Instagram: ನಿಮ್ಮ ಮಕ್ಕಳು ಇನ್‌ಸ್ಟಾ ಯೂಸ್ ಮಾಡ್ತಾ ಇದ್ದಾರಾ? ಈ ಜಾಲತಾಣದಲ್ಲೇ ಮಕ್ಕಳ ಲೈಂಗಿಕ ಶೋಷಣೆ ಜಾಲ ಸಕ್ರಿಯ! - Vistara News

ತಂತ್ರಜ್ಞಾನ

Instagram: ನಿಮ್ಮ ಮಕ್ಕಳು ಇನ್‌ಸ್ಟಾ ಯೂಸ್ ಮಾಡ್ತಾ ಇದ್ದಾರಾ? ಈ ಜಾಲತಾಣದಲ್ಲೇ ಮಕ್ಕಳ ಲೈಂಗಿಕ ಶೋಷಣೆ ಜಾಲ ಸಕ್ರಿಯ!

ಜನಪ್ರಿಯ ಫೋಟೋ ಷೇರಿಂಗ್ ಸೋಷಿಯಲ್ ಮೀಡಿಯಾ ಇನ್‌ಸ್ಟಾಗ್ರಾಮ್ ಮಕ್ಕಳ ಬಳಕೆಗೆ ಯೋಗ್ಯವಲ್ಲ. ಈ ಜಾಲದಲ್ಲಿ ಶಿಶುಪೀಡನೆ ಜಾಲ ಸಕ್ರಿಯವಾಗಿದೆ ಎನ್ನುತ್ತಿವೆ ಸಂಶೋಧನಾ ವರದಿಗಳು.

VISTARANEWS.COM


on

Child Sex Abuse and Instragram
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸ್ಯಾನ್ ಫ್ರಾನ್ಸಿಸ್ಕೋ, ಅಮೆರಿಕ: ಫೋಟೋ ಷೇರಿಂಗ್ ವೇದಿಕೆಯಾಗಿರುವ ಇನ್‌ಸ್ಟಾಗ್ರಾಮ್ (Instagram) ಬಳಕೆದಾರರಿಗೆ ಇದು ಶಾಕಿಂಗ್ ಸುದ್ದಿ. ಯಾಕೆಂದರೆ, ಈ ತಾಣವನ್ನು ಶಿಶು ಪೀಡನೆ ಜಾಲವು, ಮಕ್ಕಳ ಮೇಲಿನ ಲೈಂಗಿಕ ಶೋಷಣೆ(pedophile networks), ದೌರ್ಜನ್ಯಕ್ಕಾಗಿ ಬಳಸಿಕೊಳ್ಳುತ್ತಿದೆ. ಅಂದರೆ, ಇನ್‌ಸ್ಟಾಗ್ರಾಮ್ ಮೂಲಕವೇ ಮಕ್ಕಳ ಲೈಂಗಿಕ ಕಂಟೆಂಟ್‌ ಪ್ರಮೋಟ್ ಮತ್ತು ಮಾರಾಟ ಮಾಡುವುದನ್ನು ಮಾಡಲಾಗುತ್ತಿದೆ ಎಂದು ಅಮೆರಿಕದ ಸ್ಟ್ಯಾನ್‌ಪೋರ್ಡ್ ವಿಶ್ವವಿದ್ಯಾಲಯ ಮತ್ತು ವಾಲ್ ಸ್ಟ್ರೀಟ್ ಜರ್ನಲ್ ತಯಾರಿಸಿದ ವರದಿಯಲ್ಲಿ ತಿಳಿಸಲಾಗಿದೆ(Child Sex Abuse Networks).

ಅಪ್ರಾಪ್ತ ವಯಸ್ಕರು ನಿರ್ವಹಿಸುತ್ತಿರುವ ಖಾತೆಗಳ ದೊಡ್ಡ ನೆಟ್‌ವರ್ಕ್‌ಗಳು ಸ್ವಯಂ-ರಚಿಸಿದ ಮಕ್ಕಳ ಲೈಂಗಿಕ ಶೋಷಣೆಯ ವಸ್ತುಗಳನ್ನು ಮಾರಾಟಕ್ಕಾಗಿ ಬಹಿರಂಗವಾಗಿ ಜಾಹೀರಾತು ಮಾಡುತ್ತಿವೆ ಎಂದು ಅಮೆರಿಕದ ವಿಶ್ವವಿದ್ಯಾಲಯದ ಸೈಬರ್ ನೀತಿ ಕೇಂದ್ರದ ಸಂಶೋಧಕರು ಹೇಳಿದ್ದಾರೆ.

ಇನ್‌ಸ್ಟಾಗ್ರಾಮ್ ಪ್ರಸ್ತುತ ಈ ಶಿಶುಪೀಡನೆ ಜಾಲಗಳಿಗೆ ಪ್ರಮುಖ ವೇದಿಕೆಯಾಗಿದೆ. ಶಿಫಾರಸು ಅಲ್ಗಾರಿದಮ್‌ಗಳು ಮತ್ತು ಖರೀದಿದಾರರು ಮತ್ತು ಮಾರಾಟಗಾರರನ್ನು ಸಂಪರ್ಕಿಸಲು ಸಹಾಯ ಮಾಡುವ ನೇರ ಸಂದೇಶ ಕಳುಹಿಸುವಿಕೆಯಂತಹ ವೈಶಿಷ್ಟ್ಯಗಳನ್ನು ಇದು ಒಳಗೊಂಡಿದೆ ಎಂದು ತಿಳಿಸಿದೆ.

ನಿರ್ದಿಷ್ಟವಾಗಿ ಮಕ್ಕಳನ್ನು ಉಲ್ಲೇಖಿಸುವ ಲೈಂಗಿಕವಾಗಿ ಸ್ಪಷ್ಟವಾದ ಕೀವರ್ಡ್‌ಗಳ ಸರಳ ಹುಡುಕಾಟವು ಅಪ್ರಾಪ್ತ ವಯಸ್ಕರ ಲೈಂಗಿಕ ದೌರ್ಜನ್ಯವನ್ನು ತೋರಿಸುವ ವಿಷಯವನ್ನು ಜಾಹೀರಾತು ಮಾಡಲು ಈ ಪದಗಳನ್ನು ಬಳಸುವ ಖಾತೆಗಳಿಗೆ ಕಾರಣವಾಗುತ್ತದೆ. ಈ ಪ್ರೊಫೈಲ್‌ಗಳು ಮಕ್ಕಳ ಪ್ರೊಫೈಲ್‌ಗಳೆಂದು ಹೇಳಿಕೊಳ್ಳುತ್ತವೆ. ಜತೆಗೆ ಲೈಂಗಿಕ ರಹಸ್ಯ ಹೆಸರುಗಳನ್ನು ಒಳಗೊಂಡಿರುತ್ತವೆ ಎಂದು ವಾಲ್ ಸ್ಟ್ರೀಟ್ ಜರ್ನಲ್‌ನಲ್ಲಿ ಪ್ರಕಟವಾದ ವರದಿಯಲ್ಲಿ ತಿಳಿಸಲಾಗಿದೆ.

