Team India ನಾಯಕ ರೋಹಿತ್‌ ಶರ್ಮಗೆ ಕೊರೊನಾ - Vistara News

ಕ್ರಿಕೆಟ್

Team India ನಾಯಕ ರೋಹಿತ್‌ ಶರ್ಮಗೆ ಕೊರೊನಾ

ಇಂಗ್ಲೆಂಡ್‌ ಪ್ರವಾಸದಲ್ಲಿರುವ ಟೀಮ್‌ ಇಂಡಿಯಾ ಕ್ರಿಕೆಟ್‌ ತಂಡದ ಕಪ್ತಾನ ರೋಹಿತ್‌ ಶರ್ಮಾಗೆ ಕೋವಿಡ್-‌19 ಸೋಂಕು ತಗುಲಿರುವುದು ದೃಢಪಟ್ಟಿದೆ. ಪಂದ್ಯಕ್ಕೆ ಮುನ್ನ ತಂಡಕ್ಕೆ ಹೊಡೆತ ಬಿದ್ದಂತಾಗಿದೆ.

VISTARANEWS.COM


on

team India
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಟೀಮ್‌ ಇಂಡಿಯಾ(Team India) ನಾಯಕ ರೋಹಿತ್‌ ಶರ್ಮ ಕೊರೊನಾ ಸೋಂಕು ತಗುಲಿದೆ. ಆತಿಥೇಯ ಇಂಗ್ಲೆಂಡ್‌ ವಿರುದ್ಧ ಮರು ಸಂಘಟಿಸಿರುವ ಟೆಸ್ಟ್‌ ಪಂದ್ಯಕ್ಕಾಗಿ ಇಂಗ್ಲೆಂಡ್‌ಗೆ ತೆರಳಿರುವ ಅವರು ಅಭ್ಯಾಸ ಪಂದ್ಯದಲ್ಲಿ ನಿರತರಾಗಿರುವ ನಡುವೆ ಸೋಂಕಿಗೆ ಒಳಗಾಗಿದ್ದಾರೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (bcci) ಈ ಕುರಿತು ಟ್ವೀಟ್‌ ಮೂಲಕ ಪ್ರಕಟಣೆ ಹೊರಡಿಸಿದೆ. “team India ನಾಯಕ ರೋಹಿತ್‌ ಶರ್ಮ ಅವರಿಗೆ ಶನಿವಾರ ನಡೆಸಿದ rapid antigen test ಟೆಸ್ಟ್‌ನಲ್ಲಿ ಪಾಸಿಟಿವ್‌ ವರದಿ ಬಂದಿದೆ. ತಕ್ಷಣ ಅವರನ್ನು ಟೀಮ್‌ ಇಂಡಿಯಾದ ಹೋಟೆಲ್‌ನಲ್ಲಿ ಐಸೋಲೇಷನ್‌ನಲ್ಲಿ ಇಡಲಾಗಿದೆ. ತಂಡದ ವೈದ್ಯಕೀಯ ತಂಡ ಅವರ ಮೇಲೆ ನಿಗಾ ವಹಿಸಿದೆ,” ಎಂದು ಹೇಳಿದೆ.

ಜುಲೈ ೧ರಿಂದ ಆರಂಭವಾಗಲಿರುವ ಏಕೈಕ ಟೆಸ್ಟ್‌ ತಂಡದ ಭಾಗವಾದ ಲೀಸೆಸ್ಟರ್‌ಶೈರ್‌ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ರೋಹಿತ್‌ ಶರ್ಮ ಪಾಲ್ಗೊಂಡಿದ್ದರು. ಅವರು ಮೊದಲ ಇನಿಂಗ್ಸ್‌ನಲ್ಲಿ ಬ್ಯಾಟಿಂಗ್‌ ಮಾಡಿದ್ದರೆ ಎರಡನೇ ಇನಿಂಗ್ಸ್‌ನಲ್ಲಿ ಆಡಲು ಇಳಿದಿರಲಿಲ್ಲ. ಮೊದಲ ಇನಿಂಗ್ಸ್‌ನಲ್ಲಿ ಅವರು ೨೫ ರನ್‌ ಬಾರಿಸಿದ್ದರು.

ಕಳೆದ ವರ್ಷ ಆರಂಭಗೊಂಡಿದ್ದ ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ನಾಲ್ಕು ಪಂದ್ಯಗಳು ಮುಕ್ತಾಯಗೊಂಡಿವೆ. ಆ ವೇಳೆ ಭಾರತ ತಂಡದ ಕೆಲವು ಆಟಗಾರರಿಗೆ ಸೋಂಕು ತಗುಲಿದ್ದ ಕಾರಣ ಸರಣಿ ಏಕಾಏಕಿ ಸ್ಥಗಿತಗೊಂಡಿತ್ತು. ಈ ವೇಳೆ ಭಾರತ ೨-೧ ಮುನ್ನಡೆ ಪಡೆದುಕೊಂಡಿತ್ತು. ಉಳಿದಿರುವ ಒಂದು ಪಂದ್ಯ ಜುಲೈ ೧ರಿಂದ ಆರಂಭವಾಗಲಿದೆ. ಒಂದು ವೇಳೆ ಈ ಪಂದ್ಯಕ್ಕೆ ಮುನ್ನ ರೋಹಿತ್‌ ಶರ್ಮ ಸೋಂಕಿನಿಂದ ಮುಕ್ತಗೊಂಡು ಆಡಿದರೆ, ವಿದೇಶಿ ನೆಲದಲ್ಲಿ ಮೊದಲ ಬಾರಿ ನಾಯಕತ್ವ ವಹಿಸಿಕೊಂಡಂತಾಗುತ್ತದೆ.

ಟೆಸ್ಟ್‌ ಮ್ಯಾಚ್‌ ಮುಗಿದ ಬಳಿಕ ಇಂಗ್ಲೆಂಡ್‌ ವಿರುದ್ಧ ಮೂರು ಟೆ೨೦ ಪಂದ್ಯಗಳ ಸರಣಿಯಲ್ಲಿ ಭಾರತ ಪಾಲ್ಗೊಳ್ಳಲಿದೆ.

ವಿರಾಟ್‌ ಕೊಹ್ಲಿಗೂ ಸೋಂಕು ತಗುಲಿತ್ತು

ಕೆಲವು ದಿನಗಳ ಹಿಂದೆ ಟೀಮ್ ಇಂಡಿಯಾ ಮಾಜಿ ನಾಯಕ ರೋಹಿತ್‌ ಶರ್ಮ ಕೂಡ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಅವರು ಮಾಲ್ಡೀವ್ಸ್ ಪ್ರವಾಸಕ್ಕೆ ಹೋಗಿದ್ದರಿಂದ ಸೋಂಕು ತಗುಲಿತ್ತು ಎಂದು ಹೇಳಲಾಗಿದೆ. ಈ ವೇಳೆ ಆಟಗಾರರಿಗೆ ಬಿಸಿಸಿಐ ಅನಿಯಂತ್ರಿತ ಪ್ರವಾಸ ಕೈಗೊಳ್ಳಬಾರದು ಎಂದು ಎಚ್ಚರಿಕೆ ನೀಡಿದೆ ಎಂಬುದಾಗಿಯೂ ವರದಿಯಾಗಿತ್ತು.

