ವಿಸ್ತಾರ ಅಂಕಣ: ಪಠ್ಯ ಪುಸ್ತಕ ಪರಿಷ್ಕರಣೆ ಎಂದರೆ ಮಕ್ಕಳ ಆಟ ಎಂದುಕೊಂಡಿದೆಯೇ ಸರ್ಕಾರ? - Vistara News

ಪ್ರಮುಖ ಸುದ್ದಿ

ವಿಸ್ತಾರ ಅಂಕಣ: ಪಠ್ಯ ಪುಸ್ತಕ ಪರಿಷ್ಕರಣೆ ಎಂದರೆ ಮಕ್ಕಳ ಆಟ ಎಂದುಕೊಂಡಿದೆಯೇ ಸರ್ಕಾರ?

ಯಾವುದೋ ಒಂದು ಗುಂಪನ್ನು ಮೆಚ್ಚಿಸಲು ದಿನಬೆಳಗಾದರೆ ಪಠ್ಯಪುಸ್ತಕ ಪರಿಷ್ಕರಣೆಯ ಮಾತನ್ನು ಸರ್ಕಾರದ ಭಾಗವಾಗಿರುವವರು ನಿಲ್ಲಿಸುವುದು ಒಳ್ಳೆಯದು. ಪಠ್ಯ ಪುಸ್ತಕ ರಚನೆಯ ಜವಾಬ್ದಾರಿಯನ್ನು ರಾಜಕೀಯ ಹಿತಾಸಕ್ತಿ ಇಲ್ಲದ ಚಿಂತಕರಿಗೆ ಒಪ್ಪಿಸಬೇಕು.

VISTARANEWS.COM


on

karnataka government decision to revise textbook vistara column
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Vistara Column @ Hariprakash Konemane

“ಮೊಘಲ್ ಬಾದಶಹರಲ್ಲಿ ಕೊನೆಯವನಾದ ಔರಂಗಜೇಬನು ಕಾಲಚಕ್ರವನ್ನು ಹಿಂದಕ್ಕೆ ತಿರುಗಿಸಲು ಪ್ರಯತ್ನ ಮಾಡಿ ಪ್ರಗತಿಯನ್ನು ತಡೆದು, ಕಡೆಗೆ ನುಚ್ಚು ನೂರು ಮಾಡಿದನು. ಜನತೆಯ ಸ್ವಭಾವಕ್ಕನುಗುಣವಾಗಿ ಎಲ್ಲಿಯವರೆಗೆ ಎಲ್ಲರನ್ನೂ ಸಮಾನವಾಗಿ ಕಂಡು, ರಾಷ್ಟ್ರೀಯ ಭಾವನೆಯನ್ನು ಉದ್ದೀಪನಗೊಳಿಸಲು ಮೊಘಲ್ ರಾಜರು ಪ್ರಯತ್ನಿಸಿದರೋ, ಅಲ್ಲಿಯವರೆಗೂ ಅವರು ಬಲಿಷ್ಠರಾಗಿದ್ದರು. ಔರಂಗಜೇಬನು ಇದಕ್ಕೆ ವಿರುದ್ಧವಾಗಿ ನಡೆದುಕೊಂಡು, ಭಾರತೀಯನಲ್ಲದ ಮುಸ್ಲಿಂ ಚಕ್ರವರ್ತಿಯಾಗಲು ಪ್ರಯತ್ನಪಟ್ಟನೋ ಅಂದಿನಿಂದಲೇ ಮೊಘಲ್ ಚಕ್ರಾಧಿಪತ್ಯವು ಕುಸಿಯಲು ಆರಂಭವಾಯಿತು. ಅಕ್ಬರನೂ ಅವನ ವಂಶಿಕರೂ ಮಾಡಿದ ಕೆಲಸವೆಲ್ಲ ನಿರರ್ಥಕವಾಯಿತು. “
-ಜವಾಹರಲಾಲ್ ನೆಹರು

ಭಾರತದ ಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರು ತಮ್ಮ ʼಭಾರತ ದರ್ಶನʼ ಸರಣಿಯ ಮೊದಲ ಸಂಪುಟದಲ್ಲಿ ಬರೆದಿರುವ ಈ ಮಾತಿಗೆ ಕೆಲವರು ಆಕ್ಷೇಪ ವ್ಯಕ್ತಪಡಿಸಬಹುದು. ಮೊಘಲ್ ವಂಶದ ಬಹುತೇಕ ರಾಜರು ಔರಂಗಜೇಬನ ರೀತಿಯೇ ಇದ್ದರು ಎನ್ನಲೂ ಬಹುದು. ಇನ್ನೂ ಕೆಲವರು ಇದು ನೆಹರು ಅವರ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿ ಎನ್ನಲೂ ಬಹುದು. ಈ ಎಲ್ಲವೂ ಚರ್ಚೆಯ ವಿಷಯಗಳು. ಆದರೆ, ನೆಹರು ಅವರ ಈ ಮಾತಿನಲ್ಲಿ- ರಾಜನೊಬ್ಬ ಹೇಗಿರಬೇಕು ಎಂಬ ವಿವೇಕವನ್ನು ಗಮನಿಸಬೇಕು.

ಆಡಳಿತ ಎನ್ನುವುದು ಎಲ್ಲಿಯವರೆಗೆ ಜನರ ಭಾವನೆಗಳಿಗೆ ಅನುಗುಣವಾಗಿ ಇರುತ್ತದೆಯೋ ಅಲ್ಲಿಯವರೆಗೆ ನಿರಾತಂಕವಾಗಿ ನಡೆಯುತ್ತದೆ. ಆದರೆ ಎಂದು ಕೆಲವೇ ತನ್ನ ಸುತ್ತಮುತ್ತಲಿರುವವರ ವಿಷಯವನ್ನೋ ಅಥವಾ ತನ್ನ ಖಾಸಗಿ ನಂಬಿಕೆಯನ್ನೋ ಸಮಾಜದ ಮೇಲೆ ಹೇರಲು ಹೊರಟಾಗ ಸಮಾಜ ಅದನ್ನು ಪ್ರತಿಭಟಿಸುತ್ತದೆ. ಅದು ರಾಜಾಡಳಿತವಾದರೂ ಅಷ್ಟೆ, ಆಕ್ರಮಣಕಾರರಾದರೂ ಅಷ್ಟೆ, ಪ್ರಜಾಪ್ರಭುತ್ವವಾದರೂ ಅಷ್ಟೆ. ಈ ಸಂದೇಶವು ಕರ್ನಾಟಕದಲ್ಲಿ 10-15 ವರ್ಷದಿಂದ ನಡೆಯುತ್ತಿರುವ ಕದನಕ್ಕೆ ಹೊಂದಿಕೆಯಾಗುತ್ತದೆ.

2008ರಲ್ಲಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಪೂರ್ಣಪ್ರಮಾಣದ ಸರ್ಕಾರ ರಚನೆಯಾದ ನಂತರ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ (textbook revision) ಕೈ ಹಾಕಲಾಯಿತು. ಪ್ರೊ. ಮುಡಂಬಡಿತ್ತಾಯ ಅವರ ಅಧ್ಯಕ್ಷತೆಯ ಸಮಿತಿ ರಚಿಸಿದ್ದ ಬಿಜೆಪಿ ಸರ್ಕಾರ, ಪಠ್ಯಪುಸ್ತಕ ಬದಲಾಯಿಸುವ, ವಿವಿಧ ಪಠ್ಯವನ್ನು ಸೇರಿಸುವ ಕೆಲಸ ಮಾಡಿತು. ಧರಣಿ ಮಂಡಲ ಮಧ್ಯದೊಳಗೆ ಪದ್ಯದ ಆಶಯವನ್ನೇ ಬಿಜೆಪಿ ತಿರುಚಿದೆ ಎಂದು ಆರೋಪಿಸಲಾಯಿತು. ಇದಕ್ಕೆ ಸಹಜವಾಗಿಯೇ ಕಾಂಗ್ರೆಸ್ ಹಾಗೂ ಎಡಪಂಥೀಯ ಒಲವುಳ್ಳ ಲೇಖಕರು ವಿರೋಧ ವ್ಯಕ್ತಪಡಿಸಿದರು.

2013ರಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಬಿಜೆಪಿ ಮಾಡಿದ ಈ ‘ತಪ್ಪನ್ನುʼ ಸರಿಮಾಡಲು ಮುಂದಾಯಿತು. ಪ್ರೊ. ಬರಗೂರು ರಾಮಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ರಚನಾ ಸಮಿತಿಯನ್ನು ರಚಿಸಿತು. ಈ ಸಮಿತಿಯು ಅನೇಕ ಬದಲಾವಣೆಗಳನ್ನು ಮಾಡಿತು. ಆದರೆ, ಬ್ರಾಹ್ಮಣರು ಯಜ್ಞ ಯಾಗಾದಿಗಳನ್ನು ಮಾಡಲು ತುಪ್ಪವನ್ನು ಬಳಸಿದ್ದರಿಂದ ಪ್ರಪಂಚದಲ್ಲಿ ಆಹಾರದ ಅಭಾವ ಸೃಷ್ಟಿಯಾಯಿತು ಎಂಬ ಸಾಲುಗಳನ್ನು ಈ ಸಮಿತಿ ಸೇರಿಸಿತ್ತು. ಇದಕ್ಕೆ ಬಿಜೆಪಿ ವಲಯದಿಂದ ಸಹಜವಾಗಿ ವಿರೋಧ ವ್ಯಕ್ತವಾಯಿತು.

