Viral News: 101ನೇ ವಯಸ್ಸಿಗೆ ಡಿಪ್ಲೊಮಾ ಪದವಿ, ಅಜ್ಜನ ಕನಸು ನನಸಾಗಿಸಿದ ಮಕ್ಕಳು! - Vistara News

ವೈರಲ್ ನ್ಯೂಸ್

Viral News: 101ನೇ ವಯಸ್ಸಿಗೆ ಡಿಪ್ಲೊಮಾ ಪದವಿ, ಅಜ್ಜನ ಕನಸು ನನಸಾಗಿಸಿದ ಮಕ್ಕಳು!

80 ವರ್ಷಗಳ ನಂತರ ಇದೀಗ ಕಳೆದ ಎಪ್ರಿಲ್‌ ತಿಂಗಳಲ್ಲಿ ಮಕ್ಕಳು, ಮೊಮ್ಮಕ್ಕಳು ತನ್ನದೇ ಶಾಲೆಯ ಸ್ಟೇಜ್‌ ಮೇಲೆ ಬರುವಂತೆ ಮಾಡಿದಾಗ 101ನೇ
ವಯಸ್ಸಿನ ಕೂಪರ್‌ ಕಣ್ಣು ತುಂಬಿ ಬಂದಿತ್ತು.

VISTARANEWS.COM


on

Merrill Pittman Cooper man who gets diploma in 101
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿದ್ಯೆಗೆ ವಯಸ್ಸಿನ ಹಂಗಿಲ್ಲ ಎಂಬ ಮಾತಿದೆ. ಆದರೆ ಈ ಅಜ್ಜ ಮಾತ್ರ 101ರ ವಯಸ್ಸಿನಲ್ಲೊಂದು ಡಿಪ್ಲೊಮಾ ಪಡೆಯುವ ಮೂಲಕ ಎಲ್ಲರನ್ನು ಚಕಿತರನ್ನಾಗಿಸಿದ್ದಾರೆ! 101ರವರೆಗೂ ಬದುಕುವುದೇ ಹೆಚ್ಚು ಎಂಬ ಸ್ಥಿತಿಯಿರುವಾಗ ಈ ಅಜ್ಜ 80 ವರ್ಷಗಳಿಂದ ಮಾಡಬೇಕೆಂದಿದ್ದ ತನ್ನ ಕನಸನ್ನು ಈಗ ನನಸಾಗಿಸಿಕೊಂಡಿದ್ದಾನೆ!

ನ್ಯೂಜೆರ್ಸಿಯ ಮೆರ್ರಿಲ್‌ ಪಿಟ್‌ಮ್ಯಾನ್‌ ಕೂಪರ್‌ ಎಂಬ ಹೆಸರಿನ ಅಜ್ಜನಿಗೆ ಈಗ ಬರೋಬ್ಬರಿ 101 ವಯಸ್ಸು. ಈ ವಯಸ್ಸಿಗೆ ಸಣ್ಣ ವಯಸ್ಸಿನವರನ್ನೂ ನಾಚಿಸುಚಂತೆ ಗಟ್ಟಿಮುಟ್ಟಾಗಿದ್ದಾನೆ! ಆದರೆ, ತಾನೊಂದು ಹೈಸ್ಕೂಲ್‌ ಡಿಪ್ಲೋಮಾ ಆದರೂ ಪಡೆಯಬೇಕೆಂಬುದು ಆತನ ಕನಸಾಗಿತ್ತು. ಈಗ ಕೊನೆಗೂ ಅಜ್ಜ ತನ್ನ ಕನಸನ್ನು ನನಸಾಗಿಸಿದ ಖುಷಿಯಲ್ಲಿದ್ದಾನೆ. ಈತನ ಖುಷಿಗಾಗಿ ಈತನ ಕುಟುಂಬಸ್ಥರು ಪದವಿ ಪ್ರದಾನ ಸಮಾರಂಭವೊಂದನ್ನೂ ಏರ್ಪಡಿಸಿ ಅಲ್ಲಿ ಪದಕ ಹೆಗಲಿಗೇರಿಸಿ ಪ್ರಮಾಣ ಪತ್ರ ಹಿಡಿದು ಹೆಮ್ಮೆಯಿಂದ ಕೋಟು ಹಾಕಿಸಿ ಕ್ಯಾಮರಾಕ್ಕೆ ಪೋಸು ಕೊಟ್ಟು ಖುಷಿಯಾಗಿಸಿದ್ದಾರೆ.

1930ರ ಆಸುಪಾಸಿನಲ್ಲಿ ಶಾಲೆಗೆ ಹೋಗುತ್ತಿದ್ದ ಈ ಅಜ್ಜ, ಹಲವು ಕೌಟುಂಬಿಕ ಸಮಸ್ಯೆಗಳ ಕಾರಣದಿಂದ ಶಾಲೆಯನ್ನು ಅರ್ಧಕ್ಕೇ ಬಿಡಬೇಕಾಯ್ತು. ಎಂಟನೇ ತರಗತಿಯವರೆಗಷ್ಟೇ ಓದಲು ಸಾಧ್ಯವಾಗಿದ್ದ ಈತನಿಗೆ ಹೆಚ್ಚು ಬಾಧಿಸಿದ್ದು ವರ್ಣಭೇದ. ಕರಿಯನಾಗಿದ್ದ ಈತನಿಗೆ ವಿದ್ಯಾಭ್ಯಾಸ ಸಿಗುವುದು ಅಷ್ಟು ಸುಲಭವಾಗಿರಲಿಲ್ಲ. ಆದರೆ, 1934ರಿಂದ ೩೮ರವರೆಗೆ ಈತ ಕಷ್ಟಪಟ್ಟು ಕಾಲೇಜೂ ಕೂಡಾ ಓದುವಲ್ಲಿ ಸಫಲನೂ ಆಗಿದ್ದ. ಆಗ ಈತನ ಅಮ್ಮ, ಹಲವು ಮನೆಗಳಲ್ಲಿ ಕೆಲಸ ಮಾಡಿ ಸಂಪಾದಿಸುತ್ತಿದ್ದ ಹಣವನ್ನು ಮಗನ ವಿದ್ಯಾಭ್ಯಾಸಕ್ಕಾಗಿ ಖರ್ಚು ಮಾಡುತ್ತಿದ್ದಳು. ಆದರೆ, ಹೆಚ್ಚಿನ ವಿದ್ಯಾಭ್ಯಾಸಕ್ಕೆ ಅದು ಸಾಲುವಂತಿರಲಿಲ್ಲ. ಹೀಗಾಗಿ ಅವರು ಫಿಲಿಡೆಲ್ಫಿಯಾಗೆ ಸ್ಥಳಾಂತರ ಹೊಂದಿದರು. ಆದರೆ ವಿದ್ಯಾಭ್ಯಾಸಕ್ಕೆಂದು ಇಲ್ಲಿಗೆ  ಬಂದರೂ, ಅಮ್ಮ ಕಷ್ಟ ಪಟ್ಟು ದುಡಿದರೂ, ಶಿಕ್ಷಣಕ್ಕೆ ಅದು ಸಾಕಾಗುತ್ತಿಲ್ಲವೆಂದು ಈತನಿಗೆ ಅರಿವಾಗಲು ಶುರುವಾಗಿದ್ದೇ ಈತ ಶಾಲೆ ಬಿಟ್ಟ. ಹಾಗೂ 1945ರಲ್ಲಿ ಕಾರ್‌ ಆಪರೇಟರ್‌ ಆಗಿ ಕೆಲಸಕ್ಕೆ ಸೇರಿಕೊಂಡ. ಈ ಕೆಲಸದಿಂದ ಸಾಕಷ್ಟು ಪದೋನ್ನತಿಗಳಾಗಿ, ಹಲವಾರು ಸ್ಥಳೀಯ ಸಂಘ ಸಂಸ್ಥೆಗಳ ಅಧ್ಯಕ್ಷನೂ ಆದ ಸಮಾಜಮುಖಿ ಕೆಲಸಗಳನ್ನೂ ಮಾಡಿದ. ಆದರೆ, ಜೀವನ ಈತನಿಗೆ ಎಲ್ಲವನ್ನೂ ಕೊಟ್ಟರೂ, ತನ್ನ ಡಿಪ್ಲೊಮಾ ಮಾತ್ರ ಪೂರ್ಣಗೊಳಿಸಲಾಗಲಿಲ್ಲವಲ್ಲ ಎಂಬ ಕೊರಗು ಈತನನ್ನು ಯಾವಾಗಲೂ ಕಾಡುತ್ತಿತ್ತು.

