ಸುದೀಪ್‌ಗೆ Sunday surprise! ಕಪಿಲ್‌ ದೇವ್‌ ಕಳುಹಿಸಿಕೊಟ್ಟ ಆ ಉಡುಗೊರೆ ನೋಡಿ ಕುಣಿದಾಡಿದ ಕಿಚ್ಚ! ಏನದು ಗಿಫ್ಟ್‌? - Vistara News

ಕರ್ನಾಟಕ

ಸುದೀಪ್‌ಗೆ Sunday surprise! ಕಪಿಲ್‌ ದೇವ್‌ ಕಳುಹಿಸಿಕೊಟ್ಟ ಆ ಉಡುಗೊರೆ ನೋಡಿ ಕುಣಿದಾಡಿದ ಕಿಚ್ಚ! ಏನದು ಗಿಫ್ಟ್‌?

sunday surpise! ಕಪಿಲ್‌ ದೇವ್‌ ಎಂಬ ದಂತಕಥೆ ನಟ ಸುದೀಪ್‌ಗೆ ಅದ್ಭುತವಾದ, ಸ್ಮರಣಾರ್ಹ ಉಡುಗೊರೆಯೊಂದನ್ನು ಕೊಟ್ಟಿದ್ದಾರೆ. ಅದನ್ನು ನೋಡಿ ಕಿಚ್ಚ ಕುಣಿದಾಡಿದ್ದೇ ಕುಣಿದಾಡಿದ್ದು. ಯಾವುದೀ ಗಿಫ್ಟ್‌? ಯಾಕಷ್ಟು ವಿಶೇಷ?

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್‌ ಸಿನಿಮಾದಷ್ಟೇ ಕ್ರಿಕೆಟನ್ನೂ ಪ್ರೀತಿಸುತ್ತಾರೆ ಎನ್ನುವುದು ಎಲ್ಲರಿಗೂ ಗೊತ್ತು. ಕಾಲೇಜಿನಲ್ಲಿ ಅಂಡರ್‌-೧೭ ಕ್ರಿಕೆಟ್‌ ತಂಡದಲ್ಲಿ ಆಡಿದ್ದ ಸುದೀಪ್‌ ದೇಶಾದ್ಯಂತ ಸುದ್ದಿ ಮಾಡಿದ ಸೆಲೆಬ್ರಿಟಿ ಕ್ರಿಕೆಟ್‌ ಲೀಗ್‌ ನ ರೂವಾರಿಯೂ ಹೌದು. ಸುದೀಪ್‌ ಕ್ರಿಕೆಟನ್ನು ಎಷ್ಟರ ಮಟ್ಟಿಗೆ ಜೀವಿಸುತ್ತಾರೆ ಎಂದರೆ ಕಳೆದ ವರ್ಷ ಹಿಂದಿಯಲ್ಲಿ ನಿರ್ಮಾಣವಾದ ವಿಶ್ವ ಕಪ್‌ ಕ್ರಿಕೆಟ್‌ ಗೆಲುವಿನ ರೋಚಕ ಕಥಾನಕ ಹೊಂದಿರುವ ʻ೮೩ʼ ಸಿನಿಮಾವನ್ನು ಕನ್ನಡಕ್ಕೆ ತಾವೇ ಡಬ್‌ ಮಾಡಿ ಬಿಡುಗಡೆ ಮಾಡಿದರು.

ಇಂಥ ಕ್ರಿಕೆಟ್‌ ಪ್ರೇಮಿ, ಆಲ್‌ ಇಂಡಿಯಾ ಸ್ಟಾರ್‌ ಬದುಕಿನಲ್ಲಿ ಭಾನುವಾರ (ಜೂನ್‌ ೨೬) ಮರೆಯಲಾಗದ ದಿನ (sunday surprise). ಖುದ್ದು ಅವರೇ ಮುಟ್ಟಿ ನೋಡಿಕೊಳ್ಳುವಂತೆ ಅಚ್ಚರಿಯ ಉಡುಗೊರೆಯೊಂದು ಅವರ ಕೈಗೆ ಬಂದಿತ್ತು. ಅದು ಅವರೇ ಕನಸಿನಲ್ಲೂ ಕಲ್ಪಿಸಿಕೊಂಡಿರದ ಮಹಾನ್‌ ಗಿಫ್ಟ್‌. ಆ ಗಿಫ್ಟನ್ನು ಕಳುಹಿಸಿಕೊಟ್ಟಿದ್ದು ಬೇರೆ ಯಾರೂ ಅಲ್ಲ, ಭಾರತೀಯ ಕ್ರಿಕೆಟ್‌ನ ಲೆಜೆಂಡ್‌ಗಳಲ್ಲಿ ಒಬ್ಬರಾದ ಒನ್‌ ಎಂಡ್‌ ಓನ್ಲಿ ಕಪಿಲ್‌ ದೇವ್‌!