ಇದನ್ನೂ ಓದಿ: ಟೆಸ್ಟ್‌ ಪಂದ್ಯಕ್ಕೆ covid-19 ಕಾಟ: ವಿರಾಟ್‌ ಕೊಹ್ಲಿಗೂ ಕೊರೊನಾ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup : ವಿಶ್ವ ಕಪ್​ಗೆ ಭಾರತ ತಂಡ ಪ್ರಯಾಣಿಸುವ ದಿನಾಂಕ ಪ್ರಕಟಿಸಿದ ಜಯ್​ ಶಾ

T20 World Cup: ಭಾರತೀಯ ಆಟಗಾರರು ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ 2024 (IPL 2024) ಋತುವಿನಲ್ಲಿ ಭಾಗವಹಿಸುತ್ತಿದ್ದಾರೆ. ತಂಡಗಳು ಪಂದ್ಯಾವಳಿಯಲ್ಲಿ ಪ್ಲೇಆಫ್ ಸ್ಥಾನಗಳಿಗಾಗಿ ಸ್ಪರ್ಧಿಸುತ್ತಿವೆ. ಮುಂಬೈ ಇಂಡಿಯನ್ಸ್ (Mumbai Indians) ಮತ್ತು ಪಂಜಾಬ್ ಕಿಂಗ್ಸ್ (PBKS) ಪಂದ್ಯಾವಳಿಯಿಂದ ಹೊರಗುಳಿದಿದ್ದರೆ ಇತರ ತಂಡಗಳು ಪ್ಲೇಆಫ್ ಸ್ಥಾನಗಳಿಗಾಗಿ ಸ್ಪರ್ಧಿಸುತ್ತಿವೆ.

VISTARANEWS.COM


on

T20 world cup
Koo

ನವದೆಹಲಿ: ವೆಸ್ಟ್ ಇಂಡೀಸ್ ಮತ್ತು ಯುಎಸ್ಎಯಲ್ಲಿ ನಡೆಯಲಿರುವ 2024 ರ ಟಿ 20 ವಿಶ್ವಕಪ್​ಗಾಗಿ (T20 World Cup 2024) ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡದ ಆಟಗಾರರ ನಿರ್ಗಮನ ಯೋಜನೆಗಳನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಕಾರ್ಯದರ್ಶಿ ಜಯ್ ಶಾ ಬಹಿರಂಗಪಡಿಸಿದ್ದಾರೆ. ಮುಂಬರುವ ಐಸಿಸಿ ಟೂರ್ನಮೆಂಟ್​ಗೆ ಭಾರತೀಯ ಆಟಗಾರರು ಎರಡು ಹಂತಗಳಲ್ಲಿ ಅಲ್ಲಿಗೆ ತೆರಳಲಿದ್ದಾರೆ ಎಂದು ಜಯ್ ಶಾ ಮಾಹಿತಿ ನೀಡಿದ್ದಾರೆ.

ಭಾರತೀಯ ಆಟಗಾರರು ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ 2024 (IPL 2024) ಋತುವಿನಲ್ಲಿ ಭಾಗವಹಿಸುತ್ತಿದ್ದಾರೆ. ತಂಡಗಳು ಪಂದ್ಯಾವಳಿಯಲ್ಲಿ ಪ್ಲೇಆಫ್ ಸ್ಥಾನಗಳಿಗಾಗಿ ಸ್ಪರ್ಧಿಸುತ್ತಿವೆ. ಮುಂಬೈ ಇಂಡಿಯನ್ಸ್ (Mumbai Indians) ಮತ್ತು ಪಂಜಾಬ್ ಕಿಂಗ್ಸ್ (PBKS) ಪಂದ್ಯಾವಳಿಯಿಂದ ಹೊರಗುಳಿದಿದ್ದರೆ ಇತರ ತಂಡಗಳು ಪ್ಲೇಆಫ್ ಸ್ಥಾನಗಳಿಗಾಗಿ ಸ್ಪರ್ಧಿಸುತ್ತಿವೆ.

ಐಪಿಎಲ್ ಪ್ಲೇಆಫ್ ಪಂದ್ಯಗಳು ಮೇ 21 ರಿಂದ ಮೇ 26 ರವರೆಗೆ ನಡೆಯಲಿದ್ದು, ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣ ಮತ್ತು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಲಿವೆ. ಕ್ವಾಲಿಫೈಯರ್ 1 ಮತ್ತು ಎಲಿಮಿನೇಟರ್ ಪಂದ್ಯಗಳು ಅಹಮದಾಬಾದ್​ನಲ್ಲಿ ನಡೆದರೆ, ಚೆನ್ನೈ ಕ್ವಾಲಿಫೈಯರ್ 2 ಮತ್ತು ಅಂತಿಮ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ.

ಎರಡು ಹಂತದಲ್ಲಿ ಪ್ರಯಾಣ

ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಜಯ್ ಶಾ, ಭಾರತ ತಂಡವು ಎರಡು ಹಂತಗಳಲ್ಲಿ ನಿರ್ಗಮಿಸಲಿದೆ ಎಂದು ದೃಢಪಡಿಸಿದರು. ಆಟಗಾರರು ಮತ್ತು ಕೋಚಿಂಗ್ ಸಿಬ್ಬಂದಿ ಸೇರಿದಂತೆ ಮೊದಲ ಬ್ಯಾಚ್ ಮೇ 24 ರಂದು ಹೊರಡಲಿದೆ. ಐಪಿಎಲ್ ತಂಡಗಳು ಪ್ಲೇಆಫ್​ಗೆ ಅರ್ಹತೆ ಪಡೆದ ಆಟಗಾರರನ್ನು ಒಳಗೊಂಡ ಎರಡನೇ ಬ್ಯಾಚ್ ಮೇ 26 ರಂದು ಐಪಿಎಲ್ ಫೈನಲ್ ನಂತರ ಹೊರಡಲಿದೆ.

ಇದನ್ನೂ ಓದಿ: Jay Shah : ”ನಾನವನಲ್ಲ, ನಾನವನಲ್ಲ”; ಶ್ರೇಯಸ್​, ಇಶಾನ್ ವಿವಾದಕ್ಕೆ ಸ್ಪಷ್ಟನೆ ನೀಡಿದ ಜಯ್​ ಶಾ

ಪಾಕಿಸ್ತಾನ, ಐರ್ಲೆಂಡ್, ಕೆನಡಾ ಮತ್ತು ಅಮೆರಿಕ (ಯುಎಸ್ಎ) ಜೊತೆಗೆ ಭಾರತ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ. ಅವರು ತಮ್ಮ ಎಲ್ಲಾ ಗುಂಪು ಪಂದ್ಯಗಳನ್ನು ಯುಎಸ್ಎಯಲ್ಲಿ ಆಡಲಿದ್ದಾರೆ. ರೋಹಿತ್ ಶರ್ಮಾ ಪಡೆ ಜೂನ್ 5 ರಂದು ನ್ಯೂಯಾರ್ಕ್​ನ ನಸ್ಸೌ ಕೌಂಟಿ ಇಂಟರ್​​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ಐರ್ಲೆಂಡ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ.

