Health Tips: ಊಟದ ನಂತರದ ಸಿಹಿತಿಂಡಿ ಅಭ್ಯಾಸ ಬಿಡೋದು ಹೇಗೆ! - Vistara News

ಆರೋಗ್ಯ

Health Tips: ಊಟದ ನಂತರದ ಸಿಹಿತಿಂಡಿ ಅಭ್ಯಾಸ ಬಿಡೋದು ಹೇಗೆ!

ಊಟವಾದ ಬಳಿಕ ಸಿಹಿತಿಂಡಿ ತಿನ್ನುವುದು ಅಭ್ಯಾಸವಾಗಿಬಿಟ್ಟರೆ ದೇಹ ಮತ್ತೆ ಮತ್ತೆ ಅದನ್ನೇ ಬಯಸುತ್ತದೆ. ಊಟದಲ್ಲಿ ಸಾಕಷ್ಟು ಕ್ಯಾಲೊರಿ ಇದ್ದರೆ ಮತ್ತೆ ಸ್ವೀಟ್ಸ್‌ ಬೇಕಿಲ್ಲ.

VISTARANEWS.COM


on

sweets
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಹುತೇಕರಿಗೆ ಒಂದು ಅಭ್ಯಾಸವಿದೆ. ಮಧ್ಯಾಹ್ನದೂಟವಾದ ತಕ್ಷಣ ಏನಾದರೊಂದು ಸಿಹಿ ಬಾಯಿಗಿಡಬೇಕು! ಏನಾದರೊಂದು ಸಿಹಿತಿಂಡಿ ಕೊನೆಯಲ್ಲಿ ಬೇಕೆನ್ನುವುದು (sweets after lunch) ಬಹಳ ಮಂದಿಗೆ ಅಭ್ಯಾಸವಾಗಿಬಿಟ್ಟಿರುತ್ತದೆ. ಇದು ಚಟದಂತೆ ಆದರೂ ಇದನ್ನು ಬಿಡಲು ಉಪಾಯವೇ ಇಲ್ಲ ಎಂಬಷ್ಟು ಸಿಹಿ ತಿನ್ನಬೇಕೆನಿಸುವ ಬಯಕೆ ಅಭ್ಯಾಸವಾಗಿಬಿಟ್ಟಿರುತ್ತದೆ. ತಿನ್ನದಿದ್ದರೆ ಏನೋ ಕಳೆದುಕೊಂಡ ಭಾವ. ಎಷ್ಟೋ ಮಂದಿ ಈ ಕೆಟ್ಟ ಅಭ್ಯಾಸದಿಂದ ಮುಕ್ತಿ ಬೇಕೆಂದು (Health tips) ಡಾಕ್ಟರ್‌ ಮೊರೆ ಹೋಗುವುದೂ ಇದೆ.

ಯಾವ ಕಾರಣಕ್ಕಾಗಿ ನಮಗೆ ಸಿಹಿ ಆಗಾಗ ತಿನ್ನಬೇಕೆನಿಸುತ್ತದೆ ಎಂದರೆ, ಮೊದಲನೆಯದಾಗಿ, ಇದು ಪೂರ್ಣವಾಗಿ ಮಾನಸಿಕ. ಪಚನಕ್ರಿಯೆ ಎಂಬುದೊಂದು ಹಾಡ್‌ ವರ್ಕ್‌. ಇಂತಹ ಹಾರ್ಡ್‌ ವರ್ಕ್‌ ಮಾಡಲು ಮತ್ತೆ ಮತ್ತೆ ಎನರ್ಜಿ ಬೇಕೆನಿಸುತ್ತದೆ. ಈ ಎನರ್ಜಿ ಕೊಡುವ ಸುಲಭ ಸಾಧನ ಈ ಸಕ್ಕರೆಯ ಅಂಶ. ಹಾಗಾಗಿ ಮಾನಸಿಕವಾಗಿ ಸಕ್ಕರೆಯ ಸಿಹಿ ತಿಂದಾದಾಗ ಸಿಗುವ ತೃಪ್ತಿಯೇ ಮುಖ್ಯವಾಗಿ ಸಿಹಿಯನ್ನು ಮತ್ತೆ ಮತ್ತೆ ಊಟವಾದ ಮೇಲೆ ತಿನ್ನುವಂತೆ ಪ್ರೇರೇಪಿಸುತ್ತಿರುತ್ತದೆ.

ಎರಡನೆಯದಾಗಿ, ಊಟವಾದ ನಂತರ ಒಂದುದಿನ ಸಿಹಿ ತಿಂದರೆ ಮತ್ತೊಂದು ದಿನವೂ ತಿನ್ನಬೇಕೆನಿಸುತ್ತದೆ. ಅದು ಹೀಗೆಯೇ ಮುಂದುವರಿದು ದಿನಗಳೆದಂತೆ ಚಟವಾಗಿ ಬಿಡುತ್ತದೆ. ಮಾದಕ ವಸ್ತುಗಳಿಗೆ ಅಂಟಿಕೊಂಡಂತೆ ಇರುವ ಚಟ. ದಿನವೂ ಊಟವಾದ ತಕ್ಷಣ ಮನಸ್ಸು ಸಿಹಿಯನ್ನು ಬಯಸುವಂತೆ ಮಾಡುತ್ತದೆ. ನಮ್ಮ ದೇಹ ಈ ಅಭ್ಯಾಸಕ್ಕೆ ಪ್ರೋಗ್ರಾಂ ಮಾಡಿಟ್ಟ ರೀತಿಯಲ್ಲಿ ವರ್ತಿಸುತ್ತದೆ. ಹಾಗಾಗಿ ಪ್ರತಿ ಊಟದ ನಂತರ ಮನಸ್ಸು ಸಿಹಿಯನ್ನೇ ಬಯಸುತ್ತದೆ. ಆದರೆ, ಇಲ್ಲಿ ಎಷ್ಟು ಸಿಹಿ ತಿನ್ನುತ್ತೇವೆ ಎನ್ನುವುದೂ ಕೂಡಾ ಮುಖ್ಯವೆನಿಸುತ್ತದೆ. ಒಂದು ಪುಟ್ಟ ಭಾಗ ದೇಹದೊಳಕ್ಕೆ ಹೋದರೆ ಚಿಂತೆಯಿಲ್ಲ. ಆದರೆ, ಒಂದು ದೊಡ್ಡ ಭಾಗವೆಂಬ ಸಿಹಿ ಪ್ರತಿದಿನ ಹೊಟ್ಟೆ ಸೇರುತ್ತಿದ್ದರೆ ಖಂಡಿತವಾಗಿಯೂ ಒಳ್ಳೆಯದಲ್ಲ, ಈ ಅಭ್ಯಾಸವನ್ನು ಕಡಿಮೆ ಮಾಡಲು ಶ್ರಮ ಪಡಬೇಕು. ಹಾಗಾದರೆ ಈ ಅಭ್ಯಾಸವನ್ನು ಕಡಿಮೆ ಮಾಡಲು ಅಥವಾ ಬಿಡಲು ಮೂರು ವಿಧಾನಗಳಿವೆ.

ನಿಮ್ಮ ಆಹಾರವನ್ನು ಗಮನಿಸಿ: ದಿನವೂ ತಟ್ಟೆಯಲ್ಲಿ ಏನೆಲ್ಲ ಪೌಷ್ಠಿಕಾಂಶಯುಕ್ತ ಆಹಾರವನ್ನು ಬಡಿಸಿಕೊಂಡಿರುತ್ತೀರಿ ಎಂಬುದರ ಬಗ್ಗೆ ಗಮನ ಇರಲಿ. ಒಂದಿಷ್ಟು ತರಕಾರಿ, ಪ್ರೋಟೀನು, ಆರೋಗ್ಯಕರ ಕೊಬ್ಬು, ಕಾರ್ಬೋಹೈಡ್ರೇಟ್‌ ಹಾಗೂ ನಾರಿನಂಶಯುಕ್ತ ಆಹಾರ ತಟ್ಟೆಯಲ್ಲಿರಲಿ. ಆಗ ಊಟವಾದ ನಂತರ ಕಡಿಮೆ ಮಟ್ಟದಲ್ಲಿ ಸಿಹಿ ತಿಂದಿರುತ್ತೀರಿ. ಅಥವಾ ಸಿಹಿ ತಿನ್ನಬೇಕೆಂಬ ಭಾವನೆ ನಿಧಾನವಾಗಿ ಕಡಿಮೆಯಾಗುತ್ತದೆ. ಉಳಿದ ಆಹಾರ ಪದಾರ್ಥಗಳು ನೀಡುವ ಶಕ್ತಿಯಿಂದಾಗಿ ಸಿಹಿ ತಿನ್ನುವ ಬಯಕೆ ತಾನೇ ತಾನಾಗಿ ಕಡಿಮೆಯಾಗುತ್ತದೆ. ಈ ವಿಧಾನ ಅತ್ಯಂತ ಸುಲಭ ಹಾಗೂ ಸರಳ.