ಟೀಮ್‌ ಇಂಡಿಯಾ ೧೯೮೩ರಲ್ಲಿ ಕಪಿಲ್‌ ದೇವ್‌ ನೇತೃತ್ವದಲ್ಲಿ ಚೊಚ್ಚಲ ವಿಶ್ವ ಕಪ್‌ನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಮಹಾ ವಿಕ್ರಮಕ್ಕೆ ಜೂನ್‌ ೨೫ಕ್ಕೆ (ಶನಿವಾರ) ೩೯ ವರ್ಷ ಕಳೆದಿತ್ತು. ಅದೇ ಖುಷಿಯಲ್ಲಿದ್ದ ಸುದೀಪ್‌ಗೆ ಮರುದಿನ ಮುಂಜಾನೆ ಮಹಾ ಅಚ್ಚರಿ ಕಾದಿತ್ತು.

ಈ ಸಂಗತಿಯನ್ನು ಸ್ವತಃ ಸುದೀಪ್‌ ಅವರೇ ತಮ್ಮ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಹೇಳಿಕೊಂಡಿದ್ದಾರೆ. ಅಂದ ಹಾಗೆ, ಅವರ ಬಂದ ಉಡುಗೊರೆ ಒಂದು ಚಂದದ ಬ್ಯಾಟ್‌. ಈ ಕ್ರಿಕೆಟ್‌ ಬ್ಯಾಟ್‌ ಅಂತಿಂಥದ್ದಲ್ಲ, ೧೯೮೩ರಲ್ಲಿ ವಿಶ್ವಕಪ್‌ ಗೆದ್ದ ಭಾರತೀಯ ತಂಡದ ಎಲ್ಲ ಆಟಗಾರರ ಸಹಿಯನ್ನು ಒಳಗೊಂಡ ಬ್ಯಾಟ್‌ ಅದು. ಅದನ್ನು ಕಳುಹಿಸಿಕೊಟ್ಟಿದ್ದು ಆ ತಂಡದ ನಾಯಕತ್ವವನ್ನು ವಹಿಸಿ ಇಡೀ ತಂಡವನ್ನು ಹುರಿದುಂಬಿಸಿ ಗೆಲುವಿನ ಆಕಾಶಕ್ಕೇರಿಸಿದ ರಣವಿಕ್ರಮಿ ಕಪಿಲ್‌ ದೇವ್‌!

ಸುದೀಪ್‌ಗೆ ಈ ಉಡುಗೊರೆ ನೋಡಿ ಎಷ್ಟೊಂದು ಖುಷಿಯಾಗಿದೆ ಎನ್ನುವುದು ಅವರು ಟ್ವಿಟರ್‌ನಲ್ಲಿ ಬರೆದಿರುವ ಕ್ಯಾಪ್ಶನ್‌ನಿಂದಲೇ ಗೊತ್ತಾಗುತ್ತದೆ. ʻʻವೋಃಃಃಃಃಃಃಃಃಃಃಃಃಃಃಃಃಃಃ ಇದೆಂಥ ಭಾನುವಾರ.. ಥ್ಯಾಂಕ್ಯೂಃಃಃಃ ಕಪಿಲ್‌ ದೇವ್‌ ಸರ್‌SSSSSS ಬೆಳಗ್ಗೆ ಎದ್ದ ಕೂಡಲೇ ಎದುರಾದ ಈ ದೊಡ್ಡaaaaaa ಅಚ್ಚರಿಗಾಗಿ.. ವೋwwwww ನಾನು ನಿರೀಕ್ಷೆ ಮಾಡಿರಲೇ ಇಲ್ಲ. ಇದೊಂದು ಕ್ಲಾಸಿಕ್‌ ಪೀಸ್‌. ಹೋ.. ನಾನೀಗ ಪ್ರಪಂಚದ ಉತ್ತುಂಗ ಶಿಖರದಲ್ಲಿದ್ದೇನೆ ಅನಿಸುತ್ತಿದೆ.. ತ್ಯಾಂಕ್ಯೂ.. ತ್ಯಾಂಕ್ಯೂ…

ಟ್ವಿಟರ್‌ನಲ್ಲಿ ಕಿಚ್ಚನ ಸಂಭ್ರಮ

ಯಾವುದೀ ಬ್ಯಾಟ್‌?
೧೯೮೩ರಲ್ಲಿ ಭಾರತ ತಂಡ ಮೊದಲ ಬಾರಿಗೆ ವಿಶ್ವ ವಿಜೇತವಾದ ಚಾರಿತ್ರಿಕ ಕ್ಷಣವನ್ನು ಚಿರಸ್ಮರಣೀಯಗೊಳಿಸುವ ಉದ್ದೇಶದಿಂದ ಬ್ಯಾಟ್‌ನ ಸ್ಮರಣಿಕೆಯನ್ನು ರೂಪಿಸಲಾಗಿತ್ತು. ಕಪಿಲ್‌ ದೇವ್‌ ಅವರು ಈ ಬ್ಯಾಟನ್ನು ಕಿಚ್ಚ ಸುದೀಪ್‌ಗೆ ಕಳುಹಿಸಿಕೊಟ್ಟಿದ್ದಾರೆ.

