Woman killed two injured as goods auto rickshaw overturnsAuto Rickshaw Accident: ಗೂಡ್ಸ್ ಆಟೋ ಪಲ್ಟಿಯಾಗಿ ಮಹಿಳೆ ದಾರುಣ ಸಾವು, ಇಬ್ಬರಿಗೆ ಗಾಯ - Vistara News

ಕರ್ನಾಟಕ

Auto Rickshaw Accident: ಗೂಡ್ಸ್ ಆಟೋ ಪಲ್ಟಿಯಾಗಿ ಮಹಿಳೆ ದಾರುಣ ಸಾವು, ಇಬ್ಬರಿಗೆ ಗಾಯ

Auto Rickshaw Accident: ವಿಜಯಪುರ ತಾಲೂಕಿನ ಬರಟಗಿ ಕ್ರಾಸ್ ಬಳಿ ಅಪಘಾತ ನಡೆದಿದೆ. ಆಟೋ ಪಲ್ಟಿಯಾಗಿದ್ದರಿಂದ ಗಂಭೀರವಾಗಿ ಗಾಯಗೊಂಡು ಮಹಿಳೆ ಮೃತಪಟ್ಟಿದ್ದಾರೆ.

VISTARANEWS.COM


on

Auto Rickshaw Accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಪಲ್ಟಿಯಾಗಿದ್ದರಿಂದ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ (Auto Rickshaw Accident) ತಾಲೂಕಿನ ಬರಟಗಿ ಕ್ರಾಸ್ ಬಳಿ ಭಾನುವಾರ ನಡೆದಿದೆ.

ಹಾಸೀಮಬಿ ಹಕೀಮ್ (32) ಮೃತ ಮಹಿಳೆ. ರೋಹಿತ್ ಹಾಗೂ ಆಸ್ಮಾಬಿ ಗಾಯಾಳುಗಳು. ಗೂಡ್ಸ್‌ ವಾಹನ ಏಕಾಏಕಿ ಪಲ್ಟಿಯಾಗಿದ್ದರಿಂದ ತಲೆಗೆ ಗಂಭೀರ ಗಾಯವಾಗಿ ಮಹಿಳೆ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕ್ವಾರಿಯಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಶವ ಪತ್ತೆ

medical Student suicide in kolar

ಕೋಲಾರ: ತಾಲೂಕಿನ ಕೆಂದಟ್ಟಿ ಗ್ರಾಮದ ಬಳಿ ಇರುವ ಕ್ವಾರಿಯಲ್ಲಿ ಕ್ವಾರಿಯಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಹೊಸಕೋಟೆ ತಾಲೂಕಿನ ಎಂವಿಜೆ ಮೆಡಿಕಲ್ ಕಾಲೇಜಿನ ದರ್ಶಿನಿ (24) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಬಳ್ಳಾರಿ ಮೂಲದ ದರ್ಶಿನಿ ಸ್ನೇಹಿತರಿಗೆ ದೂರವಾಣಿ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಕೆ ಎಂವಿಜೆ ಮೆಡಿಕಲ್ ಕಾಲೇಜಿನಲ್ಲಿ ಎಂಡಿ ಪಿಡಿಯಾಟ್ರಿಕ್ ವಿದ್ಯಾರ್ಥಿನಿಯಾಗಿದ್ದಳು. ಅಗ್ನಿಶಾಮಕ ದಳ ಸಿಬ್ಬಂದಿ ವಿದ್ಯಾರ್ಥಿನಿಯ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸರು ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ | Hubballi News: ಅಮ್ಮನ ಸೀರೆಯಲ್ಲಿ ನೇಣಿಗೆ ಕೊರಳೊಡ್ಡಿದ ಸಹೋದರಿಯರು

ಲಾರಿಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಯುವಕರ ದುರ್ಮರಣ

car accident in nagamangala four killed

ಮಂಡ್ಯ: ನಾಗಮಂಗಲ ತಾಲೂಕಿನ ತಿರುಮಲಾಪುರ ಗ್ರಾಮದ ಗೇಟ್ ಬಳಿಯ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಲ್ಲಿನ ಪುಡಿ ತುಂಬಿದ್ದ ಲಾರಿಗೆ ಸ್ಯಾಂಟ್ರೋ ಕಾರು ಡಿಕ್ಕಿ ಹೊಡೆದು ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಾಗಡಿ ತಾಲೂಕಿನ ಲಕ್ಕೇನಹಳ್ಳಿಯ ಹೇಮಂತ್ (24), ತುಮಕೂರಿನ ಕಂಪನಹಳ್ಳಿ ಶರತ್ (27), ಚಂಡೂರುಪುರದ ಯೋಗೇಶ್ (25) ಹಾಗೂ ಶಿವಮೊಗ್ಗದ ಧೀರಜ್ (27) ಮೃತರು. ಭಾನುವಾರ ಮುಂಜಾನೆ ಅಪಘಾತ ನಡೆದಿದೆ. ಎರಡೂ ವಾಹನಗಳು ಬೆಂಗಳೂರು ಕಡೆಯಿಂದ ಚನ್ನರಾಯಪಟ್ಟಣದ ಕಡೆಗೆ ಸಂಚರಿಸಿತ್ತಿದ್ದವು. ಶರತ್ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಸ್ನೇಹಿತರು ಆದಿಚುಂಚನಗಿರಿ‌ ದೇವಸ್ಥಾನಕ್ಕೆ ತೆರಳುತ್ತಿದ್ದರು. ಇವರಿದ್ದ ಕಾರು ಲಾರಿಗೆ ಡಿಕ್ಕಿಯಾಗಿ ದುರಂತ ನಡೆದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Taliban Writing: ಗೋಡೆ ಮೇಲೆ ತಾಲಿಬಾನ್‌ ಬರಹ ಬರೆದ ಪೇದೆ ಮುನಿರಾಜು ಈಗ ಮುಸ್ಲಿಂ ಅಂತೆ!

Taliban Writing: ತಾನು ಪೊಲೀಸ್‌ ಕೆಲಸ ಪಡೆಯಲು ದರ್ಗಾಕ್ಕೆ ಹರಕೆ ಹೊತ್ತಿರುವುದಾಗಿ, ಕೆಲಸ ಸಿಕ್ಕಿದ ಬಳಿಕ ಸಂಪೂರ್ಣ ಮುಸ್ಲಿಂ ಆಗಿರುವುದಾಗಿ ಹುಚ್ಚಾಟ ನಡೆಸಿದ ಪೊಲೀಸ್‌ ಪೇದೆ ಮುನಿರಾಜು ಹೇಳಿಕೊಂಡಿದ್ದಾನೆ. ಆತ ಈಗ ಜೈಲುಪಾಲಾಗಿದ್ದಾನೆ.

VISTARANEWS.COM


on

taliban writing muniraju
Koo

ಆನೇಕಲ್: ಆನೆಕಲ್‌ನಲ್ಲಿ (Anekal news) ತನ್ನ ಮನೆಯ ಕಾಂಪೌಂಡ್ ಮೇಲೆ ಹುಚ್ಚುಚ್ಚಾಗಿ ದೇಶದ್ರೋಹಿ, ಪ್ರಚೋದನಾತ್ಮಕ ಬರಹ (Taliban Writing) ಬರೆದಿರುವ ಪೊಲೀಸ್ ಪೇದೆ, ತಾನೀಗ ಮುಸ್ಲಿಂ ಧರ್ಮದ ಕಟ್ಟರ್‌ ಅನುಯಾಯಿ ಎಂದು ಹೇಳಿಕೊಂಡಿದ್ದಾನೆ. ಈತನನ್ನು ಪೊಲೀಸರು ವಶಕ್ಕೆ ಪಡೆದು (Crime news) ತನಿಖೆ ನಡೆಸುತ್ತಿದ್ದಾರೆ.‌ ಇದರ ಹಿಂದೆ ಮತಾಂತರ (conversion) ಆಯಾಮವೂ ಇದೆಯೇ ಎಂಬುದೂ ತನಿಖೆ ಆಗಬೇಕಾಗಿದೆ ಎಂದುಗ್ರಾಮಸ್ಥರು ಹೇಳಿದ್ದಾರೆ.

