In shooting Set really they tie knots in serial marriages? Harish Raj : ತೆರೆ ಮೇಲೆ ನಿಜಕ್ಕೂ ತಾಳಿ ಕಟ್ತಾರಾ? ಎಷ್ಟು ಗಂಟು ಹಾಕ್ತಾರೆ? - Vistara News

ಕಿರುತೆರೆ

Harish Raj : ತೆರೆ ಮೇಲೆ ನಿಜಕ್ಕೂ ತಾಳಿ ಕಟ್ತಾರಾ? ಎಷ್ಟು ಗಂಟು ಹಾಕ್ತಾರೆ?

Harish Raj: ನಟ ಹರೀಶ್‌ ರಾಜ್‌ (Harish Raj) ವೀಕ್ಷಕರ ಕುತೂಹಲಕರ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಹರೀಶ್‌ ರಾಜ್‌ ಇನ್‌ಸ್ಟಾದಲ್ಲಿ ವೀಕ್ಷಕರಿಗೆ ‘ಶೂಟಿಂಗ್‌ನಲ್ಲಿ ತಾಳಿ ಕಟ್ಟುವಾಗ ಎಷ್ಟು ಗಂಟು ಹಾಕ್ತೀವಿ?’ ಎಂದು ಫೋಟೊ ಜತೆಗೆ ಪ್ರಶ್ನೆ ಕೇಳಿದ್ದಾರೆ.

VISTARANEWS.COM


on

In shooting Set really they tie knots in serial marriages
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಾಯಕನು ನಾಯಕಿಗೆ ರಿಯಲ್‌ ಆಗಿ ತಾಳಿ ಕಟ್ಟುತ್ತಾನಾ ಎಂಬ ಸಂಶಯ ಬಹುತೇಕರದ್ದು. ಮದುವೆ ವಿಚಾರವಾಗಿಯೇ ಇಟ್ಟುಕೊಂಡು ಅದೆಷ್ಟೋ ಸಿನಿಮಾಗಳು ಬಂದು ಹೋಗಿವೆ. ಶಿವಣ್ಣ ನಟನೆಯ ‘ಕುರುಬನ ರಾಣಿ’ ಸಿನಿಮಾ ನೋಡಿದರೆ ಮುಗ್ಧನ ಪಾತ್ರದಲ್ಲಿ ಶಿವಣ್ಣ ಕಾಣಿಸಿಕೊಂಡಿದ್ದಾರೆ. ನಗ್ಮಾ ಜನಪ್ರಿಯ ನಟಿಯ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕನಿಗೆ ಮದು ಮಗನ ವೇಷ ಹಾಕಿ ಮಂಟಪದಲ್ಲಿ ತಂದು ಕೂರಿಸಿ ನಾಯಕಿಗೆ ತಾಳಿ ಕಟ್ಟಲು ಹೇಳುತ್ತಾರೆ. ಆದರೆ ಆತನಿಗೆ ಅದು ರೀಲ್‌ ಎನ್ನುವುದು ಗೊತ್ತಿರುವುದಿಲ್ಲ. ಸೀನ್ ಮುಗಿದಾಕ್ಷಣ ನಾಯಕಿ ತಾಳಿ ಕಳಚಿಡುತ್ತಾಳೆ. ರೀಲಿನಲ್ಲಿ ಇದು ಆಕೆಗೆ ಎಷ್ಟನೇ ಮದುವೆಯೋ. ಆದರೆ ಈ ವ್ಯತ್ಯಾಸ ಗೊತ್ತಿಲ್ಲದೇ ಹಳ್ಳಿ ಹೈದ ಆಕೆಯನ್ನು ಸ್ವಂತ ಹೆಂಡತಿಯಂತೇ ಭಾವಿಸುತ್ತಾನೆ!

ಅದೇ ರೀತಿ ಅದೆಷ್ಟೋ ಪ್ರೇಕ್ಷಕರಿಗೆ ತೆರೆ ಮೇಲೆ ತಾಳಿ ನಿಜವಾಗಿಯೂ ಕಟ್ಟುತ್ತಾರಾ ಎಂಬ ಅನುಮಾನ ಇದೆ. ಇದೀಗ ಈ ಎಲ್ಲ ಪ್ರಶ್ನೆಗೆ ನಟ ಹರೀಶ್‌ ರಾಜ್‌ (Harish Raj) ವೀಕ್ಷಕರಿಗೆ ಉತ್ತರ ನೀಡಿದ್ದಾರೆ. ಹರೀಶ್‌ ರಾಜ್‌ ಇನ್‌ಸ್ಟಾದಲ್ಲಿ ವೀಕ್ಷಕರಿಗೆ ‘ಶೂಟಿಂಗ್‌ನಲ್ಲಿ ತಾಳಿ ಕಟ್ಟುವಾಗ ಎಷ್ಟು ಗಂಟು ಹಾಕ್ತೀವಿ?’ ಎಂದು ಫೋಟೊ ಜತೆಗೆ ಪ್ರಶ್ನೆ ಕೇಳಿದ್ದಾರೆ.

ಇತ್ತೀಚೆಗೆ ‘ಜೊತೆ ಜೊತೆಯಲಿ’ ಚಿತ್ರತಂಡ ಧಾರಾವಾಹಿಯನ್ನು ಕೊನೆಗೊಳಿಸಿತು. ಆರ್ಯವರ್ಧನ್ ಹಾಗೂ ಅನು ಸಿರಿಮನೆ ಮತ್ತೆ ಮದುವೆ ಆಗುವ ಸನ್ನಿವೇಶವದು. ಆರ್ಯವರ್ಧನ್ ಪಾತ್ರ ಮಾಡಿದ ಹರೀಶ್ ರಾಜ್‌ ಒಂದು ಪ್ರಶ್ನೆಯನ್ನು ವೀಕ್ಷಕರಿಗೆ ಕೇಳಿದ್ದಾರೆ. ‘ಶೂಟಿಂಗ್‌ನಲ್ಲಿ ತಾಳಿ ಕಟ್ಟೋವಾಗ ಎಷ್ಟು ಗಂಟು ಹಾಕ್ತೀವಿ?’ ಎಂದು. ಅದಕ್ಕೆ ಕುತೂಹಲಕರವಾಗಿ ನೆಟ್ಟಿಗರು ಕಮೆಂಟ್‌ ಮೂಲಕ ಹಲವು ಉತ್ತರಗಳನ್ನು ನೀಡಿದ್ದಾರೆ. ʻʻ’ನೀವು ತಾಳಿನೇ ಕಟ್ಟಿರಲ್ಲ. ಕಟ್ಟಿರುವ ತರಹ ತೋರಿಸ್ತೀರಾ ಅಷ್ಟೇʼʼ ಎಂದು ಒಬ್ಬರು ಕಮೆಂಟ್‌ ಮಾಡಿದರೆ, ‘ನೀವು ತಾಳಿ ಕಟ್ಟೋದು ಕ್ಯಾಮೆರಾಗೆ. ಒಂದೇ ಗಂಟು ಹಾಕ್ತೀರಾ… ಎರಡು ಗಂಟು, ಮೂರು ಗಂಟು ಹಾಕೋ ತರಹ ಕೈ ಮೂವ್‌ಮೆಂಟ್ ಮಾಡುತ್ತೀರಾʼʼ ಎಂದು ಉತ್ತರ ನೀಡಿದ್ದಾರೆ!

