Kannada TV Serials TRP This Week Kannada TV Serials TRP: ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿ ನಂಬರ್‌ 1; ನಂತರದ ಸ್ಥಾನದಲ್ಲಿರುವ ಸೀರಿಯಲ್‌ಗಳು ಯಾವವು? - Vistara News

ಕಿರುತೆರೆ

Kannada TV Serials TRP: ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿ ನಂಬರ್‌ 1; ನಂತರದ ಸ್ಥಾನದಲ್ಲಿರುವ ಸೀರಿಯಲ್‌ಗಳು ಯಾವವು?

ಈ ವಾರದ ಕನ್ನಡ ಕಿರುತೆರೆಯ ಟಿಆರ್‌ಪಿಯಲ್ಲಿ (Kannada TV Serials TRP) ((ಮೇ 19-25) ಉಮಾಶ್ರೀ ನಟನೆಯ ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಟಾಪ್ ಸ್ಥಾನ ಕಾಯ್ದುಕೊಂಡಿದೆ.

VISTARANEWS.COM


on

Kannada TV Serials TRP
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಈ ವಾರದ ಕನ್ನಡ ಕಿರುತೆರೆಯ ಟಿಆರ್‌ಪಿಯಲ್ಲಿ (Kannada TV Serials TRP) ((ಮೇ 19-25) ಉಮಾಶ್ರೀ ನಟನೆಯ ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಟಾಪ್ ಸ್ಥಾನ ಕಾಯ್ದುಕೊಂಡಿದೆ. ನಾಲ್ಕನೇ ಸ್ಥಾನದಲ್ಲಿ ಮೂರು ಧಾರಾವಾಹಿಗಳು ಇವೆ. ಐದನೇ ಸ್ಥಾನದಲ್ಲಿ ಜೀ ಕನ್ನಡ ವಾಹಿನಿಯ ‘ತ್ರಿನಯನಿ’ ಧಾರಾವಾಹಿ ಸೇರ್ಪಡೆಯಾಗಿದೆ.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ಎರಡನೇ ಸ್ಥಾನಕ್ಕೆ ಇಳಿದಿದ್ದ ಈ ಧಾರಾವಾಹಿ ಮೊದಲ ಸ್ಥಾನದಲ್ಲಿದೆ. ಸಾಮಾನ್ಯಕ್ಕಿಂತ ಹೆಚ್ಚಿನ ಟಿಆರ್​ಪಿಯನ್ನು ಇದು ಪಡೆದಿದೆ. ರಮೇಶ್ ಪಂಡಿತ್, ಉಮಾಶ್ರೀ, ಅಕ್ಷರಾ, ಸಂಜನಾ ಬುರ್ಲಿ, ಮಂಜು ಭಾಷಿಣಿ, ಹಂಸ, ಧನುಷ್, ಸೂರಜ್ ಹೊಳ್ಳ, ಪವನ್ ಕುಮಾರ್ ಮುಂತಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

ಗಟ್ಟಿಮೇಳ

ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಗಟ್ಟಿಮೇಳ’ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿ ಎರಡನೇ ಸ್ಥಾನದಲ್ಲಿದೆ. ಈ ಹಿಂದೆ ಸತತವಾಗಿ ಮೊದಲ ಸ್ಥಾನ ಗಳಿಸಿತ್ತು. ರಕ್ಷಿತ್ ಗೌಡ, ನಿಶಾ ರವಿಕೃಷ್ಣನ್, ಸುಧಾ ನರಸಿಂಹರಾಜು ಮೊದಲಾದವರು ಇದ್ದಾರೆ. ಮಧ್ಯಮ ವರ್ಗದ ಮನೆಯ ಹೆಣ್ಣು ಮಕ್ಕಳನ್ನು ಹೇಗೆ ಪರಿಮಳಾ ಹಾಗೂ ಮಂಜುನಾಥ್ ದಂಪತಿ ಮದುವೆ ಮಾಡುತ್ತಾರೆ ಎಂಬುದು ಒನ್‌ಲೈನ್‌ ಸ್ಟೋರಿ.

ಕಲರ್ಸ್ ಕನ್ನಡದ ‘ಲಕ್ಷ್ಮೀ ಬಾರಮ್ಮ’ ಹಾಗೂ ‘ಭಾಗ್ಯಲಕ್ಷ್ಮೀ’ ಧಾರಾವಾಹಿಗಳು ಪ್ರಸಾರ ಕಾಣುತ್ತಿವೆ. ಇದು ಅಕ್ಕ ತಂಗಿ ಕಥೆ. ಈ ಎರಡೂ ಧಾರಾವಾಹಿಗಳು ಒಂದೇ ಟಿಆರ್​ಪಿ ಪಡೆದು ಮೂರನೇ ಸ್ಥಾನದಲಿತ್ತು. ಈ ಬಾರಿ ಭಾಗ್ಯಲಕ್ಷ್ಮೀ ಧಾರಾವಾಹಿ ಮೂರನೇ ಸ್ಥಾನದಲ್ಲಿದೆ. ಭೂಮಿಕಾ ರಮೇಶ್, ಸುಷ್ಮಾ ಕೆ. ರಾವ್, ಸುದರ್ಶನ್ ರಂಗಪ್ರಸಾದ್ ಮೊದಲಾದವರು ಈ ಧಾರಾವಾಹಿಯಲ್ಲಿದ್ದಾರೆ.

