Viral Video: ಬಸ್ಸು ಮತ್ತು ಲಾರಿ ಮಧ್ಯೆ ಸ್ಕೂಟರ್‌ ಅಪ್ಪಚ್ಚಿ, ಸವಾರರ ಕಣ್ ಮುಂದೆ ಯಮ ರಪ್ ಅಂತ ಪಾಸ್ ಆದ! - Vistara News

ವೈರಲ್ ನ್ಯೂಸ್

Viral Video: ಬಸ್ಸು ಮತ್ತು ಲಾರಿ ಮಧ್ಯೆ ಸ್ಕೂಟರ್‌ ಅಪ್ಪಚ್ಚಿ, ಸವಾರರ ಕಣ್ ಮುಂದೆ ಯಮ ರಪ್ ಅಂತ ಪಾಸ್ ಆದ!

ಕೇರಳದಲ್ಲಿ ವಿದ್ಯಾರ್ಥಿಗಳು ಓಡಿಸುತ್ತಿದ್ದ ಸ್ಕೂಟರ್‌ ಬಸ್ಸು ಮತ್ತು ಲಾರಿಯ ಮಧ್ಯೆ ಸಿಲುಕಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Viral Video) ಆಗಿದೆ.

VISTARANEWS.COM


on

accident in kerala
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಿರುವನಂತಪುರಂ: ರಸ್ತೆಗಳಲ್ಲಿ ವಾಹನ ಚಾಲನೆ ಮಾಡುವಾಗ ಅತ್ಯಂತ ಎಚ್ಚರಿಕೆಯಿಂದ ಇರಬೇಕು ಎಂದು ಹಲವಾರು ಜಾಗೃತಿ ಅಭಿಯಾನಗಳನ್ನು ನಡೆಸಲಾಗುತ್ತಲೇ ಇರುತ್ತದೆ. ಆದರೂ ಕೆಲವರು ನಿಯಮ ಮೀರಿ ವಾಹನ ಚಲಾಯಿಸಿ ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತಾರೆ. ಅದೇ ರೀತಿಯಲ್ಲಿ ಕೇರಳದಲ್ಲಿ ಇಬ್ಬರು ವಿದ್ಯಾರ್ಥಿಗಳು ಬಸ್ಸನ್ನು ಓವರ್‌ ಟೇಕ್‌ ಮಾಡಲು ಹೋಗಿ ಅಪಾಯಕ್ಕೆ ಸಿಲುಕಿದ ಘಟನೆ ನಡೆದಿದೆ. ಅದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Viral Video) ಆಗಿದೆ.

ಕೋಯಿಕ್ಕೋಡ್‌ನಲ್ಲಿ ಈ ಘಟನೆ ನಡೆದಿದೆ. ಸ್ಕೂಲ್‌ ಬಸ್ಸೊಂದು ರಸ್ತೆಯಲ್ಲಿ ಸಾಗುತ್ತಿದ್ದು, ಅದರ ಹಿಂದೆಯೇ ಇಬ್ಬರು ವಿದ್ಯಾರ್ಥಿಗಳು ಸ್ಕೂಟರ್‌ನಲ್ಲಿ ಬರುತ್ತಿರುತ್ತಾರೆ. ಕಿರಿದಾದ ದಾರಿ ಅದಾಗಿರುತ್ತದೆಯಾದರೂ ಬಸ್ಸನ್ನು ಓವರ್‌ ಟೇಕ್‌ ಮಾಡಿಬಿಡೋಣ ಎಂದು ಅವರು ಸ್ಕೂಟಿಯನ್ನು ಬಸ್ಸಿನ ಪಕ್ಕದಲ್ಲಿ ತರುತ್ತಾರೆ. ಅಷ್ಟರಲ್ಲಿ ಇನ್ನೊಂದು ಬದಿಯಿಂದ ಲಾರಿಯೊಂದು ಬರುತ್ತದೆ. ಹಾಗಾಗಿ ವಿದ್ಯಾರ್ಥಿಗಳಿದ್ದ ಸ್ಕೂಟರ್‌ ಲಾರಿ ಮತ್ತು ಬಸ್ಸಿನ ಮಧ್ಯ ಸಿಲುಕಿಕೊಳ್ಳುತ್ತದೆ.

ಇದನ್ನೂ ಓದಿ: Viral News: ರಿಂಕು ಸಿಂಗ್​ ಹಿಂದೆ ಬಿದ್ದ ಟೀಮ್​ ಇಂಡಿಯಾ ಸ್ಟಾರ್​ ಕ್ರಿಕೆಟಿಗನ ತಂಗಿ; ಇನ್​ಸ್ಟಾದಲ್ಲಿ ರಿವೀಲ್ ಆಯ್ತು ಪ್ರೇಮ್​ ಕಹಾನಿ​
ಸ್ಕೂಟರ್‌ಗೆ ಲಾರಿ ತಾಕುತ್ತಿದ್ದಂತೆಯೇ ಸ್ಕೂಟರ್‌ ರಸ್ತೆಗೆ ಬೀಳುತ್ತದೆ. ಅದರಲ್ಲಿದ್ದ ಇಬ್ಬರೂ ವಿದ್ಯಾರ್ಥಿಗಳು ಕೆಳಗೆ ಬೀಳುತ್ತಾರೆ. ಅವರು ಧರಿಸಿದ್ದ ಹೆಲ್ಮೆಟ್‌ ಕೂಡ ಸಾಕಷ್ಟು ದೂರ ಹೋಗಿ ಬೀಳುತ್ತದೆ. ಅದೃಷ್ಟವಶಾತ್‌ ವಿದ್ಯಾರ್ಥಿಗಳಿಗೆ ಯಾವುದೇ ಗಂಭೀರ ಪೆಟ್ಟು ಬಿದ್ದಿರುವುದಿಲ್ಲ. ಸ್ಕೂಟರ್‌ ಬಿದ್ದಿದ್ದು ತಿಳಿದ ತಕ್ಷಣ ಬಸ್ಸು ಮತ್ತು ಲಾರಿಯ ಚಾಲಕರಿಬ್ಬರೂ ವಾಹನ ನಿಲ್ಲಿಸಿ ಅವರ ಸಹಾಯಕ್ಕೆ ಮುಂದಾಗುತ್ತದೆ.