ಇದನ್ನೂ ಓದಿ: Road Accident: ಮಕ್ಕಳೂ ಸೇರಿ 7 ಪಾದಚಾರಿಗಳ ಮೇಲೆ ಹರಿದ ಟಂಟಂ; ಕುಡಿದ ಅಮಲಿನಲ್ಲಿ ಘೋರ ಅವಘಡ!

ಇಂತಹ ಹಲವು ಅನುಮಾನಗಳಿಗೆ ಹರೀಶ್‌ ಅವರು ಉತ್ತರ ನೀಡಿ ʻʻಓ ಸ್ನೇಹಿತರೇ, ಇಂತಹ ಅದ್ಭುತವಾದ ಕಮೆಂಟ್‌ಗಳಿಗಾಗಿ ನಾನು ನಿಮ್ಮೆಲ್ಲರಿಗೂ ಧನ್ಯವಾದ ಹೇಳಲು ಬಯಸುತ್ತೇನೆ. ನಿಮ್ಮ ಉತ್ತರಗಳನ್ನೆಲ್ಲ ಓದಿ ಖುಷಿಯಾಯಿತು. ವಾಸ್ತವವಾಗಿ ನಾವು ಒಂದೇ ಶಾಟ್‌ನ ಬೇರೆ ಬೇರೆ ಆ್ಯಂಗಲ್‌ನಲ್ಲಿ ಶೂಟ್ ಮಾಡುತ್ತೇವೆ ಮತ್ತು ನಾವು ಕನಿಷ್ಠ ಐದಾರು ಬಾರಿ ಗಂಟು ಹಾಕಿರುತ್ತೇವೆʼʼ ಎಂದು ಉತ್ತರ ನೀಡಿ ಪ್ರೇಕ್ಷಕರ ಡೌಟ್‌ ಕ್ಲೀಯರ್‌ ಮಾಡಿದ್ದಾರೆ.

ಆರೂರು ಜಗದೀಶ್‌ ನಿರ್ದೇಶನದ ʼಜೊತೆಜೊತೆಯಲಿʼ ಧಾರಾವಾಹಿಯಲ್ಲಿ ಅನಿರುದ್ಧ ಅವರನ್ನು ಧಾರಾವಾಹಿ ತಂಡದಿಂದ ಹೊರಹಾಕಿದ ನಂತರ ಅವರ ಸ್ಥಾನಕ್ಕೆ ಹರೀಶ್‌ ರಾಜ್‌ ಅವರನ್ನು ಕರೆತರಲಾಗಿತ್ತು. ಅದಕ್ಕಾಗಿಯೇ ಕೆಲವು ಹೊಸ ಉಪಕಥೆಯನ್ನೂ ಪರಿಚಯಿಸಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan: ರೇಣುಕಾಸ್ವಾಮಿ ಕುಟುಂಬಕ್ಕೆ ಹಣ ಸಹಾಯ ಮಾಡಿ, ದರ್ಶನ್‌ ಪರವಾಗಿ ವಾದ ಮಾಡಿದ ನಟ ಗಣೇಶ್ ರಾವ್!

Actor Darshan: ‘ಕೆಂಡಸಂಪಿಗೆ’ ಧಾರಾವಾಹಿಯಲ್ಲಿ ರಾಜಕಾರಣಿ ಶಂಕರೇಗೌಡ ಪಾತ್ರದಲ್ಲಿ ನಟ ಗಣೇಶ್ ರಾವ್ ರೇಣುಕಾಸ್ವಾಮಿ ಅವರ ಮನೆಗೆ ಭೇಟಿ ನೀಡಿ ದರ್ಶನ್ ಪರವಾಗಿ ಮಾತನಾಡಿದರು. ಜತೆಗೆ ರೇಣುಕಾಸ್ವಾಮಿ ಕುಟುಂಬಕ್ಕೆ ಗಣೇಶ್ ರಾವ್ ಹಣ ಸಹಾಯ ಮಾಡಿದರು.ಮೃತ ರೇಣುಕಾಸ್ವಾಮಿ ಅವರ ಮನೆಗೆ ನಟ ಗಣೇಶ್ ರಾವ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ರೇಣುಕಾಸ್ವಾಮಿ ಅವರ ಮನೆಗೆ ಭೇಟಿ ನೀಡಿದ ನಟ ಗಣೇಶ್ ರಾವ್‌, ರೇಣುಕಾಸ್ವಾಮಿ ಅವರ ಕುಟುಂಬಸ್ಥರ ಮುಂದೆಯೇ ದರ್ಶನ್ ಪರವಾಗಿ ಮಾತನಾಡಿದರು.

VISTARANEWS.COM


on

Actor Darshan Ganesh Rao Visits Renukaswamy Family and spport In Chitradurga
Koo

ಬೆಂಗಳೂರುಚಾಲೆಂಜಿಂಗ್ ಸ್ಟಾರ್‌ ದರ್ಶನ್ (Actor Darshan) ಜೈಲು ಸೇರಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ದರ್ಶನ್‌ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇನ್ನು ಹಲವು ನಾಯಕರು, ಸೆಲೆಬ್ರಿಟಿಗಳು ರೇಣುಕಾ ಸ್ವಾಮಿ ಕುಟುಂಬಕ್ಕೆ ಸಹಾಯವನ್ನು ಮಾಡಿದ್ದಾರೆ. ನಿನ್ನೆಯಷ್ಟೇ ವಿನೋದ್‌ ರಾಜ್‌ ಅವರು ಚಿತ್ರದುರ್ಗಕ್ಕೆ ಹೋಗಿ ಸಂತ್ರಸ್ತ ರೇಣುಕಾ ಸ್ವಾಮಿ ಕುಟುಂಬವನ್ನು ಭೇಟಿ ಮಾಡಿ ಸಾಂತ್ವಾನ ಹೇಳುವ ಜತೆಗೆ 1 ಲಕ್ಷ ರೂಪಾಯಿ ಹಣ ಸಹಾಯವನ್ನು ಸಹ ಮಾಡಿದ್ದರು. ಇದೀಗ   ‘ಕೆಂಡಸಂಪಿಗೆ’ ಧಾರಾವಾಹಿಯಲ್ಲಿ ರಾಜಕಾರಣಿ ಶಂಕರೇಗೌಡ ಪಾತ್ರದಲ್ಲಿ ನಟ ಗಣೇಶ್ ರಾವ್ (Ganesh Rao) ರೇಣುಕಾಸ್ವಾಮಿ ಅವರ ಮನೆಗೆ ಭೇಟಿ ನೀಡಿ ದರ್ಶನ್ ಪರವಾಗಿ ಮಾತನಾಡಿದರು. ಜತೆಗೆ ರೇಣುಕಾಸ್ವಾಮಿ ಕುಟುಂಬಕ್ಕೆ ಗಣೇಶ್ ರಾವ್ ಹಣ ಸಹಾಯ ಮಾಡಿದರು.