ಇದನ್ನೂ ಓದಿ: Alia Bhatt: ಆಲಿಯಾ ಭಟ್ ತಾತ ನರೇಂದ್ರನಾಥ್ ರಾಜ್​ದಾನ್ ನಿಧನ; ಭಾವುಕ ಪೋಸ್ಟ್‌ ಹಂಚಿಕೊಂಡ ನಟಿ

ಇದನ್ನೂ ಓದಿ: Kannada Serials TRP: ಈ ವಾರ ಟಿಆರ್‌ಪಿಯಲ್ಲಿ ನಂಬರ್‌ 1 ಸ್ಥಾನ ಪಡೆದ ಧಾರಾವಾಹಿ ಯಾವುದು?

ನಾಲ್ಕನೇ ಸ್ಥಾನದಲ್ಲಿ ಮೂರು ಧಾರಾವಾಹಿಗಳು

ನಾಲ್ಕನೇ ಸ್ಥಾನದಲ್ಲಿ ಜಂಟಿಯಾಗಿ ಜೀ ಕನ್ನಡ ವಾಹಿನಿಯ ‘ಸತ್ಯ’, ಕಲರ್ಸ್ ಕನ್ನಡದ ‘ಲಕ್ಷ್ಮೀ ಬಾರಮ್ಮ’, ಜೀ ಕನ್ನಡದ ‘ಶ್ರೀರಸ್ತು ಶುಭಮಸ್ತು’ ಇವೆ.

ತ್ರಿನಯನಿ

ಐದನೇ ಸ್ಥಾನದಲ್ಲಿ ಜೀ ಕನ್ನಡ ವಾಹಿನಿಯ ‘ತ್ರಿನಯನಿ’ ಧಾರಾವಾಹಿ ಇದೆ. ಮೂರು ಧಾರಾವಾಹಿಗಳಿಗೆ ಒಂದೇ ಸ್ಥಾನ ಸಿಕ್ಕಿದ್ದರಿಂದ ಈ ಧಾರಾವಾಹಿಗೆ ಐದನೇ ಸ್ಥಾನ ಸಿಕ್ಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Siddharth Kak: ಡಿಡಿಯ ʼಸುರಭಿʼ ಕಾರ್ಯಕ್ರಮ ನೆನಪಿದೆಯಾ? ಪ್ರತಿ ವಾರ ಎಷ್ಟು ಲಕ್ಷ ಪೋಸ್ಟ್‌ ಕಾರ್ಡ್‌ ಬರುತ್ತಿತ್ತು ಗೊತ್ತಾ?

90ರ ದಶಕದ ಜನಪ್ರಿಯ ಟಿವಿ ಶೋ ಸುರಭಿಯು ಒಂದು ವಾರಕ್ಕೆ 14 ಲಕ್ಷ ಪೋಸ್ಟ್‌ ಕಾರ್ಡ್‌ಗಳನ್ನು ಸ್ವೀಕರಿಸಿತ್ತು. ಇದರಿಂದ ಪೋಸ್ಟ್‌ಕಾರ್ಡ್‌ಗಳನ್ನು ಪಡೆಯಲು ಅಂಚೆ ಕಚೇರಿಗೆ ಟೆಂಪೋ ಬಾಡಿಗೆಗೆ ಪಡೆದು ಹೋಗಬೇಕಾಗಿತ್ತು ಎಂದು ಕಾರ್ಯಕ್ರಮದ ನಿರೂಪಕ ಸಿದ್ಧಾರ್ಥ್ ಕಾಕ್ (Siddharth Kak) ನೆನಪಿಸಿಕೊಂಡಿದ್ದಾರೆ.

VISTARANEWS.COM


on

By

Siddharth Kak
Koo

90ರ ದಶಕದಲ್ಲಿ ದೂರದರ್ಶನದಲ್ಲಿ (Doordarshan ) ಪ್ರಸಾರವಾಗುತ್ತಿದ್ದ ಜನಪ್ರಿಯ ಭಾರತೀಯ ಸಾಂಸ್ಕೃತಿಕ ಸರಣಿ ‘ಸುರಭಿ’ಯು (Surabhi) ವೀಕ್ಷಕರಿಂದ 14 ಲಕ್ಷ ಪೋಸ್ಟ್‌ಕಾರ್ಡ್‌ಗಳನ್ನು (post card) ಸ್ವೀಕರಿಸುತ್ತಿತ್ತು. ಇದರಿಂದಾಗಿ ಅದು ಲಿಮ್ಕಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ಗೆ ( Limca Book of World Record) ಸೇರಿತ್ತು. ಈ ಕಾರ್ಯಕ್ರಮದ ನಿರೂಪಕ ಸಿದ್ಧಾರ್ಥ್ ಕಾಕ್ (Siddharth Kak) ಅವರು ಈ ಸಂಗತಿಯನ್ನು ಈಗ ನೆನಪಿಸಿಕೊಂಡಿದ್ದಾರೆ.

ಅವರು ಸ್ವೀಕರಿಸುತ್ತಿದ್ದ ಭಾರಿ ಪ್ರಮಾಣದ ಪೋಸ್ಟ್‌ಕಾರ್ಡ್‌ಗಳ ಕಾರಣ ಅಂಚೆ ಇಲಾಖೆಯು ಪೋಸ್ಟ್‌ಕಾರ್ಡ್‌ಗಳ ಬೆಲೆಯನ್ನು ಹೆಚ್ಚಿಸಬೇಕಾಯಿತು. ಮತ್ತು ಸ್ಪರ್ಧೆಗೆ ಪ್ರತ್ಯೇಕ ಪೋಸ್ಟ್‌ಕಾರ್ಡ್‌ಗಳನ್ನು ಪರಿಚಯಿಸಿತು ಎಂದು ಅವರು ತಿಳಿಸಿದರು. ರೇಣುಕಾ ಶಹಾನೆ ಅವರೊಂದಿಗೆ ಕಾಕ್ ಈ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದರು.

