Siddharth on working with Kamal Haasan in Indian 2 Kamal Haasan: ಇಂಡಿಯನ್‌ 2 ಸಿನಿಮಾದಲ್ಲಿ ಸಿದ್ಧಾರ್ಥ್; ಕಮಲ್‌ ಜತೆ ಯಾವ ಪಾತ್ರದಲ್ಲಿ ಇವರ ಕಮಾಲ್‌? - Vistara News

South Cinema

Kamal Haasan: ಇಂಡಿಯನ್‌ 2 ಸಿನಿಮಾದಲ್ಲಿ ಸಿದ್ಧಾರ್ಥ್; ಕಮಲ್‌ ಜತೆ ಯಾವ ಪಾತ್ರದಲ್ಲಿ ಇವರ ಕಮಾಲ್‌?

ನಟ ಸಿದ್ಧಾರ್ಥ್ ಅವರು ಕಮಲ್ ಹಾಸನ್ (Kamal Haasan) ಅಭಿನಯದ ಇಂಡಿಯನ್ 2 ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಬಗ್ಗೆ ಅವರೇ ಸ್ವತಃ ಇತ್ತೀಚಿನ ಸಂದರ್ಶನವೊಂದರಲ್ಲಿ ರಿವೀಲ್‌ ಮಾಡಿದ್ದರು. ಶಂಕರ್ ನಿರ್ದೇಶನ ಇರುವ ಈ ಚಿತ್ರವು ಈಗಾಗಲೇ ಒಂದು ಮಟ್ಟದ ಚರ್ಚೆಯನ್ನು ಹುಟ್ಟುಹಾಕಿದೆ.

VISTARANEWS.COM


on

Siddharth on Indian 2
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತಮ್ಮ ಮುಂಬರುವ ತಮಿಳು ಚಿತ್ರ ʻಟಕ್ಕರ್ʼ ಬಿಡುಗಡೆಗೆ ಸಜ್ಜಾಗುತ್ತಿರುವ ನಟ ಸಿದ್ಧಾರ್ಥ್, ಇತ್ತೀಚಿನ ಸಂದರ್ಶನವೊಂದರಲ್ಲಿ ಕಮಲ್ ಹಾಸನ್ (Kamal Haasan) ಅವರ ಇಂಡಿಯನ್ 2 ಸಿನಿಮಾದ ಭಾಗವಾಗಿರುವ ಬಗ್ಗೆ ರಿವೀಲ್‌ ಮಾಡಿದ್ದಾರೆ. ಶಂಕರ್ ನಿರ್ದೇಶನದ ಹಾಗೂ ಕಮಲ್‌ ಹಾಸನ್‌ ನಟನೆಯ ಸಿನಿಮಾದಲ್ಲಿ ನಟಿಸುತ್ತಿರುವ ಬಗ್ಗೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಸಿದ್ಧಾರ್ಥ್ ಇಂಡಿಯನ್ 2 ಸಿನಿಮಾದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ವರದಿ ಪ್ರಕಾರ, ಅವರು ಕಮಲ್ ಹಾಸನ್ ಪಾತ್ರದಲ್ಲಿ ಮೊಮ್ಮಗನಾಗಿ ಕಾಣಿಸಿಕೊಳ್ಳಲಿದ್ದಾರೆ. 2003ರಲ್ಲಿ ತಮಿಳು ಚಲನಚಿತ್ರ ಬಾಯ್ಸ್‌ ಸಿನಿಮಾದಲ್ಲಿ ಸಿದ್ಧಾರ್ಥ್‌ ನಟಿಸಿದ್ದರು. ವಿಶೇಷ ಅಂದರೆ ಈ ಸಿನಿಮಾ ನಿರ್ದೇಶಿಸಿದ್ದು ಶಂಕರ್. ಇದೀಗ ಎರಡನೇ ಬಾರಿಗೆ ಶಂಕರ್‌ ಹಾಗೂ ಸಿದ್ಧಾರ್ಥ್‌ ಒಟ್ಟಿಗೆ ಕೆಲಸ ಮಾಡುವಂತಾಗಿದೆ.

ಸಿದ್ಧಾರ್ಥ್‌ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿ ʻʻಯಾವುದೇ ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆಯಾದರೂ, ಬ್ಲಾಕ್ ಬಸ್ಟರ್ ಆಗಲಿದೆ. ಈ ಸಿನಿಮಾಕ್ಕೆ ನನ್ನನ್ನು ಆಯ್ಕೆ ಮಾಡಿಕೊಂಡಿರುವ ಬಗ್ಗೆ ನನಗೆ ಸಂತೋಷವಿದೆ. ಇಷ್ಟು ವರ್ಷಗಳ ನಂತರ ಮತ್ತೆ ನಿರ್ದೇಶಕರಾದ ಶಂಕರ್‌ ಹಾಗೂ ಕಮಲ್ ಹಾಸನ್‌ ಅವರೊಂದಿಗೆ ಕೆಲಸ ಮಾಡುತ್ತಿರುವುದು ನನ್ನ ಅದೃಷ್ಟ. ನಿರ್ದೇಶಕರಿಗೆ ನಾನು ಯಾವಾಗಲೂ ಕೃತಜ್ಞರಾಗಿರುತ್ತೇನೆʼʼ ಎಂದು ಸಿದ್ಧಾರ್ಥ್ ಹೇಳಿಕೊಂಡಿದ್ದಾರೆ.

