Koppala News SSLC re evaluation Gangavati gets 4th 7th rankKoppala News: ಎಸ್ಎಸ್ಎಲ್‌ಸಿ ಮರು ಮೌಲ್ಯಮಾಪನ; ಗಂಗಾವತಿಗೆ 4, 7ನೇ ರ‍್ಯಾಂಕ್‌ - Vistara News

ಕರ್ನಾಟಕ

Koppala News: ಎಸ್ಎಸ್ಎಲ್‌ಸಿ ಮರು ಮೌಲ್ಯಮಾಪನ; ಗಂಗಾವತಿಗೆ 4, 7ನೇ ರ‍್ಯಾಂಕ್‌

Koppala News: 2022-23ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಕಡಿಮೆ ಅಂಕ ಲಭಿಸಿದ ಹಿನ್ನೆಲೆಯಲ್ಲಿ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದ ಗಂಗಾವತಿಯ ಲಿಟಲ್ ಹಾರ್ಟ್ ಶಾಲೆಯ ವಿದ್ಯಾರ್ಥಿನಿಯರು 2 ವಿಷಯಗಳಲ್ಲಿ ಹೆಚ್ಚುವರಿ ಅಂಕ ಪಡೆದಿದ್ದು, ಸೃಜನ ಇಂದರಗಿ ರಾಜ್ಯಕ್ಕೆ 4ನೇ ರ‍್ಯಾಂಕ್‌ ಪಡೆದರೆ ವಂದನಾ ಭಂಡಾರ್ಕರ್ 7ನೇ ರ‍್ಯಾಂಕ್‌ ಪಡೆದಿದ್ದಾರೆ.

VISTARANEWS.COM


on

SSLC 4th and 7th Rank students at gangavthi
ಎಸ್ಎಸ್ಎಲ್‌ಸಿ ಪರೀಕ್ಷಾ ಫಲಿತಾಂಶದ ಮರುಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕಗಳನ್ನು ಪಡೆದು ರಾಜ್ಯಕ್ಕೆ 4, 7ನೇ ರ‍್ಯಾಂಕ್‌ ಪಡೆದ ಗಂಗಾವತಿಯ ಲಿಟಲ್ ಹಾರ್ಟ್ ಶಾಲೆಯ ವಿದ್ಯಾರ್ಥಿನಿಯರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗಂಗಾವತಿ: ಎಸ್ಎಸ್ಎಲ್‌ಸಿ (SSLC Exam) ಪರೀಕ್ಷೆಯ ಫಲಿತಾಂಶದ ಮರುಮೌಲ್ಯಮಾಪನಕ್ಕೆ (Re-evaluation) ಕಳುಹಿಸಿದ ಬಳಿಕ ಇದೀಗ ಪರೀಕ್ಷಾ ಮಂಡಳಿ ಫಲಿತಾಂಶ (Result) ನೀಡಿದ್ದು, ಗಂಗಾವತಿಯ ವಿದ್ಯಾರ್ಥಿನಿಯರಿಗೆ ರಾಜ್ಯ ಮಟ್ಟದಲ್ಲಿ ನಾಲ್ಕನೇ ಮತ್ತು ಏಳನೇ ರ‍್ಯಾಂಕ್‌ (Rank) ಲಭಿಸಿದೆ.

ಗಂಗಾವತಿ ನಗರದಲ್ಲಿರುವ ಲಿಟಲ್ ಹಾರ್ಟ್ ಶಾಲೆಯ ಸೃಜನ ಇಂದರಗಿ ರಾಜ್ಯಮಟ್ಟದ ನಾಲ್ಕನೇ ರ‍್ಯಾಂಕ್‌ ಮತ್ತು ವಂದನಾ ಭಂಡಾರ್ಕರ್ ಎಂಬ ವಿದ್ಯಾರ್ಥಿನಿ 7ನೇ ರ‍್ಯಾಂಕ್‌ ಪಡೆದು ಗಮನ ಸೆಳೆದಿದ್ದಾರೆ. ಕಡಿಮೆ ಅಂಕ ಲಭಿಸಿದ ಹಿನ್ನೆಲೆಯಲ್ಲಿ ಈ ಇಬ್ಬರು ವಿದ್ಯಾರ್ಥಿನಿಯರು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು.

2022-23ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ 625ಕ್ಕೆ 617 ಅಂಕ ಪಡೆದಿದ್ದ ವಿದ್ಯಾರ್ಥಿನಿಯರಾದ ಸೃಜನ ಇಂದರಗಿ ಹಾಗೂ ವಂದನಾ ಭಂಡಾರಕರ್ ಕ್ರಮವಾಗಿ ಇಂಗ್ಲಿಷ್ ಹಾಗೂ ಗಣಿತ ವಿಷಯಗಳನ್ನು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: WTC Final 2023: ಭಾರತ, ಆಸ್ಟ್ರೇಲಿಯಾ​ ಆಟಗಾರರು ಕಪ್ಪು ಪಟ್ಟಿ ಧರಿಸಿ ಆಡಿದ್ದರ ಹಿಂದಿದೆ ಭಾವುಕ ಕಾರಣ