ಪ್ಲೇಆಫ್ಗೆ ಪ್ರವೇಶಿಸದ ಐಪಿಎಲ್ ತಂಡಗಳಿಂದ ಆಟಗಾರರಿಗೆ ವಿಶ್ರಾಂತಿ ನೀಡುವ ಆಲೋಚನೆಯನ್ನು ಜಯ್ ಶಾ ತಳ್ಳಿಹಾಕಿದರು. ಜಸ್ಪ್ರೀತ್ ಬುಮ್ರಾ ಅವರಂತಹ ಬೌಲರ್ಗಳ ಕೌಶಲಗಳನ್ನು ಸುಧಾರಿಸಲು ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಅವರಂತಹ ಫಾರ್ಮ್​ನಲ್ಲಿರುವ ಬ್ಯಾಟರ್​ಗಳನ್ನು ಎದುರಿಸುವ ಪ್ರಾಮುಖ್ಯತೆಯನ್ನು ಶಾ ಒತ್ತಿ ಹೇಳಿದರು

2024ರ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ

2007ರಲ್ಲಿ ನಡೆದ ಚೊಚ್ಚಲ ಟಿ20 ವಿಶ್ವಕಪ್ ಫೈನಲ್​​ನಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧ ಜಯ ಸಾಧಿಸಿತ್ತು. ಭಾರತವು ಐದು ರನ್ ಗಳಿಂದ ಗೆದ್ದು, ಆಟದ ಕಿರು ಸ್ವರೂಪದಲ್ಲಿ ಅವರ ಏಕೈಕ ವಿಜಯ ದಾಖಲಿಸಿತ್ತು. ಟಿ 20 ವಿಶ್ವಕಪ್​​ನ ನಂತರದ ಆವೃತ್ತಿಗಳಲ್ಲಿ ಭಾರತ ತಂಡವು ಒಮ್ಮೆ ಮಾತ್ರ ಫೈನಲ್ ತಲುಪಿದೆ.

ಟಿ20 ವಿಶ್ವ ಕಪ್​​ಗೆ ​​ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಅರ್ಷ್ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ. ಸಿರಾಜ್ . ಮೀಸಲು ಆಟಗಾರರು: ಶುಬ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್, ಅವೇಶ್ ಖಾನ್

Continue Reading

ಪ್ರಮುಖ ಸುದ್ದಿ

Jay Shah : ”ನಾನವನಲ್ಲ, ನಾನವನಲ್ಲ”; ಶ್ರೇಯಸ್​, ಇಶಾನ್ ವಿವಾದಕ್ಕೆ ಸ್ಪಷ್ಟನೆ ನೀಡಿದ ಜಯ್​ ಶಾ

Jay Shah: ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳ ಬಳಿಕ ಶ್ರೇಯಸ್ ಅಯ್ಯರ್ ಬೆನ್ನುನೋವಿನಿಂದ ಬಳಲುತ್ತಿದ್ದರು. ಮುಂದಿನ ಮೂರು ಟೆಸ್ಟ್ ಪಂದ್ಯಗಳಿಗೆ ಅವರನ್ನು ಆಯ್ಕೆ ಮಾಡಿರಲಿಲ್ಲ. ಅಯ್ಯರ್ ಅವರು ತಮ್ಮ ತವರಿನ ಮುಂಬೈ ತಂಡವು ರಣಜಿ ಟ್ರೋಫಿ ಪಂದ್ಯವನ್ನು ಆಡುವಲ್ಲಿ ನಿರತರಾಗಿದ್ದಾಗ ಮುಂಬೈನಲ್ಲಿ ನಡೆದ ಕೋಲ್ಕತಾ ನೈಟ್ ರೈಡರ್ಸ್ ಶಿಬಿರದಲ್ಲಿ ಭಾಗವಹಿಸಿದ್ದರು ಎಂದು ಆರೋಪಿಸಲಾಗಿದೆ.

VISTARANEWS.COM


on

Jay Shah
Koo

ಬೆಂಗಳೂರು: ಎಡಗೈ ವಿಕೆಟ್​ಕೀಪರ್ ಬ್ಯಾಟರ್​ ಇಶಾನ್ ಕಿಶನ್ (Ishan Kishan) ಮತ್ತು ಮಧ್ಯಮ ಕ್ರಮಾಂಕದ ಬ್ಯಾಟಿಂಗ್​ ಶಕ್ತಿ ಶ್ರೇಯಸ್ ಅಯ್ಯರ್ (Shreya Iyer) ಅವರನ್ನು ಬಿಸಿಸಿಐ ಕೇಂದ್ರ ಗುತ್ತಿಗೆ ಪಟ್ಟಿಯಿಂದ (BCCI Central Contract list) ಕೈಬಿಡಲು ನಿರ್ಧರಿಸಿದವರು ಯಾರು ಎಂಬುದನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ (Jay Shah) ಬಹಿರಂಗಪಡಿಸಿದ್ದಾರೆ. ದೇಶೀಯ ಕ್ರಿಕೆಟ್ ಆಡಲು ಬಿಸಿಸಿಐ ಮತ್ತು ಭಾರತ ತಂಡದ ಮ್ಯಾನೇಜ್ಮೆಂಟ್​​ನ ನಿರ್ದೇಶನವನ್ನು ಈ ಆಟಗಾರರು ನಿರ್ಲಕ್ಷಿಸಿದ ನಂತರ ಇದನ್ನು ಮಾಡಲಾಗಿದೆ ಎಂಬುದಾಗಿ ಅವರು ಹೇಳಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳ ಬಳಿಕ ಶ್ರೇಯಸ್ ಅಯ್ಯರ್ ಬೆನ್ನುನೋವಿನಿಂದ ಬಳಲುತ್ತಿದ್ದರು. ಮುಂದಿನ ಮೂರು ಟೆಸ್ಟ್ ಪಂದ್ಯಗಳಿಗೆ ಅವರನ್ನು ಆಯ್ಕೆ ಮಾಡಿರಲಿಲ್ಲ. ಅಯ್ಯರ್ ಅವರು ತಮ್ಮ ತವರಿನ ಮುಂಬೈ ತಂಡವು ರಣಜಿ ಟ್ರೋಫಿ ಪಂದ್ಯವನ್ನು ಆಡುವಲ್ಲಿ ನಿರತರಾಗಿದ್ದಾಗ ಮುಂಬೈನಲ್ಲಿ ನಡೆದ ಕೋಲ್ಕತಾ ನೈಟ್ ರೈಡರ್ಸ್ ಶಿಬಿರದಲ್ಲಿ ಭಾಗವಹಿಸಿದ್ದರು ಎಂದು ಆರೋಪಿಸಲಾಗಿದೆ.