ಈ ಸುದ್ದಿಯನ್ನೂ ಓದಿ: Harrassment : ಹಾಸನದ ವಸತಿ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ಪ್ರಿನ್ಸಿಪಾಲ್‌ ಸೇರಿ ಐವರ ಸೆರೆ

ಅಲ್ಲದೇ ಈ ಇನ್‌ಸ್ಟಾಗ್ರಾಮ್‌ನಲ್ಲಿ ಕೆಲವು ಲೈಂಗಿಕ ಪ್ರಚೋದನಕಾರಿ ವಿಡಿಯೋಗಳು ಇರುವುದನ್ನು ಸ್ಟ್ಯಾನ್‌ಫೋರ್ಡ್ ಸಂಶೋಧಕರು ಪತ್ತೆ ಹಚ್ಚಿದ್ದಾರೆ. ಅಲ್ಲದೇ, ಒಂದು ನಿರ್ದಿಷ್ಟ ದರದಲ್ಲಿ ಮಕ್ಕಳನ್ನು ಮುಖತಃ ಭೇಟಿಯಾಗಲು ಅವಕಾಶವನ್ನೂ ಕಲ್ಪಿಸಲಾಗುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಈ ಕುರಿತು ಇನ್‍‌ಸ್ಟಾಗ್ರಾಮ್ ಒಡೆತನವನ್ನು ಹೊಂದಿರುವ ಮೆಟಾ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

ತಂತ್ರಜ್ಞಾನದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತಂತ್ರಜ್ಞಾನ

Sunita Williams: ಸುನೀತಾ ವಿಲಿಯಮ್ಸ್‌ ಮೂರನೇ ಬಾಹ್ಯಾಕಾಶ ಯಾತ್ರೆ ಮುಂದೂಡಿಕೆ; ಹೊಸ ದಿನಾಂಕ ಶೀಘ್ರ ಘೋಷಣೆ

Sunita Williams: ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಅವರನ್ನೊಳಗೊಂಡ ಬಾಹ್ಯಾಕಾಶ ನೌಕೆಯ ಉಡಾವಣೆಯನ್ನು ಮಂಗಳವಾರ ನಾಸಾ ರದ್ದುಗೊಳಿಸಿದೆ. ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಶೀಘ್ರದಲ್ಲಿಯೇ ಹೊಸ ದಿನಾಂಕ ಪ್ರಕಟಿಸುವುದಾಗಿ ತಿಳಿಸಿದೆ. ವಿಶೇಷ ಎಂದರೆ ಇಂದು ಸುನೀತಾ ವಿಲಿಯಮ್ಸ್‌ ಮೂರನೇ ಬಾರಿ ಗಗನಯಾತ್ರೆ ಕೈಗೊಳ್ಳಲು ಸಜ್ಜಾಗಿದ್ದರು. ಭಾರತದ ಮೂಲದ ಡಾ. ದೀಪಕ್‌ ಪಾಂಡ್ಯಾ ಮತ್ತು ಬೋನಿ ಪಾಂಡ್ಯ ಪುತ್ರಿಯಾಗಿರುವ 59 ವರ್ಷದ ಸುನೀತಾ, ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

VISTARANEWS.COM


on

Sunita Williams
Koo

ವಾಷಿಂಗ್ಟನ್‌: ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ (Sunita Williams) ಅವರನ್ನೊಳಗೊಂಡ ಬಾಹ್ಯಾಕಾಶ ನೌಕೆ (Spacecraft)ಯ ಉಡಾವಣೆಯನ್ನು ಮಂಗಳವಾರ (ಮೇ 7) ನಾಸಾ (NASA) ರದ್ದುಗೊಳಿಸಿದೆ. ʼʼಬಾಹ್ಯಾಕಾಶ ನೌಕೆಯಲ್ಲಿ ವಾಲ್ವ್ ಸಮಸ್ಯೆ ಕಂಡು ಬಂದ ಹಿನ್ನೆಲೆಯಲ್ಲಿ ಉಡಾವಣೆಯನ್ನು ಮುಂದೂಡಲಾಗಿದೆ. ಶೀಘ್ರದಲ್ಲಿಯೇ ಹೊಸ ದಿನಾಂಕವನ್ನು ಪ್ರಕಟಿಸಲಾಗುವುದುʼʼ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಕಾರ್ಯಾಚರಣೆಯಲ್ಲಿ ಗಗನಯಾನ ಕೈಗೊಳ್ಳಲು ಸಿದ್ಧತೆ ನಡೆಸಿದ್ದರು. ಆದರೆ ಉದ್ದೇಶಿತ ಉಡಾವಣೆಯ ಎರಡು ಗಂಟೆಗಳ ಮೊದಲು ರದ್ದು ಪಡಿಸಲಾಯಿತು.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ನಾಸಾ ಮಾಹಿತಿ ನೀಡಿದೆ. “ಅಟ್ಲಾಸ್ ವಿಯಲ್ಲಿನ ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಇಂದಿನ ಸ್ಟಾರ್‌ಲೈನರ್ ಉಡಾವಣೆಯನ್ನು ರದ್ದುಪಡಿಸಲಾಗಿದೆ. ನಮ್ಮ ಗಗನಯಾತ್ರಿಗಳು ಸ್ಟಾರ್‌ಲೈನರ್‌ನಿಂದ ನಿರ್ಗಮಿಸಿದ್ದಾರೆʼʼ ಎಂದು ಬರೆದುಕೊಂಡಿದೆ. ವಿಶೇಷ ಎಂದರೆ ಈ ಮೂಲಕ ಸುನೀತಾ ವಿಲಿಯಮ್ಸ್‌ ಮೂರನೇ ಬಾರಿ ಗಗನಯಾತ್ರೆ ಕೈಗೊಳ್ಳಲು ಸಜ್ಜಾಗಿದ್ದರು. ಇಬ್ಬರು ಗಗನಯಾತ್ರಿಗಳೊಂದಿಗೆ ಬೋಯಿಂಗ್ ಸ್ಟಾರ್‌ಲೈನರ್ ಅನ್ನು ಮೇ 10ರಂದು ಉಡಾವಣೆ ಮಾಡಲು ಪ್ರಯತ್ನಿಸಲಾಗುವುದು ಎಂದು ನಾಸಾ ತಿಳಿಸಿದೆ.

ಸುನೀತಾ ವಿಲಿಯಮ್ಸ್‌ ಹಿನ್ನೆಲೆ

ಭಾರತದ ಮೂಲದ ಡಾ. ದೀಪಕ್‌ ಪಾಂಡ್ಯಾ ಮತ್ತು ಬೋನಿ ಪಾಂಡ್ಯ ಪುತ್ರಿಯಾಗಿರುವ 59 ವರ್ಷದ ಸುನೀತಾ, ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ಮೊದಲ ಬಾರಿಗೆ 2006ರಲ್ಲಿ ಯಶಸ್ವಿ ಗಗನಯಾತ್ರೆ ಕೈಗೊಂಡಿದ್ದರು. ಇದಾದ ಬಳಿಕ 2012ರಲ್ಲಿ ಮತ್ತೆ ಗಗನಯಾತ್ರೆ ಕೈಗೊಂಡಿದ್ದರು. ಅವರು ಬಾಹ್ಯಾಕಾಶದಲ್ಲಿ ಬರೋಬ್ಬರಿ 322 ದಿನಗಳನ್ನು ಕಳೆದಿದ್ದಾರೆ. ಸುನೀತಾ ವಿಲಿಯಮ್ಸ್ ಅತೀ ಹೆಚ್ಚು ಬಾರಿ ಬಾಹ್ಯಾಕಾಶಕ್ಕೆ ಹಾರಿದ ಹಾಗೂ ಬಾಹ್ಯಾಕಾಶದಲ್ಲಿ ಅಧ್ಯಯನ ನಡೆಸಿದ ಮಹಿಳಾ ಗಗನ ಯಾತ್ರಿ ಎಂದೂ ಗುರುತಿಸಲ್ಪಡುತ್ತಿದ್ದಾರೆ.

ಇದುವರೆಗೆ ಸುನೀತಾ ವಿಲಿಯಮ್ಸ್ ಗರಿಷ್ಠ ಬಾಹ್ಯಾಕಾಶ ಪ್ರಯಾಣ ಮಾಡಿದ್ದಾರೆ. ಮಹತ್ವದ ಅಧ್ಯಯನಕ್ಕಾಗಿ ಮಂಗಳವಾರ ಮೂರನೇ ಬಾರಿ ಬಾಹ್ಯಾಕಾಶಕ್ಕೆ ಹಾರಲಿದ್ದ ಸುನೀತಾ ವಿಲಿಯಮ್ಸ್ ಎಲ್ಲ ತಯಾರಿ ಮಾಡಿಕೊಂಡಿದ್ದರು. ʼʼಕೊಂಚ ನರ್ವಸ್ ಆಗಿದ್ದೇನೆ. ಆದರೆ ಮತ್ತೆ ತವರಿಗೆ ಮರಳು ಅನುಭವವಾಗುತ್ತಿದೆ. ಬಾಹ್ಯಕಾಶವೇ ನನಗೆ ತವರಾಗಿದೆʼʼ ಎಂದು ಸುನೀತಾ ವಿಲಿಯಮ್ಸ್ ಹೇಳಿದ್ದರು.