ಹೀಗೆ ಕಾಲ ಉರುಳಿತು. ಬದುಕಿನ ಜವಾಬ್ದಾರಿಗಳೆಡೆಯಲ್ಲೆಲ್ಲೋ ಮೂಲೆಯಲ್ಲಿ ಕನಸು ಮುಚ್ಚಿ ಹೋಯಿತು. ಆದರೂ ಬಹಳಷ್ಟು ಬಾರಿ ಆ ನೆನಪು ಮಾತ್ರ ಅವರನ್ನು ಕಾಡುತ್ತಿತ್ತು. ಆದರೆ ಇನ್ನು ಓದುವುದು ಹಾಗೂ ಡಿಪ್ಲೊಮಾ ಪಡೆಯುವುದು ಮಾತ್ರ ಆಗದ ಮಾತು ಎಂದು ಅನ್ನಿಸಿ ಆ ಕೆಲಸಕ್ಕೆ ಕೈ ಹಾಕಿರಲಿಲ್ಲ. ಸಾಕಷ್ಟು ಸಮಾಜಮುಖಿ ಕೆಲಸಗಳನ್ನು ಮಾಡಿದ ಕೂಪರ್‌ ಅವರ ಈ ಕೈಗೂಡದ ಕನಸಿನ ಬಗ್ಗೆ ಮೊದಲೇ ಅರಿವಿದ್ದ ಈತನ ಕುಟುಂಬಸ್ಥರು ಈತನಿಗೆ ಸರ್‌ಪ್ರೈಸ್‌ ಆಗಿ ಈತನದೇ ಶಾಲೆಯಲ್ಲಿ ಗೌರವ ಡಿಪ್ಲೋಮಾ ಪದವಿ ದೊರೆಯುವಂತೆ ಮಾಡಿದ್ದಾರೆ. ಅದೂ 101ನೇ ವಯಸ್ಸಿನಲ್ಲಿ!

80 ವರ್ಷಗಳ ನಂತರ ಇದೀಗ ಕಳೆದ ಎಪ್ರಿಲ್‌ ತಿಂಗಳಲ್ಲಿ ಮಕ್ಕಳು, ಮೊಮ್ಮಕ್ಕಳು ತನ್ನದೇ ಶಾಲೆಯ ಸ್ಟೇಜ್‌ ಮೇಲೆ ಬರುವಂತೆ ಮಾಡಿದಾಗ ಕೂಪರ್‌ ಕಣ್ಣು ತುಂಬಿ ಬಂದಿತ್ತು. ಅಂದುಕೊಳ್ಳದೆ ಇದ್ದಕ್ಕಿದ್ದಂತೆ ಕನಸೊಂದು ಹೀಗೆ ನನಸಾದರೆ ಹೇಗಿರಬೇಡ! ಕೂಪರ್‌ಗೂ ಅದೇ ಆಗಿತ್ತು. ಭಾವಪರವಶರಾದ ಅವರು ತನ್ನ 101ನೇ ವಯಸ್ಸಿನಲ್ಲಿ ಗೌರವ ಡಿಪ್ಲೊಮಾ ಪಡೆಯುವಂತಾಗಿದ್ದು ಮಾತ್ರ ಅವರನ್ನು ಆಶ್ಚರ್ಯಚಕಿತರನ್ನಾಗಿಸಿದೆ.

ಪದವಿ ಸ್ವೀಕರಿಸಿದ ಕ್ಷಣದಲ್ಲಿ ಸಂತೋಷ ತಡೆಯಲಾಗದೆ ಕೂಪರ್‌, ಇದು ನನ್ನ ಜೀವನದ ಅತ್ಯಂತ ಹೆಚ್ಚು ನೆನಪಿಟ್ಟುಕೊಳ್ಳುವ ದಿನ, ಕೊನೆಗೂ ನನಗೆ ಈ ವಯಸ್ಸಿನಲ್ಲಿ ಪದವಿ ಸಿಕ್ಕಿತು ಎಂಬುದೇ ದೊಡ್ಡ ವಿಚಾರ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Video Viral: ವಡಾ ಪಾವ್ ತಿಂದು, ಅಯ್ಯೋ ಖಾರ ಅಂದ್ರು ಜಪಾನ್ ರಾಯಭಾರಿ! ಹೀಗೆ ವಿಡಿಯೋ ಪೋಸ್ಟ್ ಮಾಡಿ ಅಂದ್ರು ಮೋದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Balkar Singh: ಕೆಲಸ ಕೇಳಿಕೊಂಡು ಬಂದ ಯುವತಿ ಎದುರು ಹಸ್ತಮೈಥುನ ಮಾಡಿಕೊಂಡ ಆಪ್‌ ಸಚಿವ; ವಿಡಿಯೊ ವೈರಲ್

Balkar Singh: ಬಲ್ಕಾರ್‌ ಸಿಂಗ್‌ ಅವರು ಕೆಲಸ ಕೇಳಿಕೊಂಡು ಬಂದ 21 ವರ್ಷದ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ್ದಾರೆ. ಕೆಲಸ ಕೊಡಿಸುವ ಆಸೆ ಹುಟ್ಟಿಸಿದ ಅವರು ವಿಡಿಯೊ ಕಾಲ್‌ ಮಾಡಿ ನಿನ್ನ ಬಟ್ಟೆ ಬಿಚ್ಚು ಎಂಬುದಾಗಿ ಒತ್ತಾಯಿಸಿದ್ದಾರೆ. ಅವರೂ ಯುವತಿಗೆ ಕಾಣುವಂತೆ ಹಸ್ತಮೈಥುನ ಮಾಡಿಕೊಂಡಿದ್ದಾರೆ ಎಂಬುದಾಗಿ ಬಿಜೆಪಿಯ ತಜಿಂದರ್‌ ಬಗ್ಗಾ ಆರೋಪಿಸುವ ಜತೆಗೆ ವಿಡಿಯೊವನ್ನು ಕೂಡ ಹಂಚಿಕೊಂಡಿದ್ದಾರೆ.

