Health Tips For Monsoon: ಮಳೆಗಾಲದಲ್ಲಿ ಕಾಡುವ ಶೀತ-ಜ್ವರವನ್ನು ದೂರ ಇರಿಸುವುದು ಹೇಗೆ? - Vistara News

ಆರೋಗ್ಯ

Health Tips For Monsoon: ಮಳೆಗಾಲದಲ್ಲಿ ಕಾಡುವ ಶೀತ-ಜ್ವರವನ್ನು ದೂರ ಇರಿಸುವುದು ಹೇಗೆ?

ಕೆಲವು ಸರಳ ಜೀವನಶೈಲಿಯ ವಿಧಾನಗಳು ಮತ್ತು ಸುಲಭ ಆಹಾರದ ಪಥ್ಯಗಳಿಂದ ಮಳೆಗಾಲದ ಸೋಂಕುಗಳಿಗೆ ಬೆಚ್ಚಿ ಬೀಳದೆ ಬೆಚ್ಚಗಿರಬಹುದು. (Health tips for monsoon) ಹಾಗಾದರೆ ಏನು ಮಾಡಬೇಕು?

VISTARANEWS.COM


on

Monsoon Health Tips
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Vistara Monsoon Focus

ಮಳೆಗಾಲದಲ್ಲಿ ಹವಾಮಾನ ಬದಲಾಗುವುದು ಹೊರಗೆ ಮಾತ್ರವಲ್ಲ. ದೇಹದ ಒಳಗೂ ಹೌದಲ್ಲ. ಇದ್ದಕ್ಕಿದ್ದಂತೆ ವಾತಾವರಣದಲ್ಲಿ ಹೆಚ್ಚುವ ಶೀತ, ಥಂಡಿ ಒಂದೆಡೆಯಾದರೆ ಮಳೆಯಲ್ಲಿ ನೆನೆಯಬೇಕೆಂಬ ಬಯಕೆ, ಅನಿವಾರ್ಯತೆ ಇನ್ನೊಂದೆಡೆ. ಮಾತ್ರವಲ್ಲದೆ, ಗಾಳಿಯಲ್ಲಿ ಹರಡುವ ಸೋಂಕುಗಳ ಅಬ್ಬರ. ಈ ಎಲ್ಲದರ ಪರಿಣಾಮವೆಂದರೆ ಆಗಾಗ ಕಾಡುವ ನೆಗಡಿ-ಜ್ವರ. ಮಳೆಗಾಲದಲ್ಲಿ ಕಾಡುವ ನೆಗಡಿ-ಜ್ವರದ ಬಾಧೆಯಿಂದ ಮತ್ತು ಗಾಳಿಯ ಮೂಲಕ ದಾಳಿಯಿಡುವ ಸೋಂಕುಗಳನ್ನು (Health tips for monsoon) ದೂರ ಅಟ್ಟುವುದು ಹೇಗೆ?

ನಿದ್ದೆ: ಇದೆಂಥಾ ಮದ್ದು ಎಂದು ಹುಬ್ಬೇರಿಸಬೇಡಿ. ದಿನಕ್ಕೆ ಎಂಟು ತಾಸು ಕಣ್ತುಂಬಾ ನಿದ್ರೆ ಮಾಡಿದರೆ ದೇಹದ ರೋಗ ನಿರೋಧಕ ಶಕ್ತಿ ಚೆನ್ನಾಗಿರುತ್ತದೆ. ದೀರ್ಘಕಾಲ ನಿದ್ದೆಯಲ್ಲಿರುವಾಗ ತನಗಾದ ಹಾನಿಯನ್ನು ದುರಸ್ತಿ ಮಾಡಿಕೊಳ್ಳುವ ಕೆಲಸವನ್ನು ದೇಹ ಕೈಗೊಳ್ಳುತ್ತದೆ. ಜೊತೆಗೆ, ನಿದ್ದೆಯಲ್ಲಿ ಬಿಡುಗಡೆಯಾಗುವ ಸೈಟೋಕಿನ್‌ಗಳು ದೇಹಕ್ಕೆ ಅವಶ್ಯಕ. ದೇಹದ ಪ್ರತಿರೋಧಕ ಶಕ್ತಿಯನ್ನು ಬಲಗೊಳಿಸುವ ಪ್ರೊಟೀನ್‌ಗಳಿವು.

ವ್ಯಾಯಾಮ: ದೇವರ ತಲೆಯ ಮೇಲೆ ಹೂವಿಡುವಷ್ಟೇ ನಿಯತ್ತಿಂದ ವ್ಯಾಯಾಮ ಮಾಡಿ, ತಪ್ಪಿಸಬೇಡಿ. ಅದಕ್ಕೆಂದು ಜಿಮ್‌ ಸೇರಿಕೊಂಡು ಮೂಟೆಗಟ್ಟಲೆ ಭಾರವನ್ನು ಎತ್ತಬೇಕೆಂದಿಲ್ಲ. ಸರಳ ನಡಿಗೆಯೂ ಆದೀತು. ವಾರದಲ್ಲಿ ಐದು ದಿನ ಮತ್ತು ದಿನಕ್ಕೆ ೩೦ ನಿಮಿಷ ವಾಕಿಂಗ್‌ ಮಾಡಿದರೂ ಸಹ ಆರೋಗ್ಯ ವೃದ್ಧಿಸುತ್ತದೆ. ಮಳೆಗಾಲದ ಜಡ ವಾತಾವರಣದಲ್ಲಿ ತಿಂದಿದ್ದೂ ಪಚನವಾಗುತ್ತದೆ.

Monsoon Health Tips

ವಿಟಮಿನ್‌ ಡಿ: ಮಳೆಗಾಲದ ಮೋಡ ಮುಸುಕಿದ ವಾತಾವರಣದ ಕಾರಣದಿಂದ ಬಿಸಿಲು ಕಡಿಮೆ. ಆದರೆ ಎಂದಾದರೂ ಬಿಸಿಲಿದ್ದಾಗ ಕೊಂಚ ಮೈಯೊಡ್ಡಿಕೊಳ್ಳಿ. ಇದರಿಂದ ದೇಹಕ್ಕೆ ಅಗತ್ಯವಾದ ವಿಟಮಿನ್‌ ಡಿ ದೊರೆಯುತ್ತದೆ. ಮನಸ್ಸಿನ ಮಬ್ಬು ಕಳೆದು ಚೈತನ್ಯ ಆವರಿಸುತ್ತದೆ. ವಿಟಮಿನ್‌ ಡಿ ಕೊರತೆಯಿಂದಲೂ ದೇಹದ ರೋಗ ನಿರೋಧಕ ಶಕ್ತಿ ಕುಂಠಿತಗೊಳ್ಳಬಹುದು. ಹಾಗಾಗಿ ಚೀಸ್‌, ಕೊಬ್ಬು ಹೆಚ್ಚಿರುವ ಮೀನುಗಳು, ಮೊಟ್ಟೆಯ ಹಳದಿ ಭಾಗಗಳಿಂದಲೂ ದೊರೆಯುವ ಡಿ ಜೀವಸತ್ವವನ್ನು ದೇಹಕ್ಕೆ ಒದಗಿಸಿ.

ಅರಿಶಿನದ ಕಷಾಯ: ಪ್ರಬಲವಾದ ಉತ್ಕರ್ಷಣ ನಿರೋಧಕಗಳಿಂದ ಕೂಡಿದ ಅರಿಶಿನವನ್ನು ಹಾಲಿಗೆ ಹಾಕಿಕೊಂಡು ಅಥವಾ ಕಷಾಯದೊಂದಿಗೆ ಸೇವಿಸುವುದು ಒಳ್ಳೆಯದು. ಕರಿಮೆಣಸಿನ ಪುಡಿಯೂ ಇದರೊಂದಿಗೆ ಹಿತ. ಮಾಮೂಲಿ ಚಹಾದ ಬದಲು ಯಾವುದೇ ರೀತಿಯ ಗ್ರೀನ್‌ ಟೀಯನ್ನೂ ಈ ದಿನಗಳಲ್ಲಿ ಬಳಸುವುದು ಹಿತವಾಗುತ್ತದೆ.

