Dowry Death: ವಿವಾಹಿತೆಯ ಜೀವಕ್ಕೆ ಮುಳುವಾಯ್ತು ಗಂಡನ ಮನೆಯವರ ವರದಕ್ಷಿಣೆ ದಾಹ - Vistara News

ಕ್ರೈಂ

Dowry Death: ವಿವಾಹಿತೆಯ ಜೀವಕ್ಕೆ ಮುಳುವಾಯ್ತು ಗಂಡನ ಮನೆಯವರ ವರದಕ್ಷಿಣೆ ದಾಹ

ಮದುವೆಯಾಗಿ 3 ವರ್ಷವಾದರೂ ದಂಪತಿಗೆ ಮಕ್ಕಳಾಗಿರಲಿಲ್ಲ. ಈ ವಿಚಾರಕ್ಕಾಗಿಯೂ ಪೀಡಿಸಲಾಗುತ್ತಿತ್ತು. ನಿರಂತರ ಪೀಡನೆಯ ಬಳಿಕ ಅತ್ತೆ, ಮಾವ ಹಾಗೂ ಗಂಡ ಸೇರಿಕೊಂಡು ಶ್ರೀದೇವಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ.

VISTARANEWS.COM


on

dowry death culprits in belagavi
ಆರೋಪಿಗಳಾದ ದೀಪಕ, ರಾಮಚಂದ್ರ, ಪದ್ಮಾವತಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಬೆಳಗಾವಿಯಲ್ಲಿ ವರದಕ್ಷಿಣೆ ಪೀಡನೆ ನೀಡಿ ವಿವಾಹಿತೆಯೊಬ್ಬಳನ್ನು ಹತ್ಯೆ ಮಾಡಿರುವುದು (Dowry Death) ವರದಿಯಾಗಿದೆ. ವರದಕ್ಷಿಣೆಗಾಗಿ ಮಾವ, ಅತ್ತೆ ಹಾಗೂ ಗಂಡ, ಸೊಸೆಯನ್ನು ಉಸಿರುಗಟ್ಟಿಸಿ (murder case) ಕೊಂದಿದ್ದಾರೆ.

ಶ್ರೀದೇವಿ ದೀಪಕ ಬೇವಿನಕಟ್ಟಿ (31) ಮೃತ ದುರ್ದೈವಿ. ದೀಪಕ ಬೇವಿನಟ್ಟಿ (34) ಪದ್ಮಾವತಿ ಬೇವಿನಕಟ್ಟಿ (50) ರಾಮಚಂದ್ರ ಬೇವಿನಕಟ್ಟಿ (64) ಕೊಲೆ ಆರೋಪಿಗಳು. ಮದುವೆಯಾಗಿ 3 ವರ್ಷವಾದರೂ ದಂಪತಿಗೆ ಮಕ್ಕಳಾಗಿರಲಿಲ್ಲ. ಈ ವಿಚಾರಕ್ಕಾಗಿಯೂ ಪೀಡಿಸಲಾಗುತ್ತಿತ್ತು. ತವರು ಮನೆಯಿಂದ ಹಣ ತರಲು ಗಂಡ ಪೀಡಿಸುತ್ತಿದ್ದ.

ನಿರಂತರ ಪೀಡನೆಯ ಬಳಿಕ ಅತ್ತೆ, ಮಾವ ಹಾಗೂ ಗಂಡ ಸೇರಿಕೊಂಡು ಶ್ರೀದೇವಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಯಮಕನಮರಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ದ್ವಿಚಕ್ರ ವಾಹನಗಳ ಡಿಕ್ಕಿ, ಒಬ್ಬ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ದ್ವಿಚಕ್ರ ವಾಹನಗಳ ಡಿಕ್ಕಿಯಾಗಿ ಒಬ್ಬ ಸಾವನ್ನಪ್ಪಿದ್ದು, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾನ್ಲೆ ಕ್ರಾಸ್‌ ಬಳಿ ಅಪಘಾತ ನಡೆದಿದೆ.

ಶಿರಸಿ ಕಸ್ತೂರಬಾ ನಗರ ನಿವಾಸಿ ಮಣಿ ಮೃತಪಟ್ಟ ಯುವಕ. ಮಂಜುನಾಥ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೊಬ್ಬ ಬೈಕ್ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಇದನ್ನೂ ಓದಿ: Road Accident: ಅಣ್ಣನೊಂದಿಗೆ ಐಸ್‌ಕ್ರೀಮ್‌ ತರಲು ಹೋದ ಬಾಲಕ, ಟ್ರ್ಯಾಕ್ಟರ್‌ ಅಡಿ ಬಿದ್ದು ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬೆಂಗಳೂರು

Car Accident: ಮಾದಾವರ ಟೋಲ್‌ಗೇಟ್ ಬಳಿ ಕಾರು ಅಪಘಾತ ಪ್ರಕರಣ; ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಸಾವು

Car Accident: ಬೆಂಗಳೂರು-ತುಮಕೂರು ಹೆದ್ದಾರಿಯ ಮಾದಾವರ ಟೋಲ್‌ಗೇಟ್ ಬಳಿ ಏ.21ರಂದು ಮಾರುತಿ ಓಮ್ನಿಗೆ ಬಲೆನೊ ಕಾರು ಡಿಕ್ಕಿಯಾಗಿ ಅಪಘಾತ ನಡೆದಿತ್ತು. ಅಂದು ಓಮ್ನಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದ್ದರಿಂದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಳು. ಅಪಘಾತದಲ್ಲಿ ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಭಾನುವಾರ ಕೊನೆಯುಸಿರೆಳೆದಿದ್ದಾರೆ.

VISTARANEWS.COM


on

Car Accident
Koo

ಬೆಂಗಳೂರು: ಮಾದಾವರ ಟೋಲ್‌ಗೇಟ್ ಬಳಿ ಏ.21ರಂದು ನಡೆದಿದ್ದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಭಾನುವಾರ ಮೃತಪಟ್ಟಿದ್ದಾರೆ. ಇದರಿಂದ ಪ್ರಕರಣದಲ್ಲಿ ಸಾವಿನ ಸಂಖ್ಯೆ 4ಕ್ಕೇರಿದೆ. ಅಪಘಾತದಲ್ಲಿ ಮಾರುತಿ ಬಲೆನೊ ಕಾರು ಡಿಕ್ಕಿಯಾಗಿದ್ದರಿಂದ ಪಲ್ಟಿಯಾದ ಓಮ್ನಿಗೆ ಬೆಂಕಿ ಹೊತ್ತಿಕೊಂಡಿತ್ತು. ಇದರಿಂದ ಬಾಲಕಿಯೊಬ್ಬಳು ಸಜೀವ ದಹನವಾಗಿದ್ದಳು. ಘಟನೆಯಲ್ಲಿ (Car Accident) ಗಾಯಗೊಂಡಿದ್ದ 14 ಜನರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿತ್ತು, ಈ ಪೈಕಿ ಮೂವರು ಇದೀಗ ಕೊನೆಯುಸಿರೆಳೆದಿದ್ದಾರೆ.