VISTARANEWS.COM


on

Balkar Singh
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನೂರಾರು ಕೋಟಿ ರೂ. ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಸೇರಿ ಆಮ್‌ ಆದ್ಮಿ ಪಕ್ಷದ ಹಲವು ನಾಯಕರು, ಸಚಿವರು ಜೈಲುಪಾಲಾಗಿದ್ದಾರೆ. ಇದರ ಬೆನ್ನಲ್ಲೇ, ಪಂಜಾಬ್‌ನಲ್ಲಿ ಆಪ್‌ ಸಚಿವ ಬಲ್ಕಾರ್‌ ಸಿಂಗ್‌ (Balkar Singh) ಅವರ ಕಾಮಕೇಳಿಯೊಂದು ಬಯಲಾಗಿದೆ. ಕೆಲಸ ಕೇಳಿಕೊಂಡು ಬಂದಿದ್ದ ಯುವತಿ ಜತೆ ಪಂಜಾಬ್‌ ಸಚಿವ ಬಲ್ಕಾರ್‌ ಸಿಂಗ್‌ ಹಸ್ತಮೈಥುನ ಮಾಡಿಕೊಂಡಿದ್ದಾರೆ” ಎಂಬುದಾಗಿ ಬಿಜೆಪಿ ನಾಯಕ ತಜಿಂದರ್‌ ಬಗ್ಗಾ ಆರೋಪಿಸುವ ಜತೆಗೆ, ವಿಡಿಯೊವನ್ನು ಕೂಡ ಹಂಚಿಕೊಂಡಿದ್ದಾರೆ. ಇದು ಈಗ ಭಾರಿ ವೈರಲ್‌ ಆಗಿದೆ.

ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ತಜಿಂದರ್‌ ಬಗ್ಗಾ ಅವರು ಬಲ್ಕಾರ್‌ ಸಿಂಗ್‌ ವಿಡಿಯೊವನ್ನು ಹಂಚಿಕೊಂಡಿದ್ದಾರೆ. “ಆಮ್‌ ಆದ್ಮಿ ಪಕ್ಷದಲ್ಲಿ ಮಹಿಳೆಯರಿಗೆ ರಕ್ಷಣೆ, ಗೌರವ ಇಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಈಗ ಆಪ್‌ ಸಚಿವ ಬಲ್ಕಾರ್‌ ಸಿಂಗ್‌ ಅವರು ಕೆಲಸ ಕೇಳಿಕೊಂಡು ಬಂದ 21 ವರ್ಷದ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ್ದಾರೆ. ಕೆಲಸ ಕೊಡಿಸುವ ಆಸೆ ಹುಟ್ಟಿಸಿದ ಅವರು ವಿಡಿಯೊ ಕಾಲ್‌ ಮಾಡಿ ನಿನ್ನ ಬಟ್ಟೆ ಬಿಚ್ಚು ಎಂಬುದಾಗಿ ಒತ್ತಾಯಿಸಿದ್ದಾರೆ. ಅವರೂ ಯುವತಿಗೆ ಕಾಣುವಂತೆ ಹಸ್ತಮೈಥುನ ಮಾಡಿಕೊಂಡಿದ್ದಾರೆ” ಎಂಬುದಾಗಿ ತಜಿಂದರ್‌ ಬಗ್ಗಾ ಆರೋಪಿಸಿದ್ದಾರೆ.

“ಕರ್ತಾರ್‌ಪುರ ಸಾಹಿಬ್‌ ವಿಧಾನಸಭೆ ಕ್ಷೇತ್ರದ ಶಾಸಕ, ಸ್ಥಳೀಯ ಸಂಸ್ಥೆಗಳ ಸಚಿವ ಬಲ್ಕಾರ್‌ ಸಿಂಗ್‌ ಅವರನ್ನು ಮುಂದಿನ 24 ಗಂಟೆಗಳಲ್ಲಿಯೇ ವಜಾಗೊಳಿಸಬೇಕು. ಇಲ್ಲದಿದ್ದರೆ, ಮುಂಬರುವ ಚುನಾವಣೆಯಲ್ಲಿ ಪಂಜಾಬ್‌ನ ಜನರು ಆಮ್‌ ಆದ್ಮಿ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ” ಎಂದು ಹೇಳಿದ್ದಾರೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ಬಲ್ಕಾರ್‌ ಸಿಂಗ್‌ ವಿಡಿಯೊ ವೈರಲ್‌ ಆಗುತ್ತಲೇ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಅವರು ಕೂಡ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಕಾಂಗ್ರೆಸ್‌, ಅಕಾಲಿದಳ ಟೀಕೆ

ಬಲ್ಕಾರ್‌ ಸಿಂಗ್‌ ಅವರು ಅನುಚಿತವಾಗಿ ವರ್ತಿಸುವ ವಿಡಿಯೊ ವೈರಲ್‌ ಆಗಿರುವ ಬಗ್ಗೆ ಶಿರೋಮಣಿ ಅಕಾಲಿ ದಳ ಹಾಗೂ ಕಾಂಗ್ರೆಸ್‌ ಟೀಕೆ ವ್ಯಕ್ತಪಡಿಸಿವೆ. “ಮುಖ್ಯಮಂತ್ರಿ ಭಗವಂತ್‌ ಮಾನ್‌ ಅವರು ಬಲ್ಕಾರ್‌ ಸಿಂಗ್‌, ಲಾಲ್‌ ಚಾಂದ್‌ ಕಟರುಚಾಕ್‌ ಅವರಂತಹ ನಾಚಿಕೆ ಇಲ್ಲದ ಸಚಿವರನ್ನು ರಕ್ಷಣೆ ಮಾಡುತ್ತಿರುವುದು ಖಂಡನೀಯ. ಕೂಡಲೇ ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿವೆ. ಆದಾಗ್ಯೂ, ಬಲ್ಕಾರ್‌ ಸಿಂಗ್‌ ವಿರುದ್ಧ ಯಾವುದೇ ಯುವತಿಯು ದೂರು ನೀಡಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Aam Aadmi Party: ಆಪ್‌ಗೆ ಬರ್ತಿದ್ಯಾ ಖಲಿಸ್ತಾನಿ ಫಂಡಿಂಗ್ಸ್?‌ BKI ಉಗ್ರನ ಜೊತೆ ಪಕ್ಷ ಮುಖಂಡ ಫೊಟೋ