ಇದನ್ನೂ ಓದಿ: Sunita Williams: ಸುನೀತಾ ವಿಲಿಯಮ್ಸ್‌ 3ನೇ ಬಾರಿಗೆ ಬಾಹ್ಯಾಕಾಶಕ್ಕೆ ತೆರಳಲು ಸಜ್ಜು

ʼʼಯಾವುದೇ ಕೆಲಸಕ್ಕೂ ಮೊದಲು ಗಣೇಶನ ಪ್ರಾರ್ಥಿಸುತ್ತೇನೆ. ಸಿದ್ಧಿ ವಿನಾಯಕ ನನ್ನ ಶುಭ ಸಂಕೇತʼʼ ಎಂದು ಅವರು ಈ ಹಿಂದೆ ಹೇಳಿದ್ದರು. ʼʼಬಾಹ್ಯಾಕಾಶ ಪ್ರಯಾಣ ಸೇರಿದಂತೆ ಯಾವುದೇ ಕೆಲಸಕ್ಕೂ ಗಣೇಶನ ಆಶೀರ್ವಾದ ನನಗೆ ಬೇಕು. ಗಣೇಶ ನನ್ನ ಎಲ್ಲ ಕಾರ್ಯಗಳಿಗೆ ಶಕ್ತಿಯಾಗಿದ್ದಾನೆ. ಪ್ರತಿ ಬಾರಿ ನಾನು ಬಾಹ್ಯಾಕಾಶ ಪ್ರಯಾಣದಲ್ಲೂ ಸಣ್ಣ ಗಣೇಶನ ವಿಗ್ರಹವನ್ನು ತೆಗೆದುಕೊಂಡು ಹೋಗುತ್ತೇನೆʼʼ ಎಂದು ಸುನೀತಾ ವಿಲಿಯಮ್ಸ್ ತಿಳಿಸಿದ್ದರು. ಈ ಹಿಂದೆ ಅವರು ಬಾಹ್ಯಾಕಾಶಕ್ಕೆ ಭಗವದ್ಗೀತೆ ಒಯ್ಯುವ ಮೂಲಕ ಭಾರತೀಯರ ಗಮನ ಸೆಳೆದಿದ್ದರು.

Continue Reading

ದೇಶ

Innova Crysta: ಇನ್ನೋವಾ ಕ್ರಿಸ್ಟಾ ನೂತನ ಸರಣಿಯ GX+ ಪರಿಚಯಿಸಿದ ಟಿಕೆಎಂ; ವೈಶಿಷ್ಟ್ಯಗಳೇನು? ದರ ಎಷ್ಟು?

Innova Crysta: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಇನ್ನೋವಾ ಕ್ರಿಸ್ಟಾ ಸರಣಿಯಲ್ಲಿ ನೂತನ ಗ್ರೇಡ್ GX+ ಅನ್ನು ಪರಿಚಯಿಸಿದ್ದು, ರಿಯರ್ ಕ್ಯಾಮೆರಾ, ಆಟೋ-ಫೋಲ್ಡ್ ಮಿರರ್ಸ್, ಡಿವಿಆರ್, ಡೈಮಂಡ್-ಕಟ್ ಅಲಾಯ್ಸ್, ವುಡನ್ ಪ್ಯಾನೆಲ್ ಮತ್ತು ಪ್ರೀಮಿಯಂ ಫ್ಯಾಬ್ರಿಕ್ ಸೀಟ್ಸ್ ಸೇರಿದಂತೆ ಹಲವಾರು ಅತ್ಯಾಕರ್ಷಕ ಮತ್ತು ಸುಧಾರಿತ ವೈಶಿಷ್ಟ್ಯಗಳನ್ನು ಇದು ಒಳಗೊಂಡಿದೆ. ಇನ್ನೋವಾ ಕ್ರಿಸ್ಟಾ GX+ ಗ್ರೇಡ್ ಐದು ಅತ್ಯಾಕರ್ಷಕ ಬಣ್ಣಗಳಲ್ಲಿ ಲಭ್ಯವಿದ್ದು, ಸೂಪರ್ ವೈಟ್, ಆಟಿಟ್ಯೂಡ್ ಬ್ಲ್ಯಾಕ್ ಮೈಕಾ, ಅವಂತ್-ಗಾರ್ಡೆ ಬ್ರೋನ್ಜ್ ಮೆಟಾಲಿಕ್, ಪ್ಲಾಟಿನಂ ವೈಟ್ ಪರ್ಲ್ ಮತ್ತು ಸಿಲ್ವರ್ ಮೆಟಾಲಿಕ್ ಬಣ್ಣಗಳಲ್ಲಿ ನೂತನ ವಾಹನ ಹೊರಬರಲಿದೆ.

VISTARANEWS.COM


on

Innova Crysta new grade GX+ introduced by Toyota Kirloskar Motor
Koo

ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಇಂದು ಇನ್ನೋವಾ ಕ್ರಿಸ್ಟಾ (Innova Crysta) ಸರಣಿಯಲ್ಲಿ ನೂತನ ಗ್ರೇಡ್ GX+ ಅನ್ನು ಪರಿಚಯಿಸಿದ್ದು, ರಿಯರ್ ಕ್ಯಾಮೆರಾ, ಆಟೋ-ಫೋಲ್ಡ್ ಮಿರರ್ಸ್, ಡಿವಿಆರ್, ಡೈಮಂಡ್-ಕಟ್ ಅಲಾಯ್ಸ್, ವುಡನ್ ಪ್ಯಾನೆಲ್ ಮತ್ತು ಪ್ರೀಮಿಯಂ ಫ್ಯಾಬ್ರಿಕ್ ಸೀಟ್ಸ್ ಸೇರಿದಂತೆ ಹಲವಾರು ಅತ್ಯಾಕರ್ಷಕ ಮತ್ತು ಸುಧಾರಿತ ವೈಶಿಷ್ಟ್ಯಗಳನ್ನು ಇದು ಒಳಗೊಂಡಿದೆ.

ಇನ್ನೋವಾ ಕ್ರಿಸ್ಟಾ GX+ ಗ್ರೇಡ್ ಐದು ಅತ್ಯಾಕರ್ಷಕ ಬಣ್ಣಗಳಲ್ಲಿ ಲಭ್ಯವಿದ್ದು, ಸೂಪರ್ ವೈಟ್, ಆಟಿಟ್ಯೂಡ್ ಬ್ಲ್ಯಾಕ್ ಮೈಕಾ, ಅವಂತ್-ಗಾರ್ಡೆ ಬ್ರೋನ್ಜ್ ಮೆಟಾಲಿಕ್, ಪ್ಲಾಟಿನಂ ವೈಟ್ ಪರ್ಲ್ ಮತ್ತು ಸಿಲ್ವರ್ ಮೆಟಾಲಿಕ್ ಬಣ್ಣಗಳಲ್ಲಿ ನೂತನ ವಾಹನ ಹೊರಬರಲಿದೆ. ಇನ್ನೋವಾ ಕ್ರಿಸ್ಟಾ GX+ ಗ್ರೇಡ್ 14 ಹೆಚ್ಚುವರಿ ವೈಶಿಷ್ಟ್ಯಗಳನ್ನು ಹೊಂದಿದೆ.