ನಮ್ಮ ಸಂಶೋಧನಾ ತಂಡವು ಕೆಮರಾದ ಹಿಂದೆ ಇರಲಿಲ್ಲ, ಅದು ಕೆಮರಾದ ಮುಂದೆ ಇತ್ತು. ದೇಶವು ನಮ್ಮ ಸಂಶೋಧನಾ ತಂಡವಾಗಿತ್ತು. ಏಕೆಂದರೆ ಅವರು ನೀವು ತಿಳಿದುಕೊಳ್ಳಲು ಬಯಸುವ ಎಲ್ಲವನ್ನೂ ಅವರು ನಿಮಗೆ ಹೇಳುತ್ತಿದ್ದರು. ಇಂತಹ ಅದ್ಭುತ ಪ್ರತಿಕ್ರಿಯೆಯನ್ನು ನಾವು ನಿರೀಕ್ಷಿಸಿರಲಿಲ್ಲ ಎಂದು ಹೇಳಿದರು.


ಮೊದಲೆರಡು ತಿಂಗಳುಗಳಲ್ಲಿ ನಾವು ಸುಮಾರು 4ರಿಂದ 5, 10-15, 100ರಿಂದ 200 ಅಕ್ಷರಗಳ ಪತ್ರಗಳನ್ನು ಪಡೆದುಕೊಂಡಿದ್ದೇವು. ನಾಲ್ಕೈದು ತಿಂಗಳ ಅನಂತರ, ನಮಗೆ ಸುಮಾರು ಐದು ಸಾವಿರ ಪತ್ರಗಳು ಬರಲಾರಂಭಿಸಿದವು ಮತ್ತು ಅದು ನಿರ್ವಹಿಸಲಾಗದಂತಾಯಿತು. ಹಾಗಾಗಿ ಪ್ರತಿ ಪತ್ರವನ್ನು ತೆರೆಯುವುದು ಸಮಯ ತೆಗೆದುಕೊಳ್ಳುತ್ತದೆ ಎಂದು ನಾನು ಅದನ್ನು ಹೇಗೆ ಮಾಡಬೇಕೆಂದು ಹೇಳಿದೆ. ನೀವು ಸಾವಿರಾರು ಪತ್ರಗಳನ್ನು ಹೊಂದಿರುವಾಗ, ಎಲ್ಲಾ ಪತ್ರಗಳನ್ನು ಓದಲು ಸುಮಾರು ನಾಲ್ಕು ದಿನಗಳನ್ನು ತೆಗೆದುಕೊಳ್ಳುತ್ತದೆ. ನಾವು ಪ್ರತಿ ವಾರ ನಮ್ಮ ಪ್ರದರ್ಶನವನ್ನು ಹೊಂದಿದ್ದೇವು ಎಂದರೆ ನಮ್ಮ ಸಾಹಸ ಕಲ್ಪಿಸಿಕೊಳ್ಳಿ. ಆದ್ದರಿಂದ ನಾವು ವೀಕ್ಷಕರಿಗೆ ಪೋಸ್ಟ್‌ಕಾರ್ಡ್ ಕಳುಹಿಸಲು ಕೇಳಿಕೊಂಡೆವು ಎಂದವರು ನೆನಪಿಸಿಕೊಂಡರು.

ವಾರದಲ್ಲಿ 14 ಲಕ್ಷ ಪೋಸ್ಟ್ ಕಾರ್ಡ್

ಪೋಸ್ಟ್‌ಕಾರ್ಡ್‌ಗೆ ಆಗ ಸುಮಾರು 15 ಪೈಸೆ ವೆಚ್ಚವಾಗುತ್ತಿತ್ತು. ಇದು ಸಬ್ಸಿಡಿ ಹೊಂದಿದ್ದ ಪೋಸ್ಟ್‌ಕಾರ್ಡ್ ಆಗಿತ್ತು. ಆದರೆ ಇದರ ನೈಜ ಬೆಲೆ ಸುಮಾರು 50 -60 ಪೈಸೆ. ಇದು ಹಳೆಯ ಸಂವಹನ ವಿಧಾನವಾದ್ದರಿಂದ ಸರ್ಕಾರ ಇದರ ದರ ತಗ್ಗಿಸಿತ್ತು. ಜನರು ಅದನ್ನು ಪಿಂಚಣಿಗಾಗಿ ಬರೆಯಲು, ಹಳ್ಳಿಯಿಂದ ಕಳುಹಿಸಲು ಬಳಸಬಹುದಿತ್ತು. ನಾವು ಬಹಳಷ್ಟು ಪೋಸ್ಟ್‌ಕಾರ್ಡ್‌ಗಳನ್ನು ಪಡೆಯಲು ಪ್ರಾರಂಭಿಸಿದೇವು. ನಾವು ಅದನ್ನು ಲಿಮ್ಕಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ಗೆ ಸೇರಿಸಿದ್ದೇವೆ. ನಾವು ಒಂದು ವಾರದಲ್ಲಿ 1.4 ಮಿಲಿಯನ್ (14 ಲಕ್ಷ) ಪೋಸ್ಟ್‌ಕಾರ್ಡ್‌ಗಳನ್ನು ಸ್ವೀಕರಿಸುತ್ತಿದ್ದೆವು ಎಂದು ಕಾಕ್‌ ತಿಳಿಸಿದರು.

