Relationship Tips: ಇರಬೇಕಾದರೆ ಸಂಸಾರ ಸುಸೂತ್ರ, ಪಾಲಿಸಿ ಸುಗಮ ದಾಂಪತ್ಯದ 5 ಸೂತ್ರ! - Vistara News

Relationship

Relationship Tips: ಇರಬೇಕಾದರೆ ಸಂಸಾರ ಸುಸೂತ್ರ, ಪಾಲಿಸಿ ಸುಗಮ ದಾಂಪತ್ಯದ 5 ಸೂತ್ರ!

ಆನಂದಮಯ ದಾಂಪತ್ಯ ಜೀವನಕ್ಕೆ ಪರಸ್ಪರ ಗೌರವ ಮೊದಲ ಸೂತ್ರ. ಇಂಥ ಐದು ಸೂತ್ರಗಳು ನಿಮ್ಮಲ್ಲಿದ್ದರೆ ಬದುಕು ಚಂದ.

VISTARANEWS.COM


on

happy couple
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗಂಡ ಹೆಂಡಿರ ಸಂಬಂಧದಲ್ಲಿ ಸ್ವಲ್ಪ ತಾಳ ತಪ್ಪಿದರೂ ಸಂಬಂಧದಲ್ಲಿ ಬಿರುಕು ಮೂಡುತ್ತದೆ. ಪ್ರೀತಿ ಇದ್ದರೂ, ಹಲವು ಬಾರಿ ಈ ಸೂಕ್ಷ್ಮಗಳನ್ನರಿತು ನಿಭಾಯಿಸುವುದು ಸರಿಯಾಗಿ ತಿಳಿಯದೆ, ಮಾಡುವ ಸಣ್ಣ ತಪ್ಪುಗಳು ಇಬ್ಬರ ನಡುವೆ ಕಂದಕವನ್ನೇ ಸೃಷ್ಟಿಸಬಹುದು. ಹಾಗಾದರೆ, ಈ ಸೂಕ್ಷ್ಮವನ್ನು ಚಂದಕ್ಕೆ ನಿಭಾಯಿಸುವುದಾದರೂ ಹೇಗೆ? ಮೆಚ್ಯೂರ್‌ ಆಗಿ ಸಂಬಂಧವೊಂದನ್ನು, ಅದರ ಮಧುರತೆಯನ್ನು ಸದಾಕಾಲ ಕಾಪಿಡುವುದು ಹೇಗೆ ಎಂಬುದು ನಿಜವಾಗಿಯೂ ಸರಳವಾಗಿ ವಿವರಿಸುವುದು ಕಷ್ಟ. ಹೇಳುವುದು ಸುಲಭವೆಂದು ಅನಿಸಿದರೂ ಪಾಲಿಸುವುದು ಕಷ್ಟ. ಆದರೂ, ಈ ಐದು ಗುಣಗಳು ಗಂಡ ಹೆಂಡಿರ ನಡುವಿದ್ದರೆ (Relationship Tips) ಖಂಡಿತವಾಗಿಯೂ ಸಂಬಂಧ ಮಧುರತೆಯನ್ನು ಕಳೆದುಕೊಳ್ಳಲಾರದು.

1. ಹೀಗೇ ಇರಬೇಕು ಎಂಬ ಹಠ ಬೇಡ: ಸ್ತ್ರೀ ಹಾಗೂ ಪುರುಷರಲ್ಲಿ ಇಬ್ಬರಲ್ಲೂ ಮಾನವ ಸಹಜ ಗುಣಗಳಿರುತ್ತದೆ. ಗಂಡಸು ಎಂದರೆ ಹೀಗೆ, ಮಹಿಳೆ ಎಂದರೆ ಹೀಗೆ ಎಂದು ಖಂಡತುಂಡವಾಗಿ ಹೇಳಲಾಗದು. ಮಹಿಳೆಯ ಗುಣಗಳು ಪುರುಷರಲ್ಲೂ, ಪುರುಷರ ಸಾಮಾನ್ಯ ಗುಣಗಳು ಮಹಿಳೆಯಲ್ಲೂ ಇರುವುದು ಸಹಜ. ಕೆಲವು ಮಹಿಳೆಯರಲ್ಲಿ ಪುರುಷರ ಗುಣಗಳು ಮೇಳೈಸಬಹುದು, ಕೆಲವು ಗಂಡಸರು, ಸ್ತ್ರೀ ಸಹಜ ಗುಣಗಳನ್ನು ತಮ್ಮಲ್ಲಿ ಹೆಚ್ಚು ಹೊಂದಿರಬಹುದು. ಇದು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗುತ್ತದೆ. ಹಾಗಾಗಿ, ಹೆಂಡತಿ ಎಂದರೆ ಹೀಗೆಯೇ ಇರಬೇಕು, ಗಂಡನೆಂದರೆ ಹೀಗೆಯೇ ಎಂಬ ಮನಸ್ಥಿತಿಯನ್ನು ಮೊದಲು ಬಿಡಿ. ಇಬ್ಬರೂ ಸಮಾನವಾಗಿ ಒಬ್ಬರಿಗೊಬ್ಬರು ಹೆಗಲಾಗಿ.

2. ಭಾವನೆಗಳ ಸಾಮರಸ್ಯ: ಇಬ್ಬರ ನಡುವಿನ ಲೈಂಗಿಕ ಜೀವನ ಹೇಗಿದೆ ಅನ್ನುವುದರ ಮೇಲೆ ಸಂಬಂಧ ನಿಂತಿಲ್ಲ ಎನ್ನುವುದು ನೆನಪಿಡಿ. ಲೈಂಗಿಕ ಜೀವನವೂ ದಾಂಪತ್ಯದಲ್ಲಿ ಸಾಮರಸ್ಯ ಕಾಯ್ದುಕೊಳ್ಳುವುದು ನಿಜವೇ ಆದರೂ, ಇಬ್ಬರ ನಡುವಿನ ಭಾವನಾತ್ಮಕ ಸಾಮರಸ್ಯ ಹೆಚ್ಚು ಕೆಲಸ ಮಾಡುತ್ತದೆ.

3. ಒಟ್ಟಾಗಿ ಬೆಳೆಯುವುದು: ಒಬ್ಬರಿಗೆ ಇನ್ನೊಬ್ಬರು ಬೆಟರ್‌ಹಾಫ್‌ಎಂಬುದು ನಿಜವೇ. ಆದರೆ, ಇಲ್ಲಿ ಗಣಿತದ ಲೆಕ್ಕಾಚಾರ ಖಂಡಿತ ವರ್ಕ್‌ಔಟ್‌ ಆಗದು. ಆತನ ಅರ್ಧ, ಆಕೆಯ ಅರ್ಧಗಳು ಸೇರಿ ಒಂದು ವೃತ್ತವಾಗದು. ಎರಡು ವೃತ್ತಗಳು ಸೇರಿ ಇಲ್ಲಿ ಮತ್ತೊಂದು ವೃತ್ತವಾಗುತ್ತದೆ. ಅಂದರೆ, ಇಬ್ಬರು ಕಂಪ್ಲೀಟ್‌ ವ್ಯಕ್ತಿಗಳಷ್ಟೆ ಒಬ್ಬರಿಗೊಬ್ಬರು ಕಂಪ್ಲೀಟ್‌ ಫೀಲ್‌ ಕೊಡಬಲ್ಲರು. ಇದಕ್ಕಾಗಿ, ವ್ಯಕ್ತಿತ್ವದಲ್ಲಿ ಅಲ್ಪ ಸ್ವಲ್ಪ ಬದಲಾವಣೆ ಮಾಡಿಕೊಳ್ಳುವ ಸಂದರ್ಭ ಬಂದರೆ ಮನಸಾರೆ ಅದಕ್ಕಾಗಿ ಪ್ರಯತ್ನಿಸಬೇಕು. ಗಂಡ ಹೆಂಡತಿಯನ್ನು, ಹೆಂಡತಿ ಗಂಡನನ್ನು ಇಬ್ಬರೂ ಒಬ್ಬರಿಗೊಬ್ಬರು ಪ್ರಭಾವಿಸಬೇಕು. ಇಬ್ಬರೂ ಒಟ್ಟಾಗಿ ಬೆಳೆಯುವುದು ನಿಂತಾಗ ಸಂಬಂಧದ ಮಧುರತೆಯೂ ನಿಧಾನವಾಗಿ ಕಡಿಮೆಯಾಗುತ್ತದೆ. ಕಹಿಸತ್ಯವನ್ನು ಸಕ್ಕರೆಯಲ್ಲಿ ಅದ್ದಿ ತೆಗೆದರೂ ಒಳಗೆ ಕಹಿಯೇ ಎಂಬುದು ನೆನಪಿರಲಿ.

ಇದನ್ನೂ ಓದಿ: Relationship Tips: ಸಂಗಾತಿಯ ಜೊತೆಗೆ ಈ ಎಂಟು ತಪ್ಪುಗಳನ್ನು ಮಾಡಬೇಡಿ!

