WTC Final 2023: ವಿಶ್ವ ಟೆಸ್ಟ್​ ಫೈನಲ್​ ಆಡುತ್ತಿರುವ ಭಾರತ ತಂಡಕ್ಕೆ ಹಾರೈಸಿದ ಪಂತ್​ - Vistara News

ಕ್ರಿಕೆಟ್

WTC Final 2023: ವಿಶ್ವ ಟೆಸ್ಟ್​ ಫೈನಲ್​ ಆಡುತ್ತಿರುವ ಭಾರತ ತಂಡಕ್ಕೆ ಹಾರೈಸಿದ ಪಂತ್​

“ನಂಬಿಕೆ ಇಟ್ಟುಕೊಳ್ಳಿ” ಭಾರತ ತಂಡ ಗೆದ್ದೇ ಗೆಲ್ಲುತ್ತದೆ ಎಂದು ರಿಷಭ್​ ಪಂತ್​ ಅವರು ಅಭಿಮಾನಿಗಳಿಗೆ ತಿಳಿಸಿದ್ದಾರೆ.

VISTARANEWS.COM


on

Rishabh Pant
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡು ಚೇತರಿಕೆ ಕಾಣುತ್ತಿರುವ ಯುವ ಆಟಗಾರ ರಿಷಭ್​ ಪಂತ್(Rishabh Pant)​ ಅವರು ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​(WTC Final 2023) ಆಡುತ್ತಿರುವ ಭಾರತ ತಂಡಕ್ಕೆ ವಿಶೇಷ ಸಂದೇಶವೊಂದನ್ನು ಕಳುಹಿಸಿದ್ದಾರೆ.

ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚೇತರಿಕೆ ಕಂಡಿರುವ ಪಂತ್​ ಸದ್ಯ ಬೆಂಗಳೂರಿನ ಎನ್​ಸಿಎಯಲ್ಲಿ ಫಿಟ್​ನೆಸ್​ ತರಬೇತಿ ಪಡೆಯುತ್ತಿದ್ದಾರೆ. ಪ್ರಸಕ್ತ ಸಾಗುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟೆಸ್ಟ್ ಫೈನಲ್​ ಪಂದ್ಯದ ಕುರಿತು ಭಾರತ್​ ಆರ್ಮಿ ಟ್ವಿಟರ್​ನಲ್ಲಿ ವಿಡಿಯೊ ಹಂಚಿಕೊಂಡಿರುವ ಅಭಿಮಾನಿಯೊಬ್ಬರು, “ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಈ ಪಂದ್ಯದಲ್ಲಿ ಪಂತ್​ ಅನುಪಸ್ಥಿತಿ ಎದ್ದು ಕಾಣುತ್ತಿದೆ. ಪಂತ್​ ಇರುತ್ತಿದ್ದರೆ ಭಾರತ ತಂಡಕ್ಕೆ ಯಾವುದೇ ಚಿಂತೆ ಇರುತ್ತಿರಲಿಲ್ಲ” ಎಂದು ಹೇಳಿದ್ದ. ಇದಕ್ಕೆ ಪ್ರತಿಕ್ರಿಯೆ ನೀಡಿದ ಪಂತ್​ ಅವರು “ನಂಬಿಕೆ ಇಟ್ಟುಕೊಳ್ಳಿ” ಭಾರತ ತಂಡ ಗೆದ್ದೇ ಗೆಲ್ಲುತ್ತದೆ ಎಂದು ಹೇಳಿದ್ದಾರೆ.

2021ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟೆಸ್ಟ್ ಸರಣಿಯಲ್ಲಿ ಪಂತ್​ ಅಮೋಘ ಪ್ರದರ್ಶನ ತೋರುವ ಮೂಲಕ ಸೋಲುವ ಪಂದ್ಯವನ್ನೂ ಗೆಲ್ಲಿಸಿದ್ದರು. ಇಂಗ್ಲೆಂಡ್​ ವಿರುದ್ಧದ ಸರಣಿಯಲ್ಲಿಯೂ ಭಾರತ ತಂಡಕ್ಕೆ ನೆರವಾಗಿದ್ದರು. ಸದ್ಯ ಯಾವುದೇ ಊರುಗೋಲಿನ ಸಹಾಯವಿಲ್ಲದೆ ನಡೆದಾಡುತ್ತಿರುವ ಪಂತ್​ ಮುಂದಿನ ವರ್ಷಾರಂಭದಲ್ಲಿ ಕ್ರಿಕೆಟ್​ಗೆ ಮರಳುವ ಸಾಧ್ಯತೆ ಇದೆ.

ಇದನ್ನೂ ಓದಿ WTC Final 2023: ವಿಶ್ವ ಟೆಸ್ಟ್​ನ ಅಂತಿಮ ದಿನ; ಯಾರಿಗೆ ಒಲಿಯಲಿದೆ ಚಾಂಪಿಯನ್​ ಪಟ್ಟ

ಕಳೆದ ವರ್ಷ ಡಿಸೆಂಬರ್ 30 ರಂದು ದೆಹಲಿಯಿಂದ ಪಂತ್​ ಅವರು ತಮ್ಮ ಕಾರಿನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Virat Kohli: ‘ಕೊಹ್ಲಿ ಕೊ ಬೌಲಿಂಗ್​ ದೋ’ ನ್ಯೂಯಾರ್ಕ್​ ಸ್ಟೇಡಿಯಂನಲ್ಲಿ ಮೊಳಗಿದ ಅಭಿಮಾನಿಗಳ ಕೂಗು