ಸೃಜನ ಇಂದರಗಿ ಇಂಗ್ಲಿಷ್ ವಿಷಯದಲ್ಲಿ 5 ಅಂಕ, ವಂದನಾ ಭಂಡಾರಕರ್ ಗಣಿತದಲ್ಲಿ 2 ಅಂಕ ಹೆಚ್ಚುವರಿ ಪಡೆದಿದ್ದಾರೆ. ಇದೀಗ ಸೃಜನಾ 625ಕ್ಕೆ 622 ಅಂಕ ಹಾಗೂ ವಂದನಾ 625ಕ್ಕೆ 619 ಅಂಕ ಪಡೆದು ಕ್ರಮವಾಗಿ ರಾಜ್ಯಕ್ಕೆ 4ನೇ ಹಾಗೂ 7ನೇ ರ‍್ಯಾಂಕ್‌ ಪಡೆದುಕೊಂಡಿದ್ದಾರೆ ಎಂದು ಶಾಲೆಯ ಕಾರ್ಯದರ್ಶಿ ಜಗನ್ನಾಥ ಆಲಂಪಲ್ಲಿ ಹಾಗೂ ಮುಖ್ಯಶಿಕ್ಷಕಿ ಪ್ರಿಯಾಕುಮಾರಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಮೊದಲ ಹಂತದ ಮತದಾನ ಬೆನ್ನಲ್ಲೇ ಕಾಂಗ್ರೆಸ್‌, ಬಿಜೆಪಿ ಅಲರ್ಟ್;‌ ‘ಉತ್ತರ’ದತ್ತ ಚಿತ್ತ, 13 ಸಚಿವರಿಗೆ ಟಾಸ್ಕ್!

ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದ್ದು, ಎರಡನೇ ಹಂತದ ಚುನಾವಣೆಗೆ ಬಿಜೆಪಿ ಹಾಗೂ ಕಾಂಗ್ರೆಸ್‌ ಸಜ್ಜಾಗಿವೆ. ಉತ್ತರ ಕರ್ನಾಟಕದೆಲ್ಲೆಡೆ ಅಬ್ಬರದ ಪ್ರಚಾರದ ಮೂಲಕ ಜನರ ವಿಶ್ವಾಸ ಗಳಿಸುವುದು ಎರಡೂ ಪಕ್ಷಗಳ ನಾಯಕರ ಗುರಿಯಾಗಿದೆ.

VISTARANEWS.COM


on

Lok Sabha
Koo

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಇದುವರೆಗೆ ದಕ್ಷಿಣ ಕರ್ನಾಟಕ ಭಾಗದಲ್ಲಿಯೇ ಬೀಡುಬಿಟ್ಟಿದ್ದ ರಾಜಕೀಯ ಪಕ್ಷಗಳ ನಾಯಕರು ಈಗ ಉತ್ತರ ಕರ್ನಾಟಕದ ಕಡೆ ತೆರಳುತ್ತಿದ್ದಾರೆ. ಇನ್ನು, ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ದಿಸೆಯಲ್ಲಿ ಕಾಂಗ್ರೆಸ್‌ ಅಲರ್ಟ್‌ ಆಗಿದ್ದು, ಹೆಚ್ಚುವರಿಯಾಗಿ 13 ಕ್ಷೇತ್ರಗಳಿಗೆ ಸಚಿವರಿಗೆ ಜವಾಬ್ದಾರಿ ನೀಡಿದೆ. ಬಿಜೆಪಿ ನಾಯಕರು ಕೂಡ ಉತ್ತರ ಕರ್ನಾಟಕದಲ್ಲೇ ಮೊಕ್ಕಾ ಹೂಡಿದ್ದಾರೆ.

13 ಸಚಿವರಿಗೆ ಕಾಂಗ್ರೆಸ್‌ ಟಾಸ್ಕ್‌

ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲು ಪಣ ತೊಟ್ಟಿರುವ ರಾಜ್ಯ ಕಾಂಗ್ರೆಸ್‌, 13 ಸಚಿವರಿಗೆ 13 ಕ್ಷೇತ್ರಗಳನ್ನು ಹೆಚ್ಚುವರಿಯಾಗಿ ಜವಾಬ್ದಾರಿ ನೀಡಿದೆ. ಹೆಚ್ಚುವರಿ ಉಸ್ತುವಾರಿಗಳನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಆದೇಶಿಸಿದ್ದಾರೆ. ಆ ಮೂಲಕ ಕಾಂಗ್ರೆಸ್ ನಾಯಕರನ್ನು ಸದ್ಬಳಕೆ ಮಾಡಿಕೊಂಡು ಬಿಜೆಪಿಗೆ ತಿರುಗೇಟು ನೀಡುವುದು ಕಾಂಗ್ರೆಸ್‌ ತಂತ್ರವಾಗಿದೆ.