ನೀವು ಸಿಹಿ ತಿನ್ನಬಾರದು ಎಂದು ನಿಮಗೆ ನೀವೇ ಬೇಲಿ ಹಾಕಿಕೊಂಡರೆ ಬಹಳಷ್ಟು ಸಾರಿ ಸಿಹಿ ಹೆಚ್ಚು ತಿನ್ನುವಂತೆ ಪ್ರೇರೇಪಣೆಯಾಗುತ್ತದೆ. ಅದಕ್ಕಾಗಿ, ಮನಸ್ಸನ್ನು ತಿನ್ನಲೇಬಾರದು ಇಂಬ ಕಟ್ಟುನಿಟ್ಟು ಮಾಡಿಕೊಳ್ಳಬೇಡಿ. ಆದರೆ ಕಡಿಮೆ ಮಾಡಿ ಅಷ್ಟೇ. ಆದಷ್ಟು ಸಿಹಿತಿಂಡಿ ತಿನ್ನುವ ಬದಲು ಸಿಹಿಯಾಗಿ ನೈಸರ್ಗಿಕವಾಗಿ ಸಿಗುವ ಆಯ್ಕೆಗಳನ್ನು ಮಾಡಿ. ಆಗ ನಿಧಾನವಾಗಿ ಆರೋಗ್ಯಕರ ಸಿಹಿ ಆ ಜಾಗವನ್ನು ಆಕ್ರಮಿಸಿಕೊಳ್ಳುತ್ತದೆ. ಆದರೆ, ಈ ಅಭ್ಯಾಸವೂ ಕೂಡಾ ಒಂದು ಮಿತಿಯನ್ನು ದಾಟದಂತೆ ನೋಡಿಕೊಳ್ಳಿ.

ಗಮನವನ್ನು ಬೇರೆಡೆಗೆ ತಿರುಗಿಸುವುದೂ ಕೂಡಾ ಇಂಥದ್ದಕ್ಕೆ ಇನ್ನೊಂದು ಮಾರ್ಗ. ಪ್ರತಿದಿನವೂ ಮಧ್ಯಾಹ್ನ ಊಟವಾದ ತಕ್ಷಣ ಫ್ರಿಡ್ಜ್‌ನಲ್ಲಿಟ್ಟ ಐಸ್‌ಕ್ರೀಮೋ, ಚಾಕೋಲೇಟೋ ನೆನಪಾಗಿ ಗುಳುಂ ಮಾಡಿಬಿಡಬೇಕೆಂದು ಅನಿಸಿದರೆ, ನಿಮ್ಮ ಮನಸ್ಸ್ನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನ ಪಡಿ. ಉದಾಹರಣೆಗೆ ತಿಂದರೆ ಒಂದು ವಾಕ್‌ ಮಾಡುವುದು ಅಥವಾ ಊಟವಾದ ತಕ್ಷಣ ಮತ್ತೊಂದು ಕೆಲಸದಲ್ಲಿ ಬ್ಯುಸಿಯಾಗಿಬಿಡುವುದು ಅಥವಾ ಫ್ರೆಂಡ್‌ ಜೊತೆ ಮಾತಿಗಿಳಿಯುವುದು ಇತ್ಯಾದಿ. ಇದ್ದಕ್ಕಿದ್ದಂತೆ ಈ ಅಭ್ಯಾಸ ಸರಿಯಾಗದಿದ್ದರೂ ಕ್ರಮೇಣ ಸುಧಾರಿಸುತದೆ. ಎಲ್ಲಕ್ಕಿಂತ ಮುಖ್ಯವಾಗಿ ನಮಗೆ ನಮ್ಮ ಆಹಾರಕ್ರಮವನ್ನು ಬದಲಾಯಿಸಬೇಕೆಂಬ ಮನಸ್ಥಿತಿ ಬೇಕು. ಆಗಷ್ಟೇ ಇದಕ್ಕೊಂದು ಪರಿಹಾರ ಸಿಕ್ಕೀತು. ಇಲ್ಲವಾದಲ್ಲಿ ಇದು ಪುಸ್ತಕದ ಬದನೆಕಾಯಿ ಆಗಿ ಉಳಿದೀತು.      

ಇದನ್ನೂ ಓದಿ: Health Tips: ಮೊಸರಿನ ಜೊತೆಗೆ ಈ ಆಹಾರಗಳನ್ನು ತಿಂದರೆ ಅಪಾಯ ಕಟ್ಟಿಟ್ಟಬುತ್ತಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Health Tips in Kannada: ಟೊಮ್ಯಾಟೊ ಜ್ಯೂಸ್‌ ಆರೋಗ್ಯಕ್ಕೇಕೆ ಒಳ್ಳೆಯದು ಗೊತ್ತೆ?

ಋತುಮಾನದಲ್ಲಿ ಕಾಡುವ (Health Tips in Kannada) ಸೋಂಕು ರೋಗಗಳನ್ನು ದೂರ ಮಾಡುವುದರಿಂದ ಹಿಡಿದು, ದೇಹದ ಪ್ರತಿರೋಧಕ ಶಕ್ತಿ ಹೆಚ್ಚಿಸುವವರೆಗೆ ಹಲವು ರೀತಿಯ ಉಪಕಾರವನ್ನು ಟೊಮ್ಯಾಟೊ ನಮಗೆ ಮಾಡುತ್ತದೆ. ಲೈಕೋಪೇನ್‌ನಂಥ ಪ್ರಬಲ ಉತ್ಕರ್ಷಣ ನಿರೋಧಕವು ಹೃದಯದ ಆರೋಗ್ಯ ರಕ್ಷಣೆಯಲ್ಲಿ ಸಹಾಯ ಮಾಡುತ್ತದೆ. ಟೊಮೊಟೊ ಜ್ಯೂಸ್‌ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Health Tips in Kannada tomato juice is good for health
Koo

ಬೆಂಗಳೂರು: ಬೇಸಿಗೆಯಲ್ಲಿ ನಾವು ತಂಪಾಗಿ (Health Tips in Kannada) ಕುಡಿಯಬಹುದಾದ ಹಲವು ಹಣ್ಣಿನ ರಸಗಳ ಪೈಕಿ ಟೊಮ್ಯಾಟೊ ಜ್ಯೂಸ್‌ ಸಹ ಒಂದು. ಟೊಮ್ಯಾಟೊ ಹಣ್ಣೊ, ತರಕಾರಿಯೊ ಎಂಬ ಅನಾದಿ ಕಾಲದ ಗೊಂದಲ ಇನ್ನೂ ಇದ್ದರೆ, ಅದು ತರಕಾರಿಯಂತೆ ಉಪಯೋಗಿಸಲಾಗುವ ಹಣ್ಣು. ಹೌದು, ನಿಜಕ್ಕೂ ಅದು ಹಣ್ಣೇ. ಹಾಗಾಗಿ ಬೇಸಿಗೆಯಲ್ಲಿ ಉಳಿದೆಲ್ಲ ಹಣ್ಣಿನ ರಸಗಳ ಜೊತೆಗೆ ಟೊಮ್ಯಾಟೊ ರಸವನ್ನೂ ಖುಷಿಯಾಗಿ ಗುಟುಕರಿಸಬಹುದು. ಇದು ರುಚಿಗೆ ಮಾತ್ರವಲ್ಲ, ಆರೋಗ್ಯಕ್ಕಾಗುವ ಲಾಭಗಳ ವಿಷಯದಲ್ಲೂ ಎತ್ತಿದ ಕೈ. ಏನು ಪ್ರಯೋಜನಗಳಿವೆ ಟೊಮೇಟೊ ಜ್ಯೂಸ್‌ ಕುಡಿಯುವುದರಿಂದ?