siddaramaiah and niranjanaradhya

ಕಾಂಗ್ರೆಸ್ ಸಮಯದಲ್ಲಿ ಮಾಡಿದ್ದ ಈ ʼಮಹಾ ಪ್ರಮಾದʼವನ್ನು ಸರಿಪಡಿಸಲು 2019ರಲ್ಲಿ ಅಧಿಕಾರಕ್ಕೇರಿದ ಬಿಜೆಪಿ ಸರ್ಕಾರ ಮುಂದಾಯಿತು. ರೋಹಿತ್ ಚಕ್ರತೀರ್ಥ ಅವರ ಅಧ್ಯಕ್ಷತೆಯ ಸಮಿತಿ ರಚನೆ ಮಾಡಿ ಪಠ್ಯಪುಸ್ತಕವನ್ನು ತಿದ್ದಿತು. ಇದರಲ್ಲಿ ನಾರಾಯಣಗುರು, ಕುವೆಂಪು ಸೇರಿ ಅನೇಕರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಮತ್ತೊಮ್ಮೆ ಇನ್ನೊಂದು ತುದಿಯಲ್ಲಿದ್ದ ಕಾಂಗ್ರೆಸ್ ಹಾಗೂ ಎಡ ಪರ ಲೇಖಕರ ವಲಯದಿಂದ ಕೇಳಿಬಂದಿತು.
ಇದೀಗ 2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅಧಿಕಾರಕ್ಕೇರಿ ಇನ್ನೂ ಒಂದು ತಿಂಗಳೂ ಕಳೆದಿಲ್ಲ. ಈಗಾಗಲೆ ಶಾಲೆಗಳು ಆರಂಭವಾಗಿದ್ದರೂ, ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡುವ ಮಾತುಗಳನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಆದಿಯಾಗಿ ಅನೇಕರು ಮಾತನಾಡುತ್ತಿದ್ದಾರೆ. ಸ್ವತಃ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪಠ್ಯಪುಸ್ತಕ ಪರಿಷ್ಕರಣೆ ಆಗುವುದು ಖಚಿತ ಎಂದಿದ್ದಾರೆ. ಇದೆಲ್ಲವೂ ರಾಜಕೀಯ ಪಕ್ಷಗಳು ತಮ್ಮ ಸೈದ್ಧಾಂತಿಕ ನೆಲೆಯನ್ನು ಭದ್ರಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವುದರ ಸ್ಪಷ್ಟ ಸಂಕೇತ. ಆದರೆ, ಈ ಪ್ರಯತ್ನದಲ್ಲಿ ವಿದ್ಯಾರ್ಥಿಗಳು ಸಂತ್ರಸ್ತರಾಗುತ್ತಿದ್ದಾರೆ ಎಂಬುದನ್ನೇ ಸರಕಾರ ಮರೆತಿದೆ.

ದೇಶದ ಎರಡನೇ ರಾಷ್ಟ್ರಪತಿಯಾಗಿದ್ದ ಡಾ. ಎಸ್. ರಾಧಾಕೃಷ್ಣನ್ ಅವರು ಸ್ವತಃ ಶಿಕ್ಷಕರು, ಶಿಕ್ಷಣ ತಜ್ಞರೂ ಆಗಿದ್ದರು. ಅವರು ಹೇಳಿರುವಂತೆ, “ಶಿಕ್ಷಣದ ಅಂತಿಮ ಗುರಿಯು ಮುಕ್ತ ಆಲೋಚನೆಯ ಮನುಷ್ಯನನ್ನು ಸೃಜಿಸುವುದಾಗಿರಬೇಕು. ಈ ಮನುಷ್ಯನು ಐತಿಹಾಸಿಕ ಸನ್ನಿವೇಶಗಳು ಹಾಗೂ ನಿಸರ್ಗದ ಪ್ರತಿಕೂಲಗಳ ವಿರುದ್ಧ ಹೋರಾಡುವವನಾಗಿರಬೇಕು” ಎಂದರು. ಅಲ್ಲಿಗೆ, ಶಿಕ್ಷಣ ಕ್ಷೇತ್ರದಲ್ಲಿ ನಿರಂತರ ಪ್ರವಾಹವನ್ನು ಕಾಯ್ದುಕೊಳ್ಳಬೇಕು ಎಂಬ ಸಂದೇಶವನ್ನು ರಾಧಾಕೃಷ್ಣನ್ ಅವರು ನೀಡಿದ್ದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಐದು ವರ್ಷಕ್ಕೊಮ್ಮೆ ವಿಧಾನಸಭೆ, ಲೋಕಸಭೆ ಚುನಾವಣೆಗಳನ್ನು ನಡೆಸಲಾಗುತ್ತದೆ. ತಮ್ಮ ಅಭಿಪ್ರಾಯಕ್ಕೆ ಮನ್ನಣೆ ನೀಡುವವರನ್ನು ಜನರು ಆಯ್ಕೆ ಮಾಡಲಿ, ತಮಗೆ ಇಷ್ಟ ಇಲ್ಲದವರನ್ನು ಮನೆಗೆ ಕಳಿಸಲಿ ಎಂದು ಮಾಡಿಕೊಂಡಿರುವ ವ್ಯವಸ್ಥೆ. ಹೊಸ ಸರ್ಕಾರ ಬಂದ ಕೂಡಲೆ ವ್ಯವಸ್ಥೆಯನ್ನು ಮತ್ತಷ್ಟು ಸರಳಗೊಳಿಸಬೇಕು. ಹಳೆಯ ವ್ಯವಸ್ಥೆಯಲ್ಲಿರುವಲೋಪದೋಷಗಳನ್ನು, ವ್ಯವಸ್ಥೆಗೆ ಧಕ್ಕೆ ಆಗದಂತೆ ಹೊರತೆಗೆಯಬೇಕು ಎನ್ನುವುದು. ಬಿಜೆಪಿ ಸರ್ಕಾರ ಹೋಗಿ ಕಾಂಗ್ರೆಸ್ ಸರ್ಕಾರ ಬರಬಹುದು, ಮತ್ತೆ ಕಾಂಗ್ರೆಸ್ ಸರ್ಕಾರ ಹೋಗಿ ಬಿಜೆಪಿ ಸರ್ಕಾರ ಅಧಿಕಾರ ಹಿಡಿಯಬಹುದು. ಇಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಯಾವುದೇ ಪಕ್ಷಗಳು ಬದಲಾಗುತ್ತವೆಯೇ ವಿನಃ ಸರ್ಕಾರ ಅಲ್ಲ. ಸರ್ಕಾರ ಎನ್ನುವುದು ನಿರಂತರ ವ್ಯವಸ್ಥೆ. ಒಟ್ಟಾರೆಯಾಗಿ ಅದು ಕರ್ನಾಟಕ ಸರ್ಕಾರ, ಭಾರತ ಸರ್ಕಾರ, ಮಹಾರಾಷ್ಟ್ರ ಸರ್ಕಾರ, ಇತ್ಯಾದಿ ಇತ್ಯಾದಿ. ಪಕ್ಷಗಳೂ ಹೆಸರು ಹೇಳುವುದು, ಸಿಎಂ, ಪಿಎಂ ಇಲ್ಲವೇ ಪಕ್ಷಗಳ ಹೆಸರಿನಲ್ಲಿ ಸರ್ಕಾರವನ್ನು ಸಂಬೋಧಿಸುವುದು ನಮ್ಮ ಅನುಕೂಲಕ್ಕಾಗಿ ಮಾತ್ರ.

ಬಿಜೆಪಿ ಸರ್ಕಾರ ರಚನೆ ಮಾಡಿದ ಕೂಡಲೆ ಅದರ ಕಣ್ಣು ಶಾಲಾ ಮಕ್ಕಳ ಪಠ್ಯಪುಸ್ತಕದ ಮೇಲೆ ಹೋಗುತ್ತದೆ. ಅವರ ವಾದ ಏನು? ಭಾರತದ ಇತಿಹಾಸವನ್ನು ಕಳೆದ 75 ವರ್ಷಗಳಲ್ಲಿ ತಪ್ಪಾಗಿ ಹೇಳಲಾಗಿದೆ. ಅಲೆಕ್ಸಾಂಡರ್, ಅಕ್ಬರ್, ಟಿಪ್ಪುವನ್ನೇ ಮೆರೆಸಲಾಗಿದೆ. ನಮ್ಮದೇ ರಾಜರಾದ ಕೃಷ್ಣದೇವರಾಯ, ಶಿವಾಜಿ, ರಾಣಾ ಪ್ರತಾಪನನ್ನು ಮರೆತಿದ್ದಾರೆ. ಕೇವಲ ಮಹಾತ್ಮ ಗಾಂಧಿ ಸ್ವಾತಂತ್ರ್ಯ ತಂದುಕೊಟ್ಟರು ಎಂದು ಬಿಂಬಿಸಲಾಗಿದೆ. ಕ್ರಾಂತಿಕಾರಿಗಳನ್ನು ಕಡೆಗಣಿಸಲಾಗಿದೆ…. ಹೀಗೆ ಇತಿಹಾಸದಲ್ಲಿ ಆಗಿರುವ ಪ್ರಮಾದಗಳ ದೊಡ್ಡ ಪಟ್ಟಿಯೇ ಬಿಜೆಪಿ ಹಾಗೂ ಅದರ ಚಿಂತಕ ವಲಯದಲ್ಲಿದೆ. ಇದು ಸತ್ಯ ಕೂಡ. ನಮ್ಮ ದೇಶದ ಇತಿಹಾಸವನ್ನು ಮಕ್ಕಳಿಗೆ ತಿಳಿಸಿದರೆ ಅವರಲ್ಲಿ ಸ್ವಾಭಿಮಾನ ಜಾಗೃತಿಯಾಗುತ್ತದೆ. ಅವರು ಯಾವುದೇ ಭ್ರಷ್ಟಾಚಾರ, ಅನಾಚಾರಕ್ಕೆ ಮುಂದಾಗದೆ ದೇಶದ ಏಳಿಗೆಗಾಗಿ ದುಡಿಯುತ್ತಾರೆ. ಆಗ ದೇಶವು ಇಡೀ ವಿಶ್ವದಲ್ಲಿ ಗೌರವಯುತ ಸ್ಥಾನ ಪಡೆಯುತ್ತದೆ. ಇದರಲ್ಲಿ ತಪ್ಪೇನೂ ಇಲ್ಲ.

