಕು. ದರ್ಶನ್‌, ಧ್ರುವ ಅವರಿಗೆ ಮೂರು ಸಿನಿಮಾ ಮಾಡಿ ಎನ್ನುವುದಕ್ಕೆ ಆಗಲ್ಲ. ಈಗ ಸಿನಿಮಾ ಮಾಡಬೇಕು ಎಂದರೆ ಒಂದು ವರ್ಷ ಬೇಕೆ ಬೇಕು” ಎಂದರು.

ಇದನ್ನೂ ಓದಿ: Dhruva Sarja: ಮತ್ತೆ ಗುಡ್‌ ನ್ಯೂಸ್‌ ಕೊಟ್ಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ!

ಕನ್ನಡ ಇಂಡಸ್ಟ್ರಿಯಲ್ಲಿ ಸ್ಟಾರ್ ಅಂತ ಯಾರೂ ಇಲ್ಲ

ಇದೇ ವೇಳೆ ಧ್ರುವ ಸರ್ಜಾ ಮಾತನಾಡಿ ʻʻಸಿನಿಮಾ ಇಂಡಸ್ಟ್ರಿಯಲ್ಲಿ ಸ್ಟಾರ್‌ ಅಂತ ಯಾರಿಲ್ಲ. ಸಿನಿಮಾ ಚೆನ್ನಾಗಿದ್ದಾರೆ ಅವರೇ ಸ್ಟಾರ್‌. ಕ್ವಾಲಿಟಿ, ಕಂಟೆಂಟ್‌ ತುಂಬ ಮುಖ್ಯ. ಪ್ರೇಕ್ಷಕರಿಗೆ ಇಷ್ಟ ಆಗಬೇಕು ಎಂದೇ ನಾವು ಕಟೆಂಟ್‌ಗೆ ಆದ್ಯತೆ ಕೊಡುತ್ತಿದ್ದೇವೆʼʼಎಂದರು ಧ್ರುವ ಸರ್ಜಾ. ಧ್ರುವ ಸರ್ಜಾ ಸಿನಿಮಾ ಬಗ್ಗೆ ಮಾತನಾಡಿ ʻʻಮಾರ್ಟಿನ್‌ ಸಿನಿಮಾ ಅಕ್ಟೋಬರ್‌ 11ಕ್ಕೆ ರಿಲೀಸ್‌ ಆದರೆ, ಕೆಡಿ ಸಿನಿಮಾ ಡಿಸೆಂಬರ್‌ನಲ್ಲಿ ರಿಲೀಸ್‌ ಆಗುತ್ತಿದೆ. ಎರಡು ಸಿನಿಮಾಗಳ ಜಾನರ್‌ ಬೇರೆ ಬೇರೆ. ಕೆಡಿ ರೆಟ್ರೋ ಆಗಿದ್ದು, ಮಾರ್ಟಿನ್‌ ಒಳ್ಳೆ ಡ್ರಾಮ್‌ ಮತ್ತು ಕಟೆಂಟ್‌ ಸಿನಿಮಾʼʼಎಂದರು.

ಡಿಸೆಂಬರ್‌ಗೆ ಕೆಡಿ ಸಿನಿಮಾ ರಿಲೀಸ್‌

ಕೆಡಿ ಸಿನಿಮಾದಲ್ಲಿ ಬಹು ತಾರಾಗಣ ಇದೆ. ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಎಂಟ್ರಿ ಕೊಟ್ಟಿದ್ದರು. ರೆಟ್ರೊ ಲುಕ್‌ನಲ್ಲಿ ಶಿಲ್ಪಾ ಶೆಟ್ಟಿ ಮಿಂಚಿದ್ದು, ಚೆಂದದ ಸೀರೆಯುಟ್ಟು ಉದ್ದದ ಜಡೆ ಮುಂದಕ್ಕೆ ಬಿಟ್ಟು, ಕೂಲಿಂಗ್ ಗ್ಲ್ಯಾಸ್ ಧರಿಸಿ ರಾಯಲ್ ಆಗಿ ಕಾಣಿಸಿಕೊಂಡಿದ್ದರು. ಈ ಹಿಂದೆ ಚಿತ್ರತಂಡ ರವಿಚಂದ್ರನ್ ಅವರ ಲುಕ್‌ ಹಂಚಿಕೊಂಡಿತ್ತು. ರವಿಚಂದ್ರನ್ ಅವರ ಸಿನಿಮಾ ಫಸ್ಟ್ ಲುಕ್‌ನಲ್ಲಿ ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್‌ನಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದರು. ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರವಿಚಂದ್ರನ್ ಮಿಂಚಿದ್ದರು. ಅಷ್ಟೇ ಅಲ್ಲದೇ ಧ್ರುವ ಸರ್ಜಾ ಅವರು 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿಕೊಂಡಿದ್ದರು.

ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಟೀಸರ್‌ ಪಂಚ ಭಾಷೆಯಲ್ಲಿ ಬಿಡುಗಡೆಗೊಂಡಿರುವುದು ವಿಶೇಷ.

Continue Reading

ಸ್ಯಾಂಡಲ್ ವುಡ್

Priyanka Upendra: ’ಕಮರ್ ಫಿಲಂ ಫ್ಯಾಕ್ಟರಿ’ ಸಹಯೋಗದಲ್ಲಿ ‘ರೆಡ್ ರಾಕ್ ಸ್ಟುಡಿಯೊ’ ಶುಭಾರಂಭ: ಪ್ರಿಯಾಂಕ ಉಪೇಂದ್ರ ಸಾಥ್‌!

Priyanka Upendra : ಬೆಂಗಳೂರಿನ ನಾಗರಬಾವಿಯ ಅನ್ನಪೂರ್ಣೇಶ್ವರಿ ನಗರದಲ್ಲಿ ಸುಸಜ್ಜಿತ ರೀತಿಯಲ್ಲಿ, ಆಧುನಿಕ ಶೈಲಿಯಲ್ಲಿ ‘ಕಮರ್ ಫಿಲಂ ಫ್ಯಾಕ್ಟರಿ’ ಸಂಸ್ಥೆಯ ಸಹಯೋಗದಲ್ಲಿ ನಿರ್ಮಾಣವಾಗಿರುವ ‘ರೆಡ್ ರಾಕ್ ಸ್ಟುಡಿಯೋ’ವನ್ನು ನಟಿ ಪ್ರಿಯಾಂಕಾ ಉಪೇಂದ್ರ ಉದ್ಘಾಟಿಸಿದರು. ನಿರ್ಮಾಪಕ ಯೋಗಿ ದ್ವಾರಕೀಶ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.

VISTARANEWS.COM


on

Priyanka Upendra Red Rock Studio in collaboration with Comer Film Factory
Koo

ಬೆಂಗಳೂರು : ಚಲನಚಿತ್ರಗಳು, ಶಾರ್ಟ್ ಫಿಲಂ, ವೆಬ್ ಸಿರೀಸ್ ಮೊದಲಾದವುಗಳ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಅಗತ್ಯವಿರುವ ತಂತ್ರಜ್ಞಾನ ಮತ್ತು ಸುಸಜ್ಜಿತ ಸೌಲಭ್ಯ ಹೊಂದಿರುವ ‘ರೆಡ್ ರಾಕ್ ಸ್ಟುಡಿಯೋ’ ಇತ್ತೀಚೆಗೆ ಲೋಕಾರ್ಪಣೆಯಾಯಿತು. ಬೆಂಗಳೂರಿನ ನಾಗರಬಾವಿಯ ಅನ್ನಪೂರ್ಣೇಶ್ವರಿ ನಗರದಲ್ಲಿ ಸುಸಜ್ಜಿತ ರೀತಿಯಲ್ಲಿ, ಆಧುನಿಕ ಶೈಲಿಯಲ್ಲಿ ‘ಕಮರ್ ಫಿಲಂ ಫ್ಯಾಕ್ಟರಿ’ ಸಂಸ್ಥೆಯ ಸಹಯೋಗದಲ್ಲಿ ನಿರ್ಮಾಣವಾಗಿರುವ ‘ರೆಡ್ ರಾಕ್ ಸ್ಟುಡಿಯೋ’ವನ್ನು ನಟಿ ಪ್ರಿಯಾಂಕಾ ಉಪೇಂದ್ರ ಉದ್ಘಾಟಿಸಿದರು. ನಿರ್ಮಾಪಕ ಯೋಗಿ ದ್ವಾರಕೀಶ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.

