BWSSB: ಕರೆಂಟ್ ಶಾಕ್ ಬಳಿಕ ಜೀವಜಲ ದುಬಾರಿ; ನೀರಿನ ದರ ಏರಿಕೆ ಸುಳಿವು ನೀಡಿದ ಡಿಸಿಎಂ - Vistara News

ಬೆಂಗಳೂರು

BWSSB: ಕರೆಂಟ್ ಶಾಕ್ ಬಳಿಕ ಜೀವಜಲ ದುಬಾರಿ; ನೀರಿನ ದರ ಏರಿಕೆ ಸುಳಿವು ನೀಡಿದ ಡಿಸಿಎಂ

ಬಿಡಬ್ಲ್ಯುಎಸ್​ಎಸ್​ಬಿ ಪರಿಸ್ಥಿತಿ ಚಿಂತಾಜನಕವಾಗಿದೆ. 2014ರಿಂದ ಇಲ್ಲಿಯವರೆಗೂ ನೀರಿನ ದರ ಪರಿಷ್ಕರಣೆಯಾಗಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ.

VISTARANEWS.COM


on

DK Shivakumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಗರದಲ್ಲಿ ಸದ್ಯದಲ್ಲೇ ನೀರಿನ ದರ ಏರಿಕೆ ಆಗಬಹುದು ಎಂಬ ಸೂಚನೆಯನ್ನು ಡಿಸಿಎಂ ಡಿ.ಕೆ ಶಿವಕುಮಾರ್‌ (DK shivakumar) ನೀಡಿದ್ದಾರೆ. ವಿದ್ಯುತ್‌ ಯುನಿಟ್‌ ದರ ಹೆಚ್ಚಳದ ಬಳಿಕ ಇದೀಗ ಜೀವಜಲ ಕೂಟ ತುಟ್ಟಿಯಾಗುವ ಸುಳಿವು ದೊರೆತಿದೆ.

ಬಿಡಬ್ಲ್ಯೂಎಸ್‌ಎಸ್‌ಬಿ ಕಚೇರಿ ಬಳಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಡಬ್ಲ್ಯುಎಸ್​ಎಸ್​ಬಿ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದರು. 2014ರಿಂದ ಇಲ್ಲಿಯವರೆಗೂ ನೀರಿನ ದರ ಪರಿಷ್ಕರಣೆಯಾಗಿಲ್ಲ. ಸಂಸ್ಥೆಯಲ್ಲಿ ವೇತನ ಹಾಗೂ ವಿದ್ಯುತ್ ಬಿಲ್ ಪಾವತಿಗೆ ಹಣವಿಲ್ಲದಂತಾಗಿದೆ. ಇಲ್ಲಿನ ಸಿಬ್ಬಂದಿ ಬಹಳಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಇವರಿಗೆ ಪರಿಹಾರ ಕಂಡುಕೊಡಬೇಕು. ಅಧಿಕಾರಿಗಳು ಅಕ್ರಮ ನೀರಿನ ಸಂಪರ್ಕವನ್ನು ಶೇ.48ರಿಂದ ಶೇ.28ಕ್ಕೆ ಇಳಿಸಿದ್ದಾರೆ. ಈ ಅನಧಿಕೃತ ನೀರಿನ ಸಂಪರ್ಕದ ಬಗ್ಗೆ ನನಗೆ ವರದಿ ನೀಡಿದ್ದು, ಎಲ್ಲೆಲ್ಲಿ ಅನಧಿಕೃತ ಸಂಪರ್ಕ ಇದೆ ಎಂದು ಪತ್ತೆಹಚ್ಚಲು ಹೇಳಿದ್ದೇನೆ ಎಂದರು.

ಜಲಮಂಡಳಿಯ ಆದಾಯ ತೀರಾ ಕಡಿಮೆ ಇದೆ. ಈ ಸಂಸ್ಥೆಗೆ ಕಡಿಮೆ ದರದಲ್ಲಿ ವಿದ್ಯುತ್ ನೀಡಲಾಗುತ್ತಿದೆ. ಆದರೂ ಬರುವ 104 ಕೋಟಿ ರೂಪಾಯಿಯಲ್ಲಿ 90ರಿಂದ 95 ಕೋಟಿ ರೂ. ವಿದ್ಯುತ್ ಬಿಲ್ ಪಾವತಿಸಲು ಖರ್ಚಾಗುತ್ತಿದೆ. ಇಲ್ಲಿ ಸಂಪನ್ಮೂಲ ಕ್ರೋಡೀಕರಣ ಆಗಬೇಕಿದೆ. ಇಲ್ಲದಿದ್ದರೆ ಸಂಸ್ಥೆ ಉಳಿಯಲು ಸಾಧ್ಯವಿಲ್ಲ. ಬೆಂಗಳೂರಿನ ಜನರಿಗೆ ಬಹಳ ಸ್ವಚ್ಛವಾದ ನೀರನ್ನು ಪೂರೈಸಬೇಕು. ಇದಕ್ಕಾಗಿ ಎಲ್ಲೆಲ್ಲಿ ಸ್ವಚ್ಛ ನೀರು ನೀಡಲು ಸಾಧ್ಯವಾಗುತ್ತಿಲ್ಲವೋ ಅಲ್ಲಿ ನೀರಿನ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ. ನೂತನ ದರದ ವಿಚಾರವಾಗಿ ಮುಂದಿನ ದಿನಗಳಲ್ಲಿ ತೀರ್ಮಾನ ಮಾಡಲಾಗುವುದು. ಪಾಲಿಕೆಯಿಂದ ಈ ಸಂಸ್ಥೆಗೆ ಬರಬೇಕಾದ ಹಣ ಸರಿಯಾಗಿ ಬಂದಿಲ್ಲ. ಈ ವಿಚಾರವಾಗಿ ನಾನು ಗಮನಹರಿಸುತ್ತೇನೆ. ಈ ಸಂಸ್ಥೆ ಮತ್ತೆ ಆರೋಗ್ಯಕರವಾಗಿ ಕಾರ್ಯನಿರ್ವಹಿಸುವಂತೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುತ್ತೇನೆ ಎಂದೂ ಹೇಳಿದರು.