ಆಹಾರ: ಆದಷ್ಟೂ ಮನೆಯೂಟವೇ ಇರಲಿ. ಹೊತ್ತಿಂದ ಹೊತ್ತಿಗೆ ಬಿಸಿಯಾಗಿ, ಶುಚಿಯಾಗಿ ಆಹಾರ ಸೇವಿಸುವುದರಿಂದ ಅರ್ಧಕ್ಕರ್ಧ ಆರೋಗ್ಯ ಸಮಸ್ಯೆಗಳು ಬಳಿಗೆ ಸುಳಿಯುವುದಿಲ್ಲ. ಹೊರಗಿನ ಆಹಾರದಲ್ಲಿ ಶುಚಿತ್ವದ ಸಮಸ್ಯೆಯಿದ್ದರೆ ಸೋಂಕುಗಳಿ ಬೆನ್ನು ಬೀಳುತ್ತವೆ. ಸಾಕಷ್ಟು ಪ್ರಮಾಣದಲ್ಲಿ ಬೆಚ್ಚಗಿನ ನೀರು ಕುಡಿಯಿರಿ. ಆದರೆ ಸಿಕ್ಕಾಪಟ್ಟೆ ಬಿಸಿನೀರು ಕುಡಿದು ಗಂಟಲು ಸುಟ್ಟುಕೊಳ್ಳುವ ಅಗತ್ಯವಿಲ್ಲ. ಆಹಾರದಲ್ಲಿ ವಿಟಮಿನ್‌ ಸಿ ಹೆಚ್ಚಿಸಿಕೊಳ್ಳುವುದು ಸಹ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಇನ್ನೊಂದು ವಿಧಾನ.

ಬೆಚ್ಚಗಿರಿ: ಮಳೆಯಲ್ಲಿ ನೆನೆದರೆ ಮೊದಲು ತಣ್ಣಗಿನ ವಸ್ತ್ರಗಳನ್ನು ತೆಗೆದಿರಿಸಿ, ಬೆಚ್ಚಗಿನ ವಸ್ತ್ರಗಳನ್ನು ಧರಿಸಿ. ಬಿಸಿಯಾಗಿ ಕಾಫಿ, ಕಷಾಯ ಅಥವಾ ಗ್ರೀನ್‌ ಟೀ ಕುಡಿಯುವುದು ಲಾಭದಾಯಕ. ಗ್ರೀನ್‌ ಟೀ ಜೊತೆಗೆ ನಾಲ್ಕಾರು ಹನಿ ನಿಂಬೆರಸ ಬೆರೆಸಿಕೊಂಡರೆ ವಿಟಮಿನ್‌ ಸಿ ಸಹ ದೇಹಕ್ಕೆ ದೊರೆಯುತ್ತದೆ. ಕೈಕಾಲುಗಳನ್ನು ಶುಚಿಯಾಗಿ ಇರಿಸಿಕೊಳ್ಳಿ. ಮಳೆಗಾಲದ ದಿನಗಳಲ್ಲಿ ವೈಯಕ್ತಿಕ ಶುಚಿತ್ವ ಕಾಪಾಡಿಕೊಳ್ಳುವುದು ಮಹತ್ವದ್ದೆನಿಸುತ್ತದೆ.

ದೂರವಿರಿ: ಯಾರಿಗಾದರೂ ನೆಗಡಿ, ಜ್ವರದಂಥ ಲಕ್ಷಣಗಳಿದ್ದರೆ ಅವರಿಂದ ದೂರವಿರಿ. ಮಕ್ಕಳನ್ನೂ ಅಂಥವರ ಸಮೀಪ ಬಿಡಬೇಡಿ. ಒಂದೊಮ್ಮೆ ಗೊತ್ತಿಲ್ಲದೆಯೇ ಸೋಂಕಿತರೊಂದಿಗೆ ಹತ್ತಿರದಲ್ಲಿದ್ದಿರಿ ಎಂದಾದರೆ ಕೈಗಳನ್ನು ಸ್ವಚ್ಛವಾಗಿ ತೊಳೆದುಕೊಳ್ಳಿ. ಕಣ್ಣು, ಮೂಗು, ಬಾಯಿಗಳನ್ನು ಮುಟ್ಟಿಕೊಳ್ಳಬೇಡಿ. ಹೊರಗಿನಿಂದ ಮನೆಯೊಳಗೆ ಬರುತ್ತಿದ್ದಂತೆ ಕೈಕಾಲುಗಳನ್ನು ಮೊದಲು ಶುಚಿ ಮಾಡಿಕೊಳ್ಳಿ.

ಇದನ್ನೂ ಓದಿ: Monsoon Travel: ಮಳೆ ಇಷ್ಟಪಡುವ ಮಂದಿ ಮಳೆಗಾಲದಲ್ಲಿ ಈ ಬೆಟ್ಟದೂರುಗಳಿಗೆ ಹೋಗಬೇಕು!

ಇಷ್ಟಾಗಿಯೂ ನೆಗಡಿ, ಗಂಟಲುರಿ, ತಲೆಭಾರ ಮುಂತಾದ ಫ್ಲೂ ಲಕ್ಷಣಗಳು ಕಾಣಿಸಿಕೊಂಡರೆ- ನಿಮ್ಮನ್ನು ಉಳಿದವರಿಂದ ಬೇರ್ಪಡಿಸಿಕೊಳ್ಳಿ. (Health tips for monsoon) ಕೆಮ್ಮುವಾಗ, ಸೀನುವಾಗ ಮೂಗು-ಬಾಯಿ ಮುಚ್ಚಿಕೊಳ್ಳುವುದು ಅಗತ್ಯ. ಅರಿಶಿನದ ಕಷಾಯ ಅಥವಾ ಶುಂಠಿ ಕಷಾಯಗಳು ನೆರವಾಗಬಹುದು. ಬಿಸಿ ಆವಿ ತೆಗೆದುಕೊಳ್ಳುವುದು ಗಂಟಲುರಿ ಮತ್ತು ಕಟ್ಟಿದ ಮೂಗಿನ ಪರಿಣಾಮಕಾರಿಯಾಗ ಉಪಶಮನ ನೀಡುತ್ತದೆ. ಕೆಮ್ಮು ಹೆಚ್ಚಾದರೆ ಜೇನುತುಪ್ಪದಲ್ಲಿ ಅತಿಮಧುರ ಅಥವಾ ಜೇಷ್ಠಮಧುವಿನ ಪುಡಿಯನ್ನು ತೆಗೆದುಕೊಳ್ಳುವುದು ಅನುಕೂಲ ಎನಿಸಬಹುದು. ಅಡುಗೆಯಲ್ಲಿ ಸ್ವಲ್ಪ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ-ಬೆಳ್ಳಿಳ್ಳಿ ಬಳಸುವುದೂ ಲಾಭದಾಯಕ. ಆಹಾರವನ್ನು ಬಿಸಿಯಿರುವಾಗಲೇ ಸೇವಿಸಿ. ಸಾಕಷ್ಟು ದ್ರಾವಾಹಾರವನ್ನು ಸೇವಿಸಿ, ಮಿಶ್ರಾಂತಿ ಪಡೆಯಿರಿ. ಒಂದೆರಡು ದಿನಗಳಲ್ಲಿ ಜ್ವರ ಮತ್ತಿತರ ಲಕ್ಷಣಗಳು ನಿಯಂತ್ರಣಕ್ಕೆ ಬಾರದಿದ್ದರೆ ವೈದ್ಯರ ಸಲಹೆ ಪಡೆಯಿರಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಲೈಫ್‌ಸ್ಟೈಲ್