ತಾನು ಪೊಲೀಸ್‌ ಕೆಲಸ ಪಡೆಯಲು ದರ್ಗಾಕ್ಕೆ ಹರಕೆ ಹೊತ್ತಿರುವುದಾಗಿ, ಕೆಲಸ ಸಿಕ್ಕಿದ ಬಳಿಕ ಸಂಪೂರ್ಣ ಮುಸ್ಲಿಂ ಆಗಿರುವುದಾಗಿ ಹುಚ್ಚಾಟ ನಡೆಸಿದ ಪೊಲೀಸ್‌ ಪೇದೆ ಮುನಿರಾಜು ಹೇಳಿಕೊಂಡಿದ್ದಾನೆ. ಆತ ಈಗ ಜೈಲುಪಾಲಾಗಿದ್ದಾನೆ. ಈ ಘಟನೆ ಸೂರ್ಯಸಿಟಿ ಠಾಣಾ ವ್ಯಾಪ್ತಿಯ ಬಂಡಾಪುರದಲ್ಲಿ ನಡೆದಿದೆ. ಗ್ರಾಮಸ್ಥರಿಂದ ವಿಷಯ ತಿಳಿದು ಆರೋಪಿ ಮುನಿರಾಜುನನ್ನು ಬಂಧಿಸಲು ಪೊಲೀಸರು ಮುಂದಾದಾಗ, ಬಂಧಿಸಲು ಬಂದ ಪೊಲೀಸರಿಗೆ “ನನ್ನನ್ನು ಕರೆದೊಯ್ಯಲು ಬಂದು ದೊಡ್ಡ ತಪ್ಪು ಮಾಡುತ್ತಿದ್ದೀರಿ. ನನ್ನ ಕೈಯನ್ನು ಮುಟ್ಟಬೇಡಿ. ಬಿಡಿ” ಎಂದು ಈತ ಅವಾಜ್ ಹಾಕಿದ್ದಾನೆ.

ವಿಚಾರಣೆ ವೇಳೆ ತಾನು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಕೆಲಸಕ್ಕೆ ಸೇರುವ ಮುನ್ನಾ ಒಂದು ದರ್ಗಾಕ್ಕೆ ಹೋಗಿ ಹರಕೆ ಮಾಡಿಕೊಂಡಿದ್ದೆ. ನನಗೆ ಪೊಲೀಸ್ ಉದ್ಯೋಗ ಸಿಕ್ಕಿದ್ದು, ಅಂದಿನಿಂದಲೇ ನಾನು ಮುಸ್ಲಿಂ ಧರ್ಮದ ಅನುಯಾಯಿಯಾದೆ ಎಂದು ಹೇಳಿಕೆ ನೀಡಿದ್ದಾನೆ. ತಾನೇ ತನ್ನ ಕೈಯಿಂದ ಮನೆ ಗೋಡೆ, ಕಾಂಪೌಂಡ್ ಹಾಗೂ ಗೇಟ್ ಮತ್ತು ಸುತ್ತಲಿನ ಗೋಡೆ ಮೇಲೆ ಬರೆದಿರುವುದಾಗಿ ತಿಳಿಸಿದ್ದಾನೆ. ಈ ಬರಹಗಳು ಸಮಾಜದ ಶಾಂತಿ ಕದಡುವಂತಿವೆ. ಜವಾಬ್ದಾರಿಯುತ ಪೊಲೀಸನಾಗಿ ಹೀಗೆ ಬರೆಯಬಹುದೇ ಎಂಬ ಪ್ರಶ್ನೆಗೆ, ತಾನು ಮಾಡಿರುವುದು ಸರಿ. ಪಶ್ಚಾತ್ತಾಪವಿಲ್ಲ ಎಂದಿದ್ದಾನೆ.

ಇಸ್ಲಾಂ, ಥರ್ಡ್ ವರ್ಲ್ಡ್ ವಾರ್, ತಾಲಿಬಾನ್ ಇಂಡಿಯಾ ಹೆಡ್ ಬಿ ಕೇರ್ ಫುಲ್ (Taliban india head be careful) ಸಲಾಂ ಇಸ್ಲಾಂ, ಸೇರಿದಂತೆ ಆತಂಕ ಸೃಷ್ಟಿಸುವ ಹಲವು ರೀತಿಯ ಗೋಡೆ ಬರಹಗಳು ಕಂಡು ಬಂದಿದೆ. ಇಡೀ ಮನೆಯ ಗೋಡೆ ತುಂಬೆಲ್ಲಾ ದೇಶ ವಿರೋಧಿ ಬರಹಗಳಿದ್ದು, ಗೇಟ್‌ನ ಒಂದು ಬದಿಯಲ್ಲಿ ರಾಜೀವ್ ಗಾಂಧಿ ಎಂದೂ ಬರೆದಿದೆ. ಈ ಪ್ರಚೋದನಾತ್ಮಕ ಬರಹಗಳು ದೇಶದ್ರೋಹಿ ಕೃತ್ಯ ಎಂದು ಕೆಲವು ಗ್ರಾಮಸ್ಥರು ಆಪಾದಿಸಿದ್ದಾರೆ.