ವಿಚಾರ ಬಹಿರಂಗಗೊಂಡಿ ಅಯ್ಯರ್ ನಾಕೌಟ್ ಹಂತಗಳಲ್ಲಿ ಮುಂಬೈ ಪರ ಆಡಿದ್ದರೂ, ಅವರನ್ನು ಬಿಸಿಸಿಐ ಕೇಂದ್ರ ಒಪ್ಪಂದಗಳಲ್ಲಿ ಆಯ್ಕೆ ಮಾಡಲಾಗಿಲ್ಲ.

ನೆಪ ಹೇಳಿದ್ದ ಇಶಾನ್​

ಮತ್ತೊಂದೆಡೆ, ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹಿಂದಿರುಗಿದ ನಂತರ ಇಶಾನ್ ಕಿಶನ್ ಮಾನಸಿಕ ಆರೋಗ್ಯ ವಿರಾಮದಲ್ಲಿದ್ದರು. ಆಯ್ಕೆಗಾಗಿ ಇಂಗ್ಲೆಂಡ್ ಟೆಸ್ಟ್ ಸರಣಿಗೆ ಮುಂಚಿತವಾಗಿ ರಣಜಿ ಟ್ರೋಫಿ ಆಡುವಂತೆ ಭಾರತ ತಂಡದ ಮ್ಯಾನೇಜ್ಮೆಂಟ್ ಒತ್ತಾಯಿಸಿದ ಹೊರತಾಗಿಯೂ ಅವರು ಬಿಸಿಸಿಐ ಮತ್ತು ಅವರ ತವರಿನ ರಾಜ್ಯ ಮಂಡಳಿ ಜಾರ್ಖಂಡ್​ ಕ್ರಿಕೆಟ್​ ಸಂಸ್ಥೆ ಯಾವುದೇ ಸಂಪರ್ಕ ಸಾಧಿಸಿರಲಿಲ್ಲ.

ಅವರು ಐಪಿಎಲ್ 2024 ಕ್ಕೆ ಮುಂಚಿತವಾಗಿ ಕ್ರಿಕೆಟ್​ಗೆ ಮರಳಿದ್ದರು. ಇದರರ್ಥ ಇಬ್ಬರೂ ಆಟಗಾರರನ್ನು ಬಿಸಿಸಿಐ ಕೇಂದ್ರ ಗುತ್ತಿಗೆ ಆಟಗಾರರ ಪಟ್ಟಿಯಿಂದ ಹೊರಗಿಡಲಾಗಿದೆ.

ಇದು ಅಗರ್ಕರ್ ನಿರ್ಧಾರ

ಈ ವರ್ಷದ ಬಿಸಿಸಿಐ ಕೇಂದ್ರ ಒಪ್ಪಂದದಿಂದ ಭಾರತದ ಆಟಗಾರರಾದ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಕೈಬಿಡುವ ನಿರ್ಧಾರವನ್ನು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ತೆಗೆದುಕೊಂಡಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸ್ಪಷ್ಟಪಡಿಸಿದ್ದಾರೆ.

“ನೀವು ಸಂವಿಧಾನವನ್ನು ಪರಿಶೀಲಿಸಬಹುದು. ನಾನು ಆಯ್ಕೆ ಸಭೆಯ ಸಂಚಾಲಕನಾಗಿದ್ದೇನೆ. ಆ ನಿರ್ಧಾರವು ಅಜಿತ್ ಅಗರ್ಕರ್ ಅವರಿಗೆ ಸಂಬಂಧಿಸಿದ್ದು. ಈ ಇಬ್ಬರು ಆಟಗಾರರು (ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್) ದೇಶೀಯ (ಕ್ರಿಕೆಟ್) ಆಡದ ಕಾರಣ ಅವರನ್ನು (ಕೇಂದ್ರ ಗುತ್ತಿಗೆ ಪಟ್ಟಿಯಿಂದ) ಕೈಬಿಡುವ ನಿರ್ಧಾರವು ಅವರದಾಗಿತ್ತು ಎಂದು ಶಾ ಹೇಳಿದ್ದಾರೆ.

ಇದನ್ನೂ ಓದಿ: Rahul Dravid : ವಿಶ್ವ ಕಪ್​ ಬಳಿಕ ದ್ರಾವಿಡ್​ ಭಾರತದ ಕೋಚ್ ಅಗಿರುವುದಿಲ್ಲ; ಮುಂದೆ ಯಾರು?

ನನ್ನ ಪಾತ್ರ ಕೇವಲ ಕಾರ್ಯಗತಗೊಳಿಸುವುದಾಗಿದೆ. ಸಂಜು ಸ್ಯಾಮ್ಸನ್ ಅವರಂತಹ ಹೊಸ ಆಟಗಾರರನ್ನು ನಾವು ಹೊಂದಿದ್ದೇವೆ. ಹೀಗಾಗಿ ಯಾರೂ ಅನಿವಾರ್ಯವಲ್ಲ, “ಎಂದು ಜಯ್ ಶಾ ಗುರುವಾರ ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಹೌದು, ನಾನು ಆಟಗಾರರೊಂದಿಗೆ ಮಾತನಾಡಿದ್ದೇನೆ. ಮಾಧ್ಯಮಗಳು ಸಹ ವರದಿಗಳನ್ನು ಪ್ರಸಾರ ಮಾಡಿದ್ದವು” ಎಂದು ಅವರು ಹೇಳಿದರು. ಬಿಸಿಸಿಐ ತನ್ನನ್ನು ವೈಟ್ ಬಾಲ್ ಸ್ವರೂಪಕ್ಕೆ ಮಾತ್ರ ಪರಿಗಣಿಸಿದರೆ, ವಿಜಯ್ ಹಜಾರೆ ಟ್ರೋಫಿ ಮತ್ತು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಆಡುವುದಾಗಿ ಹಾರ್ದಿಕ್ ಪಾಂಡ್ಯ ನನಗೆ ಹೇಳಿದ್ದಾರೆ ಎಂದೂ ಶಾ ಹೇಳಿದರು.

ಮುಂಬಯಿ ತಂಡಕ್ಕೆ ಆಡಲಿ

ಐಪಿಎಲ್​​ನಲ್ಲಿ ಯಾರು ಉತ್ತಮವಾಗಿ ಆಡುತ್ತಾರೋ ಅವರು ಮುಂದುವರಿಯುತ್ತಾರೆ ಎಂಬುದು ತಪ್ಪು. ಇಶಾನ್ ಕಿಶನ್ ಅವರಂತೆ ಹಾರ್ದಿಕ್​ ಪಾಂಡ್ಯ ಭಾರತ ತಂಡದೊಂದಿಗೆ ಭಾಗವಹಿಸಲು ಕಷ್ಟಪಡುತ್ತಾರೆ. ಅವರು ಮುಂಬೈ ಇಂಡಿಯನ್ಸ್​ನಲ್ಲಿ ಆಟಗಾರನಾಗಿ ಆಡುತ್ತಿದ್ದಾರೆ. ಯಾರೇ ಆದರೂ ಟೀಮ್ ಇಂಡಿಯಾದಲ್ಲಿ ನೀವು ನಿಮ್ಮನ್ನು ಸಾಬೀತುಪಡಿಸಬೇಕು ಮತ್ತು ಬ್ಯಾಕ್ ಟು ಬ್ಯಾಕ್ ಪ್ರದರ್ಶನವನ್ನು ನೀಡಬೇಕು. ಅದನ್ನು ನಿಭಾಯಿಸಬಲ್ಲ ವ್ಯಕ್ತಿಯನ್ನು ಸರಿಯಾದ ಆಟಗಾರ ಎಂದು ವಿವರಿಸಬಹುದು, “ಎಂದು ಅವರು ಹೇಳಿದರು.

