Loksabha 2024 Modi Marks Card Vistara News SurveyLoksabha 2024: Vistara Survey: ಮೋದಿ ಸರ್ಕಾರಕ್ಕೆ ಕನ್ನಡಿಗರು ಎಷ್ಟು ಅಂಕ ಕೊಟ್ಟರು?: ಇಲ್ಲಿದೆ ಮೋದಿ ಮಾರ್ಕ್ಸ್‌ ಕಾರ್ಡ್‌ - Vistara News

ಕರ್ನಾಟಕ

Loksabha 2024: Vistara Survey: ಮೋದಿ ಸರ್ಕಾರಕ್ಕೆ ಕನ್ನಡಿಗರು ಎಷ್ಟು ಅಂಕ ಕೊಟ್ಟರು?: ಇಲ್ಲಿದೆ ಮೋದಿ ಮಾರ್ಕ್ಸ್‌ ಕಾರ್ಡ್‌

‘ನಮೋ’ ಸರ್ಕಾರದ ಸಾಧನೆಗಳು, ಕಾರ್ಯವೈಖರಿ ಬಗ್ಗೆ ಸಮೀಕ್ಷೆ ಇದಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಸ್ತಾರ ನ್ಯೂಸ್‌ ಸಮೀಕ್ಷೆ ನಡೆಸಿದೆ.

VISTARANEWS.COM


on

Modi Marks Card Vistara News Survey
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 9 ವರ್ಷ ಪೂರೈಸಿದೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ. ಮೋದಿ ಸರ್ಕಾರದ 9 ವರ್ಷಗಳ ಆಡಳಿತ ಜನರಿಗೆ ತೃಪ್ತಿ ತಂದಿದ್ಯಾ..? ಕರುನಾಡ ಮಂದಿ BJP ಕಾರ್ಯವೈಖರಿಗೆ ಕೊಡುವ ಮಾರ್ಕ್ಸ್‌ ಎಷ್ಟು..? ಕೇಂದ್ರದ ಪ್ಲಸ್‌ ಪಾಯಿಂಟ್ ಏನು..? ಮೈನಸ್ ಪಾಯಿಂಟ್ ಏನು..? ಈ ಬಗ್ಗೆ ರಾಜ್ಯದ ಎಲ್ಲ ಜಿಲ್ಲೆ, ತಾಲೂಕುಗಳಿಂದ ವಿಸ್ತಾರ ವರದಿಗಾರರು ನಡೆಸಿರುವ ಮೆಗಾ ಸಮೀಕ್ಷೆ ಇಲ್ಲಿದೆ.

ರಾಜ್ಯದೆಲ್ಲೆಡೆ ಅತಿ ವರದಿಗಾರರ ಬೃಹತ್‌ ಜಾಲ ಹೊಂದಿರುವ ವಿಸ್ತಾರ ನ್ಯೂಸ್‌, ಸಾಮಾನ್ಯ ಜನರ ಮುಂದೆ ಒಟ್ಟು 10 ಪ್ರಶ್ನೆಗಳನ್ನಿಟ್ಟು ಆ ಮೂಲಕ ಅವರ ಮನದಾಳವನ್ನು ಅರಿಯುವ ಪ್ರಯತ್ನ ಮಾಡಿದೆ. ಈಗತಾನೆ ವಿಧಾನಸಭೆ ಚುನಾವಣೆಗಳು ನಡೆದು ಕಾಂಗ್ರೆಸ್‌ ಸರ್ಕಾರ ರಚನೆಯಾಗಿರುವ ಬೆನ್ನಿಗೇ ಈ ಸಮೀಕ್ಷೆ ನಡೆದಿರುವುದು ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಜತೆಗೆ ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳಿಗೂ ಮಾರ್ಗಸೂಚಿಯಾಗಲಿದೆ. ಸಮೀಕ್ಷೆಗೆ ಸಜನರ ಸ್ಪಂದನೆ ಹಾಗೂ ಅದರ ಕಾರಣಗಳು ಈ ಕೆಳಕಂಡಂತಿವೆ.

ಪ್ರಶ್ನೆ 01: ನರೇಂದ್ರ ಮೋದಿಯವರ 9 ವರ್ಷಗಳ ಆಡಳಿತ ಹೇಗಿದೆ..?

Vistara news survey about mood of the karnataka people about Narendra Modi Govt before Loksabha 2024

2014 ರ ಮೇ 26 ರಂದು ನರೇಂದ್ರ ಮೋದಿ ಪ್ರಥಮ ಬಾರಿಗೆ ಭಾರತದ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. 2019 ರ ಮೇ 30 ರಂದು ಎರಡನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಈ ಮೇಲಿನ ಪ್ರಶ್ನೆಗೆ ಶೇ.36.7 ರಷ್ಟು ಜನ ಮೋದಿ ಆಡಳಿತ ಅತ್ಯುತ್ತಮವಾಗಿದೆ ಎಂದು ತಿಳಿಸಿದ್ದಾರೆ. ಇನ್ನು ಶೇ.30.1 ರಷ್ಟು ಜನ ಮೋದಿಯವರದ್ದು ಉತ್ತಮ ಆಡಳಿತ ಎಂದಿದ್ದಾರೆ. ಸಾಧಾರಣವಾಗಿದೆ ಮೋದಿ ಆಡಳಿತ ಎಂದವರ ಸಂಖ್ಯೆ ಶೇ.21.4ರಷ್ಟಿದೆ.

ಮೋದಿ ಆಡಳಿತ ಸರಿಯಿಲ್ಲ… ಕಳಪೆಯಾಗಿದೆ ಎನ್ನುವರರ ಸಂಖ್ಯೆ ಶೇ.11.8ರಷ್ಟಿದೆ. ಈ ಅಂಕಿ-ಅಂಶವನ್ನ ಗಮನಿಸಿದ್ರೆ ಮೋದಿ ಆಡಳಿತದ ಬಗ್ಗೆ ಬಹುತೇಕರಿಗೆ ಅಂದ್ರೆ ಶೇ.88.2ರಷ್ಟು ಜನರಿಗೆ ಸಮಾಧಾನ ಇದ್ದಂತೆ ಕಾಣುತ್ತಿದೆ.

ಪ್ರಶ್ನೆ 02: ಮೋದಿ ಸರ್ಕಾರದ ಯೋಜನೆಗಳ ಲಾಭ ನಿಮಗೆ ಸಿಕ್ಕಿದೆಯಾ..?

Vistara news survey about mood of the karnataka people about Narendra Modi Govt before Loksabha 2024

ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಲವಾರು ಯೋಜನೆಗಳನ್ನ ಜಾರಿಗೆ ತಂದಿದೆ. ಅದರಲ್ಲಿ ಮುಖ್ಯವಾಗಿ ಸ್ವಚ್ಛ ಭಾರತ್​ ಅಭಿಯಾನ, ಡಿಜಿಟಲ್​ ಇಂಡಿಯಾ, ಮೇಕ್​ ಇನ್​ ಇಂಡಿಯಾ, ಸ್ಕಿಲ್​ ಇಂಡಿಯಾ, ಮುದ್ರಾ ಯೋಜನೆ, ಜನ್​ಧನ್​ ಅಕೌಂಟ್​, ಸ್ಟಾರ್ಟ್​ ಅಪ್​ ಇಂಡಿಯಾ, ರೈತ ಸಮ್ಮಾನ್​, ಪ್ರಧಾನ್​ ಮಂತ್ರಿ ಆವಾಸ್​ ಯೋಜನೆ, ಉಜ್ವಲ ಯೋಜನೆ, ಪ್ರಧಾನಮಂತ್ರಿ ಫಸಲ್​ ಬಿಮಾ ಯೋಜನೆ, ಆಯುಷ್ಮಾನ್​ ಭಾರತ್​, ಜನೌಷಧಿ ಕೇಂದ್ರ, ಅಟಲ್​ ಪಿಂಚಣಿ, ವಯೋವಂದನ ಯೋಜನೆ, ಮನೆ ಮನೆಗೂ ನೀರು ಪ್ರಮುಖವಾದವು.

ಪ್ರಶ್ನೆ 03: ಮೋದಿ ಸರ್ಕಾರದ ಸಚಿವರ ಕಾರ್ಯವೈಖರಿ ಹೇಗಿದೆ..?

Vistara news survey about mood of the karnataka people about Narendra Modi Govt before Loksabha 2024

ಮೋದಿ ಸರ್ಕಾರದ ಸಚಿವರು ಹೇಗೆ ಕೆಲಸ ಮಾಡ್ತಿದ್ದಾರೆ ಅಂತ ಕೇಳಿದ್ರೆ ಅತ್ಯುತ್ತಮ ಮತ್ತು ಉತ್ತಮ ಅಂತ ಶೇ.56.6 ರಷ್ಟು ಜನ ಹೇಳಿದ್ದಾರೆ. ಶೇ.20.9 ರಷ್ಟು ಜನ ಮಾತ್ರ ಉತ್ತಮವೂ ಅಲ್ಲ, ಕಳಪೆಯೂ ಅಲ್ಲ ಸಾಧಾರಣವಾಗಿ ಅವರ ಕೆಲಸ ಎಂದಿದ್ದಾರೆ. ಇನ್ನು ಶೇ.22.5ರಷ್ಟು ಜನ ಮಾತ್ರ ಮೋದಿ ಕ್ಯಾಬಿನೆಟ್​ ಕಾರ್ಯವೈಖರಿ ಕಳಪೆಯಾಗಿದೆ ಅಂತ ಹೇಳಿದ್ದಾರೆ.

ಮೋದಿ ಕೆಲಸದ ಬಗ್ಗೆ ಯಾರಿಗೂ ಚಕಾರವೆತ್ತದಿದ್ರೂ, ಅವರ ಕ್ಯಾಬಿನೆಟ್​ನ ಸಚಿವರ ಕಾರ್ಯದ ಬಗ್ಗೆ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆಲವು ಸಚಿವರು ತಮ್ಮ ಖಾತೆಗಳನ್ನ ಉತ್ತಮವಾಗಿ ನಿಭಾಯಿಸುತ್ತಿದ್ರೂ, ಇನ್ನು ಇಲಾಖೆಗಳಲ್ಲಿ ಹೇಳಿಕೊಳ್ಳುವಂತಹ ಕೆಲಸ ಆಗ್ತಿಲ್ಲ ಎಂಬ ಹೇಳಿಕೆ ನೀಡಿದ್ದಾರೆ.

ಪ್ರಶ್ನೆ 04: ಮೋದಿ ಸರ್ಕಾರ ಬೆಲೆ ಏರಿಕೆ ತಡೆಯುವಲ್ಲಿ ವಿಫಲವಾಗಿದ್ಯಾ..?