Vinayak Damodar Savarkar and Keshav Baliram Hedgewar

ಆದರೆ ಶಿಕ್ಷಣ ಎನ್ನುವುದು ಕೇವಲ ಪಠ್ಯಪುಸ್ತಕ ಎಂಬ ತಪ್ಪು ತಿಳುವಳಿಕೆ ಇಲ್ಲಿದೆ. ಸಮಾಜ ವಿಜ್ಞಾನ, ಕನ್ನಡ ಪಠ್ಯಪುಸ್ತಕ ಬದಲು ಮಾಡಿಬಿಟ್ಟರೆ ಇಡೀ ಮಕ್ಕಳ ಮನಸ್ಥಿತಿ ಬದಲಾಗಿಬಿಡುತ್ತದೆ ಎನ್ನುವುದು ಭ್ರಮೆ. ಒಟ್ಟಾರೆ ಶಿಕ್ಷಣ ವ್ಯವಸ್ಥೆಯಲ್ಲಿ ಪಠ್ಯಪುಸ್ತಕವೂ ಒಂದು ಭಾಗ. ಇದರಲ್ಲಿ ಶಾಲಾ ಮೂಲಸೌಕರ್ಯ, ಶಿಕ್ಷಕರ ಗುಣಮಟ್ಟ, ಶಿಕ್ಷಕರ ತರಬೇತಿ, ಮೌಲ್ಯಮಾಪನ ವ್ಯವಸ್ಥೆ, ಬೋಧನಾ ವಿಧಾನ, ಆಟೋಟಗಳಿಗೆ ಪ್ರೋತ್ಸಾಹಕ, ವಿಜ್ಞಾನ ತಿಳಿವಳಿಕೆ… ಹೀಗೆ ಹತ್ತಾರು ವಿಚಾರಗಳು ಸೇರಿ ಒಬ್ಬ ಒಳ್ಳೆಯ, ದೇಶಭಕ್ತ ವಿದ್ಯಾರ್ಥಿ ತಯಾರಾಗುತ್ತಾನೆ. ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದಾಗಲೂ ಮಾನವ ಸಂಪನ್ಮೂಲ ಸಚಿವರಾಗಿದ್ದ ಡಾ. ಮುರಳೀಮನೋಹರ ಜೋಶಿ ಅವರು ಪಠ್ಯಪುಸ್ತಕಗಳ ಪರಿಷ್ಕರಣೆಗೆ ಕೈಹಾಕಿದರು. ಆಗ ದೇಶಾದ್ಯಂತ ಕೇಸರೀಕರಣದ ಹುಯಿಲೆಬ್ಬಿಸಲಾಯಿತು. ಆನಂತರ 2004ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಬಂದಾಗ, ಬಿಜೆಪಿ ಅವಧಿಯ ಅನೇಕ ಬದಲಾವಣೆಗಳನ್ನು ತೆಗೆದುಹಾಕಿತು. ಆಗ ಬಿಜೆಪಿ ಮತ್ತೆ, ಇದು ಹಿಂದುಗಳನ್ನು ದಮನ ಮಾಡುವ ಕ್ರಿಯೆ ಎಂದು ಬೊಬ್ಬೆ ಹಾಕಿತು.

ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸರಳ ಬಹುಮತ ಪಡೆದು ಸ್ಥಾಪನೆಯಾಗಿದೆ. ಯಾವುದೇ ಪಕ್ಷ ಸುಲಭವಾಗಿ ಆಪರೇಷನ್ ಮಾಡಿ ಸರ್ಕಾರವನ್ನು ಬೀಳಿಸಲು ಸಾಧ್ಯವಾಗದಿರುವಷ್ಟು ಸುಭದ್ರ ಸಂಖ್ಯೆಯನ್ನು ಜನರು ಕಾಂಗ್ರೆಸ್ ಪಕ್ಷಕ್ಕೆ ನೀಡಿದ್ದಾರೆ. ಈಗ ಜನರಿಗೆ ಅತ್ಯಗತ್ಯವಾಗಿ ಬೇಕಾದ ಅನೇಕ ವಿಚಾರಗಳತ್ತ ಸರ್ಕಾರ ಗಮನ ಹರಿಸುವ ಅಗತ್ಯವಿದೆ.

ಈಗಾಗಲೆ ಚುನಾವಣೆಯಲ್ಲಿ ಘೋಷಣೆ ಮಾಡಿರುವ ಐದು ಗ್ಯಾರಂಟಿ ಯೋಜನೆಗಳ ಜತೆಗೆ ಒಟ್ಟಾರೆ ಪ್ರಣಾಳಿಕೆಯನ್ನು ಜಾರಿಗೆ ತರಬೇಕಿದೆ. ಪ್ರತಿ ವರ್ಷ ಬಜೆಟ್ ಮಂಡಿಸುವ ಮೂಲಕ ಒಂದೊಂದೇ ಹೆಜ್ಜೆ ರಾಜ್ಯವನ್ನು ಸುಭಿಕ್ಷದೆಡೆಗೆ ಕರೆದೊಯ್ಯಬೇಕಿದೆ. ಇದೆಲ್ಲದರ ನಡುವೆ ಎದುರಾಗುವ ಬರ, ನೆರೆ ಮುಂತಾದ ಪ್ರಕೃತಿ ವಿಕೋಪಗಳಿಗೂ ಸ್ಪಂದಿಸಬೇಕಿದೆ. ಆದರೆ ಕಾಂಗ್ರೆಸ್ ಸರ್ಕಾರ ಇದೆಲ್ಲವನ್ನೂ ಬಿಟ್ಟು ಮತ್ತೆ ಪಠ್ಯಪುಸ್ತಕಕ್ಕೆ ಕೈ ಹಾಕಿದೆ. ಬಿಜೆಪಿ ಅವಧಿಯಲ್ಲಿ ನಡೆಸಿದ ತಿದ್ದುಪಡಿಗಳನ್ನು ಬದಲಾಯಿಸಲು ಮುಂದಾಗಿದೆ. ಯಾರದ್ದೋ ಮೇಲಿನ ದ್ವೇಷವನ್ನು ಪಠ್ಯದ ಮೇಲೆ ತೀರಿಸಲು ಹೊರಟಿದೆ. ಸ್ವಾತಂತ್ರ್ಯ ಹೋರಾಟಗಾರರ ಕುರಿತ ಪಾಠ, ಹಿರಿಯ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯರು ರಚಿಸಿರುವ ಪಾಠ, ಆರ್ ಎಸ್ ಎಸ್ ಸಂಸ್ಥಾಪಕ ಡಾ. ಕೇಶವ ಬಲಿರಾಮ್ ಹೆಡಗೆವಾರ್ ಅವರ ಭಾಷಣದ ಮೇಲೆ ಕಾಂಗ್ರೆಸ್ ಸರ್ಕಾರದ ಕಣ್ಣು ಬಿದ್ದಿದೆ. ಕಾಂಗ್ರೆಸ್ ಹೇಳುವ ಪ್ರಕಾರ ಈ ಪಠ್ಯಪುಸ್ತಕವನ್ನು ಸರಿಯಾದ ಕ್ರಮದಲ್ಲಿ ಪರಿಷ್ಕರಣೆ ಮಾಡಲಿಲ್ಲ. ಸಮಿತಿಯಲ್ಲಿ ಇದ್ದವರಿಗೆ ಅದಕ್ಕೆ ತಕ್ಕ ಅರ್ಹತೆ ಇರಲಿಲ್ಲ, ಒಟ್ಟಾರೆ ಪಠ್ಯಪುಸ್ತಕ ಪರಿಷ್ಕರಣೆಗೆ ಸರ್ಕಾರ ಆದೇಶವನ್ನೇ ನೀಡಿಲ್ಲ ಎಂಬಂತಹ ವಾದಗಳನ್ನು ಮುಂದಿಡಲಾಗುತ್ತಿದೆ. ಚಿಂತಕರು ಎಂದು ಹೇಳಿಕೊಂಡ, ಎಡ ಪರ, ಕಾಂಗ್ರೆಸ್ ಪರ ಸಾಹಿತಿಗಳ ನಿಯೋಗವೊಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪಠ್ಯಪುಸ್ತಕ ಪರಿಷ್ಕರಣೆಯನ್ನು ಕೈಬಿಡಲು ಮನವಿ ಮಾಡಿದೆ.