ಈ ದೃಶ್ಯಗಳು ಶಾಲೆಯ ಬಸ್ಸಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆ ವಿಡಿಯೊ ಸಾಮಾಜಿಕ ಜಾಲತಾಣಗಳ ತುಂಬೆಲ್ಲ ಹರಿದಾಡಿದ್ದು, ವೈರಲ್‌ ಆಗಿದೆ.

ಇತ್ತೀಚೆಗೆ ಕೇರಳದ ಪಥನಂತಿಟ್ಟಾದಲ್ಲಿ ಸರ್ಕಾರಿ ಸ್ವಾಮ್ಯದ ಕೆಎಸ್‌ಆರ್‌ಟಿಸಿ ಬಸ್ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಚರ್ಚ್‌ಗೆ ಅಪ್ಪಳಿಸಿತ್ತು. ಅದರಲ್ಲಿ ಒಟ್ಟು 16 ಮಂದಿಗೆ ಗಾಯವಾಗಿತ್ತು. ಆ ದೃಶ್ಯ ಕೂಡ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ವೈರಲ್ ನ್ಯೂಸ್

ನೆಚ್ಚಿನ ಶ್ವಾನ ಮರಿ ನಾಪತ್ತೆಯಾದ ಕೊರಗಿನಿಂದ ಆತ್ಮಹತ್ಯೆಗೆ ಶರಣಾದ 12 ವರ್ಷದ ಬಾಲಕಿ

Crime News: ಆಘಾತಕಾರಿ ಘಟನೆಯೊಂದರಲ್ಲಿ ಹರಿಯಾಣದಲ್ಲಿ 12 ವರ್ಷದ ಬಾಲಕಿಯೊಬ್ಬಳು ತನ್ನ ಪ್ರೀತಿಯ ಶ್ವಾನ ನಾಪತ್ತೆಯಾದ ಕೊರಗಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿ ಈ ಕೃತ್ಯ ಎಸಗಿದ್ದಳು. ನಾಯಿ ಮರಿ 5 ದಿನಗಳ ಹಿಂದೆ ನಾಪತ್ತೆಯಾಗಿತ್ತು. ಬಾಲಕಿ ಮತ್ತು ಶ್ವಾನದ ಮಧ್ಯೆ ಮೂರು ತಿಂಗಳಿಂದ ಉತ್ತಮ ಬಾಂಧವ್ಯ ರೂಪುಗೊಂಡಿತ್ತು ಎಂದು ಮನೆಯವರು ತಿಳಿಸಿದ್ದಾರೆ. ಶ್ವಾನಮರಿ ನಾಪತ್ತೆಯಾದಾಗಿನಿಂದ ಆಕೆ ಖಿನ್ನತೆಗೆ ಜಾರಿದ್ದಳು ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Crime News
Koo

ಚಂಡಿಗಢ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂತು ಎಂಬ ಕಾರಣಕ್ಕೆ, ಅಪ್ಪ-ಅಮ್ಮ ಬೈದರು, ಮೊಬೈಲ್​ ನೋಡಬೇಡ ಎಂದು ಹೇಳಿದರು ಎಂಬಿತ್ಯಾದಿ ಕ್ಷುಲ್ಲಕ ಕಾರಣಕ್ಕೆ ಮಕ್ಕಳು / ಹದಿಹರೆಯದವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳನ್ನು ಕೇಳಿದ್ದೇವೆ. ಇದೂ ಕೂಡ ಅಂತಹದ್ದೇ ಮಾದರಿಯ ಘಟನೆ. ಆಘಾತಕಾರಿ ಘಟನೆಯೊಂದರಲ್ಲಿ ಹರಿಯಾಣದಲ್ಲಿ 12 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಪ್ರೀತಿಯ ಶ್ವಾನ ನಾಪತ್ತೆಯಾದುದೇ ಆಕೆಯ ಆತ್ಮಹತ್ಯೆಗೆ ಕಾರಣ ಎಂದು ಮೂಲಗಳು ತಿಳಿಸಿವೆ. ಶನಿವಾರ (ಏಪ್ರಿಲ್‌ 27) ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೊರಗೆ ಹೋಗಿದ್ದ ತಾಯಿ ಬಂದ ಕೂಡಲೇ ಇದನ್ನು ಗಮನಿಸಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಈ ವೇಳೆ ಆಕೆ ಮೃತಪಟ್ಟಿದ್ದಳು (Crime News).

ʼʼಕೆಲವು ದಿನಗಳ ಹಿಂದೆ ನಾಪತ್ತೆಯಾದ ನೆಚ್ಚಿನ ಶ್ವಾನ ಇನ್ನೂ ಪತ್ತೆಯಾಗದ ಕೊರಗಿನಿಂದ 12 ವರ್ಷದ ಬಾಲಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೆಲವು ದಿನಗಳಿಂದ ಆಕೆ ಈ ವಿಚಾರದಲ್ಲಿ ಕೊರಗುತ್ತಿದ್ದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆʼʼ ಎಂದು ಪೊಲೀಸರು ಹೇಳಿದ್ದಾರೆ.