ಸಂಗ್ರಹಕ್ಕೆ ಸ್ಥಳವಿರಲಿಲ್ಲ

ಇಷ್ಟೊಂದು ಸಂಖ್ಯೆಯ ಪೋಸ್ಟ್‌ಕಾರ್ಡ್‌ಗಳನ್ನು ಸಂಗ್ರಹಿಸಲು ನಮ್ಮಲ್ಲಿ ಸ್ಥಳವಿಲ್ಲ ಎಂದು ಅಂಧೇರಿ ಅಂಚೆ ಕಚೇರಿಯಿಂದ ಒಮ್ಮೆ ತನಗೆ ಕರೆ ಬಂದಿತ್ತು ಎಂಬುದನ್ನು ಸಿದ್ಧಾರ್ಥ್ ಕಾಕ್ ನೆನಪಿಸಿಕೊಂಡರು.


ನೂರಾರು ಚೀಲಗಳಲ್ಲಿ ಪೋಸ್ಟ್ ಕಾರ್ಡ್‌ಗಳು

ಅಂಧೇರಿ ಅಂಚೆ ಕಚೇರಿಗೆ ಭಾರಿ ಸಂಖ್ಯೆಯ ಪೋಸ್ಟ್‌ಕಾರ್ಡ್‌ಗಳು ಬರುತ್ತಿವೆ. ಇವುಗಳನ್ನು ನೀವೇ ತೆಗೆದುಕೊಂಡು ಹೋಗಿ ಎಂದು ಅಂಚೆ ಇಲಾಖೆಯವರು ಹೇಳುತ್ತಿದ್ದರು. ಹಾಗಾಗಿ ಅಂಚೆ ಕಾರ್ಡ್‌ಗಳನ್ನು ಪಡೆಯಲು ನಾನು ಟೆಂಪೋವನ್ನು ಬಾಡಿಗೆಗೆ ತೆಗೆದುಕೊಳ್ಳಬೇಕಾಯಿತು. ಟ್ರಕ್ ಅಂಚೆ ಕಚೇರಿಯನ್ನು ತಲುಪಿದಾಗ ನೂರಾರು ಚೀಲಗಳಲ್ಲಿ ಪೋಸ್ಟ್‌ಕಾರ್ಡ್‌ಗಳು ತುಂಬಿದ್ದವು ಎಂಬ ಸಂಗತಿಯನ್ನು ಕಾಕ್‌ ಸ್ಮರಿಸಿಕೊಂಡರು.

ಅಂಚೆ ಇಲಾಖೆಯಿಂದ ದೂರು

ನಮ್ಮ ಕಾರ್ಡ್‌ಗಳಿಂದ ಫಜೀತಿಗೆ ಸಿಲುಕಿದ್ದ ಅಂಚೆ ಇಲಾಖೆ ಸುರಭಿ ಕಾರ್ಯಕ್ರಮದ ವಿರುದ್ಧ ಕೇಂದ್ರ ಸಂವಹನ ಸಚಿವಾಲಯಕ್ಕೆ ದೂರು ನೀಡಿತು. ಆಗ ಸಚಿವಾಲಯವು ಪೋಸ್ಟ್‌ಕಾರ್ಡ್‌ನ ಬೆಲೆಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ಸ್ಪರ್ಧೆಯ ಪೋಸ್ಟ್‌ಕಾರ್ಡ್‌ಗಳನ್ನು ಸಹ ರಚಿಸಬೇಕಾಯಿತು ಎಂಬುದನ್ನು ಕಾಕ್ ತಿಳಿಸಿದರು. ಬಳಿಕ ಸ್ಪರ್ಧೆಯ ಪೋಸ್ಟ್‌ಕಾರ್ಡ್‌ನ ಬೆಲೆಯನ್ನು 2 ರೂ.ಗೆ ಹೆಚ್ಚಿಸಲಾಯಿತು. ನಮ್ಮಲ್ಲಿ ಎಲ್ಲಾ ಪೋಸ್ಟ್‌ಕಾರ್ಡ್‌ಗಳನ್ನು ಎಣಿಸುವ ತಂಡವಿತ್ತು. ಪತ್ರಗಳನ್ನು ಇಡಲು ಒಂದು ಪೂರ್ಣ ಕೊಠಡಿ ಇತ್ತು. ಪ್ರತಿ ವಾರ ಅಂಚೆ ಕಾರ್ಡ್‌ಗಳ ಸುರಿಮಳೆಯಾಗುತ್ತಿತ್ತು ಎಂದು ಅವರು ಹೇಳಿದರು.

ಇದನ್ನೂ ಓದಿ: Shah Rukh Khan: ಶಾರುಖ್‌ ಹೊಸ ಸಿನಿಮಾಗಾಗಿ ಕೈ ಜೋಡಿಸಿದ ಅನಿರುದ್ಧ್ ರವಿಚಂದರ್!

11 ವರ್ಷ ಪ್ರಸಾರ

ಸುರಭಿ 1990 ರಿಂದ 2001ರವರೆಗೆ ನಡೆಯಿತು. ಇದು ಆರಂಭದಲ್ಲಿ ದೂರದರ್ಶನದ ದೂರದರ್ಶನದಲ್ಲಿ ಪ್ರಸಾರವಾಯಿತು ಮತ್ತು ಭಾನುವಾರದ ಬೆಳಗ್ಗೆ ಸ್ಲಾಟ್‌ನಲ್ಲಿ ಸ್ಟಾರ್ ಪ್ಲಸ್‌ಗೆ ಸ್ಥಳಾಂತರಗೊಂಡಿತು. ಸುರಭಿಯನ್ನು ಸಿದ್ಧಾರ್ಥ್ ಕಾಕ್ ಅವರ ಮುಂಬಯಿ ಮೂಲದ ನಿರ್ಮಾಣ ಸಂಸ್ಥೆ ಸಿನಿಮಾ ವಿಷನ್ ಇಂಡಿಯಾ ನಿರ್ಮಿಸಿತ್ತು.