Virat Kohli: ಅಭಿಮಾನಿಗಳು ವಿರಾಟ್​ ಅವರಿಗೆ ಬೌಲಿಂಗ್​ ನೀಡುವಂತೆ ಆಗ್ರಹಿಸಲು ಒಂದು ಕಾರಣವಿದೆ. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಪಂದ್ಯದಲ್ಲಿ ಕೊಹ್ಲಿ ಬೌಲಿಂಗ್​ ನಡೆಸಿ ವಿಕೆಟ್​ ಕಿತ್ತು ಮಿಂಚಿದ್ದರು. ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ​ನಲ್ಲಿ ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ನಾಯಕ ಸ್ಕಾಟ್ ಎಡ್ವರ್ಡ್ಸ್ ಅವರನ್ನು ಔಟ್ ಮಾಡಿದ್ದರು.

VISTARANEWS.COM


on

Virat Kohli
Koo

ನ್ಯೂಯಾರ್ಕ್​: ಟೀಮ್​ ಇಂಡಿಯಾದ(Team India) ಘಾತಕ ಬೌಲಿಂಗ್​ ದಾಳಿಗೆ ನೆಲಕಚ್ಚಿದ ಐರ್ಲೆಂಡ್(India vs Ireland)​, ಕೇವಲ 96 ರನ್​ಗೆ ಸರ್ವಪತನ ಕಂಡು ಹೀನಾಯ ಸೋಲು ಕಂಡಿತ್ತು. ಇದೇ ಪಂದ್ಯದಲ್ಲಿ ಸ್ಟಾರ್​ ಬ್ಯಾಟರ್​ ವಿರಾಟ್​ ಕೊಹ್ಲಿ(virat kohli) ಅವರಿಗೆ ಬೌಲಿಂಗ್​ ನೀಡುವಂತೆ ಪ್ರೇಕ್ಷಕರು ವಿಶೇಷವಾಗಿ ಮನವಿ ಮಾಡಿದ್ದರು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್(viral video) ಆಗಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಐರ್ಲೆಂಡ್​ ತಂಡದ ಬ್ಯಾಟರ್​ಗಳು ಭಾರತೀಯ ಬೌಲರ್​ಗಳ ಬಿಗಿ ದಾಳಿಗೆ ಸತತವಾಗಿ ವಿಕೆಟ್​ ಕಳೆದುಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಭಾರತೀಯ ಅಭಿಮಾನಿಗಳು ಗ್ಯಾಲರಿಯಿಂದ ಜೋರಾಗಿ ಹಿಂದಿಯಲ್ಲಿ “ಕೊಹ್ಲಿ ಕೊ ಬೌಲಿಂಗ್​ ದೋ….ಕೊಹ್ಲಿ ಕೊ ಬೌಲಿಂಗ್​ ದೋ” ಎಂದು ಕೊಹ್ಲಿಗೆ ಬೌಲಿಂಗ್​ ನೀಡುವಂತೆ ಆಗ್ರಹಿಸಿದ್ದಾರೆ. ಇದರ ವಿಡಿಯೊ ವೈರಲ್​ ಆಗಿದೆ.

ಅಭಿಮಾನಿಗಳು ವಿರಾಟ್​ ಅವರಿಗೆ ಬೌಲಿಂಗ್​ ನೀಡುವಂತೆ ಆಗ್ರಹಿಸಲು ಒಂದು ಕಾರಣವಿದೆ. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಪಂದ್ಯದಲ್ಲಿ ಕೊಹ್ಲಿ ಬೌಲಿಂಗ್​ ನಡೆಸಿ ವಿಕೆಟ್​ ಕಿತ್ತು ಮಿಂಚಿದ್ದರು. ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ​ನಲ್ಲಿ ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ನಾಯಕ ಸ್ಕಾಟ್ ಎಡ್ವರ್ಡ್ಸ್ ಅವರನ್ನು ಔಟ್ ಮಾಡಿದ್ದರು. ಇದು 9 ವರ್ಷಗಳ ನಂತರ ಕೊಹ್ಲಿಗೆ ಲಭಿಸಿದ ವಿಕೆಟ್ ಆಗಿತ್ತು.