ಇದನ್ನೂ ಓದಿ: BWSSB Corruption | ಕೋಟ್ಯಂತರ ರೂಪಾಯಿ ನುಂಗಿದ್ದ ಜಲಮಂಡಳಿಯ 13 ಭ್ರಷ್ಟ ಅಧಿಕಾರಿಗಳು, ಸಿಬ್ಬಂದಿ ಅಮಾನತು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Lok Sabha Election 2024: 2ನೇ ಹಂತದಲ್ಲಿ ಶೇ.70.41 ಮತದಾನ; ಕಳೆದ ಬಾರಿಗಿಂತ ಹೆಚ್ಚು, ಚಿಕ್ಕೋಡಿಯಲ್ಲಿ ಗರಿಷ್ಠ

Lok Sabha Election 2024: ಬೇಸಿಗೆಯ ಬಿರು ಬಿಸಿಲನ್ನೂ ಲೆಕ್ಕಿಸದೇ ಮತದಾರರು ಉತ್ಸಾಹದಿಂದ ತಮ್ಮ ಹಕ್ಕು ಚಲಾಯಿಸಿದರು. ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಬಹಿಷ್ಕಾರ, ಪ್ರತಿಭಟನೆ ನಡುವೆ ಎಲ್ಲೆಡೆ ಶಾಂತಿಯುತವಾಗಿ ಮತದಾನ ನಡೆದಿದೆ.

VISTARANEWS.COM


on

Lok Sabha Election 2024
ಮತದಾನ ಪ್ರಕ್ರಿಯೆ ಮುಗಿದ ತಕ್ಷಣ ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತಗಟ್ಟೆಯಲ್ಲಿ ಚುನಾವಣೆ ಇವಿಎಂ, ವಿವಿ ಪ್ಯಾಟ್‌ ಸೇರಿ ಇತರೆ ಸಾಮಗ್ರಿಗಳನ್ನು ಭದ್ರಪಡಿಸಿದರು.
Koo

ಬೆಂಗಳೂರು: ರಾಜ್ಯದ ಬೆಳಗಾವಿ, ಚಿಕ್ಕೋಡಿ ಸೇರಿ 14 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆ 2ನೇ ಹಂತದ ಮತದಾನ (Lok Sabha Election 2024) ಮಂಗಳವಾರ ಮುಕ್ತಾಯವಾಯಿತು. ಮತದಾನ ಬಹಿಷ್ಕಾರ, ಪ್ರತಿಭಟನೆ ನಡುವೆ ಎಲ್ಲೆಡೆ ಶಾಂತಿಯುತವಾಗಿ ಮತದಾನ ನೆರವೇರಿದೆ. 2ನೇ ಹಂತದಲ್ಲಿ ಶೇ. 70.41 ಮತದಾನ (Voter Turnout) ದಾಖಲಾಗಿದ್ದು, ಬೇಸಿಗೆಯ ಬಿರು ಬಿಸಿಲನ್ನೂ ಲೆಕ್ಕಿಸದೇ ಮತದಾರರು ಉತ್ಸಾಹದಿಂದ ತಮ್ಮ ಹಕ್ಕು ಚಲಾಯಿಸಿರುವುದು ಕಂಡುಬಂದಿದೆ.

14 ಕ್ಷೇತ್ರಗಳಿಂದ 227 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಇವರಲ್ಲಿ 206 ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ. ಮತದಾನ ಮುಕ್ತಾಯವಾಗಿದ್ದರಿಂದ ಅಭ್ಯರ್ಥಿಗಳ ಭವಿಷ್ಯ ಇವಿಎಂಗಳಲ್ಲಿ ಭದ್ರವಾಗಿದ್ದು, ಜೂನ್‌ 4ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಎರಡನೇ ಹಂತದಲ್ಲಿ ಚಿಕ್ಕೋಡಿ ಕ್ಷೇತ್ರದಲ್ಲಿ ಅತಿ ಹೆಚ್ಚು ಶೇ.76.99 ಮತದಾನವಾಗಿದ್ದು, ಕಲಬುರಗಿ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ ಶೇ 61.73 ಮತದಾನವಾಗಿದೆ. ಇನ್ನೂ ಈ ಬಾರಿ ದಕ್ಷಿಣ ಕರ್ನಾಟಕಕ್ಕೆ (ಶೇ.69.23) ಹೋಲಿಸಿದರೆ ಉತ್ತರ ಕರ್ನಾಟಕವೇ(ಶೇ.70.41) ಶೇಕಡಾವಾರು ಮತದಾನದಲ್ಲಿ ಮುಂದಿದೆ.

ಕರ್ನಾಟಕದ 14 ಕ್ಷೇತ್ರಗಳಲ್ಲಿ ನಡೆದ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಶೇ.69.23 ಮತದಾನ ದಾಖಲಾಗಿತ್ತು. ಮಂಗಳವಾರ ಮುಗಿದಿರುವ 2ನೇ ಹಂತದ ಚುನಾವಣೆಯಲ್ಲಿ ಶೇ. 70.41 ಮತದಾನ ದಾಖಲಾಗಿದೆ. ಇನ್ನು 2019 ಚುನಾವಣೆಯ ಮೊದಲ ಹಂತದಲ್ಲಿ ಶೇ. 68.96, ಎರಡನೇ ಹಂತದಲ್ಲಿ 68.66 ಮತದಾನವಾಗಿತ್ತು.

ಇದನ್ನೂ ಓದಿ | West Bengal: ಬಂಗಾಳದಲ್ಲಿ ಮತದಾನದ ವೇಳೆ ಹಿಂಸೆ; ಬಿಜೆಪಿ ಅಭ್ಯರ್ಥಿ ಮೇಲೆ ಟಿಎಂಸಿ ಕಾರ್ಯಕರ್ತರ ದಾಳಿ!

ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ?