ಕಿಚ್ಚ ಕಪಿಲ್‌ರ ಡೈ ಹಾರ್ಡ್‌ ಫ್ಯಾನ್‌
ಕಿಚ್ಚ ಸುದೀಪ್‌ ಕ್ರಿಕೆಟ್‌ನ ಫ್ಯಾನ್‌ ಅಷ್ಟೇ ಅಲ್ಲ. ಕಪಿಲ್‌ ದೇವ್‌ ಅವರ ಫ್ಯಾನ್‌. ೧೯೭೩ರಲ್ಲಿ ಹುಟ್ಟಿದ ಸುದೀಪ್‌ಗೆ ೧೯೮೩ರ ಹೊತ್ತಿಗಾಗಲೇ ಕ್ರಿಕೆಟ್‌ ಹುಚ್ಚು ಹಿಡಿದಿತ್ತು. ಆಗಲೇ ತಾನು ಜೀವಮಾನದಲ್ಲೊಮ್ಮೆಯಾದರೂ ಕಪಿಲ್‌ ದೇವ್‌ ಅವರನ್ನು ನೋಡಬೇಕೆಂಬ ಆಸೆ ಹೊತ್ತಿದ್ದರು. ಆದರೆ, ಸಾಧ್ಯವಾಗಿರಲಿಲ್ಲ.

ನನಗೂ ಆಸೆ ಇತ್ತು ಎಂದಿದ್ದ ಕಪಿಲ್!‌
ಕಳೆದ ವರ್ಷ ʻ೮೩ʼ ಸಿನಿಮಾದ ಪ್ರಮೋಷನ್‌ಗಾಗಿ ಬಂದಿದ್ದ ಕಪಿಲ್‌ ದೇವ್‌ ಮತ್ತು ಸುದೀಪ್‌ ಮೊದಲ ಬಾರಿಗೆ ಮುಖಾಮುಖಿಯಾಗಿದ್ದರು. ಆಗ ಸುದೀಪ್‌ ತನ್ನ ಬದುಕಿನ ಆಸೆಯನ್ನು ಅವರ ಮುಂದೆ ಹೇಳಿಕೊಂಡಿದ್ದರು. ಇದಕ್ಕೆ ಅತ್ಯಂತ ಭಾವುಕರಾಗಿ ಪ್ರತಿಕ್ರಿಯಿಸಿದ್ದ ಕಪಿಲ್‌ ದೇವ್‌ ʻಸುದೀಪ್‌ ನೀವು ತುಂಬ ದೊಡ್ಡ ಮನುಷ್ಯ. ನಿಜವೆಂದರೆ ನಾನೇ ನಿಮ್ಮನ್ನೊಮ್ಮೆ ಭೇಟಿಯಾಗಬೇಕು ಅಂತ ಬಯಸಿದ್ದೆʼ ಎಂದು ಹೇಳಿದ್ದರು. ಆಗ ಅವರಿಬ್ಬರೂ ಭಾವುಕರಾಗಿದ್ದರು. ʻಈಗʼ ಚಿತ್ರದ ಮೂಲಕ ಸುದೀಪ್‌ ಉತ್ತರ ಭಾರತದ ಮೂಲೆ ಮೂಲೆಯನ್ನು ತಲುಪಿದ್ದರು.
ಇದನ್ನೂ ಓದಿ| Vikrant Rona Trailer | ಕ್ಯೂರಿಯಾಸಿಟಿ ಕೆರಳಿಸಿದ ʼಗರ ಗರ ಗರ ಗಗ್ಗರ ಜರ್ಬ, ಪಿರ ನಲ್ಕುರಿ ನೆತ್ತರ ಪರ್ಬʼ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ಕಡೆಗೂ ವಿಚಾರಣೆಗೆ ಹಾಜರಾಗದ ಭವಾನಿ ರೇವಣ್ಣ; 7 ಗಂಟೆ ಕಾದು ಎಸ್‌ಐಟಿ ತಂಡ ವಾಪಸ್

Prajwal Revanna Case: ಮನೆ ಬಳಿ ಎಷ್ಟು ಕಾದರೂ ಬಾರದ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗದ ಬಗ್ಗೆ ವರದಿ ಮಾಡಿಕೊಂಡು ಎಸ್‌ಐಟಿ ಅಧಿಕಾರಿಗಳು ತೆರಳಿದ್ದಾರೆ.

VISTARANEWS.COM


on

Prajwal Revanna Case
Koo

ಹಾಸನ: ಲೈಂಗಿಕ ದೌರ್ಜನ್ಯ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದಲ್ಲಿ (Prajwal Revanna Case) ತನಿಖೆಗೆ ಸಹಕರಿಸುವುದಾಗಿ ಹೇಳಿದ್ದ ಭವಾನಿ ರೇವಣ್ಣ ಅವರು ಶನಿವಾರವೂ ಪ್ರತ್ಯಕ್ಷವಾಗಿಲ್ಲ. ಭವಾನಿ ರೇವಣ್ಣ (Bhavani Revanna) ಅವರನ್ನು ವಶಕ್ಕೆ ಪಡೆಯಲು ತೆರಳಿದ್ದ ಎಸ್‌ಐಟಿ ಅಧಿಕಾರಿಗಳು ಹೊಳೆನರಸೀಪುರ ನಿವಾಸದ ಎದುರು ಸತತ 7 ಗಂಟೆ ಕಾದು ವಾಪಸ್‌ ಆಗಿದ್ದಾರೆ.