ಋತುಮಾನದಲ್ಲಿ ಕಾಡುವ ಸೋಂಕು ರೋಗಗಳನ್ನು ದೂರ ಮಾಡುವುದರಿಂದ ಹಿಡಿದು, ದೇಹದ ಪ್ರತಿರೋಧಕ ಶಕ್ತಿ ಹೆಚ್ಚಿಸುವವರೆಗೆ ಹಲವು ರೀತಿಯ ಉಪಕಾರವನ್ನು ಟೊಮ್ಯಾಟೊ ನಮಗೆ ಮಾಡುತ್ತದೆ. ಲೈಕೋಪೇನ್‌ನಂಥ ಪ್ರಬಲ ಉತ್ಕರ್ಷಣ ನಿರೋಧಕವು ಹೃದಯದ ಆರೋಗ್ಯ ರಕ್ಷಣೆಯಲ್ಲಿ ಸಹಾಯ ಮಾಡುತ್ತದೆ. ಜೊತೆಗೆ, ಹೇರಳವಾದ ವಿಟಮಿನ್‌ ಸಿ, ಎ, ಬಿ ಮತ್ತು ಖನಿಜಗಳು ಟೊಮ್ಯಾಟೊ ದಿಂದ ದೊರೆಯುತ್ತವೆ. ಇವೆಲ್ಲ ಟೊಮ್ಯಾಟೊ ಬೆರೆಸಿದ ರುಚಿಕರ ಖಾದ್ಯಗಳಿಂದಲೂ ನಮಗೆ ದೊರೆಯುವುದಕ್ಕೆ ಸಾಧ್ಯವಿದೆ.

ಇದನ್ನೂ ಓದಿ: Health Tips in Kannada: ಬೇಸಿಗೆಯಲ್ಲಿ ನಿಜಕ್ಕೂ ನಮ್ಮ ದೇಹಕ್ಕೆ ಬೇಕಾಗಿರುವುದು ಈ ಆಹಾರಗಳು

ಟೊಮ್ಯಾಟೊ ಜ್ಯೂಸ್‌

ಸಿದ್ಧ ಮಾಡುವುದು ಕಷ್ಟವಿಲ್ಲ. 2-3 ಜ್ಯಾಮ್‌ ಟೊಮ್ಯಾಟೊ ತೆಗೆದುಕೊಳ್ಳಿ. ಇದಕ್ಕೆ ಕೊಂಚ ಪುದೀನಾ ಎಲೆಗಳು, ಚಿಟಿಕೆ ಉಪ್ಪು, ಸ್ವಲ್ಪ ಕರಿಮೆಣಸಿನ ಪುಡಿ ಸೇರಿಸಿ ಚೆನ್ನಾಗಿ ಬ್ಲೆಂಡ್‌ ಮಾಡಿ. ನಾರಿನಂಶ ಬೇಡ ಎನಿಸಿದರೆ ಸೋಸಿಕೊಳ್ಳಿ. ದಾಹ ತಣಿಸಿಕೊಳ್ಳಲು ತಂಪಾದ ಐಸ್‌ ಬೇಕಿದ್ದರೆ ತೇಲಿಸಿ. ಇವಿಷ್ಟು ಮಾಡಿದರೆ ಟೊಮ್ಯಾಟೊ ಜ್ಯೂಸ್‌ ಸಿದ್ಧ.
ಇದರಲ್ಲಿರುವ ಸತ್ವಗಳನ್ನು ಗಮನಿಸುವುದಾದರೆ, ಸುಮಾರು 250 ಗ್ರಾಂ ಟೊಮ್ಯಾಟೊ ಜ್ಯೂಸ್‌ನಲ್ಲಿ, 45 ಕ್ಯಾಲರಿ ಶಕ್ತಿ ದೊರೆಯುತ್ತದೆ. 2 ಗ್ರಾಂ ಪ್ರೊಟೀನ್‌, 2 ಗ್ರಾಂ ನಾರು, ದಿನದ ಶೇ. 22ರಷ್ಟು ವಿಟಮಿನ್‌ ಎ, ಶೇ. 74ರಷ್ಟು ವಿಟಮಿನ್‌ ಸಿ, ಶೇ. 7ರಷ್ಟು ವಿಟಮಿನ್‌ ಕೆ, ಹಲವು ರೀತಿಯ ಬಿ ವಿಟಮಿನ್‌ಗಳು, ಫೋಲೇಟ್‌, ಮೆಗ್ನೀಶಿಯಂ, ಪೊಟಾಶಿಯಂ, ತಾಮ್ರ ಮತ್ತು ಮ್ಯಾಂಗನೀಸ್‌ನಂಥ ಖನಿಜಗಳು ದೇಹಕ್ಕೆ ದೊರೆಯುತ್ತವೆ.

ಕೆರೊಟಿನಾಯ್ಡ್‌ಗಳು

ಇದರಲ್ಲಿ ಹಲವು ರೀತಿಯ ಪಾಲಿಫೆನಾಲ್‌ಗಳು ಮತ್ತು ಕೆರೊಟಿನಾಯ್ಡ್‌ಗಳಿವೆ. ಇವೆಲ್ಲವೂ ವಿಟಮಿನ್‌ ಎ ರೂಪಕ್ಕೆ ದೇಹದೊಳಗೆ ಪರಿವರ್ತನೆಗೊಳ್ಳುವಂಥವು. ಕಣ್ಣಿನ ಆರೋಗ್ಯ ರಕ್ಷಣೆಗೆ ಅಗತ್ಯವಾಗಿ ಬೇಕಾದ ಸತ್ವಗಳಿವು. ಮಾತ್ರವಲ್ಲ, ದೇಹದೊಳಗೆ ಮುಕ್ತ ಕಣಗಳು ಸೃಷ್ಟಿಯಾಗದಂತೆ ಮಾಡುವ ಸಾಮರ್ಥ್ಯ ಇವುಗಳಿಗಿದೆ. ಇದರಿಂದ ಕ್ಯಾನ್ಸರ್‌ನಂಥ ಮಾರಕ ರೋಗಗಳ ಭೀತಿಯಿಂದ ಪಾರಾಗಬಹುದು.

ಉತ್ಕರ್ಷಣ ನಿರೋಧಕಗಳು

ಟೊಮ್ಯಾಟೊದಲ್ಲಿ ಲೈಕೋಪೇನ್‌ ಎಂಬ ಪ್ರಬಲ ಉತ್ಕರ್ಷಣ ನಿರೋಧಕವೊಂದಿದೆ. ಒಂದು ಗ್ಲಾಸ್‌ ಸಾಂದ್ರವಾದ ಟೊಮೇಟೊ ರಸದಲ್ಲಿ ಅಂದಾಜು 22 ಎಂ.ಜಿ. ಲೈಕೋಪೇನ್‌ ದೊರೆಯಬಹುದು. ಈ ಲೈಕೋಪೇನ್‌ಗಳ ಉರಿಯೂತ ನಿವಾರಣೆಯ ಸಾಮರ್ಥ್ಯದ ಬಗ್ಗೆ ಹಲವು ಅಧ್ಯಯನಗಳನ್ನು ವಿಜ್ಞಾನಿಗಳು ನಡೆಸಿದ್ದಾರೆ. ಅವೆಲ್ಲದರಲ್ಲೂ, ಇದೊಂದು ಸಮರ್ಥವಾದ ಉರಿಯೂತ ಶಾಮಕ ಎಂಬುದು ಸಾಬೀತಾಗಿದೆ. ಕೀಲುಗಳ ಆರೋಗ್ಯದಿಂದ ಹಿಡಿದು, ಹೃದಯದ ಯೋಗಕ್ಷೇಮ ನೋಡಿಕೊಳ್ಳುವವರೆಗೆ ಇದರ ಸಾಮರ್ಥ್ಯ ವಿಸ್ತರಿಸಿದೆ.

ಕೊಲೆಸ್ಟ್ರಾಲ್‌ ಕಡಿತ

ಈ ಹಣ್ಣಿನಲ್ಲಿರುವ ಬೀಟಾ ಕ್ಯಾರೊಟಿನ್‌ ಅಂಶವು ಲೈಕೋಪೇನ್‌ ಜೊತೆಗೆ ಸೇರಿ ಕೆಲವು ಉತ್ತಮ ಫಲಿತಾಂಶಗಳನ್ನು ನೀಡಬಲ್ಲದು. ಅಂದರೆ, ರಕ್ತದೊತ್ತಡ ಕಡಿಮೆ ಮಾಡುವುದರ ಜೊತೆಗೆ ಕೊಲೆಸ್ಟ್ರಾಲ್‌ ಜಮೆಯಾಗಿದ್ದನ್ನೂ ಕಡಿತಗೊಳಿಸುತ್ತದೆ. ಕೊಲೆಸ್ಟ್ರಾಲ್‌ ಕಡಿತಕ್ಕೆ ಟೊಮೇಟೊ ನೆರವಾಗುವುದನ್ನು ಹಲವು ಅಧ್ಯಯನಗಳು ದೃಢಪಡಿಸಿವೆ. ಜೊತೆಗೆ ರಕ್ತದೊತ್ತಡ ನಿಯಂತ್ರಣಕ್ಕೂ ನೆರವಾಗುವುದರಿಂದ ಹೃದಯ ಸ್ನೇಹಿತನಂತೆ ವರ್ತಿಸುತ್ತದೆ.