ಕ್ಷೇತ್ರವಾರು ಜವಾಬ್ದಾರಿ ಹಂಚಿಕೆ ಹೀಗಿದೆ

ದಾವಣಗೆರೆಡಾ.ಜಿ. ಪರಮೇಶ್ವರ್
ಧಾರವಾಡದಿನೇಶ್‌ ಗುಂಡೂರಾವ್
ಕೆ.ಜೆ. ಜಾರ್ಜ್ಉತ್ತರ ಕನ್ನಡ
ಚಿಕ್ಕೋಡಿಕೆ.ಎಚ್‌.ಮುನಿಯಪ್ಪ
ಹಾವೇರಿಕೃಷ್ಣ ಭೈರೇಗೌಡ
ಬಳ್ಳಾರಿ ರಾಮಲಿಂಗಾರೆಡ್ಡಿ
ಬೆಳಗಾವಿಬೈರತಿ ಸುರೇಶ್
ಕೊಪ್ಪಳಎಂ.ಸಿ. ಸುಧಾಕರ್
ರಾಯಚೂರುಕೆ.ಎನ್.ರಾಜಣ್ಣ
ಬೀದರ್ಕೆ. ವೆಂಕಟೇಶ್
ಶಿವಮೊಗ್ಗಎನ್.‌ ಚೆಲುವರಾಯಸ್ವಾಮಿ
ವಿಜಯಪುರಎಚ್.ಸಿ.ಮಹಾದೇವಪ್ಪ
ಬಾಗಲಕೋಟೆಡಿ. ಸುಧಾಕರ್

ಕಲಬುರಗಿಗೆ ತೆರಳಿದ ಸಿದ್ದರಾಮಯ್ಯ

ಮೊದಲ ಹಂತದ ಮತದಾನ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕರ್ನಾಟಕಕ್ಕೆ ತೆರಳಿದ್ದಾರೆ. ಸದ್ಯ, ಕಲಬುರಗಿಯಲ್ಲಿರುವ ಸಿದ್ದರಾಮಯ್ಯ ಬಳಿಕ ಇಂದೇ ತೇರದಾಳ, ರಬಕವಿ ಬನಹಟ್ಟಿಗೆ ತೆರಳಿ ಪ್ರಚಾರ ನಡೆಸಲಿದ್ದಾರೆ. ಬಾಗಲಕೋಟೆಯಲ್ಲಿ ಸಂಯುಕ್ತಾ ಪಾಟೀಲ್‌ ಅವರ ಪರ ಪ್ರಚಾರ ನಡೆಸಲಿರುವ ಸಿದ್ದರಾಮಯ್ಯ ಅವರು ಪ್ರಮುಖ ಕ್ಷೇತ್ರಗಳಲ್ಲಿ ಪ್ರಚಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ನಾಳೆಯಿಂದ ಮೋದಿ ಮೇನಿಯಾ

ಉತ್ತರ ಕರ್ನಾಟಕ, ಉತ್ತರ ಕನ್ನಡ ಸೇರಿ ಹಲವೆಡೆ ನರೇಂದ್ರ ಮೋದಿ ಅವರು ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ 28 ರಂದು ಬೆಳಗಾವಿ ಸೇರಿದಂತೆ ರಾಜ್ಯದ ನಾಲ್ಕು ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದಾರೆ. ಆದರೆ, ಏಪ್ರಿಲ್ 29ರಂದು ಒಂದೇ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಪಕ್ಷದ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಮತಯಾಚನೆ ಮಾಡಲಿದ್ದಾರೆ. ಅಲ್ಲಿ ಮಧ್ಯಾಹ್ನ 1 ರಿಂದ 1.50ರ ವರೆಗೂ ನಡೆಯಲಿರುವ ಬೃಹತ್‌ ಸಮಾವೇಶದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

Lok Sabha Election

ಅಲ್ಲಿಂದ ದಾವಣಗೆರೆ ಜಿಲ್ಲೆಗೆ ಪ್ರಯಾಣ ಬೆಳೆಸಲಿರುವ ಪ್ರಧಾನಿ ನರೇಂದ್ರ ಮೋದಿ, ಮಧ್ಯಾಹ್ನ 3 ರಿಂದ 3.50 ವರೆಗೂ ನಡೆಯಲಿರುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಬಳ್ಳಾರಿ ಜಿಲ್ಲೆಗೆ ಪ್ರಧಾನಿ ಮೋದಿ ಪ್ರಯಾಣಿಸಲಿದ್ದಾರೆ. ಅಲ್ಲಿನ ಪುನೀತ್ ರಾಜ್‍ಕುಮಾರ್ ಆಟದ ಮೈದಾನದಲ್ಲಿ ಸಂಜೆ 5ರಿಂದ 5.50ರ ವರೆಗೂ ಮೋದಿ ಸಮಾವೇಶದಲ್ಲಿ ಮಾತನಾಡಲಿದ್ದಾರೆ.