4. ಪರಸ್ಪರ ಗೌರವ: ಗೌರವ ಯಾವುದೇ ಸಂಬಂಧದಲ್ಲಿ ಬಹಳ ಮುಖ್ಯ. ಪ್ರತಿಯೊಬ್ಬನೂ/ಳೂ ಸಹಜವಾಗಿ ಗೌರವಕ್ಕೆ ಅರ್ಹರು. ಇಬ್ಬರಿಗೂ ಇಬ್ಬರ ಪಾತ್ರಕ್ಕೂ ನಡುವೆ ಗೌರವವಿರಲಿ. ಸಂಬಂಧವೊಂದು ಎಷ್ಟೇ ಹತ್ತಿರವಿದ್ದರೂ ಇಬ್ಬರ ನಡುವೆ ಒಂದು ತೆಳುವಾದ ಗೆರೆ ಇದೆ ಎಂಬುದು ನೆನಪಿರಲಿ. ಪ್ರತಿಯೊಂದರಲ್ಲೂ ವಿನಾಕಾರಣ ಗಂಡನಾದ ಕಾರಣಕ್ಕೋ, ಹೆಂಡತಿಯ ಹಕ್ಕೆಂದೋ ಮೂಗು ತೂರಿಸುವುದು ಸಂಬಂಧವನ್ನು ಹಾಳು ಮಾಡಬಹುದು. ಒಂದು ಆರೋಗ್ಯಕರ ಅಂತರ ಇಬ್ಬರ ನಡುವೆಯೂ ಇರಲಿ. ಆ ಅಂತರ ಬಹಳ ಅಗತ್ಯವಾದುದು ಎಂಬುದೂ ಗೊತ್ತಿರಲಿ. ಅದರ ಬಗ್ಗೆ ಮನಃಪೂರ್ವಕವಾಗಿ ಗೌರವವೂ ಇರಲಿ.

5. ಆನಂದಕ್ಕಾಗಿ ಹೊಂದಾಣಿಕೆ: ಹ್ಯಾಪಿ ಜೋಡಿ ಆಗುವುದು ಸುಲಭವಲ್ಲ. ಇಬ್ಬರೂ ತಮ್ಮ ವ್ಯಕ್ತಿತ್ವದಲ್ಲಿ, ಸಂಬಂಧದಲ್ಲಿ ಸಾಕಷ್ಟು ವರ್ಕ್‌ಔಟ್‌ ಮಾಡಬೇಕು. ಹೊಂದಾಣಿಕೆ ಸಹಜವಾಗಿ ಆದಾಗ ಸಂಸಾರದಲ್ಲಿ ನೆಮ್ಮದಿ ನೆಲೆಸುತ್ತದೆ. ಇಬ್ಬರ ವ್ಯಕ್ತಿತ್ವದಲ್ಲೂ ಸಂಪೂರ್ಣತೆ ಇದ್ದಲ್ಲಿ ನೀವು ಪವರ್‌ಜೋಡಿಯಾಗಿಯೇ ಲೋಕದೆದುರು ಕಾಣುತ್ತೀರಿ ಖಂಡಿತ.

ಇದನ್ನೂ ಓದಿ: Parenting Tips: ಮಕ್ಕಳನ್ನು ಸಮಾಧಾನಗೊಳಿಸುವ ವೇದ ವಾಕ್ಯಗಳು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಹಿಳೆ

Mother’s Day: ಆಕೆಗಾಗಿ ಕೊಂಚ ಸಮಯ ನೀಡೋಣ; ತಾಯಂದಿರ ದಿನ ಅರ್ಥಪೂರ್ಣವಾಗಿ ಆಚರಿಸೋಣ

ಎಲ್ಲರ ಬದುಕಿನಲ್ಲಿ ತಾಯಿಯಾಗಿ ಒಬ್ಬಳು ಇದ್ದೇ ಇರುತ್ತಾಳೆ. ಅದು ಹೆಂಡತಿಯಾಗಿರಬಹುದು, ಸಹೋದರಿಯಾಗಿರಬಹುದು ಅಥವಾ ಜನ್ಮವಿತ್ತ, ಸಾಕಿ ಸಲಹಿದ ತಾಯಿಯಾಗಿರಬಹುದು. ಇಲ್ಲಿ ಅವರ ಸ್ಥಾನಕ್ಕಿಂತ ಅವರು ಮಾಡುವ ಕರ್ತವ್ಯಕ್ಕೆ ಗೌರವ ಕೊಡಲೇಬೇಕು. ಇದಕ್ಕಾಗಿ ವರ್ಷದಲ್ಲೊಮ್ಮೆ ತಾಯಂದಿರ ದಿನವನ್ನು (Mother’s Day) ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಈ ಬಾರಿ ಇಂದು ಈ ದಿನ ವಿಶೇಷವಾಗಿದೆ.

VISTARANEWS.COM


on

By

Mother's Day
Koo

ತಾಳ್ಮೆ, ಸಹನೆ, ಶಾಂತಿ, ಪರಸ್ಪರ ಹೊಂದಾಣಿಕೆ ಇವನ್ನೆಲ್ಲ ಹೆಣ್ಣು (girl) ಮಕ್ಕಳಿಗೆ (child) ಯಾರೂ ಕಲಿಸಬೇಕಾಗಿಲ್ಲ. ಅದು ಅವರಿಗೆ ಹುಟ್ಟಿನಿಂದಲೇ ಬಂದಿರುತ್ತದೆ. ಎಂತಹ ಕಠಿಣ ಪರಿಸ್ಥಿತಿಯಾಗಿರಲಿ ತಾಯಿ (Mother’s Day) ಅದನ್ನು ಎದುರಿಸಲು ಕ್ಷಣ ಮಾತ್ರದಲ್ಲಿ ಸಜ್ಜಾಗುತ್ತಾಳೆ. ತಮ್ಮ ಮಕ್ಕಳ ವಿಚಾರಕ್ಕೆ ಬಂದರೆ ಆಕೆ ಯಾವುದೇ ತ್ಯಾಗಕ್ಕೂ ಸಜ್ಜಾಗುತ್ತಾಳೆ, ತನ್ನ ಪ್ರಾಣವನ್ನು ಒತ್ತೆ ಇಟ್ಟಾದರೂ ಸರಿ ಮಕ್ಕಳನ್ನು ಎಲ್ಲ ರೀತಿಯ ಸಂಕಷ್ಟದಿಂದ ಪಾರು ಮಾಡುತ್ತಾಳೆ.

ಎಲ್ಲರಿಗೂ ತಮ್ಮ ತಾಯಿಯ ಬಗ್ಗೆ ಹೇಳಬೇಕಾದ ಸಾವಿರಾರು ವಿಷಯಗಳಿರುತ್ತವೆ. ಇದಕ್ಕೆ ತಾಯಂದಿರ ದಿನಕ್ಕಿಂತ ಉತ್ತಮ ದಿನ ಬೇರೆ ಯಾವುದಿದೆ. ಹೆಣ್ಣು ತಾಯಿಯಾಗಿ, ಅಕ್ಕನಾಗಿ, ಅಜ್ಜಿಯಾಗಿ, ಮಗಳಾಗಿ, ಸ್ನೇಹಿತೆಯಾಗಿ ತನ್ನ ಕರ್ತವ್ಯವನ್ನು ಚೆನ್ನಾಗಿ ನಿಭಾಯಿಸುತ್ತಾಳೆ. ಹೀಗಾಗಿಯೇ ತಾಯಂದಿರ ದಿನದ ಈ ಶುಭ ಸಂದರ್ಭದಲ್ಲಿ ಆಕೆಗೊಂದು ಶುಭ ಸಂದೇಶ ಕಳುಹಿಸಲು ಮರೆಯದಿರಿ.

ಸಿಹಿ ಶುಭಾಶಯಗಳೊಂದಿಗೆ ಆಕೆಯನ್ನು ಗೌರವಿಸುವ ಜೊತೆಗೆ ಸುಂದರವಾದ ಹೂಗೊಂಚಲು, ಅರ್ಥಪೂರ್ಣವಾದ ಉಡುಗೊರೆ ಅಥವಾ ಅವಳೊಂದಿಗೆ ಸಮಯ ಕಳೆಯುವ ಮೂಲಕ ಮೆಚ್ಚುಗೆಯನ್ನು ತೋರಿಸಿ. ಇದು ಯಾವಾಗಲೂ ಆಕೆಯನ್ನು ಸಂತೋಷದಲ್ಲಿ ಇರುವಂತೆ ಮಾಡುತ್ತದೆ ಮತ್ತು ಸದಾ ಆಕೆಯ ನೆನಪಿನಲ್ಲಿ ಇರುವಂತೆ ಮಾಡುತ್ತದೆ.

ತಾಯಂದಿರ ದಿನದ ವಿಶೇಷವಾಗಿ ತಾಯಿಗೆ ವಿಶೇಷ ಅಡುಗೆ ಮಾಡಿ ಬಡಿಸಿ, ಇಲ್ಲವಾದರೆ ಅವರ ನೆಚ್ಚಿನ ರೆಸ್ಟೋರೆಂಟ್ ಗೆ ಹೋಗಿ ಊಟ ಮಾಡಿಸಿ. ಇದರಿಂದ ಸಾಕಷ್ಟು ಸಮಯವನ್ನು ಆಕೆಗೆ ನೀವು ಕೊಟ್ಟಂತಾಗುತ್ತದೆ.