ಘಟನೆಯ ವಿವರ

ʼʼಐದು ದಿನಗಳ ಹಿಂದೆ ನಮ್ಮ ಸಾಕು ನಾಯಿ ಕಾಣೆಯಾಗಿತ್ತು. ಈ ಶ್ವಾನ ಮತ್ತು ಬಾಲಕಿಯ ಮಧ್ಯೆ ಸುಮಾರು 3 ತಿಂಗಳಿಂದ ಉತ್ತಮ ಬಾಂಧವ್ಯ ರೂಪುಗೊಂಡಿತ್ತುʼʼ ಎಂದು ಮನೆಯವರು ತಿಳಿಸಿದ್ದಾರೆ. ʼʼಶ್ವಾನ ಕಾಣೆಯಾದಾಗಿನಿಂದ ಆಕೆ ಖಿನ್ನತೆಗೆ ಒಳಗಾಗಿದ್ದಳು. ಬಳಿಕ ತೀವ್ರ ಚಿಂತೆಗೆ ಒಳಗಾಗಿದ್ದ ಅವಳು ಸರಿಯಾಗಿ ಆಹಾರವನ್ನೂ ಸೇವಿಸುತ್ತಿರಲಿಲ್ಲʼʼ ಎಂದು ಅವರು ವಿವರಿಸಿದ್ದಾರೆ. ಕುಟುಂಬಸ್ಥರು ಆಕೆಯನ್ನು ಸಮಾಧಾನಪಡಿಸಲು ಎಷ್ಟೇ ಪ್ರಯತ್ನಿಸಿದರೂ ನಾಯಿಮರಿಯನ್ನು ಕಳೆದುಕೊಂಡ 6ನೇ ತರಗತಿಯ ವಿದ್ಯಾರ್ಥಿನಿಯ ದುಃಖವನ್ನು ಕಡಿಮೆ ಮಾಡಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.

ಶನಿವಾರ ಸಂಜೆ ಬಾಲಕಿಯ ತಾಯಿ ಮತ್ತು ಸಹೋದರಿ ದಿನಸಿ ಖರೀದಿಗಾಗಿ ಮನೆಯಿಂದ ಹೊರ ಹೋಗಿದ್ದರು. ಮನೆಯಲ್ಲಿ ಒಬ್ಬಳೇ ಇದ್ದ ಬಾಲಕಿ ಈ ವೇಳೆ ಶಾಕಿಂಗ್‌ ನಿರ್ಧಾರ ಕೈಗೊಂಡಿದ್ದಾಳೆ. ನೇಣು ಬಿಗಿದುಕೊಂಡು ಜೀವ ಕಳೆದುಕೊಂಡಿದ್ದಾಳೆ. ಕೊನೆಯ ದಿನಗಳಲ್ಲಿ ಮಗಳ ದಿನಗಳನ್ನು ನೆನೆದು ತಾಯಿ ದುಃಖ ವ್ಯಕ್ತಪಡಿಸಿದ್ದಾರೆ. ʼʼಮೂರು ತಿಂಗಳಿಂದ ಆಕೆ ಮತ್ತು ಶ್ವಾನದ ಮಧ್ಯೆ ಅತ್ಯುತ್ತಮ ಬಾಂಧವ್ಯ ರೂಪುಗೊಂಡಿತ್ತು. ನಾಯಿ ಮರಿ ನಾಪತ್ತೆಯಾದಾಗಿನಿಂದ ಆಕೆ 5 ದಿನಗಳಿಂದ ಆಹಾರ ಸೇವಿಸುವುದನ್ನೇ ನಿಲ್ಲಿಸಿ ಬಿಟ್ಟಿದ್ದಳು. ನಿನ್ನೆ ನಾನು ತರಕಾರಿ ಖರೀದಿಗಾಗಿ ಹೊರ ಹೋಗಿದ್ದೆ. ಈ ವೇಳೆ ನಮ್ಮ ನೆರೆಯವರು ಕರೆ ಮಾಡಿ ಕೂಡಲೇ ಆಗಮಿಸುವಂತೆ ಹೇಳಿದ್ದರು. ಕೂಡಲೇ ಮನೆಗೆ ಧಾವಿಸಿ ಬಂದಿದ್ದೆ. ಈ ವೇಳೆ ಆಕೆ ಮೃತಪಟ್ಟಿದ್ದಳುʼʼ ಎಂದು ಬಾಲಕಿ ತಾಯಿ ನೋವಿನಿಂದ ಹೇಳಿದ್ದಾರೆ.

ಇದನ್ನೂ ಓದಿ: ಶಾಲೆಗೆ ಹೋಗದ್ದಕ್ಕೆ ಬೈದ ತಾಯಿ, ಬಾಲಕ ಆತ್ಮಹತ್ಯೆ

ವರ್ಷಗಳ ಹಿಂದೆ ಮಹಾರಾಷ್ಟ್ರದ ಭಯಂದರ್ ಎಂಬಲ್ಲಿ 13 ವರ್ಷದ ಬಾಲಕನೊಬ್ಬ ಅತ್ಯಂತ ಕ್ಷುಲ್ಲಕ ಮತ್ತು ವಿಚಿತ್ರ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದ. ‘ತನ್ನ ತಲೆಕೂದಲನ್ನು ಅತ್ಯಂತ ಚಿಕ್ಕದಾಗಿ ಕತ್ತರಿಸಿಬಿಟ್ಟರು’ ಎಂಬ ಕಾರಣಕ್ಕೆ ಅಪಾರ್ಟ್​ಮೆಂಟ್​​ನ 16ನೇ ಮಹಡಿಯಲ್ಲಿರುವ ತಮ್ಮ ಮನೆಯಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದ.

Continue Reading

ವೈರಲ್ ನ್ಯೂಸ್

Viral Video: ಹೆಂಡತಿಯನ್ನ ಥಳಿಸಿ ಫ್ಲೈ ಓವರ್‌ನಿಂದ ತಳ್ಳೋಕೆ ಯತ್ನಿಸಿದ ಪಾಪಿ ಗಂಡ; ಆಮೇಲೆ ಆಗಿದ್ದೇನು?