ಕ್ಷೇತ್ರ20242019
ಚಿಕ್ಕೋಡಿಶೇ. 76.99ಶೇ. 75.62
ಬೆಳಗಾವಿಶೇ. 71ಶೇ. 67.84
ಬಾಗಲಕೋಟೆ
ಶೇ.70.10ಶೇ. 70.70
ವಿಜಯಪುರ
ಶೇ. 64.71ಶೇ.61.89
ಕಲಬುರಗಿ
ಶೇ. 61.73ಶೇ. 61.18
ರಾಯಚೂರುಶೇ. 64.10ಶೇ. 58.34
ಬೀದರ್
ಶೇ. 63.55ಶೇ. 63
ಕೊಪ್ಪಳ
ಶೇ. 69.87ಶೇ. 68.56
ಬಳ್ಳಾರಿ
ಶೇ.72.35ಶೇ. 69.76
ಹಾವೇರಿ
ಶೇ.76.78ಶೇ. 74.21
ಧಾರವಾಡ
ಶೇ. 72.53ಶೇ. 70.29
ಉತ್ತರ ಕನ್ನಡ
ಶೇ. 73.52ಶೇ. 74.16
ದಾವಣಗೆರೆ
ಶೇ. 76.23ಶೇ. 73.19
ಶಿವಮೊಗ್ಗಶೇ. 76.05
ಶೇ. 76.58
ಒಟ್ಟು ಶೇ. ಮತದಾನ ಶೇ. 70.41

ಉತ್ಸಾಹದಿಂದ ಹಕ್ಕು ಚಲಾವಣೆ

ಯುವಕ-ಯುವತಿಯರು, ಮಹಿಳೆಯರು, ವೃದ್ಧರು ಸೇರಿ ಎಲ್ಲ ವಯೋಮಾನದ ಮತಾದಾರರು ಅತ್ಯಂತ ಉತ್ಸಾಹದಿಂದ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬದಲ್ಲಿ ಪಾಲ್ಗೊಂಡು ಮತ ಚಲಾಯಿಸುವ ಮೂಲಕ ಸಂಭ್ರಮಿಸಿದರು. ಇನ್ನು ಹಲವೆಡೆ ಹೆಚ್ಚಿನ ಸಂಖ್ಯೆಯಲ್ಲಿ ವಿಶೇಷಚೇತನರು, ವೃದ್ಧರು, ಶತಾಯುಷಿ ಮತದಾರರು ಹಕ್ಕು ಚಲಾವಣೆ ಮಾಡುವ ಮೂಲಕ ಯುವ ಮತದಾರರಿಗೆ ಮಾದರಿಯಾದರು.

ಇದನ್ನೂ ಓದಿ | Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

ಗಮನ ಸೆಳೆದ ವಿಷಯಾಧಾರಿತ ಮತಗಟ್ಟೆಗಳು

ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಉಪ್ಪಾರಗೇರಿಯಲ್ಲಿ ಸಾಂಪ್ರದಾಯಿಕ ಮತಗಟ್ಟೆ ಮತದಾರರನ್ನು ಆಕರ್ಷಿಸಿತು.

ಎರಡನೇ ಹಂತದ ಮತದಾನದಲ್ಲಿ ವಿಭಿನ್ನ ವಿಷಯಾಧಾರಿತ ಮತಗಟ್ಟೆಗಳು ಗಮನಸೆಳೆದವು. ಮಹಿಳೆಯರಿಂದ ಕಾರ್ಯ ನಿರ್ವಹಿಸಲ್ಪಡುವ ಮಾದರಿ ಮತಗಟ್ಟೆಯಾದ ಸಖಿ ಮತಗಟ್ಟೆ, ಅದೇ ರೀತಿ ವಿಶೇಷ ಚೇತನರ ಮಾದರಿ ಮತಗಟ್ಟೆ, ಸಾಂಪ್ರದಾಯಿಕ ಮತಗಟ್ಟೆ, ಗ್ರೀನ್ ಬೂತ್, ಯುವ ಮತಗಟ್ಟೆಗಳು ಮತದಾರರನ್ನು ಆಕರ್ಷಿಸಿದವು.

ಕಾಗವಾಡದಲ್ಲಿ ಶತಾಯುಷಿ ಮಹಿಳೆ ಮತದಾನ

ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದ 103 ವಯಸ್ಸಿನ ಹಿರಿಯ ಮಹಿಳೆ ನೀಲವ್ವ ಶಿವಗೌಡ ಗಾಳಿ ಅವರು ಉತ್ಸಾಹದಿಂದ ಮತ ಚಲಾಯಿಸಿದರು. ಅದೇ ರೀತಿ ಬಸವನ ಬಾಗೇವಾಡಿ ಮತಕ್ಷೇತ್ರದಲ್ಲಿ ತಮ್ಮ 96 ವರ್ಷದ ಇಳಿ ವಯಸ್ಸಿನಲ್ಲಿ ಸಿದ್ದವ್ವ ಡೊನೂರ ಅವರು ಮರಿಮೊಮ್ಮಗಳೊಡನೆ ಮಸಬಿನಾಳ ಗ್ರಾಮದ ಮತಗಟ್ಟೆಗೆ ಬಂದು ಮತವನ್ನು ಚಲಾಯಿಸಿ ಎಲ್ಲರಿಗೂ ಆದರ್ಶರಾದರು.

ಸವದತ್ತಿ ತಾಲೂಕಿನ ಆಲದಕಟ್ಟಿ ಕೆ.ಎಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲದಕಟ್ಟಿ ಕೆ.ಎಂ ಗ್ರಾಮದ ನಿವಾಸಿ ಅಂತಾರಾಷ್ಟ್ರೀಯ ಮಟ್ಟದ ವ್ಹೀಲ್‌ಚೇರ್‌ ಬಾಸ್ಕೆಟ್ ಬಾಲ್ ಕ್ರೀಡಾಪಟು ಕುಮಾರಿ ಲಕ್ಷ್ಮೀ ರಾಯಪ್ಪ ರಾಯಣ್ಣವರ ಅವರು ಸ್ವಗ್ರಾಮದಲ್ಲಿ ಮತ ಚಲಾಯಿಸಿ ಅನಿಸಿಕೆ ಹಂಚಿಕೊಂಡರು. ಇನ್ನು ಅಂತಾರಾಷ್ಟ್ರೀಯ ಈಜುಗಾರ ವಿಶೇಷ ಮತದಾರರಾದ ಮೊಯಿನ್ ಅವರು ಬೆಳಗಾವಿ ನಗರದಲ್ಲಿ ತಮ್ಮ ಅಮೂಲ್ಯವಾದ ಮತ ಚಲಾಯಿಸಿದರು.