ಇದನ್ನೂ ಓದಿ: Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಸೇಲ್ಸ್-ಸರ್ವೀಸ್-ಯೂಸ್ಡ್ ಕಾರ್ ಬಿಸಿನೆಸ್‌ನ ಉಪಾಧ್ಯಕ್ಷ ಶಬರಿ ಮನೋಹರ್ ಈ ಕುರಿತು ಮಾತನಾಡಿ, ನೂತನವಾಗಿ ಪರಿಚಯಿಸಲಾದ ಇನ್ನೋವಾ ಕ್ರಿಸ್ಟಾ GX+ ಗ್ರೇಡ್ ನಮ್ಮ ಅಸ್ತಿತ್ವದಲ್ಲಿರುವ ಇನ್ನೋವಾ ಕ್ರಿಸ್ಟಾ ಶ್ರೇಣಿಗೆ ಪೂರಕವಾಗಿದೆ. ಹೊಸದಾಗಿ ಪರಿಚಯಿಸಲಾದ ವರ್ಧಿತ ವೈಶಿಷ್ಟ್ಯಗಳು ಮತ್ತು ಮಲ್ಟಿ ಫಂಕ್ಷನಾಲಿಟಿಯ ಮೂಲಕ ಹೆಚ್ಚಿನ ಮೌಲ್ಯವನ್ನು ನೀಡುವ ವಿಷಯದಲ್ಲಿ ಒಂದು ಹೆಜ್ಜೆಯಾಗಿದೆ. ಹೊಸ ಪರಿಚಯವು ಗ್ರಾಹಕರ ವ್ಯಾಪಕ ಪ್ರೇಕ್ಷಕರನ್ನು ಆಕರ್ಷಿಸುವುದನ್ನು ಮುಂದುವರಿಸುತ್ತದೆ ಎಂದು ನಮಗೆ ವಿಶ್ವಾಸವಿದೆ, ಇದರಿಂದಾಗಿ ಭಾರತದ ಅತ್ಯಂತ ಪ್ರೀತಿಯ ಎಂಪಿವಿ ಎಂಬ ಇನ್ನೋವಾ ಪರಂಪರೆಯನ್ನು ಬಲಪಡಿಸುತ್ತದೆ ಎಂದು ತಿಳಿಸಿದ್ದಾರೆ.

ಎಕ್ಸ್ ಶೋರೂಂ ಬೆಲೆ (ಗ್ರೇಡ್ ವಾರು)

Variant Ex Showroom Price (W.E.F 06th May 2024), Innova Crysta GX+ 7s Rs 21,39,000, Innova Crysta GX+ 8s ರೂ. 21,44,000 ಗಳಾಗಿದೆ.

ದೃಢವಾದ ಕಾರ್ಯಕ್ಷಮತೆ

ಇನ್ನೋವಾ ಕ್ರಿಸ್ಟಾ GX+ 2.4 ಲೀಟರ್ ಡೀಸೆಲ್ ಎಂಜಿನ್, ಇಕೋ ಮತ್ತು ಪವರ್ ಡ್ರೈವ್ ಮೋಡ್ , 5 ಸ್ಪೀಡ್ ಮ್ಯಾನುವಲ್ ಟ್ರಾನ್ಸ್‌ಮಿಷನ್‌ನೊಂದಿಗೆ ಲಭ್ಯವಿದೆ. ಶಕ್ತಿಶಾಲಿ ಜಿಡಿ ಡೀಸೆಲ್ ಎಂಜಿನ್ ಕಡಿಮೆ ಮತ್ತು ಮಧ್ಯಮ ವೇಗದ ಶ್ರೇಣಿಗಳಲ್ಲಿ ಗಣನೀಯ ವರ್ಧಿತ ಟಾರ್ಕ್‌ ಅನ್ನು ಹೊಂದಿದೆ. ಹೆಚ್ಚುವರಿಯಾಗಿ ವಾಹನವು ಪಿಚ್ ಮತ್ತು ಬೌನ್ಸ್ ನಿಯಂತ್ರಣದೊಂದಿಗೆ ಸುಧಾರಿತ ಸಸ್ಪೆಂಷನ್ ಅನ್ನು ಖಚಿತಪಡಿಸುತ್ತಿದ್ದು, ಕ್ಯಾಬಿನ್ ಚಲನೆಯನ್ನು ಕನಿಷ್ಠವಾಗಿರಿಸುತ್ತದೆ ಮತ್ತು ಒರಟಾದ ರಸ್ತೆಗಳಲ್ಲಿ ಸುಗಮ ಸವಾರಿಯನ್ನು ನಿರ್ವಹಿಸುತ್ತದೆ.

ಇದನ್ನೂ ಓದಿ: Akshaya Tritiya 2024: ಅಕ್ಷಯ ತೃತೀಯದಂದು ಏನು ಮಾಡಬೇಕು, ಏನು ಮಾಡಬಾರದು?

ಟಫ್ ಎಕ್ಸ್‌ಟೀರಿಯರ್

ಎಕ್ಸ್‌ಟೀರಿಯರ್ ಟಫ್ ಮತ್ತು ಅತ್ಯಾಧುನಿಕತೆಯ ಹೊಂದಾಣಿಕೆಯನ್ನು ಇದು ಹೊಂದಿದ್ದು, ನಯವಾದ ಮತ್ತು ಸಮಕಾಲೀನ ವಿನ್ಯಾಸದೊಂದಿಗೆ ಇನ್ನೋವಾ ಕ್ರಿಸ್ಟಾ ಪ್ರತಿ ಪ್ರಯಾಣದಲ್ಲಿ ಸೊಬಗು ಮತ್ತು ಪರಿಷ್ಕರಣೆಯನ್ನು ನೀಡುತ್ತದೆ. ಇದರ ನಿಖರವಾದ ಪರಿಷ್ಕರಿಸಿದ ಎಕ್ಸ್‌ಟೀರಿಯರ್ ವೈಶಿಷ್ಟ್ಯಗಳಾದ ಬೋಲ್ಡ್ ಫ್ರಂಟ್ ಗ್ರಿಲ್ ಮತ್ತು ಗಟ್ಟಿಮುಟ್ಟಾದ ಬಂಪರ್ ಲುಕ್ ಅನ್ನು ಹೆಚ್ಚಿಸುತ್ತದೆ. ಕಾರ್ಯಕ್ಷಮತೆಯನ್ನು ಹೆಚ್ಚಿಸುವುದಲ್ಲದೆ ರಸ್ತೆಯಲ್ಲಿ ಕಮಾಂಡಿಂಗ್ ಉಪಸ್ಥಿತಿಯನ್ನು ಖಚಿತಪಡಿಸುತ್ತದೆ. ಇನ್ನೋವಾ ಕ್ರಿಸ್ಟಾ GX+ ಅನ್ನು ಮತ್ತಷ್ಟು ಪ್ರತ್ಯೇಕಿಸುವ ಅಂಶವೆಂದರೆ ಅದರ ಭವ್ಯವಾದ ಸಿಲ್ವರ್ ಸರೌಂಡ್ ಪಿಯಾನೋ ಬ್ಲ್ಯಾಕ್ ಗ್ರಿಲ್ ಮತ್ತು ಆಕರ್ಷಕ ಡೈಮಂಡ್-ಕಟ್ ಅಲಾಯ್ಸ್ ವಾಹನದ ಆಕರ್ಷಣೆಯನ್ನು ಹೆಚ್ಚಿಸುತ್ತದೆ.

