WTC Final 2023: ವಿಶ್ವ ಟೆಸ್ಟ್​ ಫೈನಲ್​ಗೆ ಯಶಸ್ವಿ ಜೈಸ್ವಾಲ್; ಗಾಯಕ್ವಾಡ್​ ಔಟ್​ - Vistara News

ಕ್ರಿಕೆಟ್

WTC Final 2023: ವಿಶ್ವ ಟೆಸ್ಟ್​ ಫೈನಲ್​ಗೆ ಯಶಸ್ವಿ ಜೈಸ್ವಾಲ್; ಗಾಯಕ್ವಾಡ್​ ಔಟ್​

ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯಕ್ಕೆ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದ ಋತುರಾಜ್​ ಗಾಯಕ್ವಾಡ್​ ಬದಲಿಗೆ ಯಶಸ್ವಿ ಜೈಸ್ವಾಲ್​ ಅವರನ್ನು ಆಯ್ಕೆ ಮಾಡಲಾಗಿದೆ.

VISTARANEWS.COM


on

yashasvi jaiswal join wtc final
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ಬಹುನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಈಗಾಗಲೇ ಭಾರತದ ಮೊದಲ ಬ್ಯಾಚ್​ ಲಂಡನ್​ ತಲುಪಿದ್ದು ಅಭ್ಯಾಸದಲ್ಲಿ ನಿರತವಾಗಿದೆ. ಈ ಮಧ್ಯೆ ಭಾರತ ತಂಡದಲ್ಲಿ ಮಹತ್ವದ ಬದಲಾವಣೆಯೊಂದನ್ನು ಮಾಡಲಾಗಿದೆ. ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದ ಋತುರಾಜ್​ ಗಾಯಕ್ವಾಡ್​ ಬದಲಿಗೆ ಇದೀಗ ಯಶಸ್ವಿ ಜೈಸ್ವಾಲ್​ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಹಿಂದೆ ಸ್ಟ್ಯಾಂಡ್‌ ಬೈ ಆಟಗಾರರಾಗಿ ಋತುರಾಜ್ ಗಾಯಕ್ವಾಡ್, ಮುಖೇಶ್ ಕುಮಾರ್, ಸೂರ್ಯಕುಮಾರ್ ಯಾದವ್ ಅವರು ಪ್ರಧಾನ ತಂಡದೊಂದಿಗೆ ಆಯ್ಕೆಯಾಗಿದ್ದರು. ಆದರೆ ಇದೀಗ ಗಾಯಕ್ವಾಡ್​ ಅವರು ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಹಿನ್ನಲೆ ಅವರು ಫೈನಲ್​ ಪಂದ್ಯದಿಂದ ಹಿಂದೆ ಸರಿದಿದ್ದಾರೆ. ಗಾಯಕ್ವಾಡ್​ ಅವರ ಮದುವೆ ಕಾರ್ಯಕ್ರಮ ಜೂನ್​ 2-3 ತಾರಿಕಿಗೆ ನಡೆಯಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ಈ ಪ್ರಶಸ್ತಿ ಸಮರ ಜೂನ್‌ 7 ರಿಂದ 11ರವರೆಗೆ ಲಂಡನ್​ನ ದಿ ಓವಲ್‌ ಮೈದಾನದಲ್ಲಿ ನಡೆಯಲಿದೆ.

ಗಾಯಕ್ವಾಡ್​ ಅವರು ಈ ಪಂದ್ಯದಿಂದ ಹಿಂದೆ ಸರಿದ ಕಾರಣ ಅವರ ಬದಲಿಗೆ ಮುಂಬೈ ರಣಜಿ ತಂಡದ ಯುವ ಎಡಗೈ ಆಟಗಾರ ಯಶಸ್ವಿ ಜೈಸ್ವಾಲ್​ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಾಗಿದೆ ಎಂದು ಬಿಸಿಸಿಐ ತಿಳಿಸಿದೆ. ಐಪಿಎಲ್​ನಲ್ಲಿ ಅಮೋಘ ಪ್ರದರ್ಶನ ತೋರಿದ ಜೈಸ್ವಾಲ್​ ಈ ಆವೃತ್ತಿಯಲ್ಲಿ ಉತ್ತಮ ಬ್ಯಾಟಿಂಗ್​ ಪ್ರದರ್ಶನದ ಜತೆಗೆ ಶತಕವನ್ನು ಬಾರಿಸಿ ಮಿಂಚಿದ್ದರು. ರಣಜಿ ಕ್ರಿಕೆಟ್​ನಲ್ಲಿಯೂ ಹಲವು ಶತಕ ಮತ್ತು ದ್ವಿಶತಕ ಬಾರಿಸಿ ಮಿಂಚಿದ್ದರು. ಇದು ಅವರಿಗೆ ಚೊಚ್ಚಲ ರಾಷ್ಟ್ರೀಯ ತಂಡದ ಕರೆಯಾಗಿದೆ.

ಇದನ್ನೂ ಓದಿ WTC Final 2023: ಲಂಡನ್​ನಲ್ಲಿ ಕಠಿಣ ಫೀಲ್ಡಿಂಗ್​ ಅಭ್ಯಾಸ ನಡೆಸಿದ ಟೀಮ್​ ಇಂಡಿಯಾ; ವಿಡಿಯೊ ವೈರಲ್​

ವಿರಾಟ್​ ಕೊಹ್ಲಿ, ಮೊಹಮ್ಮದ್‌ ಸಿರಾಜ್‌, ಇತರ ಐಪಿಎಲ್‌ ತಂಡಗಳ ಆಟಗಾರರಾದ ಆರ್‌. ಅಶ್ವಿ‌ನ್‌, ಅಕ್ಷರ್‌ ಟೇಲ್‌, ಶಾರ್ದೂಲ್ ಠಾಕೂರ್‌, ಉಮೇಶ್‌ ಯಾದವ್‌, ಜೈದೇವ್‌ ಉನಾದ್ಕತ್‌ ಮತ್ತು ಚೇತೇಶ್ವರ್​ ಪೂಜಾರ ಅವರು ಮೊದಲ ಬ್ಯಾಚ್​ನಲ್ಲಿ ಲಂಡನ್​ಗೆ ಆಗಮಿಸಿ ಅಭ್ಯಾಸ ನಡೆಸುತ್ತಿದ್ದಾರೆ. ಅಂತಿಮ ಬ್ಯಾಚ್​ನಲ್ಲಿ ನಾಯಕ ರೋಹಿತ್‌ ಶರ್ಮ, ರವೀಂದ್ರ ಜಡೇಜ, ಇಶಾನ್‌ ಕಿಶನ್‌, ಶುಭಮನ್‌ ಗಿಲ್‌, ಮೊಹಮ್ಮದ್‌ ಶಮಿ, ಕೆ.ಎಸ್‌. ಭರತ್‌ ಮತ್ತು ಅಜಿಂಕ್ಯ ರಹಾನೆ ಐಪಿಎಲ್​ ಫೈನಲ್​ ಮುಗಿದ ತಕ್ಷಣವೇ ಲಂಡನ್​ಗೆ ವಿಮಾನ ಏರಲಿದ್ದಾರೆ. ಇವರ ಜತೆಗೆ ಯಶಸ್ವಿ ಜೈಸ್ವಾಲ್​ ಕೂಡ ಇರಲಿದ್ದಾರೆ.