ಏಪ್ರಿಲ್ 28ರಂದು ರಾತ್ರಿ ಬಳ್ಳಾರಿಯ ಹೊಸಪೇಟೆಯಲ್ಲೇ ನರೇಂದ್ರ ಮೋದಿ ವಾಸ್ತವ್ಯ ಹೂಡಲಿದ್ದಾರೆ. ಮರುದಿನ ಏಪ್ರಿಲ್‌ 29ರಂದು ಬಳ್ಳಾರಿಯಿಂದ ಬಾಗಲಕೋಟೆಗೆ ಪ್ರವಾಸ ಮಾಡಲಿರುವ ಮೋದಿ, ಬಾಗಲಕೋಟೆಯಲ್ಲಿ ಮಧ್ಯಾಹ್ನ 12 ರಿಂದ, 12.55 ರವರೆಗೂ ನಡೆಯಲಿರುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಬಾಗಲಕೋಟೆಯಿಂದ ಮಹಾರಾಷ್ಟ್ರಕ್ಕೆ‌ ಮೋದಿ ಪ್ರಯಾಣ ಬೆಳೆಸಲಿದ್ದಾರೆ.

ಇದನ್ನೂ ಓದಿ: Randeep Surjewala: ಕನ್ನಡಿಗರ ತೆರಿಗೆ ಹಣದಲ್ಲಿ ಸುರ್ಜೇವಾಲಾ ಟ್ರಿಪ್;‌ ಕೆರಳಿ ಕೆಂಡವಾದ ಬಿಜೆಪಿ!

Continue Reading

ಬೆಂಗಳೂರು ಗ್ರಾಮಾಂತರ

Assault Case : ಕುಡಿದ ನಶೆಯಲ್ಲಿ ಸ್ನೇಹಿತನಿಗೆ ಬೆಂಕಿ ಹಚ್ಚಿದ ಮಿತ್ರ ದ್ರೋಹಿಗಳು ಅರೆಸ್ಟ್‌

Assault Case : ಬಾರ್‌ನಲ್ಲಿ ಕುಡಿಯಲು ಹೋದ ಗೆಳೆಯರು ಕ್ಷುಲ್ಲಕ ಕಾರಣಕ್ಕೆ ಕ್ಯಾತೆ ತೆಗೆದು ಸ್ನೇಹಿತನಿಗೆ ಬೆಂಕಿ ಹಚ್ಚಿ ಪರಾರಿ ಆಗಿದ್ದರು. ಇದೀಗ ಆನೇಕಲ್‌ ಪೊಲೀಸರು ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

VISTARANEWS.COM


on

By

assault case in anekla
Koo

ಆನೇಕಲ್: ಬಾರ್‌ನಲ್ಲಿ ಕುಡಿಯಲು ಹೋದವರು ಮತ್ತಿನಲ್ಲಿ ಗಲಾಟೆ (Assault Case) ಮಾಡಿಕೊಂಡಿದ್ದರು. ನಶೆಯ ಗುಂಗಿನಲ್ಲಿ ಸ್ನೇಹಿತನಿಗೆ ಬೆಂಕಿ ಹಚ್ಚಿದ್ದ ಆರೋಪಿಗಳು ಅರೆಸ್ಟ್ ಆಗಿದ್ದಾರೆ. ನಾಗೇಶ್ ಎಂಬಾತ ತನ್ನ ಸ್ನೇಹಿತರಾದ ವೆಂಕಟಸ್ವಾಮಿ ಮತ್ತು ಮುನಿರಾಜು ಎಂಬುವವರಿಂದ ದಾಳಿಗೆ ಒಳಗಾಗಿದ್ದ.

ಕಳೆದ 22ರಂದು ನಾಗೇಶ್, ವೆಂಕಟಸ್ವಾಮಿ ಮತ್ತು ಮುನಿರಾಜು ಒಟ್ಟಾಗಿ ಮದ್ಯ ಸೇವಿಸಲು ಆನೇಕಲ್ ಪಟ್ಟಣದಲ್ಲಿರುವ ಸಂಜಯ್ ಬಾರ್‌ಗೆ ಹೋಗಿದ್ದರು. ಒಂದೇ ಟೇಬಲ್‌ನಲ್ಲಿ ಕುಳಿತು ಮದ್ಯ ಸೇವಿಸುವಾಗ ಕ್ಷುಲ್ಲಕ ಕಾರಣಕ್ಕೆ ಕಿರಿಕ್ ಶುರುವಾಗಿತ್ತು.

