Another audio clip leaked in chennaveera swamiji fraud caseFraud Case: ಚೆನ್ನವೀರ ಸ್ವಾಮೀಜಿಯ ಅಸಲಿ ಮುಖ ಬಯಲು ಮಾಡೋ ಮತ್ತೊಂದು ಆಡಿಯೊ ಲೀಕ್! - Vistara News

ಕರ್ನಾಟಕ

Fraud Case: ಚೆನ್ನವೀರ ಸ್ವಾಮೀಜಿಯ ಅಸಲಿ ಮುಖ ಬಯಲು ಮಾಡೋ ಮತ್ತೊಂದು ಆಡಿಯೊ ಲೀಕ್!

Fraud Case: ಕಂಬಾಳು ಮಠದ ಚೆನ್ನವೀರ ಶಿವಾಚಾರ್ಯ ಸ್ವಾಮೀಜಿಗೆ 35 ಲಕ್ಷ ವಂಚನೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ಇದೀಗ ಸ್ವಾಮೀಜಿ ಬಗ್ಗೆ ಎ2 ಹಾಗೂ ಎ3 ಆರೋಪಿಗಳು ಮಾತನಾಡಿರುವ ಮತ್ತೊಂದು ಆಡಿಯೊ ಕ್ಲಿಪ್ ಲೀಕ್‌ ಆಗಿದೆ.

VISTARANEWS.COM


on

chennaveera swamiji fraud case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಂಬಾಳು ಮಠದ ಚೆನ್ನವೀರ ಶಿವಾಚಾರ್ಯ ಸ್ವಾಮಿಗೆ ವಂಚನೆ ಪ್ರಕರಣದಲ್ಲಿ ದಿನೇ ದಿನೇ ಸ್ಫೋಟಕ ರಹಸ್ಯಗಳು ಬೆಳಕಿಗೆ ಬರುತ್ತಿವೆ. ಮೊನ್ನೆ ಪ್ರಕರಣದ ಎರಡನೇ ಆರೋಪಿ ಮೊದಲ ಆರೋಪಿಯಾಗಿ ಹೇಗೆ ಬದಲಾದಲು ಎಂಬ ಆಡಿಯೋ ಲೀಕ್ ಆಗಿದ್ದರೆ, ಅದರ ಮುಂದುವರಿದ ಭಾಗದ ಆಡಿಯೊದಲ್ಲಿ ಸ್ವಾಮೀಜಿ ನಿಜ ಪುರಾಣ ಏನು ಎಂಬುವುದು ಬಯಲಾಗಿದೆ.

ನೆಲಮಂಗಲ‌ ಸಮೀಪದ ಕಂಬಾಳು ಮಠದ ಚೆನ್ನವೀರ ಸ್ವಾಮೀಜಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸ್ವಾಮೀಜಿ ಹಾಗೂ ಪ್ರಕರಣದ ಮೊದಲ ಆರೋಪಿ ವರ್ಷಾಳನ್ನು ರಕ್ಷಣೆ ಮಾಡುವ ಉದ್ದೇಶದಿಂದ ಪೊಲೀಸರು ಎರಡನೇ ಆರೋಪಿಯನ್ನೇ ಮೊದಲ ಆರೋಪಿಯನ್ನಾಗಿ ಮಾಡಿದ್ದಾರೆ ಎನ್ನಲಾಗಿದೆ. ಆ ಸಂಬಂಧ ಲೀಕ್ ಆದ ಆಡಿಯೊ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪೊಲೀಸರ ಮೇಲೆ ಕೇಳಿ ಬಂದಿರುವ ಗಂಭಿರ ಆರೋಪದ ಮೇಲೆ ಹಿರಿಯ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದ್ದರೆ, ಮತ್ತೊಂದೆಡೆ ಮೊನ್ನೆ ರಿಲೀಸ್ ಆದ ಆಡಿಯೊದಲ್ಲಿ ಬೆಳಕಿಗೆ ಬಂದ ಸ್ಫೋಟಕ ಸತ್ಯಕ್ಕೆ ಪುಷ್ಟಿ ನೀಡುವ ಹಾಗೂ ಸ್ವಾಮೀಜಿಯ ನಿಜ ಪುರಾಣ ಎಂತದುದೆಂದು ಎಂದು ಅನುಮಾನ ಮೂಡಿಸುವ ಮತ್ತೊಂದು ಆಡಿಯೊ ಲೀಕ್ ಆಗಿದೆ.

ಇದನ್ನೂ ಓದಿ | ಕಾಣೆಯಾಗಿದ್ದ ಮಹಿಳೆ ಶವ ನೀರಿನ ಟ್ಯಾಂಕ್​​ನಲ್ಲಿ ಪತ್ತೆ; ಯಾರನ್ನು ಹುಡುಕಿ ಹೋಗಿದ್ದಳೋ ಅವನಿಂದಲೇ ಹತ್ಯೆ

ಮೊದಲ ಆಡಿಯೊದಲ್ಲಿ ನಡೆದಿರುವಂತೆ ಪ್ರಕರಣದ ಎರಡನೇ ಆರೋಪಿ ಮಂಜುಳಾ ಹಾಗೂ ಮೂರನೇ ಆರೋಪಿ ಅವನಿಕಾ ಮಾತನಾಡಿರುವ ಈ ಆಡಿಯೊ ಕ್ಲಿಪ್‌ನಲ್ಲಿ ಸ್ವಾಮೀಜಿ ಹಾಗೂ ವರ್ಷಾ ನಡುವೆ ಸಂಬಂಧ ಎಂತಹದ್ದು, ಎಷ್ಟು ವರ್ಷಗಳಿಂದ ನಡೆಯುತ್ತಿತ್ತು ಅನ್ನೋ ಅಂಶಗಳು ಬೆಳಕಿಗೆ ಬಂದಿವೆ. ಎರಡನೇ ಆರೋಪಿ ಮಂಜುಳಾ ಹೇಳಿರುವಂತೆಯೇ ಈ ಪ್ರಕರಣದಲ್ಲಿ ವರ್ಷಾ ಅನ್ನೋ ಲೇಡಿ ಇರುವುದು ಕನ್ಫರ್ಮ್. 2018 ರಿಂದಲೇ ವರ್ಷಾ ಜತೆ ಚೆನ್ನವೀರ ಸ್ವಾಮೀಜಿ ಸಂಪರ್ಕ ಹೊಂದಿದ್ದರು ಎಂಬ ಆರೋಪ ಕೇಳಿಬಂದಿದೆ. ಆದರೆ, ಸ್ವಾಮೀಜಿಯ ಋಣ ತೀರಿಸಲು ಹಾಗೂ ಮರ್ಯಾದೆ ಉಳಿಸಲು ನಾನೆ ವರ್ಷಾ ಎಂದಿರುವ ಮಂಜುಳಾ, ನಿಜವಾದ ವರ್ಷಾ ಹೊರಗೆ ಬಂದರೆ ಸ್ವಾಮೀಜಿ ಜೈಲು ಸೇರೋದು ಪಕ್ಕಾ ಅನ್ನೋದು ಉಲ್ಲೇಖಿಸಿದ್ದಾಳೆ.