ತಾಯಂದಿರ ದಿನ ಯಾವಾಗ?

ತಾಯಂದಿರ ದಿನವನ್ನು ಪ್ರತಿ ವರ್ಷ ಮೇ ತಿಂಗಳ ಎರಡನೇ ಭಾನುವಾರ ಆಚರಿಸಲಾಗುತ್ತದೆ. ರಜಾ ದಿನದಲ್ಲಿ ಇದು ಬರುವುದರಿಂದ ಈ ದಿನವನ್ನು ಹೆಚ್ಚು ವಿಶೇಷವಾಗಿ ಆಚರಿಸಬಹುದಾಗಿದೆ.

ತಾಯಿಯಂದಿರ ದಿನವು ಈ ಬಾರಿ ಮೇ 12ರಂದು ಭಾನುವಾರ ಆಚರಿಸಲಾಗುತ್ತಿದೆ. ಪ್ರಪಂಚದಾದ್ಯಂತ ಈ ದಿನವನ್ನು ಬೇರೆಬೇರೆ ದಿನಗಳಂದು ಆಚರಿಸಲಾಗುತ್ತಿದೆ.

ಆಸ್ಟ್ರೇಲಿಯಾ, ಕೆನಡಾ, ಡೆನ್ಮಾರ್ಕ್, ಇಟಲಿ, ಫಿನ್‌ಲ್ಯಾಂಡ್, ಸ್ವಿಟ್ಜರ್ಲೆಂಡ್ ಮತ್ತು ಟರ್ಕಿ ಯಲ್ಲಿ ಈ ಬಾರಿ ಮೇ 12ರಂದು ಅಮ್ಮಂದಿರನ್ನು ಗೌರವಿಸಲಾಗುತ್ತಿದೆ. ಯುಕೆಯಲ್ಲಿ ಮಾರ್ಚ್‌ನಲ್ಲಿ ತಾಯಂದಿರ ದಿನವನ್ನು ಆಚರಿಸಲಾಗುತ್ತದೆ. ಮೆಕ್ಸಿಕೋ ಈ ವರ್ಷ ಮೇ 10 ರಂದು ತಾಯಂದಿರ ದಿನವನ್ನು ಆಚರಿಸಲಾಗಿದೆ. ಥೈಲ್ಯಾಂಡ್ ಆಗಸ್ಟ್ 12 ರಂದು ಈ ದಿನವನ್ನು ಆಚರಿಸಲಾಗುತ್ತದೆ. ಯಾಕೆಂದರೆ ಈ ದಿನ ಇಲ್ಲಿ ರಾಣಿ ಸಿರಿಕಿಟ್ ಅವರ ಜನ್ಮದಿನವಾಗಿದೆ.

ಯಾಕೆ ಆಚರಣೆ ?

ತಾಯಂದಿರ ದಿನದ ಆಚರಣೆಯು 1800 ರ ದಶಕದ ಅಂತ್ಯದಲ್ಲಿ ಪ್ರಾರಂಭಿಸಲಾಯಿತು. ಹಲವಾರು ವಿಭಿನ್ನ ಘಟನೆಗಳ ಸಂಯೋಜನೆಯಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಸಾಮಾಜಿಕ ಕಾರ್ಯಕರ್ತೆ ಮತ್ತು ಸಮುದಾಯ ಸಂಘಟಕಿ ಅನ್ನಾ ಮಾರಿಯಾ ರೀವ್ಸ್ ಜಾರ್ವಿಸ್ ಅವರು ಮೊದಲ ಬಾರಿಗೆ ತಾಯಂದಿರ ದಿನದ ಪ್ರಸ್ತಾಪವನ್ನು ಮುಂದಿಟ್ಟರು.

ತಾಯಂದಿರು ತಮ್ಮ ಮಕ್ಕಳನ್ನು ನೋಡಿಕೊಳ್ಳಲು ಸಹಾಯ ಮಾಡುವ ಮಹಿಳಾ ಕ್ಲಬ್‌ಗಳ ಸ್ಥಾಪಕರಾದ ಜಾರ್ವಿಸ್ ಅವರು 1868 ರಲ್ಲಿ ತಾಯಂದಿರ ಸ್ನೇಹ ದಿನವನ್ನು ಆಯೋಜಿಸಿದರು, ಇದು ಅಂತರ್ಯುದ್ಧದ ಅನಂತರ ಒಕ್ಕೂಟ ಮತ್ತು ಒಕ್ಕೂಟದ ಸೈನಿಕರ ತಾಯಂದಿರನ್ನು ಸಾಮರಸ್ಯದಿಂದ ಒಟ್ಟುಗೂಡಿಸುವ ಉದ್ದೇಶವನ್ನು ಹೊಂದಿತ್ತು.

ಬಳಿಕ ಎರಡು ವರ್ಷಗಳ ಅನಂತರ 1870 ರಲ್ಲಿ ಜೂಲಿಯಾ ವಾರ್ಡ್ ಹೋವ್ ಅವರು ವಿಶ್ವ ಶಾಂತಿಯನ್ನು ಉತ್ತೇಜಿಸುವ ಪ್ರಯತ್ನದಲ್ಲಿ ತಾಯಿಯ ದಿನದ ಘೋಷಣೆಯನ್ನು ಮಾಡಿ ಜೂನ್‌ನಲ್ಲಿ ತಾಯಿಯ ದಿನವನ್ನು ಆಚರಿಸಲು ಒತ್ತಾಯಿಸಿದರು. ಆ ಸಮಯದಲ್ಲಿಯೇ ತಾಯಂದಿರನ್ನು ಗೌರವಿಸಲು ಕೆಲವು ರೀತಿಯ ಕಲ್ಪನೆಯನ್ನು ಅವರು ಮಂಡಿಸಿದ್ದರು. ಆದರೆ ಅದು ಸುಮಾರು 35 ವರ್ಷಗಳವರೆಗೆ ಸಾಧ್ಯವಾಗಲಿಲ್ಲ.

1905 ರಲ್ಲಿ ಜಾರ್ವಿಸ್ ಅವರ ಮರಣದ ಅನಂತರ ಅವರ ಮಗಳು ಅನ್ನಾ ಪತ್ರ ಬರೆಯುವ ಅಭಿಯಾನವನ್ನು ಪ್ರಾರಂಭಿಸಿದರು. ತನ್ನ ತಾಯಿಯ ಕೆಲಸವನ್ನು ಮಾತ್ರವಲ್ಲದೆ ಎಲ್ಲಾ ತಾಯಂದಿರಿಗೆ ಮತ್ತು ಅವರ ಮಕ್ಕಳ ಪರವಾಗಿ ಅವರು ಮಾಡುವ ತ್ಯಾಗವನ್ನು ಗೌರವಿಸಲು ತಾಯಂದಿರ ದಿನಾಚರಣೆಗೆ ಕರೆ ನೀಡಿದರು.

ತಾಯಂದಿರ ದಣಿವರಿಯದ ಕೆಲಸವನ್ನು ಗೌರವಿಸುವ ಸಲುವಾಗಿ ಅಧ್ಯಕ್ಷ ವುಡ್ರೊ ವಿಲ್ಸನ್ ಅವರು 1914 ರಲ್ಲಿ ಘೋಷಣೆಗೆ ಸಹಿ ಹಾಕಿ ಅಧಿಕೃತವಾಗಿ ಮೇ ತಿಂಗಳ ಎರಡನೇ ಭಾನುವಾರವನ್ನು ತಾಯಂದಿರ ದಿನವೆಂದು ಘೋಷಿಸಿದರು.

ಇದನ್ನೂ ಓದಿ: Viral News: ಇಂತಹ ಅಮ್ಮಂದಿರೂ ಇರ್ತಾರಾ? ಈ ಶಾಕಿಂಗ್‌ ವಿಡಿಯೊ ನೋಡಿದರೆ ನಿಮ್ಮ ರಕ್ತ ಕುದಿಯುವುದು ಖಚಿತ

ಪ್ರಾರಂಭದಲ್ಲಿ ತಾಯಂದಿರ ದಿನಚರಣೆಯ ಉದ್ದೇಶವೇ ಬೇರೆಯಾಗಿತ್ತು. ಆದರೆ ಇವತ್ತು ವ್ಯಾಪಾರೀಕರಣವಾಗಿದೆ. ಹೀಗಾಗಿ ರಜಾ ದಿನದಂದೇ ಎಲ್ಲರೂ ತಮ್ಮ ತಾಯೊಂದಿಗೆ ಸ್ವಲ್ಪ ಸಮಯ ಕಳೆಯಲಿ ಎನ್ನುವ ಉದ್ದೇಶದಿಂದ ಎಲ್ಲರೂ ಮೇ ತಿಂಗಳ ಎರಡನೇ ಭಾನುವಾರ ಈ ದಿನಾಚರಣೆಗೆ ಇಷ್ಟಪಡುತ್ತಾರೆ. ಹೀಗಾಗಿ ಇಂದು ವಿಶ್ವದಾದ್ಯಂತ ತಾಯಂದಿರ ದಿನ ಆಚರಿಸಲಾಗುತ್ತಿದೆ.