ಈಗಾಗಲೆ ಚುನಾವಣೆ ಪ್ರಣಾಳಿಕೆಯಲ್ಲೂ ಕಾಂಗ್ರೆಸ್ ಈ ವಿಷಯವನ್ನು ಹೇಳಿರುವುದರಿಂದ ಅದಕ್ಕೆ ಬದ್ಧವಾಗಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಇಲ್ಲಿರುವ ಪ್ರಶ್ನೆ, ಇಷ್ಟೆಲ್ಲ ರಾದ್ಧಾಂತದ ನಂತರ ಶಾಲೆಯಲ್ಲಿ ಪಾಠ ಓದುವ ಮಕ್ಕಳ ಪಾಡೇನು? ಇಂತಹ ಪಾಠವನ್ನು ಈ ಬಾರಿ ಮೌಲ್ಯಮಾಪನಕ್ಕೆ ಪರಿಗಣನೆ ಮಾಡುವುದಿಲ್ಲ ಎಂದು ತಿದ್ದೋಲೆಯನ್ನು ಸರ್ಕಾರ ಕಳಿಸಬಹುದು. ಆಗ ಶಿಕ್ಷಕರು ಆ ಪಾಠವನ್ನು ಬೋಧನೆ ಮಾಡುವುದಿಲ್ಲ. ಆದರೆ ಆ ಪಾಠ ವಿದ್ಯಾರ್ಥಿಯ ಪುಸ್ತಕದಲ್ಲಿ ಆ ಪಾಠ ಹಾಗೆಯೇ ಇರುತ್ತದೆ ಅಲ್ಲವೇ? ಮೌಲ್ಯಮಾಪನ ಮಾಡದಿದ್ದ ಮಾತ್ರಕ್ಕೆ, ಶಿಕ್ಷಕರು ಬೋಧಿಸದ ಮಾತ್ರಕ್ಕೆ ವಿದ್ಯಾರ್ಥಿಗಳು ಆ ಪಾಠವನ್ನು ಓದುವುದನ್ನು ತಡೆಯಲು ಆಗುತ್ತದೆಯೇ? ಸ್ವಾತಂತ್ರ್ಯ ಹೋರಾಟಗಾರರ ಕುರಿತು ಇಂತಹ ಒಳ್ಳೆಯ ಪಾಠವನ್ನು ಸರ್ಕಾರ ಏಕೆ ನಿಷೇಧ ಮಾಡಿದೆ? ಎಂದು ವಿದ್ಯಾರ್ಥಿಗೆ ಅನ್ನಿಸುವುದಿಲ್ಲವೇ? ಆಗ ಸರ್ಕಾರದ ಬಗ್ಗೆ ಆತನಿಗೆ ಯಾವ ಅಭಿಪ್ರಾಯ ಬರಬಹುದು? ಇಂತಹ ಸೂಕ್ಷ್ಮ ಸಂಗತಿಗಳನ್ನೂ ಆಳುವವರು ಗಮನದಲ್ಲಿ ಇರಿಸಿಕೊಳ್ಳಬೇಕು. ಏಕೆಂದರೆ ರಾಧಾಕೃಷ್ಣನ್ ಅವರು ಹೇಳಿದಂತೆ ಶಿಕ್ಷಣ ಎನ್ನುವುದು ಮನುಷ್ಯನನ್ನು ಸೃಜನಶೀಲನನ್ನಾಗಿಸಬೇಕೆ ಹೊರತು ಈ ರೀತಿ ಒಟ್ಟಾರೆ ವ್ಯವಸ್ಥೆಯ ಮೇಲೆಯೇ ಅನುಮಾನವನ್ನು ಹುಟ್ಟುಹಾಕುವುದಲ್ಲ.

ಇದನ್ನೂ ಓದಿ: ವಿಸ್ತಾರ ಅಂಕಣ: ವಿದೇಶದಲ್ಲಿ ಕಾಲಿಟ್ಟ ತಕ್ಷಣ ರಾಹುಲ್ ಗಾಂಧಿ ಭಾರತ ವಿರೋಧಿ ಆಗುವುದೇಕೆ?

ಈ ಹಿಂದೆ ಬಿಜೆಪಿ ಸರ್ಕಾರ ಮಾಡಿದ ತಪ್ಪನ್ನು ಈಗಿನ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಲಿಲ್ಲ. ಕೇವಲ ಪಠ್ಯಪುಸ್ತಕ ಪರಿಷ್ಕರಣೆಯಿಂದ ಯಾವ ಉದ್ದೇಶವೂ ಈಡೇರುವುದಿಲ್ಲ ಎನ್ನುವುದು ಆ ಪಕ್ಷದ ಅರಿವಿಗೆ ಬಂದಿತ್ತು. ಹಾಗಾಗಿ ಒಟ್ಟಾರೆ ಶಿಕ್ಷಣ ವ್ಯವಸ್ಥೆಯನ್ನೇ ಆಮೂಲಾಗ್ರವಾಗಿ ಬದಲಾವಣೆ ಮಾಡುವ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಆರಂಭಿಸಿದೆ. ಹಂತಹಂತವಾಗಿ ಸುಮಾರು 10 ವರ್ಷದಲ್ಲಿ ಈ ಯೋಜನೆ ಜಾರಿಯಾದಾಗ ಒಟ್ಟಾರೆ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ಆಗಬೇಕು ಎನ್ನುವುದು ನಿರೀಕ್ಷೆ.

No textbooks from 3 years to 6 years Children

ಈಗಂತೂ ಶಾಲೆಗಳು ಆರಂಭವಾಗಿವೆ. ಪ್ರಸಕ್ತ ವರ್ಷದಲ್ಲಿ ಪಾಠ ಪ್ರವಚನಗಳು ಎಂದಿನಂತೆ ನಡೆಯಲಿ. ಮುಖ್ಯವಾಗಿ ರಾಜ್ಯದ ಅನೇಕ ಸರ್ಕಾರಿ ಶಾಲೆಗಳು ಕಟ್ಟಡಗಳು ಬೀಳುವ ಹಂತದಲ್ಲಿವೆ. ವಿದ್ಯಾರ್ಥಿಗಳು ಕಿಲೋಮೀಟರ್ ಗಟ್ಟಲೆ ನಡೆದೇ ಶಾಲೆಗೆ ಹೋಗುತ್ತಿದ್ದಾರೆ. ಶಿಕ್ಷಕರ ಹತ್ತಾರು ಬೇಡಿಕೆಗಳನ್ನು ಈಡೇರಿಸಬೇಕಿದೆ. ಶಿಕ್ಷಕರ ತರಬೇತಿಯತ್ತಲೂ ಗಮನ ನೀಡಬೇಕಿದೆ. ಬೇಕಿದ್ದರೆ ಪಠ್ಯಪುಸ್ತಕ ಪರಿಷ್ಕರಣೆಗೊಂದು ತಜ್ಞರ ಸಮಿತಿಯನ್ನು ರಚನೆ ಮಾಡಿ ಕೆಲಸ ಆರಂಭಿಸಲಿ. ಅವರು ಈ ವರ್ಷದ ಅಂತ್ಯಕ್ಕೆ ವರದಿ ನೀಡಿ, ಆ ವರದಿಯ ಅನುಷ್ಠಾನದ ಕುರಿತು ಸರ್ಕಾರ ನಿರ್ಧಾರ ಮಾಡಲಿ. ಮುಂದಿನ ವರ್ಷದಿಂದ ಹೊಸ ಪಠ್ಯಕ್ರಮಕ್ಕೆ ತೆರೆದುಕೊಳ್ಳಬಹುದು. ಅದನ್ನು ಬಿಟ್ಟು, ಯಾವುದೋ ಒಂದು ಗುಂಪನ್ನು ಮೆಚ್ಚಿಸುವ ಸಲುವಾಗಿ ಹಾಗೂ ಸರ್ಕಾರದ ಮೇಲಿನ ಗಮನವನ್ನು ಬೇರೆಡೆ ಸೆಳೆಯಲು ದಿನಬೆಳಗಾದರೆ ಪಠ್ಯಪುಸ್ತಕ ಪರಿಷ್ಕರಣೆಯ ಮಾತನ್ನು ಸರ್ಕಾರದ ಭಾಗವಾಗಿರುವವರು ನಿಲ್ಲಿಸುವುದು ಒಳ್ಳೆಯದು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ, ಸಮಾಜ ಸುಧಾರಣೆಗೆ ಶ್ರಮಿಸಿದವರನ್ನು ರಾಜಕಾರಣ ಹಾಗೂ ಸ್ವಾರ್ಥಕ್ಕಾಗಿ ಅವಮಾನಿಸುವುದಕ್ಕೆ ಅಂತ್ಯ ಹಾಡುವ ಕೆಲಸ ಕಾಂಗ್ರೆಸ್ ಸರ್ಕಾರದಿಂದಲೇ ಆರಂಭವಾಗಲಿ.

ಇದನ್ನೂ ಓದಿ: ವಿಸ್ತಾರ ಅಂಕಣ: ಗ್ಯಾರಂಟಿ ಮರೆಮಾಚಲು ʼಗೋಹತ್ಯೆʼ ಗುರಾಣಿಯಾಗಬೇಕೆ?

ಕಡೆಯದಾಗಿ ನೆಹರು ಅವರು ಬರೆದಿರುವ ಮೊಘಲ್ ಚಕ್ರಾಧಿಪತ್ಯದ ಸಾಲುಗಳಿಗೆ ಮರಳೋಣ. ಅವರು ಹೇಳಿದರೆ, ನಾನು ಹಾಗೂ ನನ್ನ ವಯಸ್ಸಿನ(35ರಿಂದ 45) ತಲೆಮಾರು ಬಾಬರ್ ನಿಂದ ಔರಂಗಬೇಬ್ ವರೆಗೆ ಎಲ್ಲರನ್ನೂ ಓದಿದ್ದೇವೆ. ಅವರ ಚಿತ್ರಪಟುಗಳು ನಮ್ಮ ಸ್ಮೃತಿಪಟಲದಲ್ಲಿವೆ. ಆದರೆ, ಕೃಷ್ಣದೇವರಾಯ, ಶಿವಾಜಿ, ರಾಣಾ ಪ್ರತಾಪ ಬಗ್ಗೆ ನಾವು ಓದಿದ್ದು ಕಡಿಮೆ. ಅಂತೆಯೇ ನಮ್ಮ ರಾಜ್ಯದಲ್ಲೂ ಟಿಪ್ಪು, ಹೈದರಾಲಿ ಬಗ್ಗೆ ಓದಿದಷ್ಟು ನಾಲ್ವಡಿ, ಮುಮ್ಮಡಿ ಒಡೆಯರ್ ಬಗ್ಗೆ ಓದಿದ್ದು ಕಡಿಮೆ. ಏಕೆಂದರೆ, ಪಠ್ಯ ಪುಸ್ತಕದ ಮೇಲೆ ಬಹಳಷ್ಟು ವರ್ಷಗಳ ಕಾಲ ಎಡಪಂಥೀಯ ಸಿದ್ಧಾಂತವಾದಿಗಳ ಹಿಡಿತವಿತ್ತು. ಅವರು ಎಲ್ಲವನ್ನೂ ತಮ್ಮ ಸಿದ್ಧಾಂತಕ್ಕೆ ಅನುಗುಣವಾಗಿಯೇ ರೂಪಿಸಿದರು. ಬಳಿಕ ಬಂದ ಬಿಜೆಪಿ ಸರಕಾರ, ಈ ಪ್ರಮಾದವನ್ನು ಸರಿಪಡಿಸುತ್ತಲೇ, ತನಗಿಷ್ಟವಾದ ಸಿದ್ಧಾಂತವನ್ನು ಮೆರೆಸಲು ಯತ್ನಿಸಿತು. ಪ್ರಮಾಣದಲ್ಲಿ ವ್ಯತ್ಯಾಸವಿದ್ದರೂ ಈ ಎರಡೂ ತಪ್ಪೇ.