Continue Reading

ಕ್ರೈಂ

Snake Bite : ಮುಳ್ಳು ಚುಚ್ಚಿದೆ ಎಂದು ನಿದ್ರೆಗೆ ಜಾರಿದವನ ಮೈ ಸೇರಿತು ಹಾವಿನ ವಿಷ! ಬೆಳಗಾಗುವಷ್ಟರಲ್ಲಿ ಮೃತ್ಯು

Snake Bite: ಕಾಲಿಗೆ ಎರಡು ಬಾರಿ ಹಾವು ಕಚ್ಚಿದ್ದರೂ, ಮುಳ್ಳು ಚುಚ್ಚಿರಬಹುದೆಂದು ನಿರ್ಲಕ್ಷ್ಯ ತೋರಿದ ವ್ಯಕ್ತಿಯೊಬ್ಬ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

By

snake bite in chikkamagaluru
Koo

ಚಿಕ್ಕಮಗಳೂರು: ಜಮೀನಿನಲ್ಲಿ ಕೆಲಸ ಮುಗಿಸಿ ಬಂದ ವ್ಯಕ್ತಿಯೊಬ್ಬ ಮುಳ್ಳು ಚುಚ್ಚಿದೆ ಎಂದು ತಿಳಿದು ರಾತ್ರಿ ಊಟ ಮಾಡಿ ಮಲಗಿದವ ಚಿರನಿದ್ರೆಗೆ ಜಾರಿದ್ದ. ಗ್ರಾಮದ ಗಣ್ಯ ನಾಯ್ಕ್ (44) ಮೃತ ದುರ್ದೈವಿ. ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ಘಟನೆ (Snake Bite) ನಡೆದಿದೆ.

ಗಣ್ಯ ನಾಯ್ಕ್‌ ಜಮೀನಿನಲ್ಲಿ ಕೆಲಸ ಮಾಡುವಾಗ ಕಾಲಿಗೆ ಎರಡು ಬಾರಿ ಹಾವು ಕಚ್ಚಿತ್ತು. ಆದರೆ ಮುಳ್ಳು ಚುಚ್ಚಿರಬೇಕು ಏನು ಆಗಲ್ಲ ಎಂದು ನಿರ್ಲಕ್ಷಿಸಿದ್ದ. ಹಾವು ಕಚ್ಚಿದ್ದು ಗಮನಕ್ಕೆ ಬಾರದೆ ಮನೆಗೆ ಬಂದು ಊಟ ಮಾಡಿ ಮಲಗಿದ್ದರು. ಆದರೆ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಹೆಣವಾಗಿದ್ದ.

ಕುಟುಂಬಸ್ಥರು ಮಲಗಿದ್ದ ಗಣ್ಯನನ್ನು ಎಬ್ಬಿಸಲು ಮುಂದಾಗಿದ್ದಾರೆ. ಆದರೆ ಆತ ಅಲುಗಾಡದೆ ಇದ್ದಾಗ ಅನುಮಾನಗೊಂದು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಹಾವು ಕಚ್ಚಿ ಮೃತಪಟ್ಟಿದ್ದಾಗಿ ಹೇಳಿದ್ದಾರೆ. ಒಂದು ಸಣ್ಣ ನಿರ್ಲಕ್ಷ್ಯಕ್ಕೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಜಿಂಕೆಗಳ ಅನುಮಾನಾಸ್ಪದ ಸಾವು

ಹತ್ತು ದಿನಗಳ ಅಂತರದಲ್ಲಿ ಎರಡು ಜಿಂಕೆಗಳು ಅನುಮಾನಾಸ್ಪದವಾಗಿ ಮೃತಪಟ್ಟಿವೆ. ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರು ಕಿಡಿಕಾರಿದ್ದಾರೆ. ಚಿಕ್ಕಬಳ್ಳಾಪುರದ ಚಿಂತಾಮಣಿ ‌ತಾಲ್ಲೂಕಿನ‌ ಏನಿಗದೆಲೆ ಗ್ರಾಮದಲ್ಲಿ ಘಟನೆ ನಡೆದಿದೆ. ಏನಿಗದೆಲೆ ಗ್ರಾಮದ ಹರೀಶ್ ಎಂಬುವರ ತೋಟದಲ್ಲಿ ಜಿಂಕೆಗಳ ಮೃತಪಟ್ಟಿವೆ. ಚಿಲಕಲನೇರ್ಪು ಗ್ರಾಮಪಂಚಾಯ್ತಿ ವ್ಯಾಪ್ತಿಯ ಏನಿಗದೆಲೆ ಗ್ರಾಮದಲ್ಲಿ ಬೇಟೆಗಾರರ ಹಾವಳಿಗೆ ಜಿಂಕೆಗಳು ಬಲಿಯಾಗುತ್ತಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: Love Propose : I Love You ಮೆಸೇಜ್‌ ಕಳಿಸಿದ ಮುಸ್ಲಿಂ ಯುವಕನಿಗೆ ವಿವಾಹಿತೆಯಿಂದ ಚಪ್ಪಲಿ ಏಟು!

ಬೈಕ್‌-ಕ್ಯಾಂಟರ್‌ ಡಿಕ್ಕಿಗೆ ಯುವತಿ ನಾಲಿಗೆ ಕಟ್! ಸವಾರ ಸ್ಪಾಟ್‌ ಡೆತ್‌

ಚಿಕ್ಕಮಗಳೂರು/ಬೆಳಗಾವಿ: ಬೈಕ್-ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಹಿಂಬದಿ ಇದ್ದ ಯುವತಿಯ ನಾಲಿಗೆ ಕಟ್ ಆಗಿದೆ. ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಬಳಿ (Road Accident) ಘಟನೆ ನಡೆದಿದೆ.

ಶಿವರಾಜ್ (26) ಮೃತ ದುರ್ದೈವಿ. ಲಾವಣ್ಯ (20) ನಾಲಿಗೆ ಕಳೆದುಕೊಂಡವಳು. ಲಾವಣ್ಯ ಹಾಸನದ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಳು. ಶಿವರಾಜ್-ಲಾವಣ್ಯ ಇಬ್ಬರು ಅರಸೀಕೆರೆ ತಾಲೂಕಿನ ಬಂದೂರು ಮೂಲದವರು.

ಇಬ್ಬರು ಬೈಕ್‌ನಲ್ಲಿ ಬರುವಾಗ ಕ್ಯಾಂಟರ್‌ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಶಿವರಾಜ್‌ ಸ್ಥಳದಲ್ಲೆ ಮೃತಪಟ್ಟರೆ, ಇತ್ತ ಹಿಂಬದಿ ಕುಳಿತಿದ್ದ ಲಾವಣ್ಯ ಡಿಕ್ಕಿ ರಭಸಕ್ಕೆ ನಾಲಿಗೆಯೇ ಕಟ್‌ ಆಗಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಗಾಯಾಳು ಲಾವಣ್ಯಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ.