ಆರಾಮದಾಯಕ ಇಂಟೀರಿಯರ್

ಇನ್ನೋವಾ ಕ್ರಿಸ್ಟಾ GX+ ನ ಇಂಟೀರಿಯರ್ ನವೀನ ವೈಶಿಷ್ಟ್ಯಗಳೊಂದಿಗೆ ಆರಾಮ ಮತ್ತು ಅನುಕೂಲತೆಯಲ್ಲಿ ಉದಾಹರಣೆಯಾಗಿದೆ. ಇತರ ಇನ್ನೋವಾಗಳಂತೆ, ಐಷಾರಾಮಿ ಮತ್ತು ಆರಾಮವು ಹೊಸ ಇನ್ನೋವಾ ಕ್ರಿಸ್ಟಾ GX+ನ ಪ್ರಮುಖ ಅಂಶವಾಗಿದ್ದು ವುಡ್ ಫಿನಿಶ್ ಇಂಟೀರಿಯರ್ ಪ್ಯಾನೆಲ್ಸ್ , ಆಟೋ-ಫೋಲ್ಡ್ ಮಿರರ್ಸ್, ಡಿವಿಆರ್, ಸಾಟಿಯಿಲ್ಲದ ಪರಿಷ್ಕರಣೆ ಮತ್ತು ಕ್ಲಾಸ್ ಅನ್ನು ಹೊಂದಿದೆ.

ಇದನ್ನೂ ಓದಿ: Lok Sabha Election 2024: ಮತದಾನ ಮಾಡಲು ದುಬೈನಿಂದ ಗಂಗಾವತಿಗೆ ಆಗಮಿಸಿದ ದಂಪತಿ

ಸುಧಾರಿತ ಸುರಕ್ಷತಾ ಕೊಡುಗೆಗಳು

ಸುರಕ್ಷತೆಯು ಟೊಯೊಟಾಗೆ ಉನ್ನತ ಆದ್ಯತೆಯಾಗಿದೆ. ಇನ್ನೋವಾ ಕ್ರಿಸ್ಟಾ GX+ ಇದಕ್ಕೆ ಹೊರತಾಗಿಲ್ಲ. ರಿಯರ್ ಕ್ಯಾಮೆರಾ, ಎಸ್‌ಆರ್‌ಎಸ್ ಏರ್ ಬ್ಯಾಗ್ಸ್, ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್ ಮತ್ತು ಹಿಲ್-ಸ್ಟಾರ್ಟ್ ಅಸಿಸ್ಟ್ ಕಂಟ್ರೋಲ್ ಸೇರಿದಂತೆ ಸಮಗ್ರ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್ (ಎಬಿಎಸ್) ಮತ್ತು ಹೆಚ್ಚಿನ ಸಾಮರ್ಥ್ಯದ GOA ಬಾಡಿ ಸ್ಟ್ರಕ್ಚರ್ ಪ್ರತಿ ಪ್ರಯಾಣದಲ್ಲಿ ಸುರಕ್ಷತೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ.

Continue Reading

ವಿಜ್ಞಾನ

Chinese Scientists: ಇನ್ನು ಮನುಷ್ಯರು 130 ವರ್ಷ ಬದುಕಬಹುದು! ಚೀನಾ ವಿಜ್ಞಾನಿಗಳ ಸಂಶೋಧನೆ

ಇಲಿಗಳ ರಕ್ತದಲ್ಲಿ ವಯಸ್ಸನ್ನು ನಿಯಂತ್ರಿಸುವ ಅಂಶವನ್ನು ಚೀನಾದ ವಿಜ್ಞಾನಿಗಳು (Chinese Scientists) ಪತ್ತೆ ಮಾಡಿದ್ದು, ಇದು ಮಾನವನ ವಯಸ್ಸನ್ನು ಸುಮಾರು 120-130 ವರ್ಷಗಳವರೆಗೆ ವಿಸ್ತರಿಸಬಹುದು ಎಂದು ಹೇಳಿದ್ದಾರೆ. ಈ ಕುರಿತ ಕುತೂಹಲಕರ ಮಾಹಿತಿ ಇಲ್ಲಿದೆ.

VISTARANEWS.COM


on

By

Chinese Scientists
Koo

ಚೀನಾದ ವಿಜ್ಞಾನಿಗಳು (Chinese Scientists) ಇಲಿಗಳ (mouse) ರಕ್ತದಲ್ಲಿ ವಯಸ್ಸನ್ನು ನಿಯಂತ್ರಿಸುವ (anti-ageing) ಅಂಶವನ್ನು ಪತ್ತೆ ಮಾಡಿರುವುದಾಗಿ ಹೇಳಿದ್ದು, ಅವರ ಸಂಶೋಧನೆಯ ಪ್ರಕಾರ ಇಲಿಯು 1,266 ದಿನಗಳವರೆಗೆ ಜೀವಿಸುತ್ತದೆ. ಇಲಿಗಳಲ್ಲಿರುವ ವಯಸ್ಸನ್ನು ನಿಯಂತ್ರಿಸುವ ಗುಣವನ್ನು ಮಾನವನ ದೇಹಕ್ಕೆ ಸೇರಿಸಿದರೆ ಮಾನವನ ವಯಸ್ಸನ್ನು ಸುಮಾರು 120-130 ವರ್ಷಗಳವರೆಗೆ ವಿಸ್ತರಿಸಬಹುದು ಎನ್ನುತ್ತಾರೆ ಅವರು.

ನೇಚರ್ ಏಜಿಂಗ್ ಜರ್ನಲ್‌ನಲ್ಲಿ ಪ್ರಕಟವಾದ ಪೀರ್-ರಿವ್ಯೂಡ್ ಅಧ್ಯಯನದ ಪ್ರಕಾರ, 840 ದಿನಗಳ ಸರಾಸರಿ ಜೀವಿತಾವಧಿ ಹೊಂದಿರುವ 20 ತಿಂಗಳ ವಯಸ್ಸಿನ ಗಂಡು ಇಲಿಗಳು ವಯಸ್ಸನ್ನು ನಿಯಂತ್ರಿಸುವ ರಕ್ತದ ಅಂಶದ ಸಾಪ್ತಾಹಿಕ ಚುಚ್ಚುಮದ್ದನ್ನು ಸ್ವೀಕರಿಸಿದವು. 1,031 ದಿನಗಳ ಸರಾಸರಿ ಶೇ. 22.7ರಷ್ಟು ಏರಿಕೆಯಾಗಿದೆ ಎಂದು ಸಂಶೋಧಕರು ವರದಿ ಮಾಡಿದ್ದಾರೆ.

ಅಧ್ಯಯನದ ಸಹ-ಮುಖ್ಯಸ್ಥ ಜಾಂಗ್ ಚೆನ್ಯು ಪ್ರಕಾರ, ಚುಚ್ಚುಮದ್ದುಗಳು ಹಳೆಯ ಇಲಿಗಳಲ್ಲಿ ವಯಸ್ಸಿಗೆ ಸಂಬಂಧಿಸಿದ ಕ್ರಿಯಾತ್ಮಕ ಕ್ಷೀಣಿಸುವಿಕೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತವೆ ಎಂದು ತಿಳಿಸಿದ್ದಾರೆ.

ಚಿಕಿತ್ಸೆ ಅಭಿವೃದ್ಧಿಗೆ ಸಹಾಯಕ

ಈ ಚಿಕಿತ್ಸೆಯನ್ನು ಎಂದಾದರೂ ಪ್ರಾರಂಭಿಸಿದರೆ ಅದನ್ನು ಔಷಧಗಳ ಮೂಲಕ ನೀಡಲಾಗುತ್ತದೆ ಮತ್ತು ನೇರ ಪ್ಲಾಸ್ಮಾ ವಿನಿಮಯದ ಮೂಲಕ ಅಲ್ಲ ಎಂದವರು ಸ್ಪಷ್ಟಪಡಿಸಿದರು. ಇದು ಸುಲಭವಾದ ಉದ್ದೇಶಿತ ಚಿಕಿತ್ಸೆಗಳ ಅಭಿವೃದ್ಧಿಗೆ ಸಹಾಯ ಮಾಡುತ್ತದೆ ಎಂದರು.