ಅತಿ ಬೇಡ

ಇಷ್ಟೆಲ್ಲ ಸದ್ಗುಣಗಳು ಟೊಮ್ಯಾಟೊದಲ್ಲಿದ್ದರೂ, ದಿನವೂ ಟೊಮೇಟೊ ರಸ ಕುಡಿಯುವ ಮುನ್ನ ಸ್ವಲ್ಪ ಜಾಗ್ರತೆ ಮಾಡುವುದು ಒಳ್ಳೆಯದು. ಮನೆಯಲ್ಲೇ ಮಾಡಿಕೊಂಡರೆ ಅಷ್ಟೇನೂ ಸಮಸ್ಯೆಯಾಗದು. ಆದರೆ ಅಂಗಡಿಯಿಂದ ತರುವ ಟೋಮೇಟೋ ಜ್ಯೂಸ್‌ಗಳಲ್ಲಿ ಸೋಡಿಯಂ ಅಂಶ ಹೆಚ್ಚಿರಬಹುದು. ಮನೆಯಲ್ಲಿ ಮಾಡಿದಾಗ ನಾರಿನಂಶ ತೆಗೆಯದೆ ಕುಡಿಯುವ ಆಯ್ಕೆ ಇರುತ್ತದೆ. ಆದರೆ ಅಂಗಡಿಯಿಂದ ತರುವ ಯಾವುದೇ ಬ್ರಾಂಡ್‌ಗಳಲ್ಲಿ ನಾರಿನಂಶವನ್ನು ಸಂಪೂರ್ಣ ತೆಗೆಯಲಾಗುತ್ತದೆ. ಇದು ಅಂಥಾ ಒಳ್ಳೆಯದೇನಲ್ಲ. ಐಬಿಎಸ್‌ ಅಥವಾ ಜಿಇಆರ್‌ಡಿ ಯಂಥ ಜೀರ್ಣಾಂಗಗಳ ಸಮಸ್ಯೆ ಇರುವವರು ಟೋಮೇಟೊ ರಸವನ್ನು ಅತಿಯಾಗಿ ಸೇವಿಸುವುದು ಸೂಕ್ತವಲ್ಲ. ಇದರಲ್ಲಿರುವ ಹುಳಿ ಅಂಶದಿಂದ ಜೀರ್ಣಾಂಗಗಳ ತೊಂದರೆ ಹೆಚ್ಚಬಹುದು.

Continue Reading

ಆರೋಗ್ಯ

Skin Care Tips: ಬಿಸಿಲಿನಿಂದ ಚರ್ಮ ಕಪ್ಪಾಗಿದೆಯಾ? ಇಲ್ಲಿದೆ ಸರಳ ಮನೆಮದ್ದು

ಬೇಸಿಗೆಯಲ್ಲಿ ಚರ್ಮ (Skin Care Tips) ಸುಟ್ಟಂತಾಗಿ ಕೆಂಪಾಗುವುದು, ಅನಂತರ ಕಪ್ಪಾಗುವುದು ಮಾಮೂಲಿ. ಹೀಗಾದರೆ ಚರ್ಮ ಕಳೆಗೆಟ್ಟಂತಾಗುತ್ತದೆ. ದಿನವಿಡೀ ಸನ್‌ಸ್ಕ್ರೀನ್‌ ಹಚ್ಚಿಕೊಂಡಿರುವುದು ಆಗದ ಮಾತು. ಅದಕ್ಕೇ, ಬಿಸಿಲಲ್ಲಿ ಅಡ್ಡಾಡಿದಾಗ ಕಪ್ಪಾಗುವ ಚರ್ಮದ ರಕ್ಷಣೆ ಹೇಗೆ ಮಾಡುವುದು ಎಂಬ ಚಿಂತೆ ಬೇಡ. ಇಲ್ಲಿದೆ ಸರಳ ಮನೆ ಮದ್ದು.

VISTARANEWS.COM


on

By

Skin Care Tips
Koo

ಬಿಸಿಲಲ್ಲಿ (sunny) ಅಡ್ಡಾಡುವುದು (Skin Care Tips) ಎಲ್ಲರಿಗೂ ಪ್ರಿಯವೇನಲ್ಲ. ಆದರೆ ಬೇಸಿಗೆಯಲ್ಲಿ (summer) ಮನೆಯಿಂದ ಹೊರಬೀಳುತ್ತಿದ್ದಂತೆ ಬಿಸಿಲಿಗೆ ಸೋಕುವುದು ಬಿಟ್ಟರೆ ಬೇರೆ ದಾರಿ ಇರುವುದಿಲ್ಲ. ಇದರ ಪರಿಣಾಮವಾಗಿ ಚರ್ಮವೆಲ್ಲ (skin) ಕೆಂಪಾಗಿ ಸುಟ್ಟಂತಾಗುವುದು, ಕಪ್ಪಾಗುವುದು ಸಾಮಾನ್ಯ. ಬಿಸಿಲಿಗೆ ಚರ್ಮ ಕೆಂಪಾಗಿ, ಕಪ್ಪಾಗುವುದರಿಂದ ತ್ವಚೆಯ ಹೊಳಪು ಮಾಯವಾಗುತ್ತದೆ, ಸುಕ್ಕಾಗುತ್ತದೆ. ಕ್ರಮೇಣ ಕುಂದಿದಂತೆ ಕಾಣಲಾರಂಭಿಸುತ್ತದೆ.

ಜಾಹೀರಾತುಗಳಲ್ಲಿ ತೋರಿಸಿದಂತೆ ಮೈ-ಮುಖಗಳನ್ನೆಲ್ಲ ಮುಚ್ಚಿಕೊಂಡು ಅಡ್ಡಾಡುವುದು ಸಾಧ್ಯವಿಲ್ಲದ್ದು. ಇದಕ್ಕಾಗಿ ದಿನಕ್ಕೆ ಹಲವು ಬಾರಿ ದೇಹಕ್ಕೆಲ್ಲ ಸನ್‌ಬ್ಲಾಕ್‌ ಬಳಿದುಕೊಳ್ಳುವುದು ಎಲ್ಲರಿಗೂ ಅಸಾಧ್ಯ. ಹಾಗಾದರೆ ಬೇಸಿಗೆಯಲ್ಲಿ ಕಪ್ಪಾಗುವ ಚರ್ಮದ ರಕ್ಷಣೆ ಹೇಗೆ?

ಮಾರುಕಟ್ಟೆಯಲ್ಲಿ ʻಟ್ಯಾನ್‌ ರಿಮೂವ್‌ʼ ಎಂಬ ಹಣೆಪಟ್ಟಿಯೊಂದಿಗೆ ಬಹಳಷ್ಟು ಕ್ರೀಮ್‌ಗಳು ದೊರೆಯುತ್ತವೆ. ಅವಲ್ಲವೂ ಕಿಸೆಯ ಭಾರ ಇಳಿಸಿದಷ್ಟೇ ಸರಾಗವಾಗಿ ಸುಟ್ಟ ಗುರುತು ತೆಗೆಯುತ್ತವೆ ಎಂಬ ಖಾತ್ರಿಯೇನಿಲ್ಲ. ಕೆಲವೊಂದು ಕ್ರೀಮುಗಳು ಎಲ್ಲರ ಚರ್ಮಕ್ಕೆ ಒಗ್ಗುವುದೂ ಇಲ್ಲ. ಹಾಗಾಗಿ ಮನೆಮದ್ದುಗಳ ಮೊರೆ ಹೋಗುವುದೇ ಉತ್ತಮ ಎನಿಸುತ್ತದೆ. ಇದಕ್ಕಾಗಿ ಕೆಲವು ಸರಳವಾದ ಫೇಸ್‌ಮಾಸ್ಕ್‌ಗಳ ಕ್ರಮವನ್ನು ಇಲ್ಲಿ ವಿವರಿಸಲಾಗಿದೆ.


ಜೇನು-ಪಪ್ಪಾಯ ಮಾಸ್ಕ್‌

ಪಪ್ಪಾಯದ ಹೋಳುಗಳನ್ನು ಜೇನು ತುಪ್ಪದೊಂದಿಗೆ ಸೇರಿಸಿ ಬ್ಲೆಂಡ್‌ ಮಾಡಿ. ಈ ಮಿಶ್ರಣವನ್ನು ಉದಾರವಾಗಿ ಮುಖಕ್ಕೆಲ್ಲ ಲೇಪಿಸಿ. 30 ನಿಮಿಷಗಳ ಅನಂತರ ಬೆಚ್ಚಗಿನ ನೀರಿನಿಂದ ಮುಖ ತೊಳೆಯಿರಿ. ಇದನ್ನು ವಾರದಲ್ಲಿ ಮೂರು ಬಾರಿ ಮಾಡಬಹುದು.

