ರಾಹುಲ್ ಗಾಂಧಿಯಲ್ಲಿ ಬಿನ್​ ಲಾಡೆನ್​ನನ್ನು ಕಂಡ ಬಿಜೆಪಿ ನಾಯಕ; ಪ್ರಧಾನಿಯಾಗಲ್ಲ ಬಿಡಿ ಎಂದು ವ್ಯಂಗ್ಯ - Vistara News

ದೇಶ

ರಾಹುಲ್ ಗಾಂಧಿಯಲ್ಲಿ ಬಿನ್​ ಲಾಡೆನ್​ನನ್ನು ಕಂಡ ಬಿಜೆಪಿ ನಾಯಕ; ಪ್ರಧಾನಿಯಾಗಲ್ಲ ಬಿಡಿ ಎಂದು ವ್ಯಂಗ್ಯ

ಬಿಜೆಪಿ ಮುಖ್ಯಸ್ಥ ಸಾಮ್ರಾಟ್ ಚೌಧರಿ ಅವರು ಇಂದು ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆ ಆಯೋಜಿಸಿದ್ದರು. ಈ ವೇಳೆ ಮಾತನಾಡಿದ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Congress Leader Rahul Gandhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಾಟ್ನಾ: ಮೊದಲೆಲ್ಲ ಗಡ್ಡವಿಲ್ಲದೆ, ಕ್ಲೀನ್​ ಶೇವ್​ ಲುಕ್​​ನಲ್ಲಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Congress Leader Rahul Gandhi) ಈಗ ಗಡ್ಡ ತೆಗೆಯುವುದಿಲ್ಲ. ಭಾರತ್​ ಜೋಡೋ ಯಾತ್ರೆ (Bharat Jodo yatra) ಮುಗಿಯುವಷ್ಟರಲ್ಲಂತೂ ಅವರ ಗಡ್ಡ ಆಕಾರ, ಆಕೃತಿ ಕಳೆದುಕೊಂಡಿತ್ತು. ಬಳಿಕ ಲಂಡನ್ ಪ್ರವಾಸದ ವೇಳೆ ರಾಹುಲ್ ಗಾಂಧಿ ಗಡ್ಡವನ್ನು ಟ್ರಿಮ್ ಮಾಡಿದ್ದರು. ಬರಬರುತ್ತ ರಾಹುಲ್ ಗಾಂಧಿಯ ಗಡ್ಡವನ್ನೇ ಮುಖ್ಯ ವಿಷಯವನ್ನಾಗಿಟ್ಟುಕೊಂಡು ಬಿಜೆಪಿಗರು ಅವರನ್ನು ಟೀಕಿಸಲು ಶುರು ಮಾಡಿದ್ದಾರೆ. ಇದೀಗ ಬಿಜೆಪಿ ಬಿಹಾರ ಘಟಕದ ಮುಖ್ಯಸ್ಥ ಸಾಮ್ರಾಟ್​ ಚೌಧರಿ ಅವರು ರಾಹುಲ್ ಗಾಂಧಿ ಗಡ್ಡವನ್ನು ಉಲ್ಲೇಖಿಸಿ, ಅವರನ್ನು ಅಲ್​ ಕೈದಾ ಉಗ್ರ ಸಂಘಟನೆ ಮುಖ್ಯಸ್ಥ, ಮೃತ ಒಸಮಾ ಬಿನ್ ಲಾಡೆನ್​ಗೆ ಹೋಲಿಸಿದ್ದಾರೆ. ಅಷ್ಟೇ ಅಲ್ಲ, ಗಡ್ಡಬಿಟ್ಟಾಕ್ಷಣ ದೇಶದ ಪ್ರಧಾನಮಂತ್ರಿ ಹುದ್ದೆ ಸಿಗುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಮುಖ್ಯಸ್ಥ ಸಾಮ್ರಾಟ್ ಚೌಧರಿ ಅವರು ಇಂದು ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆ ಆಯೋಜಿಸಿದ್ದರು. ಈ ವೇಳೆ ಮಾತನಾಡಿದ ಅವರು, ‘ರಾಹುಲ್ ಗಾಂಧಿಯವರು ಒಸಮಾ ಬಿನ್ ಲಾಡೆನ್​ನಂತೆ ಗಡ್ಡ ಬೆಳೆಸಿದ್ದಾರೆ. ಗಡ್ಡ ಬಿಟ್ಟರೆ ತಾನೂ ಪ್ರಧಾನಿ ಮೋದಿಯವರಂತೆ ಆಗುತ್ತೇನೆ ಎಂದುಕೊಂಡಿದ್ದಾರೆ. ಗಡ್ಡ ಬಿಟ್ಟ ತಕ್ಷಣ ಪ್ರಧಾನಿ ಹುದ್ದೆ ಸಿಗುವುದಿಲ್ಲ’ ಎಂದು ವ್ಯಂಗ್ಯವಾಡಿದ್ದಾರೆ. ಈ ಹಿಂದೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ಶರ್ಮಾ ಅವರು ಕೂಡ ರಾಹುಲ್ ಗಾಂಧಿ ಗಡ್ಡದ ಬಗ್ಗೆ ಟೀಕಿಸಿದ್ದರು. ರಾಹುಲ್ ಗಾಂಧಿಯವರನ್ನು, ಇರಾಕ್ ಸರ್ವಾಧಿಕಾರಿಯಾಗಿದ್ದ ಸದ್ದಾಂ ಹುಸೇನ್​​ಗೆ ಹೋಲಿಸಿದ್ದರು.