ಇದನ್ನೂ ಓದಿ Rohit Sharma: ಹಲವು ದಾಖಲೆಗಳ ಸರದಾರನಾದ ಹಿಟ್​ಮ್ಯಾನ್​ ರೋಹಿತ್​

ವಿರಾಟ್​ ಕೊಹ್ಲಿ ಕೂಡ ಬೌಲಿಂಗ್​ ಅನುಭವವನ್ನು ಹೊಂದಿದ್ದಾರೆ. 2015ರ ವಿಶ್ವಕಪ್​ನಲ್ಲಿ ಆಸೀಸ್​ ವಿರುದ್ಧ ಮತ್ತು ಇದಕ್ಕೂ ಮುನ್ನ 2011ರಲ್ಲಿ ನಡೆದಿದ್ದ ವಿಶ್ವಕಪ್ ಫೈನಲ್​ ಪಂದ್ಯದಲ್ಲಿ ಬೌಲಿಂಗ್​ ನಡೆಸಿದ್ದರು. ಇಲ್ಲಿ ತಲಾ ಓವರ್ ಬೌಲಿಂಗ್​ ನಡೆಸಿ ವಿಕೆಟ್​ ಪಡೆಯದಿದ್ದರೂ ಉತ್ತಮ ರನ್​ ಕಂಟ್ರೋಲ್​ ಮಾಡಿದ್ದರು. ಏಕದಿನದಲ್ಲಿ ಕೊಹ್ಲಿ 5 ವಿಕೆಟ್​, ಟಿ20 ಮತ್ತು ಐಪಿಎಲ್​ನಲ್ಲಿಯೂ ತಲಾ 4 ವಿಕಟ್​ ಪಡೆದ ಸಾಧನೆ ಮಾಡಿದ್ದಾರೆ. ಹೀಗಾಗಿ ಕೊಹ್ಲಿಗೆ ಬೌಲಿಂಗ್​ ನೀಡುವಂತೆ ಅಭಿಮಾನಿಗಳು ಆಗ್ರಹಿಸಿದ್ದಾರೆ. ಕಳೆದ ವರ್ಷ ಏಕದಿನ ವಿಶ್ವಕಪ್​ನಲ್ಲಿಯೂ ಅಭಿಮಾನಿಗಳು ಕೊಹ್ಲಿಗೆ ಬೌಲಿಂಗ್ ನೀಡುವಂತೆ ಆಗ್ರಹಿಸಿದ್ದರು.

ಐರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಆರಂಭಿನಾಗಿ ಕಣಕ್ಕಿಳಿದ ಕೊಹ್ಲಿ ಕೇವಲ 1 ರನ್​ ಗಳಿಸಿ ವಿಫಲರಾದರು. ಇದಕ್ಕೂ ಮುನ್ನ ಐಪಿಎಲ್​ನಲ್ಲಿ ಕೊಹ್ಲಿ ಪ್ರಚಂಡ ಬ್ಯಾಟಿಂಗ್​ ನಡೆಸಿ ಟೂರ್ನಿಯಲ್ಲೇ ಅತ್ಯಧಿಕ ರನ್​ ಗಳಿಸಿದ ಆಟಗಾರನಾಗಿ ಹೊರಹೊಮ್ಮಿದ್ದರು. ಭಾರತ ಮುಂದಿನ ಪಂದ್ಯವನ್ನು ಪಾಕಿಸ್ತಾನ ವಿರುದ್ಧ ಆಡಲಿದೆ. ಈ ಪಂದ್ಯದಲ್ಲಿ ಕೊಹ್ಲಿಯ ಮೇಲೆ ಹೆಚ್ಚಿನ ಭರವಸೆ ಇರಿಸಲಾಗಿದೆ. ಕೊಹ್ಲಿ ಪಾಕಿಸ್ತಾನ ವಿರುದ್ಧ ಇದುವರೆಗೂ ಉತ್ತಮ ಪ್ರದರ್ಶನ ತೋರಿದ್ದಾರೆ. 2022ರಲ್ಲಿ ನಡೆದಿದ್ದ ಟಿ20 ವಿಶ್ವಕಪ್​ನಲ್ಲಿ ಕೊಹ್ಲಿ ಏಕಾಂಗಿಯಾಗಿ ಹೋರಾಡಿ ಪಾಕ್​ಗೆ ಸೋಲುಣಿಸಿದ್ದರು.

Continue Reading

ಕ್ರೀಡೆ

David Warner: ಕ್ರಿಸ್​ ಗೇಲ್​ ದಾಖಲೆ ಮುರಿದ ಡೇವಿಡ್​ ವಾರ್ನರ್​

David Warner: ಈಗಾಗಲೇ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿರುವ ವಾರ್ನರ್​ ಟಿ20 ವಿಶ್ವಕಪ್​ ಬಳಿಕ ಮೂರು ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿಯಾಗಲಿದ್ದಾರೆ.

VISTARANEWS.COM


on

David Warner
Koo

ಬಾರ್ಬಡೋಸ್‌: ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್​ ವಾರ್ನರ್​(David Warner) ಅವರು ಇಂದು(ಗುರವಾರ) ನಡೆದ ಒಮಾನ್​ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ(T20 World Cup 2024) ದಾಖಲೆಯೊಂದನ್ನು ಬರೆದಿದ್ದಾರೆ. ಈ ಮೂಲಕ ಕ್ರಿಸ್​ ಗೇಲ್(Chris Gayle)​ ದಾಲೆಯನ್ನು ಮುರಿದಿದ್ದಾರೆ.

ಒಮಾನ್​ ವಿರುದ್ಧ ವಾರ್ನರ್​ 51 ಎಸೆತ ಎದುರಿಸಿ 6 ಬೌಂಡರಿ ಮತ್ತು 1 ಸಿಕ್ಸರ್​ ನೆರವಿನಿಂದ 56 ರನ್​ ಬಾರಿಸಿ ಅರ್ಧಶತಕ ಪೂರ್ತಿಗೊಳಿಸಿದರು. ಇದೇ ವೇಳೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಅರ್ಧಶತಕ ಬಾರಿಸಿದ ಆಟಗಾರನಾಗಿ ಹೊರಹೊಮ್ಮಿದರು. ಇದು ವಾರ್ನರ್​ ಅವರ 111ನೇ ಟಿ20 ಅರ್ಧಶತಕ. ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್​ ಇಂಡೀಸ್​ ತಂಡದ ಮಾಜಿ ಆಟಗಾರ ಕ್ರಿಸ್​ ಗೇಲ್​ ಗೆಸರಿನಲ್ಲಿತ್ತು. ಗೇಲ್​ 110 ಅರ್ಧಶತಕ ಬಾರಿಸಿದ್ದಾರೆ.

