ಪಂಜಾಬ್‌ ಆಮ್‌ ಆದ್ಮಿ ಸರ್ಕಾರದ ಮೊದಲ ಬಜೆಟ್‌ ಮಂಡನೆ; ರೈತರು, ವಿದ್ಯಾರ್ಥಿಗಳಿಗೆ ಬಂಪರ್‌ - Vistara News

ದೇಶ

ಪಂಜಾಬ್‌ ಆಮ್‌ ಆದ್ಮಿ ಸರ್ಕಾರದ ಮೊದಲ ಬಜೆಟ್‌ ಮಂಡನೆ; ರೈತರು, ವಿದ್ಯಾರ್ಥಿಗಳಿಗೆ ಬಂಪರ್‌

Punjab Budget 2022: ಮೊದಲ ಬಜೆಟ್‌ನಲ್ಲಿ ಶಿಕ್ಷಣ ಮತ್ತು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಹಣ ಮೀಸಲಿಟ್ಟಿರುವ ಪಂಜಾಬ್‌ ಆಪ್‌ ಸರ್ಕಾರ, ಮೊಹಲ್ಲಾ ಕ್ಲಿನಿಕ್‌ ಸ್ಥಾಪಿಸುವುದಾಗಿಯೂ ಘೋಷಿಸಿದೆ.

VISTARANEWS.COM


on

Punjab Budget
ಬಜೆಟ್‌ ಮಂಡಿಸಿದ ಪಂಜಾಬ್‌ ಹಣಕಾಸು ಸಚಿವ ಹರ್ಪಾಲ್‌ ಸಿಂಗ್‌ ಚೀಮಾ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಮೃತ್‌ಸರ್‌: ಪಂಜಾಬ್‌ನಲ್ಲಿ ಅಧಿಕಾರಕ್ಕೆ ಬಂದಿರುವ ನೂತನ ಆಮ್‌ ಆದ್ಮಿ ಸರ್ಕಾರ ಇಂದು ವಿಧಾನಸಭೆಯಲ್ಲಿ ಮೊದಲ ಬಜೆಟ್‌ ಮಂಡನೆ ಮಾಡಿದ್ದು, ಅದರಲ್ಲಿ ರಾಜ್ಯದ ರೈತರು ಮತ್ತು ವಿದ್ಯಾರ್ಥಿಗಳಿಗೆ ಬಂಪರ್‌ ಬಹುಮಾನ ಕೊಟ್ಟಿದೆ. ಕೃಷಿ ವಲಯ ಸುಧಾರಣೆಗಾಗಿ 11,560 ಸಾವಿರ ಕೋಟಿ ರೂಪಾಯಿ ಮತ್ತು ಪ್ರತಿವರ್ಷ ಬೆಳೆ ಕೊಳೆ ಸುಡುವಿಕೆಯಿಂದ ಉಂಟಾಗುತ್ತಿರುವ ವಾಯುಮಾಲಿನ್ಯ ಸಮಸ್ಯೆ ಪರಿಹಾರಕ್ಕಾಗಿ 200ಕೋಟಿ ರೂ. ಮೀಸಲಿಟ್ಟಿದೆ. ಇನ್ನು ಕೃಷಿಭೂಮಿ ಕೊಳವೆಬಾವಿಗಳಿಗೆ ಉಚಿತ ವಿದ್ಯುತ್‌ ಪೂರೈಕೆ ಮಾಡಲು 6,947 ಕೋಟಿ ರೂ.ಮೀಸಲಿಟ್ಟಿದೆ. ಇನ್ನೊಂದೆಡೆ ಶಿಕ್ಷಣಕ್ಷೇತ್ರಕ್ಕೂ ಬಜೆಟ್‌ನಲ್ಲಿ ಮಹತ್ವ ನೀಡಲಾಗಿದೆ. ಸಾಮಾನ್ಯವಾಗಿ ಪ್ರಾಥಮಿಕ ಮತ್ತು ಉನ್ನತ ಶಿಕ್ಷಣಕ್ಕೆ ಪ್ರತಿವರ್ಷ ಬಜೆಟ್‌ನಲ್ಲಿ ಮೀಸಲಿಡುವ ಹಣಕ್ಕಿಂತ ಈ ಬಾರಿ ಶೇ.೧೬ರಷ್ಟು ಹೆಚ್ಚು ಹಂಚಿಕೆ ಮಾಡಲಾಗಿದೆ. ವಿದ್ಯಾರ್ಥಿ ವೇತನಕ್ಕಾಗಿಯೇ 30 ಕೋಟಿ ರೂಪಾಯಿ ಮೀಸಲಾಗಿಡಲಾಗಿದೆ.

ಇಂದು ಪಂಜಾಬ್‌ ಹಣಕಾಸು ಸಚಿವ ಹರ್ಪಾಲ್‌ ಸಿಂಗ್‌ ಚೀಮಾ ತಮ್ಮ ಮೊದಲ ಬಜೆಟ್‌ ಮಂಡನೆ ಮಾಡಿದ್ದಾರೆ. ಈ ಬಜೆಟ್‌ ಮೊತ್ತ 1.55860 ಕೋಟಿ ರೂಪಾಯಿಯಾಗಿದ್ದು, ಕಳೆದ ವರ್ಷಕ್ಕಿಂತ ಶೇ.47ರಷ್ಟು ಹೆಚ್ಚು. ಈ ಬಜೆಟ್‌ನಲ್ಲಿ ಬಹುಮುಖ್ಯವಾಗಿ ಕೃಷಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ ಸಿಕ್ಕಿದೆ. ʼಇನ್ನು 5ವರ್ಷಗಳಲ್ಲಿ 16 ಮೆಡಿಕಲ್‌ ಕಾಲೇಜುಗಳನ್ನು ರಾಜ್ಯದಲ್ಲಿ ನಿರ್ಮಾಣ ಮಾಡಲಾಗುವುದು. ಅದಾದರೆ ವೈದ್ಯಕೀಯ ಕಾಲೇಜುಗಳ ಸಂಖ್ಯೆ 25ಕ್ಕೆ ಏರಿಕೆಯಾಗಲಿದೆʼ ಎಂದು ಬಜೆಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ. ಹಾಗೇ, ಎಲ್ಲ ಸರ್ಕಾರಿ ಶಾಲೆಗಳ ಛಾವಣಿ ಮೇಲೆ ಸೋಲಾರ್‌ ವ್ಯವಸ್ಥೆ ಅಳವಡಿಸಲು ೧೦೦ ಕೋಟಿ ರೂ. ಮೀಸಲಿಡಲಾಗಿದೆ.