ಇದನ್ನೂ ಓದಿ: ವಿಸ್ತಾರ TOP 10 NEWS: ಷರತ್ತಿನೊಂದಿಗೆ ಕಾಂಗ್ರೆಸ್‌ ಗ್ಯಾರಂಟಿ ಜಾರಿಯಿಂದ, ಅಮೆರಿಕದಲ್ಲಿ ಮತ್ತೆ ಜಾರಿದ ರಾಹುಲ್‌ ಗಾಂಧಿವರೆಗಿನ ಪ್ರಮುಖ ಸುದ್ದಿಗಳಿವು

ಇದೇ ವೇಳೆ ಸಾಮ್ರಾಟ್​ ಚೌಧರಿ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ‘ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ದೇಶದ ಉದ್ದಗಲಕ್ಕೂ ಪ್ರಯಾಣ ಮಾಡುತ್ತಿದ್ದಾರೆ. ಹೋದಲ್ಲೆಲ್ಲ ತಾನೇ ಮುಂದಿನ ಪ್ರಧಾನಿ ಎಂದು ಹೇಳಿಕೊಳ್ಳುತ್ತಿದ್ದಾರೆ. ನಿತೀಶ್​ ಕುಮಾರ್ ಪ್ರಧಾನಮಂತ್ರಿ ಹೌದಾ?, ಅವರು ತಮ್ಮ ಮಾನಸಿಕ ಸಮತೋಲನ ಕಳೆದುಕೊಂಡಂತೆ ಕಾಣುತ್ತಿದೆ’ ಎಂದು ವ್ಯಂಗ್ಯವಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಪಾಕ್‌ ಯುವತಿಗೆ ಭಾರತದ ಹಿಂದು ವ್ಯಕ್ತಿ ಹೃದಯದ ಕಸಿ; ತಕರಾರು ತೆಗೆದ ನೆರೆ ರಾಷ್ಟ್ರದ ಇಸ್ಲಾಂ ಧರ್ಮಗುರು!

ಕಾಲೇಜು ವಿದ್ಯಾರ್ಥಿನಿಯಾಗಿರುವ ಆಯೇಷಾ ರೆಶಾನ್‌ ಅವರು ಕಳೆದ 10 ವರ್ಷಗಳಿಂದ ಹೃದ್ರೋಗದಿಂದ ಬಳಲುತ್ತಿದ್ದರು. ಅವರಿಗೆ ಹಾರ್ಟ್‌ ಪಂಪ್‌ ಡಿವೈಸ್‌ ಅಳವಡಿಸಬೇಕಾಗಿತ್ತು. ಇದಕ್ಕಾಗಿ ಅವರು ತಮಿಳುನಾಡಿಗೆ ಆಗಮಿಸಿದ್ದರು. ಚೆನ್ನೈನಲ್ಲಿ ಅವರಿಗೆ ಬೇರೆ ವ್ಯಕ್ತಿಯ ಹೃದಯವನ್ನು ಕಸಿ ಮಾಡಲಾಗಿತ್ತು. ಇದಾದ ಬಳಿಕ ಆಯೇಷಾ, ಭಾರತಕ್ಕೆ ಕೃತಜ್ಞತೆ ಸಲ್ಲಿಸಿದ್ದರು.

VISTARANEWS.COM


on

Pakistan Teen
Koo

ಇಸ್ಲಾಮಾಬಾದ್:‌ ಜಗತ್ತಿನ ಯಾವುದೇ ಧರ್ಮಗಳು, ಧರ್ಮ ಗ್ರಂಥಗಳು ಹಿಂಸೆ, ದ್ವೇಷವನ್ನು ಬೆಂಬಲಿಸುವುದಿಲ್ಲ. ಶಾಂತಿ, ಸಹಬಾಳ್ವೆ, ಮಾನವೀಯತೆಯನ್ನೇ ಪ್ರತಿಯೊಂದು ಧರ್ಮವು ಬೋಧಿಸುತ್ತದೆ. ಆದರೆ, ಧರ್ಮಪಾಲಕರ ಎಡವಟ್ಟುಗಳಿಂದಾಗಿ ಧರ್ಮಗಳ ಸಾರಕ್ಕೇ ಕೆಲವೊಮ್ಮೆ ಕೆಟ್ಟ ಹೆಸರು ಬರುತ್ತದೆ. ಇದಕ್ಕೆ ನಿದರ್ಶನ ಎಂಬಂತೆ, ಪಾಕಿಸ್ತಾನದಿಂದ (Pakistan) ಭಾರತಕ್ಕೆ ಬಂದು, ಚೆನ್ನೈ ಆಸ್ಪತ್ರೆಯಲ್ಲಿ ಹೃದಯದ ಕಸಿ ಮಾಡಿಸಿಕೊಂಡ ಪಾಕಿಸ್ತಾನದ ಯುವತಿಯೊಬ್ಬಳನ್ನು ಅಲ್ಲಿನ ಧರ್ಮಗುರುವೊಬ್ಬ (Pakistani Imam) ಟೀಕಿಸಿದ್ದಾನೆ.