ಚೀನೀ ತಂಡದ ಪ್ರಕಾರ, ಈ ಅಧ್ಯಯನವು ಏಳು ವರ್ಷಗಳ ಕಾಲ ನಡೆದಿದೆ. ನೂರಾರು ಇಲಿಗಳಿಂದ ಡೇಟಾವನ್ನು ಸಂಗ್ರಹಿಸಲಾಗಿದೆ. ಸಂಶೋಧಕರ ಪ್ರಕಾರ, ಎಲ್ಲಾ ಜೀವಕೋಶದ ಪ್ರಕಾರಗಳಿಂದ ಸಕ್ರಿಯವಾಗಿ ಬಿಡುಗಡೆಯಾಗುವ ಮತ್ತು ರಕ್ತ ಸೇರಿದಂತೆ ಅನೇಕ ದೈಹಿಕ ದ್ರವಗಳಲ್ಲಿ ಕಂಡುಬರುವ ಸಣ್ಣ ಬಾಹ್ಯಕೋಶೀಯ ಕೋಶಕಗಳು ( (sEV), ವಯಸ್ಸಾದ ಇಲಿಗಳಲ್ಲಿನ ವಯಸ್ಸಿಗೆ ಸಂಬಂಧಿಸಿದ ಕ್ಷೀಣಗೊಳ್ಳುವ ಬದಲಾವಣೆಗಳನ್ನು ಸರಿಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.

ಸಣ್ಣ ಬಾಹ್ಯಕೋಶೀಯ ಕೋಶಕಗಳು ಜೀವಕೋಶಗಳಾದ್ಯಂತ ನ್ಯೂಕ್ಲಿಯಿಕ್ ಆಮ್ಲಗಳು ಮತ್ತು ಪ್ರೋಟೀನ್‌ಗಳನ್ನು ಸಾಗಿಸುತ್ತವೆ. ಇದು ಮಾಹಿತಿ ಪ್ರಸರಣವನ್ನು ಸಕ್ರಿಯಗೊಳ್ಳುತ್ತದೆ. ಈ ಪ್ರಕ್ರಿಯೆಯನ್ನು ಗುರುತಿಸುವ ಮತ್ತು ಬಳಸುವ ಮೂಲಕ ಪ್ರಾಣಿಗಳ ಮೇಲಿನ ಹಿಂದಿನ ಅಧ್ಯಯನಗಳಿಗಿಂತ ಹೆಚ್ಚಿನ ಬದುಕುಳಿಯುವ ಅವಧಿಗಳನ್ನು ವೀಕ್ಷಿಸಲು ಸಾಧ್ಯವಾಯಿತು ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Covishield Vaccine: ಕೋವಿಶೀಲ್ಡ್‌ನಿಂದ ಅಡ್ಡ ಪರಿಣಾಮವಿದೆ ಎಂದು ಕೊನೆಗೂ ಒಪ್ಪಿಕೊಂಡ ತಯಾರಿಕೆ ಕಂಪನಿ ಅಸ್ಟ್ರಾಜೆನೆಕಾ

ಆಯುಷ್ಯದಲ್ಲಿ ಶೇ. 22.7ರಷ್ಟು ಹೆಚ್ಚಳ

ಆಯುಷ್ಯದಲ್ಲಿ ಶೇ. 22.7ರಷ್ಟು ಹೆಚ್ಚಳವಾದರೆ ವಿಶ್ವ ದಾಖಲೆಯಾಗುವುದು ಎಂದು ಹೇಳಿರುವ ಚೆನ್, ಸಂಶೋಧನೆಯು ಕೇವಲ ಪ್ರಾರಂಭವಾಗಿದೆ. ಆವಿಷ್ಕಾರಗಳನ್ನು ಪ್ರಾಯೋಗಿಕವಾಗಿ ಮೌಲ್ಯಮಾಪನ ಮಾಡುವ ಮೊದಲು ಮತ್ತು ಔಷಧವಾಗಿ ಅಭಿವೃದ್ಧಿಪಡಿಸುವ ಮೊದಲು ಇನ್ನೂ ಅನೇಕ ವೈಜ್ಞಾನಿಕ ಸಮಸ್ಯೆಗಳನ್ನು ಪರಿಹರಿಸಬೇಕಾಗಿದೆ. ಯಾವುದೇ ನಿರೀಕ್ಷಿತ ಚಿಕಿತ್ಸೆಯನ್ನು ಅಭಿವೃದ್ಧಿಪಡಿಸುವ ಮೊದಲು ಮಾನವರಿಗೆ ಹೆಚ್ಚು ಹೋಲುವ ದೊಡ್ಡ ಸಸ್ತನಿಗಳಲ್ಲಿ ಪ್ರಯೋಗಗಳನ್ನು ನಡೆಸಬೇಕು ಎಂದು ಹೇಳಿದರು

Continue Reading

ತಂತ್ರಜ್ಞಾನ

Self-Healing Roads: ರಸ್ತೆಗಳಲ್ಲಿ ಹೊಂಡಗಳೇ ಇರಲ್ಲ! ಬರಲಿವೆ ಸೆಲ್ಫ್‌ ಹೀಲಿಂಗ್‌ ರೋಡ್‌ಗಳು!

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ರಸ್ತೆಗಳನ್ನು ಸರಿಪಡಿಸಲು ಮತ್ತು ಗುಂಡಿಮುಚ್ಚಲು ಗಳಿಂದ ರಸ್ತೆಗೆ ಮುಕ್ತಿ ಕೊಡಲು ಹೊಸ ತಂತ್ರಜ್ಞಾನವನ್ನು (Self-Healing Roads) ಅಳವಡಿಸಿಕೊಳ್ಳುವ ಕೆಲಸವನ್ನು ಪ್ರಾರಂಭಿಸಿದೆ. ಇದು ಯಶಸ್ವಿಯಾದರೆ ಭಾರತದ ರಸ್ತೆ ಪ್ರಯಾಣದಲ್ಲಿ ಕ್ರಾಂತಿ ಉಂಟಾಗಲಿದೆ.

VISTARANEWS.COM


on

By

Self-Healing Roads
Koo

ಭಾರತದಲ್ಲಿ (india) ಕೆಲವು ರಸ್ತೆ (road) ಪ್ರವಾಸ ಸಾಮಾನ್ಯವಾಗಿ ಪ್ರಯಾಸಕರ ಎಂಬುದು ಎಲ್ಲರ ಅಭಿಪ್ರಾಯ. ಇದಕ್ಕೆ ಮುಖ್ಯ ಕಾರಣ ರಸ್ತೆಯಲ್ಲಿರುವ ಹೊಂಡ ಗುಂಡಿಗಳು, ಉಬ್ಬು ತಗ್ಗುಗಳು. ಭಾರತದ ರಸ್ತೆಗಳಲ್ಲಿ ಎದುರಾಗುವ ಸಮಸ್ಯೆಗಳ ಕುರಿತು ನಿತ್ಯವೂ ಸಾಮಾಜಿಕ ಜಾಲತಾಣದಲ್ಲಿ, (social media) ಸುದ್ದಿ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಲೇ ಇರುತ್ತದೆ. ಅಲ್ಲದೇ ಅವುಗಳ ಕುರಿತು ಸಾವಿರಾರು ಜೋಕ್‌ಗಳು ಹರಿದಾಡುತ್ತಿರುತ್ತದೆ. ಆದರೆ ಇದಕ್ಕೆ ಈಗ ಪರಿಹಾರ (SSelf-Healing Roads) ಸಿಕ್ಕಿದೆ.


ಈವರೆಗೆ ರಸ್ತೆಯ ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಸಾಧ್ಯವಾಗಿರಲಿಲ್ಲ. ಆದರೆ ಇದೀಗ ಈ ನಿಟ್ಟಿನಲ್ಲಿ ಒಂದು ಭರವಸೆ ಹುಟ್ಟಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ರಸ್ತೆಗಳನ್ನು ಸರಿಪಡಿಸಲು ಮತ್ತು ಗುಂಡಿಮುಚ್ಚಲು ಗಳಿಂದ ರಸ್ತೆಗೆ ಮುಕ್ತಿ ಕೊಡಲು ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಕೆಲಸವನ್ನು ಪ್ರಾರಂಭಿಸಿದೆ. ಇದು ಯಶಸ್ವಿಯಾದರೆ ಭಾರತದ ರಸ್ತೆ ಪ್ರಯಾಣದಲ್ಲಿ ಕ್ರಾಂತಿ ಉಂಟಾಗಲಿದೆ.