ಪರಿಷ್ಕೃತ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆ.ಎಸ್ ಭರತ್ (ವಿಕೆಟ್​ ಕೀಪರ್​), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯ್​ದೇವ್​ ಉನಾದ್ಕತ್, ಇಶಾನ್ ಕಿಶನ್ (ವಿಕೆಟ್​ ಕೀಪರ್​). ಸ್ಟ್ಯಾಂಡ್‌ ಬೈ ಆಟಗಾರರು: ಯಶಸ್ವಿ ಜೈಸ್ವಾಲ್​, ಮುಖೇಶ್ ಕುಮಾರ್, ಸೂರ್ಯಕುಮಾರ್ ಯಾದವ್.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Virat Kohli: ರೋಹಿತ್​ ಶರ್ಮ ರನ್​ ದಾಖಲೆ ಮುರಿದ ಕಿಂಗ್​ ಕೊಹ್ಲಿ

Virat Kohli: ವಿರಾಟ್​ ಕೊಹ್ಲಿ(Virat Kohli) ಐಪಿಎಲ್​ನಲ್ಲಿ(IPL 2024) ಒಂದೇ ತಾಣದಲ್ಲಿ ಅತ್ಯಧಿಕ ರನ್​ ಗಳಿಸಿದ ಆಟಗಾರ ಎಂದ ದಾಖಲೆ ಬರೆದಿದ್ದಾರೆ. ಈ ಮೂಲಕ ರೋಹಿತ್​ ಶರ್ಮ ದಾಖಲೆಯನ್ನು ಮುರಿದಿದ್ದಾರೆ.

VISTARANEWS.COM


on

Virat Kohli
Koo

ಬೆಂಗಳೂರು: ಆರ್​ಸಿಬಿ(RCB) ತಂಡದ ಸ್ಟಾರ್​ ಆಟಗಾರ ವಿರಾಟ್​ ಕೊಹ್ಲಿ(Virat Kohli) ಐಪಿಎಲ್​ನಲ್ಲಿ(IPL 2024) ಒಂದೇ ತಾಣದಲ್ಲಿ ಅತ್ಯಧಿಕ ರನ್​ ಗಳಿಸಿದ ಆಟಗಾರ ಎಂದ ದಾಖಲೆ ಬರೆದಿದ್ದಾರೆ. ಈ ಮೂಲಕ ರೋಹಿತ್​ ಶರ್ಮ ದಾಖಲೆಯನ್ನು ಮುರಿದಿದ್ದಾರೆ. ವಿರಾಟ್​ ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿ ಈ ಮೈಲುಗಲ್ಲು ನೆಟ್ಟರು.

ಚೆನ್ನೈ ವಿರುದ್ಧದ ಪಂದ್ಯದಲ್ಲಿ 3 ರನ್​ ಗಳಿಸುತ್ತಿದ್ದಂತೆ ಕೊಹ್ಲಿ ಅವರು ರೋಹಿತ್​ ದಾಖಲೆಯನ್ನು ಹಿಂದಿಕ್ಕಿದರು. ರೋಹಿತ್​ ವಾಂಖೆಡೆ ಸ್ಟೇಡಿಯಂನಲ್ಲಿ 2295 ರನ್​ ಬಾರಿಸಿದ್ದರು. ಇದೀಗ ಕೊಹ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 3005* ರನ್​ ಬಾರಿಸಿ ದಾಖಲೆಯನ್ನು ತಮ್ಮ ಹೆಸರಿಗೆ ಬರೆದಿದ್ದಾರೆ. ಎಬಿಡಿ ವಿಲಿಯರ್ಸ್​ ಚಿನ್ನಸ್ವಾಮಿಯಲ್ಲಿ 1960 ರನ್​ ಬಾರಿಸಿದ್ದಾರೆ.

ಮಳೆಯಿಂದ ಪಂದ್ಯ ಸ್ಥಗಿತ


ಹವಾಮಾನ ಇಲಾಖೆ ನೀಡಿದ ಎಚ್ಚರಿಕೆಯ ಪ್ರಕಾರ ಸದ್ಯ ಪಂದ್ಯ ಭಾರೀ ಮಳೆಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ಉತ್ತಮವಾಗು ಆಡುತ್ತಿದ್ದ ವೇಳೆ ಮಳೆ ಸುರಿದಿದೆ. ಸದ್ಯ ಆರ್​ಸಿಬಿ ವಿಕೆಟ್​ ನಷ್ಟವಿಲ್ಲದೆ 3 ಓವರ್​ಗೆ 31 ರನ್​ ಗಳಿಸಿ ಬ್ಯಾಟಿಂಗ್​ ಕಾಯ್ದುಕೊಂಡಿದೆ. ವಿರಾಟ್​ ಕೊಹ್ಲಿ(19) ಮತ್ತು ಫಾಫ್​ ಡುಪ್ಲೆಸಿಸ್​ (12) ರನ್​ ಗಳಿಸಿ ಕ್ರೀಸ್​ನಲ್ಲಿದ್ದಾರೆ.

ಎಷ್ಟೇ ಮಳೆಯಾದರೂ ಕೂಡ ಮಳೆ ನಿಂತ ಕೆಲವೇ ಕ್ಷಣದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ(M Chinnaswamy Stadium) ಪಂದ್ಯವನ್ನು ಆರಂಭಗೊಳ್ಳುವಂತೆ ಮಾಡುವ ವಿಶೇಷ ಸಬ್‌ ಏರ್‌ ಸಿಸ್ಟಮ್‌(SubAir facility) ತಂತ್ರಜ್ಞಾನ(SubAir facility Chinnaswamy)ವಿದೆ. ಸಬ್‌ ಏರ್‌ ಸಿಸ್ಟಮ್‌ ಅಳವಡಿಸಿಕೊಂಡ ವಿಶ್ವದ ಮೊದಲ ಕ್ರಿಕೆಟ್‌ ಕ್ರೀಡಾಂಗಣ ಎಂಬ ಖ್ಯಾತಿ ಚಿನ್ನಸ್ವಾಮಿ ಕ್ರೀಡಾಂಗಣದ್ದಾಗಿದೆ. ಉದಾಹರಣೆಗೆ ಒಂದು ಗಂಟೆ ಭಾರಿ ಮಳೆ ಸುರಿದರೆ 7 ನಿಮಿಷಗಳಲ್ಲಿ ಕ್ರೀಡಾಂಗಣ ಪಂದ್ಯಕ್ಕೆ ಸಿದ್ಧವಾಗಿರುತ್ತದೆ. ನೀರನ್ನು ಹೀರಿಕೊಂಡ ನಂತರ ಸಬ್‌ ಏರ್‌ ಯಂತ್ರದ ಮೂಲಕ ಅದೇ ಕೊಳವೆಗಳಲ್ಲಿ ಔಟ್‌ಫೀಲ್ಡ್‌ಗೆ ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನು ಒಣಗಿಸುವ ವ್ಯವಸ್ಥೆಯಿದೆ. ಒಂದೊಮ್ಮೆ ಮಳೆಯ ಆರ್ಭಟ ನಿಲ್ಲದೇ ಹೋದಲ್ಲಿ, ಆಗ ಎಷ್ಟೇ ದೊಡ್ಡ ತಂತ್ರಜ್ಞಾನವಿದ್ದರೂ ಇದು ಉಪಯೋಗಕ್ಕೆ ಬಾರದು. ಹೀಗಾಗಿ ಪಂದ್ಯದ ಅಳಿವು ಉಳಿವಿನ ಭವಿಷ್ಯ ಮಳೆಯ ಕೈಯಲ್ಲಿದೆ.