ಇಂಡಿಯನ್ 2 ಲುಕ್‌ಗಾಗಿ ಕಮಲ್ ಸಾಕಷ್ಟು ಶ್ರಮ ವಹಿಸಿಸುತ್ತಿದ್ದಾರೆ. ಕಳೆದ ವರ್ಷ, ಬರಹಗಾರ ಜಯಮೋಹನ್ ಅವರು ಸೆಟ್‌ಗಳಲ್ಲಿ ಕಮಲ್ ಹಾಸನ್ ಇರುವ ಬಗೆಯನ್ನು ಬಣ್ಣಿಸಿದ್ದರು. ಕಮಲ್‌ ಅವರ ಬದ್ಧತೆ ಮತ್ತು ನಟನಾ ಮಯದಲ್ಲಿ ಹೇಗೆ ಇರುತ್ತಾರೆ ಎಂಬುದರ ಬಗ್ಗೆ ವಿವರಿಸಿದ್ದರು. ʻʻಕಮಲ್ ಅವರು ಸೆಟ್‌ಗಳಲ್ಲಿ ಬಹುತೇಕ ಹಸಿವಿನಿಂದಲೇ ಇರುತ್ತಾರೆ. ನಟಿಸುವ ಸಮಯದಲ್ಲಿ ಏನನ್ನೂ ತಿನ್ನುವುದಿಲ್ಲ. ಇದಕ್ಕೆ ಕಾರಣವೂ ಇದ್ದು, ನಟನೆ ಸಂದರ್ಭದಲ್ಲಿ ಏನನ್ನಾದರೂ ತಿನ್ನುತ್ತಿದ್ದರೆ, ಅಂದರೆ ಬಾಯಲ್ಲಿ ಅಗಿಯುತ್ತಿದ್ದರೆ, ಅದು ಪ್ರಾಸ್ಥೆಟಿಕ್ ಮೇಕ್ಅಪ್ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಅವರು ನಟಿಸುವಾಗ ಕೇವಲ ಜ್ಯೂಸ್ ಡಯಟ್ ಮಾಡುತ್ತಿದ್ದರುʼʼ ಎಂದು ಸಂದರ್ಶನದಲ್ಲಿ ಹೇಳಿಕೊಂಡಿದ್ದರು.

ಇದನ್ನೂ ಓದಿ: Kamal Haasan: ನಿರ್ದೇಶಕ ಮಣಿರತ್ನಂ ಬಗ್ಗೆ ಅನೇಕರಿಗೆ ಅಸೂಯೆ! ನಟ ಕಮಲ್ ಹಾಸನ್ ಹೀಗೆ ಹೇಳಿದ್ದೇಕೆ?

ಈ ಸಿನಿಮಾದಲ್ಲಿ ಕಮಲ್ ಹಾಸನ್ ದ್ವಿಪಾತ್ರಗಳಲ್ಲಿ ನಟಿಸಲಿದ್ದಾರೆ ಎಂಬುದಾಗಿಯೂ ವರದಿಯಾಗಿದೆ. ಚಿತ್ರದಲ್ಲಿ ಕಾಜಲ್ ಅಗರ್ವಾಲ್ ಮತ್ತು ರಾಕುಲ್ ಪ್ರೀತ್ ಸಿಂಗ್ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Annamalai Biopic: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಯೋಪಿಕ್‌ಗೆ ತಮಿಳು ಖ್ಯಾತ ನಟ ನಟನೆ!

Annamalai Biopic: ಸದ್ಯ ವಿಶಾಲ್ ನಟನೆಯ ‘ರತ್ನಂ’ ಸಿನಿಮಾ ತೆರೆಕಂಡು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇತ್ತೀಚೆಗೆ ನಟ ವಿಶಾಲ್ ನಿರ್ದೇಶಕರಾಗಿಯೂ ಗುರ್ತಿಸಿಕೊಂಡಿದ್ದಾರೆ. ಇದೆಲ್ಲದರ ನಡುವೆ ಇದೀಗ ತೆರೆಮೇಲೆ ಅಣ್ಣಾಮಲೈ ಪಾತ್ರ ಮಾಡುತ್ತಾರೆ ಎನ್ನಲಾಗಿದೆ. ಇತ್ತೀಚೆಗೆ ವಿಶಾಲ್ ಕೂಡ ರಾಜಕೀಯಕ್ಕೆ ಸೇರುವ ಸೂಚನೆ ನೀಡಿದ್ದಾರೆ. ಆದರೆ, ಯಾವ ಪಕ್ಷಕ್ಕೆ ಅವರು ಸೇರ್ಪಡೆ ಆಗುತ್ತಾರೆ ಎನ್ನುವ ಮಾಹಿತಿ ಸಿಕ್ಕಿಲ್ಲ.

VISTARANEWS.COM


on

Annamalai Biopic Will Be Made In Kollywood Annamalai Biopic Will Be Made In Kollywood Annamalai Biopic Will Be Made In Kollywood
Koo

ಬೆಂಗಳೂರು: ಪೊಲೀಸ್ ಹುದ್ದೆಯಲ್ಲಿರುವಾಗ ತಮ್ಮ ಕಟ್ಟುನಿಟ್ಟಾದ ಕಾರ್ಯಶೈಲಿಯಿಂದ “ಸಿಂಗಂ ಅಣ್ಣ” ಎಂದು ಬಿರುದು ಪಡೆದ ನಿವೃತ್ತ ಪೊಲೀಸ್ ಅಧಿಕಾರಿ, ತಮಿಳುನಾಡಿನ ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ (k Annamalai) ಅವರು ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದರ ಮೂಲಕ ಲೋಕಸಭಾ ಚುನಾವಣೆಗೆ ಪದಾರ್ಪಣೆ ಮಾಡಿದ್ದಾರೆ. ಸದ್ಯ ಅಣ್ಣಾಮಲೈ ಕುರಿತು ತಮಿಳಿನಲ್ಲಿ ಬಯೋಪಿಕ್ ಸಿನಿಮಾ (Annamalai Biopic) ಮಾಡುವ ಬಗ್ಗೆ ಚರ್ಚೆ ಶುರುವಾಗಿದೆ. ತಮಿಳು ನಟ ವಿಶಾಲ್ ತೆರೆಮೇಲೆ ಅಣ್ಣಾಮಲೈ ಆಗಿ ನಟಿಸುತ್ತಾರೆ ಎನ್ನಲಾಗುತ್ತಿದೆ.