ಹಾಗಾಗಿ, ಪಠ್ಯ ಪುಸ್ತಕ ಪರಿಷ್ಕರಣೆಯ ಜವಾಬ್ದಾರಿಯನ್ನು. ಆಯಾ ಕಾಲದ ರಾಜಕೀಯ ಪಕ್ಷಗಳ ಸಿದ್ಧಾಂತವಾದಿಗಳಿಗೆ ಒಪ್ಪಿಸುವ ಬದಲು . ಚಿಂತನೆಯ ಸಂಸ್ಥೆಗೆ ಒಪ್ಪಿಸುವ ಅಗತ್ಯವಿದೆ. ಇದಕ್ಕಾಗಿ ಸರಕಾರ ರಾಜಕಿಯೇತರವಾದ ಒಂದು ಶಾಶ್ವತ ಸಾಂವಿಧಾನಿಕ ಸಂಸ್ಥೆಯನ್ನು ಹುಟ್ಟುಹಾಕಿದರೂ ತಪ್ಪಲ್ಲ. ಯಾವುದೇ ಪಂಥಕ್ಕೆ ಅಂಟಿಕೊಳ್ಳದ, ವೃತ್ತಿಪರವಾಗಿ ಆಲೋಚಿಸುವ ದೊಡ್ಡ ಮಾನವ ಸಂಪನ್ಮೂಲ ಭಾರತದಲ್ಲಿ ಇದೆ. ಅವರನ್ನು ದುಡಿಸಿಕೊಳ್ಳುವ ಜರೂರತ್ತೂ ಇದೆ.

ಇದನ್ನೂ ಓದಿ: ವಿಸ್ತಾರ ಅಂಕಣ: ಜನಕಲ್ಯಾಣದ ಕನಸಿಗೆ ಕಾರ್ಯಾಂಗವೂ ಕೈ ಜೋಡಿಸಲಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Job Alert: ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 54 ಸ್ಥಾನಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಕೊನೆಯ ದಿನ ಮೇ 24. ಬಿಸಿಎ, ಬಿ.ಎಸ್‌ಸಿ, ಬಿ.ಇ. ಅಥವಾ ಬಿ.ಟೆಕ್‌, ಎಂಸಿಎ ಪದವಿ ಪಡೆದವರು ಈ ಸುವರ್ಣಾವಕಾಶ ಬಳಸಿಕೊಳ್ಳಿ.

VISTARANEWS.COM


on

Job Alert
Koo

ಬೆಂಗಳೂರು: ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ (India Post Payments Bank) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IPPB Recruitment 2024). ಇನ್ಫರ್ಮೇಷನ್‌ ಟೆಕ್ನಾಲಜಿ ಎಕ್ಸಿಕ್ಯೂಟಿವ್‌ ಹುದ್ದೆ ಇದಾಗಿದ್ದು, ಒಟ್ಟು 54 ಸ್ಥಾನಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಉದ್ಯೋಗದ ಸ್ಥಳ: ಚೆನ್ನೈ, ಮುಂಬೈ, ದೆಹಲಿ. ಬಿಸಿಎ, ಬಿಎಸ್‌ಸಿ ಓದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 24 (Job Alert)

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಕ್ಸಿಕ್ಯೂಟಿವ್‌ (ಅಸೋಸಿಯೇಟ್‌ ಕನ್ಸಲ್‍ಟೆಂಟ್‍) (Executive (Associate Consultant)- 28, ಎಕ್ಸಿಕ್ಯೂಟಿವ್‌ (ಕನ್ಸಲ್‍ಟೆಂಟ್‍) (Executive (Consultant) – 21 ಮತ್ತು ಎಕ್ಸಿಕ್ಯೂಟಿವ್‌ (ಸೀನಿಯರ್ ಕನ್ಸಲ್‍ಟೆಂಟ್‍)‌ (Executive (Senior Consultant) – 5 ಹುದ್ದೆಗಳಿವೆ. IPPB official notification ಪ್ರಕಾರ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಬಿಸಿಎ, ಬಿ.ಎಸ್‌ಸಿ, ಬಿ.ಇ. ಅಥವಾ ಬಿ.ಟೆಕ್‌, ಎಂಸಿಎ ಪದವಿ ಪಡೆದಿರಬೇಕು. ಜತೆಗೆ 1ರಿಂದ 6 ವರ್ಷದವರೆಗೆ ಅನುಭವ ಹೊಂದಿರುವುದು ಕಡ್ಡಾಯ.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅಭ್ಯರ್ಥಿಗಳ ಕನಿಷ್ಠ ವಯಸ್ಸು 22 ವರ್ಷ ಮತ್ತು ಗರಿಷ್ಠ ವಯಸ್ಸು 45 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ. ಅರ್ಜಿ ಶುಲ್ಕವಾಗಿ ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ ಅಭ್ಯರ್ಥಿಗಳು 150 ರೂ. ಮತ್ತು ಉಳಿದೆಲ್ಲ ವರ್ಗಗಳ ಅಭ್ಯರ್ಥಿಗಳು 750 ರೂ. ಪಾವತಿಸಬೇಕು. ಇದಕ್ಕಾಗಿ ಆನ್‌ಲೈನ್‌ ವಿಧಾನ ಬಳಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಆನ್‌ಲೈನ್‌ ಪರೀಕ್ಷೆ, ಗ್ರೂಪ್‌ ಡಿಸ್ಕಷನ್‌ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಗುತ್ತಿಗೆ ಆಧಾರದಲ್ಲಿ ಈ ನೇಮಕಾತಿ ನಡೆಯಲಿದ್ದು, ಆಯ್ಕೆಯಾದವರಿಗೆ 10,00,000 ರೂ.-25,00,000 ರೂ. ವಾರ್ಷಿಕ ವೇತನ ದೊರೆಯಲಿದೆ.

IPPB Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಮೊದಲು ನಿಮ್ಮ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ತೆರೆದುಕೊಳ್ಳುವ IPPB Online Application Form ಅನ್ನು ಸರಿಯಾದ ಮಾಹಿತಿ ನೀಡಿ ಭರ್ತಿ ಮಾಡಿ.
  • ಅಗತ್ಯವಾದ ಡಾಕ್ಯುಮೆಂಟ್‌, ಫೋಟೊ, ಸಹಿ ಇತ್ಯಾದಿಯನ್ನು ಸರಿಯಾದ ಗಾತ್ರದಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ನೀಡಿದ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಾಗಿದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಕೋರ್ಟ್‌ನಲ್ಲಿದೆ 41 ಹುದ್ದೆ; ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿ

Continue Reading

ಪ್ರಮುಖ ಸುದ್ದಿ

Prajwal Revanna Case: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಪೋಸ್ಟರ್ ವಾರ್‌

Prajwal Revanna Case: ಪೆನ್ ಡ್ರೈವ್ ವೀಡಿಯೋ (Pen Drive Case) ಲೀಕ್ ಹಿಂದೆ ಡಿಸಿಎಂ ಡಿಕೆಶಿ ಕೈವಾಡವಿದೆ ಎಂದು ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪ ಬೆನ್ನಲ್ಲೇ ಪೋಸ್ಟರ್‌ಗಳು ರಾರಾಜಿಸುತ್ತಿದ್ದು, ಅನಾಮಿಕರು ಅಂಟಿಸಿರುವ ಪೋಸ್ಟರ್‌ಗಳು ಸಾರ್ವಜನಿಕರ ಗಮನ ಸೆಳೆಯುತ್ತಿವೆ.

VISTARANEWS.COM


on

prajwal ravanna case dk shivakumar poster
Koo

ಬೆಂಗಳೂರು: ಹಾಸನ ಸಂಸದ (Hassan PM) ಪ್ರಜ್ವಲ್‌ ರೇವಣ್ಣ (Prajwal Revanna Case) ಹಾಗೂ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna) ಅವರ ಲೈಂಗಿಕ ಹಗರಣದಲ್ಲಿ, ಇದುವರೆಗೂ ಹತಾಶವಾಗಿದ್ದ ಬಿಜೆಪಿ (BJP) ಹಾಗೂ ಜೆಡಿಎಸ್‌ಗೆ (JDS) ಈಗ ಆಡಿಯೋ ಅಸ್ತ್ರ ದೊರೆತಿದೆ. ವಕೀಲ ದೇವರಾಜೇಗೌಡ ಪತ್ರಿಕಾಗೋಷ್ಠಿಯ ಬಳಿಕ ತುಸು ಚೇತರಿಕೆ ಬಂದಿದೆ. ಇದರ ನಡುವೆ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ (DK Shivakumar) ವಿರುದ್ಧ ಪೋಸ್ಟರ್‌ಗಳು ನಗರದ ಹಲವು ಭಾಗಗಳಲ್ಲಿ ಕಾಣಿಸಿಕೊಂಡಿವೆ.