ಇದನ್ನೂ ಓದಿ IPL 2024 : ಹಾರ್ದಿಕ್ ಪಾಂಡ್ಯಗೆ ನಿಷೇಧ ಹೇರಿದ ಬಿಸಿಸಿಐ; ಮುಂದಿನ ಪಂದ್ಯದಲ್ಲಿ ಆಡದಂತೆ ತಾಕೀತು

ನೆಟ್‌ ರನ್‌ರೇಟ್‌ನಲ್ಲಿ ಚೆನ್ನೈ ಮುಂದಿದೆ (0.528). ಆರ್‌ಸಿಬಿ 0.387 ರನ್‌ರೇಟ್‌ ಹೊಂದಿದೆ. ಹೀಗಾಗಿ ಆರ್​ಸಿಬಿ ಪ್ಲೇ ಆಫ್​ ಪ್ರವೇಶಿಸಬೇಕಾದರೆ, ಆರ್‌ಸಿಬಿ ಕನಿಷ್ಠ 18 ರನ್‌ ಅಂತರದಿಂದ ಗೆಲ್ಲಬೇಕು ಅಥವಾ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು ಆಗ ಮಾತ್ರ ಆರ್​ಸಿಬಿ ಪ್ಲೇ ಆಫ್​ ಪ್ರವೇಶಿಸಲಿದೆ. ಈ ಎರಡು ಲೆಕ್ಕಾಚಾರದ ಗೆಲುವು ಒಲಿಯದೇ ಹೋದರೆ ಆರ್​ಸಿಬಿ ನಿರಾಸೆಗೆ ಒಳಗಾಗಲಿದೆ. 5ನೇ ಸ್ಥಾನಿಯಾಗಿ ಟೂರ್ನಿಯಿಂದ ನಿರ್ಗಮಿಸಲಿದೆ. ಚೆನ್ನೈ ಮುನ್ನಡೆಗೆ ಸಾಮಾನ್ಯ ಗೆಲುವು ಸಾಕು. 16 ಅಂಕ ಗಳಿಸಿ 4ನೇ ತಂಡವಾಗಿ ಪ್ಲೇ ಆಫ್​ಗೆ ಲಗ್ಗೆ ಇಡಲಿದೆ.

Continue Reading

ಕ್ರೀಡೆ

RCB vs CSK: ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ಚೆನ್ನೈ ಸೂಪರ್​ ಕಿಂಗ್ಸ್​

RCB vs CSK: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಮತ್ತು ಆರ್​ಸಿಬಿ ಇದುವರೆಗೆ 10 ಪಂದ್ಯಗಳನ್ನು ಆಡಿವೆ. ಈ ಪೈಕಿ ಚೆನ್ನೈ ಐದರಲ್ಲಿ ಗೆದ್ದರೆ, ಆರ್​ಸಿಬಿ ನಾಲ್ಕರಲ್ಲಿ ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಈ ಲೆಕ್ಕಾಚಾರದಲ್ಲಿ ಚೆನ್ನೈ ಬಲಿಷ್ಠ ಎನ್ನಲಡ್ಡಿಯಿಲ್ಲ.

VISTARANEWS.COM


on

RCB vs CSK
Koo

ಬೆಂಗಳೂರು: ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​ ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡಿದೆ. ಆರ್​ಸಿಬಿ ಬ್ಯಾಟಿಂಗ್​ ಆಹ್ವಾನ ಪಡೆದಿದೆ. ಮಳೆ ಭೀತಿಯ ನಡುವೆಯೂ ಈ ಪಂದ್ಯವನ್ನು ರಣರೋಚಕ ಪೈಪೋಟಿ ಎಂದೇ ನಿರೀಕ್ಷೆ ಮಾಡಲಾಗಿದೆ. ಉಭಯ ತಂಡಗಳ ಅಭಿಮಾನಿಗಳು ಸ್ಟೇಡಿಯಂನಲ್ಲಿ ಕಿಕ್ಕಿರಿದು ಸೇರಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂ ಹೌಸ್​ ಫುಲ್​ ಆಗಿದೆ.

ಪಿಚ್​ ರಿಪೋರ್ಟ್​


ಬೆಂಗಳೂರಿನ(Bengaluru) ಎಂ ಚಿನ್ನಸ್ವಾಮಿ(M.Chinnaswamy Stadium) ಕ್ರೀಡಾಂಗಣ ಯಾವಾಗಲೂ ಬ್ಯಾಟಿಂಗ್ ಸ್ನೇಹಿ ಸ್ಥಳವಾಗಿದೆ. ಇದುವರೆಗೆ ಇಲ್ಲಿ ನಡೆದ ಬಹುತೇಕ ಪಂದ್ಯಗಳು ಕೂಡ ಚೇಸಿಂಗ್​ ನಡೆಸಿದ ತಂಡವೇ ಹೆಚ್ಚು ಬಾರಿ ಗೆದ್ದಿದೆ. 50ಕ್ಕೂ ಅಧಿಕ ಬಾರಿ ಚೇಸಿಂಗ್​ ನಡೆಸಿದ ತಂಡವೇ ಜಯಶಾಲಿಯಾಗಿದೆ. 40 ಬಾರಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆದ್ದಿದೆ.

ವಿರಾಟ್​ ಕೊಹ್ಲಿ ಈ ಮೈದಾನದಲ್ಲಿ ಇದುವರೆಗೆ 2993 ರನ್​ ಬಾರಿಸಿದ್ದಾರೆ. ಜತೆಗೆ ಈ ಬಾರಿಯ ಐಪಿಎಲ್​ನಲ್ಲಿಯೂ ಕೊಹ್ಲಿ ಉತ್ತಮವಾಗಿ ರನ್​ ಗಳಿಸಿ ಅಗ್ರಸ್ಥಾನದಲ್ಲಿದ್ದಾರೆ. ಈ ಬಾರಿ ಕೊಹ್ಲಿ 13 ಪಂದ್ಯ ಆಡಿ 661 ರನ್​ ಗಳಿಸಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿಯೂ ಇವರ ಬ್ಯಾಟಿಂಗ್​ ಮೇಲೆ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆ ಇರಿಸಿದ್ದಾರೆ.

