Pakistan inflation Pakistan has overtaken Sri Lanka in inflation how much is the price increasePakistan inflation : ಹಣದುಬ್ಬರದಲ್ಲಿ ಶ್ರೀಲಂಕಾವನ್ನು ಹಿಂದಿಕ್ಕಿದ ಪಾಕಿಸ್ತಾನ, ಎಷ್ಟಿದೆ ನೋಡಿ ಬೆಲೆ ಏರಿಕೆ?

ಪ್ರಮುಖ ಸುದ್ದಿ

Pakistan inflation : ಹಣದುಬ್ಬರದಲ್ಲಿ ಶ್ರೀಲಂಕಾವನ್ನು ಹಿಂದಿಕ್ಕಿದ ಪಾಕಿಸ್ತಾನ, ಎಷ್ಟಿದೆ ನೋಡಿ ಬೆಲೆ ಏರಿಕೆ?

Pakistan inflation ಹಣದುಬ್ಬರದಲ್ಲಿಪಾಕಿಸ್ತಾನವು ಈಗ ಏಷ್ಯಾದಲ್ಲೇ ಅತ್ಯಧಿಕ ಮಟ್ಟಕ್ಕೇರಿದೆ. ಬಡವರು, ಜನ ಸಾಮಾನ್ಯರಿಗೆ ಜೀವನ ದುರ್ಭರವಾಗಿದೆ.

VISTARANEWS.COM


on

Pakistan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿರುವ ಪಾಕಿಸ್ತಾನದಲ್ಲಿ ಹಣದುಬ್ಬರ 38% ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಶ್ರೀಲಂಕಾವನ್ನೂ ಹಿಂದಿಕ್ಕಿದೆ. ಶ್ರೀಲಂಕಾದಲ್ಲಿ ಹಣದುಬ್ಬರ 25.2%ಕ್ಕೆ ಇಳಿಕೆಯಾಗಿದೆ. (Pakistan inflation) ಈಗ ಏಷ್ಯಾದಲ್ಲಿಯೇ ಅತಿ ಹೆಚ್ಚು ಹಣದುಬ್ಬರ ಪಾಕಿಸ್ತಾನದಲ್ಲಿದೆ. ಭಾರತದಲ್ಲಿ ಹಣದುಬ್ಬರ 4.7% ಇದೆ. ಪಾಕಿಸ್ತಾನವು ಐಎಂಎಫ್‌ನ ಕಠಿಣ ಷರತ್ತುಗಳನ್ನು ಪೂರೈಸಲು ಹಿಂದೇಟು ಹಾಕುತ್ತಿದೆ. 1957ರಿಂದೀಚೆಗಿನ ಅವಧಿಯಲ್ಲಿಯೇ ಗರಿಷ್ಠ ಹಣದುಬ್ಬರವನ್ನು ಪಾಕಿಸ್ತಾನ ದಾಖಲಿಸಿದೆ.

2023ರ ಏಪ್ರಿಲ್‌ನಲ್ಲಿ ಪಾಕಿಸ್ತಾನವು ಹಣದುಬ್ಬರದಲ್ಲಿ ಶ್ರೀಲಂಕಾವನ್ನು ಹಿಂದಿಕ್ಕಿದೆ. ಪಾಕಿಸ್ತಾನಕ್ಕೆ ಈ ಹಿಂದೆ ಅಮೆರಿಕ, ಬಳಿಕ ಚೀನಾದಿಂದ ಹಣಕಾಸು ನೆರವು ಲಭಿಸುತ್ತಿತ್ತು. ಇದರೊಂದಿಗೆ ಪಾಕಿಸ್ತಾನ ತನ್ನನ್ನು ಭಾರತದ ಜತೆಗೆ ಹೋಲಿಸುತ್ತಿತ್ತು. ಆದರೆ ಈಗ ಪಾಕ್ ಆರ್ಥಿಕ ಬಿಕ್ಕಟ್ಟು ತೀವ್ರಗೊಂಡಿದೆ. ಭಾರತದಲ್ಲಿ ಹಣದುಬ್ಬರರ 4.7%ಕ್ಕೆ ಇಳಿದಿದೆ. ಆಹಾರ ಹಣದುಬ್ಬರ 3.8%ಕ್ಕೆ ತಗ್ಗಿದೆ. ಪಾಕಿಸ್ತಾನದಲ್ಲಿ ಆಹಾರ ಹಣದುಬ್ಬರ 48.7% ಕ್ಕೆ ಏರಿಕೆಯಾಗಿದೆ.

ಪಾಕಿಸ್ತಾನದ ನಾಯಕರು ಚೀನಾದಿಂದ ಹಣಕಾಸು ನೆರವಿನ ನಿರೀಕ್ಷೆಯಲ್ಲಿದ್ದಾರೆ. ಐಎಂಎಫ್‌ ಜತೆಗೆ ಮಾತುಕತೆ ಫಲಪ್ರದವಾಗದಿದ್ದರೆ, ಪಾಕಿಸ್ತಾನದ ಆರ್ಥಿಕತೆ ತೀವ್ರ ಬಿಗಡಾಯಿಸಲಿದೆ. ಕಳೆದ 12 ತಿಂಗಳಿನಲ್ಲಿ ಸರಾಸರಿ 29.16% ಹಣದುಬ್ಬರ ಇತ್ತು. ಹಣದುಬ್ಬರ ಜಿಗಿತದ ಪರಿಣಾಮ ಪಾಕಿಸ್ತಾನದಲ್ಲಿ ಬಡವರು ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಭಾರಿ ತೊಂದರೆಯಾಗಿದೆ. ಹಣಕಾಸು ನಿರ್ವಹಣೆಯ ಕೊರತೆಯ ಪರಿಣಾಮ ಭಾರಿ ಸವಾಲನ್ನು ಎದುರಿಸುವಂತಾಗಿದೆ.