ಮೃತ ರೇಣುಕಾಸ್ವಾಮಿ ಅವರ ಮನೆಗೆ ನಟ ಗಣೇಶ್ ರಾವ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ರೇಣುಕಾಸ್ವಾಮಿ ಅವರ ಮನೆಗೆ ಭೇಟಿ ನೀಡಿದ ನಟ ಗಣೇಶ್ ರಾವ್‌, ರೇಣುಕಾಸ್ವಾಮಿ ಅವರ ಕುಟುಂಬಸ್ಥರ ಮುಂದೆಯೇ ದರ್ಶನ್ ಪರವಾಗಿ ಮಾತನಾಡಿದರು.

ಗಣೇಶ್ ರಾವ್ ಮಾತನಾಡಿ ʻʻನಾವು ಯಾರನ್ನೂ ಸಮರ್ಥಿಸಿಕೊಳ್ಳುತ್ತಿಲ್ಲ. ದರ್ಶನ್‌ ಜತೆ ನಾವು 13 ಸಿನಿಮಾಗಳನ್ನು ಮಾಡಿದ್ದೇವೆ. ಆ ಮನುಷ್ಯ ಅಷ್ಟು ಕ್ರೂರಿ ಅಲ್ಲ. ಸೆಲೆಬ್ರಿಟಿ ಆದ ಕಾರಣ ಹೆಸರು ಮುನ್ನಲೆಗೆ ಬರುತ್ತಿದೆ. ನನಗೆ ಆತ್ಮ ಸಾಕ್ಷಿ ಹೇಳುತ್ತ ಇದೆ. ದರ್ಶನ್‌ ಅವರು ಆ ಮಟ್ಟಕ್ಕೆ ಇಳಿಯಲು ಸಾಧ್ಯವಿಲ್ಲ. ಅವರ ಜತೆ ಇದ್ದ ಸಂಗಡಿಗರು ಹೀಗೆ ಮಾಡಿದ್ದರಿಂದ ಅಪವಾಧ ಅವರ ಮೇಲೆ ಹೀಗೆ ಬಂದಿದೆ. ಇಲ್ಲಿ ಬಿಂಬಿಸುತ್ತಿರುವುದು ದರ್ಶನ್‌ ಅವರನ್ನು. ನ್ಯಾಯಾಲಕ್ಕೆ ಮುಂಚೆನೆ ಅವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ ಬಿಟ್ಟಿದ್ದಾರೆ. ತಪ್ಪು ಮಾಡಿದರೆ ಶಿಕ್ಷೆ ಅನುಭವಿಸಲಿ. ಆದರೆ ತಪ್ಪು ಮಾಡದೇನೇ ಅಪವಾಧ ಹೊರಿಸುವುದು ಸರಿಯಲ್ಲ. ಕೆಲವರು ಅವರೇ ಕಣ್ಣಾರೆ ನೋಡಿರೋ ತರ ಮಾತನಾಡುತ್ತಾರೆ. ಈ ದುರ್ಘಟನೆ ನಡೆಯಬಾರದಿತ್ತು. ರೇಣುಕಾಸ್ವಾಮಿ ಮನೆಯವರು ನೋವು ಅನುಭವಿಸುತ್ತಿದ್ದಾರೆ. ಅವರಿಗೆ ದುಃಖ ಭರಿಸುವ ಶಕ್ತಿಯನ್ನ ದೇವರು ಕೊಡಲಿ. ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ. ನ್ಯಾಯಾಲಯದ ಮೇಲೆ ನಂಬಿಕೆ ಇದೆ. ಮಾನವೀಯತೆ ದೃಷ್ಟಿಯಿಂದ ನೊಂದಿರುವ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದಿದ್ವಿʼʼ ಎಂದರು.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಇದಕ್ಕೂ ಮುಂಚೆ ಮುಂಚೆ ಚಿತ್ರದುರ್ಗಕ್ಕೆ ತೆರಳಿದ ನಟ ವಿನೋದ್ ರಾಜ್ ಮಾತನಾಡಿ, ‘ಮನೆಗೆ ಆಧಾರ ಸ್ತಂಭವಾದ ಮಗನನ್ನು ಕಳೆದುಕೊಂಡಿದ್ದಾರೆ. ಕುಟುಂಬ ಪರಿತಪಿಸುತ್ತಿರುವ ಸ್ಥಿತಿ ಕಂಡು ಕರಳುಕಿತ್ತು ಬರುತ್ತಿದೆ. ಜೀವನದಲ್ಲಿ ಮನುಷ್ಯ ಹೇಗೆ ಬಾಳಬೇಕು, ಹೇಗೆ ನಡೆದುಕೊಳ್ಳಬೇಕು, ಯಾವ ದಿಕ್ಕಿನಲ್ಲಿ ಮಾನವೀಯತೆ, ಮನುಷತ್ವ ಸಾಗುತ್ತಿದೆ, ಮನುಷ್ಯತ್ವ ಇದೆಯಾ ಎನ್ನುವುದು ನಮ್ಮನ್ನೇ ಮುಟ್ಟಿಕೊಂಡು ನೋಡುವಂತಹ ಕಾಲ ಬಂದಿದೆ. ಜೀವನ ಇಡೀ ಸಂಪದಾನೆ, ಹೆಸರು ಮಾಡುವುದು ಅಲ್ಲವೇ ಅಲ್ಲ. ಜೀವನ ಇಡಿ ಜೀವಗಳ ಬಗ್ಗೆ ಕಾಳಜಿ ತೆಗೆದುಕೊಂಡು ಬದುಕಬೇಕು. ಪ್ರತಿಯೊಬ್ಬರ ಜೀವನದಲ್ಲೂ ಜೀವಗಳಿವೆ. ಜೀವರಾಶಿಗಳನ್ನ ಭಗವಂತ ತಂದೆ ತಾಯಿ ರೂಪದಲ್ಲಿ ಸೃಷ್ಟಿ ಮಾಡಿರುತ್ತಾನೆ. ಅವರೂ ಕೂಡ ಚೆನ್ನಾಗಿ ಇರಬೇಕು ಎಂದು ಬೆಳೆಸುತ್ತಾರೆ. ಎಲ್ಲೋ ಒಂದು ಅತಾಚುರ್ಯ, ಕೆಟ್ಟದ್ದು ನಡೆಯುತ್ತೆ. ಕೆಟ್ಟದ್ದು ಜಾಸ್ತಿ ಆದಾಗ ಇಂತಹ ಪರಿಸ್ಥಿತಿ ಬರುತ್ತದೆ. ಆದರೆ ಇದು ಹೆಚ್ಚಾಗಬಾರದು. ಸಮಾಜದಲ್ಲಿ ಉನ್ನತವಾದ ಸ್ಥಾನ ಎತ್ತರದ ಮಟ್ಟದಲ್ಲಿರುವವರು ವಿವೇಕ ಮರೆಯಬಾರದು, ಅಚಾತುರ್ಯ‌ ನಡೆಯುತ್ತವೆ, ಮುಂದಿನ ತಲೆಮಾರುಗಳು ಹೀಗೆ ಆಗದಂತೆ ಎಚ್ಚರವಹಿಸಬೇಕು, ಮಾಧ್ಯಮ ತಿದ್ದಿಬುದ್ದಿ ಹೇಳಿದಂತೆ ಅನುಸರಿಸಿಕೊಂಡು ಸಾಗಬೇಕು’ ಎಂದು ವಿನೋದ್ ರಾಜ್​ಕುಮಾರ್ ಹೇಳಿದ್ದರು. .