ಸತ್ಯ ಬಾಯ್ಬಿಟ್ರೆ ಸ್ವಾಮೀಜಿ ಬೀದಿಗೆ ಬರೋದು ಪಕ್ಕಾ ಎಂದ ಮಹಿಳೆ

ಮತ್ತೊಂದೆಡೆ ಪ್ರಕರಣದ ತನಿಖೆ ನಡೆಸುತ್ತಿರುವ ದಾಬಸ್ ಪೇಟೆ ಪೊಲೀಸರಿಗೂ ವರ್ಷಾ ಹೊರಬರುವುದು ಇಷ್ಟವಿಲ್ಲ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಪೊಲೀಸರು ಸ್ವಾಮೀಜಿ ಸೂಚನೆಯಂತೆ ಮಂಜುಳಾಳನ್ನೇ ವರ್ಷಾ ಅಂತ ಹೇಳಿಕೆ ಪಡೆದು ದಾಖಲಿಸಿಕೊಂಡಿದ್ದಾರೆ. ಆದರೆ, ಹೇಳಿಕೆ ನೀಡಿದ ಬಳಿಕ ಮಂಜುಳಾಗೆ ಮತ್ತೆ ಸಂಕಷ್ಟ ಎದುರಾಗಿದೆ.

ಸಂಸಾರ ಆಳಾಗುತ್ತಿದೆ, ನನ್ನ ಮಗನಿಗೆ ಸಹಾಯ ಮಾಡಿದರು ಅಂತ ಸ್ವಾಮೀಜಿಯನ್ನು ಉಳಿಸಲು ಮುಂದಾದೆ ಎಂದಿರುವ ಮಂಜುಳಾ, ಸ್ವಾಮೀಜಿ ಹಾಗೂ ವರ್ಷಾ ನಡುವೆ ಏನೆಲ್ಲಾ ನಡೆಯುತ್ತಿತ್ತು, ಸ್ವಾಮೀಜಿ ಎಷ್ಟು ವರ್ಷಗಳಿಂದ ಯಾವ ಬ್ಯಾಂಕ್‌ ಖಾತೆಯಿಂದ ವರ್ಷಾಗೆ ಹಣ ವರ್ಗಾವಣೆ ಮಾಡುತ್ತಿದ್ದರು ಎಂಬ ಇಂಚಿಂಚು‌ ಮಾಹಿತಿಯನ್ನು ಮೂರನೇ ಆರೋಪಿ ಬಳಿ ಹಂಚಿಕೊಂಡಿದ್ದು, ಆ ಆಡಿಯೊ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

ಇದನ್ನೂ ಓದಿ | Fraud Case: ಡೇಟಿಂಗ್‌ ಆ್ಯಪ್‌ನಲ್ಲಿ ಅನಿರುದ್ಧ್‌ ಆಗಿ ಬದಲಾದ ಮುದಾಸಿರ್;‌ ಎಲ್ಲವನ್ನೂ ಮುಗಿಸಿ ಕಾಸೂ ಪಡೆದ!

ಮತ್ತೊಂದೆಡೆ ಸ್ವಾಮೀಜಿಗಳು ನನ್ನನ್ನು ತಂಗಿ ಅಂತ ಕರೆದಿದ್ದಾರೆ. ಸದ್ಯ ನಾನು ವರ್ಷಾ ಅಂತ ಒಪ್ಪಿಕೊಂಡಿರುವುದಕ್ಕಾದರೂ ಅವರು ಋಣಿಯಾಗಿರಬೇಕು. ನಾನು ಏನಾದರೂ ಸತ್ಯ ಬಾಯ್ಬಿಟ್ರೆ ಸ್ವಾಮೀಜಿ ಬೀದಿಗೆ ಬರೋದು ಪಕ್ಕಾ ಅಂತ ಸ್ವಾಮೀಜಿಯ ಕರಾಳ ಮುಖದ ಕೆಲ ಸಂಗತಿಗಳನ್ನು ಅವನಿಕಾ ಬಳಿ ವಿವರಿಸಿ ಮಂಜುಳಾ ಕಣ್ಣೀರಾಕಿದ್ದಾಳೆ. ಸದ್ಯ ಈ ಆಡಿಯೊ ಕ್ಲಿಪ್‌ನಿಂದಾಗಿ ತನಿಖೆ ಮತ್ಯಾವ ತಿರುವು ಪಡೆಯುತ್ತದೆ ಎಂಬುವುದು ನೋಡಬೇಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Prajwal Revanna Case: ಸಂತ್ರಸ್ತ ಮಹಿಳೆ ಸಿಕ್ಕಿದ್ದು ಸಂಬಂಧಿಕರ ಮನೆಯಲ್ಲಿ! ತೋಟದ ಮನೆಯಲ್ಲಲ್ಲ; ಸಾ.ರಾ. ಮಹೇಶ್‌ ಸ್ಫೋಟಕ ಮಾಹಿತಿ

Prajwal Revanna Case: ಹುಣಸೂರಿನ ಕರಿಗೌಡ ರಸ್ತೆಯಲ್ಲಿ ಪವಿತ್ರಾ ಹರೀಶ್ ಎಂಬುವವರ ಮನೆಯಿಂದ ಕಿಡ್ನ್ಯಾಪ್ ಆಗಿದ್ದಾಳೆ ಎನ್ನಲಾದ ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ. ಪವಿತ್ರಾ ಹರೀಶ್ ಸಂತ್ರಸ್ತ ಮಹಿಳೆಯ ಸಂಬಂಧಿಯಾಗಿದ್ದಾರೆ. ಯಾರು ಕರೆದುಕೊಂಡು ಹೋದರು? ಯಾವ ಅಧಿಕಾರಿಯ ಲೊಕೇಷನ್ ಇತ್ತು? ಎಲ್ಲದಕ್ಕೂ ದಾಖಲೆಗಳನ್ನು ತೆಗೆಯಿರಿ. ಎಸ್‌ಐಟಿಗೆ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ. ಎಸ್‌ಐಟಿಯಲ್ಲಿರುವ ಕೆಲ ಅಧಿಕಾರಿಗಳು ಕಾಂಗ್ರೆಸ್ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಾ.ರಾ. ಮಹೇಶ್ ಆರೋಪಿಸಿದ್ದಾರೆ.