ಉಳುಮೆ ಮಾಡುವಾಗ ಕರೆಂಟ್‌ ಶಾಕ್‌ಗೆ ರೈತ ಬಲಿ

ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ರೈತರೊಬ್ಬರು ದುರ್ಮರಣ ಹೊಂದಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನದಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ರೈತ ಮಂಜುನಾಥ್ ದಾಸನಕೊಪ್ಪ ಮೃತ ದುರ್ದೈವಿ.

ಗ್ರಾಮದಲ್ಲ ಭಾರಿ ಮಳೆ ಗಾಳಿಗೆ ಜಮೀನಿನಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಅದನ್ನು ಗಮನಿಸದ ರೈತ ಮಂಜುನಾಥ್ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹವನ್ನು ಕಿತ್ತೂರು ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವೈರಲ್ ನ್ಯೂಸ್

Viral Video: ರೈಫಲ್‌ ಜೊತೆ ಬಾರ್‌ಗೆ ನುಗ್ಗಿದ ಕಿಡಿಗೇಡಿ..ಡಿಜೆ ಮೇಲೆ ಗುಂಡಿನ ದಾಳಿ-ಶಾಕಿಂಗ್‌ ವಿಡಿಯೋ ನೋಡಿ

Viral Video: ಆರೋಪಿ ಹಾಗೂ ಆತನ ನಾಲ್ವರು ಸ್ನೇಹಿತರು ಮಧ್ಯರಾತ್ರಿ ಸುಮಾರು 1 ಗಂಟೆಗೆ ಬಾರ್‌ಗೆ ಬಂದಿದ್ದರು. ಆ ಸಮಯದಲ್ಲಿ ಬಾರ್‌ ಮುಚ್ಚಲಾಗಿತ್ತು. ಆದರೂ ಅಲ್ಲಿದ್ದ ಸಿಬ್ಬಂದಿಗೆ ಮದ್ಯ ಸರ್ವ್‌ ಮಾಡುವಂತೆ ತಾಕೀತು ಮಾಡಿದ್ದಾರೆ. ಇದಕ್ಕೆ ಸಿಬ್ಬಂದಿ ನಿರಾಕರಿಸಿದ್ದು, ಆಗ ಜಗಳ ಶುರುವಾಗಿದೆ. ಬಾರ್‌ ಸಿಬ್ಬಂದಿ ಮತ್ತು ಯುವಕರ ನಡುವೆ ಮಾರಾಮಾರಿಯೇ ನಡೆದಿತ್ತು. ಈ ನಡುವೆ ಕೋಪದಲ್ಲಿ ತನ್ನ ಕಾರ್‌ನಲ್ಲಿದ್ದ ರೈಫಲ್‌ ತೆಗೆದುಕೊಂಡ ಬಂದ ಒಬ್ಬ ಡಿಜೆ ಎದೆಗೆ ಗುಂಡಿಕ್ಕಿದ್ದಾನೆ.

VISTARANEWS.COM


on

Viral Video
Koo

ಪಾಟ್ನಾ: ಕುಡಿದ ಮತ್ತಿನಲ್ಲಿ ಕೆಲವೊಮ್ಮೆ ಎಂಥೆಂಥಾ ಅನಾಹುತಗಳು ಸಂಭವಿಸಬಹುದೆಂಬುದಕ್ಕೆ ಈ ಘಟನೆಯೇ ಸಾಕ್ಷಿ. ಮದ್ಯ ಸರ್ವ್‌ ಮಾಡಲು ಬಾರ್‌ ಸಿಬ್ಬಂದಿ ನಿರಾಕರಿಸಿದರೆಂಬ ಕೋಪಕ್ಕೆ ವ್ಯಕ್ತಿಯೊಬ್ಬ ಅಲ್ಲೇ ಇದ್ದ ಡಿಜೆ(Disc Jockey)ಯನ್ನು ಗುಂಡಿಕ್ಕಿ ಹತ್ಯೆಮಾಡಿದ್ದಾನೆ. ಜಾರ್ಖಂಡ್‌ನ ರಾಂಚಿಯಲ್ಲಿ ಈ ಘಟನೆ ನಡೆದಿದ್ದು, ಈ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನು ಈ ವಿಡಿಯೋ ಎಲ್ಲೆಡೆ ವೈರಲ್‌(Viral Video) ಆಗಿದೆ.

ಘಟನೆ ವಿವರ:

ಆರೋಪಿ ಹಾಗೂ ಆತನ ನಾಲ್ವರು ಸ್ನೇಹಿತರು ಮಧ್ಯರಾತ್ರಿ ಸುಮಾರು 1 ಗಂಟೆಗೆ ಬಾರ್‌ಗೆ ಬಂದಿದ್ದರು. ಆ ಸಮಯದಲ್ಲಿ ಬಾರ್‌ ಮುಚ್ಚಲಾಗಿತ್ತು. ಆದರೂ ಅಲ್ಲಿದ್ದ ಸಿಬ್ಬಂದಿಗೆ ಮದ್ಯ ಸರ್ವ್‌ ಮಾಡುವಂತೆ ತಾಕೀತು ಮಾಡಿದ್ದಾರೆ. ಇದಕ್ಕೆ ಸಿಬ್ಬಂದಿ ನಿರಾಕರಿಸಿದ್ದು, ಆಗ ಜಗಳ ಶುರುವಾಗಿದೆ. ಬಾರ್‌ ಸಿಬ್ಬಂದಿ ಮತ್ತು ಯುವಕರ ನಡುವೆ ಮಾರಾಮಾರಿಯೇ ನಡೆದಿತ್ತು. ಈ ನಡುವೆ ಕೋಪದಲ್ಲಿ ತನ್ನ ಕಾರ್‌ನಲ್ಲಿದ್ದ ರೈಫಲ್‌ ತೆಗೆದುಕೊಂಡ ಬಂದ ಒಬ್ಬ ಡಿಜೆ ಎದೆಗೆ ಗುಂಡಿಕ್ಕಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಡಿಜೆಯನ್ನು ರಾಜೇಂದ್ರ ಮೆಡಿಕಲ್‌ ಸೈನ್ಸ್‌ ಆಸ್ಪತ್ರೆಗೆ ದಾಖಲಿಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಅಲ್ಲೇ ಕೊನೆಯುಸಿರೆಳೆದಿದ್ದಾನೆ.

ಎಕ್ಸ್‌ಟ್ರೀಂ ಬಾರ್‌ನಲ್ಲಿ ಈ ಘಟನೆ ನಡೆದಿದ್ದು, ಶೂಟರ್‌ ಬಾರ್‌ ಒಳಗೆ ನುಗ್ಗುತ್ತಿರುವುದು ಮತ್ತು ತನ್ನ ಮುಖವನ್ನು ಟೀ ಶರ್ಟ್‌ನಿಂದ ಮುಚ್ಚಿಕೊಂಡಿರುವ ದೃಶ್ಯವನ್ನು ಸಿಸಿಟಿವಿಯಲ್ಲಿ ಕಾಣಬಹುದಾಗಿದೆ. ಇನ್ನು ಸ್ಥಳಕ್ಕೆ ರಾಂಚಿಯ ಪೊಲೀಸ್‌ ವರಿಷ್ಠಾಧಿಕಾರಿ ಭೇಟಿ ಕೊಟ್ಟಿದ್ದು, ಶೂಟರ್‌ ಮತ್ತು ಆತನ ಸಹಚರರಿಗಾಗಿ ಬಲೆ ಬೀಸಿದ್ದಾರೆ. ಎಲ್ಲಾ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಲಾಗಿದ್ದು, ಬಾರ್‌ ಸಿಬ್ಬಂದಿಯನ್ನೂ ವಿಚಾರಣೆಗೊಳಪಡಿಸಲಾಗಿದೆ.