Vistara news survey about mood of the karnataka people about Narendra Modi Govt before Loksabha 2024

ಕಳೆದ 9 ವರ್ಷಗಳಲ್ಲಿ ಕೇಂದ್ರ ಸರ್ಕಾರ ಬೆಲೆ ಏರಿಕೆಯನ್ನು ತಡೆಯುವಲ್ಲಿ ವಿಫಲವಾಗಿದೆ ಅಂತ ಶೇ.56.1 ರಷ್ಟು ಹೇಳಿದ್ದಾರೆ. ಇಲ್ಲ, ಸರ್ಕಾರ ಸಮರ್ಥವಾಗಿ ಬೆಲೆ ಏರಿಕೆ ತಡೆದಿದೆ ಅನ್ನೋವ್ರ ಸಂಖ್ಯೆ ಶೇ.43.9 ರಷ್ಟಿದೆ. ಗ್ಯಾಸ್​ ಸಿಲಿಂಡರ್​ ಬೆಲೆ ಏರಿಕೆ, ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆ, ಬೇಳೆ, ಕಾಳುಗಳ ಬೆಲೆ ಏರಿಕೆ, ದಿನಸಿ ಪದಾರ್ಥಗಳ ಬೆಲೆ ಏರಿಕೆ, ಜನರ ದಿನನಿತ್ಯದ ವೆಚ್ಚ ಹೆಚ್ಚಳ ಆಗಿರುವುದರ ಬಗ್ಗೆ ಸಾಮಾನ್ಯ ಜನರಲ್ಲಿ ಅಸಮಧಾನ ಕಂಡುಬಂದಿದೆ.

ಪ್ರಶ್ನೆ 05: ಯೋಜನೆ ಜನರಿಗೆ ತಲುಪಿಸುವಲ್ಲಿ ಭ್ರಷ್ಟಾಚಾರ ಕಡಿಮೆ ಆಗಿದೆಯಾ..?

Vistara news survey about mood of the karnataka people about Narendra Modi Govt before Loksabha 2024

ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನ ಜಾರಿಗೆ ತರುತ್ತಿದೆ. ಯಾವುದೇ ಯೋಜನೆ ಜನಸಾಮಾನ್ಯರಿಗೆ ತಲುಪಬೇಕಾದ್ರೆ ಭ್ರಷ್ಟಚಾರಕ್ಕೆ ಕಡಿವಾಣ ಬೀಳಬೇಕು. ಈ ಹಿನ್ನೆಲೆಯಲ್ಲಿ ಈ ಪ್ರಶ್ನೆಯನ್ನ ಜನರನ್ನ ಕೇಳಿದಾಗ, ಬಹುತೇಕರು ಅಂದ್ರೆ ಶೇ.79 ರಷ್ಟು ಜನ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರ ಕಡಿಮೆ ಆಗಿದೆ ಎಂದಿದ್ದಾರೆ.

ನಾ ಖಾವೂಂಗ, ನಾ ಖಾನೇ ದೂಂಗಾ ಎಂದು ಹೇಳಿದ್ದ ಮೋದಿ ಕೇಂದ್ರದ ಯೋಜನೆಗಳನ್ನ ಜನರಿಗೆ ತಲುಪಿಸುವಲ್ಲಿ ಯಶಸ್ವಿಯಾದಂತೆ ಕಾಣುತ್ತಿದೆ. ಇದಕ್ಕೆ ಮತ್ತೊಂದು ಪ್ರಮುಖ ಕಾರಣ ಎಂದರೆ ಡಿಜಿಟಲ್​ ಪೇಮೆಂಟ್​ ಸಿಸ್ಟಂ, ಜನ್​ಧನ್​ ಮೂಲಕ ಪ್ರತಿಯೊಬ್ಬರಿಗೂ ಬ್ಯಾಂಕ್​ ಅಕೌಂಟ್​ ಮಾಡಿಸಲಾಯಿತು. ಜನರ ಬ್ಯಾಂಕ್​ ಅಕೌಂಟ್​ಗೆ ನೇರವಾಗಿ ಹಣ ವರ್ಗಾವಣೆ ಮಾಡುವ ಮೂಲಕ ಮಧ್ಯವರ್ತಿಗಳ ಹಾವಳಿಯನ್ನ ತಪ್ಪಿಸುವಲ್ಲಿ ಕೇಂದ್ರ ಯಶಸ್ವಿಯಾಯ್ತು.

ಪ್ರಶ್ನೆ 06: ಭಯೋತ್ಪಾದನೆ ತಡೆಯುವ ವಿಚಾರದಲ್ಲಿ ಸರ್ಕಾರದ ಕ್ರಮ ಹೇಗಿದೆ..?

Vistara news survey about mood of the karnataka people about Narendra Modi Govt before Loksabha 2024

ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಭಯೋತ್ಪಾದನೆ ತಡೆಯಲು ಮಹತ್ವದ ಕ್ರಮಗಳನ್ನ ತೆಗೆದುಕೊಂಡಿದೆ. ಕಳೆದ 9 ವರ್ಷಗಳಲ್ಲಿ ಮೋದಿ ಸರ್ಕಾರ ಭಯೋತ್ಪಾದಕರ ವಿರುದ್ದ ತೆಗೆದುಕೊಂಡ ಕ್ರಮಗಳು ಅನೇಕ ಇವೆ.

  • ಮ್ಯಾನ್ಮಾರ್​​ ಸರ್ಜಿಕಲ್​ ದಾಳಿ – 2015ರಲ್ಲಿ ಆಪರೇಶನ್​ ಹಾಟ್​ ಪರ್ಸ್ಯೂಟ್​ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಮ್ಯಾನ್ಮಾರ್​ ಗಡಿಯೊಳಕ್ಕೆ ನುಗ್ಗಿ ಎನ್​ಎಸ್​ಸಿಎನ್​-ಕೆ ಸಂಘಟನೆಯ 38 ಉಗ್ರರನ್ನ ಸದೆಬಡಿದಿತ್ತು.
  • ಪಾಕ್​ ಸರ್ಜಿಕಲ್​ ಸ್ಟ್ರೈಕ್​ – 2016 ರ ಸೆ.18ರಂದು ಉರಿಯಲ್ಲಿ ಉಗ್ರರು ದಾಳಿ ನಡೆಸಿ 16 ಯೋಧರ ಸಾವಿಗೆ ಕಾರಣರಾಗಿದ್ದರು. ಇದಕ್ಕೆ ಪ್ರತೀಕಾರವಾಗಿ ಸೆ.29ರಂದು ಪಾಕಿಸ್ತಾನದಲ್ಲಿದ್ದ ಉಗ್ರರ ಅಡಗುತಾಣಗಳ ಮೇಲೆ ಭಾರತೀಯ ಸೇನೆ ದಾಳಿ ಸುಮಾರು 70 ಉಗ್ರರನ್ನ ಕೊಂದುಹಾಕಿತು.
  • ಪಾಕ್​ ಏರ್​ಸ್ಟ್ರೈಕ್​ – 2019 ರ ಫೆ.14ರಂದು ಪುಲ್ವಾಮಾ ದಲ್ಲಿ ಪಾಕ್​ ಉಗ್ರರು ದಾಳಿ ಮಾಡಿ 40 ಯೋಧರನ್ನ ಬಲಿ ತೆಗೆದುಕೊಂಡಿದ್ದರು. ಇದರ ಸೇಡು ತೀರಿಸಿಕೊಳ್ಳಲು ಪಾಕಿಸ್ತಾನದಲ್ಲಿದ್ದ ಉಗ್ರರ ಅಡಗುತಾಣ ಬಾಲಾಕೋಟ್​ ಮೇಲೆ ಭಾರತೀಯ ವಾಯುಸೇನೆ ಫೆ.26 ರಂದು ದಾಳಿ ನಡೆಸಿ ಉಗ್ರರು ತಾಣಗಳನ್ನ ಧ್ವಂಸಗೊಳಿಸಿತ್ತು.
  • ಡೋಕ್ಲಾಂ ಸಂಘರ್ಷ – 2017 ರಲ್ಲಿ ಚೀನಾದ ಯೋಧರು ಭಾರತದ ಗಡಿಯೊಳಗೆ ಬಂದು ಭಾರತ-ಭೂತಾನ್​-ಚೀನಾ ಗಡಿ ಡೋಕ್ಲಾಂನಲ್ಲಿ ರಸ್ತೆ ನಿರ್ಮಾಣಕ್ಕೆ ಯತ್ನಿಸಿದ್ದರು. ಆಗ ಸ್ಥಳಕ್ಕೆ ಧಾವಿಸಿದ ಭಾರತೀಯ ಸೇನೆ ಚೀನಾ ಸೈನಿಕರನ್ನು ಕಾಲ್ಕೀಳುವಂತೆ ಮಾಡಿದರು.
  • ಗಲ್ವಾನ್​ ಸಂಘರ್ಷ- 2020 ರ ಜೂನ್​ನಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಗಲ್ವಾನ್​ ನಲ್ಲಿ ಸಂಘರ್ಷ ಏರ್ಪಟ್ಟಿತ್ತು. ಲಾಠಿ ಮತ್ತು ಮುಷ್ಠಿಯುದ್ಧದಲ್ಲಿ 38 ಚೀನಿ ಯೋಧರು ಹತರಾದರು.
  • 2019 ರಲ್ಲಿ ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ನಂತರ ಉಗ್ರರ ಉಪಟಳ ನಿಗ್ರಹಿಸಲು ವಿಶೇಷ ಕಾರ್ಯಾಚರಣೆ ನಡೆಸಲಾಯಿತು. 2022 ರ ದಾಖಲೆಗಳ ಪ್ರಕಾರ 172 ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಇದರಲ್ಲಿ 42 ಪಾಕಿಸ್ತಾನದ ಉಗ್ರರೂ ಇದ್ದಾರೆ.

ಪ್ರಶ್ನೆ 07: ಕೊರೊನಾ ಸಂದರ್ಭದಲ್ಲಿ ಕೇಂದ್ರ ಹೇಗೆ ಕಾರ್ಯನಿರ್ವಹಿಸಿದೆ..?

Vistara news survey about mood of the karnataka people about Narendra Modi Govt before Loksabha 2024

ವಿಶ್ವವೇ ಕಂಡು ಕೇಳರಿಯದ ಆತಂಕಕ್ಕೆ ಈಡಾಗಿದ್ದು ಕೊವಿಡ್​ ಸಮಯದಲ್ಲಿ. ಕರೋನಾ ಹೆಮ್ಮಾರಿ ಜನರ ಜೀವ ತೆಗೆಯಲು ಶುರುಮಾಡಿದಾಗ ಅದರ ವಿರುದ್ಧ ಹೋರಾಡಲು ಲಸಿಕೆ ತಯಾರಿಸಲು ಮತ್ತು ಆದಷ್ಟು ಶೀಘ್ರ ಅದು ಜನರಿಗೆ ಸಿಗುವಂತೆ ಮಾಡಿದ ಹೆಗ್ಗಳಿಕೆ ಮೋದಿ ಸರ್ಕಾರದ್ದು. ಲಾಕ್​​ಡೌನ್​ ಹೇರಿದರೆ ದೇಶದ ಆರ್ಥಿಕತೆ ಹೇಗೆ ಎಂದು ಬಲಾಢ್ಯ ರಾಷ್ಟ್ರಗಳು ಯೋಚನೆ ಮಾಡುತ್ತಿದ್ದಾಗ ಭಾರತದಲ್ಲಿ ಲಾಕ್​ಡೌನ್​ ಘೋಷಣೆ ಮಾಡಿದರು. ಸಾಮಾನ್ಯ ಜನಜೀವನಕ್ಕೆ ಬಹಳ ತೊಂದರೆ ಆದರೂ, ದೇಶದ ಒಳಿತಿಗಾಗಿ ಮೋದಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಜನರು ನಿಯಮ ಪಾಲನೆ ಮಾಡಿದರು.