ರಸ್ತೆಗಳ ಸ್ವಯಂ ರಕ್ಷಣೆ

ದೇಶದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ರಸ್ತೆ ಜಾಲದ ನಿರ್ವಹಣೆಯ ಜವಾಬ್ದಾರಿಯನ್ನು ಹೊಂದಿರುವ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ದೇಶದಲ್ಲಿ ನಿರಂತರವಾದ ಗುಂಡಿಗಳ ಸಮಸ್ಯೆಯನ್ನು ಪರಿಹರಿಸಲು ಸ್ವಯಂ-ಗುಣಪಡಿಸುವ ಡಾಂಬರು ಅಳವಡಿಸಿಕೊಳ್ಳಲು ಮುಂದಾಗಿದೆ.

ಯಾವ ರೀತಿ?

ರಸ್ತೆಗಳ ಬಾಳಿಕೆಯನ್ನು ಸುಧಾರಿಸಲು ಮತ್ತು ಗುಂಡಿಗಳ ಸಮಸ್ಯೆಯನ್ನು ಪರಿಹರಿಸಲು ಅತ್ಯಧುನಿಕ ತಂತ್ರಜ್ಞಾನ ವಿಧಾನಗಳನ್ನು ಪರಿಗಣಿಸುತ್ತಿದ್ದೇವೆ ಎಂಬುದಾಗಿ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ವೆಚ್ಚ ಪ್ರಯೋಜನ ವಿಶ್ಲೇಷಣೆ ನಡೆಸಿದ ಬಳಿಕವೇ ಈ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗುವುದು. ಇದು ರಸ್ತೆಗಳ ಬಾಳಿಕೆ ಅವಧಿಯನ್ನು ಹೆಚ್ಚಿಸುತ್ತದೆ ಮತ್ತು ರಸ್ತೆ ನಿರ್ವಹಣೆಯ ಅಗತ್ಯವನ್ನು ಪ್ರಾಯೋಗಿಕವಾಗಿ ನಿವಾರಿಸುತ್ತದೆ. ಸಂಚಾರ ಅಡಚಣೆಯನ್ನು ಕಡಿಮೆ ಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ.

ಹೇಗೆ?

ರಸ್ತೆಗಳ ಗುಂಡಿ ನಿರ್ವಹಣೆಗೆ ಹಾಕುವ ಸ್ವಯಂ ರಕ್ಷಣೆ ಕಾರ್ಯವನ್ನು ಆಸ್ಫಾಲ್ಟ್ ಮಾಡುತ್ತದೆ. ಇದು ಡಾಂಬರು ರಸ್ತೆಯನ್ನು ರೂಪಿಸುವ ಪ್ರಮುಖ ಸಂಯುಕ್ತಗಳಲ್ಲಿ ಒಂದಾಗಿದೆ. ಇದು ನೈಸರ್ಗಿಕವಾಗಿ ಕಾರ್ಯ ನಿರ್ವಹಿಸುತ್ತದೆ. ಇದನ್ನು ಸ್ಮಾರ್ಟ್ ಆಸ್ಫಾಲ್ಟ್ ಎಂದೂ ಕರೆಯಲಾಗುತ್ತದೆ ಮತ್ತು ಇದು ರಸ್ತೆ ದುರಸ್ತಿ ಜಗತ್ತಿನಲ್ಲಿ ಹೆಚ್ಚು ಖ್ಯಾತಿ ಪಡೆಯುತ್ತಿದೆ.

ಯಾವ ರೀತಿ?

ಸ್ಮಾರ್ಟ್ ಆಸ್ಫಾಲ್ಟ್ ಉಕ್ಕಿನ ಫೈಬರ್ ಗಳು ಮತ್ತು ಎಪಾಕ್ಸಿ ಕ್ಯಾಪ್ಸುಲ್ ಗಳಿಂದ ತುಂಬಿದೆ. ಇದು ಸಣ್ಣ ಬಿರುಕುಗಳನ್ನು ಸರಿಪಡಿಸುತ್ತದೆ ಮತ್ತು ನೀರಿನ ಒಳನುಸುಳುವಿಕೆಯನ್ನು ತಡೆಯುತ್ತದೆ. ಇಂಡಕ್ಷನ್ ಯಂತ್ರವನ್ನು ಬಳಸಿಕೊಂಡು ರಸ್ತೆಯಲ್ಲಿ ಅಳವಡಿಸುವ ಉಕ್ಕಿಗೆ ಶಾಖವನ್ನು ಸೆಳೆಯುವಂತೆ ಮಾಡಿ ಇದನ್ನು ಮಾಡಲಾಗುತ್ತದೆ. ಇದರಿಂದ ಆಸ್ಫಾಲ್ಟ್ ನೊಂದಿಗೆ ಮಾರ್ಟರ್ ಕರಗಲು ಮತ್ತು ಸ್ವತಃ ದುರಸ್ತಿ ಮಾಡಲು ಪ್ರಾರಂಭಿಸುತ್ತದೆ.

ಯಾರು ಕಂಡು ಹಿಡಿದಿರುವುದು?

ಈ ತಂತ್ರಜ್ಞಾನವನ್ನು ನೆದರ್‌ಲ್ಯಾಂಡ್‌ನ ಡೆಲ್ಫ್ಟ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿಯಲ್ಲಿ ಸಿವಿಲ್ ಎಂಜಿನಿಯರಿಂಗ್ ಪ್ರಾಧ್ಯಾಪಕ ಎರಿಕ್ ಶ್ಲಾಂಗೆನ್ ಅಭಿವೃದ್ಧಿಪಡಿಸಿದ್ದಾರೆ. ಈಗಾಗಲೇ ನೆದರ್ಲ್ಯಾಂಡ್ ನ ಸಂಶೋಧಕರು ಕೆಲವು ಸ್ವಯಂ ರಕ್ಷಣೆ ಹೊಂದಿರುವ ರಸ್ತೆಗಳನ್ನು ನಿರ್ಮಿಸಿದ್ದಾರೆ. ಇದು ಬಾಹ್ಯ ಸಹಾಯವಿಲ್ಲದೆ ಬಿರುಕುಗಳನ್ನು ಮುಚ್ಚುವ ಸಾಮರ್ಥ್ಯವನ್ನು ಹೊಂದಿದೆ. ಈ ರಸ್ತೆಗಳನ್ನು ತಯಾರಿಸುವುದು ಹೆಚ್ಚು ದುಬಾರಿಯಾಗಿದ್ದರೂ ನಿರ್ವಹಣಾ ವೆಚ್ಚವನ್ನು ತೆಗೆದುಹಾಕುವುದರಿಂದ ದೀರ್ಘಾವಧಿಯಲ್ಲಿ ಅಗ್ಗವಾಗುತ್ತದೆ ಎನ್ನುತ್ತಾರೆ ಸಂಶೋಧಕರು.

ಈ ತಂತ್ರಜ್ಞಾನ ಬಳಕೆಯಿಂದ ರಸ್ತೆಗಳು ಸುಮಾರು 80 ವರ್ಷಗಳವರೆಗೆ ದೀರ್ಘಕಾಲ ಬಾಳಿಕೆ ಬರುವಂತೆ ಮಾಡುತ್ತದೆ. ಇದು ರಸ್ತೆಗಳನ್ನು ಸುಧಾರಿಸುವುದರ ಜೊತೆಗೆ ಇತರ ಪ್ರಯೋಜನಗಳನ್ನು ಹೊಂದಿದೆ ಎಂದು ಶ್ಲಾಂಗೆನ್ ಹೇಳುತ್ತಾರೆ. ಈ ರಸ್ತೆಗಳಲ್ಲಿ ಆಸ್ಫಾಲ್ಟ್‌ನಲ್ಲಿ ಸ್ಟೀಲ್ ಫೈಬರ್‌ಗಳನ್ನು ಹಾಕುವುದರಿಂದ ರಸ್ತೆಯಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ಚಾರ್ಜ್ ಮಾಡಲು ಬಳಸಬಹುದು. ಮುಂದೆ ಇದು ಟ್ರಾಫಿಕ್ ದೀಪಗಳನ್ನು ಉರಿಸಲು ಪ್ರಯೋಗಗಳನ್ನು ಮಾಡಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.