ಪಾಕಿಸ್ತಾನದಲ್ಲಿ ಕಳೆದ ಫೆಬ್ರವರಿಯಲ್ಲಿ ಪ್ರತಿ ಲೀಟರ್‌ ಹಾಲಿನ ದರ 210 ರೂ, ಕೋಳಿ ಮಾಂಸ ಕೆ.ಜಿ ದರ 700 ರೂ, ಪೆಟ್ರೋಲ್‌ ದರ ಲೀಟರ್‌ಗೆ 272 ರೂ, ಡೀಸೆಲ್‌ ದರ ಲೀಟರ್‌ಗೆ 282 ರೂ. ಇತ್ತು.

ಪಾಕಿಸ್ತಾನ ಕಳೆದ 75 ವರ್ಷಗಳಲ್ಲಿ ಸಾಲಕ್ಕಾಗಿ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯ (IMF) ಕದವನ್ನು 23 ಸಲ ತಟ್ಟಿದೆ. ಪಾಕಿಸ್ತಾನ ಐಎಂಎಫ್‌ನ ಹಣಕ್ಕಾಗಿ ಯಾವ ಪರಿಯಲ್ಲಿ ಪರದಾಡುತ್ತಿದೆ (Pakistan economic crisis) ಎಂಬುದಕ್ಕೆ ಇದು ಸಾಕ್ಷಿಯಾಗಿದೆ ಎನ್ನುತ್ತಾರೆ ಹಣಕಾಸು ತಜ್ಞರು. ನಾವು ಐಎಂಎಫ್‌ನ ನಿಷ್ಠಾವಂತ ಗ್ರಾಹಕರಾಗಿ ಬಿಟ್ಟಿದ್ದೇವೆ ಎನ್ನುತಾರೆ ಸ್ಟೇಟ್‌ ಬ್ಯಾಂಕ್‌ ಆಫ್‌ ಪಾಕಿಸ್ತಾನದ ಮಾಜಿ ಗವರ್ನರ್‌ ಮುರ್ತಾಜಾ ಸೈಯೀದ್.‌

ಅರ್ಜೆಂಟೀನಾ ಎರಡನೇ ಸ್ಥಾನದಲ್ಲಿದ್ದು 21 ಸಲ ಐಎಂಎಫ್‌ನಿಂದ ಹಣಕಾಸು ನೆರವು ಯಾಚಿಸಿದೆ. ಆದರೆ ಭಾರತ ಕೇವಲ 7 ಸಲ ಐಎಂಎಫ್‌ ನೆರವು ಯಾಚಿಸಿತ್ತು. 1991ರಲ್ಲಿ ನರಸಿಂಹರಾವ್‌ ನೇತೃತ್ವದ ಸರ್ಕಾರ ಆರ್ಥಿಕ ಸುಧಾರಣಾ ನೀತಿಯನ್ನು ಜಾರಿಗೊಳಿಸಿದ ಬಳಿಕ ಒಂದು ಸಲವೂ ಐಎಂಎಫ್‌ ನೆರವನ್ನು ಬಯಸಿಲ್ಲ.

ಪಾಕಿಸ್ತಾನದ ಬಳಿ ಈಗ 3 ಶತಕೋಟಿ ಡಾಲರ್‌ಗಿಂತಲೂ ಕಡಿಮೆ ವಿದೇಶಿ ವಿನಿಮಯ ಸಂಗ್ರಹ ಇದೆ. (24,600 ಕೋಟಿ ರೂ.) ಪಾಕಿಸ್ತಾನ ತನ್ನ ಇತಿಹಾಸದಲ್ಲಿ ಎಂದೂ 21 ಶತಕೋಟಿ ಡಾಲರ್‌ಗಿಂತ (1.72 ಲಕ್ಷ ಕೋಟಿ ರೂ.) ಹೆಚ್ಚು ವಿದೇಶಿ ವಿನಿಮಯ ಸಂಗ್ರಹವನ್ನು ಹೊಂದಿಲ್ಲ. ಬಾಂಗ್ಲಾದೇಶ ಕೂಡ 35 ಶತಕೋಟಿ ಡಾಲರ್‌ ( 2.87 ಲಕ್ಷ ಕೋಟಿ ರೂ.) ವಿದೇಶಿ ವಿನಿಮಯ ಸಂಗ್ರಹವನ್ನು ಹೊಂದಿದೆ. ಭಾರತ 600 ಶತಕೋಟಿ ಡಾಲರ್‌ (49 ಲಕ್ಷ ಕೋಟಿ ರೂ.) ವಿದೇಶಿ ವಿನಿಮಯ ಸಂಗ್ರಹವನ್ನು ಹೊಂದಿದೆ. ಚೀನಾ 4 ಲಕ್ಷ ಕೋಟಿ ಡಾಲರ್‌ ಅನ್ನು ಹೊಂದಿದೆ.

ಇದನ್ನೂ ಓದಿ: NIA Investigation: ಮೊಹಮ್ಮದ್‌ ಆರೀಫ್‌ಗೆ ಪಾಕ್‌, ತಾಲಿಬಾನ್‌ ಜತೆ ಸಂಪರ್ಕ; ಆಫ್ಘನ್‌ ಉಗ್ರ ಸಂಘಟನೆಗೆ‌ ವಿದೇಶಿ ಫಂಡಿಂಗ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಈ ರಾಶಿಯವರಿಗೆ ಮಾತೇ ಕಂಟಕ; ಕುಟುಂಬದಲ್ಲಿ ಕಲಹ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ ಚತುರ್ದಶಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮಂಗಳವಾರವೂ ವೃಷಭ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಕಟಕ, ತುಲಾ, ವೃಶ್ಚಿಕ, ಕುಂಭ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗಲಿದೆ. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಆಮಂತ್ರಣ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಿ. ಕಟಕ ರಾಶಿಯವರು ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳು ಬೇಡ, ಭಾವನೆಗಳನ್ನು ನಿಯಂತ್ರಿಸಿ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಗೊತ್ತಿಲ್ಲದಂತೆ ಸಮಯ ವ್ಯರ್ಥವಾಗುವ ಸಾಧ್ಯತೆ ಇದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (07-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.
ತಿಥಿ: ಚತುರ್ದಶಿ 11:40 ವಾರ: ಮಂಗಳವಾರ
ನಕ್ಷತ್ರ: ಅಶ್ವಿನಿ 15:31 ಯೋಗ: ಆಯುಸ್ಮಾನ್ 20:57
ಕರಣ: ಶಕುನಿ 11:40 ಅಮೃತಕಾಲ: ಬೆಳಗ್ಗೆ 08:59 ರಿಂದ 10:27