ಆರ್​ಸಿಬಿಗೆ ಬೇಕು ಲೆಕ್ಕಾಚಾರದ ಗೆಲುವು


ನೆಟ್‌ ರನ್‌ರೇಟ್‌ನಲ್ಲಿ ಚೆನ್ನೈ ಮುಂದಿದೆ (0.528). ಆರ್‌ಸಿಬಿ 0.387 ರನ್‌ರೇಟ್‌ ಹೊಂದಿದೆ. ಹೀಗಾಗಿ ಆರ್​ಸಿಬಿ ಪ್ಲೇ ಆಫ್​ ಪ್ರವೇಶಿಸಬೇಕಾದರೆ, ಆರ್‌ಸಿಬಿ ಕನಿಷ್ಠ 18 ರನ್‌ ಅಂತರದಿಂದ ಗೆಲ್ಲಬೇಕು ಅಥವಾ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು ಆಗ ಮಾತ್ರ ಆರ್​ಸಿಬಿ ಪ್ಲೇ ಆಫ್​ ಪ್ರವೇಶಿಸಲಿದೆ. ಈ ಎರಡು ಲೆಕ್ಕಾಚಾರದ ಗೆಲುವು ಒಲಿಯದೇ ಹೋದರೆ ಆರ್​ಸಿಬಿ ನಿರಾಸೆಗೆ ಒಳಗಾಗಲಿದೆ. 5ನೇ ಸ್ಥಾನಿಯಾಗಿ ಟೂರ್ನಿಯಿಂದ ನಿರ್ಗಮಿಸಲಿದೆ. ಚೆನ್ನೈ ಮುನ್ನಡೆಗೆ ಸಾಮಾನ್ಯ ಗೆಲುವು ಸಾಕು. 16 ಅಂಕ ಗಳಿಸಿ 4ನೇ ತಂಡವಾಗಿ ಪ್ಲೇ ಆಫ್​ಗೆ ಲಗ್ಗೆ ಇಡಲಿದೆ.

ಇದನ್ನೂ ಓದಿ RCB vs CSK: ಗೆದ್ದರೂ ಆರ್​ಸಿಬಿಗೆ ಪ್ಲೇ ಆಫ್​ ಖಚಿತವಲ್ಲ; ಹೀಗಿದೆ ರನ್​ರೇಟ್​ ಲೆಕ್ಕಾಚಾರ!

ಚಿನ್ನಸ್ವಾಮಿಯಲ್ಲಿ ಆರ್​ಸಿಬಿ-ಚೆನ್ನೈ ದಾಖಲೆ


ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಮತ್ತು ಆರ್​ಸಿಬಿ ಇದುವರೆಗೆ 10 ಪಂದ್ಯಗಳನ್ನು ಆಡಿವೆ. ಈ ಪೈಕಿ ಚೆನ್ನೈ ಐದರಲ್ಲಿ ಗೆದ್ದರೆ, ಆರ್​ಸಿಬಿ ನಾಲ್ಕರಲ್ಲಿ ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಈ ಲೆಕ್ಕಾಚಾರದಲ್ಲಿ ಚೆನ್ನೈ ಬಲಿಷ್ಠ ಎನ್ನಲಡ್ಡಿಯಿಲ್ಲ. ಇಲ್ಲಿ ನಡೆದ ಕಳೆದ 10 ಪಂದ್ಯಗಳ ಫಲಿತಾಂಶ ನೋಡುವುದಾದರೆ 6 ಬಾರಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆಲುವು ಸಾಧಿಸಿದೆ. ಈ ಆವೃತ್ತಿಯ 6 ಪಂದ್ಯಗಳ ಪೈಕಿ ಸಮಾನಾಗಿ 3 ಬಾರಿ ಚೇಸಿಂಗ್​ ಮತ್ತು ಮೊದಲು ಬ್ಯಾಟಿಂಗ್​ ನಡೆಸಿದ ತಂಡಗಳು ಜಯಿಸಿದೆ.

ಐಪಿಎಲ್​ ಮುಖಾಮುಖಿ


ಆರ್​ಸಿಬಿ ಮತ್ತು ಚೆನ್ನೈ ತಂಡ ಇದುವರೆಗೆ ಐಪಿಎಲ್​ನಲ್ಲಿ ಒಟ್ಟು 32 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಆರ್​ಸಿಬಿ 10 ಪಂದ್ಯ ಗೆದ್ದರೆ, ಚೆನ್ನೈ 21 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಕಳೆದ ಮೂರು ಪಂದ್ಯಗಳ ಮುಖಾಮುಖಿಯಲ್ಲೂ ಚೆನ್ನೈ ತಂಡವೇ ಗೆದ್ದಿದೆ. ಹೀಗಾಗಿ ನಾಳಿನ ಪಂದ್ಯದಲ್ಲಿಯೂ ಚೆನ್ನೈ ಗೆಲುವಿನ ಫೇವರಿಟ್​ ಆಗಿದೆ. ಈ ಬಾರಿಯ ಉದ್ಘಾಟನ ಪಂದ್ಯದಲ್ಲಿಯೂ ಚೆನ್ನೈ ಆರ್​ಸಿಬಿಗೆ ಸೋಲುಣಿಸಿತ್ತು.

ವಿಶೇಷವೆಂದರೆ ಆರ್​ಸಿಬಿಗೆ ಮೇ 18 ಎನ್ನುವುದು ಬಹಳ ಅದೃಷ್ಟದ ದಿನವಾಗಿದೆ. ಹೌದು, ಇದುವರೆಗಿನ ಐಪಿಎಲ್​ ಇತಿಹಾಸದಲ್ಲಿ ಆರ್​ಸಿಬಿ ಈ ದಿನದಂದು ಆಡಿದ ಎಲ್ಲ ಪಂದ್ಯಗಳನ್ನು ಗೆದ್ದಿದೆ. ಸ್ವಾರಸ್ಯವೆಂದರೆ ಚೆನ್ನೈ ವಿರುದ್ಧವೇ 2 ಗೆಲುವು ಸಾಧಿಸಿದೆ. ಹೀಗಾಗಿ ಇಂದು ಆರ್​ಸಿಬಿ ಗೆಲುವು ಸಾಧಿಸಬಹುದು ಎನ್ನುವುದು ಅಭಿಮಾನಿಗಳ ಬಲವಾದ ನಂಬಿಕೆ.