Viral Video: ನಡು ರಸ್ತೆಯಲ್ಲಿ ನಿಂತು ಹೆಂಡತಿ ಜೊತೆ ಜಗಳ ಮಾಡ್ತಿದ್ದ ವ್ಯಕ್ತಿ, ಇದ್ದಕ್ಕಿದ್ದಂತೆ ಆಕೆಯನ್ನು ಚೆನ್ನಾಗಿ ಥಳಿಸಿ ಫ್ಲೈ ಓವರ್‌ ನಿಂದ ಕೆಳಗೆ ಎಸೆಯಲು ಯತ್ನಿಸಿದ ಆಘಾತಕಾರಿ ಘಟನೆ ಚೆನ್ನೈ ನಲ್ಲಿ ನಡೆದಿದೆ.

VISTARANEWS.COM


on

Koo

ತಮಿಳುನಾಡು:ಕೆಲವೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಆಗುವ ವಿಡಿಯೋಗಳು ಆತಂಕಕ್ಕೀಡು ಮಾಡುತ್ತವೆ. ಅಂತಹದ್ದೇ ಮತ್ತೊಂದು ವಿಡಿಯೋ (Viral Video) ಇದೀಗ ಬಹಳ ಸದ್ದ ಮಾಡ್ತಿದೆ. ನಡು ರಸ್ತೆಯಲ್ಲಿ ನಿಂತು ಹೆಂಡತಿ ಜೊತೆ ಜಗಳ ಮಾಡ್ತಿದ್ದ ವ್ಯಕ್ತಿ, ಇದ್ದಕ್ಕಿದ್ದಂತೆ ಆಕೆಯನ್ನು ಚೆನ್ನಾಗಿ ಥಳಿಸಿ ಫ್ಲೈ ಓವರ್‌ (Flyover) ನಿಂದ ಕೆಳಗೆ ಎಸೆಯಲು ಯತ್ನಿಸಿದ ಆಘಾತಕಾರಿ ಘಟನೆ ಚೆನ್ನೈ(Chennai)ನಲ್ಲಿ ನಡೆದಿದೆ. ಕೊಯಂಬೆಡು ಸೇತುವೆ ಬಳಿ ಈ ದುರ್ಘಟನೆ ಸಂಭವಿಸಿದ್ದು, ರೋಶನ್‌ ಎಂಬಾತ ಎಲ್ಲರೆದುರು ತನ್ನ ಹೆಂಡತಿಯನ್ನು ಚೆನ್ನಾಗಿ ಥಳಿಸಿ, ಆಕೆಯನ್ನು ಎತ್ತಿ ಸೇತುವೆಯಿಂದ ಕೆಳಗೆ ಹಾಕಲು ಯತ್ನಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇನ್ನು ರೋಶನ್‌ನ ಈ ಕೃತ್ಯವನ್ನು ಗಮನಿಸಿದ ವ್ಯಕ್ತಿಯೊಬ್ಬರು ಈ ವಿಡಿಯೋ ಮಾಡಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ರೋಶನ್‌ನನ್ನು ಹಿಡಿಯುವ ಪ್ರಯತ್ನ ಮಾಡಿದ್ದರು. ಪೊಲೀಸರು ಬರುತ್ತಿರುವುದನ್ನು ಕಂಡೊಡನೇ ರೋಶನ್‌, ಹೆಂಡತಿಯನ್ನು ಬಲವಂವಾಗಿ ಬೈಕ್‌ನಲ್ಲಿ ಕೂರಿಸಿಕೊಂಡು ಸ್ಥಳದಿಂದ ಎಸ್ಕೇಪ್‌ ಆಗಿದ್ದಾನೆ

ಈ ಬಗ್ಗೆ ಎಕ್ಸ್‌ ನಲ್ಲಿ ಎಐಎಡಿಎಂಕೆ ಪಕ್ಷದ ಸದಸ್ಯ ಡಾ. ಕಾರ್ತಿಕ್‌ ಕುಪ್ಪನ್‌, ಯುವಕನೋರ್ವ ಚೆನ್ನೈನಲ್ಲಿ ಪತ್ನಿಯನ್ನು ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಅಲ್ಲದೇ ಫ್ಲೈ ಓವರ್‌ನಿಂದ ಆಕೆಯನ್ನು ತಳ್ಳಿ ಕೊಲೆಗೆ ಯತ್ನಿಸಿದ್ದಾನೆ. ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳತ್ತದೆಯೇ ಎಂದು ಪೋಸ್ಟ್‌ ಮಾಡಿ ವಿಡಿಯೋ ಶೇರ್‌ ಮಾಡಿದ್ದರು. ಇದಕ್ಕೆ ತಕ್ಷಣ ಸ್ಪಂದಿಸಿದ ಗ್ರೇಟರ್‌ ಚೆನ್ನೈ ಪೊಲೀಸರು ಆರೋಪಿಯನ್ನು ಅರೆಸ್ಟ್‌ ಮಾಡಿ ವಿರುದ್ಧ ಎಫ್‌ ಐಆರ್‌ ದಾಖಸಿದ್ದಾರೆ.

ಕೆಲವು ತಿಂಗಳ ಹಿಂದೆ ಉತ್ತರ ಪ್ರದೇಶದಲ್ಲೂ ಗಂಡ-ಹೆಂಡತಿ ಜಗಳವು ಮಾರುಕಟ್ಟೆವರೆಗೆ ತಲುಪಿತ್ತು. ಹೆಂಡತಿ ಮೇಲೆ ಕುಪಿತಗೊಂಡಿದ್ದ ಗಂಡನು ತುಂಬಿದ ಮಾರುಕಟ್ಟೆಯಲ್ಲಿ ಪತ್ನಿಗೆ ಸುಮಾರು 19 ಬಾರಿ ಕತ್ತರಿಯಿಂದ ಇರಿಯುವ ಮೂಲಕ ಕ್ರೌರ್ಯ ಮೆರೆದಿದ್ದ. ಈ ಭೀಕರ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಭಾರಿ ವೈರಲ್‌ ಆಗಿದೆ. ಇನ್ನು ತುಂಬಿದ ಮಾರುಕಟ್ಟೆಯಲ್ಲಿ ಹೆಂಡತಿಗೆ ಇರಿದ ಪತಿ ಈಗ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾನೆ.