ಯುವತಿಯು ಹೃದಯದ ಕಸಿ ಮಾಡಿಸಿಕೊಂಡಿರುವ ಯುಟ್ಯೂಬರ್‌ ಕೇಳಿದ ಪ್ರಶ್ನೆಗೆ ಉತ್ತರಿಸಿದ ಇಮಾಮ್‌, “ಯುವತಿಗೆ ಹೃದಯ ದಾನ ಮಾಡಿದವನು ಸತ್ತಿದ್ದಾನೆ. ಅವನು ಖಂಡಿತವಾಗಿಯೂ ನಾಸ್ತಿಕನೇ ಆಗಿರುತ್ತಾನೆ. ಅಂತಹ ಹಿಂದುವಿನ ಹೃದಯವನ್ನು ಕಸಿ ಮಾಡಿಸಿಕೊಂಡು ಬಂದ ಪಾಕಿಸ್ತಾನದ ಯುವತಿಯ ಧೈರ್ಯವನ್ನು ಮೆಚ್ಚಬೇಕು. ಆದರೆ, ಹಿಂದುವಿನ ಹೃದಯ ಹೊಂದಿರುವ ಆಯೇಷಾ ಈಗ ಅಲ್ಲಾನ ಎದುರು ತಲೆ ಬಾಗಿ ನಿಲ್ಲಬೇಕು. ಆಗ ಆಕೆಯ ಧೈರ್ಯವನ್ನು ಮೆಚ್ಚುತ್ತೇನೆ” ಎಂಬುದಾಗಿ ಇಮಾಮ್‌ ಹೇಳಿದ್ದಾನೆ. “ಮುಸ್ಲಿಮರು ಅಂಗಾಂಗ ಹಾಗೂ ರಕ್ತವನ್ನು ದಾನ ಮಾಡುವುದು ತಪ್ಪು” ಎಂದು ಕೂಡ ಹೇಳಿದ್ದಾನೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದ್ದು, ಇಮಾಮ್‌ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೃದಯದ ಸಮಸ್ಯೆಯಿಂದಾಗಿ ಭಾರತಕ್ಕೆ ಬಂದಿದ್ದ ಪಾಕಿಸ್ತಾನದ ಆಯೇಷಾ ರೆಶಾನ್‌ (19) ಎಂಬ ಯುವತಿಗೆ ಚೆನ್ನೈನಲ್ಲಿರುವ ಎಂಜಿಎಂ ಹೆಲ್ತ್‌ಕೇರ್‌ ಆಸ್ಪತ್ರೆ ವೈದ್ಯರು ಉಚಿತವಾಗಿ ಹೃದಯದ ಕಸಿ ಮಾಡುವ ಮೂಲಕ ನೆರೆ ರಾಷ್ಟ್ರದ ಯುವತಿಯ ಬಾಳಿಗೆ ಬೆಳಕಾಗಿದ್ದಾರೆ. ಭಾರತೀಯರೊಬ್ಬರ ಹೃದಯವನ್ನು ಪಾಕಿಸ್ತಾನದ ಯುವತಿಗೆ ಕಸಿ ಮಾಡುವ ಮೂಲಕ, ಆಕೆ ಮತ್ತೆ ಬದುಕು ಕಟ್ಟಿಕೊಳ್ಳಲು ಅಪೂರ್ವ ಅವಕಾಶ ನೀಡುವ ಮೂಲಕ ಔದಾರ್ಯ ಮೆರೆದಿದ್ದಾರೆ. ಇದಕ್ಕಾಗಿ ಆಯೇಷಾ ರೆಶಾನ್‌ ಭಾರತಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ಆಯೇಷಾ ರೆಶಾನ್‌ಗೆ ಏನಾಗಿತ್ತು?

ಕಾಲೇಜು ವಿದ್ಯಾರ್ಥಿನಿಯಾಗಿರುವ ಆಯೇಷಾ ರೆಶಾನ್‌ ಅವರು ಕಳೆದ 10 ವರ್ಷಗಳಿಂದ ಹೃದ್ರೋಗದಿಂದ ಬಳಲುತ್ತಿದ್ದರು. ಅವರಿಗೆ ಹಾರ್ಟ್‌ ಪಂಪ್‌ ಡಿವೈಸ್‌ ಅಳವಡಿಸಬೇಕಾಗಿತ್ತು. ಇದಕ್ಕಾಗಿ ಅವರು ತಮಿಳುನಾಡಿಗೆ ಆಗಮಿಸಿದ್ದರು. ಆದರೆ, ಹಾರ್ಟ್‌ ಪಂಪ್‌ ಅಳವಡಿಸಿದ ಬಳಿಕ ಶಸ್ತ್ರಚಿಕಿತ್ಸೆಯು ವಿಫಲವಾಗಿತ್ತು. ಇದರಿಂದಾಗಿ ಆಯೇಷಾ ರೆಶಾನ್‌ ಅವರ ಪ್ರಾಣಕ್ಕೆ ಕುತ್ತು ಬಂದಿತ್ತು. ಆಗ, ಆಸ್ಪತ್ರೆಯ ಸರ್ಜನ್‌ಗಳು ದಾನಿಯೊಬ್ಬರ ಹೃದಯವನ್ನು ಆಯೇಷಾ ರೆಷಾನ್‌ ಅವರಿಗೆ ಅಳವಡಿಸುವ ಮೂಲಕ ಆಕೆಯ ಪ್ರಾಣ ಉಳಿಸಿದ್ದಾರೆ.

ಹೃದಯದ ಕಸಿ ಮಾಡಲು ಸುಮಾರು 35 ಲಕ್ಷ ರೂ. ಖರ್ಚಾಗುತ್ತದೆ. ಆದರೆ, ಚೆನ್ನೈನ ಐಶ್ವರ್ಯನ್‌ ಟ್ರಸ್ಟ್‌ ಹಾಗೂ ಆಸ್ಪತ್ರೆ ವೈದ್ಯರೇ ಖರ್ಚು ಭರಿಸಿ, ಉಚಿತವಾಗಿ ಕಸಿ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ದೆಹಲಿ ಮೂಲದ ದಾನಿಯಿಂದ ಹೃದಯ ಪಡೆದ ವೈದ್ಯರು, ಆಯೇಷಾಗೆ ಅಳವಡಿಸಿದ್ದಾರೆ. “ಹೃದಯ ಕಸಿ ಬಳಿಕ ನಾನೀಗ ಆರೋಗ್ಯದಿಂದ ಇದ್ದೇನೆ. ಚೆನ್ನೈ ವೈದ್ಯರಿಂದಾಗಿ ನಾನು ಉಸಿರಾಡುತ್ತಿದ್ದೇನೆ. ನನ್ನ ಜೀವ ಉಳಿಸಿದ ವೈದ್ಯರಿಗೆ ಕೃತಜ್ಞತೆಗಳು. ಪಾಕಿಸ್ತಾನಕ್ಕೆ ತೆರಳಿ ನಾನು ಪದವಿ ಪಡೆಯುತ್ತೇನೆ” ಎಂಬುದಾಗಿ ಆಯೇಷಾ ಹೇಳಿದ್ದಾರೆ.