ಮನೆ ಬಳಿ ಎಷ್ಟು ಕಾದರೂ ಬಾರದ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗದ ಬಗ್ಗೆ ವರದಿ ಮಾಡಿಕೊಂಡು ಎಸ್‌ಐಟಿ ಅಧಿಕಾರಿಗಳು ತೆರಳಿದ್ದಾರೆ. ಬೆಳಗ್ಗೆ 11 ಗಂಟೆಗೆ ಮನೆ ಬಳಿ ತೆರಳಿದ್ದ ಎಸ್‌ಐಟಿ ಟೀಂನಲ್ಲಿ ಇನ್ಸ್‌ಪೆಕ್ಟರ್ ಹಾಗೂ ಮಹಿಳಾ ಇನ್ಸ್‌ಪೆಕ್ಟರ್ ತೆರಳಿದ್ದರು. ಎಷ್ಟು ಕಾದರೂ ಭವಾನಿ ರೇವಣ್ಣ ಬಾರದ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ವಾಪಸ್‌ ತೆರಳಿದ್ದಾರೆ.

ಇಂದು ಬೆಳಗ್ಗೆ 10 ಗಂಟೆಯಿಂದ 5 ಗಂಟೆ ನಡುವೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ನೀಡಿತ್ತು. ಆದರೆ ಬಂಧನ ಭೀತಿಯಿಂದ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗಿಲ್ಲ.

ಇದನ್ನೂ ಓದಿ | Prajwal Revanna Case: ವಿಚಾರಣೆಯಲ್ಲಿ ಬಾಯಿಬಿಡದ ಪ್ರಜ್ವಲ್‌; ಸ್ಥಳ ಮಹಜರಿಗಾಗಿ ಹೊಳೆನರಸೀಪುರಕ್ಕೆ ಕರೆದೊಯ್ಯಲು ಸಿದ್ಧತೆ

ಭವಾನಿ ರೇವಣ್ಣಗೆ ನ್ಯಾಯಾಲಯದ ಬಗ್ಗೆ ಗೌರವವಿದೆ: ವಕೀಲೆ ಸುಮಾ

ಹೊಳೆನರಸೀಪುರದಲ್ಲಿ ಭವಾನಿ ರೇವಣ್ಣ ಪರ ವಕೀಲೆ ಸುಮಾ ಮಾತನಾಡಿ, ಭವಾನಿ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿ ನಮಗೆ ಇಲ್ಲ. ಹೆಣ್ಣುಮಕ್ಕಳು ಮೇಡಂ ಪರವಾಗಿ ಕಷ್ಟದಲ್ಲೂ ಇರುತ್ತೇವೆ, ಸುಖದಲ್ಲೂ ಇರುತ್ತೇವೆ. ಆದರೆ ನಾನು ಇಂದು ಬಂದಿದ್ದು ವಕೀಲಳಾಗಿ. ಭವಾನಿ ರೇವಣ್ಣ ಅವರಿಗೆ ಆರೋಗ್ಯ ಸರಿಯಿಲ್ಲ, ಎರಡು ಮಂಡಿ ಆಪರೇಷನ್ ಆಗಿದೆ. ಅವರ ಅಣ್ಣ ಸಾವನ್ನಪ್ಪಿದ್ದು, ಆ ನೋವಿನಲ್ಲೂ ಇದ್ದಾರೆ. ಖಂಡಿತವಾಗಿಯೂ ತನಿಖೆಗೆ ಹಾಜರಾಗುತ್ತಾರೆ. ಕಾನೂನು ಬಗ್ಗೆ ಮೇಡಂಗೆ ಗೌರವವಿದೆ. ಅವರಿಗೆ ನ್ಯಾಯಾಲಯದ ಬಗ್ಗೆ ಗೌರವವಿದೆ. ಆದಷ್ಟು ಬೇಗ ಬರ್ತಾರೆ, ತನಿಖೆ ಎದುರಿಸುತ್ತಾರೆ, ನಿರ್ದೊಷಿಯಾಗಿ ಬರ್ತಾರೆ ಎಂದು ಹೇಳಿದರು.