VISTARANEWS.COM


on

Prajwal Revanna Case Victim found at relative house Not in a farmhouse Sa Ra Mahesh Explosive Information
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಿಸಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಮೇಲೆ ಕೇಳಿ ಬಂದಿರುವ ಅಪಹರಣ ಕೇಸ್‌ಗೆ ಟ್ವಿಸ್ಟ್‌ ಸಿಕ್ಕಿದೆ. ಸಂತ್ರಸ್ತ ಮಹಿಳೆ ಸಿಕ್ಕಿದ್ದು ತೋಟದ ಮನೆಯಲ್ಲಿ ಅಲ್ಲ. ಹುಣಸೂರಿನ ಸಂಬಂಧಿಕರ ಮನೆಯಲ್ಲಿ ಎಂದು ಮಾಜಿ ಸಚಿವ ಸಾ.ರಾ. ಮಹೇಶ್ ಹೇಳಿದ್ದಾರೆ. ಈ ಮೂಲಕ ತನಿಖೆಯ ಸತ್ಯಾಂಶದ ಬಗ್ಗೆ ಸಂಶಯವನ್ನು ವ್ಯಕ್ತಪಡಿಸಿದ್ದಾರೆ.

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಹಾಗೂ ಎಚ್‌.ಡಿ. ರೇವಣ್ಣ ಕಿಡ್ನ್ಯಾಪ್‌ ಕೇಸ್‌ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಾ.ರಾ. ಮಹೇಶ್‌, ಕೇಸ್ ರಿಜಿಸ್ಟರ್ ಆಗುವುದಕ್ಕೂ ಮುಂಚೆಯೇ ನ್ಯಾಷನಲ್ ಮೀಡಿಯಾದಲ್ಲಿ ಸುದ್ದಿ ಬರುತ್ತದೆ. ಹಾಗಾದರೆ ಇದರ ರೂವಾರಿ ಯಾರು? ರಾಜಗೋಪಾಲ್ ಅವರು ತೋಟದಲ್ಲಿ ಇದ್ದ ಬಗ್ಗೆ ವಿಡಿಯೊ ಯಾಕೆ ಆಚೆ ಬಂದಿಲ್ಲ? ಎಂದು ಪ್ರಶ್ನೆ ಮಾಡಿದ್ದಾರೆ.

ಹುಣಸೂರಿನ ಕರಿಗೌಡ ರಸ್ತೆಯಲ್ಲಿ ಪವಿತ್ರಾ ಹರೀಶ್ ಎಂಬುವವರ ಮನೆಯಿಂದ ಕಿಡ್ನ್ಯಾಪ್ ಆಗಿದ್ದಾಳೆ ಎನ್ನಲಾದ ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ. ಪವಿತ್ರಾ ಹರೀಶ್ ಸಂತ್ರಸ್ತ ಮಹಿಳೆಯ ಸಂಬಂಧಿಯಾಗಿದ್ದಾರೆ. ಯಾರು ಕರೆದುಕೊಂಡು ಹೋದರು? ಯಾವ ಅಧಿಕಾರಿಯ ಲೊಕೇಷನ್ ಇತ್ತು? ಎಲ್ಲದಕ್ಕೂ ದಾಖಲೆಗಳನ್ನು ತೆಗೆಯಿರಿ. ಎಸ್‌ಐಟಿಗೆ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ. ಎಸ್‌ಐಟಿಯಲ್ಲಿರುವ ಕೆಲ ಅಧಿಕಾರಿಗಳು ಕಾಂಗ್ರೆಸ್ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಾ.ರಾ. ಮಹೇಶ್ ಆರೋಪಿಸಿದ್ದಾರೆ.

ಪೆನ್‌ಡ್ರೈವ್‌ ಸೂತ್ರಧಾರಿ ಕಾರ್ತಿಕ್‌ ಹಿಂದೆ ಯಾರಿದ್ದಾರೆ? ಎಚ್‌ಡಿಕೆ ಪ್ರಶ್ನೆ

ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದ (Hassan Pen Drive Case) ಸೂತ್ರಧಾರಿ ಕಾರ್ತಿಕ್‌ ಗೌಡ ಕಥೆ ಏನು? ಆತ ಎಲ್ಲಿದ್ದಾನೆ? ಆತನ ಹಿಂದೆ ಯಾರಿದ್ದಾರೆ? ನಿಮ್ಮ ಈ ತನಿಖೆಯ ವಿಸ್ತಾರ ಎಷ್ಟು? ಕೇವಲ ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧ ಅಷ್ಟೇ ನಿಮ್ಮ ತನಿಖೆಯೇ? ಇಲ್ಲವೇ ಆಯೋಗ ಹೇಳಿದಂತೆ ಎಲ್ಲ ರಾಜಕಾರಣಿಗಳ ವಿರುದ್ಧ ತನಿಖೆ ಮಾಡುತ್ತಿದ್ದೀರಾ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ರೇವಣ್ಣ ಅರೆಸ್ಟ್ ಆದಾಗ ನನಗೆ ಗೊತ್ತೇ ಇಲ್ಲ ಅಂತ ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಏನು ಹೇಳಿದ್ದಾರೆ? ಈ ಪ್ರಕರಣದ ಹಿಂದೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಇದ್ದಾರೆ ಎಂಬುದಾಗಿ ಹೇಳಿದ್ದಾರೆ. ಈಗ ನನ್ನ ಪ್ರಶ್ನೆ ಎಂದರೆ ಈ ಪೆನ್‌ಡ್ರೈವ್‌ ರೂವಾರಿ ಕಾರ್ತಿಕ್‌ನನ್ನು ಏಕೆ ಬಿಟ್ಟಿದ್ದೀರಿ? ಎಸ್ಐಟಿ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಎಂದು ಪ್ರಶ್ನೆ ಮಾಡಿದರು.

ಈ ವೇಳೆ ಪ್ರಜ್ವಲ್‌ ಪೆನ್‌ಡ್ರೈವ್‌ ವಿಷಯವಾಗಿ ಹಾಸನದ ನವೀನ್ ಗೌಡ ಮಾತನಾಡಿದ್ದಾರೆನ್ನಲಾದ ಆಡಿಯೊವನ್ನು ಎಚ್‌.ಡಿ. ಕುಮಾರಸ್ವಾಮಿ ಪ್ಲೇ ಮಾಡಿದರು. ಅಲ್ಲದೆ, ನವೀನ್ ಗೌಡ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಜತೆ ಇರುವ ಹಾಗೂ ಸಚಿವ ಜಮೀರ್ ಅಹಮದ್ ಜತೆ ಇರುವ ಫೋಟೊವನ್ನು ಬಿಡುಗಡೆ ಮಾಡಿದರು. ನವೀನ್‌ ಗೌಡನ ಮೇಲೆ ಯಾವ ಕ್ರಮವನ್ನು ತೆಗೆದುಕೊಂಡಿದ್ದೀರಿ? ಎಂದು ಪ್ರಶ್ನೆ ಮಾಡಿದರು.