ಇದನ್ನೂ ಓದಿ: Rahul Gandhi: ರಾಹುಲ್‌ ಗಾಂಧಿಯನ್ನು ಹೊಗಳಿದ ಪಾಕ್‌ ಮಾಜಿ ಸಚಿವ; ತಿರುಗೇಟು ಕೊಟ್ಟ ಬಿಜೆಪಿ

Continue Reading

ದೇಶ

Rahul Gandhi: ರಾಹುಲ್‌ ಗಾಂಧಿಯನ್ನು ಹೊಗಳಿದ ಪಾಕ್‌ ಮಾಜಿ ಸಚಿವ; ತಿರುಗೇಟು ಕೊಟ್ಟ ಬಿಜೆಪಿ

Rahul Gandhi: ಕಾಂಗ್ರೆಸ್‌ ನಾಯಕರ ರಾಹುಲ್‌ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ, ರಾಮಮಂದಿರ ಉದ್ಘಾಟನೆ, ಮುಕೇಶ್‌ ಅಂಬಾನಿ ಸೇರಿ ಹಲವು ವಿಷಯಗಳ ಕುರಿತು ಟೀಕಿಸಿ ಮಾತನಾಡಿದ್ದಾರೆ. ರಾಹುಲ್‌ ಗಾಂಧಿ ಭಾಷಣವನ್ನು ಪಾಕಿಸ್ತಾನದ ಮಾಜಿ ಸಚಿವ ಫವಾದ್‌ ಹುಸೇನ್‌ ಮೆಚ್ಚಿಕೊಂಡಿದ್ದಾರೆ. ಇದಕ್ಕೆ ಬಿಜೆಪಿಯು ತಿರುಗೇಟು ನೀಡಿದೆ.

VISTARANEWS.COM


on

Rahul Gandhi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಪ್ರತಿಯೊಂದು ವಿಷಯವೂ ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರ ಮಧ್ಯೆ ವಾಗ್ಯುದ್ಧ, ವಾಗ್ದಾಳಿ, ಮಾತಿನ ಚಕಮಕಿ, ಆಕ್ರೋಶ, ಆರೋಪಗಳಿಗೆ ಕಾರಣವಾಗುತ್ತಿದೆ. ಇದರ ಬೆನ್ನಲ್ಲೇ, ರಾಹುಲ್‌ ಗಾಂಧಿ ಭಾಷಣವನ್ನು ಪಾಕಿಸ್ತಾನದ (Pakistan) ಮಾಜಿ ಸಚಿವ ಫವಾದ್‌ ಹುಸೇನ್‌ (Ch Fawad Hussain) ಮೆಚ್ಚಿಕೊಂಡಿದ್ದು, ಇದಕ್ಕೆ ಬಿಜೆಪಿ ಟಾಂಗ್‌ ಕೊಟ್ಟಿದೆ. “ಪಾಕಿಸ್ತಾನ ಹಾಗೂ ಕಾಂಗ್ರೆಸ್‌ ಮಧ್ಯೆ ಎಷ್ಟೊಂದು ಸ್ನೇಹ ಸಂಬಂಧ ಇದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ” ಎಂದು ಬಿಜೆಪಿ (BJP) ತಿರುಗೇಟು ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ, ಅವರ ಸರ್ಕಾರದ ನೀತಿಗಳ ಬಗ್ಗೆ, ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಗಣ್ಯರು ಮಾತ್ರ ಪಾಲ್ಗೊಂಡಿದ್ದರ ಬಗ್ಗೆ ರಾಹುಲ್‌ ಗಾಂಧಿ ಅವರು ಆಕ್ರೋಶಭರಿತರಾಗಿ ಮಾತನಾಡಿದ ವಿಡಿಯೊ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾಗಿದೆ. ಇದನ್ನು ಶೇರ್‌ ಮಾಡಿದ ಪಾಕ್‌ ಮಾಜಿ ಸಚಿವ ಫವಾದ್‌ ಹುಸೇನ್‌, “ರಾಹುಲ್‌ ಗಾಂಧಿ ಬೆಂಕಿಯುಂಡೆಯ ಕಾವಿನಂತೆ ಮಾತನಾಡುತ್ತಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನು ಬಿಜೆಪಿ ನಾಯಕರು ತರಾಟೆಗೆ ತೆಗೆದುಕೊಂಡಿದ್ದಾರೆ.

ಪಾಕ್‌ ಮಾಜಿ ಸಚಿವನ ಪ್ರತಿಕ್ರಿಯೆಗೆ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್‌ ಪೂನಾವಾಲ ತಿರುಗೇಟು ನೀಡಿದ್ದಾರೆ. “ಪಾಕಿಸ್ತಾನದ ಫವಾದ್‌ ಹುಸೇನ್‌ ರಾಹುಲ್‌ ಗಾಂಧಿ ಅವರನ್ನು ಹೊಗಳುತ್ತಿದ್ದಾರೆ ಎಂದರೆ, ಅವರ ಸಂಬಂಧ ಹೇಗಿದೆ ಎಂಬುದಕ್ಕೆ ಕೈಗನ್ನಡಿಯಾಗಿದೆ. ಕಾಂಗ್ರೆಸ್‌ನ ಕೈ ಪಾಕಿಸ್ತಾನದ ಹೆಗಲ ಮೇಲಿದೆ ಎಂಬುದಕ್ಕೆ ಇದಕ್ಕಿಂತ ಒಳ್ಳೆಯ ನಿದರ್ಶನ ಬೇಕಾಗಿಲ್ಲ. ಕಾಂಗ್ರೆಸ್‌ ಪ್ರಣಾಳಿಕೆಯು ಮುಸ್ಲಿಂ ಲೀಗ್‌ನಂತೆಯೇ ಇದೆ” ಎಂದು ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಇದಕ್ಕೂ ಮೊದಲು ನನಗೆ ಕಾಂಗ್ರೆಸ್‌ ಪಕ್ಷ ಫೇವರಿಟ್‌ ಎಂದು ಉಗ್ರ ಹಫೀಜ್‌ ಸಯೀದ್‌ ಹೇಳಿದ್ದ. ಮಣಿಶಂಕರ್‌ ಅಯ್ಯರ್‌ ಅವರು ನರೇಂದ್ರ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಪಾಕಿಸ್ತಾನಕ್ಕೆ ಹೋಗಿದ್ದರು. ಕಾಂಗ್ರೆಸ್‌ ನಾಯಕರಿಂದಲೇ ಪಾಕಿಸ್ತಾನ ಜಿಂದಾಬಾದ್‌ ಎಂಬ ಘೋಷಣೆ ಕೇಳಿಬಂದಿದ್ದವು. ಬಿ.ಕೆ. ಹರಿಪ್ರಸಾದ್‌ ಅವರು ಬಹಿರಂಗವಾಗಿಯೇ ಪಾಕ್‌ ಪರ ಮಾತನಾಡಿದ್ದಾರೆ. ಪಾಕಿಸ್ತಾನದ ಉಗ್ರರನ್ನೂ ಕಾಂಗ್ರೆಸ್‌ ನಾಯಕರು ಬೆಂಬಲಿಸಿದ್ದರು. ಈಗ ಸಂಬಂಧ ಹೇಗಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ” ಎಂದು ಕುಟುಕಿದ್ದಾರೆ.