ಇದನ್ನೂ ಓದಿ:Viral Video: ಐಲ್ಯಾಂಡ್‌ನಲ್ಲಿ ಬಾಲಿವುಡ್‌ನ ಮಸ್ತ್‌ ಗೆರುವಾ ಡ್ಯಾನ್ಸ್‌ ರಿಮೇಕ್‌ ಮಾಡಿದ ಬೆಡಗಿ! ಲೊಕೇಶನ್‌ ಸೂಪರ್‌

ಸುಮನ್‌ ನಿಶಾದ್‌ ಎಂಬ ಮಹಿಳೆಯು ಲಖನೌ ನಗರದ ಕುತುಬ್‌ಪುರ ಪ್ರದೇಶ ವ್ಯಾಪ್ತಿಯ ಲಂಬೆಕೇಶ್ವರ ಪಾರ್ಕ್‌ನಲ್ಲಿ ತರಕಾರಿ ಖರೀದಿಸಲು ತೆರಳಿದ್ದಳು. ಆಕೆ ತರಕಾರಿ ಖರೀದಿಸುತ್ತಿರುವಾಗಲೇ ಪತಿ ಬ್ರಿಜ್‌ಮೋಹನ್‌ ನಿಶಾದ್‌ ಎಂಬಾತನು ಬಂದಿದ್ದಾನೆ. ಪತ್ನಿಯನ್ನು ಕಾಣುತ್ತಲೇ ಬ್ರಿಜ್‌ಮೋಹನ್‌ ನಿಶಾದ್‌ ಕುಪಿತಗೊಂಡಿದ್ದಾನೆ. ಕೂಡಲೇ ಪತ್ನಿಗೆ ಚಾಕು ಇರಿದಿದ್ದಾನೆ. ಎರಡು ಚಾಕುಗಳನ್ನು ಹಿಡಿದುಕೊಂಡಿದ್ದ ದುರುಳನು ಸುಮಾರು 19 ಬಾರಿ ಚಾಕು ಇರಿದಿದ್ದಾನೆ. ಅಲ್ಲಿದ್ದ ಜನ ಇದನ್ನು ಕಂಡು ದಂಗಾಗಿದ್ದು, ಯಾರೂ ಮಹಿಳೆಯನ್ನು ರಕ್ಷಿಸಿಲ್ಲ ಎಂದು ತಿಳಿದುಬಂದಿದೆ. ಬ್ರಿಜ್‌ಮೋಹನ್‌ ನಿಶಾದ್‌, ಹೆಂಡತಿಯ ವಿಚಾರದಲ್ಲಿ ವಿಪರೀತ ಅನುಮಾನ ಪಡುತ್ತಿದ್ದ. ಪತ್ನಿಯ ಶೀಲ ಶಂಕಿಸಿ ಅವರ ಜತೆ ಜಗಳವಾಡುತ್ತಿದ್ದ. ಕೊನೆಗೆ ಇದೇ ಕಾರಣಕ್ಕೆ ಆಕೆಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ಹೇಳಲಾಗಿತ್ತು.

Continue Reading

ದೇಶ

School Teacher: ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ ಶಿಕ್ಷಕಿ ಪುಂಡಾಟ; ನೆರೆಮನೆಯವರ ಮೇಲೂ ಹಲ್ಲೆ

School teacher: ಸರ್ಕಾರಿ ಶಾಲೆ ಶಿಕ್ಷಕಿಯೊಬ್ಬಳು ನೆರೆಮನೆಯವರ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ ಕಿಟಕಿ ಗ್ಲಾಸ್‌ ಒಡೆದಿರುವ ಘಟನೆ ಉತ್ತರಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ. ಈ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

VISTARANEWS.COM


on

Koo

ಉತ್ತರಪ್ರದೇಶ: ಸರ್ಕಾರಿ ಶಾಲೆ ಶಿಕ್ಷಕಿಯೊಬ್ಬಳು(School teacher) ನೆರೆಮನೆಯವರ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ ಕಿಟಕಿ ಗ್ಲಾಸ್‌ ಒಡೆದಿರುವ ಘಟನೆ ಉತ್ತರಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ. ಈ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದೆ. ಪಾರುಲ್‌ ಶರ್ಮಾ (Parul Sharma) ಎಂಬ ಶಿಕ್ಷಕಿ ಬೆಳಗ್ಗೆ 3 ಗಂಟೆ ಸುಮಾರಿಗೆ ಪ್ರಿಯಾ ಗೋಯಲ್‌ ಎಂಬಾಕೆಯ ಮನೆಯ ಕಾಂಪೌಂಡ್‌ ಒಳಗೆ ನುಗ್ಗಿ ತಾನು ತಂದಿದ್ದ ಬ್ಯಾಗ್‌ನಿಂದ ಇಟ್ಟಿಗೆ, ಕಲ್ಲುಗಳಿಂದ ಕಾರಿನ ವಿಂಡೋ ಗ್ಲಾಸ್‌ (Window glass) ಜಖಂಗೊಳಿಸಿದ್ದಾಳೆ. ಆಕ್ರೋಶದಿಂದ ಕಾರಿನ ಮೇಲೆ ಕಲ್ಲು ಎತ್ತಿ ಹಾಕುತ್ತಿರುವುದನ್ನು ವೈರಲ್‌ ಆಗಿರುವ ವಿಡಿಯೋದಲ್ಲಿ ಕಾಣಬಹುದಾಗಿದೆ. ಆಕೆ ಪಾರ್ಕಿಂಗ್‌ನಲ್ಲಿ ನಿಲ್ಲಿಸಲಾಗಿದ್ದ ಎಲ್ಲಾ ವಾಹನಗಳ ವಿಂಡೋ ಗ್ಲಾಸ್‌ಗಳನ್ನು ಪುಡಿಗಟ್ಟಿದ್ದಾಳೆ.