ಘಟನೆಯ ವಿವರ

ಬೆಂಗಳೂರು-ತುಮಕೂರು ಹೆದ್ದಾರಿಯ ಮಾದಾವರ ಟೋಲ್‌ಗೇಟ್ ಬಳಿ ಏ.21ರಂದು ರಾತ್ರಿ ಮಾರುತಿ ಓಮ್ನಿ (Maruti Omni) ವಾಹನಕ್ಕೆ ಬಲೆನೊ ಕಾರು (Baleno) ಹಿಂದಿನಿಂದ ಡಿಕ್ಕಿಯಾದ (Road Accident) ಪರಿಣಾಮ ಬಾಲಕಿಯೊಬ್ಬಳು (girl death) ಮೃತಪಟ್ಟು, ನಾಲ್ವರ ಸ್ಥಿತಿ ಗಂಭೀರವಾಗಿತ್ತು.

ಓಮ್ನಿಯಲ್ಲಿದ್ದವರು ಅಬ್ಬಿಗೆರೆ, ದಾಸಾನುಪುರದ ಸಂಬಂಧಿಕರ ಮನೆಯಿಂದ ಬರುತ್ತಿದ್ದಾಗ ದುರಂತ ಘಟಿಸಿತ್ತು ಒಟ್ಟು ಎಂಟು ಜನ ಮಾರುತಿ ಓಮ್ನಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಬಲೆನೊ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಬಲೆನೊ ಕಾರು ಹಿಂದಿನಿಂದ ಬಂದು ಡಿಕ್ಕಿ ಹೊಡೆದ ರಭಸಕ್ಕೆ ಓಮ್ನಿ ಮೂರು ಪಲ್ಟಿಯಾಗಿತ್ತು. ಈ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿತ್ತು. ಇದರಿಂದ 14 ವರ್ಷದ ಬಾಲಕಿ ದಿವ್ಯ ಸ್ಥಳದಲ್ಲೇ ಸಾವಿಗೀಡಾಗಿದ್ದಳು.

ಓಮ್ನಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಎಂಟು ಜನರಲ್ಲಿ ಮಾಯಾಂಕ್, ಮಂಜುಳ, ಸುನಿತಾ, ತರುಣ್, ಮಹೇಶ್, ನಮನ್, ಶಾಂತಿಲಾಲ್ ಗಾಯಗೊಂಡಿದ್ದರು. ಎಲ್ಲರೂ ದಾಸನಪುರ ನಿವಾಸಿಗಳು. ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ನಮನ್, ಸುನಿತಾ, ಮಾಯಾಂಕ್ ಚಿಕಿತ್ಸೆ ಫಲಿಸದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ | Amrita Pandey: ಭೋಜ್‌ಪುರಿ ಜನಪ್ರಿಯ ನಟಿ ಅಮೃತಾ ಪಾಂಡೆ ಆತ್ಮಹತ್ಯೆ; ಸಾವಿಗೆ ಮುನ್ನ ಬರೆದ ವಾಟ್ಸಾಪ್ ಸ್ಟೇಟಸ್‌ನಲ್ಲಿ ಏನಿದೆ?

ಮತ್ತೊಂದು ಕಾರಿನಲ್ಲಿದ್ದ ಚಾಲಕ ರಕ್ಷಿತ್, ಚೇತನ್, ಮುಬಾರಕ್, ಸಲ್ಮಾ ಸೇರಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದವು. ಅವರು ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಅಪಘಾತಕ್ಕೆ ಕಾರಣವಾದ ಬಾಲೆನೋ ಕಾರು ಚಾಲಕ ಇನ್ಶೂರೆನ್ಸ್ ಹಣ ಕಟ್ಟದೆ ಫೇಕ್ ನಂಬರ್ ಹಾಕಿದ್ದ ಎನ್ನಲಾಗಿದೆ. ಜತೆಗೆ ಇದರ ಅಸಲಿ ಕಾರಿನ ಕಾರು ನಂಬರ್ ಬೆಳಗಾವಿಯ ಪಲ್ಲವಿ ಎಂಬುವವರಿಗೆ ಸೇರಿದ್ದು, ಹೀಗಾಗಿ ಡಿವೈಎಸ್ಪಿ ಜಗದೀಶ್ ನೇತೃತ್ವದಲ್ಲಿ ತನಿಖೆ ಚುರಕುಗೊಂಡಿದೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಕರ್ನಾಟಕ

Jatra Rathotsava: ಇಂಡಿಯ ಕಮರಿಮಠದ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ದುರ್ಮರಣ; ಮತ್ತೊಬ್ಬ ಗಂಭೀರ

Jatra Rathotsava: ಭಾನುವಾರ ಸಂಜೆ ಗೋಧೋಳಿ ಮುಹೂರ್ತದಲ್ಲಿ ಶ್ರೀ ಸಿದ್ದಲಿಂಗ ಮಹರಾಜರ ರಥೋತ್ಸವ ನಡೆದಿದ್ದು, ಸಾವಿರಾರು ಜನರು ಭಾಗಿಯಾಗಿದ್ದರು. ಜಾತ್ರೆಯಲ್ಲಿನ ನೂಕು ನುಗ್ಗಲಿನಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡ ಮತ್ತೊಬ್ಬನನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತರಿಬ್ಬರು ಲಚ್ಯಾಣ ಗ್ರಾಮದವರು ಎಂದು ತಿಳಿದುಬಂದಿದ್ದು, ಗಂಭೀರವಾಗಿ ಗಾಯಗೊಂಡ ಮತ್ತೊಬ್ಬ ಮಹಾರಾಷ್ಟ್ರದ ತಡವಾಳ ಗ್ರಾಮದ ನಿವಾಸಿಯಾಗಿದ್ದಾನೆ.