ಗುಜರಾತ್ ಟೈಟಾನ್ಸ್ ವಿರುದ್ಧದ ಮುಂಬೈ ಇಂಡಿಯನ್ಸ್ ಪಂದ್ಯದ ನಂತರ ಕಿಶನ್ ಅವರೊಂದಿಗಿನ ಸಂಭಾಷಣೆಯ ವಿವರಗಳನ್ನು ಶಾ ಬಹಿರಂಗಪಡಿಸಿದರು. ಇಲ್ಲ, ನಾನು ಇಶಾನ್​ಗೆ ಯಾವ ಸಲಹೆಯನ್ನೂ ನೀಡಿಲ್ಲ. ಅವರು ಉತ್ತಮವಾಗಿ ಆಡಬೇಕು ಎಂದು ಹೇಳಿದ್ದೆ. ಮತ್ತು ನಾನು ಎಲ್ಲಾ ಆಟಗಾರರೊಂದಿಗೆ ಆ ರೀತಿ ಮಾತನಾಡುತ್ತೇನೆ “ಎಂದು ಜಯ್​ ಶಾ ಹೇಳಿದರು.

Continue Reading

Latest

Rahul Dravid : ವಿಶ್ವ ಕಪ್​ ಬಳಿಕ ದ್ರಾವಿಡ್​ ಭಾರತದ ಕೋಚ್ ಅಗಿರುವುದಿಲ್ಲ; ಮುಂದೆ ಯಾರು?

VISTARANEWS.COM


on

Rahul Dravid
Koo

ನವದೆಹಲಿ: ಭಾರತ ಕ್ರಿಕೆಟ್ ತಂಡದ ಹೆಡ್​ ಕೋಚ್​ ಹುದ್ದೆಗೆ ಶೀಘ್ರದಲ್ಲೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅರ್ಜಿ ಕರೆದು ಜಾಹೀರಾತು ನೀಡಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಾಹಿತಿ ನೀಡಿದ್ದಾರೆ. ರಾಹುಲ್​ ದ್ರಾವಿಡ್ (Rahul Dravid) ಅವರು ವಿಸ್ತರಿತ ಕೋಚಿಂಗ್​ ಗುತ್ತಿಗೆಯೊಂದಿಗೆ ಇದೀಗ ಕಾರ್ಯನಿರ್ವಹಿಸುತ್ತಿದ್ದಾರೆ. ಮುಂಬರುವ ಟಿ20 ವಿಶ್ವ ಕಪ್ (T20 World Cup 2024)​ ಬಳಿಕ ಅವರ ಅವಧಿ ಮುಕ್ತಾಯಗೊಳ್ಳಲಿದೆ. ಈ ವರ್ಷದ ಜೂನ್ ನಲ್ಲಿ ಅವರು ಹುದ್ದೆಯನ್ನು ತ್ಯಜಿಸಬೇಕಾಗುತ್ತದೆ. ಹೀಗಾಗಿ ಹೊಸ ಅರ್ಜಿಯನ್ನು ಕರೆಯಲು ಬಿಸಿಸಿಐ ಮುಂದಾಗಿದೆ. ಅಂದ ಹಾಗೆ ದ್ರಾವಿಡ್ ಅವರು ಟೀಮ್ ಇಂಡಿಯಾದ (Team India) ಹೆಡ್​ ಕೋಚ್ ಆಗಲು ಎರಡು ವರ್ಷಗಳ ಒಪ್ಪಂದವನ್ನು ಹೊಂದಿದ್ದರು. 2023ರ ವರ್ಷ ನವೆಂಬರ್​ನ ಏಕದಿನ ವಿಶ್ವಕಪ್ ಮುಗಿದ ನಂತರ ಅದು ಕೊನೆಗೊಂಡಿತು. ಬಳಿಕ ಬಿಸಿಸಿಐ ಅವರ ಸಹಾಯಕ ಸಿಬ್ಬಂದಿಯೊಂದಿಗೆ ವಿಸ್ತರಣೆಯನ್ನು ನೀಡಿತ್ತು.

“ಮುಂದಿನ ಕೆಲವೇ ದಿನಗಳಲ್ಲಿ ಕೋಚ್​ ಹುದ್ದೆಗಳಿಗೆ ನಾವು ಅರ್ಜಿಗಳನ್ನು ಕರೆಯಲಿದ್ದೇವೆ. ಯಾಕೆಂದರೆ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಕೊನೆಗೊಳ್ಳುತ್ತಿದೆ. ದ್ರಾವಿಡ್ ಅವರು ಮುಂದುವರಿಯಲು ಬಯಸಿರೆ ಅವರು ಮತ್ತೆ ಅರ್ಜಿ ಸಲ್ಲಿಸಬೇಕು. ನಾವು ಮೂರು ವರ್ಷಗಳ ಕಾಲ ದೀರ್ಘಾವಧಿಯ ಸೇವೆ ಸಲ್ಲಿಸುವ ತರಬೇತುದಾರನನ್ನು ಹುಡುಕುತ್ತಿದ್ದೇವೆ” ಎಂದು ಬಿಸಿಸಿಐ ಕಾರ್ಯದರ್ಶಿ ಶಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ಗೆ ಸಹಾಯಕ ಕೋ ತಂಡವನ್ನು ಹೊಸ ತರಬೇತುದಾರರನ್ನು ನೇಮಿಸಿದ ನಂತರ ಹೆಡ್​ ಕೋಚ್ ಹುದ್ದೆಯನ್ನು ಅಂತಿಮಗೊಳಿಸಲಾಗುವುದು ಎಂಬುದಾಗಿಯೂ ಅವರು ಹೇಳಿದ್ದಾರೆ.

