Murali Sreeshankar wins medal in Diamond League, sets new record for India in long jump ಡೈಮಂಡ್​ ಲೀಗ್​ನಲ್ಲಿ ಪದಕ ಗೆದ್ದ ಮುರಳಿ, ಲಾಂಗ್​ ಜಂಪ್​ನಲ್ಲಿ ಭಾರತ ಪರ ನೂತನ ದಾಖಲೆ - Vistara News

ಕ್ರೀಡೆ

ಡೈಮಂಡ್​ ಲೀಗ್​ನಲ್ಲಿ ಪದಕ ಗೆದ್ದ ಮುರಳಿ, ಲಾಂಗ್​ ಜಂಪ್​ನಲ್ಲಿ ಭಾರತ ಪರ ನೂತನ ದಾಖಲೆ

ಭಾರತದ ಪರ ಡೈಮಂಡ್​ ಲೀಗ್​ ಸ್ಪರ್ಧೆಯ ಲಾಂಗ್​ ಜಂಪ್​​ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಎನಿಸಕೊಂಡಿದ್ದಾರೆ ಮುರಳಿ ಶ್ರೀಶಂಕರ್​.

VISTARANEWS.COM


on

Murali Sreeshankar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಭಾರತದ ಅಗ್ರಮಾನ್ಯ ಲಾಂಗ್ ಜಂಪರ್ ಮುರಳಿ ಶ್ರೀಶಂಕರ್ ಪ್ಯಾರೀಸ್​ನಲ್ಲಿ ನಡೆಯುತ್ತಿರುವ ಡೈಮಂಡ್​ ಲೀಗ್​ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ 8.09 ಮೀಟರ್ ಜಿಗಿದ ಅವರು ಮೂರನೇ ಸ್ಥಾನ ಗಿಟ್ಟಿಸಿಕೊಂಡರು. ಈ ಮೂಲಕ ಡೈಮಂಡ್​ ಲೀಗ್​ನಲ್ಲಿ ಭಾರತದ ಪರ ಪದಕದ ಗೆದ್ದ ಮೊದಲ ಲಾಂಗ್​ ಜಂಪರ್ ಎಂಬ ಖ್ಯಾತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಒಲಿಂಪಿಕ್ ಚಾಂಪಿಯನ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಮತ್ತು ಮಾಜಿ ಡಿಸ್ಕಸ್ ಎಸೆತಗಾರ ವಿಕಾಸ್ ಗೌಡ ಭಾರತ ಪರ ಡೈಮಂಡ್ ಲೀಗ್​ನಲ್ಲಿ ಪದಕ ಗೆದ್ದ ಭಾರತೀಯರಾಗಿದ್ದರು. ಇದೀಗ ಮೂರನೆಯವರಾಗಿ ಸಾಧನೆ ಮಾಡಿದ್ದಾರೆ ಮುರಳಿ ಶ್ರೀಶಂಕರ್​. ಕಾಮನ್ವೆಲ್ತ್ ಗೇಮ್ಸ್ ಕೂಟದಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಶ್ರೀಶಂಕರ್ ಶುಕ್ರವಾರ ರಾತ್ರಿ ತಮ್ಮ ಮೂರನೇ ಪ್ರಯತ್ನದಲ್ಲಿ ದಿನದ ಅತ್ಯುತ್ತಮ ಜಿಗಿತವನ್ನು ಸಾಧಿಸಿ ಪದಕ ಗೆದ್ದರು.

ಕಳೆದ ತಿಂಗಳು ಗ್ರೀಸ್​ನಲ್ಲಿ ನಡೆದ ಸ್ಪರ್ಧೆಯಲ್ಲಿ ಚಿನ್ನ ಗೆದ್ದಾಗ ಮರಳಿ ಅತ್ಯುತ್ತಮ 8.18 ಮೀಟರ್ ದೂರ ಜಿಗಿದಿದ್ದರು. ಡೈಮಂಡ್ ಲೀಗ್​ನ ಅವ 8.09 ಮೀಟರ್ ಪ್ರಯತ್ನ ಅದಕ್ಕೆ ಹತ್ತಿರವಾಗಿಲ್ಲ. ಅಂತೆಯೇ 24ರ ಹರೆಯದ ಈ ಲಾಂಗ್​ ಜಂಪರ್​ ಪ್ರತಿಭೆ ಕಳೆದ ವರ್ಷ 8.36 ಮೀಟರ್ ಜಿಗಿದು ವೈಯಕ್ತಿಕ ಶ್ರೇಷ್ಠ ಸಾಧನೆ ಮಾಡಿದ್ದರು.

ಒಲಿಂಪಿಕ್ ಚಾಂಪಿಯನ್ ಮತ್ತು ವಿಶ್ವದ ನಂ.1 ಲಾಂಗ್ ಜಂಪ್​ ಪಟು ಗ್ರೀಸ್​​ನ ಮಿಲ್ಟಿಯಾಡಿಸ್ ಟೆಂಟೊಗ್ಲೋ ಅವರು ಐದನೇ ಸುತ್ತಿನಲ್ಲಿ 8.13 ಮೀಟರ್ ಜಿಗಿತದೊಂದಿಗೆ ಅಗ್ರ ಸ್ಥಾನ ಪಡೆದರು. ವಿಶ್ವ ಚಾಂಪಿಯನ್​ಷಿಪ್​ನ ಕಂಚಿನ ಪದಕ ವಿಜೇತ ಸ್ವಿಟ್ಜರ್ಲೆಂಡ್​ನ ಸೈಮನ್ ಎಹಮ್ಮರ್ ನಾಲ್ಕನೇ ಸುತ್ತಿನಲ್ಲಿ 8.11 ಮೀಟರ್ ಜಿಗಿತದೊಂದಿಗೆ ಎರಡನೇ ಸ್ಥಾನ ಪಡೆದರು.