ಈ ವೇಳೆ ನಾಗೇಶ್ ಮೇಲೆ ಮದ್ಯವನ್ನು ಸುರಿದು ಬೆಂಕಿ ಹಚ್ಚಿದ್ದ ಪರಾರಿ ಆಗಿದ್ದರು. ಇತ್ತ ಸ್ನೇಹಿತರ ಹಚ್ಚಿದ ಬೆಂಕಿಗೆ ನಾಗೇಶ್‌ಗೆ ಶೇ. 30ರಷ್ಟು ಸುಟ್ಟ ಗಾಯವಾಗಿತ್ತು. ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಘಟನೆ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡಿದ್ದ ಆನೇಕಲ್ ಪೊಲೀಸರು, ತಲೆಮರೆಸಿಕೊಂಡಿದ್ದ ವೆಂಕಟಸ್ವಾಮಿ ಮತ್ತು ಮುನಿರಾಜುರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ:Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

ಹೆಂಡ್ತಿ ಮೇಲೆ ಸಂಶಯ; ಕುಡಿದು ಬಂದು ಕೊಡಲಿಯಿಂದ ಕೊಚ್ಚಿ ಕೊಂದ

ಧಾರವಾಡ: ಪತ್ನಿ ಮೇಲೆ ಸಂಶಯ ಪಟ್ಟ ಪಾಪಿ ಪತಿಯೊಬ್ಬ ಕೊಂದೆ (Murder Case) ಬಿಟ್ಟಿದ್ದಾನೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಆಯಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಲ್ಲವ್ವ ಬಳ್ಳೂರ ಮೃತ ದುರ್ದೈವಿ. ಶಿವಪ್ಪ ಬಳ್ಳೂರ ಎಂಬಾತ ಪತ್ನಿ ಕೊಂದವನು.

ಶುಕ್ರವಾರ ರಾತ್ರಿ ಕುಡಿದು ಬಂದ ಶಿವಪ್ಪ ಪತ್ನಿ ಮಲ್ಲವ್ವಳ ಜತೆಗೆ ಜಗಳ ಮಾಡಿದ್ದಾನೆ. ನಂತರ ಶನಿವಾರ ಬೆಳಗಿನ ಜಾವ ಕೊಡಲಿಯಿಂದ ಪತ್ನಿಯನ್ನು ಕೊಚ್ಚಿ ಕೊಂದಿದ್ದಾನೆ. ಮದುವೆ ಆಗಿ 15 ವರ್ಷವಾದರೂ ಶಿವಪ್ಪ ನಿತ್ಯ ಪತ್ನಿ ಮೇಲೆ ಸಂಶಯ ಪಡುತ್ತಿದ್ದ. ಶುಕ್ರವಾರ ರಾತ್ರಿಯಿಡೀ ಜಗಳ ಮಾಡಿ ಬೆಳಗ್ಗೆ ಸಿಟ್ಟಿನಲ್ಲಿ ಪತ್ನಿಯನ್ನು ಕೊಂದು ಮನೆಯಲ್ಲಿಯೇ ಇದ್ದ.

ಅಕ್ಕ-ಪಕ್ಕದ ಮನೆಯವರು ಬಂದು ನೋಡಿದಾಗ ರಕ್ತಸಿಕ್ತವಾಗಿ ಬಿದ್ದಿದ್ದ ಮಲ್ಲವ್ವಳನ್ನು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕೊಲೆಯಾದ ಜಾಗದಲ್ಲೇ ಕುಳಿತಿದ್ದ ಶಿವಪ್ಪನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Snake Bite: ತೋಟದ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯ ಕಚ್ಚಿದ ಹಾವು; ಕ್ಷಣಾರ್ಧದಲ್ಲೆ ಹಾರಿಹೋಯ್ತು ಪ್ರಾಣ

ತುಮಕೂರಿನಲ್ಲಿ ಮಹಿಳೆ ಶವ ಪತ್ತೆ

ತಲೆ ಜಜ್ಜಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಕಮಲಮ್ಮ (35) ಕೊಲೆಯಾದವರು. ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಕರೆಮಾದೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಕರೆಮಾದೇನಹಳ್ಳಿ ಗ್ರಾಮದ ಚಂದ್ರಣ್ಣನ ಪತ್ನಿ ಕಮಲಮ್ಮ ತಡರಾತ್ರಿ ಹೊರಗೆ ಹೋಗಿದ್ದರು. ಈ ವೇಳೆ ಯಾರೋ ಹಂತಕರು ಕಲ್ಲಿನಿಂದಲ್ಲೋ ಅಥವಾ ಮಾರಾಕಸ್ತ್ರದಿಂದಲ್ಲೋ ತಲೆ ಜಜ್ಜಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಕೈ ಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Randeep Surjewala: ಕನ್ನಡಿಗರ ತೆರಿಗೆ ಹಣದಲ್ಲಿ ಸುರ್ಜೇವಾಲಾ ಟ್ರಿಪ್;‌ ಕೆರಳಿ ಕೆಂಡವಾದ ಬಿಜೆಪಿ!