ಸೂರ್ಯೋದಯ : 05:57   ಸೂರ್ಯಾಸ್ತ : 06:36

ರಾಹುಕಾಲ :ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗಲಿದೆ. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಆಮಂತ್ರಣ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ವಾಹನ ಖರೀದಿ ವಿಚಾರವಾಗಿ ಚಿಂತಿಸುವಿರಿ. ಹಿಂದೆ ನಡೆದ ಘಟನೆ ನೆನಪಿಸಿ ಕೊರಗುವುದು ಬೇಡ. ಸಹದ್ಯೋಗಿಗಳಿಂದ ಅಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಇತರರ ವಿರುದ್ಧ ದ್ವೇಷ ಕಾರುತ್ತಾ ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ನಕರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡಬಹುದು. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭಫಲ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

Horoscope Today

ಕಟಕ: ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳು ಬೇಡ, ಭಾವನೆಗಳನ್ನು ನಿಯಂತ್ರಿಸಿ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಗೊತ್ತಿಲ್ಲದಂತೆ ಸಮಯ ವ್ಯರ್ಥವಾಗುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಸಿಂಹ:ಆರ್ಥಿಕ ಸಮಸ್ಯೆಯಿಂದಾಗಿ ಒತ್ತಡ ಹೆಚ್ಚಾಗಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ, ಸ್ನೇಹ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರುವುದು. ವ್ಯಾಪಾರ-ವ್ಯವಹಾರದಲ್ಲಿ ಸಾಧಾರಣ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ:ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಮನೆಯ ಸದಸ್ಯರ ವರ್ತನೆ ನಿಮ್ಮನ್ನು ಮಾನಸಿಕವಾಗಿ ತೊಂದರೆಗಳಾಗುವಂತೆ ಮಾಡುವ ಸಾಧ್ಯತೆ ಇದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸ ಕಾರ್ಯಗಳು ನಿಧಾನಗತಿಯಾಗಿರಲಿದೆ. ತಾಳ್ಮೆಯಿಂದ ವರ್ತಿಸಿ. ನೆರೆಹೊರೆಯವರೊಂದಿಗೆ ವಿನಾಕಾರಣ ಜಗಳ ಬೇಡ. ಉದ್ಯೋಗಿಗಳಿಗೆ ಶುಭಫಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಸಮಾರಂಭಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಜನಪ್ರಿಯತೆ ಹೆಚ್ಚಾಗಲಿದೆ. ಪ್ರವಾಸದ ಕುರಿತು ಚರ್ಚೆ ಮಾಡುವಿರಿ. ಕುಟುಂಬದವರ ಸಹಕಾರ ಸಿಗಲಿದೆ. ಕೊಂಚ ಆರೋಗ್ಯದ ಕಡೆಗೆ ಗಮನ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅತಿಯಾದ ಚಿಂತೆ, ಒತ್ತಡ ನಿಮ್ಮ ಆರೋಗ್ಯದ ಮೇಲೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಪರಿಣಾಮವನ್ನು ಬೀರಬಹುದು. ಆದಷ್ಟು ವಿಶ್ರಾಂತಿ ಪಡೆಯಿರಿ, ತಾಳ್ಮೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ.ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು ಕೇಳುವಿರಿ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಮಕರ: ಅನಿವಾರ್ಯ ಪ್ರಸಂಗಗಳು ನಿಮ್ಮನ್ನು ಒತ್ತಡಕ್ಕೆ ಒಳಗಾಗುವಂತೆ ಮಾಡಬಹುದು. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಪ್ರಗತಿ, ಹೂಡಿಕೆಯ ಕುರಿತು ಆಲೋಚನೆ ಮಾಡುವಿರಿ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಉದ್ಯೋಗದ ಕುರಿತು ಆಲೋಚನೆ ಮಾಡುವಿರಿ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ವಾಹನ ಚಾಲನೆ ಮಾಡುವಾಗ ಜಾಗರೂಕತೆ ಇರಲಿ, ಅಪಘಾತ ಸಂಭವ. ಅವಸರದಲ್ಲಿ ಕೆಲಸ ಮಾಡುವುದು ಬೇಡ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ದಿಢೀರ್ ಪ್ರಯಾಣ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಕನಿಷ್ಠ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮೀನ: ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮಾತಿನ ಭರದಲ್ಲಿ ಅತಿರೇಕದ ಮಾತುಗಳು ಬೇಡ, ತಾಳ್ಮೆಯಿಂದ ವರ್ತಿಸಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಕರ್ನಾಟಕ

Bengaluru Rain: ಸಿಲಿಕಾನ್‌ ಸಿಟಿಯಲ್ಲಿ ವರುಣನ ಆರ್ಭಟ; ಜಲಾವೃತವಾದ ರಸ್ತೆಗಳು, ನೆಲಕ್ಕುರುಳಿದ 16 ಮರ

Bengaluru Rain: ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ರಸ್ತೆಗಳು ಸೇರಿ 33 ಸ್ಥಳಗಳು ಜಲಾವೃತಗೊಂಡಿದ್ದು, 16 ಮರಗಳು ನೆಲಕ್ಕುರುಳಿವೆ. ರಸ್ತೆಗಳಲ್ಲಿ ಭಾರಿ ಪ್ರಮಾಣದ ನೀರು ತುಂಬಿಕೊಂಡಿದ್ದರಿಂದ ವಾಹನ ಸವಾರರು ಪರದಾಡಿದರು.