ಇಲ್ಲಿನ ಚಾರ್ಲೆಟಿ ಸ್ಟೇಡಿಯಂನಲ್ಲಿ ನಡೆದ ಸ್ಪರ್ಧೆಯಲ್ಲಿ ಶ್ರೀಶಂಕರ್ ಮೊದಲೆರಡು ಜಿಗಿತದಲ್ಲಿ 7.79 ಮೀ, 7.94 ಮೀ ದಾಖಲೆ ಮಾಡಿದರು. ಕ್ಯೂಬಾದ ಒಲಿಂಪಿಕ್ ಕಂಚಿನ ಪದಕ ವಿಜೇತ ಮೇಕೆಲ್ ಮಾಸೊ (7.83 ಮೀಟರ್) ಮತ್ತು ಸ್ವೀಡನ್​​ನ ವಿಶ್ವ 4ನೇ ಶ್ರೇಯಾಂಕದ ಸ್ಪರ್ಧಿ ಥೋಬಿಯಾಸ್ ಮಾಂಟ್ಲರ್ (7.82 ಮೀಟರ್) ಅವರನ್ನು ಮುರಳಿ ಹಿಂದಕ್ಕಿದರು.

ನೀರಜ್​ ಚೋಪ್ರಾ ಸಾಧನೆ

ಕಳೆದ ಸೆಪ್ಟೆಂಬರ್​​ನಲ್ಲಿ ಜ್ಯೂರಿಚ್​​ನಲ್ಲಿ ನಡೆದ ಫೈನಲ್ಸ್ ಗೆದ್ದ ನಂತರ ಒಲಿಂಪಿಕ್ ಚಾಂಪಿಯನ್ ಚೋಪ್ರಾ ಜಾವೆಲಿನ್ ಎಸೆತದಲ್ಲಿ ಹಾಲಿ ಡೈಮಂಡ್ ಲೀಗ್ ಚಾಂಪಿಯನ್ ಆಗಿದ್ದರು ಕಳೆದ ತಿಂಗಳು ದೋಹಾದಲ್ಲಿ ನಡೆದ ಋತುವಿನ ಆರಂಭಿಕ ಹಂತವನ್ನು ಗೆಲ್ಲುವ ಮೊದಲು ಅವರು ಲೌಸೆನ್​ನಲ್ಲಿ ಅಗ್ರಸ್ಥಾನದಲ್ಲಿದ್ದರು.2012ರಲ್ಲಿ ನ್ಯೂಯಾರ್ಕ್ ಹಾಗೂ 2014ರಲ್ಲಿ ದೋಹಾದಲ್ಲಿ ಎರಡನೇ ಸ್ಥಾನ ಪಡೆದಿದ್ದರೆ, 2015ರಲ್ಲಿ ಶಾಂಘೈ ಮತ್ತು ಯೂಜೀನ್ ನಲ್ಲಿ ಮೂರನೇ ಸ್ಥಾನ ಪಡೆದಿದ್ದರು.

ಇದನ್ನೂ ಓದಿ : WTC Final 2023 : ಲೆಜೆಂಡ್​ ಸಚಿನ್​ ತೆಂಡೂಲ್ಕರ್​ ದಾಖಲೆ ಮುರಿದ ರೋಹಿತ್​ ಶರ್ಮಾ

ವೈಯಕ್ತಿಕ ಡೈಮಂಡ್ ಲೀಗ್ ಸ್ಪರ್ಧೆಗಳಿಗೆ ಪದಕಗಳನ್ನು ನೀಡಲಾಗುವುದಿಲ್ಲ. ಆದಾಗ್ಯೂ ಡೈಮಂಡ್ ಲೀಗ್ ಸ್ಪರ್ಧೆಯಲ್ಲಿ ಶ್ರೀಶಂಕರ್ ಅವರ ಎರಡನೇ ಪ್ರವೇಶ ಇದಾಗಿದೆ. ಕಳೆದ ವರ್ಷ ಮೊನಾಕೊ ಚರಣದಲ್ಲಿ ಆರನೇ ಸ್ಥಾನ ಪಡೆದಿದ್ದರು. ಸೆಪ್ಟೆಂಬರ್​​ನಲ್ಲಿ ಅಮೆರಿಕದ ಯೂಜಿನ್​ನಲ್ಲಿ ನಡೆಯಲಿರುವ ಋತುವಿನ ಡೈಮಂಡ್ ಲೀಗ್​ಗೆ ಮುರಳಿ ಆರು ಅರ್ಹತಾ ಅಂಕಗಳನ್ನು ಗಿಟ್ಟಿಸಿಕೊಂಡಿದ್ದಾರೆ. .

ಈ ಗೆಲುವಿನ ಮೂಲಕ ಅವರು ಆಗಸ್ಟ್​​ನಲ್ಲಿ ಹಂಗರಿಯ ಬುಡಾಪೆಸ್ಟ್​ನಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್​​ಷಿಪ್​​ ಅರ್ಹತೆ ಪಡೆಯುವ ಪ್ರಯತ್ನದಲ್ಲಿ ಅವರು ಮೌಲ್ಯಯುತ ಶ್ರೇಯಾಂಕ ಅಂಕಗಳನ್ನು ಪಡೆಯಲಿದ್ದಾರೆ. ಕಳೆದ ಒಂದು ತಿಂಗಳಿನಿಂದ ಗ್ರೀಸ್​ನಲ್ಲಿ ತರಬೇತಿ ಪಡೆಯುತ್ತಿರುವ ಶ್ರೀಶಂಕರ್​ ವಿಶ್ವ ಚಾಂಪಿಯನ್ ಶಿಪ್ನ​ ನೇರ ಅರ್ಹತೆಯ ಮಾನದಂಡವಾದ 8.25 ಮೀ ಅನ್ನು ಇನ್ನೂ ಸಾಧಿಸಿಲ್ಲ. ಜುಲೈ 30ರ ಈ ಅರ್ಹತೆಗೆ ಗಡುವಾಗಿದೆ.