Continue Reading

ಪ್ರಮುಖ ಸುದ್ದಿ

Exit Poll 2024: ಮುಸ್ಲಿಮರ ಶೇ.72ರಷ್ಟು ಮತಗಳು ಕಾಂಗ್ರೆಸ್‌ಗೆ; ಮೋದಿ ವಿರುದ್ಧ ಒಂದಾದ ಅಲ್ಪಸಂಖ್ಯಾತರು

Exit Poll 2024: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರದ ವಿರುದ್ಧ “ವೋಟ್ ಜಿಹಾದ್” ಮಾಡಿ ಎಂದು ಭಾರತದ ಮುಸ್ಲಿಂ ಮತದಾರರಿಗೆ ಸಮಾಜವಾದಿ ಪಕ್ಷದ ನಾಯಕಿ ಮಾರಿಯಾ ಆಲಂ ಕರೆ ಕೊಟ್ಟಿದ್ದರು. ಇಂಥ ಹೇಳಿಕೆಗಳು ಮತ್ತು ಸ್ಥಳೀಯವಾಗಿ ಮುಸ್ಲಿಂ ಸಮುದಾಯದ ಮಂದಿ ಪಠಿಸಿದ ಒಗ್ಗಟ್ಟಿನ ಮಂತ್ರ ಕಾಂಗ್ರೆಸ್​ಗೆ ಅವರ ಮತಗಳು ಪರಿವರ್ತನೆಗೊಳ್ಳುವಂತೆ ಮಾಡಿದೆ.

VISTARANEWS.COM


on

exit poll 2024
Koo

ಬೆಂಗಳೂರು: ಬಿಜೆಪಿಯ ಜತೆ ಸೈದ್ಧಾಂತಿಕ ವಿರೋಧ ಇಟ್ಟುಕೊಂಡಿರುವ ಭಾರತದ ಮುಸ್ಲಿಮರು ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವುದಕ್ಕಾಗಿ ಒಟ್ಟಾಗಿ ‘ಕೈ’ ಜೋಡಿಸಿದ್ದಾರೆ. ಹೇಗಾದರೂ ಮಾಡಿ ಬಿಜೆಪಿ ನೇತೃತ್ವದ ಎನ್​ಡಿಎಯನ್ನು ಅಧಿಕಾರದಿಂದ ದೂರವಿರಿಸಿ ತಮಗೆ ಹೆಚ್ಚು ಅನುಕೂಲಕರ ಎನಿಸಿಕೊಂಡಿರುವ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು ಎಂದು ಪಣತೊಟ್ಟಿರುವುದು ಚುನಾವಣೋತ್ತರ ಸಮೀಕ್ಷೆಯಲ್ಲಿ ಪ್ರಕಟಗೊಂಡಿದೆ. ಸಮೀಕ್ಷೆಯು ಅಂದಾಜಿಸಿದ ಪ್ರಕಾರ ಮುಸ್ಲಿಂ ಸಮುದಾಯದವರು ಚಲಾವಣೆ ಮಾಡಿರುವ ಶೇಕಡಾ 72ರಷ್ಟು ಮತಗಳು ಕೈ ಪಕ್ಷದ ಪಾಲಾಗಿವೆ.

ಉತ್ತರ ಪ್ರದೇಶದ ಫರೂಕಾಬಾದ್​ನ್ಲಲಿ ಏಪ್ರಿಲ್ 29ರಂದು ನಡೆದ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ್ದ ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ಮಾಜಿ ಕೇಂದ್ರ ಕಾನೂನು ಸಚಿವ ಸಲ್ಮಾನ್ ಖುರ್ಷಿದ್ ಅವರ ಸೋದರ ಸೊಸೆ ಸಮಾಜವಾದಿ ಪಕ್ಷದ ನಾಯಕಿ ಮಾರಿಯಾ ಆಲಂ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರದ ವಿರುದ್ಧ “ವೋಟ್ ಜಿಹಾದ್” ಮಾಡಿ ಎಂದು ಭಾರತದ ಮುಸ್ಲಿಂ ಮತದಾರರಿಗೆ ಕರೆ ಕೊಟ್ಟಿದ್ದರು. ಇಂಥ ಹೇಳಿಕೆಗಳು ಮತ್ತು ಸ್ಥಳೀಯವಾಗಿ ಮುಸ್ಲಿ ಸಮುದಾಯದ ಮಂದಿ ಪಠಿಸಿದ ಒಗ್ಗಟ್ಟಿನ ಮಂತ್ರ ಕಾಂಗ್ರೆಸ್​ಗೆ ಅವರ ಮತಗಳು ಪರಿವರ್ತನೆಗೊಳ್ಳುವಂತೆ ಮಾಡಿದೆ.

ಅಲ್ಪಸಂಖ್ಯಾತರು, ವಿಶೇಷವಾಗಿ ಮುಸ್ಲಿಮರು ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕನ್ನು ಹೊಂದಿದ್ದಾರೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ 2006ರ ಹೇಳಿಕೆಯನ್ನು ಉಲ್ಲೇಖಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದ್ದನ್ನು ಈ ವೇಳೆ ಸ್ಮರಿಸಬಹುದು. ಕಾಂಗ್ರೆಸ್ ತನ್ನ ಅಲ್ಪಸಂಖ್ಯಾತ ತುಷ್ಟೀಕರಣ ಮತ್ತು ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿದ್ದು, ಒಬಿಸಿಗಳು, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಮೀಸಲನ್ನು ಕಸಿದು ಮುಸ್ಲಿಮರಿಗೆ ನೀಡಲಿದೆ ಎಂದು ಪ್ರಧಾನಿ ಆರೋಪಿಸಿದ್ದರು. ಮೋದಿ ಅವರಿಗೆ ಮುಸ್ಲಿಮರು ಕಾಂಗ್ರೆಸ್​ಗಾಗಿ ಒಟ್ಟಾಗಿದ್ದಾರೆ ಎಂಬ ಸುಳಿವು ಸಿಕ್ಕಿತ್ತು. ಅದಕ್ಕಾಗಿಯೇ ಅವರು ಹಿಂದೂ ಮತಗಳ ಧ್ರುವೀಕರಣಕ್ಕೆ ತಂತ್ರ ಹೆಣೆದಿದ್ದರು.