ಈ ಸಮಯದಲ್ಲಿ ದೇಶದಲ್ಲಿ ಒಂದೂ ಪಿಪಿಇ ಕಿಟ್​ ತಯಾರಾಗುತ್ತಿರಲಿಲ್ಲ. ಎಲ್ಲವನ್ನೂ ಆಮದು ಮಾಡಲಾಗುತ್ತಿತ್ತು. ಆದರೆ ಮೋದಿ ಕರೆಗೆ ಹಾಗೂ ಸರ್ಕಾರದ ಬೆಂಬಲಕ್ಕೆ ಸ್ಪಂದಿಸಿದ ಭಾರತದ ಉದ್ಯಮ, ಗಾರ್ಮೆಂಟ್​ಗಳು ಪ್ರತಿನಿತ್ಯ 2ಲಕ್ಷ ಪಿಪಿಇ ಕಿಟ್​ ಉತ್ಪಾದಿಸುವ ಹಂತಕ್ಕೆ ತಲುಪಿತು. ಕೋವಿಡ್​ ಕಿಟ್​​ ಉತ್ಪಾದನೆಯಲ್ಲಿ ವಿಶ್ವದಲ್ಲೇ ಪ್ರಮುಖ ದೇಶವಾಯಿತು.

2020ರ ಮಾರ್ಚ್​​ನಲ್ಲಿ ಪಿಎಂ ಕೇರ್ಸ್​ ನಿಧಿ ಸ್ಥಾಪಿಸಿದರು. ಇದಕ್ಕೆ ದೇಶದ ಸಾಮಾನ್ಯ ಜನರು, ಉದ್ಯಮಿಗಳು, ಸರ್ಕಾರಿ ಉದ್ಯಮಿಗಳು ಸೇರಿ ಅನೇಕರು ದೇಣಿಗೆ ನೀಡಿದರು. ಪಿಎಂ ಕೇರ್ಸ್​ ನಿಧಿಯ ಮೂಲಕ ರಾಜ್ಯಗಳಲ್ಲಿ ಆಕ್ಸಿಜನ್​ ಉತ್ಪಾದನೆ ಘಟಕ ಸ್ಥಾಪನೆ ಮಾಡಲಾಯಿತು, ಲಕ್ಷಾಂತರ ಆಕ್ಸಿಜನ್​ ಕಾನ್ಸಂಟ್ರೇಟರ್​​ಗಳನ್ನು ಭಾರತದಲ್ಲೇ ಉತ್ಪಾದಿಸಿ ಹಂಚಲಾಯಿತು. ಪ್ರತಿ ಜಿಲ್ಲೆಯಲ್ಲೂ ಕೋವಿಡ್ ಕೇಂದ್ರ ತೆರೆಯಲಾಯಿತು. ವಿವಿಧ ವಿದೇಶಿ ಲಸಿಕಾ ಕಾಂಪನಿಗಳು ಹೆಚ್ಚಿನ ಹಣಕ್ಕೆ ತಮ್ಮ ಲಸಿಕೆ ಮಾರಲು ಹೊರಟಿದ್ದಾರೆ, ಸ್ವದೇಶಿ ಲಸಿಕೆಗೆ ಮೋದಿ ಒತ್ತು ನೀಡಿದರು.

ಒಂದಲ್ಲ ಎಂದು ಎರಡು ಲಸಿಕೆಗಳನ್ನು ದೇಶದಲ್ಲೇ ಉತ್ಪಾದನೆ ಮಡಲಾಯಿತು. ಕೋವಿನ್​ ಮೊಬೈಲ್​ ಆಪ್​ ಮೂಲಕ, ಸಂಪೂರ್ಣ ಪಾರದರ್ಶಕವಾಗಿ ಲಸಿಕೆ ನೀಡಲಾಯಿತು. ಮೊದಲಿಗೆ ಶ್ರೀಮಂತರಿಗೆ, ರಾಜಕಾರಣಿಗಳಿಗೆ ನೀಡುವುದಾಗಲಿ, ಕಾಳಸಂತೆಯಲ್ಲಿ ಮಾರಾಟಕ್ಕೆ ಅವಕಾಶವಿಲ್ಲದಂತೆ ವಿತರಿಸಲಾಯಿತು. ಅಮೆರಿಕದಲ್ಲಿಯೂ ಕೈಬರೆಹದ ಲಸಿಕಾ ಪ್ರಮಾಣಪತ್ರ ನೀಡಿದರೆ ಭಾರತದಲ್ಲಿ ಡಿಜಿಟಲ್​​ ಪ್ರಮಾಣಪತ್ರ ನೀಡಲಾಯಿತು. ಇದು ವಿದೇಶದಲ್ಲೂ ಮೆಚ್ಚುಗೆಗೆ ಪಾತ್ರವಾಯಿತು. ತಮಗೆ ಅನನುಕೂಲವಾದರೂ, ತಮ್ಮ ಪ್ರೀತಿಪಾತ್ರರೇ ಅನೇಕರು ಮೃತಪಟ್ಟರೂ ಸರ್ಕಾರದ ಮೇಳೆ ಜನರ ವಿಶ್ವಾಸ ಉಳಿದಿದೆ. ಮೋದಿ ಸರ್ಕಾರ ತನ್ನ ಕೈಲಾದಷ್ಟು ಕೆಲಸ ಮಾಡಿದೆ ಎಂಬ ಭಾವನೆ ಇಲ್ಲಿ ಕಾಣುತ್ತಿದೆ.

ಪ್ರಶ್ನೆ 08: ನೋಟ್ ಬ್ಯಾನ್ ದೇಶದ ಆರ್ಥಿಕತೆಗೆ ಅನುಕೂಲವಾಗಿದೆಯೇ..?

Vistara news survey about mood of the karnataka people about Narendra Modi Govt before Loksabha 2024

2016ರ ನವೆಂಬರ್​​ 8 ರಂದು ರಾತ್ರಿ 8.15 ಗಂಟೆಗೆ ಟಿವಿ ಮುಂದೆ ಕಾಣಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ, ಇಂದು ರಾತ್ರಿಯಿಂದಲೇ 500 ರೂ. ಹಾಗೂ 1000 ರೂ. ನೋಟುಗಳು ಮಾನ್ಯತೆಯನ್ನು ಕಳೆದುಕೊಳ್ಳುತ್ತವೆ ಎಂದು ಘೋಷಿಸಿದರು. ದೇಶದಲ್ಲಿ ಕಪ್ಪು ಹಣವನ್ನು ಮಟ್ಟ ಹಾಕುವ ಸಲುವಾಗಿ, ಭ್ರಷ್ಟಾಚಾರಕ್ಕೆ ಹಣ ನೀಡಿಕೆಯನ್ನು ತಡೆಯಲು ಈ ನೋಟು ಅಮಾನ್ಯೀಕರಣ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂದು ಮೋದಿ ಹೇಳಿದ್ದರು.

1000 ರೂ. ನೋಟು ಅನೇಕರ ಕೈಯಲ್ಲಿ ಇರಲಿಲ್ಲವಾದರೂ, 500 ರೂ. ನೋಟು ಸಾಮಾನ್ಯ ಜನರಲ್ಲೂ ಇತ್ತು, ಇದು ಆಘಾತಕ್ಕೆ ಕಾರಣವಾಯಿತು. ತಮ್ಮ ಬಳಿಯಿರುವ ಹಣವನ್ನು ಬದಲಾಯಿಸಿಕೊಳ್ಳಲು ಜನರು ಬ್ಯಾಂಕುಗಳ ಎದುರು ಸಾಲುಗಟ್ಟಿ ನಿಂತರು. ರೈಲ್ವೆ, ವಿಮಾನ ನಿಲ್ದಾಣ, ಸರ್ಕಾರಿ ಬಸ್​ ಟಿಕೆಟ್​ ಬುಕ್ಕಿಂಗ್​, ಆಸ್ಪತ್ರೆ ಹಾಗೂ ಪೆಟ್ರೋಲ್​ ಬಂಕ್​ಗಳಲ್ಲಿ ನವೆಂಬರ್​ 11ರ ವರೆಗೂ ಈ ನೋಟುಗಳನ್ನು ಬಳಸಲು ಅವಕಾಶವಿತ್ತು.

ಇತರೆ ದೇಶಗಳಲ್ಲೂ ಅಮಾನ್ಯೀಕರಣ ಮಡಲಾಗಿತ್ತು. 1984ರಲ್ಲಿ ಮುಹಮ್ಮದು ಬುಹಾರಿ ನೇತೃತ್ವದ ಸರ್ಕಾರ ಹೊಸ ನೋಟುಗಳನ್ನು ಪರಿಚಯಿಸಿ ಹಳೆ ನೋಟುಗಳನ್ನು ನಿಷೇಧಿಸಿತು. ಆದರೆ ಇದರಿಂದಾಗಿ ಹಣದುಬ್ಬರ ಹಾಗೂ ಸಾಲದ ಹೊರೆ ಹೆಚ್ಚಾಗಿ ಆರ್ಥಿಕತೆ ಕುಸಿಯಿತು. ಅಲ್ಲದೇ ಮುಹಮ್ಮದು ಬುಹಾರಿ ಸರ್ಕಾರ ಇದನ್ನು ನಿಭಾಯಿಸುವಲ್ಲಿ ವಿಫಲವಾಯಿತು.

1982ರಲ್ಲಿ ತೆರಿಗೆ ವಂಚಕರನ್ನು ತಡೆಯಲು ಘಾನಾ ದೇಶದಲ್ಲಿ 50 ಸಿಡಿ ನೋಟುಗಳನ್ನು ನಿಷೇಧ ಮಾಡಲಾಯಿತು. ಅಧಿಕ ದ್ರವ್ಯತೆ ಮತ್ತು ಭ್ರಷ್ಟಾಚಾರ ತಡೆಗಟ್ಟುವ ಗುರಿಯನ್ನು ಹೋದಲಾಗಿತ್ತು. ಇದು ದೇಶದ ಜನರು ಕಪ್ಪು ಮಾರುಕಟ್ಟೆ, ವಿದೇಶಿ ಕರೆನ್ಸಿ ಬೆಂಬಲಿಸಲು ಕಾರಣವಾಯಿತು. ಕರೆನ್ಸಿಗಾಗಿ ಕಪ್ಪುಹಣದ ಮಾರುಕಟ್ಟೆ ವ್ಯಾಪಕವಾಗಿ ಬೆಳೆಯಿತು. ಈ ಎಲ್ಲ ಅಂಶಗಳು ಅರ್ಥವ್ಯವಸ್ಥೆಯನ್ನು ದುರ್ಬಲನನ್ನಾಗಿಸಿತ್ತು. ಈ ರೀತಿ ಅನೇಕ ದೇಶಗಳಲ್ಲಿ ನೋಟು ಅಮಾನ್ಯೀಕರಣ ವಿಫಲವಾಗಿತ್ತು. ಭಾರತದಲ್ಲೂ ಅನೇಕ ಮಧ್ಯಮ ಕೈಗಾರಿಕೆಗಳು ಮುಚ್ಚಿದವು.