ನಿತ್ಯದ ಕೆಲಸದ ಜಂಜಾಟದಲ್ಲಿರುವ ಎಲ್ಲರಿಗೂ ಇವತ್ತು ತಾಯಂದಿರ ದಿನ ಆಚರಿಸುವುದು ಅನಿವಾರ್ಯವಾಗಿರುವುದರಿಂದ ಈ ದಿನ ಅಮೂಲ್ಯವಾದ ದಿನವಾಗಿ ಉಳಿದಿದೆ. ಹೀಗಾಗಿ ಈ ದಿನವನ್ನು ಅರ್ಥಪೂರ್ಣವಾಗಿ ಆಚರಿಸೋಣ. ಎಲ್ಲ ತಾಯಂದಿರಿಗೂ ಶುಭ ಹಾರೈಸೋಣ.

Continue Reading

Relationship

Parenting Tips: ಮಕ್ಕಳನ್ನು ಬೆಳಗ್ಗೆ ಬೇಗ ಏಳಿಸಿ ಶಾಲೆಗೆ ಹೊರಡಿಸುವುದೇ ಹೋರಾಟವೇ? ಇಲ್ಲಿವೆ ಟಿಪ್ಸ್!

ಹೆತ್ತ ಜೀವಗಳ ಬೆಳಗಿನ ಹೋರಾಟದ ದೃಶ್ಯ ಯಾವ ಯುದ್ಧಭೂಮಿಗೂ ಕಡಿಮೆ ಇರುವುದಿಲ್ಲ. ಮಕ್ಕಳನ್ನು ಬೆಳಗ್ಗೆ ಏಳಿಸುವ ಕಲೆ ನಿಮಗೆ ಕರತಲಾಮಲಕವಾಗಲು ಇಲ್ಲಿವೆ ಕೆಲವು (parenting tips) ಕಿವಿಮಾತುಗಳು.

VISTARANEWS.COM


on

kids morning
Koo

ಮಕ್ಕಳನ್ನು ಬೆಳೆಸುವುದು (good parenting) ಎಂದರೆ ಅದು ಸುಲಭದ ಕೆಲಸವಲ್ಲ. ಬಹಳ ಜವಾಬ್ದಾರಿಗಳನ್ನು ಬೇಡುವ ಕೆಲಸ. ಸಣ್ಣ ಮಗುವಿನ ತಾಯಿಗೆ, ನಿದ್ರೆಗೆಟ್ಟೂ ಕೆಟ್ಟೂ, ಎಷ್ಟೋ ಸಾರಿ ಮಕ್ಕಳು ಬೇಗನೆ ಶಾಲೆಗೆ ಹೋಗುವಷ್ಟು ದೊಡ್ಡದಾಗಿ ಬಿಟ್ಟರೆ ಸಾಕಪ್ಪಾ ಅನಿಸುತ್ತದೆ. ಆದರೆ ಶಾಲೆಗೆ ಹೋಗುವಷ್ಟು ಮಗು ದೊಡ್ಡದಾದ ಮೇಲೆಯೇ ಅದರ ಕಷ್ಟ ಅರಿವಾಗುವುದು. ಹೀಗೆ ಮಗುವೊಂದನ್ನು ಸಂಪೂರ್ಣ ದೊಡ್ಡವರನ್ನಾಗಿ ಮಾಡುವವರೆಗೆ ಹೆತ್ತವರು ಹಲವು ಹಾದಿಗಳನ್ನು ಸವೆಸಿರುತ್ತಾರೆ. ಪ್ರತಿಯೊಬ್ಬ ಹೆತ್ತವರಿಗೂ ಸವಾಲೆನಿಸುವುದು ಮಕ್ಕಳನ್ನು ಬೆಳಗ್ಗಿನ ಹೊತ್ತು ಶಾಲೆಗೆ ಹೊರಡಿಸುವ ಸಮಯ. ಬೆಳಗ್ಗೆ ಬೇಗ ಏಳಿಸಬೇಕು, ಸ್ನಾನ ಮಾಡಿಸಬೇಕು ಅಥವಾ ತಾನೇ ಸ್ನಾನ ಮಾಡುವಷ್ಟು ಮಗು ಬೆಳೆದಿದ್ದರೆ ಮಕ್ಕಳಿಗೆ ಬೇಗ ಬೇಗ ಸ್ನಾನ ಮುಗಿಸುವಂತೆ ಒತ್ತಡ ಹೇರಬೇಕು. ತಿಂಡಿ ರೆಡಿ ಮಾಡಬೇಕು, ಊಟದ ಡಬ್ಬಿಗೆ ನಿತ್ಯವೂ ಆಕರ್ಷಕ ತಿನಿಸುಗಳನ್ನು ರೆಡಿ ಮಾಡಬೇಕು, ಈ ನಡುವೆ ತಮಗೂ ತಿಂಡಿ ಮಾಡಬೇಕು, ಆಫೀಸಿಗೆ ಬುತ್ತಿ ಕಟ್ಟಿಕೊಳ್ಳಬೇಕು, ಅಬ್ಬಬ್ಬಾ, ಹೆತ್ತ ಜೀವಗಳ ಬೆಳಗಿನ ಹೋರಾಟದ ದೃಶ್ಯ ಯಾವ ಯುದ್ಧಭೂಮಿಗೂ ಕಡಿಮೆ ಇರುವುದಿಲ್ಲ. ಇಂಥ ಸಂದರ್ಭ ಈ ಎಲ್ಲ ತಯಾರಿಗಳ ನಡುವೆ ಮಕ್ಕಳನ್ನು ಹಾಸಿಗೆಯಿಂದ ಏಳಿಸುವುದೇ ದೊಡ್ಡ ಸವಾಲು. ಈ ಸವಾಲನ್ನು ಗೆದ್ದರೆ, ಯುದ್ಧದಲ್ಲಿ ಅರ್ಧ ಗೆದ್ದಂತೆ. ಹಾಗಾದರೆ ಬನ್ನಿ, ಮಕ್ಕಳನ್ನು ಬೆಳಗ್ಗೆ ಏಳಿಸುವ ಕಲೆ ನಿಮಗೆ ಕರತಲಾಮಲಕವಾಗಲು ಇಲ್ಲಿವೆ ಕೆಲವು (parenting tips) ಕಿವಿಮಾತುಗಳು.

1. ಮಕ್ಕಳಿಗೊಂದು ವೇಳಾಪಟ್ಟಿ ಇರಲಿ. ಮಕ್ಕಳು ಇಂಥ ಹೊತ್ತಿಗೆ ಏಳುವುದರಿಂದ ಹಿಡಿದು, ಹಲ್ಲುಜ್ಜುವುದು, ಸ್ನಾನ ಮಾಡುವುದು ಇತ್ಯಾದಿ ಪ್ರತಿಯೊಂದಕ್ಕೂ ನಿಗದಿತ ಸಮಯಾವಕಾಶವಿರಲಿ. ಆಗ ಮಕ್ಕಳು ತಮ್ಮ ಕೆಲಸಗಳನ್ನು ಒಂದೊಂದಾಗಿ ತಾವೇ ಮಾಡಿದ ಖುಷಿಯನ್ನು ಪಡೆಯುತ್ತಾರೆ. ಅಷ್ಟೇ ಅಲ್ಲ, ಇದನ್ನು ಮುಂದುವರಿಸಲು ಅವರಿಗೆ ಪ್ರೇರಣೆ ದೊರೆಯುತ್ತದೆ. ಒಂದನೇ ದಿನ ಮಕ್ಕಳು ಮಾಡಲಿಕ್ಕಿಲ್ಲ, ಎರಡನೇ ದಿನವೂ. ಆದರೆ, ನೀವು ಈ ಯೋಜನೆಯಿಂದ ಹಿಂಜರಿಯಬೇಡಿ. ಆಗ ಮಕ್ಕಳು ನಿಧಾನವಾಗಿ ತಮ್ಮ ಕೆಲಸವನ್ನು, ಪುಟ್ಟಪುಟ್ಟ ಜವಾಬ್ದಾರಿಗಳನ್ನು ನಿಭಾಯಿಸುವುದನ್ನು ಕಲಿಯುತ್ತಾರೆ.

2. ಸೂರ್ಯನ ಬೆಳಕು ಕೋಣೆಗೆ ಬರುವಂತಿರಲಿ. ಮುಖದ ಮೇಲೆ ಮುಂಜಾವಿನ ಬೆಳಕು ಬೀಳುವಾಗ ಅನುಭವವಾಗುವ ಆನಂದ ಮಕ್ಕಳು ಅನುಭವಿಸಲಿ.