VISTARANEWS.COM


on

Bengaluru Rain
ಬೆಂಗಳೂರಿನ ಓಕಳೀಪುರಂನ ರಾಜೀವ್ ಗಾಂಧಿ ಅಷ್ಟಪಥ ಅಂಡರ್ ಪಾಸ್‌ ಜಲಾವೃತವಾಗಿದ್ದರಿಂದ ವಾಹನ ಸವಾರರು ಪರದಾಡಿದರು.
Koo

ಬೆಂಗಳೂರು: ನಗರದ ವಿವಿಧೆಡೆ ಸೋಮವಾರ ರಾತ್ರಿ ವರುಣ (Bengaluru Rain) ಆರ್ಭಟಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಯಿಂದ ರಸ್ತೆಗಳು ಸೇರಿ ನಗರದ 33 ಸ್ಥಳಗಳು ಜಲಾವೃತಗೊಂಡಿದ್ದು, 16 ಮರಗಳು ನೆಲಕ್ಕುರುಳಿವೆ. ಇದರಿಂದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿ ವಾಹನ ಸವಾರರು ಪರದಾಡಬೇಕಾಯಿತು.

ಬೆಂಗಳೂರಿನ ಓಕಳೀಪುರಂ, ಮಲೇಶ್ವರಂ, ರಾಜಾಜಿನಗರ, ಮೆಜೆಸ್ಟಿಕ್, ರೇಸ್ ಕೋರ್ಸ್, ಕೆ.ಆರ್.ಮಾರ್ಕೆಟ್, ಮತ್ತಿಕೆರೆ, ಕತ್ತರಿಗುಪ್ಪೆ, ಆನೇಕಲ್‌, ಎಲೆಕ್ಟ್ರಾನಿಕ್‌ ಸಿಟಿ ಸೇರಿ ವಿವಿಧೆಡೆ ಮಳೆ ಅಬ್ಬರಿಸಿದೆ. ಓಕಳೀಪುರಂನ ರಾಜೀವ್ ಗಾಂಧಿ ಅಷ್ಟಪಥ ಅಂಡರ್ ಪಾಸ್‌ ಜಲಾವೃತವಾಗಿದ್ದರಿಂದ ವಾಹನ ಸವಾರರು ಪರದಾಡಿದರು.

ಮೈಸೂರು ರಸ್ತೆಯ ಬ್ಯಾಟರಾಯನಪುರ, ಜೆಸಿ ನಗರದಲ್ಲಿ ಆಲಿಕಲ್ಲು ಮಳೆ ಸುರಿದಿದೆ. ಮಲ್ಲೇಶ್ವರ, ಬಸವನಗುಡಿ, ಕತ್ತರಿಗುಪ್ಪೆ ಸರ್ಕಲ್‌, ರಾಜಾಜಿನಗರ ಭಾಷ್ಯಂ ಸರ್ಕಲ್‌ ಬಳಿ ಸೇರಿದಂತೆ 16 ಕಡೆ ಮರಗಳು ನೆಲಕ್ಕುರುಳಿವೆ. ಅದೃಷ್ಟವಾಶಾತ್‌ ಯಾವುದೇ ಪ್ರಾಣಹಾನಿಯಾಗಿಲ್ಲ.

ಮಲ್ಲೇಶ್ವರದಲ್ಲಿ ಮರ ಬಿದ್ದಿರುವುದು

ರಾಜಾಜಿನಗರದಲ್ಲಿ ಮರ ನೆಲಕ್ಕುರುಳಿರುವುದು

ಭಾರಿ ಗಾಳಿ ಮಳೆಗೆ ಹಾರಿದ ಅಂಗಡಿಗಳ ಹೊದಿಕೆ, ಶೀಟ್‌ಗಳು

ಆನೇಕಲ್: ಭಾರಿ ಗಾಳಿ ಮಳೆಯಿಂದ ಹೂ ಮತ್ತು ಹಣ್ಣಿನ ಅಂಗಡಿಗಳ ಹೊದಿಕೆ ಮತ್ತು ಶೀಟ್‌ಗಳು ಹಾರಿದ ಘಟನೆ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆಯಿತು. ಚಂದಾಪುರ ಪುರಸಭೆ ಕಚೇರಿ ಮುಂದೆ ನೋಡ ನೋಡುತ್ತಿದ್ದಂತೆ ಅಂಗಡಿಗಳ ಶೀಟ್‌ಗಳು ಹಾರಿ ಹೋದವು. ಜತೆಗೆ ಹೂವು, ಹಣ್ಣು ನೀರುಪಾಲಾಗಿದ್ದರಿಂದ ವ್ಯಾಪಾರಿಗಳು ನಷ್ಟ ಅನುಭವಿಸುವಂತಾಗಿದೆ. ಎಲೆಕ್ಟ್ರಾನಿಕ್ ಸಿಟಿ ಸುತ್ತಮುತ್ತ ಧಾರಕಾರ ಮಳೆ ಸುರಿಯಿತು.

Continue Reading

ಪ್ರಮುಖ ಸುದ್ದಿ

Rohit Sharma : 4 ರನ್​ಗೆ ಔಟಾಗಿ ಕಣ್ಣೀರು ಸುರಿಸಿದ ರೋಹಿತ್​ ಶರ್ಮಾ; ಇಲ್ಲಿದೆ ವಿಡಿಯೊ

Rohit Sharma: ನಾಯಕತ್ವದ ಹೊರೆ ರೋಹಿತ್ ಶರ್ಮಾ ಅವರ ಹೆಗಲ ಮೇಲಿದ್ದ ಅವಧಿಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬ್ಯಾಟರ್​​ ಆಗಿ ತಮ್ಮ ಅತ್ಯುತ್ತಮ ಪ್ರದರ್ಶನ ನೀಡುವ ನಿರೀಕ್ಷೆಯ ದೊಡ್ಡ ಹೊರೆಯನ್ನು ಅವರು ಹೊಂದಿದ್ದರು. ವಿಶೇಷವೆಂದರೆ, ರೋಹಿತ್ 5 ಐಪಿಎಲ್ ಚಾಂಪಿಯನ್​ಶಿಪ್​ ಗೆದ್ದಿದ್ದರಿಂದ ಮುಂಬೈ ಇಂಡಿಯನ್ಸ್ ಪರ ಅತ್ಯಂತ ಯಶಸ್ವಿ ನಾಯಕ ಕೂಡ ಔದು. ಆದರೆ ಇದೀಗ ಬ್ಯಾಟಿಂಗ್​ನಲ್ಲಿ ಅವರ ಪ್ರದರ್ಶನವು ಕಡಿಮೆಯಾಗಿದೆ.