ಇಷ್ಟೆಲ್ಲ ಸಂಕಷ್ಟದ ನಂತರವೂ ಜನರು ಪ್ರಧಾನಿ ಮೋದಿಯವರ ಕುರಿತು ವಿಶ್ವಾಸ ವ್ಯಕ್ತಪಡಿಸಿದರು. ಮೋದಿ ದೇಶಕ್ಕಾಗಿ ಒಳ್ಳೆಯದನ್ನು ಮಾಡಿದ್ದಾರೆ, ಅವರಿಗೆ ನಾವು ಬೆಂಬಲಿಸುತ್ತೇವೆ ಎಂದರು. ಕೆಲವೆಡೆ ಕ್ಯೂನಲ್ಲಿ ನಿಂತಿದ್ದಾಗ ಹೃದಯಾಘಾತವಾಗಿ ಮೃತಪಟ್ಟ ಘಟನೆಗಳೂ ನಡೆದವು. ಆಟೊಮೊಬೈಲ್​​, ಕೃಷಿ, ಕೈಗಾರಿಕೆ ಕ್ಷೇತ್ರಗಳಿಗೆ ಹಿನ್ನಡೆ ಆಯಿತು. ಆದರೆ ನೋಟು ಅಮಾನ್ಯೀಕರಣದ ಪರಿಣಾಮ ಡಿಜಿಟಲ್​ ವಹಿವಾಟು ಗಗನಕ್ಕೇರಿತು. ಡಿಜಿಟಲ್​ ವಹಿವಾಟು ಹೆಚ್ಚಾಗಿ, ಯುಪಿಐ ಬಳಕೆ ಸಾಮಾನ್ಯ ಜನರಿಗೆ, ತಳ್ಳುಗಾಡಿ ವ್ಯಾಪಾರಿಗಳಿಗೂ ಅಭ್ಯಾಸ ಆಯಿತು ಈ ಡಿಜಿಟಲ್​​​​ ವಾತಾವರಣವು ಕೋವಿಡ್​​- 19 ರ ಸಮಯದಲ್ಲಿ ಜನರನ್ನು ಕಾಪಾಡಿತು. ಹಣಕ್ಕಾಗಿ ಪರದಾಡುವುದನ್ನು ತಪ್ಪಿಸಿತು. ಹಾಗಾಗಿ ಜನರಿಗೆ ಕಷ್ಟವಾಗಿದ್ದರೂ, ಸರ್ಕಾರ ಸಾಕಷ್ಟು ಪ್ರಯತ್ನ ಮಾಡಿದೆ ಎಂಬ ಅಭಿಪ್ರಾಯ ಜನರಲ್ಲಿದೆ.

ಪ್ರಶ್ನೆ 09: ನರೇಂದ್ರ ಮೋದಿ ಅವಧಿಯಲ್ಲಿ ವಿದೇಶಾಂಗ ನೀತಿ ಹೇಗಿದೆ..?

Vistara news survey about mood of the karnataka people about Narendra Modi Govt before Loksabha 2024

ಭಾರತವನ್ನು ಇಂದು ವಿಶ್ವಗುರು ಎಂದು ಕರೆಯಲಾಗುತ್ತಿದೆ. ಇದಕ್ಕೆ ಕಾರಣ ಕಳೆದ 9 ವರ್ಷಗಳಲ್ಲಿ ಭಾರತ ವಿಶ್ವದರ್ಜೆಯಲ್ಲಿ ಕೈಗೊಂಡು ಕೆಲವು ಪ್ರಮುಖ ನಿರ್ಣಯಗಳು. ಅಮೆರಿಕ, ಇಂಗ್ಲೆಂಡ್​, ರಷ್ಯಾ, ಫ್ರಾನ್ಸ್, ಜರ್ಮನಿಯಂತಹ ಅಗ್ರಗಣ್ಯರಾಜ್ಯಗಳ ಜೊತೆಗೆ ಪಫುವಾ ನ್ಯೂಗಿನಿಯಾದಂತಹ ಸಣ್ಣಪುಟ್ಟ ರಾಷ್ಟ್ರಗಳ ಜೊತೆಯೂ ಉತ್ತರ ಬಾಂಧವ್ಯವನ್ನು ಭಾರತ ಹೊಂದಿದೆ.

ವ್ಯಾಕ್ಸಿನ್​ ಮೈತ್ರಿ – ಕೊವಿಡ್​ ವೇಳೆ ಸಣ್ಣಪುಟ್ಟ ರಾಷ್ಟ್ರಗಳು ಲಸಿಕೆ ಸಿಗದೆ ಪರದಾಡುತ್ತಿದ್ದಾಗ 100ಕ್ಕೂ ಹೆಚ್ಚು ದೇಶಗಳಿಗೆ 30 ಕೋಟಿ ವ್ಯಾಕ್ಸಿನ್​ನ್ನ ಭಾರತ ಉಚಿತವಾಗಿ ನೀಡಿತು. ಭಾರತ ತನ್ನ ಬದ್ಧವೈರಿ ಪಾಕಿಸ್ತಾನವನ್ನು ವಿಶ್ವಮಟ್ಟದಲ್ಲಿ ಮೂಲೆಗುಂಪು ಮಾಡಿತು. ಭಯೋತ್ಪಾದನೆಗೆ ಬೆಂಬಲ, ಹಣಕಾಸಿನ ನೆರವು ನೀಡುತ್ತಿರುವ ಕಾರಣಕ್ಕೆ ವಿಶ್ವದ ಪ್ರಮುಖ ವೇದಿಕೆಗಳಲ್ಲಿ ಪದೇಪದೆ ಪಾಕಿಸ್ತಾನದ ಮಾನ ಹರಾಜು ಹಾಕುವ ಮೂಲಕ ಮೂಲೆಗುಂಪು ಮಾಡಲಾಗಿದೆ. ಅಂತಾರಾಷ್ಟ್ರೀಯ ಬಿಕ್ಕಟ್ಟು, ಸಂಘರ್ಷಗಳ ವಿಚಾರ ಬಂದಾಗ ಮೋದಿ ಸರ್ಕಾರ ಭಾರತದ ಹಿತಾಸಕ್ತಿಗೆ ಮೊದಲ ಪ್ರಾಶಸ್ತ್ರ್ಯ ಕೊಡುತ್ತಿದೆ. ಉಕ್ರೇನ್​- ರಷ್ಯಾ ಯುದ್ಧದ ಸಂದರ್ಭದಲ್ಲಿ ಪಾಶ್ಚಾತ್ಯ ರಾಷ್ಟ್ರಗಳ ವಿರೋಧದ ನಡುವೆಯೂ ರಷ್ಯಾದಿಂದ ಇಂಧನ ಆಮದು ಮಾಡಿಕೊಳ್ಳೋ ಮೂಲಕ ದಿಟ್ಟತನವನ್ನು ತೋರಿತು.

ಚೀನಾ ಭಾರತದ ಮೇಲೆ ದಾಳಿ ಮಾಡಲು ಮುಂದಾದಾಗ ಆ ದೇಶವನ್ನು ಸಮರ್ಥವಾಗಿ ಎದುರಿಸುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನ ಶಕ್ತಿಯನ್ನ ಪ್ರದರ್ಶಿಸಿತು. ವಿದೇಶಾಂಗ ನೀತಿಯಲ್ಲಿ ಅನುಸರಿಸುತ್ತಿದ್ದ ಅಡ್ಡಗೋಡೆ ಮೇಲೆ ದೀಪವಿಡುವ ಸಂಪ್ರದಾಯಕ್ಕೆ ಬಹುತೇಕ ತಿಲಾಂಜಲಿ ಇಡಲಾಗಿದೆ. ಚೀನಾ ಇರಬಹುದು, ಪಾಕಿಸ್ತಾನ ಇರಬಹುದು ಅದರ ಕುರಿತು ಸ್ಪಷ್ಟ ಶಬ್ದಗಳಲ್ಲಿ ಖಂಡನೆ ಮಾಡಲಾಗುತ್ತಿದೆ.

ಪ್ರಶ್ನೆ 10: ಈಗ ಚುನಾವಣೆ ನಡೆದರೆ ಮೋದಿ ನೋಡಿ ಬಿಜೆಪಿಗೆ ಮತ ಹಾಕ್ತೀರಾ..?

Vistara news survey about mood of the karnataka people about Narendra Modi Govt before Loksabha 2024

ಕೇವಲ 3 ವಾರಗಳ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಅಧಿಕಾರ ಕಳೆದುಕೊಂಡು ಕೇವಲ 66 ಸ್ಥಾನಗಳಿಗಷ್ಟೇ ಸೀಮಿತವಾಗಿತ್ತು. ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್​ 135 ಸೀಟುಗಳನ್ನ ಗೆಲ್ಲೋ ಮೂಲಕ ಭರ್ಜರಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ. ಈ ಸರ್ವೇಯಲ್ಲಿ ಜನ ಹೇಳಿರೋದನ್ನ ಗಮನಿಸಿದ್ರೆ, ರಾಜ್ಯ ಸರ್ಕಾರ ಮತ್ತು ಸ್ಥಳೀಯ ಆಡಳಿತದ ಬಗ್ಗೆ ವಿರೋಧ ಎದ್ದು ಕಾಣುತ್ತಿದೆ.

ಆದ್ರೆ ಇದೇ ವೇಳೆ ನರೇಂದ್ರ ಮೋದಿ ಬಗ್ಗೆ ತದ್ವಿರುದ್ದವಾದ ನಿಲುವನ್ನು ಹೊಂದಿರುವುದು ಕಾಣುತ್ತಿದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದ ಬಗ್ಗೆ ಉತ್ತಮ ಅಭಿಪ್ರಾಯ ಕಂಡುಬಂದಿದೆ. ಕರ್ನಾಟಕದ ಜನರು ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ವಿಭಿನ್ನವಾಗಿ ಮತ ನೀಡುತ್ತಾರೆ. ಎರಡೂ ಚುನಾವಣೆಯಲ್ಲಿ ವಿಭಿನ್ನ ವಿಚಾರಗಳನ್ನು ಪರಿಗಣಿಸುತ್ತಾರೆ ಎನ್ನುವುದು 2013 ಹಾಗೂ 2014ರಲ್ಲೂ ಸಾಬೀತಾಗಿದೆ. 2013ರಲ್ಲಿ ಕಾಂಗ್ರೆಸ್​​​​​ ಭರ್ಜರಿ ಜನಾದೇಶದೊಂದಿಗೆ ಸರ್ಕಾರ ರಚನೆ ಮಾಡಿತ್ತು, ಆಗ ಬಿಜೆಪಿಯೇ ಅತಿ ಹೆಚ್ಚು ಸಂಸತ್​ ಸದಸ್ಯರನ್ನು ಹೊಂದಿತು.