ಈ ಹುದ್ದೆಗೆ ಯಾರು ಇರಬೇಕು ಎಂಬುದನ್ನು ಕ್ರಿಕೆಟ್ ಸಲಹಾ ಸಮಿತಿಗೆ (ಸಿಎಸಿ) ತೀರ್ಮಾನಿಸಲಿದೆ. ವಿದೇಶಿ ಅಥವಾ ಸ್ವದೇಶಿ ತರಬೇತುದಾರರಿಗೆ ಅವಕಾಶ ನೀಡುವ ವಿಚಾರವನ್ನೂ ಅವರು ತೀರ್ಮಾನಿಸಲಿದ್ದಾರೆ. ಆದರೆ ಎಲ್ಲಾ ಸ್ವರೂಪಗಳಿಗೆ ಒಬ್ಬರೇ ತರಬೇತುದಾರರು ಇರುತ್ತಾರೆ. ವೈಟ್-ಬಾಲ್ ಸ್ವರೂಪಗಳು ಮತ್ತು ಟೆಸ್ಟ್ ಕ್ರಿಕೆಟ್​ಗೆ ವಿಭಿನ್ನ ತರಬೇತುದಾರರು ಎಂಬ ಯೋಚನೆ ಇಲ್ಲ ಎಂದು ಶಾ ಹೇಳಿದರು.

“ಸಿಎಸಿ ವಿದೇಶಿ ಕೋಚ್ ಆಯ್ಕೆ ಮಾಡಿದರೆ ನಾವು ಆ ವಿಚಾರದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಆ ನಿರ್ಧಾರವನ್ನು ಬಿಸಿಸಿಯ ಒಪ್ಪಿಕೊಳ್ಳಲಿದೆ. ಭಾರತದಲ್ಲಿ ಸದ್ಯ ಪರಿಸ್ಥಿತಿಗೆ ಯಾವುದೇ ಪೂರ್ವನಿದರ್ಶನ ಇರುವುದಿಲ್ಲ ಎಂದು ಶಾ ಹೇಳಿದರು.

ಇದನ್ನೂ ಓದಿ: Brij Bhushan : ಡಬ್ಲ್ಯುಎಫ್​ಐ ಮಾಜಿ ಅಧ್ಯಕ್ಷ ಬ್ರಿಜ್​ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಲು ಕೋರ್ಟ್​ ಆದೇಶ

ಖಾಲಿ ಇರುವ ಏಕೈಕ ರಾಷ್ಟ್ರೀಯ ಆಯ್ಕೆಗಾರ ಹುದ್ದೆಗೆ ಈಗಾಗಲೇ ಕೆಲವು ಅಭ್ಯರ್ಥಿಗಳನ್ನು ಸಂದರ್ಶನ ಮಾಡಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಬಹಿರಂಗಪಡಿಸಿದರು. ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

“ಆಯ್ಕೆಗಾರರ ಹುದ್ದೆಗೆ ಈಗಾಗಲೇ ಕೆಲವು ಸಂದರ್ಶನಗಳು ನಡೆದಿವೆ. ನಾವು ಅದನ್ನು ಶೀಘ್ರದಲ್ಲೇ ಘೋಷಿಸುತ್ತೇವೆ” ಎಂದು ಅವರು ಹೇಳಿದರು.

ವಿಶ್ವ ಟೆಸ್ಟ್ ಚಾಂಪಿಯನ್​ಷಿಪ್ ಗುರಿ

2027 ರಿಂದ ಪ್ರಾರಂಭವಾಗುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಅನ್ನು ಬೇರೆ ಸ್ಥಳದಲ್ಲಿ ಆಯೋಜಿಸುವ ಸಾಮರ್ಥ್ಯದ ಬಗ್ಗೆ ಐಸಿಸಿಯೊಂದಿಗೆ ಚರ್ಚಿಸಲು ಬಿಸಿಸಿಐ ಯೋಜಿಸಿದೆ ಎಂದು ಶಾ ಹೇಳಿದ್ದಾರೆ. ಟೆಸ್ಟ್ ಕ್ರಿಕೆಟ್ ವಿಶ್ವ ಕಪ್​ನ ಮೊದಲ ಎರಡು ಆವೃತ್ತಿಗಳಿಗೆ ಇಂಗ್ಲೆಂಡ್ ಆತಿಥ್ಯ ವಹಿಸಿದೆ.

“ನಾವು 2027ರ ಟೆಸ್ಟ್​ ಚಾಂಪಿಯನ್​ಷಿಪ್​ ಬಗ್ಗೆ ಐಸಿಸಿಯೊಂದಿಗೆ ಈ ಬಗ್ಗೆ ಮಾತನಾಡಿದ್ದೇವೆ. ಭಾರತ, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಎಂಬ ಮೂರು ಪ್ರಮುಖ ಟೆಸ್ಟ್ ಕೇಂದ್ರಗಳಿವೆ. ಆ ವಿಂಡೋದಲ್ಲಿ ನೀವು ಅದನ್ನು ಆಸ್ಟ್ರೇಲಿಯಾದಲ್ಲಿ ಅಥವಾ ಭಾರತದಲ್ಲಿಯೂ ಹಿಡಿದಿಡಲು ಸಾಧ್ಯವಿಲ್ಲ. ಬೆಂಗಳೂರಿನಲ್ಲೂ ಆ ಸಮಯದಲ್ಲಿ ಮಳೆಯಾಗುತ್ತದೆ” ಎಂದು ಅವರು ಹೇಳಿದರು.

Continue Reading

ಪ್ರಮುಖ ಸುದ್ದಿ

MS Dhoni : ಧೋನಿಯ ಗಾಯದ ಗುಮಾನಿಗೆ ಸ್ಪಷ್ಟತೆ ನೀಡಿದ ಕೋಚ್ ಫ್ಲೆಮಿಂಗ್​

VISTARANEWS.COM


on

MS Dhoni
Koo

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ 2024 ರ (IPL 2024) ಋತುವಿನಲ್ಲಿ ಎಂಎಸ್ ಧೋನಿ (MS Dhoni) ಕೆಳ ಕ್ರಮಾಂಕದಲ್ಲಿ ಬ್ಯಾಟ್​ ಮಾಡುತ್ತಿರುವುದಕ್ಕೆ ಕಾರಣವನ್ನು ಚೆನ್ನೈ ಸೂಪರ್ ಕಿಂಗ್ಸ್ (CSK) ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್ ಬಹಿರಂಗಪಡಿಸಿದ್ದಾರೆ. ಎಂಎಸ್ ಧೋನಿ ಸ್ನಾಯು ಗಾಯದಿಂದ ಬಳಲುತ್ತಿದ್ದಾರೆ, ಇದು ಐಪಿಎಲ್ 2024 ರಲ್ಲಿ ಭಾಗವಹಿಸುವ ಮೇಲೆ ಪರಿಣಾಮ ಬೀರಬಹುದು ಎಂದು ಸ್ಟೀಫನ್ ಫ್ಲೆಮಿಂಗ್ ಹೇಳಿದ್ದಾರೆ. ಹೀಗಾಗಿ ಅವರು ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ. ವಿಕೆಟ್​ಗಳ ನಡುವೆ ರನ್​ಗಾಗಿ ಹೆಚ್ಚು ಓಡುತ್ತಿಲ್ಲ ಎಂಬುದಾಗಿಯೂ ಅವರು ಮಾಹಿತಿ ನೀಡಿದ್ದಾರೆ. ಧೋನಿಯನ್ನು ನೋಡುವುದು ಐಪಿಎಲ್ ಅಭಿಮಾನಿಗಳಿಗೆ ದೊಡ್ಡ ವಿಷಯ. ಹೀಗಾಗಿ ಅವರು ಆಡುತ್ತಿದ್ದಾರೆ ಎಂಬುದೇ ಅವರ ಮಾತಿನ ಸಾರಾಂಶ.