ಆಕೆಯ ಕೃತ್ಯ ಎಸಗುತ್ತಿದ್ದ ವೇಳೆ ಸದ್ದು ಕೇಳಿ ಎಚ್ಚರಗೊಂಡ ಪ್ರಿಯಾ ಗೋಯಲ್‌ ಹಾಗೂ ಆಕೆಯ ಕುಟುಂಬಸ್ಥರು ಪಾರುಲ್‌ಳನ್ನು ತಡೆಯಲು ಮುಂದಾಗಿದ್ದಾರೆ. ಆದರೂ ಅದನ್ನೂ ಲೆಕ್ಕಿಸದ ಪಾರುಲ್‌ ಪದೇ ಪದೇ ಕಲ್ಲಿನಿಂದ ಕಾರಿನ ಗ್ಲಾಸ್‌ ಪುಡಿ ಪುಡಿ ಮಾಡುತ್ತಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ಮತ್ತೊಂದು ವಿಡಿಯೋ ಕ್ಲಿಪಿಂಗ್‌ನಲ್ಲಿ ಆಕೆಗೆ ತಾಯಿಯೂ ಜೊತೆಗಿರುವುದನ್ನು ಕಾಣಬಹುದಾಗಿದೆ. ಅಷ್ಟೇ ಅಲ್ಲದೇ ಪಾರುಲ್‌ ಮನೆಯ ಬಾಗಿಲು ಒಡೆಯಲು ಕೂಡ ಯತ್ನಿಸಿದ್ದಾಳೆ.

ಇದನ್ನೂ ಓದಿ: Lok Sabha election 2024: ದಿಲ್ಲಿಯಲ್ಲಿ ಆಪ್‌-ಕಾಂಗ್ರೆಸ್‌ ಮೈತ್ರಿಯಲ್ಲಿ ಒಡಕು; ರಾಜ್ಯಾಧ್ಯಕ್ಷ ರಾಜೀನಾಮೆ

ಇದೀಗ ಪಾರುಲ್‌ ಕೃತ್ಯದ ವಿರುದ್ಧ ಪ್ರಿಯಾ ಗೋಯಲ್‌ ಪೊಲೀಸರಿಗೆ ದೂರು ನೀಡಿದ್ದು, ಕಾರಿನ ಗ್ಲಾಸ್‌ ಪುಡಿ ಮಾಡಿರುವ ಪಾರುಲ್‌ ಮನೆಯ ಗೇಟ್‌ ಲಾಕ್‌ ಒಡೆದು ತಮ್ಮ ಮೂರು ವರ್ಷದ ಮಗು ಸೇರಿದಂತೆ ಇತರೆ ಕುಟುಂಬಸ್ಥರ ಮೇಲೆ ದಾಳಿ ನಡೆಸಿದ್ದಾಳೆ. ಘಟನೆಯಲ್ಲಿ ಮಗು ಗಾಯಗೊಂಡಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಘಟನೆಗೆ ಸೂಕ್ತ ಕಾರಣ ಏನೆಂಬುದರ ಬಗ್ಗೆ ತನಿಖೆ ನಡೆಸುತ್ತಿದೆ. ಮೇಲ್ನೋಟಕ್ಕೆ ಎರಡೂ ಕುಟುಂಬಗಳು ಹಲವು ದಿನಗಳಿಂದ ವೈಷಮ್ಯ ಹೊಂದಿದ್ದು, ಅದರ ಪರಿಣಾಮವಾಗಿಯೇ ಈ ಕೃತ್ಯ ನಡೆಸಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹಿರಿಯ ಪೊಲೀಸ್‌ ಅಧಿಕಾರಿ ಶಂಕರ್‌ ಪ್ರಸಾದ್‌ ಮಾಹಿತಿ ಪ್ರಕಾರ ಸದ್ಯ ಬುಲಂದ್‌ಶೆಹರ್‌ನಲ್ಲಿ ಈ ವಿಡಿಯೋ ಬಹಳ ವೈರಲ್‌ ಆಗುತ್ತಿದ್ದು, ಪಾರುಲ್‌ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಕೆ ವಿರುದ್ಧ ಅತಿಕ್ರಮಣ, ಆಸ್ತಿ-ಪಾಸ್ತಿ ನಾಶ ಮತ್ತು ಹಲ್ಲೆ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚೆಗೆ ಲಕ್ನೋದ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯೊಬ್ಬರು ಶಾಲೆಯಲ್ಲೇ ಫೇಶಿಯಲ್‌ ಮಾಡಿಕೊಳ್ಳುತ್ತಿದ್ದ ವಿಡಿಯೋ ಭಾರೀ ವೈರಲ್‌ ಆಗಿತ್ತು. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌ ಆಗ್ತಿದ್ದಂತೆ ವಿದ್ಯಾರ್ಥಿಗಳು ಪೋಷಕರು, ಜನಸಾಮಾನ್ಯರಿಂದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ವಿದ್ಯಾರ್ಥಿಗಳಿಗೆ ಊಟ ತಯಾರಿಸುವ ಕೋಣೆಯಲ್ಲಿ ಫೇಶಿಯಲ್ ಮಾಡಿಕೊಳ್ಳುತ್ತಿರುವುದನ್ನು ಕಂಡು ಸಹಾಯಕ ಶಿಕ್ಷಕಿ ವಿಡಿಯೊ ಮಾಡಿದ್ದರು. ಇದರಿಂದ ಕೋಪಗೊಂಡ ಮುಖ್ಯ ಶಿಕ್ಷಕಿ ಅವರನ್ನು ಹಿಗ್ಗಾಮುಗ್ಗಾ  ಥಳಿಸಿ, ಆಕೆಯ ಕೈಯನ್ನು ಕಚ್ಚಿ ಗಾಯಗೊಳಿಸಿದ್ದರು.