Continue Reading

ಕ್ರೀಡೆ

Virat Kohli: ಚೆನ್ನೈ ವಿರುದ್ಧದ ಪಂದ್ಯಕ್ಕೂ ಮುನ್ನ ಐಪಿಎಲ್​ ನಿಯಮದ ಬಗ್ಗೆ ಅಸಮಾಧಾನ ಹೊರಹಾಕಿದ ಕೊಹ್ಲಿ

Virat Kohli: ಇಂಪ್ಯಾಕ್ಟ್​ ಪ್ಲೇಯರ್​ ನಿಯಮದಿಂದ ಆಟದಲ್ಲಿ ಸಮತೋಲನ ಉಳಿಯುತ್ತಿಲ್ಲ. ಇದು ಕ್ರಿಕೆಟಿಗರ ಭವಿಷ್ಯಕ್ಕೂ ಮಾರಕವಾಗಲಿದೆ. ಒಂದು ಇನಿಂಗ್ಸ್​ ಆಡಿದ ಬಳಿಕ ಆತ, ಮೈದಾನ ತೊರೆಯಬೇಕು. ಇದರಿಂದ ಆತ ಕ್ರಿಕೆಟ್​ ಎಂದರೆ ಏನು ಎಂಬುದನ್ನು ಕಲಿಯಲು ಸಾಧ್ಯವಿಲ್ಲ” ಎಂದು ಕೊಹ್ಲಿ ಹೇಳಿದ್ದಾರೆ.

VISTARANEWS.COM


on

Virat Kohli
Koo

ಬೆಂಗಳೂರು: ಕೆಲವು ದಿನಗಳ ಹಿಂದಷ್ಟೇ ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮ(Rohit Sharma) ಅವರು ಐಪಿಎಲ್​ನಲ್ಲಿ ಜಾರಿಯಲ್ಲಿರುವ ಇಂಪ್ಯಾಕ್ಟ್​ ನಿಯಮದ(Impact Player) ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ನಿಯಮದಿಂದ ಭಾರತೀಯ ಕ್ರಿಕೆಟ್‌ಗೆ ದೊಡ್ಡ ನಷ್ಟವಾಗುತ್ತಿದೆ ಎಂದು ಹೇಳಿದ್ದರು. ಇದೀಗ ವಿರಾಟ್​ ಕೊಹ್ಲಿ(Virat Kohli) ಕೂಡ ಈ ನಿಮಯದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ವಿರುದ್ಧದ ಪಂದ್ಯಕ್ಕೂ ಮುನ್ನ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ ಕೊಹ್ಲಿ, ಇಂಪ್ಯಾಕ್ಟ್​ ಪ್ಲೇಯರ್​ ನಿಯಮ ಕ್ರಿಕೆಟ್​ನ ಸಮತೋಲನವನ್ನು ಹಾಳು ಮಾಡುತ್ತಿದೆ. ಮನರಂಜನೆ ಎನ್ನುವುದು ಕ್ರಿಕೆಟ್​ನ ಒಂದು ಭಾಗವಾಗಿರಬೇಕು. ಆಟವೇ ಮನರಂಜನೆಯಾಗಬಾರದು. ಹಾಗಾದಲ್ಲಿ ಕ್ರಿಕೆಟ್​ನ ನೈಜ ಸ್ವರೂಪ್ ಕಳೆದುಕೊಳ್ಳುತ್ತದೆ ಎಂದು ಹೇಳುವ ಮೂಲಕ ಇಂಪ್ಯಾಕ್ಟ್​ ನಿಯಮದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ರೋಹಿತ್ ಶರ್ಮಾ ಅವರ ಮಾತನ್ನು ನಾನು ಒಪ್ಪುತ್ತೇನೆ. ಇಂಪ್ಯಾಕ್ಟ್​ ಪ್ಲೇಯರ್​ ನಿಯಮದಿಂದ ಆಟದಲ್ಲಿ ಸಮತೋಲನ ಉಳಿಯುತ್ತಿಲ್ಲ. ಇದು ಕ್ರಿಕೆಟಿಗರ ಭವಿಷ್ಯಕ್ಕೂ ಮಾರಕವಾಗಲಿದೆ. ಒಂದು ಇನಿಂಗ್ಸ್​ ಆಡಿದ ಬಳಿಕ ಆತ, ಮೈದಾನ ತೊರೆಯಬೇಕು. ಇದರಿಂದ ಆತ ಕ್ರಿಕೆಟ್​ ಎಂದರೆ ಏನು ಎಂಬುದನ್ನು ಕಲಿಯಲು ಸಾಧ್ಯವಿಲ್ಲ” ಎಂದು ಕೊಹ್ಲಿ ಹೇಳಿದರು.

ರೋಹಿತ್​ ಹೇಳಿದ್ದೇನು?


‘ಕ್ರಿಕೆಟ್ 11 ಜನ ಆಡುವ ಆಟ, 12 ಜನರಿಂದಲ್ಲ, ಇಂಪ್ಯಾಕ್ಟ್ ಆಟಗಾರ ನಿಯಮದಿಂದಾಗಿ ನೈಜ ಕ್ರಿಕೆಟ್​ಗೆ ಹಾನಿಯಾಗಿದೆ. ಇದು ಮನರಂಜನೆ ಒದಗಿಸಬಹುದೇ ಹೊರತು ಕ್ರಿಕೆಟ್​ ಬೆಳವಣಿಗೆಗೆ ಅಪಾಯಕಾರಿ. ಈ ನಿಯಮದಿಂದ ಓರ್ವ ಆಟಗಾರನಿಗೆ ತನ್ನ ಸಾಮರ್ಥ್ಯವನ್ನು ತೋರ್ಪಡಿಸುವ ಅವಕಾಶ ಸಿಗುತಿಲ್ಲ. ಉದಾಹರಣೆಗೆ ಶಿವಂ ದುಬೆ, ವಾಷಿಂಗ್ಟನ್ ಸುಂದರ್ ಸೇರಿದಂತೆ ಅನೇಕ ಆಲ್ರೌಂಡರ್‌ಗಳಿಗೆ ಬ್ಯಾಟಿಂಗ್​ ಸಿಕ್ಕರೆ ಬೌಲಿಂಗ್​ ಸಿಗುತ್ತಿಲ್ಲ. ಬೌಲಿಂಗ್​ ಸಿಕ್ಕರೆ ಬ್ಯಾಟಿಂಗ್​ ಸಿಗುತ್ತಿಲ್ಲ” ಎಂದು ರೋಹಿತ್ ಕಳವಳ ವ್ಯಕ್ತಪಡಿಸಿದ್ದರು.

ಇಂಪ್ಯಾಕ್ಟ್ ನಿಯಮ ಎಂದರೇನು?