ಪೆನ್‌ಡ್ರೈವ್‌ ಸಂಚಿನ ಹಿಂದಿರುವ ಡಿ.ಕೆ. ಶಿವಕುಮಾರ್‌ ವಜಾಗೆ ಕುಮಾರಸ್ವಾಮಿ ಆಗ್ರಹ

ಈ ಪೆನ್‌ಡ್ರೈವ್‌ ಹಂಚಿಕೆ ಸಂಚಿನ ಹಿಂದೆ ಇರುವ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಸಂಪುಟದಿಂದ ಕೂಡಲೇ ವಜಾ ಮಾಡಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಬಗ್ಗೆ ದಿಢೀರ್‌ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಈ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಒಳಸಂಚಿದೆ. ಕ್ಯಾಬಿನೆಟ್‌ನಿಂದ ಮೊದಲು ಅವರನ್ನು ಕಿತ್ತುಹಾಕಿ. ಈ ಪ್ರಕರಣವನ್ನು ಅಷ್ಟು ಸುಲಭವಾಗಿ ನಾನು ಬಿಡಲ್ಲ. ಈ ಸಿಎಂ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ಮೊದಲು ಡಿಕೆಶಿಯನ್ನು ಕೈಬಿಡಲಿ ಎಂದು ಆಗ್ರಹಿಸಿದರು.

ಎಸ್ಐಟಿ ಅಧಿಕಾರಿಗಳು ಸಿಎಂ, ಡಿಸಿಎಂಗೆ ಏಜೆಂಟ್‌

ಎಸ್ಐಟಿ ಅಧಿಕಾರಿಗಳು ಸಿಎಂ, ಡಿಸಿಎಂಗೆ ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ. ದೇವರಾಜೇಗೌಡನನ್ನು ಯಾಕೆ ಕರೆಸಿಕೊಂಡರು? ಯಾಕೆ ಅವರ ಹೇಳಿಕೆಯಲ್ಲಿನ ಒಂದು ಪ್ಯಾರಾವನ್ನು ಡಿಲಿಟ್ ಮಾಡಿ ಎಂದು ಹೇಳಿದರು? ಡಿಕೆಶಿ ಇತಿಹಾಸ ಎಲ್ಲರಿಗೂ ಗೊತ್ತು. ಮೊದಲು ಈ ಒಳಸಂಚು ಮಾಡಿದ್ದರಿಂದ ಅವರ ಮೇಲೆ ಕ್ರಮವಾಗಲಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದರು.

ಸಿಎಂ, ಡಿಕೆಶಿ ಇನ್ವೆಸ್ಟಿಗೇಷನ್‌ ಟೀಮ್

ಪ್ರಜ್ವಲ್‌ ಮೇಲಿನ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ದೂರು ಸಿದ್ಧಪಡಿಸಿ ಹೊಳೆನರಸೀಪುರಕ್ಕೆ ಕಳಿಸಿದ್ದರು. ಬಳಿಕ ಎಸ್ಐಟಿ ತನಿಖೆಗೆ ಆದೇಶಿಸಿ ದೂರು ದಾಖಲು ಮಾಡಿಕೊಂಡಿದ್ದಾರೆ. ಇದನ್ನು ಒಪ್ಪೋಣ. ಆದರೆ ನಿಷ್ಪಕ್ಷಪಾತ ತನಿಖೆ ಆಗುತ್ತದೆ ಎಂದು ನಾನು ಭಾವಿಸಿದೆ. ಇಲ್ಲಾಗಿದ್ದೇನು? ಸಿಎಂ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್‌ ಟೀಂ, ಡಿ.ಕೆ. ಶಿವಕುಮಾರ್ ಇನ್ವೆಸ್ಟಿಗೇಷನ್‌ ಟೀಮ್ ಎಂದು ಮಾಡಿಕೊಂಡಿದ್ದಾರೆ. ಈ ಕೇಸ್‌ಗೆ ಸಂಬಂಧಪಟ್ಟಂತೆ ನಡೆದ ಕಾಲ್ ರೆಕಾರ್ಡಿಂಗ್ ಹೊರಗೆ ಬರಬೇಕು. ಯಾರು ಯಾರು? ಯಾರ ಜತೆ ಮಾತನಾಡಿದ್ದಾರೆ ಎಂಬುದೆಲ್ಲವೂ ಹೊರಬರಬೇಕು ಎಂದು ಆಗ್ರಹಿಸಿದರು.

ಕೆಲವರ ತೇಜೋವಧೆಗೆ ಈ ಪ್ರಕರಣವನ್ನು ಬಳಸಿಕೊಂಡಿರಿ

ನಾನು ಪ್ರಜ್ವಲ್ ರೇವಣ್ಣ ಅವರನ್ನು ವಹಿಸಿಕೊಂಡು ಮಾತನಾಡುವುದಿಲ್ಲ. ಎಫ್ಐಆರ್ ದಾಖಲು ಮಾಡಿದಾಗ ಜಾಮೀನು ಸಹಿತ ಪ್ರಕರಣವನ್ನು ದಾಖಲು ಮಾಡಿದೆವು. ಎರಡನೇ ದಿನ ಮತ್ತೆ ಇನ್ನೊಂದು ಪ್ರಕರಣವನ್ನು ದಾಖಲು ಮಾಡಿದೆವು. ಗನ್ ಪಾಯಿಂಟ್‌ ಅಡಿ ಬೆದರಿಕೆಯೊಡ್ಡಿ ಅತ್ಯಾಚಾರ ಆಗಿದೆ ಅಂತ ದೂರು ಕೊಟ್ಟರು. ಮಾಧ್ಯಮಗಳ ಮುಂದೆ ಕಥೆ ಕಟ್ಟಿದವರು ಯಾರು? ಸುಪ್ರೀಂ ಕೋರ್ಟ್ ಏನು ಹೇಳಿದೆ? ಇಂಥ ಪ್ರಕರಣದಲ್ಲಿ ಗೌಪ್ಯತೆಯನ್ನು ಉಳಿಸಿಕೊಂಡಿರಾ? ಕೆಲವರ ತೇಜೋವಧೆಗೆ ಈ ಪ್ರಕರಣವನ್ನು ಬಳಸಿಕೊಂಡಿರಿ. ಇದು ಆಘಾತಕಾರಿ ಪ್ರಕರಣವಾಗಿದೆ. 2022ರಲ್ಲಿ ಈ ಘಟನೆ ಆಗಿದೆ ಎಂದು ಹೇಳಿದ್ದೀರಿ. ಮತ್ಯಾಕೆ ಸುಮ್ಮನಿದ್ದಿರಿ? ಎಂದು ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದರು.

ಆಕೆಯ ಹಿಂದೆ ಯಾರಿದ್ದಾರೆ?

22ನೇ ತಾರೀಖು ಪ್ರಜ್ವಲ್ ಪಕ್ಕಾ ಕೂತಿದ್ದ ಹೆಣ್ಣು ಮಗಳು ಯಾರು? ಮೊದಲ ವಿಡಿಯೊದಲ್ಲಿ ಬಂದ ಹೆಣ್ಣು ಮಗಳು 22ನೇ ತಾರೀಖು ಪ್ರಜ್ವಲ್ ಜತೆ ವೇದಿಕೆ ಹಂಚಿಕೆ ಮಾಡಿಕೊಂಡಿದ್ದಾರೆ. ಆಕೆಯ ಹಿಂದೆ ಯಾರಿದ್ದಾರೆ? ಸಿಎಂ ಸಿದ್ದರಾಮಯ್ಯ ಅವರೇ, ಡಿ.ಕೆ. ಶಿವಕುಮಾರ್ ಅವರೇ ಏನಿದು? ಎಂದು ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಮಹಿಳೆಯ ಕಿಡ್ನ್ಯಾಪ್‌ ಕೇಸ್‌ ಕತೆ ಏನು?

