ವಿಸ್ತಾರ ಯುಗಾದಿ ಕಥಾ ಸ್ಪರ್ಧೆ: ಪ್ರಥಮ ಬಹುಮಾನ 55,000 ರೂ. ಪಡೆದ ಕಥೆ: ಸೋಮನ ಕುಣಿತ - Vistara News

ಕಲೆ/ಸಾಹಿತ್ಯ

ವಿಸ್ತಾರ ಯುಗಾದಿ ಕಥಾ ಸ್ಪರ್ಧೆ: ಪ್ರಥಮ ಬಹುಮಾನ 55,000 ರೂ. ಪಡೆದ ಕಥೆ: ಸೋಮನ ಕುಣಿತ

ವಿಸ್ತಾರ ಯುಗಾದಿ ಕಥಾಸ್ಪರ್ಧೆ- 2023ರಲ್ಲಿ ಮೊದಲ ಬಹುಮಾನ ಗಳಿಸಿ, ರೂ.55,000 ತನ್ನದಾಗಿಸಿಕೊಂಡ ಕಥೆ ʼಸೋಮನ ಕುಣಿತʼ ಇಲ್ಲಿದೆ.

VISTARANEWS.COM


on

somana kunitha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸ್ಪರ್ಧೆಗೆ ಬಂದ 1,118 ಕತೆಗಳಲ್ಲಿ ಮೊದಲ ಬಹುಮಾನ ತನ್ನದಾಗಿಸಿಕೊಂಡ ಕಥೆ ಇಲ್ಲಿದೆ

chandrashekar DR
ಚಂದ್ರಶೇಖರ ಡಿ.ಆರ್

:: ಚಂದ್ರಶೇಖರ ಡಿ.ಆರ್.‌

“ಓಓಓಓಓಹ್
ಆರು ಕೋಳಿ ನಿನಗೆ
ಸೂರಬೆಲ್ಲ ನಿನಗೆ
ದಾವಣಿ ಕುರಿಕೋಳಿ ನಿನಗಿಲ್ಲಿ…
ದಾವಣಿ ಕುರಿಕೋಳಿ ನಿನಗಿಲ್ಲಿ…
ಗ್ರಾಮ ಕಾದಿರುವ ಗರತೀಗೆ…”

ಅಸಾದಿ ಉನ್ಮತ್ತನಾಗಿ ಹಾಡುತ್ತಿದ್ದ. ಪ್ರತಿ ಪದಗಳಾದ ಮೇಲೂ ತಮಟೆಯಂತಿರುವ ರಣ ಹಲಗೆ ನೆಲಕ್ಕೆ ಅಭಿಮುಖವಾಗಿ ಹಿಡಿದು ಬಡಿಯುತ್ತಾ ಮುಂದುವರೆಯುತ್ತಿದ್ದ. ಪ್ರತೀ ಬಾರಿ ಹಾಡಿನ ಸಾಲು ಹೇಳಿ ನಿಂತಾಗಲೂ ವಾದ್ಯಗಳು ಜೋರಾಗುತ್ತಿದ್ದವು. ಅಸಾದಿಯ ಪದಗಳಿಗೆ ಶ್ಲೀಲ-ಅಶ್ಲೀಲಗಳ ಗಡಿಯಿಲ್ಲ. ಇದು ಕೊಂಡಮ್ಮ ದೇವಿ ಸಮ್ಮುಖದಲ್ಲಿ ನಡೆಯುತ್ತಿರುವ ಘಟನಾವಳಿಗಳು. ಕಳಸ ಹೊತ್ತು ನಿಂತ ಹೆಣ್ಣುಮಗಳು ಹಿಂದೆಮುಂದೆ ತೂಗುತ್ತಿದ್ದಾಳೆ. ಕೆಳ ಅರ್ಧಬಾಗ ಚಿವುಟಿ ಹೊಂಬಾಳೆಯ ತುದಿಗೆ ಜೋಡಿಸಿದ್ದ ಕನಕಾಂಬರ ಮತ್ತು ಮಲ್ಲಿಗೆ ಹೂಗಳು ತೂಗುವಿಕೆಗೆ ಅನುಗುಣವಾಗಿ ಹೊಂಬಾಳೆ ಗರಿಗಳೊಂದಿಗೆ ಒಯ್ದಾಡುತ್ತಿವೆ. ಅದೇ ಸಮಯಕ್ಕೆ ಸೋಮನನ್ನು ಹೊತ್ತಿದ್ದ ರಂಗಯ್ಯನ ಆಗಮನವಾಗಿತು. ಒಂದೊಂದೆ ಹೆಜ್ಜೆ ತಮಟೆ, ಅರೆ, ದೋಣಿನ ಲಯಕ್ಕೆ ಅನುಗುಣವಾಗಿ ಭೂಮಿಗೆ ದೊಪ್ಪನೆ ಇಡುತ್ತಿದ್ದಾನೆ. ಕುಣಿತದಲ್ಲಿ ತನ್ಮಯತೆಯಿದೆ ಅವ್ಯಕ್ತ ಆಲಾಪವಿದೆ. ಸುಮಾರು ಇಪ್ಪತ್ತರ ಆಸುಪಾಸಿನ ವಯಸ್ಸು ಕಟ್ಟುಮಸ್ತಾದ ದೇಹ. ಎಲ್ಲರೂ ಎಲ್ಲವೂ ನಿಶ್ಯಬ್ಧ. ವಾದ್ಯಗೋಷ್ಟಿಗಳದಷ್ಟೇ ಅಬ್ಬರ. ಒಂದೋ ರಂಗನ ಪಾದ ಮರಗಟ್ಟಿ ನಿಲ್ಲಬೇಕು, ಇಲ್ಲ ದೇವಿಯೇ ಎದ್ದು ಬಂದು ಸಾಕು ಎನಬೇಕು.

ಕಥೆಯ ಬಗ್ಗೆ ತೀರ್ಪುಗಾರರು ಬರೆದ ಟಿಪ್ಪಣಿ ಇಲ್ಲಿದೆ: ವಿಸ್ತಾರ ಯುಗಾದಿ ಕಥಾಸ್ಪರ್ಧೆ: ತೀರ್ಪುಗಾರರ ಟಿಪ್ಪಣಿ: ಸಾಮಾಜಿಕ ಪ್ರಸ್ತುತತೆಯೇ ಜೀವಾಳವಾಗಿರುವ ಕತೆಗಳು

ಬೂತಾಳೆ ಮರದಿಂದ ತಯಾರಿಸಿದ ಸೋಮನ ಮುಖವಾಡ. ಅಗಲವಾದ ಹಣೆ, ವಿಶಾಲವಾದ ಕಣ್ಣು, ಕಿವಿ, ದೊಡ್ಡ ಮೂಗು. ಬಿದಿರಿನಿಂದ ರಂಗಯ್ಯನ ಹಿಂದೆ ಕಮಾನಿನಂತೆ ರಚಿಸಿ ವಿವಿಧ ಬಣ್ಣ ಬಣ್ಣದ ಸೀರೆಗಳನ್ನು ಇಳಿಬಿಟ್ಟು ಪ್ರಭಾವಳಿಯನ್ನು ರಚಿಸಲಾಗಿದೆ. ಕಾಲಿಗೆ ಗೆಜ್ಜೆ, ಕೈಗಳಿಗೆ ಕಡಗಗಳು, ಹಾಗೆ ಮೂರೇ ಬೆರಳಿದ್ದ ಎಡಕೈಯಲ್ಲಿ ಬೆಳ್ಳಿ ಕಟ್ಟಿನ ನೀಳವಾದ ಬೆತ್ತ. ಕೊಂಡಮ್ಮಳಿಗೆ ಇಬ್ಬರು ಸೋಮರು ಅಂಗರಕ್ಷಕರು. ರೌದ್ರನಾದ ಕೆಂಪುಸೋಮನಿಗೆ ನಾಮಬಳಿದಿದ್ದಾರೆ. ಹಳದಿ ಬಣ್ಣದ ಸೋಮ ವಿಭೂತಿ ಬಳಿದುಕೊಂಡ ಸೌಮ್ಯಮೂರ್ತಿ. ರಂಗನ ತಮ್ಮ ಸುಮ್ಮನೆ ಹೊತ್ತು ನಿಂತಿದ್ದಾನೆ. ಸುತ್ತ ಹತ್ತು ಹಳ್ಳಿಗಳನ್ನು ಹುಡುಕಿದರೂ ಹದಿನೈದು ಕೆ.ಜಿ.ಗೂ ಮಿಕ್ಕಿ ತೂಕದ ರೌದ್ರ ಸೋಮನನ್ನು ರಂಗಯ್ಯನಂತೆ ಹೊತ್ತು ಕುಣಿಯುವವರು ಯಾರೂ ಇಲ್ಲ. ಇಲ್ಲಿ ಯಾವುದಕ್ಕೂ ಪ್ರಶ್ನೆಯೂ ಇಲ್ಲ ಉತ್ತರವೂ ಇಲ್ಲ.

ಮಾರನೇದಿನ ಕೊಂಡಮ್ಮ ದೇವಿಯ ದೇವಾಲಯದ ಮುಂದೆ ವಿಶೇಷ ಕೊಂಡ ವ್ಯವಸ್ಥೆ. ಎಲ್ಲರೂ ಭಕ್ತಿ ಭಾವದಿಂದ ಮೈಮರೆತರು. ಇಲ್ಲದ್ದನ್ನು ತಾಯಿಯ ಹತ್ತಿರ ಬೇಡಿಕೊಂಡರು. ತಮ್ಮೊಳಗಿನ ಬೇಗೆಯನ್ನೂ ಕಾವನ್ನೂ ದೇವಿಯ ಮುಂದೆ ತುಳಿದು ಹೋಗಬೇಕು. ಸೋಮನ ಹೊತ್ತೇ ಮೊದಲನೆಯವನಾಗಿ ಕೊಂಡ ತುಳಿದು, ಅದರ ಕಾವು ತಣಿಯುವ ಮೊದಲೇ ಸಿರಾದ ಬೇವಿನಹಳ್ಳಿಯ ಕಲಾತಂಡದೊಟ್ಟಿಗೆ ರಂಗಯ್ಯ ಮರೆಯಾದ. ಹೋಗುವಾಗ ಹಟ್ಟಿಗಳೆಡೆ ಒಮ್ಮೆ ತಿರುಗಿದವ ಮತ್ತೆ ತಿರುಗಲಿಲ್ಲ. ಅಲ್ಲಿಂದ ಅವನ ಸುಳಿವೆ ಇಲ್ಲ. ಬೆಂಗಳೂರಿಗೆ ಯಾವುದೋ ಕೆಲಸದ ನಿಮಿತ್ತಾ ಹೋದ ಊರವರೊಬ್ಬರು ಯಾವುದೋ ಕಲೋತ್ಸವದಲ್ಲಿ ಕಂಡರಂತೆ. ಆಮೇಲೆ ಅವನ ಬಗ್ಗೆ ಒಂದು ಮಾತೂ ಇಲ್ಲ.

**

ಸಾಕವ್ವ ಕರ್ ಮೀನ್ ಸಾರ್ ಮಾಡಿ ಊಟಕ್ಕಿಟ್ಟು ಆಚೆ ಬಂದು ನೋಡೊದ್ರೊಳಗೆ ಒಟ್ಟು ಮಾಡಿದ್ದ ಕಸಾನೆಲ್ಲಾ ಪಿಳ್ಳೆಗುಳ್ನ ಬೆನ್ನಿಗಾಕಂಡು ಓಡಾಡ್ತಿದ್ದ ರತ್ನಿ ಯಾಟೆ ಕೆದಕಿ ಹಾಕಿತ್ತು. ಪಿಳ್ಳೆಗುಳ್ನ ನೆನ್ನೆ ಹಂಗೆ ಹದ್ದು ಕದ್ದೋಯ್ವಾಗ ಮತ್ತೆ ತಡಿಬಾರ್ದು ಅನ್ಕಂಡು ಶಪಿಸುತ್ತಾ, ಮತ್ತೆ ಗುಡಿಸಿಹಾಕಲು ಸೊಂಪ್ಲಿನ ಕಡೆ ತೆಂಗಿನ್ ಗರಿ ಪರ್ಕೆ ತೆಗೆದುಕೊಳ್ಳುವುದಕ್ಕೆ ಹೋದಳು. ಒಳಗೆ ಕೂತು ಬೆಂದ ಕಡ್ಲೆಕಾಳಿಗೆ ಕರಿಮೀನು ತೋಯಿಸಿ ಮೆಲ್ಲುತ್ತಿದ್ದ ನರಸಿಂಹಯ್ಯ ಜನ್ರ ಬಾಯಲ್ಲಿ ಬರಬರುತ್ತ ನರಸುಮ್ಮಣ್ಣನಿಗೆ ಹೆಂಡತಿ ಹೊರಗೆ ನಿಂತು ಹೇಳುತ್ತಿದ್ದ ಯಾವ ಮಾತುಗಳು ಕಿವಿಯ ಮೇಲೆ ಬೀಳುತ್ತಿರಲಿಲ್ಲ. ಕೆಲವು ದಿನಗಳಿಂದ ಅವನು ಅನ್ಯಮನಸ್ಕನಾಗಿ ಇರುವುದಕ್ಕೆ ಬಲವಾದ ಕಾರಣಗಳು ಇದ್ದವು.

ಜೀವನೋಪಾಯಕ್ಕೆ ಅಂತ ಇದ್ದ ತಮಟೆಯ ಚರ್ಮ ಸವೆದು ಹರಿದು ತಿಂಗಳಾಗುತ್ತಾ ಬಂದಿದೆ. ದುಸ್ತರ ಬದುಕು. ಪಕ್ಕದೂರು ದೊಡ್ಡಮಧುರೆ ಮತ್ತು ಸ್ವಾಂದೇನಾಹಳ್ಳಿಯಲ್ಲಿ ಮುಂದಿನ ತಿಂಗಳು ಜಾತ್ರೆಗೆ ಕಡಿಯುವ ಕೋಣದ ಚರ್ಮಕ್ಕೆ ಇನ್ನಿಲ್ಲದಂತೆ ಕಾಯುವ ಹಾಗೆ ಆಗಿದೆ. ಮಗಳು ಪುಟ್ಟಕ್ಕನನ್ನು ಕೊಟ್ಟಿರುವುದು ಅದೇ ದೊಡ್ಡ ಮಧುರೆಗೆ.ತುಂಬಾ ಅನುಕೂಲಸ್ಥರೇನಲ್ಲದಿದ್ದರೂ ಅಳಿಯ ಪಕ್ಕದ ಸ್ವಾಂದೇನಾಹಳ್ಳಿಯಲ್ಲಿ ಬಂಡೆ ಕೆಲಸಕ್ಕೆ ಹೋಗುತ್ತಾನೆ. ಮಗಳ ಬದುಕು ಹೇಗೋ ಕಟ್ಟಿಕೊಂಡಿದೆ. ಜಾತ್ರೆಗೆ ಮಗಳ ಮನೆಗೆ ಹೋಗುವ ಶಾಸ್ತ್ರವು ಜೊತೆಗೆ ನಡೆಯುತ್ತದೆ. ಅದಾಗಿ ತಮಟೆಗೆ ಚರ್ಮ ಸಿಕ್ಕರೆ ಸುತ್ತ ಊರುಗಳಲ್ಲಿ ನಡೆಯುವ ಜಾತ್ರೆ, ಸಾವಿನ ಮನೆಗಳು ಮತ್ತು ಊರ ಸುದ್ದಿ ಸಾರುವುದು ಇದನ್ನೆಲ್ಲಾ ಮಾಡಿಕೊಂಡು ಹೇಗೋ ಜೀವನ ಒಂದು ಹದಕ್ಕೆ ಬರುತ್ತದೆ. ಮೊದಲಾದರೆ ಮರಿ-ಕೋಣ ಬಲಿಕೊಡುವವರು ತಮಟೆಯವರಿಗಾಗೆ ಮಿಸಲಿಟ್ಟು ಕೊಡುತ್ತಿದ್ದರು. ಕಾಲ ಬದಲಾಗಿ ಆ ಸಂಪ್ರದಾಯವೂ ಮುರುಟಿಹೋಗಿದೆ. ಬರಗಾಲವಾದದ್ದರಿಂದ ಕೂಲಿ ಕೆಲಸವು ಅಷ್ಟಾಗಿ ಸಿಗುತ್ತಿಲ್ಲ. ಇದೆಲ್ಲಾ ಯೋಚನೆಗಳಲ್ಲಿ ನರಸುಮ್ಮಣ್ಣ ಮುಳುಗಿಹೋಗಿದ್ದಾನೆ. ನೆನಪಿನ ದೋಣಿ ಹಿಮ್ಮುಕವಾಗಿ ಚಲಿಸುತ್ತಿತ್ತು.