ಇದನ್ನೂ ಓದಿ: Exit Poll 2024 : ಕರ್ನಾಟಕದಲ್ಲಿ ಬಿಜೆಪಿಗೆ ನಷ್ಟ, ಕಾಂಗ್ರೆಸ್​ಗೆ ಲಾಭ ; ಜೆಡಿಎಸ್​ಗೆ +1

ಮುಸ್ಲಿಮರು ಏಕೆ ಚುನಾವಣೆಯಲ್ಲಿ ಮುಖ್ಯವಾಗಿದ್ದರು?

ಭಾರತವು ವಿಶ್ವದಲ್ಲಿ ಮೂರನೇ ಅತಿ ಹೆಚ್ಚು ಮುಸ್ಲಿಮರನ್ನು ಹೊಂದಿದ ರಾಷ್ಟ್ರ. ಇದು ದೇಶವೊಂದರ ಅತಿದೊಡ್ಡ ಅಲ್ಪಸಂಖ್ಯಾತ ಸಮುದಾಯ. ಮುಸ್ಲಿಮರು ಭಾರತದ ಜನಸಂಖ್ಯೆಯ ಶೇಕಡಾ 14ರಷ್ಟಿದ್ದಾರೆ. ಭಾರತದ 543 ಲೋಕಸಭಾ ಕ್ಷೇತ್ರಗಳ ಪೈಕಿ 86ರಲ್ಲಿ ಮುಸ್ಲಿಮರ ಜನಸಂಖ್ಯೆ ಕನಿಷ್ಠ ಶೇ.20ರಷ್ಟಿದೆ. ಇದರಲ್ಲಿ 16 ಸ್ಥಾನಗಳಲ್ಲಿ, ಜನಸಂಖ್ಯೆಯಲ್ಲಿ ಆ ಪಾಲು ಶೇಕಡಾ 50ಕ್ಕಿಂತ ಹೆಚ್ಚಾಗಿದೆ. ಈ 86 ಸ್ಥಾನಗಳು 12 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ (ಯುಟಿ) ಇವೆ. ಇದರಲ್ಲಿ 71 ಸ್ಥಾನಗಳು ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಕೇರಳ, ಬಿಹಾರ, ಅಸ್ಸಾಂ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಹರಡಿದೆ.

Continue Reading

ಕರ್ನಾಟಕ

Pralhad Joshi: ಗಾಯಾಳುಗಳನ್ನು ಬೆಂಗಾವಲು ವಾಹನದಲ್ಲೇ ಆಸ್ಪತ್ರೆಗೆ ಸೇರಿಸಿದ ಪ್ರಲ್ಹಾದ್‌ ಜೋಶಿ

Pralhad Joshi: ಧಾರವಾಡ ಕೃಷಿ ವಿವಿ ಬಳಿ ಶನಿವಾರ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ತಮ್ಮ ಬೆಂಗಾವಲು ವಾಹನ ಮತ್ತು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಿ, ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಮಾನವೀಯತೆ ಮೆರೆದಿದ್ದಾರೆ.

VISTARANEWS.COM


on

Union Minister Pralhad Joshi showed humanity by taking the injured to the hospital in his convoy vehicle
Koo

ಹುಬ್ಬಳ್ಳಿ: ಧಾರವಾಡ ಕೃಷಿ ವಿವಿ ಬಳಿ ಶನಿವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ತಮ್ಮ ಬೆಂಗಾವಲು ವಾಹನ ಮತ್ತು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಿ, ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಮಾನವೀಯತೆ ಮೆರೆದಿದ್ದಾರೆ.

ಆಗಿದ್ದೇನು?

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಶನಿವಾರ ಮಧ್ಯಾಹ್ನ ಬೆಳಗಾವಿಗೆ ಹೊರಟಿದ್ದು, ಇದೇ ವೇಳೆ ಮಾರ್ಗ ಮಧ್ಯೆ ಕಾರೊಂದರ ಅಪಘಾತ ಕಂಡಿದೆ. ತಕ್ಷಣ ಸಚಿವರು ತಮ್ಮ ವಾಹನ ನಿಲ್ಲಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ಸ್ಪಂದಿಸಿದ್ದಾರೆ.