ರೇವಣ್ಣ ವಿರುದ್ಧ ಇಂದಿಗೂ ಸಹ ಯಾರೂ ದೂರು ಕೊಟ್ಟಿಲ್ಲ. ಬಳಿಕ ಕಿಡ್ನ್ಯಾಪ್ ಕೇಸ್ ದಾಖಲು ಮಾಡಿಕೊಂಡಿರಿ. ಆ ಹೆಣ್ಣು ಮಗಳು ಬದುಕಿದ್ದಾಳೋ, ಮೃತಪಟ್ಟಿದ್ದಾಳೋ ಗೊತ್ತಿಲ್ಲ ಎಂದು ನಿಮ್ಮ ವಕೀಲರು ನ್ಯಾಯಾಧೀಶರ ಮುಂದೆ ಹೇಳುತ್ತಾರೆ. ಆ ಮೇಲೆ ಆಕೆಯನ್ನು ಕರೆದುಕೊಂಡು ಬಂದಿರಿ. ಎಲ್ಲಿಂದ ಕರೆದುಕೊಂಡು ಬಂದಿರಿ? ಏನು ಮಹಜರು ಮಾಡಿದಿರಿ? ಈ ದಿನದವರೆಗೂ ಜಡ್ಜ್ ಮುಂದೆ ಆ ಹೆಣ್ಣು ಮಗಳನ್ನು ಏಕೆ ಹಾಜರುಪಡಿಸಲಿಲ್ಲ? ಎಂದು ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಇದನ್ನೂ ಓದಿ: Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

ಎಚ್.ಡಿ. ರೇವಣ್ಣ ಅವರು ತನಿಖೆಗೆ ಸಹಕಾರ ಕೊಡುತ್ತಿಲ್ಲ ಎಂದು ಹೇಳಿದ್ದೀರಿ. ನೀವು ಹೇಳಿದಂತೆ ಮಾಜಿ‌ ಮಂತ್ರಿ ಹೇಳಿಕೆ ಕೊಡಬೇಕಾ? ಇದು ಯಾವ ಇನ್ವೆಸ್ಟಿಗೇಷನ್ ಎಂದು ಎಚ್‌.ಡಿ. ಕುಮಾರಸ್ವಾಮಿ ಖಾರವಾಗಿ ಪ್ರಶ್ನೆ ಮಾಡಿದ್ದಾರೆ.

Continue Reading

Lok Sabha Election 2024

Lok Sabha Election 2024: ಮತದಾನಕ್ಕೆ ಬಂದು ಇವಿಎಂಗೆ ಬೆಂಕಿ ಹಾಕಿದ ಯುವಕ; ಸುರಪುರದಲ್ಲಿ ಕಲ್ಲು ತೂರಾಟ

Lok Sabha Election 2024 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಲವು ಕಡೆಗಳಲ್ಲಿ ಗದ್ದಲ ಗಲಾಟೆಗಳು ವರದಿ ಆಗಿವೆ. ಸುರಪುರ ಉಪಚುನಾವಣೆ ಮತದಾನದ ವೇಳೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಪರಸ್ಪರ ಕಲ್ಲು ತೂರಾಟ ನಡೆದಿದೆ. ಬಾಗಲವಾಡಿ ಗ್ರಾಮದಲ್ಲಿ ಯುವಕನೊಬ್ಬ ಇವಿಎಂಗೆ ಬೆಂಕಿ ಹಚ್ಚಿದ್ದಾನೆ.

VISTARANEWS.COM


on

By

Lok sabha Election 2024
Koo

ಯಾದಗಿರಿ/ಬೆಳಗಾವಿ: ಯಾದಗಿರಿಯ ಸುರಪುರ ಉಪಚುನಾವಣೆ ಮತದಾನದ (Lok Sabha Election 2024) ವೇಳೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ಶುರುವಾಗಿದ್ದು, ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಕಲ್ಲು ತೂರಾಟದ ವೇಳೆ ಓರ್ವನ ತಲೆಗೆ ಗಂಭೀರ ಗಾಯವಾಗಿದೆ.

ಮತದಾನದ ವೇಳೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳವು ವಿಕೋಪಕ್ಕೆ ತಿರುಗಿದೆ. ಈ ವೇಳೆ ಕೈ-ಕಮಲ ಕಾರ್ಯಕರ್ತರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟ ಹಿನ್ನೆಲೆ ಗ್ರಾಮದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ‌ ದೌಡಾಯಿಸಿ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು. ಸುರಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇವಿಎಂಗೆ ಬೆಂಕಿ ಹಾಕಿದ ಯುವಕ

ನೆರೆಯ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಸಾಂಗೋಲಾ ತಾಲೂಕಿನ ಬಾಗಲವಾಡಿ ಗ್ರಾಮದಲ್ಲಿ ಯುವಕನೊಬ್ಬ ಇವಿಎಂಗೆ ಬೆಂಕಿ ಹಚ್ಚಿದ್ದಾನೆ. ಇದರಿಂದಾಗಿ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಅಲ್ಲಿದ್ದ ಸಿಬ್ಬಂದಿ ನೀರು ಹಾಕಿ ಬೆಂಕಿ ಹರಿಸಿದ್ದಾರೆ. ಮರಾಠಾ ಆಕರ್ಷಣ ವಿಚಾರಕ್ಕೆ ಆಕ್ರೋಶಗೊಂಡಿದ್ದ ಎನ್ನಲಾಗಿದೆ. ಇನ್ನೂ ಈ ಮತಗಟ್ಟೆಯಲ್ಲಿ ಸುಮಾರು 1300 ಮತದಾರರಿರುವ ಕೇಂದ್ರವಾಗಿದೆ. ಸದ್ಯ ಯುವಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Lok Sabha Election 2024: ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ; ಮತದಾನಕ್ಕೆ ಬಂದು ಟ್ರೀಟ್‌ ಮಾಡಿದ ಡಾಕ್ಟರ್‌