ಇದನ್ನೂ ಓದಿ: Shyam Rangeela: ಮೋದಿಯನ್ನು ಮಿಮಿಕ್ರಿ ಮಾಡಿ ಖ್ಯಾತಿಯಾದ ಕಲಾವಿದ ಈಗ ಪ್ರಧಾನಿ ವಿರುದ್ಧವೇ ಕಣಕ್ಕೆ!

Continue Reading

ದೇಶ

Adhir Ranjan: ಟಿಎಂಸಿ ಬದಲು ಬಿಜೆಪಿಗೆ ಮತ ಹಾಕೋದೇ ಬೆಸ್ಟ್‌ ಎಂದ ಕಾಂಗ್ರೆಸ್‌ ನಾಯಕ!

Adhir Ranjan: ಪಶ್ಚಿಮ ಬಂಗಾಳದಲ್ಲಿ ಜನರು ಟಿಎಂಸಿಗೆ ಮತ ನೀಡುವುದಕ್ಕಿಂತ ಬಿಜೆಪಿಗೆ ಮತ ಹಾಕುವುದೇ ಲೇಸು ಎಂಬುದಾಗಿ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ಹೇಳಿದ್ದಾರೆ. ಈ ವಿಡಿಯೊ ವೈರಲ್‌ ಆಗುತ್ತಲೇ ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದಾರೆ. ಇದರ ಮಧ್ಯೆಯೇ ಕಾಂಗ್ರೆಸ್‌ ಸ್ಪಷ್ಟನೆ ನೀಡಿದೆ.

VISTARANEWS.COM


on

Adhir Ranjan
Koo

ಕೋಲ್ಕೊತಾ: ಬೇಸಿಗೆಯ ರಣಬಿಸಿಲಿಗಿಂತ ಲೋಕಸಭೆ ಚುನಾವಣೆ (Lok Sabha Election 2024) ಕಾವು ದಿನೇದಿನೆ ಜಾಸ್ತಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿ ನೂರಾರು ಗಣ್ಯರು ಚುನಾವಣೆ ಪ್ರಚಾರದಲ್ಲಿ ತೊಡಗಿದ್ದಾರೆ. ಅಬ್ಬರದ ಪ್ರಚಾರದ ಜತೆಗೆ ಭಾರಿ ಭಾಷಣವನ್ನೂ ಮಾಡುತ್ತಿದ್ದಾರೆ. ಒಂದು ಪಕ್ಷದ ಅಭ್ಯರ್ಥಿಗಳು, ನಾಯಕರು ಪ್ರತಿಸ್ಪರ್ಧಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ, “ಟಿಎಂಸಿಗೆ ಮತ ಹಾಕುವುದಕ್ಕಿಂತ ಬಿಜೆಪಿಗೆ ಮತ ನೀಡುವುದೇ ವಾಸಿ” ಎಂಬುದಾಗಿ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ (Adhir Ranjan) ಅವರು ಹೇಳಿರುವುದು ಅಚ್ಚರಿ ಮೂಡಿಸಿದೆ. ಹಾಗೆಯೇ, ಅವರು ಹೇಳಿದ ವಿಡಿಯೊ (Viral Video) ಭಾರಿ ವೈರಲ್‌ ಆಗಿದೆ.

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಆಯೋಜಿಸಿದ್ದ ಚುನಾವಣೆ ರ‍್ಯಾಲಿಯಲ್ಲಿ ಅಧೀರ್‌ ರಂಜನ್‌ ಚೌಧರಿ ಮಾತನಾಡಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ 400ಕ್ಕಿಂತ ಅತಿ ಹೆಚ್ಚು ಸ್ಥಾನ ಗೆಲ್ಲಬೇಕು ಎಂಬ ಪ್ರಧಾನಿಯವರ ಕನಸು ನನಸಾಗುವುದಿಲ್ಲ. ಈಗಾಗಲೇ ಮೋದಿ ಅವರ ಕೈಯಿಂದ 100 ಕ್ಷೇತ್ರಗಳು ಹಾರಿ ಹೋಗಿವೆ. ಕಾಂಗ್ರೆಸ್‌ ಹಾಗೂ ಸಿಪಿಎಂ ಅಭ್ಯರ್ಥಿಗಳ ಗೆಲುವು ಮುಖ್ಯವಾಗಿದೆ. ಹಾಗೊಂದು ವೇಳೆ ನೀವು ಗೆಲ್ಲಿಸುವುದೇ ಆದರೆ, ಟಿಎಂಸಿಗಿಂತ ಬಿಜೆಪಿಗೇ ಮತ ಹಾಕುವುದು ಒಳಿತು” ಎಂದು ಹೇಳಿದ್ದಾರೆ.