VISTARANEWS.COM


on

Jatra Rathotsava Two killed and one serious after being hit by wheel of a chariot at Indi Kamarimath
Koo

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಆರಾಧ್ಯ ದೈವ ಶ್ರೀ ಸಿದ್ದಲಿಂಗ ಮಹಾರಾಜರ ಕಮರಿಮಠದ ಜಾತ್ರೆಯಲ್ಲಿ (Kamarimatha Fair) ನಡೆದ ರಥೋತ್ಸವ (Jatra Rathotsava) ವೇಳೆ ರಥದ ಚಕ್ರ ಹಾಯ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿವೆ.

ಭಾನುವಾರ ಸಂಜೆ ಗೋಧೋಳಿ ಮುಹೂರ್ತದಲ್ಲಿ ಶ್ರೀ ಸಿದ್ದಲಿಂಗ ಮಹರಾಜರ ರಥೋತ್ಸವ ನಡೆದಿದ್ದು, ಸಾವಿರಾರು ಜನರು ಭಾಗಿಯಾಗಿದ್ದರು. ಜಾತ್ರೆಯಲ್ಲಿನ ನೂಕು ನುಗ್ಗಲಿನಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡ ಮತ್ತೊಬ್ಬನನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮೃತರಿಬ್ಬರು ಲಚ್ಯಾಣ ಗ್ರಾಮದವರು ಎಂದು ತಿಳಿದುಬಂದಿದ್ದು, ಗಂಭೀರವಾಗಿ ಗಾಯಗೊಂಡ ಮತ್ತೊಬ್ಬ ಮಹಾರಾಷ್ಟ್ರದ ತಡವಾಳ ಗ್ರಾಮದ ನಿವಾಸಿಯಾಗಿದ್ದಾನೆ. ಘಟನಾ ಸ್ಥಳದಲ್ಲಿ ಪೊಲೀಸರು ಬೀಡುಬಿಟ್ಟಿದ್ದಾರೆ.

Sahil Khan: ಬೆಟ್ಟಿಂಗ್​ ಅಕ್ರಮದಲ್ಲಿ ಭಾಗಿ; ನಟ ಸಾಹಿಲ್ ಖಾನ್ ಅರೆಸ್ಟ್‌

ಬೆಂಗಳೂರು: ಮಹದೇವ್ ಬೆಟ್ಟಿಂಗ್ ಆ್ಯಪ್ (Mahadev betting app case) ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ (Betting App Case) ನಟ ಮತ್ತು ಫಿಟ್‌ನೆಸ್‌ ಪ್ರಭಾವಿ ಸಾಹಿಲ್ ಖಾನ್ (Sahil Khan Arrested) ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್‌ಗಢದಲ್ಲಿ ಮುಂಬೈ ಸೈಬರ್ ಸೆಲ್‌ನ ವಿಶೇಷ ತನಿಖಾ ತಂಡ (ಎಸ್‌ಐಟಿ) ನಟನನ್ನು ಬಂಧಿಸಿದ್ದು, ಬಾಂಬೆ ಹೈಕೋರ್ಟ್‌ ಬಂಧನ ಪೂರ್ವ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಇದಕ್ಕೂ ಮೊದಲು, 2023ರ ಡಿಸೆಂಬರ್‌ನಲ್ಲಿ ಸಾಹಿಲ್ ಮತ್ತು ಇದೇ ಪ್ರಕರಣಕ್ಕೆ ಸಂಬಂಧಿಸಿದ ಇನ್ನುಳಿದ ಮೂವರನ್ನು ವಿಶೇಷ ತನಿಖಾ ತಂಡ ವಿಚಾರಣೆಗೆ ಕರೆದಿತ್ತು. ಆದರೆ, ಅವರು ಹಾಜರಾಗಲಿಲ್ಲ. ತಾವು ಕೇವಲ ಬ್ರ್ಯಾಂಡ್ ಪ್ರಮೋಟರ್‌ ಎಂದು ಹೇಳಿಕೊಂಡು ಬಂದಿದ್ದರು. ಆದರೆ, ಸಾಹಿಲ್ ಆ್ಯಪ್‌ನ ಸಹ ಮಾಲೀಕ ಎಂಬುದು ಪೊಲೀಸರಿಗೆ ತನಿಖೆಯಲ್ಲಿ ಗೊತ್ತಾಗಿದೆ. ಸಾಹಿಲ್‌ ಈ ಬೆಟ್ಟಿಂಗ್ ಆ್ಯಪ್‌ ಸಂಬಂಧಿಸಿದ ಪ್ರಚಾರದ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲು ತಿಂಗಳಿಗೆ 3 ಲಕ್ಷ ರೂ. ಹಣವನ್ನು ಪಡೆದುಕೊಳ್ಳುತ್ತಿದ್ದರು ಎಂದು ವರದಿಯಾಗಿದೆ. ಮಾತ್ರವಲ್ಲ 24 ತಿಂಗಳುಗಳ ಕಾಲ ಈ ಆ್ಯಪ್‌ ಜತೆಗೆ ಒಪ್ಪಂದ ಮಾಡಿಕೊಂಡಿದ್ದರು ಎಂದು ತನಿಖೆ ವೇಳೆ ಬಹಿರಂಗವಾಗಿತ್ತು.

ಇದರ ಹೊರತಾಗಿಯೂ, ಕಾನೂನುಬಾಹಿರ ಕಾರ್ಯಾಚರಣೆಯಲ್ಲಿ ನೇರವಾಗಿ ಭಾಗಿಯಾಗಿರುವುದನ್ನು ಉಲ್ಲೇಖಿಸಿ ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ʻಸ್ಟೈಲ್ʼ ಮತ್ತು ʻಎಕ್ಸ್‌ಕ್ಯೂಸ್ ಮಿʼ ಸಿನಿಮಾ ಪಾತ್ರಗಳಿಗೆ ಹೆಸರುವಾಸಿಯಾದ ಸಾಹಿಲ್ ಈಗ ಫಿಟ್‌ನೆಸ್‌ನತ್ತ ಗಮನಹರಿಸಿದ್ದಾರೆ.

ಇದನ್ನೂ ಓದಿ: The Rulers: ಅಂಬೇಡ್ಕರ್ ಹೆಸರಲ್ಲಿ ಸಿನಿಮಾ ಮಾಡಿದ್ದಕ್ಕೆ` ರೌಡಿ ಶೀಟರ್ʼ ಪಟ್ಟ ಕೊಡ್ತಾ ಕಾಂಗ್ರೆಸ್ ಸರ್ಕಾರ? ನಟ ಹೇಳಿದ್ದೇನು?