ಓವೈಸಿ ಪಕ್ಷದ ನಾಯಕನ ಮೇಲೆ ಗುಂಡಿನ ದಾಳಿ

ಅಸಾದುದ್ದೀನ್ ಓವೈಸಿಯವರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (All India Majlis-e-Ittehadul Muslimeen – AIMIM – ಎಐಎಂಐಎಂ) ಪಕ್ಷದ ನಾಯಕ, ಮಹಾರಾಷ್ಟ್ರದ ಮಾಲೆಗಾಂವ್‌ನ ಮಾಜಿ ಮೇಯರ್ (Ex Malegaon Mayor) ಅಬ್ದುಲ್ ಮಲಿಕ್ ಮೊಹಮ್ಮದ್ ಯೂನಸ್ ಇಸಾ ಎಂಬಾತನ ಮೇಲೆ ಇಂದು ಬೆಳಗ್ಗೆ ಅಪರಿಚಿತ ದಾಳಿಕೋರರು ಗುಂಡಿನ ದಾಳಿ (Firing) ನಡೆಸಿದ್ದಾರೆ.

ಅಬ್ದುಲ್ ಮಲಿಕ್ ಮೊಹಮ್ಮದ್ ಅವರ ದೇಹಕ್ಕೆ ಮೂರು ಕಡೆ ಗುಂಡುಗಳು ಬಿದ್ದಿವೆ. ಎದೆಯ ಎಡಭಾಗದಲ್ಲಿ, ಎಡ ತೊಡೆ ಮತ್ತು ಬಲಗೈಗೆ ಗಾಯಗಳಾಗಿವೆ. ಗಾಯಗಳು ತೀವ್ರವಾಗಿರುವ ಕಾರಣ, ಎಐಎಂಐಎಂ ನಾಯಕನನ್ನು ನಾಸಿಕ್‌ನ ಆಸ್ಪತ್ರೆಗೆ ವರ್ಗಾಯಿಸಲಾಯಿತು.

ಇದನ್ನೂ ಓದಿ:MLC Election: ಕಾಂಗ್ರೆಸ್ ಎಂಬುದು ದೇಶದಲ್ಲಿ ರಿಜೆಕ್ಟೆಡ್, ಎಕ್ಸ್‌ಪೈರಿ ಗೂಡ್ಸ್: ಪ್ರಲ್ಹಾದ್ ಜೋಶಿ ಲೇವಡಿ

ಮಾಲೆಗಾಂವ್ ನಗರ ಪೊಲೀಸ್ ಅಧಿಕಾರಿಯ ಪ್ರಕಾರ, ಓಲ್ಡ್ ಆಗ್ರಾ ರಸ್ತೆಯಲ್ಲಿರುವ ಅಂಗಡಿಯೊಂದರ ಹೊರಗೆ ಮಲಿಕ್ ಕುಳಿತಿದ್ದಾಗ 1:20ಕ್ಕೆ ಈ ಘಟನೆ ಸಂಭವಿಸಿದೆ. ಸ್ಥಳೀಯ ಪೊಲೀಸರು ವ್ಯಾಪಕ ತನಿಖೆಯನ್ನು ಪ್ರಾರಂಭಿಸಿದ್ದಾರೆ, ಆದರೆ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಅಬ್ದುಲ್ ಮಲಿಕ್ ಮೊಹಮ್ಮದ್ ಯೂನಸ್ ಇಸಾ, ಅಸಾದುದ್ದೀನ್‌ ಓವೈಸಿಯ ಆಪ್ತನಾಗಿದ್ದು, ಮಾಲೆಗಾಂವ್‌ನ ಮೇಯರ್‌ ಆಗಿದ್ದ.

Continue Reading

ಬಾಗಲಕೋಟೆ

Love Propose : I Love You ಮೆಸೇಜ್‌ ಕಳಿಸಿದ ಮುಸ್ಲಿಂ ಯುವಕನಿಗೆ ವಿವಾಹಿತೆಯಿಂದ ಚಪ್ಪಲಿ ಏಟು!

Love Propose : ಹಿಂದು ಮಹಿಳೆಗೆ ಅನ್ಯಕೋಮಿನ ಯುವಕನೊಬ್ಬ ಪ್ರೀತಿಸುವಂತೆ ಪೀಡಿಸುತ್ತಿದ್ದ. ಅದ್ಹೇಗೋ ಮಹಿಳೆಯ ಫೋನ್‌ ನಂಬರ್‌ ಕಲೆಹಾಕಿದ ಆತ ಐ ಲವ್ ಯೂ ಎಂದು ಮೆಸೇಜ್‌ ಹಾಕಿದ್ದ. ಇದರಿಂದ ಸಿಟ್ಟಾದ ಮಹಿಳೆ ಚಪ್ಪಲಿ ಏಟು ಕೊಟ್ಟಿದ್ದಾಳೆ.

VISTARANEWS.COM


on

By

Love Propose
Koo

ಬಾಗಲಕೋಟೆ: ಐ ಲವ್ ಯೂ ಎಂದು (Love Propose) ಮೆಸೇಜ್‌ ಹಾಕಿದ ಮುಸ್ಲಿಂ ಯುವಕನಿಗೆ ಮಹಿಳೆಯೊಬ್ಬರು ಚಪ್ಪಲಿ ಏಟು ಕೊಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇಳಕಲ್‌ ನಗರದಲ್ಲಿ ಘಟನೆ ನಡೆದಿದೆ. ಯಾಸಿನ್ ಎಂಬಾತ ನಿವೇದಿತಾ ಎಂಬಾಕೆ ಪ್ರೀತಿಸುವಂತೆ ವಾಟ್ಸ್‌ ಆ್ಯಪ್‌ನಿಂದ ಪ್ರೇಮ ನಿವೇದನೆಯನ್ನು ಮಾಡಿದ್ದ.

ನಿವೇದಿತಾ ಹಾಗೂ ಯಾಸಿನ್ ಇಬ್ಬರೂ ಸಹ ವಿವಾಹಿತರು. ಹೀಗಿದ್ದರೂ ಮದುವೆ ಆಗಿರುವ ಮಹಿಳೆಯ ಹಿಂದೆ ಬಿದ್ದ ಯಾಸಿನ್‌ ಪ್ರೀತಿಸುವಂತೆ ನಿವೇದಿತಾಳಿಗೆ ಮಸೇಜ್‌ ಮೂಲಕ ಹಿಂಸೆ ನೀಡುತ್ತಿದ್ದ. ಯಾಸಿನ್‌ ನಡೆಗೆ ರೋಸಿ ಹೋದ ನಿವೇದಿತಾ ಆತನ ಮನೆ ನುಗ್ಗಿ ಕುತ್ತಿಗೆ ಪಟ್ಟಿ ಹಿಡಿದು ಥಳಿಸಿ, ಚಪ್ಪಲಿ ಏಟು ನೀಡಿದ್ದಾರೆ.