ಸದ್ಯ ವಿಶಾಲ್ ನಟನೆಯ ‘ರತ್ನಂ’ ಸಿನಿಮಾ ತೆರೆಕಂಡು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇತ್ತೀಚೆಗೆ ನಟ ವಿಶಾಲ್ ನಿರ್ದೇಶಕರಾಗಿಯೂ ಗುರ್ತಿಸಿಕೊಂಡಿದ್ದಾರೆ. ಇದೆಲ್ಲದರ ನಡುವೆ ಇದೀಗ ತೆರೆಮೇಲೆ ಅಣ್ಣಾಮಲೈ ಪಾತ್ರ ಮಾಡುತ್ತಾರೆ ಎನ್ನಲಾಗಿದೆ. 1984ರ ಜೂ.4ರಂದು ಹುಟ್ಟಿದ ಅಣ್ಣಾಮಲೈ ಮೂಲತಃ ತಮಿಳುನಾಡಿನ ಕೊಯಮತ್ತೂರಿನವರು. ಬಿಇ ಎಂಜಿನಿಯರಿಂಗ್‌ ಮಾಡಿ ಎಂಬಿಎ ಪೂರ್ಣಗೊಳಿಸಿದ ಅಣ್ಣಾಮಲೈ 2011ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿ ಆಗಿದ್ದರು.

ಇತ್ತೀಚೆಗೆ ವಿಶಾಲ್ ಕೂಡ ರಾಜಕೀಯಕ್ಕೆ ಸೇರುವ ಸೂಚನೆ ನೀಡಿದ್ದಾರೆ. ಆದರೆ, ಯಾವ ಪಕ್ಷಕ್ಕೆ ಅವರು ಸೇರ್ಪಡೆ ಆಗುತ್ತಾರೆ ಎನ್ನುವ ಮಾಹಿತಿ ಸಿಕ್ಕಿಲ್ಲ.

ಇದನ್ನೂ ಓದಿ: K. Annamalai : ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಹೊಗಳಿದಾಗ ಕಣ್ಣೀರು ಹಾಕಿದ ವಿಜಯಪುರ ಅಭ್ಯರ್ಥಿ ಜಿಗಜಿಣಗಿ