Continue Reading

ಕಿರುತೆರೆ

Amruthadhaare Serial: ಇಂದು ಭೂಮಿಕಾಗೆ ಹುಟ್ಟು ಹಬ್ಬ: ರೀಲ್‌ ಗಂಡ ಎಸ್ಟೇಟ್​ ಬರೆದು ಕೊಟ್ರು! ರಿಯಲ್‌ ಗಂಡ ಕೊಟ್ಟ ಗಿಫ್ಟ್‌ ಏನು?

Amruthadhaare Serial: ಅಮೃತಧಾರೆ ಧಾರಾವಾಹಿ ʻಬಢೇ ಅಚ್ಚೇ ಲಗತೇ ಹೈʼ(Bade Acche Lagte Hain) ಹಿಂದಿ ಧಾರಾವಾಹಿಯ ರಿಮೇಕ್‌ ಆಗಿದೆ. ನಟ ರಾಜೇಶ್ ಅವರು ಗೌತಮ್ ಎನ್ನುವ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಛಾಯಾ ಸಿಂಗ್ ಭೂಮಿಕಾ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. . ಈ ಧಾರಾವಾಹಿ ಉತ್ತಮ ಟಿಆರ್​ಪಿ (Kannada Serials TRP) ಪಡೆದುಕೊಳ್ಳುತ್ತಿದೆ. ಸಾರಾ ಅಣ್ಣಯ್ಯ ಮೊದಲಾದವರು ನಟಿಸುತ್ತಿದ್ದಾರೆ.

VISTARANEWS.COM


on

Amruthadhaare Serial bhoomika in birthday chaya singh
Koo

ಇಂದು (ಮೇ 16) ಅಮೃತಧಾರೆ ಧಾರಾವಾಹಿ (Amruthadhaare Serial) ಖ್ಯಾತಿಯ ನಟಿ ಛಾಯಾ ಸಿಂಗ್ (Chaya Singh)​ ಅವರಿಗೆ ಜನುಮದಿನದ ಸಂಭ್ರಮ. ಧಾರಾವಾಹಿಯಿಂದ ಜನರಿಗೆ ಭೂಮಿಕಾ ಎಂದೇ ಪರಿಚಯ.

ನಟಿಯ ವಿಶೇಷ ದಿನದಂದು ಜೀ ಕನ್ನಡ ವಾಹಿನಿ ಛಾಯಾ ಸಿಂಗ್​ ಕುರಿತು ವಿಡಿಯೊ ಒಂದನ್ನು ರಿಲೀಸ್​ ಮಾಡಿದೆ. ವಯಸ್ಸಾದರೂ ಮದುವೆಯಾಗದೇ ಉಳಿದ ಮಧ್ಯಮ ಕುಟುಂಬದ ಹೆಣ್ಣುಮಗಳೊಬ್ಬಳು ಹೇಗೆ ಕೋಟ್ಯಧಿಪತಿ ಉದ್ಯಮಿ ಜತೆ ಜೀವನ ನಡೆಸುತ್ತಾಳೆ ಎಂಬುದೇ ಈ ಧಾರಾವಾಹಿಯ ಒನ್‌ಲೈನ್‌ ಸ್ಟೋರಿ.

ಧಾರಾವಾಹಿಯಲ್ಲಿ ಪತಿ ಗೌತಮ್‌ ಹೆಂಡತಿಯ ಹುಟ್ಟುಹಬ್ಬಕ್ಕೆಂದು ಚಿಕ್ಕಮಗಳೂರಿನ ಎಸ್ಟೇಟ್​ ಬರೆದು ಕೊಟ್ಟಿದ್ದಾನೆ. ಇದೀಗ ರಿಯಲ್‌ ಗಂಡ ಪತ್ನಿಗೆ ಏನು ಗಿಫ್ಟ್‌ ಕೊಟ್ಟಿದ್ದಾರೆ? ಎಂದು ನೆಟ್ಟಿಗರು ಪ್ರಶ್ನೆ ಮೂಲಕ ನಟಿಯ ಕಾಲೆಳೆಯುತ್ತಿದ್ದಾರೆ.

ಛಾಯಾ ಅವರ ರಿಯಲ್​ ಲೈಫ್​ ಪತಿಯ ಹೆಸರು ಕೃಷ್ಣ. ಇನ್​ಸ್ಟಾಗ್ರಾಮ್​ನಲ್ಲಿ ಅವರು ಪತಿಯ ಜತೆ ಆಗಾಗ ಫೋಟೋ ಶೇರ್​ ಮಾಡಿಕೊಳ್ಳುತ್ತಿರುತ್ತಾರೆ.

ಇದನ್ನೂ ಓದಿ: Kiccha Sudeep: ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಮುಗಿಸಿದ ಕಿಚ್ಚ ಸುದೀಪ್‌: ರಿಲೀಸ್‌ ಯಾವಾಗ?