ಈಗಾಗಲೇ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿರುವ ವಾರ್ನರ್​ ಟಿ20 ವಿಶ್ವಕಪ್​ ಬಳಿಕ ಮೂರು ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿಯಾಗಲಿದ್ದಾರೆ. ಇದೇ ವರ್ಷ ನಡೆದಿದ್ದ ಐಪಿಎಲ್​ನಲ್ಲಿ ನಿರೀಕ್ಷಿತ ಪ್ರದರ್ಶನ ಮತ್ತು ಸರಿಯಾಗಿ ಆಡುವ ಅವಕಾಶ ಸಿಗದ ವಾರ್ನರ್​ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಆಡಿದ ಮೊದಲ ಪಂದ್ಯದಲ್ಲೇ ಅಮೋಘ ಬ್ಯಾಟಿಂಗ್​ ನಡೆಸಿ ಗಮನಸೆಳೆದರು.

ಇದನ್ನೂ ಓದಿ David Warner : ಬಾಹುಬಲಿ ರಾಜಮೌಳಿ ನಿರ್ದೇಶನದಲ್ಲಿ ಕ್ರಿಕೆಟಿಗ ಡೇವಿಡ್​ ವಾರ್ನರ್ ಆ್ಯಕ್ಟಿಂಗ್​; ಇಲ್ಲಿದೆ ವಿಡಿಯೊ

ಡ್ರೆಸ್ಸಿಂಗ್​ ರೂಮ್​ ಮರೆತ ವಾರ್ನರ್​


ಇದೇ ಪಂದ್ಯದಲ್ಲಿ ವಾರ್ನರ್​ ಅವರು ಔಟ್​ ಆಗಿ ತಮ್ಮ ತಂಡದ ಡ್ರೆಸ್ಸಿಂಗ್​ ರೋಮ್​ಗೆ ತೆರಳುವ ಬದಲು ಎದುರಾಳಿ ಒಮಾನ್ ತಂಡದ ಡ್ರೆಸ್ಸಿಂಗ್​ ರೂಮ್​ಗೆ ತೆರಳಿದ ಪ್ರಸಂಗವೂ ನಡೆಯಿತು. ಮೆಟ್ಟಿಲೇರುತ್ತಾ ಒಮಾನ್​ ಡ್ರೆಸ್ಸಿಂಗ್​ ಕೋಣೆಗೆ ತೆರಳುತ್ತಿದ್ದ ವಾರ್ನರ್​ ಅವರನ್ನು ತಮ್ಮ ತಂಡದ ಸಹ ಆಟಗಾರರು ಜೋರಾಗಿ ಕರೆದು ಅದು ನಮ್ಮ ಕೊಠಡಿಯಲ್ಲ ಎಂದು ಹೇಳಿದ್ದಾರೆ. ಬಳಿಕ ವಾರ್ನರ್​ ತಂಡದ ಡ್ರೆಸ್ಸಿಂಗ್​ ರೂಮ್​ಗೆ ತೆರಳಿದರು. ಇದರ ವಿಡಿಯೊ ವೈರಲ್​ ಆಗಿದೆ.

ಪಂದ್ಯ ಗೆದ್ದ ಆಸ್ಟ್ರೇಲಿಯಾ


ಮಾಜಿ ಚಾಂಪಿಯನ್​ ಆಸ್ಟ್ರೇಲಿಯಾ ತಂಡ ಒಮಾನ್​ ವಿರುದ್ಧ 39 ರನ್​ಗಳ ಪ್ರಯಾಸದ ಗೆಲುವು ಸಾಧಿಸಿ ಟೂರ್ನಿಯಲ್ಲಿ ಶುಭಾರಂಭ ಕಂಡಿದೆ. ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಆಸ್ಟ್ರೇಲಿಯಾ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 164 ರನ್​ ಬಾರಿಸಿತು. ಆಸೀಸ್​ ತಂಡದ ಸಾಮರ್ಥ್ಯಕ್ಕೆ ಇದು ಕನಿಷ್ಠ ಮೊತ್ತ. ಜವಾಬಿತ್ತ ಒಮಾನ್​ ಉತ್ತಮ ಪೈಪೋಟಿ ನೀಡಿ 9 ವಿಕೆಟ್​ಗೆ 125 ರನ್​ ಗಳಿಸಿ ಸಣ್ಣ ಅಂತರದ ಸೋಲು ಕಂಡಿತು.

ಒಮಾನ್​ ಉತ್ತಮ ಬೌಲಿಂಗ್​ ದಾಳಿ ನಡೆಸಿದರೂ ಕೂಡ ಬ್ಯಾಟಿಂಗ್​ನಲ್ಲಿ ವಿಫಲವಾಯಿತು. ಸೋಲು ಕಂಡರೂ ಕೂಡ ಬಲಿಷ್ಠ ಆಸ್ಟ್ರೇಲಿಯಾದಂತಹ ತಂಡಕ್ಕೆ ತೀವ್ರ ಪೈಪೋಟಿ ನೀಡಿದನ್ನು ಮಾತ್ರ ಮೆಚ್ಚಲೇ ಬೇಕು. ಒಮಾನ್​ ಪರ ಮೆಹ್ರಾನ್ ಖಾನ್ 2 ವಿಕೆಟ್​ ಕಿತ್ತರು. ಆಸೀಸ್​ ಪರ ಸ್ಪಿನ್ನರ್​ ಝಾಂಪ (20), ಮಾರ್ಕಸ್​ ಸ್ಟೋಯಿನಿಸ್​(3) ಮಿಚೆಲ್​ ಸ್ಟಾರ್ಕ್​(2) ಮತ್ತು ನಥಾನ್​ ಎಲ್ಲಿಸ್​(2) ವಿಕೆಟ್​ ಕಿತ್ತರು.