Continue Reading

ಬಿಗ್ ಬಾಸ್

Drone Prathap: ನುಡಿದಂತೆ ನಡೆದ ‘ಬಿಗ್ ಬಾಸ್’ ಡ್ರೋನ್ ಪ್ರತಾಪ್; ಸ್ವಂತ ಹಣದಿಂದ ವೃದ್ಧೆಗೆ ಕಣ್ಣು ಆಪರೇಷನ್ !

Drone Prathap: , ತಾನು ಬಿಗ್​ಬಾಸ್​ ಗೆದ್ದರೆ ಬರುವ ಹಣ, ಇನ್ನಿತರ ಉಡುಗೊರೆಗಳನ್ನು ಅರ್ಹರಿಗೆ ದಾನ ಮಾಡುವುದಾಗಿ ಹೇಳಿದ್ದರು. ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ರೂ. ಬಹುಮಾನದ ಜತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್‌ ಉಡುಗೊರೆಯಾಗಿ ನೀಡಲಾಗಿತ್ತು. ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಆರ್ಥಿಕವಾಗಿ ಹಿಂದುಳಿದಿದ್ದು, ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸಹಾಯ ಮಾಡುವೆ ಎಂದು ಡ್ರೋನ್ ಪ್ರತಾಪ್ ಅವರು ಹೇಳಿದ್ದರು. ಅದರಂತೆ ಅವರು ನಡೆದುಕೊಂಡಿದ್ದಾರೆ.

VISTARANEWS.COM


on

Drone Prathap Eye surgery for an old woman with her own money
Koo

ಬೆಂಗಳೂರು: ಬಿಗ್‌ಬಾಸ್‌ ಕನ್ನಡ ಸೀಸನ್‌ 10 (Bigboss kannada season 10)ರ ಪ್ರಬಲ ಸ್ಪರ್ಧಿಯಾಗಿದ್ದ ಡ್ರೋನ್‌ ಪ್ರತಾಪ್‌ (Drone Prathap) ರನ್ನರ್‌ ಅಪ್‌ ಆಗಿ ಹೊರ ಹೊಮ್ಮಿದ್ದರು. ಬಿಗ್​ಬಾಸ್ ವೇದಿಕೆ ಮೇಲೆ ಮಾತನಾಡಿದ್ದ ಪ್ರತಾಪ್, ತಾನು ಬಿಗ್​ಬಾಸ್​ ಗೆದ್ದರೆ ಬರುವ ಹಣ, ಇನ್ನಿತರ ಉಡುಗೊರೆಗಳನ್ನು ಅರ್ಹರಿಗೆ ದಾನ ಮಾಡುವುದಾಗಿ ಹೇಳಿದ್ದರು. ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ರೂ. ಬಹುಮಾನದ ಜತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್‌ ಉಡುಗೊರೆಯಾಗಿ ನೀಡಲಾಗಿತ್ತು. ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಆರ್ಥಿಕವಾಗಿ ಹಿಂದುಳಿದಿದ್ದು, ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸಹಾಯ ಮಾಡುವೆ ಎಂದು ಡ್ರೋನ್ ಪ್ರತಾಪ್ ಅವರು ಹೇಳಿದ್ದರು. ಅದರಂತೆ ಅವರು ನಡೆದುಕೊಂಡಿದ್ದಾರೆ. ಅಜ್ಜಿಯೋರ್ವರಿಗೆ ಆಪರೇಶನ್ ಮಾಡಿಸಿದ ವಿಡಿಯೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಮುಂಚೆ ತಮ್ಮ ಹುಟ್ಟುಹಬ್ಬದ ಬಗ್ಗೆ ಮಾತನಾಡಿ ತಾವು ಮಾಡಲು ಹೊರಟಿರುವ ಸಮಾಜ ಸೇವಾ ಕಾರ್ಯದ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದರು. ಡ್ರೋನ್‌ ಪ್ರತಾಪ್‌ ಇನ್‌ಸ್ಟಾದಲ್ಲಿ ವಿಡಿಯೊ ಪೋಸ್ಟ್‌ ಮಾಡಿ ʻʻಎಲ್ಲರಿಗೂ ನಮಸ್ಕಾರಗಳು. ಡಾ. ರಾಜ್‌ಕುಮಾರ್‌ ಅವರು ಹೇಳ್ತಾರೆ. ನೇತ್ರದಾನ ಮಹಾದಾನ ಎಂದು. ಮುಂಬರುವ ಜೂನ್‌ 11ಕ್ಕೆ ನನ್ನ ಹುಟ್ಟು ಹಬ್ಬ ಇದೆ ಸ್ನೇಹಿತರೆ. ನನಗೆ ತುಂಬ ಕುತೂಹಲ ಇದೆ. ನನ್ನ ಹುಟ್ಟು ಹಬ್ಬವನ್ನು ಈ ಬಾರಿ ವಿಶೇಷವಾಗಿ ಆಚರಿಸಿಸಬೇಕು ಎಂದು ನಿರ್ಧಾರ ಮಾಡಿದ್ದೇನೆ. ಹಾಗಾಗಿ ಯಾರಿಗಾದರೂ ಬಡವರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಬೇಕು ಎಂದು ತೀರ್ಮಾನ ಮಾಡಿದ್ದೇನೆ.  ಯಾರಾದರೂ ಬಡವರಿದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಹಣ ಭರಿಸಲು ಸಾಧ್ಯವಾಗದೇ ಇರುವವರು ಇದ್ದರೆ ದಯವಿಟ್ಟು ನಮಗೆ ತಿಳಿಸಿ. ನಮಗೆ ಸಾಮಾಜಿಕ ಜಾಲತಾಣದ ಮೂಲಕ ಸಂದೇಶ ಕಳಿಸಿ ಅಥವಾ ಕಮೆಂಟ್ ಸೆಕ್ಷನ್​ನಲ್ಲಿ ಅವರನ್ನು ಮೆನ್ಷನ್ ಮಾಡಿ, ನಾವು ಅಗತ್ಯವಿರುವ ಐದು ಮಂದಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸುತ್ತೇವೆ’ ಎಂದಿದ್ದರು.