ಸುಮಾರು ಅರವತ್ತರ ದಶಕ. ದೇವರಾಯನದುರ್ಗದ ತಪ್ಪಲಲ್ಲಿ ಇದ್ದ ಕೊಂಡಜ್ಜಿ ಗ್ರಾಮದ ಹೊಲೆ-ಮಾದಿಗರ ಕೇರಿ ಗೊತ್ತಿದ್ದು ಗೊತ್ತಿಲ್ಲದೇ ಭಾರತದ ಭೂಪಟದಲ್ಲಿ ಉಚಿತವಾಗಿ ಬರುವ ಶ್ರೀಲಂಕಾದ ಹಾಗೆ ಊರ ಹೊರಗೆ ಐದಾರು ಹಟ್ಟಿಗಳಿಗೆ ವ್ಯಾಪಿಸಿ ಊರಿನ ಭಾಗವಾ ಅನ್ನುವ ಅನುಮಾನದೊಟ್ಟಿಗೆ ಇತ್ತು. ಈ ಕಡೆ ಹಟ್ಟಿಯ ಮೊದಲನೆ ಮನೆಯಲ್ಲಿ ಸೀನಿದರೆ ಕೊನೆಯ ಸಾಲಿನ ಕೊನೆಯ ಮನೆಯ ಕೆಂಪಣ್ಣನೂ ಯಾರ ಸೀನೆಂದು ಊಹಿಸುವಷ್ಟು ಚಿಕ್ಕ ಪ್ರಪಂಚ. ಮೇಗಳ ಹಟ್ಟಿಯ ಮೂಲೆ ಮನೆಯವರ ಹೊಲ-ತೋಟದಲ್ಲಿ ಕೂಲಿ ಕೆಲಸ, ಬಡಗಿ, ಚಮ್ಮಾರಿಕೆ ಇವು ಮುಖ್ಯ ಕಸುಬುಗಳು. ಆಗಾಗ್ಗೆ ಹಟ್ಟಿಯಲ್ಲಿ ತಮಟೆಯ ಸದ್ದು ಊರನ್ನೇ ಎಚ್ಚರಿಸುತ್ತಿತ್ತು. ಅದು ಕುಂಭಿಯ ಮನೆ.

ಕಥಾಸ್ಪರ್ಧೆಯ ಬಹುಮಾನ ವಿರತಣೆ : ವಿಸ್ತಾರ ಯುಗಾದಿ ಕಥಾಸ್ಪರ್ಧೆ: ನೋಡುಗನನ್ನು ಓದುಗನನ್ನಾಗಿಸುವ ಪ್ರಯತ್ನ: ನಾಗತಿಹಳ್ಳಿ‌ ಚಂದ್ರಶೇಖರ್

ತಮಟೆ ಕುಂಭಯ್ಯನಿಗೆ ಇಬ್ಬರು ಮಕ್ಕಳು. ರಂಗಯ್ಯ ಮತ್ತು ನರಸಿಂಹಯ್ಯ. ದೇವರಾಯನದುರ್ಗದ ಕುಂಭಿ ನರಸಿಂಹನಿಗೆ ಹರಕೆ ಹೊತ್ತು ಹುಟ್ಟಿದ ಕಾರಣಕ್ಕೆ ಮಗನಿಗೂ ದೇವರ ಹೆಸರೇ ಇಟ್ಟಿದ್ದರು. ಚಿಕ್ಕವಯಸ್ಸಿಂದ ತಮಟೆ, ಹರೆ, ದೋಣು, ನಗಾರಿಯ ಬಗ್ಗೆ ಆಸಕ್ತಿ ಹುಟ್ಟಿ ಅವರಿವರ ಹಿಂದೆ ತಿರುಗಿ ತಮಟೆ ಬಾರಿಸುವುದು ಚರ್ಮ ಹದಗೊಳಿಸಿ ವಾದ್ಯ ಕಟ್ಟುವ ಕಲೆಯನ್ನು ಕರಗತ ಮಾಡಿಕೊಂಡಿದ್ದ. ಎರಡನೇ ಮಗ ಹುಟ್ಟಿ ಐದಾರು ವರ್ಷಕ್ಕೆ ಹೆಂಡತಿ ಜ್ವರವೆಂದು ಮಲಗಿ ಮತ್ತೆ ಉಸಿರಾಡಿರಲಿಲ್ಲ. ಅವನ ಕೋಪದ ಜ್ವಾಲೆ ಪರಿಚಯವಿದ್ದುದರಿಂದ ಯಾರು ಅವನಿಗೆ ಹೆಣ್ಣು ಕೊಡಲು ಮುಂದೆ ಬಂದಿರಲಿಲ್ಲ. ಇಬ್ಬರು ಮಕ್ಕಳಾದ ಮೇಲೆ ದೇವರ ಮೇಲಿದ್ದ ಭಕ್ತಿಗೋ ಊರಿನ ಕೊಂಡಮ್ಮತಾಯಿಯ ಅನುಗ್ರಹವೋ ಇಬ್ಬರು ಮಕ್ಕಳಿಗೂ ತಮಟೆ ಕಟ್ಟುವುದು ಮತ್ತು ಕೊಂಡಮ್ಮಳಿಗೆ ಅಂಗರಕ್ಷಕರಂತಿದ್ದ ಸೋಮರ ಕುಣಿತ ಕಲಿಸಿ ಬದುಕು ಹಸನು ಮಾಡಬೇಕೆಂದು ತವಕಿಸುತ್ತಿದ್ದ.

ಮೊದಲ ಮಗ ರಂಗಯ್ಯನಿಗೆ ಅದೆಷ್ಟು ಬಾರಿ ತೀಡಿ ತಿದ್ದಿದರೂ ತಮಟೆ ಚರ್ಮ ಹೊಸೆಯುವ ಕಲೆ ಒದಗಿಬರಲಿಲ್ಲ. ಸೋಮನ ಕುಣಿತದಲ್ಲಿ ನೈಪುಣ್ಯತೆ ಇದ್ದರೂ ಮೂರು ವರ್ಷಕ್ಕೊಮ್ಮೆ ಜಾತ್ರೆ ನಡೆಯುತ್ತಿದುದರಿಂದ ಅದರಿಂದ ಬರುತ್ತಿದ್ದ ಆದಾಯವು ಅಷ್ಟಕಷ್ಟೆ. ಪ್ರತೀಕಾರವೆಂಬಂತೆ ಬಂದು ಹೋದವರ ಮುಂದೆ ಮಗನ ದಡ್ಡತನಕ್ಕೆ ಬಯ್ಯೋದು ಅವಮಾನಿಸೋದು ತುಚ್ಛವಾಗಿ ಮಾತನಾಡಿ ಹೀಯಾಳಿಸುವುದು ಯಥೇಚ್ಛವಾಗಿ ನಡೆಯುತ್ತಿತ್ತು. ಅವತ್ತೊಂದು ದಿನ ರಂಗಯ್ಯನ ಸಂಯಮದ ಕಟ್ಟೆಯೂ ಓಡೆದಿತ್ತು. ಅವತ್ತು ಮಗ ಗೊತ್ತಾಗದಂತೆ ಬಿಸಿಲಿಗೆ ಒಣಗಲು ಇಟ್ಟಿದ ಅಪರೂಪಕ್ಕೆ ಸಿಕ್ಕಿದ ಎರಡು ಮೂರು ಕರ ಈದ ದನದ ಚರ್ಮ ತುಳಿದ ಕಾರಣಕ್ಕೆ ವ್ಯಾಘ್ರನಾದ ಕುಂಭಯ್ಯ ಮಗನ ಮೇಲೆ ಹಾರಿಹಾಯ್ದಿದ್ದ. ದುಡಿಯುವ ಮಾರ್ಗ ಹಿಡಿತಿಲ್ಲ ಎನ್ನೋ ಕೋಪಕ್ಕೆ ಕಾಲಲ್ಲಿ ಒದ್ದು ಜುಟ್ಟು ಹಿಡಿದು ಕೊಂಡಮ್ಮನ ದೇವಸ್ಥಾನದ ಕೊಂಡ ಹಾಯುವ ಜಾಗದಲ್ಲಿ ಎಳೆದುಹಾಕಿ ಬಂದಿದ್ದ. ವ್ಯಾಕುಲನಾದ ರಂಗಯ್ಯ, ಮನೆಗೆ ರೊಯ್ಯನೆ ಬಂದು ಕಡಗೋಲು ತೆಗೆದುಕೊಂಡು ಎಡಗೈ ಹೆಬ್ಬೆರಳು ತೋರ್ಬೆರಳೆರಡನ್ನೂ ಕಡಿದುಕೊಂಡಿದ್ದ. ಸುದ್ದಿ ಕೇಳಿ ಹಟ್ಟಿಗೆ ಹಟ್ಟಿಯೇ ಬೆಚ್ಚಿ ಬಿದ್ದಿತ್ತು.ಇನ್ಯಾವತ್ತು ತಮಟೆ ವಿಚಾರ ಮಗನ ಮುಂದೆ ಮಾತನಾಡಲು ತಂದೆಗೆ ಧೈರ್ಯ ಬರಲಿಲ್ಲ.ಮಗ ತಮಟೆಯನ್ನು ಮುಟ್ಟಲು ಆಗಲಿಲ್ಲ.

ಅದಾದ ಮೇಲೆ ರಂಗಯ್ಯ ಮೊದಲಿನಂತೆ ಇರಲಿಲ್ಲ. ತಂದೆಯನ್ನು ಮಾತಾಡಿಸದೇ ತನ್ನ ಪಾಡಿಗೆ ತಾನಿರುತ್ತಿದ್ದ. ಕರಗತ ಮಾಡಿಕೊಂಡಿದ್ದ ಸೋಮನ ಕುಣಿತ ಕೊಂಡಮ್ಮನ ಜಾತ್ರೆಯ ದಿನ ತಂದೆಯನ್ನೇ ಚಕಿತಗೊಳಿಸಿತ್ತು. ದೈತ್ಯ ಕೋರೆಹಲ್ಲು ಚಿತ್ರ ಎದೆ ಎಲುಬನ್ನು ಇರಿಯುವಂತಿತ್ತು. ಸೋಮನ ಮೂಗಿನಿಂದ ಹೊರಬರುತ್ತಿದ್ದ ಬಿಸಿಯುಸಿರು ಸುಡುವಂತಿತ್ತು. ದೇವಿಯ ಒಂದು ಅಂಶಕ್ಕೇ ಕೇಡೆಸಗಿ ಪಾಪದ ಕೆಲಸ ಮಾಡಿದೆ ಎಂದು ಪಶ್ಚಾತಾಪದಲ್ಲಿ ಹಾಸಿಗೆ ಹಿಡಿದ ಕುಂಭಿ ತಿಂಗಳ ಜಾತ್ರೆಯಷ್ಟೊತ್ತಿಗೆ ಮಣ್ಣು ಸೇರಿದ. ಮಣ್ಣಿನ ದಿನ ರಂಗಯ್ಯನನ್ನ ಊರಿನವರು ಎಷ್ಟು ಹುಡುಕಿದರೂ ಎಲ್ಲಿಯೂ ಕಾಣಲಿಲ್ಲ. ಊರೂರು ಅಲೆಯುತ್ತಾ ಸೋಮ ಕುಣಿಯುತ್ತಾ ರಂಗಯ್ಯ ತನ್ನದೇ ದಾರಿಯಲ್ಲಿ ಆನೆಯಾಗತೊಡಗಿದ. ಕುಣಿಯುವ ಮುಂಚೆ ಸೋಮನ ಮುಂದೆ ಒಂದೆರಡು ನಿಮಿಷ ಕುಳಿತಿರುತ್ತಿದ್ದ ರಂಗಯ್ಯನ ಕಣ್ಣುಗಳು ನಿಗಿನಿಗಿ ಉರಿಯೋ ಕೆಂಡದಂತಾಗಿರುತ್ತಿದ್ದವು. ಬದುಕಲು ದಾರಿ ಅರಸುತ್ತಾ ಅಲೆಯುತ್ತಿದ್ದವನಿಗೆ ಸೋಮನ ಕುಣಿತ ಕೈಹಿಡಿದಿತ್ತು.

ಎರಡನೇ ಮಗನಿಗೆ ತಮಟೆ ಕಟ್ಟುವುದು ಒಲಿದು ಬಂದಿತ್ತು. ಧ್ಯಾನಸ್ಥನಾಗಿ ಕುಳಿತು, ತಂದ ಚರ್ಮವನ್ನು ನೆಲಕ್ಕೆ ಹರವಿ ಮೂರು ದಿನ ಸುಡು ಬಿಸಿಲಲ್ಲಿ ಎಳ್ಳಷ್ಟೂ ಹರಿಯದಂತೆ ಮೊಳೆ ಹೊಡೆದು, ಕುಂತು ಜತನದಿಂದ ಒಣಗಿಸುವುದು. ಒಣಗಿದ ಚರ್ಮ ನಿರಿಗೆ ಮಾಡಿ ಸುತ್ತಿ ನಂತರ ಅದನ್ನು ಕೆಲಕಾಲ ನೀರಲ್ಲಿ ನೆನೆಸಿಟ್ಟು, ನೆಂದ ಚರ್ಮವನ್ನು ಹರವಿ ಅದರ ಒಳಹೊರಗೆ ಕೊಳೆಯನ್ನು ವೈನ ಮಾಡಿ ತೆಗಿಯುತ್ತಿದ್ದ. ನೆಂದು ಹದವಾದ ಚರ್ಮದ ಕೂದಲನ್ನು ರಂಪಿನಿಂದ ತೆಗೆಯಬೇಕು. ಹಿಂದೆ ಮುಂದೆ ಚರ್ಮ ಕಸರನ್ನು ತೆಗೆದಾಗ ಅದು ಚರ್ಮದ ರೂಪ ಬಿಟ್ಟು ಬಿಳಿಹಾಳೆಯಂತಾಗುತ್ತಿತ್ತು. ಇಲ್ಲಿಗೆ ಸಂತಸದ ನಿಟ್ಟುಸಿರು. ಕೊನೆಗೆ ಹಸುವಿನ ಚರ್ಮದ ಲಾಡಿಯಂತ ಎಳೆಯಿಂದ ದುಂಡನೆಯ ಆಕಾರದ ಕಬ್ಬಿಣಕ್ಕೆ ಎಳೆದು ಕಟ್ಟಬೇಕು. ಇದೆಲ್ಲವೂ ಏಕಾಂತದಲ್ಲಿ ತುಂಬು ಭಕುತಿಯಿಂದ ಕೂತು ನರಸುಮ್ಮ ಮಾಡುತ್ತಿದ್ದ. ಅಣ್ಣ ತಮ್ಮಂದಿರಲ್ಲಿ ಅದೆಂತಾ ವೈರುಧ್ಯ, ಎರಡೂ ಭಕ್ತಿಯ ವಿಭಿನ್ನ ಮಾರ್ಗಗಳು. ಒಂದು ಬಿಟ್ಟರೆ ಒಂದಿಲ್ಲ.