ಇದೇ ವೇಳೆ ಮಾತನಾಡಿದ ನಟಿ ಪ್ರಿಯಾಂಕಾ ಉಪೇಂದ್ರ, ‘ಇಂದಿನ ದಿನಗಳಲ್ಲಿ ಸಿನಿಮಾಗಳಿಗೆ ಕಂಟೆಂಟ್ ಮತ್ತು ಕ್ವಾಲಿಟಿ ತುಂಬ ಮುಖ್ಯ. ಇತ್ತೀಚೆಗೆ ಬರುತ್ತಿರುವ ಸಾಕಷ್ಟು ಹೊಸ ಸಿನಿಮಾ ಮೇಕರ್ಸ್ ತುಂಬ ಹೊಸದಾಗಿ ಯೋಚಿಸುತ್ತಿದ್ದಾರೆ. ಅಂಥವರಿಗೆ ಕೈಗೆಟಕುವ ದರದಲ್ಲಿ ತಂತ್ರಜ್ಞಾನ ಲಭ್ಯತೆಯಿದ್ದರೆ ಗುಣಮಟ್ಟದಲ್ಲಿ ಸಿನಿಮಾ ಮಾಡಬಹುದು. ‘ರೆಡ್ ರಾಕ್ ಸ್ಟುಡಿಯೋ’ದಲ್ಲಿ ಇಂದಿನ ಸಿನಿಮಾ ಮೇಕರ್ಸ್ ಗೆ ಬೇಕಾದ ಎಲ್ಲ ಸೌಲಭ್ಯಗಳಿದ್ದು, ಇದರಿಂದ ಚಿತ್ರರಂಗಕ್ಕೆ ಒಳ್ಳೆಯದಾಗಲಿದೆ’ ಎಂದು ಆಶಿಸಿದರು.

ಇದನ್ನೂ ಓದಿ: Cannes 2024: ಕಾನ್ ಚಿತ್ರೋತ್ಸವದಲ್ಲಿ ಭಾರತೀಯ ಸಿನಿಮಾಗೆ ಪ್ರಶಸ್ತಿ; ಹೊಸ ಇತಿಹಾಸ ಸೃಷ್ಟಿ!

ಇನ್ನು ನೂತನವಾಗಿ ಆರಂಭವಾಗಿರುವ ‘ರೆಡ್ ರಾಕ್ ಸ್ಟುಡಿಯೋ’ದಲ್ಲಿ ಸಿನಿಮಾ ಮತ್ತು ದೃಶ್ಯ ಮಾಧ್ಯಮಗಳಿಗೆ ಬೇಕಾದ ಎಡಿಟಿಂಗ್, ಡಬ್ಬಿಂಗ್, ಡಿ.ಐ, ವಿಎಫ್ಎಕ್ಸ್, ಗ್ರೀನ್ ಮ್ಯಾಟ್ ಶೂಟ್, ಪೋಟೋ ಶೂಟ್, 5.1 &
7.1 ಸೌಂಡ್ ಸಿಸ್ಟಂ, ಅಟ್ಮೋಸ್ ಹೀಗೆ ಎಲ್ಲ ರೀತಿಯ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಸೌಲಭ್ಯಗಳಿದ್ದು, ಕೈಗೆಟಕುವ ದರದಲ್ಲಿ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಒಂದೇ ಸೂರಿನಡಿ ಬೆಂಗಳೂರಿನಲ್ಲೇ ಮಾಡಬಹುದಾಗಿದೆ.

ಈ ಸಂದರ್ಭದಲ್ಲಿ ಹಾಜರಿದ್ದ ‘ಕಮರ್ ಫಿಲಂ ಫ್ಯಾಕ್ಟರಿ’ಯ ಕಮರ್, ಹಿರಿಯ ನಿರ್ದೇಶಕ ಬುಕ್ಕಾಪಟ್ಟಣ ವಾಸು, ಕೃಷ್ಣ ಮೊದಲಾದವರು ‘ರೆಡ್ ರಾಕ್ ಸ್ಟುಡಿಯೋ’ ದ ಹಿಂದಿನ ಉದ್ದೇಶ, ಲಭ್ಯವಿರುವ ಸೌಲಭ್ಯಗಳು, ಮುಂದಿನ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

Continue Reading

South Cinema

Dhruva Sarja: ಮತ್ತೆ ಗುಡ್‌ ನ್ಯೂಸ್‌ ಕೊಟ್ಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ!