ಅಣ್ಣಾಮಲೈ ಅವರ ಕುರಿತಾದ ಕೆಲವು ಕುತೂಹಲಕರ ಸಂಗತಿಗಳು ಇಲ್ಲಿವೆ

  • ಅಣ್ಣಾಮಲೈ ಅವರಿಗೆ ಈಗ ಕೇವಲ 39 ವರ್ಷ. 2021ರಲ್ಲಿ ಅವರು ತಮಿಳುನಾಡಿನ ಅತ್ಯಂತ ಕಿರಿಯ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದರು.
  • ಕೆ. ಅಣ್ಣಾಮಲೈ ಅವರು 2020ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ತಮಿಳುನಾಡಿನಲ್ಲಿ ಅವರು ಯುವಜನತೆಯ ಅಪಾರ ಬೆಂಬಲ ಪಡೆದಿದ್ದಾರೆ. ಈ ಮೂಲಕ ಅವರು ತಮಿಳುನಾಡಿನಲ್ಲಿ ಬಿಜೆಪಿಗೆ ಶಕ್ತಿ ತುಂಬಿದ್ದಾರೆ. ಬಹಳ ವೇಗವಾಗಿ ಜನಪ್ರಿಯತೆ ಪಡೆಯುತ್ತಿದ್ದಾರೆ.
  • ಕರ್ನಾಟಕ ಕೇಡರ್‌ನ 2011ರ ಬ್ಯಾಚ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಚಿಕ್ಕಮಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಅಪಾರ ಜನಪ್ರಿಯತೆ ಪಡೆದಿದ್ದರು. ನಕ್ಸಲ್‌ ಪೀಡಿತ ಪ್ರದೇಶಗಳಲ್ಲಿ ಅವರು ಜನರ ವಿಶ್ವಾಸ ಗಳಿಸಿದ್ದರು. ಬೆಂಗಳೂರು ದಕ್ಷಿಣ ಉಪ ಪೊಲೀಸ್ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು.
  • ಕೆ ಅಣ್ಣಾಮಲೈ ಅವರು ಸೆಪ್ಟೆಂಬರ್ 2019ರಲ್ಲಿ ಪೊಲೀಸ್ ಸೇವೆಯನ್ನು ತೊರೆದು ಅಚ್ಚರಿ ಮೂಡಿಸಿದ್ದರು.
  • ಇವರು ಎಂಜಿನಿಯರಿಂಗ್ ಪದವೀಧರರಾಗಿದ್ದು, ಐಐಎಂ ಲಕ್ನೋದಲ್ಲಿ ಎಂಬಿಎ ಓದಿದ್ದರು.
  • ಪೊಲೀಸ್ ಫೋರ್ಸ್‌ನಲ್ಲಿ ಕೆಲಸ ಮಾಡುವಾಗ ಕೆ ಅಣ್ಣಾಮಲೈ ಅವರ ಕಟ್ಟುನಿಟ್ಟಾದ ಕಾರ್ಯಶೈಲಿಯನ್ನು ಕಂಡು ಅವರನ್ನು “ಸಿಂಗಂ ಅಣ್ಣ” ಎಂದೇ ಕರೆಯಲಾಗಿತ್ತು.
  • ಅಣ್ಣಾಮಲೈ ಅವರು ಉಡುಪಿಯಲ್ಲಿ ಸೇವೆ ಸಲ್ಲಿಸುತ್ತಿರುವಾಗ ಧಾರ್ಮಿಕ ಗ್ರಂಥಗಳ ತಪ್ಪು ವ್ಯಾಖ್ಯಾನವನ್ನು ತಪ್ಪಿಸಲು ಮತ್ತು ಅವುಗಳನ್ನು ಸರಿಯಾಗಿ ಅರ್ಥಮಾಡಿಕೊಳ್ಳಲು ಇಸ್ಲಾಂ ಧರ್ಮದ ಬಗ್ಗೆ ಅಧ್ಯಯನ ಮಾಡಿದ್ದರು. ಧಾರ್ಮಿಕ ವಿದ್ವಾಂಸರ ಸಹಾಯದಿಂದ ಖುರಾನ್ ಮತ್ತು ಹದೀಸ್ ಅನ್ನು ಅಧ್ಯಯನ ಮಾಡಿದ್ದರು.
  • 2019ರಲ್ಲಿ ಪೊಲೀಸ್ ಅಧಿಕಾರಿ ಹುದ್ದೆಗೆ ರಾಜೀನಾಮೆ ನೀಡುವಾಗ ರಾಜೀನಾಮೆ ಪತ್ರದಲ್ಲಿ, ಇದು ನಾನು ತಕ್ಷಣ ತೆಗೆದುಕೊಂಡು ನಿರ್ಧಾರವಲ್ಲ. 2018ರಲ್ಲಿ ಕೈಗೊಂಡಿದ್ದ ಕೈಲಾಸ ಮಾನಸ ಸರೋವರ ಪ್ರವಾಸವು ನನ್ನ ಜೀವನವನ್ನು ಹಿಂತಿರುಗಿ ನೋಡುವಂತೆ ಮಾಡಿದೆ ಎಂದು ಬರೆದಿದ್ದರು.
  • 2023ರಲ್ಲಿ ಅಣ್ಣಾಮಲೈ ಅವರು ‘ಎನ್‌ ಮನ್ ಎನ್ ಮಕ್ಕಳ್ (ನನ್ನ ಭೂಮಿ ನನ್ನ ಜನರು)’ ಯಾತ್ರೆಯನ್ನು ತಮಿಳುನಾಡು ರಾಜ್ಯಾದ್ಯಂತ ಯಶಸ್ವಿಯಾಗಿ ನಡೆಸಿದರು.
  • ಅಣ್ಣಾಮಲೈ ಅವರನ್ನು ಬಿಜೆಪಿಯ ಭರವಸೆಯ ಉದಯೋನ್ಮುಖ ತಾರೆ ಎಂದು ವ್ಯಾಖ್ಯಾನಿಸಲಾಗಿದೆ. ಅವರು ವಾಕ್ಚಾತುರ್ಯಕ್ಕೆ ಹೆಸರುವಾಸಿಯಾದ ಕಾರಣ ಅವರ ಭಾಷಣಗಳು ಸಾಮಾನ್ಯವಾಗಿ ವೈರಲ್ ಆಗುತ್ತವೆ.
Continue Reading

ಕಿರುತೆರೆ

Vijay Deverakonda: ಸಿನಿಮಾಗಳ ಸತತ ಸೋಲಿನ ಬೆನ್ನಲ್ಲೆ ಹೊಸ ಸಿನಿಮಾ ಅನೌನ್ಸ್‌ ಮಾಡಿದ ವಿಜಯ್‌ ದೇವರಕೊಂಡ!

Vijay Deverakonda: ವಿಜಯ್ ದೇವರಕೊಂಡ (Vijay Deverakonda) ಮತ್ತು ಮೃಣಾಲ್ ಠಾಕೂರ್ ( Mrunal Thakur) ಅಭಿನಯದ ಚಿತ್ರ ʻಫ್ಯಾಮಿಲಿ ಸ್ಟಾರ್ʼ ಭಾರತದಲ್ಲಿ ಸಾಧಾರಣ ಓಪನಿಂಗ್‌ (Family Star Box Office) ಪಡೆದುಕೊಂಡಿತ್ತು. ಏಪ್ರಿಲ್ 26 ರಿಂದ ಅಮೆಜಾನ್‌ ಪ್ರೈಮ್‌ನಲ್ಲಿ ಸ್ಟ್ರೀಮಿಂಗ್‌ ಆಗಿತ್ತು.ಇದೀಗ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ ವಿಜಯ್‌ ದೇವರಕೊಂಡ.ತೆಲುಗು ನಟ ವಿಜಯ್ ದೇವರಕೊಂಡ ಅವರು ದಿಲ್ ರಾಜು ಅವರೊಂದಿಗೆ ಹೈ-ಆಕ್ಟೇನ್ ಆಕ್ಷನ್ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ.