ಅಣ್ಣ ರಂಗ ಕುಣಿಯುತ್ತಿದ್ದ ಸೋಮ, ಅಧಿಕ ದೈಹಿಕ ಕ್ಷಮತೆ ಬೇಡುವ ಕುಣಿತ. ಅಷ್ಟಾಗಿ ಅದರಲ್ಲಿ ನೈಪುಣ್ಯತೆಯನ್ನು ಸುತ್ತಲಿನ ಊರಿನ ಯಾವ ಗಂಡಾಳು ಹೊಂದಿರಲಿಲ್ಲ. ಹಳದಿ ಸೋಮನ ಜವಾಬ್ದಾರಿಯನ್ನು ನರಸುಮ್ಮ ಹೊತ್ತು ಕೆಲಕಾಲ ಸುಮ್ಮನೆ ನಿಂತಿರುತ್ತಿದ್ದ.ಅದಕ್ಕೆ ದೊರೆಯುತ್ತಿದ್ದ ಕಾಸು ಅಷ್ಟಕ್ಕಷ್ಟೆ. ಅದನ್ನ ಯಾರಾದರೂ ಮಾಡುತ್ತಿದ್ದರು. ಬಹುಮುಖ್ಯವಾಗಿ ತಮಟೆ ಕಟ್ಟುವುದ ನೆಚ್ಚಿಕೊಂಡಿದ್ದರಿಂದ ಕೋಣ, ದನ ಹಾಗು ಎರಡು ಮೂರು ಮರಿ ಹಾಕಿದ ಆಡಿನ ಚರ್ಮ ಸಿಕ್ಕಾಗ ಸಿದ್ಧಪಡಿಸಿಕೊಂಡಿರುತ್ತಿದ್ದ.


ಇದೆಲ್ಲಾ ಆಗಿ ಮೂರು ದಶಕಗಳು ಸಂದಿವೆ. ನರಸುಮ್ಮನಿಗೂ ಐವತ್ತು ಹತ್ತಿರ ವರ್ಷವಾಗಿದೆ. ಚರ್ಮವೂ ಸುಕ್ಕುಗಟ್ಟಿ ಇಳಿವಯಸ್ಸನ್ನು ಸಾರಿ ಹೇಳುತ್ತಿದೆ. ಜೀವನ ಮೊದಲಿನಂತೆ ಇಲ್ಲ. ಅದ್ಯಾವುದೋ ಸಂಘಟನೆಗಳ ಪರಿಣಾಮ ಜಾನುವಾರುಗಳ ಚರ್ಮ ಕೂಡ ಈಗ ಮೊದಲಿನಂತೆ ಸಿಗುತ್ತಿಲ್ಲ. ಸತ್ತದನದ ಬಳಿಯೂ ಹೋಗಬಾರದೆಂದು ಅದ್ಯಾರೋ ಬಂದು ತಾಕೀತು ಮಾಡಿದ್ದಾರೆ. ಚರ್ಮ ವಾದ್ಯಕ್ಕೆ ಪರ್ಯಾಯವಾಗಿ ಪ್ಲಾಸ್ಟಿಕ್ಕಿನಿಂದ ತಯಾರಿಸಿದ ವಾದ್ಯಗಳು ಕ್ಯಾತ್ಸಂದ್ರ ಸಂತೆಯಲ್ಲಿ ಸಿಗಲು ಶುರುವಾಗಿವೆ . ಅಪ್ಪ ಸತ್ತ ಮೂರನೇ ವರ್ಷದ ಜಾತ್ರೆಯ ದಿನ ಸೋಮನ ಕುಣಿಯುತ್ತಾ ರಂಗಯ್ಯ ಕೆಂಡ ತುಳಿದು ಪರವೂರಿನವರೊಂದಿಗೆ ಮರೆಯಾದವನು ಇಷ್ಟು ವರ್ಷವಾದರೂ ತಿರುಗಿ ಮನೆ ಕಡೆ ನೋಡಿಲ್ಲ. ಪ್ರತೀ ವರ್ಷ ಮಾರ್ನಾಮಿ ಹಬ್ಬಕ್ಕೆ ಅಪ್ಪನಿಗೆ ಎಡೆ ಇಡುವಾಗ ಅಣ್ಣನೂ ನೆನಪಾಗುತ್ತಿದ್ದ.

ಅವತ್ತು ಹಟ್ಟಿಯ ಬಾಗಿಲಲ್ಲಿ ಎರಡು ಮರದ ಕುರ್ಚಿಗಳು ನೆಲವೂರಿದ್ದವು. ಅದರಲ್ಲಿ ಎಡಭಾಗಕ್ಕೆ ಬಾಬು ಜಗಜೀವನ್ ರಾಮ್ ಬಲಭಾಗದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರಗಳು. “ನೋಡಿ ನಿಮಗೆಲ್ಲಾ ಶಿಕ್ಷಣ ಇಲ್ಲ. ನಿಮಗಾಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟದ ಮನೋಭಾವ ಬೆಳೆಸಿಕೊಳ್ಳೋದು ತುಂಬಾ ಮುಖ್ಯ. ಸರ್ಕಾರ ಜಾನುವಾರು ವಧೆ ನಿಷೇಧ ವಿಧೇಯಕವನ್ನು ವಿರೋಧದ ಮಧ್ಯೆಯೂ ಜಾರಿಗೆ ತರುವ ಪ್ರಯತ್ನ ಮಾಡ್ತಿದೆ. ಪಕ್ಕದೂರಿನಲ್ಲಿ ಸತ್ತ ದನ ಮುಟ್ಟಿದ್ದಕ್ಕೆ ನಮ್ಮವರನ್ನ ಜೈಲಿಗೆ ಹಾಕಿದ್ದಾರೆ” ದಲಿತ ಸಂಘಟನೆಯ ಮುಖ್ಯಸ್ಥರೊಬ್ಬರು ನೀಲಿ ಬಣ್ಣದ ಶಾಲು ಹೆಗಲಿಗೇರಿಸಿಕೊಂಡು ಮಾತನಾಡುತ್ತಿದ್ದರು “ ಪ್ರಭುತ್ವದ ಕೆಲಸ ಎಂದೂ ಜನರ ತಟ್ಟೆಯಲ್ಲಿ ಏನಿರಬೇಕು ಎಂದು ಹೇಳುವುದಲ್ಲ. ಊಟ ಬಟ್ಟೆ ವಸತಿ ಇವು ಮೂಲಭೂತ ಅಗತ್ಯಗಳು.ಸಾಂವಿಧಾನಿಕವಾಗಿ ಯಾವುದೇ ತೊಡಕುಗಳಿಲ್ಲದೇ ಯಾವೊಂದೂ ಭೇದಭಾವವಿಲ್ಲದೆ ದೊರೆಯುವಂತಾಗಬೇಕು. ಇದು ಸಂವಿಧಾನದ ಆಶಯ”

“ಭೌಗೋಳಿಕವಾಗಿ ಅಷ್ಟೆ ಅಲ್ಲ ಆಹಾರದ ವಿಧಾನದಲ್ಲೂ ವೈವಿಧ್ಯತೆ ಇರುವ ದೇಶ ನಮ್ಮದು. ಮಠದ ಸ್ವಾಮಿಗಳು ಇಂದು ಶಾಲೆಯ ಮಕ್ಕಳಿಗೆ ಕೊಡುವ ಊಟದಲ್ಲಿ ನೇರವಾಗಿ ಅದು ಕೊಡಬೇಡಿ ಇದು ಕೊಡಿ ಅಂತ ಹೇಳುತ್ತಾರೆ. ಲೌಕಿಕ ಜಗತ್ತಿನ ಜೊತೆ ಅವರಿಗೆಂತಾ ನಂಟು. ಅದರಿಂದ ಅವರು ಸಾಧಿಸಬಲ್ಲಂತ ಸಾಮಾಜಿಕ ಬದಲಾವಣೆಯಾದರೂ ಏನು? ಅಪೌಷ್ಟಿಕತೆಯಿಂದ ಬಳಲುತ್ತಿರುವ ಬಡವರ ಮಕ್ಕಳ ಬಗೆಗೆ ಇವರಿಗೇನಾದರೂ ಕಾಳಜಿ ಇದೆಯಾ, ಅದಕ್ಕೇನಾದರೂ ಇವರ ಬಳಿ ಉತ್ತರ ಇದೆಯಾ?. ನಮ್ಮಗಳ ಸಹನೆ ನಮ್ಮ ದುರ್ಬಲತೆ ಅಲ್ಲ.ನಮಗೂ ಧ್ವನಿ ಇದೆ ಹೋರಟದ ಕಿಚ್ಚು ನಮ್ಮ ಎದೆಯಲ್ಲಿ ಇದೆ. ಆ ಕಿಚ್ಚಿನಿಂದ ಅಸಮಾನತೆ ಸುಡೋ ಶಕ್ತಿ ಇದೆ ಅಂತ ನಿರೂಪಿಸೋ ಸಮಯ ಬಂದಿದೆ.” ರೋಷದಿಂದ ಅವರು ಮಾತಾಡುತ್ತಿದ್ದರು. ಮುಂದಿನ ತಿಂಗಳು ಡಿ.ಸಿ. ಆಫೀಸಿನ ಎದುರಿನ ಅಮಾನಿಕೆರೆ ಅಂಗಳದಲ್ಲಿ ಇದರ ವಿರುದ್ಧ ನಡೆಯುವ ತಮಟೆ ಚಳುವಳಿಗೆ ತಪ್ಪಿಸದೇ ಬಂದು ನಿಮ್ಮ ಪ್ರತಿರೋಧ ದಾಖಲಿಸಿ ಎಂದು ಕೆಲವು ಕರಪತ್ರ ಕೊಟ್ಟು ಹೊರಟು ಹೋದರು. ಜೀವನ ಮರುಕ್ಷಣವೇ ತನ್ನ ಹಳಿಗೆ ಮರಳಿತು.

“ತಮಟೆ ಇದ್ರೆ ಬಾ ಜೊತೆ ಹೋಗನ” ಸೀನಪ್ಪ ಮೂರ್ನಾಲ್ಕು ಜನರೊಟ್ಟಿಗೆ ಚೇಳೂರಿನ ಕರಿಯಮ್ಮ ದೇವರಿಗೆ ವಾದ್ಯಕ್ಕೆ ಹೋಗುವಾಗ ಅಂದಿದ್ದ. ಮೂರ್ನಾಲ್ಕು ದಿನದ ಜಾತ್ರೆಯಾದ್ದರಿಂದ ಒಳ್ಳೆ ದುಡಿಮೆಯಂತೂ ಆಗುತ್ತಿತ್ತು.

“ನೀನೇ ನೋಡಿದ್ಯಲ್ಲಾ ಎಂಗೆ ಆಗೈತೆ ಅಂತ. ಮಧುರೆ ಜಾತ್ರೆ ಆಗ್ಲಿ. ಆ ನಮ್ಮವ್ವ ಕಣ್ ಬಿಟ್ರೆ ವರ್ಸ್ವೆಲ್ಲಾ ಉಣ್ಬೋದು”

ಸ್ವಲ್ಪ ಹಿಂಜರಿಕೆಯಿಂದಲೆ ಸೀನಪ್ಪ “ಹಂಗೆ ಆಗ್ಲಿ. ಬರೋ ಹಂಗಿದ್ರೆ ಮೊಟಣ್ಣನ್ ತಮಟೆ ವಡಿವಂತೆ. ಅವ್ನಿಗೆ ಒಂದೀಟ್ ಕಾಸ್ ಕೊಟ್ರೆ ನಡಿತೈತೆ. ಅವ್ನು ಬತ್ತಾ ಇಲ್ಲ” ಎನ್ನುತ್ತಾ ತಮಟೆಯ ಹಿಂಬದಿ ಹುರಿ ಬಿಗಿಗೊಳಿಸಿದ.

ರೊಚ್ಚಿಗೆದ್ದ ನರಸುಮ್ಮಣ್ಣ “ಅಯ್ಯೋ ಅವ್ನ ಮಕಕ್ ನನ್ ಎಕ್ಡ ಸಿಗಾಕ. ತಮಟೆ ಚರ್ಮ ಇದ್ರು ಇಲ್ಲ ಅಂತಾನೆ. ಅವ್ನಂತಾವ್ ಏನ್ ಕೇಳದು ಬಿಡ ಸೀನಪ್ಪ” ಮೊಟಣ್ಣನ ಬುದ್ಧಿ ಗೊತ್ತಿದ್ದರಿಂದ ಸೀನಪ್ಪ ಮತ್ತೂ ಬಲವಂತ ಮಾಡುವುದಕ್ಕೆ ಹೋಗಲಿಲ್ಲ

ಏನೋ ಜ್ಞಾಪಿಸಿಕೊಂಡವನಂತೆ ಮರಳಿ “ಮೊನ್ನೆ ಸ್ವಾಂದೇನಾಹಳ್ಳಿ ಯಜಮಾನ್ರು ಸಿಕ್ಕಿದ್ರು. ಆ ಊರಿನ ಮಾರಮ್ಮನ್ ಜಾತ್ರೆಗೆ ಕುಂಭಿ ಮನೆಯಿಂದ ಸೋಮನ ಕುಣಿಸೋಕೆ ಇದ್ರೆ ಹೇಳು ಅಂತ ಅಂದ್ರು. ಕೇಳಿ ಹೇಳ್ತಿನಿ ಅಂದೆ ”

ಸೋಮ ಎನ್ನುತ್ತಲೆ ಮ್ಲಾನವದನನಾದ ನರಸುಮ್ಮ “ ನಿಂಗೆ ಗೊತ್ತಲ್ಲ ಸೀನಪ್ಪ. ಹತ್ ಹದಿನೈದು ಕೆಜಿ ಸೋಮನ್ನ ಕುಣಿಸೋ ತ್ರಾಣ ನನಗಿಲ್ಲ. ವಯಸ್ಸಿನ ಹುಡುಗುರೇ ಹಿಂದೆ ಮುಂದೆ ನೋಡ್ತಾರೆ ಈಗ. ನಂಕೈಲಿ ಆಗಕಿಲ್ಲ ಬಿಡು”.

ತಡವಾಯಿತು ಎನ್ನುತ್ತಾ. ತನ್ನ ಬೆಟಾಲಿಯನ್ನು ಬೆನ್ನಿಗಂಟಿಕೊಂಡು ಸೀನಪ್ಪ ಹೊರಟುಹೋದ. ತಮಟೆ ಅರೆಗಳನ್ನು ನೋಡಿ ತಾನೇನೊ ಗುಂಪಿಗೆ ಸೇರದ ಪದವಾಗಿಬಿಟ್ಟೆನಾ ಎಂದು ಎನಿಸತೊಡಗಿತು.

ಕೊನೆಯ ಬಾರಿ ಮೊಟಣ್ಣನ ತಮಟೆ ಬಡಿದದ್ದಕ್ಕೆ ಬಂದ ಐವತ್ತು ರೂಪಯಿಯಲ್ಲಿ ನಲವತ್ತು ಅವನೆ ಇಸಿದು ಕೊಂಡಿದ್ದ. ಮೂವತ್ತಕ್ಕೆ ಮಾತಾಡಿದ್ದನಾದರೂ “ಹತ್ತು ಇರಲಿ. ಮುಂದಿನ ಸಲಿ ಹೋಗುವಾಗ ಅದಕ್ಕೆ ಸಮಾ ಮಾಡ್ಕಳನ” ಎಂದು ಹೇಳಿ ತೆಪ್ಪಗಾಗಿಸಿದ್ದ. ಉಚ್ಚೇಲಿ ಮೀನ್ ಹಿಡಿಯೋ ಅಂತವನ ಬಳಿ ಸಹಾಯ ಕೇಳಿದ್ದೆ ತಪ್ಪು ಅನಿಸಿತು. ದೊಡ್ಡ ಮಧುರೆ ಜಾತ್ರೆ ಮುಗಿದು ಇದೆಲ್ಲದರಿಂದ ಬೇಗ ಮುಕ್ತಿ ಸಿಕ್ಕರೆ ಸಾಕಿತ್ತು.