Continue Reading

ವೈರಲ್ ನ್ಯೂಸ್

Viral Video: ವಧುವಿಗೆ ಹೂಮಾಲೆ ಹಾಕಲು ವರ ಮಾಡಿರುವ ಕಿತಾಪತಿ ಏನು ನೋಡಿ!

Viral Video: ಮದುವೆ ಸಮಾರಂಭಗಳಲ್ಲಿ ಒಂದಲ್ಲ ಒಂದು ಎಡವಟ್ಟು ನಡೆದೇ ನಡೆಯುತ್ತೆ. ಇದರಲ್ಲಿ ಕೆಲವು ಗಂಭೀರ ರೂಪ ತಾಳಿದರೆ, ಇನ್ನು ಕೆಲವು ಎಲ್ಲರ ನಗೆಪಾಟಲಿಗೆ ಗುರಿಯಾಗುತ್ತದೆ. ಇಲ್ಲಿ ಸಿಕ್ಕಿರುವ ವಿಡಿಯೋವೊಂದು ಎಲ್ಲರೂ ನಗುವಂತೆ ಮಾಡಿದೆ.

VISTARANEWS.COM


on

By

Viral Video
Koo

ಮದುವೆ (wedding) ಮಂಟಪ ಸುಂದರವಾಗಿ ಅಲಂಕಾರಗೊಂಡಿತ್ತು. ವಧು ವರರು ಇಬ್ಬರೂ ವೇದಿಕೆಯಲ್ಲಿ ನಿಂತು ಒಂದೊಂದೇ ಶಾಸ್ತ್ರಗಳನ್ನು ಮಾಡುತ್ತಿದ್ದರು. ಇನ್ನೇನು ಹೂವಿನ ಮಾಲೆ (flower garland) ವಿನಿಮಯ ಮಾಡಿಕೊಳ್ಳಬೇಕಿತ್ತು. ವರನು (groom) ವಧುವಿಗೆ (bride) ಹೂವಿನ ಮಾಲೆ ಹಾಕಲು ಅವರಿಗೆ ಕುಳಿತು ಕೊಳ್ಳಲು ಇಟ್ಟಿದ್ದ ಸಿಂಹಾಸನದಿಂದ ಜಿಗಿದಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದ್ದು, ಎಲ್ಲರೂ ನಗುವಂತೆ ಮಾಡಿದೆ.

ಹಿಂದೂ ಸಂಪ್ರದಾಯದ ಮದುವೆಯಲ್ಲಿ ಹೂವಿನ ಮಾಲೆಯನ್ನು ಬದಲಾಯಿಸಿಕೊಳ್ಳುವ ಶಾಸ್ತ್ರವಿದೆ. ಈ ಸಂದರ್ಭದಲ್ಲಿ ವಧು ವರರು ಇಬ್ಬರಿಗೂ ಸಾಕಷ್ಟು ಸವಾಲುಗಳನ್ನು ಹತ್ತಿರದ ಸಂಬಂಧಿ, ಸ್ನೇಹಿತರು ತಂದೊಡ್ಡುತ್ತಾರೆ. ಅಂತೆಯೇ ಇಲ್ಲಿ ವಧು ಮತ್ತು ವರರು ಹೂವಿನ ಹಾರಗಳನ್ನು ವಿನಿಮಯ ಮಾಡಿಕೊಳ್ಳುವಾಗ ವಧುವಿನ ಕುಟುಂಬದವರು ವಧುವನ್ನು ಎತ್ತಿ ಹಿಡಿದು ವರನ ಮುಂದೆ ಸವಾಲು ಹಾಕಿದರು.

ಹಲವು ಬಾರಿ ವರ ಮಾಲೆ ಹಾಕಲು ಪ್ರಯತ್ನಿಸುತ್ತಾನೆ. ಆದರೆ ವಿಫಲನಾಗುತ್ತಾನೆ. ಕೊನೆಗೂ ವರನು ತನ್ನ ವಧುವನ್ನು ಗೆಲ್ಲುವ ಮಾರ್ಗವನ್ನು ಕಂಡುಕೊಂಡಿದ್ದಾನೆ. ಇದರ ವಿಡಿಯೋ ಎಕ್ಸ್ ನಲ್ಲಿ ಭಾರೀ ವೈರಲ್ ಆಗಿದ್ದು, ಇದಕ್ಕೆ ಸಾಕಷ್ಟು ಮಂದಿ ನೆಟ್ಟಿಗರು ಕಾಮೆಂಟ್ ಕೂಡ ಮಾಡಿದ್ದಾರೆ.

ಇದನ್ನೂ ಓದಿ: Viral News: ಸೈಕಲ್‌ ಸವಾರನಿಗೆ ಡಿಕ್ಕಿ ಹೊಡೆದು 2 ಕಿ.ಮೀ. ಎಳೆದೊಯ್ದ ಪಿಕ್‌ಅಪ್‌; ಶಾಕಿಂಗ್‌ ವಿಡಿಯೊ ಇಲ್ಲಿದೆ

ಏನಿದೆ ವಿಡಿಯೋದಲ್ಲಿ?

ಈ ವಿಡಿಯೋದಲ್ಲಿ ಸೆರೆಯಾಗಿರುವಂತೆ ವಧು ಈಗಾಗಲೇ ತನ್ನ ಗಂಡನ ಕುತ್ತಿಗೆಗೆ ಹೂವಿನ ಹಾರವನ್ನು ಹಾಕಿದ್ದಳು. ಈಗ ವರನ ಸರದಿ. ವಧುವಿನ ಸಂಬಂಧಿಗಳು ಅವಳನ್ನು ಎತ್ತಿ ಹಿಡಿದು ವರನಿಗೆ ಹೂಮಾಲೆ ಹಾಕುವ ಸವಾಲು ಹಾಕುತ್ತಾರೆ.