ಭಾರತದ ರಸ್ತೆ ಸಮಸ್ಯೆಗೆ ಪರಿಹಾರ

ಹೊಂಡ ಗುಂಡಿಗಳೊಂದಿಗೆ ತುಂಬಿರುವ ಭಾರತದಲ್ಲಿ ಇದನ್ನು ಅಳವಡಿಸಿದರೆ ಸಾಕಷ್ಟು ಲಾಭವಿದೆ. ದೇಶದಾದ್ಯಂತ ಹುಂಡ ಗುಂಡಿಗಳಿಂದ ಕೂಡಿದ ರಸ್ತೆಗಳು ಹಲವಾರು ರಸ್ತೆ ಅಪಘಾತಗಳಿಗೆ ಕಾರಣವಾಗಿವೆ. 2022 ರಲ್ಲಿ ಸರ್ಕಾರಿ ಅಂಕಿಅಂಶಗಳು ರಸ್ತೆಗುಂಡಿಗಳಿಂದಾಗಿ 4,446 ಅಪಘಾತಗಳು ಸಂಭವಿಸಿವೆ, ಇದು 1,856 ಜನರ ಸಾವಿಗೆ ಕಾರಣವಾಯಿತು ಮತ್ತು 3,734 ಜನರಿಗೆ ಗಾಯಗಳಾಗಿವೆ.

2021ರಲ್ಲಿ ಗುಂಡಿಗಳಿಂದಾಗಿ 3,625 ಅಪಘಾತಗಳು ಸಂಭವಿಸಿ, 1,483 ಜನರು ಸಾವನ್ನಪ್ಪಿದರು ಮತ್ತು 3,103 ಜನರು ಗಾಯಗೊಂಡಿದ್ದರು.

ಇದನ್ನೂ ಓದಿ:Vande Bharat Metro: ಮೊದಲ ವಂದೇ ಭಾರತ್‌ ಮೆಟ್ರೋ ಸಂಚಾರಕ್ಕೆ ಸಿದ್ಧ; ಇಲ್ಲಿದೆ ವಿಡಿಯೊ

ನೆದರ್‌ಲ್ಯಾಂಡ್‌ನಲ್ಲಿ ಯಶಸ್ವಿ

ನೆದರ್‌ಲ್ಯಾಂಡ್ಸ್‌ನ 12 ರಸ್ತೆಗಳಿಗೆ ಸ್ವಯಂ ರಕ್ಷಕ ಆಸ್ಫಾಲ್ಟ್ ಅನ್ನು ಅಳವಡಿಸಿ ಪರೀಕ್ಷಿಸಲಾಗಿದೆ. ಇವುಗಳಲ್ಲಿ ಒಂದು ಕಾರ್ಯನಿರ್ವಹಿಸುತ್ತಿದ್ದು, 2010 ರಿಂದ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಿದೆ. ಈ ತಂತ್ರಜ್ಞಾನವನ್ನು ಯುನೈಟೆಡ್ ಕಿಂಗ್‌ಡಮ್ ಪರಿಶೀಲನೆ ನಡೆಸುತ್ತಿದೆ. ಭಾರತದಲ್ಲಿ ಇದನ್ನು ಅಳವಡಿಸಿಕೊಂಡರೆ ವಿಶ್ವದಲ್ಲೇ ನಾವು ರಸ್ತೆ ಸ್ವಯಂ ರಕ್ಷಣಾ ತಂತ್ರಜ್ಞಾನ ಅಳವಡಿಸಿಕೊಂಡವರಲ್ಲಿ ಎರಡನೇಯವರಾಗುತ್ತೇವೆ.

Continue Reading
Advertisement
Aravind Kejriwal
ದೇಶ9 mins ago

Arvind Kejriwal: ಕೇಜ್ರಿವಾಲ್‌ ನ್ಯಾಯಾಂಗ ಬಂಧನ ವಿಸ್ತರಣೆ; ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್‌

Ballari Lok Sabha constituency Congress candidate e Tukaram voting in Sandur
ಬಳ್ಳಾರಿ30 mins ago

Lok Sabha Election 2024: ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಮತದಾನ

MS Dhoni
ಕ್ರೀಡೆ32 mins ago

MS Dhoni: ಧೋನಿ 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ನಡೆಸಲು ಇದುವೇ ಪ್ರಮುಖ ಕಾರಣ

Crime News
ಕ್ರೈಂ32 mins ago

ಮಾದಕ ವಸ್ತು ನೀಡಿ ಕುಟುಂಬಸ್ಥರೊಂದಿಗೆ ಮಲಗಲು ಹಿಂಸೆ ನೀಡುವ ಪತಿ; ಮಹಿಳೆಯೊಬ್ಬರ ಕಣ್ಣೀರಿನ ಕಥೆ ಇದು

lok sabha election 2024 one family
Lok Sabha Election 202433 mins ago

Lok Sabha Election 2024: ಮತ ಹಾಕಲು ವಿದೇಶದಿಂದ ಬಂದರು! ಒಂದೇ ಕುಟುಂಬದ 69 ಮಂದಿಯ ವೋಟ್‌ ಸೆಲ್ಫಿ!

Prajwal Revanna Case Who is behind pen drive mastermind Karthik HD Kumaraswamy Question
ರಾಜಕೀಯ1 hour ago

Prajwal Revanna Case: ಪೆನ್‌ಡ್ರೈವ್‌ ಸೂತ್ರಧಾರಿ ಕಾರ್ತಿಕ್‌ ಹಿಂದೆ ಯಾರಿದ್ದಾರೆ? ಎಲ್ಲಿದ್ದಾನೆ? ಅವನನ್ನೇಕೆ ಹಿಡಿಯಲಿಲ್ಲ? ಎಚ್‌ಡಿಕೆ ಪ್ರಶ್ನೆ

Lok Sabha election 2024
ದೇಶ1 hour ago

Lok Sabha Election 2024: ನಟ ಶೇಖರ್‌ ಸುಮನ್‌, ಕಾಂಗ್ರೆಸ್‌ ನಾಯಕಿ ರಾಧಿಕಾ ಖೇರಾ ಬಿಜೆಪಿ ಸೇರ್ಪಡೆ

Prajwal Revanna Case Kumaraswamy demands DK Shivakumar dismissal behind pen drive conspiracy
ರಾಜಕೀಯ2 hours ago

Prajwal Revanna Case: ಪೆನ್‌ಡ್ರೈವ್‌ ಸಂಚಿನ ಹಿಂದಿರುವ ಡಿ.ಕೆ. ಶಿವಕುಮಾರ್‌ ವಜಾಗೆ ಕುಮಾರಸ್ವಾಮಿ ಆಗ್ರಹ

T20 World Cup 2024
ಕ್ರೀಡೆ2 hours ago

T20 World Cup 2024: ಟಿ20 ವಿಶ್ವಕಪ್​ಗೆ ಪ್ರಕಟಗೊಂಡ ಎಲ್ಲ ತಂಡಗಳ ಆಟಗಾರರ ಪಟ್ಟಿ

Theft Case In Bengaluru
ಬೆಂಗಳೂರು2 hours ago

Theft Case : ಹಬ್ಬಕ್ಕೆ ಊರಿಗೆ ಹೋದ ಅಕ್ಕನ ಮನೆಗೆ ಕನ್ನ; ಸಾಕ್ಷಿ ನಾಶಕ್ಕೆ ಖಾರದ ಪುಡಿ ಚೆಲ್ಲಿದ ತಂಗಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ20 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ21 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ21 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ4 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