ಇದನ್ನೂ ಓದಿ: ಬಿಹಾರ, ಕೇರಳ, ಪಂಜಾಬ್‌, ರಾಜಸ್ಥಾನ, ಪಶ್ಚಿಮ ಬಂಗಾಳದಲ್ಲಿ ಆರ್ಥಿಕ ಬಿಕ್ಕಟ್ಟು ತೀವ್ರ ಎಂದ ಆರ್‌ಬಿಐ

ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ನಿರ್ವಹಣೆಗಾಗಿ ಎಲ್ಲ ಜಿಲ್ಲೆಗಳಲ್ಲೂ ಸೈಬರ್‌ ಕಂಟ್ರೋಲ್‌ ರೂಮ್‌ಗಳನ್ನು ರಚಿಸಲು ಮತ್ತು ಎಲ್ಲ ಪೊಲೀಸ್‌ ಮಹಿಳಾ ಮಿತ್ರ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲು 30 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಹಾಗೇ, ೨೦೨೪ರೊಳಗೆ ಪಟಿಯಾಲಾ ಮತ್ತು ಫರೀದ್‌ಕೋಟ್‌ಗಳಲ್ಲಿ ತಲಾ ಒಂದು ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆಗಳ ನಿರ್ಮಾಣ ಮಾಡುವುದಾಗಿ ಪಂಜಾಬ್‌ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದೆ. ಹಾಗೇ, ೨೦೨೭ರ ಹೊತ್ತಿಗೆ ಇನ್ನೂ ಮೂರು ಸೂಪರ್‌ ಸ್ಪೆಶಾಲಿಟಿ ಹಾಸ್ಟಿಟಲ್‌ಗಳನ್ನು ನಿರ್ಮಿಸುವುದಾಗಿಯೂ ತಿಳಿಸಿದೆ. ದೆಹಲಿ ಮಾದರಿಯಲ್ಲೇ ಪಂಜಾಬ್‌ನಲ್ಲೂ ಮೊಹಲ್ಲಾ ಕ್ಲಿನಿಕ್‌ಗಳನ್ನು ಸ್ಥಾಪಿಸಲು ಆಪ್‌ ಸರ್ಕಾರ ನಿರ್ಧರಿಸಿದ್ದು, ಅದಕ್ಕಾಗಿ 77ಕೋಟಿ ರೂಪಾಯಿ ಮೀಸಲಾಗಿಟ್ಟಿದೆ. ಈ ವರ್ಷ ಒಟ್ಟು ೧೧೭ ಕ್ಲಿನಿಕ್‌ಗಳು ಸ್ಥಾಪನೆಯಾಗಲಿವೆ. ಅದರಲ್ಲಿ 75 ಆಗಸ್ಟ್‌ನಿಂದ ಕಾರ್ಯಾರಂಭ ಮಾಡಲಿವೆ. ಮೊಹಲ್ಲಾ ಕ್ಲಿನಿಕ್‌ಗಳು ಪ್ರಾಥಮಿಕ ಆರೋಗ್ಯಕೇಂದ್ರಗಳಾಗಿದ್ದು, ವೈದ್ಯರು, ನರ್ಸ್‌ ಇರುತ್ತಾರೆ. ವೈದ್ಯಕೀಯ ಸೌಲಭ್ಯಗಳು ಹೆಚ್ಚಾಗಿರುತ್ತವೆ. ಇಲ್ಲಿ ಕನ್ಸಲ್ಟೇಶನ್‌ ಉಚಿತವಾಗಿರಲಿದ್ದು, ಬಡವರಿಗೆ ಅನುಕೂಲವಾಗಲಿದೆ.

ಇದನ್ನೂ ಓದಿ: ಬಿಹಾರ, ಕೇರಳ, ಪಂಜಾಬ್‌, ರಾಜಸ್ಥಾನ, ಪಶ್ಚಿಮ ಬಂಗಾಳದಲ್ಲಿ ಆರ್ಥಿಕ ಬಿಕ್ಕಟ್ಟು ತೀವ್ರ ಎಂದ ಆರ್‌ಬಿಐ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Arvind Kejriwal: ಪ್ಯಾಂಟ್‌ ಲೂಸ್‌ ಆಗಿದೆ, ಒಂದು ಬೆಲ್ಟ್‌ ಕೊಡಿ; ಕೋರ್ಟ್‌ಗೆ ಅರವಿಂದ್‌ ಕೇಜ್ರಿವಾಲ್‌ ಮನವಿ‌