ಬುಡಾಪೆಸ್ಟ್ ಟೂರ್ನಿಯ ಶ್ರೇಯಾಂಕದಲ್ಲಿ ಅವರು 20ನೇ ಸ್ಥಾನದಲ್ಲಿರುವುದರಿಂದ ಅವರು ಇನ್ನೂ ವಿಶ್ವ ಶ್ರೇಯಾಂಕದ ಮೂಲಕ ಅರ್ಹತೆ ಪಡೆಯಬಹುದು. ವಿಶ್ವ ಅಥ್ಲೆಟಿಕ್ಸ್ ಸಿದ್ಧಪಡಿಸಿದ ಋತುವಿನ ಅಗ್ರ ಪಟ್ಟಿಯಲ್ಲಿ ಪ್ರಸ್ತುತ ಎರಡನೇ ಸ್ಥಾನದಲ್ಲಿರುವ ಜೆಸ್ವಿನ್ ಆಲ್ಡ್ರಿನ್, ಮಾರ್ಚ್​​ನಲ್ಲಿ ಬಳ್ಳಾರಿಯಲ್ಲಿ ನಡೆದ ಇಂಡಿಯನ್ ಓಪನ್ ಜಂಪ್ಸ್ ಸ್ಪರ್ಧೆಯಲ್ಲಿ 8.42 ಮೀಟರ್ ರಾಷ್ಟ್ರೀಯ ದಾಖಲೆ ಮುರಿಯುವ ಪ್ರಯತ್ನದೊಂದಿಗೆ ಈಗಾಗಲೇ ವಿಶ್ವ ಚಾಂಪಿಯಶಿಪ್​ಗೆ ಅರ್ಹತೆ ಪಡೆದಿದ್ದಾರೆ. ಜೂನ್ 15 ರಿಂದ 19ರವರೆಗೆ ಭುವನೇಶ್ವರದಲ್ಲಿ ನಡೆಯಲಿರುವ ರಾಷ್ಟ್ರೀಯ ಅಂತಾರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಶ್ರೀಶಂಕರ್ ಸ್ಪರ್ಧಿಸಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Rinku Singh: ಟಿ20 ವಿಶ್ವಕಪ್​ಗೆ ರಿಂಕು ಆಯ್ಕೆಯಾಗಬಹುದೆಂದು ಪಟಾಕಿ, ಸಿಹಿ ತಂದಿಟ್ಟಿದ್ದ ತಂದೆಗೆ ನಿರಾಸೆ

Rinku Singh: ರಿಂಕು ಸಿಂಗ್​ ಭಾರತ ಪರ 15 ಟಿ20 ಪಂದ್ಯಗಳನ್ನು ಆಡಿ 11 ಇನಿಂಗ್ಸ್​ನಿಂದ 356 ರನ್​ ಬಾರಿಸಿದ್ದಾರೆ. ಇದರಲ್ಲಿ 2 ಅರ್ಧಶತಕ ಕೂಡ ಒಳಗೊಂಡಿದೆ. 31 ಬೌಂಡರಿ ಮತ್ತು 20 ಸಿಕ್ಸರ್​ ಬಾರಿಸಿದ್ದಾರೆ.

VISTARANEWS.COM


on

Rinku Singh
Koo

ಉತ್ತರ ಪ್ರದೇಶ: ಇದೇ ಜೂನ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗೆ(T20 world cup 2024) ಮಂಗಳವಾರ ಭಾರತ ತಂಡ ಪ್ರಕಟಗೊಂಡಿತ್ತು. ಆದರೆ ಈ ತಂಡದಲ್ಲಿ ರಿಂಕು ಸಿಂಗ್​ಗೆ(Rinku Singh) ಅವಕಾಶ ಸಿಗಲಿಲ್ಲ. ಎಲ್ಲರು ಕೂಡ ರಿಂಕುಗೆ ಸ್ಥಾನ ಸಿಗಬಹುದೆಂದು ನಿರೀಕ್ಷೆ ಮಾಡಿದ್ದರು. ಎಲ್ಲರಿಗಿಂತ ಹೆಚ್ಚಿನ ನಿರೀಕ್ಷೆ ಇರಿಸಿದ್ದು ರಿಂಕು ಅವರ ತಂದೆ. ತನ್ನ ಮಗನಿಗೆ ವಿಶ್ವಕಪ್​ ಆಡುವ ಅವಕಾಶ ಸಿಗಬಹುದೆಂದು ಖಾನ್ಚಂದ್ರ ಸಿಂಗ್ ಮುಂಚಿತವಾಗಿಯೇ ಪಟಾಕಿ ಮತ್ತು ಸಿಹಿ ತಿನಿಸುಗಳನ್ನು ತಂದಿಟ್ಟಿದ್ದರು. ಆದರೆ ಮಗನಿಗೆ ಅವಕಾಶ ಸಿಗದೇ ಇದ್ದದ್ದು ಬೇಸರ ತಂದಿದೆ ಎಂದು ಖಾನ್ಚಂದ್ರ ಸಿಂಗ್ ಹೇಳಿದ್ದಾರೆ.

ತೀರಾ ಬಡತನದಲ್ಲಿ ಬೆಳೆದು ಬಂದ ರಿಂಕು ಸಿಂಗ್ ಕಳೆದ ವರ್ಷದ ಐಪಿಎಲ್ ಮೂಲಕ ತಮ್ಮ ಪ್ರತಿಭೆಯನ್ನು ತೋರ್ಪಡಿಸಿದ್ದರು. ಮಧ್ಯಮ ಕ್ರಮಾಂಕದಲ್ಲಿ ಆಡುವ ರಿಂಕು ಸಿಂಗ್ ತಮ್ಮ ಬಿರುಸಿನ ಬ್ಯಾಟಿಂಗ್​ ಮೂಲಕ​ ಅಸಾಮಾನ್ಯ ಪ್ರದರ್ಶನ ತೋರುವ ಮೂಲಕ ತಂಡಕ್ಕೆ ಹಲವು ಗೆಲುವು ತಂದುಕೊಟ್ಟಿದ್ದರು. ಭಾರತ ಪರೂ ಆಡಿದ ಎಲ್ಲ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿದ್ದರು. ಮುಖ್ಯ ಕೋಚ್​ ರಾಹುಲ್​ ದ್ರಾವಿಡ್​ ಕೂಡ ಈ ಹಿಂದೆ ರಿಂಕು ಅತ್ಯತ್ತುಮ ಪ್ರತಿಭೆ ಟಿ20ಯಲ್ಲಿ ಸ್ಥಾನ ಸಿಗಬಹುದು ಎಂದು ಹೇಳಿದ್ದರು. ಇದೇ ಕಾರಣದಿಂದ ಅವರ ತಂದೆ ಖಾನ್ಚಂದ್ರ ಸಿಂಗ್​ಗೆ ಮಗ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಬಹುದು ಎಂದು ಬಲವಾಗಿ ನಂಬಿದ್ದರು. ಹೀಗಾಗಿ ಅವರು ಮನೆಗೆ ಮೊದಲೇ ಸಿಹಿ ತಿನಿಸು, ಪಟಾಕಿ ತಂದಿಟ್ಟಿದ್ದರು. ಆದರೆ ತಂಡ ಪ್ರಕಟಗೊಂಡಾಗ ಮಾತ್ರ ಇವರ ಹೆಸರು ಕಾಣಿಸಲಿಲ್ಲ.​ ಇದರಿಂದ ರಿಂಕು ಮನೆಯವರೆಲ್ಲ ಬೇಸರಗೊಂಡರು.