ಇದನ್ನೂ ಓದಿ | Lok Sabha Election 2024: ಸಂಜೆ 5ಗಂಟೆವರೆಗೆ ಶೇ.66.05 ವೋಟಿಂಗ್‌; ಚಿಕ್ಕೋಡಿಯಲ್ಲಿ ಅತಿ ಹೆಚ್ಚು

ಹಲವೆಡೆ ಮತದಾನ ಬಹಿಷ್ಕಾರ

ವಿವಿಧ ಕಾರಣಗಳಿಗಾಗಿ ಹಲವೆಡೆ ಜನರು ಮತದಾನ ಬಹಿಷ್ಕಾರ ಮಾಡಿರುವುದು ಕಂಡುಬಂದಿದೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣ 18ನೇ ವಾರ್ಡ್‌ನಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ ಸಾವು ಪ್ರಕರಣ ಖಂಡಿಸಿ ಮತಗಟ್ಟೆ ಸಂಖ್ಯೆ 147 ರಲ್ಲಿ ಜನರು ಮತದಾನ ಬಹಿಷ್ಕಾರ ಮಾಡಿದರು. ಅದೇ ರೀತಿ ಕುಕನೂರು ತಾಲೂಕಿನ ಗುದ್ನೆಪ್ಪನಮಠ ಗ್ರಾಮದಲ್ಲಿ ಸೇವಾದಾರರ ಭೂಮಿಯನ್ನು ಸರ್ಕಾರಿ ಕಟ್ಟಡಗಳ ನಿರ್ಮಾಣಕ್ಕೆ ಒತ್ತುವರಿ ವಿರೋಧಿಸಿ ಮತದಾನ ಬಹಿಷ್ಕಾರವಾಗಿದೆ.

ರಾಯಚೂರಿನ ಮಾನ್ವಿ ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ ಮತಗಟ್ಟೆ ಸಂಖ್ಯೆ 254 ಹಾಗೂ 255 ರಲ್ಲಿ ಮತದಾನ ಸ್ಥಗಿತವಾಗಿತ್ತು. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಚಿಲಕನಹಟ್ಟಿ ಗ್ರಾಮದ ಮಾರುತಿ ನಗರದಲ್ಲಿ ಪ್ರತ್ಯೇಕ ಮತದಾನ ಕೇಂದ್ರ ಮಾಡದ ಹಿನ್ನೆಲೆ ಮತದಾರರು ಮತ ಹಾಕಲಿಲ್ಲ. ಕಂದಾಯ ಗ್ರಾಮ ಮಾಡಿ ಮೂಲಭೂತ ಸೌಲಭ್ಯ ನೀಡಲು ಆಗ್ರಹಿಸಿ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಹಳವ ತರ್ಲಗಟ್ಟ ಗ್ರಾಮದಲ್ಲಿ ಮತದಾನ ಬಹಿಷ್ಕಾರ ಮಾಡಲಾಗಿದೆ.

ವೋಟರ್‌ ಲಿಸ್ಟ್‌ನಲ್ಲಿ ಹೆಸರು ಡಿಲೀಟ್; ಮತದಾರರ ಆಕ್ರೋಶ

ಹುಬ್ಬಳ್ಳಿ: ಮತಗಟ್ಟೆಯಲ್ಲಿ 200 ರಿಂದ 300 ಜನ ಮತದಾರರ ಹೆಸರುಗಳು ಡಿಲೀಟ್ ಆಗಿವೆ ಎಂದು ಮತಗಟ್ಟೆ ಮುಂದೆ ಮತದಾರರು ಆಕ್ರೋಶ ಹೊರಹಾಕಿದ ಘಟನೆ ಹುಬ್ಬಳ್ಳಿಯ ಪೆಂಡಾರಗಲ್ಲಿ ಸರ್ಕಾರಿ ಶಾಲೆಯಲ್ಲಿ ನಡೆಯಿತು. ಪೆಂಡಾರಗಲ್ಲಿಯ ಮತಗಟ್ಟೆ ಸಂಖ್ಯೆ 26 ಹಾಗೂ 27 ರಲ್ಲಿ ಹಲವು ಹೆಸರು ನಾಪತ್ತೆಯಾಗಿವೆ ಎಂದು ಮತದಾರರು ಕಿಡಿಕಾರಿದರು.

ಇದನ್ನೂ ಓದಿ | Lok Sabha Election: 3ನೇ ಹಂತದಲ್ಲಿ ಶೇ.60ರಷ್ಟು ಮತದಾನ, ಕಳೆದ ಬಾರಿಗಿಂತಲೂ ಕಡಿಮೆ

ಬಿಜೆಪಿ ಪರ‌ ಮತ ಹಾಕಿ ಎಂದ ಅಧಿಕಾರಿ ವಿರುದ್ಧ ಆಕ್ರೋಶ

ಚಿಕ್ಕೋಡಿ: ಬಿಜೆಪಿ ಪರ‌ ಮತ ಚಲಾಯಿಸುವಂತೆ ಮತಗಟ್ಟೆ ಒಳಗಿನ ಅಧಿಕಾರಿ ಒತ್ತಾಯ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮತಗಟ್ಟೆ ಎದುರು ಪ್ರತಿಭಟನೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಕೋಟೆಬಾಗ ಶಾಲೆಯ ಬೂತ್ ನಂಬರ್ 162 ರಲ್ಲಿ ನಡೆಯಿತು. ಮಹಿಳೆಯರಿಗೆ ಬಿಜೆಪಿ ಪರ ಮತಚಲಾಯಿಸುವಂತೆ ಸಿಬ್ಬಂದಿ ಒತ್ತಾಯ ಮಾಡಿದ್ದಾರೆ ಎಂದು ಮತಗಟ್ಟೆಗೆ ಕೈ ಕಾರ್ಯಕರ್ತರು ಆಗಮಿಸಿ ಆಕ್ರೋಶ ಹೊರಹಾಕಿದರು. ಇದರಿಂದ ಅವರನ್ನು ತಡೆಯಲು ಹೋದ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.