ವಿಜಯನಗರದಲ್ಲಿ ಮತದಾನ ಬಹಿಷ್ಕಾರ

ವಿಜಯನಗರ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಚಿಲಕನಹಟ್ಟಿ ಗ್ರಾಮದಲ್ಲಿ ಪ್ರತ್ಯೇಕ ಮತಗಟ್ಟೆ ವಿಂಗಡಣೆ ಮಾಡಿದ್ದಕ್ಕೆ ಮತದಾನ ಬಹಿಷ್ಕಾರ ಹಾಕಲಾಯಿತು. ಹಾರುವನಹಳ್ಳಿ ಗ್ರಾಮದ ಮತಗಟ್ಟೆ ಸಂಖ್ಯೆ 78ರಲ್ಲಿ, ಚಿಲಕನಹಟ್ಟಿಯ ಮಾರುತಿ ನಗರದಲ್ಲಿ ಪ್ರತ್ಯೇಕ ಮತದಾನ ಕೇಂದ್ರ ಮಾಡುವಂತೆ ಮತದಾರರು ಪಟ್ಟು ಹಿಡಿದರು. ಕಳೆದ ಹಲವು ವರ್ಷದಿಂದ ಪ್ರತ್ಯೇಕ ಮತಗಟ್ಟೆಗೆ ಒತ್ತಾಯವಿತ್ತು. ಚಿಲಕನಹಟ್ಟಿಯಿಂದ ಹಾರುವನಹಳ್ಳಿ ಗ್ರಾಮಕ್ಕೆ 3 ಕಿ.ಮೀ ಅಂತರವಿದೆ. ಅದಕ್ಕೆ ರಾಷ್ಟ್ರೀಯ ಹೆದ್ದಾರಿ 50 ದಾಟಬೇಕಿದ್ದು, ಅಪಘಾತ ಸಂಭವಿಸಿದರೆ ಯಾರು ಹೊಣೆ ಎಂಬ ಪ್ರಶ್ನೆ ಗ್ರಾಮಸ್ಥರದ್ದು.

ದಾವಣಗೆರೆಯಲ್ಲಿ ಗೌಪ್ಯ ಮತದಾನ ವೈರಲ್‌

ದಾವಣಗೆರೆ: ಎಷ್ಟೇ ಕಟ್ಟುನಿಟ್ಟಾಗಿ ಗೌಪ್ಯ ಮತದಾನ ಮಾಡಿದರೂ ಫೋಟೋ ತೆಗೆದುಕೊಂಡು ಪಬ್ಲಿಕ್‌ ಮಾಡುತ್ತಿರುವವರು ಕಂಡುಬಂದಿದ್ದಾರೆ. ದಾವಣಗೆರೆಯ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್‌ಗೆ ಮತ ಹಾಕಿದ್ದನ್ನು ಬಿಜೆಪಿ ಕಾರ್ಯಕರ್ತನೊಬ್ಬ ಫೋಟೋ ಕ್ಲಿಕ್ಕಿಸಿಕೊಂಡಿದ್ದು, ಅದನ್ನು ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ಮತಗಟ್ಟೆಗೆ ಮೊಬೈಲ್ ನಿಷೇಧ ಮಾಡಿದರೂ ಮೊಬೈಲ್ ತೆಗೆದುಕೊಂಡು ಹೋಗಲಾಗಿದೆ.

ಬೆಳಗಾವಿಯಲ್ಲಿ ಬಿಜೆಪಿ- ಕಾಂಗ್ರೆಸ್‌ ಕಾರ್ಯಕರ್ತ ವಾಗ್ವಾದ

ಬೆಳಗಾವಿ: ಕೆಲವೆಡೆ ಬಿಜಪಿ- ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಬೆಳಗಾವಿಯ ಹನುಮಾನ್ ನಗರದಲ್ಲಿರುವ ಸರ್ಕಾರಿ ಕನ್ನಡ ಹಿರಿಯ ಶಾಲೆಯಲ್ಲಿರುವ ಮತಗಟ್ಟೆಯಲ್ಲಿ ಮತಗಟ್ಟೆಯಲ್ಲೇ ನಿಂತು ಮತದಾರರು ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಪ್ರಭಾವ ಬೀರುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದರು. ಈ ವೇಳೆ ಕಾಂಗ್ರೆಸ್ ‌ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Lok Sabha Election 2024: ರಾಜ್ಯದಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಶೇ. 54.20 ಮತದಾನ; ಯಾವ ಕ್ಷೇತ್ರದಲ್ಲಿ ಎಷ್ಟು?

Lok Sabha Election 2024: ರಾಜ್ಯದ 14 ಕ್ಷೇತ್ರಗಳಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆವರೆಗೆ ಚಿಕ್ಕೋಡಿ ಕ್ಷೇತ್ರದಲ್ಲಿ ಗರಿಷ್ಠ ಶೇ.59.65 ಮತದಾನವಾಗಿದ್ದು, ಕಲಬುರಗಿಯಲ್ಲಿ ಕನಿಷ್ಠ ಶೇ.47.67 ವೋಟಿಂಗ್‌ ಆಗಿದೆ.

VISTARANEWS.COM


on

Lok Sabha Election 2024
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕುರ್ವೆಯ ಮೋಹನ್ ಮತ್ತು ಸವಿತಾ ದಂಪತಿ ಸ್ವಂತ ದೋಣಿಯ ಮೂಲಕ ದಂಡೆಭಾಗದ ಶಾಲೆ ಮತಗಟ್ಟೆಗೆ ತೆರಳಿ ಸಂತಸದಿಂದ ಮತ ಚಲಾಯಿಸಿದರು.
Koo

ಬೆಂಗಳೂರು: ರಾಜ್ಯದಲ್ಲಿ ಬೆಳಗಾವಿ ಸೇರಿ 14 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ (lok sabha election 2024) ಮಂಗಳವಾರ ನಡೆಯುತ್ತಿದ್ದು, ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಧ್ಯಾಹ್ನ 3ಗಂಟೆವರೆಗೆ ಅಂದಾಜು ಶೇ.54.20 ಮತದಾರರು (Voter Turnout) ಹಕ್ಕು ಚಲಾಯಿಸಿದ್ದಾರೆ. ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ ಎಂಬ ಮಾಹಿತಿ ಇಲ್ಲಿದೆ.

14 ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಗೆ ಆರಂಭವಾಗಿದ್ದ ಮತದಾನ ಸಂಜೆ 6ಗಂಟೆವರೆಗೆ ನಡೆಯಲಿದೆ. ಬೆಳಗ್ಗೆ ಮೊದಲ ಎರಡು ಗಂಟೆಗಳಲ್ಲಿ ಅಂದರೆ 9 ಗಂಟೆವರೆಗೆ ಶೇ.9.45% ಮತದಾನ ದಾಖಲಾಗಿತ್ತು. ಬಳಿಕ 11 ಗಂಟೆಗೆ ಶೇ.24.48 ಹಾಗೂ 1 ಗಂಟೆವರೆಗೆ ಶೇ.41.59 ಮತದಾನ ವರದಿಯಾಗಿತ್ತು. ಅದೇ ರೀತಿ ಮಧ್ಯಾಹ್ನ 3ಗಂಟೆವರೆಗೆ ಶೇ.54.20 ವೋಟಿಂಗ್‌ ನಡೆದಿದೆ. ಚಿಕ್ಕೋಡಿ ಕ್ಷೇತ್ರದಲ್ಲಿ ಗರಿಷ್ಠ ಶೇ.59.65 ಮತದಾನವಾಗಿದ್ದು, ಕಲಬುರಗಿಯಲ್ಲಿ ಕನಿಷ್ಠ ಶೇ.47.67 ವೋಟಿಂಗ್‌ ಆಗಿದೆ.