VISTARANEWS.COM


on

Vijay Devarakonda announces new film
Koo

ಬೆಂಗಳೂರು: ʻಲೈಗರ್‌ʼ ಸಿನಿಮಾ ಸೋಲಿನ ಬಳಿಕ ನಟ ವಿಜಯ್‌ ದೇವರಕೊಂಡ (Vijay Deverakonda) ಯಾವ ಸಿನಿಮಾವನ್ನು ಮಾಡಲಿದ್ದಾರೆ ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿತ್ತು. ಇದಾದ ಬಳಿ ಸಾಕಷ್ಟು ಸಿನಿಮಾಗಳು ತೆರೆ ಕಂಡವು. ʻಖುಷಿʼ ಹಾಗೂ ʻಫ್ಯಾಮಿಲಿ ಸ್ಟಾರ್‌ʼ ಸಿನಿಮಾಗಳು ರಿಲೀಸ್‌ ಆದರೂ ತಕ್ಕ ಮಟ್ಟಿಗೆ ಸಕ್ಸೆಸ್‌ ಏನು ಆಗಿಲ್ಲ. ಇದೀಗ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ ವಿಜಯ್‌ ದೇವರಕೊಂಡ.

ತೆಲುಗು ನಟ ವಿಜಯ್ ದೇವರಕೊಂಡ ಅವರು ದಿಲ್ ರಾಜು ಅವರೊಂದಿಗೆ ಹೈ-ಆಕ್ಟೇನ್ ಆಕ್ಷನ್ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ. ಈ ಸಿನಿಮಾಗೆ ರವಿ ಕರಣ್ ಕೋಲಾ (Ravi Kiran Kola) ನಿರ್ದೇಶನವಿದೆ. ರವಿಕಿರಣ್ ಕೋಲಾ ಅವರು ‘ರಾಜಾ ವರು ರಾಣಿ ಗಾರು’ (Raja Vaaru Rani Gaaru) ಮತ್ತು ‘ಅಶೋಕ ವನಮ್ಲೋ ಅರ್ಜುನ ಕಲ್ಯಾಣಂ'(Ashoka Vanamlo Arjuna Kalyanam) ಸಿನಿಮಾಗೆ ಹೆಸರುವಾಸಿಯಾಗಿದ್ದಾರೆ. ಚಿತ್ರದ ಶೀರ್ಷಿಕೆ, ತಾರಾಗಣ ಮತ್ತು ಬಿಡುಗಡೆಯ ದಿನಾಂಕ ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.

ವಿಜಯ್ ದೇವರಕೊಂಡ (Vijay Deverakonda) ಮತ್ತು ಮೃಣಾಲ್ ಠಾಕೂರ್ ( Mrunal Thakur) ಅಭಿನಯದ ಚಿತ್ರ ʻಫ್ಯಾಮಿಲಿ ಸ್ಟಾರ್ʼ ಭಾರತದಲ್ಲಿ ಸಾಧಾರಣ ಓಪನಿಂಗ್‌ (Family Star Box Office) ಪಡೆದುಕೊಂಡಿತ್ತು. ಏಪ್ರಿಲ್ 26 ರಿಂದ ಅಮೆಜಾನ್‌ ಪ್ರೈಮ್‌ನಲ್ಲಿ ಸ್ಟ್ರೀಮಿಂಗ್‌ ಆಗಿತ್ತು.

ಇದನ್ನೂ ಓದಿ: Rashmika Mandanna: ವಿಜಯ್‌ ದೇವರಕೊಂಡ ಜತೆಗಿನ ಸಂಬಂಧ ಒಪ್ಪಿಕೊಂಡ್ರಾ ರಶ್ಮಿಕಾ ಮಂದಣ್ಣ?

ಕೆಲವರು ಇದು ಸರಾಸರಿಗಿಂತ ಕಡಿಮೆ ಚಿತ್ರ ಎಂದು ಹೇಳುತ್ತಿದ್ದರೆ, ಇನ್ನು ಕೆಲವರು ಈ ಚಿತ್ರಕ್ಕಿಂತ ಧಾರಾವಾಹಿ ಉತ್ತಮವಾಗಿದೆ ಎಂದು ಕಮೆಂಟ್ ಮಾಡಿದ್ದರು. ಸಂಗೀತ ಅಷ್ಟಾಗಿ ಆಕರ್ಷಣೀಯವಾಗಿಲ್ಲ ಎಂಬ ಮಾತು ಕೂಡ ಇದೆ. ಈ ಸಿನಿಮಾ ಅಷ್ಟೊಂದು ಪ್ರಭಾವಶಾಲಿಯಾಗಿಲ್ಲ, ಹೊಸತನವೇನೂ ಇಲ್ಲ ಎಂದಿದ್ದರು.

ಹಾಯ್ ನಾನ್ನʼ (2023), ʻಸೀತಾ ರಾಮಂʼ (2022)ಬಳಿಕ ಮೃಣಾಲ್ ಠಾಕೂರ್ ಅವರ ಮೂರನೇ ತೆಲುಗು ಚಿತ್ರ ಇದು. ʻಫ್ಯಾಮಿಲಿ ಸ್ಟಾರ್ʼ ಸಿನಿಮಾವನ್ನು ಪರುಶುರಾಮ್ ನಿರ್ದೇಶಿಸಿದ್ದಾರೆ. ಈ ಮುಂಚೆ ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ʻಗೀತ ಗೋವಿಂದಂʼ (2018) ಸಿನಿಮಾಗೆ ನಿರ್ದೇಶನ ಮಾಡಿದ್ದರು.

Continue Reading

ಟಾಲಿವುಡ್

Bandaru Supritha Naidu: ವಿಜಯ್‌ದೇವರಕೊಂಡರನ್ನು ಮದುವೆಯಾಗುತ್ತಿದ್ದಾರಂತೆ ತೆಲುಗು ಖ್ಯಾತ ನಟಿಯ ಮಗಳು!