ಮೊದಲ ಹಂತದ ಚುನಾವಣೆಯಲ್ಲಿ ಶೇ.69.23 ಮತದಾನ

ರಾಜ್ಯದಲ್ಲಿ ಲೋಕಸಭಾ ಚುನಾವಣೆ 2024ರ (Lok Sabha Election 2024) ಮೊದಲ ಹಂತದ ಮತದಾನ ಏ.26ರಂದು ನಡೆದಿತ್ತು. ಬೆಂಗಳೂರು, ಮೈಸೂರು ಸೇರಿ 14 ಕ್ಷೇತ್ರಗಳಿಗೆ ನಡೆದಿದ್ದ ಚುನಾವಣೆಯಲ್ಲಿ ಶೇ.69.23 ಮತದಾನ ದಾಖಲಾಗಿತ್ತು. ಮೊದಲ ಹಂತದಲ್ಲಿ ಮಂಡ್ಯ ಕ್ಷೇತ್ರದಲ್ಲಿ ಅತಿಹೆಚ್ಚು ಮತದಾನವಾಗಿತ್ತು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾನ ದಾಖಲಾಗಿತ್ತು.

ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ?

ಕ್ಷೇತ್ರ20242019
ಉಡುಪಿ-ಚಿಕ್ಕಮಗಳೂರುಶೇ. 76.06ಶೇ. 76.07
ಹಾಸನಶೇ. 77.51ಶೇ. 77.35
ದಕ್ಷಿಣ ಕನ್ನಡ
ಶೇ. 77.43ಶೇ. 77.99
ಚಿತ್ರದುರ್ಗ
ಶೇ. 73.11ಶೇ. 70.80
ತುಮಕೂರು
ಶೇ. 77.70ಶೇ. 77.43
ಮಂಡ್ಯಶೇ. 81.48ಶೇ. 80.59
ಮೈಸೂರುಕೊಡಗು
ಶೇ. 70.45ಶೇ. 69.51
ಚಾಮರಾಜನಗರ
ಶೇ. 76.59ಶೇ. 75.35
ಬೆಂಗಳೂರು ಗ್ರಾಮಾಂತರ
ಶೇ.67.29ಶೇ. 64.98
ಬೆಂಗಳೂರು ಉತ್ತರ
ಶೇ.54.42ಶೇ. 54.76
ಬೆಂಗಳೂರು ಸೆಂಟ್ರಲ್‌
ಶೇ. 52.81ಶೇ. 54.32
ಬೆಂಗಳೂರು ದಕ್ಷಿಣ
ಶೇ. 53.15ಶೇ. 53.70
ಚಿಕ್ಕಬಳ್ಳಾಪುರ
ಶೇ. 76.82ಶೇ. 76.74
ಕೋಲಾರಶೇ. 78.07
ಶೇ. 77.25
ಒಟ್ಟು ಶೇಕಡಾವಾರು ಮತದಾನ 69.23

2019ರ ಲೋಕಸಭಾ ಚುನಾವಣೆಯ ಒಟ್ಟು ಮತದಾನ ಎಷ್ಟು?

2019ರ ಲೋಕಸಭಾ ಚುನಾವಣೆಯಲ್ಲಿ ಎರಡೂ ಹಂತ ಸೇರಿ ಒಟ್ಟು ಶೇ. 68.96 ಮತದಾನ ನಡೆದಿತ್ತು. ಮಂಡ್ಯದಲ್ಲಿ ಅತಿಹೆಚ್ಚು ಶೇ. 80.59, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಶೇ. 53.70 ಮತದಾನ ದಾಖಲಾಗಿತ್ತು.

Continue Reading

ಬೆಂಗಳೂರು

Music Festival: ಬೆಂಗಳೂರಿನಲ್ಲಿ ಮೇ 12ರಂದು ಸಪ್ತಕ ʼಸಂಗೀತ ಸಂಭ್ರಮʼ

Music Festival: ಬೆಂಗಳೂರಿನ ಮಲ್ಲೇಶ್ವರದ ವೈಯಾಲಿಕಾವಲ್‌ನ ಚೌಡಯ್ಯ ಸ್ಮಾರಕ ಸಭಾ ಭವನದಲ್ಲಿ ಸಂಗೀತ ಸಂಭ್ರಮ ಕಾರ್ಯಕ್ರಮ ನಡೆಯಲಿದೆ.

VISTARANEWS.COM


on

Music Festival
Koo

ಬೆಂಗಳೂರು: ಸಪ್ತಕ ಸಂಸ್ಥೆಯ 19ನೇ ವಾರ್ಷಿಕ ಸಂಗೀತ ಉತ್ಸವದ ನಿಮಿತ್ತ ಮೇ 12ರಂದು ಸಂಜೆ 5.30ಕ್ಕೆ ಸಂಗೀತ ಸಂಭ್ರಮ 552ನೇ ಕಾರ್ಯಕ್ರಮವನ್ನು (Music Festival) ನಗರದ ಮಲ್ಲೇಶ್ವರದ ವೈಯಾಲಿಕಾವಲ್‌ನ ಚೌಡಯ್ಯ ಸ್ಮಾರಕ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಪ್ತಕ ಸಂಚಾಲಕರಾದ ಜಿ.ಎಸ್‌.ಹೆಗಡೆ ತಿಳಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಅಕಾಡೆಮಿ ಆಫ್‌ ಮ್ಯೂಸಿಕ್‌ ಪ್ರಾಯೋಕತ್ವದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಡಾ. ಕೆ ಧರಿಣಿದೇವಿ ಮಾಲಗತ್ತಿ ಭಾಗವಹಿಸಲಿದ್ದಾರೆ.