ಇದನ್ನೂ ಓದಿ IPL 2024: ಕೊಹ್ಲಿಯನ್ನು ಹಿಂದಿಕ್ಕಿ ಆರೆಂಜ್​ ಕ್ಯಾಪ್​ ಪಡೆದ ಗಾಯಕ್ವಾಡ್​; ಪರ್ಪಲ್​ ಕ್ಯಾಪ್​ ಹೋಲ್ಡರ್​ ಯಾರು?

“ಮಗ ಆಯ್ಕೆಯಾದ ಸುದ್ದಿ ಹೊರಬೀಳುತ್ತಲೇ ಪಟಾಕಿ ಹಚ್ಚಿ, ಸಿಹಿ ತಿನಿಸು ಹಂಚಿ ಸಂಭ್ರಮಿಸಲು ತಯಾರಿ ಮಾಡಿಕೊಂಡಿದ್ದೆ. ಆದರೆ 15 ಸದಸ್ಯರ ಪಟ್ಟಿಯಲ್ಲಿ ಮಗನ ಹೆಸರೇ ಇರಲಿಲ್ಲ. ಇದರಿಂದ ತೀರಾ ಬೇಸರವಾಗಿದೆ” ಎಂದು ಹೇಳುವ ಮೂಲಕ ಖಾನ್ಚಂದ್ರ ಸಿಂಗ್ ಭಾವುಕರಾದರು. ರಿಂಕು ಸಿಂಗ್​ ಭಾರತ ಪರ 15 ಟಿ20 ಪಂದ್ಯಗಳನ್ನು ಆಡಿ 11 ಇನಿಂಗ್ಸ್​ನಿಂದ 356 ರನ್​ ಬಾರಿಸಿದ್ದಾರೆ. ಇದರಲ್ಲಿ 2 ಅರ್ಧಶತಕ ಕೂಡ ಒಳಗೊಂಡಿದೆ. 31 ಬೌಂಡರಿ ಮತ್ತು 20 ಸಿಕ್ಸರ್​ ಬಾರಿಸಿದ್ದಾರೆ. ರಿಂಕು ಸದ್ಯ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದಾರೆ. ಒಂದೊಮ್ಮೆ 15 ಮಂದಿ ಆಟಗಾರರ ಪೈಕಿ ಯಾರಾದರು ಗಾಯಗೊಂಡರೆ ರಿಂಕುಗೆ ಪ್ರಧಾನ ತಂಡಕ್ಕೆ ಅವಕಾಶ ಸಿಗಬಹುದು.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್

Continue Reading

ಕ್ರೀಡೆ

Uber Cup 2024 Quarterfinal: ಭಾರತದ ಸವಾಲು ಅಂತ್ಯ; ಜಪಾನ್​ ವಿರುದ್ಧ ಕ್ವಾ. ಫೈನಲ್​ನಲ್ಲಿ ಸೋಲು

Uber Cup 2024 Quarterfinal: ಭಾರತ 1957, 2014 ಮತ್ತು 2016ರಲ್ಲಿ ಮೂರು ಬಾರಿ ಉಬರ್ ಕಪ್‌ನಲ್ಲಿ ಸೆಮಿಫೈನಲ್ ತಲುಪಿತ್ತು. ಈ ಬಾರಿ ಚೊಚ್ಚಲ ಬಾರಿಗೆ ಫೈನಲ್​ ಪ್ರವೇಶಿಸುವ ನಿರೀಕ್ಷೆ ಮಾಡಲಾಗಿತ್ತು. ಆದರೆ ಕ್ವಾರ್ಟರ್​ ಫೈನಲ್​ನಲ್ಲಿ ಸೋಲು ಕಾಣುವ ಮೂಲಕ ನಿರೀಕ್ಷೆ ಹುಸಿಯಾಗಿದೆ.

VISTARANEWS.COM


on

Uber Cup 2024 Quarterfinal
Koo

ಚೆಂಗ್ಡು (ಚೀನಾ): ಉಬೆರ್‌ ಕಪ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯ ಕ್ವಾರ್ಟರ್​ ಫೈನಲ್(Uber Cup 2024 Quarterfinal)​ ಪಂದ್ಯದಲ್ಲಿ ಭಾರತದ(India) ಮಹಿಳಾ ತಂಡ ಜಪಾನ್(Japan)​ ವಿರುದ್ಧ 3-0 ಅಂತರದ ಸೋಲು ಕಾಣುವ ಮೂಲಕ ತನ್ನ ಅಭಿಯಾನವನ್ನು ಅಂತ್ಯಗೊಳಿಸಿದೆ. ಗುರುವಾರ ನಡೆದ ಈ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಜಪಾನ್​ ಸೆಮಿಫೈನಲ್​ಗೆ ಪ್ರವೇಶಿಸಿದೆ. ಶುಕ್ರವಾರ ನಡೆಯಲಿರುವ ಸೆಮಿಫೈನಲ್​ ಪಂದ್ಯದಲ್ಲಿ ಜಪಾನ್​ ತಂಡ 6 ಬಾರಿಯ ಚಾಂಪಿಯನ್​ ​ಚೀನಾದ ಸವಾಲು ಎದುರಿಸಲಿದೆ.