Randeep Surjewala: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಅವರು ವಿಶೇಷ ವಿಮಾನಗಳಲ್ಲಿ ಓಡಾಡುತ್ತಿರುವುದಕ್ಕೆ ರಾಜ್ಯ ಬಿಜೆಪಿಯು ಆಕ್ರೋಶ ವ್ಯಕ್ತಪಡಿಸಿದೆ. ಕನ್ನಡಿಗರ ತೆರಿಗೆ ಹಣ ಪೋಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

VISTARANEWS.COM


on

Randeep Surjewala
Koo

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ (Lok Sabha Election) ಮೊದಲ ಹಂತದ ಮತದಾನ ಮುಗಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ ಹಾಗೂ ಬಿಜೆಪಿ ಮಧ್ಯೆ ಜಟಾಪಟಿ ಮುಂದುವರಿದಿದೆ. ಅದರಲ್ಲೂ, ಕರ್ನಾಟಕ ಕಾಂಗ್ರೆಸ್‌ (Karnataka Congress) ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಅವರು ವಿಶೇಷ ವಿಮಾನಗಳಲ್ಲಿ ಓಡಾಡುತ್ತಿರುವುದಕ್ಕೆ ಕರ್ನಾಟಕ ಬಿಜೆಪಿ (Karnataka BJP) ಆಕ್ರೋಶ ವ್ಯಕ್ತಪಡಿಸಿದೆ. “ಕನ್ನಡಿಗರ ತೆರಿಗೆ ಹಣದಲ್ಲಿ ರಣದೀಪ್‌ ಸುರ್ಜೇವಾಲ (Randeep Surjewala) ಅವರು ಟ್ರಿಪ್‌ ಮಾಡುತ್ತಿದ್ದಾರೆ” ಎಂದು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದೆ.

“ಕನ್ನಡಿಗರಿಗೆ ಬರ ಪರಿಹಾರ, ಅಭಿವೃದ್ಧಿಗೆ ಅನುದಾನ ಕೊಡಲು ಖಜಾನೆ ಖಾಲಿ ಮಾಡಿ, ಹಣವಿಲ್ಲ ಎಂದು ಕೂತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಕಲೆಕ್ಷನ್‌ ಏಜೆಂಟ್ ಸುರ್ಜೇವಾಲಾ ಅವರ ಚುನಾವಣಾ ಪ್ರಚಾರಕ್ಕೆ ಸುತ್ತಾಡಲು ಸ್ಪೆಷಲ್ ಫ್ಲೈಟ್‌ಗಳ ವ್ಯವಸ್ಥೆಯನ್ನೇ ಮಾಡಿದೆ. ಎಟಿಎಂ ಸರ್ಕಾರ ಕೊಟ್ಟು ಕಳಿಸುವ ಲೂಟಿ ಹಣವನ್ನು ಚುನಾವಣೆಗಾಗಿ ದೇಶದ ತುಂಬ ತೆಗೆದುಕೊಂಡು ಹೋಗಿ ಹಂಚುವ ಜವಾಬ್ದಾರಿಯನ್ನೂ ನೀಡಲಾಗಿದೆಯೇ” ಎಂದು ಪ್ರಶ್ನಿಸಿದೆ.

“ಕನ್ನಡಿಗರು ಕುಡಿಯಲು ಹನಿ ನೀರಿಲ್ಲದೆ ಸತ್ತರೂ ಸಿದ್ದರಾಮಯ್ಯ ಸರ್ಕಾರಕ್ಕೆ ಚಿಂತೆ ಇಲ್ಲ. ಆದರೆ, ಹೈಕಮಾಂಡ್ ಹೇಳಿದಂತೆ ಕೇಳಿಕೊಂಡು ಕಪ್ಪ ಕಾಣಿಕೆ ಸಲ್ಲಿಸುತ್ತ, ಅವರ ಸೇವೆ ಮಾಡುತ್ತ, ಕುರ್ಚಿ ಉಳಿಸಿಕೊಳ್ಳುವುದೇ ಸಿದ್ದರಾಮಯ್ಯ ಅವರ ಗುರಿ” ಎಂದು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ರಣದೀಪ್‌ ಸುರ್ಜೇವಾಲಾ ಅವರ ಪ್ರವಾಸದ ವಿವರವನ್ನು ಬಿಜೆಪಿ ಹಂಚಿಕೊಂಡು ತಿರುಗೇಟು ನೀಡಿದೆ.

ಬರ ಪರಿಹಾರ; ಸಿಎಂ ಅಸಮಾಧಾನ

ಕೇಂದ್ರ ಸರ್ಕಾರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ನೀಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ರಾಜ್ಯದಲ್ಲಿ 35 ಸಾವಿರ ಕೋಟಿ ರೂ. ಮೊತ್ತದ ಬೆಳೆ ನಷ್ಟವಾಗಿದೆ. 48 ಸಾವಿರ ಹೆಕ್ಟೇರ್‌ ಬೆಳೆ ನಾಶ ಆಗಿದೆ. 223 ತಾಲೂಕುಗಳು ಬರಪೀಡಿತ ಎಂಬುದಾಗಿ ಘೋಷಣೆ ಮಾಡಿದ್ದೇವೆ. ಹಾಗಾಗಿ, ನಾವು ಕೇಂದ್ರ ಸರ್ಕಾರಕ್ಕೆ 18,172 ಕೋಟಿ ರೂ. ಪರಿಹಾರ ಕೇಳಿದ್ದೆವು. ಆದರೆ, ಈಗ ಕೇಂದ್ರ ಸರ್ಕಾರವು ನಾವು ಕೇಳಿದ ನಾಲ್ಕನೇ ಒಂದು ಭಾಗದಷ್ಟು ಮಾತ್ರ ಪರಿಹಾರ ನೀಡಿದೆ. ಇದು ತುಂಬ ಕಡಿಮೆ ಆಯಿತು. ಈ ಕುರಿತು ಅಧಿಕಾರಿಗಳ ಜತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂಬುದಾಗಿ ಕಲಬುರಗಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ತಿಳಿಸಿದರು.