ಹೆಂಡತಿ ಸಾಕವ್ವನೊಟ್ಟಿಗೆ ಐದು ಮೈಲಿ ದೂರದ ದೊಡ್ಡ ಮಧುರೆಗೆ ನಡೆದುಹೋಗುತ್ತಿದ್ದರು.ಮಧ್ಯಾಹ್ನದ ಉರಿಬಿಸಿಲು ಕರಗಿ ತಂಪೊತ್ತು ಆವರಿಸಿದಾಗ ಹೊರಟು ಕತ್ತಲು ಕವಿಯುವ ಮೊದಲೆ ಮಗಳ ಮನೆ ಸೇರಿದರು. ತಂದೆ ತಾಯಿಯ ಕಂಡು ಮಗಳು ಪುಟ್ಟಕ್ಕನ ಸಂತಸ ಇಮ್ಮಡಿಯಾಯಿತು.”ಇದ್ಯಾಕಪ್ಪ ಕಣ್ ಎಲ್ಲಾ ಒಳಿಕ್ ಹೋದಂಗೆ ಆಗೈತೆ. ಉಷಾರಿಲ್ವಾ??” ಅಂತೆಲ್ಲಾ ವಿಚಾರಿಸತೊಡಗಿದಳು. ವಯಸ್ಸಾಗುತ್ತಿರುವ ಕೊಡುಗೆಗಳು ಎಂದು ಹೇಳಿ ಮಗಳಿಗರ ಸುಮ್ಮನಾಗಿಸಿದ.ಮಗಳಿಗೆ ಎಂತದೋ ಆತಂಕ. ಮಕ್ಕಳಿಗೆ ತಮ್ಮ ಪೋಷಕರಿಗೆ ವಯಸ್ಸಾಗುತ್ತಿದೆ ಎಂದು ಅರಿವಾಗದತೊಡಗಿದಾಗ ಒಂದು ಬಗೆಯ ದಿಗಿಲಾಗುತ್ತದೆ. ಕಣ್ಣಿನ ತುಂಬ ನೀರು ತುಂಬಿಕೊಂಡು”ಇಲ್ಲೆ ಬಂದು ಇರಪ್ಪ. ನಮ್ಜೊತೆನೆ” ಎಂದಳು. ಅಳಿಯನ ದುಡಿಮೆಯ ಅರಿವಿದ್ದುದರಿಂದ ಇದನ್ನು ನಯವಾಗೆ ತಿರಸ್ಕರಿಸಿದ.ಮಗಳು ಸುಮ್ಮನಾದಳು. ಅಳಿಯನು ಜಾತ್ರೆ ಗಡಿಬಿಡಿಯಲ್ಲಿ ತೊಡಗಿಕೊಂಡಿದ್ದ. ಮನೆಯಲ್ಲಿ ಮರುದಿನದಿಂದ ಹಬ್ಬದ ಸಂಭ್ರಮ.

ಪ್ರತೀ ಸಲದಂತೆ ಬೆಳಗ್ಗೆ ಆರಕ್ಕೆಲ್ಲಾ ಕೋಣದ ಬಲಿ ನಡೆಯುತ್ತಿತ್ತು. ಸರಸುಮ್ಮನಿಗೆ ರಾತ್ರಿಯೆಲ್ಲಾ ನಿದ್ದೆ ಸರಿಯಾಗಿ ಬರಲಿಲ್ಲ. ಕಣ್ಣು ಮುಚ್ಚಿದರೆ ತಮಟೆಯ ಸದ್ದು ಕಿವಿ ತುಂಬುತ್ತಿತ್ತು. ಇನ್ನು ಕತ್ತಲು ಇರುವಾಗಲೆ ಒಂದು ಚೂರಿ ಗೋಣಿಚೀಲ ಕೈಲಿಡಿದು ಬರಬರನೆ ಹೆಜ್ಜೆ ಹಾಕತೊಡಗಿದ. ಬಿಳಿ ಪಂಚೆ. ದೊಗಲೆ ಅಂಗಿ. ಮಣಿಕಟ್ಟಿನವರೆಗೂ ಬಂದ ಅಂಗಿಯ ತೋಳು. ಅರ್ಧ ತುಂಡಾಗಿದ್ದ ಅಂಗಿಯ ತೋಳಿನ ಗುಂಡಿಗಳು. ದೇವಸ್ಥಾನದ ಬಳಿ ಬಂದರೆ ಅಲ್ಲಿ ಎಲ್ಲವು ಖಾಲಿ. ಬೆಳಗ್ಗೆ ಇನ್ನು ಕತ್ತಲೆ ಇರುವಾಗಲೆ ಬಂದಿದ್ದರಿಂದ ಕೊಂಚ ಸಮಯ ಆಗಬಹುದೆಂದು ಕಾಯಬೇಕೆಂದುಕೊಂಡ. ಆದರೆ ವಧಾಸ್ಥಂಭದಲ್ಲಿ ಕೋಣ ಕಾಣದೆ ಇರುವುದ ಕಂಡು ದಿಗಿಲಾಯಿತು. ಕರಿಕವರಿನಲ್ಲಿ ಗುಡ್ಡೆಬಾಡು ತುಂಬಿ ನಡೆಯುತ್ತಿದ್ದವರೊಬ್ಬರು ಕಣ್ಣಿಗೆ ಬಿದ್ದರು. ಕೋಣವಧೆಯ ಬಗ್ಗೆ ಅವರ ಬಳಿ ವಿಚಾರಿಸಿದ. ಜಿಲ್ಲಾಡಳಿತಕ್ಕೆ ಹೆದರಿ ಹತ್ತಿರದ ಮಾವಿನ ತೋಪಿನಲ್ಲಿ ಕೋಣವಧೆ ನಡೆಯುತ್ತಿದ್ದುದನ್ನ ಅವರು ಹೇಳಿ ನಿಲ್ಲದೇ ಹೊರಟುಹೋದರು. ಆತಂಕಗೊಂಡು ಬೇಗ ಬೇಗನೆ ಹೆಜ್ಜೆ ಹಾಕುತ್ತಿದ್ದ ನರಸುಮ್ಮನ ಉಸಿರಾಟ ಜೋರಾಗುತ್ತಾ ಹೋಯಿತು. ಅಲ್ಲಿ ಹೋಗುವಷ್ಟರಲ್ಲಿ ಎಲ್ಲಾ ಕಾರ್ಯವು ಆಗಲೇ ಮುಗಿದಿತ್ತು. ಉಳಿದಿದ್ದ ಮೂರ್ನಾಲ್ಕು ಗುಡ್ಡೆ ಮಾಂಸಕ್ಕಾಗಿ ದುಡ್ಡು ಕೊಟ್ಟಿದ್ದ ಜನರಿಗೆ ಯುವಕರು ಕಾಯುತ್ತಿದ್ದರು. ಕೋಣ ಕಡಿಯುವ ಅಜಾನುಬಾಹು ತಲವಾರನನ್ನು ವಿಚಾರಿಸಿದಾಗ, ಮೇಲಿಂದ ಕೆಳಗೆ ಇವನನ್ನು ಕೆಕ್ಕರಿಸಿ ” ಇಂತ ವತ್ನಲ್ಲಿ ಕೋಣ ಕಡ್ದಿದ್ದೆ ಹೆಚ್ಚು ಅಂತದ್ರಲ್ಲಿ ಚಕ್ಕಳ ಯಾವನ್ ನೋಡ್ಕೊಂಡ್ ಕುತ್ಕೊತಾನೆ. ಅಲ್ಲೆ ಬೇಲಿ ಮೇಲೆ ಎಸ್ದಿರ್ಬೇಕು ನೋಡು..” ಎನ್ನುತ್ತಾ ಬಾಯಲ್ಲಿದ್ದ ಬಿಡಿಯ ತುಂಡು ಹೊರತೆಗೆದು ಅದರ ಅಂಡಿನ ಮೇಲೆ ನಯವಾಗಿ ನಾಟಿದ. ಬೆಳ್ಳಗಾಗಿದ್ದ ಬೂದಿ ಮೂರ್ನಾಲ್ಕು ಹೋಳಾಗಿ ನೆಲದ ಮೇಲೆ ಬಿದ್ದಿತು. ನರಸುಮ್ಮನಿಗೆ ಎದೆಯೇ ಒಡೆದು ಹೋದಂತಾಯಿತು. ಅಳಿಯನಿಗೆ ಹೇಳಿದ್ದನಾದರೂ ಗಲಾಟೆಯ ಮಧ್ಯೆ ಮತ್ತೆ ಜ್ಞಾಪಿಸುವುದನ್ನು ಮರೆತಿದ್ದ. ಅವನು ಕೈತೋರಿಸಿದ ಬೇಲಿಯ ಕಡೆ ಓಡತೊಡಗಿದ. ಅಲ್ಲಿ ಹೋದಾಗ ಅಲ್ಲಿದ್ದ ದೃಶ್ಯ ಕಂಡು ಯಾರೋ ಕರುಳು ಹೊರಗೆಳೆದಂತಾಯಿತು. ಮಾಂಸದ ವಾಸನೆ ಅರಸಿ ಬಂದಿದ್ದ ಬೀದಿನಾಯಿಗಳು ಹಸಿ ಕೋಣದ ಚರ್ಮವನ್ನು ದರದರನೆ ಎಳೆದು ತಿನ್ನುತ್ತಿದ್ದವು. ಎಳೆದೆಳೆದು ಸುಸ್ತಾಗಿದ್ದ ನಾಯಿಗಳು ನಾಲಿಗೆ ಹೊರಚಾಚಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದವು. ಅದಾಗಲೆ ತುಂಡು ತುಂಡಾದ ಅಂಗೈ ಅಗಲ ಚರ್ಮ ಅಲ್ಲಲ್ಲಿ ಬಿದ್ದಿದ್ದವು. ಸಾವರಿಸಿಕೊಳ್ಳುತ್ತಾ ಭಾರವಾದ ಹೆಜ್ಜೆ ಇಡುತ್ತಾ ಮಗಳ ಮನೆಯ ದಾರಿ ಹಿಡಿದ. ಹೋಗುವಾಗ ಇದ್ದ ನಾಲ್ಕು ಗುಡ್ಡೆ ಮಾಂಸವೂ ಖಾಲಿಯಾಗಿತ್ತು.

ದೇವಸ್ಥಾನ ಹಾದು ಹೋಗುವಾಗ ನಾಡಿದ್ದು ನಡೆಯುವ ಸ್ವಾಂದೇನಾಹಳ್ಳಿಯ ಜಾತ್ರೆ ನೆನಪಿಗೆ ಬಂದು ಹೊಸ ಚೈತನ್ಯ ಮೂಡಿದಂತಾಯಿತು. ಬೇಗ ಹೋಗಿ ಕಾದರೆ ಸಿಗುಬಹುದಾದ ಸಾಧ್ಯತೆಯೂ ನೆನಪಿಗೆ ಬಂತು. ಬೆಳಗ್ಗೆ ಏನೂ ತಿನ್ನದೆ ಬಂದಿದ್ದಕ್ಕೋ ಹೆಚ್ಚು ಓಡಾಡಿದ್ದಕ್ಕೋ ಹಸಿವು ಹೊಟ್ಟೆಯನ್ನು ಸುಡುತ್ತಿರುವ ಅನುಭವವಾಯಿತು.ಅಲ್ಲೂ ಹಿಂಗೆ ಏನಾದರೂ ಆಗಿದ್ದರೆ ಅನಿಸಿ ಮತ್ತೂ ದಿಗಿಲುಗೊಂಡ. ಇತ್ತಕಡೆ ಸಾಕವ್ವ ತಟ್ಟೆಯ ಮುಂದೆ ಕೂತು ಗಂಡನಿಗೆ ಕಾಯುತ್ತಿದ್ದಳು. ಸ್ವಲ್ಪ ಹೊತ್ತು ಕಾದು ಅಳಿಯನನ್ನು ಕಳುಹಿಸುವ ಯೋಚನೆಯಲ್ಲಿದ್ದಳು. ನರಸುಮ್ಮನಿಗೆ ವರ್ಷದ ಕೂಳಿನ ಮುಂದೆ ಎಲ್ಲವೂ ನಗಣ್ಯ ಎನಿಸಿತು. ಮನೆಯ ದಾರಿಯ ಕಡೆ ತಿರುಗಲಿಲ್ಲ.

ದೊಡ್ಡ ಮಧುರೆಯ ಕೆರೆಯ ಏರಿ ಹತ್ತಿ ಇಳಿದರೆ ಸ್ವಾಂದೇನಾಹಳ್ಳಿಗೆ ಎರಡು ಮೈಲಿಯ ದಾರಿ. ನೀರಿಲ್ಲದೆ ಬಣಗುಡುತ್ತಿದ್ದ ಮಧುರೆಯ ಕೆರೆ ಇವನ ದಾಹ ತೀರಿಸುವ ಶಕ್ತಿಯನ್ನು ಕಳೆದುಕೊಂಡಿತ್ತು. ಊರು ಹತ್ತಿರವಾಗುತ್ತ ಹೆಜ್ಜೆಗಳು ಶಕ್ತಿ ಕಳೆದುಕೊಳ್ಳುತ್ತಿದ್ದವು. ಕಂಕುಳಲ್ಲಿ ಇದ್ದ ಗೋಣಿಚೀಲ ಬೆವರನ್ನ ಹೊದ್ದಿಕೊಂಡಿತ್ತು. ಮಾರಮ್ಮ ಗುಡಿಯ ಬಳಿ ಬರುತ್ತಿದ್ದಂತೆ ಕೋಣ ಕಂಡಂತಾಗಿ ಹೊಸ ಚೈತನ್ಯ ಮೂಡಿತು. ತನ್ನ ಮುಂದಿದ್ದ ಸಾವನ್ನು ಕಡೆಗಣಿಸಿ ತಂದು ಹಾಕಿದ್ದ ಒಣ ಹುಲ್ಲನ್ನು ಸಾವಕಾಶವಾಗಿ ಮೆಲ್ಲುತ್ತಿತ್ತು. ಕಣ್ಣು ಎವೆಯಿಕ್ಕದೆ ಅದನ್ನೆ ನರಸುಮ್ಮ ನೋಡುತ್ತಿದ್ದ. ಇನ್ನೆರಡು ದಿನ ಜೀವ ಹಿಂಗಿದರೂ ಈ ಜಾಗ ಬಿಟ್ಟು ಒಂದಿಂಚೂ ಕದಲಬಾರದೆಂದು ನಿರ್ಧರಿಸಿದ. ನಿಧಾನವಾಗಿ ಅದರ ಹತ್ತಿರ ಹೋಗಬೇಕೆಂದೆನಿಸಿತು.

ಹತ್ತಿರವಾಗುತ್ತಿದ್ದಂತೆ ಯಾರೋ ಕೈ ಹಿಡಿದು ಜಗ್ಗಿದರೆನಿಸಿ ತಿರುಗಿದ. ಖಾಕಿ ಬಟ್ಟೆ ತೊಟ್ಟಿದ್ದ ಕ್ಯಾತ್ಸಂದ್ರ ಠಾಣೆಯ ದಪ್ಪೆದಾರ್ “ನಿಂತ್ಕಳೋ ಕುಡುಕ್ ಬೇವರ್ಸಿ ನನ್ ಮಗನೆ. ಎಲ್ಲಿಗ್ ದನ ನುಗ್ದಂಗೆ ನುಗ್ತಿದ್ಯಾ…” ಎನ್ನುತ್ತಾ ಹಿಂಬದಿ ಕೊರಳಪಟ್ಟಿ ಹಿಡಿದು ಎಳೆದು ಬಿಸಾಡಿದ.ಬಿದ್ದ ರಭಸಕ್ಕೆ ಮೈಯೆಲ್ಲಾ ಕೊಂಚ ಮಣ್ಣಾದಂತಾಯಿತು. ಯಾವುದೋ ಟೆಂಪೊ ಹಿಂಬದಿಯಿಂದ ಒಂದು ಹಲಗೆ ಇಳಿಬಿಟ್ಟು ಕೋಣವನ್ನು ಅದರ ಮೂಲಕ ಅದರೊಳಗೆ ಹತ್ತಿಸಿದರು. “ತುಮಕೂರು ಜಿಲ್ಲಾಡಳಿತ” ಎಂದು ವಾಹನದ ಮೇಲೆ ಮಾಡಿದ್ದ ಪೈಂಟು ಅಲ್ಲಲ್ಲಿ ಬಣ್ಣ ಕಳೆದುಕೊಂಡಿತ್ತು. ಜಿಲ್ಲಾಡಳಿತದ ವತಿಯಿಂದ ಬಂದಿದ್ದ ಒಂದಿಬ್ಬರು ಊರಿನ ಗೋಡೆಯ ಮೇಲೆ ನಿಷೇಧ ಕಾಯ್ದೆಯ ಪೋಸ್ಟರ್ ಅಂಟಿಸಿದರು. ಕೋಣ ತನ್ನ ಬಾಯಲ್ಲಿದ್ದ ಒಣ ಹುಲ್ಲು ಹಾಗೆ ನಿಧಾನವಾಗಿ ಮೆಲ್ಲುತ್ತಾ ಟೆಂಪೋದೊಳಗಿಂದ ನಿರ್ಭಾವುಕತೆಯಿಂದ ಊರ ಜನರನ್ನು ನೋಡುತ್ತಿತ್ತು. ಟೆಂಪೋಗಾಡಿ ದೂಳಿನ ಮರೆಯಲ್ಲಿ ಕಾಣದಾಯಿತು. ಅದರ ಹಿಂದೆ ಕ್ಯಾತ್ಸಂದ್ರ ಪೋಲೀಸರ ಗಾಡಿ ಕೂಡ ಓಡತೊಡಗಿತು. ಊರಿನ ಯಾವ ಗಂಡಾಳೂ ಇದನ್ನು ತಡೆಯಲಿಲ್ಲ.