Diabetic Chutney: ಡಯಬಿಟಿಕ್‌ ಚಟ್ನಿ ನಿಮಗೆ ಗೊತ್ತೆ? ಇದು ಮಧುಮೇಹಿಗಳಿಗೆ ಉಪಯುಕ್ತ

Diabetic Chutney: ಮಧುಮೇಹಿಗಳು ಸಿಹಿ ಪದಾರ್ಥಗಳನ್ನು ಹೆಚ್ಚು ಸೇವಿಸುವಂತಿಲ್ಲ ಎಂದು ವೈದ್ಯರು ಸಲಹೆ ನೀಡುತ್ತಾರೆ. ಇದರಿಂದ ಯಾವುದೇ ಫಂಕ್ಷನ್ ಗೆ ಹೋದರೂ ಸಿಹಿ ವಸ್ತುಗಳನ್ನು ಸೇವಿಸುವಂತಿಲ್ಲ.ಇನ್ನು ಊಟದಲ್ಲಿಯೂ ಸಾಕಷ್ಟು ನಿಯಂತ್ರಣವಿರಬೇಕು ಎನ್ನುತ್ತಾರೆ. ಹಾಗಾಗಿ ಮಧುಮೇಹಿಗಳಿಗೆ ಸೇವಿಸಬಹುದಾಂತಹ ಚಟ್ನಿಯ ಕುರಿತು ಮಾಹಿತಿ ಇಲ್ಲಿದೆ ನೋಡಿ.

VISTARANEWS.COM


on

Diabetic Chutney
Koo

ಬೆಂಗಳೂರು: ನಮ್ಮಲ್ಲಿ ಹೆಚ್ಚಿನವರು ರಕ್ತ ಪರೀಕ್ಷೆ ಮಾಡಿಸಿದಾಗ ಕಂಡುಬರುವಂತಹ ಮೊದಲ ಕಾಯಿಲೆ ಎಂದರೆ ಅದು ಮಧುಮೇಹ. ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾದಾಗ ಈ ಸಮಸ್ಯೆ ಕಾಡುತ್ತದೆ. ಒಮ್ಮೆ ಈ ಕಾಯಿಲೆ ಬಂದರೆ ಅದನ್ನು ವಾಸಿ ಮಾಡಲು ಸಾಧ್ಯವಿಲ್ಲ. ಹಾಗಾಗಿ ಮಧುಮೇಹಿಗಳು ಆಹಾರದ ಬಗ್ಗೆ ಕಾಳಜಿವಹಿಸುವುದು ಅಗತ್ಯ.
ಮಧುಮೇಹಿಗಳು ಸಿಹಿ ಪದಾರ್ಥಗಳನ್ನು ಹೆಚ್ಚು ಸೇವಿಸುವಂತಿಲ್ಲ ಎಂದು ವೈದ್ಯರು ಸಲಹೆ ನೀಡುತ್ತಾರೆ. ಇದರಿಂದ ಯಾವುದೇ ಫಂಕ್ಷನ್ ಗೆ ಹೋದರೂ ಸಿಹಿ ವಸ್ತುಗಳನ್ನು ಸೇವಿಸುವಂತಿಲ್ಲ. ಹಾಗಾಗಿ ಊಟದ ತಟ್ಟೆಯಲ್ಲಿರುವ ಪಾಯಸ, ಲಾಡು, ಸಿಟ್ಸ್ ಗಳನ್ನು ನೋಡಿ ಬಾಯಿ ಚಪ್ಪರಿಸಬೇಕೆ ವಿನಃ ಸೇವಿಸುವಂತಿಲ್ಲ. ಇದು ಕೆಲವರಿಗೆ ಬೇಸರವನ್ನುಂಟುಮಾಡುತ್ತದೆ. ಹಾಗಾಗಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ. ಅದಕ್ಕಾಗಿ ಮಧುಮೇಹಿಗಳು ಚಟ್ನಿಗಳನ್ನು (Diabetic Chutney) ಸೇವಿಸಿ. ಆದರೆ ಚಟ್ನಿ ತಯಾರಿಸುವಾಗ ಈ ಸಲಹೆ ಪಾಲಿಸಿ.

Diabetic Chutney

ಮಧುಮೇಹಿಗಳಿಗೆ ಚಟ್ನಿ ತಯಾರಿಸುವಾಗ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಇರುವ ಪದಾರ್ಥಗಳನ್ನು ಹೆಚ್ಚು ಬಳಸಿ. ಇವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಬೇಗನೆ ಹೆಚ್ಚಿಸುವುದಿಲ್ಲ. ಹಸಿರು ಸೊಪ್ಪುಗಳು, ತರಕಾರಿಗಳು, ಟೊಮೆಟೊ ಮತ್ತು ಸೌತೆಕಾಯಿಗಳಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇರುತ್ತದೆ. ಹಾಗಾಗಿ ಪುದೀನಾ, ಟೊಮೆಟೊ ಚಟ್ನಿ ತಯಾರಿಸಿ ಸೇವಿಸಿ.

ಮಧುಮೇಹಿಗಳು ಸಕ್ಕರೆಯಂಶವಿರುವ ವಸ್ತುಗಳನ್ನು ತರಕಾರಿಯಲ್ಲಿ ಬಳಸುವುದನ್ನು ತಪ್ಪಿಸಬೇಕು. ಕೆಲವು ಆಹಾರ ಪದಾರ್ಥಗಳಲ್ಲಿ ಸಕ್ಕರೆಯಂಶ ಹೆಚ್ಚಾಗಿರುತ್ತದೆ. ಅವುಗಳನ್ನು ಚಟ್ನಿ ತಯಾರಿಸಲು ಬಳಸಲಾಗುತ್ತದೆ. ಉದಾಹರಣೆಗೆ ಮಾವಿನ ಹಣ್ಣು ನೈಸರ್ಗಿಕ ಸಕ್ಕರೆಯಂಶವನ್ನು ಹೊಂದಿದೆ. ಇದನ್ನು ಬಳಸಿ ಚಟ್ನಿ ತಯಾರಿಸುತ್ತಾರೆ. ಮತ್ತು ಈ ಚಟ್ನಿ ಎಲ್ಲರಿಗೂ ಬಹಳ ಪ್ರಿಯವಾದುದು. ಆದರೆ ಮಧುಮೇಹಿಗಳು ಈ ಚಟ್ನಿಯ ಸೇವನೆಯನ್ನು ತಪ್ಪಿಸಿ.

ಮಧುಮೇಹಿಗಳು ಚಟ್ನಿ ತಯಾರಿಸುವಾಗ ನೆನೆಪಿಡಬೇಕಾದ ವಿಚಾರವೆಂದರೆ ನೀವು ಚಟ್ನಿಯಲ್ಲಿ ಫೈಬರ್ ಅಂಶ ಹೆಚ್ಚಿರುವ ಪದಾರ್ಥಗಳನ್ನು ಸೇರಿಸಿಕೊಳ್ಳಿ. ಯಾಕೆಂದರೆ ಇವು ನಿಮ್ಮ ಹೊಟ್ಟೆ ದೀರ್ಘಕಾಲ ತುಂಬಿರುವಂತೆ ಮಾಡುತ್ತವೆ. ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುವುದನ್ನು ತಡೆಯುತ್ತವೆ. ಹೆಚ್ಚಿನ ತರಕಾರಿ ಮತ್ತು ಹಣ್ಣುಗಳಲ್ಲಿ ಫೈಬರ್ ಅಂಶ ಹೆಚ್ಚಾಗಿರುತ್ತದೆಯಂತೆ. ಆದರೆ ಸಕ್ಕರೆಯಂಶ ಹೆಚ್ಚಾಗಿರುವ ತರಕಾರಿ ಹಣ್ಣುಗಳಿಂದ ಬಳಸಬೇಡಿ. ಇದರಿಂದ ಸಮಸ್ಯೆಯಾಗಬಹುದು.