Dhruva Sarja: ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಟೀಸರ್‌ ಪಂಚ ಭಾಷೆಯಲ್ಲಿ ಬಿಡುಗಡೆಗೊಂಡಿರುವುದು ವಿಶೇಷ.

VISTARANEWS.COM


on

Dhruva Sarja KD Movie Release date announce
Koo

ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ಅಭಿನಯದ ಬಹುನೀರಿಕ್ಷಿತ ʼಮಾರ್ಟಿನ್ʼ ಚಿತ್ರದ ರಿಲೀಸ್ ಡೇಟ್ ಈಗಾಗಲೇ ರಿವೀಲ್‌ ಆಗಿದೆ. ಚಿತ್ರವು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಪಂಚ ಭಾಷೆಗಳಲ್ಲಿ ಅಕ್ಟೋಬರ್‌ 11ಕ್ಕೆ ತೆರೆಗೆ ಅಪ್ಪಲಿಸಲಿದೆ. ಈ ಸುದ್ದಿ ಬೆನ್ನಲ್ಲೇ ಮತ್ತೊಮ್ಮೆ ಧ್ರುವ ಸರ್ಜಾ ಅವರು ಗುಡ್‌ನ್ಯೂಸ್‌ ಕೊಟ್ಟಿದ್ದಾರೆ. ಧ್ರುವ ಸರ್ಜಾ ಮತ್ತು ಪ್ರೇಮ್ ಕಾಂಬಿನೇಷನ್ ಸಿನಿಮಾ ‘ಕೆಡಿ’ ಇದೇ ಡಿಸೆಂಬರ್‌ಗೆ ತೆರೆ ಕಾಣಲಿದೆ. ಮೇಕಿಂಗ್ ವಿಡಿಯೊ ರಿಲೀಸ್ ಮಾಡಿ ಸಿಹಿ ಸುದ್ದಿ ಕೊಟ್ಟಿದೆ ʻಕೆಡಿʼ ಸಿನಿಮಾ ಚಿತ್ರತಂಡ.

ಕೆಡಿ ಸಿನಿಮಾದಲ್ಲಿ ಬಹು ತಾರಾಗಣ ಇದೆ. ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಎಂಟ್ರಿ ಕೊಟ್ಟಿದ್ದರು. ರೆಟ್ರೊ ಲುಕ್‌ನಲ್ಲಿ ಶಿಲ್ಪಾ ಶೆಟ್ಟಿ ಮಿಂಚಿದ್ದು, ಚೆಂದದ ಸೀರೆಯುಟ್ಟು ಉದ್ದದ ಜಡೆ ಮುಂದಕ್ಕೆ ಬಿಟ್ಟು, ಕೂಲಿಂಗ್ ಗ್ಲ್ಯಾಸ್ ಧರಿಸಿ ರಾಯಲ್ ಆಗಿ ಕಾಣಿಸಿಕೊಂಡಿದ್ದರು. ಈ ಹಿಂದೆ ಚಿತ್ರತಂಡ ರವಿಚಂದ್ರನ್ ಅವರ ಲುಕ್‌ ಹಂಚಿಕೊಂಡಿತ್ತು. ರವಿಚಂದ್ರನ್ ಅವರ ಸಿನಿಮಾ ಫಸ್ಟ್ ಲುಕ್‌ನಲ್ಲಿ ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್‌ನಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದರು. ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರವಿಚಂದ್ರನ್ ಮಿಂಚಿದ್ದರು. ಅಷ್ಟೇ ಅಲ್ಲದೇ ಧ್ರುವ ಸರ್ಜಾ ಅವರು 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿಕೊಂಡಿದ್ದರು.

ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಟೀಸರ್‌ ಪಂಚ ಭಾಷೆಯಲ್ಲಿ ಬಿಡುಗಡೆಗೊಂಡಿರುವುದು ವಿಶೇಷ.

ಇದನ್ನೂ ಓದಿ: Dhruva Sarja: ಬರೋಬ್ಬರಿ 9 ಕೋಟಿ ರೂ.ಗೆ ಮಾರಾಟ ಆಯ್ತು ʻಮಾರ್ಟಿನ್‌ʼ ಆಡಿಯೊ ರೈಟ್ಸ್‌!