ಮೊದಲ ಮಹಿಳಾ ಸಿಂಗಲ್ಸ್‌ನಲ್ಲಿ ಅಶ್ಮಿತಾ ಚಲಿಹಾ 10-21, 22-20, 15-21 ರಲ್ಲಿ ಅಯಾ ಒಹೊರಿ ವಿರುದ್ಧ ಸೋತರು. ಮೊದಲ ಗೇಮ್‌ನಲ್ಲಿ ಲಯ ಕಂಡುಕೊಳ್ಳಲು ಹರಸಾಹಸಪಟ್ಟ ಚಲಿಹಾ ಎರಡನೇ ಗೇಮ್​ನಲ್ಲಿ ತಿರುಗಿ ಬಿದ್ದು 22-20 ಅಂತರದಿಂದ ಕೈವಶ ಮಾಡಿಕೊಳ್ಳುವ ಮೂಲಕ ಸಮಬಲ ಸಾಧಿಸಿದರು. ಆದರೆ ನಿರ್ಣಾಯಕ ಗೇಮ್​ನಲ್ಲಿ ಸೋಲು ಕಂಡರು.

ಮೊದಲ ಮಹಿಳಾ ಡಬಲ್ಸ್​ನಲ್ಲಿ ಕೆ.ಪ್ರಿಯಾ-ಶ್ರುತಿ ಮಿಶ್ರಾ ಜೋಡಿಯನ್ನು ನಮಿ ಮತ್ಸುಯಾಮಾ-ಚಿಹರು ಶಿದಾ ಸೇರಿಕೊಂಡು 8-21, 9-21 ನೇರ ಗೇಮ್​ಗಳಿಂದ ಹಿಮ್ಮೆಟ್ಟಿಸಿದರು. ದ್ವಿತೀಯ ಮಹಿಳಾ ಸಿಂಗಲ್ಸ್​ನಲ್ಲಿ ಇಶಾರಾಣಿ ಶಾರಾಣಿ ಬರುಹಾ ಅವರನ್ನು 15-21, 12-21 ನೇರ ಗೇಮ್​ಗಳ ಅಂತದಿಂದ 2017ರ ವಿಶ್ವ ಚಾಂಪಿಯನ್‌ ಜಪಾನಿನ ನೊಜೊಮಿ ಒಕುಹಾರ ಮಣಿಸಿದರು. ಈ ಸೋಲಿನೊಂದಿಗೆ ಭಾರತ ತಂಡದ ಸವಾಲು ಕೂಡ ಅತ್ಯಂಗೊಂಡಿತು. ಭಾರತ 1957, 2014 ಮತ್ತು 2016ರಲ್ಲಿ ಮೂರು ಬಾರಿ ಉಬರ್ ಕಪ್‌ನಲ್ಲಿ ಸೆಮಿಫೈನಲ್ ತಲುಪಿತ್ತು. ಈ ಬಾರಿ ಚೊಚ್ಚಲ ಬಾರಿಗೆ ಫೈನಲ್​ ಪ್ರವೇಶಿಸುವ ನಿರೀಕ್ಷೆ ಮಾಡಲಾಗಿತ್ತು. ಆದರೆ ಕ್ವಾರ್ಟರ್​ ಫೈನಲ್​ನಲ್ಲಿ ಸೋಲು ಕಾಣುವ ಮೂಲಕ ನಿರೀಕ್ಷೆ ಹುಸಿಯಾಗಿದೆ.

ಇದನ್ನೂ ಓದಿ Thomas Cup 2024: ಅಂತಿಮ ಲೀಗ್​ ಪಂದ್ಯದಲ್ಲಿ ಇಂಡೊನೇಷ್ಯಾಕ್ಕೆ ಮಣಿದ ಭಾರತ

ಥಾಮಸ್‌ ಕಪ್‌: ಇಂದು ಭಾರತ-ಚೀನಾ ಸೆಣಸಾಟ


ಇಂದು ನಡೆಯುವ ಪುರುಷರ ಥಾಮಸ್‌ ಕಪ್‌(Thomas Cup 2024) ಟೂರ್ನಿಯ ಕ್ವಾರ್ಟರ್​ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆಗಿರುವ ಭಾರತ(Indian men’s Badminton team) ತಂಡ ಬದ್ಧ ಎದುರಾಳಿ ಚೀನಾ ತಂಡದ ಸವಾಲು ಎದುರಿಸಲಿದೆ. ಬುಧವಾರ ನಡೆದಿದ್ದ ಅಂತಿಮ ಲೀಗ್​ ಪಂದ್ಯದಲ್ಲಿ ಭಾರತ 14 ಬಾರಿಯ ಚಾಂಪಿಯನ್ ಇಂಡೊನೇಷ್ಯಾ ವಿರುದ್ಧ 1-4 ಅಂತರದಿಂದ ಸೋಲನುಭವಿಸಿತ್ತು. ಸೋಮವಾರ ನಡೆದಿದ್ದ ‘ಸಿ’ ಗುಂಪಿನ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್‌ ವಿರುದ್ಧ 5-0 ಅಂತರದಿಂದ, ಮೊದಲ ಪಂದ್ಯದಲ್ಲಿ ಥಾಯ್ಲೆಂಡ್ ವಿರುದ್ಧ 4-1 ಅಂತರದ ಭರ್ಜರಿ ಗೆಲುವು ಸಾಧಿಸಿತ್ತು.

Continue Reading

ಕ್ರೀಡೆ

IPL 2024: ಕೊಹ್ಲಿಯನ್ನು ಹಿಂದಿಕ್ಕಿ ಆರೆಂಜ್​ ಕ್ಯಾಪ್​ ಪಡೆದ ಗಾಯಕ್ವಾಡ್​; ಪರ್ಪಲ್​ ಕ್ಯಾಪ್​ ಹೋಲ್ಡರ್​ ಯಾರು?