Diabetic Chutney

ಮಧುಮೇಹಿಗಳು ಸಕ್ಕರೆಯಂತೆ ಉಪ್ಪಿನ ಬಳಕೆಯನ್ನು ಕಡಿಮೆ ಮಾಡಿ. ಹಾಗಾಗಿ ಮಧುಮೇಹಿಗಳಿಗೆ ಚಟ್ನಿ ತಯಾರಿಸುವಾಗ ಚಟ್ನಿಗೆ ಹೆಚ್ಚು ಉಪ್ಪನ್ನು ಸೇರಿಸಬೇಡಿ. ಉಪ್ಪು ಚಟ್ನಿಯ ರುಚಿಯನ್ನು ಹೆಚ್ಚಿಸುತ್ತದೆ ನಿಜ. ಆದರೆ ಉಪ್ಪು ಮಧುಮೇಹಿಗಳ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಚಟ್ನಿಗೆ ಉಪ್ಪನ್ನು ಕಡಿಮೆ ಬಳಸಿ ಸೇವಿಸಿ.

ಇದನ್ನೂ ಓದಿ: ರಾಮೋಜಿ ಫಿಲ್ಮ್‌ ಸಿಟಿ ಮೀರಿಸುವಂತಿದೆಯಂತೆ ʻಕಾಂತಾರ ಚಾಪ್ಟರ್​ 1ʼ ಸೆಟ್‌!

ಮಧುಮೇಹಿಗಳು ಚಟ್ನಿ ಸೇವಿಸಿದ ಮಾತ್ರಕ್ಕೆ ಅವರು ಆರೋಗ್ಯವಾಗಿರುವುದಿಲ್ಲ, ಜೊತೆಗೆ ಅವರು ಪ್ರತಿದಿನ ವ್ಯಾಯಾಮಗಳನ್ನು ಮಾಡಬೇಕು. ತಮ್ಮ ದೇಹ ಚಟುವಟಿಕೆಯಿಂದ ಇರುವಂತೆ ನೋಡಿಕೊಳ್ಳಬೇಕು. ಮಧುಮೇಹಿಗಳು ಸೇವಿಸುವ ಕೆಲವು ಆಹಾರದಲ್ಲಿ ಕಾರ್ಬೋಹೈಡ್ರೆಟ್ ಹೆಚ್ಚಾಗಿರುತ್ತದೆ. ಹಾಗಾಗಿ ಇದರಿಂದ ನಿಮ್ಮ ತೂಖ ಹೆಚ್ಚಾಗಬಹುದು. ಹಾಗಾಗಿ ನಿಮ್ಮ ತೂಕವನ್ನು ನಿಯಂತ್ರಿಸಲು ಪ್ರತಿದಿನ ವ್ಯಾಯಾಮವನ್ನು ಮಾಡಬೇಕು.

Continue Reading

ಪ್ರಮುಖ ಸುದ್ದಿ

Covishield Vaccine: ಭಾರತದಲ್ಲೂ ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

Covishield Vaccine: ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ (ಏಮ್ಸ್-‌ AIIMS) ವೈದ್ಯರನ್ನೊಳಗೊಂಡ ತಜ್ಞರ ಸಮಿತಿಯನ್ನು ರಚಿಸುವ ಮೂಲಕ ಅಸ್ಟ್ರಾಜೆನೆಕಾದ (AstraZeneca) ಕೋವಿಶೀಲ್ಡ್ ಲಸಿಕೆ, ಅದರ ಅಡ್ಡಪರಿಣಾಮಗಳು ಮತ್ತು ಅಪಾಯಕಾರಿ ಅಂಶಗಳನ್ನು ಪರೀಕ್ಷಿಸುವಂತೆ ಕೋರಿ ವಕೀಲ ವಿಶಾಲ್ ತಿವಾರಿ ಅವರು ಅರ್ಜಿ ಸಲ್ಲಿಸಿದ್ದಾರೆ.

VISTARANEWS.COM


on

Covishield vaccine supreme court
Koo

ಹೊಸದಿಲ್ಲಿ: ಬ್ರಿಟನ್‌ನಲ್ಲಿ (UK) ಕೋವಿಶೀಲ್ಡ್‌ ಲಸಿಕೆಯ (Covishield vaccine) ಅಡ್ಡ ಪರಿಣಾಮಗಳ (Side effects) ಬಗ್ಗೆ ಕೋಲಾಹಲ ಹೆಚ್ಚುತ್ತಿರುವಂತೆ, ಭಾರತದಲ್ಲಿಯೂ ಕೋವಿಶೀಲ್ಡ್‌ ಲಸಿಕೆ ಸೈಡ್‌ ಎಫೆಕ್ಟ್‌ಗಳ ಬಗೆಗೆ ಅಧ್ಯಯನ ನಡೆಸಲು ಆದೇಶಿಸುವಂತೆ ವಕೀಲರೊಬ್ಬರು ಸುಪ್ರೀಂ ಕೋರ್ಟ್‌ನಲ್ಲಿ (Supreme court) ಮನವಿ ಸಲ್ಲಿಸಿದ್ದಾರೆ.

ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ (ಏಮ್ಸ್-‌ AIIMS) ವೈದ್ಯರನ್ನೊಳಗೊಂಡ ತಜ್ಞರ ಸಮಿತಿಯನ್ನು ರಚಿಸುವ ಮೂಲಕ ಅಸ್ಟ್ರಾಜೆನೆಕಾದ (AstraZeneca) ಕೋವಿಶೀಲ್ಡ್ ಲಸಿಕೆ, ಅದರ ಅಡ್ಡಪರಿಣಾಮಗಳು ಮತ್ತು ಅಪಾಯಕಾರಿ ಅಂಶಗಳನ್ನು ಪರೀಕ್ಷಿಸುವಂತೆ ಕೋರಿ ವಕೀಲ ವಿಶಾಲ್ ತಿವಾರಿ ಅವರು ಅರ್ಜಿ ಸಲ್ಲಿಸಿದ್ದಾರೆ. ಸಮಿತಿಯು ಏಮ್ಸ್‌ ನಿರ್ದೇಶಕರ ನೇತೃತ್ವವನ್ನು ಹೊಂದಿರಬೇಕು; ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯವರು ಮೇಲ್ವಿಚಾರಣೆ ಮಾಡಬೇಕು; ಕೋವಿಶೀಲ್ಡ್ ಲಸಿಕೆ, ಅದರ ಅಡ್ಡಪರಿಣಾಮಗಳು ಮತ್ತು ಅಪಾಯಕಾರಿ ಅಂಶಗಳನ್ನು ಪರೀಕ್ಷಿಸಬೇಕು ಎಂದವರು ಕೋರಿದ್ದಾರೆ.

COVID-19 ಸಮಯದಲ್ಲಿ ವ್ಯಾಕ್ಸಿನೇಷನ್ ಅಭಿಯಾನದ ಅಡ್ಡ ಪರಿಣಾಮಗಳಿಂದ ಮರಣ ಹೊಂದಿದ, ತೀವ್ರವಾಗಿ ಅಸ್ವಸ್ಥರಾದ, ಅಂಗವಿಕಲರಾದ ನಾಗರಿಕರಿಗೆ ಲಸಿಕೆ ಹಾನಿ ಪಾವತಿ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಸ್ಥಾಪಿಸಬೇಕು. ಜನರಿಗೆ ಪರಿಹಾರ ನೀಡಲು ಸುಪ್ರೀಂ ಕೋರ್ಟ್‌ ಸರ್ಕಾರಕ್ಕೆ ನಿರ್ದೇಶನಗಳನ್ನು ನೀಡಬೇಕು ಎಂದು ತಿವಾರಿ ಮನವಿಯಲ್ಲಿ ತಿಳಿಸಿದ್ದಾರೆ.