3. ಬೆಳಗ್ಗೆ ಎದ್ದ ಕೂಡಲೇ ಮಕ್ಕಳ ಮನಸ್ಸನ್ನು ಖಷಿಯಾಗಿಸುವ ಒಂದು ಪುಟ್ಟ ಕೆಲಸಕ್ಕೆ ಜಾಗವಿರಲಿ. ಏನಾದರೊಂದು ಪುಟ ಓದುವುದಿರಬಹುದು, ಅಥವಾ ಒಂದು ಫ್ಯಾಮಿಲಿ ಹಗ್‌ ಕ್ಷಣವಿರಬಹುದು, ಅಥವಾ ಮಕ್ಕಳ ಇಷ್ಟದ ಹಾಡು ಪ್ಲೇ ಮಾಡುವುದಿರಬಹುದು ಹೀಗೆ ಏನಾದರೊಂದು ಪುಟ್ಟ ಖಷಿ ಪ್ರತಿ ದಿನ ಅವರಿಗಾಗಿ ಕಾದಿರಲಿ. ಎದ್ದ ಕೂಡಲೇ ಗಡಿಬಿಡಿ ಮಾಡುವುದು, ಲೇಟಾಗುತ್ತಿದೆ ಎಂದು ಕಿರುಚಾಡುವುದು ಇತ್ಯಾದಿಗಳನ್ನು ಬಿಟ್ಟು ಒಂದೈದು ನಿಮಿಷ ಶಾಂತವಾಗಿ ಪ್ರೀತಿಯಿಂದ ಮಾತನಾಡಿಸುವುದನ್ನು ಅಭ್ಯಾಸ ಮಾಡಿ. ಆಗ ಮಕ್ಕಳು ಬೆಳಗ್ಗೆದ್ದ ಕೂಡಲೇ, ಕಿರಿಕಿರಿ ಮಾಡುವುದಿಲ್ಲ.

4. ಮಕ್ಕಳಿಗೆ ಏಳಲು ಒಂದು ಅಲರಾಂ ಇಡುವುದನ್ನು ಅಭ್ಯಾಸ ಮಾಡಿ. ಆ ಅಲರಾಂ ಶಬ್ದ ತಮಾಷೆಯದ್ದೋ, ಅಥವಾ ಅವರಿಷ್ಟದ ಹಾಡೋ, ಮ್ಯೂಸಿಕ್ಕೋ ಇರಲಿ.

5. ಎಲ್ಲಕ್ಕಿಂತ ಮುಖ್ಯವಾಗಿ, ನಿಮ್ಮ ಕೆಟ್ಟ ಅಭ್ಯಾಸಗಳಿಂದ ಮಕ್ಕಳ ನಿದ್ದೆಯನ್ನು ಹಾಳು ಮಾಡಬೇಡಿ. ನೀವು ಶಿಸ್ತುಬದ್ಧ ಜೀವನ ನಡೆಸುತ್ತಿದ್ದರೆ, ಮಕ್ಕಳ ಇಂತಹ ಸಮಸ್ಯೆ ಸಾಕಷ್ಟು ಕಡಿಮೆಯಾಗುತ್ತದೆ. ಅದಕ್ಕಾಗಿಯೇ ಮಕ್ಕಳನ್ನು ಬೇಗನೆ ಒಂದು ನಿಗದಿತ ಸಮಯಕ್ಕೆ ಮಲಗಿಸುವುದನ್ನು ಅಭ್ಯಾಸ ಮಾಡಿಸಿ. ಏನೇ ಕಾರಣಗಳಿದ್ದರೂ ಇದನ್ನು ಏರುಪೇರು ಮಾಡಬೇಡಿ.

Kids outfits faded in Monsoon

6. ಮಕ್ಕಳು ಅವರಷ್ಟಕ್ಕೆ ಬೇಗನೆ ಎದ್ದು ಹಲ್ಲುಜ್ಜಿ ಮುಖ ತೊಳೆದು ಶಾಲೆಗೆ ರೆಡಿಯಾಗುವ ಕೆಲಸವನ್ನು ಯಾವ ಕಿರಿಕಿರಿಯೂ ಇಲ್ಲದೆ ಮಾಡಿದರೆ ಅವರಿಗೆ ರಿವಾರ್ಡ್‌ಗಳನ್ನು ಕೊಡಿ. ಸ್ಟಿಕ್ಕರ್‌, ಸ್ಮೈಲಿ, ಅವರಿಷ್ಟದ ಬ್ರೇಕ್‌ಫಾಸ್ಟ್‌ ಹೀಗೆ.

ಇದನ್ನೂ ಓದಿ: Parenting Tips: ನಿಮ್ಮ ಮಕ್ಕಳು ಅಡ್ಡ ಬೆಳೆಯದೆ, ಉದ್ದ ಬೆಳೆಯಬೇಕೆಂದರೆ ಈ ಆಹಾರವನ್ನೇ ನೀಡಿ!

7. ರಜೆಯ ದಿನಗಳಲ್ಲಿ ಮಕ್ಕಳನ್ನು ಬೆಳಗ್ಗೆ ಎದ್ದ ಮೇಲೆ ಪಾರ್ಕಿಗೆ ಕರೆದೊಯ್ಯುವುದು, ವಾಕಿಂಗ್‌ ಇತ್ಯಾದಿ ಕೆಲಸಗಳನ್ನು ಜೊತೆಯಾಗಿ ಮಾಡಬಹುದು. ಆಗ ಮಕ್ಕಳೊಡನೆ ಸಾಕಷ್ಟು ಸಮಯವೂ ದೊರೆಯುತ್ತದೆ. ಆಗ ರಜೆಯಲ್ಲೂ ಮಕ್ಕಳು ಇದೇ ಸಮಯಪಾಲನೆ ಮಾಡುತ್ತಾರೆ.

8. ಮಕ್ಕಳಿಗೆ ಬೆಳಗಿನ ಹೊತ್ತು ಅವರೇ ಮಾಡುವಂಥ, ಮಾಡಬಲ್ಲ ಏನಾದರೊಂದು ಸಣ್ಣ ಜವಾಬ್ದಾರಿ ಕೊಡಿ.

9. ಎಲ್ಲಕ್ಕಿಂತ ಮುಖ್ಯವಾಗಿ ಮಕ್ಕಳಿಗೆ ಏನೇ ಮಾಡಿದರೂ, ಏನೇ ಹೇಳಿದಿರೂ, ಅವರು ಕಲಿಯುವುದು ನೋಡಿದ್ದನ್ನು! ಹೀಗಾಗಿ ಮಕ್ಕಳಿಗೆ ನೀವೇ ರೋಲ್‌ ಮಾಡೆಲ್‌ ಆಗಿ. ಮಕ್ಕಳು ನಿಮ್ಮನ್ನು ನೋಡಿ ಕಲಿಯಲಿ. ಅವರು ನಿಮ್ಮನ್ನು ನೋಡಿ ಕಲಿಯುವಂಥದ್ದು ನಿಮ್ಮಲ್ಲೂ ಇರಲಿ. ಅವರಿಗೆ ನೀವೇ ಮೊದಲ ಪ್ರೇರಣೆ ಎಂಬುದು ಪ್ರತಿಯೊಂದು ಕೆಲಸದ ಸಂದರ್ಭವೂ ನಿಮಗೆ ನೆನಪಿರಲಿ.

ಇದನ್ನೂ ಓದಿ: Parenting Tips: ಹತ್ತು ವಯಸ್ಸಿನೊಳಗೆ ನಿಮ್ಮ ಮಕ್ಕಳಿಗೆ ಈ ಎಲ್ಲ ಜೀವನ ಕೌಶಲ್ಯಗಳು ತಿಳಿದಿರಲಿ!

Continue Reading

Relationship

Parenting Tips: ಹತ್ತು ವಯಸ್ಸಿನೊಳಗೆ ನಿಮ್ಮ ಮಕ್ಕಳಿಗೆ ಈ ಎಲ್ಲ ಜೀವನ ಕೌಶಲ್ಯಗಳು ತಿಳಿದಿರಲಿ!

ಮಕ್ಕಳು ಈ ವಯಸ್ಸಿನೊಳಗೆ ತಿಳಿಯಲೇಬೇಕಾದ ಕೌಶಲ್ಯಗಳಾವುವು, ಅವುಗಳನ್ನು ಹೆತ್ತವರು ಸೂಕ್ತ ಪೋಷಣೆಯಿಂದ ಹೇಗೆ ತಿಳಿಸಿಕೊಡಬಹುದು (parenting tips, parenting guide) ಎಂಬುದನ್ನು ನೋಡೋಣ.

VISTARANEWS.COM


on

parenting skills
Koo

ಇಂದು ಸಣ್ಣ ಕುಟುಂಬ ಪದ್ಧತಿಯಿಂದಾಗಿ (nuclear family) ಮಕ್ಕಳ ಮೇಲೆ ಹೆತ್ತವರಿಗೆ ಮುದ್ದು ಜಾಸ್ತಿ. ಹೀಗಾಗಿ ಮಕ್ಕಳು ತಮ್ಮ ವಯಸ್ಸಿಗೆ ಸರಿಯಾಗಿ ಕಲಿತುಕೊಳ್ಳಬೇಕಾದ ಎಷ್ಟೋ ವಿಚಾರಗಳಿಂದ, ಜೀವನ ಕೌಶಲ್ಯಗಳಿಂದ (Life skills) ವಂಚಿತರಾಗುತ್ತಾರೆ. ಹೆತ್ತವರಿಗೂ ಈ ಸಮಸ್ಯೆ ಅರ್ಥವಾಗುವುದಿಲ್ಲ. ಜೀವನದಲ್ಲಿ ಏರಬೇಕಾದ ಒಂದೊಂದೇ ಮೆಟ್ಟಿಲನ್ನು ಏರಲು ಕೆಲವು ಸಾಮಾನ್ಯ ಕೌಶಲ್ಯಗಳನ್ನು ಮಕ್ಕಳು 10 ವಯಸ್ಸಿನೊಳಗೇ ಕಲಿಯಬೇಕು. ಬನ್ನಿ, ಮಕ್ಕಳು ಈ ವಯಸ್ಸಿನೊಳಗೆ ತಿಳಿಯಲೇಬೇಕಾದ ಕೌಶಲ್ಯಗಳಾವುವು, ಅವುಗಳನ್ನು ಹೆತ್ತವರು ಸೂಕ್ತ ಪೋಷಣೆಯಿಂದ ಹೇಗೆ ತಿಳಿಸಿಕೊಡಬಹುದು (parenting tips, parenting guide) ಎಂಬುದನ್ನು ನೋಡೋಣ.