ವರನು ಮದುವೆಯ ಸಿಂಹಾಸನದ ಮೇಲೇರಿ ಜಿಗಿದ ಯಶಸ್ವಿಯಾಗಿ ವಧುವಿನ ಕುತ್ತಿಗೆಗೆ ಹಾರವನ್ನು ಹಾಕಿದನು. ವಧುವಿನ ಜೊತೆಗೆ ಸಂಬಂಧಿಕರು ತಮ್ಮ ಸಮತೋಲನವನ್ನು ಕಳೆದುಕೊಳ್ಳುತ್ತಾರೆ. ಪರಿಣಾಮವಾಗಿ ಎಲ್ಲರೂ ವೇದಿಕೆಯ ಮೇಲೆ ಬಿದ್ದರು. ಕೊನೆಯಲ್ಲಿ, ವರನು ಹೆಮ್ಮೆಯಿಂದ ನಿಂತಿರುವಾಗ ವಧು ನಕ್ಕಳು.

ಸರಿತಾ ಸರವಾಗ್ ಎಂಬವರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಸಾಕಷ್ಟು ನೆಟ್ಟಿಗರು ಕಾಮೆಂಟ್ ಕೂಡ ಮಾಡಿದ್ದು, ಸಾಕಷ್ಟು ಮಂದಿ ತಾವು ನೋಡಿರುವ, ಅನುಭವದ ಸಂಗತಿಗಳನ್ನು ಹಂಚಿಕೊಂಡಿದ್ದಾರೆ.

ಕಳೆದ ವರ್ಷ ಇದೇ ರೀತಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಹೂವಿನ ಮಾಲೆ ಹಾಕುವಾಗ ವರನ ತಂಡದ ವ್ಯಕ್ತಿಯೊಬ್ಬರು ಅವನನ್ನು ಮೇಲೆತ್ತುತ್ತಾನೆ. ಆಗ ಆತ ವಧುವಿನ ಮೇಲೆ ಬೀಳುವುದರಲ್ಲಿದ್ದ. ಆದರೆ ವಧುವಿನ ಸಮಯಪ್ರಜ್ಞೆಯಿಂದ ಘಟನೆಯು ದುರಂತ ತಿರುವು ಪಡೆಯುವುದು ತಪ್ಪಿತ್ತು.

Continue Reading
Advertisement
Arecanut cultivation
ಚಿತ್ರದುರ್ಗ16 mins ago

Arecanut Cultivation: ಒಣಗುತ್ತಿರುವುದು ಅಡಿಕೆ ಮರಗಳಲ್ಲ ರೈತರ ಬದುಕು!

IPL 2024
ಕ್ರೀಡೆ42 mins ago

IPL 2024: ಗೆಲುವಿನಲ್ಲೂ ನೂತನ ದಾಖಲೆ ಬರೆದ ಆರ್​ಸಿಬಿ

PUC Exam 2024
ಕರ್ನಾಟಕ43 mins ago

PUC Exam 2024: ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ!

Money Guide
ಮನಿ-ಗೈಡ್53 mins ago

Money Guide: ಫೊರೆಕ್ಸ್‌ ಕಾರ್ಡ್‌ V/S ಕ್ರೆಡಿಟ್‌ ಕಾರ್ಡ್‌: ವಿದೇಶ ಪ್ರವಾಸಕ್ಕೆ ಯಾವುದು ಸೂಕ್ತ?

lehar singh siroya
ದಾವಣಗೆರೆ1 hour ago

Lehar Singh Siroya: ಹರಿಹರದ ಪಂಚಮಸಾಲಿ ಜಗದ್ಗುರು ಪೀಠಕ್ಕೆ ರಾಜ್ಯಸಭಾ ಸದಸ್ಯ ಲೆಹರ್​ಸಿಂಗ್ ಭೇಟಿ

Car Accident
ಬೆಂಗಳೂರು1 hour ago

Car Accident: ಮಾದಾವರ ಟೋಲ್‌ಗೇಟ್ ಬಳಿ ಕಾರು ಅಪಘಾತ ಪ್ರಕರಣ; ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಸಾವು

CET
ಕರ್ನಾಟಕ2 hours ago

CET 2024: ಸಿಇಟಿ ಮರು ಪರೀಕ್ಷೆಯೋ? ಗ್ರೇಸ್‌ ಮಾರ್ಕ್ಸ್‌ ಭಾಗ್ಯವೋ? ನಾಳೆ ನಿರ್ಧಾರ ಪ್ರಕಟ?

YAJAMANA PREMIER LEAGUE SEASON-3 (2)
ಕ್ರೀಡೆ2 hours ago

YAJAMANA PREMIER LEAGUE SEASON-3: ಈ ಬಾರಿ ಟಿ10 ಮಾದರಿಯಲ್ಲಿ ನಡೆಯಲಿದೆ ಯಜಮಾನ ಪ್ರೀಮಿಯರ್ ಲೀಗ್​

Lok Sabha Election 2024
Lok Sabha Election 20242 hours ago

Lok Sabha Election 2024: ಒವೈಸಿ ಪ್ರಕಾರ ಮುಸ್ಲಿಮರೇ ಹೆಚ್ಚು ಕಾಂಡೋಮ್ ಬಳಸುತ್ತಾರಂತೆ!

Virat Kohli
ಕ್ರಿಕೆಟ್2 hours ago

Virat Kohli: ಟೀಕೆಗಳಿಗೆ ಬಹಿರಂಗವಾಗಿಯೇ ತಿರುಗೇಟು ನೀಡಿದ ಕಿಂಗ್​ ಕೊಹ್ಲಿ​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20246 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20248 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202410 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202410 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ13 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ18 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