2023ರಲ್ಲಿ, ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದ ವಿಚಾರಣೆ ನಡೆಸಿದ ಕ್ರೈಂ ಬ್ರ್ಯಾಂಚ್‌ ವಿಭಾಗವು ಡಿಸೆಂಬರ್ 15ರಂದು ತಮ್ಮ ಹೇಳಿಕೆಗಳನ್ನು ದಾಖಲಿಸಲು ಸಾಹಿಲ್ ಖಾನ್ ಮತ್ತು ಇತರ ಮೂವರಿಗೆ ಸಮನ್ಸ್ ನೀಡಿತ್ತು ಎಂದು ವರದಿಯಾಗಿದೆ. ಆದರೆ, ಸಾಹಿಲ್ ಖಾನ್ ತನಿಖೆಗಾಗಿ ಪೊಲೀಸರ ಮುಂದೆ ಹಾಜರಾಗಲಿಲ್ಲ. ಇದಲ್ಲದೆ ಸೋಷಿಯಲ್‌ ಮೀಡಿಯಾಗಳಲ್ಲಿ ನಿರಂತರವಾಗಿ ಪೋಸ್ಟ್‌ ಮಾಡುತ್ತಲೇ ಇರುತ್ತಿದ್ದರು. ಪೊಲೀಸರ ಸಮನ್ಸ್‌ಗಳನ್ನು ಅವರು ನಿರ್ಲಕ್ಷಿಸುತ್ತಿರುವುದನ್ನು ಕಂಡು ನೆಟ್ಟಿಗರಿಂದ ಟೀಕೆಗೆ ಗುರಿಯಾಗುತ್ತಿದ್ದರು. ವರದಿಗಳ ಪ್ರಕಾರ, ಸಾಹಿಲ್ ಖಾನ್ ಅವರು ಈ ಆ್ಯಪ್ ಪ್ರಚಾರ ಮಾಡಲು ಸೆಲೆಬ್ರಿಟಿ ಕೂಟಗಳನ್ನು ಆಯೋಜಿಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಏನಿದು ಮಹದೇವ್​ ಬೆಟ್ಟಿಂಗ್​ ಪ್ರಕರಣ?

ಛತ್ತೀಸ್‌ಗಢದಲ್ಲಿ ವಿಧಾನಸಭೆ ಚುನಾವಣೆಗೆ (Chhattisgarh Polls) ಕೆಲವೇ ದಿನಗಳು ಬಾಕಿ ಇರುವ ಮಧ್ಯೆಯೇ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಭಾಗಿಯಾಗಿದ್ದಾರೆ ಎನ್ನಲಾದ ಬೆಟ್ಟಿಂಗ್ ಹಗರಣವೊಂದು ಹೊರಕ್ಕೆ ಬಂದಿತ್ತು. ಮಹದೇವ್‌ ಆನ್‌ಲೈನ್‌ ಬೆಟ್ಟಿಂಗ್‌ ಆ್ಯಪ್ ಪ್ರಮೋಟರ್‌ಗಳಿಂದ (Mahadev Betting App Promoters) ಇದುವರೆಗೆ ಭೂಪೇಶ್‌ ಬಘೇಲ್‌ (Bhupel Bhaghel) ಅವರಿಗೆ ಸುಮಾರು 508 ಕೋಟಿ ರೂ. ಲಂಚ ನೀಡಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ED) ಹೇಳಿದ್ದರು. ಚುನಾವಣೆ ಹೊತ್ತಿನಲ್ಲೇ ಇ.ಡಿ ಪ್ರಸ್ತಾಪಿಸಿದ ವಿಷಯವು ಚರ್ಚೆಗೆ ಗ್ರಾಸವಾಗಿತ್ತು.

ಅಕ್ರಮವಾಗಿ ಹಣದ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ಈಗಾಗಲೇ ಮಹದೇವ್‌ ಬೆಟ್ಟಿಂಗ್‌ ಆ್ಯಪ್ ಪ್ರವರ್ತಕರನ್ನು ವಿಚಾರಣೆ ನಡೆಸುತ್ತಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್‌ಗಢದಲ್ಲಿ ಇ.ಡಿ ಅಧಿಕಾರಿಗಳು ದಾಳಿ ನಡೆಸಿ 5.39 ಕೋಟಿ ರೂಪಾಯಿಯನ್ನು ವಶಪಡಿಸಿಕೊಂಡಿತ್ತು. ಅಷ್ಟೇ ಅಲ್ಲ, 15 ಕೋಟಿ ರೂ. ಇರುವ ಬ್ಯಾಂಕ್‌ ಖಾತೆಯನ್ನೂ ಜಪ್ತಿ ಮಾಡಿತ್ತು. ಆಸಿಂ ದಾಸ್‌ ಎಂಬಾತನನ್ನು ಕೂಡ ಇ.ಡಿ ಬಂಧಿಸಿತ್ತು. ಇದರ ಬೆನ್ನಲ್ಲೇ, ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರೇ ಲಂಚ ಸ್ವೀಕರಿಸಿದ್ದಾರೆ ಎಂದು ಇ.ಡಿ ತಿಳಿಸಿತ್ತು.

Continue Reading

ಸಿನಿಮಾ

Amrita Pandey: ಭೋಜ್‌ಪುರಿ ಜನಪ್ರಿಯ ನಟಿ ಅಮೃತಾ ಪಾಂಡೆ ಆತ್ಮಹತ್ಯೆ; ಸಾವಿಗೆ ಮುನ್ನ ಬರೆದ ವಾಟ್ಸಾಪ್ ಸ್ಟೇಟಸ್‌ನಲ್ಲಿ ಏನಿದೆ?

Amrita Pandey: ಭೋಜ್‌ಪುರಿ ಚಿತ್ರರಂಗದ ಅತ್ಯಂತ ಜನಪ್ರಿಯ ನಟಿ ಅಮೃತಾ ಪಾಂಡೆ ಶನಿವಾರ ಬಿಹಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಯಾವುದೇ ಡೆತ್‌ನೋಟ್‌ ಪತ್ತೆಯಾಗಿಲ್ಲ ಎಂದು ಮೂಲಗಳು ಹೇಳಿವೆ. ಆದರೆ ಆತ್ಮಹತ್ಯೆಗೆ ಮುನ್ನ ಅವರು ವಾಟ್ಸಾಪ್‌ನ ಸ್ಟೇಟಸ್‌ನಲ್ಲಿ ಕೆಲವೊಂದು ವಿಚಾರಗಳನ್ನು ತಿಳಿಸಿದ್ದರು ಎನ್ನಲಾಗಿದ್ದು, ಈ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ಅಮೃತಾ ಕೆಲವು ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು. ಇದು ಆತ್ಮಹತ್ಯೆಗೆ ಕಾರಣವಿರಬಹುದು ಎಂದು ಆಪ್ತ ಮೂಲಗಳು ತಿಳಿಸಿದ್ದು. ಆ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ಅಮೃತಾ ಹಿಂದಿ ಚಿತ್ರ, ಜಾಹೀರಾತುಗಳಲ್ಲಿಯೂ ನಟಿಸಿದ್ದಾರೆ.