ಇಂಪ್ಯಾಕ್ಟ್ ಪ್ಲೇಯರ್ ನಿಯಮವು ಆಟದ ಸಮಯದಲ್ಲಿ ಯುದ್ಧತಂತ್ರದ ಬದಲಾವಣೆಯನ್ನು ಮಾಡಲು ತಂಡಕ್ಕೆ ಅವಕಾಶವನ್ನು ನೀಡುತ್ತದೆ. ಟಾಸ್ ಸಮಯದಲ್ಲಿ, ನಾಯಕನು ಆರಂಭಿಕ 11 ಆಟಗಾರರ ಜೊತೆಗೆ ನಾಲ್ಕು ಬದಲಿ ಆಟಗಾರರನ್ನು ಉಲ್ಲೇಖಿಸಬೆಕು. ಈ ಬದಲಿ ಆಟಗಾರನು (ಇಂಪ್ಯಾಕ್ಟ್ ಪ್ಲೇಯರ್) ಇನ್ನಿಂಗ್ಸ್‌ ನ 14 ನೇ ಓವರ್‌ ನ ಮುಕ್ತಾಯದ ಮೊದಲು ಯಾವುದೇ ನಿರ್ದಿಷ್ಟ ಹಂತದಲ್ಲಿ ಆರಂಭಿಕ 11 ನ ಸದಸ್ಯರನ್ನು ಬದಲಾಯಿಸಬಹುದು. ಆಟಗಾರನು ಬ್ಯಾಟಿಂಗ್ ಮಾಡಲು ಹಾಗೂ ತನ್ನ ಸಂಪೂರ್ಣ ಕೋಟಾದ (ನಾಲ್ಕು) ಓವರ್‌ಗಳನ್ನು ಪೂರ್ಣಗೊಳಿಸಲು ಅವಕಾಶವಿದೆ.

ಮತ್ತೊಂದು ವಿಶೇಷವೆಂದರೆ ಇಂಪ್ಯಾಕ್ಟ್ ಪ್ಲೇಯರ್ ಈಗಾಗಲೇ ಔಟ್ ಆಗಿರುವ ಆಟಗಾರನ ಬದಲಿಯಾಗಿ ಬಂದು ಮತ್ತೊಮ್ಮೆ ಬ್ಯಾಟಿಂಗ್ ಮಾಡಬಹುದು. ಆದರೆ ತಂಡದಲ್ಲಿ ಕೇವಲ 11 ಬ್ಯಾಟರ್‌ ಗಳಿಗೆ ಬ್ಯಾಟಿಂಗ್ ಗೆ ಅವಕಾಶವಿದೆ. ಮತ್ತೊಂದೆಡೆ, ಈಗಾಗಲೇ ಕೆಲವು ಓವರ್‌ ಗಳನ್ನು ಬೌಲ್ ಮಾಡಿದ ಬೌಲರ್ ಬದಲಿಗೆ ಬಂದು ನಾಲ್ಕು ಓವರ್‌ ಗಳ ಪೂರ್ಣ ಕೋಟಾ ಬೌಲ್ ಮಾಡಬಹುದು.

ಇಂಪ್ಯಾಕ್ಟ್ ಪ್ಲೇಯರ್ ಸೇರ್ಪಡೆಯಿಂದ ಆಟಕ್ಕೆ ಹೊಸತನ ಬಂದಂತಾದರೂ ಈ ನಿಯಮವು ಕೆಲವು ಮಿತಿಗಳನ್ನು ಹೊಂದಿದೆ. 10 ಓವರ್‌ ಗಳಿಗಿಂತ ಕಡಿಮೆಯಿರುವ ಆಟದಲ್ಲಿ (ಮಳೆ ಸೇರಿದಂತೆ ಹಲವು ಕಾರಣದಿಂದ) ಈ ನಿಯಮ ಅನ್ವಯಿಸುವುದಿಲ್ಲ. ಅಲ್ಲದೆ, ಪ್ರತಿ ಪಂದ್ಯದಲ್ಲೂ ಇಂಪ್ಯಾಕ್ಟ್ ಪ್ಲೇಯರ್ ನನ್ನು ಬಳಸಲೇ ಬೇಕು ಎಂಬ ಒತ್ತಾಯವಿಲ್ಲ. ಆದರೆ ಇಂಪ್ಯಾಕ್ಟ್ ಪ್ಲೇಯರ್ ನನ್ನು ಬಳಸುವ ಮೊದಲು ನಾಯಕ ಅಥವಾ ಮುಖ್ಯ ಕೋಚ್ ಅಥವಾ ಮ್ಯಾನೇಜರ್ ಅದನ್ನು ಆನ್-ಫೀಲ್ಡ್ ಅಂಪೈರ್‌ ಗೆ ತಿಳಿಸಬೇಕು.

ಇಂಪ್ಯಾಕ್ಟ್ ಪ್ಲೇಯರ್ ಓವರ್‌ ನಡುವಿನಲ್ಲಿ ಬರುವಂತಿಲ್ಲ. ಓವರ್ ಮುಗಿದ ಬಳಿಕವಷ್ಟೇ ಆಟಕ್ಕೆ ಬರಬಹುದು. ಆದಾಗ್ಯೂ, ಕೆಲವು ವಿನಾಯಿತಿಗಳಿದ್ದು, ಬ್ಯಾಟಿಂಗ್ ತಂಡವು ವಿಕೆಟ್ ಪತನದ ಸಮಯದಲ್ಲಿ ಅದರ ಇಂಪ್ಯಾಕ್ಟ್ ಪ್ಲೇಯರ್ ಕಾರ್ಡ್ ಅನ್ನು ಓವರ್ ನಡುವೆ ಬಳಸಿಬಹುದು, ಫೀಲ್ಡಿಂಗ್ ತಂಡದಲ್ಲಿ ಗಾಯಗೊಂಡ ಫೀಲ್ಡರ್ ಬದಲು ಓವರ್ ನ ನಡುವೆ ಇಂಪ್ಯಾಕ್ಟ್ ಪ್ಲೇಯರ್‌ ನನ್ನು ಆಟಕ್ಕೆ ಕರೆಯಬಹುದು

Continue Reading

ಕ್ರೀಡೆ

RCB vs CSK: ಗೆದ್ದರೂ ಆರ್​ಸಿಬಿಗೆ ಪ್ಲೇ ಆಫ್​ ಖಚಿತವಲ್ಲ; ಹೀಗಿದೆ ರನ್​ರೇಟ್​ ಲೆಕ್ಕಾಚಾರ!

RCB vs CSK:ಹೌದು ನೆಟ್‌ ರನ್‌ರೇಟ್‌ನಲ್ಲಿ ಚೆನ್ನೈ ಮುಂದಿದೆ (0.528). ಆರ್‌ಸಿಬಿ 0.387 ರನ್‌ರೇಟ್‌ ಹೊಂದಿದೆ. ಹೀಗಾಗಿ ಆರ್​ಸಿಬಿ ಪ್ಲೇ ಆಫ್​ ಪ್ರವೇಶಿಸಬೇಕಾದರೆ, ಆರ್‌ಸಿಬಿ ಕನಿಷ್ಠ 18 ರನ್‌ ಅಂತರದಿಂದ ಗೆಲ್ಲಬೇಕು ಅಥವಾ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು ಆಗ ಮಾತ್ರ ಆರ್​ಸಿಬಿ ಪ್ಲೇ ಆಫ್​ ಪ್ರವೇಶಿಸಲಿದೆ.