ಆರ್ಕೆಸ್ಟ್ರಾ ಗ್ಲಿಂಪ್ಸ್

ಇದೀಗ ಕೆಡಿ ಸಿನಿಮಾ ಆರ್ಕೆಸ್ಟ್ರಾ ಗ್ಲಿಂಪ್ಸ್‌ವನ್ನು ವಿಡಿಯೊ ಶೇರ್‌ ಮಾಡಿಕೊಂಡಿದೆ ಚಿತ್ರತಂಡ. ವಿದೇಶದಲ್ಲಿ ಮ್ಯೂಸಿಕ್‌ ರೆಕಾರ್ಡ್‌ ಮಾಡಲಾಗಿದೆ. ಈ ಬಗ್ಗೆ ಚಿಕ್ಕ ವಿಡಿಯೊ ಮೂಲಕ ಮಾಹಿತಿ ಹಂಚಿಕೊಂಡಿದೆ ಚಿತ್ರತಂಡ. ‘ಕೆಡಿ’ ಸಿನಿಮಾದ ಆಡಿಯೋ ಭರ್ಜರಿ ಮೊತ್ತಕ್ಕೆ ಸೇಲ್ ಆಗಿದೆ ಎಂದೂ ಹೇಳಿಕೊಂಡಿದೆ ಚಿತ್ರತಂಡ. ಈ ವರ್ಷವೇ ಧ್ರುವ ನಟನೆಯ ಮಾರ್ಟಿನ್ ಹಾಗು ಕೆಡಿ ಎರಡು ಸಿನಿಮಾಗಳು ತೆರೆಗೆ ಬರಲಿವೆ .

ಮಾರ್ಟಿನ್ ಚಿತ್ರ

ಪೊಗರು ಚಿತ್ರದ ಬಳಿಕ 3 ವರ್ಷಗಳ ನಂತರ ಧ್ರುವ ಸರ್ಜಾ ತೆರೆಗೆ ಎಂಟ್ರಿ ನೀಡುತ್ತಿದ್ದು, ಮಾರ್ಟಿನ್‌ ಹಾಗೂ ಕೆಡಿ ಚಿತ್ರಗಳು ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ. ಮಾರ್ಟಿನ್ ಚಿತ್ರಕ್ಕೆ ಮಣಿ ಶರ್ಮಾ ಅವರ ಸಂಗೀತ ಮತ್ತು ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ ಅವರಿಗೆ ವೈಭವಿ ಶಾಂಡಿಲ್ಯ ನಾಯಕಿಯಾಗಿ ನಟಿಸಿದ್ದಾರೆ. ಮಾರ್ಟಿನ್‌ ಸಿನಿಮಾದಲ್ಲಿ ಕನ್ನಡದ ಕಲಾವಿದರ ಜತೆಗೆ ಹಿಂದಿ, ತೆಲುಗು, ತಮಿಳು ಚಿತ್ರರಂಗದ ಕಲಾವಿದರು ನಟಿಸಿದ್ದಾರೆ. ಅಚ್ಯುತ್‌ ಕುಮಾರ್‌, ನಿಕಿತನ್‌ ಧೀರ್‌, ನವಾಬ್‌ ಶಾ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಧೀರನ್‌ ಅಧಿಕಾರಂ ಒಂಡ್ರು’ತಮಿಳು ಚಿತ್ರದ ಮೂಲಕ ಗಮನ ಸೆಳೆದಿದ್ದ ನಟ ರೋಹಿತ್‌ ಪಾಠಕ್‌ ಸಹ ‘ಮಾರ್ಟಿನ್‌’ನಲ್ಲಿ ಬಹು ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಅದ್ಧೂರಿ ಬಜೆಟ್‌ ಮತ್ತು ಮೇಕಿಂಗ್‌ನಿಂದಾಗಿ ಸದ್ದು ಮಾಡಿರುವ ಸಿನಿಮಾ ‘ಮಾರ್ಟಿನ್ ಕ್ಲೈಮ್ಯಾಕ್ಸ್‌ನ ಆ್ಯಕ್ಷನ್‌ ದೃಶ್ಯಗಳಿಗೆ ರಾಮ್‌-ಲಕ್ಷ್ಮಣ್‌ ಮತ್ತು ರವಿವರ್ಮ ಸಾಹಸ ನಿರ್ದೇಶನ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಒಂದು ಸಿನಿಮಾದ ಕ್ಲೈಮ್ಯಾಕ್ಸ್‌ಗಾಗಿ ಮೂರು ಸಾಹಸ ನಿರ್ದೇಶಕರು ಕೆಲಸ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