Continue Reading

ಕ್ರೀಡೆ

T20 World Cup 2024: ನಸೌ ಪಿಚ್​ ಬಗ್ಗೆ ಕಳವಳ ವ್ಯಕ್ತಪಡಿಸಿದ ಟೀಮ್​ ಇಂಡಿಯಾ ಆಟಗಾರರು

T20 World Cup 2024: ಡ್ರಾಪ್​ ಇನ್​ ಪಿಚ್​ ಅಷ್ಟು ಯೋಗ್ಯವಾಗಿಲ್ಲ. ಬಿರುಕುಗಳು ಅಧಿಕವಾಗಿದೆ. ಬೌಲರ್​ಗಳಿಗೆ ಅನುಕೂಲಕರವಾಗಿದ್ದರೂ ಕೂಡ ಬ್ಯಾಟರ್​ಗಳಿಗೆ ಇದು ಸೂಕ್ತವಾಗಿಲ್ಲ. ಚೆಂಡಿನ ಚಲನೆಯನ್ನು ಸರಿಯಾಗಿ ಗ್ರಹಿಸಿಕೊಳ್ಳಲು ಆಗುತ್ತಿಲ್ಲ. ಇದೇ ಕಾರಣಕ್ಕೆ ನಾನು ಗಾಯಗೊಂಡೆ ಎಂದು ರೋಹಿತ್​ ಈ ಪಿಚ್​ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್​: ಐರ್ಲೆಂಡ್​(India vs Ireland) ವಿರುದ್ಧ ಗೆದ್ದು ಶುಭಾರಂಭ ಕಂಡಿರುವ ಭಾರತ ತಂಡ ಮುಂದಿನ ಪಂದ್ಯವನ್ನು ಪಾಕಿಸ್ತಾನ ವಿರುದ್ಧ ಆಡಲಿದೆ. ಆದರೆ, ಈ ಪಂದ್ಯಕ್ಕೂ ಮುನ್ನ ಭಾರತೀಯ ಆಟಗಾರರಿಗೆ(T20 World Cup 2024) ಅಪಾಯಕಾರಿ ನಸೌ ಪಿಚ್​ ಬಗ್ಗೆ ಭೀತಿ ಕಾಡಿದೆ. ಈಗಾಗಲೇ ಈ ಪಿಚ್​ ಬಗ್ಗೆ ಹಲವುರು ಅಸಮಾಧಾನ ಹೊರಹಾಕಿದ್ದರು. ನಿನ್ನೆ(ಬುಧವಾರ) ನಡೆದ ಪಂದ್ಯದಲ್ಲಿ ನಾಯಕ ರೋಹಿತ್(Rohit Sharma) ​ತೋಳಿನ ಮಾಂಸಖಂಡಕ್ಕೆ ಚೆಂಡು ತಗುಲಿ ಅರ್ಧದಲ್ಲೇ ಬ್ಯಾಟಿಂಗ್​ ಮೊಟಕುಗೊಳಿಸಿದ್ದರು. ಸದ್ಯ ಗಾಯದ ಪ್ರಮಾಣ ಸಣ್ಣ ಮಟ್ಟದಿಂದ ಕೂಡಿದ್ದು ಮುಂದಿನ ಪಂದ್ಯಕ್ಕೆ ಕಣಕ್ಕಿಳಿಯಲಿದ್ದಾರೆ.

ಪಂದ್ಯದ ಬಳಿಕ ಮಾತನಾಡಿದ ರೋಹಿತ್​ ಶರ್ಮ, ಇಲ್ಲಿನ ಡ್ರಾಪ್​ ಇನ್​ ಪಿಚ್​ ಅಷ್ಟು ಯೋಗ್ಯವಾಗಿಲ್ಲ. ಬಿರುಕುಗಳು ಅಧಿಕವಾಗಿದೆ. ಬೌಲರ್​ಗಳಿಗೆ ಅನುಕೂಲಕರವಾಗಿದ್ದರೂ ಕೂಡ ಬ್ಯಾಟರ್​ಗಳಿಗೆ ಇದು ಸೂಕ್ತವಾಗಿಲ್ಲ. ಚೆಂಡಿನ ಚಲನೆಯನ್ನು ಸರಿಯಾಗಿ ಗ್ರಹಿಸಿಕೊಳ್ಳಲು ಆಗುತ್ತಿಲ್ಲ. ಇದೇ ಕಾರಣಕ್ಕೆ ನಾನು ಗಾಯಗೊಂಡೆ. ಈಗ ಚೇತರಿಸಿಕೊಂಡಿದ್ದೇನೆ. ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡದ್ದು ಕೂಡ ಪಿಚ್​ ವರ್ತನೆಯನ್ನು ಅರಿಯುವ ಉದ್ದೇಶದಿಂದ. ಆದರೆ ಈ ಪಿಚ್​ ವರ್ತನೆ ಅರ್ಥೈಸುವುದು ಅಷ್ಟು ಸುಲಭವಾಗಿಲ್ಲ” ಎಂದರು.