ಸಾವರಿಸಿಕೊಂಡು ಎದ್ದ ನರಸುಮ್ಮನಿಗೆ ಆಕಾಶವೇ ಕಳಚಿ ತನ್ನ ಮೇಲೆ ಬಿದ್ದಂತಾಯಿತು. ಜಾತ್ರೆಯ ಸಿದ್ದತೆಯಲ್ಲಿದ್ದ ಊರಿನ ಹಟ್ಟಿಯ ಯಜಮಾನ್ರು ಕೂಡ ವಾಹನ ತಡೆಯದೆ ಹಾಗೆ ನಿಂತಿದ್ದರು. ದೇವಾಲಯದ ಪ್ರಾಂಗಣದಲ್ಲಿ ಜಾತ್ರೆಯ ಸಿದ್ಧತೆಗೆ ವಾದ್ಯ ಹೊತ್ತಿದ್ದ ಸ್ವಾಂದೆನಹಳ್ಳಿಯ ಯುವಕರು “ನೆನ್ನೆನೆ ಕಡ್ದಾಕಿದ್ರೆ ಆಗಿರದು ಮದ್ರೆ ಹುಡ್ಗುರಂಗೆ…” ಎನ್ನುತ್ತಾ ತಪ್ಪಿದ ಅವಕಾಶಕ್ಕೆ ಕೈ ಕೈ ಹಿಸುಕಿಕೊಂಡರು. ನರಸುಮ್ಮನಿಗೆ ಕಣ್ಣಿಗೆ ಕತ್ತಲು ಕವಿದಂತಾಯಿತು. ಕಣ್ಣಿಂದ ಧಾರಾಕಾರವಾಗಿ ನೀರು ಹರಿಯಲು ಶುರುವಾದವು. ತಂದೆ ಕುಂಭಯ್ಯ, ಹೆಂಡತಿ ಸಾಕವ್ವ, ಸೀನಪ್ಪ, ಮೊಟಪ್ಪ, ಮಗಳು ಪುಟ್ಟವ್ವ ಎಲ್ಲರೂ ಕಣ್ಣ ಮುಂದೆ ಬಂದರು. ಚೀಲ ಚೂರಿ ಬಿಸುಟು ಮಾರಮ್ಮ ಗುಡಿಯ ಮುಂದೆ ನಿಂತು ರೋಧಿಸತೊಡಗಿದ. ಕೆಲವರಿಗಷ್ಟೆ ಅಲ್ಲಿ ಪರಿಚಯವಿದ್ದುದರಿಂದ ಕಂಡೂ ಕಾಣದಂತೆ ಸುಮ್ಮನಾದರು.

ಕಾಲುಗಳನ್ನು ಅಲ್ಲಿಂದ ಕೀಳಲಾಗಲಿಲ್ಲ. ದಪ್ಪೆದಾರ್ ಬಿಸುಟ ರಭಸಕ್ಕೆ ಕಾಲ್ಬೆರಳ ಸಂದುಗಳಿಂದ ರಕ್ತ ಒಸರತೊಡಗಿತು. ಉರುಳುತ್ತಾ ಅವನು ಕೊಂಡ ಹಾಕುವ ಜಾಗದಲ್ಲಿ ಬಿದ್ದಿದ್ದ. ಅಣ್ಣ ರಂಗಯ್ಯ ಗಾಢವಾಗಿ ನೆನಪಾಗತೊಡಗಿದ. ಮಾರಮ್ಮನ ದೇವಾಲಯದ ಬಾಗಿಲು ತೆರೆದಿತ್ತು. ವಾಪಸ್ಸಾಗುತ್ತಿದ್ದ ಊರ ಜನರು ಆಗುತ್ತಿದ್ದ ಅನಿಶ್ಚಿತ ಘಟನೆ ಕಂಡು ತಿರುಗಿನಿಂತರು. ರೌದ್ರ ಸೋಮನನ್ನು ಹೊತ್ತ ನರಸುಮ್ಮ ಕೋಣವಧೆಯ ಜಾಗದಲ್ಲಿ ನಿಂತು ಉನ್ಮತ್ತನಾಗಿ ಕುಣಿಯತೊಡಗಿದ. ಪ್ರತೀ ಹೆಜ್ಜೆಗೂ ನೆಲ ಕಂಪಿಸಿದಂತಾಗುತ್ತಿತ್ತು. ವಾದ್ಯ ಹೊತ್ತಿದ್ದ ಹುಡುಗರು ತಮಗರಿವಿಲ್ಲದಂತೆ ಶುರುಮಾಡಿದರು. ತಮಟೆ ಹರೆ ದೋಣು ಜಿದ್ದಿಗೆ ಬಿದ್ದವಂತೆ ಊರಿನ ಸುತ್ತ ಆದೆಷ್ಟೋ ಶತಮಾನಗಳಿಂದ ನಿಂತಿದ್ದ ಬೆಟ್ಟಗುಡ್ಡಗಳು ಪ್ರತಿಧ್ವನಿಸುವಂತೆ ಬಾರಿಸತೊಡಗಿದವು. ಊರಿನ ಜನ ಅಪ್ರಚೋದಿತರಾಗಿ ಕೈಮುಗಿದು ನಿಂತರು. ಯಾರೋ ಒಂದು ಬಿಂದಿಗೆಯಲ್ಲಿ ನೀರು ತಂದು ರಕ್ತ ಒಸರುತ್ತಿದ್ದ ನರಸುಮ್ಮನ ಕಾಲಿಗೆ ನೀರು ಸುರಿದು ಅರಿಶಿಣ ಕುಂಕುಮ ಇಟ್ಟರು. ದೇವಸ್ಥಾನದ ಆವರಣದಲ್ಲಿ ಕುಣಿದ ಮೇಲೆ ಬಂದ ದಾರಿಯ ಕಡೆಗೆ ಹಜ್ಜೆಗಳು ಹೋಗತೊಡಗಿದವು. ಕುಣಿಯುತ್ತಾ ದೊಡ್ಡ ಮಧುರೆ ಕೆರೆ ಏರಿ ಮೂಲಕ ಕೊಂಡಜ್ಜಿ ದಾರಿ ಹಿಡಿದಾಗಿತ್ತು. ಬಂದ ದಾರಿಯಲ್ಲಿ ವಾದ್ಯಗಳು ಹೆಜ್ಜೆಗಳಿಗೆ ಅನುಗುಣವಾಗಿ ಝೇಂಕರಿಸುತ್ತಿದ್ದವು. ಸಾಕವ್ವ ಆಗಲೇ ಗಂಡನನ್ನು ಹುಡುಕಿಕೊಂಡು ಊರ ದಾರಿಯಲ್ಲಿ ಕಾಯುತ್ತಿದ್ದಳು. ಗಂಡನನ್ನು ಕಂಡು ದಿಗ್ಬ್ರಾಂತಳಾದಳು. ನರಸುಮ್ಮನಿಗೆ ಯಾರೂ ಕಣ್ಣಿಗೆ ಬೀಳುತ್ತಿರಲಿಲ್ಲ. ಕೊಂಡಜ್ಜಿಗೆ ಬರುವಷ್ಟರಲ್ಲಿ ಮೂರು ಊರಿನ ವಾದ್ಯದವರು ಜೊತೆಗೂಡಿದ್ದರು. ದಿನ ರಾತ್ರಿಗಳು ಉರುಳಿದರೂ ಸೋಮನ ಕುಣಿತ ನಿಲ್ಲಲಿಲ್ಲ. ತ್ರಾಣ ಇರೋಗಂಟ ಕುಣಿತ ಸಾಗಬೇಕಿತ್ತು.

ಕಥೆಗಾರರ ಪರಿಚಯ:
ಚಂದ್ರಶೇಖರ ಡಿ.ಆರ್.‌

ತುಮಕೂರಿನಲ್ಲಿ ಹುಟ್ಟಿ ಬೆಳೆದು ಇದೀಗ ಹತ್ತು ವರ್ಷದಿಂದ ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ ಸೇವೆ. ಪ್ರಸಕ್ತ ಮಧುಗಿರಿಯಲ್ಲಿ ಡೆಪ್ಯುಟಿ ಮ್ಯಾನೇಜರ್. ಅಕ್ಷರಗಳೆಂದರೆ ಖುಷಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading

ಅಂಕಣ

ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

ರಾಜಮಾರ್ಗ ಅಂಕಣ (Rajamarga column): ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

VISTARANEWS.COM


on

arijit singh rajamarga column 2
Koo

ದ ಮ್ಯೂಸಿಕಲ್ ಲೆಜೆಂಡ್, ಜೇನು ದನಿಯ ಸರದಾರ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ (Rajamaraga Column): ಏಪ್ರಿಲ್ 25 ಬಂತು ಅಂದರೆ ಅದು ದೇಶದ ಯುವ ಸಂಗೀತ ಪ್ರೇಮಿಗಳಿಗೆ ಬಹಳ ದೊಡ್ಡ ಹಬ್ಬ. ಏಕೆಂದರೆ ಅದು ಅವರ ಹೃದಯದ ಬಡಿತವೇ ಆಗಿರುವ ಅರ್ಜಿತ್ ಸಿಂಗ್‌ (Arijit singh)) ಹುಟ್ಟಿದ ಹಬ್ಬ (Birthday)!

ಆತನ ವ್ಯಕ್ತಿತ್ವ, ಆತನ ಹಾಡುಗಳು, ಆತನ ಸ್ವರ ವೈವಿಧ್ಯ ಎಲ್ಲವೂ ಆತನ ಕೋಟಿ ಕೋಟಿ ಅಭಿಮಾನಿಗಳಿಗೆ ಹುಚ್ಚು ಹಿಡಿಸಿ ಬಿಟ್ಟಿವೆ. ಅದರಿಂದಾಗಿ ಇಂದು ಆತನಿಗೆ ದೇಶದಲ್ಲಿ ಸ್ಪರ್ಧಿಗಳೇ ಇಲ್ಲ ಎನ್ನುವುದನ್ನು ಅವನ ಸ್ಪರ್ಧಿಗಳೇ ಒಪ್ಪಿಕೊಂಡು ಬಿಟ್ಟಿದ್ದಾರೆ! ನಾನು ಇಂದು ಯಾವ ಕಾಲೇಜಿಗೆ ಹೋದರೂ ಅರ್ಜಿತ್ ಧ್ವನಿಯನ್ನು ಅನುಕರಣೆ ಮಾಡಿ ಹಾಡಲು ತೀವ್ರ ಪ್ರಯತ್ನ ಮಾಡುವ ಯುವಕ, ಯುವತಿಯರು ಇದ್ದಾರೆ. 2015ರಿಂದ ಆತನ ಜನಪ್ರಿಯತೆಯ ಗ್ರಾಫ್ ಕೆಳಗೆ ಬಂದದ್ದೇ ಇಲ್ಲ. ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

ಆತನದ್ದು ಬಂಗಾಳದ ಸಂಗೀತದ ಹಿನ್ನೆಲೆಯ ಕುಟುಂಬ

ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಒಂದು ಸಣ್ಣ ಹಳ್ಳಿಯಿಂದ ಬಂದವರು ಅರ್ಜಿತ್. ಅವನ ಅಜ್ಜಿ, ಅವನ ಅತ್ತೆ ಎಲ್ಲರೂ ಚೆನ್ನಾಗಿ ಹಾಡುತ್ತಿದ್ದರು. ಸಹಜವಾಗಿ ಹುಡುಗನಲ್ಲಿ ಸಂಗೀತದ ಆಸಕ್ತಿ ಮೂಡಿತ್ತು. ಒಂಬತ್ತನೇ ವರ್ಷಕ್ಕೆ ರಾಜೇಂದ್ರ ಪ್ರಸಾದ್ ಹಜಾರಿ ಎಂಬ ಶಾಸ್ತ್ರೀಯ ಸಂಗೀತದ ಗುರುವಿನಿಂದ ಸಂಗೀತದ ಕಲಿಕೆ ಆರಂಭವಾಯಿತು. ಬಂಗಾಳದಲ್ಲಿ ರಬೀಂದ್ರ ಸಂಗೀತದ ಪ್ರಭಾವದಿಂದ ಯಾರೂ ಹೊರಬರಲು ಸಾಧ್ಯವಿಲ್ಲ. ಅದರ ಜೊತೆಗೆ ವಿಶ್ವದ ಶ್ರೇಷ್ಠ ಸಂಗೀತಗಾರರಾದ ಮೊಜಾರ್ಟ್ ಮತ್ತು ಬೀತೊವೆನ್ ಅವರ ಹಾಡುಗಳನ್ನು ಕೇಳುತ್ತಾ ಅರ್ಜಿತ್ ಬೆಳೆದರು. ಅದರ ಜೊತೆಗೆ ಕಿಶೋರ್ ಕುಮಾರ್, ಮನ್ನಾಡೆ, ಹೇಮಂತ್ ಕುಮಾರ್ ಅವರ ಹಾಡುಗಳನ್ನು ಕೇಳುತ್ತಾ ಆರ್ಜಿತ್ ತನ್ನದೇ ಸಿಗ್ನೇಚರ್ ಧ್ವನಿಯನ್ನು ಸಂಪಾದನೆ ಮಾಡಿಕೊಂಡರು. ಸೂಫಿ ಹಾಡುಗಳು, ಗಜಲ್, ಪಾಪ್ ಹಾಡುಗಳು, ಶಾಸ್ತ್ರೀಯ ಹಾಡುಗಳು, ಭಜನ್, ಜಾನಪದ ಹಾಡುಗಳು….ಹೀಗೆ ಎಲ್ಲ ವಿಧವಾದ ಹಾಡುಗಳನ್ನು ಅದ್ಭುತವಾಗಿ ಹಾಡಲು ಕಲಿತರು.

ರಿಯಾಲಿಟಿ ಶೋದಲ್ಲಿ ಸೋಲು!

ಅರ್ಜಿತ್ ತನ್ನ 18ನೆಯ ವಯಸ್ಸಿನಲ್ಲಿ FAME GURUKUL ಎಂಬ ಟಿವಿ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ್ದರು. ಚೆಂದವಾಗಿ ಹಾಡಿದರು ಕೂಡ. ಆದರೆ ಆಡಿಯೆನ್ಸ್ ಪೋಲ್ ಇದ್ದ ಕಾರಣ ಅದರಲ್ಲಿ ಸೋತರು. ಆದರೆ ಆತನ ಧ್ವನಿಯ ಮಾಧುರ್ಯವನ್ನು ಗುರುತಿಸಿದ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಅವರು ತನ್ನ ಮುಂದಿನ ಸಿನೆಮಾ ಸಾವರಿಯಾದಲ್ಲಿ ಒಂದು ಹಾಡನ್ನು ಆತನಿಂದ ಹಾಡಿಸಿದರು.

ಆದರೆ ಆ ಹಾಡು ಸಿನೆಮಾ ಎಡಿಟ್ ಆಗುವಾಗ ಬಿಟ್ಟು ಹೋಯಿತು! ಮುಂದೆ TIPS ಸಂಗೀತ ಕಂಪೆನಿ ಆತನೊಂದಿಗೆ ಒಪ್ಪಂದ ಮಾಡಿಕೊಂಡು ಹಲವು ಆಲ್ಬಂ ಸಾಂಗ್ಸ್ ರೆಕಾರ್ಡ್ ಮಾಡಿಕೊಂಡಿತು. ಆದರೆ ಅದ್ಯಾವುದೂ ಬಿಡುಗಡೆ ಆಗಲಿಲ್ಲ! ಆತನಲ್ಲಿ ಅಪ್ಪಟ ಪ್ರತಿಭೆ ಇದ್ದರೂ ದುರದೃಷ್ಟವು ಆತನಿಗಿಂತ ಮುಂದೆ ಇತ್ತು! ಆದರೆ ಈ ಸೋಲುಗಳ ನಡುವೆ ಅರ್ಜಿತ್ ಸಂಗೀತವನ್ನು ಬಿಟ್ಟು ಹೋಗಿಲ್ಲ ಅನ್ನೋದು ಅದ್ಭುತ!