Arvind Kejriwal: ಅರವಿಂದ್‌ ಕೇಜ್ರಿವಾಲ್‌ ಅವರು ಸಿಬಿಐ ಕಸ್ಟಡಿಯಲ್ಲಿರುವಾಗ ಮನೆಯಿಂದ ತರುವ ಊಟ ಮಾಡಬಹುದು, ವೈದ್ಯರು ಸೂಚಿಸಿದ ಮಾತ್ರೆಗಳನ್ನು ಸೇವಿಸಬಹುದು ಹಾಗೂ ಪ್ರತಿ ದಿನ ಅರ್ಧ ಗಂಟೆ ಪತ್ನಿಯನ್ನು ಮತ್ತು ಇನ್ನರ್ಧ ಗಂಟೆ ವಕೀಲರನ್ನು ಭೇಟಿಯಾಗಬಹುದು ಎಂದು ನ್ಯಾಯಾಲಯವು ಅನುಮತಿ ನೀಡಿದೆ.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ಹಗರಣ (Delhi Excise Policy Case) ನಡೆದಿದೆ ಎನ್ನಲಾದ ಪ್ರಕರಣದಲ್ಲಿ ತಿಹಾರ ಜೈಲುಪಾಲಾಗಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರೀಗ ಸಿಬಿಐ ಕಸ್ಟಡಿಯಲ್ಲಿದ್ದಾರೆ. ಮೂರು ದಿನ ಸಿಬಿಐ ಕಸ್ಟಡಿಗೆ ವಹಿಸಿ ಬುಧವಾರ (ಜೂನ್‌ 26) ದೆಹಲಿಯ ರೋಸ್‌ ಅವೆನ್ಯೂ ಕೋರ್ಟ್‌ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ, ಅರವಿಂದ್‌ ಕೇಜ್ರಿವಾಲ್‌ ಅವರು ಕೋರ್ಟ್‌ಗೆ ವಿಶೇಷ ಮನವಿ ಮಾಡಿದ್ದಾರೆ. “ತಿಹಾರ ಜೈಲಿಗೆ ಹೋಗುವಾಗ ಪ್ಯಾಂಟ್‌ ಹಿಡಿದುಕೊಂಡೇ ಹೋಗಬೇಕಾಗಿದೆ. ಹಾಗಾಗಿ, ನನಗೊಂದು ಬೆಲ್ಟ್‌ ಬಳಸಲು ಅವಕಾಶ ಮಾಡಿಕೊಡಿ” ಎಂದು ಮನವಿ ಮಾಡಿದ್ದಾರೆ. ಇದಕ್ಕೆ ನ್ಯಾಯಾಲಯವು ಅನುಮತಿ ನೀಡಿದೆ.

ಅರವಿಂದ್‌ ಕೇಜ್ರಿವಾಲ್‌ ಅವರು ಸಿಬಿಐ ಕಸ್ಟಡಿಯಲ್ಲಿರುವಾಗ ಮನೆಯಿಂದ ತರುವ ಊಟ ಮಾಡಬಹುದು, ವೈದ್ಯರು ಸೂಚಿಸಿದ ಮಾತ್ರೆಗಳನ್ನು ಸೇವಿಸಬಹುದು ಹಾಗೂ ಪ್ರತಿ ದಿನ ಅರ್ಧ ಗಂಟೆ ಪತ್ನಿಯನ್ನು ಮತ್ತು ಇನ್ನರ್ಧ ಗಂಟೆ ವಕೀಲರನ್ನು ಭೇಟಿಯಾಗಬಹುದು ಎಂದು ಅನುಮತಿ ನೀಡಿದೆ. ಹಾಗೆಯೇ, ಓದಲು ಭಗವದ್ಗೀತೆ, ಒಂದು ಬೆಲ್ಟ್‌ ಬಳಕೆ ಮಾಡಲು ಕೂಡ ರೋಸ್‌ ಅವೆನ್ಯೂ ಕೋರ್ಟ್‌ ಸಮ್ಮತಿ ಸೂಚಿಸಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರು ಮನೆಯ ಊಟ ಸೇವಿಸಲು ಅನಮತಿ ನೀಡಲಾಗಿದೆ ಎಂದು ತಿಳಿದುಬಂದಿದೆ.

Arvind Kejriwal

ಏನಿದು ಪ್ರಕರಣ?

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಅರವಿಂದ್‌ ಕೇಜ್ರಿವಾಲ್‌ ಮಾತ್ರವಲ್ಲ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರನ್ನೂ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್​ ಅವರಿಗೆ ಇ.ಡಿ. 9 ಬಾರಿ ನೋಟಿಸ್ ಜಾರಿ ಮಾಡಿತ್ತು. ಬಳಿಕ ಮಾರ್ಚ್​ 21ರಂದು ಅವರನ್ನು ಬಂಧಿಸಲಾಗಿತ್ತು. ಇದಾದ ಬಳಿಕ ಅವರು ಮಧ್ಯಂತರ ಜಾಮೀನು ಪಡೆದು ಒಂದು ತಿಂಗಳು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಜೈಲಿಗೆ ಮರಳುವಂತೆ ಕೋರ್ಟ್‌ ಈ ಹಿಂದೆಯೇ ಆದೇಶಿಸಿತ್ತು. ಅದರಂತೆ ಅವರು ಜೈಲಿಗೆ ತೆರಳಿದ್ದರು.

ಇದನ್ನೂ ಓದಿ: Arvind Kejriwal : ಜಾಮೀನು ಅರ್ಜಿ ವಿಚಾರಣೆಗೂ ಮುನ್ನ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಸಿಬಿಐ

Continue Reading

Latest

Railway New Rules: ರೈಲು ಪ್ರಯಾಣಿಕರೇ, ಬರ್ತ್‌ನಲ್ಲಿ ಮಲಗುವ ಕುರಿತ ಈ ಹೊಸ ರೂಲ್ಸ್‌ ನೆನಪಿನಲ್ಲಿರಲಿ!

Railway New Rules : ಇನ್ನು ಮುಂದೆ ರೈಲಿನ ಮಧ್ಯದ ಸೀಟ್‌ನಲ್ಲಿ ಪ್ರಯಾಣಿಸುವ ಪ್ರಯಾಣಿಕರು ತಮ್ಮ ಸೀಟ್ ಅನ್ನು ತೆರೆದ ನಂತರ ಉಕ್ಕಿನ ಚೌಕಟ್ಟಿಗೆ ಲಗತ್ತಿಸಲಾದ 2 ಸರಪಳಿಗಳಿಂದ ಭದ್ರಗೊಳಿಸಿದ್ದು ಖಚಿತಪಡಿಸಿಕೊಳ್ಳಬೇಕು. ಪ್ರಯಾಣ ಮುಗಿದ ನಂತರ ಅಥವಾ ಮಲಗಿದ ನಂತರ ಅದನ್ನು ಮೊದಲಿನಂತೆ ಮಡಚಿ ಇಡಬೇಕು. ಕೆಳಗಿನ ಪ್ರಯಾಣಿಕರಿಗೆ ಹಗಲಿನಲ್ಲಿ ಕುಳಿತುಕೊಳ್ಳಲು ಅನಾನುಕೂಲ ಆಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆ ಈ ಬದಲಾವಣೆ ಮಾಡಿದೆ.