ಇದನ್ನೂ ಓದಿ: Karnataka Weather : ಭಾರಿ ಮಳೆಗೆ ಕೆರೆಯಂತಾದ ರಸ್ತೆಗಳು; ಮುಳುಗಡೆಯಾದ ವಾಹನಗಳು

ಧಾರವಾಡದ ಕೃಷಿ ವಿವಿ ಸಮೀಪ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹಣ್ಣಿನ ಅಂಗಡಿಗೆ ನುಗ್ಗಿದೆ. ಪರಿಣಾಮ ಗ್ರಾಹಕನೊಬ್ಬ ಮೃತಪಟ್ಟಿದ್ದು, ಮೂವರು ತೀವ್ರ ಗಾಯಗೊಂಡಿದ್ದರು.

ಅದೇ ಮಾರ್ಗದಲ್ಲಿ ಬೆಂಗಾವಲು ವಾಹನದೊಂದಿಗೆ ಸಂಚರಿಸುತ್ತಿದ್ದ ಸಚಿವ ಪ್ರಲ್ಹಾದ್‌ ಜೋಶಿ ಅವರು ಅಪಘಾತದ ದೃಶ್ಯ ಕಂಡು ವಾಹನ ನಿಲ್ಲಿಸಿ ನರಳುತ್ತಿದ್ದ ಗಾಯಾಳುಗಳನ್ನು ಉಪಚರಿಸಿದ್ದಲ್ಲದೇ, ತಮ್ಮ ಬೆಂಗಾವಲು ವಾಹನ ಹಾಗೂ 108 ಆಂಬ್ಯುಲೆನ್ಸ್ ತರಿಸಿ ತಕ್ಷಣ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

ಇದನ್ನೂ ಓದಿ: World Milk Day: ಹಾಲಿಗೊಂದು ದಿನವೇ ಬೇಕೆಂದಿಲ್ಲ, ವರ್ಷವಿಡೀ ಆಚರಿಸಬಹುದು!

ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಸ್ವತಃ ಸಚಿವರೇ ಕೈಜೋಡಿಸಿ, ಗಾಯಾಳುಗಳಿಗೆ ಧೈರ್ಯ ತುಂಬಿದರು. ಸಚಿವರ ಸಮಯ ಪ್ರಜ್ಞೆಗೆ ಸ್ಥಳೀಯರಿಂದ ಮೆಚ್ಚುಗೆ ಸಹ ವ್ಯಕ್ತವಾಯಿತು.

Continue Reading

ಕರ್ನಾಟಕ

Valmiki Corporation Scam: ವಾಲ್ಮೀಕಿ ನಿಗಮದ ಇಬ್ಬರು ಅಧಿಕಾರಿಗಳಿಗೆ 6 ದಿನ ಎಸ್‌ಐಟಿ ಕಸ್ಟಡಿ

Valmiki Corporation Scam: ವಾಲ್ಮೀಕಿ ನಿಗಮದ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಅವರನ್ನು ಎಸ್ಐಟಿ ಕಸ್ಟಡಿಗೆ ನೀಡಲಾಗಿದೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣದಲ್ಲಿ (Valmiki Corporation Scam) ಬಂಧನವಾಗಿರುವ ವಾಲ್ಮೀಕಿ ನಿಗಮದ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಅವರನ್ನು 6 ದಿನ ಎಸ್ಐಟಿ ಕಸ್ಟಡಿಗೆ ನೀಡಿ ನಗರದ 1ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.

ಪ್ರಕರಣದಲ್ಲಿ ಹಣ ದುರುಪಯೋಗ ಆರೋಪ ಕೇಳಿಬಂದಿದ್ದರಿಂದ ವಾಲ್ಮೀಕಿ ನಿಗಮದ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಲಾಗಿತ್ತು. ಇದರ ಬೆನ್ನಲ್ಲೇ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿತ್ತು. ಹೀಗಾಗಿ ತನಿಖೆ ಆರಂಭಿಸಿದ್ದ ಎಸ್‌ಐಟಿ, ಶುಕ್ರವಾರ ಇಬ್ಬರು ಅಧಿಕಾರಿಗಳನ್ನು ಬಂಧಿಸಿತ್ತು. ಇಂದು ಆರೋಪಿಗಳನ್ನು ವಿಚಾರಣೆಗಾಗಿ 1ನೇ ಎಸಿಎಂಎಂ ಕೋರ್ಟ್ ಹಾಜರುಪಡಿಸಲಾಗಿತ್ತು. ಆದ್ದರಿಂದ ಆರೋಪಿಗಳನ್ನು ವಿಚಾರಣೆಗಾಗಿ ಎಸ್‌ಐಟಿ ಕಸ್ಟಡಿಗೆ ನೀಡಲಾಗಿದೆ.

ಇದನ್ನೂ ಓದಿ | Valmiki Corporation Scam: ವಾಲ್ಮೀಕಿ ನಿಗಮ ಹಗರಣ ತನಿಖೆಗೆ ಸಿಬಿಐ ಎಂಟ್ರಿ ಫಿಕ್ಸ್; ನಾಗೇಂದ್ರ ವಿರುದ್ಧ ಕ್ರಮಕ್ಕೆ ಖರ್ಗೆ ಸೂಚನೆ

ಏನಿದು ಪ್ರಕರಣ?