ಮುಂದೆ ಇನ್ನೊಂದು ಟಿವಿ ರಿಯಾಲಿಟಿ ಶೋ (10ಕೆ 10ಲೆ ಗಯೇ ದಿಲ್)ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗೆದ್ದಾಗ ಆತನ ಬದುಕಿನಲ್ಲಿ ದೊಡ್ಡ ತಿರುವು ಉಂಟಾಯಿತು. ಆಗ ದೊರೆತ ಹತ್ತು ಲಕ್ಷ ರೂಪಾಯಿ ಬಹುಮಾನದ ಮೊತ್ತವನ್ನು ತಂದು ಮುಂಬೈಯಲ್ಲಿ ಒಂದು ಸ್ಟುಡಿಯೋ ಸ್ಥಾಪನೆ ಮಾಡಿದರು. ಒಂದು ಪುಟ್ಟ ಬಾಡಿಗೆ ಮನೆಯಲ್ಲಿ ವಾಸ, ಒಂದು ಹೊತ್ತಿನ ಊಟವೂ ಕಷ್ಟ ಆಗಿದ್ದ ದಿನಗಳು ಅವು! ಅರ್ಜಿತ್ ಒಂದು ದೊಡ್ಡ ಬ್ರೇಕ್ ಥ್ರೂ ಕಾಯುತ್ತ ಕೂತಿದ್ದರು. ಈ ಅವಧಿಯಲ್ಲಿ ನೂರಾರು ಜಿಂಗಲ್, ಜಾಹೀರಾತುಗಳ ಸಂಗೀತವನ್ನು ಕಂಪೋಸ್ ಮಾಡಿ ಸ್ವತಃ ಹಾಡಿದರು.

arijit singh rajamarga column 2

2011ರಲ್ಲಿ ಅರ್ಜಿತ್ ಭಾಗ್ಯದ ಬಾಗಿಲು ತೆರೆಯಿತು!

ಆ ವರ್ಷ ಬಿಡುಗಡೆ ಆದ ಮರ್ಡರ್ 2 ಸಿನೆಮಾದ ‘ಫೀರ್ ಮೊಹಬ್ಬತೆ ‘ ಹಾಡು ಸೂಪರ್ ಹಿಟ್ ಆಯಿತು. ಬಾಲಿವುಡ್ ಆತನ ಟಿಪಿಕಲ್ ಧ್ವನಿಗೆ ಮಾರುಹೋಯಿತು. ಮುಂದೆ ರಬಟಾ ( ಏಜೆಂಟ್ ವಿನೋದ್), ಉಸ್ಕಾ ಹೀ ಬನಾನಾ (ಎವಿಲ್ ರಿರ್ಟರ್ನ್) ಲಾಲ್ ಇಷ್ಕ್ ಮತ್ತು ಗೋಲಿಯೋನ್ ಕಿ ರಾಸ ಲೀಲಾ (ರಾಮ್ ಲೀಲಾ) ಮೊದಲಾದ ಹಾಡುಗಳು ಭಾರೀ ಹಿಟ್ ಆದವು. ಮನವಾ ಲಾಗೇ ಮತ್ತು ಮಸ್ತ್ ಮಗನ್ ಹಾಡುಗಳು ಇಡೀ ಬಾಲಿವುಡ್ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿದವು. ಪದ್ಮಾವತ್ ಸಿನೆಮಾದ ‘ಬಿನ್ ತೆ ದಿಲ್ ‘ ಹಾಡಿಗೆ ರಾಷ್ಟ್ರಪ್ರಶಸ್ತಿಯು ಒಲಿದು ಬಂತು. 7 ಫಿಲಂಫೇರ್ ಪ್ರಶಸ್ತಿಗಳು ಬಂದವು. ಹಿಂದೀ, ತೆಲುಗು, ತಮಿಳು, ಬಂಗಾಳಿ ಸಿನೆಮಾಗಳಲ್ಲಿ ಅರ್ಜಿತ್ ಅವರಿಗೆ ಭಾರೀ ಡಿಮಾಂಡ್ ಕ್ರಿಯೇಟ್ ಆಯಿತು. ಭಾರೀ ದೊಡ್ಡ ಫ್ಯಾನ್ ಬೇಸ್ ಡೆವಲಪ್ ಆಯಿತು. ಇಂದು ಅರ್ಜಿತ್ ತನ್ನ ಸಂಗೀತದ ಪ್ರತಿಭೆಯಿಂದ ಭಾರೀ ಎತ್ತರಕ್ಕೆ ಬೆಳೆದಿದ್ದಾರೆ.

ಜವಾನ್, ಡುಮ್ಕಿ, ಅನಿಮಲ್ ಮೊದಲಾದ ಇತ್ತೀಚಿನ ಸೂಪರ್ ಹಿಟ್ ಸಿನಿಮಾಗಳಲ್ಲಿ ಆರ್ಜಿತ್ ಹಾಡಿದ ಹಾಡುಗಳು ಇವೆ. ಆತ ಹಾಡಿದ ಎಲ್ಲ ಹಾಡುಗಳೂ ಸೂಪರ್ ಹಿಟ್ ಆಗಿವೆ.

ಸ್ಟುಡಿಯೋ ಹಾಡುಗಳು ಮತ್ತು ಸ್ಟೇಜ್ ಕಾರ್ಯಕ್ರಮಗಳು

ಹಿನ್ನೆಲೆ ಹಾಡುಗಳು ಮತ್ತು ಆಲ್ಬಂ ಹಾಡುಗಳನ್ನು ಸ್ಟುಡಿಯೋ ಒಳಗೆ ಹಾಡುವ ಟ್ಯಾಲೆಂಟ್ ಒಂದೆಡೆ. ಸ್ಟೇಜ್ ಮೇಲೆ ಲಕ್ಷಾಂತರ ಮಂದಿ ಹುಚ್ಚು ಅಭಿಮಾನಿಗಳ ಮುಂದೆ ಗಿಟಾರ್ ಹಿಡಿದುಕೊಂಡು ಹಾಡುವ ಟ್ಯಾಲೆಂಟ್ ಇನ್ನೊಂದೆಡೆ. ಆರ್ಜಿತ್ ಎರಡೂ ಕಡೆಯಲ್ಲಿ ಗೆದ್ದಿದ್ದಾರೆ. ದೇಶ ವಿದೇಶಗಳ ನೂರಾರು ವೇದಿಕೆಗಳಲ್ಲಿ ಅವರ ಲೈವ್ ಸ್ಟೇಜ್ ಶೋಗಳಿಗೆ ಅಭಿಮಾನಿಗಳು ಕಿಕ್ಕಿರಿದು ಸೇರುತ್ತಾರೆ. ಆರ್ಜಿತ್ ಮತ್ತು ಶ್ರೇಯಾ ಘೋಷಾಲ್ ಸಂಗೀತದ ಶೋಗಳಿಗೆ ಇಂದು ಭಾರೀ ಡಿಮಾಂಡ್ ಇದೆ!

ಲೆಟ್ ದೇರ್ ಬಿ ಲೈಟ್ ಎಂಬ NGO ಸ್ಥಾಪನೆ ಮಾಡಿ ಆರ್ಜಿತ್ ತನ್ನ ಸಂಪಾದನೆಯ ಬಹು ದೊಡ್ಡ ಭಾಗವನ್ನು ಚಾರಿಟಿ ಉದ್ದೇಶಕ್ಕೆ ಖರ್ಚು ಮಾಡುತ್ತಿರುವುದು ನಿಜಕ್ಕೂ ಅಭಿನಂದನೀಯ. ಆರ್ಜಿತ್ ಇಂದು ಭಾರತದ ನಂಬರ್ ಒನ್ ಹಿನ್ನೆಲೆ ಗಾಯಕ ಎಂದು ಸೋನು ನಿಗಮ್ ಸಾಕಷ್ಟು ವೇದಿಕೆಯಲ್ಲಿ ಹೇಳಿದ್ದಾರೆ. ಅವರಿಬ್ಬರೂ ಒಳ್ಳೆಯ ಗೆಳೆಯರು ಎಂದು ಕೂಡ ಸಾಬೀತಾಗಿದೆ.

ಅಂತಹ ಅನನ್ಯ ಪ್ರತಿಭೆ, ಜೇನು ದನಿಯ ಸರದಾರ ಅರ್ಜಿತ್ ಸಿಂಗ್ ಅವರಿಗೆ ಇಂದು ನೆನಪಲ್ಲಿ ಹುಟ್ಟುಹಬ್ಬದ ಶುಭಾಶಯ ಹೇಳಿ ಆಯ್ತಾ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಿಶ್ವವಿಜೇತನಾಗುವ ತವಕದಲ್ಲಿರುವ ಚೆಸ್ ಆಟಗಾರ ದೊಮ್ಮರಾಜು ಗುಕೇಶ್

Continue Reading

ಪ್ರಮುಖ ಸುದ್ದಿ

Rajkumar Birthday: ಸೋತಾಗ ಧೈರ್ಯ ತುಂಬುವ ಅಣ್ಣಾವ್ರ 7 ಹಾಡುಗಳು!

ವರನಟ, ಗಾನಗಂಧರ್ವ ಡಾ.ರಾಜ್‌ಕುಮಾರ್‌ ಅವರು ಕನ್ನಡಿಗರಿಗೆ ಸದಾ ಕಾಲ ಸ್ಫೂರ್ತಿ ನೀಡುವಂಥ ನೂರಾರು ಹಾಡುಗಳನ್ನು ಕೊಟ್ಟು ಹೋಗಿದ್ದಾರೆ. ಅವುಗಳಲ್ಲಿ ಬೆಸ್ಟ್‌ ಅನಿಸುವ 7 ಹಾಡುಗಳು ಇಲ್ಲಿವೆ. ಇದು ಡಾ.ರಾಜ್‌ ಬರ್ತ್‌ಡೇ ವಿಶೇಷ.

VISTARANEWS.COM


on

Koo

1. ಯಾರೇ ಕೂಗಾಡಲಿ ಊರೇ ಹೋರಾಡಲಿ

ʼಸಂಪತ್ತಿಗೆ ಸವಾಲ್‌ʼ ಚಿತ್ರದಲ್ಲಿ ಅಣ್ಣಾವ್ರು ಎಮ್ಮೆಯ ಮೇಲೆ ಕುಳಿತು ಹಾಡುತ್ತಾ ಸಾಗುವ ಈ ದೃಶ್ಯ ಕನ್ನಡ ಚಲನಚಿತ್ರ ರಂಗದ ಐಕಾನಿಕ್‌ ಅನಿಸುವ ಹಾಡು. ʼಬಿಸಿಲು ಮಳೆಗೆ ಬಿರುಗಾಳಿ ಚಳಿಗೆ ನೀ ಅಳುಕದೆ ಮುಂದೆ ಸಾಗುವೆʼ ಎಂದು ಎಮ್ಮೆಯ ನೆಮ್ಮದಿಯ ಸೂತ್ರವನ್ನು ಮನುಷ್ಯನಿಗೆ ಅನ್ವಯಿಸಿ, ಪ್ರಾಣಿಗಳ ಗುಣಗಳಿಂದ ಮನುಷ್ಯರು ಕಲಿಯಬೇಕಾದ್ದನ್ನು ಉದಾಹರಿಸಿ ಹಾಡಿದ್ದಾರೆ.

2. ನಗುತನಗುತ ಬಾಳು ನೀನು ನೂರು ವರುಷ
ʼಪರಶುರಾಮ್‌ʼ ಫಿಲಂನ ʼನಗುತಾ ನಗುತಾ ಬಾಳು ನೀನು ನೂರು ವರುಷʼ ಹಾಡು ಕನ್ನಡದ ಎರಡು ಬೆಲೆಬಾಳುವ ಮುತ್ತುಗಳನ್ನು ಒಳಗೊಂಡ ಮಾಣಿಕ್ಯ. ಇದರಲ್ಲಿ ವರನಟ ರಾಜ್‌ ಅವರು ಮುದ್ದು ಬಾಲನಟ ಪುನೀತ್‌ ರಾಜ್‌ಕುಮಾರ್‌ಗೆ ಬರ್ತ್‌ಡೇ ಕೇಕ್‌ ತಿನ್ನಿಸುತ್ತಾ ಹಾಡುತ್ತಾರೆ. ʼದೇವರು ತಂದ ಸೃಷ್ಟಿಯ ಅಂದ ಎಲ್ಲರು ನಗಲೆಂದೇʼ ಎಂಬಂಥ ಅರ್ಥಪೂರ್ಣವಾದ ಸಾಲುಗಳನ್ನು ಇದು ಒಳಗೊಂಡಿದೆ.

3. ಬಾನಿಗೊಂದು ಎಲ್ಲೆ ಎಲ್ಲಿದೆ
ʼಬೆಳದಿಂಗಳಾಗಿ ಬಾʼ ಚಲನಚಿತ್ರದಲ್ಲಿ ನಾಯಕಿ ಆರತಿ ಅವರಿಗೆ ಡಾ.ರಾಜ್‌ ಬುದ್ಧಿವಾದ ಹೇಳುವ ಹಾಡು ಇದು. ಚಿಕ್ಕಮಗಳೂರಿನ ಹಸಿರು ಸಿರಿಯ ನಡುವೆ ಕಾರು ಚಲಾಯಿಸುತ್ತಾ ʼಆಸೆಯೆಂಬ ಬಿಸಿಲು ಕುದುರೆ ಏಕೆ ಏರುವೆʼ ʼಹೂವೂ ಮುಳ್ಳೂ ಎರಡೂ ಉಂಟು ನಮ್ಮ ಬಾಳಲಿʼ ಎಂದು ಹಾಡುತ್ತಾ ಸಾಗುವ ಈ ದೃಶ್ಯ ಮನಮೋಹಕವಾಗಿದೆ.

4. ಬಾಳುವಂಥ ಹೂವೆ ಬಾಡುವಾಸೆ ಏಕೆ?
ʼಆಕಸ್ಮಿಕʼ ಚಲನಚಿತ್ರದಲ್ಲಿ ಅಣ್ಣಾವ್ರು ನಾಯಕಿ ಮಾಧವಿಗೆ ಬುದ್ಧಿ ಹೇಳುವ ಹಾಡು ʼಬಾಳುವಂಥ ಹೂವೆ ಬಾಡುವಾಸೆ ಏಕೆ?ʼ ʼಯಾರಿಗಿಲ್ಲ ನೋವು, ಯಾರಿಗಿಲ್ಲ ಸಾವು, ವ್ಯರ್ಥವ್ಯಸನದಿಂದ ಸಿಹಿಯು ಕೂಡ ಬೇವುʼ ʼಮೂಕ ಮುಗ್ಧ ದೇಹವ ಹಿಂಸಿಸುವುದು ಹೇಯʼ ʼಸಣ್ಣ ಬಿರುಕು ಸಾಲದೇ ತುಂಬು ದೋಣಿ ತಳ ಸೇರಲು?ʼ ಎಂಬಂಥ ಸಾರ್ವಕಾಲಿಕವಾದ ನೀತಿಮುತ್ತುಗಳನ್ನು ಹೇಳುತ್ತಾರೆ.