IPL 2024: ಪರ್ಪಲ್​ ಕ್ಯಾಪ್​ಗಾಗಿ ಮೂರು ಬೌಲರ್​ಗಳ ಮಧ್ಯೆ ಭಾರೀ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ಜಸ್​ಪ್ರೀತ್​ ಬುಮ್ರಾ, ಮುಸ್ತಫಿಜುರ್​ ರೆಹಮಾನ್​, ಹರ್ಷಲ್​ ಪಟೇಲ್​ ತಲಾ 14 ವಿಕೆಟ್​ ಕಿತ್ತು ಕ್ರಮವಾಗಿ ಮೊದಲ ಮೂರು ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ಪ್ರಸಕ್ತ ಸಾಗುತ್ತಿರುವ 17ನೇ ಆವೃತ್ತಿಯ ಐಪಿಎಲ್​(IPL 2024) ಟೂರ್ನಿಯ ಲೀಗ್​ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನು ಬೆರಳೆಣಿಕೆಯ ಪಂದ್ಯಗಳು ಮಾತ್ರ ಬಾಕಿ ಉಳಿದಿವೆ. ಎಲ್ಲ ತಂಡಗಳು ಪ್ಲೇ ಆಫ್​ ಪ್ರವೇಶಿಸಲು ಹರಸಾಹಸ ಪಡುತ್ತಿವೆ. ಜತೆಗೆ ಕೆಲವು ಆಟಗಾರರ ಮಧ್ಯೆ ಆರೆಂಜ್​ ಕ್ಯಾಚ್(Orange Cap)​ ಮತ್ತು ಪರ್ಪಲ್​ ಕ್ಯಾಪ್​ಗಾಗಿ(purple cap)​ ತೀವ್ರ ಪೈಪೋಟಿ ಏರ್ಪಟ್ಟಿದೆ.

ಈ ಆವೃತ್ತಿಯಲ್ಲಿ 48 ಪಂದ್ಯದ ಮುಕ್ತಾಯದ ವರೆಗೆ ರನ್​ಗಳಿಕೆಯಲ್ಲಿ ಅಗ್ರಸ್ಥಾನ ಪಡೆದು ಆರೆಂಜ್​ ಕ್ಯಾಪ್​ ಧರಿಸಿದ್ದ ವಿರಾಟ್​ ಕೊಹ್ಲಿ(500 ರನ್​​)ಯನ್ನು ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ನಾಯಕ ಋತುರಾಜ್​ ಗಾಯಕ್ವಾಡ್(509 ರನ್​)​ ಹಿಂದಿಕ್ಕಿದ್ದಾರೆ. ನಿನ್ನೆ(ಬುಧವಾರ) ನಡೆದ ಪಂಜಾಬ್​ ಕಿಂಗ್ಸ್​ ಎದುರಿನ ಪಂದ್ಯದಲ್ಲಿ 62 ರನ್​ ಬಾರಿಸುವ ಮೂಲಕ ಗಾಯಕ್ವಾಡ್(Ruturaj Gaikwad)​​ ಈ ಸಾಧನೆ ಮಾಡಿದರು. ಸದ್ಯ ಉಭಯ ಆಟಗಾರರ ಮಧ್ಯೆ ಆರೆಂಜ್​ ಕ್ಯಾಪ್​ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ. ಟೂರ್ನಿಯ ಅಂತ್ಯದಲ್ಲಿ ಯಾರು ಅತ್ಯಧಿಕ ರನ್​ ಗಳಿಸಿರುತ್ತಾರೋ ಅವರಿಗೆ ಸರಣಿ ಶ್ರೇಷ್ಠ ಪ್ರಶಸ್ತಿಯಾಗಿ ಟಾಟಾ ಕಂಪೆನಿಯ ಎಲೆಕ್ಟ್ರಿಕ್​ ಕಾರ್​ ಸಿಗಲಿದೆ.

ಆರೆಂಜ್ ಕ್ಯಾಪ್​​ ರೇಸ್​ನಲ್ಲಿರುವ ಟಾಪ್​ 5 ಬ್ಯಾಟರ್​ಗಳು


ಋತುರಾಜ್​ ಗಾಯಕ್ವಾಡ್​-509 ರನ್​(10 ಇನಿಂಗ್ಸ್​)

ವಿರಾಟ್​ ಕೊಹ್ಕಿ-500 ರನ್​(10 ಇನಿಂಗ್ಸ್​)

ಸಾಯಿ ಸುದರ್ಶನ್​- 418 ರನ್​( 10 ಇನಿಂಗ್ಸ್​)

ಕೆ.ಎಲ್​ ರಾಹುಲ್​-406 ರನ್​( 10 ಇನಿಂಗ್ಸ್​)

ರಿಷಭ್​ ಪಂತ್​-398 ರನ್​(11 ಇನಿಂಗ್ಸ್​)

ಇದನ್ನೂ ಓದಿ Virat kohli : ಕಾಮೆಂಟ್ರಿ ಬಾಕ್ಸ್​​ನಲ್ಲಿ ಕುಳಿತು ವಿಮರ್ಶೆ ಮಾಡುವುದು ಸುಲಭ; ಕೊಹ್ಲಿ ತಿರುಗೇಟು ಕೊಟ್ಟಿದ್ದು ಯಾರಿಗೆ?

ಪರ್ಪಲ್​ ಕ್ಯಾಕ್​ಗೆ ಮೂರು ಮಂದಿಯ ಮಧ್ಯೆ ಫೈಟ್​


ಅತ್ಯಧಿಕ ವಿಕೆಟ್​ ಪಡೆದ ಬೌಲರ್​ಗೆ ನೀಡುವ ಪರ್ಪಲ್​ ಕ್ಯಾಪ್​ಗಾಗಿ ಮೂರು ಬೌಲರ್​ಗಳ ಮಧ್ಯೆ ಭಾರೀ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ಜಸ್​ಪ್ರೀತ್​ ಬುಮ್ರಾ, ಮುಸ್ತಫಿಜುರ್​ ರೆಹಮಾನ್​, ಹರ್ಷಲ್​ ಪಟೇಲ್​ ತಲಾ 14 ವಿಕೆಟ್​ ಕಿತ್ತು ಕ್ರಮವಾಗಿ ಮೊದಲ ಮೂರು ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಉತ್ತಮ ಬೌಲಿಂಗ್​ ಇಕಾನಮಿ ಹೊಂದಿರುವ ಕಾರಣ ಸದ್ಯ ಈ ಕ್ಯಾಪ್​ ಬುಮ್ರಾ ಬಳಿ ಇದೆ. ಇನ್ನುಳಿದಂತೆ ಆರು ಮಂದಿ ಬೌಲರ್​ಗಳು ತಲಾ 13 ವಿಕೆಟ್​ ಕಿತ್ತಿದ್ದಾರೆ. ಇವರಿಗೂ ಕೂಡ ಮುಂದಿನ ಪಂದ್ಯಗಳಲ್ಲಿ ಹೆಚ್ಚಿನ ವಿಕೆಟ್​ ಕಿತ್ತರೆ ಪರ್ಪಲ್​ ಕ್ಯಾಪ್​ ಪಡೆಯುವ ಅವಕಾಶವಿದೆ.