Bandaru Supritha Naidu: ಸುರೇಖಾ ವಾಣಿ ಅವರ ಪುತ್ರಿ ಸುಪ್ರಿತಾ ತೆಲುಗು ಮಂದಿಗೆ ಚಿರಪರಿಚಿತ. ಇತ್ತೀಚೆಗೆ ತನ್ನ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಲೈವ್‌ಗೆ ಬಂದಿದ್ದರು.ಈ ವೇಳೆ ನೀವು ಯಾವ ಅವಿವಾಹಿತ ಹೀರೊನಾ ಮದುವೆ ಆಗಲು ಬಯಸುತ್ತೀರಾ? ಎಂದು ಪ್ರಶ್ನೆ ಮಾಡಿದ್ದರು. ನಟಿಯ ಉತ್ತರಕ್ಕೆ ನೆಟ್ಟಿಗರು ಶಾಕ್‌ ಆಗಿದ್ದಾರೆ.

VISTARANEWS.COM


on

Bandaru Supritha Naidu surekha vani daughter wants to marry vijay deverakonda
Koo

ತೆಲುಗಿನ ಹಿರಿಯ ನಟಿ ಸುರೇಖಾ ವಾಣಿ ಅವರ ಪುತ್ರಿ ಸುಪ್ರಿತಾ (Bandaru Supritha Naidu) ಹೆಸರು ವಿಜಯ್ ದೇವರಕೊಂಡ ಜತೆ ಕೇಳಿಬರುತ್ತಿದೆ.

ಸುರೇಖಾ ವಾಣಿ ಅವರ ಪುತ್ರಿ ಸುಪ್ರಿತಾ ತೆಲುಗು ಮಂದಿಗೆ ಚಿರಪರಿಚಿತ. ಇತ್ತೀಚೆಗೆ ತನ್ನ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಲೈವ್‌ಗೆ ಬಂದಿದ್ದರು. ತಮ್ಮನ್ನು ಫಾಲೋ ಮಾಡುವವರಿಗೆ ನಿಮ್ಮಲ್ಲಿ ಏನಾದರೂ ಪ್ರಶ್ನೆಗಳಿದ್ದರೆ ಕೇಳಿ ಎಂದಿದ್ದರು. ಈ ವೇಳೆ ನೆಟ್ಟಿಗರು ಪ್ರಶ್ನೆಗಳನ್ನು ಕೇಳಿದ್ದರು.

ಈ ವೇಳೆ ನೀವು ಯಾವ ಅವಿವಾಹಿತ ಹೀರೊನಾ ಮದುವೆ ಆಗಲು ಬಯಸುತ್ತೀರಾ? ಎಂದು ಪ್ರಶ್ನೆ ಮಾಡಿದ್ದರು.ಈ ಪ್ರಶ್ನೆಗೆ ಸುಪ್ರಿತಾ ವಿಜಯ್ ದೇವರಕೊಂಡ ಎಂದು ಹೇಳಿದ್ದಾರೆ. ವಿಜಯ್ ದೇವರಕೊಂಡ ಅವರ ಫೋಟೊವನ್ನು ಕೂಡ ಶೇರ್ ಮಾಡಿಕೊಂಡಿದ್ದರು.

ಇದನ್ನೂ ಓದಿ: MI vs KKR: ಮತ್ತೆ ಮುಂಬೈ ವಿರುದ್ಧ ಕೇಳಿಬಂದ ಟಾಸ್​ ಫಿಕ್ಸಿಂಗ್​ ಆರೋಪ

ಇದೀಗ ನೆಟ್ಟಿಗರು ವಿಜಯ್ ದೇವರಕೊಂಡ ಜೊತೆ ಸುಪ್ರಿತಾರನ್ನು ಮದುವೆ ಮಾಡಿಸುವುದಕ್ಕೆ ನಿಂತಿದ್ದಾರೆ.

ಅಮರ್ ದೀಪ್ ಚೌಧರಿ ನಾಯಕನಾಗಿ ನಟಿಸುತ್ತಿರುವ ಸಿನಿಮಾ ಮೂಲಕ ಸುಪ್ರಿತಾ ನಾಯಕಿಯಾಗಿ ಪರಿಚಯವಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Continue Reading

ಕಾಲಿವುಡ್

Aishwarya Rajinikanth: ಮಗಳ ಹೊಸ ಮನೆ ಕಂಡು ಹುಬ್ಬೇರಿಸಿದ ರಜನಿಕಾಂತ್!

Aishwarya Rajinikanth: ರಜನಿಕಾಂತ್ ಮಗಳು ಐಶ್ವರ್ಯಾ ಅವರ ಹೊಸದಾಗಿ ಖರೀದಿಸಿದ ಮನೆಗೆ ರಜನಿ ದಂಪತಿ ಭೇಟಿ ಕೊಟ್ಟಿದ್ದಾರೆ. . ಬಾಗಿಲಲ್ಲಿ ಮಗಳು ತಂದೆ ತಾಯಿಗೆ ಸ್ವಾಗತಿಸಿದ ಬಳಿಕ ರಜನಿ ಬಾಲ್ಕನಿಗೆ ಹೋಗಿ ಮನೆ ತುಂಬ ಚೆನ್ನಾಗಿದೆ ಎಂದು ಹೇಳಿದ್ದಾರೆ. ಮನೆಯ ಒಳಾಂಗಣ ಮತ್ತು ಇಂಟಿರಿಯರ್‌ ಡಿಸೈನ್‌ ಕಂಡು ರಜನಿ ಫುಲ್‌ ಫಿದಾ ಆದರು.