5. ಜಗವೇ ಒಂದು ರಣರಂಗ ಧೈರ್ಯ ಇರಲಿ ನಿನ್ನ ಸಂಗ
ಶಿವರಾಜ್‌ ಕುಮಾರ್‌ ಅವರು ನಟಿಸಿರುವ ʼರಣರಂಗʼ ಚಿತ್ರಕ್ಕೆ ಡಾ.ರಾಜ್‌ ಅವರು ಹಾಡಿರುವ ಹಾಡು ಇದು. ಇದರ ಬೀಟ್‌ ಹಾಗೂ ಒಕ್ಕಣೆಗಳು ಎಂಥವನನ್ನೂ ಹೋರಾಡಲು ಪ್ರಚೋದಿಸುವಂತಿವೆ. ಹಿಡಿಯೋ ಆತ್ಮಬಲದಸ್ತ್ರ, ಅದುವೇ ಜಯದ ಮಹಾ ಮಂತ್ರ, ನಿನ್ನ ದಾರಿಯಲ್ಲಿ ಎಲ್ಲೂ ಸೋಲೇ ಇಲ್ಲ, ಬಾಳ ಯುದ್ಧದಲ್ಲಿ ನಿನ್ನ ಗೆಲ್ಲೋರಿಲ್ಲ, ಛಲವೇ ಬಲವು ಮುಂದೆ ನುಗ್ಗಿ ನುಗ್ಗಿ ಬಾʼ ಎಂದು ಧೈರ್ಯ ತುಂಬುತ್ತಾರೆ ಇದರಲ್ಲಿ.

6. ನಾನಿರುವುದೆ ನಿಮಗಾಗಿ ನಾಡಿರುವುದೆ ನಮಗಾಗಿ
ಕನ್ನಡ ನಾಡಿನ ಮೊದಲ ಸಾಮ್ರಾಟ ಕದಂಬರ ಮಯೂರವರ್ಮನಾಗಿ ʼಮಯೂರʼ ಫಿಲಂನಲ್ಲಿ ನಟಿಸಿದ ರಾಜ್‌, ʼನಾನಿರುವುದೆ ನಿಮಗಾಗಿ, ನಾಡಿರುವುದೆ ನಮಗಾಗಿ, ಕಣ್ಣೀರೇಕೆ, ಬಿಸಿಯುಸಿರೇಕೆ, ಬಾಳುವಿರೆಲ್ಲ ಹಾಯಾಗಿʼ, “ಒಂದೇ ನಾಡಿನ ಮಕ್ಕಳು ನಾವು ಸೋದರರಂತೆ ನಾವೆಲ್ಲಾʼʼ ಎಂದು ಧೈರ್ಯ ಹೇಳಿದ್ದು ಒಂದು ಕಾಲದ ನಾಡಿನ ಜನತೆಯಲ್ಲಿ ಧೈರ್ಯವನ್ನು ತುಂಬುವ ನಾಯಕ ಗುಣವನ್ನು ಸ್ಪಷ್ಟವಾಗಿ ಚಿತ್ರಿಸಿತು.

7. ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು
ʼಜೀವನಚೈತ್ರʼ ಚಿತ್ರದಲ್ಲಿ ಹಳದಿ ಪೇಟ ಕಟ್ಟಿಕೊಂಡು ಜಟಕಾ ಬಂಡಿಯನ್ನು ಹೊಡೆಯುತ್ತಾ ಅಣ್ಣಾವ್ರು ಸಾಗುವ ಈ ಹಾಡು ಐತಿಹಾಸಿಕ, ಕನ್ನಡ ಹೋರಾಟಕ್ಕೆ ಸದಾ ಸ್ಫೂರ್ತಿ ತುಂಬುವ ಒಂದು ಹಾಡು. ʼʼಕಲಿಯೋಕೆ ಕೋಟಿ ಭಾಷೆ, ಆಡೋಕೆ ಒಂದೇ ಭಾಷೆ, ಕನ್ನಡ, ಕಸ್ತೂರಿ ಕನ್ನಡʼ ಎಂದು ಅವರು ಸಾರಿದ್ದು ಇಂದೂ ಮುಂದೂ ಕನ್ನಡ ನಾಡಿನ ಆತ್ಮಗೀತೆಯಂತೆ ಇದ್ದೇ ಇರುತ್ತದೆ, ನಮಗೆ ಸ್ಫೂರ್ತಿ ತುಂಬುವಂತಿದೆ.

ಇದನ್ನೂ ಓದಿ: Dr.Rajkumar Memory: ಪ್ಯಾನ್‌ ಇಂಡಿಯಾ ಫಿಲಂಗಳ ಕಾಲದಲ್ಲಿ ಅಣ್ಣಾವ್ರ ಚಿತ್ರ ನೋಡೋಕೆ 8 ಕಾರಣಗಳು

Continue Reading

ಅಂಕಣ

ದಶಮುಖ ಅಂಕಣ: ಮರುಳಿಗೆ ಅರಳುವ ಅರ್ಥಗಳನ್ನು ಹುಡುಕುತ್ತಾ…

ದಶಮುಖ ಅಂಕಣ: ಹುಚ್ಚು ಎನ್ನುವುದನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಇತರರ ಖುಷಿಯನ್ನು ಬಯಸುವವರು ಹುಚ್ಚರೋ ಅಥವಾ ಇತರರ ಖರ್ಚಲ್ಲಿ ಖುಷಿ ಪಡುವವರೋ? ಇದಕ್ಕೆಲ್ಲ ಸಂವೇದನೆಗಳಿಗೆ ತಕ್ಕಂತೆ ಉತ್ತರ ಹುಡುಕುವುದೋ ಕಾಲಕ್ಕೆ ತಕ್ಕಂತೆಯೋ?

VISTARANEWS.COM


on

dashamukha column madness
Koo

ಈ ಅಂಕಣವನ್ನು ಇಲ್ಲಿ ಆಲಿಸಿ:

dashamukha column logo

ದಶಮುಖ ಅಂಕಣ: ʻಹುಚ್ಚುʼ (madness) ಎಂಬ ಶಬ್ದ ಕಿವಿಗೆ ಬೀಳುತ್ತಿದ್ದಂತೆ ನೆನಪಾಗುವ ಚಿತ್ರಗಳ ಬಗ್ಗೆ ಹೆಚ್ಚು ಹೇಳುವುದು ಬೇಡವಲ್ಲ. ಯಾವುದೇ ದೇಶ, ಭಾಷೆ, ಸಂಸ್ಕೃತಿಗಳಲ್ಲಿ ನೋಡಿದರೂ ʻಹುಚ್ಚಿಗೆʼ ಹೆಚ್ಚಿಗೆ ಅರ್ಥಗಳಿಲ್ಲ… ಅದೊಂದೇ ಅರ್ಥ! ಹಾಗಾಗಿಯೇ ʻಅದೊಂಥರಾ ಹುಚ್ಚು, ಅವನಿಗೊಂದು ಹುಚ್ಚುʼ ಎಂಬಿತ್ಯಾದಿ ಮಾತುಗಳ ಬೆನ್ನಿಗೇ ʻಅಲ್ಲೇನೋ ಒಂದು ಅತಿರೇಕವಿದೆʼ ಎಂಬ ಭಾವ ಬಂದುಬಿಡುತ್ತದೆ. ಅದಕ್ಕಾಗಿಯೇ ʻಹುಚ್ಚು ಸಾಹಸ, ಹುಚ್ಚು ಪ್ರೀತಿʼ ಮುಂತಾದ ಪ್ರಯೋಗಗಳನ್ನು ಮಾಡುತ್ತಾ, ಬೈಯ್ಯುವುದಕ್ಕೆ, ವ್ಯಂಗ್ಯಕ್ಕೆ, ಕುಹಕಕ್ಕೆ, ಟೀಕೆಗೆ, ತಮಾಷೆಗೆ… ಅಥವಾ ಇಂಥದ್ದೇ ಋಣಾತ್ಮಕ ಎನ್ನಬಹುದಾದ ಛಾಯೆಗಳಲ್ಲಿ ಈ ಶಬ್ದವನ್ನು ಬಳಸುತ್ತೇವೆ. ನಿಜಕ್ಕೂ ಈ ಶಬ್ದವನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಬದುಕಿನಲ್ಲಿ ಪ್ರೀತಿ, ಸೌಖ್ಯ, ಖುಷಿಯನ್ನು ಅರಸುವವರಿಗೂ ಇದನ್ನು ಬಳಸಬಹುದೇ? ಸಾಹಿತ್ಯ-ಸಿನೆಮಾಗಳಲ್ಲಿ ಕಾಣುವ ಪ್ರೀತಿ, ಪ್ರೇಮಗಳಿಗೆ ಹುಚ್ಚನ್ನು ಪರ್ಯಾಯವಾಗಿ ಬಳಸುವುದು ಹೊಸದೇನಲ್ಲ. ಆದರೆ ಇಲ್ಲೀಗ ಅಂಥ ಹರೆಯದ ಪ್ರೀತಿಯ ಬಗ್ಗೆಯಲ್ಲ ಹೇಳುತ್ತಿರುವುದು. ಇತರರ ಸೌಖ್ಯದಲ್ಲಿ ತಮ್ಮ ಸ್ವಾಸ್ಥ್ಯವನ್ನು ಅರಸುವವರಿಗೂ ಈ ಶಬ್ದ ಸಲ್ಲುತ್ತದೆಯೇ?

ಇತ್ತೀಚೆಗೆ ಭೇಟಿ ಮಾಡಿದ ಒಂದಿಬ್ಬರು ವ್ಯಕ್ತಿಗಳು ಇಂಥದ್ದೊಂದು ಮಂಥನವನ್ನು ಹುಟ್ಟು ಹಾಕಿದ್ದು ಹೌದು. ಎಲ್ಲರಿಗಿಂತ ಭಿನ್ನವಾದ ಬದುಕನ್ನು ಆಯ್ದುಕೊಳ್ಳುವವರು, ತಮ್ಮ ಜೀವನದ ರೀತಿ-ನೀತಿಗಳನ್ನು ಅಥವಾ ಧ್ಯೇಯ-ಆದರ್ಶಗಳನ್ನು ʻಹುಚ್ಚುʼ ಎನ್ನುವಷ್ಟು ಪ್ರೀತಿಸದಿದ್ದರೆ, ಖುಷಿಯಿಂದ ಬದುಕುವುದು ಸಾಧ್ಯವೇ? ಎಷ್ಟೇ ಸುಭಿಕ್ಷವಾದ ಬದುಕನ್ನೂ ಹಳಿಯುತ್ತಲೇ ಬದುಕುವ ಇಂದಿನ ದಿನಗಳಲ್ಲಿ, ಇರುವ ಬದುಕಲ್ಲಿ ಸುಭಿಕ್ಷವನ್ನು ಸೃಷ್ಟಿಸುವ ಅವರನ್ನು ಹುಚ್ಚರೆಂದರೆ ಅತಿರೇಕವಾದೀತೇ? ಬದುಕನ್ನು ಕೊರಗಿನಲ್ಲೇ ಕಳೆಯುವುದು ಹುಚ್ಚೋ ಅಥವಾ ಇತರರ ಕೊರಗನ್ನು ಕಳೆಯುವುದು ಹುಚ್ಚೋ?

ಹೀಗೆನ್ನುವಾಗ ಅನಂತ್‌ ಸರ್‌ ನೆನಪಾಗುತ್ತಾರೆ. ಬದುಕಲ್ಲಿ ವಿದ್ಯೆ ದೊರೆಯದ ಮಕ್ಕಳನ್ನು ಶಿಕ್ಷಣದ ಹಾದಿಗೆ ಹಚ್ಚಿ, ನೆಲೆ ಕಾಣಿಸುವ ಅವರ ಸಾಹಸವನ್ನು ವರ್ಣಿಸುವುದಕ್ಕೆ ಬೇರೆ ಪದಗಳಿಗೆ ಸಾಧ್ಯವಿಲ್ಲ. ಮನೆ ಇದ್ದೂ ಇಲ್ಲದಂತಾದವರು, ಮನೆಯೇ ಇಲ್ಲದವರು, ಪಾಲಕರು ಇಲ್ಲದವರು, ಪಾಲಕರು ಯಾಕಾದರೂ ಇದ್ದಾರೋ ಎನ್ನುವಂಥ ಹಲವು ನಮೂನೆಯ ವಾತಾವರಣದಿಂದ ಬಂದ ಮಕ್ಕಳಿಗೆ ಊಟ, ವಸತಿಯ ಜೊತೆಗೆ ವಿದ್ಯೆ ನೀಡುವುದನ್ನೇ ಧ್ಯೇಯವಾಗಿಸಿಕೊಂಡವರು. ಹತ್ತು-ಹನ್ನೆರಡು ವರ್ಷಗಳವರೆಗೆ ಶಾಲೆಯ ಮುಖವನ್ನೂ ಕಾಣದವರು, ಎಂದೊ ಶಾಲೆಗೆ ಹೋಗಿ ನಡುವಲ್ಲೇ ಕಳೆದುಹೋದವರು- ಇಂಥ ನೂರಾರು ಮುಖಗಳಲ್ಲಿ ನಗು ಅರಳಿಸುವುದಕ್ಕೆ ಇರಬೇಕಾದ ಅದಮ್ಯ ಪ್ರೀತಿಯೂ ಒಂದು ಬಗೆಯ ಹುಚ್ಚೇ ತಾನೇ? ಹಾಗಿಲ್ಲದಿದ್ದರೆ, ಇಂಥ ಸಾಹಸಿಗಳು ಲೋಕದಲ್ಲಿ ನಮಗೆ ವಿರಳವಾಗಿ ಕಾಣುವುದೇಕೆ?

ಆರೇಳು ವರ್ಷದವರನ್ನು ಒಂದನೇ ಕ್ಲಾಸಿಗೆ ಕೂರಿಸುವಲ್ಲಿ ಅಷ್ಟೇನು ಸಮಸ್ಯೆಯಾಗಲಿಕ್ಕಿಲ್ಲ. ವರ್ಷದ ಆಧಾರದ ಮೇಲೆಯೇ ತಾನೆ ನಮ್ಮ ಶಿಕ್ಷಣ ವ್ಯವಸ್ಥೆ ರೂಪುಗೊಂಡಿರುವುದು. ಆದರೆ ಹದಿಹರೆಯಕ್ಕೆ ಕಾಲಿಟ್ಟವರು ಇನ್ನೂ ಶಾಲೆಯ ಮೆಟ್ಟಿಲನ್ನೇ ಹತ್ತದಿರುವಾಗ ಅವರನ್ನೂ ಒಂದನೇ ಕ್ಲಾಸಿಗೆ ಕೂರಿಸುವುದು ಹೇಗೆ? ʻಹಾಗಾಗಿಯೇ ದೈಹಿಕ ವಯಸ್ಸಿನ ಆಧಾರದ ಮೇಲಲ್ಲದೆ, ಮಕ್ಕಳ ಬೌದ್ಧಿಕ ವಯಸ್ಸಿಗೆ ಅನುಗುಣವಾಗಿ ಕಲಿಯುವ ಗುಂಪುಗಳನ್ನಾಗಿ ವಿಂಗಡಿಸಿಕೊಳ್ಳುತ್ತೇವೆ. ಹಾಗೆಯೇ ಅವರ ಕಲಿಕೆ ಮುಂದುವರಿಯುತ್ತದೆʼ ಎನ್ನುವುದು ಅನಂತ್‌ ಸರ್‌ ಹೇಳುವ ಮಾತು. ದೂರದ ಅಸ್ಸಾಂ, ಬಿಹಾರಗಳಿಂದ ಬಂದ ಮಕ್ಕಳಿಗೆ ಶಾಲೆಯ ಕಲ್ಪನೆಯೂ ಇಲ್ಲದಿರುವಾದ, ಇವರ ಭಾಷೆ ಅವರಿಗೆ-ಅವರ ಭಾಷೆ ಇವರಿಗೆ ತಿಳಿಯದಿರುವಾಗ, ವಿದ್ಯೆಯ ಶ್ರೀಕಾರ ಆಗುವುದು ಹೇಗೆ? ʻಇದೊಂಥರಾ ಹುಚ್ಚು. ಇದೂ ಆಗತ್ತೆʼ ಎನ್ನುವಾಗಿನ ಇವರ ಮುಖದ ನಗುವನ್ನು ಏನೆಂದು ಅರ್ಥ ಮಾಡಿಕೊಳ್ಳುವುದು?