ಪೆನ್ ಡ್ರೈವ್ ವೀಡಿಯೋ (Pen Drive Case) ಲೀಕ್ ಹಿಂದೆ ಡಿಸಿಎಂ ಡಿಕೆಶಿ ಕೈವಾಡವಿದೆ ಎಂದು ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪ ಬೆನ್ನಲ್ಲೇ ಪೋಸ್ಟರ್‌ಗಳು ರಾರಾಜಿಸುತ್ತಿದ್ದು, ಅನಾಮಿಕರು ಅಂಟಿಸಿರುವ ಪೋಸ್ಟರ್‌ಗಳು ಸಾರ್ವಜನಿಕರ ಗಮನ ಸೆಳೆಯುತ್ತಿವೆ. “ಹೆಣ್ಣು ಮಕ್ಕಳ ವೀಡಿಯೋ ಬಳಸಿಕೊಂಡು ರಾಜಕೀಯ ಮಾಡುವ ವ್ಯಕ್ತಿ” ಎಂದು ಇವುಗಳಲ್ಲಿ ಆರೋಪಿಸಲಾಗಿದೆ. ಜೊತೆಗೆ ಹಲವು ಅವಹೇಳನಕಾರಿ ಒಕ್ಕಣೆಗಳೂ ಈ ಪೋಸ್ಟರ್‌ಗಳಲ್ಲಿ ಕಂಡುಬಂದಿವೆ.

ಕೆಪಿಸಿಸಿ ಕಚೇರಿ, ಡಿಕೆ ಶಿವಕುಮಾರ್‌ ಪಾಲುದಾರಿಕೆ ಹೊಂದಿರುವ ಲುಲು ಮಾಲ್ ಸೇರಿದಂತೆ ಬೆಂಗಳೂರಿನ ವಿವಿಧ ಕಡೆಗಳಲ್ಲಿ ಪೋಸ್ಟರ್ ಕಂಡುಬಂದಿವೆ. ರಾತ್ರೋರಾತ್ರಿ ಪೋಸ್ಟರ್‌ಗಳು ಪ್ರತ್ಯಕ್ಷವಾಗಿದ್ದು, ಪೊಲೀಸರು ಇದರ ಹಿಂದಿರುವವರ ಹುಡುಕಾಟದಲ್ಲಿ ತೊಡಗಿದ್ದಾರೆ.

ಡಿಕೆಶಿ ಆಡಿಯೋ ಕಾಂಗ್ರೆಸ್‌ಗೆ ತಲೆನೋವು

ಕಳೆದ ಹದಿನೈದು ದಿನಗಳಿಂದ ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಇಟ್ಟುಕೊಂಡು ಚೆನ್ನಾಗಿಯೇ ಆಟವಾಡಿದ್ದ ಕಾಂಗ್ರೆಸ್‌, ಮತದಾನದ ಮುನ್ನಾದಿನವಾದ ಭಾನುವಾರ ಸಂಕಷ್ಟಕ್ಕೆ ಸಿಲುಕಿಕೊಂಡಿದೆ. ಚುನಾವಣೆಯ ಹಿಂದಿನ ದಿನವೇ ಬಿಜೆಪಿ ಮಾಸ್ಟರ್ ಸ್ಟ್ರೋಕ್ ನೀಡಿದೆ. ಡಿಕೆ ಶಿವಕುಮಾರ್ ಆಡಿಯೋ ಅನ್ನು ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಬಿಡುಗಡೆ ಮಾಡಿದ್ದು, ಪ್ರಕರಣದ ಹಿಂದಿನ ಸತ್ಯಾಸತ್ಯತೆ ಬಗ್ಗೆ ಸಾರ್ವಜನಿಕರು ಇನ್ನೊಂದು ಕೋನದಿಂದ ಯೋಚಿಸುವಂತಾಗಿದೆ.

ದೇವರಾಜೇಗೌಡ ಜತೆ ಡಿಕೆ ಶಿವಕುಮಾರ್‌ ನಡೆಸಿರುವ ಮಾತುಕತೆಯ ಆಡಿಯೋದಲ್ಲಿ ಡಿಕೆಶಿ ಧ್ವನಿ ಸ್ಪಷ್ಟವಾಗಿದೆ ಎನ್ನಲಾಗಿದೆ. ಪೆನ್ ಡ್ರೈವ್ ಮಾಡಿಸಿದ್ದೇ ಡಿಕೆಶಿ ಎಂದು ಆರೋಪಿಸಲಾಗಿದೆ. ರಾಜಕೀಯ ಲಾಭಕ್ಕಾಗಿ ವ್ಯವಸ್ಥೆಯನ್ನು ಬಳಸಿಕೊಂಡಿದ್ದು, ಕಾಂಗ್ರೆಸ್ ಸರ್ಕಾರ ಎಸ್ಐಟಿ ಅಧಿಕಾರಿಗಳನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದೆ. ಸಿಬಿಐ ಇಲ್ಲವೇ ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಾಯಿಸಲಾಗಿದೆ.

ಈ ಬಗ್ಗೆ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆಯುವ ಬಗ್ಗೆ ಹಾಗೂ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ವಿಸ್ತಾರ ನ್ಯೂಸ್‌ಗೆ ಬಿಜೆಪಿ ವಕ್ತಾರ ವಿವೇಕರೆಡ್ಡಿ ಹೇಳಿದ್ದಾರೆ. ಎಸ್ಐಟಿ ತನಿಖೆ ಮೇಲೆ ಅನುಮಾನ ಬರುತ್ತಿದೆ. ಹೀಗಾಗಿ ಸಿಬಿಐ ಇಲ್ಲವೇ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು. ಈ ಬಗ್ಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲು ನಿರ್ಧರಿಸಲಾಗಿದೆ. ಸಿಎಂಗೆ ಮನವಿ ಬಳಿಕ ಹೈಕೋರ್ಟ್ ಮೊರೆ ಹೋಗಲಾಗುತ್ತದೆ. ಈ ನಡುವೆ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆಯುತ್ತೇವೆ ಎಂದು ವಿವೇಕರೆಡ್ಡಿ ಹೇಳಿದ್ದಾರೆ.

ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ಇದ್ದರೆ ಡಿಲೀಟ್‌ ಮಾಡಿ

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ನಿಮ್ಮ ಮೊಬೈಲ್‌ ಅಥವಾ ಲ್ಯಾಪ್‌ಟಾಪ್‌ನಲ್ಲಿದೆಯೇ? ಇದ್ದರೆ ಅದು ದೊಡ್ಡ ಅಪರಾಧವಾಗಿದೆ. ಈಗಲೇ ಅದನ್ನು ಡಿಲೀಟ್‌ ಮಾಡಿಬಿಡಿ. ಒಂದು ವೇಳೆ ನೀವು ಡಿಲೀಟ್‌ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿಯ ಮುಖ್ಯಸ್ಥ ಬಿ.ಕೆ. ಸಿಂಗ್ ಅಧಿಕೃತ ಪ್ರಕಟಣೆ ನೀಡಿದ್ದಾರೆ.

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಈಗ ದೇಶಾದ್ಯಂತ ವೈರಲ್ ಆಗಿದೆ. ಈಗಾಗಲೇ ಈ ಪ್ರಕರಣ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿಯನ್ನು ರಚನೆ ಮಾಡಿದೆ. ಇನ್ನು ವಿಡಿಯೊದಲ್ಲಿ ಹಾಸನ ಸೇರಿದಂತೆ ಹಲವು ಕಡೆಯ ಮಹಿಳೆಯರು ಇದ್ದಾರೆನ್ನಲಾಗಿದ್ದು, ಅವರ ಮುಖವನ್ನು ಬ್ಲರ್‌ ಮಾಡಲಾಗಿಲ್ಲ. ಹೀಗಾಗಿ ಈ ಕೇಸ್‌ ಮತ್ತಷ್ಟು ಜಟಿಲವಾಗಿದೆ.

ಈ ಸಂಬಂಧ ಎಸ್ಐಟಿಯ ಮುಖ್ಯಸ್ಥ ಬಿ.ಕೆ. ಸಿಂಗ್ ಪ್ರಕಟಣೆ ನೀಡಿದ್ದು, ಅಶ್ಲೀಲ ವಿಡಿಯೊವನ್ನು ಸಾರ್ವಜನಿಕರು ತಮ್ಮ ಮೊಬೈಲ್‌ನಲ್ಲಿ‌ ಇಟ್ಟುಕೊಳ್ಳುವುದು ಸಹ ಅಪರಾಧ. ಯಾವುದೇ ವ್ಯಕ್ತಿ ಸಂದೇಶಗಳನ್ನು ರೂಪಿಸುವ, ಇಟ್ಟುಕೊಳ್ಳುವ ಹಾಗೂ ಪ್ರಸಾರ ಮಾಡುವ ಕೆಲಸವನ್ನು ಮಾಡಿದರೆ, ಅಂಥ ವ್ಯಕ್ತಿಗಳ‌ನ್ನು ಸಂದೇಶ ರಚನೆಕಾರರು ಎಂದು ಪರಿಗಣಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Prajwal Revanna Case Delete vulgar video and avoid legal action says SIT chief

ಡಿಲೀಟ್‌ ಮಾಡಿ ಕಾನೂನು ಕ್ರಮದಿಂದ ಪಾರಾಗಿ

ಅಶ್ಲೀಲ ವಿಡಿಯೊ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಹೀಗೆ ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

Continue Reading

ಪ್ರಮುಖ ಸುದ್ದಿ

Lok Sabha Election 2024: ಮೊದಲೆರಡು ಗಂಟೆಗಳ ಮತದಾನ ನಿರೀಕ್ಷೆಗಿಂತ ಕಡಿಮೆ, ಇನ್ನೂ ಇಳಿಯುವ ಆತಂಕ; ಎಲ್ಲಿ ಎಷ್ಟು?