VISTARANEWS.COM


on

Amrita Pandey
Koo

ಪಟ್ನಾ: ಭೋಜ್‌ಪುರಿ ಚಿತ್ರರಂಗದ ಅತ್ಯಂತ ಜನಪ್ರಿಯ ನಟಿ ಅಮೃತಾ ಪಾಂಡೆ (Amrita Pandey) ಶನಿವಾರ ಬಿಹಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾಗಲ್ಪುರದ ಅಪಾರ್ಟ್‌ಮೆಂಟ್‌ನಲ್ಲಿ ಅವರ ಶವ ಪತ್ತೆಯಾಗಿದೆ. ಜೋಗ್ಸರ್ ಪೊಲೀಸ್ ಠಾಣೆ ವ್ಯಾಪ್ತಿಯ ದಿವ್ಯಧರ್ಮ ಅಪಾರ್ಟ್‌ಮೆಂಟ್‌ನಲ್ಲಿ ಸೀಲಿಂಗ್‌ ಫ್ಯಾನ್‌ಗೆ ಕಟ್ಟಿದ ಸೀರೆಯಲ್ಲಿ ನೇಣು ಬಿಗಿದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳದಲ್ಲಿ ಯಾವುದೇ ಡೆತ್‌ನೋಟ್‌ ಪತ್ತೆಯಾಗಿಲ್ಲ ಎಂದು ಮೂಲಗಳು ಹೇಳಿವೆ. ಆದರೆ ಆತ್ಮಹತ್ಯೆಗೆ ಮುನ್ನ ಅವರು ವಾಟ್ಸಾಪ್‌ನ ಸ್ಟೇಟಸ್‌ನಲ್ಲಿ ಕೆಲವೊಂದು ವಿಚಾರಗಳನ್ನು ತಿಳಿಸಿದ್ದರು ಎನ್ನಲಾಗಿದ್ದು, ಈ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ.

ಅಮೃತಾ ಪಾಂಡೆ ಅವರು ತಮ್ಮ ಪತಿಯೊಂದಿಗೆ ಮುಂಬೈಯಲ್ಲಿ ವಾಸವಾಗಿದ್ದಾರೆ. ಕೆಲವು ದಿನಗಳ ಹಿಂದೆ ಸಂಬಂಧಿಕರೊಬ್ಬರು ವಿವಾಹ ಸಮಾರಂಭದಲ್ಲಿ ಭಾಗಿಯಾಗಲು ಅವರು ಬಿಹಾರದ ಭಾಗಲ್ಪುರಕ್ಕೆ ಆಗಮಿಸಿದ್ದರು. ಬಳಿಕ ಕೆಲವು ದಿನ ಇಲ್ಲಿಯೇ ಉಳಿಯಲು ನಿರ್ಧರಿಸಿದ್ದರು. ಶನಿವಾರ ತಡರಾತ್ರಿಯವರೆಗೆ ಎಚ್ಚರವಾಗಿದ್ದ ಅವರು ತನ್ನ ವಾಟ್ಸಾಪ್‌ ಸ್ಟೇಟಸ್‌ನಲ್ಲಿ ರಹಸ್ಯ ಟಿಪ್ಪಣಿಯನ್ನು ಪೋಸ್ಟ್ ಮಾಡಿದ್ದರು. ಸದ್ಯ ಅಧಿಕಾರಿಗಳು ಇದರ ಸುತ್ತ ತನಿಖೆ ನಡೆಸಲು ಮುಂದಾಗಿದ್ದಾರೆ.

ಸ್ಟೇಟಸ್‌ನಲ್ಲಿ ಏನಿತ್ತು?

ಸ್ಟೇಟಸ್‌ನಲ್ಲಿ ಅವರು ಏನು ಬರೆದಿದ್ದರು ಎನ್ನುವ ವಿಚಾರವೇ ಸದ್ಯ ಕುತೂಹಲ ಕೆರಳಿಸಿದೆ. ಅದರಲ್ಲಿ ಅವರು, ‘ಅವಳ ಜೀವನ 2 ದೋಣಿಗಳಲ್ಲಿ ಸಾಗುತ್ತಿದೆ. ನನ್ನ ಜೀವನವನ್ನು ಕೊನೆಗೊಳಿಸುವ ಮೂಲಕ ನಾನು ಅವಳ ದಾರಿಯನ್ನು ಸುಗಮಗೊಳಿಸುತ್ತೇನೆʼ ಎಂದು ಬರೆದುಕೊಂಡಿದ್ದರು. ಹೀಗಾಗಿ ಅಮೃತಾ ಪಾಂಡೆ ಅವರ ಸ್ಟೇಟಸ್‌ ಹಲವು ಅನುಮಾನಕ್ಕೆ ಕಾರಣವಾಗಿದೆ. ಪತಿಯ ಇನ್ನೊಂದು ಸಂಬಂಧದಿಂದ ಮನನೊಂದು ಅಮೃತಾ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನುವ ಮಾತೂ ಕೇಳಿ ಬಂದಿದೆ.

ಜನಪ್ರಿಯ ನಟಿ

ಅಮೃತಾ ಪಾಂಡೆ ಭೋಜ್‌ಪುರಿ ಚಿತ್ರಗಳಲ್ಲದೆ ಹಲವು ಹಿಂದಿ ಸಿನಿಮಾ, ವೆಬ್‌ಸೀರಿಸ್‌, ಕಿರುತೆರೆ ಶೋಗಳಲ್ಲಿ ನಟಿಸಿದ್ದಾರೆ. ಮಾತ್ರವಲ್ಲಿ ಕೆಲವು ಜಾಹೀರಾತುಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ. ಅಮೃತಾ ನಟನೆಯ ಹಾರರ್ ವೆಬ್ ಸೀರಿಸ್‌ ‘ಪ್ರತಿಶೋದ’ದ ಮೊದಲ ಸಂಚಿಕೆ ಇತ್ತೀಚೆಗೆ ಬಿಡುಗಡೆಯಾಗಿದೆ.