ಕೃಷ್ಣ ಮತ್ತು ಛಾಯಾ ಮದುವೆಯಾಗಿ 11 ವರ್ಷಗಳೇ ಕಳೆದಿವೆ. ಛಾಯಾ ಅವರಿಗೆ ಕೃಷ್ಣ ಅವರ ಪರಿಚಯವಾದದ್ದು, ತಮಿಳು ಚಿತ್ರದಲ್ಲಿ ನಟಿಸುವ ಸಮಯದಲ್ಲಿ.
ಕನ್ನಡ ಸಿನಿರಂಗದಲ್ಲಿಯೂ ಸಕ್ರಿಯರಾಗಿರುವ ಛಾಯಾ, 2000ನೇ ಇಸವಿಯಲ್ಲಿ ತೆರೆಕಂಡ ಪಿ ಶೇಷಾದ್ರಿ ನಿರ್ದೇಶನದ `ಮುನ್ನುಡಿ’ ಚಿತ್ರದಲ್ಲಿ ನಟಿಸುವ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. 
Continue Reading

ಕಿರುತೆರೆ

Bhavani Singh: ಮೊದಲ ಮಗುವಿನ ನಿರೀಕ್ಷೆಯಲ್ಲಿ ʻಸುಬ್ಬಲಕ್ಷ್ಮಿ ಸಂಸಾರʼ ಧಾರಾವಾಹಿ ನಟ!

Bhavani Singh: ಪಂಕಜ ಶಿವಣ್ಣ-ಭವಾನಿಸಿಂಗ್ ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ ರೀಲ್ಸ್‌ ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ಇದೀಗ ಬೇಬಿ ಬಂಪ್‌ ಫೋಟೊ ಶೂಟ್‌ ಮಾಡಿಸಿಕೊಂಡಿದ್ದಾರೆ ಪಂಕಜ್‌. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಜೋಡಿಗೆ ವಿಶ್‌ ಮಾಡುತ್ತಿದ್ದಾರೆ ಫ್ಯಾನ್ಸ್‌.

VISTARANEWS.COM


on

Bhavani Singh pankaj shivanna couple expecting-their first child
Koo

‘ಚರಣದಾಸಿ’, ‘ಸುಬ್ಬಲಕ್ಷ್ಮಿ ಸಂಸಾರ’,’ರಕ್ಷಾ ಬಂಧನ’ ಖ್ಯಾತಿಯ ಕಿರುತೆರೆ ನಟ ಭವಾನಿ ಸಿಂಗ್ (Bhavani Singh) ಅವರು ತಂದೆಯಾಗುತ್ತಿದ್ದಾರೆ. ಪತ್ನಿ ಪಂಕಜ ಶಿವಣ್ಣ ಕೂಡ ನಟಿಯಾಗಿದ್ದು, ಇದೀಗ ಜೋಡಿ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟಿದೆ.

ಭವಾನಿ ಸಿಂಗ್ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್‌ ಶೇರ್‌ ಮಾಡಿ ʻʻನಮ್ಮ ಸಂಸಾರ ದೊಡ್ಡದಾಗುತ್ತಿದೆʼʼ ಎಂದು ಬರೆದುಕೊಂಡಿದ್ದಾರೆ.

‘ಚರಣದಾಸಿ’ ಧಾರಾವಾಹಿ ಮೂಲಕ ನಟನೆಗೆ ಕಾಲಿಟ್ಟರು ನಟ ಭವಾನಿ ಸಿಂಗ್. ಪಂಕಜ ಶಿವಣ್ಣ ಅವರು ‘ಸುಬ್ಬಲಕ್ಷ್ಮಿ ಸಂಸಾರ’ ಧಾರಾವಾಹಿ ಮೂಲಕ ಭವಾನಿ ಸಿಂಗ್ ಅವರಿಗೆ ಪರಿಚಯವಾದರು.

ಇದನ್ನೂ ಓದಿ: A Movie Re-Release: ರೀ-ರಿಲೀಸ್ ಆಗ್ತಿದೆ ಉಪ್ಪಿಯ `A’ ಸಿನಿಮಾ : ನೆನಪುಗಳನ್ನು ಮೆಲುಕು ಹಾಕಿದ ನಟಿ ಚಾಂದಿನಿ!

2019ರಲ್ಲಿ ಇವರಿಬ್ಬರು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇದೀಗ ಐದು ವರ್ಷಗಳ ನಂತರ ಈ ಜೋಡಿ ಸಿಹಿಸುದ್ದಿಯನ್ನು ಹಂಚಿಕೊಂಡಿದೆ.
Continue Reading

ಕಿರುತೆರೆ

Star Suvarna: ಕಿರುತೆರೆಗೆ ಬರ್ತಿದೆ ಹೊಸ ಸೆಲೆಬ್ರಿಟಿ ಗೇಮ್ ಶೋ ‘Huu ಅಂತೀಯಾ…Uhuu ಅಂತೀಯಾ’: ಪ್ರಸಾರ ಯಾವಾಗ?

Star Suvarna: ಇಬ್ಬರು ಜನಪ್ರಿಯ ಆ್ಯಂಕರ್‌ಗಳನ್ನು ಹೊಂದಿರುವ ಈ ಶೋ ಒಟ್ಟು ಮೂರು ಸುತ್ತುಗಳನ್ನು ಹೊಂದಿರುತ್ತದೆ. ಇನ್ನು ‘Huu ಅಂತೀಯಾ…Uhuu ಅಂತೀಯಾ’ ಶೋ ನ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತಿರೋದು ತುಳುನಾಡಿನ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ. ಹಾಗೂ ನಟನೆ ಹಾಗು ತನ್ನ ಹಾಸ್ಯಗಾರಿಕೆಯ ಮೂಲಕ ನೋಡುಗರ ಮನಗೆದ್ದಿರುವ ಅರುಣ್ ಹರಿಹರನ್. ಇವರಿಬ್ಬರು ಈ ಶೋನ ರೂವಾರಿಗಳಾಗಿದ್ದಾರೆ.