ಪಾಕಿಸ್ತಾನ ಬಾವುಟ ಹಾರಿಸಿದ್ದ!

ಕಾನ್‌ಸ್ಟೇಬಲ್‌ ಮುನಿರಾಜು ನಶೆಯಲ್ಲಿ ಇಂತಹ ಕೃತ್ಯವೆಸಗಿದ್ದಾನೆ ಎಂದು ಸಂಬಂಧಿಕರು ತಿಳಿಸಿದ್ದಾರೆ, ಈತ ಬೆಂಗಳೂರಿನ ವಿಲ್ಸನ್ ಗಾರ್ಡನ್ ಮತ್ತು ಬಾಣಸವಾಡಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು, ಕಳೆದ ಮೂರು ತಿಂಗಳಿಂದ ಕರ್ತವ್ಯಕ್ಕೆ ಚಕ್ಕರ್ ಹೊಡೆದಿದ್ದಾನೆ. ಸದಾ ಪಾನಮತ್ತನಾಗಿ ಹುಚ್ಚನಂತೆ ವರ್ತಿಸುವ ಈತ ಮೂರು ತಿಂಗಳ ಹಿಂದೆ ಮನೆಯ ಮೇಲೆ ಪಾಕಿಸ್ತಾನ ಬಾವುಟ ಹಾರಿಸಿದ್ದ ಎನ್ನಲಾಗಿದೆ. ಇತ್ತೀಚೆಗೆ ಗ್ರಾಮದಲ್ಲಿ ಗೂಂಡಾ ರೀತಿ ವರ್ತನೆ ಮಾಡುತ್ತಾ ಲಾಂಗು ಮಚ್ಚು ಹಿಡಿದು ಜನರನ್ನು ಹೆದರಿಸುತ್ತಿದ್ದ. ಈ ಹಿಂದೆಯೂ ಇದೇ ರೀತಿ ಬರಹಗಳನ್ನು ಬರೆದಿದ್ದು, ಗ್ರಾಮಸ್ಥರು ಎಚ್ಚರಿಸಿ ತೆರವುಗೊಳಿಸಿದ್ದರು. ಮತ್ತೆ ಇಂತಹ ದೇಶದ್ರೋಹಿ ಬರಹಗಳನ್ನು ಬರೆದಿದ್ದಾನೆ.

ಮನೆಯಲ್ಲಿ ತಂದೆ ತಾಯಿ ಮತ್ತು ಪತ್ನಿಯ ಮಾತನ್ನೂ ಕೇಳದೆ ಅವರ ಮೇಲೆಯೇ ಹಲ್ಲೆ ಮಾಡುತ್ತಿದ್ದ. ಕುಡಿತದ ಚಟಕ್ಕೆ ಬಿದ್ದ ಮತ್ತಿನಲ್ಲಿ ದೇಶ ವಿರೋಧಿ ಬರಹಗಳನ್ನು ಬರೆದಿದ್ದ ಎನ್ನಲಾಗಿದೆ. ಮದುವೆ ಆದ ಬಳಿಕ ತಾನು ತಾಲಿಬಾನ್‌ಗೆ ಸೇರಿಕೊಂಡಿದ್ದಾಗಿ ತಿಳಿಸಿ ಅಲ್ಲಾ ಎಂದು ಕೂಗುತ್ತಿದ್ದ ಎಂದು ಸಂಬಂಧಿಯೊಬ್ಬರು ತಿಳಿಸಿದ್ದಾರೆ. ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Self Harming : ಇಬ್ಬರು ಮಕ್ಕಳಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ತಾನೂ ಆಹುತಿಯಾದ ತಾಯಿ