ಪರ್ಪಲ್​ ಕ್ಯಾಪ್​​ ರೇಸ್​ನಲ್ಲಿರುವ ಟಾಪ್​ 5 ಬೌಲರ್​ಗಳು


ಜಸ್​ಪ್ರೀತ್​ ಬುಮ್ರಾ-14 ವಿಕೆಟ್​(10 ಪಂದ್ಯ)

ಮುಸ್ತಫಿಜುರ್​ ರೆಹಮಾನ್​-14 ವಿಕೆಟ್​(9 ಪಂದ್ಯ​)

ಹರ್ಷಲ್​ ಪಟೇಲ್​-14 ವಿಕೆಟ್​(10 ಪಂದ್ಯ​)

ಮತೀಶ ಪತಿರಾಣ-13 ವಿಕೆಟ್​(6 ಪಂದ್ಯ)

ಟಿ ನಟರಾಜನ್​-13 ವಿಕೆಟ್​(7 ಪಂದ್ಯ)

Continue Reading

ಕ್ರಿಕೆಟ್

T20 World Cup: ಟಿ20 ವಿಶ್ವಕಪ್​ ತಂಡ ಸೇರಲು ರಾಹುಲ್​ಗೆ ಇನ್ನೂ ಇದೆ ಅವಕಾಶ

T20 World Cup: ಮೇ 25 ರ ತನಕ ಐಸಿಸಿ ಅನುಮತಿ ಇಲ್ಲದೆ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಆ ಬಳಿಕದ ಯಾವುದೇ ಬದಲಾವಣೆ ಮಾಡಬೇಕಿದ್ದರೆ ಐಸಿಸಿ ತಾಂತ್ರಿಕ ಸಮಿತಿಯ ಅನುಮತಿ ಅತ್ಯಗತ್ಯ. ಇದು ಕೂಡ ಆಟಗಾರರು ಗಾಯಗೊಂಡರೆ ಮಾತ್ರ ಬದಲಿ ಆಟಗಾರನ ಆಯ್ಕೆಯನ್ನು ಐಸಿಸಿ ಮಾನ್ಯ ಮಾಡುತ್ತದೆ.

VISTARANEWS.COM


on

T20 World Cup
Koo

ದುಬೈ: ಟಿ20 ವಿಶ್ವಕಪ್​ಗೆ(T20 World Cup) ಈಗಾಗಲೇ ಭಾರತ 15 ಸದಸ್ಯರ ಮತ್ತು ಮೀಸಲು ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ. ಸ್ಟಾರ್​ ಆಟಗಾರ ಕೆ.ಎಲ್​ ರಾಹುಲ್(KL Rahul)​ ಅವರನ್ನು ಈ ತಂಡದಿಂದ ಕೈಬಿಡಲಾಗಿದೆ. ಆದರೆ, ರಾಹುಲ್​ಗೆ ಇನ್ನೂ ಕೂಡ ತಂಡ ಸೇರುವ ಅವಕಾಶವೊಂದಿದೆ. ಇದು ಹೇಗೆ ಎನ್ನುವ ಮಾಹಿತಿ ಇಂತಿದೆ.

ಮೇ 25 ರ ತನಕ ಐಸಿಸಿ ಅನುಮತಿ ಇಲ್ಲದೆ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಆ ಬಳಿಕದ ಯಾವುದೇ ಬದಲಾವಣೆ ಮಾಡಬೇಕಿದ್ದರೆ ಐಸಿಸಿ ತಾಂತ್ರಿಕ ಸಮಿತಿಯ ಅನುಮತಿ ಅತ್ಯಗತ್ಯ. ಇದು ಕೂಡ ಆಟಗಾರರು ಗಾಯಗೊಂಡರೆ ಮಾತ್ರ ಬದಲಿ ಆಟಗಾರನ ಆಯ್ಕೆಯನ್ನು ಐಸಿಸಿ ಮಾನ್ಯ ಮಾಡುತ್ತದೆ. ಅವಕಾಶ ಸಿಕ್ಕ ಆಟಗಾರರ ಪೈಕಿ ಯಾರಾದರು ಗಾಯಗೊಂಡು ಅಲಭ್ಯರಾದರೆ ಆಗ ರಾಹುಲ್​ಗೆ ಅವಕಾಶ ಸಿಗಬಹುದು. ಇನ್ನೊಂದು ಸಾಧ್ಯತೆ ಎಂದರೆ ತಂಡ ಬದಲಾವಣೆಯ ಅಂತಿಮ ದಿನವಾದ 25ರಂದು ಅಚ್ಚರಿ ಎಂಬಂತೆ ರಾಹುಲ್​ ಆಯ್ಕೆಯಾಗುವ ಸಾಧ್ಯತೆಯೂ ಇದೆ.