Lok Sabha Election 2024: ಶಿವಮೊಗ್ಗದಲ್ಲಿ 11.45, ಉತ್ತರ ಕನ್ನಡ ಕ್ಷೇತ್ರದಲ್ಲಿ ಶೇ. 11.42, ಚಿಕ್ಕೋಡಿಯಲ್ಲಿ ಶೇ. 10.81, ಬಳ್ಳಾರಿಯಲ್ಲಿ ಶೇ. 10.37, ಬೆಳಗಾವಿಯಲ್ಲಿ ಶೇ. 9.31, ಧಾರವಾಡದಲ್ಲಿ ಶೇ.9.38, ವಿಜಯಪುರದಲ್ಲಿ 9.22%, ರಾಯಚೂರಿನಲ್ಲಿ ಶೇ. 8.83 , ಹಾವೇರಿಯಲ್ಲಿ ಶೇ. 8.2, ಕಲಬುರಗಿಯಲ್ಲಿ ಶೇ. 8.71 ಮತದಾನ ದಾಖಲಾಯಿತು. ಸರಾಸರಿ ಶೇ. 9.5 ಎಂದು ಅಂದಾಜಿಸಲಾಗಿದೆ. ಇದು ನಿರೀಕ್ಷೆಗಿಂತ ಕಡಿಮೆಯಾಗಿದೆ.

VISTARANEWS.COM


on

lok sabha election 2024 voting second phase
Koo

ಬೆಂಗಳೂರು: ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಲ್ಲಿ (lok sabha constituency) ನಡೆಯುತ್ತಿರುವ ಲೋಕಸಭೆ ಚುನಾವಣೆ (lok sabha election 2024) ಮತದಾನ (voting) ಬೆಳಗ್ಗಿನ ಮೊದಲ ಎರಡು ಗಂಟೆಗಳಲ್ಲಿ ಸರಾಸರಿ 9.5% ಮತದಾನ ದಾಖಲಿಸಿತು. ಮೊದಲ ಹಂತದ ಚುನಾವಣೆಗೆ ಹೋಲಿಸಿದರೆ ಈ ಪ್ರತಿಕ್ರಿಯೆ ನೀರಸವಾಗಿದೆ. ಮೊದಲ ಹಂತದ ಮತದಾನದಲ್ಲಿ ಮೊದಲ ಎರಡು ಗಂಟೆಗಳಲ್ಲಿ ಸರಾಸರಿ 10% ಮತದಾನ ಕಂಡುಬಂದಿತ್ತು. ಮುಂಜಾನೆ 7 ಗಂಟೆಗೆ ಮತದಾನ ಶುರುವಾಗಿದೆ.

ಶಿವಮೊಗ್ಗದಲ್ಲಿ 11.45, ಉತ್ತರ ಕನ್ನಡ ಕ್ಷೇತ್ರದಲ್ಲಿ ಶೇ. 11.42, ಚಿಕ್ಕೋಡಿಯಲ್ಲಿ ಶೇ. 10.81, ಬಳ್ಳಾರಿಯಲ್ಲಿ ಶೇ. 10.37, ಬೆಳಗಾವಿಯಲ್ಲಿ ಶೇ. 9.31, ಧಾರವಾಡದಲ್ಲಿ ಶೇ.9.38, ವಿಜಯಪುರದಲ್ಲಿ 9.22%, ರಾಯಚೂರಿನಲ್ಲಿ ಶೇ. 8.83 , ಹಾವೇರಿಯಲ್ಲಿ ಶೇ. 8.2, ಕಲಬುರಗಿಯಲ್ಲಿ ಶೇ. 8.71 ಮತದಾನ ದಾಖಲಾಯಿತು. ಸರಾಸರಿ ಶೇ. 9.5 ಎಂದು ಅಂದಾಜಿಸಲಾಗಿದೆ. ಇದು ನಿರೀಕ್ಷೆಗಿಂತ ಕಡಿಮೆಯಾಗಿದೆ.

ಹತ್ತು ಗಂಟೆಯ ಬಳಿಕ ಬಿಸಿಲು ಏರುವುದರಿಂದ, ಬಿಸಿಲಿನ ಹೊಡೆತ ತಪ್ಪಿಸಿಕೊಳ್ಳಲು ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಚಲಾಯಿಸಿದರು. ಮಧ್ಯಾಹ್ನದ ಹೊತ್ತಿನಲ್ಲಿ ಮತದಾನ ಇನ್ನಷ್ಟು ಇಳಿಕೆಯಾಗುವ ಆತಂಕ ಕಂಡುಬಂದಿದೆ. ಸಂಜೆಯ ವೇಳೆ ಮಳೆ ಬರುವ ಸಾಧ್ಯತೆಯೂ ಇರುವುದರಿಂದ, ಸಂಜೆಯೂ ಮತದಾನ ನಿರೀಕ್ಷಿತ ಪ್ರಮಾಣದಲ್ಲಿ ನಡೆಯದ ಆತಂಕ ತಲೆದೋರಿದೆ.

ಹಾವೇರಿಯಲ್ಲಿ ಬಸವರಾಜ ಬೊಮ್ಮಾಯಿ, ಶಿವಮೊಗ್ಗದಲ್ಲಿ ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರ, ರಾಘವೇಂದ್ರ, ಈಶ್ವರಪ್ಪ, ಹುಬ್ಬಳ್ಳಿಯಲ್ಲಿ ಪ್ರಹ್ಲಾದ್‌ ಜೋಶಿ, ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ ಖರ್ಗೆ, ಕಾರವಾರದಲ್ಲಿ ಅಂಜಲಿ ನಿಂಬಾಳ್ಕರ್ ಸೇರಿದಂತೆ ಹಲವಾರು ಗಣ್ಯರು ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು.

ಕೆಲವೆಡೆ ಮತಯಂತ್ರ ಕೈಕೊಟ್ಟು ಮತದಾರರು ಗಂಟೆಗಟ್ಟಲೆ ಕಾಯುವಂತಾಯಿತು. ತಂತ್ರಜ್ಞರು ಆಗಮಿಸಿ ಸರಿಪಡಿಸಿದ ಬಳಿಕ ಮತ ಹಾಕಲಾಯಿತು. ಮಹಿಳೆಯರಿಗಾಗಿ ಏರ್ಪಡಿಸಿದ ಪಿಂಕ್‌ ಬೂತ್‌ಗಳಲ್ಲಿಯೂ ಉತ್ತಮ ಸ್ಪಂದನ ವ್ಯಕ್ತವಾಯಿತು. ಹಲವು ಕಡೆಗಳಲ್ಲಿ ಮತದಾರರು ಬಹಿಷ್ಕಾರ ವ್ಯಕ್ತಡಿಸಿದರು. ಹಲವೆಡೆ ಶತಾಯುಷಿಗಳು ಆಗಮಿಸಿ ಮತ ಹಾಕುವ ಉತ್ಸಾಹ ತೋರಿದರು. ಒಂದು ಕಡೆ ದಿವ್ಯಾಂಗ ಯುವತಿ ಮೊದಲ ಮತ ಹಾಕಿದಳು. ಉತ್ತರ ಕನ್ನಡದಲ್ಲಿ ನವದುರ್ಗೆಯರ ರೂಪದಲ್ಲಿ ಮೊದಲ ಮತದಾನ ನಡೆದುದು ವಿಶಿಷ್ಟವಾಗಿತ್ತು.

ರಾಜ್ಯದಲ್ಲಿ ಎರಡನೇ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 14 ಕ್ಷೇತ್ರಗಳಲ್ಲಿ 28,269 ಮತಗಟ್ಟೆ ಸ್ಥಾಪಿಸಿದ್ದು, ಶಾಂತಿಯುತ ಚುನಾವಣೆ ನಡೆಸಲು ಸುಮಾರು 40 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಮತದಾನ ಕೇಂದ್ರದಲ್ಲಿ ಮತದಾರರ ಅನುಕೂಲಕ್ಕಾಗಿ ಕುಡಿಯುವ ನೀರು ಸೇರಿ ಅಗತ್ಯ ವ್ಯವಸ್ಥೆ ಮಾಡಲಾಗಿದ್ದು, ಮತಗಟ್ಟೆಗಳ ಸುತ್ತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ತ ಭದ್ರತೆ ಏರ್ಪಡಿಸಲಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ದರೆ, ಬಿಎಸ್‌ಪಿ 9, ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳು 23, ಸ್ವತಂತ್ರ ಅಭ್ಯರ್ಥಿಗಳು 117 ಸೇರಿ ಒಟ್ಟು 227 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ. ಇದರಲ್ಲಿ 206 ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ. ಈ ಕ್ಷೇತ್ರಗಳಲ್ಲಿ 2,59,52,958 ಮತದಾರರಿದ್ದು, 1,29,48,978 ಪುರುಷ, 1,29,64,570 ಮಹಿಳಾ ಹಾಗೂ 1,945 ತೃತೀಯ ಲಿಂಗಿ ಮತದಾರರು ಇದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅತೀ ಕಡಿಮೆ 16,41,156 ಮತದಾರರಿದ್ದರೆ, ಅತಿ ಹೆಚ್ಚು ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ 20,98,202 ಮತದಾರರಿದ್ದಾರೆ.

ದೇಶದ 11 ರಾಜ್ಯ ಮತ್ತು ಕೇಂದ್ರಾಡಳಿತದ ಪ್ರದೇಶಗಳ 93 ಕ್ಷೇತ್ರಗಳಲ್ಲಿ ಮೂರನೇ ಹಂತದ ಮತದಾನ ಆರಂಭವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಗುಜರಾತ್‌ನ ಅಹಮದಾಬಾದ್‌ನಲ್ಲಿ ಮತದಾನ ಮಾಡಿದರು. ಮೂರನೇ ಹಂತದಲ್ಲಿ ಸುಮಾರು 120 ಮಹಿಳೆಯರು ಸೇರಿದಂತೆ 1,300ಕ್ಕೂ ಹೆಚ್ಚು ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. 8.39 ಕೋಟಿ ಮಹಿಳೆಯರು ಸೇರಿದಂತೆ 17.24 ಕೋಟಿ ಜನರು ಮತ ಚಲಾಯಿಸಲು ಅರ್ಹರಾಗಿದ್ದು, 18.5 ಲಕ್ಷ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. 1.85 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಇದನ್ನೂ ಓದಿ: Lok Sabha Election 2024: ಮತ ಹಕ್ಕು ಚಲಾಯಿಸಿದ ಪ್ರಧಾನಿ ಮೋದಿ; ಮತದಾನ ಮಾಡಲು ಕನ್ನಡದಲ್ಲೇ ಕರೆ

Continue Reading

ಪ್ರಮುಖ ಸುದ್ದಿ

Lok Sabha Election 2024: ಮುಂಜಾನೆಯಿಂದಲೇ ಮತದಾನ ಬಿರುಸು, ಎಲ್ಲೆಡೆ ಶಾಂತಿಯುತ

ರಾಜ್ಯದ 14 ಮತಕ್ಷೇತ್ರಗಳ 28,269 ಮತಗಟ್ಟೆಗಳಲ್ಲಿ ಮುಂಜಾನೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಮತದಾರರು ಕ್ಯೂ ನಿಂತು ಮತ ಚಲಾಯಿಸಿದರು, ಯಾವುದೇ ಅಹಿತಕರ ಘಟನೆಗಳಿಲ್ಲದೆ ಸಂಪೂರ್ಣ ಶಾಂತಿಯುತವಾಗಿ ಇದುವರೆಗೆ ಮತದಾನ ನೆರವೇರಿದೆ.