ಇನ್ನೂ ನಿವೇದಿತಾ ಹಾಗೂ ಯಾಸಿನ್ ಇಬ್ಬರೂ ಕಾಂಗ್ರೆಸ್ ‌ಪಕ್ಷದ‌ಲ್ಲಿ ಕಾರ್ಯಕರ್ತರಾಗಿದ್ದು, ಪರಿಚಿತರೇ ಆಗಿದ್ದಾರೆ. ಇತ್ತೀಚೆಗೆ ಯಾಸಿನ್‌ ಪ್ರೀತಿ-ಪ್ರೇಮ ಎಂದು ಹಿಂದೆ ಬಿದ್ದು ಚಾಟಿಂಗ್ ಮಾಡುತ್ತಿದ್ದ. ಇದರಿಂದ ರೊಚ್ಚಿಗೆದ್ದ ನಿವೇದಿತಾ ಯಾಸೀನ್ ಮನೆಗೆ ನುಗ್ಗಿ ಚಪ್ಪಲಿ ಏಟು ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ಸ್ಥಳೀಯರ ಮಧ್ಯಸ್ಥಿಕೆಯಿಂದ ಚಪ್ಪಲಿ‌ ಏಟಿನ ಪ್ರಸಂಗ ಬಗೆಹರಿದಿದೆ. ಇಲಕಲ್ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Deep fake Scam : ಸೆಲೆಬ್ರಿಟಿಗಳ ಬಳಿಕ ಈಗ ಬೆಂಗಳೂರು ಶಾಲಾ ವಿದ್ಯಾರ್ಥಿನಿಯರಿಗೆ ಡೀಪ್‌ಫೇಕ್‌ ಕಾಟ; ನಗ್ನ ಫೋಟೋ ವೈರಲ್

ಧ್ರುವ ಸರ್ಜಾ ಜತೆಗಿದ್ದ ಜಿಮ್ ಟ್ರೈನರ್ ಮೇಲೆ ಮಚ್ಚಿನಿಂದ‌ ಹಲ್ಲೆ?

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಧ್ರುವ ಸರ್ಜಾ (Dhruva Sarja) ಜತೆಗಿದ್ದ ಜಿಮ್ ಟ್ರೈನರ್ ಪ್ರಶಾಂತ್ ಮೇಲೆ ಅಟ್ಯಾಕ್ ಆಗಿದೆ ಎಂದು ವರದಿಯಾಗಿದೆ. ಭಾನುವಾರ (ಮೇ 26) ರಾತ್ರಿ ಬೆಂಗಳೂರಿನ ಕೆ ಆರ್ ರಸ್ತೆಯಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ. ಸ್ಥಳೀಯ ಹುಡುಗರ ಜತೆ ಗಲಾಟೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಘಟನೆಗೆ ಸಂಬಂಧಿಸಿದಂತೆ ಧ್ರುವ ಸರ್ಜಾ ಅವರು ಸ್ಪಷ್ಟನೆ ಕೊಡಬೇಕಿದೆ. ಸದ್ಯಕ್ಕೆ ಮಚ್ಚಿನಿಂದ‌ ಪ್ರಶಾಂತ್ ಮೇಲೆ ಹಲ್ಲೆ ಆಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವೈಯಕ್ತಿಕ ವಿಚಾರಕ್ಕೆ ಮಾತಿನ ಚಕಮಕಿ ನಡೆದು ಗಲಾಟೆ ಆಗಿದೆ ಎನ್ನಲಾಗಿದೆ. ಸಿಟ್ಟಿನಲ್ಲಿ ಮಚ್ಚಿನಿಂದ ಪ್ರಶಾಂತ್ ಮೇಲೆ ಸ್ಥಳೀಯ ಹುಡುಗರು ಹಲ್ಲೆ ಮಾಡಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಶಾಂತ್‌ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿನಿಮಾ ವಿಚಾರಕ್ಕೆ ಬಂದರೆ ಪ್ರೇಮ್‌ ಹಾಗೂ ಧ್ರುವ ಸರ್ಜಾ (Dhruva Sarja) ಈಗಾಗಲೇ ʻಕೆಡಿʼ ಸಿನಿಮಾ (KD movie) ಬಿಡುಗಡೆ ಯಾವಾಗ ಎಂಬುದನ್ನು ರಿವೀಲ್‌ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ಕೆಡಿ ಸಿನಿಮಾ ತೆರೆ ಕಾಣುತ್ತಿದೆ. ಚಿತ್ರರಂಗಕ್ಕೆ ಬಂದ 12 ವರ್ಷಗಳಲ್ಲಿ ಧ್ರುವ ಸರ್ಜಾ 4 ಸಿನಿಮಾಗಳಲ್ಲಿ ಮಾತ್ರ ನಟಿಸಿದ್ದಾರೆ ಎನ್ನುವ ಬೇಸರ ಕೆಲವರದ್ದು. ಇದೀಗ ಹೊಸ ಸುದ್ದಿಯೊಂದು ವೈರಲ್‌ ಆಗುತ್ತಿದೆ. ಬಾಲಿವುಡ್‌ಗೆ ಧ್ರುವ ಸರ್ಜಾ ಎಂಟ್ರಿ ಕೊಡುತ್ತಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Dhruva Sarja: ಬಾಲಿವುಡ್‌ ಸಿನಿಮಾಗೆ ಎಂಟ್ರಿ ಕೊಡ್ತಾರಾ ಧ್ರುವ ಸರ್ಜಾ? ಬಿಗ್‌ ಬಜೆಟ್‌ ಚಿತ್ರದಲ್ಲಿ ಸಹೋದರನ ಪಾತ್ರ?