1. ಮಕ್ಕಳಿಗೆ ಸರಿಯಾಗಿ ಸಂವಹನ (clear communication) ಮಾಡುವ ಕಲೆ ಸಾಮಾನ್ಯವಾಗಿ ಈ ವಯಸ್ಸಿನೊಳಗೆ ಬರಬೇಕು. ಅಂದರೆ, ಯಾರ ಜೊತೆ ಹೇಗೆ ಮಾತನಾಡಬೇಕು ಎಂಬಿತ್ಯಾದಿ ವಿಚಾರಗಳ ಜೊತೆಗೆ ಭಾವನೆಗಳನ್ನು ಸ್ಪಷ್ಠವಾಗಿ, ಸರಳವಾಗಿ ಮತ್ತೊಬ್ಬರಿಗೆ ದಾಟಿಸುವುದು ಹೇಗೆ ಎಂಬುದು ಹತ್ತು ವಯಸ್ಸಿನೊಳಗೆ ಸಾಮಾನ್ಯವಾಗಿ ಮಕ್ಕಳಿಗೆ ಅರ್ಥವಾಗಬೇಕು. ಹೆತ್ತವರು ಇದನ್ನು ಮಕ್ಕಳಿಗೆ ತಿಳಿಸಿಕೊಡಬೇಕು.

2. ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸುವ (problem solving) ಕಲೆ, ಅವರ ಸಮಸ್ಯೆಗಳನ್ನು ಆದಷ್ಟೂ ಅವರೇ ಪರಿಹಾರ ಮಾಡಿಕೊಳ್ಳುವ ಚಾಕಚಕ್ಯತೆ ಇತ್ಯಾದಿಗಳು ಮಕ್ಕಳಿಗೆ ಈ ವಯಸ್ಸಿನೊಳಗೆ ಬಂದುಬಿಡುತ್ತದೆ. ಅವುಗಳು ಸಾಧ್ಯವಾಗುತ್ತಿಲ್ಲ ಎಂದಾದರೆ ಅವರನ್ನು ಸರಿಯಾದ ರೀತಿಯಲ್ಲಿ ಗೈಡ್‌ ಮಾಡುವುದು ಹೆತ್ತವರ ಕರ್ತವ್ಯ.

3. ಮಕ್ಕಳು ಸೋಲನ್ನು ಸಹಜವಾಗಿ ತೆಗೆದುಕೊಳ್ಳುವುದನ್ನು, ಹಾಗೂ ಸೋಲು ಬದುಕಿನಲ್ಲಿ ಸಾಮಾನ್ಯ ಎಂಬುದನ್ನು ಈ ವಯಸ್ಸಿನೊಳಗೆ ಅರ್ಥ ಮಾಡಿಕೊಳ್ಳಬೇಕು. ಅಂದರೆ, ಎಲ್ಲದರಲ್ಲೂ ತಾನೇ ಗೆಲ್ಲಬೇಕು ಎಂಬಿತ್ಯಾದಿ ಭಾವನೆಗಳಿದ್ದರೆ, ನಿಧಾನವಾಗಿ ಅದರಿಂದ ಹೊರಗೆ ಬಂದು ಸೋಲಿನ ಸಂದರ್ಭ ಅದನ್ನು ನಿಭಾಯಿಸುವುದು ಹೇಗೆ ಹಾಗೂ ಸೋಲನ್ನೇ ಗೆಲುವಿನ ಮೆಟ್ಟಿಲಾಗಿ ಹೇಗೆ ಸ್ವೀಕರಿಸುವುದು ಎಂಬಿತ್ಯಾದಿ ಜೀವನ ಪಾಠಗಳನ್ನು ಕಲಿಯುವ ಕಾಲ.

4. ಮಕ್ಕಳಿಗೆ ಸಣ್ಣ ಸಣ್ಣ ತಮ್ಮ ಜವಾಬ್ದಾರಿಗಳನ್ನು ಹೊರುವ ಕಾಲಘಟ್ಟವಿದು. ಮಕ್ಕಳು ತಮ್ಮ ಶಾಲೆ ವಸ್ತುಗಳನ್ನು, ಆಟಿಕೆಗಳನ್ನು ಸರಿಯಾದ ಜಾಗದಲ್ಲಿಡುವುದು, ತನ್ನ ಜಾಗವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು, ಟೀಚರು ಕೊಟ್ಟ ಕೆಲಸಗಳನ್ನು ತಾನೇ ತಾನಾಗಿ ಪೂರ್ತಿ ಮಾಡುವ, ಹಾಗೂ ತಾನು ಮಾಡಬೇಕಾದ ಕೆಲಸ ಹಾಗೂ ಜವಾಬುದಾರಿಗಳ್ನು ಪಟ್ಟಾಗಿ ಕೂತು ಸಮಯದೊಳಗೆ ಮಾಡಿ ಮುಗಿಸುವುದು ಇತ್ಯಾದಿಗಳನ್ನು ಕಲಿಯುವ ವಯಸ್ಸಿದು. ಹತ್ತರೊಳಗೆ ಮಕ್ಕಳು ಇಷ್ಟಾದರೂ ಕಲಿಯಬೇಕು.

5. ಸಮಯ ಪಾಲನೆ (time management) ಕೂಡಾ ಮಕ್ಕಳು ಕಲಿಯಬೇಕು. ಸಮಯಕ್ಕೆ ಸರಿಯಾಗಿ ಎದ್ದು, ತಮ್ಮ ಕೆಲಸಗಳನ್ನು ಮಾಡಿಕೊಳ್ಳುವುದು, ನಿಗದಿತ ಸಮಯದೊಳಗೆ ಕೆಲಸಗಳನ್ನು ಮುಗಿಸುವುದು, ಒಂದು ನಿರ್ದಿಷ್ಟ ಸಮಯದಲ್ಲಿ ಆಟವಾಡಲು ಹೋಗಿ ಬರುವುದು ಇತ್ಯಾದಿ ಮಕ್ಕಳು ಸಮಯ ಪಾಲನೆಯನ್ನು ಎಳವೆಯಲ್ಲಿಯೇ ರೂಢಿಸಿಕೊಳ್ಳಬಹುದು.

6. ತಮ್ಮ ಅಣ್ಣ ತಮ್ಮ ಅಕ್ಕ ತಂಗಿ ಜೊತೆ, ಬಂಧು ಬಳಗದ ಜೊತೆ ಪ್ರೀತಿಯಿಂದ ಇರುವುದು, ಕಾಳಜಿ ಮಾಡುವುದು (care taking) ಕೂಡಾ ಮಕ್ಕಳು ಈ ವಯಸ್ಸಿನಲ್ಲಿ ಕಲಿಯಬೇಕು.

7. ಅಡುಗೆ ಎಂಬುದು ಜೀವನಕ್ಕೆ ಅತ್ಯಂತ ಅಗತ್ಯವಾದ ಸ್ಕಿಲ್ (cooking skill).‌ ಮನೆಯಲ್ಲಿ ಅಮ್ಮನೋ, ಅಪ್ಪನೋ, ಅಡುಗೆಯವಳೋ ಮಾಡಿ ಕೊಡುವ ಊಟವನ್ನೇ ಜೀವನಪರ್ಯಂತ ತಿನ್ನುತ್ತಿದ್ದರೆ, ಅಡುಗೆ ಮಾಡಿ ಕೊಡುವವರಲ್ಲಿರುವ ಪ್ರೀತಿಯನ್ನು ಅರ್ಥ ಮಾಡಿಕೊಳ್ಳುವುದು ಹೇಗೆ? ಬಹಳ ಸರಳವಾದ ಅಡುಗೆಗಳಾದ ಸ್ಯಾಂಡ್‌ವಿಚ್‌, ಮೊಟ್ಟೆ ಬೇಯಿಸುವುದು, ಜ್ಯೂಸ್‌, ಚೋಕೋಲೇಟ್‌ ಶೇಕ್‌ ಮಾಡಿಕೊಳ್ಳುವುದು ಇತ್ಯಾದಿ ಸರಳ ಪಟಾಪಟ್‌ ಅಡುಗೆಗಳನ್ನಾದರೂ ಮಕ್ಕಳು ಈ ವಯಸ್ಸಿನಲ್ಲಿ ಸ್ವಲ್ಪ ಕಲಿಯಬಹುದು.