VISTARANEWS.COM


on

Railway New Rules
Koo

ನವದೆಹಲಿ: ಭಾರತೀಯ ರೈಲ್ವೆಯು (Railway) ಎಸಿ ಮತ್ತು ಸ್ಲೀಪರ್ ಕೋಚ್‌ಗಳಲ್ಲಿ ಮಧ್ಯಮ ಬರ್ತ್‌ನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಕೆಲವು ನಿಯಮವನ್ನು (Railway New Rules) ಜಾರಿಗೆ ತಂದಿದೆ. ಪ್ರಯಾಣಿಕರ ಸೌಕರ್ಯಗಳನ್ನು ಗಮನದಲ್ಲಿಟ್ಟುಕೊಂಡು ಮತ್ತು ರೈಲು ಪ್ರಯಾಣವನ್ನು ಆರಾಮದಾಯಕವಾಗಿಲು ಈ ಬದಲಾವಣೆಗಳನ್ನು ತರಲಾಗಿದೆ. ಮಧ್ಯಮ ಬರ್ತ್‌ನಲ್ಲಿ ಪ್ರಯಾಣಿಸುವ ಪ್ರಯಾಣಿಕರು ತಮ್ಮ ಬರ್ತ್ ಅನ್ನು ತೆರೆದ ನಂತರ ಉಕ್ಕಿನ ಚೌಕಟ್ಟಿಗೆ ಲಗತ್ತಿಸಲಾದ 2 ಸರಪಳಿಗಳಿಂದ ನಿಮ್ಮ ಬರ್ತ್ ಅನ್ನು ಭದ್ರಗೊಳಿಸಬೇಕು. ಪ್ರಯಾಣ ಮುಗಿದ ನಂತರ ಅಥವಾ ಮಲಗಿದ ನಂತರ ಅದನ್ನು ಮೊದಲಿನಂತೆ ಮಡಚಿ ಇಡಬೇಕು.

ಭಾರತೀಯ ರೈಲ್ವೆಯ ಕೈಪಿಡಿ, ಸಂಪುಟ-1ರ ಪ್ಯಾರಾ 652ರ ತಿದ್ದುಪಡಿಯ ಮೂಲಕ 3 ಹಂತದ ಸ್ಲೀಪರ್ ಕೋಚ್ ಗಳ ಮಧ್ಯಮ ಬರ್ತ್ ಗಳಲ್ಲಿ ಮಲಗುವ ಪ್ರಯಾಣಿಕರ ವಸತಿಗೆ ಸಂಬಂಧಿಸಿದ ಸುತ್ತೋಲೆಯಲ್ಲಿ ಭಾರತೀಯ ರೈಲ್ವೆ ಈ ತಿದ್ದುಪಡಿಯನ್ನು ಮಾಡಿದೆ. ಎಸಿ ಮತ್ತು ಸ್ಲೀಪರ್ ಕೋಚ್ ಗಳಲ್ಲಿ ಮಧ್ಯಮ ಬರ್ತ್ ಅನ್ನು ನಿಗದಿಪಡಿಸಿದ ಪ್ರಯಾಣಿಕರು ರೈಲು ಪ್ರಯಾಣದ ಸಮಯದಲ್ಲಿ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಮಾತ್ರ ಬರ್ತ್ ಅನ್ನು ತೆರೆದಿರಬೇಕು ಎಂದು ಷರತ್ತು ವಿಧಿಸಲಾಗಿದೆ.

ಈ ಹಿಂದೆ ರಾತ್ರಿ 9ರಿಂದ ಬೆಳಗ್ಗೆ 6ರವರೆಗೆ ಒಟ್ಟು 9 ಗಂಟೆಗಳ ಕಾಲ ತೆರೆದಿಡಬಹುದಾಗಿದ್ದ ಬರ್ತ್ ಅನ್ನು 8 ಗಂಟೆಗಳ ಕಾಲಾವಧಿಗೆ ಇಳಿಸಲಾಗಿದೆ. ಕೆಳ ಬರ್ತ್ ನ ಪ್ರಯಾಣಿಕರಿಗೆ ಹಗಲಿನಲ್ಲಿ ಕುಳಿತುಕೊಳ್ಳಲು ಸಾಧ್ಯವಾಗದ ಹಿನೆಲೆಯಲ್ಲಿ ಈ ಬಗ್ಗೆ ಪ್ರಯಾಣಿಕರು ದೂರು ದಾಖಲಿಸಿದ ಕಾರಣ ಭಾರತೀಯ ರೈಲ್ವೆ ಈ ಬದಲಾವಣೆ ಮಾಡಿದೆ. ಈ ಷರತ್ತಿನ ಮೂಲಕ ಕೆಳ ಬರ್ತ್ ಪ್ರಯಾಣಿಕರು ಬೆಳಗ್ಗೆ 6 ಗಂಟೆಯ ನಂತರ ತಮ್ಮ ಬರ್ತ್ ಅನ್ನು ಮಡಚುವಂತೆ ಮಧ್ಯಮ ಬರ್ತ್ ಪ್ರಯಾಣಿಕರಿಗೆ ವಿನಂತಿಸಬಹುದು. ಸೈಡ್ ಲೋವರ್ ಬರ್ತ್ ನ ಪ್ರಯಾಣಿಕರು ಹಗಲಿನಲ್ಲಿ ಸೈಡ್ ಮೇಲಿನ ಬರ್ತ್ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಅವಕಾಶ ನೀಡಬೇಕು. ಆದರೆ ಸೈಡ್ ಮೇಲಿನ ಬರ್ತ್ ಪ್ರಯಾಣಿಕರು ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಸೈಡ್ ಲೋವರ್ ಬರ್ತ್ ನಲ್ಲಿ ಕುಳಿತುಕೊಳ್ಳುವಂತಿಲ್ಲ ಎಂದು ಭಾರತೀಯ ರೈಲ್ವೆ ಸುತ್ತೋಲೆಯಲ್ಲಿ ತಿಳಿಸಿದೆ. ಇದು ಎಲ್ಲಾ ವಿಧದ ಸೈಡ್ ಬರ್ತ್ ಪ್ರಯಾಣಿಕರಿಗೂ ಅನ್ವಯಿಸುತ್ತದೆ.