ನಾಯಕ ಸ್ಥಾನದಿಂದ ಕೆಳಗಿಳಿದರೂ ಎಂಎಸ್ ಧೋನಿ ಸಿಎಸ್​ಕೆ ತಂಡದ ನಿರ್ಣಾಯಕ ಸದಸ್ಯರಾಗಿ ಉಳಿದಿದ್ದಾರೆ. ಅವರು ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾರೆ ಮತ್ತು ಪಂಜಾಬ್ ಕಿಂಗ್ಸ್ (PBKS) ವಿರುದ್ಧದ ಇತ್ತೀಚಿನ ಪಂದ್ಯದಲ್ಲಿ 9 ನೇ ಕ್ರಮಾಂಕದಲ್ಲಿ ಕ್ರೀಸ್​ಗೆ ಇಳಿದಿದ್ದರು. 42 ವರ್ಷದ ಕ್ರಿಕೆಟಿಗ ಹಾಲಿ ಆವೃತ್ತಿಯಲ್ಲಿ 55 ಸರಾಸರಿಯಲ್ಲಿ 110 ರನ್ ಗಳಿಸಿದ್ದಾರೆ ಮತ್ತು 224.49 ಸ್ಟ್ರೈಕ್ ರೇಟ್ ಹೊಂದಿದ್ದಾರೆ.

ವಿಕೆಟ್ ಕೀಪರ್-ಬ್ಯಾಟರ್​ ಪ್ರಸ್ತುತ ಪಂದ್ಯಾವಳಿಯಲ್ಲಿ ತಮ್ಮ ಮೊದಲ ಏಳು ಇನ್ನಿಂಗ್ಸ್​ಗಳಲ್ಲಿ ಔಟಾಗದೆ ಉಳಿದಿದ್ದರು. ಪಂಜಾಬ್ ಕಿಂಗ್ಸ್ ವಿರುದ್ಧದ ತವರು ಪಂದ್ಯದ ವೇಳೆ ಬಲಗೈ ಬ್ಯಾಟರ್​ ರನೌಟ್ ಆಗಿದ್ದರು. ಧೋನಿ ತಮ್ಮ ಇತ್ತೀಚಿನ ಪಂದ್ಯದಲ್ಲಿ ಗೋಲ್ಡನ್ ಡಕ್ ಔಟ್ ಆಗಿದ್ದರು. ಅವರು ಋತುವಿನಾದ್ಯಂತ ಸ್ಟಂಪ್ ಗಳ ಹಿಂದೆ ಉತ್ತಮ ಕೆಲಸ ಮಾಡಿದ್ದಾರೆ.

ಎಂಎಸ್ ಧೋನಿಯ ಕೆಲಸದ ಹೊರೆಯನ್ನು ನಿರ್ವಹಿಸುತ್ತಿದ್ದೇವೆ – ಸ್ಟೀಫನ್ ಫ್ಲೆಮಿಂಗ್

ಪಂದ್ಯದ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸ್ಟೀಫನ್ ಫ್ಲೆಮಿಂಗ್, ಇಡೀ ಪಂದ್ಯಾವಳಿಗೆ ಅವರ ಲಭ್ಯತೆಯನ್ನು ಉಳಿಸಿಕೊಳ್ಳುವುದಕ್ಕೆ ಎಂಎಸ್ ಧೋನಿ ಅವರ ಕೆಲಸದ ಹೊರೆಯನ್ನು ನಿರ್ವಹಿಸಬೇಕಾಗಿದೆ. ಡೆತ್ ಓವರ್ಗಳಲ್ಲಿ ಧೋನಿ ಬ್ಯಾಟ್​ನೊಂದಗೆ ನೀಡಬಹುದಾದ ಕೊಡುಗೆ ಸಮತೋಲನವನ್ನು ಕಂಡುಕೊಳ್ಳುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಫ್ಲೆಮಿಂಗ್ ಹೇಳಿದ್ದಾರೆ.

ಇದನ್ನೂ ಓದಿ: IPL 2024 : ಸುನಿಲ್ ಗವಾಸ್ಕರ್ ಮತ್ತು ಹರ್ಷ ಭೋಗ್ಲೆ ವಿರುದ್ಧ ವಿರಾಟ್ ಕೊಹ್ಲಿ ವಾಗ್ದಾಳಿ

ನಾವು ಅವರ ಕೆಲಸದ ಹೊರೆಯನ್ನು ನಿರ್ವಹಿಸುತ್ತಿದ್ದೇವೆ. ಇದು ಅಪಾಯಕಾರಿ ಮತ್ತು ಋತುವಿನ ಆರಂಭದಲ್ಲಿ ಸ್ವಲ್ಪ ಸ್ನಾಯು ಸೆಳೆತವನ್ನುಅ ನುಭವಿಸಿದ್ದಾರೆ. ಅವರು ಹೆಚ್ಚು ಸಮಯ ಬ್ಯಾಟಿಂಗ್ ಮಾಡಿದರೆ ನಾವು ಅವರನ್ನು ಕಳೆದುಕೊಳ್ಳುವ ಅಪಾಯವನ್ನು ಎದುರಿಸುತ್ತೇವೆ. ಆದ್ದರಿಂದ ನಾವು ಆ ಸಮತೋಲನವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ. ಧೋನಿ ಕೇವಲ ಸಿಕ್ಸರ್ ಮತ್ತು ಬೌಂಡರಿಗಳನ್ನು ಹೊಡೆಯುವ ಮೂಲಕ ಪಂದ್ಯದ ಮೇಲೆ ಪರಿಣಾಮ ಬೀರುತ್ತಿದ್ದಾರೆಎಂದು ಫ್ಲೆಮಿಂಗ್ ಹೇಳಿದರು.

ಎಚ್ಚರಿಕೆ ಅಗತ್ಯ

ಈ ಋತುವಿನಲ್ಲಿ ಎಂಎಸ್ ಧೋನಿ ಅವರ ಕೆಲಸದ ಹೊರೆಯನ್ನು ಟೀಮ್ ಮ್ಯಾನೇಜ್ಮೆಂಟ್ ನಿರ್ವಹಿಸುವ ಅಗತ್ಯವಿದೆ ಎಂದು ಸ್ಟೀಫನ್ ಫ್ಲೆಮಿಂಗ್ ಹೇಳಿದ್ದಾರೆ. ಅಂತಿಮ ಓವರ್​ಗಳಲ್ಲಿ ತಮ್ಮ ಬ್ಯಾಟಿಂಗ್ ಪರಾಕ್ರಮದ ಜೊತೆಗೆ ಹೊಸ ನಾಯಕ ಋತುರಾಜ್ ಗಾಯಕ್ವಾಡ್​ಗೆ ಧೋನಿ ತಂತ್ರಗಾರಿಕೆಯ ಸಲಹೆಯನ್ನು ನೀಡುತ್ತಿದ್ದಾರೆ. ಅವರು ಎಲ್ಲ ರೀತಿಯಲ್ಲೂ ತಂಡಕ್ಕೆ ಅಗತ್ಯ ಎಂದು ಅವರು ಹೇಳಿದರು.