8. ಮಕ್ಕಳಿಗೆ ಹಣದ ಮಹತ್ವವನ್ನು ತಿಳಿಸಿಕೊಡುವುದು (money management) ಬಹಳ ಅಗತ್ಯ. ಈ ವಯಸ್ಸಿನಲ್ಲಿ ಮಕ್ಕಳಿಗೆ ಹಣದ ಮೌಲ್ಯದ ಬಗೆಗೆ ತಿಳುವಳಿಕೆ ಮೂಡಬೇಕು. ತಮ್ಮದೇ ಪಿಗ್ಗಿ ಬ್ಯಾಕಿನಲ್ಲಿ ಹಣ ಶೇಖರಣೆ ಮಾಡುವುದು, ಹಣ ಉಳಿಕೆ ಮಾಡುವುದು ಇತ್ಯಾದಿ ಮಕ್ಕಳು ಈ ವಯಸ್ಸಿನಲ್ಲಿ ಕಲಿಯಬಹುದು.

9. ಆರೋಗ್ಯದ ಕಾಳಜಿಯನ್ನೂ ಮಕ್ಕಳು ತಮ್ಮ ಹತ್ತು ವಯಸ್ಸಿನೊಳಗೆ ಕಲಿತುಕೊಳ್ಳಬೇಕು. ಗಾಯವಾದರೆ ಏನು ಮಾಡಬೇಕು, ಫಸ್ಟ್‌ ಏಯ್ಡ್‌ ಬಳಸುವುದು ಹೇಗೆ, ತುರ್ತು ಘಟಕವನ್ನು ಸಂಪರ್ಕಿಸುವುದು ಹೇಗೆ ಇತ್ಯಾದಿ ಸಾಮಾನ್ಯ ಜ್ಞಾನ ಮಕ್ಕಳಿಗೆ ಈ ವಯಸ್ಸಿನೊಳಗೆ ಹೇಳಿ ಕೊಡಬೇಕು.

ಇದನ್ನೂ ಓದಿ: Parenting Guide: ಮಕ್ಕಳ ಮೇಲೆ ಎಲ್ಲದಕ್ಕೂ ಹರಿಹಾಯುವ ಮುನ್ನ ಈ ಸೂತ್ರಗಳತ್ತ ಒಮ್ಮೆ ಕಣ್ಣಾಡಿಸಿ!

Continue Reading

Relationship

Parenting Guide: ಮಕ್ಕಳ ಮೇಲೆ ಎಲ್ಲದಕ್ಕೂ ಹರಿಹಾಯುವ ಮುನ್ನ ಈ ಸೂತ್ರಗಳತ್ತ ಒಮ್ಮೆ ಕಣ್ಣಾಡಿಸಿ!

ಮಕ್ಕಳ ಮೇಲೆ (relationship tips) ಮಾತು ಮಾತಿಗೂ ಅವರು ತಪ್ಪಿದಲ್ಲಿ ಹರಿಹಾಯುವುದರಿಂದ ಆಗುವ ತೊಂದರೆಗಳೇನು ಹಾಗೂ ಇಂತಹ ಸಂದರ್ಭಗಳಲ್ಲಿ ಮಕ್ಕಳನ್ನು ಹೇಗೆ ನಿಭಾಯಿಸಬಹುದು (parenting guide) ಎಂಬುದನ್ನು ನೋಡೋಣ ಬನ್ನಿ.

VISTARANEWS.COM


on

positive parenting
Koo

ಪಾಸಿಟಿವ್‌ ಪೇರೆಂಟಿಂಗ್‌ (positive parenting) ಎಂದರೆ ಮಕ್ಕಳನ್ನು ಎಲ್ಲಿಯೂ ಬೈಯದೆ, ಸದಾ ಅವರನ್ನು ರಮಿಸುತ್ತಾ ದಯೆಯಿಂದ ನೋಡಿಕೊಳ್ಳುವುದು ಎಂಬರ್ಥವಂತೂ ಖಂಡಿತಾ ಅಲ್ಲ. ಪಾಸಿಟಿವ್‌ ಪೇರೆಂಟಿಂಗ್‌ನಲ್ಲಿ ಮಕ್ಕಳನ್ನು ಶಿಸ್ತಿನಿಂದ (parenting discipline) ನೋಡಿಕೊಳ್ಳುವುದಷ್ಟೇ ಅಲ್ಲ, ಮಕ್ಕಳು ತಮ್ಮ ಕಾಲ ಮೇಲೆ ತಾವು ಆತ್ಮವಿಶ್ವಾಸದಿಂದ ನಿಂತುಕೊಳ್ಳುವುದು, ಇತರರ ಜೊತೆಗೆ ಚಂದಕ್ಕೆ ಜವಾಬ್ದಾರಿಯುತವಾಗಿ ನಡೆದುಕೊಳ್ಳುವುದೂ (Parenting tips) ಕೂಡಾ ಇದೆ. ಆದರೆ, ಮಕ್ಕಳ ಮೇಲೆ (relationship tips) ಮಾತು ಮಾತಿಗೂ ಅವರು ತಪ್ಪಿದಲ್ಲಿ ಹರಿಹಾಯುವುದರಿಂದ ಆಗುವ ತೊಂದರೆಗಳೇನು ಹಾಗೂ ಇಂತಹ ಸಂದರ್ಭಗಳಲ್ಲಿ ಮಕ್ಕಳನ್ನು ಹೇಗೆ ನಿಭಾಯಿಸಬಹುದು (parenting guide) ಎಂಬುದನ್ನು ನೋಡೋಣ ಬನ್ನಿ.

1. ಮಕ್ಕಳಿಗೆ ಮೊದಲು ನೀವು ಪಾಸಿಟಿವ್‌ ಉದಾಹರಣೆಗಳನ್ನು ಸೆಟ್‌ ಮಾಡಬೇಕು. ಮಕ್ಕಳು ತಮ್ಮ ಹೆತ್ತವರು ಹೇಗೆ ವರ್ತಿಸುತ್ತಾರೆ ಎಂಬುದನ್ನು ನೋಡಿಕೊಂಡು ಬೆಳೆಯುತ್ತಾರೆ. ಹಾಗಾಗಿ ನೀವು ಹೇಗೆ ವರ್ತಿಸುತ್ತಿದ್ದೀರಿ ಎಂಬುದನ್ನು ನೀವೇ ಮೊದಲು ಗಮನಿಸಿ.

2. ಮಕ್ಕಳು ಯಾವಾಗಲೂ ತಾವು ಹೆತ್ತವರ ಮಡಿಲಲ್ಲಿ ಬೆಚ್ಚಗಿರುತ್ತೇವೆ ಎಂಬ ಸೇಫ್‌ ಭಾವವನ್ನು ಹೊಂದುವುದು ಹೆತ್ತವರು ಅವರನ್ನು ಆಗಾಗ ಅದನ್ನು ಅವರ ಮುಂದೆ ವ್ಯಕ್ತಪಡಿಸುವುದರ ಮೂಲಕ. ಅಂದರೆ, ಹೆತ್ತವರು ಆಗಾಗ ಮಕ್ಕಳನ್ನು ಅಪ್ಪಿಕೊಳ್ಳುವುದು, ಮುದ್ದು ಮಾಡುವುದರ ಮೂಲಕ ಮಕ್ಕಳಿಗೆ ಈ ಭಾವ ಮೊಳೆಯುತ್ತದೆ. ಹಾಗಾಗಿ ಹೆತ್ತವರ ದೈಹಿಕ ಸಾಂಗತ್ಯವೂ ಮಕ್ಕಳಿಗೆ ಅಗತ್ಯವೇ. ಇಲ್ಲದಿದ್ದರೆ ಮಕ್ಕಳು ಇದನ್ನು ಮನೆಯಿಂದ ಹೊರಗೆ ಪಡೆಯಲು ನೋಡುತ್ತಾರೆ.

3. ನಂಬಿಕೆ ಎಂಬುದು ಹೆತ್ತವರ ಮಕ್ಕಳ ನಡುವಿನ ಸಂದರ್ಭವೂ ಬಹಳ ಮುಖ್ಯ. ಮಕ್ಕಳ ಜೊತೆಗೆ ವಿಚಾರಗಳನ್ನು ಮುಚ್ಚಿಡುವುದು, ʻಏಯ್‌, ಬಾಯ್ಮಚ್ಚು. ಇದು ನಿನಗೆ ಸಂಬಂಧಿಸಿದ್ದಲ್ಲ, ದೊಡ್ಡವರ ವಿಷಯʼ ಇತ್ಯಾದಿ ಮಾತುಗಳು ಮಕ್ಕಳಲ್ಲಿ ಹೆತ್ತವರ ಬಳಿ ನಂಬಿಕೆಯನ್ನು ಬೆಳೆಸುವುದಿಲ್ಲ. ಹಾಗಾಗಿ ಮಕ್ಕಳ ಎದುರು, ಪ್ರಾಮಾಣಿಕವಾಗಿರಿ, ಪಾರದರ್ಶಕವಾಗಿರಿ. ನಂಬಿಕೆ ಬೆಳೆಸಿ.