VISTARANEWS.COM


on

Rohit Sharma
Koo

ಮುಂಬಯಿ: ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ (IPL 2024) ಮತ್ತೊಮ್ಮೆ ಬ್ಯಾಟಿಂಗ್​ನಲ್ಲಿ ವಿಫಲವಾದ ನಂತರ ಮುಂಬೈ ಇಂಡಿಯನ್ಸ್ (Mumbai Indians) ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಭಾವುಕರಾದ ಘಟನೆ ನಡೆಯಿತು. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪ್ಯಾಟ್ ಕಮಿನ್ಸ್ (Pat Cummins) ನೇತೃತ್ವದ ಸನ್​ರೈಸರ್ಸ್​ ಹೈದರಾಬಾದ್ (SRH) ವಿರುದ್ಧದ ಪಂದ್ಯದ 55ನೇ ಪಂದ್ಯದಲ್ಲಿ ಅವರಿಗೆ ಉತ್ತಮವಾಗಿ ಬ್ಯಾಟಿಂಗ್ ಮಾಡಲು ಸಾಧ್ಯವಾಗಲಿಲ್ಲ. ಮುಂಬೈ ಇಂಡಿಯನ್ಸ್ (MI) ಅವರ ಬದಲಿಗೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ಮಾಡಲು ನಿರ್ಧರಿಸಿದ್ದರಿಂದ ರೋಹಿತ್ ಶರ್ಮಾ 2024 ರ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಉತ್ತಮ ಬ್ಯಾಟಿಂಗ್ ಮಾಡಿಲ್ಲ.

ನಾಯಕತ್ವದ ಹೊರೆ ರೋಹಿತ್ ಶರ್ಮಾ ಅವರ ಹೆಗಲ ಮೇಲಿದ್ದ ಅವಧಿಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬ್ಯಾಟರ್​​ ಆಗಿ ತಮ್ಮ ಅತ್ಯುತ್ತಮ ಪ್ರದರ್ಶನ ನೀಡುವ ನಿರೀಕ್ಷೆಯ ದೊಡ್ಡ ಹೊರೆಯನ್ನು ಅವರು ಹೊಂದಿದ್ದರು. ವಿಶೇಷವೆಂದರೆ, ರೋಹಿತ್ 5 ಐಪಿಎಲ್ ಚಾಂಪಿಯನ್​ಶಿಪ್​ ಗೆದ್ದಿದ್ದರಿಂದ ಮುಂಬೈ ಇಂಡಿಯನ್ಸ್ ಪರ ಅತ್ಯಂತ ಯಶಸ್ವಿ ನಾಯಕ ಕೂಡ ಔದು. ಆದರೆ ಇದೀಗ ಬ್ಯಾಟಿಂಗ್​ನಲ್ಲಿ ಅವರ ಪ್ರದರ್ಶನವು ಕಡಿಮೆಯಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಶತಕ ಬಾರಿಸುವ ಮೂಲಕ ಟೂರ್ನಿಯಲ್ಲಿ ಉತ್ತಮ ಆರಂಭ ಕಂಡಿದದ್ದರು. ಮುಂಬೈ ಇಂಡಿಯನ್ಸ್ ಪರ ಮೊದಲ 7 ಪಂದ್ಯಗಳಲ್ಲಿ ರೋಹಿತ್ ಶರ್ಮಾ 49.5 ಸರಾಸರಿಯಲ್ಲಿ 297 ರನ್ ಗಳಿಸಿದ್ದಾರೆ. ಆದಾಗ್ಯೂ, ಅವರ ಫಾರ್ಮ್ ಯು-ಟರ್ನ್ ತೆಗೆದುಕೊಂಡಿತು ಮತ್ತು ಮುಂದಿನ 5 ಪಂದ್ಯಗಳಲ್ಲಿ ಅವರು ದಯನೀಯವಾಗಿ ವಿಫಲರಾಗಿದ್ದಾರೆ. 6.6 ಸರಾಸರಿ ಮತ್ತು 94.3 ಸ್ಟ್ರೈಕ್ ರೇಟ್​ನಲ್ಲಿ ಕೇವಲ 33 ರನ್ ಗಳಿಸಿದರು.

T20 World Cup 2024 : ಕೇಸರಿಯ ರಂಗು; ಟೀಮ್​ ಇಂಡಿಯಾದ ಟಿ20 ವಿಶ್ವ ಕಪ್​​ ಜೆರ್ಸಿ ಬಿಡುಗಡೆ

ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ 5 ಎಸೆತಗಳಲ್ಲಿ ಕೇವಲ 4 ರನ್ ಗಳಿಸಿದ್ದರು. 4ನೇ ಓವರ್​ನ 2ನೇ ಎಸೆತದಲ್ಲಿ ಕಮಿನ್ಸ್ ಎಸೆತಕ್ಕೆ ಜೋರಾಗಿ ಬಾರಿಸಲು ಹೋಗಿ ಔಟಾದರು. ಹೆನ್ರಿಕ್ ಕ್ಲಾಸೆನ್ ಯಾವುದೇ ತಪ್ಪು ಮಾಡಲಿಲ್ಲ. ಶರ್ಮಾ ಅವರನ್ನು ಔಟ್ ಮಾಡಲು ಸರಳ ಕ್ಯಾಚ್ ಪೂರ್ಣಗೊಳಿಸಿದರು.