ಕೋಲ್ಕೊತಾ ಗಾಯಕಿ ವಿದುಷಿ ರುಚಿರಾ ಪಾಂಡಾ, ಬೆಂಗಳೂರಿನ ತಬಲಾ ವಾದಕ ಪಂ. ರಾಜೇಂದ್ರ ನಾಕೋಡ, ಹಾರ್ಮೋನಿಯಂ ವಾದಕ ಪಂ. ವ್ಯಾಸಮೂರ್ತಿ ಕಟ್ಟಿ, ಮುಂಬಯಿಯ ತಬಲಾ ಸೋಲೋ ಕಲಾವಿದ ಪಂ. ಯೋಗೀಶ ಸಂಸಿ, ಪುಣೆಯ ಹಾರ್ಮೋನಿಯಮ್ ಲೆಹರಾ ಕಲಾವಿದರಾದ ತನ್ಮಯ ದೇವಚಕೆ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Book Release: ಮೈಸೂರಿನಲ್ಲಿ ಮೇ 9ರಂದು ಐತಿಚಂಡ ರಮೇಶ ಉತ್ತಪ್ಪ ಅವರ 4 ಪುಸ್ತಕ ಬಿಡುಗಡೆ, ಸಂವಾದ

Continue Reading

ಕರ್ನಾಟಕ

BESCOM Helpline: ಮಳೆ ಹಾನಿ; ದೂರು ಸಲ್ಲಿಸಲು ಬೆಸ್ಕಾಂ ಗ್ರಾಹಕರಿಗೆ ಪರ್ಯಾಯ ವಾಟ್ಸ್‌ಆ್ಯಪ್‌, ದೂರವಾಣಿ ಸಂಖ್ಯೆ

BESCOM Helpline: ಮಳೆಗಾಲದಲ್ಲಿ ವಿದ್ಯುತ್‌ ಸಮಸ್ಯೆಗಳು ಇದ್ದರೆ ದೂರು ಸಲ್ಲಿಸಲು ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಗ್ರಾಹಕರಿಗೆ ಪರ್ಯಾಯ ವಾಟ್ಸ್‌ಆ್ಯಪ್‌ ಸಂಖ್ಯೆಗಳನ್ನು ಬೆಸ್ಕಾಂ ನೀಡಿದೆ. ಗ್ರಾಹಕರು ಬೆಸ್ಕಾಂ ಸಂಖ್ಯೆಗೆ ಸಂದೇಶ ಕಳುಹಿಸಿ ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದು.

VISTARANEWS.COM


on

Bescom Helpline
Koo

ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಗಾಳಿ-ಮಳೆಗೆ ವಿದ್ಯುತ್‌ ಕಂಬಗಳು ಮುರಿದು, ವಿದ್ಯುತ್‌ ಮೂಲ ಸೌಕರ್ಯ ಹಾನಿಗೊಳಗಾಗಿವೆ. ಹೀಗಾಗಿ ಬೆಸ್ಕಾಂ ಸಹಾಯವಾಣಿ 1912ಗೆ ದೂರುಗಳು ಹರಿದು ಬಂದಿದ್ದು, ಕರೆಗಳ ಒತ್ತಡದಿಂದಾಗಿ ಗ್ರಾಹಕರಿಗೆ 1912 ಸಂಪರ್ಕ ಸಾಧ್ಯವಾಗುತ್ತಿಲ್ಲ. ಮಳೆಗಾಲದಲ್ಲಿ ಗ್ರಾಹಕರ ವಿದ್ಯುತ್‌ ಸಮಸ್ಯೆಗಳನ್ನು (rain damage) ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಗ್ರಾಹಕರಿಗೆ ಪರ್ಯಾಯ ವಾಟ್ಸ್‌ಆ್ಯಪ್‌ ಸಂಖ್ಯೆಗಳನ್ನು (BESCOM Helpline) ಬೆಸ್ಕಾಂ ನೀಡಿದೆ.

ವಾಟ್ಸ್‌ಆ್ಯಪ್‌ ಸಂಖ್ಯೆಗಳಿಗೆ ಗ್ರಾಹಕರು ಸಂದೇಶ ಹಾಗೂ ಛಾಯಚಿತ್ರಗಳನ್ನು ತಮ್ಮ ವಿಳಾಸದೊಂದಿಗೆ ಕಳುಹಿಸಿ ತಮ್ಮ ವಿದ್ಯುತ್‌ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದಾಗಿದೆ. ಜತೆಗೆ ಎಸ್‌ಎಂಎಸ್‌ಗಳನ್ನು ಕಳುಹಿಸಲು ಬೆಸ್ಕಾಂ ಬೆಂಗಳೂರು ಮಹಾನಗರ ವ್ಯಾಪ್ತಿಯ ಗ್ರಾಹಕರಿಗೆ 12 ಮೊಬೈಲ್‌ ಸಂಖ್ಯೆಗಳನ್ನು ಕೂಡ ಒದಗಿಸಲಾಗಿದೆ.

ಇದನ್ನೂ ಓದಿ | Mahila Samman Saving Certificate : ಮಹಿಳಾ ಸಮ್ಮಾನ್‌ ಸೇವಿಂಗ್‌ ಸರ್ಟಿಫಿಕೇಟ್‌ಗೆ 7.5% ಬಡ್ಡಿ, ಏಪ್ರಿಲ್‌ 1ರಿಂದ ಲಭ್ಯ

ಜಿಲ್ಲಾವಾರು ವಾಟ್ಸ್‌ಆ್ಯಪ್‌ ಸಂಖ್ಯೆಗಳು

ಬೆಂಗಳೂರು ಪೂರ್ವ- 8277884013, ಬೆಂಗಳೂರು ಪಶ್ಚಿಮ- 8277884012, ಬೆಂಗಳೂರು ಉತ್ತರ- 8277884014, ಬೆಂಗಳೂರು ದಕ್ಷಿಣ- 8277884011. ಕೋಲಾರ- 8277884015, ಚಿಕ್ಕಬಳ್ಳಾಪುರ- 8277884016, ಬೆಂಗಳೂರು ಗ್ರಾಮಾಂತರ- 8277884017, ರಾಮನಗರ- 8277884018, ತುಮಕೂರು- 8277884019, ಚಿತ್ರದುರ್ಗ- 8277884020 ಹಾಗೂ ದಾವಣಗೆರೆ- 8277884021.