ಕ್ಷೇತ್ರವಾರು ಮತದಾನ ಮಾಹಿತಿ

ಬಾಗಲಕೋಟೆ- ಶೇ. 54.95
ಬೆಳಗಾವಿ- ಶೇ.53.85
ಬಳ್ಳಾರಿ-ಶೇ.56.76
ಬೀದರ್-‌ ಶೇ. 49.89
ವಿಜಯಪುರ-ಶೇ.49.88
ಚಿಕ್ಕೋಡಿ-ಶೇ. 59.65
ದಾವಣಗೆರೆ- ಶೇ. 57.31
ಧಾರವಾಡ- ಶೇ. 55
ಕಲಬುರಗಿ-ಶೇ.47.67
ಹಾವೇರಿ-ಶೇ. 58.45
ಕೊಪ್ಪಳ- ಶೇ. 55.06
ರಾಯಚೂರು-ಶೇ.49.49
ಶಿವಮೊಗ್ಗ-ಶೇ.57.96
ಉತ್ತರ ಕನ್ನಡ-ಶೇ.55.98

ಇದನ್ನೂ ಓದಿ | Lok Sabha Election 2024: ಮತ ಹಕ್ಕು ಚಲಾಯಿಸಿದ ಪ್ರಧಾನಿ ಮೋದಿ; ಮತದಾನ ಮಾಡಲು ಕನ್ನಡದಲ್ಲೇ ಕರೆ

Continue Reading

Lok Sabha Election 2024

Lok Sabha Election 2024: ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ; ಮತದಾನಕ್ಕೆ ಬಂದು ಟ್ರೀಟ್‌ ಮಾಡಿದ ಡಾಕ್ಟರ್‌

Lok Sabha Election 2024 : ವಿಪರೀತ ಬಿಸಿಲಿಗೆ ಜನರು ಹೈರಣಾಗಿದ್ದಾರೆ. ತಾಪಮಾನ ಏರಿಕೆಯಲ್ಲೂ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆಯು ಕರ್ನಾಕಟದಲ್ಲಿ ಬಿರುಸಿನಿಂದ ನಡೆಯುತ್ತಿದೆ. ಧಾರವಾಡದಲ್ಲಿ ಬಿಸಿ ತಾಪಕ್ಕೆ ಚುನಾವಣಾ ಸಿಬ್ಬಂದಿಯೊಬ್ಬರು ಕುಸಿದು ಬಿದ್ದಿದ್ದಾರೆ.

VISTARANEWS.COM


on

By

lok sabha Election 2024
Koo

ಧಾರವಾಡ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಚುನಾವಣಾ ಸಿಬ್ಬಂದಿ ಕುಸಿದು ಬಿದ್ದರು. ಧಾರವಾಡದ ಗಾಂಧಿನಗರ ಕನ್ನಡ ಶಾಲೆಯಲ್ಲಿದ್ದ ಮತಗಟ್ಟೆಯಲ್ಲಿ ಘಟನೆ ನಡೆದಿದೆ.

ಮಹಿಳಾ ಅಧಿಕಾರಿಯೊಬ್ಬರು ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಏಕಾಏರಿ ತಲೆ ತಿರುಗಿ ಬಿದ್ದಿದ್ದರು. ಕೂಡಲೇ ಅಲ್ಲಿದ್ದ ಸಿಬ್ಬಂದಿ, ಮತದಾರರು ಸಹಾಯಕ್ಕೆ ಧಾವಿಸಿದರು. ಇದೇ ವೇಳೆ ಮತದಾನ ಮಾಡಲು ಬಂದಿದ್ದ ವೈದ್ಯ ನಿತಿನ್ ಚಂದ್ರ ಹತ್ತಿಕಾಳು ಎಂಬುವವರು ತಲೆ ತಿರುಗಿ ಸುಸ್ತಾಗಿದ್ದ ಮಹಿಳೆಯನ್ನು ಪರಿಶೀಲಿಸಿ ಪ್ರಥಮ ಚಿಕಿತ್ಸೆ ನೀಡಿದರು. ಆ ಬಳಿಕ ಮತದಾನ ಮಾಡಿದರು.

ಅಬುಧಾಬಿಯಿಂದ ಬಂದು ಮತ ಹಾಕಿದ

ಚಿಕ್ಕೋಡಿ: ಅಬುಧಾಬಿಯಲ್ಲಿ ಕೆಲಸ ಮಾಡುತ್ತಿರುವ ಸುರಜ ಉಪಾಶೆ ಎಂಬ ಯುವಕ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮತ ಹಕ್ಕು ಚಲಾಯಿಸಿದ್ದಾನೆ. ಕಳೆದ 10 ವರ್ಷದಿಂದ ಅಬುಧಾಬಿಯಲ್ಲಿರುವ ಯುವಕ, ಮತದಾನಕ್ಕಾಗಿಯೇ ಆಗಮಿಸಿದ್ದಾನೆ. ಹುಕ್ಕೇರಿ ಪಟ್ಟಣದ ಗಾಂಧಿ ನಗರ ಶಾಲೆಯಲ್ಲಿ ಮತದಾನ ಮಾಡಿದ್ದು, ಎಲ್ಲರೂ ತಮ್ಮ ಹಕ್ಕು ಚಲಾಯಿಸುವಂತೆ ಮನವಿ ಮಾಡಿದ್ದಾನೆ.

ಶಿವಮೊಗ್ಗದಲ್ಲಿ ಉಚಿತ ತಿಂಡಿ, ಕಾಫಿ- ಟೀ

ಶಿವಮೊಗ್ಗ: ಶಿವಮೊಗ್ಗದ ಶುಭಂ ಹೋಟೆಲ್‌ನಲ್ಲಿ, ಮತದಾನದ ಪ್ರಮಾಣ ಹೆಚ್ಚಿಸಿ, ಜಾಗೃತಿ ಮೂಡಿಸಲು ಸ್ಪೆಷಲ್ ಆಫರ್ ನೀಡಲಾಯಿತು. ಬೆಳಗ್ಗೆ 7ರಿಂದ‌ ಮಧ್ಯಾಹ್ನ 12 ಗಂಟೆವರೆಗೆ ಫ್ರೀ ಟಿಫನ್ ನೀಡಲಾಯಿತು. ಬೆಳಗ್ಗೆಯಿಂದ 5 ಸಾವಿರಕ್ಕೂ ಹೆಚ್ಚು ಮತದಾರರು ಫ್ರೀ ಟಿಫನ್ ಸವಿದರು. ಪಲಾವ್, ದೋಸೆ, ಬಿಸಿಬೇಳೆಬಾತ್, ಕಾಫಿ ತಿಂಡಿ ಫ್ರೀ ನೀಡಲಾಗಿದೆ. ಸುಮಾರು 10 ಸಾವಿರ ಮಂದಿಗೆ ಆಗುವಷ್ಟು ಹೋಟೆಲ್‌ ಮಾಲಿಕರು ಉಚಿತ ತಿಂಡಿಯ ವ್ಯವಸ್ಥೆ ಮಾಡಿದ್ದರು.