ರಾಜ್ಯ ಬಿಜೆಪಿಯಲ್ಲಿ ಪ್ರಮುಖವಾಗಿ ಸ್ಥಳೀಯ ನಾಯಕರ ಕೊರತೆ ಕಾರಣಕ್ಕೆ ಕಾಂಗ್ರೆಸ್​​ನತ್ತ ಜನರು ನೋಡಿದರು. ಆದರೆ ಕೇಂದ್ರದಲ್ಲಿ ಗಟ್ಟಿ ನಿರ್ಧಾರ ಕೈಗೊಳ್ಳುವ ನಾಯಕ ಎಂದು ಮೋದಿ ಪ್ರಸಿದ್ಧರಾಗಿದ್ದಾರೆ, ಅದರಲ್ಲೂ ಪಾಕಿಸ್ತಾನ-ಚೀನಾ-ಅಮೆರಿಕದಂತಹ ರಾಷ್ಟ್ರಗಳೊಂದಿಗೆ ಸರಿಯಾದ ವ್ಯವಹಾರ ಮಾಡಲು ಮೋದಿಯೇ ಸರಿ ಎನ್ನಿಸುತ್ತಿದೆ. ಈ ಎಲ್ಲ ಕಾರಣಗಳಿಂದಾಗಿ ಲೋಕಸಭೆಯಲ್ಲಿ ನರೇಂದ್ರ ಮೋದಿಗೇ ಬೆಂಬಲ ನೀಡಲು ಹೆಚ್ಚಿನ ಜನರು ಒಲವು ವ್ಯಕ್ತಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Karnataka Rain : ಭಾನುವಾರ ಉತ್ತರ ಒಳನಾಡಿನಲ್ಲಿ ಮಳೆಯು (Rain News) ಅಬ್ಬರಿಸುತ್ತಿದ್ದು, ವಿಜಯನಗರ ಹಾಗೂ ರಾಯಚೂರಿನಲ್ಲಿ ಸಿಡಿಲು ಬಡಿದು ತಲಾ 1 ಎಮ್ಮೆ ಮೃತಪಟ್ಟಿವೆ. ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಗೆ ಗುರುಮಠಕಲ್‌ (karnataka weather Forecast) ಕೆರೆಯಂತಾಗಿದೆ.

VISTARANEWS.COM


on

By

Karnataka Rain
Koo

ವಿಜಯನಗರ/ರಾಯಚೂರು/ಯಾದಗಿರಿ: ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ವರುಣ ಶಾಕ್‌ (Karnataka Rain) ಕೊಟ್ಟಿದ್ದಾನೆ. ರಾಜ್ಯ ಹಲವೆಡೆ ಬಿರುಗಾಳಿ ಸಹಿತ (Karnataka weather Forecast) ಮಳೆಯಾಗುತ್ತಿದ್ದು, ಪ್ರತ್ಯೇಕ ಕಡೆಗಳಲ್ಲಿ ಸಿಡಿಲು ಬಡಿದು ಕಟ್ಟಿಗೆಯಲ್ಲಿ ಕಟ್ಟಿದ್ದ ಎಮ್ಮೆ ಮೃತಪಟ್ಟಿವೆ.

ವಿಜಯನಗರದ ಹೂವಿನಹಡಗಲಿ ತಾಲೂಕಿನ ಎಂ.ಕಲ್ಲಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಎಮ್ಮೆ ಮೃತಪಟ್ಟಿದೆ. ಕೆಂಚನಗೌಡ್ರ ಬಸವರಾಜ ಎಂಬ ರೈತ ಎಮ್ಮೆಯನ್ನು ಕೊಟ್ಟಿಗೆಯಲ್ಲಿ ಕಟ್ಟಿದ್ದರು. ಮಳೆಯೊಂದಿಗೆ ಗುಡುಗು, ಸಿಡಿಲು ಬಡಿದ ಪರಿಣಾಮ ಎಮ್ಮೆ ಮೃತಪಟ್ಟಿದೆ.

ಇನ್ನೂ ರಾಯಚೂರಿನ ಲಿಂಗಸುಗೂರಿನ ಕರೆಮರಡಿ ತಾಂಡದಲ್ಲಿ ಸಿಡಿಲು ಬಡಿದು ಎಮ್ಮೆಯೊಂದು ಮೃತಪಟ್ಟಿದೆ. ಲಕ್ಷಣ್ಣ ಗುಂಡಪ್ಪ ರಾಠೋಡ ಎಂಬುವವರ ಎಮ್ಮೆಯನ್ನು ಮನೆ ಪಕ್ಕದಲ್ಲಿರುವ ಮರಕ್ಕೆ ಕಟ್ಟಿಹಾಕಿದ್ದರು. ಗುಡುಗು ಮಿಂಚು ಸಹಿತ ಸುರಿದ ಮಳೆ ವೇಳೆ ಸಿಡಿಲು ಬಡಿದ್ದರಿಂದ ಎಮ್ಮೆ ಸ್ಥಳದಲ್ಲೇ ಮೃತಪಟ್ಟಿದೆ. ಮುದಗಲ್ ಠಾಣೆ ಪೊಲೀಸ್ ಸಿಬ್ಬಂದಿ ಹಾಗೂ ನಾಗಲಾಪೂರು ಪಶು ಆಸ್ಪತ್ರೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವರುಣನ ಅಬ್ಬರಕ್ಕೆ ಕೆರೆಯಂತಾದ ಗುರುಮಠಕಲ್‌

ಯಾದಗಿರಿ ಜಿಲ್ಲೆಯಲ್ಲಿ ಭಾನುವಾರ ಬಿರುಗಾಳಿ ಸಹಿತ ಮಳೆಯಾಗಿದೆ. ಗುರುಮಠಕಲ್ ಹಾಗೂ ಯಾದಗಿರಿ ನಗರದಲ್ಲಿ ಕಳೆದ ಅರ್ಧ ಗಂಟೆಗೂ ಹೆಚ್ಚು ಕಾಲ ವರುಣ ಅಬ್ಬರಿಸಿದ್ದ. ಭಾರಿ ಮಳೆಗೆ ಗುರುಮಠಕಲ್ ರಸ್ತೆ ಮೇಲೆ ನೀರು ಹರಿದು ಕೆರೆಯಂತಾಗಿತ್ತು. ಇತ್ತ ಬಿರುಗಾಳಿ ಸಹಿತ ಭಾರಿ ಮಳೆಗೆ ಮರವೊಂದು ರಸ್ತೆಗೆ ಉರುಳಿ ಬಿದ್ದಿತ್ತು. ಯಾದಗಿರಿ ತಾಲೂಕಿನ ಗಣಾಪುರ ಸಮೀಪದ ಯಾದಗಿರಿ-ಗುರುಮಠಕಲ್ ರಸ್ತೆ ಮಾರ್ಗದಲ್ಲಿ ಮರಗಳು ಧರೆಗುರುಳಿತ್ತು.

ಯಾದಗಿರಿಯ ಗಣಾಪುರ ಸಮೀಪದ ರಸ್ತೆಯಲ್ಲಿ 20 ಕ್ಕೂ ಹೆಚ್ಚು ಮರಗಳು ಬಿದ್ದಿತ್ತು. ಗುರುಮಠಕಲ್-ಯಾದಗಿರಿ ರಾಜ್ಯ ಹೆದ್ದಾರಿಯಲ್ಲಿ ಮರಗಳು ಉರುಳಿ ಬಿದ್ದಿತ್ತು. ಹೀಗಾಗಿ ಸ್ಥಳೀಯರು ಹಾಗೂ ಸವಾರರಿಂದಲೇ ರಸ್ತೆ ಮೇಲೆ ಬಿದ್ದಿದ್ದ ಮರಗಳ ತೆರವು ಮಾಡಲಾಯಿತು. ಮರಗಳನ್ನು ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಂಡರು. ರಸ್ತೆ ಮೇಲೆ ಮರಗಳು ಬಿದ್ದ ಕಾರಣದಿಂದ ಗಂಟೆಗಟ್ಟಲೇ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಇದನ್ನೂ ಓದಿ: Basavanagudi News : ಪೂಜಾ ಸಾಮಾಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಮೇ 31 ರಿಂದ ಕರ್ನಾಟಕದಲ್ಲಿ ಶುರುವಾಗುತ್ತಾ ಮುಂಗಾರು ಮಳೆ ದರ್ಬಾರ್‌!

ಬೆಂಗಳೂರು: ಮೇ 31ರಂದು ಪ್ರಸಕ್ತ ಸಾಲಿನ ಮುಂಗಾರು ಮಳೆಯು (Monsoon 2024) ಕೇರಳವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದೇಶದ ಕೃಷಿ ಚಟುವಟಿಕೆಗಳನ್ನು ನಿರ್ಧರಿಸುವ ಮಳೆಯಾಗಿದ್ದರಿಂದ ರೈತರಲ್ಲಿ ಸಹಜವಾಗಿಯೇ ಸಮಾಧಾನ ತಂದಿದೆ. ಇನ್ನೂ ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಜೂನ್‌ ಮೊದಲ ವಾರ ನೈರುತ್ಯ ಮುಂಗಾರು ಮಳೆ ಕರ್ನಾಟಕವನ್ನು ಪ್ರವೇಶ (Karnataka Monsoon 2024) ಮಾಡಲಿದೆ. ಈ ಬಾರಿ ಮುಂಗಾರಿನಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯನ್ನು ಹವಾಮಾನ ಇಲಾಖೆ ಹೊಂದಿದೆ.

ಒಂದು ವೇಳೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಕಾಣಿಸಿಕೊಂಡರೆ ಮುಂಗಾರು ಆಗಮನವು ಮುಂದಕ್ಕೆ ಹೋಗಲಿದೆ. ನೈರುತ್ಯ ಮಾನ್ಸೂನ್ ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಿಸಿದೆ. ಮೇ 31ಕ್ಕೆ ನೈರುತ್ಯ ಮುಂಗಾರು ಕೇರಳ ಕರಾವಳಿಗೆ ಆಗಮಿಸುವ ನಿರೀಕ್ಷೆ ಇದೆ. ಅಲ್ಲಿಂದ ಕರ್ನಾಟಕ ಕರಾವಳಿಗೆ ಜೂನ್ 1 ಅಥವಾ 2ರಂದು ಪ್ರವೇಶಿಸಬಹುದು. ಕರಾವಳಿಯಿಂದ ಕ್ರಮೇಣ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಪ್ರದೇಶಗಳಿಗೆ ವ್ಯಾಪಿಸಲಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.