VISTARANEWS.COM


on

RCB vs CSK:
Koo

ಬೆಂಗಳೂರು: 17ನೇ ಆವೃತ್ತಿಯ ಐಪಿಎಲ್​ನ(IPL 2024) ಹೈವೋಲ್ಟೇಜ್​ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣ ಸಿದ್ಧವಾಗಿ ನಿಂತಿದೆ. ಆರ್​ಸಿಬಿ ಮತ್ತು ಚೆನ್ನೈ(RCB vs CSK) ತಂಡಗಳು ಈ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಪಂದ್ಯ ಕಣ್ತುಂಬಿಕೊಳ್ಳಲು ಈಗಾಗಲೇ ಅಭಿಮಾನಿಗಳು ಸ್ಟೇಡಿಯಂ ಸುತ್ತ ಕಿಕ್ಕಿರಿದು ಸೇರಿದ್ದಾರೆ. ಪ್ಲೇ ಆಫ್​ ಪ್ರವೇಶಕ್ಕೆ ಆರ್​ಸಿಬಿಗೆ ಗೆಲ್ಲಲೇ ಬೇಕಾದ ಪಂದ್ಯ ಇದಾಗಿದೆ. ಕೇವಲ ಗೆಲುವು ಮಾತ್ರ ಸಾಲದು. ಇಲ್ಲಿಯೂ ಕೂಡ ಕೆಲ ಲೆಕ್ಕಾಚಾರವಿದೆ.

ಕೇವಲ ಗೆಲುವು ಸಾಲದು


ಚೆನ್ನೈ ಮುನ್ನಡೆಗೆ ಸಾಮಾನ್ಯ ಗೆಲುವು ಸಾಕು. 16 ಅಂಕ ಗಳಿಸಿ 4ನೇ ತಂಡವಾಗಿ ಪ್ಲೇ ಆಫ್​ಗೆ ಲಗ್ಗೆ ಇಡಲಿದೆ. ಒಂದೊಮ್ಮೆ ಮಳೆ ಬಂದರೂ ಕೂಡ ಚೆನ್ನೈಗೆ ಯಾವುದೇ ಚಿಂತೆಯಿಲ್ಲ. ಒಂದು ಅಂಕದ ಲಾಭದಿಂದ ನೇರವಾಗಿ ಪ್ಲೇ ಆಫ್​ ಟಿಕೆಟ್​ ಪಡೆಯಲಿದೆ. ಆದರೆ ಆರ್​ಸಿಬಿಗೆ ಗೆಲುವಿನ ಜತೆಗೆ ರನ್​ರೇಟ್​ ಕೂಡ ಬಹುಮುಖ್ಯ.

ಹೌದು ನೆಟ್‌ ರನ್‌ರೇಟ್‌ನಲ್ಲಿ ಚೆನ್ನೈ ಮುಂದಿದೆ (0.528). ಆರ್‌ಸಿಬಿ 0.387 ರನ್‌ರೇಟ್‌ ಹೊಂದಿದೆ. ಹೀಗಾಗಿ ಆರ್​ಸಿಬಿ ಪ್ಲೇ ಆಫ್​ ಪ್ರವೇಶಿಸಬೇಕಾದರೆ, ಆರ್‌ಸಿಬಿ ಕನಿಷ್ಠ 18 ರನ್‌ ಅಂತರದಿಂದ ಗೆಲ್ಲಬೇಕು ಅಥವಾ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು ಆಗ ಮಾತ್ರ ಆರ್​ಸಿಬಿ ಪ್ಲೇ ಆಫ್​ ಪ್ರವೇಶಿಸಲಿದೆ. ಈ ಎರಡು ಲೆಕ್ಕಾಚಾರದ ಗೆಲುವು ಒಲಿಯದೇ ಹೋದರೆ ಆರ್​ಸಿಬಿ ನಿರಾಸೆಗೆ ಒಳಗಾಗಲಿದೆ. 5ನೇ ಸ್ಥಾನಿಯಾಗಿ ಟೂರ್ನಿಯಿಂದ ನಿರ್ಗಮಿಸಲಿದೆ.

ಇದನ್ನೂ ಓದಿ IPL 2024 : ಬೆಂಗಳೂರಿನ ಬೀದಿ ಬೀದಿಗಳಲ್ಲಿ ‘ಧೋನಿ, ಧೋನಿ’ ಘೋಷಣೆ, ಇಲ್ಲಿದೆ ವಿಡಿಯೊ

ಆರ್​ಸಿಬಿಗೆ ಮೇ 18ರ ನಂಬಿಕೆ


ವಿಶೇಷವೆಂದರೆ ಆರ್​ಸಿಬಿಗೆ ಮೇ 18 ಎನ್ನುವುದು ಬಹಳ ಅದೃಷ್ಟದ ದಿನವಾಗಿದೆ. ಹೌದು, ಇದುವರೆಗಿನ ಐಪಿಎಲ್​ ಇತಿಹಾಸದಲ್ಲಿ ಆರ್​ಸಿಬಿ ಈ ದಿನದಂದು ಆಡಿದ ಎಲ್ಲ ಪಂದ್ಯಗಳನ್ನು ಗೆದ್ದಿದೆ. ಸ್ವಾರಸ್ಯವೆಂದರೆ ಚೆನ್ನೈ ವಿರುದ್ಧವೇ 2 ಗೆಲುವು ಸಾಧಿಸಿದೆ. ಹೀಗಾಗಿ ಇಂದು ಆರ್​ಸಿಬಿ ಗೆಲುವು ಸಾಧಿಸಬಹುದು ಎನ್ನುವುದು ಅಭಿಮಾನಿಗಳ ಬಲವಾದ ನಂಬಿಕೆ.

ಚಿನ್ನಸ್ವಾಮಿಯಲ್ಲಿ ಆರ್​ಸಿಬಿ-ಚೆನ್ನೈ ದಾಖಲೆ


ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಮತ್ತು ಆರ್​ಸಿಬಿ ಇದುವರೆಗೆ 10 ಪಂದ್ಯಗಳನ್ನು ಆಡಿವೆ. ಈ ಪೈಕಿ ಚೆನ್ನೈ ಐದರಲ್ಲಿ ಗೆದ್ದರೆ, ಆರ್​ಸಿಬಿ ನಾಲ್ಕರಲ್ಲಿ ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಈ ಲೆಕ್ಕಾಚಾರದಲ್ಲಿ ಚೆನ್ನೈ ಬಲಿಷ್ಠ ಎನ್ನಲಡ್ಡಿಯಿಲ್ಲ. ಇಲ್ಲಿ ನಡೆದ ಕಳೆದ 10 ಪಂದ್ಯಗಳ ಫಲಿತಾಂಶ ನೋಡುವುದಾದರೆ 6 ಬಾರಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆಲುವು ಸಾಧಿಸಿದೆ. ಈ ಆವೃತ್ತಿಯ 6 ಪಂದ್ಯಗಳ ಪೈಕಿ ಸಮಾನಾಗಿ 3 ಬಾರಿ ಚೇಸಿಂಗ್​ ಮತ್ತು ಮೊದಲು ಬ್ಯಾಟಿಂಗ್​ ನಡೆಸಿದ ತಂಡಗಳು ಜಯಿಸಿದೆ.