VISTARANEWS.COM


on

Star Suvarna HuAnthiya UhuuAnthiya new celebrity game show
Koo

ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ರಿಯಾಲಿಟಿ ಶೋಗಳ ಸರದಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ʻಸ್ಟಾರ್ ಸುವರ್ಣʼ ವಾಹಿನಿಯು ಇದೀಗ ‘Huu ಅಂತೀಯಾ…Uhuu ಅಂತೀಯಾ’ (HuAnthiya UhuuAnthiya) ಎಂಬ (Star Suvarna) ಹೊಸ ಬಗೆಯ ವಿನೂತನ ಗೇಮ್ ಶೋ ಅನ್ನು ಪ್ರಸಾರ ಮಾಡಲಿದೆ.

ಇಬ್ಬರು ಜನಪ್ರಿಯ ಆ್ಯಂಕರ್‌ಗಳನ್ನು ಹೊಂದಿರುವ ಈ ಶೋ ಒಟ್ಟು ಮೂರು ಸುತ್ತುಗಳನ್ನು ಹೊಂದಿರುತ್ತದೆ. ಸೆಲೆಬ್ರಿಟಿ ಸ್ಪರ್ಧಿಗಳಿಗೆ 6 ಲಕ್ಷ ರೂಪಾಯಿಗಳನ್ನು ಗೆಲ್ಲುವ ಅವಕಾಶವಿರುತ್ತದೆ. ಮೊದಲ ಸುತ್ತಿನಲ್ಲಿ ಸ್ಪರ್ಧಿಗಳು ಒಬ್ಬರ ನಂತರ ಒಬ್ಬರು ಆಡುತ್ತಾರೆ. ನಿರೂಪಕರು ನೀಡಿದ ಸತ್ಯ ಮತ್ತು ಸುಳ್ಳು ಸಂಗತಿಗಳನ್ನು ಸ್ಪರ್ಧಿಗಳು ಸರಿಯಾಗಿ ಆರಿಸಿದರೆ 1 ಲಕ್ಷ ರೂಪಾಯಿ ಗೆಲ್ಲುವ ಅವಕಾಶವಿದೆ.

ಇನ್ನು ಎರಡನೇ ಸುತ್ತಿನಲ್ಲಿ ಸ್ಪರ್ಧಿಗಳಿಗೆ ಆಹಾರವನ್ನು ಸೇವಿಸುವ ಸವಾಲಿರುತ್ತದೆ, ಮಜಾ ತುಂಬಿರುವ ಟ್ವಿಸ್ಟ್ ಗಳೊಂದಿಗೆ ಒಟ್ಟು 60 ಸೆಕೆಂಡ್‌ಗಳ ಸಮಯವನ್ನು ನೀಡಲಾಗುತ್ತದೆ. ಇದರಲ್ಲಿ ಗೆದ್ದ ವಿಜೇತರು 2 ಲಕ್ಷ ರೂಪಾಯಿಗಳನ್ನು ಗೆಲ್ಲಬಹುದು. ಮೂರನೇ ಹಾಗು ಕೊನೆಯ ಸುತ್ತಿನಲ್ಲಿ ಕೇವಲ ಇಬ್ಬರು ಸ್ಪರ್ಧಿಗಳು ತಮ್ಮ ಅದೃಷ್ಟದ ಆಧಾರದ ಮೇಲೆ ಆಡುತ್ತಾರೆ, ಗೆದ್ದ ಸ್ಪರ್ಧಿಗೆ 3 ಲಕ್ಷಗಳನ್ನು ಗೆಲ್ಲುವ ಅವಕಾಶವಿದೆ. ಇದು ಈ ಗೇಮ್ ಶೋ ನ ನಿಯಮಾವಳಿಗಳು.

ಇದನ್ನೂ ಓದಿ: A Movie Re-Release: ರೀ-ರಿಲೀಸ್ ಆಗ್ತಿದೆ ಉಪ್ಪಿಯ `A’ ಸಿನಿಮಾ : ನೆನಪುಗಳನ್ನು ಮೆಲುಕು ಹಾಕಿದ ನಟಿ ಚಾಂದಿನಿ!

ಇನ್ನು ‘Huu ಅಂತೀಯಾ…Uhuu ಅಂತೀಯಾ’ ಶೋ ನ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತಿರೋದು ತುಳುನಾಡಿನ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ. ಹಾಗೂ ನಟನೆ ಹಾಗು ತನ್ನ ಹಾಸ್ಯಗಾರಿಕೆಯ ಮೂಲಕ ನೋಡುಗರ ಮನಗೆದ್ದಿರುವ ಅರುಣ್ ಹರಿಹರನ್. ಇವರಿಬ್ಬರು ಈ ಶೋನ ರೂವಾರಿಗಳಾಗಿದ್ದಾರೆ. ಮೊದಲ ಗ್ರ್ಯಾಂಡ್ ಓಪನಿಂಗ್ ಸಂಚಿಕೆಯಲ್ಲಿ ಸೆಲೆಬ್ರಿಟಿ ಸ್ಫರ್ಧಿಗಳಾಗಿ ನಟ ಡಾರ್ಲಿಂಗ್ ಕೃಷ್ಣ, ನಟಿಯರಾದ ಮಿಲನಾ ನಾಗರಾಜ್ ಹಾಗು ಅಮೃತಾ ಅಯ್ಯಂಗಾರ್ ಭಾಗವಹಿಸಲಿದ್ದಾರೆ.