ಕೊಡಗಿನಲ್ಲಿ ವಿಪತ್ತು ನಿರ್ವಹಣಾ ತಂಡ ವಾಸ್ತವ್ಯ

ಮುಂಗಾರು ಪ್ರವೇಶಕ್ಕೆ ದಿನಗಣನೆ ಆರಂಭವಾಗಿದೆ. ಜೂನ್ ಮೊದಲ ವಾರಕ್ಕೆ ಕೊಡಗು ಜಿಲ್ಲೆಗೆ ಮುಂಗಾರು ಎಂಟ್ರಿಯಾಗಲಿದೆ. ಕಳೆದ ಬಾರಿಗಿಂತ ಮೂರರಿಂದ ನಾಲ್ಕು ಪಟ್ಟು ಹೆಚ್ಚು ಮಳೆಯಾಗಲಿದೆ ಎಂದು ಎಂದು ಹವಾಮಾನ ಇಲಾಖೆಯು ಕೊಡಗು ಜಿಲ್ಲಾಡಳಿತಕ್ಕೆ‌ ಮಾಹಿತಿ ರವಾನಿಸಿದೆ. ಈ ಬಾರಿಯ ಮಳೆಗಾಲಕ್ಕೆ ಕೊಡಗು ಜಿಲ್ಲಾಡಳಿತ ಕೂಡ ತಯಾರಿ ನಡೆಸಿಕೊಳ್ಳುತ್ತಿದೆ. ಮೇ ತಿಂಗಳ ಅಂತ್ಯಕ್ಕೆ ಜಿಲ್ಲೆಗೆ ಎನ್.ಡಿ.ಆರ್ ಎಫ್ ತಂಡ ಆಗಮಿಸಲಿದೆ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ. 26 ಮಂದಿಯನ್ನು ಒಳಗೊಂಡ ಎನ್.ಡಿ.ಆರ್ ಎಫ್ ಟೀಮ್ ಈ ಬಾರಿ ಆಗಮಿಸಲಿದೆ. ಕಳೆದ ಬಾರಿ ಜಿಲ್ಲೆಗೆ ಬಂದಿದ್ದ ಎನ್.ಡಿ.ಆರ್.ಎಫ್‌ಗೆ ಬೆಟಾಲಿಯನ್ ಕಳುಹಿಸುವಂತೆ ಜಿಲ್ಲಾಡಳಿತ ಮ‌ನವಿ‌ ಮಾಡಿದೆ. ಕಳೆದ ಬಾರಿ ಬಂದ ತಂಡವೆ ಈ ಸಲವು ಆಗಮಿಸಲಿದೆ. ಕೊಡಗಿನಲ್ಲಿ ಮಳೆಗಾಲ ಮುಗಿಯುವವರೆಗೂ ವಿಪತ್ತು ನಿರ್ವಹಣಾ ತಂಡ ಜಿಲ್ಲೆಯಲ್ಲೆ ವಾಸ್ತವ್ಯ ಹೂಡಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

ವಿಧಾನ ಪರಿಷತ್‌ ಚುನಾವಣೆ: ಖರ್ಗೆ, ಸಿದ್ದು, ಡಿಕೆಶಿ ಆಪ್ತರಿಗೆ ಸ್ಥಾನ ಕೊಡಿಸಲು 2+2+2+1=7 ಫಾರ್ಮುಲಾ; ಏನಿದು?

Karnataka Council Election: ಯಾರಿಗೆ ಸ್ಥಾನಗಳನ್ನು ನೀಡಬೇಕು ಎಂಬುದರ ಬಗ್ಗೆ ಗೊಂದಲ ಬಗೆಹರಿಸಿಕೊಳ್ಳುವ ದಿಸೆಯಲ್ಲಿ ಫಾರ್ಮುಲಾ ಕಂಡು ಹಿಡಿಯಲಾಗಿದೆ. ಎರಡು ಸ್ಥಾನ ಸಿದ್ದರಾಮಯ್ಯ ಬಣಕ್ಕೆ, ಎರಡು ಸ್ಥಾನ ಡಿಕೆಶಿ ಬಣಕ್ಕೆ, ಇನ್ನೆರಡು ಸ್ಥಾನ ಮಲ್ಲಿಕಾರ್ಜುನ ಖರ್ಗೆ ಹಾಗೂ ಒಂದು ಸ್ಥಾನವನ್ನು ಕಾಂಗ್ರೆಸ್‌ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ತಿಳಿದುಬಂದಿದೆ. ಇನ್ನು ಶಾರ್ಟ್‌ ಲಿಸ್ಟ್‌ ಹಿಡಿದುಕೊಂಡು ದೆಹಲಿಗೆ ತೆರಳಲು ಸಿದ್ದರಾಮಯ್ಯ ಹಾಗೂ ಡಿಕೆಶಿ ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

VISTARANEWS.COM


on

Karnataka Council Election
Koo

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ 11 ಸದಸ್ಯರ ಆಯ್ಕೆಗಾಗಿ ನಡೆಯುವ ಚುನಾವಣೆಯು (Karnataka Legislative Council Election) ಕರ್ನಾಟಕ ಕಾಂಗ್ರೆಸ್‌ನಲ್ಲಿ ಬಣಗಳ ಸೃಷ್ಟಿಗೆ ಕಾರಣವಾಗಿದೆ. ಕಾಂಗ್ರೆಸ್‌ ಏಳು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D K Shivakumar) ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಸೇರಿ ಹಲವು ನಾಯಕರ ಆಪ್ತರು ಲಾಬಿ ನಡೆಸುತ್ತಿದ್ದು, ಇದಕ್ಕಾಗಿ ಕಾಂಗ್ರೆಸ್‌ ನಾಯಕರು ಭಿನ್ನಮತವೇ ಬೇಡ ಎಂದು 2+2+2+1=7 ಫಾರ್ಮುಲಾ ಕಂಡು ಹಿಡಿದಿದ್ದಾರೆ ಎಂದು ತಿಳಿದಬಂದಿದೆ.

ಯಾರಿಗೆ ಸ್ಥಾನಗಳನ್ನು ನೀಡಬೇಕು ಎಂಬುದರ ಬಗ್ಗೆ ಗೊಂದಲ ಬಗೆಹರಿಸಿಕೊಳ್ಳುವ ದಿಸೆಯಲ್ಲಿ ಫಾರ್ಮುಲಾ ಕಂಡು ಹಿಡಿಯಲಾಗಿದೆ. ಎರಡು ಸ್ಥಾನ ಸಿದ್ದರಾಮಯ್ಯ ಬಣಕ್ಕೆ, ಎರಡು ಸ್ಥಾನ ಡಿಕೆಶಿ ಬಣಕ್ಕೆ, ಇನ್ನೆರಡು ಸ್ಥಾನ ಮಲ್ಲಿಕಾರ್ಜುನ ಖರ್ಗೆ ಹಾಗೂ ಒಂದು ಸ್ಥಾನವನ್ನು ಕಾಂಗ್ರೆಸ್‌ ಹೈಕಮಾಂಡ್ ತೀರ್ಮಾನಿಸುತ್ತದೆ. ಇನ್ನು ಏಳು ಸ್ಥಾನಗಳಿಗಾಗಿ 50 ಆಕಾಂಕ್ಷಿಗಳು ಸಾಲುಗಟ್ಟಿ ನಿಂತಿದ್ದು, ಯಾರು ಯಾವ ಬಣದಲ್ಲಿದ್ದಾರೆ ಎಂಬುದರ ಮೇಲೆ ಮಣೆ ಹಾಕಲಾಗುತ್ತದೆ ಎಂದು ತಿಳಿದುಬಂದಿದೆ.

ಯಾವ ಸಮುದಾಯಕ್ಕೆ ಯಾವ ನಾಯಕ ಮಣೆ ಹಾಕುತ್ತಿದ್ದಾರೆ? ಯಾರ ಯಾರ ಪರ, ಯಾರು ಲಾಬಿ ಮಾಡುತ್ತಿದ್ದಾರೆ ಎಂಬುದರ ಮಾಹಿತಿ ಹೀಗಿದೆ.

ಸಿದ್ದರಾಮಯ್ಯ
ಯತೀಂದ್ರ ಸಿದ್ದರಾಮಯ್ಯ( ಕುರುಬ), ಕೆ.ಗೋವಿಂದ ರಾಜು ( ಒಕ್ಕಲಿಗ), ಎಚ್.ಎಂ. ರೇವಣ್ಣ ( ಕುರುಬ), ವಿ.ಆರ್. ಸುದರ್ಶನ್ (ಗಾಣಿಗ).

foolish to link Rakesh death to Prajwal case says CM Siddaramaiah

ಡಿ.ಕೆ ಶಿವಕುಮಾರ್
ಸಿಗುವ ಎರಡು ಸ್ಥಾನಕ್ಕೆ ವಿಜಯ್ ಮುಳಗುಂದ್ ( ಬ್ರಾಹ್ಮಣ), ವಿನಯ್ ಕಾರ್ತಿಕ್ (ಒಕ್ಕಲಿಗ), ಬಿ.ಎಲ್. ಶಂಕರ್ (ಒಕ್ಕಲಿಗ) ರಮೇಶ್ ಬಾಬು (ಬಲಿಜ), ಐಶ್ವರ್ಯ ಮಹದೇವ ( ಕುರುಬ), ನಟರಾಜ ಗೌಡ ( ಒಕ್ಕಲಿಗ), ನಲಪಾಡ್ ( ಮುಸ್ಲಿಂ) ಅವರು ಲಾಬಿ ನಡೆಸುತ್ತಿದ್ದಾರೆ.

Drinking Water in Bangalore DK Shivakumar warns of disciplinary action against officials if Water causes health problem

ಮಲ್ಲಿಕಾರ್ಜುನ ಖರ್ಗೆ
ಮುದ್ದುಗಂಗಾಧರ್ (ಖರ್ಗೆ ಆಪ್ತ), ಸೂರಜ್ ಹೆಗ್ಡೆ , ಪುಷ್ಪ ಅಮರನಾಥ (ದಲಿತ), ಮುಂಡರಗಿ ನಾಗರಾಜ್ (ದಲಿತ), ವಿ.ಆರ್. ಸುದರ್ಶನ್ (ಗಾಣಿಗ), ಕರಡಿ ಸಂಗಣ್ಣ (ಲಿಂಗಾಯತ), ಹುಸೇನ್ (ಮುಸ್ಲಿಂ)

ಹೈಕಮಾಂಡ್
ಬೋಸರಾಜು (ಹಾಲಿ ಸಚಿವ)

ದೆಹಲಿಗೆ ತೆರಳಲು ಸಿದ್ದು, ಡಿಕೆಶಿ ತೀರ್ಮಾನ

ಕಾಂಗ್ರೆಸ್‌ಗೆ ಲಭಿಸುವ ಏಳು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಕಗ್ಗಂಟಾಗಿರುವ ಹಿನ್ನೆಲೆಯಲ್ಲಿ ಶಾರ್ಟ್‌ ಲಿಸ್ಟ್‌ ಹಿಡಿದುಕೊಂಡು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರು ದೆಹಲಿಗೆ ತೆರಳಲು ತೀರ್ಮಾನಿಸಿದ್ದಾರೆ. ಮೇ 28, 29ರಂದು ದೆಹಲಿಯಲ್ಲಿರಲಿರುವ ಇಬ್ಬರೂ ನಾಯಕರು, ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಲಿದ್ದಾರೆ. ಇದಾದ ಬಳಿಕವೇ ಅಭ್ಯರ್ಥಿಗಳ ಆಯ್ಕೆಯನ್ನು ಘೋಷಣೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Legislative Council Election: ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಫಿಕ್ಸ್;‌ ಜೂನ್‌ 13ಕ್ಕೆ ಮತದಾನ

Continue Reading

ಕರ್ನಾಟಕ

Krishna Water Dispute: ಕೃಷ್ಣಾ ನೀರಿನ ವಿಚಾರ ಮತ್ತೆ ಮಹಾ ಕ್ಯಾತೆ; ರಾಜ್ಯಕ್ಕೆ ಹರಿದು ಬರ್ತಿದ್ದ ನೀರು ತಡೆ ಹಿಡಿದ ಮಹಾರಾಷ್ಟ್ರ!

Krishna Water Dispute: ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿರುವ ರಾಜಾಪುರ ಬ್ಯಾರೇಜ್ ಮೂಲಕ ಕರ್ನಾಟಕಕ್ಕೆ ಹರಿದು ಬರುತ್ತಿದ್ದ ಕೃಷ್ಣಾ ನದಿ ನೀರನ್ನು ತಡೆ ಹಿಡಿಯಲಾಗಿದೆ.