ಅದರಂತೆ ಇಬ್ಬರು ಮಕ್ಕಳಿದ್ದರೂ ಕೂಡ ಗುಡಿಸಿಲಿನಲ್ಲಿ ಇದ್ದುಕೊಂಡು ವಾಸ ಮಾಡುತ್ತಿದ್ದ ಬಡ ಅಜ್ಜಿಯ ಕಣ್ಣಿನ ಆಪರೇಶನ್ ಮಾಡಿಸಿದ್ದಾರೆ. ಆ ಅಜ್ಜಿಯು ಪ್ರತಾಪ್ ಅವರನ್ನು ಹರಿಸಿದ್ದು, ನನಗೆ ಈಗ ಸರಿಯಾಗಿ ಕಣ್ಣು ಕಾಣುತ್ತಿದೆ ಎಂದು ಹೇಳಿದ್ದಾರೆ. ಈ ವಿಡಿಯೋವನ್ನು ಡ್ರೋನ್ ಪ್ರತಾಪ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. “ಇಷ್ಟುದಿನ ನನಗೆ ಒಬ್ಬ ಮೊಮ್ಮಗ ಇದ್ದನು, ಈಗ ಇನ್ನೊಬ್ಬ ಮೊಮ್ಮಗನಾಗಿ ನೀನು ಇದ್ದೀಯಾ. ನನಗೆ ನಿಜವಾಗಿಯೂ ಖುಷಿಯಾಗಿದೆ, ನಿನಗೆ ದೇವರು ಆಯುಷ್ಯ, ಆರೋಗ್ಯ ಕೊಟ್ಟು ಒಳ್ಳೆಯದನ್ನು ಮಾಡಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಈ ಎಲ್ಲದಕ್ಕೂ ಮುಂಚೆ ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾಗಿದ್ದರು.

Continue Reading

ಸಿನಿಮಾ

Soniya Bansal: ಪ್ರಶಸ್ತಿ ಸಮಾರಂಭದ ವೇಳೆ ಖ್ಯಾತ ʻಬಿಗ್ ಬಾಸ್ʼ ಸ್ಪರ್ಧಿಗೆ ಪ್ಯಾನಿಕ್ ಅಟ್ಯಾಕ್‌; ಆಸ್ಪತ್ರೆಗೆ ದಾಖಲು

Soniya Bansal: ಜನಪ್ರಿಯ ರಿಯಾಲಿಟಿ ಶೋ, ಬಿಗ್ ಬಾಸ್‌ನ 17 ನೇ ಸೀಸನ್‌ನಲ್ಲಿ ಕಾಣಿಸಿಕೊಂಡಾಗ ಸೋನಿಯಾ ಬನ್ಸಾಲ್ ಸಾಕಷ್ಟು ಫೇಮ್‌ ಪಡೆದರು. ಆ ಸೀಸನ್‌ನಲ್ಲಿ ಹಾಸ್ಯನಟ ಮುನಾವರ್ ಫರೂಕಿ ಗೆದ್ದರು ಮತ್ತು ಅಭಿಷೇಕ್ ಕುಮಾರ್ ರನ್ನರ್ ಅಪ್ ಆಗಿದ್ದರು. ಮೂಲಗಳ ಪ್ರಕಾರ ನಟಿ, ಕಳೆದ ನಾಲ್ಕು ತಿಂಗಳಿನಿಂದ ಪ್ಯಾನಿಕ್ ಅಟ್ಯಾಕ್‌ಗೆ ಒಳಗಾಗಿದ್ದರು ಎಂದು ವರದಿಯಾಗಿದೆ. ನಟಿ ಮಾನಸಿಕ ಸಮಸ್ಯೆಗಳ ವಿರುದ್ಧ ಹೋರಾಡುತ್ತಿದ್ದರೂ ಎಂದೂ ಹೇಳಲಾಗುತ್ತಿದೆ.

VISTARANEWS.COM


on

Soniya Bansal Suffers Panic Attack Bigg Boss 17 Fame Hospitalised
Koo

ಬೆಂಗಳೂರು: ಕಿರುತೆರೆ ನಟಿ, ಹಿಂದಿ ಬಿಗ್ ಬಾಸ್ 17 ರ ಸ್ಪರ್ಧಿ ಸೋನಿಯಾ ಬನ್ಸಾಲ್ ಅವರು (Soniya Bansal) ಜುಲೈ 2 ರಂದು ಪ್ಯಾನಿಕ್ ಅಟ್ಯಾಕ್‌ಗೆ ಒಳಗಾಗಿ ಮುಂಬೈ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಜುಲೈ 21 ರ ರಾತ್ರಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಸೋನಿಯಾ ಬಂದಿದ್ದರು. ಅಲ್ಲಿ ಚೆನ್ನಾಗಿಯೇ ಓಡಾಡಿಕೊಂಡಿದ್ದ ನಟಿಗೆ ಏಕಾಏಕಿ ಆರೋಗ್ಯ ಹದಗೆಟ್ಟಿತು. ಮೂಲಗಳ ಪ್ರಕಾರ ನಟಿಗೆ ಹೃದಯಾಘಾತ ಕೂಡ ಆಗಿದೆ ಎನ್ನಲಾಗಿದೆ.