ಕಳೆದ ವರ್ಷ ಅವರು ಎದುರಿಸಿದ ಮೊಣಕಾಲು ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದಾರೆ. ಆದರೂ ಅದು ಅವರನ್ನು ಸಾಕಷ್ಟು ದುರ್ಬಲಗೊಳಿಸಿದೆ. ಈ ವರ್ಷ ಅವರು ನಿರ್ವಹಿಸಬಹುದಾದ ಒಂದು ನಿರ್ದಿಷ್ಟ ಕೆಲಸದ ಹೊರೆ ಇರುತ್ತದೆ ಎಂದು ನಾವು ಮೊದಲೇ ಹೇಳಿದ್ದೇವೆ. ನಮ್ಮಲ್ಲಿ ಬ್ಯಾಕ್​ಅಪ್​ ಕೀಪರ್​ಗಳು ಇದ್ದಾರೆ. ಆದಾಗ್ಯೂ ಎಂಎಸ್ ಧೋನಿಯನ್ನು ಮೈದಾನದಲ್ಲಿ ಇರಿಸಲು ಬಯಸುತ್ತೇವೆ. ಬ್ಯಾಟಿಂಗ್​ನಲ್ಲಿ ನಾಲ್ಕು ಓವರ್​ಗಳು ಮತ್ತು ಅವರ ಕೀಪಿಂಗ್ ಮತ್ತು ಹೊಸ ನಾಯಕನೊಂದಿಗೆ ಕಾರ್ಯತಂತ್ರದ ಸಲಹೆಯನ್ನು ನೀಡುತ್ತಿದ್ದಾರೆ, “ಎಂದು ಫ್ಲೆಮಿಂಗ್ ಹೇಳಿದರು.

ಋತುರಾಜ್ ಗಾಯಕ್ವಾಡ್ ನೇತೃತ್ವದ ತಂಡವು ಪ್ರಸ್ತುತ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ ಮತ್ತು +0.700 ನೆಟ್ ರನ್ ರೇಟ್ (ಎನ್ಆರ್​ಆರ್) ಹೊಂದಿದೆ. ಮೇ 10ರಂದು ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ತನ್ನ ಮುಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಚೆನ್ನೈ ಮೂಲದ ತಂಡವು ಪಂದ್ಯಾವಳಿಯಲ್ಲಿ ಸ್ಥಾನ ಪಡೆಯಲು ಉಳಿದಿರುವ ಮೂರು ಪಂದ್ಯಗಳಲ್ಲಿ ಕನಿಷ್ಠ ಎರಡನ್ನು ಗೆಲ್ಲಬೇಕಾಗಿದೆ.

Continue Reading
Advertisement
T20 world cup
ಕ್ರೀಡೆ13 mins ago

T20 World Cup : ವಿಶ್ವ ಕಪ್​ಗೆ ಭಾರತ ತಂಡ ಪ್ರಯಾಣಿಸುವ ದಿನಾಂಕ ಪ್ರಕಟಿಸಿದ ಜಯ್​ ಶಾ

Dietary Guidelines
Latest43 mins ago

Dietary Guidelines: ಕಡಿಮೆ ದೈಹಿಕ ಚಟುವಟಿಕೆ ಇರುವವರಿಗೆ ಯಾವ ರೀತಿಯ ಆಹಾರ ಸೂಕ್ತ?

Lover refused to marriage Young woman committed suicide in kalaburagi
ಕಲಬುರಗಿ47 mins ago

Self Harming: ಪ್ರೀತಿಸಲು ಓಕೆ, ಮದುವೆಗೆ ನೋ ಎಂದ ಪ್ರಿಯಕರ; ಮನನೊಂದು ಯುವತಿ ಆತ್ಮಹತ್ಯೆ

Jay Shah
ಪ್ರಮುಖ ಸುದ್ದಿ47 mins ago

Jay Shah : ”ನಾನವನಲ್ಲ, ನಾನವನಲ್ಲ”; ಶ್ರೇಯಸ್​, ಇಶಾನ್ ವಿವಾದಕ್ಕೆ ಸ್ಪಷ್ಟನೆ ನೀಡಿದ ಜಯ್​ ಶಾ

Naxals K
ದೇಶ51 mins ago

Naxals Encounter: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 12 ನಕ್ಸಲರ ಹತ್ಯೆ

Veg v/s Non Veg Thali
ಆರೋಗ್ಯ55 mins ago

Veg v/s Non Veg Thali: ಭಾರತದಲ್ಲಿ ನಾನ್‌ವೆಜ್‌ ಊಟಕ್ಕಿಂತ ವೆಜ್ ಊಟ ದುಬಾರಿ! ಏಕೆ ಗೊತ್ತಾ?

Maruti Suzuki
ಆಟೋಮೊಬೈಲ್57 mins ago

Maruti Suzuki: ಶೀಘ್ರ ರಸ್ತೆಗಿಳಿಯಲಿದೆ ಬರೋಬ್ಬರಿ 26 ಕಿ.ಮೀ ಮೈಲೇಜ್ ಕೊಡುವ ಮಾರುತಿ ಸ್ವಿಫ್ಟ್​; ಶುರುವಾಗಿದೆ ಬುಕಿಂಗ್​

Prajwal Revanna Case
ಕರ್ನಾಟಕ1 hour ago

Prajwal Revanna Case: ರೇವಣ್ಣ ಬಸವನಗುಡಿ ನಿವಾಸದಲ್ಲಿ 2ನೇ ಬಾರಿ ಸ್ಥಳ ಮಹಜರು

Arvind Kejriwal
ದೇಶ1 hour ago

Arvind Kejriwal: ಪ್ರಜಾಪ್ರಭುತ್ವ ಉಳಿಸಲು ಹೋರಾಟ; ಜೈಲಿಂದ ಬಿಡುಗಡೆ ಬಳಿಕ ಕೇಜ್ರಿವಾಲ್‌ ಫಸ್ಟ್‌ ರಿಯಾಕ್ಷನ್!

Xiaomi Smart Phone
ಗ್ಯಾಜೆಟ್ಸ್1 hour ago

Xiaomi Smart Phone: ವರ್ಷಾಂತ್ಯಕ್ಕೆ ಬರಲಿದೆ ಶಿಯೊಮಿಯ ಫೋಲ್ಡಿಂಗ್​ ಫೋನ್​ಗಳು; ಇಲ್ಲಿದೆ ಸಂಪೂರ್ಣ ವಿವರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Physical Abuse The public prosecutor called the client woman to the lodge
ಕ್ರೈಂ6 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ7 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ9 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ15 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ22 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ23 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ1 day ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ1 day ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಟ್ರೆಂಡಿಂಗ್‌