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಅವರು ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿತ್ತು.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿತ್ತು.

ಇದನ್ನೂ ಓದಿ | Pralhad Joshi: ವಾಲ್ಮೀಕಿ ನಿಗಮದ ಹಗರಣ; ಸಚಿವ ನಾಗೇಂದ್ರರನ್ನು ಬಂಧಿಸಿ, ಸಿಬಿಐ ತನಿಖೆಗೆ ಪ್ರಲ್ಹಾದ್‌ ಜೋಶಿ ಆಗ್ರಹ

88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆಯುತ್ತಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ.

Continue Reading
Advertisement
Prajwal Revanna Case
ಕರ್ನಾಟಕ8 mins ago

Prajwal Revanna Case: ಕಡೆಗೂ ವಿಚಾರಣೆಗೆ ಹಾಜರಾಗದ ಭವಾನಿ ರೇವಣ್ಣ; 7 ಗಂಟೆ ಕಾದು ಎಸ್‌ಐಟಿ ತಂಡ ವಾಪಸ್

Exit Poll 2024
ಪ್ರಮುಖ ಸುದ್ದಿ17 mins ago

Exit Poll 2024 : ತಮಿಳುನಾಡು, ಕೇರಳದಲ್ಲೂ ಅರಳಲಿದೆ ಕಮಲ; ಮೋದಿಗಿದು ಐತಿಹಾಸಿಕ ಸಾಧನೆ

Exit Poll 2024
ದೇಶ35 mins ago

Exit Poll 2024: ಗುಜರಾತ್‌ನಲ್ಲಿ ಬಿಜೆಪಿ ಕ್ಲೀನ್‌ಸ್ವೀಪ್‌, ಉತ್ತರ ಪ್ರದೇಶದಲ್ಲಿ ಮೇಲುಗೈ; ರಾಜ್ಯವಾರು ಎಕ್ಸಿಟ್‌ ಪೋಲ್‌ ವರದಿ ಇಲ್ಲಿದೆ

exit poll 2024
ಪ್ರಮುಖ ಸುದ್ದಿ51 mins ago

Exit Poll 2024: ಮುಸ್ಲಿಮರ ಶೇ.72ರಷ್ಟು ಮತಗಳು ಕಾಂಗ್ರೆಸ್‌ಗೆ; ಮೋದಿ ವಿರುದ್ಧ ಒಂದಾದ ಅಲ್ಪಸಂಖ್ಯಾತರು

Union Minister Pralhad Joshi showed humanity by taking the injured to the hospital in his convoy vehicle
ಕರ್ನಾಟಕ1 hour ago

Pralhad Joshi: ಗಾಯಾಳುಗಳನ್ನು ಬೆಂಗಾವಲು ವಾಹನದಲ್ಲೇ ಆಸ್ಪತ್ರೆಗೆ ಸೇರಿಸಿದ ಪ್ರಲ್ಹಾದ್‌ ಜೋಶಿ

Air Conditioner Safety
ತಂತ್ರಜ್ಞಾನ1 hour ago

Air Conditioner Safety: ಎಸಿ ಏಕೆ ಬ್ಲಾಸ್ಟ್ ಆಗುತ್ತದೆ? ಅಪಾಯ ತಡೆಯುವುದು ಹೇಗೆ?

Valmiki Corporation Scam
ಕರ್ನಾಟಕ1 hour ago

Valmiki Corporation Scam: ವಾಲ್ಮೀಕಿ ನಿಗಮದ ಇಬ್ಬರು ಅಧಿಕಾರಿಗಳಿಗೆ 6 ದಿನ ಎಸ್‌ಐಟಿ ಕಸ್ಟಡಿ

Ballari DC Prashanth Kumar Mishra visit to Vote counting centre Review of final preparations
ಬಳ್ಳಾರಿ2 hours ago

Lok Sabha Election 2024: ಬಳ್ಳಾರಿಯ ಮತ ಎಣಿಕೆ ಕೇಂದ್ರಕ್ಕೆ ಡಿಸಿ ಭೇಟಿ: ಅಂತಿಮ ಸಿದ್ಧತೆ ಪರಿಶೀಲನೆ

Exit poll 2024
ಪ್ರಮುಖ ಸುದ್ದಿ2 hours ago

Exit Poll 2024 : ಕರ್ನಾಟಕದಲ್ಲಿ ಬಿಜೆಪಿಗೆ ನಷ್ಟ, ಕಾಂಗ್ರೆಸ್​ಗೆ ಲಾಭ ; ಜೆಡಿಎಸ್​ಗೆ +1

100 kg of banned plastic seized by municipal council in Shira
ಕರ್ನಾಟಕ2 hours ago

Shira News: ಶಿರಾದಲ್ಲಿ ನಗರಸಭೆಯಿಂದ ಗೋದಾಮಿನ ಮೇಲೆ ದಾಳಿ; 100 ಕೆಜಿ ನಿಷೇಧಿತ ಪ್ಲಾಸ್ಟಿಕ್‌ ವಶ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು4 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