ಬಹುನಿರೀಕ್ಷಿತ ‘ವಾರ್-2’ ಚಿತ್ರದಲ್ಲಿ ಕನ್ನಡದ ನಟ ಬಣ್ಣ ಹಚ್ಚುತ್ತಾರೆ ಎನ್ನಲಾಗುತ್ತಿದೆ. ತೆಲುಗು ಮಾಧ್ಯಮಗಳಲ್ಲಿ ಕೂಡ ಇಂತಹದೊಂದು ಸುದ್ದಿ ಹರಿದಾಡುತ್ತಿದೆ. ಜ್ಯೂ. ಎನ್‌ಟಿಆರ್ ಸಹೋದರನ ಪಾತ್ರದಲ್ಲಿ ಧ್ರುವ ನಟಿಸುತ್ತಾರೆ ಎಂದು ಎಂದು ವರದಿಯಾಗುತ್ತಿದೆ. ಧ್ರುವ ಸರ್ಜಾ ಈ ಚಿತ್ರದಲ್ಲಿ ನಟಿಸುತ್ತಾರೆ, ಆ ಮೂಲಕ ಬಾಲಿವುಡ್‌ಗೆ ಎಂಟ್ರಿ ಕೊಡುತ್ತಾರೆ ಎನ್ನುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ವರದಿಯ ಪ್ರಕಾರ, ಜ್ಯೂನಿಯರ್‌ ಎನ್‌ಟಿಆರ್‌ ವಿಲನ್‌ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬ್ರಹ್ಮಾಸ್ತ್ರ ಸಿನಿಮಾ ಬಳಿಕ ಆದಿತ್ಯ ಚೋಪ್ರಾ ಅವರು ಅಯನ್ ಮುಖರ್ಜಿ ಅವರ ನಿರ್ದೇಶಕ್ಕೆ ಮನಸೋತು, ಈ ಸಿನಿಮಾ ಮಾಡಲು ಅವಕಾಶ ನೀಡಿದ್ದಾರೆ ಎನ್ನಲಾಗಿದೆ.

ಸಿದ್ದಾರ್ಥ್ ಆನಂದ್ ಅವರು ‘ವಾರ್’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಯಶಸ್ಸು ಕಂಡಿತು. ಈ ಚಿತ್ರದಲ್ಲಿ ಹೃತಿಕ್ ರೋಷನ್ ಹಾಗೂ ಟೈಗರ್ ಶ್ರಾಫ್ ನಟಿಸಿದ್ದರು. ಮೊದಲ ಪಾರ್ಟ್​​ನಲ್ಲಿ ಟೈಗರ್ ಶ್ರಾಫ್ ಪಾತ್ರ ಕೊನೆಗೊಂಡಿದೆ. ಹೀಗಾಗಿ ‘ವಾರ್-2’ ಚಿತ್ರದಲ್ಲಿ ಹೃತಿಕ್ ಮಾಡಿರುವ ಕಬೀರ್ ಪಾತ್ರ ಮುಂದುವರಿಯುತ್ತಿದೆ. ಜ್ಯೂನಿಯರ್‌ ಎನ್‌ಟಿಆರ್‌ ಅವರು ತಮ್ಮ ಮೊದಲ ಬಾಲಿವುಡ್​ ಚಿತ್ರಕ್ಕೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿರುವುದು ವಿಶೇಷ. ವಾರ್‌-2 ಪ್ಯಾನ್ ಇಂಡಿಯಾ ಚಲನಚಿತ್ರವಾಗಿದ್ದು, ಉತ್ತರ ಮತ್ತು ದಕ್ಷಿಣ ಭಾಗದ ಸೂಪರ್‌ಸ್ಟಾರ್‌ಗಳನ್ನು ಹೊಂದಿದೆ. ಕಿಯಾರಾ ಆಡ್ವಾಣಿ ಈ ಸಿನಿಮಾ ನಾಯಕಿ. ʼವಾರ್ 2ʼ 2025ರ ಆಗಸ್ಟ್ 14ರಂದು ಬಿಡುಗಡೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Prajwal Revanna Case
ಕರ್ನಾಟಕ28 mins ago

Prajwal Revanna Case: ಪ್ರಜ್ವಲ್‌ ಬಂದ್ರೆ ಎಸ್‌ಐಟಿ ಮುಂದೆ ನಾನೂ ಹಾಜರಾಗುವೆ: ಆರೋಪಿ ನವೀನ್‌ ಗೌಡ

Narendra Modi
ದೇಶ52 mins ago

Narendra Modi: ರಾಹುಲ್‌ ಗಾಂಧಿ, ಕೇಜ್ರಿವಾಲ್‌ಗೆ ಪಾಕ್‌ ಬೆಂಬಲ; ತನಿಖೆಯಾಗಲಿ ಎಂದ ಮೋದಿ

INDIA Bloc
ದೇಶ1 hour ago

INDIA Bloc: ಜೂನ್‌ 1ರಂದು ‘ಇಂಡಿಯಾ’ ಸಭೆಗೆ ಮಮತಾ ಬ್ಯಾನರ್ಜಿ ಗೈರು; ಆದ್ಯತೆ ಬೇರೆ ಎಂದ ದೀದಿ

Bomb Threat
ದೇಶ1 hour ago

Bomb Threat: ಮುಂಬೈ ತಾಜ್‌ ಹೋಟೆಲ್‌, ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ; 26/11 ರೀತಿ ದಾಳಿಗೆ ಸಂಚು?

Suspicious Death
ಕರ್ನಾಟಕ1 hour ago

Suspicious Death: ಕಾಂಗ್ರೆಸ್ ಮುಖಂಡನ ಸಾವಿಗೆ ಕೊನೆಗೂ ಸಿಕ್ತು ಟ್ವಿಸ್ಟ್; ನಿಗೂಢ ಸಾವನ್ನು ಭೇದಿಸಿದ ಖಾಕಿ

MLC North East Graduate Constituency Non Party Candidate Nara Pratap Reddy election campaign in Vijayanagara District
ರಾಜಕೀಯ2 hours ago

MLC Election: ಕ್ಷೇತ್ರದೆಲ್ಲೆಡೆ ಪದವೀಧರ ಮತದಾರರಿಂದ ಉತ್ತಮ ಸ್ಪಂದನೆ: ನಾರಾ ಪ್ರತಾಪ್‌ ರೆಡ್ಡಿ

Python spotted in Chikkasandra village of Shira taluk
ಕರ್ನಾಟಕ2 hours ago

Snake Rescue: ಶಿರಾದಲ್ಲಿ ಹೆಬ್ಬಾವು ರಕ್ಷಿಸಿದ ಮಾಜಿ ಸೈನಿಕ

Fortis Hospital doctors team performed complex surgery for three different diseases simultaneously
ಕರ್ನಾಟಕ2 hours ago

Fortis Hospital: ವಿಶ್ವದಲ್ಲೇ ಮೊದಲ ಬಾರಿಗೆ 3 ವಿಭಿನ್ನ ಕಾಯಿಲೆಗೆ ಏಕಕಾಲದಲ್ಲೇ ಯಶಸ್ವಿ ಶಸ್ತ್ರಚಿಕಿತ್ಸೆ

New Financial Rules
ವಾಣಿಜ್ಯ2 hours ago

New Financial Rules: ಜೂನ್ 1ರಿಂದ ಏನೆಲ್ಲಾ ಬದಲಾವಣೆಗಳಾಗಲಿವೆ ಗೊತ್ತಿದೆಯೆ?

Balkar Singh
ದೇಶ2 hours ago

Balkar Singh: ಕೆಲಸ ಕೇಳಿಕೊಂಡು ಬಂದ ಯುವತಿ ಎದುರು ಹಸ್ತಮೈಥುನ ಮಾಡಿಕೊಂಡ ಆಪ್‌ ಸಚಿವ; ವಿಡಿಯೊ ವೈರಲ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ5 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 day ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 day ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