ಓಟ್‌ಮೀಲ್‌-ಮೊಸರು

ಮುಖದ ಮೇಲಿನ ಜಡ ಕೋಶಗಳನ್ನು ತೆಗೆಯುವ ಸಾಮರ್ಥ್ಯ ಓಟ್‌ಮೀಲ್‌ಗಿದ್ದರೆ, ಮೊಸರಿನಲ್ಲಿರುವ ಲ್ಯಾಕ್ಟಿಕ್‌ ಆಮ್ಲವು ಚರ್ಮದ ತೇವವನ್ನು ಕಾಪಾಡಿ ಮೃದುವಾಗಿಸಬಲ್ಲದು. ಟ್ಯಾನ್‌ ತೆಗೆಯುವುದಕ್ಕೆ ಇದು ಒಳ್ಳೆಯ ಉಪಾಯ. ಓಟ್‌ಮೀಲ್‌ ಪುಡಿಯನ್ನು ಮಂದವಾದ ಮೊಸರಿನಲ್ಲಿ ಕಲೆಸಿ, ಮುಖಕ್ಕೆಲ್ಲ ಲೇಪಿಸಿ. 20 ನಿಮಿಷಗಳ ನಂತರ ಉಗುರು ಬಿಸಿ ನೀರಿನಲ್ಲಿ ತೊಳೆಯಿರಿ. ವಾರಕ್ಕೆರಡು ಬಾರಿ ಮಾಡಬಹುದು ಇದನ್ನು.

ಶ್ರೀಗಂಧ-ತೆಂಗಿನೆಣ್ಣೆ

ಸುಟ್ಟು ಕೆಂಪಾದಂಥ ಚರ್ಮಕ್ಕೆ ಇದು ಒಳ್ಳೆಯ ಉಪಶಮನ ನೀಡುತ್ತದೆ. ಶ್ರೀಗಂಧ ಸುಟ್ಟ ಚರ್ಮವನ್ನು ತಂಪಾಗಿಸಿದರೆ, ಕೊಬ್ಬರಿ ಎಣ್ಣೆ ದುರಸ್ತಿ ಮಾಡಿ, ತೇವವನ್ನು ಹೆಚ್ಚಿಸುತ್ತದೆ. ಸುಟ್ಟು ಕೆಂಪಾದ ಚರ್ಮವನ್ನು ಶೀಘ್ರವೇ ಗುಣ ಪಡಿಸುತ್ತದೆ. 30 ನಿಮಿಷಗಳ ನಂತರ ಉಗುರು ಬಿಸಿ ನೀರಿನಲ್ಲಿ ತೊಳೆಯಬಹುದು. ಆದರೆ ಒಂದು ಎಚ್ಚರಿಕೆ ತೆಗೆದುಕೊಳ್ಳಬೇಕು. ಮುಖದಲ್ಲಿ ಮೊಡವೆಗಳಿದ್ದರೆ, ಇಂಥ ಎಣ್ಣೆಯುಕ್ತ ಪೇಸ್ಟ್‌ಗಳು ಮೊಡವೆಯ ಸಮಸ್ಯೆಯನ್ನು ಹೆಚ್ಚಿಸಬಹುದು.

ಇದನ್ನೂ ಓದಿ: Health Tips in Kannada: ಬೇಸಿಗೆಯಲ್ಲಿ ನಿಜಕ್ಕೂ ನಮ್ಮ ದೇಹಕ್ಕೆ ಬೇಕಾಗಿರುವುದು ಈ ಆಹಾರಗಳು

ಮೊಸರು-ಕಾಫಿ

ಕಾಫಿಗೆ ಚರ್ಮವನ್ನು ಎಕ್ಸ್‌ಫಾಲಿಯೇಟ್‌ ಮಾಡುವ ಸಾಮರ್ಥ್ಯವಿದೆ. ಮೊಸರು ತ್ವಚೆಯನ್ನು ಮೃದುವಾಗಿಸುತ್ತದೆ. ಇದರ ಜೊತೆಗೆ ಕೊಂಚ ಟೊಮೇಟೊ ರಸವನ್ನೂ ಬೆರೆಸಿದರೆ, ಸುಟ್ಟಂತಾದ ಚರ್ಮಕ್ಕೆ ಉತ್ಕರ್ಷಣ ನಿರೋಧಕಗಳ ಆರೈಕೆಯೂ ದೊರೆತಂತಾಗುತ್ತದೆ. ಈ ಮೂರು ವಸ್ತುಗಳನ್ನು ಬ್ಲೆಂಡ್‌ ಮಾಡಿ, ಬಿಸಿಲಿಗೆ ಕೆಂಪಾದ ಭಾಗಕ್ಕೆಲ್ಲ ಹಚ್ಚಿ. 20 ನಿಮಿಷಗಳ ನಂತರ ಬೆಚ್ಚಗಿನ ನೀರಿನಿಂದ ತೊಳೆಯಿರಿ. ಇದನ್ನು ವಾರಕ್ಕೊಮ್ಮೆ ಮಾಡಿದರೆ ಸಾಕಾಗುತ್ತದೆ.

Continue Reading

ಆರೋಗ್ಯ

Food Tips Kannada: ಶಕ್ತಿವರ್ಧಕಗಳಲ್ಲ, ನಿಮ್ಮ ಶಕ್ತಿಯನ್ನೇ ಬಸಿದು ತೆಗೆಯುವ ಆಹಾರಗಳಿವು!

EXCREPT
ಇತ್ತೀಚಿನ ದಿನಗಳಲ್ಲಿ ನಾವು (Food Tips Kannada) ಸೇವಿಸುವ ಆಹಾರ, ಜೀವನಶೈಲಿ ನಮ್ಮ ಶಕ್ತಿಯನ್ನು ಹೆಚ್ಚಿಸುತ್ತಿಲ್ಲ ಬದಲಾಗಿ ದಿಢೀರ್‌ ಕಡಿಮೆಗೊಳಿಸುವಲ್ಲಿಯೂ ಮುಖ್ಯ ಪಾತ್ರ ವಹಿಸುತ್ತಿದೆ. ಶಕ್ತಿ ಬೇಕೆಂದು ನಾವು ಮೊರೆ ಹೋಗುವ ದಿಢೀರ್‌ ಆಹಾರಗಳಿಂದ ಮೇಲ್ನೋಟಕ್ಕೆ ಶಕ್ತಿ, ಉಲ್ಲಾಸ ಹೆಚ್ಚಿದಂತೆ ಅನಿಸಿದರೂ ಇವು ನಮ್ಮ ಶಕ್ತಿಸಾಮರ್ಥ್ಯವೆಲ್ಲವನ್ನೂ ಬಸಿದು ತೆಗೆಯುವ, ನಮ್ಮನ್ನು ಸೋಮಾರಿಗಳನ್ನಾಗಿ ಮಾಡುವ, ತೂಕ ಹೆಚ್ಚಿಸುವ, ಚುರುಕುತನವನ್ನು ಕಸಿದುಕೊಳ್ಳುವ ಆಹಾರಗಳಾಗಿವೆ.

VISTARANEWS.COM


on

By

Food Tips Kannada
Koo

ಬೆಳಗಿನ ಹೊತ್ತು ನಮ್ಮ (Food Tips Kannada) ಶಕ್ತಿ ಕೊಂಚ ಹೆಚ್ಚಿರುವುದು, ಸಂಜೆಯಾಗುತ್ತಿದ್ದಂತೆ ಇದು ಕಡಿಮೆಯಾಗುತ್ತ ಬರುವುದು ಬಹಳ ಸಾಮಾನ್ಯ. ಮನುಷ್ಯನ ದೇಹ ಪ್ರಕೃತಿಯೇ ಹಾಗೆ. ಆದರೆ, ಇತ್ತೀಚಿನ ದಿನಗಳಲ್ಲಿ ನಾವು ಸೇವಿಸುವ ಆಹಾರ (food), ಜೀವನಶೈಲಿಯೂ (life style) ಕೂಡಾ ನಮ್ಮ ಶಕ್ತಿಯನ್ನು ಹೆಚ್ಚಿಸುವುದಕ್ಕಿಂತ ದಿಢೀರ್‌ ಕಡಿಮೆಗೊಳಿಸುವಲ್ಲಿ ಮುಖ್ಯ ಪಾತ್ರ ವಹಿಸುತ್ತಿದೆ.