ಅಧೀರ್‌ ರಂಜನ್‌ ಚೌಧರಿ ಅವರು ನೀಡಿದ ಹೇಳಿಕೆಯ ವಿಡಿಯೊ ವೈರಲ್‌ ಆಗುತ್ತಲೇ ಬಿಜೆಪಿ ನಾಯಕರು ವಿಡಿಯೊವನ್ನು ಹಂಚಿಕೊಂಡಿದ್ದಾರೆ. “ಪ್ರತಿಪಕ್ಷಗಳಿಗೆ ಗುರಿಯೂ ಇಲ್ಲ, ಉದ್ದೇಶವೂ ಇಲ್ಲ. ಇನ್ನು, ಇಂಡಿಯಾ ಒಕ್ಕೂಟಕ್ಕೆ ಜನರನ್ನು ಇಬ್ಭಾಗ ಮಾಡುವುದು, ಭ್ರಷ್ಟಾಚಾರ ಎಸಗುವುದು ಹಾಗೂ ಜನರಲ್ಲಿ ಗೊಂದಲ ಮೂಡಿಸುವುದೇ ಕಾಯಕವಾಗಿದೆ. ಇವರ ಮಧ್ಯೆಯೇ, ಬಿಜೆಪಿಗೆ ಮತ ನೀಡಿ ಎಂಬುದಾಗಿ ಕಾಂಗ್ರೆಸ್‌ ನಾಯಕ ತಿಳಿಸಿದ್ದಾರೆ. ಟಿಎಂಸಿಗೆ ಮತ ನೀಡುವ ಬದಲು ಬಿಜೆಪಿಯೇ ಬೆಸ್ಟ್‌ ಎಂಬುದಾಗಿ ಅವರು ಹೇಳಿದ್ದಾರೆ” ಎಂದು ಬಿಜೆಪಿ ನಾಯಕ ಶೆಹಜಾದ್‌ ಜೈ ಹಿಂದ್‌ ಪೋಸ್ಟ್‌ ಮಾಡಿದ್ದಾರೆ.

ಸ್ಪಷ್ಟನೆ ಕೊಟ್ಟ ಕಾಂಗ್ರೆಸ್‌

ಅಧೀರ್‌ ರಂಜನ್‌ ಚೌಧರಿ ನೀಡಿದ ಹೇಳಿಕೆ ಕುರಿತು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಸ್ಪಷ್ಟನೆ ನೀಡಿದರು. “ಅಧೀರ್‌ ರಂಜನ್‌ ಚೌಧರಿ ಅವರು ಯಾವ ಅರ್ಥದಲ್ಲಿ ಹಾಗೆ ಹೇಳಿದ್ದಾರೋ ಗೊತ್ತಿಲ್ಲ ಹಾಗೂ ನಾನು ಆ ವಿಡಿಯೊವನ್ನು ನೋಡಿಲ್ಲ. ಆದರೆ, 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗಳಿಸಿದ ಸ್ಥಾನಗಳ ಸಂಖ್ಯೆಯು ಈ ಬಾರಿ ಗಣನೀಯವಾಗಿ ಕುಸಿಯುವಂತೆ ಮಾಡುವುದು ಕಾಂಗ್ರೆಸ್‌ನ ಗುರಿಯಾಗಿದೆ” ಎಂದು ಹೇಳಿದರು. ಪಶ್ಚಿಮ ಬಂಗಾಳದಲ್ಲಿ ಇಂಡಿಯಾ ಒಕ್ಕೂಟದ ಮೈತ್ರಿಯು ಫಲಿಸಿಲ್ಲ. ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸಿದೆ.

ಇದನ್ನೂ ಓದಿ: Shyam Rangeela: ಮೋದಿಯನ್ನು ಮಿಮಿಕ್ರಿ ಮಾಡಿ ಖ್ಯಾತಿಯಾದ ಕಲಾವಿದ ಈಗ ಪ್ರಧಾನಿ ವಿರುದ್ಧವೇ ಕಣಕ್ಕೆ!

Continue Reading

ದೇಶ

Shyam Rangeela: ಮೋದಿಯನ್ನು ಮಿಮಿಕ್ರಿ ಮಾಡಿ ಖ್ಯಾತಿಯಾದ ಕಲಾವಿದ ಈಗ ಪ್ರಧಾನಿ ವಿರುದ್ಧವೇ ಕಣಕ್ಕೆ!

Shyam Rangeela: ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಂತೆ ತನ್ನದೇ ಶೈಲಿಯಲ್ಲಿ ಮಿಮಿಕ್ರಿ ಮಾಡುತ್ತಿದ್ದ ಹಾಸ್ಯ ಕಲಾವಿದ ಶ್ಯಾಮ್‌ ರಂಗೀಲಾ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಅವರು ನರೇಂದ್ರ ಮೋದಿ ವಿರುದ್ಧವೇ ಕಣಕ್ಕಿಳಿದಿದ್ದು, ಈಗ ಚುನಾವಣೆ ಸ್ಪರ್ಧೆಯು ರಂಗೇರಿದೆ.

VISTARANEWS.COM


on

shyam rangeela
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಶೈಲಿಯಲ್ಲೇ ಮಾತನಾಡುತ್ತ, ಜೋಕ್‌ಗಳನ್ನು ಮಾಡುತ್ತ ಖ್ಯಾತಿ ಗಳಿಸಿದ ಹಾಸ್ಯ ಕಲಾವಿದ ಶ್ಯಾಮ್‌ ರಂಗೀಲಾ (Shyam Rangeela) ಅವರೀಗ ವಾರಾಣಸಿ (Varanasi) ಲೋಕಸಭೆ ಕ್ಷೇತ್ರದಲ್ಲಿ ನರೇಂದ್ರ ಮೋದಿ (Narendra Modi) ಅವರ ವಿರುದ್ಧವೇ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಹಾಗಾಗಿ, ವಾರಾಣಸಿ ಲೋಕಸಭೆ ಕ್ಷೇತ್ರವೀಗ ಮತ್ತಷ್ಟು ರಂಗೇರಿದಂತಾಗಿದೆ. ಈಗಾಗಲೇ ಪ್ರಮುಖ ಪಕ್ಷಗಳು ವಾರಾಣಸಿಯಲ್ಲಿ ಅಭ್ಯರ್ಥಿಗಳನ್ನು ಘೋಷಿಸಿವೆ. ಹಾಗಾಗಿ, ಶ್ಯಾಮ್‌ ರಂಗೀಲಾ ಅವರು ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ ಎಂದು ತಿಳಿದುಬಂದಿದೆ.