ಖಿನ್ನತೆ ಕಾರಣ?

ಕುಟುಂಬದ ಮೂಲಗಳ ಪ್ರಕಾರ ಅಮೃತಾ ತಮ್ಮ ವೃತ್ತಿ ಜೀವನದ ಬಗ್ಗೆ ಚಿಂತಿತರಾಗಿದ್ದರು ಮತ್ತು ಖಿನ್ನತೆಯಿಂದ ಬಳಲುತ್ತಿದ್ದರು. ಈ ಕಾರಣಕ್ಕಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದು ಆಪ್ತ ಮೂಲಗಳು ತಿಳಿಸಿವೆ. ಅಮೃತಾ ಅವರು 2022ರಲ್ಲಿ ಛತ್ತೀಸ್‌ಗಢದ ಬಿಲಾಸ್‌ಪುರ ಮೂಲದ ಪ್ರಸ್ತುತ ಮುಂಬೈಯಲ್ಲಿ ವಾಸವಾಗಿರುವ ಚಂದ್ರಮಣಿ ಜಂಗದ್ ಅವರನ್ನು ವಿವಾಹವಾಗಿದ್ದರು. ಚಂದ್ರಮಣಿ ಮುಂಬೈಯಲ್ಲಿ ಅನಿಮೇಷನ್ ಎಂಜಿನಿಯರ್ ಆಗಿದ್ದಾರೆ. ಈ ದಂಪತಿಗೆ ಇನ್ನೂ ಮಕ್ಕಳಾಗಿರಲಿಲ್ಲ.

ಇದನ್ನೂ ಓದಿ: Brijesh Tripathi: ಭೋಜ್‌ಪುರಿ ಜನಪ್ರಿಯ ನಟ ಬ್ರಿಜೇಶ್ ತ್ರಿಪಾಠಿ ಇನ್ನಿಲ್ಲ

ಮೊದಲು ನೋಡಿದ್ದು ಸಹೋದರಿ

ಅಮೃತಾ ಅವರ ಮೃತದೇಹವನ್ನು ಮೊದಲು ನೋಡಿದ್ದು ಸಹೋದರಿ ಎಂದು ಪೊಲೀಸರು ತಿಳಿಸಿದ್ದಾರೆ. ಸಹೋದರಿ ಅಪರಾಹ್ನ 3.30ರ ಸುಮಾರಿಗೆ ಅಮೃತಾ ಅವರ ಕೋಣೆಗೆ ಹೋಗಿದ್ದರು. ಈ ವೇಳೆ ಅಮೃತಾ ಅವರ ದೇಹ ನೇತಾಡಿಕೊಂಡಿತ್ತು. ಕೂಡಲೇ ಸೀರೆಯನ್ನು ಕತ್ತರಿಸಿ ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆ ವೇಳೆಗಾಗಲೇ ಮೃತಪಟ್ಟಿದ್ದರು ಎಂದು ವೈದ್ಯರು ಘೋಷಿಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Continue Reading

ಕರ್ನಾಟಕ

Hassan Pen Drive Case: ಪ್ರಜ್ವಲ್‌ ಜತೆಗೆ ಎಚ್‌.ಡಿ.ರೇವಣ್ಣ ಮೇಲೂ ಎಫ್‌ಐಆರ್‌; ದೂರಿನಲ್ಲಿದೆ ಭಯಾನಕ ಡಿಟೇಲ್ಸ್‌!

Hassan Pen Drive Case: 47 ವರ್ಷದ ಮಹಿಳೆ ನೀಡಿದ ದೂರಿನ ಅನ್ವಯ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಮತ್ತು ಮಾಜಿ ಸಚಿವ ಎಚ್‌.ಡಿ.ರೇವಣ್ಣ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

VISTARANEWS.COM


on

Hassan Pen Drive Case
Koo

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೊ ಪ್ರಕರಣ (Hassan Pen Drive Case) ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಇದರ ಬೆನ್ನಲ್ಲೇ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ ಮಹಿಯೊಬ್ಬರು ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿ ತಂದೆ-ಮಗ ಇಬ್ಬರ ಮೇಲೂ ಮನೆ ಕೆಲಸದಾಕೆಯೇ ದೂರು ನೀಡಿದ್ದಾಳೆ.

ದೂರಿನಲ್ಲಿ ಏನಿದೆ?

47 ವರ್ಷದ ಮಹಿಳೆ ನೀಡಿದ ದೂರಿನ ಅನ್ವಯ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ದೂರುದಾರೆಗೆ ಭವಾನಿ ರೇವಣ್ಣ ಸೋದರತ್ತೆ ಮಗಳು. ಎಚ್‌.ಡಿ. ರೇವಣ್ಣ ಶಾಸಕರಾಗಿದ್ದಾಗ ನಾಗಲಾಪುರ ಹಾಲಿನ ಡೇರಿಯಲ್ಲಿ ಕೆಲಸ ಕೊಡಿಸಿದ್ದರು. ಬಳಿಕ ಬಿಸಿಎಂ ಹಾಸ್ಟೆಲ್‌ನಲ್ಲಿ ಅಡುಗೆ ಕೆಲಸ ಕೊಡಿಸಿದ್ದರು. 2015ರಲ್ಲಿ ರೇವಣ್ಣ ಅವರ ಮನೆಯಲ್ಲೇ ಕೆಲಸಕ್ಕೆ ಸೇರಿಸಿಕೊಂಡಿದ್ದರು. ಒಟ್ಟು 6 ಹೆಣ್ಣು ಮಕ್ಕಳು ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸಕ್ಕೆ ಸೇರಿಕೊಂಡ ನಾಲ್ಕು ತಿಂಗಳಿಗೆ ಕೊಠಡಿಗೆ ಬರುವಂತೆ ರೇವಣ್ಣ ಆಹ್ವಾನಿಸಿದ್ದರು.