ಪ್ರಶಸ್ತಿ ಸಮಾರಂಭದಲ್ಲಿ ನಟಿ ಆರೋಗ್ಯ ಸಮಸ್ಯೆಯ ಬಗ್ಗೆ ದೂರು ನೀಡಿದ್ದರು. ಮೂಲಗಳ ಪ್ರಕಾರ ನಟಿ, ಕಳೆದ ನಾಲ್ಕು ತಿಂಗಳಿನಿಂದ ಪ್ಯಾನಿಕ್ ಅಟ್ಯಾಕ್‌ಗೆ ಒಳಗಾಗಿದ್ದರು ಎಂದು ವರದಿಯಾಗಿದೆ. ನಟಿ ಮಾನಸಿಕ ಸಮಸ್ಯೆಗಳ ವಿರುದ್ಧ ಹೋರಾಡುತ್ತಿದ್ದರೂ ಎಂದೂ ಹೇಳಲಾಗುತ್ತಿದೆ. ಸೋನಿಯಾ ಇನ್ನೂ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ನಟಿಗೆ ಅನೇಕ ದಿನಗಳಿಂದ ಮಾನಸಿಕ ಆರೋಗ್ಯ ಸಮಸ್ಯೆಗಳಿವೆ ಎನ್ನಲಾಗಿದೆ. ಈ ಮೊದಲು ಕೂಡ ಆರೋಗ್ಯ ಹದಗೆಡುತ್ತಿತ್ತು. ಆದರೆ ಇದೀಗ ಅದು ತೀವ್ರಗೊಂಡಿತು ಎಂದು ವರದಿಗಳು ಹೇಳುತ್ತಿವೆ.  

ಜನಪ್ರಿಯ ರಿಯಾಲಿಟಿ ಶೋ, ಬಿಗ್ ಬಾಸ್‌ನ 17 ನೇ ಸೀಸನ್‌ನಲ್ಲಿ ಕಾಣಿಸಿಕೊಂಡಾಗ ಸೋನಿಯಾ ಬನ್ಸಾಲ್ ಸಾಕಷ್ಟು ಫೇಮ್‌ ಪಡೆದರು. ಆ ಸೀಸನ್‌ನಲ್ಲಿ ಹಾಸ್ಯನಟ ಮುನಾವರ್ ಫರೂಕಿ ಗೆದ್ದರು ಮತ್ತು ಅಭಿಷೇಕ್ ಕುಮಾರ್ ರನ್ನರ್ ಅಪ್ ಆಗಿದ್ದರು.

ಇದನ್ನೂ ಓದಿ: Actor Suriya: ಕಾಲಿವುಡ್‌ ನಟ ಸೂರ್ಯ ಸಿನಿಮಾಗಾಗಿ ಈ ಕನ್ನಡ   ಸ್ಟಾರ್ ಹೀರೋಗೆ ಬಂದಿತ್ತು ಆಫರ್‌!

ನಟನೆಗೂ ಮುಂಚೆ ಸೋನಿಯಾ ಬನ್ಸಾಲ್ ಮಾಡೆಲ್‌ ಆಗಿದ್ದರು. ಬಳಿಕ ಸಂಗೀತ ವೀಡಿಯೊಗಳು ಮತ್ತು ಚಲನಚಿತ್ರಗಳಲ್ಲಿ ಕಾಣಿಸಿಕೊಂಡರು.  ‘ಗೇಮ್ 100 ಕೋಟಿ ಕಾ’ ಚಿತ್ರದ ಮೂಲಕ ಬಾಲಿವುಡ್‌ಗೆ ಪದಾರ್ಪಣೆ ಮಾಡಿದ ನಟಿ, ನಂತರ ‘ನಾಟಿ ಗ್ಯಾಂಗ್’, ‘ಡಬ್ಕಿ’ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಇವರ ನಟನೆಯ  ‘ಶೂರ್ವೀರ್’ ವೆಬ್ ಸರಣಿಯಲ್ಲಿ ಶೀಘ್ರದಲ್ಲಿಯೇ ತೆರೆ ಕಾಣಲಿದೆ. ಇಷ್ಟೇ ಅಲ್ಲದೇ ನಟಿ, ಈ ವರ್ಷ ತೆಲುಗು ಚಿತ್ರಗಳಾದ  ತೆಲುಗಿನ ‘ಧೀರ’ ಮತ್ತು ‘ಯೆಸ್ ಬಾಸ್’ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. 

Continue Reading

ಕಿರುತೆರೆ

Sunny Mahipal: ಗರ್ಭಿಣಿ ಪತ್ನಿ ಮೇಲೆ ʻನೇತ್ರಾವತಿʼ ಸೀರಿಯಲ್‌ ನಟನಿಂದ ಹಲ್ಲೆ ಆರೋಪ; ಮತ್ತೊಬ್ಬಳ ಜತೆ ನಿಶ್ಚಿತಾರ್ಥ?

Sunny Mahipal: ಕೆಲ ವರ್ಷ ಪ್ರಸಾರ ಕಂಡಿದ್ದ ‘ನೇತ್ರಾವತಿ’ ಧಾರಾವಾಹಿಯಲ್ಲಿ ಸನ್ನಿ ಮಹಿಪಾಲ್ (Sunny Mahipal) ನಟಿಸಿದ್ದರು. ಧಾರಾವಾಹಿ ಪೂರ್ಣಗೊಂಡಿದ್ದು, ಈಗ ಅವರು ಖಾಸಗಿ ಕಂಪನಿಯಲ್ಲಿ ಸನ್ನಿ ಮಹಿಪಾಲ್ ಕೆಲಸ ಮಾಡುತ್ತಿದ್ದಾರೆ. ಸಿಕ್ಕ ಸಿಕ್ಕ ಯುವತಿಯರ ಜೊತೆ ಲಿವಿಂಗ್ ಟು ಗೆದರ್ ಆರೋಪ ಕೂಡ ನಟನ ವಿರುದ್ಧ ಕೇಳಿ ಬಂದಿದೆ.

VISTARANEWS.COM


on

Sunny Mahipal Nethravathi Serial Actor Kick His Pregnant Wife
Koo

ಬೆಂಗಳೂರು: ಒಬ್ಬರ ಜತೆ ಮದುವೆಯಾಗಿ ಮತ್ತೊಬ್ಬರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವುದಾಗಿ ʻನೇತ್ರಾವತಿʼ ಧಾರಾವಾಹಿ ನಟನ ವಿರುದ್ಧ ಆರೋಪ ಕೇಳಿ (Sunny Mahipal) ಬಂದಿದೆ. ಸನ್ನಿ ಮಹಿಪಾಲ್ ಗರ್ಭಿಣಿ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನೊಂದು ಪತ್ನಿ ಆರೋಪಿಸಿದ್ದಾರೆ. ಇದನ್ನು ಅಲ್ಲಗೆಳೆದ ಸನ್ನಿ ಮಹಿಪಾಲ್‌ ತನ್ನ ಮನೆಗೆ ಅತಿಕ್ರಮ ಪ್ರವೇಶ ಮಾಡಿರುವುದಾಗಿ ಯುವತಿ ವಿರುದ್ಧ ಹೆಚ್‌ ಎ. ಎಲ್‌ ಠಾಣೆಗೆ ದೂರು ನೀಡಿದ್ದಾರೆ.