ರಾಜಸ್ಥಾನದವರಾದ 29 ವರ್ಷದ ಶ್ಯಾಮ್‌ ರಂಗೀಲಾ ಅವರು ನರೇಂದ್ರ ಮೋದಿ ಹಾಗೂ ರಾಹುಲ್‌ ಗಾಂಧಿ ಅವರನ್ನು ಮಿಮಿಕ್ರಿ ಮಾಡುತ್ತ ಖ್ಯಾತಿ ಗಳಿಸಿದ್ದಾರೆ. ಇವರ ಹಾಸ್ಯಪ್ರಜ್ಞೆಯನ್ನೂ ಜನ ಮೆಚ್ಚಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಜನರಿಗೆ ಪರಿಚಿತರಾಗಿದ್ದಾರೆ. “ದೇಶದಲ್ಲಿ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿದೆ ಎಂಬುದನ್ನು ಸಾಬೀತುಪಡಿಸಲು ನಾನು ವಾರಾಣಸಿ ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ. ಮುಂದಿನ ವಾರ ನಾನು ವಾರಾಣಸಿಗೆ ತೆರಳಿ ನಾಮಪತ್ರ ಸಲ್ಲಿಸುತ್ತೇನೆ” ಎಂದು ಹೇಳಿದರು.

“ದೇಶದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಬೇಕಾಗಿದೆ. ಪ್ರಜಾಪ್ರಭುತ್ವವನ್ನು ಉಳಿಸಲು ನಾವು ನಿಮ್ಮ ಜತೆ ಇದ್ದೇವೆ ಎಂಬ ಸಂದೇಶವನ್ನು ರವಾನಿಸಲಾದರೂ, ಪ್ರಜಾಪ್ರಭುತ್ವವನ್ನು ಅಪಾಯದ ಅಂಚಿಗೆ ತೆಗೆದುಕೊಂಡು ಹೋಗಲು ಬಿಡುವುದಿಲ್ಲ ಎಂಬುದನ್ನು ಮನವರಿಕೆ ಮಾಡಲಿಕ್ಕಾದರೂ ನಾನು ಸ್ಪರ್ಧಿಸುತ್ತೇನೆ. ಕನಿಷ್ಠ ಪಕ್ಷ, ಇಂದೋರ್‌ ಹಾಗೂ ಸೂರತ್‌ನಲ್ಲಿ (ಕಾಂಗ್ರೆಸ್‌ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದು ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಕಾರಣರಾಗಿರುವುದು) ಎದುರಾದ ಪರಿಸ್ಥಿತಿ ಇಲ್ಲಿ ಉಂಟಾಗದಂತೆ ಮಾಡಲು, ಜನ ಕನಿಷ್ಠಪಕ್ಷ ಮತದಾನವನ್ನಾದರೂ ಮಾಡಲಿ ಎಂಬುದಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ” ಎಂದು ತಿಳಿಸಿದರು.

ಮೋದಿ ವಿರುದ್ಧ ಕಣಕ್ಕಿಳಿದ ನಾಯಕರಿವರು

ನರೇಂದ್ರ ಮೋದಿ ಅವರು 2014ರಿಂದಲೂ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇವರ ವಿರುದ್ಧ ಈ ಬಾರಿ ಕಾಂಗ್ರೆಸ್‌ ಅಜಯ್‌ ರಾಯ್‌ ಅವರನ್ನು ಕಣಕ್ಕಿಳಿಸಿದೆ. ಅಖಿಲ ಭಾರತ ಹಿಂದು ಮಹಾಸಭಾ (ABHM) ಪಕ್ಷದಿಂದ ಮಂಗಳಮುಖಿಯಾಗಿರುವ ಕಿನ್ನಾರ್‌ ಮಹಾಮಂಡಲೇಶ್ವರ್‌ ಹೇಮಾಂಗಿ ಸಖಿ ಅವರು ಕೂಡ ಸ್ಪರ್ಧಿಸುತ್ತಿದ್ದಾರೆ. ಈಗ ಬಿಎಸ್‌ಪಿಯು ಅಥರ್‌ ಜಮಾಲ್‌ ಲರಿ ಅವರಿಗೆ ಟಿಕೆಟ್‌ ನೀಡಿದೆ. ಕ್ಷೇತ್ರದಲ್ಲಿ ಜೂನ್‌ 1ರಂದು ಮತದಾನ ನಡೆಯಲಿದೆ. ವಾರಾಣಸಿ ಲೋಕಸಭೆ ಕ್ಷೇತ್ರದಲ್ಲಿ 19.62 ಲಕ್ಷ ಮತದಾರರಿದ್ದಾರೆ. ಇವರಲ್ಲಿ 10.65 ಲಕ್ಷ ಪುರುಷರಿದ್ದರೆ, 8.97 ಲಕ್ಷ ಮಹಿಳೆಯರಿದ್ದಾರೆ. 135 ಮಂಗಳಮುಖಿಯರೂ ಮತದಾನ ಮಾಡಲಿದ್ದಾರೆ.