ಇದನ್ನೂ ಓದಿ: ಸರ್ಜಾಪುರ-ಹೆಬ್ಬಾಳದ 3ಎ ಮೆಟ್ರೋ ಮಾರ್ಗ ಯಾವಾಗ ಪೂರ್ಣ?

ಆದರೆ ಭಾರತೀಯ ರೈಲ್ವೆಯ ಈ ನಿಯಮ ಅನಾರೋಗ್ಯ ಪೀಡಿತ ವ್ಯಕ್ತಿಗಳು, ಗರ್ಭಿಣಿಯರು ಹಾಗೂ ಅಂಗವಿಕಲರಿಗೆ ವಿನಾಯಿತಿ ನೀಡಲು ಹಾಗೂ ಅವರಿಗೆ ಹೆಚ್ಚು ಕಾಲ ಮಲಗಲು ಅವಕಾಶ ನೀಡುವಂತೆಯೂ ಅವಕಾಶ ಕಲ್ಪಿಸಿದೆ.
ಇತ್ತೀಚೆಗೆ ನವದೆಹಲಿಗೆ ತೆರಳುತ್ತಿದ್ದ ರೈಲಿನಲ್ಲಿ ಮಧ್ಯಮ ಬರ್ತ್ ನಲ್ಲಿ ಮಲಗಿದ್ದ ಪ್ರಯಾಣಿಕ ಸರಿಯಾಗಿ ಸರಪಳಿಯನ್ನು ಹಾಕದೇ ಇದ್ದ ಕಾರಣ ಬರ್ತ್ ಕುಸಿದು ಕೆಳ ಬರ್ತ್‌ನಲ್ಲಿ ಮಲಗಿದ್ದ 62 ವರ್ಷದ ವ್ಯಕ್ತಿಯ ಮೇಲೆ ಬಿದ್ದಿತ್ತು. ಇದರಿಂದ ಆ ವ್ಯಕ್ತಿಯ ಕತ್ತಿನ ಮೂಳೆ ಮುರಿದು ಆತ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದನ್ನು ಸ್ಮರಿಸಬಹುದು.

Continue Reading

ದೇಶ

Fishermen Arrest: ಶ್ರೀಲಂಕಾ ನೌಕಾಪಡೆಯ ನಾವಿಕ ಸಾವು; 10 ಭಾರತೀಯ ಮೀನುಗಾರರ ವಿರುದ್ಧ ಕೇಸ್‌ ದಾಖಲು

Fishermen Arrest: ಮೀನುಗಾರರ ದೋಣಿ ವಶಕ್ಕೆ ಪಡೆಯುವ ಕಾರ್ಯಾಚರಣೆ ವೇಳೆ ನೌಕಾಪಡೆಯ ವಿಶೇಷ ಬೋಟ್ ಸ್ಕ್ವಾಡ್ರನ್‌ನ ಹಿರಿಯ ನಾವಿಕ ಗಂಭಿರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅರೆಸ್ಟ್‌ ಆಗಿರುವ ಮೀನುಗಾರರನ್ನು ಕಂಕೆಸಂತುರೈ ಬಂದರಿಗೆ ಕರೆ ತರಲಾಗಿದ್ದು, ಮೈಲಾಡಿ ಮೀನುಗಾರರ ಇನ್ಸ್‌ಪೆಕ್ಟರ್‌ಗೆ ವಶಕ್ಕೆ ಒಪ್ಪಿಸಲಾಗಿದೆ. ಇನ್ನು ಜಾಫ್ನಾದಲ್ಲಿರುವ ಮಲ್ಲಕಂ ಕೋರ್ಟ್‌ನಲ್ಲಿ ಬಿ ರಿಪೋರ್ಟ್‌ ದಾಖಲಿಸಲಾಗಿದೆ.

VISTARANEWS.COM


on

Fishermen Arrest
Koo

ಕೊಲಂಬೋ: ಶ್ರೀಲಂಕಾ(Shrilanka)ದ ಸಮುದ್ರ ಗಡಿಯಲ್ಲಿ ಅಕ್ರಮ ಮೀನುಗಾರಿಕೆ(Illegal Fisheries) ಮಾಡುತ್ತಿದ್ದ ಆರೋಪದಲ್ಲಿ ಅರೆಸ್ಟ್‌(Fishermen Arrest) ಆಗಿರುವ 10 ಮೀನುಗಾರರ ವಿರುದ್ಧ ನೌಕಾಪಡೆಯ ನಾವಿಕ ಹತ್ಯೆ ಪ್ರಕರಣ ದಾಖಲಿಸಲಾಗಿದೆ. ಸೋಮವಾರವಷ್ಟೇ ಈ ಮೀನುಗಾರರನ್ನು ಅಕ್ರಮ ಮೀನುಗಾರಿಕೆ ಆರೋಪದಲ್ಲಿ ಅರೆಸ್ಟ್‌ ಮಾಡಲಾಗಿದೆ. ಅವರ ದೋಣಿಯನ್ನು ವಶಕ್ಕೆ ಪಡೆಯುವ ಕಾರ್ಯಾಚರಣೆ ವೇಳೆ ನೌಕಾಪಡೆ ನಾವಿಕ ಸಾವನ್ನಪ್ಪಿದ್ದರು. ಇದೀಗ ಇದೇ ಪ್ರಕರಣವನ್ನು ಮೀನುಗಾರರ ವಿರುದ್ಧ ಶ್ರೀಲಂಕಾ ಸರ್ಕಾರ ನಿರ್ಧರಿಸಿದೆ.