ಈ ಚೌಕಟ್ಟಿನಾಚೆಯ ಮನೆಯಲ್ಲಿ ಕಲಿತು ಹೊರಬಿದ್ದು, ದುಡಿದು ಸಂಪಾದಿಸಿ ಬದುಕುತ್ತಿರುವ ತಮ್ಮ ಮಕ್ಕಳ ಬಗ್ಗೆ ಹೇಳುವಾಗ ಅವರ ಮುಖದ ನಗುವಿಗಿರುವ ಅರ್ಥದ ಅರಿವಾಗುತ್ತದೆ ನಮಗೆ. ಹುಚ್ಚಿಗೂ ಎಷ್ಟೊಂದು ಸುಂದರ, ಸಲ್ಲಕ್ಷಣಗಳಿವೆ ಎಂಬುದನ್ನು ತಿಳಿಯುವುದಕ್ಕೆ ಅದೊಂದು ನಗು ಸಾಕು. ಕೊರಗಿ ಕಳೆಯುವುದಕ್ಕಿಂತ, ಹೀಗೆ ಕೊರಗು ಕಳೆಯುವ ಹುಚ್ಚು ಒಳ್ಳೆಯದಲ್ಲವೇ? ನಮಗಿರುವ ಹುಚ್ಚು ಯಾವುದು ಎಂದು ಎಂದಾದರೂ ಯೋಚಿಸಿದ್ದೇವೆಯೇ?

ಈ ಎಲ್ಲ ಮಾತಿನ ನಡುವೆ ಪ್ರದೀಪ ಎನ್ನುವ ಆ ವ್ಯಕ್ತಿ ನೆನಪಾಗುತ್ತಾನೆ. ಕಪ್ಪು ಬಣ್ಣದ ಸಾಧಾರಣ ಮೈಕಟ್ಟಿನ ಆತ ಪುಟ್ಟ ದ್ವೀಪ ರಾಷ್ಟ್ರವೊಂದರ ನಿವಾಸಿ. ಅರಳಿದಂತಿರುವ ಕನ್ನಡಿಗಣ್ಣು, ಅವನದ್ದೇ ಆದ ವಿಶಿಷ್ಟ ಲಯದ ಇಂಗ್ಲಿಷ್‌ ಭಾಷೆಯ ಆತ ನಮಗೆ ಪರಿಚಯವಾಗಿದ್ದು ಪ್ರವಾಸವೊಂದರ ಭಾಗವಾಗಿ. ಅಲೆಯುವ ಹುಚ್ಚಿರುವ ಜನ ಲೋಕದಲ್ಲಿ ಎಷ್ಟೋ ಮಂದಿ ಇದ್ದಾರೆ. ಆದರೆ ಜೊತೆಗೆ ತಿರುಗಾಡುವವರ ಸೌಖ್ಯವೇ ತನಗೆ ಪ್ರೀತಿ ಎನ್ನುವವರೂ ಇದ್ದಾರೆಂಬುದು ತಿಳಿದಿದ್ದು ಆಗಲೇ. ಈತ ವೃತ್ತಿಯಲ್ಲಿ ಪ್ರವಾಸಿ ಗೈಡ್‌. ನಮ್ಮ ಯಾವುದೇ ಪ್ರವಾಸಿ ತಾಣಗಳಿಗೆ ಹೋದರೆ ಅಲ್ಲಿ ʻಗೈಡ್‌ ಬೇಕೆ?ʼ ಎಂದು ಮುತ್ತಿಗೆ ಹಾಕುವ ಗುಂಪಿನಲ್ಲಿ ಆತನೂ ಇರಬಹುದಾಗಿದ್ದವ. ಆದರೆ ತಮಗೆ ತಿಳಿದಷ್ಟನ್ನು ತೋಚಿದಂತೆ ಒದರಿ, ಬಂದವರಿಂದ ದುಡ್ಡು ಕಿತ್ತು ಕಳಿಸುವ ಗೈಡ್‌ಗಳ ಸಾಲಿನಿಂದ ಗಾವುದಗಟ್ಟಲೆ ದೂರದಲ್ಲಿ ಇರುವವ ಈತ.

ʻತಿರುಗಾಡಿದಷ್ಟೇ, ತಿರುಗಾಡಿಸುವುದೂ ನನಗಿಷ್ಟʼ ಎನ್ನುವ ಈತ, ತನ್ನ ಕಾರು ಓಡುವ ಪ್ರತಿಯೊಂದು ರಸ್ತೆಯ ಪರಿಚಯವನ್ನೂ ಮಾಡಿಕೊಡಬಲ್ಲ. ಯಾವ ಊರಿನ ಮಳೆ-ಬೆಳೆ ಹೇಗೆ ಎಂಬುದರಿಂದ ಹಿಡಿದು ಅಲ್ಲಿನ ಡೆಮಗ್ರಾಫಿಕ್‌ ವಿಶ್ಲೇಷಣೆಯನ್ನೂ ನೀಡಬಲ್ಲ. ʻಈ ಭಾಗದಲ್ಲಿ ತುಂಬಾ ಎಮ್ಮೆ ಸಾಕುತ್ತಾರೆ. ಮಣ್ಣಿನ ಗಡಿಗೆಯಲ್ಲಿ ಹಾಲು ಹೆಪ್ಪಾಕಿ, ಮೊಸರು ಮಾರುತ್ತಾರೆ. ಅದನ್ನೊಮ್ಮೆ ತಿನ್ನದಿದ್ದರೆ ಈ ರಸ್ತೆಯಲ್ಲಿ ಪ್ರಯಾಣ ಮಾಡಿದ್ದೇ ವ್ಯರ್ಥʼ ಎಂದು ಸರಕ್ಕನೆ ಗಾಡಿ ನಿಲ್ಲಿಸಿ, ಎರಡು ಪುಟ್ಟ ಗಡಿಗೆಗಳನ್ನು ಹಿಡಿದು ತರುತ್ತಾನೆ. ʻಇಷ್ಟು ದೂರ ಬಂದವರು ಈ ಸಿಹಿ ತಿನ್ನದಿದ್ದರೆ, ನಿಮ್ಮ ತಿರುಗಾಟವೇ ಅಪೂರ್ಣʼ ಎನ್ನುತ್ತಾ ಯಾವುದೋ ಸಿಹಿ ಎದುರಿಗಿಡುತ್ತಾನೆ. ʻಇಲ್ಲಿ ಭರಪೂರ ತರಕಾರಿ ಬೆಳೆಯುತ್ತಾರೆ. ಇದರಲ್ಲೊಂದು ಸಲಾಡ್‌ ಮಾಡುತ್ತೇನೆ ನೋಡಿ, ತಿನ್ನುವುದಕ್ಕೆ ಪುಣ್ಯ ಬೇಕುʼ ಎಂದು ಉಪಚಾರ ಮಾಡುತ್ತಾನೆ. ಇಂಥ ಯಾವುದನ್ನೂ ಮಾಡಬೇಕಾದ ಅಗತ್ಯ ಆತನಿಗಿಲ್ಲ. ನಮ್ಮ ಜಾಗಕ್ಕೆ ಕರೆದೊಯ್ದರೆ ಅವನ ಕೆಲಸ ಮುಗಿಯಿತು; ಅವನ ದುಡ್ಡು ಅವನ ಕೈ ಸೇರುತ್ತದೆ. ʻತಿರುಗಾಡುವುದು, ತಿರುಗಾಡಿಸುವುದು ನಂಗೊಂಥರಾ ಹುಚ್ಚು. ಹೊಸ ಜನರೊಂದಿಗೆ ನಂಟು ಬೆಸೆಯುವುದು, ಅವರನ್ನು ಖುಷಿಯಾಗಿಡುವುದು ನಂಗಿಷ್ಟʼ ಎನ್ನುತ್ತಾ ಹಿಂದಿ ನಟ ದೇವಾನಂದ್‌ ರೀತಿಯಲ್ಲಿ ನಗೆ ಬೀರುತ್ತಾನೆ.

ಇದನ್ನೂ ಓದಿ: ದಶಮುಖ ಅಂಕಣ: ಮೌನವೆಂಬ ಭಾವಸೇತು

ಗುರಿ ತಲುಪುವುದಕ್ಕಿಂತ ಖುಷಿ ನೀಡುವುದು ಗಮ್ಯದೆಡೆಗಿನ ದಾರಿಗಳಲ್ಲವೇ? ಯಾವುದೇ ದಾರಿಯಲ್ಲಿ ಎದುರಾಗುವ ಊರೊಂದರ ಹೆಸರಿನ ಹಿಂದಿನ ಗಮ್ಮತ್ತು ತಿಳಿಸುವುದು, ಯಾವುದೋ ದೇಶದಿಂದ ಬರುವ ಚಿತ್ರವಿಚಿತ್ರ ಅಲೆಮಾರಿಗಳ ಜಾಯಮಾನ ವಿಸ್ತರಿಸುವುದು- ಇವೆಲ್ಲ ತನ್ನ ಪ್ರಯಾಣಿಕರ ದಾರಿಯನ್ನು ಬೋರಾಗದಂತೆ ಕಳೆಯುವ ಮತ್ತು ಅವರೊಂದಿಗೆ ನಂಟು ಬೆಸೆಯುವ ಆತನ ಉದ್ದೇಶಕ್ಕೆ ಒದಗುವಂಥವು. ವಿಹಾರಕ್ಕೆ, ವಿರಾಮಕ್ಕೆ, ಅಧ್ಯಯನಕ್ಕೆ ಮುಂತಾದ ಹಲವು ಕಾರಣಗಳನ್ನು ಹೊತ್ತು ಬರುವ ಜನರ ಕಥೆಗಳು ಆತನ ಸಂಚಿಯಲ್ಲಿವೆ. ಎಲ್ಲರಿಗೂ ಅವರವರ ಉದ್ದೇಶ ಈಡೇರುವಂತೆ ಶ್ರಮಿಸುವುದು ತನಗೆ ಪ್ರಿಯವಾದ ಸಂಗತಿ ಎನ್ನುವ ಇಂಥವರು ಜೊತೆಗಿದ್ದರೆ, ಅಲ್ಲಾವುದ್ದೀನನ ಮಾಂತ್ರಿಕ ಚಾಪೆಯ ಮೇಲೆ ತೇಲಿದಂತೆ ದಾರಿ ಸಾಗುತ್ತದೆ. ಇಂಥವರನ್ನು ನೋಡಿದಾಗ, ಇನ್ನೊಬ್ಬರ ಸೌಖ್ಯದಲ್ಲಿ ತಮ್ಮ ಸ್ವಾಸ್ಥ್ಯವನ್ನು ಅರಸುವ ಸ್ವಭಾವದ ಬಗ್ಗೆ ಬೇರೆ ಶಬ್ದಗಳು ನೆನಪಾಗುತ್ತಿಲ್ಲ.

ಹಣ, ಸಂಪತ್ತು, ಖ್ಯಾತಿ, ಅಧಿಕಾರಗಳ ಹುಚ್ಚು ಅಂಟಿಸಿಕೊಂಡವರು ನಮ್ಮೆದುರಿಗೆ ಮೆರವಣಿಗೆ ಹೊರಟಿದ್ದಾರೆ ಈಗ. ಚುನಾವಣೆಯ ಕಣದಲ್ಲಿಳಿದು ಅಧಿಕಾರ ದಕ್ಕಿಸಿಕೊಳ್ಳಲು, ದಕ್ಕದಿದ್ದರೆ ಯಾವ ಮಟ್ಟಕ್ಕೂ ಇಳಿಯುವಷ್ಟು ಹುಚ್ಚರಾಗಿದ್ದಾರೆ ಇಂದು. ಯಾರಿಗಾಗಿ ತಾವು ಆಯ್ಕೆಯಾಗುತ್ತಿದ್ದೇವೆಯೋ ಅವರ ಸೌಖ್ಯವನ್ನು ಗಮನಿಸುವುದೇ ಮರುಳು ಎನಿಸುತ್ತಿದೆ ಅಭ್ಯರ್ಥಿಗಳಿಗೆ. ಇಂಥವುಗಳನ್ನು ನೋಡಿದಾಗ ಮತ್ತದೇ ಪ್ರಶ್ನೆಗಳು ಮೂಡುತ್ತವೆ. ಹುಚ್ಚು ಎನ್ನುವುದನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಇತರರ ಖುಷಿಯನ್ನು ಬಯಸುವವರು ಹುಚ್ಚರೋ ಅಥವಾ ಇತರರ ಖರ್ಚಲ್ಲಿ ಖುಷಿ ಪಡುವವರೋ? ಇದಕ್ಕೆಲ್ಲ ಸಂವೇದನೆಗಳಿಗೆ ತಕ್ಕಂತೆ ಉತ್ತರ ಹುಡುಕುವುದೋ ಕಾಲಕ್ಕೆ ತಕ್ಕಂತೆಯೋ? ಹುಚ್ಚಿಗೆ ಹೆಚ್ಚಿಗೆ ಅರ್ಥಗಳಿಲ್ಲವೆಂದು ಈಗಲೂ ಹೇಳಬಹುದೇ?

ಇದನ್ನೂ ಓದಿ: ದಶಮುಖ ಅಂಕಣ: “ಮಧುಮಾಸವೆ ಅಡಿ ಇಡುತಿದೆ ಹೊಸವರ್ಷದ ಬೆಳಗೆ”

Continue Reading
Advertisement
Sahil Khan Arrested in Mahadev Betting App Case
ಬಾಲಿವುಡ್14 mins ago

Sahil Khan: ಬೆಟ್ಟಿಂಗ್​ ಅಕ್ರಮದಲ್ಲಿ ಭಾಗಿ; ನಟ ಸಾಹಿಲ್ ಖಾನ್ ಅರೆಸ್ಟ್‌

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ30 mins ago

Narendra Modi : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ದೇಶ40 mins ago

Usman Ghani: ಪ್ರಧಾನಿ ಮೋದಿಯನ್ನು ಟೀಕಿಸಿದ್ದ ಬಿಜೆಪಿ ಉಚ್ಛಾಟಿತ ನಾಯಕ ಅರೆಸ್ಟ್‌

Car Accident
ಪ್ರಮುಖ ಸುದ್ದಿ42 mins ago

Car Accident : ಯಮವೇಗದಲ್ಲಿ ಬಂದ ಇನೋವಾ ಕಾರು ಪಲ್ಟಿ, ಯುವತಿ ಸಾವು

Manvita Kamath Marriage Details Future Husband Arun
ಸ್ಯಾಂಡಲ್ ವುಡ್57 mins ago

Manvita Kamath: ‘ಟಗರು ಪುಟ್ಟಿʼ ಮಾನ್ವಿತಾದ್ದು ಲವ್ ಮ್ಯಾರೇಜ್? ಕೊನೆಗೂ ಸ್ಪಷ್ಟನೆ ಕೊಟ್ಟ ನಟಿ!

state JDS secretary R A Chabusab statement In Ripponpet
ಶಿವಮೊಗ್ಗ58 mins ago

Lok Sabha Election 2024: ಅತಿ ಹೆಚ್ಚು ಮತಗಳ ಅಂತರದಿಂದ ಬಿ.ವೈ.ರಾಘವೇಂದ್ರ ಗೆಲುವು: ಆರ್.ಎ. ಚಾಬುಸಾಬ್

Narendra Modi
ಪ್ರಮುಖ ಸುದ್ದಿ1 hour ago

Narendra Modi : ಪ್ರಧಾನಿ ವಿಮಾನ ಹಾರಾಟ ಹಿನ್ನೆಲೆ; ಸಿಎಂ ವಿಮಾನಕ್ಕೆ ಬೆಳಗಾವಿಯಲ್ಲಿ ಅನುಮತಿ ನಿರಾಕರಣೆ

Lok Sabha Election 2024
ರಾಜಕೀಯ2 hours ago

Yogi Adityanath:”ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ಮುಸ್ಲಿಮರಿಗೆ ಬೀಫ್‌ ಸೇವನೆ ಹಕ್ಕು”- ಮತ್ತೆ ಗುಡುಗಿದ ಯೋಗಿ

Drinks for Summer
ಆರೋಗ್ಯ3 hours ago

Drinks for Summer: ಬೇಸಿಗೆಯಲ್ಲಿ ತಂಪಾಗಿರಬೇಕೆ? ಈ ಪೇಯಗಳನ್ನು ತಪ್ಪದೇ ಕುಡಿಯಿರಿ

Fire Accident
ಪ್ರಮುಖ ಸುದ್ದಿ3 hours ago

Fire Accident : ಬೆಂಗಳೂರು ನಗರ ವಲಯದಲ್ಲಿ ಅರಣ್ಯಕ್ಕೆ ಬೆಂಕಿ, ಭಾರೀ ಹಾನಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ30 mins ago

Narendra Modi : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ5 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202417 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ22 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ3 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

ಟ್ರೆಂಡಿಂಗ್‌