ಗ್ಯಾಂಗ್‌ಸ್ಟರ್‌ ಪತ್ನಿಗೆ ಟಿಕೆಟ್‌

ಉತ್ತರ ಪ್ರದೇಶದ ಜೌನ್‌ಪುರ ಲೋಕಸಭೆ ಕ್ಷೇತ್ರದಲ್ಲಿ ಬಿಎಸ್‌ಪಿಯು ಗ್ಯಾಂಗ್‌ಸ್ಟರ್‌ ಧನಂಜಯ್‌ ಸಿಂಗ್‌ ಪತ್ನಿ ಶ್ರೀಕಲಾ ಸಿಂಗ್‌ ಅವರಿಗೆ ಟಿಕೆಟ್‌ ನೀಡಿದೆ. ಇದು ಈಗ ಭಾರಿ ಚರ್ಚೆಗೂ ಗ್ರಾಸವಾಗಿದೆ. ಇನ್ನು, ಮೈನ್‌ಪುರಿಯಲ್ಲಿ ಅಭ್ಯರ್ಥಿಯನ್ನು ಬದಲಾಯಿಸಿರುವ ಬಿಎಸ್‌ಪಿಯು, ಶಿವಪ್ರಸಾದ್‌ ಯಾದವ್‌ ಅವರಿಗೆ ಮಣೆ ಹಾಕಿದೆ. ಬರೇಲಿಯಲ್ಲಿ ಛೋಟಾಲಾಲ್‌ ಗಂಗ್ವಾರ್‌, ಬಂಡಾದಲ್ಲಿ ಮಯಾಂಕ್‌ ದ್ವಿವೇದಿ, ಘಾಜಿಪುರದಲ್ಲಿ ಉಮೇಶ್‌ ಕುಮಾರ್‌ ಸಿಂಗ್‌ ಸೇರಿ 11 ಕ್ಷೇತ್ರಗಳಲ್ಲಿ ಬಿಎಸ್‌ಪಿಯು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ

ಇದನ್ನೂ ಓದಿ: BSP List: ವಾರಾಣಸಿಯಲ್ಲಿ ಮೋದಿ ವಿರುದ್ಧ ಬಿಎಸ್‌ಪಿ ಅಭ್ಯರ್ಥಿ ಯಾರು? ಗ್ಯಾಂಗ್‌ಸ್ಟರ್‌ ಪತ್ನಿಗೂ ಟಿಕೆಟ್!

Continue Reading
Advertisement
Ikbal hussain
ಕರ್ನಾಟಕ9 mins ago

Iqbal Hussain: ಯುವತಿ ಜತೆ ಶಾಸಕ ಇಕ್ಬಾಲ್ ಹುಸೇನ್ ವಿಡಿಯೊ ಕಾಲ್ ವೈರಲ್; ಎಫ್‌ಐಆರ್‌ ದಾಖಲು

T20 Rankings
ಕ್ರೀಡೆ16 mins ago

T20 Rankings: ಅಗ್ರಸ್ಥಾನದಲ್ಲೇ ಮುಂದುವರಿದ ಸೂರ್ಯ; ಒಂದು ಸ್ಥಾನ ಏರಿಕೆ ಕಂಡ ಬಾಬರ್​

Pakistan Teen
ದೇಶ35 mins ago

ಪಾಕ್‌ ಯುವತಿಗೆ ಭಾರತದ ಹಿಂದು ವ್ಯಕ್ತಿ ಹೃದಯದ ಕಸಿ; ತಕರಾರು ತೆಗೆದ ನೆರೆ ರಾಷ್ಟ್ರದ ಇಸ್ಲಾಂ ಧರ್ಮಗುರು!

Prajwal Revanna Case
ಕರ್ನಾಟಕ48 mins ago

Prajwal Revanna Case: ವಿಡಿಯೊ ಬಿಟ್ಟ ಕಾರ್ತಿಕ್‌ ಎಲ್ಲಿ? ಆತನನ್ನು ಮಲೇಷ್ಯಾಗೆ ಕಳುಹಿಸಿದ್ದು ಯಾರು?: ಎಚ್‌ಡಿಕೆ ಕಿಡಿ

KL Rahul
ಕ್ರಿಕೆಟ್1 hour ago

KL Rahul: ಟಿ20 ವಿಶ್ವಕಪ್​ನಲ್ಲಿ ರಾಹುಲ್​ಗೆ ಅವಕಾಶ ಸಿಗದಿರಲು ಕಾರಣ ತಿಳಿಸಿದ ಮಾಜಿ ಆಟಗಾರ

Rahul Gandhi
ದೇಶ1 hour ago

Rahul Gandhi: ರಾಹುಲ್‌ ಗಾಂಧಿಯನ್ನು ಹೊಗಳಿದ ಪಾಕ್‌ ಮಾಜಿ ಸಚಿವ; ತಿರುಗೇಟು ಕೊಟ್ಟ ಬಿಜೆಪಿ

BJP State Spokesperson Hariprakash konemane and leaders Election Campaign for BJP Candidate Vishweshwar Hegde Kageri in Yallapura
ಉತ್ತರ ಕನ್ನಡ2 hours ago

Lok Sabha Election 2024: ಹಿಂದಿನ ಚುನಾವಣೆಗಳಿಗಿಂತ ಈ ಬಾರಿ ಬಿಜೆಪಿಗೆ ಅಧಿಕ ಬಹುಮತ ನಿಶ್ಚಿತ: ಹರಿಪ್ರಕಾಶ್‌ ಕೋಣೆಮನೆ

MLA G Janardan Reddy latest statement in Gangavathi
ಕರ್ನಾಟಕ2 hours ago

Lok Sabha Election 2024: ಕಳೆದ ಚುನಾವಣೆಯಲ್ಲಿ ನನ್ನ ಜತೆ ಸ್ವತಃ ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡಿದ್ದರು: ರೆಡ್ಡಿ ಸ್ಫೋಟಕ ಹೇಳಿಕೆ

Prajwal Revanna Case
ಕರ್ನಾಟಕ2 hours ago

Prajwal Revanna Case: ಸಿಂಗಾಪುರ ಮಾಧ್ಯಮಗಳಲ್ಲೂ ಪ್ರಜ್ವಲ್‌ ರೇವಣ್ಣ ಕೇಸ್‌ ಸದ್ದು!

Prajwal Revanna Case BJP will not be with those who do injustice to women says Amit Shah
ರಾಜಕೀಯ2 hours ago

Prajwal Revanna Case: ಮಹಿಳೆಗೆ ಅನ್ಯಾಯ ಮಾಡಿದ್ರೆ ಅಂಥವರ ಜತೆ ಬಿಜೆಪಿ ಇರಲ್ಲ; ಪ್ರಜ್ವಲ್‌ನನ್ನು ಬಿಟ್ಟಿದ್ದು ಕಾಂಗ್ರೆಸ್‌ ತಪ್ಪು ಎಂದ ಶಾ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