ಕೋವಿಶೀಲ್ಡ್ ಲಸಿಕೆ ಅಪರೂಪದ ಸಂದರ್ಭಗಳಲ್ಲಿ ಅಡ್ಡ ಪರಿಣಾಮಗಳನ್ನು ಕಾರಣವಾಗಬಹುದು ಎಂದು ಇತ್ತೀಚೆಗೆ ಕಂಪನಿ ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ತಿವಾರಿ ಅರ್ಜಿ ಸಲ್ಲಿಸಿದ್ದಾರೆ. ಫಾರ್ಮಾಸ್ಯುಟಿಕಲ್ ಕಂಪನಿ ಮತ್ತು ಲಸಿಕೆ ಡೆವಲಪರ್ ಆಸ್ಟ್ರಾಜೆನೆಕಾ ಬ್ರಿಟನ್‌ನ ನ್ಯಾಯಾಲಯದಲ್ಲಿ ಇದನ್ನು ತಿಳಿಸಿದೆ. ಇದು ರಕ್ತದಲ್ಲಿ ಪ್ಲೇಟ್‌ಲೆಟ್ ಕಡಿಮೆಯಾಗುವಿಕೆ ಮತ್ತು ಅತ್ಯಂತ ಅಪರೂಪದ ಪ್ರಕರಣಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗಬಹುದು ಎಂದು ಹೇಳಿದೆ.

“ಅಸ್ಟ್ರಾಜೆನೆಕಾ ಕೋವಿಶೀಲ್ಡ್‌ ಲಸಿಕೆ ಮತ್ತು ಥ್ರಂಬೋಸಿಸ್ (ಟಿಟಿಎಸ್) ನಡುವಿನ ಸಂಬಂಧವನ್ನು ಒಪ್ಪಿಕೊಂಡಿದೆ. ಅಸ್ಟ್ರಾಜೆನೆಕಾ ಲಸಿಕೆ ಸೂತ್ರವನ್ನು ಪುಣೆ ಮೂಲದ ಲಸಿಕೆ ತಯಾರಕ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಗೆ ನೀಡಲಾಗಿದೆ. ಕೋವಿಶೀಲ್ಡ್ ತಯಾರಿಕೆಗಾಗಿ ಕೊರೊನಾ ವೈರಸ್ ಸಾಂಕ್ರಾಮಿಕ ಸಮಯದಲ್ಲಿ ಭಾರತದಲ್ಲಿ 175 ಕೋಟಿಗೂ ಹೆಚ್ಚು ಜನ ಕೋವಿಶೀಲ್ಡ್ ಅನ್ನು ಪಡೆದರು” ಎಂದು ಮನವಿಯಲ್ಲಿ ತಿಳಿಸಲಾಗಿದೆ. ಕೋವಿಶೀಲ್ಡ್‌ ಜೊತೆಗೆ ಭಾರತೀಯ ತಯಾರಿಕೆಯಾದ Covaxin ಅನ್ನು ಕೂಡ ಭಾರತದಲ್ಲಿ ನೀಡಲಾಗಿತ್ತು.

ಕಳೆದ ವರ್ಷ ಲಂಡನ್‌ನಲ್ಲಿ ಜೇಮೀ ಸ್ಕಾಟ್ ಎಂಬವರು ಕಂಪನಿ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದರು. ಅವರಲ್ಲಿ ಲಸಿಕೆ ಪಡೆದ ಬಳಿಕ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಮೆದುಳಿನಲ್ಲಿ ರಕ್ತಸ್ರಾವವ ಉಂಟಾಗಿತ್ತು. ಶಾಶ್ವತ ಮಿದುಳಿನ ಗಾಯ ಉಂಟಾಗಿತ್ತು. ಇವರೂ ಸೇರಿ UKಯಲ್ಲಿ ಐವತ್ತೊಂದು ಪ್ರಕರಣಗಳನ್ನು ದಾಖಲಿಸಲಾಗಿದೆ. ಸಂತ್ರಸ್ತರು ಮತ್ತು ಸಂಬಂಧಿಕರು ಸುಮಾರು 100 ಮಿಲಿಯನ್ ಪೌಂಡ್‌ ಪರಿಹಾರವನ್ನು ಬಯಸಿದ್ದಾರೆ.

ಭಾರತದಲ್ಲಿ, ಕೋವಿಡ್ -19 ರ ನಂತರ ಹೃದಯಾಘಾತ ಮತ್ತು ವ್ಯಕ್ತಿಗಳ ಹಠಾತ್ ಕುಸಿತದ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಯುವಜನರಲ್ಲಿಯೂ ಹೃದಯಾಘಾತದ ಪ್ರಕರಣಗಳು ಸಂಭವಿಸಿವೆ. ಕೋವಿಶೀಲ್ಡ್‌ ಮಾಲಿಕ ಕಂಪನಿಯ ಮಾಹಿತಿ ದಾಖಲಾತಿಯು ನಮ್ಮಲ್ಲಿಯೂ ನಾಗರಿಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ನೀಡಲಾದ ಕೋವಿಶೀಲ್ಡ್ ಲಸಿಕೆಯ ಅಪಾಯಗಳ ಬಗ್ಗೆ ಯೋಚಿಸಲು ಒತ್ತಾಯಿಸಿದೆ ಎಂದು ಮನವಿಯಲ್ಲಿ ಹೇಳಿದೆ.

ಈ ಮೂಲಕ ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ತಿವಾರಿ ಅವರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಲಸಿಕೆಯ ದುಷ್ಪರಿಣಾಮಗಳಿಗೆ ನಷ್ಟಪರಿಹಾರವನ್ನು ಕೋರಿದ್ದು, ಯುಕೆಯಂತಹ ಕೆಲವು ದೇಶಗಳಲ್ಲಿಯೂ ವ್ಯಾಕ್ಸಿನೇಷನ್‌ನಿಂದ ತೀವ್ರವಾಗಿ ಅಂಗವಿಕಲರಾದ ಜನರಿಗೆ ನಷ್ಟ ಪಾವತಿ ವ್ಯವಸ್ಥೆ ಇದೆ ಎಂದಿದ್ದಾರೆ.

ಇದನ್ನೂ ಓದಿ: Covishield Vaccine: ಭಾರತದಲ್ಲಿ ಕೋವಿಶೀಲ್ಡ್‌ ಅಡ್ಡ ಪರಿಣಾಮದ ಅಪಾಯವಿಲ್ಲ: ಯಾಕೆ ಗೊತ್ತೆ?

Continue Reading

ಕೊಪ್ಪಳ

Medical Negligence : ಸಕಾಲಕ್ಕೆ ಸಿಗದ ಚಿಕಿತ್ಸೆ; ಹೆರಿಗೆಗೂ ಮೊದಲೇ ತಾಯಿ-ಮಗು ಸಾವು

Medical Negligence : ವೈದ್ಯರ ನಿರ್ಲಕ್ಷ್ಯಕ್ಕೆ ಪ್ರಪಂಚ ನೋಡುವ ಮೊದಲೇ ಮಗುವೊಂದು ತಾಯಿ ಗರ್ಭದಲ್ಲೇ ಅಸುನೀಗಿದೆ. 9 ತಿಂಗಳ ಕಾಲ ಹೊತ್ತ ತಾಯಿಯು ಹೆರಿಗೆಗೂ ಮುನ್ನವೇ ಕಣ್ಮುಂಚಿದ್ದಾಳೆ. ಸಕಾಲಕ್ಕೆ ಚಿಕಿತ್ಸೆ ಸಿಗದೆ ತಾಯಿ-ಮಗು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹೀಗಾಗಿ ತಪ್ಪಿತಸ್ಥ ವೈದ್ಯರನ್ನು ಅಮಾನತು ಮಾಡಿ ಎಂದು ಒತ್ತಾಯಿಸಿದರು.