‘ಇದು ಹೊಸ ಪಿಚ್ ಆಗಿದ್ದು, ಉತ್ತಮವಾದ ಹುಲ್ಲಿನ ಹೊದಿಕೆ ಇದೆ. ಆದರೆ, ಅದರೊಂದಿಗೆ ದೊಡ್ಡ ಬಿರುಕುಗಳೂ ಇವೆ. ಇದರಿಂದ ಚೆಂಡಿನ ಬೌನ್ಸ್ ಕುಗ್ಗುತ್ತದೆ. ಈ ರೀತಿಯ ಪಿಚ್‌ಗಳಲ್ಲಿ ಅಭ್ಯಾಸ ಪಂದ್ಯಗಳನ್ನು ನಡೆಸಿ ಇದನ್ನು ಸೆಟ್ ಮಾಡಬೇಕು​. ಬಳಿಕ, ದೊಡ್ಡ ಪಂದ್ಯಗಳನ್ನು ಆಯೋಜಿಸಬೇಕು. ಎಲ್ಲ 4 ಪಿಚ್‌ಗಳು ಇದೇ ರೀತಿ ಆಗಿದ್ದು, ಟಿ-20 ಟೂರ್ನಿಗೆ ಯೋಗ್ಯವಲ್ಲ’ ಎಂದು ಕ್ರಿಕೆಟ್​ ವಿಶ್ಲೇಷಕರೊಬ್ಬರು ಹೇಳಿದ್ದಾರೆ. ಆಸ್ಟ್ರೇಲಿಯಾದಿಂದ ತರಿಸಿದ ಡ್ರಾಪ್ ಇನ್ ಪಿಚ್‌ ಇದಾಗಿದೆ.

ಇದನ್ನೂ ಓದಿ India vs Ireland: ಪಂಜಾಬಿ ಪುಟ್ಟ ಪೋರನಿಂದ ಚಿನ್ನದ ಪದಕ ಪಡೆದ ಮೊಹಮ್ಮದ್​ ಸಿರಾಜ್

ಪಾಕಿಸ್ತಾನ ಮತ್ತು ಭಾರತ ತಂಡದ ಪರ ಘಾತಕ ಬೌಲರ್​ಗಳು ಇರುವ ಕಾರಣ ಉಭಯ ತಂಡಗಳ ಬ್ಯಾಟರ್​ಗಳಿಗೆ ಇಲ್ಲಿ ಆಡುವುದೇ ಸವಾಲಾಗಿ ಪರಿಣಮಿಸಿದೆ. ಬ್ಯಾಟರ್​ಗಳು ಗಾಯಗೊಳ್ಳುವ ಸಾಧ್ಯತೆ ಅಧಿಕವಾಗಿದೆ. ಅದರಲ್ಲೂ ಸ್ಟಾರ್​ ಬ್ಯಾಟರ್​ಗಳು ಗಾಯಗೊಂಡು ಟೂರ್ನಿಯಿಂದ ಹೊರಬಿದ್ದರೆ ತಂಡಕ್ಕೆ ದೊಡ್ಡ ನಷ್ಟವಾಗಲಿದೆ. ಹೀಗಾಗಿ ಎಲ್ಲ ತಂಡದ ಬ್ಯಾಟರ್​ಗಳು ಕೂಡ ಜಾಗರೂಕರಾಗಿ ಆಡಬೇಕಿದೆ. ಈ ಸ್ಟೇಡಿಯಂ ಅನ್ನು ಕೇವಲ ಮೂರು ತಿಂಗಳಲ್ಲಿ ನಿರ್ಮಾಣ ಮಾಡಲಾಗಿತ್ತು.

34 ಸಾವಿರ ಪ್ರೇಕ್ಷಕರು ಕೂರುವಷ್ಟು ಸಾಮರ್ಥ್ಯದ ಸ್ಟೇಡಿಯಂ ಇದಾಗಿದ್ದು. ಭಾರತ-ಪಾಕ್​ ಪಂದ್ಯಕ್ಕಾಗಿಯೇ ಇದನ್ನು ತಾತ್ಕಾಲಿಕವಾಗಿ ನಿರ್ಮಿಸಲಾಗಿದೆ. ಪಂದ್ಯದ ನಂತರ ಇದನ್ನು ಕೆಡವಲಾಗುತ್ತದೆ ಎಂದು ತಿಳಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ.

Continue Reading

ಕ್ರಿಕೆಟ್

India vs Ireland: ಪಂಜಾಬಿ ಪುಟ್ಟ ಪೋರನಿಂದ ಚಿನ್ನದ ಪದಕ ಪಡೆದ ಮೊಹಮ್ಮದ್​ ಸಿರಾಜ್

India vs Ireland: ಐರ್ಲೆಂಡ್(India vs Ireland)​ ವಿರುದ್ಧದ ಪಂದ್ಯದಲ್ಲಿ ಉತ್ತಮ ಫೀಲ್ಡಿಂಗ್(Best Fielder Award)ಪ್ರಶಸ್ತಿ ಮೊಹಮ್ಮದ್​ ಸಿರಾಜ್​ಗೆ ಲಭಿಸಿದೆ. ಪುಟ್ಟ ಅಭಿಮಾನಿ ಡ್ರೆಸ್ಸಿಂಗ್​ ರೋಮ್​ಗೆ ಬಂದು ಸಿರಾಜ್​ಗೆ(Siraj Wins Best Fielder Award) ಚಿನ್ನದ ಪದಕ ನೀಡಿದ್ದು ವಿಶೇಷವಾಗಿತ್ತು.