ಮೀನುಗಾರರ ದೋಣಿ ವಶಕ್ಕೆ ಪಡೆಯುವ ಕಾರ್ಯಾಚರಣೆ ವೇಳೆ ನೌಕಾಪಡೆಯ ವಿಶೇಷ ಬೋಟ್ ಸ್ಕ್ವಾಡ್ರನ್‌ನ ಹಿರಿಯ ನಾವಿಕ ಗಂಭಿರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅರೆಸ್ಟ್‌ ಆಗಿರುವ ಮೀನುಗಾರರನ್ನು ಕಂಕೆಸಂತುರೈ ಬಂದರಿಗೆ ಕರೆ ತರಲಾಗಿದ್ದು, ಮೈಲಾಡಿ ಮೀನುಗಾರರ ಇನ್ಸ್‌ಪೆಕ್ಟರ್‌ಗೆ ವಶಕ್ಕೆ ಒಪ್ಪಿಸಲಾಗಿದೆ. ಇನ್ನು ಜಾಫ್ನಾದಲ್ಲಿರುವ ಮಲ್ಲಕಂ ಕೋರ್ಟ್‌ನಲ್ಲಿ ಬಿ ರಿಪೋರ್ಟ್‌ ದಾಖಲಿಸಲಾಗಿದೆ.

ಮೃತ ನಾವಿಕನ ಮರಣೋತ್ತರ ಪರೀಕ್ಷೆಯನ್ನು ಜಾಫ್ನಾ ಮ್ಯಾಜಿಸ್ಟ್ರೇಟ್ ನಡೆಸಿದರು. ನಾವಿಕನ ಸಾವು ಅಪಘಾತವಾಗಿದ್ದು, ಬೆನ್ನುಹುರಿಗೆ ಹಾನಿಯಾಗಿದೆ ಎಂದು ಪರೀಕ್ಷೆಯಲ್ಲಿ ಬಯಲಾಗಿದೆ. ಕುರುನೆಗಾಲ ಜಿಲ್ಲೆಯಲ್ಲಿ ಮೃತ ನಾವಿಕನ ಅಂತ್ಯ ಸಂಸ್ಕಾರ ನಡೆಯಲಿದೆ.

ಶ್ರೀಲಂಕಾದಲ್ಲಿ ಅಕ್ರಮ ಮೀನುಗಾರಿಕೆ ಆರೋಪದ ಮೇಲೆ ಭಾನುವಾರ 18 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ ಮತ್ತು ಮೂರು ಮೀನುಗಾರಿಕಾ ಹಡಗುಗಳನ್ನು ಲಂಕಾ ನೌಕಪಡೆ ವಶಕ್ಕೆ ಪಡೆದುಕೊಂಡಿದೆ ಎಂದು ಮಾಧ್ಯಮ ವರದಿ ಮಾಡಿತ್ತು. ಶನಿವಾರ ರಾತ್ರಿ ಡೆಲ್ಫ್ಟ್ ದ್ವೀಪಗಳ ಬಳಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಉತ್ತರ ಸಮುದ್ರದಿಂದ ಮೀನುಗಾರರನ್ನು ಬಂಧಿಸಲಾಗಿದೆ ಎಂದು ನ್ಯೂಸ್ ಪೋರ್ಟಲ್ ದಿ ನ್ಯೂಸ್ ಫಸ್ಟ್ ವರದಿ ಮಾಡಿದೆ.

ಬಂಧಿತ ಮೀನುಗಾರರನ್ನು ಮುಂದಿನ ಕಾನೂನು ಕ್ರಮಗಳಿಗಾಗಿ ಕಂಕೆಸಂತುರೈ ಮೀನುಗಾರಿಕಾ ಬಂದರಿಗೆ ಕರೆದೊಯ್ಯಲಾಗುವುದು ಎಂದು ನೌಕಾಪಡೆಯ ವಕ್ತಾರ ಕ್ಯಾಪ್ಟನ್ ಗಯಾನ್ ವಿಕ್ರಮಸೂರ್ಯ ತಿಳಿಸಿದ್ದಾರೆ. ಕಳೆದ ವಾರ, ದ್ವೀಪ ರಾಷ್ಟ್ರದ ನೀರಿನಲ್ಲಿ ಬೇಟೆಯಾಡಿದ ಆರೋಪದ ಮೇಲೆ ನಾಲ್ವರು ಭಾರತೀಯ ಮೀನುಗಾರರನ್ನು ಬಂಧಿಸಲಾಗಿತ್ತು. ಅವರ ಟ್ರಾಲರ್ ನ್ನು ಶ್ರೀಲಂಕಾ ನೌಕಾಪಡೆ ವಶಪಡಿಸಿಕೊಂಡಿತ್ತು.

ಇದಕ್ಕೂ ಮುನ್ನಾ ಶ್ರೀಲಂಕಾಕ್ಕೆ ಸೇರಿದ ಜಲಮಾರ್ಗದಲ್ಲಿ ಅಕ್ರಮ ಮೀನುಗಾರಿಕೆ ಆರೋಪದ ಮೇರೆಗೆ 180 ಕ್ಕೂ ಹೆಚ್ಚು ಭಾರತೀಯ ಮೀನುಗಾರರನ್ನು ಬಂಧಿಸಲಾಗಿತ್ತು. ಅವರ 25 ಟ್ರಾಲರ್ ಗಳನ್ನು ವಶಕ್ಕೆ ಪಡೆಯಲಾಗಿತ್ತು. ಕಳೆದ ವರ್ಷ ಸುಮಾರು 240 ರಿಂದ 245 ಮಂದಿಯನ್ನು ಬಂಧಿಸಲಾಗಿತ್ತು ಎಂದು ಶ್ರೀಲಂಕಾದ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Bulldozer: ‌ಉತ್ತರ ಪ್ರದೇಶದಲ್ಲಿ ಮತ್ತೆ ಬುಲ್ಡೋಜರ್‌ ಸದ್ದು; ರಸ್ತೆಯಲ್ಲಿ ಗುಂಡು ಹಾರಿಸಿದವರ ಹೋಟೆಲ್ ಧ್ವಂಸ!