ಪ್ಯಾಟ್ ಕಮಿನ್ಸ್ ಟಿ 20 ಪಂದ್ಯಗಳಲ್ಲಿ ರೋಹಿತ್ ಶರ್ಮಾ ಅವರನ್ನು ಔಟ್ ಮಾಡಿದ್ದು ಇದು ನಾಲ್ಕನೇ ಬಾರಿ. ಒಟ್ಟಾರೆಯಾಗಿ, 9 ಇನ್ನಿಂಗ್ಸ್ ಗಳಲ್ಲಿ, ಅವರು ಕಮಿನ್ಸ್ ವಿರುದ್ಧ 41 ಎಸೆತಗಳಲ್ಲಿ 14.25 ಸರಾಸರಿಯಲ್ಲಿ 57 ರನ್ ಗಳಿಸಿದ್ದಾರೆ.

ಪಂದ್ಯದಲ್ಲಿ ಮುಂಬಯಿಗೆ ಭರ್ಜರಿ ವಿಜಯ

ಮುಂಬಯಿ: ಸೂರ್ಯಕುಮಾರ್ ಯಾದವ್ (Suryakumar Yadav) ಬಾರಿಸಿದ ಸ್ಫೋಟಕ ಶತಕ (102,51 ಎಸೆತ, 12 ಫೋರ್, 6 ಸಿಕ್ಸರ್​) ಹಾಗೂ ಬೌಲರ್​ಗಳ ಸಂಘಟಿತ ಹೋರಾಟದಿಂದ ಮಿಂಚಿದ ಮುಂಬೈ ಇಂಡಿಯನ್ಸ್​ (Mumbai Indians) ತಂಡ ಐಪಿಎಲ್​ 17ನೇ ಆವೃತ್ತಿಯ (IPL 2024) 55ನೇ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ (Sunrisers Hyderabad)​ ವಿರುದ್ಧ 7 ವಿಕೆಟ್​ ಸುಲಭ ವಿಜಯ ದಾಖಲಿಸಿದೆ. ಈ ಮೂಲಕ ಸೂರ್ಯನ ಪ್ರತಾಪಕ್ಕೆ ಸನ್​​ ಮಂಕಾಗಿ ಹೋಯಿತು. ಇದು ಮುಂಬಯಿ ತಂಡಕ್ಕೆ ಹಾಲಿ ಆವೃತ್ತಿಯ 12 ಪಂದ್ಯಗಳಲ್ಲಿ 4ನೇ ಗೆಲುವಾಗಿದೆ. ಇದರೊಂದಿಗೆ 10ನೇ ಸ್ಥಾನದಿಂದ ಒಂದು ಸ್ಥಾನ ಮೇಲ್ಕಕೇರಿದೆ. ಇದೇ ವೇಳೆ ಕಳೆದ ಆವೃತ್ತಿಯ ರನ್ನರ್​ ಅಪ್​ ತಂಡ ಗುಜರಾತ್​ ಕೊನೇ ಸ್ಥಾನಕ್ಕೆ ಇಳಿದಿದೆ.

ಇಲ್ಲಿನ ಐತಿಹಾಸಿಕ ವಾಂಖೆಡೆ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹಣಾಹಣಿಯಲ್ಲಿ ಟಾಸ್​ ಗೆದ್ದ ಮುಂಬಯಿ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಸನ್​ ರೈಸರ್ಸ್​ ತಂಡ ತನ್ನ ಪಾಲಿನ 20 ಓವರ್​ಗಳಲ್ಲಿ 8 ವಿಕೆಟ್​ಗೆ 173 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬೈ ತಂಡ ಆರಂಭಿಕ ಹಿನ್ನಡೆ ಹೊರತಾಗಿಯೂ ಸೂರ್ಯಕುಮಾರ್ ಯಾದವ್ ಅವರ ಅದ್ಭುತ್ ಇನಿಂಗ್ಸ್​ ನೆರವಿನಿಂದ ಇನ್ನೂ 7 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್ ಕಳೆದುಕೊಂಡು 174 ರನ್ ಬಾರಿಸಿ ಗೆಲುವು ಸಾಧಿಸಿತು.

Continue Reading

ದೇಶ

ತಮ್ಮ ಬಗ್ಗೆ ಟ್ರೋಲ್‌ ಮಾಡಿದ್ದನ್ನೂ ಮೆಚ್ಚಿದ ಮೋದಿ; ಮಮತಾ ಬ್ಯಾನರ್ಜಿ ನೋಟಿಸ್; ಯಾರು ಸರ್ವಾಧಿಕಾರಿ?

ಯಾವಾಗ ಮಮತಾ ಬ್ಯಾನರ್ಜಿ ಅವರ ಟ್ರೋಲ್‌ ವಿಡಿಯೊ ಅಪ್‌ಲೋಡ್‌ ಮಾಡಿದ ಇಬ್ಬರಿಗೆ ನೋಟಿಸ್‌ ನೀಡಲಾಯಿತೋ, ಆಗ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಯಿತು. ನಾನು ಕೂಡ ಈ ವಿಡಿಯೊ ಅಪ್‌ಲೋಡ್‌ ಮಾಡಿದ್ದೇನೆ, ನನ್ನ ವಿಳಾಸ ಇದು, ನನಗೂ ನೋಟಿಸ್‌ ಕಳುಹಿಸಿ ಎಂದು ಬಿಜೆಪಿ ನಾಯಕರು ಸೇರಿ ಹಲವರು ಮಮತಾ ಬ್ಯಾನರ್ಜಿ ಅವರ ಟ್ರೋಲ್‌ ವಿಡಿಯೊವನ್ನು ಹಂಚಿಕೊಂಡರು. ಇದೇ ವೇಳೆ ಮೋದಿ ಅವರು ತಮ್ಮ ಬಗ್ಗೆ ಮಾಡಲಾದ ಟ್ರೋಲ್‌ ವಿಡಿಯೊವನ್ನು ಇಷ್ಟಪಟ್ಟಿದ್ದಾರೆ.