ಸಬ್‌ ಏರ್‌ ಸಿಸ್ಟಮ್‌


ಎಷ್ಟೇ ಮಳೆಯಾದರೂ ಕೂಡ ಮಳೆ ನಿಂತ ಕೆಲವೇ ಕ್ಷಣದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ(M Chinnaswamy Stadium) ಪಂದ್ಯವನ್ನು ಆರಂಭಗೊಳ್ಳುವಂತೆ ಮಾಡುವ ವಿಶೇಷ ಸಬ್‌ ಏರ್‌ ಸಿಸ್ಟಮ್‌(SubAir facility) ತಂತ್ರಜ್ಞಾನ(SubAir facility Chinnaswamy)ವಿದೆ. ಸಬ್‌ ಏರ್‌ ಸಿಸ್ಟಮ್‌ ಅಳವಡಿಸಿಕೊಂಡ ವಿಶ್ವದ ಮೊದಲ ಕ್ರಿಕೆಟ್‌ ಕ್ರೀಡಾಂಗಣ ಎಂಬ ಖ್ಯಾತಿ ಚಿನ್ನಸ್ವಾಮಿ ಕ್ರೀಡಾಂಗಣದ್ದಾಗಿದೆ. ಉದಾಹರಣೆಗೆ ಒಂದು ಗಂಟೆ ಭಾರಿ ಮಳೆ ಸುರಿದರೆ 7 ನಿಮಿಷಗಳಲ್ಲಿ ಕ್ರೀಡಾಂಗಣ ಪಂದ್ಯಕ್ಕೆ ಸಿದ್ಧವಾಗಿರುತ್ತದೆ. ನೀರನ್ನು ಹೀರಿಕೊಂಡ ನಂತರ ಸಬ್‌ ಏರ್‌ ಯಂತ್ರದ ಮೂಲಕ ಅದೇ ಕೊಳವೆಗಳಲ್ಲಿ ಔಟ್‌ಫೀಲ್ಡ್‌ಗೆ ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನು ಒಣಗಿಸುವ ವ್ಯವಸ್ಥೆಯಿದೆ. ಒಂದೊಮ್ಮೆ ಮಳೆಯ ಆರ್ಭಟ ನಿಲ್ಲದೇ ಹೋದಲ್ಲಿ, ಆಗ ಎಷ್ಟೇ ದೊಡ್ಡ ತಂತ್ರಜ್ಞಾನವಿದ್ದರೂ ಇದು ಉಪಯೋಗಕ್ಕೆ ಬಾರದು. ಹೀಗಾಗಿ ಪಂದ್ಯದ ಅಳಿವು ಉಳಿವಿನ ಭವಿಷ್ಯ ಮಳೆಯ ಕೈಯಲ್ಲಿದೆ.

Continue Reading
Advertisement
Virat Kohli
ಕ್ರೀಡೆ8 mins ago

Virat Kohli: ರೋಹಿತ್​ ಶರ್ಮ ರನ್​ ದಾಖಲೆ ಮುರಿದ ಕಿಂಗ್​ ಕೊಹ್ಲಿ

Covid 19
ವಿದೇಶ8 mins ago

Covid 19: ಸಿಂಗಾಪುರದಲ್ಲಿ ಕೊರೊನಾ ಹೊಸ ಅಲೆ; ವಾರದಲ್ಲಿ 25 ಸಾವಿರ ಕೇಸ್‌, ಭಾರತಕ್ಕೆ ಇದೆಯೇ ಭೀತಿ?

Inspirational Story
ಶಿಕ್ಷಣ12 mins ago

Inspirational Story: 25 ವರ್ಷಗಳ ಹಿಂದೆ ಕಸದ ತೊಟ್ಟಿಯಲ್ಲಿ ಸಿಕ್ಕ ಅಂಧ ಹೆಣ್ಣುಮಗುವಿನ ಸಾಧನೆ ನೋಡಿ!

MLC Election Withdrawal of nomination paper says Suresh Sajjan
ಕರ್ನಾಟಕ13 mins ago

MLC Election: ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ ಬಿಜೆಪಿ ಬಂಡಾಯ ಅಭ್ಯರ್ಥಿ

SSLC 2024 Exam 2
ಪ್ರಮುಖ ಸುದ್ದಿ23 mins ago

SSLC 2024 Exam 2: ಜೂ. 14ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ-2; ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ

Two killed after being hit by the wheel of a chariot while performing at Veerabhadreswara fair
ಕರ್ನಾಟಕ31 mins ago

Veerabhadreswara Fair: ವೀರಭದ್ರೇಶ್ವರ ಜಾತ್ರೆಯಲ್ಲಿ ಉತ್ತತ್ತಿ ಆಯುವಾಗ ರಥದ ಚಕ್ರದಡಿ‌ ಸಿಲುಕಿ ಇಬ್ಬರ ಸಾವು

Voter Turnout
ದೇಶ46 mins ago

Voter Turnout: 4ನೇ ಹಂತದಲ್ಲಿ ಹೆಚ್ಚಿದ ಮತದಾನ; ಪುರುಷರಿಗಿಂತ ಸ್ತ್ರೀಯರಿಂದಲೇ ಹೆಚ್ಚು ಮತ ಚಲಾವಣೆ; ಹೀಗಿದೆ ಆಯೋಗದ ಮಾಹಿತಿ

Uttara Kannada News Take precautionary measures to prevent the spread of infectious diseases in the district says DC Gangubai manakar
ಉತ್ತರ ಕನ್ನಡ50 mins ago

Uttara Kannada News: ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರ ವಹಿಸಿ: ಡಿಸಿ ಮಾನಕರ್‌

BJP State President B Y Vijayendra latest statement in bengaluru
ಕರ್ನಾಟಕ52 mins ago

BY Vijayendra: ವಿಧಾನಪರಿಷತ್ ವಿವಿಧ ಕ್ಷೇತ್ರಗಳ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ; ಬಿ.ವೈ.ವಿಜಯೇಂದ್ರ

Shed houses electric poles damaged due to heavy rain and wind in Karatagi
ಕೊಪ್ಪಳ55 mins ago

Heavy Rain: ಕಾರಟಗಿಯಲ್ಲಿ ಭಾರೀ ಮಳೆ ಗಾಳಿಗೆ ಅಪಾರ ಹಾನಿ; ಸಚಿವ ಶಿವರಾಜ ತಂಗಡಗಿ ಪರಿಶೀಲನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ24 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