4. ಹೆತ್ತವರ ಸತತ ಪ್ರೋತ್ಸಾಹದಿಂದ ಮಕ್ಕಳು ಆತ್ಮವಿಶ್ವಾಸ ಬೆಳೆಸಿಕೊಳ್ಳುತ್ತಾರೆ. ಮಕ್ಕಳು ಒಳ್ಳೆಯ ಕೆಲಸ ಮಾಡಿದಾಗ, ಆತ್ಮವಿಶ್ವಾಸ ಪ್ರದರ್ಶಿಸಿದಾಗ ಅವರ ಬೆನ್ನು ತಟ್ಟಿ. ಹಾಗಂತ ಅತಿಯಾದ ಹೊಗಳಿಕೆಯೂ ಒಳ್ಳೆಯದಲ್ಲ.

5. ಒತ್ತಡದಲ್ಲಿದ್ದಾಗ ಆದಷ್ಟೂ ನಿಮ್ಮನ್ನು ನೀವು ಕಂಟ್ರೋಲ್‌ ಮಾಡಿಕೊಳ್ಳುವುದನ್ನು ಕಲಿಯಿರಿ. ಮಕ್ಕಳು ನಿಮ್ಮನ್ನು ನೋಡಿ ಕಲಿಯುತ್ತಾರೆ ಎಂಬುದನ್ನು ನೆನಪಿಡಿ.

6. ಮಕ್ಕಳ ಜೊತೆ ಸಂಬಂಧವನ್ನು (parent children relation) ಗಟ್ಟಿಗೊಳಿಸಿ. ಇದಾಗಬೇಕೆಂದರೆ ಪಾಸಿಟಿವ್‌ ಪೇರೆಂಟಿಂಗ್‌ ನಿಮ್ಮ ಕೀಲಿಕೈಯಾಗಬೇಕು. ಅಂದರೆ ಮಕ್ಕಳ ಜೊತೆಗೆ ನೀವು ಬೆಚ್ಚಗಿನ ಭಾವ ಕಟ್ಟಿಕೊಳ್ಳಬೇಕು.

7. ಮನೆಯಲ್ಲಿ ಮಕ್ಕಳಿಗೆ ಸ್ವಾತಂತ್ರ್ಯವಿರಬೇಕು. ಅಂದರೆ, ಆ ಸ್ವಾತಂತ್ರ್ಯ ಅತಿಯಾಗಬಾರದು. ಮಕ್ಕಳಿಗೆ ಮನೆಯಲ್ಲಿ ಮನಬಿಚ್ಚಿ ತಮ್ಮ ಹೆತ್ತವರ ಜೊತೆಗೆ ಏನನ್ನು ಬೇಕಾದರೂ ಹೇಳುವ ವಾತಾವರಣ ಕಟ್ಟಿಕೊಡುವುದು ಹೆತ್ತವರಾಗಿ ನಿಮ್ಮ ಕರ್ತವ್ಯ. ಮಕ್ಕಳ ಮನಸ್ಸಿನಲ್ಲಿ ಇದು ಬೇರೂರುದರೆ, ಹೆತ್ತವರು ಗೆದ್ದಂತೆ.

ಇದನ್ನೂ ಓದಿ: Parenting Tips: ನಿಮ್ಮ ಮಕ್ಕಳು ಶಾಲೆಯಲ್ಲಿ ಯಶಸ್ಸಿನ ಹಾದಿಯಲ್ಲಿ ಸಾಗಬೇಕೇ? ಇಲ್ಲಿವೆ ನವಸೂತ್ರಗಳು!

8. ಸಂವಹನ ತುಂಬ ಮುಖ್ಯ. ಮಕ್ಕಳು ತಮ್ಮ ಭಾವನೆಗಳನ್ನು ನಿಮ್ಮ ಜೊತೆ ನೇರವಾಗಿ ಹಂಚಿಕೊಳ್ಳಬಹುದಾದ ವಾತಾವರಣ ಇರಬೇಕು. ನೀವು ಮಕ್ಕಳ ಮೇಲೆ ಹರಿಹಾಯುತ್ತಿದ್ದರೆ, ಸರಿಯಾಗಿ ಕೂತು ಮಕ್ಕಳ ಜೊತೆಗೆ ಭಾವನೆಗಳನ್ನು ಹಂಚಿಕೊಳ್ಳದಿದ್ದರೆ, ಮಕ್ಕಳನ್ನು ಮಕ್ಕಳಾಗಿ ಇರಲು ಬಿಡದಿದ್ದರೆ, ಮಕ್ಕಳ ಮಾತನ್ನು ಕೇಳಿಸಿಕೊಳ್ಳುವ ವ್ಯವಧಾನ ಇರದಿದ್ದರೆ ಮಕ್ಕಳ ಹಾಗೂ ಪೋಷಕರ ನಡುವೆ ಪಾರದರ್ಶಕ ಸಂವಹನ ಸಾಧ್ಯವಾಗದು.

9. ಮಕ್ಕಳ ಮೇಲೆ ರೇಗಲೇಬಾರದು ಎಂದೇನಿಲ್ಲ. ಎಲ್ಲಿ ಹೇಗೆ ರೇಗಬೇಕು ಎಂಬುದನ್ನು ಪೋಷಕರು ಅರ್ಥ ಮಾಡಿಕೊಳ್ಳಬೇಕು. ಆಗ ಮಕ್ಕಳು ತಮ್ಮ ತಪ್ಪನ್ನು ತಿದ್ದಿಕೊಂಡು ಮುನ್ನಡೆಯುವ ಗುಣ ಬೆಳೆಸಿಕೊಳ್ಳುತ್ತಾರೆ. ಆತ್ಮವಿಶ್ವಾಸದಿಂದ ಬೆಳೆಯುತ್ತಾರೆ. ಅತಿಯಾದ ಹೊಗಳಿಕೆ ಹಾಗೂ ಮುದ್ದು, ಜೊತೆಗೆ ಅತಿಯಾದ ಬೈಗುಳ, ಶಿಸ್ತು ಎರಡೂ ಒಳ್ಳೆಯದಲ್ಲ.

ಇದನ್ನೂ ಓದಿ: Parenting Tips: ನಿಮ್ಮ ಮಕ್ಕಳು ಅಡ್ಡ ಬೆಳೆಯದೆ, ಉದ್ದ ಬೆಳೆಯಬೇಕೆಂದರೆ ಈ ಆಹಾರವನ್ನೇ ನೀಡಿ!

Continue Reading
Advertisement
SSLC Grace Marks 20 per cent grace marks CM Siddaramaiah slams education department
ಶಿಕ್ಷಣ4 mins ago

SSLC Grace Marks: ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

Kannada New Movie powder Teaser Out
ಸ್ಯಾಂಡಲ್ ವುಡ್15 mins ago

Kannada New Movie: ಬಹು ನಿರೀಕ್ಷಿತ ʻಪೌಡರ್‌ʼ ಸಿನಿಮಾ ಟೀಸರ್‌ ಔಟ್‌!

Drowned in water
ರಾಮನಗರ15 mins ago

Drowned In water : ನಮಾಜ್‌ ಮುಗಿಸಿ ಈಜಲು ಹೋದ ಮೂವರು ನೀರುಪಾಲು; ಐವರು ಪ್ರಾಣಾಪಾಯದಿಂದ ಪಾರು

Illegal sand mining
ಕರ್ನಾಟಕ16 mins ago

Illegal Sand Mining: ಅಕ್ರಮ ಮರಳುಗಾರಿಕೆ: ಪೊಲೀಸರು, ಅಧಿಕಾರಿಗಳಿಗೆ ರಕ್ಷಣೆ ಕೊಡುವಂತೆ ಗ್ರಾಮಸ್ಥರ ಮನವಿ!

RCB vs CSK
ಕ್ರಿಕೆಟ್19 mins ago

RCB vs CSK: ಚಿನ್ನಸ್ವಾಮಿಯಲ್ಲಿ ಆರ್​ಸಿಬಿ-ಚೆನ್ನೈ ತಂಡಗಳ ಐಪಿಎಲ್​ ದಾಖಲೆ ಹೇಗಿದೆ?

Narayana Murthy
ದೇಶ25 mins ago

Narayana Murthy: ಕೃತಕ ಬುದ್ಧಿಮತ್ತೆಯಿಂದ ಉದ್ಯೋಗಗಳಿಗೆ ಕತ್ತರಿ? ನಾರಾಯಣ ಮೂರ್ತಿ ಶಾಕಿಂಗ್‌ ಹೇಳಿಕೆ

IPL 2024
ಪ್ರಮುಖ ಸುದ್ದಿ33 mins ago

IPL 2024 : ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಪಂದ್ಯದ ವಿಜೇತರು ಯಾರು ಎಂದು ತಿಳಿಸಿದ ಬ್ರಿಯಾನ್ ಲಾರಾ

Job Alert
ಉದ್ಯೋಗ33 mins ago

Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Bomb Blast
ದೇಶ40 mins ago

Bomb Blast: ಚೆಂಡೆಂದು ಭಾವಿಸಿ ಬಾಂಬ್‌ ಎತ್ತಿಕೊಂಡ ಮದರಸಾ ವಿದ್ಯಾರ್ಥಿ; ಸ್ಫೋಟಕ್ಕೆ ಮೌಲಾನಾ ಸಾವು

KSRTC BUS Woman locks in window of KSRTC bus after going to spit
ಬೆಂಗಳೂರು42 mins ago

KSRTC Bus : ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ10 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ11 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ24 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