ಈ ರಿಯಾಲಿಟಿ ಶೋ ನ ಟೈಟಲ್ ಟ್ರ್ಯಾಕ್‌ಗೆ ನೋಡುಗರು ಫಿದಾ ಆಗಿದ್ದು, ಮಸ್ತ್ ಮನರಂಜನೆಗೆ ಕಾತುರತೆಯಿಂದ ಕಾಯುತ್ತಿದ್ದಾರೆ. ಅಷ್ಟೇ ಅಲ್ಲದೆ ಮನೆಯಲ್ಲಿ ಕುಳಿತು ವೀಕ್ಷಿಸುವ ವೀಕ್ಷಕರಿಗೂ “ಐ ಫೋನ್” ಗೆಲ್ಲುವ ಅವಕಾಶವನ್ನು ಸ್ಟಾರ್ ಸುವರ್ಣ ವಾಹಿನಿಯು ನೀಡುತ್ತಿದೆ. ಮೊದಲ ಹಾಗು ಎರಡನೇ ಸಂಚಿಕೆಯ ಕೊನೆಯಲ್ಲಿ ಕೇಳುವ ಪ್ರಶ್ನೆಗೆ ಸರಿಯಾದ ಉತ್ತರವನ್ನು ನೀಡಿದರೆ ‘I Phone’ ಗೆಲ್ಲುವ ಅವಕಾಶವನ್ನು ನೋಡುಗರು ಪಡೆಯುತ್ತಾರೆ.

ಇದೀಗ ಪ್ರೇಕ್ಷಕರನ್ನು ಮನರಂಜಿಸಲು ಬರ್ತಿದೆ ಹೊಚ್ಚ ಹೊಸ ಯೂನಿಕ್ ಸೆಲೆಬ್ರಿಟಿ ಗೇಮ್ ಶೋ ‘Huu ಅಂತೀಯಾ…Uhuu ಅಂತೀಯಾ. ‘ ಇದೇ ಮೇ 19 ರಿಂದ ಪ್ರತಿ ಭಾನುವಾರ ರಾತ್ರಿ 7 ಗಂಟೆಗೆ ಸ್ವಾರ್‌ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

Continue Reading
Advertisement
Virat Kohli
ಕ್ರೀಡೆ12 mins ago

Virat kohli : ಪಾಕಿಸ್ತಾನಕ್ಕೆ ಬರುವೆ ಎಂದು ಅಲ್ಲಿನ ಪರ್ವತಾರೋಹಿಗೆ ಭರವಸೆ ಕೊಟ್ಟಿದ್ದ ವಿರಾಟ್​ ಕೊಹ್ಲಿ! ಇಲ್ಲಿದೆ ವಿಡಿಯೊ

Narendra modi
ದೇಶ19 mins ago

Narendra Modi: ಕಾಂಗ್ರೆಸ್‌ ಗೆದ್ದರೆ ಬುಲ್ಡೋಜರ್‌ನಿಂದ ರಾಮಮಂದಿರ ನೆಲಸಮ ಎಂದ ಮೋದಿ!

ಕರ್ನಾಟಕ50 mins ago

Rain News: ಮುಧೋಳದಲ್ಲಿ ಸಿಡಿಲಿಗೆ ಬಾಲಕಿ ಬಲಿ; ಚನ್ನರಾಯಪಟ್ಟಣ, ಗುಂಡ್ಲುಪೇಟೆ ಸೇರಿ ವಿವಿಧೆಡೆ ವರುಣಾರ್ಭಟ

dilip Kumar
ಪ್ರಮುಖ ಸುದ್ದಿ52 mins ago

Milind Kumar : ಆರ್​ಸಿಬಿಯ ಮಾಜಿ ಆಟಗಾರ ಕ್ರಿಕೆಟ್​ನಿಂದ ನಿವೃತ್ತಿ

Fan Code OTT Subscription Now for Jio AirFiber JioFiber Jio Mobility Customers
ದೇಶ1 hour ago

Reliance Jio: ಜಿಯೋ ಏರ್‌ಫೈಬರ್, ಜಿಯೋಫೈಬರ್, ಜಿಯೋ ಮೊಬಿಲಿಟಿ ಗ್ರಾಹಕರಿಗೆ ಫ್ಯಾನ್ ಕೋಡ್ ಒಟಿಟಿ ಸಬ್‌ಸ್ಕ್ರಿಪ್ಷನ್!

Gopi Hinduja
ವಿದೇಶ1 hour ago

Gopi Hinduja: ನಮ್ಮನ್ನಾಳಿದ ಬ್ರಿಟನ್‌ನಲ್ಲಿ ಭಾರತದ ಉದ್ಯಮಿಯೇ ಅತ್ಯಂತ ಸಿರಿವಂತ; ಯಾರಿವರು?

AC visited Gandabommanahalli Goshala and inspected
ವಿಜಯನಗರ2 hours ago

Vijayanagara News: ಗಂಡಬೊಮ್ಮನಹಳ್ಳಿಯ ಗೋಶಾಲೆಗೆ ಉಪ ವಿಭಾಗಾಧಿಕಾರಿ ಭೇಟಿ, ಪರಿಶೀಲನೆ

Application Invited for TTTI and Toyota Skill Courses from Toyota Technical Training Institute
ಕರ್ನಾಟಕ2 hours ago

Toyota: ಟೊಯೊಟಾ ಕೌಶಲ್ಯ ಕೋರ್ಸ್‌ಗೆ ಅರ್ಜಿ ಆಹ್ವಾನ; ಗ್ರಾಮೀಣ ಯುವಕರೇ ಈ ಅವಕಾಶ ಬಳಸಿಕೊಳ್ಳಿ

SSLC Exam 2024
ಕರ್ನಾಟಕ2 hours ago

SSLC 2024 Exam 2: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫೇಲ್‌ ಆದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿಕೆ

ಕ್ರಿಕೆಟ್2 hours ago

Gautam Gambhir : ಗೌತಮ್​ ಗಂಭೀರ್ ಟೀಮ್ ಇಂಡಿಯಾದ ಮುಂದಿನ ಕೋಚ್​​?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ2 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ16 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ18 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