ಕೆಲ ತಂಡಗಳು ಗೇಮ್ ಸ್ಟ್ರಟಜಿ ಮಾಡಿಕೊಂಡು ಕೆಲ ಸ್ಟಾರ್​ ಆಟಗಾರರನ್ನು ಮೊದಲ ಪಟ್ಟಿಯಿಂದ ಕೈಬಿಟ್ಟು ಆ ಬಳಿಕ ಅಚ್ಚರಿ ಎಂಬಂತೆ ತಂಡಕ್ಕೆ ಆಯ್ಕೆ ಮಾಡಿಕೊಳ್ಳುತ್ತದೆ. ಇದರ ಹಿಂದಿರುವ ಕಾರಣವೆಂದರೆ ಎದುರಾಳಿ ತಂಡಗಳ ಪೂರ್ವ ಯೋಜನೆಯನ್ನು ಬುಡಮೇಲು ಮಾಡುವುದು. ಕಳೆದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಆಸ್ಟ್ರೇಲಿಯಾ ಅನುಭವಿ ಆಟಗಾರ ಮಾರ್ನಸ್​ ಲನುಶೇನ್​ ಅವರನ್ನು ಆಯ್ಕೆ ಮಾಡಿರಲಿಲ್ಲ. ಇನ್ನೇನು ತಂಡ ಬದಲಾವಣೆಗೆ ಅಂತಿಮ ದಿನ ಬಾಕಿ ಇರುವಾಗ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು. ಹೀಗಾಗಿ ಭಾರತ ಕೂಡ ರಾಹುಲ್​ ಅವರನ್ನು ಈ ರೀತಿ ಆಯ್ಕೆ ಮಾಡುವ ಸಾಧ್ಯತೆಯೂ ಕಂಡು ಬಂದಿದೆ.

ಇದನ್ನೂ ಓದಿ T20 World Cup 2024: ಡ್ರಾಪ್ -ಇನ್ ಪಿಚ್ ಅಳವಡಿಕೆ ಕಾರ್ಯ ಆರಂಭಿಸಿದ ಐಸಿಸಿ

ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಪಾಕ್​ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆದರೆ, ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಜೂನ್​ 29ಕ್ಕೆ ಫೈನಲ್​ ಪಂದ್ಯ ಸಾಗಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್

Continue Reading
Advertisement
Viral video
ವೈರಲ್ ನ್ಯೂಸ್3 mins ago

Viral Video:ಶಾಕಿಂಗ್‌ ವಿಡಿಯೋ! ಮಗನನ್ನು ಟ್ರೆಡ್‌ಮಿಲ್‌ನಲ್ಲಿ ಓಡಿಸಿ ಪ್ರಾಣವನ್ನೇ ತೆಗೆದ ಪಾಪಿ ತಂದೆ

assault case in Bengaluru
ಬೆಂಗಳೂರು11 mins ago

Assault Case : ವಿವಾಹಿತೆ ಹಿಂದೆ ಬಿದ್ದ ಪಾಗಲ್‌ ಪ್ರೇಮಿ; ಮದುವೆ ನಿರಾಕರಿಸಿದ್ದಕ್ಕೆ ಮನೆಗೆ ಇಟ್ಟ ಬೆಂಕಿ

Vote Jihad
ದೇಶ24 mins ago

Vote Jihad: ವೋಟ್‌ ಜಿಹಾದ್‌ಗೆ ಕರೆ ನೀಡಿದ್ದು ಇಂಡಿಯಾ ಒಕ್ಕೂಟದ ಮನಸ್ಥಿತಿಗೆ ಕನ್ನಡಿ ಎಂದ ಮೋದಿ

Prajwal Revanna Case PM Modi defends MP accused of rape says Rahul Gandhi
Lok Sabha Election 202429 mins ago

Prajwal Revanna Case: ಮಹಾನ್‌ ರೇಪಿಸ್ಟ್‌ಗೆ ಮೋದಿಯಿಂದ ರಕ್ಷಣೆ; ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌ ಬಗ್ಗೆ ರಾಹುಲ್‌ ಗಾಂಧಿ ಗುಡುಗು

Rinku Singh
ಕ್ರೀಡೆ37 mins ago

Rinku Singh: ಟಿ20 ವಿಶ್ವಕಪ್​ಗೆ ರಿಂಕು ಆಯ್ಕೆಯಾಗಬಹುದೆಂದು ಪಟಾಕಿ, ಸಿಹಿ ತಂದಿಟ್ಟಿದ್ದ ತಂದೆಗೆ ನಿರಾಸೆ

Crime News
ಕ್ರೈಂ38 mins ago

Crime News : 6 ವರ್ಷದ ಬಾಲಕಿಯ ಅಪಹರಿಸಲು ಯತ್ನಿಸಿದ ದುಷ್ಟ; ಹಿಟ್‌ ಆ್ಯಂಡ್‌ ರನ್‌ ಮಾಡಿ ಚಾಲಕರಿಬ್ಬರು ಎಸ್ಕೇಪ್‌

Samsung
ತಂತ್ರಜ್ಞಾನ57 mins ago

ಸ್ಯಾಮ್‌ಸಂಗ್‌ನ ‘ಫ್ಯಾಬ್ ಗ್ರಾಬ್ ಫೆಸ್ಟ್’: ಸ್ಮಾರ್ಟ್‌ಫೋನ್‌, ಟಿವಿ, ಲ್ಯಾಪ್‌ಟಾಪ್‌, ಡಿಜಿಟಲ್ ಉಪಕರಣಗಳ ಮೇಲೆ ಅದ್ಭುತ ಆಫರ್

students self harming
ಕ್ರೈಂ1 hour ago

Students Self harming: 20 ವರ್ಷಗಳಲ್ಲಿ ಐಐಟಿಯ 115 ವಿದ್ಯಾರ್ಥಿಗಳು ಆತ್ಮಹತ್ಯೆ

Prajwal Revanna Case HD DeveGowda and HD Kumaraswamy slams HD Revanna
ಕ್ರೈಂ2 hours ago

Prajwal Revanna Case: ನಿನ್ನ ಮಗನಿಂದ ಇಂಥ ಕಪ್ಪು ಚುಕ್ಕೆ ಬಂತು; ರೇವಣ್ಣ ಮೇಲೆ ಮುಗಿಬಿದ್ದ ಎಚ್‌ಡಿಡಿ, ಎಚ್‌ಡಿಕೆ

Pawan Kalyan Hari Hara Veera Mallu Part 1 teaser Out
ಟಾಲಿವುಡ್2 hours ago

Pawan Kalyan: ʻಹರಿ ಹರ ವೀರ ಮಲ್ಲುʼವಾಗಿ ಅಬ್ಬರಿಸಿದ ಪವನ್ ಕಲ್ಯಾಣ್; ಟೀಸರ್‌ ಔಟ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