VISTARANEWS.COM


on

Aishwarya Rajinikanth new house priceless reaction Rajinikanth
Koo

ಬೆಂಗಳೂರು: ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ (Aishwarya Rajinikanth) ಹೊಸ ಅಪಾರ್ಟ್‌ಮೆಂಟ್ ಖರೀದಿಸಿದ್ದಾರೆ. ರಜನಿ ಮತ್ತು ಪತ್ನಿ ಲತಾ ಮಗಳ ಹೊಸ ಮನೆಗೆ ಭೇಟಿ ನೀಡಿದ್ದರು. ಮಾತ್ರವಲ್ಲ ಮನೆಯ ಒಳಾಂಗಣ ಮತ್ತು ಇಂಟಿರಿಯರ್‌ ಡಿಸೈನ್‌ ಕಂಡು ರಜನಿ ಫುಲ್‌ ಫಿದಾ ಆದರು. ಮನೆಯ ಒಳಗೆ ಬರಬರುತ್ತಲೇ ಅಲಂಕಾರಗಳನ್ನು ಕಂಡು ಹುಬ್ಬೇರಿಸಿದ್ದಾರೆ. ಇದೀಗ ಈ ವಿಡಿಯೊಗಳು ವೈರಲ್‌ ಆಗಿವೆ.

ರಜನಿಕಾಂತ್ ಮಗಳು ಐಶ್ವರ್ಯಾ ಅವರು ಹೊಸದಾಗಿ ಖರೀದಿಸಿದ ಮನೆಗೆ ರಜನಿ ದಂಪತಿ ಭೇಟಿ ಕೊಟ್ಟಿದ್ದಾರೆ. . ಬಾಗಿಲಲ್ಲಿ ಮಗಳು ತಂದೆ ತಾಯಿಗೆ ಸ್ವಾಗತಿಸಿದ ಬಳಿಕ ರಜನಿ ಬಾಲ್ಕನಿಗೆ ಹೋಗಿ ಮನೆ ತುಂಬ ಚೆನ್ನಾಗಿದೆ ಎಂದು ಹೇಳಿದ್ದಾರೆ. ಇಡೀ ಮನೆ ಅಲಂಕಾರಗಳಿಂದ ಕಂಗೊಳಿಸುತ್ತಿತ್ತು. ಬಳಿಕ ಲತಾ ಅವರು ದೇವರ ಮನೆಯಲ್ಲಿ ದೀಪ ಹಚ್ಚಿ ಮಗಳಿಗೆ ವಿಶ್‌ ಮಾಡಿದ್ದಾರೆ.

 ನಟ ಧನುಷ್ (Actor Dhanush) ಹಾಗೂ ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್ ಇತ್ತೀಚೆಗೆ ಚೆನ್ನೈ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಅಕ್ಟೋಬರ್ 7ರಂದು ಇಬ್ಬರೂ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿದೆ. ಈ ಸಂಬಂಧ ನೋಟಿಸ್ ನೀಡಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ: Aishwaryaa Rajinikanth: ಐಶ್ವರ್ಯಾ ರಜನಿಕಾಂತ್ ಮನೆಯಲ್ಲಿ ಕದ್ದ ಕಳ್ಳರು ಕೊನೆಗು ಸಿಕ್ಕಿಬಿದ್ದರು; ಯಾರವರು?

ಪರಸ್ಪರ ಒಪ್ಪಿಗೆ ಮೇರೆಗೆ ಜೋಡಿ ವಿಚ್ಛೇದನ ಸಲ್ಲಿಸಿತ್ತು. ಕಳೆದ ಎರಡು ವರ್ಷಗಳಿಂದ ಧನುಷ್ ಮತ್ತು ಐಶ್ವರ್ಯ ಬೇರೆ ಬೇರೆಯಾಗಿ ವಾಸಿಸುತ್ತಿದ್ದಾರೆ. ಧನುಷ್ ಹಾಗೂ ಐಶ್ವರ್ಯಾ ಪರಸ್ಪರ ಪ್ರೀತಿಸಿ ಮದುವೆ ಆಗಿದ್ದರು. ಮದುವೆಯಾಗಿ ಬರೋಬ್ಬರಿ 18 ವರ್ಷಗಳ ಬಳಿಕ ದೂರಾಗುತ್ತಿರುವುದಾಗಿ ಹೇಳಿದ್ದರು. ವಿಚ್ಛೇದನ ವಿಚಾರ ಘೋಷಣೆ ಬಳಿಕ ಇಬ್ಬರು ತಮ್ಮ ಮಕ್ಕಳಾದ ಯಾತ್ರಾ ಮತ್ತು ಲಿಂಗ ಶಾಲೆಯ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದರು.