Continue Reading

ಬೆಂಗಳೂರು ಗ್ರಾಮಾಂತರ

Road Accident: ಪಂಚರ್‌ ಹಾಕುತ್ತಿದ್ದ ಲಾರಿ ಚಾಲಕ ಬೈಕ್‌ ಡಿಕ್ಕಿಯಾಗಿ ಸಾವು, ಹಿಟ್‌ ಆ್ಯಂಡ್‌ ರನ್‌ನಲ್ಲಿ ಯುವಕ ಮೃತ

Road Accident: ಲಾರಿ ಪಂಚರ್‌ ಹಾಕುತ್ತಿದ್ದ ಚಾಲಕನಿಗೆ ಬೈಕ್‌ ಡಿಕ್ಕಿಯಾಗಿ ಚಾಲಕ ಸಾವು ಕಂಡಿದ್ದರೆ, ಇನ್ನೊಂದು ಪ್ರಕರಣದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವಿಗೀಡಾಗಿದ್ದಾರೆ.

VISTARANEWS.COM


on

road accident anekal
ಪ್ರತಾಪ್‌, ರೋಹಿತ್‌ ಕುಮಾರ್
Koo

ಆನೇಕಲ್: ಬೆಂಗಳೂರು ಗ್ರಾಮಾಂತರ ಪ್ರದೇಶ (Bangalore Rural) ಆನೇಕಲ್‌ನಲ್ಲಿ (Anekal news) ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ (Road Accident) ಇಬ್ಬರು ಅಸುನೀಗಿದ್ದಾರೆ. ಅಪಘಾತದ ಭೀಕರತೆಗೆ ಇಬ್ಬರೂ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಬೆಂಗಳೂರು ಹೊರವಲಯದ ಆನೇಕಲ್ ಥಳಿರಸ್ತೆಯ ಸುಣವಾರ ಗೇಟ್ ಸಮೀಪ ಒಂದು ಘಟನೆ ನಡೆದಿದ್ದು, ಲಾರಿ ಚಾಲಕ ಪಂಚರ್ ಆಗಿದ್ದ ಲಾರಿಯ ಟೈರ್ ಚೇಂಜ್‌ ಮಾಡುವಾಗ ಅಪಘಾತ ನಡೆದಿದೆ. ಟೈರ್ ಓಪನ್ ಮಾಡಲು ಜಾಕ್ ಹಾಕುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್ ಡಿಕ್ಕಿಯಾಗಿದೆ. ಜಾಕ್ ಸ್ಲಿಪ್ ಆಗುತ್ತಿದ್ದಂತೆ ಚಾಲಕನ ಮೇಲೆ ಲಾರಿ ಕುಸಿದಿದೆ. ಲಾರಿ ಚಾಲಕ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ದೊಡ್ಡಹಾಗಡೆ ಗ್ರಾಮದ ರೋಹಿತ್ ಕುಮಾರ್ ಸಾವನ್ನಪ್ಪಿದ ಲಾರಿ ಚಾಲಕ. ಗೊಬ್ಬರ ತುಂಬಿದ್ದ ಲಾರಿಯನ್ನು ಅನ್ಲೋಡ್ ಮಾಡಲು ಹೋಗುತ್ತಿದ್ದಾಗ ಸುಣವಾರ ಗೇಟ್ ಬಳಿ ಪಂಚರ್ ಆಗಿತ್ತು. ಮತ್ತೊಂದು ಟೈರ್ ಹಾಕಲು ಲಾರಿಯ ಕೆಳಗೆ ಮಲಗಿ ಜಾಕ್ ಹಾಕುತ್ತಿದ್ದರು. ಕತ್ತಲಿನಲ್ಲಿ ಕಾಣದೆ ಅತಿವೇಗವಾಗಿ ಬಂದ ಬೈಕ್ ಸವಾರ ಲಾರಿ ಚಾಲಕನಿಗೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ಲಾರಿಯ ಜಾಕ್ ಸ್ಲಿಪ್ ಆಗುತ್ತಿದ್ದಂತೆ ಚಾಲಕನ ತಲೆಯ ಮೇಲೆ ಲಾರಿ ಕುಸಿದಿತ್ತು. ಡಿಕ್ಕಿಯ ರಭಸಕ್ಕೆ ಮೆದುಳು ಹೊರಗೆ ಬಂದಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿದ್ದಾರೆ.