ಸುರಕ್ಷತೆ ಸಂಬಂಧಿಸಿದ ದೂರುಗಳಿಗೆ ವಾಟ್ಸ್‌ಆ್ಯಪ್‌ ಸಂಖ್ಯೆ: 9483191212, 9483191222 ಮತ್ತು ಬೆಸ್ಕಾಂ ಸಾಮಾನ್ಯ ವಾಟ್ಸ್‌ ಆಪ್‌ ಸಂಖ್ಯೆ- 9449844640.

ಈ ಕೆಳಗಿನ ಮೊಬೈಲ್‌ ಸಂಖ್ಯೆಗಳು- ಕೇವಲ ಎಸ್‌ಎಂಎಸ್‌ಗಳಿಗೆ ಮಾತ್ರ: 9480816108, 9480816109, 9480816110, 9480816111, 9480816112, 9480816113, 9480816114, 9480816115, 9480816116, 9480816117, 9480816118 ಮತ್ತು 9480816119.

Continue Reading

ಕರ್ನಾಟಕ

Murder Case: ಬೆಂಗಳೂರಿನಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ; ನಡು ರಸ್ತೆಯಲ್ಲೇ ಅಟ್ಟಾಡಿಸಿ ಕೊಲೆ

Murder Case: ಬೆಂಗಳೂರಿನ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿಶೀಟರ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲ್ಲಲಾಗಿದೆ.

VISTARANEWS.COM


on

Murder Case
Koo

ಬೆಂಗಳೂರು: ನಡು ರಸ್ತೆಯಲ್ಲೇ ರೌಡಿಶೀಟರ್‌ನ ಅಟ್ಟಾಡಿಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಭೀಕರ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ರೌಡಿಶೀಟರ್‌ ಪ್ರಾಣ ಬಿಟ್ಟಿದ್ದು, ಘಟನಾ ಸ್ಥಳಕ್ಕೆ ಬಾಣಸವಾಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರ್ತಿಗೇಯನ್ (40) ಕೊಲೆಯಾದವ. ಮೃತ ವ್ಯಕ್ತಿ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್, ಬಾಣಸವಾಡಿ ಪೊಲೀಸ್ ಠಾಣೆಯ ರೌಡಿ ಶೀಟ್‌ ದಾಖಲಾಗಿತ್ತು. ಎರಡು ವರ್ಷಗಳ ಹಿಂದೆ ರೌಡಿಶೀಟ್‌ನಿಂದ ಕೈ ಬಿಡಲಾಗಿತ್ತು. ಈ ಹಿಂದೆ ಬಾಣಸವಾಡಿ ಪೊಲೀಸರಿಂದ ರೌಡಿಶೀಟರ್‌ ಕಾರ್ತಿಗೇಯನ್ ಗಡಿಪಾರಾಗಿದ್ದ. ಮತ್ತೆ ಬೆಂಗಳೂರಿಗೆ ಬಂದು‌ ಬಾಣಸವಾಡಿಯಲ್ಲಿ ರಿಯಲ್ ಎಸ್ಟೇಟ್ ವ್ಯವಹಾರದ ಕಚೇರಿ ತೆರೆದಿದ್ದ. ಆದರೆ, ಮಂಗಳವಾರ ರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿ ಕೊಲೆ ಮಾಡಿದ್ದಾರೆ.

ಇದನ್ನೂ ಓದಿ | Prajwal Revanna case: ಪ್ರಜ್ವಲ್‌ ರೇವಣ್ಣ ವಿರುದ್ಧ 196 ದೇಶಗಳಿಗೆ ಇಂಟರ್‌ಪೋಲ್‌ ಮೆಸೇಜ್‌; ಎಲ್ಲೇ ಕಂಡರೂ ಸಿಗುತ್ತೆ ಮಾಹಿತಿ!

ಹಬ್ಬಕ್ಕೆ ಊರಿಗೆ ಹೋದ ಅಕ್ಕನ ಮನೆಗೆ ಕನ್ನ; ಸಾಕ್ಷಿ ನಾಶಕ್ಕೆ ಖಾರದ ಪುಡಿ ಚೆಲ್ಲಿದ ತಂಗಿ!

Theft Case In Bengaluru

ಬೆಂಗಳೂರು: ಈಗೀನ ಕಾಲದಲ್ಲಿ ಯಾರನ್ನಾ ನಂಬೋದು ಬಿಡೋದು? ಅಕ್ಕನ ಮನೆಯಲ್ಲಿಯೇ ಕಳ್ಳತನ ಮಾಡಿದ್ದ ತಂಗಿಯ (Theft Case) ಬಂಧನವಾಗಿದೆ. ಬೆಂಗಳೂರಿನ ಕೆಂಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಉಮಾ ಬಂಧಿತ ಆರೋಪಿಯಾಗಿದ್ದಾಳೆ. ಬಂಧಿಯಾಗಿರುವ ಉಮಾಳಿಂದ 65 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಚೌಡೇಶ್ವರಿ ದೇವರ ಹಬ್ಬ ಎಂದು ಉಮಾಳ ಅಕ್ಕ ಊರಿಗೆ ಹೋಗಿದ್ದರು. ಹೋಗುವ ಮುನ್ನ ಸಂಬಂಧಿಗೆ ಮನೆಯ ಕೀ‌ ಕೊಟ್ಟು ಹೋಗಿದ್ದರು. ನಂತರ ಕಳೆದ ಏ. 24ರ ರಾತ್ರಿ ಆಕೆಯ ಸಂಬಂಧಿ ಮನೆಗೆ ಮಲಗಲು ಹೋಗಿದ್ದಾಗ ನಕಲಿ ಕೀ ಬಳಸಿ ಕಳ್ಳತನ ಮಾಡಿದ್ದಳು. ಉಮಾ 182 ಗ್ರಾಂ ಚಿನ್ನಾಭರಣ ಹಾಗು 52 ಲಕ್ಷ ನಗದು ಕಳ್ಳತನ ಮಾಡಿದ್ದಳು.