VISTARANEWS.COM


on

Krishna Water Dispute
Koo

ಚಿಕ್ಕೋಡಿ: ಕೃಷ್ಣಾ ನದಿ ನೀರಿನ (Krishna Water Dispute) ವಿಚಾರವಾಗಿ ಮಹಾರಾಷ್ಟ್ರ ಮತ್ತೆ ಕ್ಯಾತೆ ತೆಗೆದಿದೆ. ಕರ್ನಾಟಕಕ್ಕೆ ಹರಿದು ಬರ್ತಿದ್ದ ನೀರನ್ನು ತಡೆ ಹಿಡಿದಿರುವ ಮಹಾರಾಷ್ಟ್ರ ಸರ್ಕಾರ, ನದಿ ನೀರಿನ ಹರಿವಿನ ಮೇಲೆ ನಿಗಾ ಇಡಲು ನಾಲ್ವರು ಸಿಬ್ಬಂದಿಯನ್ನು ನೇಮಿಸಿದೆ.

ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿರುವ ರಾಜಾಪುರ ಬ್ಯಾರೇಜ್ ಮೂಲಕ ಕರ್ನಾಟಕಕ್ಕೆ ಹರಿದು ಬರುತ್ತಿದ್ದ ಕೃಷ್ಣಾ ನದಿ ನೀರನ್ನು ತಡೆ ಹಿಡಿಯಲಾಗಿದೆ. ಇಬ್ಬರು ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ಇಬ್ಬರು ನೀರಾವರಿ ಇಲಾಖೆ ಸಿಬ್ಬಂದಿ ಸೇರಿ ಎರಡು ಗಸ್ತು ತಂಡಗಳನ್ನು ನೇಮಿಸಲಾಗಿದೆ.

ಕೃಷ್ಣಾ ನದಿ ನೀರು ತಡೆದ ಹಿನ್ನೆಲೆಯಲ್ಲಿ ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗುವ ಆತಂಕ ಎದುರಾಗಿದೆ.

ಇದನ್ನೂ ಓದಿ | Congress Karnataka: ಬದಲಾಗ್ತಾರಾ ಕೆಪಿಸಿಸಿ ಅಧ್ಯಕ್ಷರು?; ಡಿಕೆಶಿ ಹೇಳಿಕೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಚರ್ಚೆ ಶುರು!

ಮೇ 31 ರಿಂದ ಕರ್ನಾಟಕದಲ್ಲಿ ಶುರುವಾಗುತ್ತಾ ಮುಂಗಾರು ಮಳೆ ದರ್ಬಾರ್‌!

Monsoon 2024

ಬೆಂಗಳೂರು: ಮೇ 31ರಂದು ಪ್ರಸಕ್ತ ಸಾಲಿನ ಮುಂಗಾರು ಮಳೆಯು (Monsoon 2024) ಕೇರಳವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದೇಶದ ಕೃಷಿ ಚಟುವಟಿಕೆಗಳನ್ನು ನಿರ್ಧರಿಸುವ ಮಳೆಯಾಗಿದ್ದರಿಂದ ರೈತರಲ್ಲಿ ಸಹಜವಾಗಿಯೇ ಸಮಾಧಾನ ತಂದಿದೆ. ಇನ್ನೂ ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಜೂನ್‌ ಮೊದಲ ವಾರ ನೈರುತ್ಯ ಮುಂಗಾರು ಮಳೆ ಕರ್ನಾಟಕವನ್ನು ಪ್ರವೇಶ (Karnataka Monsoon 2024) ಮಾಡಲಿದೆ. ಈ ಬಾರಿ ಮುಂಗಾರಿನಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯನ್ನು ಹವಾಮಾನ ಇಲಾಖೆ ಹೊಂದಿದೆ.

ಒಂದು ವೇಳೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಕಾಣಿಸಿಕೊಂಡರೆ ಮುಂಗಾರು ಆಗಮನವು ಮುಂದಕ್ಕೆ ಹೋಗಲಿದೆ. ನೈರುತ್ಯ ಮಾನ್ಸೂನ್ ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಿಸಿದೆ. ಮೇ 31ಕ್ಕೆ ನೈರುತ್ಯ ಮುಂಗಾರು ಕೇರಳ ಕರಾವಳಿಗೆ ಆಗಮಿಸುವ ನಿರೀಕ್ಷೆ ಇದೆ. ಅಲ್ಲಿಂದ ಕರ್ನಾಟಕ ಕರಾವಳಿಗೆ ಜೂನ್ 1 ಅಥವಾ 2ರಂದು ಪ್ರವೇಶಿಸಬಹುದು. ಕರಾವಳಿಯಿಂದ ಕ್ರಮೇಣ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಪ್ರದೇಶಗಳಿಗೆ ವ್ಯಾಪಿಸಲಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.

ಕೊಡಗಿನಲ್ಲಿ ವಿಪತ್ತು ನಿರ್ವಹಣಾ ತಂಡ ವಾಸ್ತವ್ಯ

ಮುಂಗಾರು ಪ್ರವೇಶಕ್ಕೆ ದಿನಗಣನೆ ಆರಂಭವಾಗಿದೆ. ಜೂನ್ ಮೊದಲ ವಾರಕ್ಕೆ ಕೊಡಗು ಜಿಲ್ಲೆಗೆ ಮುಂಗಾರು ಎಂಟ್ರಿಯಾಗಲಿದೆ. ಕಳೆದ ಬಾರಿಗಿಂತ ಮೂರರಿಂದ ನಾಲ್ಕು ಪಟ್ಟು ಹೆಚ್ಚು ಮಳೆಯಾಗಲಿದೆ ಎಂದು ಎಂದು ಹವಾಮಾನ ಇಲಾಖೆಯು ಕೊಡಗು ಜಿಲ್ಲಾಡಳಿತಕ್ಕೆ‌ ಮಾಹಿತಿ ರವಾನಿಸಿದೆ. ಈ ಬಾರಿಯ ಮಳೆಗಾಲಕ್ಕೆ ಕೊಡಗು ಜಿಲ್ಲಾಡಳಿತ ಕೂಡ ತಯಾರಿ ನಡೆಸಿಕೊಳ್ಳುತ್ತಿದೆ. ಮೇ ತಿಂಗಳ ಅಂತ್ಯಕ್ಕೆ ಜಿಲ್ಲೆಗೆ ಎನ್.ಡಿ.ಆರ್ ಎಫ್ ತಂಡ ಆಗಮಿಸಲಿದೆ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ. 26 ಮಂದಿಯನ್ನು ಒಳಗೊಂಡ ಎನ್.ಡಿ.ಆರ್ ಎಫ್ ಟೀಮ್ ಈ ಬಾರಿ ಆಗಮಿಸಲಿದೆ. ಕಳೆದ ಬಾರಿ ಜಿಲ್ಲೆಗೆ ಬಂದಿದ್ದ ಎನ್.ಡಿ.ಆರ್.ಎಫ್‌ಗೆ ಬೆಟಾಲಿಯನ್ ಕಳುಹಿಸುವಂತೆ ಜಿಲ್ಲಾಡಳಿತ ಮ‌ನವಿ‌ ಮಾಡಿದೆ. ಕಳೆದ ಬಾರಿ ಬಂದ ತಂಡವೆ ಈ ಸಲವು ಆಗಮಿಸಲಿದೆ. ಕೊಡಗಿನಲ್ಲಿ ಮಳೆಗಾಲ ಮುಗಿಯುವವರೆಗೂ ವಿಪತ್ತು ನಿರ್ವಹಣಾ ತಂಡ ಜಿಲ್ಲೆಯಲ್ಲೆ ವಾಸ್ತವ್ಯ ಹೂಡಲಿದೆ.

ಇದನ್ನೂ ಓದಿ: Monsoon 2024: ರೈತರಿಗೆ ಗುಡ್‌ ನ್ಯೂಸ್;‌ ಮುಂಗಾರು ಮಳೆ ಆಗಮನಕ್ಕೆ ಫಿಕ್ಸ್‌ ಆಯ್ತು ದಿನಾಂಕ!

ಭಾರಿ ಮಳೆ ಹಿನ್ನೆಲೆ ಯೆಲ್ಲೋ ಅಲರ್ಟ್‌ ಘೋಷಣೆ

ಮೇ 26ರಂದು ರಾಜ್ಯಾದ್ಯಂತ ಹಗುರವಾದ ಮಳೆಯಾಗುವ (Rain News) ಸಾಧ್ಯತೆ ಇದ್ದು, ವಿವಿಧೆಡೆ ಗುಡುಗು ಸಹಿತ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ದಕ್ಷಿಣ ಒಳನಾಡಿನ ಕೋಲಾರ, ರಾಮನಗರ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಉತ್ತರ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿಗೆ ಯಾವುದೇ ಮಳೆ ಮುನ್ಸೂಚನೆ ಇಲ್ಲ ಬದಲಿಗೆ ಒಣ ಹವೆ ಇರುವ ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Basavanagudi News : ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಲ್ಲಿರುವ (Dodda Ganapathi Temple) ಮಳಿಗೆಗಳಲ್ಲಿ ಪೂಜಾ ಸಾಮಗ್ರಿಗಳನ್ನು ಒನ್‌ ಟು ಡಬಲ್‌ ರೇಟ್‌ಗೆ ಮಾರಾಟ ಮಾಡಲಾಗುತ್ತಿದೆ ಎನ್ನಲಾಗಿದೆ. ಹೀಗಾಗಿ ಭಕ್ತಾಧಿಗಳು ಹಾಗೂ ವ್ಯಾಪಾರಿಗಳ ನಡುವೆ ಗಲಾಟೆ ನಡೆದಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು.

VISTARANEWS.COM


on

By

Basavanagudi News
Koo

ಬೆಂಗಳೂರು: ಬೆಂಗಳೂರಿನ ಪ್ರಸಿದ್ಧ ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಲ್ಲಿ (Basavanagudi News) ಭಕ್ತಾದಿಗಳು ಹಾಗೂ ಮಳಿಗೆ ವ್ಯಾಪಾರಿಗಳ ನಡುವೆ ಗಲಾಟೆ ನಡೆದಿದೆ. ದೇವಸ್ಥಾನದಲ್ಲಿರುವ (Dodda Ganapathi Temple) ಮಳಿಗೆಯಲ್ಲಿ ಪೂಜಾ ಸಾಮಗ್ರಿಗಳು ದುಬಾರಿ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಕಳೆದ ಕೆಲವು ತಿಂಗಳಿಂದ ಪೂಜಾ ಸಾಮಗ್ರಿಗಳ ಬೆಲೆ ಕೇಳಿ ಭಕ್ತಾದಿಗಳು ಶಾಕ್ ಆಗಿದ್ದರು. ಮನಸೋ ಇಚ್ಛೆ ವಸೂಲಿ ಮಾಡಲಾಗುತ್ತಿದೆ ಎಂಬ ದೂರು ಕೂಡ ಕೇಳಿಬಂದಿತ್ತು. ಹೂವು, ಹಣ್ಣು, ಕಡ್ಡಿ, ಕರ್ಪೂರ ಸೇರಿದ 70-80 ರೂಪಾಯಿಯ ಒಂದು ಸಣ್ಣ ಕಿಟ್ ಅನ್ನು ಬರೋಬ್ಬರಿ 150 ರೂಪಾಯಿಗೆ ಸೇಲ್ ಮಾಡಲಾಗುತ್ತಿದೆ. ಇದೊಂಥರಾ ಹಗಲು ದರೋಡೆ ಅಂದರೆ ತಪ್ಪಾಗಲ್ಲ.