ಶಕ್ತಿ ಬೇಕೆಂದು ನಾವು ಮೊರೆ ಹೋಗುವ ದಿಢೀರ್‌ ಆಹಾರಗಳಿಂದ ಮೇಲ್ನೋಟಕ್ಕೆ ಶಕ್ತಿ, ಉಲ್ಲಾಸ ಹೆಚ್ಚಿದಂತೆ ಅನಿಸಿದರೂ ಇವು ನಮ್ಮ ಶಕ್ತಿ ಸಾಮರ್ಥ್ಯವೆಲ್ಲವನ್ನೂ ಬಸಿದು ತೆಗೆಯುವ, ನಮ್ಮನ್ನು ಸೋಮಾರಿಗಳನ್ನಾಗಿ ಮಾಡುವ, ತೂಕ ಹೆಚ್ಚಿಸುವ, ಚುರುಕುತನವನ್ನು ಕಸಿದುಕೊಳ್ಳುವ ಆಹಾರಗಳಾಗಿ ಬದಲಾಗಬಹುದು. ಬನ್ನಿ, ನಿಜವಾಗಿಯೂ ಶಕ್ತಿವರ್ಧಕದಂತೆ ಅನಿಸಿದರೂ, ನಮ್ಮ ಶಕ್ತಿಯನ್ನೆಲ್ಲ ಹಿಂಡಿ ತೆಗೆಯುವ ಆಹಾರಗಳಾವುವು ಎಂಬುದನ್ನು ನೋಡೋಣ.

ಬ್ರೆಡ್‌, ಪಾಸ್ತಾ

ಬಿಳಿ ಬ್ರೆಡ್‌ ಹಾಗೂ ಮೈದಾವೇ ಹೆಚ್ಚಿರುವ ಪಾಸ್ತಾ ಮತ್ತಿತರ ಆಹಾರಗಳು ದೇಹಕ್ಕೆ ಶಕ್ತಿ ನೀಡಿದಂತೆ ಅನಿಸಿದರೂ ಇವೆಲ್ಲ ಖಾಲಿ ಕ್ಯಾಲರಿಗಳು. ಇವೆಲ್ಲವೂ ಸಂಸ್ಕರಿಸಿದ ಆಹಾರಗಳಾಗಿರುವುದರಿಂದ ನಿಜವಾದ ಧಾನ್ಯ, ಬೇಳೆ ಕಾಳುಗಳ ಮೂಲಕ ದೇಹಕ್ಕೆ ಸಿಗುವ ಶಕ್ತಿ ಇದರಿಂದ ದೊರೆಯಲಾರದು. ಆ ಕ್ಷಣಕ್ಕೆ ಇವು ಹೊಟ್ಟೆ ತುಂಬಿಸಿದರೂ, ದೇಹಕ್ಕೆ ಒಳ್ಳೆಯದನ್ನು ಮಾಡುವ ಉದ್ದೇಶ ಈ ಆಹಾರಗಳಲ್ಲಿಲ್ಲ ಎಂಬುದನ್ನು ನೆನಪಿಡಿ.


ಬ್ರೇಕ್‌ಫಾಸ್ಟ್‌ ಸಿರಿಯಲ್‌ಗಳು ಹಾಗೂ ಫ್ಲೇವರ್ಡ್‌ ಮೊಸರು

ರೆಡಿಮಾಡಿ ಫುಡ್ ಗಳು ಹೆಸರಿಗೆ ಮಾತ್ರ ಆರೋಗ್ಯಕರ ಆಹಾರ ಎಂದೆನಿಸಿದರೂ ಇವು ಆರೋಗ್ಯಕರವಲ್ಲ. ಇದರಲ್ಲಿ ಒಳ್ಳೆಯ ಅಂಶಗಳಿಗಿಂತಲೂ ದೇಹಕ್ಕೆ ಮಾರಕವಾದ ಅಂಶಗಳೇ ಹೆಚ್ಚಿವೆ. ಇವುಗಳು ಸಂಸ್ಕರಿಸಿದ ಆಹಾರಗಳಷ್ಟೇ ಅಲ್ಲ, ಇವುಗಳಲ್ಲಿ ಹೆಚ್ಚುವರಿ ಸಕ್ಕರೆಯೂ ಇರುವುದರಿಂದ ದೇಹಕ್ಕೆ ಒಳ್ಳೆಯದಕ್ಕಿಂತ ಕೆಟ್ಟ ಪರಿಣಾಮವೇ ಆಗುತ್ತದೆ.


ಆಲ್ಕೋಹಾಲ್‌

ಆಲ್ಕೋಹಾಲ್‌ ಸೇವನೆಯಿಂದ ದಿನದ ಇಡೀ ಸುಸ್ತು ಬಸಿದು ಹೋಗಿ ಜೀವ ಬಂದಂತಾಗಬಹುದು. ದೇಹವಿಡೀ ಉಲ್ಲಾಸದಿಂದ, ಕುಣಿಯಬಹುದು. ಚಿಂತೆಯೆಲ್ಲ ಮರೆತುಹೋಗಬಹುದು. ಆದರೆ, ಇದು ಕ್ಷಣಿಕ. ದೇಹಕ್ಕೆ ನಿಜವಾಗಿ ಬೇಕಾದ ಶಕ್ತಿ ಇದರಿಂದ ಎಳ್ಳಷ್ಟೂ ಸಿಗಲಾರದು.


ಕಾಫಿ, ಚಹಾ

ಕಾಫಿ ಹಾಗೂ ಚಹಾಗಳೆಂಬ ಎರಡು ಪೇಯಗಳು ಭಾರತೀಯರ ಪಾಲಿನ ಆರಾಧ್ಯ ದೈವ. ಬೆಳಗ್ಗೆದ್ದ ಕೂಡಲೇ ಬಹುಪಾಲು ಮಂದಿಗೆ ಚಹಾ ಕಾಫಿ ಬೇಕೇ ಬೇಕು. ಬೆಳಗಿನ ಕೆಲಸಗಳಲ್ಲಿ ಮತ್ತೆ ತೊಡಗಿಕೊಳ್ಳಲು ಚಹಾ ಕಾಫಿಗಳು ಚೈತನ್ಯದಂತೆ ಅನಿಸಬಹುದು. ಅಭ್ಯಾಸವೂ ಆಗಿರಬಹುದು.

ಕಚೇರಿಯ ಒತ್ತಡದ ಕೆಲಸದ ನಡುವೆ ಆಹಾ ಎಂದು ಉಸಿರೆಳೆದುಕೊಂಡು ಕೊಂಚ ಬ್ರೇಕ್‌ ಬೇಕಾದರೆ ಚಹಾ ಕಾಫಿಗಳು ಮತ್ತೆ ಕೆಲಸಕ್ಕೆ ಪ್ರೇರಣೆ ನೀಡಬಹುದು. ಆದರೆ, ಇವೆಲ್ಲವೂ ನೀಡುವ ಉದ್ದೀಪನ ಕ್ಷಣಿಕ. ಇದರಿಂದ ದೇಹಕ್ಕೆ ಲಾಭಕ್ಕಿಂತಲೂ ನಷ್ಟ ಹೆಚ್ಚು. ಅತಿಯಾದ ಇವುಗಳ ಅಭ್ಯಾಸದಿಂದ ದೇಹದ ಶಕ್ತಿ ಹೆಚ್ಚದು. ಬದಲಾಗಿ ನಮ್ಮ ಶಕ್ತಿಯನ್ನೇ ಹಿಂಡಿಬಿಡುತ್ತವೆ. ಈ ಚಟದ ದಾಸನನ್ನಾಗಿಸುತ್ತವೆ.


ಶಕ್ತಿವರ್ಧಕ ಪೇಯಗಳು

ಮಾರುಕಟ್ಟೆಯಲ್ಲಿ ಜಾಹೀರಾತುಗಳ ಮೂಲಕ ಯುವಜನರನ್ನೂ ಸೇರಿದಂತೆ ಬಹುಜನರನ್ನು ಆಕರ್ಷಿಸುವ ಶಕ್ತಿವರ್ಧಕ ಪೇಯಗಳು ಹೆಸರಿಗೆ ಮಾತ್ರ ಶಕ್ತಿವರ್ಧಕ. ಆ ಕೆಲವು ಕ್ಷಣಕ್ಕೆ ಇದರಿಂದ ಶಕ್ತಿ ಹೆಚ್ಚಿದಂತಾಗಿ ಚೈತನ್ಯ ಸಿಗುವುದು ನಿಜವಾದರೂ ದೇಹಕ್ಕೆ ಒಳ್ಳೆಯದನ್ನು ಮಾಡಲಾರವು.