ಇನ್ನೂ ಮಂಡ್ಯ ಮೂಲದ ಆರೋಪಿ ಉಮಾ ಲಗ್ಗೆರೆಯಲ್ಲಿ ವಾಸವಾಗಿದ್ದಳು. ನಾಗವಾರದಲ್ಲಿ ಆಕೆಯ ಅಕ್ಕ ಹಾಗೂ ಬಾವ ವಾಸವಾಗಿದ್ದರು. ಉಮಾ ಸ್ತ್ರಿ ಶಕ್ತಿ ಸೇರಿದಂತೆ ಹಲವು ಕಡೆ ಸಾಲ ಮಾಡಿಕೊಂಡಿದ್ದಳು. ಇತ್ತೀಚೆಗೆ ಬಾವನ ಜತೆ ಕೂಡ ಹಣ ಕೇಳಿದ್ದಳು, ಆದರೆ ಅವರು ಕೊಟ್ಟಿರಲಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

ಇದೇ ಕಾರಣಕ್ಕೆ ಅಕ್ಕ ಮನೆಯವರು ಊರಿಗೆ ಹೋದಾಗ, ನಕಲಿ ಕೀ ಬಳಸಿ ಚಿನ್ನ-ನಗದು ಎಗರಿಸಿದ್ದಳು. ಇತ್ತ ಕಳ್ಳತನ ಮಾಡಿದ ಬಳಿಕ ಖಾರದಪುಡಿ ಚೆಲ್ಲಿ ಸಾಕ್ಷಿ ನಾಶ ಮಾಡಿ ಕಾಲ್ಕಿತ್ತಿದ್ದಳು. ನಂತರ ಕಳ್ಳತನ ಕೇಸ್‌ನ ತನಿಖೆಗಿಳಿದ ಕೆಂಗೇರಿ ಪೊಲೀಸರು ಆರೋಪಿತೆಯನ್ನು ಬಂಧಿಸಿ ಆರು ದಿನಗಳ ಕಾಲ ಕಸ್ಟಿಡಿಗೆ ಪಡೆದಿದ್ದಾರೆ.

Continue Reading
Advertisement
70.94 percent voting in Koppal Lok Sabha constituency says Koppal DC Nalin Atul
ಕೊಪ್ಪಳ3 hours ago

Lok Sabha Election 2024: ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಶೇ 70.94ರಷ್ಟು ಮತದಾನ

Rampura PSI Mahesh Hosapete admitted to the hospital Hanagal village road accident injured persons
ಕರ್ನಾಟಕ3 hours ago

Road Accident: ಅಪಘಾತವಾಗಿ ರಕ್ತದ ಮಡುವಿನಲ್ಲಿ ಬಿದ್ದ ಯುವಕರನ್ನು ಆಸ್ಪತ್ರೆಗೆ ಸೇರಿಸಿದ ಪಿಎಸ್‌ಐ

Lok Sabha Election 2024
ಕರ್ನಾಟಕ3 hours ago

Lok Sabha Election 2024: 2ನೇ ಹಂತದಲ್ಲಿ ಶೇ.70.41 ಮತದಾನ; ಕಳೆದ ಬಾರಿಗಿಂತ ಹೆಚ್ಚು, ಚಿಕ್ಕೋಡಿಯಲ್ಲಿ ಗರಿಷ್ಠ

Mayawati
ಪ್ರಮುಖ ಸುದ್ದಿ3 hours ago

Mayawati: ನೇಮಿಸಿದ 5 ತಿಂಗಳಲ್ಲೇ ಸೋದರಳಿಯನನ್ನು ಉತ್ತರಾಧಿಕಾರಿ ಹುದ್ದೆಯಿಂದ ತೆಗೆದ ಮಾಯಾವತಿ!

IPL 2024
ಪ್ರಮುಖ ಸುದ್ದಿ4 hours ago

IPL 2024 : ರಾಜಸ್ಥಾನ್​ ವಿರುದ್ಧ ಡೆಲ್ಲಿಗೆ 20 ರನ್​ ಗೆಲುವು, ಪ್ಲೇಆಫ್ ಕನಸು ಜೀವಂತ

Music Festival
ಬೆಂಗಳೂರು4 hours ago

Music Festival: ಬೆಂಗಳೂರಿನಲ್ಲಿ ಮೇ 12ರಂದು ಸಪ್ತಕ ʼಸಂಗೀತ ಸಂಭ್ರಮʼ

Amanatullah Khan
ದೇಶ4 hours ago

Amanatullah Khan: ಪೆಟ್ರೋಲ್‌ ಬಂಕ್‌ ಸಿಬ್ಬಂದಿ ಮೇಲೆ ಆಪ್‌ ಎಂಎಲ್‌ಎ ಪುತ್ರನಿಂದ ಹಲ್ಲೆ; ಬಿತ್ತು ಕೇಸ್

Yuzvendra Chahal
ಕ್ರಿಕೆಟ್4 hours ago

Yuzvendra Chahal : ಟಿ20 ವಿಕೆಟ್​​ಗಳ ಗಳಿಕೆಯಲ್ಲಿ ನೂತನ ದಾಖಲೆ ಬರೆದ ಸ್ಪಿನ್ನರ್ ಯಜ್ವೇಂದ್ರ ಚಹಲ್​

Bescom Helpline
ಕರ್ನಾಟಕ5 hours ago

BESCOM Helpline: ಮಳೆ ಹಾನಿ; ದೂರು ಸಲ್ಲಿಸಲು ಬೆಸ್ಕಾಂ ಗ್ರಾಹಕರಿಗೆ ಪರ್ಯಾಯ ವಾಟ್ಸ್‌ಆ್ಯಪ್‌, ದೂರವಾಣಿ ಸಂಖ್ಯೆ

Nissan India
ಆಟೋಮೊಬೈಲ್5 hours ago

Nissan India : ಉಚಿತ ಏಸಿ ರಿಪೇರಿ ಮಾಡಿಸಿಕೊಳ್ಳಲು ನಿಸ್ಸಾನ್ ಕಾರು ಮಾಲೀಕರಿಗೆ ಇಲ್ಲಿದೆ ಅವಕಾಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna has severe chest pain Admission in Victoria
ರಾಜಕೀಯ6 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ9 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ11 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ1 day ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ1 day ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