VISTARANEWS.COM


on

By

Medical Negligence
Koo

ಕೊಪ್ಪಳ: ವೈದ್ಯರ ನಿರ್ಲಕ್ಷ್ಯಕ್ಕೆ (Medical Negligence) ಹೆರಿಗೆ ಸಮಯದಲ್ಲಿ ಗರ್ಭಿಣಿ ಮತ್ತು ಶಿಶು ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಕುಷ್ಟಗಿ ತಾಲೂಕಿನ ವಿಠಲಾಪುರ ಗ್ರಾಮದ ನಿವಾಸಿ ಲಕ್ಷ್ಮೀ (20) ಮೃತ ದುರ್ದೈವಿ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಿಯಲ್ಲಿ ಈ ಘಟನೆ ನಡೆದಿದೆ.

ಮೊದಲ ಹೆರಿಗೆ ಹಿನ್ನೆಲೆಯಲ್ಲಿ ಲಕ್ಷ್ಮೀಯನ್ನು ಮಂಗಳವಾರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಆದರೆ ಹೆರಿಗೆ ಆಗುವ ಮೊದಲೇ ಲಕ್ಷ್ಮಿ ಹಾಗೂ ಹೊಟ್ಟೆಯಲ್ಲಿದ್ದ ಶಿಶು ಕೂಡಾ ಮೃತಪಟ್ಟಿದ್ದಾರೆ.

ವೈದ್ಯರು ಸಕಾಲಕ್ಕೆ ಚಿಕಿತ್ಸೆ ನೀಡಿಲ್ಲ ಅವರ ನಿರ್ಲಕ್ಷ್ಯಕ್ಕೆ ಸಾವಾಗಿದೆ ಎಂದು ಲಕ್ಷ್ಮೀ ಮೃತ ಕುಟುಂಬಸ್ಥರು ಮತ್ತು ಗ್ರಾಮಸ್ಥರು ತಾವರಗೇರಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ರಾತ್ರಿಯಿಂದ ಧರಣಿ ನಡೆಸಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ತಪ್ಪಿತಸ್ಥ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾತ್ರಿಯಿಂದಲೇ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.

ಸಮುದಾಯ ಆರೋಗ್ಯ ಕೇಂದ್ರದ ಡಾ.ಕಾವೇರಿ ಸರಿಯಾದ ಚಿಕಿತ್ಸೆ ಕೊಡಲಿಲ್ಲ. ಹೀಗಾಗಿ ವೈದ್ಯರ ಅಮಾನತ್ತಿಗೆ ಆಗ್ರಹಿಸಿ ಬುಧವಾರವು ಪ್ರತಿಭಟನೆ ಮುಂದುವರಿಸಿದ್ದಾರೆ. ಸಮುದಾಯ ಕೇಂದ್ರದ ಮುಂದೆ 200ಕ್ಕೂ ಹೆಚ್ಚು ಜನರು ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Covishield Vaccine: ಭಾರತದಲ್ಲಿ ಕೋವಿಶೀಲ್ಡ್‌ ಅಡ್ಡ ಪರಿಣಾಮದ ಅಪಾಯವಿಲ್ಲ: ಯಾಕೆ ಗೊತ್ತೆ?

Covishield Vaccine: ಕೋವಿಶೀಲ್ಡ್ ಅನ್ನು ಸ್ವೀಕರಿಸುವ 10 ಲಕ್ಷ ಜನರಲ್ಲಿ ಏಳರಿಂದ ಎಂಟು ವ್ಯಕ್ತಿಗಳು ಮಾತ್ರ ಥ್ರಂಬೋಸಿಸ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂದು ಕರೆಯಲ್ಪಡುವ ಅಪರೂಪದ ಅಡ್ಡ ಪರಿಣಾಮವನ್ನು ಅನುಭವಿಸುತ್ತಾರೆ. ಭಾರತದಲ್ಲಿ ಇದರ ಪ್ರಮಾಣ ಇನ್ನೂ ಕಡಿಮೆ ಎಂದು ತಜ್ಞರು ಹೇಳಿದ್ದಾರೆ.

VISTARANEWS.COM


on

Covishield vaccine india
Koo

ಹೊಸದಿಲ್ಲಿ: ಭಾರತದಲ್ಲಿ ಕೊರೊನಾ ವೈರಸ್‌ (Corona Virus) ಎದುರಿಸಲು ಕೋವಿಶೀಲ್ಡ್‌ ಲಸಿಕೆ (Covishield vaccine) ತೆಗೆದುಕೊಂಡವರಲ್ಲಿ ರಕ್ತ ಹೆಪ್ಪುಗಟ್ಟುವ (blood clotting) ಅಡ್ಡ ಪರಿಣಾಮದ (Side effects) ಅಪಾಯದ ಸಾಧ್ಯತೆಗಳು ತೀರಾ ಕಡಿಮೆ ಎಂದು ಭಾರತದ ಹಿರಿಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞ, ಮಾಜಿ ICMR ವಿಜ್ಞಾನಿ ಡಾ. ರಾಮನ್ ಗಂಗಾಖೇಡ್ಕರ್ ಹೇಳಿದ್ದಾರೆ.

ಕೋವಿಶೀಲ್ಡ್ ಅನ್ನು ಸ್ವೀಕರಿಸುವ 10 ಲಕ್ಷ ಜನರಲ್ಲಿ ಏಳರಿಂದ ಎಂಟು ವ್ಯಕ್ತಿಗಳು ಮಾತ್ರ ಥ್ರಂಬೋಸಿಸ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂದು ಕರೆಯಲ್ಪಡುವ ಅಪರೂಪದ ಅಡ್ಡ ಪರಿಣಾಮವನ್ನು ಅನುಭವಿಸುತ್ತಾರೆ. ಭಾರತದಲ್ಲಿ ಇದರ ಪ್ರಮಾಣ ಇನ್ನೂ ಕಡಿಮೆ ಎಂದವರು ತಿಳಿಸಿದ್ದಾರೆ. ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ರಕ್ತ ಹೆಪ್ಪುಗಟ್ಟುವಿಕೆಯ ಅಡ್ಡ ಪರಿಣಾಮ ಕಾಣಿಸಿಕೊಳ್ಳಬಹುದು ಎಂದು ಮೊನ್ನೆ ಅದರ ತಯಾರಿಕಾ ಕಂಪನಿ ಅಸ್ಟ್ರಾಜೆನೆಕಾ ಯುಕೆ ನ್ಯಾಯಾಲಯದಲ್ಲಿ ಒಪ್ಪಿಕೊಂಡ ಬಳಿಕ ಈ ಬಗ್ಗೆ ಆತಂಕ ಮೂಡಿತ್ತು.

“ಮೊದಲ ಡೋಸ್ ಅನ್ನು ಪಡೆದಾಗ ಅಡ್ಡ ಪರಿಣಾಮದ ರಿಸ್ಕ್‌ ಅತ್ಯಧಿಕವಾಗಿರುತ್ತದೆ. ಆದರೆ ಎರಡನೇ ಡೋಸ್‌ನೊಂದಿಗೆ ಕಡಿಮೆಯಾಗುತ್ತದೆ; ಮೂರನೆಯದರೊಂದಿಗೆ ಮತ್ತೂ ಕಡಿಮೆಯಾಗುತ್ತದೆ. ಅಡ್ಡ ಪರಿಣಾಮ ಸಂಭವಿಸುವುದಾದಲ್ಲಿ, ಲಸಿಕೆ ಪಡೆದ ಎರಡು ಮೂರು ತಿಂಗಳೊಳಗೆ ಕಾಣಿಸಿಕೊಳ್ಳುತ್ತದೆ” ಎಂದು ಗಂಗಾಖೇಡ್ಕರ್ ತಿಳಿಸಿದ್ದಾರೆ. ಆದರೆ, ಭಾರತದಲ್ಲಿ ಮೂರು ಹಂತಗಳ ಲಸಿಕೆ ಅಭಿಯಾನ ವರ್ಷಗಳ ಹಿಂದೆಯೇ ಮುಗಿದಿದ್ದು, ಅಡ್ಡ ಪರಿಣಾಮಗಳ ಪ್ರಕರಣಗಳು ಅತ್ಯಂತ ವಿರಳವಾಗಿ ವರದಿಯಾಗಿವೆ.