ಇದನ್ನೂ ಓದಿ: MDH, Everest Spices: ಸಿಂಗಾಪುರ, ಹಾಂಕಾಂಗ್‌ ಬಳಿಕ ಇದೀಗ ನೇಪಾಳದಲ್ಲಿಯೂ ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ

ಬದಲಾಗಿ ಇದರಲ್ಲಿ ಅತ್ಯಂತ ಹೆಚ್ಚು ಪ್ರಮಾಣದಲ್ಲಿರುವ ಸಕ್ಕರೆ ಹಾಗೂ ರಾಸಾಯನಿಕಗಳು ದೇಹಕ್ಕೆ ಮಾರಕ. ಇವುಗಳನ್ನು ಆಗಾಗ ಕುಡಿಯುವುದರಿಂದ ತೂಕದಲ್ಲಿ ಹೆಚ್ಚಳವೂ ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳೂ ಕಾಣಿಸಿಕೊಳ್ಳಬಹುದು. ಹಾಗಾಗಿ ಇಂತಹ ಶಕ್ತಿವರ್ಧಕ ಪೇಯಗಳಿಂದ ನಾವು ದೂರವಿರುವುದು ಒಳ್ಳೆಯದು. ಕ್ಷಣಿಕ ಮಾತ್ರದ ಶಕ್ತಿವರ್ಧಕಗಳಿಗಿಂತ ಉತ್ತಮ ಪೋಷಕಾಂಶಯುಕ್ತ ಆರೋಗ್ಯಕರ ಆಹಾರಗಳ ಸೇವನೆಯಿಂದ ಆರೋಗ್ಯವನ್ನು ಹೆಚ್ಚಿಸಬಹುದು.

Continue Reading

ದೇಶ

World Aids Vaccine Day: ಇಂದು ವಿಶ್ವ ಏಡ್ಸ್ ಲಸಿಕೆ ದಿನ; ಈ ದಿನದ ಹಿನ್ನೆಲೆ ಏನು?

ಕೆಲವೊಂದು ಕಾಯಿಲೆಗಳಿಗೆ ಔಷಧವನ್ನು ಇನ್ನೂ ಕಂಡು ಹಿಡಿಯಲಾಗಿಲ್ಲ. ಮುನ್ನೆಚ್ಚರಿಕೆಯಿಂದ ಮಾತ್ರ ಕಾಯಿಲೆ ಒಬ್ಬರಿಂದ ಇನ್ನೊಬ್ಬರಿಗೆ ಹರಡದಂತೆ ತಡೆಯಬಹುದು. ಅಂತಹ ಒಂದು ಸಾಂಕ್ರಾಮಿಕ ಕಾಯಿಲೆಯಲ್ಲಿ ಹೆಚ್ ಐವಿ ಏಡ್ಸ್ ಕೂಡ (World Aids Vaccine Day) ಒಂದು. ಈ ಬಗ್ಗೆ ಪ್ರತಿಯೊಬ್ಬರೂ ಜಾಗರೂಕರಾಗಿರುವುದೇ ಇದರಿಂದ ರಕ್ಷಿಸಿಕೊಳ್ಳುವ ಒಂದು ಉತ್ತಮ ಉಪಾಯ.

VISTARANEWS.COM


on

By

World Aids Vaccine Day
Koo

ಜಗತ್ತಿನ ಬಹುತೇಕ ಕಾಯಿಲೆಗಳಿಗೆ ಈಗ ಔಷಧ ಲಭ್ಯವಿದೆ. ಆದರೆ ಎಚ್‌ಐವಿ (HIV) ಸೋಂಕಿಗೆ ಮಾತ್ರ ಇನ್ನೂ ಯಾವುದೇ ಚಿಕಿತ್ಸೆ ಕಂಡು ಹಿಡಿಯಲಾಗಿಲ್ಲ. ಹೀಗಾಗಿಯೇ ಇದರ ಬಗ್ಗೆ ಜಾಗೃತಿ ಮೂಡಿಸಲು ವಿಶ್ವದಾದ್ಯಂತ (world) ಮೇ 18 ರಂದು ವಿಶ್ವ ಏಡ್ಸ್ (AIDS) ಲಸಿಕೆ ದಿನ ಅಥವಾ ಎಚ್ಐವಿ ಲಸಿಕೆ ಜಾಗೃತಿ ದಿನವನ್ನು (World Aids Vaccine Day) ಆಚರಿಸಲಾಗುತ್ತದೆ. ಎಚ್ಐವಿ ಸೋಂಕಿಗೆ ಯಾವುದೇ ಚಿಕಿತ್ಸೆ ಇಲ್ಲ. ಇದಕ್ಕೆ ಆಂಟಿರೆಟ್ರೋವೈರಲ್ ಔಷಧಗಳೊಂದಿಗೆ ಚಿಕಿತ್ಸೆ ನೀಡಲಾಗುತ್ತದೆ. ಇದು ದೇಹದಲ್ಲಿ ವೈರಸ್ ಪುನರಾವರ್ತನೆಯಾಗದಂತೆ ತಡೆಯುತ್ತದೆ.

ವಿಶ್ವ ಏಡ್ಸ್ ಲಸಿಕೆ ದಿನ ಅಥವಾ ಎಚ್‌ಐವಿ ಲಸಿಕೆ ಜಾಗೃತಿ ದಿನವನ್ನು ಮೇ 18ರಂದು ಎಚ್‌ಐವಿ ಲಸಿಕೆ, ರೋಗನಿರೋಧಕ ಪ್ರಯೋಜನಗಳು ಮತ್ತು ವ್ಯಾಕ್ಸಿನೇಷನ್‌ಗೆ ಸಂಬಂಧಿಸಿದ ಇತರ ವಿವರಗಳ ಬಗ್ಗೆ ಜಾಗೃತಿ ಮೂಡಿಸಲು ಆಚರಿಸಲಾಗುತ್ತದೆ. ಎಚ್ಐವಿ ಸೋಂಕನ್ನು ತಡೆಗಟ್ಟಲು ಈ ಅರಿವು ಎಲ್ಲರಿಗೂ ಮುಖ್ಯವಾಗಿದೆ.
ಈ ದಿನವು ಲಸಿಕೆ ಸಂಶೋಧನೆಯ ಭಾಗವಾಗಿರುವ ಆರೋಗ್ಯ ವೃತ್ತಿಪರರು ಮತ್ತು ಸಹಾಯಕ ಸಿಬ್ಬಂದಿಯ ನಿರಂತರ ಕೊಡುಗೆಯನ್ನು ಸ್ಮರಿಸಲು ಆಚರಿಸಲಾಗುತ್ತದೆ.

ಎಷ್ಟು ಸೋಂಕಿತರು?

ಎಚ್ಐವಿ ಜಾಗತಿಕ ಸಾಂಕ್ರಾಮಿಕವಾಗಿದ್ದು, ಇದು ಪ್ರಪಂಚದಾದ್ಯಂತ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರಿದೆ. ಇತ್ತೀಚಿನ ಅಂದಾಜಿನ ಪ್ರಕಾರ ಸರಿಸುಮಾರು 38.4 ಮಿಲಿಯನ್ ಜನರು HIVಯೊಂದಿಗೆ ವಾಸಿಸುತ್ತಿದ್ದಾರೆ, ಅವರಲ್ಲಿ ಮೂರನೇ ಎರಡರಷ್ಟು ಜನರು WHO ಆಫ್ರಿಕನ್ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಪ್ರಪಂಚದಾದ್ಯಂತ ಸುಮಾರು ಏಳು ಜನರಲ್ಲಿ ಒಬ್ಬರು HIV ಯೊಂದಿಗೆ ವಾಸಿಸುತ್ತಿದ್ದಾರೆ. ಇದು ವಿಶ್ವದ ಜನಸಂಖ್ಯೆಯ 37.9 ಮಿಲಿಯನ್ ನಷ್ಟಾಗುತ್ತದೆ.

ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ 2022 ರ ಅಂತ್ಯದ ವೇಳೆಗೆ 39 ಮಿಲಿಯನ್ ಎಚ್ಐವಿ ಪಾಸಿಟಿವ್ ಜನರಿದ್ದಾರೆ. ಅದರಲ್ಲಿ 1.5 ಮಿಲಿಯನ್ 0- 14 ವರ್ಷಗಳ ನಡುವಿನ ಮಕ್ಕಳು ಇದ್ದಾರೆ.

ಹರಡಲು ಕಾರಣ ಏನು?