ಮಲತಾಯಿ ಧೋರಣೆ ಎಂದ ಕೃಷ್ಣ ಭೈರೇಗೌಡ

ಕೇಂದ್ರ ಸರ್ಕಾರವು ಕಡಿಮೆ ಮೊತ್ತದ ಬರ ಪರಿಹಾರ ಬಿಡುಗಡೆ ಮಾಡಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯದಲ್ಲಿ 200ಕ್ಕೂ ಅಧಿಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಇಷ್ಟಿದ್ದರೂ ಕೇವಲ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ಈ ದುಡ್ಡು ಯಾವುದಕ್ಕೂ ಸಾಕಾಗುವುದಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Drought Relief: 3,454 ಕೋಟಿ ರೂ. ಬರ ಪರಿಹಾರ; ‘ಅರೆಕಾಸಿನ ಮಜ್ಜಿಗೆ’ ಎಂದ ಸಿದ್ದರಾಮಯ್ಯ!

Continue Reading

ಕ್ರೈಂ

Murder case: ಹೆಂಡ್ತಿ ಮೇಲೆ ಸಂಶಯ; ಕುಡಿದು ಬಂದು ಕೊಡಲಿಯಿಂದ ಕೊಚ್ಚಿ ಕೊಂದ

Murder Case : ಕಂಠ ಪೂರ್ತಿ ಕುಡಿದು ಬಂದು ರಾತ್ರಿ ಎಲ್ಲ ಪತ್ನಿ ಜತೆಗೆ ಜಗಳವಾಡಿದ್ದ. ಬೆಳಗಾಗುವಷ್ಟರಲ್ಲಿ ಕೊಡಲಿಯಿಂದ ಹೊಡೆದು ಪತ್ನಿಯನ್ನೆ ಕೊಂದು ಹಾಕಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ದೌಡಾಯಸಿದ್ದು, ಸಂಶಯ ಪಿಶಾಚಿ ಪತಿಯನ್ನು ಬಂಧಿಸಿದ್ದಾರೆ.

VISTARANEWS.COM


on

By

Murder case in dharwad
Koo

ಧಾರವಾಡ: ಪತ್ನಿ ಮೇಲೆ ಸಂಶಯ ಪಟ್ಟ ಪಾಪಿ ಪತಿಯೊಬ್ಬ ಕೊಂದೆ (Murder Case) ಬಿಟ್ಟಿದ್ದಾನೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಆಯಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಲ್ಲವ್ವ ಬಳ್ಳೂರ ಮೃತ ದುರ್ದೈವಿ. ಶಿವಪ್ಪ ಬಳ್ಳೂರ ಎಂಬಾತ ಪತ್ನಿ ಕೊಂದವನು.

ಶುಕ್ರವಾರ ರಾತ್ರಿ ಕುಡಿದು ಬಂದ ಶಿವಪ್ಪ ಪತ್ನಿ ಮಲ್ಲವ್ವಳ ಜತೆಗೆ ಜಗಳ ಮಾಡಿದ್ದಾನೆ. ನಂತರ ಶನಿವಾರ ಬೆಳಗಿನ ಜಾವ ಕೊಡಲಿಯಿಂದ ಪತ್ನಿಯನ್ನು ಕೊಚ್ಚಿ ಕೊಂದಿದ್ದಾನೆ. ಮದುವೆ ಆಗಿ 15 ವರ್ಷವಾದರೂ ಶಿವಪ್ಪ ನಿತ್ಯ ಪತ್ನಿ ಮೇಲೆ ಸಂಶಯ ಪಡುತ್ತಿದ್ದ. ಶುಕ್ರವಾರ ರಾತ್ರಿಯಿಡೀ ಜಗಳ ಮಾಡಿ ಬೆಳಗ್ಗೆ ಸಿಟ್ಟಿನಲ್ಲಿ ಪತ್ನಿಯನ್ನು ಕೊಂದು ಮನೆಯಲ್ಲಿಯೇ ಇದ್ದ.