ಬ್ರಿಟನ್‌ನ ಮಾಧ್ಯಮ ವರದಿಗಳು ಉಲ್ಲೇಖಿಸಿರುವ ನ್ಯಾಯಾಲಯದ ದಾಖಲೆಗಳ ಪ್ರಕಾರ, ತನ್ನ ಕೋವಿಡ್ ಲಸಿಕೆ ಅಪರೂಪವಾಗಿ ರಕ್ತ ಹೆಪ್ಪುಗಟ್ಟುವಿಕೆಯನ್ನು ಒಳಗೊಂಡ ಅಡ್ಡ ಪರಿಣಾಮಕ್ಕೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿದೆ. ಈ ಲಸಿಕೆಯನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಸಹ ಉತ್ಪಾದಿಸಿದೆ. ಇದನ್ನು ಕೋವಿಶೀಲ್ಡ್ ಎಂದು ಕರೆಯಲಾಗುತ್ತದೆ. ಭಾರತೀಯ ಜನಸಂಖ್ಯೆಯ ಕನಿಷ್ಠ 90 ಪ್ರತಿಶತದಷ್ಟು ಜನರು ಈ ಲಸಿಕೆಯನ್ನು ಪಡೆದಿದ್ದಾರೆ. ಭಾರತದಲ್ಲಿ ಸುಮಾರು 175 ಕೋಟಿ ಕೋವಿಶೀಲ್ಡ್‌ ಲಸಿಕೆ ಡೋಸ್‌ ನೀಡಲಾಗಿದೆ.

ಕಂಪನಿಯು ನ್ಯಾಯಾಲಯದಲ್ಲಿ ಒಪ್ಪಿಕೊಂಡಂತೆ, ಥ್ರಂಬೋಸಿಸ್ ವಿಥ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂಬ ಅಪರೂಪದ ಅಡ್ಡ ಪರಿಣಾಮದ ಸಾಧ್ಯತೆ ಲಸಿಕೆಗೆ ಇದೆ. ಯುರೋಪ್‌ನಲ್ಲಿ ವ್ಯಾಕ್ಸಿನೇಷನ್ ಅಭಿಯಾನ ಪ್ರಾರಂಭವಾದ ತಿಂಗಳೊಳಗೆ ಕೆಲವು ಇಂಥ ಪ್ರಕರಣಗಳು ಬೆಳಕಿಗೆ ಬಂದವು. ಕೆಲವು ದೇಶಗಳು ಅಸ್ಟ್ರಾಜೆನೆಕಾ ಲಸಿಕೆಯ ಬಳಕೆಯನ್ನು ಸ್ವಲ್ಪ ಸಮಯದವರೆಗೆ ನಿಲ್ಲಿಸಿದವು.

ʼವ್ಯಾಕ್ಸಿನೇಶನ್‌ ಬಳಿಕದ ಪ್ರತಿಕೂಲ ಘಟನೆಗಳ ಕುರಿತು ಸರ್ಕಾರಿ ಸಮಿತಿʼಯು (AEFI) ದೇಶದಲ್ಲಿ TTSನ ಕನಿಷ್ಠ 36 ಪ್ರಕರಣಗಳನ್ನು ಪರಿಶೀಲಿಸಿದೆ. 2021ರಲ್ಲಿ ದೇಶದಲ್ಲಿ ಕೋವಿಡ್-19 ಲಸಿಕೆ ಹಾಕಿದ ಮೊದಲ ವರ್ಷ 18 ಸಾವುಗಳನ್ನು ದೃಢಪಡಿಸಿದೆ. ಆದರೆ ಇದು ಭಾರತೀಯ ಕಾನೂನಿನ ವ್ಯಾಪ್ತಿಯಲ್ಲಿ ಬರುತ್ತಿದ್ದು, ಬ್ರಿಟನ್‌ನ ನ್ಯಾಯಾಲಯದಲ್ಲಿ ಆಗಿರುವ ವಾದವನ್ನು ಮಂಡಿಸಿ ನ್ಯಾಯ ಪಡೆಯಲು ಸಾಧ್ಯವಿಲ್ಲ.

ಐರೋಪ್ಯ ರಾಷ್ಟ್ರಗಳಲ್ಲಿ ಸಾಂಕ್ರಾಮಿಕ ರೋಗದ ವಿರುದ್ಧ ಲಸಿಕೆ ಹಾಕಲು ಆರಂಭಿಸಿದ ಅವಧಿಯಲ್ಲಿ TTS ವರದಿಯಾಗಿದೆ. ಆದರೆ ಭಾರತದಲ್ಲಿ ಇದು ಬಹಳ ಅಪರೂಪ ಎಂದು ತಜ್ಞರು ಹೇಳುತ್ತಾರೆ. “ಟಿಟಿಎಸ್ ಬಹಳ ಅಪರೂಪದ ಅಡ್ಡ ಪರಿಣಾಮ. ಯುರೋಪಿಯನ್ನರಿಗೆ ಹೋಲಿಸಿದರೆ ಭಾರತೀಯರು ಮತ್ತು ದಕ್ಷಿಣ ಏಷ್ಯಾದವರಲ್ಲಿ ಇನ್ನೂ ಅಪರೂಪ. ವ್ಯಾಕ್ಸಿನೇಷನ್ ಜೀವಗಳನ್ನು ಉಳಿಸಿದೆ. ಅದರ ಪ್ರಯೋಜನಕ್ಕೆ ಹೋಲಿಸಿದರೆ ಅಪಾಯಗಳನ್ನು ಕ್ಷುಲ್ಲಕ” ಎಂದು ತಜ್ಞರು ವಿವರಿಸಿದ್ದಾರೆ.

ಅಡ್ಡ ಪರಿಣಾಮದ ರಿಸ್ಕ್‌ ಮೊದಲ ವ್ಯಾಕ್ಸಿನೇಷನ್ ನಂತರದ ಮೊದಲ ಕೆಲವು ವಾರಗಳಲ್ಲಿ ಮಾತ್ರ ಹೆಚ್ಚು. ಹೆಚ್ಚಿನ ಭಾರತೀಯರು ಈಗಾಗಲೇ ಮೂರು ಡೋಸ್‌ ಪಡೆದಿದ್ದಾರೆ. ಇದಾಗಿ ಬಹಳ ಸಮಯ ಸಂದಿದೆ. “ನಾವೆಲ್ಲರೂ ಲಸಿಕೆಯನ್ನು ಬಹಳ ಹಿಂದೆಯೇ ಯಶಸ್ವಿಯಾಗಿ ಪಡೆದಿದ್ದೇವೆ” ಎಂದು ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್‌ನ ಗ್ಲೋಬಲ್ ಹೆಲ್ತ್‌ನ ನಿರ್ದೇಶಕ ಡಾ ಗಗನ್‌ದೀಪ್ ಕಾಂಗ್ ಹೇಳಿದ್ದಾರೆ.