VISTARANEWS.COM


on

lok sabha electon 2024 voting navadurge
Koo

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆಯ (Lok Sabha Election 2024) ಮತದಾನ ಮಂಗಳವಾರ ಬೆಳಗ್ಗೆ 7 ಗಂಟೆಗೆ ಆರಂಭವಾಗಿದ್ದು, ಮುಂಜಾನೆಯಿಂದಲೇ ಮತದಾನ ಬಿರುಸಾಗಿ ನಡೆಯಿತು. ಮಧ್ಯಾಹ್ನ ಬಿಸಿಲು ಹಾಗು ಸಂಜೆ ಮಳೆಯ ಆತಂಕದ ಹಿನ್ನೆಲೆಯಲ್ಲಿ ಮತದಾರರು ಬೆಳಗ್ಗೆಯೇ ಮತ ಹಾಕಲು ಧಾವಿಸಿದರು. ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ.

ಕೆಲವು ಕಡೆ ಆರಂಭದಲ್ಲೇ ಮತಯಂತ್ರಗಳು ಕೈಕೊಟ್ಟವು,. ತಂತ್ರಜ್ಞರು ಸರಿಪಡಿಸಿದ ಬಳಿಕ ಮತದಾನ ಮುಂದುವರಿಯಿತು. ನವದುರ್ಗೆಯಯ ಮೊದಲ ಮತ, ದಿವ್ಯಾಂಗ ಯುವತಿಯ ಮೊದಲ ಮತ ಹೀಗೆ ಕೆಲವೆಡೆ ವಿಶೇಷತೆಗಳು ಕಂಡುಬಂದವು. ಕಾರವಾರ ಸೇಂಟ್ ಮೈಕಲ್ ಶಾಲೆಯ ಮತಗಟ್ಟೆ ಸಂಖ್ಯೆ 107ರಲ್ಲಿ ಮಷಿನ್ ಸಮಸ್ಯೆಯಿಂದ ಮತದಾನ ಒಂದು ಘಂಟೆ ವಿಳಂಬವಾಯಿತು. ಮೂರು ಯಂತ್ರ ಬದಲಿಸಿದ ಬಳಿಕ ಮತಯಂತ್ರ ಸರಿಯಾಯಿತು.

ರಾಜ್ಯದಲ್ಲಿ ಎರಡನೇ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 14 ಕ್ಷೇತ್ರಗಳಲ್ಲಿ 28,269 ಮತಗಟ್ಟೆ ಸ್ಥಾಪಿಸಿದ್ದು, ಶಾಂತಿಯುತ ಚುನಾವಣೆ ನಡೆಸಲು ಸುಮಾರು 40 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಮತದಾನ ಕೇಂದ್ರದಲ್ಲಿ ಮತದಾರರ ಅನುಕೂಲಕ್ಕಾಗಿ ಕುಡಿಯುವ ನೀರು ಸೇರಿ ಅಗತ್ಯ ವ್ಯವಸ್ಥೆ ಮಾಡಲಾಗಿದ್ದು, ಮತಗಟ್ಟೆಗಳ ಸುತ್ತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ತ ಭದ್ರತೆ ಏರ್ಪಡಿಸಲಾಗಿದೆ.

ದೇಶದ 11 ರಾಜ್ಯ ಮತ್ತು ಕೇಂದ್ರಾಡಳಿತದ ಪ್ರದೇಶಗಳ 93 ಕ್ಷೇತ್ರಗಳಲ್ಲಿ ಮೂರನೇ ಹಂತದ ಮತದಾನ ಆರಂಭವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಗುಜರಾತ್‌ನ ಅಹಮದಾಬಾದ್‌ನಲ್ಲಿ ಮತದಾನ ಮಾಡಿದರು. ಮೂರನೇ ಹಂತದಲ್ಲಿ ಸುಮಾರು 120 ಮಹಿಳೆಯರು ಸೇರಿದಂತೆ 1,300ಕ್ಕೂ ಹೆಚ್ಚು ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. 8.39 ಕೋಟಿ ಮಹಿಳೆಯರು ಸೇರಿದಂತೆ 17.24 ಕೋಟಿ ಜನರು ಮತ ಚಲಾಯಿಸಲು ಅರ್ಹರಾಗಿದ್ದು, 18.5 ಲಕ್ಷ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. 1.85 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ದರೆ, ಬಿಎಸ್‌ಪಿ 9, ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳು 23, ಸ್ವತಂತ್ರ ಅಭ್ಯರ್ಥಿಗಳು 117 ಸೇರಿ ಒಟ್ಟು 227 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ. ಇದರಲ್ಲಿ 206 ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ. ಈ ಕ್ಷೇತ್ರಗಳಲ್ಲಿ 2,59,52,958 ಮತದಾರರಿದ್ದು, 1,29,48,978 ಪುರುಷ, 1,29,64,570 ಮಹಿಳಾ ಹಾಗೂ 1,945 ತೃತೀಯ ಲಿಂಗಿ ಮತದಾರರು ಇದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅತೀ ಕಡಿಮೆ 16,41,156 ಮತದಾರರಿದ್ದರೆ, ಅತಿ ಹೆಚ್ಚು ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ 20,98,202 ಮತದಾರರಿದ್ದಾರೆ.

ಇದನ್ನೂ ಓದಿ: Lok Sabha Election 2024: ಮೂರನೇ ಹಂತದ ಮತದಾನ ಆರಂಭ; ಇಂದು ವೋಟು ಮಾಡಲಿದ್ದಾರೆ ಮೋದಿ, ಅಮಿತ್‌ ಶಾ

Continue Reading
Advertisement
Dharamsala Stadium
ಕ್ರೀಡೆ1 min ago

Dharamsala Stadium: ಧರ್ಮಶಾಲಾದಲ್ಲಿ ಅನಾವರಣಗೊಂಡ ದೇಶದ ಮೊದಲ ಹೈಬ್ರಿಡ್‌ ಕ್ರಿಕೆಟ್ ಪಿಚ್​ನ ವಿಶೇಷತೆ ಏನು?

Gold rate today
ಚಿನ್ನದ ದರ1 min ago

Gold Rate Today: ಚಿನ್ನದ ಬೆಲೆ ಗ್ರಾಂಗೆ ₹33 ಏರಿಕೆ; 24 ಕ್ಯಾರಟ್‌ ಬಂಗಾರದ ದರ ಇಂದು ₹7,238

Narendra Modi
ದೇಶ9 mins ago

Narendra Modi: “ನಾನು ಇಸ್ಲಾಂ ವಿರೋಧಿ ಅಲ್ಲ, ಆದರೆ ಮುಸ್ಲಿಮರು…”; ಕಾಂಗ್ರೆಸ್‌ ಆರೋಪದ ಬಗ್ಗೆ ಮೋದಿ ಹೇಳಿದ್ದೇನು?

Job Alert
ಉದ್ಯೋಗ42 mins ago

Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

LIQUID NITROGEN
ಬೆಂಗಳೂರು44 mins ago

Liquid Nitrogen : ಕಾಟನ್ ಕ್ಯಾಂಡಿ ಬಳಿಕ ಕರ್ನಾಟಕದಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ನಿಷೇಧ

IPL 2024
ಕ್ರೀಡೆ48 mins ago

IPL 2024: ಬಸ್‌ ಕಂಡಕ್ಟರ್‌ಗಳಿಗೆ ವಿಶೇಷ ಉಡುಗೊರೆ ನೀಡಿದ ಚೆನ್ನೈ ಸೂಪರ್​ ಕಿಂಗ್ಸ್

prajwal ravanna case dk shivakumar poster
ಪ್ರಮುಖ ಸುದ್ದಿ1 hour ago

Prajwal Revanna Case: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಪೋಸ್ಟರ್ ವಾರ್‌

Naxal activities
ದೇಶ1 hour ago

Naxal activities: 6 ಕುಕ್ಕರ್‌ ಬಾಂಬ್‌, IED ಸ್ಫೋಟಕಗಳು ಪತ್ತೆ; ತಪ್ಪಿದ ಭಾರೀ ನಕ್ಸಲ್‌ ಅಟ್ಯಾಕ್‌

Rohit Sharma
ಕ್ರೀಡೆ2 hours ago

Rohit Sharma: ರೋಹಿತ್ ಶರ್ಮ​ ಕಣ್ಣೀರಿಗೆ ಅಸಲಿ ಕಾರಣ ಇದಂತೆ!

lok sabha election 2024 voting second phase
ಪ್ರಮುಖ ಸುದ್ದಿ2 hours ago

Lok Sabha Election 2024: ಮೊದಲೆರಡು ಗಂಟೆಗಳ ಮತದಾನ ನಿರೀಕ್ಷೆಗಿಂತ ಕಡಿಮೆ, ಇನ್ನೂ ಇಳಿಯುವ ಆತಂಕ; ಎಲ್ಲಿ ಎಷ್ಟು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ17 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ18 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ18 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ4 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