ಇನ್ನು ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದಿದ್ದಾಗ ಎಚ್.ಡಿ. ರೇವಣ್ಣ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಸ್ಟೋರ್ ರೂಮ್‌ನಲ್ಲಿ ಹಣ್ಣು ಕೊಡೋ ನೆಪದಲ್ಲಿ ಕೈ ಹಿಡಿದು ಎಳೆದಾಡಿದ್ದರು. ಅದೇ ರೀತಿ ಅಡುಗೆ ಮನೆಯಲ್ಲಿ ಇದ್ದಾಗ ಪ್ರಜ್ವಲ್ ರೇವಣ್ಣ ಹಿಂಬದಿಯಿಂದ ಬಂದು ಮೈ‌ಮುಟ್ಟಿ ಹೊಟ್ಟೆ ಜಿಗುಟುತ್ತಿದ್ದರು. ಜೊತೆಗೆ ಎಣ್ಣೆ ಹಚ್ಚಲು ಪದೇ ಪದೇ ಕರೆದು ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು. ಮನೆಯಲ್ಲಿದ್ದಾಗ ವಿಡಿಯೋ ಕಾಲ್ ಮಾಡಿ ನನ್ನ ಮಗಳ ಜೊತೆ ಅಸಭ್ಯವಾಗಿ ಮಾತನಾಡುತ್ತಿದ್ದರು. ಇದಕ್ಕೆ ಮಗಳು ಹೆದರಿಕೊಂಡು ನಂಬರ್ ಬ್ಲಾಕ್ ಕೂಡ ಮಾಡಿದ್ದಳು. ಇದರಿಂದ‌ ಮನೆ ಕೆಲಸ ಬಿಟ್ಟು ಹೊರಗಡೆ ಬಂದಿದ್ದಾಗಿ ದೂರಿನಲ್ಲಿ ತಿಳಿಸಿದ್ದಾಳೆ.

ಇದನ್ನೂ ಓದಿ | Hassan Pen Drive Case: ಹಾಸನ ಅಶ್ಲೀಲ ವಿಡಿಯೊ ಪ್ರಕರಣ; ಬಿ.ಕೆ.ಸಿಂಗ್‌ ನೇತೃತ್ವದಲ್ಲಿ ಎಸ್‌ಐಟಿ ರಚನೆ

ಈಗ ಕೆಲ ವಿಡಿಯೊಗಳು ವೈರಲ್ ಆಗುತ್ತಿದ್ದು, ನನ್ನ ಗಂಡ ಶೀಲ ಶಂಕಿಸುತ್ತಿದ್ದಾನೆ. ಇದರಿಂದ ಮನನೊಂದು ದೂರು ನೀಡುತ್ತಿರೋದಾಗಿ 47 ವರ್ಷದ ಮಹಿಳೆ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಸದ್ಯ ಮಹಿಳೆ ದೂರಿನನ್ವಯ ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ. ರೇವಣ್ಣ ಇಬ್ಬರ ಮೇಲೂ ಎಫ್‌ಐಆರ್ ದಾಖಲಾಗಿದೆ.

ಕೊನೆಗೂ ಮಹಿಳಾ ಆಯೋಗಕ್ಕೆ ಸಂತ್ರಸ್ತೆಯಿಂದ ಬಂತು ದೂರು

ಹಾಸನ ಆಶ್ಲೀಲ ವಿಡಿಯೊ ಪ್ರಕರಣದಲ್ಲಿ ಕೊನೆಗೂ ಮಹಿಳಾ ಆಯೋಗಕ್ಕೆ ಸಂತ್ರಸ್ತೆಯಿಂದ ದೂರು ಬಂದಿದೆ ಎಂದು ರಾಜ್ಯ ಮಹಿಳಾ ಅಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ತಿಳಿಸಿದ್ದಾರೆ. ನಿನ್ನೆ ಸಂತ್ರಸ್ತೆಯೊಬ್ಬರು ಮಹಿಳಾ ಆಯೋಗಕ್ಕೆ ವಾಟ್ಸ್‌ಆ್ಯಪ್ ಮೂಲಕ ದೂರು ನೀಡಿದ್ದಾರೆ. ನನಗೆ ಜೀವ ಬೆದರಿಕೆ ಇದೆ ಎಂದು ಮಹಿಳೆ ಹೇಳಿದ್ದಾರೆ. ಅವರಿಗೆ ಪೊಲೀಸ್‌ ರಕ್ಷಣೆ ಒದಗಿಸಲಾಗಿದೆ. ಸಂತ್ರಸ್ತೆ ಅನೇಕ ವಿಚಾರಗಳನ್ನು ಹೇಳಿರುವುದಾಗಿ ತಿಳಿಸಿದ್ದಾರೆ.

ಸಾಕಷ್ಟು ಮಹಿಳೆಯರ ಅಶ್ಲೀಲ ವಿಡಿಯೊ ಚಿತ್ರೀಕರಣ ಮಾಡಲಾಗಿದೆ. ಪೆನ್‌ಡ್ರೈವ್‌ನಲ್ಲಿ ಲೈಂಹಿಕ ದೌರ್ಜನ್ಯದ ವಿಡಿಯೊಗಳಿವೆ. ಅಧಿಕಾರ ಹಾಗೂ ಸ್ಥಾನ ದೂರುಪಯೋಗ ಮಾಡಿಕೊಂಡು, ಅಸಹಾಯಕ ಮಹಿಳೆಯರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಇದರಿಂದ ಸಾವಿರಾರು ಮಹಿಳೆಯರ ಭವಿಷ್ಯ ಹಾಗೂ ಜೀವನ ಹಾಳಾಗಿದೆ. ಇತಂಹ ಘಟನೆ ಮತ್ತೆ ಎಲ್ಲೂ ಮರಕಳಿಸಬಾರದು. ಹಾಸನ ಎಸ್‌ಪಿಗೆ ಸುಮೋಟೊ ಕೇಸ್ ದಾಖಲಿಸುವಂತೆ ಹೇಳಿದ್ದೆ, ಆದರೆ, ಕೇಸ್ ದಾಖಲಿಸಿಕೊಂಡಿಲ್ಲ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಮಾಹಿತಿ ನೀಡಿದ್ದಾರೆ.

ಅಶ್ಲೀಲ ವಿಡಿಯೊ ಶೇರ್‌ ಮಾಡಬೇಡಿ

ವಿಡಿಯೊ ನೋಡಿದರೆ ನೊಂದ ಮಹಿಳೆಯರ ಬಗ್ಗೆ ಕನಿಕರ ಮೂಡುತ್ತದೆ. ಮಹಿಳೆಯರ ಕುಟುಂಬಸ್ಥರೇ ಈಗ ಅವರಿಗೆ ಧೈರ್ಯ ತುಂಬಬೇಕು. ತಪ್ಪು ಎಲ್ಲರೂ ಮಾಡುತ್ತಾರೆ, ಆದ್ರೆ ಇಲ್ಲಿ ನಡೆದಿರೋದು ಕೇವಲ ತಪ್ಪಲ್ಲ.
ಆರೋಪಿಯಾಗಿರೋ ಪ್ರಭಾವಿ ರಾಜಕಾರಣಿಯನ್ನು ರಕ್ಷಣೆ ಮಾಡೋ ಕೆಲಸ ಸಹಜವಾಗಿ ನಡೆಯುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಆರೋಪಿಸಿದ್ದಾರೆ.