VISTARANEWS.COM


on

India vs Ireland
Koo

ನ್ಯೂಯಾರ್ಕ್​: ಕಳೆದ ವರ್ಷ ನಡೆದಿದ್ದ ಏಕದಿ ವಿಶ್ವಕಪ್ ಟೂರ್ನಿಯಲ್ಲಿ ಟೀಮ್​ ಇಂಡಿಯಾ ಮ್ಯಾನೆಜ್​ಮೆಂಟ್​ ಆಟಗಾರರಲ್ಲಿ ಹೆಚ್ಚಿನ ಸ್ಫೂರ್ತಿ ತುಂಬವ ನಿಟ್ಟಿನಲ್ಲಿ, ಪಂದ್ಯವೊಂದರಲ್ಲಿ ಉತ್ತಮ ಫೀಲ್ಡಿಂಗ್(Best Fielder Award) ನಡೆಸಿದರೆ ಆತನನ್ನು ಗುರುತಿಸಿ ಚಿನ್ನದ ಪದಕ ನೀಡುವ ಕಾರ್ಯವನ್ನು ಜಾರಿಗೆ ತಂದಿತ್ತು. ಇದೀಗ ಟಿ20 ವಿಶ್ವಕಪ್​ನಲ್ಲಿಯೂ(T20 World Cup 2024) ಈ ಪ್ರಕ್ರಿಯೆ ಮುಂದುವರಿದಿದೆ. ಐರ್ಲೆಂಡ್(India vs Ireland)​ ವಿರುದ್ಧದ ಪಂದ್ಯದಲ್ಲಿ ಈ ಪ್ರಶಸ್ತಿ ಮೊಹಮ್ಮದ್​ ಸಿರಾಜ್​ಗೆ ಲಭಿಸಿದೆ. ಪುಟ್ಟ ಅಭಿಮಾನಿ ಡ್ರೆಸ್ಸಿಂಗ್​ ರೋಮ್​ಗೆ ಬಂದು ಸಿರಾಜ್​ಗೆ(Siraj Wins Best Fielder Award) ಚಿನ್ನದ ಪದಕ ನೀಡಿದ್ದು ವಿಶೇಷವಾಗಿತ್ತು. ತಂಡದ ಫೀಲ್ಡಿಂಗ್​ ಕೋಚ್​ ಟಿ.ದಿಲೀಪ್​ ಅವರು ಈ ಪ್ರಶಸ್ತಿ ಘೋಷಣೆ ಮಾಡಿದರು. 


ಐರ್ಲೆಂಡ್​ ಬ್ಯಾಟರ್​ ಡೆಲಾನಿಯನ್ನು ರನೌಟ್ ಮಾಡುವಲ್ಲಿ ಮೊಹಮ್ಮದ್ ಸಿರಾಜ್ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ ಫೀಲ್ಡಿಂಗ್ ಕೋಚ್ ಟಿ ದಿಲೀಪ್, ಸಿರಾಜ್ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದರು. ಡೆಲಾನಿ 26 ರನ್​ ಬಾರಿಸಿದರು. ಪಂದ್ಯದ ವೇಳೆ ರಾಷ್ಟ್ರೀಯ ಗೀತೆಯ ಹಾಡುವ ವೇಳೆ ಕಾಣಿಸಿಕೊಂಡಿದ್ದ ಪಂಜಾಬಿ ಬಾಲಕನನ್ನು ಟೀಮ್ ಇಂಡಿಯಾ ಫೀಲ್ಡಿಂಗ್ ಕೋಚ್ ಡ್ರೆಸ್ಸಿಂಗ್ ರೂಮ್​ಗೆ ಆಹ್ವಾನಿಸಿ ಪ್ರಶಸ್ತಿ ಪ್ರಧಾನ ಮಾಡಿಸಿದರು. ಕಳೆದ ಬಾರಿ ಏಕದಿನ ವಿಶ್ವಕಪ್​ನಲ್ಲಿ ವಿರಾಟ್​ ಕೊಹ್ಲಿ ಮೊದಲ ಚಿನ್ನದ ಪದಕ ಜಯಿಸಿದ್ದರು. ಇದೀಗ ಟಿ20 ವಿಶ್ವಕಪ್​ನಲ್ಲಿ ಮೊದಲ ಚಿನ್ನದ ಪದಕ ಸಿರಾಜ್​ಗೆ ಒಲಿದಿದೆ.

ಇದನ್ನೂ ಓದಿ India vs Ireland: ರೋಹಿತ್​ ಅರ್ಧಶತಕ; ಐರ್ಲೆಂಡ್​ ವಿರುದ್ಧ ಭಾರತಕ್ಕೆ ಭರ್ಜರಿ​ ಗೆಲುವು