ಜನವರಿ 2022ರಲ್ಲಿ ಬೇರೆಯಾಗುತ್ತಿದ್ದೇವೆ ಎಂದು ದಂಪತಿ ಘೋಷಿಸಿದ್ದರು. “18 ವರ್ಷಗಳ ಕಾಲ ಸ್ನೇಹಿತರು, ದಂಪತಿಗಳಾಗಿ , ಪೋಷಕರಾಗಿ ಹಿತೈಷಿಗಳಾಗಿ ಒಟ್ಟಿಗೆ ಇದ್ದೆವು. ಈ ಪಯಣ ನಮ್ಮಿಬ್ಬರ ಪ್ರಗತಿ, ತಿಳಿವಳಿಕೆ, ಹೊಂದಾಣಿಕೆ ಮತ್ತು ಪರಸ್ಪರ ಸ್ವೀಕಾರದ ಹಾದಿಯಾಗಿತ್ತು. ಇಂದು ನಾವು ನಮ್ಮ ಪ್ರತ್ಯೇಕ ಮಾರ್ಗಗಳನ್ನು ಕಂಡುಕೊಂಡಿದ್ದೇವೆ. ಐಶ್ವರ್ಯಾ ಮತ್ತು ನಾನು ದಂಪತಿಗಳಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ನಮ್ಮನ್ನು ನಾವು ಅರ್ಥ ಮಾಡಿಕೊಳ್ಳುವುದಕ್ಕೆ ಸಮಯ ಹಿಡಿಯಲಿದೆ. ದಯವಿಟ್ಟು ನಮ್ಮ ನಿರ್ಧಾರವನ್ನು ಗೌರವಿಸಿ. ಓಂ ನಮಶಿವಾಯ” ಎಂದು ಒಂದೂವರೆ ವರ್ಷದ ಹಿಂದೆ ಧನುಷ್ ಟ್ವೀಟ್ ಮಾಡಿದ್ದರು. ಹಿರಿಯ ನಟ ರಜನಿಕಾಂತ್ ಅವರ ಪುತ್ರಿ ಧನುಷ್ ಮತ್ತು ಐಶ್ವರ್ಯಾ ಅವರು 2004ರಲ್ಲಿ ವಿವಾಹವಾಗಿದ್ದರು.
ಇಬ್ಬರೂ ಮತ್ತೆ ಒಂದಾಗಬೇಕು ಎಂದು ಆಪ್ತರು, ಅಭಿಮಾನಿಗಳು ಬಯಸಿದ್ದರು. ಆದರೆ ಈಗ ಸದ್ಯದಲ್ಲೇ ಇವರ ವಿಚ್ಛೇದನ ಅಂತಿಮಗೊಳ್ಳಲಿದೆ. ಈ ವಿಚಾರದಲ್ಲಿ ಅಭಿಮಾನಿಗಳಿಗೆ ನಿರಾಸೆಯಾಗಿದೆ.

ಐಶ್ವರ್ಯಾ ಇತ್ತೀಚೆಗೆ ʻಲಾಲ್ ಸಲಾಂʼ ಚಿತ್ರದ ಮೂಲಕ ನಿರ್ದೇಶನಕ್ಕೆ ಮರಳಿದ್ದರು. ಇದರಲ್ಲಿ ರಜನಿಕಾಂತ್ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಚಿತ್ರದಲ್ಲಿ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು

Continue Reading
Advertisement
Kangana Ranaut
ರಾಜಕೀಯ4 mins ago

Kangana Ranaut: ತೇಜಸ್ವಿ ಸೂರ್ಯ ಗೂಂಡಾಗಿರಿ ಮಾಡ್ತಾನೆ ಎಂದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್! ವಿಡಿಯೊ ನೋಡಿ

Virat Kohli
ಕ್ರೀಡೆ8 mins ago

Virat Kohli: ಟಿ20ಯಲ್ಲಿ ದಾಖಲೆ ಬರೆದ ಕೊಹ್ಲಿ; ಈ ಸಾಧನೆ ಮಾಡಿದ ಮೊದಲ ಭಾರತೀಯ

HD Revanna
ಕರ್ನಾಟಕ15 mins ago

HD Revanna: ಅಶ್ಲೀಲ ವಿಡಿಯೊ ಪ್ರಕರಣ: ದೂರು ನೀಡಲು ಮುಂದೆ ಬಂದ ಮೂವರು ಸಂತ್ರಸ್ತೆಯರು; ರೇವಣ್ಣ, ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ?

Annamalai Biopic Will Be Made In Kollywood Annamalai Biopic Will Be Made In Kollywood Annamalai Biopic Will Be Made In Kollywood
ಕಾಲಿವುಡ್33 mins ago

Annamalai Biopic: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಯೋಪಿಕ್‌ಗೆ ತಮಿಳು ಖ್ಯಾತ ನಟ ನಟನೆ!

IPL 2024
ಕ್ರೀಡೆ42 mins ago

IPL 2024: ಹ್ಯಾಟ್ರಿಕ್​ ಗೆಲುವು ಸಾಧಿಸಿದ ಆರ್​ಸಿಬಿಯ ಪ್ಲೇ ಆಫ್ ಲೆಕ್ಕಾಚಾರ ಹೇಗಿದೆ?

HD Revanna
ಕರ್ನಾಟಕ58 mins ago

HD Revanna: ಎಚ್‌.ಡಿ.ರೇವಣ್ಣ ಮುಂದಿನ ಕಾನೂನು ಹೋರಾಟ ಯಾವ ರೀತಿ ಇರಲಿದೆ? ಇಲ್ಲಿದೆ ಮಾಹಿತಿ

Shreyas Talpade hints his heart attack side effect of Covid vaccine
ಬಾಲಿವುಡ್1 hour ago

Shreyas Talpade: ಶ್ರೇಯಸ್‌ ತಲ್ಪಾಡೆ ಹೃದಯಾಘಾತಕ್ಕೆ ಕೋವಿಡ್ ವ್ಯಾಕ್ಸಿನ್‌ ಕಾರಣವಂತೆ! ನಟ ಹೇಳಿದ್ದೇನು?

IPL 2024 Points Table
ಕ್ರಿಕೆಟ್1 hour ago

IPL 2024 Points Table: 7ನೇ ಸ್ಥಾನಕ್ಕೇರಿದ ಆರ್​ಸಿಬಿ; ಮುಂಬೈಗೆ ಕೊನೆಯ ಸ್ಥಾನ

Blood Pressure
ಆರೋಗ್ಯ1 hour ago

Blood Pressure: ರಕ್ತದೊತ್ತಡ ನಿಯಂತ್ರಿಸಲು ಈ ಆಹಾರಗಳು ಸೂಕ್ತ

Prajwal Revanna Case
ಕರ್ನಾಟಕ1 hour ago

Prajwal Revanna Case: ದುಬೈ ವಿಮಾನದಲ್ಲೂ ರಾಜ್ಯಕ್ಕೆ ಬಾರದ ಸಂಸದ ಪ್ರಜ್ವಲ್ ರೇವಣ್ಣ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ5 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