Continue Reading

ಪ್ರಮುಖ ಸುದ್ದಿ

NEET Paper Leak: ನೀಟ್‌ ಅಕ್ರಮ; 2 ಆರೋಪಿಗಳನ್ನು ಬಂಧಿಸಿದ ಸಿಬಿಐ, ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಇವರ ಪಾತ್ರವೇನು?

NEET Paper Leak: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಕೇಂದ್ರ ಸರ್ಕಾರವು ಸಿಬಿಐಗೆ ವಹಿಸಿದೆ. ಇದರ ಬೆನ್ನಲ್ಲೇ, ಸಿಬಿಐ ಅಧಿಕಾರಿಗಳು ಬಿಹಾರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

VISTARANEWS.COM


on

NEET Paper Leak
Koo

ಪಟನಾ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET UG 2024) ಪ್ರಶ್ನೆಪತ್ರಿಕೆಗಳನ್ನು ಸೋರಿಕೆ (NEET Paper Leak) ಮಾಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಿಬಿಐ ಅಧಿಕಾರಿಗಳು ಬಿಹಾರದಲ್ಲಿ ಇಬ್ಬರು ಆರೋಪಿಗಳನ್ನು ಗುರುವಾರ (ಜೂನ್‌ 27) ಬಂಧಿಸಿದ್ದಾರೆ. ಪ್ರಕರಣವನ್ನು ಸಿಬಿಐಗೆ (CBI) ವಹಿಸಿದ ಬಳಿಕ ಇದೇ ಮೊದಲ ಬಾರಿಗೆ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಬಿಹಾರದ ಪಟನಾದವರಾದ ಮನೀಶ್‌ ಕುಮಾರ್‌ ಹಾಗೂ ಆಶುತೋಷ್‌ ಎಂಬುವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಮೊದಲು ಇಬ್ಬರೂ ಆರೋಪಿಗಳನ್ನು ವಿಚಾರಣೆಗೆ ಕರೆದ ಅಧಿಕಾರಿಗಳು, ನಂತರ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಮನೀಶ್‌ ಕುಮಾರ್‌ ಹಾಗೂ ಆಶುತೋಷ್‌ ಅವರು ವಿದ್ಯಾರ್ಥಿಗಳಿಗೆ ಖಾಲಿ ಇರುವ ಶಾಲೆಯೊಂದಕ್ಕೆ ತೆರಳಲು ವಾಹನದ ವ್ಯವಸ್ಥೆ ಮಾಡಿದ್ದರು. ಖಾಲಿ ಇರುವ ಶಾಲೆಯಲ್ಲಿ ಹಲವು ವಿದ್ಯಾರ್ಥಿಗಳಿಗೆ ಇವರು ಸೋರಿಕೆಯಾದ ಪ್ರಶ್ನೆಪತ್ರಿಕೆಯನ್ನು ಹಂಚಿದ್ದರು ಎಂದು ತಿಳಿದುಬಂದಿದೆ. ಕೆಲ ವಿದ್ಯಾರ್ಥಿಗಳಿಗೆ ಇವರೇ ತಮ್ಮ ಮನೆಯಲ್ಲಿ ಆಶ್ರಯ ಕೂಡ ನೀಡಿದ್ದರು ಎನ್ನಲಾಗಿದೆ.

ಇಬ್ಬರೂ ದುರುಳರು ಪಟನಾದಲ್ಲಿರುವ ಬಾಯ್ಸ್‌ ಹಾಸ್ಟೆಲ್‌ನಲ್ಲಿ ನೀಟ್‌ ಬರೆಯುವ ಅಭ್ಯರ್ಥಿಗಳು ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದರು. ಮೇ 5ರಂದು ನೀಟ್‌ ಪರೀಕ್ಷೆ ನಡೆದಿದ್ದು, ಮೇ 4ರಂದು ಅಭ್ಯರ್ಥಿಗಳು ಹಾಸ್ಟೆಲ್‌ನಲ್ಲಿದ್ದು ಸೋರಿಕೆಯಾಗಿದ್ದ ಪ್ರಶ್ನೆಗಳನ್ನು ಓದಿಕೊಂಡು, ಉತ್ತರ ಬರೆದು, ಅದನ್ನು ನೆನಪಿನಲ್ಲಿಟ್ಟುಕೊಳ್ಳಲು ಇವರು ಅನುಕೂಲ ಮಾಡಿಕೊಟ್ಟಿದ್ದರು ಎಂದು ತಿಳಿದುಬಂದಿದೆ. ಹಾಗಾಗಿ, ಇಬ್ಬರನ್ನೂ ಅಧಿಕಾರಿಗಳು ಬಂದಿಸಿದ್ದಾರೆ.

ನೀಟ್‌ ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮದ ಕುರಿತು ತನಿಖೆ ಆರಂಭಿಸಿರುವ ಸಿಬಿಐ, ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಿಕೊಂಡಿದೆ. ಹಾಗೆಯೇ, ಇನ್ನೂ ಹಲವು ರಾಜ್ಯಗಳಲ್ಲಿ ಎಫ್‌ಐಆರ್‌ ದಾಖಲಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ. ಇದರ ಜತೆಗೆ, ಪ್ರಶ್ನೆಪತ್ರಿಕೆ ಸೋರಿಕೆಯ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ತಂಡಗಳು ಬಿಹಾರ ಹಾಗೂ ಗುಜರಾತ್‌ಗೆ ತೆರಳಿವೆ. ಇನ್ನು, ನೀಟ್‌ ಪಿಜಿ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ಯುಜಿಸಿ ನೆಟ್‌ ಪರೀಕ್ಷೆಯನ್ನೂ ರದ್ದುಗೊಳಿಸಲಾಗಿದೆ.