ವೋಟ್ ಮಾಡಿದರೆ ಉಚಿತ ಐಸ್‌ಕ್ರೀಂ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಡೈರೀಸ್ ಐಸ್‌ಕ್ರೀಮ್ ಮಾಲಿಕರು ವೋಟ್ ಮಾಡಿದವರಿಗೆ ಉಚಿತವಾಗಿ ಎಲೆಕ್ಷನ್ ಸ್ಪೆಷಲ್ ಐಸ್‌ಕ್ರೀಮ್ ವಿತರಿಸಿದರು. ಉಜ್ವಲ ಭಾರತದ ಭವಿಷ್ಯಕ್ಕಾಗಿ ಮತದಾನ ಪ್ರೋತ್ಸಾಹಿಸಲು ಡೈರಿಸ್ ಐಸ್ಕ್ರೀಮ್‌ ವಿತರಣೆ ನಡೆಯಿತು.

3 ಲಕ್ಷ ರೂ. ವೆಚ್ಚ ಮಾಡಿ ಬಂದ ಅನಿವಾಸಿ ಭಾರತೀಯ!

ರಾಯಚೂರು: ಅನಿವಾಸಿ ಭಾರತೀಯರೊಬ್ಬರು 3 ಲಕ್ಷ ರೂ. ವೆಚ್ಚ ಮಾಡಿ ಮತದಾನ ಮಾಡುವುದಕ್ಕಾಗಿಯೇ ಭಾರತಕ್ಕೆ ಬಂದು ಹಕ್ಕು ಚಲಾಯಿಸಿದರು. ಆ ಮೂಲಕ ಮತದಾನದ ಮಹತ್ವ ಸಾರಿದರು. ಒಮಾನ್ ದೇಶದ ಮಸ್ಕತ್‌ನಲ್ಲಿರುವ ಅನಿವಾಸಿ ಭಾರತೀಯ, ಮಸ್ಕಿ ತಾಲ್ಲೂಕಿನ ವಟಗಲ್ ಗ್ರಾಮದ ನಿವಾಸಿ ಅಮರೇಶ ಈ ವ್ಯಕ್ತಿ. ಕಳೆದ 25 ವರ್ಷಗಳಿಂದ ಮಸ್ಕತ್‌ನಲ್ಲಿ ವಾಸಿಸುತ್ತಿರುವ ಅಮರೇಶ, ವಟಗಲ್ ಗ್ರಾಮದಲ್ಲಿ ಮತದಾನ ಮಾಡಿ, “ಪ್ರತಿಯೊಬ್ಬರೂ ಮತದಾನ ಮಾಡಿ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Prajwal Revanna Case Victim found at relative house Not in a farmhouse Sa Ra Mahesh Explosive Information
ರಾಜಕೀಯ7 mins ago

Prajwal Revanna Case: ಸಂತ್ರಸ್ತ ಮಹಿಳೆ ಸಿಕ್ಕಿದ್ದು ಸಂಬಂಧಿಕರ ಮನೆಯಲ್ಲಿ! ತೋಟದ ಮನೆಯಲ್ಲಲ್ಲ; ಸಾ.ರಾ. ಮಹೇಶ್‌ ಸ್ಫೋಟಕ ಮಾಹಿತಿ

MS Dhoni
ಪ್ರಮುಖ ಸುದ್ದಿ30 mins ago

MS Dhoni : ಮಹೇಂದ್ರ ಸಿಂಗ್​ ಧೋನಿಗೆ ಗಾಯ, ಆಂತರಿಕ ಮಾಹಿತಿ ಬಹಿರಂಗ

Lok sabha Election 2024
Lok Sabha Election 202433 mins ago

Lok Sabha Election 2024: ಮತದಾನಕ್ಕೆ ಬಂದು ಇವಿಎಂಗೆ ಬೆಂಕಿ ಹಾಕಿದ ಯುವಕ; ಸುರಪುರದಲ್ಲಿ ಕಲ್ಲು ತೂರಾಟ

Lok Sabha Election 2024
ಕರ್ನಾಟಕ34 mins ago

Lok Sabha Election 2024: ರಾಜ್ಯದಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಶೇ. 54.20 ಮತದಾನ; ಯಾವ ಕ್ಷೇತ್ರದಲ್ಲಿ ಎಷ್ಟು?

viral news
ಕ್ರೀಡೆ37 mins ago

Viral News: ದೆಹಲಿ To ಗೋವಾ ವಿಮಾನ ಟಿಕೆಟ್​​ ಬೆಲೆಗಿಂತ ದುಬಾರಿ ಟೀಮ್​ ಇಂಡಿಯಾದ ಟಿ20 ವಿಶ್ವಕಪ್​ ಜೆರ್ಸಿ

Met Gala Fashion
ಫ್ಯಾಷನ್37 mins ago

Met Gala Fashion: ಮೆಟ್‌ ಗಾಲಾದಲ್ಲಿ ಹೈಲೈಟಾದ ಭಾರತೀಯ ಫ್ಯಾಷೆನಬಲ್‌ ತಾರೆಯರಿವರು!

Lalu Prasad Yadav
ದೇಶ37 mins ago

ಎಲ್ಲ ಮೀಸಲಾತಿಯನ್ನು ಮುಸ್ಲಿಮರಿಗೇ ಕೊಡಬೇಕು ಎಂದ ಲಾಲು ಪ್ರಸಾದ್‌ ಯಾದವ್;‌ ಕೆಂಡವಾದ ಮೋದಿ!

IPL 2024
ಕ್ರೀಡೆ51 mins ago

ICC Ban : ಮ್ಯಾಚ್​ ಫಿಕಿ ವೆಸ್ಟ್ ಇಂಡೀಸ್​ ಆಟಗಾರನಿಗೆ ಐದು ವರ್ಷ ಬ್ಯಾನ್​

lok sabha Election 2024
Lok Sabha Election 202456 mins ago

Lok Sabha Election 2024: ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ; ಮತದಾನಕ್ಕೆ ಬಂದು ಟ್ರೀಟ್‌ ಮಾಡಿದ ಡಾಕ್ಟರ್‌

West Bengal
ದೇಶ1 hour ago

West Bengal: ಬಂಗಾಳದಲ್ಲಿ ಮತದಾನದ ವೇಳೆ ಹಿಂಸೆ; ಬಿಜೆಪಿ ಅಭ್ಯರ್ಥಿ ಮೇಲೆ ಟಿಎಂಸಿ ಕಾರ್ಯಕರ್ತರ ದಾಳಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 hour ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ23 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ23 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ23 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ4 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

ಟ್ರೆಂಡಿಂಗ್‌