ಇದನ್ನೂ ಓದಿ | Prajwal Revanna Pen Drive: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಪರಮೇಶ್ವರ್

ಅಧಿಕಾರಿಗಳನ್ನು ಬಳಸಿಕೊಂಡು ಪ್ರಕರಣದ ದಿಕ್ಕು ತಪ್ಪಿಸುವ ಯತ್ನ ನಡೆಯುತ್ತಿದೆ. ನಾನೂ ಒಬ್ಬ ವೈದ್ಯೆಯಾಗಿ ಆತನ ಹೀನಾಯ ಮನಸ್ಥಿತಿಯನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ದಯಮಾಡಿ ಜನರು ಆ ವಿಡಿಯೊಗಳನ್ನು ಹಂಚಬೇಡಿ. ನೊಂದ ಮಹಿಳೆಯರ ಜೀವ ಹಾಗೂ ಜೀವನದ ಮೇಲೆ ಅದು ಕೆಟ್ಟ ಪ್ರಭಾವ ಬೀರುತ್ತಿದೆ. ವಿಡಿಯೊ ಮಾಡಿರೋ ವ್ಯಕ್ತಿ ತನ್ನ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾನೆ. ಹೆದರಿಸಿ‌ ಬೆದರಿಸಿ ಒಪ್ಪಿಗೆ ಇಲ್ಲದಿದ್ದರೂ ಒತ್ತಡ ಹೇರಿದ್ದಾನೆ. ಆತನಿಗೆ ಕೋರ್ಟ್ ಕಡ್ಡಾಯವಾಗಿ ಶಿಕ್ಷೆ ನೀಡುವಂತೆ ಮಾಡಲಾಗುತ್ತದೆ. ಸಂತ್ರಸ್ತ ಮಹಿಳೆ ದೂರು ನೀಡಿದ್ದು, ಅವರಿಗೆ ಭದ್ರತೆ ನೀಡಲಾಗಿದೆ. ಕೋರ್ಟ್‌ನಲ್ಲಿ ಸಾಕ್ಷಿಗಳು ಬೇಕಿರುವುದರಿಂದ ನೊಂದ ಮಹಿಳೆಯರು ದೂರು ನೀಡುವಂತೆ ಕೋರುತ್ತೇವೆ. ಕೋರ್ಟ್ ಮೇಲೆ ನಂಬಿಕೆಯಿದೆ, ಆತನಿಗೆ ಶಿಕ್ಷೆ ಆಗುತ್ತದೆ ಎಂದು ನಂಬಿರುವುದಾಗಿ ಹೇಳಿದರು.

Continue Reading
Advertisement
Arecanut cultivation
ಚಿತ್ರದುರ್ಗ3 mins ago

Arecanut Cultivation: ಒಣಗುತ್ತಿರುವುದು ಅಡಿಕೆ ಮರಗಳಲ್ಲ ರೈತರ ಬದುಕು!

IPL 2024
ಕ್ರೀಡೆ29 mins ago

IPL 2024: ಗೆಲುವಿನಲ್ಲೂ ನೂತನ ದಾಖಲೆ ಬರೆದ ಆರ್​ಸಿಬಿ

PUC Exam 2024
ಕರ್ನಾಟಕ30 mins ago

PUC Exam 2024: ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ!

Money Guide
ಮನಿ-ಗೈಡ್40 mins ago

Money Guide: ಫೊರೆಕ್ಸ್‌ ಕಾರ್ಡ್‌ V/S ಕ್ರೆಡಿಟ್‌ ಕಾರ್ಡ್‌: ವಿದೇಶ ಪ್ರವಾಸಕ್ಕೆ ಯಾವುದು ಸೂಕ್ತ?

lehar singh siroya
ದಾವಣಗೆರೆ56 mins ago

Lehar Singh Siroya: ಹರಿಹರದ ಪಂಚಮಸಾಲಿ ಜಗದ್ಗುರು ಪೀಠಕ್ಕೆ ರಾಜ್ಯಸಭಾ ಸದಸ್ಯ ಲೆಹರ್​ಸಿಂಗ್ ಭೇಟಿ

Car Accident
ಬೆಂಗಳೂರು1 hour ago

Car Accident: ಮಾದಾವರ ಟೋಲ್‌ಗೇಟ್ ಬಳಿ ಕಾರು ಅಪಘಾತ ಪ್ರಕರಣ; ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಸಾವು

CET
ಕರ್ನಾಟಕ1 hour ago

CET 2024: ಸಿಇಟಿ ಮರು ಪರೀಕ್ಷೆಯೋ? ಗ್ರೇಸ್‌ ಮಾರ್ಕ್ಸ್‌ ಭಾಗ್ಯವೋ? ನಾಳೆ ನಿರ್ಧಾರ ಪ್ರಕಟ?

YAJAMANA PREMIER LEAGUE SEASON-3 (2)
ಕ್ರೀಡೆ2 hours ago

YAJAMANA PREMIER LEAGUE SEASON-3: ಈ ಬಾರಿ ಟಿ10 ಮಾದರಿಯಲ್ಲಿ ನಡೆಯಲಿದೆ ಯಜಮಾನ ಪ್ರೀಮಿಯರ್ ಲೀಗ್​

Lok Sabha Election 2024
Lok Sabha Election 20242 hours ago

Lok Sabha Election 2024: ಒವೈಸಿ ಪ್ರಕಾರ ಮುಸ್ಲಿಮರೇ ಹೆಚ್ಚು ಕಾಂಡೋಮ್ ಬಳಸುತ್ತಾರಂತೆ!

Virat Kohli
ಕ್ರಿಕೆಟ್2 hours ago

Virat Kohli: ಟೀಕೆಗಳಿಗೆ ಬಹಿರಂಗವಾಗಿಯೇ ತಿರುಗೇಟು ನೀಡಿದ ಕಿಂಗ್​ ಕೊಹ್ಲಿ​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20245 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20248 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202410 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202410 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ13 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ17 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