ಇನ್ನೊಂದು ಘಟನೆಯಲ್ಲಿ, ಹಿಟ್ ಆಂಡ್ ರನ್‌ಗೆ ಬೈಕ್ ಸವಾರ ಬಲಿಯಾಗಿದ್ದಾರೆ. ಬನ್ನೇರುಘಟ್ಟ ರಸ್ತೆಯ ಸಕಲವಾರ ಸಮೀಪ ಘಟನೆ ನಡೆದಿದೆ. ಪ್ರತಾಪ್(26) ಸಾವನ್ನಪ್ಪಿದ ಬೈಕ್ ಸವಾರ. ಸ್ನೇಹಿತನ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಅಪರಿಚಿತ ವಾಹ‌ನ ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಹಿಟ್ ಅಂಡ್ ರನ್ ಅಪಘಾತಕ್ಕೆ ಬೈಕ್ ಸವಾರ ಪ್ರತಾಪ್ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಮತ್ತೊಬ್ಬ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಆಧರಿಸಿ, ಅಪಘಾತ ನಡೆಸಿದ ವಾಹನದ ತಲಾಶೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ: Car Accident: ಮಾದಾವರ ಟೋಲ್‌ಗೇಟ್ ಬಳಿ ಕಾರು ಅಪಘಾತ ಪ್ರಕರಣ; ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಸಾವು

Continue Reading

ಪ್ರಮುಖ ಸುದ್ದಿ

CET Exam: ಸಿಇಟಿ ಕೀ ಉತ್ತರಗಳು ಪ್ರಕಟ, ಪಠ್ಯೇತರ ಪ್ರಶ್ನೆಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ

CET Exam: ಸರ್ಕಾರ ರಚಿಸಿದ್ದ ವಿಷಯವಾರು ಪ್ರತ್ಯೇಕ ತಜ್ಞರ ಸಮಿತಿಯ ಅಭಿಪ್ರಾಯ ಆಧರಿಸಿ ಸಿಇಟಿ ಮರುಪರೀಕ್ಷೆ ನಡೆಸದೇ ಇರಲು ಹಾಗೂ ತಪ್ಪಾದ ಪ್ರಶ್ನೆಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.

VISTARANEWS.COM


on

CET exam 2024
Koo

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ (CET exam 2024) ಪಠ್ಯೇತರ ಪ್ರಶ್ನೆಗಳಿಂದ ಉಂಟಾಗಿದ್ದ ಗೊಂದಲವನ್ನು ಸರ್ಕಾರ ಪರಿಹರಿಸಿದೆ. ಇದರ ಬೆನ್ನಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಯುಜಿಸಿಇಟಿ -2024ರ ನಾಲ್ಕು ವಿಷಯದ ಪರೀಕ್ಷೆಗಳಿಗೆ ತಾತ್ಕಾಲಿಕ ಸರಿ ಉತ್ತರಗಳನ್ನು (Key Answers) ಪ್ರಕಟಿಸಿದೆ.

ಮೇ 7ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ, ರಸಾಯನ ಶಾಸ್ತ್ರ, ಭೌತಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳ ಪ್ರಶ್ನೆ ಪತ್ರಿಕೆಯಲ್ಲಿ ಪಠ್ಯದಿಂದ ಹೊರತಾದ 50 ಪ್ರಶ್ನೆಗಳನ್ನು ಕೇಳಿದ್ದು, ಇವುಗಳನ್ನು ಕೀ ಉತ್ತರದ ಪಟ್ಟಿಯಿಂದ ಕೈ ಬಿಡಲಾಗಿದೆ. ಉಳಿದ 190 ಪ್ರಶ್ನೆಗಳಿಗೆ ಕೀ ಉತ್ತರಗಳನ್ನು ಪ್ರಾಧಿಕಾರದ kea.kar.nic.in ವೆಬ್ಸೈಟ್‌ನನಲ್ಲಿ ಪ್ರಕಟಿಸಲಾಗಿದೆ. ಇವುಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಪ್ರಾಧಿಕಾರದ ಆನ್ಲೈನ್ ಪೋರ್ಟಲ್‌ ಮೂಲಕ ಏಪ್ರಿಲ್ 30ರಂದು ಬೆಳಗ್ಗೆ 11ರಿಂದ ಮೇ 7ರ ಬೆಳಗ್ಗೆ 11ರೊಳಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.