Continue Reading
Advertisement
Road Accident
ಕರ್ನಾಟಕ2 mins ago

Road Accident: ಕೆಎಸ್ಆರ್‌ಟಿಸಿ ಬಸ್-ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು

Porsche Car Crash
ದೇಶ3 mins ago

Porsche Crash: ಇಬ್ಬರ ಸಾವಿಗೆ ಕಾರಣವಾದ 17 ವರ್ಷದ ಬಾಲಕನಿಗೆ ಪೋರ್ಶೆ ಕಾರು ಸಿಕ್ಕಿದ್ದು ʼಬರ್ತ್‌ಡೇ ಗಿಫ್ಟ್‌ʼ!

Electric Scooters
ಪ್ರಮುಖ ಸುದ್ದಿ3 mins ago

Electric Scooters : ದೊಡ್ಡ ಬೂಟ್​ ಸ್ಪೇಸ್ ಇರುವಂಥ 5 ಎಲೆಕ್ಟ್ರಿಕ್​ ಸ್ಕೂಟರ್​ಗಳು ಇವು

Shreyanka Patil
ಕ್ರೀಡೆ10 mins ago

Shreyanka Patil: ನಟ ಸಮರ್ಜಿತ್ ಲಂಕೇಶ್ ಜತೆ ಮಸ್ತ್​ ಸ್ಟೆಪ್ಸ್ ಹಾಕಿದ ಆರ್​ಸಿಬಿ ಆಟಗಾರ್ತಿ ಶ್ರೇಯಾಂಕಾ; ವಿಡಿಯೊ ವೈರಲ್​

Kendall Jenner American model flaunted
ಬಾಲಿವುಡ್33 mins ago

Kendall Jenner: ತಿಂಗಳಲ್ಲಿ ಎರಡು ಬಾರಿ ಟಾಪ್‌ಲೆಸ್‌ ಆದ ಹಾಲಿವುಡ್‌ ಬ್ಯೂಟಿ ಕೆಂಡಲ್‌ ಜೆನ್ನರ್‌!

How To Get Rid Of Cockroaches
ಲೈಫ್‌ಸ್ಟೈಲ್37 mins ago

How To Get Rid Of Cockroaches: ಜಿರಳೆಗಳು ಮನೆಯೊಳಗೆ ಬರದಂತೆ ಮಾಡುವ ಈ ಉಪಾಯಗಳು ನಿಮಗೆ ತಿಳಿದಿದೆಯೆ?

Lockup Death
ಕರ್ನಾಟಕ39 mins ago

Lockup Death: ಚನ್ನಗಿರಿ ಆದಿಲ್ ಸಾವು ಪ್ರಕರಣ ಸಿಐಡಿಗೆ ವರ್ಗಾವಣೆ

theft Case in Raichur
ರಾಯಚೂರು39 mins ago

Raichur News : ಸಾಲದ ಸುಳಿಗೆ ಸಿಲುಕಿದ ಸ್ನೇಹಿತೆಗೆ ಕೊಟ್ಟಳು 10 ತೊಲೆ ಬಂಗಾರ! ‘ಕಳ್ಳತನ’ ನಾಟಕವಾಡಿದ ಗೆಳತಿಯರು ಲಾಕ್‌

Swati Maliwal
ದೇಶ45 mins ago

Swati Maliwal case: “ರೇಪ್‌, ಕೊಲೆ ಮಾಡೋದಾಗಿ ಬೆದರಿಕೆ ಬರ್ತಿದೆ”- ಸ್ವಾತಿ ಮಲಿವಾಲ್‌ ಮತ್ತೊಂದು ಆರೋಪ

India Head Coach
ಕ್ರಿಕೆಟ್56 mins ago

India Head Coach: ಕೋಚ್​ ಹುದ್ದೆಗೆ ನಾನು ರೆಡಿ; ಆದರೆ ಒಂದು ಷರತ್ತು ಎಂದ ಗಂಭೀರ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 week ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 week ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