VISTARANEWS.COM


on

PM Narendra Modi
Koo

ನವದೆಹಲಿ: ಸೋಷಿಯಲ್‌ ಮೀಡಿಯಾ ಜಮಾನದಲ್ಲಿ ಗಣ್ಯರ ಕುರಿತು ಟ್ರೋಲ್‌ (Troll) ಮಾಡುವುದು, ಮೀಮ್‌ಗಳ (Meme) ಮೂಲಕ ಅವರ ಕಾಲೆಳೆಯುವುದು ಸಾಮಾನ್ಯ. ವಿಡಿಯೊ ಅಥವಾ ರೀಲ್ಸ್‌ ನೋಡಿ, ನಕ್ಕು, ಮುಂದೆ ಹೋಗುವಂತಹ ಟ್ರೋಲ್‌ಗಳು ವೈರಲ್‌ (Viral Video) ಆಗುತ್ತವೆ. ಆದರೆ, ಆರ್ಟಿಫಿಷಿಯಲ್‌ ಇಂಟಲಿಜೆನ್ಸ್‌ ಮೂಲಕ ಮಮತಾ ಬ್ಯಾನರ್ಜಿ (Mamata Banerjee) ಅವರನ್ನು ಟ್ರೋಲ್‌ ಮಾಡಿದ್ದಕ್ಕೆ ಇಬ್ಬರು ಸಾಮಾಜಿಕ ಜಾಲತಾಣಗಳ ಬಳಕೆದಾರರಿಗೆ ಪಶ್ಚಿಮ ಬಂಗಾಳ ಪೊಲೀಸರು ನೋಟಿಸ್‌ ನೀಡಿದ್ದಾರೆ. ಇದರ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು, ತಮ್ಮ ಬಗ್ಗೆ ಮಾಡಿದ ಟ್ರೋಲ್‌ ವಿಡಿಯೊವನ್ನು ಮೆಚ್ಚಿಕೊಂಡಿದ್ದಾರೆ.

ಸಾವಿರಾರು ಜನರ ಮಧ್ಯೆ ವ್ಯಕ್ತಿಯೊಬ್ಬ ಅತ್ಯುತ್ಸಾಹದಿಂದ ಬಂದು ಡಾನ್ಸ್‌ ಮಾಡುತ್ತಾನೆ. ಆ ವ್ಯಕ್ತಿಯ ಬದಲಿಗೆ ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಬಳಸಿ ಮೋದಿ ಅವರು ಡಾನ್ಸ್‌ ಮಾಡುವಂತೆ ಎಡಿಟ್‌ ಮಾಡಲಾಗಿದೆ. ಈ ಟ್ರೋಲ್‌ ವಿಡಿಯೊವನ್ನು ಅಪ್‌ಲೋಡ್‌ ಮಾಡಿದ ವ್ಯಕ್ತಿಯೊಬ್ಬ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾನೆ. “ಸರ್ವಾಧಿಕಾರಿ ನರೇಂದ್ರ ಮೋದಿ ಅವರು ಈ ವಿಡಿಯೊವನ್ನು ಅಪ್‌ಲೋಡ್‌ ಮಾಡಿದ್ದಕ್ಕೆ ನನ್ನನ್ನು ಬಂಧಿಸಲಿಕ್ಕಿಲ್ಲ” ಎಂದು ಕ್ರಿಪ್ಟಿಕ್‌ ಆಗಿ ಪೋಸ್ಟ್‌ ಮಾಡಿದ್ದಾನೆ. ಆದರೆ, ಆ ವಿಡಿಯೊವನ್ನೇ ಶೇರ್‌ ಮಾಡಿದ ಮೋದಿ, ಅದನ್ನು ಮೆಚ್ಚಿಕೊಂಡಿದ್ದಾರೆ.

ಮೋದಿ ಪ್ರತಿಕ್ರಿಯಿಸಿದ್ದು ಹೀಗೆ…

“ನಿಮ್ಮಂತೆ, ನಾನು ಕೂಡ ನಾನೇ ನೃತ್ಯ ಮಾಡಿದಂತೆ ಬಿಂಬಿಸಿರುವ ವಿಡಿಯೊವನ್ನು ನೋಡಿ ಎಂಜಾಯ್‌ ಮಾಡಿದ್ದೇನೆ. ಇಂತಹ ಕ್ರಿಯೇಟಿವಿಯಿಂದ ಕೂಡಿರುವ ಟ್ರೋಲ್‌ಗಳು ಚುನಾವಣೆ ಕಣವನ್ನು ಮತ್ತಷ್ಟು ರಂಗೇರಿಸುವಂತೆ ಮಾಡಿವೆ” ಎಂದು ಹೇಳುವ ಮೂಲಕ ನರೇಂದ್ರ ಮೋದಿ ಅವರು ತಮ್ಮ ಬಗ್ಗೆ ಮಾಡಿದ ಟ್ರೋಲ್‌ಅನ್ನು ಕೂಡ ಸಕಾರಾತ್ಮಕವಾಗಿ ತೆಗೆದುಕೊಂಡಿದ್ದಾರೆ. ನರೇಂದ್ರ ಮೋದಿ ಅವರ ಸಕಾರಾತ್ಮಕ ಮನೋಭಾವ, ಮೀಮರ್‌ಗಳನ್ನು ಕೂಡ ಹೊಗಳುವ ರೀತಿಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟ್ರೋಲ್‌ ಸಹಿಸದ ದೀದಿ

ನರೇಂದ್ರ ಮೋದಿ ಅವರು ಡಾನ್ಸ್‌ ಮಾಡುವ ರೀತಿ ಬಿಂಬಿಸಿದ ರೀತಿಯೇ ಮಮತಾ ಬ್ಯಾನರ್ಜಿ ಅವರ ಟ್ರೋಲ್‌ ವಿಡಿಯೊವನ್ನು ಮೊದಲು ಹಂಚಿಕೊಳ್ಳಲಾಗಿತ್ತು. ತಮಾಷೆಗಾಗಿ ಮಾಡಿದ ವಿಡಿಯೊ ಕಂಡ ಪಶ್ಚಿಮ ಬಂಗಾಳ ಪೊಲೀಸರು, ಪೋಸ್ಟ್‌ ಮಾಡಿದ ಇಬ್ಬರಿಗೆ ಕಠಿಣ ಕ್ರಮದ ಎಚ್ಚರಿಕೆ ಜತೆಗೆ ನೋಟಿಸ್‌ ನೀಡಿದ್ದಾರೆ.