ಅಕ್ಕ-ಪಕ್ಕದ ಮನೆಯವರು ಬಂದು ನೋಡಿದಾಗ ರಕ್ತಸಿಕ್ತವಾಗಿ ಬಿದ್ದಿದ್ದ ಮಲ್ಲವ್ವಳನ್ನು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕೊಲೆಯಾದ ಜಾಗದಲ್ಲೇ ಕುಳಿತಿದ್ದ ಶಿವಪ್ಪನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Snake Bite: ತೋಟದ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯ ಕಚ್ಚಿದ ಹಾವು; ಕ್ಷಣಾರ್ಧದಲ್ಲೆ ಹಾರಿಹೋಯ್ತು ಪ್ರಾಣ

ತುಮಕೂರಿನಲ್ಲಿ ಮಹಿಳೆ ಶವ ಪತ್ತೆ

ತಲೆ ಜಜ್ಜಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಕಮಲಮ್ಮ (35) ಕೊಲೆಯಾದವರು. ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಕರೆಮಾದೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಕರೆಮಾದೇನಹಳ್ಳಿ ಗ್ರಾಮದ ಚಂದ್ರಣ್ಣನ ಪತ್ನಿ ಕಮಲಮ್ಮ ತಡರಾತ್ರಿ ಹೊರಗೆ ಹೋಗಿದ್ದರು. ಈ ವೇಳೆ ಯಾರೋ ಹಂತಕರು ಕಲ್ಲಿನಿಂದಲ್ಲೋ ಅಥವಾ ಮಾರಾಕಸ್ತ್ರದಿಂದಲ್ಲೋ ತಲೆ ಜಜ್ಜಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಕೈ ಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Lok Sabha
ಕರ್ನಾಟಕ6 mins ago

ಮೊದಲ ಹಂತದ ಮತದಾನ ಬೆನ್ನಲ್ಲೇ ಕಾಂಗ್ರೆಸ್‌, ಬಿಜೆಪಿ ಅಲರ್ಟ್;‌ ‘ಉತ್ತರ’ದತ್ತ ಚಿತ್ತ, 13 ಸಚಿವರಿಗೆ ಟಾಸ್ಕ್!

assault case in anekla
ಬೆಂಗಳೂರು ಗ್ರಾಮಾಂತರ34 mins ago

Assault Case : ಕುಡಿದ ನಶೆಯಲ್ಲಿ ಸ್ನೇಹಿತನಿಗೆ ಬೆಂಕಿ ಹಚ್ಚಿದ ಮಿತ್ರ ದ್ರೋಹಿಗಳು ಅರೆಸ್ಟ್‌

shilpa shetty visits shibaruru sri kodamanittaya
ಸಿನಿಮಾ35 mins ago

Shilpa Shetty: ಪೂಜಾ ಕಾರ್ಯಕ್ಕೆ ಕುಟುಂಬ ಸಮೇತರಾಗಿ ಮಂಗಳೂರಿಗೆ ಬಂದ ಶಿಲ್ಪಾ ಶೆಟ್ಟಿ

mamata banerjee helicopter
ಪ್ರಮುಖ ಸುದ್ದಿ39 mins ago

Mamata Banerjee: ಹೆಲಿಕಾಪ್ಟರ್‌ ಏರುವಾಗ ಬಿದ್ದ ಮಮತಾ ಬ್ಯಾನರ್ಜಿ, ಗಾಯ

ದೇಶ57 mins ago

Self harming: ಮದುವೆಯಲ್ಲಿ ಪತ್ನಿ ಡಾನ್ಸ್‌ ಮಾಡಿದಳೆಂದು ಬೇಸರಗೊಂಡ ಪತಿ ಆತ್ಮಹತ್ಯೆ

mobile blast woman death
ಕ್ರೈಂ1 hour ago

Mobile Blast: ಬೈಕ್‌ ಚಲಾಯಿಸುತ್ತಿದ್ದಾಗ ಮೊಬೈಲ್‌ ಸ್ಫೋಟ, ಡಿವೈಡರ್‌ಗೆ ಗುದ್ದಿ ಮಹಿಳೆ ಸಾವು

Randeep Surjewala
ಕರ್ನಾಟಕ2 hours ago

Randeep Surjewala: ಕನ್ನಡಿಗರ ತೆರಿಗೆ ಹಣದಲ್ಲಿ ಸುರ್ಜೇವಾಲಾ ಟ್ರಿಪ್;‌ ಕೆರಳಿ ಕೆಂಡವಾದ ಬಿಜೆಪಿ!

Murder case in dharwad
ಕ್ರೈಂ2 hours ago

Murder case: ಹೆಂಡ್ತಿ ಮೇಲೆ ಸಂಶಯ; ಕುಡಿದು ಬಂದು ಕೊಡಲಿಯಿಂದ ಕೊಚ್ಚಿ ಕೊಂದ

miss universe Buenos Aires
ವಿದೇಶ2 hours ago

Miss Universe Buenos Aires: ಈಕೆ ಬ್ಯೂನಸ್‌ ಐರಿಸ್‌ ವಿಶ್ವ ಸುಂದರಿ; ಇವಳ ವಯಸ್ಸು ನೀವೇ ಊಹಿಸಿ!

Gurucharan Singh Taarak Mehta Ka Ooltah Chashmah actor missing
ಕಿರುತೆರೆ2 hours ago

Gurucharan Singh: ‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ಖ್ಯಾತಿಯ ನಟ ನಿಗೂಢ ನಾಪತ್ತೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

road Accident in kolar evm
ಕೋಲಾರ4 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ11 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

ಟ್ರೆಂಡಿಂಗ್‌