“ಜನರು ಈಗ ಪ್ರತಿಕ್ರಿಯಿಸುತ್ತಿರುವುದು ಆಶ್ಚರ್ಯಕರವಾಗಿದೆ. ವ್ಯಾಕ್ಸಿನೇಷನ್ ಅಭಿಯಾನ ನಡೆಯುತ್ತಿದ್ದಾಗಲೂ ಸೈಡ್‌ ಎಫೆಕ್ಟ್‌ಗಳನ್ನು ಉತ್ತಮವಾಗಿ ದಾಖಲಿಸಲಾಗಿದೆ ಮತ್ತು ವೈಜ್ಞಾನಿಕವಾಗಿ ಸ್ವೀಕರಿಸಲಾಗಿದೆ. ಸಾಂಕ್ರಾಮಿಕ ರೋಗ ಉತ್ತುಂಗದಲ್ಲಿದ್ದಾಗ ಲಸಿಕೆಯ ಪ್ರಯೋಜನವು ಅಪಾಯವನ್ನು ಮೀರಿಸಿತ್ತು” ಎಂದು ಅಶೋಕ ವಿಶ್ವವಿದ್ಯಾಲಯದ ತ್ರಿವೇದಿ ಸ್ಕೂಲ್ ಆಫ್ ಬಯೋಸೈನ್ಸ್‌ನ ಬಯೋಸೈನ್ಸ್ ಮತ್ತು ಆರೋಗ್ಯ ಸಂಶೋಧನೆಯ ಡೀನ್ ಡಾ. ಅನುರಾಗ್ ಅಗರ್ವಾಲ್ ಹೇಳುತ್ತಾರೆ.

ಲ್ಯಾನ್ಸೆಟ್ ಗ್ಲೋಬಲ್ ಹೆಲ್ತ್‌ನಲ್ಲಿನ 2022ರ ಅಧ್ಯಯನದ ಪ್ರಕಾರ ಅಸ್ಟ್ರಾಜೆನೆಕಾ ಮೊದಲ ಡೋಸ್ ಸ್ವೀಕರಿಸಿದ ಪ್ರತಿ ಹತ್ತು ಲಕ್ಷ ಜನರಲ್ಲಿ 8.1 ಟಿಟಿಎಸ್ ಪ್ರಕರಣಗಳು ಕಂಡುಬಂದಿವೆ. ಎರಡನೇ ಡೋಸ್ ಸ್ವೀಕರಿಸಿದ ಪ್ರತಿ ಹತ್ತು ಲಕ್ಷ ಮಂದಿಯಲ್ಲಿ 2.3 ಟಿಟಿಎಸ್ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಭೌಗೋಳಿಕ ವ್ಯತ್ಯಾಸವಿದೆ. ಹೆಚ್ಚಿನ ಪ್ರಕರಣಗಳು ನಾರ್ಡಿಕ್ ದೇಶಗಳಿಂದ (ನಾರ್ವೆ ಇತ್ಯಾದಿ- ಹತ್ತು ಲಕ್ಷಕ್ಕೆ 17.6) ವರದಿಯಾಗಿವೆ. ಏಷ್ಯಾದ ದೇಶಗಳಲ್ಲಿ ಅತಿ ಕಡಿಮೆ (ಪ್ರತಿ ಹತ್ತು ಲಕ್ಷಕ್ಕೆ 0.2).

ಈಗ ಲಸಿಕೆ ತೆಗೆದುಕೊಳ್ಳಬೇಕೇ?

ಈಗ ಹೆಚ್ಚಿನ ಜನರಲ್ಲಿ ಕೊರೊನಾ ರೋಗನಿರೋಧಕ ಶಕ್ತಿಯಿದ್ದು, ಲಸಿಕೆಯ ಅಗತ್ಯವಿಲ್ಲ ಎಂದು ಡಾ. ಅಗರ್ವಾಲ್ ಹೇಳುತ್ತಾರೆ. “ವೈರಸ್ ಸಂಚರಿಸುತ್ತಿದ್ದರೂ ಈಗ ಭಾರತೀಯರಲ್ಲಿ ಪ್ರತಿಕಾಯ ಮಟ್ಟ ತುಂಬಾ ಹೆಚ್ಚಿವೆ. ಒಮಿಕ್ರಾನ್‌ನಂತಹ ರೂಪಾಂತರಿಗಳಿಂದ ರಕ್ಷಿಸಬಹುದಾದ ಹೊಸ ಲಸಿಕೆಗಳನ್ನು ತೆಗೆದುಕೊಳ್ಳಬೇಕು” ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: Covishield Vaccine: ಕೋವಿಡ್‌ ಲಸಿಕೆಯಿಂದ ಬರುತ್ತೆ ರಕ್ತ ಹೆಪ್ಪುಗಟ್ಟೋ ಕಾಯಿಲೆ! ವಿವರ ನಿಮಗೆ ತಿಳಿದಿರಲಿ

Continue Reading
Advertisement
Prajwal Revanna Case What is diplomatic passport
ಹಾಸನ1 min ago

Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

Money Guide
ಮನಿ-ಗೈಡ್11 mins ago

Money Guide: ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವ ಯೋಜನೆಗಳಿವು

T20 World Cup 2024
ಕ್ರೀಡೆ21 mins ago

T20 World Cup 2024: ಡ್ರಾಪ್ -ಇನ್ ಪಿಚ್ ಅಳವಡಿಕೆ ಕಾರ್ಯ ಆರಂಭಿಸಿದ ಐಸಿಸಿ

Blackmail Case
ಬೆಂಗಳೂರು22 mins ago

Blackmail Case: ಸಹಪಾಠಿಯಿಂದ 35 ಲಕ್ಷ ರೂ. ಚಿನ್ನಾಭರಣ ದೋಚಿದ ಇಬ್ಬರು ವಿದ್ಯಾರ್ಥಿಗಳು ಸೇರಿ ನಾಲ್ವರ ಬಂಧನ

Wedding Eye Makeup Tips
ಫ್ಯಾಷನ್38 mins ago

Wedding Eye Makeup Tips: ಮದುವೆಯಲ್ಲಿ ಮದುಮಗಳ ಐ ಮೇಕಪ್‌ಗೆ 5 ಸಿಂಪಲ್‌ ಸೂತ್ರ

Assault case In Bengaluru
ಬೆಂಗಳೂರು59 mins ago

Assault Case: ಶವದ ಮುಂದೆ ಎರಡು ಗುಂಪುಗಳ ಹೊಡಿಬಡಿ; 12 ಮಂದಿ ಅರೆಸ್ಟ್‌

Hassan Pen Drive Case Prajwal seeks 7 days time to appear for questioning
ಕ್ರೈಂ1 hour ago

Hassan Pen Drive Case: ವಿಚಾರಣೆಗೆ ಹಾಜರಾಗಲು 7 ದಿನ ಸಮಯ ಕೇಳಿದ ಪ್ರಜ್ವಲ್‌; ಶೀಘ್ರ ಸತ್ಯ ಹೊರಬರಲಿದೆ ಎಂದು ಟ್ವೀಟ್‌!

T20 World Cup
ಕ್ರೀಡೆ1 hour ago

T20 World Cup: ಟಿ20 ವಿಶ್ವಕಪ್​ನಲ್ಲಿ ಸ್ಥಾನ ಪಡೆದ ಚಹಲ್​ಗೆ ಪತ್ನಿಯಿಂದ ವಿಶೇಷ ಹಾರೈಕೆ

Jain Diksha
ಕರ್ನಾಟಕ1 hour ago

Jain Diksha: ಕೋಟ್ಯಂತರ ರೂ. ಆಸ್ತಿ ತ್ಯಜಿಸಿ ಜೈನ ಸನ್ಯಾಸ ದೀಕ್ಷೆ ಪಡೆದ ಬೆಂಗಳೂರಿನ ಉದ್ಯಮಿಯ ಪತ್ನಿ, 11 ವರ್ಷದ ಮಗ!

Goldy Brar
ದೇಶ1 hour ago

Goldy Brar: ಸಿಧು ಮೂಸೆವಾಲಾ ಹತ್ಯೆ ರೂವಾರಿ ಗೋಲ್ಡಿ ಬ್ರಾರ್‌ ಅಮೆರಿಕದಲ್ಲಿ ಕೊಲೆ; ಕೊಂದಿದ್ದು ಯಾರು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