ಯಾವಾಗ ಟ್ರೋಲ್‌ ವಿಡಿಯೊ ಅಪ್‌ಲೋಡ್‌ ಮಾಡಿದ ಇಬ್ಬರಿಗೆ ನೋಟಿಸ್‌ ನೀಡಲಾಯಿತೋ, ಆಗ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಯಿತು. ನಾನು ಕೂಡ ಈ ವಿಡಿಯೊ ಅಪ್‌ಲೋಡ್‌ ಮಾಡಿದ್ದೇನೆ, ನನ್ನ ವಿಳಾಸ ಇದು, ನನಗೂ ನೋಟಿಸ್‌ ಕಳುಹಿಸಿ ಎಂದು ಬಿಜೆಪಿ ನಾಯಕರು ಸೇರಿ ಹಲವರು ಮಮತಾ ಬ್ಯಾನರ್ಜಿ ಅವರ ಟ್ರೋಲ್‌ ವಿಡಿಯೊವನ್ನು ಹಂಚಿಕೊಂಡರು. ಆ ಮೂಲಕ ಮಮತಾ ಬ್ಯಾನರ್ಜಿ ಅವರಿಗೆ ತಿರುಗೇಟು ನೀಡಿದರು.

ಇದನ್ನೂ ಓದಿ: Trinamool Congress: ಮಮತಾ ಬ್ಯಾನರ್ಜಿಯನ್ನು ಅರೆಸ್ಟ್‌ ಮಾಡಿ; ಟಿಎಂಸಿ ಉಗ್ರ ಸಂಘಟನೆ ಎಂದು ಘೋಷಿಸಿ-ಬಿಜೆಪಿ ಆಗ್ರಹ

Continue Reading
Advertisement
Dina Bhavishya
ಭವಿಷ್ಯ27 mins ago

Dina Bhavishya : ಈ ರಾಶಿಯವರಿಗೆ ಮಾತೇ ಕಂಟಕ; ಕುಟುಂಬದಲ್ಲಿ ಕಲಹ

Bengaluru Rain
ಕರ್ನಾಟಕ5 hours ago

Bengaluru Rain: ಸಿಲಿಕಾನ್‌ ಸಿಟಿಯಲ್ಲಿ ವರುಣನ ಆರ್ಭಟ; ಜಲಾವೃತವಾದ ರಸ್ತೆಗಳು, ನೆಲಕ್ಕುರುಳಿದ 16 ಮರ

Rohit Sharma
ಪ್ರಮುಖ ಸುದ್ದಿ5 hours ago

Rohit Sharma : 4 ರನ್​ಗೆ ಔಟಾಗಿ ಕಣ್ಣೀರು ಸುರಿಸಿದ ರೋಹಿತ್​ ಶರ್ಮಾ; ಇಲ್ಲಿದೆ ವಿಡಿಯೊ

PM Narendra Modi
ದೇಶ6 hours ago

ತಮ್ಮ ಬಗ್ಗೆ ಟ್ರೋಲ್‌ ಮಾಡಿದ್ದನ್ನೂ ಮೆಚ್ಚಿದ ಮೋದಿ; ಮಮತಾ ಬ್ಯಾನರ್ಜಿ ನೋಟಿಸ್; ಯಾರು ಸರ್ವಾಧಿಕಾರಿ?

School Children
ಸಂಪಾದಕೀಯ6 hours ago

ವಿಸ್ತಾರ ಸಂಪಾದಕೀಯ: ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ, ಇ-ಮೇಲ್‌ ಕಿಡಿಗೇಡಿಗಳಿಗೆ ಕಠಿಣ ಪಾಠ ಕಲಿಸಬೇಕಿದೆ

IPL 2024
ಕ್ರೀಡೆ6 hours ago

IPL 2024 : ಸೂರ್ಯನ ಪ್ರತಾಪಕ್ಕೆ ಮಂಕಾದ ಸನ್​; ಮುಂಬೈಗೆ 7 ವಿಕೆಟ್​ ಭರ್ಜರಿ ಗೆಲುವು

Narendra Modi
ದೇಶ6 hours ago

Maldives: ಭಾರತೀಯರೇ, ದಯಮಾಡಿ ಬನ್ನಿ ಎಂದ ಮಾಲ್ಡೀವ್ಸ್‌ ಸಚಿವ; ಬಾಯ್ಕಾಟ್‌ ಪೆಟ್ಟಿಗೆ ಥಂಡಾ!

DK Shivakumar
ಕರ್ನಾಟಕ6 hours ago

Prajwal Revanna Case: ದೇವರಾಜೇಗೌಡ ನನ್ನ ವಿರುದ್ಧ ಸುಳ್ಳು ಅಪಾದನೆ ಮಾಡಿದ್ದಾರೆ ಎಂದ ಡಿಕೆಶಿ

T20 World Cup 2024
ಕ್ರೀಡೆ6 hours ago

T20 World Cup 2024 : ಕೇಸರಿಯ ರಂಗು; ಟೀಮ್​ ಇಂಡಿಯಾದ ಟಿ20 ವಿಶ್ವ ಕಪ್​​ ಜೆರ್ಸಿ ಬಿಡುಗಡೆ

108 Ambulance
ಕರ್ನಾಟಕ7 hours ago

108 Ambulance: 108 ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ದಿನೇಶ್ ಗುಂಡೂರಾವ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ10 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ11 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ11 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 day ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ4 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