ಬಡ ಮತ್ತು ಅತ್ಯಂತ ಹಿಂದುಳಿದ ಸಮುದಾಯಗಳಲ್ಲಿ ವೈರಸ್ ಹೆಚ್ಚು ಹರಡುತ್ತದೆ. ಶೈಕ್ಷಣಿಕ ಮಾಹಿತಿಯ ಕೊರತೆ, ತಡೆಗಟ್ಟುವ ಕ್ರಮಗಳು ಮತ್ತು ವೈದ್ಯಕೀಯ ಚಿಕಿತ್ಸೆಗಳು ಎಚ್ಐವಿ ಹರಡುವಿಕೆಗೆ ಪ್ರಮುಖ ಕಾರಣಗಳಾಗಿವೆ. ಸಾಂಕ್ರಾಮಿಕ ರೋಗವನ್ನು ಎದುರಿಸಲು ಮಾಡಿದ ಗಮನಾರ್ಹ ಪ್ರಯತ್ನಗಳ ಹೊರತಾಗಿಯೂ ಹೆಚ್ ಐವಿಯೊಂದಿಗೆ ವಾಸಿಸುವ ಜನರ ಸಂಖ್ಯೆಯು ಹೆಚ್ಚಾಗಿದೆ. ಇದರಿಂದಾಗಿ ವೈರಸ್ ಮತ್ತಷ್ಟು ಹರಡುವುದನ್ನು ತಡೆಗಟ್ಟಲು ಪರಿಣಾಮಕಾರಿ ಲಸಿಕೆಗಾಗಿ ಸಂಶೋಧನೆಯನ್ನು ಮುಂದುವರಿಸುವುದು ಅತ್ಯಗತ್ಯ.


ವಿಶ್ವ ಏಡ್ಸ್ ಲಸಿಕೆ ದಿನದ ಇತಿಹಾಸ

1997ರ ಮೇ 18ರಂದು ಮೇರಿಲ್ಯಾಂಡ್‌ನ ಮೋರ್ಗಾನ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಮಾಡಿದ ಭಾಷಣದಲ್ಲಿ ಆಗಿನ ಯುಎಸ್ ಅಧ್ಯಕ್ಷ ಬಿಲ್ ಕ್ಲಿಂಟನ್, ಪರಿಣಾಮಕಾರಿ ಎಚ್‌ಐವಿ ತಡೆಗಟ್ಟುವ ಲಸಿಕೆ ಮಾತ್ರ ಏಡ್ಸ್ ಬೆದರಿಕೆಯನ್ನು ನಿಯಂತ್ರಣದಲ್ಲಿ ಇರಿಸುತ್ತದೆ ಮತ್ತು ಅಂತಿಮವಾಗಿ ತೆಗೆದುಹಾಕುತ್ತದೆ ಎಂದು ಹೇಳಿದರು. ಪರಿಣಾಮಕಾರಿ ಲಸಿಕೆಯ ತುರ್ತು ಅಗತ್ಯವನ್ನು ಒತ್ತಿ ಹೇಳುವ ಕ್ಲಿಂಟನ್ ಅವರ ಭಾಷಣದ ಗೌರವಾರ್ಥವಾಗಿ ಮೇ 18 ಅನ್ನು ವಿಶ್ವ ಏಡ್ಸ್ ಲಸಿಕೆ ದಿನವೆಂದು ಘೋಷಿಸಲಾಗಿದೆ. ವಿಶ್ವ ಏಡ್ಸ್ ಲಸಿಕೆ ದಿನವನ್ನು ಮೊದಲ ಬಾರಿಗೆ 1998ರಲ್ಲಿ ಆಚರಿಸಲಾಯಿತು.

ಇದನ್ನೂ ಓದಿ: Ambulance Booking : ಬೆಂಗಳೂರಿನಲ್ಲಿ ಆ್ಯಪ್ ​ಮೂಲಕವೇ ಮಾಡಬಹುದು ಆಂಬ್ಯುಲೆನ್ಸ್​ ಬುಕಿಂಗ್

ವಿಶ್ವ ಏಡ್ಸ್ ಲಸಿಕೆ ದಿನದ ಮಹತ್ವ

ಎಚ್‌ಐವಿ ಮತ್ತು ಏಡ್ಸ್ ತಡೆಗಟ್ಟುವ ಕುರಿತು ಜಾಗೃತಿ ಮೂಡಿಸಲು ಈ ದಿನ ಮಹತ್ವದ್ದಾಗಿದೆ. ಸರ್ಕಾರಗಳು ಮತ್ತು ಎನ್‌ಜಿಒಗಳ ಉಪಕ್ರಮಗಳ ಬಗ್ಗೆ ಜನರಿಗೆ ತಿಳಿಸಲು ಮತ್ತು ತಡೆಗಟ್ಟುವ ಎಚ್‌ಐವಿ ಲಸಿಕೆಯ ಅಗತ್ಯತೆಯ ಕಡೆಗೆ ಗಮನ ಸೆಳೆಯಲು ಜಾಗೃತಿ ಅಭಿಯಾನಗಳನ್ನು ನಡೆಸಲಾಗುತ್ತದೆ.

Continue Reading
Advertisement
Koppal tragedy
ಕೊಪ್ಪಳ13 mins ago

Koppal Tragedy : ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಸಾವು; ಈಜಲು ಹೋದ ಯುವಕ ನೀರುಪಾಲು

Prajwal Revanna case Devaraje Gowda should be given mental treatment says Congress
ರಾಜಕೀಯ19 mins ago

Prajwal Revanna Case: ದೇವರಾಜೇಗೌಡರಿಗೆ ಮೆಂಟಲ್‌ ಟ್ರೀಟ್ಮೆಂಟ್‌ ಕೊಡಿಸಬೇಕಿದೆ: ಕಾಂಗ್ರೆಸ್‌ ವ್ಯಂಗ್ಯ

Health Tips in Kannada tomato juice is good for health
ಆರೋಗ್ಯ25 mins ago

Health Tips in Kannada: ಟೊಮ್ಯಾಟೊ ಜ್ಯೂಸ್‌ ಆರೋಗ್ಯಕ್ಕೇಕೆ ಒಳ್ಳೆಯದು ಗೊತ್ತೆ?

T20 World Cup 2024
ಕ್ರೀಡೆ26 mins ago

T20 World Cup 2024: ಪಾಕ್​ ಉಗ್ರರ ಭೀತಿ; ಬಿಗಿ ಭದ್ರತೆ ಕೈಗೊಂಡ ವಿಂಡೀಸ್​ ಕ್ರಿಕೆಟ್​ ಮಂಡಳಿ

Cannes 2024 Indian influencer who stitched a 20 kg dress
ಬಾಲಿವುಡ್31 mins ago

Cannes 2024: 20 ಕೆಜಿ ತೂಕದ ಗೌನ್ ಧರಿಸಿ ಬೆರಗುಗೊಳಿಸಿದ ನ್ಯಾನ್ಸಿ ತ್ಯಾಗಿ!

ಕರ್ನಾಟಕ33 mins ago

Prajwal Revanna Case: ನಾನು ಹೊರಬಂದ್ರೆ ಸರ್ಕಾರ ಪತನ ಎಂದ ದೇವರಾಜೇಗೌಡ; ಹಾಗಾದ್ರೆ ಜೈಲಲ್ಲೇ ಇರ್ತಾರೆ ಎಂದ ಪರಮೇಶ್ವರ್‌

Woman
ದೇಶ34 mins ago

ಪತ್ನಿಯ ಶೀಲ ಶಂಕಿಸಿ, ಆಕೆಯ ಗುಪ್ತಾಂಗಕ್ಕೆ ಮೊಳೆ ಜಡಿದು, ಬೀಗ ಹಾಕಿದ ದುಷ್ಟ; ಏನು ಮಾಡಬೇಕು ಇಂಥವರಿಗೆ?

murder case
ಕ್ರೈಂ37 mins ago

Murder case : ಕುಡಿದ ನಶೆಯಲ್ಲಿ ಗೆಳೆಯನ ಕೊಂದ; ಸೇಡಿಗಾಗಿ ಗ್ರಾ.ಪಂ ಸದಸ್ಯನ ಮನೆ ಮೇಲೆ ಅಟ್ಯಾಕ್‌

Pavitra Jayaram Relationship With Chandu Shilpa Prema statement
ಕಿರುತೆರೆ1 hour ago

Pavithra Jayaram: ನನ್ನ ಗಂಡನಿಗೂ ಪವಿತ್ರಾಗೂ ‘ಸಂಬಂಧ’ ಇದ್ದದ್ದು ನಿಜ ಎಂದ ಚಂದ್ರಕಾಂತ್‌ ಪತ್ನಿ!

Money Guide
ಮನಿ-ಗೈಡ್1 hour ago

Ration Card: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ? ಇಲ್ಲಿದೆ ಸಂಪೂರ್ಣ ವಿವರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ21 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