ಭಾರತಕ್ಕೆ ಗೆಲುವು


ಇಲ್ಲಿನ ನಸೌ ಕೌಂಟಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ನಾಯಕ ರೋಹಿತ್​ ಶರ್ಮಾ ಅವರ ಆಯ್ಕೆಯನ್ನು ಬೌಲರ್​ಗಳು ಸಮರ್ಥಿಸಿಕೊಂಡರು. ಹಾರ್ದಿಕ್​ ಪಾಂಡ್ಯ, ಅರ್ಶದೀಪ್​, ಜಸ್​ಪ್ರೀತ್ ಬುಮ್ರಾ, ಸಿರಾಜ್ ಮತ್ತು ಅಕ್ಷರ್​​ ಜಿದ್ದಿಗೆ ಬಿದ್ದವರಂತೆ ಬೌಲಿಂಗ್​ ದಾಳಿ ನಡೆಸಿ ವಿಕೆಟ್​ ಕಿತ್ತು ಪಾರಮ್ಯ ಮೆರೆದರು. ಭಾರತೀಯ ಬೌಲಿಂಗ್​ ದಾಳಿಯನ್ನು ಸಮರ್ಥವಾಗಿ ಎದುರಿಸುವಲ್ಲಿ ವಿಫಲವಾದ ಐರ್ಲೆಂಡ್​ ಕೇವಲ 96 ರನ್​ಗಳಿಗೆ ಸರ್ವಪತನ ಕಂಡಿತು. ಜವಾಬಿತ್ತ ಭಾರತ, ಈ ಸಣ್ಣ ಮೊತ್ತವನ್ನು 12.2 ಓವರ್​ಗಳಲ್ಲಿ 2 ವಿಕೆಟ್​ ನಷ್ಟಕ್ಕೆ 97 ರನ್​ ಬಾರಿಸಿ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತು. ಅಕ್ಷರ್​ ಪಟೇಲ್​ ಅವರು ಒಂದು ವಿಕೆಟ್​ ಕೀಳುವ ಮೂಲಕ ಟಿ20 ಕ್ರಿಕೆಟ್​ನಲ್ಲಿ 50 ವಿಕೆಟ್​ ಪೂರ್ತಿಗೊಳಿಸಿದ ಮೈಲುಗಲ್ಲು ತಲುಪಿದರು.

Continue Reading
Advertisement
Love Jihad
ಪ್ರಮುಖ ಸುದ್ದಿ4 mins ago

Love jihad : ಬಿಹಾರದ ಹಿಂದೂ ಯುವತಿಯನ್ನು ಉತ್ತರಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ ಆರಿಫ್; ಲವ್​ ಜಿಹಾದ್ ಆರೋಪ

Road Accident
ಕ್ರೈಂ5 mins ago

Road Accident : ಬೈಕ್‌ಗಳಿಗೆ ಗುದ್ದಿ ಸವಾರರನ್ನು ಕೊಂದು ಪರಾರಿಯಾಗಲು ಯತ್ನಿಸಿದ ಕಾರು ಚಾಲಕ

Election Results 2024
ದೇಶ14 mins ago

Election Results 2024: ರಾಮನೂರಿನಲ್ಲೇ ಬಿಜೆಪಿ ಹಿನ್ನಡೆ; ಹೀನಾಯ ಸೋಲಿಗೆ ಕಾರಣ ಏನು?

Sonu Nigam Hit Backs To Ayodhya People For Not Vote For BJP
ಬಾಲಿವುಡ್18 mins ago

Sonu Nigam: ಅಯೋಧ್ಯೆ ಜನರಿಗೆ ಛೀಮಾರಿ ಹಾಕಿದ್ರಾ ಸೋನು ನಿಗಮ್?

K Annamalai
ವೈರಲ್ ನ್ಯೂಸ್21 mins ago

K Annamalai: ಮೇಕೆಯ ತಲೆಗೆ ಅಣ್ಣಾಮಲೈ ಫೋಟೊ ಅಂಟಿಸಿ ಕಡಿದ ಡಿಎಂಕೆ ಕಾರ್ಯಕರ್ತರು!

hd kumaraswamy nitish kumar
ಪ್ರಮುಖ ಸುದ್ದಿ24 mins ago

HD Kumaraswamy: ಎಚ್‌ಡಿ ಕುಮಾರಸ್ವಾಮಿ ಕೇಳಿದ ಕೃಷಿ ಖಾತೆ ಮೇಲೇ ನಿತೀಶ್‌ ಕಣ್ಣು; ಯಾರಿಗೆ ಒಲಿಯತ್ತೆ ಇಲಾಖೆ?

Virat Kohli
ಕ್ರೀಡೆ28 mins ago

Virat Kohli: ‘ಕೊಹ್ಲಿ ಕೊ ಬೌಲಿಂಗ್​ ದೋ’ ನ್ಯೂಯಾರ್ಕ್​ ಸ್ಟೇಡಿಯಂನಲ್ಲಿ ಮೊಳಗಿದ ಅಭಿಮಾನಿಗಳ ಕೂಗು

Kannada Serials TRP arce Ninagaagi shri gowri
ಕಿರುತೆರೆ40 mins ago

Kannada Serials TRP: ಟಿಆರ್‌ಪಿ ರೇಸ್‌ನಲ್ಲಿ ʻಶ್ರೀಗೌರಿ,ʼ ʻನಿನಗಾಗಿʼ; ʻಅಮೃತಧಾರೆʼ ಜಿಗಿತ!

A rider standing on a bike and Young man and woman fight in road
ಕ್ರೈಂ50 mins ago

ಯುವಕನ ಕಾಲರ್ ಪಟ್ಟಿ ಹಿಡಿದು ಜಾಡಿಸಿ ಒದ್ದ ಯುವತಿ; ಎರಡು ಕೈ ಮೇಲೆತ್ತಿ ಬೈಕ್‌ ಸವಾರಿ, ಸವಾರನ ಹುಚ್ಚಾಟಕ್ಕೆ ಕಿಡಿ

Valmiki Corporation Scam
ಪ್ರಮುಖ ಸುದ್ದಿ1 hour ago

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ; ಸಚಿವ ನಾಗೇಂದ್ರ ರಾಜೀನಾಮೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