ಕೆಲ ವರ್ಷ ಪ್ರಸಾರ ಕಂಡಿದ್ದ ‘ನೇತ್ರಾವತಿ’ ಧಾರಾವಾಹಿಯಲ್ಲಿ ಸನ್ನಿ ಮಹಿಪಾಲ್ (Sunny Mahipal) ನಟಿಸಿದ್ದರು. ಧಾರಾವಾಹಿ ಪೂರ್ಣಗೊಂಡಿದ್ದು, ಈಗ ಅವರು ಖಾಸಗಿ ಕಂಪನಿಯಲ್ಲಿ ಸನ್ನಿ ಮಹಿಪಾಲ್ ಕೆಲಸ ಮಾಡುತ್ತಿದ್ದಾರೆ. ಸಿಕ್ಕ ಸಿಕ್ಕ ಯುವತಿಯರ ಜೊತೆ ಲಿವಿಂಗ್ ಟು ಗೆದರ್ ಆರೋಪ ಕೂಡ ನಟನ ವಿರುದ್ಧ ಕೇಳಿ ಬಂದಿದೆ. 2024 ಜನವರಿಯಲ್ಲಿ ಯುವತಿಗೆ ಮಹಿಪಾಲ್ ಪರಿಚಯ ಆಗಿದೆ. ಈ ಯುವತಿ ಲಾ ಸ್ಟೂಡೆಂಟ್ ಆಗಿದ್ದಳು. ಸಾಮಾಜಿಕ ಜಾಲತಾಣದಲ್ಲಿ ಸ್ನೇಹ ಶುರುವಾಗಿದೆ. ಬಳಿಕ ಅವರನ್ನು ಸನ್ನಿ ಪ್ರೀತಿ ಮಾಡಿ ದೈಹಿಕ ಸಂಪರ್ಕ ಬೆಳೆಸಿದ್ದರು. ಮದುವೆಯಾಗೋದಾಗಿ ನಂಬಿಸಿದ್ದರು. ಜೂನ್ 15ರಂದು ಸನ್ನಿ ಮಹಿಪಾಲ್ ಜೊತೆಗೆ ಯುವತಿ ದೇವಸ್ಥಾನದಲ್ಲಿ ವಿವಾಹ ಆದರು. ಸದ್ಯ ಮಹಿಳೆ ಎರಡು ತಿಂಗಳ ಗರ್ಭಿಣಿ.

ಇದಾದ ಬಳಿಕ ನಟ ಮತ್ತೊಂದು ನಿಶ್ಚಿತಾರ್ಥ ಮಾಡಿಕೊಳ್ಳಲು ಮುಂದಾಗಿದ್ದಾನೆ. ಪ್ರಶ್ನಿಸಲು ಹೋದ ಪತ್ನಿಗೆ ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ. ಪತಿ ಪತ್ನಿ ಮದುವೆಯಾದರು ಒಟ್ಟಿಗೆ ಇರಲಿಲ್ಲ .ನಮ್ಮ ಪೋಷಕರನ್ನ ಒಪ್ಪಿಸಿ ಮತ್ತೆ ಬರುತ್ತೇನೆ ಎಂದು ನಟ ಕಾಗೆ ಹಾರಿಸಿದ್ದ .ಅಲ್ಲದೇ ಸ್ನೇಹಿತರ ರೀತಿಯೇ ಇರಬೇಕು. ಸ್ನೇಹಿತರಂತೆಯೇ ಮೆಸೆಜ್ ಮಾಡ್ಬೇಕು ಎಂದು ಕಂಡಿಷನ್ ಹಾಕಿದ್ದನಂತೆ. ಅದರಂತೆಯೇ ಮಹಿಪಾಲ್ ಪತ್ನಿ ನಡೆದು ಕೊಂಡಿದ್ದರು. ಅದಾಗಲೇ ಕೆಲ ದಿನದ ಹಿಂದೆ ಬೇರೆ ಯುವತಿ ಜೊತೆಗೆ ಮಹಿಪಾಲ್ ಎಂಗೆಜ್ಮೆಂಟ್ ಆಗಿದ್ದನಂತೆ. ಇದನ್ನು ಪ್ರಶ್ನಿಸಲು 22 ರಂದು ರಾತ್ರಿ ಮಹಿಪಾಲ್ ಮನೆಗೆ ಪತ್ನಿ ಹೋಗಿದ್ದಾರೆ. ರಾತ್ರಿ 9.30 ಕ್ಕೆ ವಿಜ್ಙಾನ ನಗರ ದಲ್ಲಿರುವ ಮಹಿಪಾಲ್ ನಿವಾಸಕ್ಕೆ ಪತ್ನಿ ಹೋಗಿದ್ದರು.

ಇದನ್ನೂ ಓದಿ: Actor Darshan: 80 ವರ್ಷಗಳ ಹಿಂದೆ ನಡೆದಿತ್ತು ದರ್ಶನ್‌ ಮಾದರಿ ಕ್ರೈಂ! ಜೈಲು ಪಾಲಾಗಿದ್ದರು ತಮಿಳು ಸೂಪರ್ ಸ್ಟಾರ್!