ಈ ಮೂಲಕ ಸಿಇಟಿ ಪರೀಕ್ಷೆಯಲ್ಲಿ ಪಠ್ಯೇತರ ಪ್ರಶ್ನೆಗಳನ್ನು ಕೇಳಿ ಉಂಟಾಗಿದ್ದ ಗೊಂದಲ, ಮರುಪರೀಕ್ಷೆಗಳ ಆತಂಕ ಬಗೆಹರಿದಿದೆ. ಸರ್ಕಾರ ರಚಿಸಿದ್ದ ವಿಷಯವಾರು ಪ್ರತ್ಯೇಕ ತಜ್ಞರ ಸಮಿತಿಯ ಅಭಿಪ್ರಾಯ ಆಧರಿಸಿ ಸಿಇಟಿ ಮರುಪರೀಕ್ಷೆ ನಡೆಸದೇ ಇರಲು ಹಾಗೂ ತಪ್ಪಾದ ಪ್ರಶ್ನೆಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಇದೇ ವೇಳೆ ಇನ್ನು ಮುಂದೆ ಸಿಇಟಿ ಪ್ರಶ್ನೆ ಪತ್ರಿಕೆಯಲ್ಲಿ ಈ ರೀತಿಯ ಲೋಪಗಳಾಗದಂತೆ ಎಚ್ಚರ ವಹಿಸಲು ನಿರ್ದೇಶನ ನೀಡಲಾಗಿದೆ.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಯಿಂದ ಏ.18 ಮತ್ತು 19ರಂದು ನಡೆಸಲಾಗಿತ್ತು. ರಸಾಯನ ಶಾಸ್ತ್ರ ವಿಷಯದಲ್ಲಿ 6, ಭೌತಶಾಸ್ತ್ರ ವಿಷಯದಲ್ಲಿ 5, ಪ್ರಶ್ನೆಗಳು, ಜೀವಶಾಸ್ತ್ರ ಪರೀಕ್ಷೆಯಲ್ಲಿ 11 ಪ್ರಶ್ನೆಗಳು, ಗಣಿತದಲ್ಲಿ 9 ಪ್ರಶ್ನೆಗಳು ಪಠ್ಯಕ್ರಮದಿಂದ ಹೊರತಾಗಿದ್ದವು.

ಇದನ್ನೂ ಓದಿ: CET Exam: ಸಿಇಟಿ ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಭಾರೀ ಗೊಂದಲ, ದೂರು ನೀಡಲು ಏ.27ರವರೆಗೆ ಕಾಲಾವಕಾಶ

Continue Reading

ಕರ್ನಾಟಕ

Karnataka Weather: ಮನೆಯಿಂದ ಹೊರ ಹೋಗುವ ಮುನ್ನ ಎಚ್ಚರ; ಮೇ 3ರವರೆಗೆ ಹೆಚ್ಚಿರಲಿದೆ ಶಾಖದ ಅಲೆಗಳ ತೀವ್ರತೆ!

Karnataka Weather: ಮೇ 3ರವರೆಗೆ ಬೀದರ್, ಕಲಬುರ್ಗಿ, ವಿಜಯಪುರ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

VISTARANEWS.COM


on

Karnataka weather
Koo

ಬೆಂಗಳೂರು: ರಾಜ್ಯದಲ್ಲಿ ಏ.30ರಂದು ಮಂಗಳವಾರ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳ ತೀವ್ರತೆ (Heat wave) ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ರಾಜ್ಯದಾದ್ಯಂತ ಏ.30ರಿಂದ ಮೇ 5ರವರೆಗೆ ಒಣ ಹವೆ ಇರಲಿದೆ. ಅದೇ ರೀತಿ ಮೇ 6ರಂದು ಮಂಡ್ಯ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಕೆಲವೆಡೆ ಹಗರು ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ತಿಳಿಸಿದೆ.

ಶಾಖದ ಅಲೆಯ ಎಚ್ಚರಿಕೆ

ಮೇ 3ರವರೆಗೆ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.