ನೀಟ್‌ ಸೇರಿ ಹಲವು ಪರೀಕ್ಷೆಗಳನ್ನು ನಡೆಸಿದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹಾ ನಿರ್ದೇಶಕ ಸುಬೋಧ್‌ ಕುಮಾರ್‌ ಸಿಂಗ್‌ ಅವರನ್ನು ಕೇಂದ್ರ ಸರ್ಕಾರವು ಹುದ್ದೆಯಿಂದ ಕೆಳಗಿಳಿಸಿದೆ. ಅವರ ಜಾಗಕ್ಕೆ ಪ್ರದೀಪ್‌ ಸಿಂಗ್‌ ಖರೋಲಾ ಅವರನ್ನು ನೇಮಿಸಿದೆ. ಶನಿವಾರ (ಜೂನ್‌ 22) ಸಿಬಿಐ ತನಿಖೆಗೆ ವಹಿಸಿದ ಕೇಂದ್ರ ಸರ್ಕಾರವು, “ಕೆಲವು ಅಕ್ರಮಗಳು, ವಂಚನೆ ಮತ್ತು ದುಷ್ಕೃತ್ಯಗಳ ಪ್ರಕರಣಗಳು ವರದಿಯಾಗಿವೆ ಮತ್ತು ಪರೀಕ್ಷಾ ಪ್ರಕ್ರಿಯೆಯ ನಿರ್ವಹಣೆಯಲ್ಲಿ ಪಾರದರ್ಶಕತೆಗಾಗಿ, ಶಿಕ್ಷಣ ಸಚಿವಾಲಯದ ಪರಿಶೀಲನೆಯ ನಂತರ ಈ ಬಗ್ಗೆ ಸಮಗ್ರ ತನಿಖೆಗಾಗಿ ಸಿಬಿಐಗೆ ವಹಿಸಲು ನಿರ್ಧರಿಸಲಾಗಿದೆ” ಎಂದು ತಿಳಿಸಿತ್ತು.

ಇದನ್ನೂ ಓದಿ: Droupadi Murmu: ನೀಟ್‌ ಅಕ್ರಮ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು

Continue Reading
Advertisement
Internet Addiction
ಆರೋಗ್ಯ5 mins ago

Internet Addiction: ಈ 10 ಲಕ್ಷಣಗಳು ನಿಮ್ಮಲ್ಲಿದ್ದರೆ, ನೀವೂ ಇಂಟರ್ನೆಟ್‌ ಚಟಕ್ಕೆ ಬಿದ್ದಿದ್ದೀರಿ ಎಂದರ್ಥ!

Paris Olympics 2024
ಕ್ರೀಡೆ9 mins ago

Paris Olympics 2024: ಒಲಿಂಪಿಕ್ಸ್​ಗೆ ಅರ್ಹತೆ ಪಡೆದ​ ರಾಜ್ಯದ ಇಬ್ಬರು ಸ್ವಿಮ್ಮರ್​ಗಳು

Illegal ganja storage in Ballari Arrest of two accused Rs 19 10 lakh Valuable ganja seized
ಕರ್ನಾಟಕ45 mins ago

Ballari News: ಬಳ್ಳಾರಿಯಲ್ಲಿ ಅಕ್ರಮ ಗಾಂಜಾ ಸಂಗ್ರಹ; ಇಬ್ಬರು ಆರೋಪಿಗಳ ಬಂಧನ

Arvind Kejriwal
ದೇಶ46 mins ago

Arvind Kejriwal: ಪ್ಯಾಂಟ್‌ ಲೂಸ್‌ ಆಗಿದೆ, ಒಂದು ಬೆಲ್ಟ್‌ ಕೊಡಿ; ಕೋರ್ಟ್‌ಗೆ ಅರವಿಂದ್‌ ಕೇಜ್ರಿವಾಲ್‌ ಮನವಿ‌

Karnataka Weather Forecast
ಮಳೆ49 mins ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

Railway New Rules
Latest49 mins ago

Railway New Rules: ರೈಲು ಪ್ರಯಾಣಿಕರೇ, ಬರ್ತ್‌ನಲ್ಲಿ ಮಲಗುವ ಕುರಿತ ಈ ಹೊಸ ರೂಲ್ಸ್‌ ನೆನಪಿನಲ್ಲಿರಲಿ!

Ashada Sale 2024
ಫ್ಯಾಷನ್55 mins ago

Ashada Sale 2024: ಆಷಾಢ ಸೇಲ್‌ನಲ್ಲಿ ಶಾಪಿಂಗ್‌ ಮಾಡುವಾಗ ಗಮನದಲ್ಲಿಟ್ಟುಕೊಳ್ಳಬೇಕಾದ 5 ಸಂಗತಿಗಳು

Fishermen Arrest
ದೇಶ2 hours ago

Fishermen Arrest: ಶ್ರೀಲಂಕಾ ನೌಕಾಪಡೆಯ ನಾವಿಕ ಸಾವು; 10 ಭಾರತೀಯ ಮೀನುಗಾರರ ವಿರುದ್ಧ ಕೇಸ್‌ ದಾಖಲು

IND vs ENG Semi Final
ಕ್ರೀಡೆ2 hours ago

IND vs ENG Semi Final: ಗಯಾನದಲ್ಲಿ ಭಾರೀ ಗಾಳಿ-ಮಳೆ ಶುರು; ರದ್ದಾಗುತ್ತಾ ಸೆಮಿಫೈನಲ್​ ಪಂದ್ಯ?

Bitcoin Scam
ಕರ್ನಾಟಕ2 hours ago

Bitcoin Scam: ಬಿಟ್‌ಕಾಯಿನ್‌ ಕೇಸ್; ಪೊಲೀಸರ ಮೇಲೆ ಜೀಪ್‌ ಹತ್ತಿಸಿದ್ದ DySP ಶ್ರೀಧರ್‌ ಪೂಜಾರ್‌ಗೆ ಜಾಮೀನು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ49 mins ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ8 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