ಈ ವೇಳೆ ಗಲಾಟೆಯಾಗಿ ಪತ್ನಿ ಮೇಲೆ ನಟ ಹಲ್ಲೆ ನಡೆಸಿದ್ದಾರೆ. ಚಾಕುವಿನಿಂದ ತೋಳಿಗೆ ಇರಿದ ಆರೋಪ ಮಾಡಲಾಗಿದೆ. ಗಲಾಟೆಯಲ್ಲಿ ಗರ್ಭಪಾತ ಆಗಿರೋದಾಗಿ ಪತ್ನಿ ಹೇಳಿಕೆ ನೀಡಿದ್ದಾರೆ. ಹೊಟ್ಟೆಗೆ ಏಟಾಗಿ ಗರ್ಭಪಾತ ಆಗಿದೆ ಎಂದು ಪತ್ನಿ ಅಳಲು ತೋಡಿಕೊಂಡಿದ್ದಾರೆ.  ಗಲಾಟೆ ಆದ ಮೇಲೆ 112ಕ್ಕೆ ಮಹಿಪಾಲ್ ಪತ್ನಿ ಕರೆ ಮಾಡಿದ್ದರು. ಈ ವೇಳೆ ಸ್ಥಳಕ್ಕೆ ಹೊಯ್ಸಳ ಸಿಬ್ಬಂದಿ ಭೇಟಿ ಕೊಟ್ಟಿದ್ದರು. ಗರ್ಭಪಾತದಿಂದಾಗಿ ಮಹಿಳೆಗೆ ರಕ್ತಸ್ರಾವವಾಗುತ್ತಿತ್ತು. ಆಸ್ಪತ್ರೆಗೆ ಕರೆದೊಯ್ಯುವಂತೆ ಪೊಲೀಸರಿಗೆ ಅವರು ಮನವಿ ಮಾಡಿದ್ದರು. ಆದರೆ, ನಮ್ಮ ಬಳಿ ಮಹಿಳಾ ಸಿಬ್ಬಂದಿ ಇಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ. ಸ್ವತಃ ತಾವೆ ಕಾರು ಚಲಾಯಿಸಿಕೊಂಡು ಬಂದು ಅವರು ಆಸ್ಪತ್ರೆ ಸೇರಿದ್ದಾರೆ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಅತ್ತ ಹೆಚ್ಎಎಲ್ ಪೊಲೀಸ್ ಠಾಣೆಗೆ ತೆರಳಿ ಸನ್ನಿ ಮಹಿಪಾಲ್ ಮನೆಗೆ ಅತಿಕ್ರಮ ಪ್ರವೇಶ ಮಾಡಿರೋದಾಗಿ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಅಲ್ಲದೆ ಬಲವಂತದಿಂದ ಮದುವೆಯಾಗಿರೋದಾಗಿ ಹೇಳಿಕೆ ನೀಡಿದ್ದಾರೆ. ಸದ್ಯ ದೂರು ಪಡೆದು ಹೆಚ್ಎಎಲ್ ಪೊಲೀಸರು ಸುಮ್ಮನಾಗಿದ್ದಾರೆ. ಇನ್ನೂ ಮಾಹಿತಿ ಪ್ರಕಾರ ಹಲ್ಲೆಗೂ ಮುನ್ನ ಗರ್ಭಪಾತ ಮಾಡಿಸಲು ಪತ್ನಿಗೆ ನಟ ಕಿರುಕುಳ ನೀಡಿದ್ದರು ಎನ್ನಲಾಗಿದೆ.

Continue Reading
Advertisement
Viral Video
Latest8 mins ago

Viral Video: ಹಾವನ್ನೇ ಮಣಿಸಿ ʼಸ್ನೇಹಿತʼನ ಜೀವ ಉಳಿಸಿದ ಹಲ್ಲಿ! ಅದ್ಭುತ ವಿಡಿಯೊ; ತಪ್ಪದೇ ನೋಡಿ!

Double Ismart
ಸಿನಿಮಾ12 mins ago

Double Ismart: ‘ಡಬಲ್ ಇಸ್ಮಾರ್ಟ್’ ಚಿತ್ರದ ಮೂರನೇ ಹಾಡು ರಿಲೀಸ್; ರೋಮ್ಯಾಂಟಿಕ್ ಆಗಿ ಹೆಜ್ಜೆ ಹಾಕಿದ ರಾಮ್ ಪೋತಿನೇನಿ-ಕಾವ್ಯಾ ಥಾಪರ್

Olympics 2024
ಕ್ರೀಡೆ22 mins ago

Olympics 2024: ಕಂಚು ಗೆದ್ದ ಮನು-ಸರಬ್ಜೋತ್​ ಜೋಡಿಗೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಐಒಸಿ ಸದಸ್ಯೆ ನೀತಾ ಅಂಬಾನಿ ಅಭಿನಂದನೆ

Viral News
Latest23 mins ago

Street Girlfriends: 115 ರೂ.ಗೆ ಚುಂಬನ, 11 ರೂ.ಗೆ ಬಿಸಿ ಅಪ್ಪುಗೆಯ ಸುಖ; ಸ್ಟ್ರೀಟ್‌ ಗರ್ಲ್‌ಫ್ರೆಂಡ್ ಟ್ರೆಂಡ್‌!

Pavel Durov
ವಿದೇಶ28 mins ago

Pavel Durov: ಮದುವೆಯಾಗದೆ 100 ಮಕ್ಕಳಿಗೆ ತಂದೆಯಾದ ಟೆಲಿಗ್ರಾಂ ಸಿಇಒ ಪಾವೆಲ್‌ ದುರೋವ್! ಈತ ರಿಯಲ್‌ ಲೈಫ್‌ ‘ವಿಕ್ಕಿ ಡೋನರ್’

UGCET 2024
ಬೆಂಗಳೂರು31 mins ago

UGCET 2024 : ಯುಜಿಸಿಇಟಿ ಆಪ್ಶನ್ ದಾಖಲಿಸಲು ಮತ್ತಷ್ಟು ದಿನ ಅವಕಾಶ

Viral Video
Latest32 mins ago

Viral Video: ಪ್ರೇಮಿಯೊಂದಿಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ; ಗ್ರಾಮಸ್ಥರು ನೀಡಿದರು ಅಮಾನುಷ ಶಿಕ್ಷೆ

Murder Attempt
ಕ್ರೈಂ41 mins ago

Murder Attempt: ದಟ್ಟ ಅರಣ್ಯದಲ್ಲಿ ಮಹಿಳೆಯನ್ನು ಸರಪಳಿಯಿಂದ ಕಟ್ಟಿ ಪರಾರಿಯಾದ ಮಾಜಿ ಪತಿ!

Viral Video
ವೈರಲ್ ನ್ಯೂಸ್48 mins ago

Viral Video: ಯೋಗಿ ಆದಿತ್ಯನಾಥ್‌ ಕಾಲಿಗೆ ಎರಗಿದ ರಾಜಾ ಭಯ್ಯಾ; ಉತ್ತರ ಪ್ರದೇಶ ರಾಜಕೀಯದಲ್ಲಿ ಹೊಸ ಅಧ್ಯಾಯ ಎಂದ ನೆಟ್ಟಿಗರು

Viral Video
Latest52 mins ago

Viral Video: ಸಿಬ್ಬಂದಿಗೆ ಗನ್ ತೋರಿಸಿ ಆಭರಣ ಅಂಗಡಿ ದರೋಡೆ ಮಾಡಿದ ಹೆಲ್ಮೆಟ್‌ಧಾರಿಗಳು; ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ22 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ23 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ3 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಟ್ರೆಂಡಿಂಗ್‌