ತಾಪಮಾನದ ಮುನ್ಸೂಚನೆ

ಮೇ 3ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ಬಾಗಲಕೋಟೆ, ಕಲಬುರಗಿ, ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

ಇದನ್ನೂ ಓದಿ | Karnataka Weather: ರಾಜ್ಯದಲ್ಲಿ ಮೇ 2ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಳ; ಆರೆಂಜ್‌ ಅಲರ್ಟ್‌ ಘೋಷಣೆ

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37°C ಮತ್ತು 23°C ಇರುವ ಸಾಧ್ಯತೆ ಇದೆ.

Continue Reading
Advertisement
T20 World Cup 2024
ಕ್ರೀಡೆ29 mins ago

T20 World Cup 2024: ಇಂದು ಟಿ20 ವಿಶ್ವಕಪ್​ಗೆ ಭಾರತ ತಂಡ ಪ್ರಕಟ; ಸಂಭಾವ್ಯ ತಂಡ ಹೀಗಿದೆ

Manipur Violence
ದೇಶ33 mins ago

Manipur Violence:ಮಹಿಳೆಯರ ವಿವಸ್ತ್ರ ಕೇಸ್‌; ಪೊಲೀಸರೆದುರೇ ನಡೆದಿತ್ತು ನೀಚ ಕೃತ್ಯ

taliban writing muniraju
ಕ್ರೈಂ53 mins ago

Taliban Writing: ಗೋಡೆ ಮೇಲೆ ತಾಲಿಬಾನ್‌ ಬರಹ ಬರೆದ ಪೇದೆ ಮುನಿರಾಜು ಈಗ ಮುಸ್ಲಿಂ ಅಂತೆ!

IPL 2024 Points Table
ಕ್ರೀಡೆ1 hour ago

IPL 2024 Points Table: ಡೆಲ್ಲಿ ಕ್ಯಾಪಿಟಲ್ಸ್​ ಸೋಲಿನ ಬಳಿಕ ಹೀಗಿದೆ ಅಂಕಪಟ್ಟಿ

Rohit Sharma Birthday
ಕ್ರೀಡೆ1 hour ago

Rohit Sharma Birthday: ಹಿಟ್​ಮ್ಯಾನ್​ ಖ್ಯಾತಿಯ ರೋಹಿತ್​ಗೆ 37ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ

road accident anekal
ಬೆಂಗಳೂರು ಗ್ರಾಮಾಂತರ2 hours ago

Road Accident: ಪಂಚರ್‌ ಹಾಕುತ್ತಿದ್ದ ಲಾರಿ ಚಾಲಕ ಬೈಕ್‌ ಡಿಕ್ಕಿಯಾಗಿ ಸಾವು, ಹಿಟ್‌ ಆ್ಯಂಡ್‌ ರನ್‌ನಲ್ಲಿ ಯುವಕ ಮೃತ

Baba Ramdev
ದೇಶ2 hours ago

Patanjali Case: ಪತಂಜಲಿಗೆ ಮತ್ತೆ ಸಂಕಷ್ಟ; ಬ್ಯಾನ್‌ ಆಗುತ್ತಾ ಈ ಉತ್ಪನ್ನಗಳು?

CET exam 2024
ಪ್ರಮುಖ ಸುದ್ದಿ2 hours ago

CET Exam: ಸಿಇಟಿ ಕೀ ಉತ್ತರಗಳು ಪ್ರಕಟ, ಪಠ್ಯೇತರ ಪ್ರಶ್ನೆಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ

Covishield Vaccine
ಪ್ರಮುಖ ಸುದ್ದಿ2 hours ago

Covishield Vaccine: ಕೋವಿಶೀಲ್ಡ್‌ನಿಂದ ಅಡ್ಡ ಪರಿಣಾಮವಿದೆ ಎಂದು ಕೊನೆಗೂ ಒಪ್ಪಿಕೊಂಡ ತಯಾರಿಕೆ ಕಂಪನಿ ಅಸ್ಟ್ರಾಜೆನೆಕಾ

ದೇಶ2 hours ago

Viral Video: ಆರಾಮಾಗಿ ಆಟವಾಡ್ತಿದ್ದ ಬಾಲಕಿ ಮೇಲೆ ಜರ್ಮನ್‌ ಶೆಫರ್ಡ್‌ ಡೆಡ್ಲಿ ಅಟ್ಯಾಕ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ5 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 202421 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202422 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