ದುಬಾರಿ ಬೆಲೆಗೆ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಭಕ್ತಾಧಿಗಳು ಇದನ್ನೂ ಪ್ರಶ್ನಸಿದ್ದಾರೆ. ಈ ವೇಳೆ ಭಕ್ತರು ಹಾಗೂ ಮಳಿಗೆ ವ್ಯಾಪಾರಿಗಳ ಮಧ್ಯೆ ಮಾತಿನ ಚಕಮಕಿ ನಡೆದು, ಕೈ ಕೈ ಮಿಲಾಯಿಸುವ ಹಂತಕ್ಕೆ ಗಲಾಟೆ ನಡೆದಿದೆ. ಟೆಂಟರ್‌ಗೆ ಹೆಚ್ಚು ಹಣವನ್ನು ಕೊಟ್ಟಿದ್ದೀವಿ, ಹೀಗಾಗಿ ಹೆಚ್ಚುವರಿ ಹಣ ತೆಗೆದುಕೊಳ್ಳುತ್ತಿವಿ. ಮಾರುಕಟ್ಟೆಯಲ್ಲಿ ಹೂ-ತೆಂಗಿನಕಾಯಿ ದಿನಕ್ಕೊಂದು ದರ ಇರುತ್ತದೆ, ನಾವೇನು ಮಾಡೋಣ ಎಂದು ಮಳಿಗೆ ವ್ಯಾಪಾರಿಗಳು ವಾದವಾಗಿದೆ.

ಇತ್ತ 2 ಬಾಳೆಹಣ್ಣು, ತೆಂಗಿನಕಾಯಿ, ಅಗರಬತ್ತಿ, ಹೂವಿ ಇರುವು ಪೂಜಾ ಸಾಮಗ್ರಿಗೆ ಬರೋಬ್ಬರಿ 150-300 ರೂ. ವ್ಯಾಪಾರಿಗಳು ಭಕ್ತರಿಂದ ಪಡೆಯುತ್ತಿದ್ದಾರೆ. ಇದರಿಂದ ರೊಚ್ಚಿಗೆದ್ದ ಭಕ್ತರು, ವ್ಯಾಪಾರಿಗಳೊಂದಿಗೆ ವಾಗ್ವಾದಕ್ಕಿಳಿದರು. ಇದನ್ನು ಕೇಳಬೇಕಿದ್ದ ಮುಜರಾಯಿ ಕಣ್ಮುಚ್ಚಿ ಕುಳಿತಿದೆ. ಇದರ ಪರಿಣಾಮ ಭಕ್ತರ ಜೇಬು ಖಾಲಿ ಆಗುತ್ತಿದ್ದು, ವಿಧಿಯಿಲ್ಲದೆ ದುಬಾರಿ ಹಣ ತೆರಬೇಕಾಗುತ್ತಿದೆ.

ಇದನ್ನೂ ಓದಿ: Raichur News : ಸಾಲದ ಸುಳಿಗೆ ಸಿಲುಕಿದ ಸ್ನೇಹಿತೆಗೆ ಕೊಟ್ಟಳು 10 ತೊಲೆ ಬಂಗಾರ! ‘ಕಳ್ಳತನ’ ನಾಟಕವಾಡಿದ ಗೆಳತಿಯರು ಲಾಕ್‌

Theft Case : ಚಿನ್ನ ಕದಿಯಲು ಬಂದು ಮದುವೆ ಮನೆಯವರಿಂದ ಧರ್ಮದೇಟು ತಿಂದ ಕಳ್ಳ

ಚಿಕ್ಕಬಳ್ಳಾಪುರ: ಮದುವೆ ಮನೆಗೆ ಬಂದ ಕಳ್ಳನಿಗೆ (Theft Case ) ವರ ಹಾಗೂ ವಧುವಿನ ಕಡೆಯವರು ಭರಪೂರ ಉಡುಗೊರೆ ಕೊಟ್ಟಿದ್ದಾರೆ. ಮದುವೆ ಮನೆಯೊಳಗೆ ನುಗ್ಗಿದ ಕಳ್ಳನೊಬ್ಬ ಮಹಿಳೆ ಬಳಿ ಚಿನ್ನದ ಸರ ಕದಿಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ.

ಕಳ್ಳನನ್ನು ಹಿಡಿದ ಮದುವೆ ಮನೆಯವರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರ ಹೊರವಲಯದ ಬೈಪಾಸ್ ರಸ್ತೆಯಲ್ಲಿರುವ ಸಾಯಿಕೃಷ್ಣ ಫಂಕ್ಷನ್ ಹಾಲ್‌ನಲ್ಲಿ ಘಟನೆ ನಡೆದಿದೆ.

ಸರ ಕದ್ದ ಆರೋಪಿಯನ್ನು ಆಂದ್ರಪ್ರದೇಶದ ಮುಲ್ಲಮೋತುಕಪಲ್ಲಿ ಗ್ರಾಮದ ಪಿ. ನರೇಶ್ ಎಂದು ತಿಳಿದು ಬಂದಿದೆ. ಮದುವೆ ಮನೆಯಲ್ಲಿ ಮಹಿಳೆ ಬಟ್ಟೆ ಬದಲಿಸುವ ವೇಳೆ ನರೇಶ್ ಚಿನ್ನದ ಸರ ಕದಿಯಲು ಯತ್ನಿಸಿದ್ದ. ಆದರೆ ಇದನ್ನೂ ಗಮನಿಸಿದ ಮಹಿಳೆ ಕೂಡಲೇ ಕಿರುಚಾಡಿದ್ದು, ತಪ್ಪಿಸಿಕೊಂಡು ಓಡಾಡುತ್ತಿದ್ದ ನರೇಶ್‌ನನ್ನು ಹಿಡಿದು ಥಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಗೌರಿಬಿದನೂರು ನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಳಗ್ಗೆ ಕೋಳಿ ಕುಯ್ಯುತ್ತಾರೆ, ರಾತ್ರಿಯಾದರೆ ಸುಲಿಗೆಗೆ ಇಳಿಯುತ್ತಾರೆ!

ಬೆಂಗಳೂರು: ಸಾರಾಯಿಪಾಳ್ಯದ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಖರ್ತನಾಕ್‌ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ರಿಯಾಝ್ ಖಾನ್ ಹಾಗು ವಸೀಂ ಫಿರೋಝ್ ಬಂಧಿತ ಆರೋಪಿಗಳು.

ಬೆಳಗಿನಿಂದ ಸಂಜೆ ತನಕ ಕೋಳಿ ಅಂಗಡಿಯಲ್ಲಿ ಕೋಳಿ ಕುಯ್ಯುವ ಕೆಲಸ ಮಾಡಿದರೆ, ರಾತ್ರಿಯಾದರೆ ಸಾಕು ಸುಲಿಗೆಗೆ ಇಳಿಯುತ್ತಿದ್ದರು. ಇತ್ತೀಚಿಗೆ ಸ್ಕೂಟರ್‌ನಲ್ಲಿ ಬಂದಿದ್ದ ಇವರಿಬ್ಬರು, ಅಮ್ಮೇಜಾನ್ ಎಂಬುವವರ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದರು.

ಈ ಸಂಬಂಧ ಅಮ್ಮೇಜಾನ್‌ ಅವರು ದೂರು ದಾಖಲಿಸಿದ್ದರು. ದೂರು ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಗಳನ್ನು ಹೆಚ್ಚಿನ ತನಿಖೆಗೆ ಒಳಪಡಿಸಿರುವ ಬಾಣಸವಾಡಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Karnataka Rain
ಮಳೆ4 mins ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

MS Dhoni
ಕ್ರೀಡೆ8 mins ago

M S Dhoni: ಫ್ರಾನ್ಸ್ ಮೂಲದ ಕಾರು ಕಂಪನಿಯ ಬ್ರಾಂಡ್​ ಅಂಬಾಸಿಡರ್ ಆಗಿ ನೇಮಕಗೊಂಡ ಲೆಜೆಂಡ್​ ಧೋನಿ

Karnataka Council Election
ಕರ್ನಾಟಕ22 mins ago

ವಿಧಾನ ಪರಿಷತ್‌ ಚುನಾವಣೆ: ಖರ್ಗೆ, ಸಿದ್ದು, ಡಿಕೆಶಿ ಆಪ್ತರಿಗೆ ಸ್ಥಾನ ಕೊಡಿಸಲು 2+2+2+1=7 ಫಾರ್ಮುಲಾ; ಏನಿದು?

Krishna Water Dispute
ಕರ್ನಾಟಕ30 mins ago

Krishna Water Dispute: ಕೃಷ್ಣಾ ನೀರಿನ ವಿಚಾರ ಮತ್ತೆ ಮಹಾ ಕ್ಯಾತೆ; ರಾಜ್ಯಕ್ಕೆ ಹರಿದು ಬರ್ತಿದ್ದ ನೀರು ತಡೆ ಹಿಡಿದ ಮಹಾರಾಷ್ಟ್ರ!

Latest42 mins ago

Shilpa Shetty : 3.5 ಕೋಟಿ ರೂಪಾಯಿ ಬೆಲೆಯ ರೇಂಜ್​ ರೋವರ್​​ ಕಾರು ಖರೀದಿಸಿದ ಶಿಲ್ಪಾ ಶೆಟ್ಟಿ; ವಿಡಿಯೊ ನೋಡಿ

Actor Darshan fans against forest officials Construction of Arjuna tomb
ಸ್ಯಾಂಡಲ್ ವುಡ್43 mins ago

Actor Darshan: ಅರ್ಜುನನ ಸಮಾಧಿ ನಿರ್ಮಾಣ: ಅರಣ್ಯಾಧಿಕಾರಿಗಳ ವಿರುದ್ಧ ದರ್ಶನ್ ಅಭಿಮಾನಿಗಳಿಂದ ಆಕ್ರೋಶ!

Mango Nail Art
ಫ್ಯಾಷನ್45 mins ago

Mango Nail Art: ಸಮ್ಮರ್‌ ಸೀಸನ್‌ನಲ್ಲಿ ಬಂತು ಮ್ಯಾಂಗೋ ನೇಲ್‌ ಆರ್ಟ್!

Viral News
ವೈರಲ್ ನ್ಯೂಸ್46 mins ago

Viral News: ಕಂಪನಿಯಲ್ಲಿ 1 ವರ್ಷ ವೇತನ ಸಹಿತ ರಜೆ ಪಡೆದ ಉದ್ಯೋಗಿ; ಈ ಲಕ್‌ ನಿಮ್ಮದಾಗಬೇಕೆ? ಹೀಗೆ ಮಾಡಿ

Basavanagudi News
ಬೆಂಗಳೂರು59 mins ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Road Accident
ಕರ್ನಾಟಕ1 hour ago

Road Accident: ಕೆಎಸ್ಆರ್‌ಟಿಸಿ ಬಸ್-ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ4 mins ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು59 mins ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